ಒಟ್ಟು 11400 ಕಡೆಗಳಲ್ಲಿ , 137 ದಾಸರು , 6177 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪುರಂದರದಾಸರು ಎಂತು ಪೊಗಳಲಿ ನಾನು ಪ ಕಂತುಪಿತನೇಕಾಂತ ಭಕ್ತನ ಪಂಥವನು ಪದ ಪಂಕ್ತಿಯಲಿ ತುಂಬಿಟ್ಟು ಸಲಹಿದ ದಾಸವರ್ಯರ ಅ.ಪ. ನಿತ್ಯ ನೆನೆಯುತ್ತ ಪಂಡಿತೋತ್ತಮರೊಡನೆ ಸುಖಿಸುತ್ತ ಕಂಡು ಹರಿಯನು ಮುಂದೆ ಕುಣಿಯುತ್ತ ಕುಂಡಲಿಗೆ ನಿಜ ಭೂಷಣವು ಎನಿಸುತ್ತ ಭಂಡಜನರಾ ಪುಂಡುಮಾರ್ಗವ ಕಂಡಕಂಡೆಡೆ ಖಂಡ್ರಿಸುತ ಬ್ರಹ್ಮಾಂಡ ದೊಡೆಯನ ಭಕ್ತಿ ಬಿತ್ತುತ ಹಿಂಡಿ ಮತಿಮತ ರಸವ ಕುಡಿಸಿದ ದಾಸವರ್ಯರ 1 ಮೊದಲು ಗಾಯಕ ದೇವಸಭೆಯಲ್ಲಿ ಮುದದಿ ಕಾಮುಕ ಚೇಷ್ಟೆ ನಡೆಸುತಲಿ ಪದವಿಯಿಂ ಚ್ಯುತನಾಗಿ ದಾಸಿಯಲಿ ಉದಿಸಿ ಬಂದು ಸಾಧು ಸಂಗದಲಿ ಬದಿಗೆ ತಳ್ಳುತ ಭವದ ಕೋಟಲೆ ಮುದದಿ ಜಪಿಸುತ ವಾಸುದೇವನ ಪದವಿ ಸಾಧಿಸಿ ದೇವ ಋಷಿ ತಾ ಪದುಮನಾಭನ ನೆನೆದು ನರಕವ ಬ ರಿದು ಮಾಡ್ಡ ಮಹಾನುಭಾವನ 2 ಕಾಸಿನಾಶಯವು ಮೋಸವೆಂತೆಂದು ಹೇಸಿವಿಷಯದಿ ಲೇಸು ಸಿಗದೆಂದು ಶ್ರೀಶ ಸಿಗುವನು ದಾಸಗೆಂತೆಂದು ಆಶೆಯಿಂದಲಿ ಸಾರಬೇಕೆಂದು ಓಸು ಸಂಪದ ನೂಕಿ ಭರದಿಂ ವ್ಯಾಸರಾಯರ ಶಿಷ್ಯನೆನಿಸುತ ವಾಸುದೇವನ ದಾಸನಾಗುತ ದೋಷಜ್ಞಾನವ ನಾಶಮಾಡಿದ ದೇಶ ತಿರುಗಿದ ದಾಸವರ್ಯರ 3 ಭಕ್ತಿಯಿಲ್ಲದ ಗಾನ ತಾನಿನ್ನು ಕತ್ತೆಕೂಗನುಮಾನವಿಲ್ಲೆಂದು ನಿತ್ಯದೇವನ ಗಾನ ಗೈಯಲು ಗಾತ್ರವಿದು ನಿಜವೀಣೆಯೆಂತೆಂದು ಸಪ್ತಸ್ವರಗಳ ಕ್ಲಪ್ತಮರ್ಮಗ ಳೆತ್ತಿ ತೋರುತ ಶ್ರೇಷ್ಠತರ ಸಂಗೀತ ಸೂತ್ರ ಸಂಮತ ನೀತಿ ನುಡಿದಿಹ ದಾಸವರ್ಯರ 4 ಪೊಂದಿ ಪುಸ್ತಕ ದೀಚೆ ಬರದೆಂದು ಛಂದ ಮರ್ಮವ ತಂದಿಡುವೆ ನಮ್ಮೀ ಅಂದ ಕನ್ನಡ ದೊಳಗೆ ಎಂತೆಂದು ಕಂದ ವೃತ್ತ ಸುಳಾದಿ ಪದಗಳ ಛಂದ ಭೂಷಣವೃಂದ ನೀಡುತ ನಂದದಿಂ ಕರ್ಣಾಟಮಾತೆಯ ಮುಂದೆ ತಾ ನಲಿವಂತೆ ಮಾಡಿದ ದಾಸವರ್ಯರ 5 ನಾರಿ ಮನೆ ಪರಿವಾರ ಹರಿಗೆಂದು ಸಾರವನ್ನೆ ಮುರಾರಿ ಮನೆಯೆಂದು ಚಾರು ಶ್ರುತಿಗತಸಾರ ನಡತೆಯಲಿ ಸೂರಿಯಾದವ ತೊರಬೇಕೆಂದು ನೀರಜಾಕ್ಷನ ಧೀರ ದೂತನ ಸಾರ ಮನವನು ಸಾರಿ ಸಾರುತ ದೂರ ಒಡಿಸಿ ಮೂರು ಮತಗಳ ನೇರ ಸುಖಪಥ ತೋರಿಸಿದ ಮಹರಾಯ ದಾಸರ 6 ಕರ್ಮಕೋಟಲೆಗಿಲ್ಲ ಕೊನೆಯೆಂದು ಮರ್ಮತಿಳಿಯುತ ಬಿಂಬಹೃದಯಗನ ನಿರ್ಮಮತೆಯಿಂದೆಸಗಿ ಕರ್ಮಗಳ ಕರ್ಮಪತಿಗೊಪ್ಪಿಸುತ ಸರ್ವಸ್ವ ಭರ್ಮಗರ್ಭನ ಭಕ್ತಿ ಭಾಗ್ಯದಿ ಪೇರ್ಮೆಯಿಂ ಹರಿದಾಸನೆಸಿಸುತ ಶರ್ಮ ಶಾಶ್ವತವಿತ್ತು ಸಲಹುವ ವರ್ಮ ನೀಡಿದ ವಿಶ್ವಬಾಂಧವ 7 ಇಂದಿರೇಶನು ಮುಂದೆ ಕುಣಿಯುತಿರೆ ಕುಂದುಂಟೆ ಮಹಿಮಾತಿಶಯಗಳಿಗೆ ತಂದೆ ಕೌತಕ ವೃಂದ ಮಳೆಗರೆದು ಕಂದನನು ಪೊರೆದಂದವೇನೆಂಬೆ ಬಂದು ಸತಿಸಹ ಮಂದಿರಕೆ ಗೋ ವಿಂದ ಪಾಕವಗೈದು ಬ್ರಾಹ್ಮಣ ವೃಂದಕಿಕ್ಕುತ ದಾಸರಿಗೆ ಮುದ ಮಾಧವ ಭಾಗ್ಯಕೆಣೆಯುಂಟೆ 8 ದೀನ ಹೊಲೆಯಗೆ ಪ್ರಾಣ ಬರಿಸಿದನು ಏನು ಒಲ್ಲದೆ ಹರಿಯ ಯಜಿಸಿದನು ಜ್ಞಾನ ಭಾಗ್ಯದಿ ಮುಳುಗಿ ತೇಲಿದನು ದೀನ ಜನರುದ್ಧಾರ ಮಾಡಿದನು ದಾನಿ ಜಯಮುನಿ ವಾಯು ಹೃದಯಗ ಚಿನ್ಮಯ ಶ್ರೀ ಕೃಷ್ಣವಿಠಲನ ಗಾನ ಸುಧೆಯನು ಬೀರಿಸುತ ವಿ ಜ್ಞಾನವಿತ್ತ ಮಹೋಪಕಾರಿ ವಿಶೇಷ ಮಹಿಮನ 9
--------------
ಕೃಷ್ಣವಿಠಲದಾಸರು
ಪುರಂದರದಾಸರು ಜಿಪುಣರೈ ನೀವೆಂದು ಹೇಳಿದುದು ಸುಳ್ಳಲ್ಲ ಪ ಪುರಂದರ ದಾಸಮಲ್ಲ ಅ.ಪ. ಘನತರದ ವೈರಾಗ್ಯ ತಳೆದು ದ್ವಿಜರಿಗೆಲ್ಲಧನಕನಕ ಸಂಪತ್ತು ದಾನ ಮಾಡಿದರೆಲ್ಲವನಜನಾಭನ ಸ್ತುತಿಗೆ ಶಬ್ದ ಸಂಪತ್ತೆಲ್ಲಒಸೆದು ನೀವೇ ಬಳಸಿ ನನಗೇನು ಕೊಡಲಿಲ್ಲ 1 ಖಂಜೂತನದ ಕಥೆಯನು ಹೇಳಲಾಸಲ್ಲಕಂಜನಾಭನ ಮಹಿಮೆ ಬಣ್ಣಿಸುವ ನೆವದಲ್ಲಿರಂಜನೆಯ ಶಬ್ದಗಳ ಸವಿದುಂಡೆಯಲ್ಲಿಎಂಜಲವನುಳಿದೆನಗೆ ಕಿಂಚಿತ್ತು ಬಿಡಲಿಲ್ಲ 2 ಕೃಪೆಮಾಡಿ ಕ್ಷಮಿಸುವುದು ವಿಪುಲ ಭಕ್ತಿಗಳಿಂದಜಪತಪದಿ ಕನ್ನಡದ ನಿಮ್ಮ ಭಾರತಮಲ್ಲ ಕೃಪಣವತ್ಸಲ ಗದುಗು ವೀರನಾರಾಯಣನ ಸಫಿಲ ಜ್ಞಾನವ ಗಳಿಸಿ ನಮಗೇನು ಕೊಡಲಿಲ್ಲ 3
--------------
ವೀರನಾರಾಯಣ
ಪುರಾಣ ಅಕ್ಕರವುಳ್ಳ ನಮ್ಮಕ್ಕ ರುಕ್ಮಿಣಿ ಕೇಳೆ ರಕ್ಕಸಾಂತಕ ಕೃಷ್ಣ ಮತ್ತೆಲ್ಲೆ ಪೋದ 1 ಸತ್ಯಭಾಮೆಯೆ ನಿನ್ನ ಚಿತ್ತದ್ವಲ್ಲಭ ನೀರೊಳು ಪೊಕ್ಕು ವೇದವ ತಂದು ಪುತ್ರಗಿಡಹೋದ 2 ಪನ್ನಂಗಶಯನ ಲಾವಣ್ಯರೂಪನು ಎನ್ನ ಕಣ್ಣಿಗೆ ಮರೆಯಾಗಿ ಇನ್ನೆಲ್ಲೆ ಹೋದ 3 ಪತಿ ಶರಧಿಯೊಳು ಬೆನ್ನಲಿ ಗಿರಿಯೆತ್ತಿ ತನ್ನ ಭಕ್ತರಿಗೆ ಸುಧೆಯ ನೀಡಲು ಹೋದ 4 ವನಜನಾಭನ ಕಾಣದೆ ಘನಕ್ಲೇಶದಿಂದೀಗ ಮನದ ವಿರಹತಾಪವನು ಸೈರಿಸಲ್ಹ್ಯಾಗೆ 5 ಅವನಿ ಕದ್ದವನ ಸಂಹರಿಸಿ ಕೋರೆಗಳಿಂದ ಭುವನಾಧಿಪತಿಯು ಬರುವನೆ ಸತ್ಯಭಾಮೆ 6 ಹಂಬಲ ಬಿಡದರವಿಂದನೇತ್ರನ ಬಿಟ್ಟು ಸುಂದರಾಂಗನ ಕರೆತಂದು ತೋರೆನಗೆ 7 ಕಂಬದಿಂದೊಡೆದು ಕಂದನ ತಂದೀ(ದೆಯ?) ಕರುಳ್ಹಾರ ಕಂದರದಿ ಧರಿಸಿ ತಾ ಬಂದನು ಭಾಮೆ 8 ಸೃಷ್ಟಿಕರ್ತನುಯೆನ್ನ ದಿ(ದೃ?) ಷ್ಟಿಂದೆ ನೋಡದೆ ಎಷ್ಟು ಹೇಳಲೆ ಪ್ರಾಣ ಬಿಟ್ಟು ಹೋಗುವುದೆ 9 ಪುಟ್ಟ ಬ್ರಾಹ್ಮಣನಾಗಿ ದಿಟ್ಟತನದಲಿ ದಾನವ ಕೊಟ್ಟ ಬಲಿ ಪಾತಾಳಕೆ ಮೆಟ್ಟಿ ಬಾಹುವನೆ 10 ತ್ವರಿತದಿಂದಲಿ ಯಾದವರರಸು ಶ್ರೀಕಾಂತನ ಸರಸವಾಡಲೀಗ ಕರೆಸಿ ತೋರೆನಗೆ 11 ಅರಸರ ಕುಲವ ಸಂಹರಿಸಿ ಕ್ಷತ್ರೇರನೆಲ್ಲ ನಿರುತ ನಿಷ್ಠೆಯಲಿ ತಪ ಚರಿಸಿ ಬಾಹುವನೆ 12 ಹೇಮಪುತ್ಥಳಿಗೊಂಬೆ ಸಾಮಜವರದನ ಆ ಮಾಸುರರೊಡೆಯ ಮೇಘಶ್ಯಾಮನ ತೋರೆ13 ಮಾಡಿ ಯುದ್ಧವ ಲಂಕಾ ನೋಡಿ ದಶಶಿರವ ಚೆಂಡಾಡಿ ಜಾನಕಿಯ ಒಡಗೂಡಿ ಬಾಹುವನೆ 14 ವಾಸುದೇವನ ಕಾಣದೊಂದರಘಳಿಗೀಗ ನಾಲ್ಕು ಯುಗವಾಗಿ ತೋರುವುದೆನ್ನ ಮನಕೆ 15 ಶ್ರೀಶ ತಾ ಸೋಳಸಾಸಿರ ಮಂದಿ ಸತಿಯೇರ ವಿ- ಲಾಸದಿಂದಿದ್ದನೀಗಿಂದೀವರಾಕ್ಷ 16 ಸಿರಿವೊಬ್ಬಳಲ್ಲದೆ ಪರನಾರಿಯರ ಕಣ್ಣು ತೆರೆದು ನೋಡುವ ತಾ ಭೂರಮಣನೆಲ್ಲಿಹನೆ 17 ಖರೆಯವೀಮಾತು ತ್ರಿಪುರದ ಸತಿಯರ ಲಜ್ಜೆ ತೊರೆದು ಕೂಡಿದನೆಂಬೋದು ಪರಮ ಮೋಹಕವೆ18 ನಾಡೊಳಗಧಿಕಶ್ವಾರೂಢ ರುಕ್ಮಿಣೀಕಾಂತನ ನೋಡದÉನಜೀವ ನಿಲ್ಲದು ನೀರಜಾಕ್ಷಿ 19 ಬೇಡಿಕೊಂಬುವೆನೆಂ(ಯೆ?)ದು ಭೀಮೇಶಕೃಷ್ಣನ ಕೂಡಿಸುವೆನೆ ಕರೆತಂದು ಕಮಲಾಕ್ಷಿ 20
--------------
ಹರಪನಹಳ್ಳಿಭೀಮವ್ವ
ಪುರುಷ ಪ್ರಕೃತಿಯಲ್ಲಿಹನು ಎಂತೆನೆಇರುವನೀ ತೆರದಿ ಉಭಯದಲಿ ಪುರುಷ ಪ ತಿಲದೊಳಗೆ ತೈಲ ಕಾಷ್ಟದೊಳಗೆ ಅಗ್ನಿಫಲದಲಿ ರುಚಿಯು ಇದ್ದಂತೆ ಪುರುಷ1 ಸ್ತನದೊಳಗೆ ಕ್ಷೀರ ಕ್ಷೀರದೊಳಗೆ ಘೃತಘನ ಭೇರಿಯಲಿ ನಾದ ಇದ್ದಂತೆ ಪುರುಷ2 ಮಣಿಗಣದಲಿಸೂತ್ರ ಮಾಲಿಕೆಯಲಿ ತಂತುಘನವಾದ ಘಟದಲ್ಲಿ ಬಯಲಂತೆ ಪುರುಷ 3 ಘನದಲ್ಲಿ ಉದಕ ಗಗನದಲಿ ಮಿಂಚುಅನಿತು ಔಷಧಿಯಲ್ಲಿ ರಸದಂತೆ ಪುರುಷ4 ತೈಲಬಿಂದುವು ಉದಕದಲ್ಲಿ ವ್ಯಾಪಿಸಿದಂತೆಲೋಲ ಚಿದಾನಂದ ತಾನಿಹ ಪುರುಷ 5
--------------
ಚಿದಾನಂದ ಅವಧೂತರು
ಪುರುಷರಾದವರೆಲ್ಲ ಪುರುಷರೆನಿಸುವುದೋಪುರುಷರೊಳಗೂ ಪುಣ್ಯಪುರುಷನೇ ಪುರುಷ ಪ ಪರಮ ದಿವ್ಯ ಜ್ಞಾನಪೂತ ಭಸಿತವಿಟ್ಟುಸ್ಥಿರವೆಂಬ ಸಿಂಹ ಪೀಠದಲಿ ಕುಳಿತುನಿರುತ ನಿತ್ಯಾನಂದ ನಿರಾಮಯ ತಾನೆಂದುಭರದಿ ಪೂಜಿಸುತಿರುವನು ಪುರುಷ 1 ಪಥ ಸೇರಿದವನವ ಪುರುಷ2 ಅಂಗ ಕಾಣುವ ವಿಷಯಗಳ ಆತ್ಮಗರ್ಪಿಸುತಸಂಗ ರಹಿತನಾಗಿ ತಾನಾಗಿ ಇರುತಮಂಗಳವು ಎನಿಸಿಯೇ ಮರೆತು ಬಾಹ್ಯವನುವಿಹಂಗಪಥದಿ ನಿಂತಿರುವನವ ಪುರುಷ 3 ಶಾಂತರಸವಂ ಕುಡಿದು ಸರ್ವಕ್ಕೂ ಬೆದರದೆಭ್ರಾಂತು ಎನಿಪ ಬೆಳಗ ತರಿದುಸಂತ ಸಾಲೋಕ್ಯ ಮೊದಲು ಸಾಯುಜ್ಯವನೆಲ್ಲಪಂಥದಿ ಮೀರಿ ಪರಿವನವನೆ ಪುರುಷ 4 ಪರಿ ಪರಿ ಕೇಳುತನಾದ ಸಾಕ್ಷಿಕ ತಾನು ಚಿದಾನಂದ ಗುರುವಾಗಿನಾದದಾನಂದದಲಿ ಮುಳುಗಿರುವನವ ಪುರುಷ 5
--------------
ಚಿದಾನಂದ ಅವಧೂತರು
ಪುಷ್ಟಿ ಎಲ್ಲಿಯದು ಪ ದೃಷ್ಟಿ ಕಡಿಮೆಯು ಕಿವಿಯು ಕೇಳದು ಶ್ರೇಷ್ಠ ನಾನೆಂದು ಕುಣಿವುದಕೆಅ.ಪ ಪರಿವ್ರಾಜಕನಾಗಬೇಕೆಂ- ದುರುತರಾಶ್ರಮ ಧರ್ಮಶಾಸ್ತ್ರಗ- ಳೊರೆಯುತಿಹುದದರರ್ಥ ತಿಳಿಯದೆ 1 ಕಾಮ್ಯಕರ್ಮಳನು ತ್ಯಜಿಸಿ ಭ್ರಾಮ್ಯಜನಗಳ ನಡತೆ ಬಿಟ್ಟು ರಮ್ಯವೆಂದರಿಯುವುದು ಸೌಖ್ಯವು 2 ಎಮ್ಮೆಯೋಲ್ ತಿನ್ನುತಲಿ ಬಾಯಲಿ ಹೆಮ್ಮೆ ಮಾತುಗಳಾಡುತಿರುತಿಹ ಗ್ರಾಮ್ಯ ಜನಗಳ ಸಂಗವೆಂದಿಗು ಗತಿವಿದೂರನ ಮಾಡದೆ ಬಿಡದು 3 ಗಣ್ಯತಾನೆಂದುಕೊಳ್ಳದೆ ದಾ- ಅನ್ನಕೋಸುಗ ಪರರ ಪೊಗಳದೆ ಧನ್ಯರಡಿಗಳ ಠಾವಿನಲಿ ನಲಿ ಸುಖ 4 ಪಾಮರರು ಪ್ರತಿದಿನವು ದುಸ್ತರ ತಾಮಸ ನರಕದೊಳು ಮುಣುಗುತ್ತ ಸ್ವಾಮಿಯಾಗಿ ಮೆರೆವ ಶ್ರೀಗುರು- ರಾಮವಿಠಲನ ಮರೆತು ಕೆಡುವರು 5
--------------
ಗುರುರಾಮವಿಠಲ
ಪುಷ್ಪಧರಿಸುವ ಉತ್ಸವಗೀತೆ ಪುಷ್ಪವನ್ನುಧರಿಸುವ ಉತ್ಸವ ನೋಡುವ ಬನ್ನಿ ಭಕ್ತವತ್ಸಲನರಾಣಿ ರಂಗನಾಯಕಿಗಿಂದು ಪ. ವೈಶಾಖಮಾಸದಲಿ ಕೃಷ್ಣಪಕ್ಷದಲಿ ಲಕ್ಷ್ಮೀಗೆ ಪುಷ್ಪವನ್ನು ಧರಿಸುವ ಅರ್ತಿಯ ನೋಡುವ ಬನ್ನಿ 1 ವಿಧವಿಧದ ಪುಷ್ಪವ ಮುಡಿಸಿ[ದರು] ಮದನನಮಾತೆಯ ಶಿರಸಿಗೆ 2 ಪಂಕಜನಾಭನರಾಣಿ ಪರಮಕಲ್ಯಾಣಿ ನೀಲವೇಣಿ ಪಂಕಜಪಾಣಿ ಕೀರವಾಣಿ ಸುಶೋಣೀ 3 ಸುರರು ಅಸುರರು ಕೂಡಿ ಶರಧಿಮಥನವ ಮಾಡೆ ಭರದಿಂದ ಉದಿಸಿಬಂದ ವರಲಕ್ಷ್ಮೀದೇವಿಗಿಂದು 4 ಜಯವಿಜಯರಿಗಾಗಿ ಜನಿಸಿ ತಾ ಭೂಮಿಯಲಿ [ಗೆದ್ದ] ಇಂದು 5 ಸೃಷ್ಟಿಭಾರವನಿಳುಹಲೆಂದು ಕೃಷ್ಣಮೂರುತಿ ಜನಿಸಿ [ಒಲಿದ] ಭೀಷ್ಮಕನುದರದಿ ಬಂದ ರುಕ್ಮಿಣೀದೇವಿಗೆ ಇಂದು6 ಮಲ್ಲೆ ಮಲ್ಲಿಗೆ ವಕುಳ ಮಂದಾರ ಪಾರಿಜಾತ[ವ] ಫುಲ್ಲನಾಭನರಾಣಿಗೆ ಲೋಲಾಕ್ಷಿಯರು ಮುಡಿಸಿದರು 7 ತಾಳೆ ಚಂಪಕ ಕಮಲಮಾಲೆ ಸುರಗಿ ಜಾಜಿಯ ನೀಲವರ್ಣನರಾಣಿಗೆ ಲೋಲಾಕ್ಷಿಯರು ಮುಡಿಸಿದರು 8 ಮರುಗ ದವನ ಪಚ್ಚೆತೆನೆಯು ಸುಗಂಧರಾಜವ ಪರಮ ಸುರರು ತಂದು ಮುಡಿಸುವರು 9 ವಸಂತೋತ್ಸವಕೆಂದು ವಸುಧೀಶನರಸಿ ತಾನು ಕುಶಲದಿಂದಲೆ ಬಂ[ದಳಾವ]ಸಂತಮಂಟಪಕಿಂದು 10 ರತ್ನದ ಕೆಂಪಿನ ಕಿರೀಟವಿಟ್ಟು ತಿದ್ದಿದ ಕಸ್ತೂರಿಬಟ್ಟು ಮುತ್ತುಸುತ್ತಿದ ಮೂಗಿನಬಟ್ಟು ಹರಿದ್ರಾವಸ್ತ್ರವನುಟ್ಟು 11 ಕರ್ಪೂರದ ಚೂರ್ಣದಿ ಮಿಂದು ಭಕ್ತರಿಟ್ಟ ನೈವೇದ್ಯವನುಂಡು [ತಾ]ಪೊರಟಳು ಮಿತ್ರೆಯರ ಕೋಲಾಟವ ನೋಡುತ್ತ ತನ್ನರಮನೆಗೆ 12 ಹುಟ್ಟಿದಮನೆ ಕ್ಷೀರಾಬ್ಧಿ ಹೊಕ್ಕಮನೆ ಶ್ರೀವೈಕುಂಠವ ಬಿಟ್ಟು ಭಕ್ತರ ಸಲಹುವೆನೆಂದು ಬಂದ ವೆಂಕಟರಂಗನರಸಿಗೆ 13
--------------
ಯದುಗಿರಿಯಮ್ಮ
ಪುಷ್ಪಸೇವೆಯ ಗೀತೆ ಪುಷ್ಪಸೇವೆಯ ನೋಡುವಾ ಬನ್ನಿರೆ ನ ಮ್ಮಪ್ರಮೇಯ ರಂಗನಾ ಪ. ಕ್ಷಿಪ್ರದಿಂದಲೆ ಬಂದು ಚಪ್ಪರದಲಿ ನಿಂದು ವಿಪ್ರರೆಲ್ಲರು ತಂದು ಪುಷ್ಪ ಸಮರ್ಪಿಸುವ ಅ.ಪ. ಮೇಷರಾಶಿಗೆ ರವಿಯು ಬರಲು ವಾಸುದೇವ ಹರಿಯು ಆಗ ಬೇಸಿಗೆ ತಾಪವ ಪರಿಹರಿಸುವೆನೆಂದು ವಾಸನೆಗಂಧವ ಮೈಯೊಳು ಪೂಸಿದ 1 ಕರ್ಪೂರದ ಕಸ್ತೂರಿ ಗಂಧವ ತಂದು [ಒಪ್ಪದಿಂ] ವಕ್ಷಸ್ಥಳದಿ ಧರಿಸಿ ವಕುಳ ಪುಷ್ಪಗಳಿಂದ ಮೌಳಿಯ [ಲಂಕ]ರಿಸಿದ ರು ಪನ್ನೀರವಲ್ಲಿಯ ಚೆನ್ನಾಗಿ ಪ್ರೋಕ್ಷಿಸಿದರು2 ಮರುಗ ಮಲ್ಲಿಗೆ ಜಾಜಿ ಮುಡಿವಾಳ ಇರವಂತಿಗೆ ಪಚ್ಚೆ ದವನ ಕೇದಿಗೆ ಪಾ ಕಮಲ ಸಂಪಿಗೆ ಪುಷ್ಪಮಾಲೆಯ ಧರಿಸಿ ಪನ್ನೀರ ತಳಿದರಾಗ 3 ಪುಷ್ಪದ ದುಬಟಿಯನು ತಂದು ನಮ್ಮ ಸರ್ಪಶಯನನಿಗ್ಹೊದ್ದಿಸೆ ಕ್ಷಿಪ್ರದಿಂದಲೇ ತೀರ್ಥಪ್ರಸಾದವನಿತ್ತು ಎ ನ್ನಪ್ಪ ರಂಗನು ಬಂದ ಒಯ್ಯಾರ ನಡೆಯಿಂದ 4 ಪರಿಪರಿ, ವಾದ್ಯಂಗಳು ಭೋರಿಡುತಿರೆ ವರಾಂಗನೆಯರು ಪಾಡೆ ಸುರರು ಭೂಸುರ ನರರೆಲ್ಲರ ಕೂಡಿ ದೊರೆಯುಮಂಟಪಕ್ಕಾಗ ಪರಮಪುರಷ ಬಂದ 5 ಅಲ್ಲಿ ಪೂಜೆಯ ಗ್ರಹಿಸಿ ರಂಗಯ್ಯ ತಾ ಎಲ್ಲರೊಡನೆ ಪೊರಟಿರೆ ವಲ್ಲಭನನು ವೀಣೆಸೊಲ್ಲಿನಿಂ ಪಾಡುತಿರೆ ಲಕ್ಷ್ಮೀ ಮೆಲ್ಲಮೆಲ್ಲನೆ ಬಂದ ಏಕಾಂತದಿ ರಂಗ 6 ಚಿತ್ರಪೌರ್ಣಮಿಯಲ್ಲಿ ಶ್ರೀರಂಗ ವಿ ಚಿತ್ರದಿಂದಲೆ ಪೊರಟು ಉತ್ತರಕಾವೇರಿ ತೀರದ ಮಂಟಪದಲಿ ನಿಂದು ಭಕ್ತವತ್ಸಲನು ಮಜ್ಜನವ ಮಾಡಿದನಾಗ 7 ಮಕರಿ ಕಾಲ್ಪಿಡಿಯಲಾಗ ಮತಂಗ ವು ಕರೆಯೆ ನಿಮ್ಮನು ಅತಿ ವೇಗದಿಂದ ಚಕ್ರದಿ ನಕ್ರನ ಕೊಂದು ಕರಿಯ ರಕ್ಷಿಸಿ ಬಂದ ಕರುಣದಿಂದಲೇ ರಂಗ 8 ಕಲಿಯುಗದೊಳಗಿರುವ ಕರ್ಮಿಗಳನ್ನು ಸಲಹುವೆನೆಂದೆನುತಾ ಕರುಣದಿಂ ದಲೆ ಅರ್ಚಾವತಾರವ ಮಾಡಿ [ಸಲೆ] ಬಿರುದು ಧರಿಸಿ ಬಂದ ವರದವೆಂಕಟರಂಗ 9
--------------
ಯದುಗಿರಿಯಮ್ಮ
ಪುಷ್ಯೋತ್ಸವ ಗೀತೆ ಮಕರಪುಷ್ಯದ ಶುದ್ಧ ಷಷ್ಟಿಯಲಿ ನಗರಶೋಧನೆ ಮಾಡಿ ಮಂತ್ರಿಯು 1 ಮೊದಲು ದಿವಸದಿ ಧ್ವಜವನೇರಿಸಿ ಭೇರಿಯಿಡೆ ಸುರರ ಕರೆದರು 2 ಯಾಗಶಾಲೆಯ ಪೊಕ್ಕು ರಂಗನು ಯಾಗಪೂರ್ತಿಯಾ ಮಾಡಿ ನಿಂದನು 3 ಯಾತ್ರದಾನವ ಬೇಡಿ ಹರುಷದಿ ಸೂತ್ರ ಧರಿಸಿದಾ ಧಾತ್ರಿಗೊಡೆಯನು 4 ಕಂದರ್ಪನಾಪಿತ ದರ್ಪಣಾಗ್ರದಿ ಹ ನ್ನೊಂದು ದಿನದಲಿ ನಿಂದ ಹರುಷದಿ 5 ಸೂರ್ಯಚಂದ್ರರು ಹಂಸಯಾಳಿ[ಸಹಿತ] ಏರಿ ಬಂದನು ಸಿಂಹ ಶರಭವ 6 