ಒಟ್ಟು 5051 ಕಡೆಗಳಲ್ಲಿ , 129 ದಾಸರು , 3317 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೈಯ ತೋರೋ ಕರುಣಿಗಳರಸಾ-ಕೈಯ ತೋರೊ |ಕೈಯಲಿ ಬೆಣ್ಣೆಯ ಮುದ್ದೆಯ ನೀಡುವೆ-ಕೈಯ ಪಅಂಗುಲಿಯೊಳು ಪೊನ್ನುಂಗುರವೊಪ್ಪುವ ಕೈಯ ತೋರೊ |ಶೃಂಗಾರದಿ ಶಂಖಚಕ್ರವ ಧರಿಸಿದ ಕೈಯ ತೋರೊ ||ಅಂಗೈಯಲಿ ಧ್ವಜಪಧ್ಮವಿರಾಜಿಪ ಕೈಯ ತೋರೊ |ಅಂಗನೆಯರಉತ್ತುಂಗಕುಚದಲಿಟ್ಟ ಕೈಯ ತೋರೊ1ಬಡಬ್ರಾಹ್ಮಣನವಲಕ್ಕಿಯ ಬೇಡಿದ ಕೈಯ ತೋರೊ |ಕೊಡೆ ಮಾಡಿ ಗಿರಿಯೆತ್ತಿ ಗೋಗಳ ಕಾಯ್ದ-ಕೈಯ ತೋರೊ ||ಕಡುಹಿರಣ್ಯಾಖ್ಯನ ಒಡಲನು ಬಗೆದ-ಕೈಯ ತೋರೊ |ಧೃಡ ಪ್ರಹ್ಲಾದನ ಮಂಡೆಯೊಳಿಟ್ಟ ಕೈಯ ತೋರೊ 2ಅಲ್ಲಿ ಪೂತನಿಯ ಅಸುವನೆ ಹೀರಿದ ಕೈಯ ತೋರೊ |ಬಲ್ಲಿದಮಲ್ಲರ ಮರ್ದಿಸಿ ಬಂದ-ಕೈಯ ತೋರೊ ||ಮೆಲ್ಲನೆ ಕುಬುಜೆಯ ಡೊಂಕನೆ ತಿದ್ದಿದ ಕೈಯ ತೋರೊ |ಬಿಲ್ಲನು ಎಡಗೈಯಲಿ ಮುರಿದಿಟ್ಟ ಕೈಯ ತೋರೊ 3ಬಲಿಯನು ವಂಚಿಸಿ ದಾನವ ಬೇಡಿದ ಕೈಯ ತೋರೊ |ಫಲಪುಷ್ಪ ಪಾರಿಜಾತವ ತಂದ ಕೈಯ ತೋರೊ ||ಒಲಿದು ಪಾರ್ಥಗೆ ರಥವನು ನಡೆಸಿದ ಕೈಯ ತೋರೊ |ಮಲ್ಲಿಗೆ ಜಾಜಿಯ ತುರುಬಿಗೆ ಮುಡಿಸಿದ ಕೈಯ ತೋರೊ 4ಆಕಾಶದ ಚಂದ್ರಮನನು ಕರೆದ-ಕೈಯ ತೋರೊ |ನಾಕಪತಿಗೆ ಅಭಯವನಿತ್ತ-ಕೈಯ ತೋರೊ |ನೇಕ ಬಗೆಯಲಿ ಕೊಳಲನೂದುವ-ಕೈಯ ತೋರೊ |ಶ್ರೀಕಾಂತ ನಮ್ಮ ಪುರಂದರವಿಠಲ-ಕೈಯ ತೋರೊ 5
--------------
ಪುರಂದರದಾಸರು
ಕೊಡಬಹುದೇ ಮಗಳ - ಸಮುದ್ರರಾಜಕೊಡಬಹುದೇ ಮಗಳ ಪನಡೆದರೆ ಬಡವಹಳೆಂಬ ಕುಮಾರಿಯ |ಹಿಡಿಬಿಟ್ಟಿ ಮಾಡಿ ಹರಿಗೆ ಸಿಂಧುರಾಜನುಅ.ಪಕುರುಹಬಲ್ಲವರಾರು, ಕುಲಗೋತ್ರವಾವುದೊ |ಅರಿತ ರಾಯರೊಳಗೆ ಆರ ಮಗನೊ ಇವ |ವರುಶಭಾಂಗಿಗೆ ತಕ್ಕ ವರನಹುದೆ ಇವ |ಹಿರಿಯರೆಂಬುದ ನೆರೆಹೊರೆಯೂ ಕಾಣದನಿವ |ಪರಿಪಂಥಿಜನಕೆಲ್ಲ ಪ್ರಾಣಘಾತಕನಿವ |ನಿರುತ ಮೇಘವ ಪೋಲ್ವ ನೀಲಮೆಯ್ಯವನಿವ,ಹಿರಿದಾದ ನಾಲ್ಕು ಹಸ್ತಗಳುಳ್ಳವನಿವ |ಅರುಣಚ್ಛಾಯೆಯ ರೇಖೆ ಅರಳಿಸಿಹಾರುವ ||ಗರುಡಹಕ್ಕಿಯ ನೆಚ್ಚಿದ - ಎದೆಯ ಮೇಲೆ |ಭರದಿ ಒದೆಯ ಮೆಚ್ಚಿದ - ಘೋರರೂಪ |ಧರಿಸಿ ಕೋಪದಿ ಹೆಚ್ಚಿದ - ಕರೆವ ಗೋವ |ಕರುಗಳ ಕೊರಳುಚ್ಚಿದ - ಸಂಸಾರದೊಳ್ |ಇರುತಿಹ ನಾರಿಯರ ಮನವೆಲ್ಲ ಬಿಚ್ಚಿದ 1ಅಡಿಗಡಿಗೆ ಹತ್ತು ಅವತಾರವ ಮಾಡಿದ |ಕಡುಕಪತಿಯಲ್ಲದೆ ಭಾರಿ ಗುಣದವನಲ್ಲ |ಗಿಡದ ಮರೆಯಲಿದ್ದು ಕಪಿಯ ಕೊಂದನುಹೊಲ್ಲ |ನಡತೆಯಲಿ ಸಲೆ ಜನಲಜ್ಜೆ ಇವನಿಗಿಲ್ಲ |ಹಿಡಿದು ಪೂತನಿ ಮೊಲೆಯುಂಡ ಚೌಪಟಮಲ್ಲ |ಮಡುಹಿದ ಮಾವನ ಮಧುರೆಯೊಳಗೆಖುಲ್ಲ |ಕೊಡೆಮಾಡಿ ಬೆಟ್ಟವ ಗೋಕುಲದೊಳಗೆಲ್ಲ |ಮಡದಿಯರುಡುಗೆಯ ಕದ್ದದ್ದು ಹುಸಿಯಲ್ಲ ||ಕಡಹದ ಮರವೇರಿದ -ಅವರಮಾನ - |ಕೆಡಿಸಿ ಭಂಡರ ಮಾಡಿದ - ದಧಿಕ್ಷೀರ - |ಗಡಿಗೆ ಸೂರೆಯ ಮಾಡಿದ - ಕಾಳಿಂಗನ - |ಮಡುವ ಕಲಕಿ ನೋಡಿದ - ಸ್ಯಂದನವನು |ನಡೆಸುವ ಕಾರಣ ನರಗೆ ಸಾರಥಿಯಾದ 2ಊದುತ ಕೊಳಲನರಣ್ಯದೊಳ್ ಗೋಗಳ |ಕಾದು ಕುಂಚಿಗೆ ಮಾಡಿ ಕಂಬಳಿ ಪೊದೆವನು |ಓದನವನು ಬೇಡಿ ಹೊಟ್ಟೆಯ ಹೊರೆದನು |ಯಾದವರೊಳಗಾಡಿ ಎಂಜಲನುಂಡನು |ಕ್ರೋಧದಿಂದ ಸುರರ ಕೊಂದು - ಕೊಂದಿಡುವನು |ಪಾದರಿ ಪೆಣ್ಣುಗಳೊಳಗಿರುತಿಪ್ಪನುಆದಿಯೆ ಇವಗಿಲ್ಲ ಎಂದೆಂದಿಗಿಪ್ಪನು |ಭೂದಿವಿಜರ ಕೂಡ ಬಿಕ್ಷಕೆ ಪೋಪನು ||ಮೇದಿನಿಯೊಳಗಿರುವ - ಮಸ್ತಕವು ಬೋ - |ಳಾದವರೊಳಗಿರುವ - ನೋಡಲು ಭೇದಾ - |ಭೇದದಂದದಿ ತೋರುವ - ಸಭೆಯೊಳಗೆ |ಬೈದರೆ ಮೈದೋರುವ ಶೇಷಶಾಯಿ - |ಯಾದಂಥಪುರಂದರ ವಿಠಲನೆಂದರಿಯದೆ3
--------------
ಪುರಂದರದಾಸರು
ಕೊಂಡಭೆಟ್ಟಿ ಭೂಮಂಡಲಾಧೀಶನುಪಾಂಡವರ ಉದ್ದಂಢಗಳಿಂದ ಪ.ಚಂದ್ರನಂತೊಪ್ಪುತ ವಂದಿಸಿ ಐವರುಆನಂದಬಾಷ್ಪಗಳು ದೇವದುಂದುಭಿಆಗ1ತೋಳ ಭಾಪುರಿಯವರು ಬಹಳೆ ಹಾರಗಳಿಂದವ್ಯಾಳಾಶÀಯನ ಒಪ್ಪ ಹೇಳಲು ವಶವಲ್ಲ 2ಶ್ರೀಶ ಇವರ ಭೆಟ್ಟಿ ದೇಶದ ಜನ ನೋಡಿಸೂಸು ಮಲ್ಲಿಗೆ ತಮ್ಮ ಆಸೆ ಪೂರೈಸಿಕೊಂಡು 3ಭೆಟ್ಟಿಯಾದ ಉತ್ಕರ್ಷ ನೋಡಿ ಪುಷ್ಪವೃಷ್ಟಿಯಗರೆದರು ಶ್ರೇಷ್ಠದಸುರರು4ಅಮ್ಮ ಇವರ ಮ್ಯಾಲೆ ರಮ್ಮಿ ಅರಸನ ಪ್ರೀತಿಬೊಮ್ಮಕಂಡು ಬೆರಗೊಮ್ಮೆ ಬಡುವ5
--------------
ಗಲಗಲಿಅವ್ವನವರು
ಕೋಮಲಾಮಲ ಗಾತ್ರನ ತಾಮರಸದಳ ನೇತ್ರನಸ್ವಾಮಿ ಸಿರಿನಿವಾಸನ ಕಂಡೆ ಹೇಮಗಿರಿ ವರದೀಶನ ಪ.ಕನ್ನೆ ಲಕುಮಿಯನೆತ್ತಿದಶುಭಚಿನ್ನವಕ್ಕಿಯ ಹತ್ತಿದರನ್ನದುಡುಗೆಗಳಿಟ್ಟನ ಸುವರ್ಣದಂಬರನುಟ್ಟನಕರ್ಣಕುಂಡಲ ಬೆಳಗಿನ ನುಣ್ಗೆನ್ನೆಲಲುಗುವ ಕುರುಳಿನಸಣ್ಣನಾಮದ ನೊಸಲಿನ ಶ್ರೀ ಚಿನ್ಮಯನ ಬಲು ಚೆಲುವನ 1ಕುಂದದಲರಿನ ಮಾಲೆಯ ಪ್ರಭೆಗುಂದದ ಮಕುಟಮೌಳಿಯಸ್ಯಂದನಾಂಗದರಾಭಯವರ ಹೊಂದಿದಮಲ ಸುಪಾಣಿಯಮುಂದೆ ನಾರದ ಹನುಮರ ಗಾಯನಾನಂದದಲಿ ತಾ ಕೇಳುವಹಿಂದೆಡಬಲದಿ ಛತ್ರವ ಪಿಡಿದಿಂದಿರೆಯರೊಳೊಪ್ಪುವ 2ತೋರ ಮುತ್ತಿನ ಹಾರದಕೇಯೂರಕೌಸ್ತುಭವಕ್ಷದಚಾರುಸ್ಮಿತ ಮುಖರೋಚಿಯ ದಯಾವಾರಿಧಿಯ ಮಹೋದಾರಿಯಸಾರಿದರ ಸುರತರುವಿನ ಸುರವೈರಿಕರಿಪಂಚಾನನಭೂರಿಪ್ರಸನ್ವೆಂಕಟೇಶನ ಹೃದಯಾರವಿಂದ ನಿವಾಸನ3
--------------
ಪ್ರಸನ್ನವೆಂಕಟದಾಸರು
ಕೋಲಕೋಲೆಂದು ಕೋಮಲೆಯರೆಲ್ಲರಕಾಲುಗೆಜ್ಜೆಯು ಘಿಲ್ಲು ಘಿಲುಕೆಂದು ಇಲ್ಲೆ ಪ.ಸಿಂಧುಶಯನನ ಚಂದದಲೆ ನೋಡಿಆನಂದ ಭಾಷ್ಪದ ಬಿಂದು ಉದುರುತ ಪಾಡಿಮಂದಹಾಸದಿ ಮನೆಗೆ ಬಾರೆನಲುಕೂಡಿಕೊಂಡು ಕೃಷ್ಣನ ಸಭೆಯ ಪ್ರವೇಶಮಾಡಿ 1ಕರಲಾಘವ ಧರ್ಮ ಕೊಟ್ಟನು ರಾಜ ಶ್ರೇಷ್ಠನು ಮನನರಹರಿಯಲ್ಲಿಟ್ಟಿಹನು ವರಸಿಂಹಾಸನ ಏರಿದಶ್ರೇಷ್ಠ ತೋರಿದ ಬಲುಹರುಷ ಬೀರಿದರಾಜಗೋಪಾಲನ ನೋಡುವ ವರವ ಬೇಡುವ 2ಜಳಕುಜಳಕುರಂಗ ಜಳಜಳಿಸುತ ಬರಲುಬೆಳಕು ತುಂಬಿತು ಬಹಳೆಮಂದಿರದಲಿಥಳಕು ಥಳಕನೆ ಹೊಳೆವ ಸಿಂಹಾಸನದÀಲಿಕುಳಿತ ಕೃಷ್ಣನು ಅಣಕಿಸಿ ಸೂರ್ಯನ 3ಭೇರಿತುತ್ತೂರಿನಾನಾಪರಿವಾದÀ್ಯವಸಾರಿ ಕುಳಿತ ಧೀರ ಮುರಾರಿಚಾರುಮಲ್ಲಿಗೆ ಮಳೆಗರೆದ ಸುಖಸುರಿವರರಾಯರು ಏನು ಧನ್ಯರೆÉ ರಾಜಗೋಪಾಲನ್ನ ನೋಡುವ 4ಹಲವು ರಾಯರು ಹಲವು ಯಾದವರುಬಲುಸೊಗಸಿಲೆ ಬಂದು ಕುಳಿತಾರೆ ಅವರುಹಲಧರನ ಹತ್ತಿರೆ ರಾಮೇಶನವರುಜಲಜಾಕ್ಷನ ನೋಡುತಲೊಪ್ಪುತಿಹರು 5ಕಡು ಚಲ್ವ ರಾಮೇಶನ ಮಡದಿಯರುಉಡುರಾಜಮುಖಿಯರು ನಡೆದು ದ್ರೌಪತಿಸುಭದ್ರೆಯರ ಮಾನÀ ಶುದ್ಧೆಯರಹರಿಯ ಅಡಿಗೆರಗುವ ರಾಜಗೋಪಾಲನ ನೋಡುವ 6
--------------
ಗಲಗಲಿಅವ್ವನವರು
ಕೋಲುಹಾಡುಕೋಲು ಕಾಮನ ಗೆದ್ದ ಕೋಲು ಮಾಯ್ಗಳನೊದ್ದಕೋಲು ಆನಂದಮುನಿ ಪಿಡಿದಿಹ ಕೋಲೆ ಪ.ತಮನೆಂಬುವನ ಕೊಂದು ಕಮಲಜನಿಗೆ ವೇದಕ್ರಮದಿಂದ ಕೊಟ್ಟು ಜಗವನು ಕೋಲೆಕ್ರಮದಿಂದ ಕೊಟ್ಟು ಜಗವನು ರಕ್ಷಿಸಿದವಿಮಲ ಶ್ರೀಮತ್ಸ್ಯಮನೆದೈವ ಕೋಲೆ1ಸುರಪನ ವಿಭವೆಲ್ಲ ಶರಧೀಲಿ ಮುಳುಗಿರೆಗಿರಿಗಹಿ ಸುತ್ತಿ ಕಡೆಯಲು ಕೋಲೆಗಿರಿಗಹಿ ಸುತ್ತಿ ಕಡೆಯಲುನಗಜಾರೆಧರಿಸಿದ ಶ್ರೀಕೂರ್ಮಮನೆದೈವ ಕೋಲೆ2ಹೊಂಗಣ್ಣಿನವನು ಭೂವೆಂಗಳನೆಳೆದೊಯ್ಯೆಮಂಗಳಮಹಿಮ ದಯದಿಂದ ಕೋಲೆಮಂಗಳ ಮಹಿಮ ದಯದಿಂದ ನೆಗಹಿದ್ಯಜ್ಞಾಂಗ ಶ್ರೀವರಾಹ ಮನೆದೈವ ಕೋಲೆ 3ಒಂದೆ ಮನದೊಳಂದು ಕಂದ ನೆನೆಯಲಾಗಬಂದವನಯ್ಯನ್ನೊದೆದನು ಕೋಲೆಬಂದವನಯ್ಯನ್ನೊದೆದನು ಅನಿಮಿತ್ತಬಂಧು ನರಹರಿಯು ಮನೆದೈವ ಕೋಲೆ 4ಎದುರಿಲ್ಲವೆನಗೆಂದು ಮದವೇರಿದವನ ತ್ರಿಪದ ಭೂಮಿ ಬೇಡಿ ಗೆಲಿದನು ಕೋಲೆಪದ ಭೂಮಿ ಬೇಡಿ ಗೆಲಿದಾ ತ್ರಿವಿಕ್ರಮಮುದದ ವಾಮನ ಮನೆದೈವ ಕೋಲೆ 5ಕುಜನರಳಿದು ಭಾಗ್ಯ ಸುಜನರಿಗೊಲಿದಿತ್ತನಿಜ ತಾತನಾಜÕ ಸಲಹಿದ ಕೋಲೆನಿಜ ತಾತನಾಜÕ ಸಲಹಿದ ಶುಭಗುಣದ್ವಿಜರಾಮ ನಮ್ಮ ಮನೆದೈವ ಕೋಲೆ 6ಕೌಸಲ್ಯೆ ಗರ್ಭದಿ ಜನಿಸಿದ ಕೃಪೆಯಲ್ಲಿಕೌಶಿಕಕ್ರತುವ ಕಾಯ್ದನು ಕೋಲೆಕೌಶಿಕಕ್ರತುವ ಕಾಯ್ದ ರಾವಣಾಂತಕಶ್ರೀ ಸೀತಾರಾಮ ಮನೆದೈವ ಕೋಲೆ 7ಗೋಕುಲದಲಿ ಬೆಳೆದುಪೋಕದನುಜರ ಅನೇಕ ಪರಿಯಲಿ ಸದೆದನು ಕೋಲೆ ಅನೇಕ ಪರಿಯಲಿ ಸದೆದ ಪಾಂಡವಪಾಲಶ್ರೀಕೃಷ್ಣ ನಮ್ಮ ಮನೆದೈವ ಕೋಲೆ 8ಮಿಥ್ಯಾವಾದಿಗಳಿಗೆ ಮಿಥ್ಯವನೆ ಕಲಿಸಿಸತ್ಯವಾದಿಗಳ ಪೊರೆದನು ಕೋಲೆಸತ್ಯವಾದಿಗಳ ಪೊರೆದನು ಅಜವಂದ್ಯಕರ್ತಬೌದ್ಧನು ಮನೆದೈವ ಕೋಲೆ9ಸ್ವಾಹಾ ಸ್ವಧಾಕಾರವು ಮಹಿಯೊಳಿಲ್ಲದಾಗೆಸುಹಯವೇರಿ ಕಲಿಯನು ಕೋಲೆಸುಹಯವೇರಿ ಕಲಿಯನೆಳೆದು ಕೊಂದಮಹಾಕಲ್ಕಿ ನಮ್ಮ ಮನೆದೈವ ಕೋಲೆ 10ಹತ್ತವತಾರದಿ ಭಕ್ತಜನರ ಹೊರೆದಮತ್ತಾವಕಾಲದಿ ರಕ್ಷಿಪ ಕೋಲೆಮತ್ತಾವ ಕಾಲದಿ ರಕ್ಷಿಪ ಪ್ರಸನ್ವೆಂಕಟಕರ್ತನ ನಂಬಿ ಸುಖಿಯಾದೆ ಕೋಲೆ 11
--------------
ಪ್ರಸನ್ನವೆಂಕಟದಾಸರು
ಕೋಲೆಂದು ಪಾಡಿರೆಕೋಮಲೆಯರೆಲ್ಲಗೋಪಾಲರಾಯನಮಡದಿಯರುಕೋಲಪ.ಶ್ರೀದೇವಿಯರ ಕೂಡ ವಾದ ಸರಸವೆಆದರದಿ ಪಾದಕ್ಕೆರಗಿಕೋಲಮಾಧವನರಸಿಯರ ಮೋದದಿಕರೆಯೆ ವಿನೋದವ ನುಡಿದಾನುರಾಯ 1ಸರಿಯ ರಾಣಿಯರ ಕೂಡ ತರವೇನು ಸರಸವುಕರವಜೋಡಿಸಿ ಕಮಲಾಕ್ಷಿಕೋಲಎರಗಿ ದೇವಿಯರಿಗೆ ಕರಿಯೆ ಬ್ಯಾಗಎಂದುಹರದೆಯರಿಗೆ ನುಡಿದ ಭೀಮನು ಕೋಲ 2ಕೀರ್ತಿವಂತರ ಕೂಡ ಯಾತಕ್ಕೆ ಸರಸವುಮಾತಿನ ಸುಖದ ವಾಣಿಯರಕೋಲಸ್ತೋತ್ರವ ಮಾಡುತ ಪ್ರೀತಿಲೆ ಕರೆಯೆಂದುಪಾರ್ಥ ಮಾತಾಡಿದ ಸತಿಗೆ ಕೋಲ 3ಸಕಲ ಗುಣಾಢ್ಯರ ಸಖಳೆಂದು ಕರೆಸಿಕೊನಕಲಿ ಮಾತಾಡಬ್ಯಾಡಕೋಲಮುಖವ ನೋಡುತ ಅತಿ ಸುಖವ ಪಡಿರೆಂದುನಕುಲಮಾತಾಡಿದ ಸತಿಗೆಕೋಲ4ಇಂತು ರಾಮೇಶನ ಕಾಂತೆಯರ ಕರೆಯೆವೇದಾಂತ ವೇದ್ಯಳೆ ದ್ರೌಪತಿಕೋಲಪಂಥವ ಬಿಟ್ಟು ಸಂತೋಷದಿ ಕರೆಯೆಂದುಕಾಂತೆಗೆ ನುಡಿದ ಸಹದೇವ 5
--------------
ಗಲಗಲಿಅವ್ವನವರು