ಸರ್ಪವಾಹನ ಕಲ್ಪವೃಕ್ಷವು [ಗರು ಡ] ಪಕ್ಷಿ ಹನುಮನ ಏರಿ ಬಂದನು 7 ಏಳು ದಿವಸದಿ ಚೂರ್ಣಾಭಿಷೇಕವ ಸೀಳೆಸಹಿತಲೆ ಗ್ರಹಿಸಿ ಮಿಂದನು 8 ಎಂಟು ದಿವಸದಿ ಏರಿ ತೇಜಿಯ ಬಿಟ್ಟನು ಪೇರಿ ತೇರಿನಿದಿರಲಿ 9 ಒಂಬತ್ತು ದಿನದಲಿ ಶೃಂಗರಿಸಿದಾರು ಸಂಭ್ರಮದಿಂದಲೆ ಬೊಂಬೆರಥವನು 10 ಪುನರ್ವಸುವಿನಲ್ಲಿ ಪುರುಷೋತ್ತಮನು ರಥ ವನೇರಲು ಪೊರಟುಬಂದನು11 ಸಿಂಧುಶಯನನ ಹಿಂದೆಬಂದರು 12 ಅಷ್ಟಪತಿಯನು ಅಷ್ಟು ಕೇಳುತಾ ಸೃಷ್ಟಿಗೀಶ್ವರ ರಥವನೇರಿದ 13 ಪತ್ನಿ ಸಹಿತಲೇ ಹತ್ತಿ ರಥವನು ಉತ್ತರಬೀದಿಯ ಸುತ್ತಿಬಂದನು 14 ಇಂದಿರಾಪತಿ ಇಳಿದು ರಥವನು ಚಂದ್ರಪುಷ್ಕರಿಣಿಯಲಿ ತೀರ್ಥವಿತ್ತನು 15 ಕರೆತಂದರು ಕರಿಯಮೇಲಿಟ್ಟು ಚ ದುರಂಗಗೆ ನಜರು ಕೊಟ್ಟರು 16 ಸಪ್ತಾವರಣವ ಶಬ್ದವಿಲ್ಲದೆ ಸುತ್ತಿಬಂದನು ಭಕ್ತವತ್ಸಲ 17 ಸುತ್ತಿ ಲಕ್ಷ್ಮೀಗೆ ಇತ್ತು ಸೇವೆಯ ಭಕ್ತ ಭಾಷ್ಯಕಾರರಿಗೆ ಒಲಿದು ನಿಂದನು 18 ತನ್ನ ಚರಿತೆಗಳನು ಕೇಳುತ ಪನ್ನಗಶಯನನು ಪರಮ ಹರುಷದಿ 19 ಬಂದ ಸುರರ ಆನಂದದಿಂದಲೇ ಮಂದಿರಕ್ಕೆ ತಾ ಕಳುಹಿ ರಂಗನು 20 ಬಿಚ್ಚಿ ಕಂಕಣ ನಿಂದ ಹರುಷದಿ ಅರ್ಥಿಯಿಂದಲೆ ಅಚ್ಚುತಾನಂತ 21 ಏರಿ ಆಳಂಪಲ್ಲಕ್ಕಿ ಹರುಷದಿ ಒ ಯ್ಯಾರದಿಂದ ಬಂದ ರಂಗನು 22 [ಮೋಕ್ಷ] ಕೊಡುವನು ಮುದ್ದುವೆಂಕಟರಂಗನು 23
--------------
ಯದುಗಿರಿಯಮ್ಮ
ಪೂಜಾನುಷ್ಠಾನವ ಯೋಚಿಸಿ ಮನದೊಳುಪೂಜೆ ಷೋಡಶಗಳ ಮಾಜದೆ ಮಾಡಿರೋ ಪ ಉಷಃ ಕಾಲದಲೆದ್ದು | ಝಷಕೇತು ಪಿತ ನಾಮಉಸುರು ತಿಪ್ಪುದೇ ಪೂಜೆಯೋ 1 ಶೌಚ ಬಾಹ್ಯವು ಮೃತ್ತು ಶೌಚ ಮಾಡಿಕೊಂಡುಶುಚಿಷತ್ತು ನಿನ ನಾಮ ಉಚ್ಚರಿಪುದೆ ಪೂಜೆಯೋ2 ತುಲಸಿ ಮೃತ್ತಿಕೆ ಹಚ್ಚಿ | ತುಲಸಿ ವಂದನೆ ಮಾಡಿಅಲಸಾದೆ ಕೃಷ್ಣನ ವಲಿಸೂವುದೇ ಪೂಜೆಯೋ 3 ಗೋವನೆ ಬಳಸುತ್ತ ಗೋಪುಚ್ಛ ಪಿಡಿಯುತ್ತಗೋವ ವಂದಿಪುದೆಲ್ಲ ಗೋಪಾಲ ನಿನ ಪೂಜೆಯೋ4 ಸ್ನಾನ ಸಂಧ್ಯಾನ ಮೇಣೂಧ್ರ್ವ ಪುಂಡ್ರವ ಧರಿಸಿಭಾನುಗಘ್ರ್ಯವ ನೀಯೆ ಶ್ರೀನಿವಾಸ ಪೂಜೆಯೋ 5 ಪಾದ ತೀರ್ಥ ಸೇವನೆ ಪೂಜೆಯೋ 6 ಅಷ್ಟ ಮಹಾಮಂತ್ರ ಶಿಷ್ಪನಾಗುತ ಹೃದಯಅಷ್ಟ ಕಮಲದಲ್ಲಿ ಧ್ಯಾನ ಮಾಳ್ಪುದೆ ಪೂಜೆಯೋ 7 ಮಂಟಪೋತ್ತಮ ಪೂಜೆ ಸುಷ್ಠು ಕಲಶ ಪೂಜೆಶ್ರೇಷ್ಠ ಪಂಚಾಮೃತ ಪೀಠ ಶಂಖ ಪೂಜೆಯೋ 8 ಘಂಟನಾದಾ ಅಖಂಡ ಶ್ರೇಷ್ಠ ದೀವಿಗೆ ಪೂಜೆಪೀಠಾವರಣ ಹೃತ್ಪೀಠ ಚಿಂತನೆ ಪೂಜೆಯೋ 9 ಮೂರ್ತಿ ಗುರುಮೂತ್ರ್ವೆಕ್ಯವೆ ಪೂಜೆಯೋ || ಚಿಂತಿಸಿ ಸ್ವಾಂತಸ್ಥ ಬಿಂಬನೋಳೈಕ್ಯವಚಿಂತಿಸುತ್ತಾನೇಕ ಗೈವ ವೈಭವ ಪೂಜೆಯೋ 11 ಹೃತ್ಪುಂಡರೀಕಗೆ ಕಲ್ಪ ತರುವನೆ ಬೇಡುತ್ತಪ್ರೀತ್ಯಾದ ಮಾನಸ ಪದಾರ್ಥಗಳ ಪೂಜೆಯೋ 12 ಪೂರ್ಣ ಶೃತಿಯ ಭಾವ ಚೆನ್ನಾಗಿ ಗ್ರಹಿಸುತ್ತಪೂರ್ಣನ ಕಳೆಯೊಂದು ಪ್ರತಿಮಾದಲ್ಲಿರಿಸೋ 13 ನಿಷುಸೀದ ಶ್ರುತಿಯಂತೆ ವಸುದೇವ ಕೃಷ್ಣನೆಅಸಮ ಪೂಜಕ ಪೂಜ್ಯ ಅವನೇವೆ ತಿಳಿಯೊ 14 ಬಾಹ್ಯದರ್ಚನೆಗಳು ಶ್ರೀ ಹಸ್ತದಿಂದಲಿವ್ಯಾಹರಣೆಂಬೋದೆ ಹರಿ ಪೂಜೆಯೋ 15 ಆವಾಹನಭಿಷೇಕ ನೈವೇದ್ಯಾದಿ ಪೂಜೆದೇವಗಾರುತಿ ಶಂಖ ಭ್ರಮಣಾದಿ ಪೂಜೆಯೋ 16 ಸರ್ವವನರ್ಪಿಸಿ ಅಸ್ವಾತಂತ್ರ್ಯವ ಗ್ರಹಿಸಿಶರ್ವಾದಿ ವಂದ್ಯ ಬಿಂಬಗೆ ಸರ್ವ ಪೂಜೆಯೋ 17 ಸರ್ವಾಪರಾಧವ ಸರ್ವೇಶನಲಿ ಪೇಳಿವೈಶ್ವ ದೇವಾದಿಗಳ್ ಸತ್ಕರ್ಮಗಳೆ ಪೂಜೆಯೋ 18 ಯತಿಗಳರ್ಚನೆಯನ್ನು ಮತಿಯಿಂದ ಗೈಯುತ್ತಸುತ ವಿಪ್ರಾದಿಯ ಸಹ ಹುತಶೇಷ ಮೆಲ್ಲೋದೆ ಪೂಜೆಯೋ 19 ಪ್ರಾಣಾಗ್ನಿ ಹೋತ್ರಾನು ಸಂಧಾನದಲಿ ಮದ್ದುಪ್ರಾಣನ ಪ್ರಾಣ ವೈಶ್ವಾನರಗೀಯೋದೆ ಪೂಜೇ 20 ಅಂತರಂಗದ ಪೂಜೆಗೊಲಿದ ಸಂತತ ಹರಿಕಂತು ಪಿತನು ಗುರು ಗೋವಿಂದ ವಿಠಲಾ 21
--------------
ಗುರುಗೋವಿಂದವಿಠಲರು
ಪೂಜಿ ಮಾಡುವ ಬನ್ನಿರೊ ಗುರುಪಾದ ಪೂಜಿ ಮಾಡುವ ಬನ್ನಿರೊ ಧ್ರುವ ತಿಳುಹು ತಿಳಿಯ ನೀರಿಲೆ ತನುವಿಲೆ ಅಭಿಷೇಕವ ಮಾಡುವ ಮಾಡುವ ಬನ್ನಿರೊ 1 ಶುದ್ಧ ಸುವಾಸನೆಯ ಗಂಧದಾರತಿ ಅಕ್ಷತಿಡುವ ಮಾಡುವ ಬನ್ನಿರೊ 2 ಅರವ್ಹೆಂಬ ದೀಪದಲಿ ಗುರುಸ್ವರೂಪವ ನೋಡುವ ಬನ್ನಿರೊ ನಲಿದಾಡುವ ಬನ್ನಿರೊ 3 ಭಕ್ತವತ್ಸಲ ಮೂರ್ತಿಗೆ ಸುಖದು:ಖ ಧೂಪಾರತಿ ಮಾಡುವ ಮಾಡುವ ಬನ್ನಿರೊ 4 ನೆನವು ನೈವೇದ್ಯದಲಿ ಮನ ಬುದ್ಧಿ ತಾಂಬೂಲವ ನೀಡುವ ಮಾಡುವ ಬನ್ನಿರೊ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪೂಜಿಪೆ ನಾ ಪರಮಪುರುಷನರಸಿ ಲಕ್ಷ್ಮಿಗೆ ಪ. ತೇಜಮಾದ ಭದ್ರಪೀಠದಿ ರಾಜೀವಾಕ್ಷಿ ಲಕುಮಿಯ ಅ.ಪ. ಧ್ಯಾನಮಾವಾಹನವ ಮಾಡಿ ಸ್ನಾನ ವಸವ ತೊಡಿಗೆ ತೊಡಿಸಿ ಪೂಜಿಸುವೆನು 1 ಕುಸುಮ ಮಾಲೆಯಿಂದ 2 ಕದಳೀ ಖರ್ಜೂರ ದ್ರಾಕ್ಷಿ ಮಧುರ ದಾಳಿಂಬ ನಾರಿಕೇಳ ಕರ ಚರಣ ತೊಳೆದು ಸದಮಲೆಗಾರುತಿ ಬೆಳಗುವೆನು 3 ಸ್ವಸ್ತಿ ಪೇಳುತ ವರಗಳ ಬೇಡಿ ಮುಕ್ತಿದಾತೆ ಮಾಂಗಲ್ಯ ಭಾಗ್ಯವನಿತ್ತು ಪಾಲಿಸೆಂದು ಕರವ ಮುಗಿದ 4 ಅಷ್ಟೈಶ್ವರ್ಯದಿಂದ ಮೆರೆವ ದಿಟ್ಟ ಮೂರುತಿ ಶ್ರೀ ಶ್ರೀನಿವಾಸನ ಕರುಣಿಸೆಂದು 5
--------------
ಸರಸ್ವತಿ ಬಾಯಿ
ಪೂಜಿಮಾಡುವ ಬನ್ನಿ ರಾಜತೇಜೋನಿಧಿಯ ರಾಜಾಧಿರಾಜ ಮಹಾರಾಜ ಗುರುಮೂರ್ತಿಯ ಧ್ರುವ ಮನವೆ ಸುಮನಮಾಡಿ ಘನಗುರು ಪಾದÀಲಿಡಿ ಅನುಭವದಿಂದ ನೋಡಿ ಅನುದಿನವೆ ಕೊಂಡಾಡಿ 1 ಷೋಡಶೋಪಚಾರ ಮಾಡಿ ದೃಢ ವಿಚಾರ ನೋಡಿ ಮನೋಹರ ಒಡಿಯನೆ ಸಹಕಾರ 2 ಕಣ್ಣಿನೊಳಿಟ್ಟು ಖೂನ ಪುಣ್ಯನೋಡಿ ನಿಧಾನ ಚಿಣ್ಣಮಹಿಪತಿಪ್ರಾಣ ಧನ್ಯಗೈಸುವ ಸಾಧನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪೂಜಿಸುವೆನು ದೇವಿಯ ಶ್ರೀನಿತ್ಯ ಗೌರಿಯ ಪ ಪರಶಕ್ತಿರೂಪೆಯ ಪರತತ್ವಮೂರ್ತಿಯ ಪರಮಮಂಗಳ ದೇವಿಯ ಪರಮಾನುರಾಗದಿ 1 ಮೃಗಧರಮೌಳಿಯ ಜಗದುದ್ಧಾರಾಂಬೆಯ ಮಿಗೆ ಮನದಲಿ ಧ್ಯಾನಿಸಿ ಅವಾಹಿಸುತ್ತಲಿ 2 ಸರ್ವಲೋಕೇಶ್ವರಿಯ ಸರ್ವಾಲಂಕಾರೆಯ ಸರ್ವಾಂಗ ಸುಂದರಿಯ ಆಸನವನಿತ್ತು 3 ವಿದ್ಯಾಧಿದೇವಿಯ ಶುದ್ಧಚಿದ್ರೂಪೆಯ ಪಾದ್ಯಾಘ್ರ್ಯಾಚ ಮನದಿಂದ ಪರಿಶುದ್ಧ ಹೃದಯದಿ 4 ಪಂಚಮವಾಣಿಯ ಚಂಚರಿಕಾಂಬೆಯ ಪಂಚಾಮೃತವ ಜಲವ ಮುದದಿಂದ ತಳಿಯುತ 5 ಸುಂದರ ಹಾಸೆಯ ಸೌಂದರ್ಯ ಶರದಿಯ ಚಂದ್ರಗಾವಿಯ ನುಡಿಸಿ ಕಂಚುಕವ ಗೊಡಿಸಿ 6 ಚಂದ್ರ ಬಿಂಬಾಸ್ಯೆಯ ಸಿಂಧುರ ಗಮನೆಯ ಇಂದು ತಿಲಕವ ತಿದ್ದುತ ಗಂಧವನೆ ತೊಡೆದು 7 ಮಂಗಳ ಮಾತೆಯ ಮಂಗಳ ಮೂರ್ತಿಯ ಮಂಗಳ ದ್ರವ್ಯದಿಂದ ಶೃಂಗಾರ ವೆಸಗಿ8 ಲೀಲಾವಿನೋದೆಯ ಬಾಲ ಕುಚಾಂಬೆಯ ಮಾಲೆಯ ನರ್ಪಿಸುತ ಕುಸುಮಗಳ ನಿಚಯದಿ 9 ಪಾಪನಿಹಂಶ್ರಿಯ ಶ್ರೀಪತಿ ಸೋದರಿಯ ಧೂಪ ದೀಪವ ಕಲ್ಪಿಸಿ ಅಚಮನವಿತ್ತು 10 ಸತ್ಯಸಂಕಲ್ಪೆಯ ನಿತ್ಯಸಂತುಷ್ಟೆಯ ಉತ್ತಮ ಫಲಭಕ್ಷ್ಯದಿಂ ನೈವೇದ್ಯ ವೆಸಗಿ 11 ಕಂಬುಸುಕಂಠಿಯ ಬಿಂಬಫಲಾಧರೆಯ ತಾಂಬೂಲ ದಕ್ಷಿಣೆಯಂ ಭಕ್ತಿಯೊಳಗರ್ಪಿಸಿ 12 ಮಂಗಳ ಮೂರ್ತಿಯ ಮಂಗಳ ಗೌರಿಯ ಮಂಗಳಾರತಿಯ ಗೈದು ಆಚಮನವಿತ್ತು 13 ಕಲಕೀರವಾಣಿಯ ಕಲಹಂಸಗಮನೆಯ ಲಲನಾಶಿರೋಮಣಿಯ ಬಲವಂದುನಮಿಸಿ 14 ಜಯ ಜಯ ಗೌರಿಯೆ ಜಯ ಜಯ ಮಾತೆಯೆ ಜಯದೇವಿ ಕರುಣಿಸು ನೀಂ ವರ ಸುಪ್ರಸಾದವ 15 ಮಾನಿನಿ ದೇವಿಯು ಮೌನಿ ಸುವಂದ್ಯೆಯು ಧೇನುಪುರೀಶ್ವರಿಯು ಸುಪ್ರೀತೆಯಾಗಲಿ 16
--------------
ಬೇಟೆರಾಯ ದೀಕ್ಷಿತರು
ಪೂಜೆಗೈಯಲು ಬಾ ಸಖಿ ಸುಮುಖಿ ರಾಜಾಸಹೋದರಿಗೆ | ರಾಜೀವಾಂಬಕಿ ಪೂಜೆಗೈಯಲು ಬಾ ಸಖಿ ಸುಮುಖಿ ಪ ಮೃಗ ಮುದದಿ ಮುದದಿ ಶಕ್ರಂದನವಂದಿತ ಶ್ರೀಪಂಕಜಾಕ್ಷಿಗೆ 1 ಗಂಧಗರು ಕುಸುಮಾಕ್ಷತೆಯಿಂದಾ | ಸಿಂಧು ಜಾತೆಗೆ 2 ಶಾಮಸುಂದರನ ರಾಣಿಗೆ | ಹರಿಗೆ | ಭೂಮಿಜಾವರಗೆ | ಭೂಮಿಜಾತೆಗೆ ಜವದಲಿ ವಾಮಲೋಚನೆ 3
--------------
ಶಾಮಸುಂದರ ವಿಠಲ