ಕೋಳಿ ಕೊಗಿತಲ್ಲಾ - ಲಕ್ಷ್ಮೀಲೋಲನಲ್ಲದೆ ಅನ್ಯರಾರಿಲ್ಲವೆಂದು ಪ.ಮೊದಲ ಜಾವದಲಿ ಮುಕುಂದನೆಂದು ಕೂಗಿಎರಡಲಿ ಶ್ರೀ ವೆಂಕಟಾದ್ರಿಯೆಂದು ||ಉರಗಗಿರಿಯ ವಾಸ ಯಾದವ ಕುಲ ಗೊಲ್ಲಚದುರ ಚಲ್ಲಪಿಲ್ಲಿ ರಾಯನಲ್ಲದಿಲ್ಲವೆಂದು 1ಮೂರು ಜಾವದಲಿ ಮುರಾರಿಯೆಂದು ಕೂಗಿನಾಕರಲಿ ನಾರಾಯಣಯೆನಲು ||ಕ್ಷೀರಾಬ್ಧಿಯ ವಾಸ ಲಕ್ಷ್ಮೀಪತಿ ಕೋನೇರಿವಾಸ ವೆಂಕಟಕೃಷ್ಣರಾಯನೆಂದು 2ಪರಮಪುರುಷ ಮುಖ್ಯ ಆಧಾರಭೂತಕರುಣದ ಪುಂಜನು ಜಗದಾದಿ ತಾ ||ಕಮಲಸಂಭವ ಮುಖ್ಯ ಕಾರುಣ್ಯ ಮೂರುತಿವಿಮಲಕಾಪುರ ತಿಮ್ಮರಾಯನಲ್ಲದಿಲ್ಲವೆಂದು 3ರೆಕ್ಕೆಯ ಬಿಚ್ಚಿ ಪಸರಿಸಿ ಡಂಗುರ ಹೊಯ್ದಕೊಕ್ಕನು ಮೇಲೆ ನೆಗಹಿಕೊಳುತ ||ಚಕ್ಕನೆ ಕೇರಿ ಕೇರಿಯಗುಂಟ ಸಾಗುತಮುಕುಂದನಲ್ಲದೆ ಅನ್ಯರಾರಿಲ್ಲವೆಂದು 4ಐದು ಜಾವದಲಿ ಅನಂತನೆಂದು ಕೂಗಿಆರರಲ್ಲಿ ಅಳಗಾದ್ರೀಶಯೆಂದು ||ಏಳರಲ್ಲಿ ಕಾಶಿಯ ಬಿಂದುಮಾಧವಎಂಟಕೆ ಪುರಂದರವಿಠಲರಾಯನೆಂದು 5
--------------
ಪುರಂದರದಾಸರು
ಕ್ಷಣಕೆಲವಕೆ ನೆನೆ ಹರಿಯ ಮನವೆಕ್ಷಣಕೆ ಲವಕೆ ಹರಿಯ ಪ.ಮನಕೆ ಶ್ರುತಿಗಳಿಗೆ ದೊರೆಯಶಶಿದಿನಕರವಂಶಕೆ ಹಿರಿಯಘನಕಲುಷದೊಳವತಾರಿಯ ಪೆತ್ತಜನಕ ತಿರುಮಲೆಯ ದೊರೆಯ 1ಕನಕಾಂಗಿಯಳ ಸಿರಿಯಭವಕನಕೋದರರಿಗೆ ವರಿಯಮುನಿಕುಲಕಾಂತಿ ಅತಿಪರಿಯ ತನ್ನಜನಕನ ವರಕುಪಕಾರಿಯ 2ಜನಕನಳಿಯ ಖಳರರಿಯದಿನದಿನಕೆ ಲಾವಣ್ಯದ ತೆರೆಯಸನಕಾದ್ಯರ ಮನೋಹರಿಯವೈರಿನಿಕರದ ಕದಳಿಗೆ ಕರಿಯ 3ಮೀನ ಕಮಠಾದ್ಯವತಾರಿಯ ಭುವನಕೊಬ್ಬನೆ ಸುಖಕಾರಿಯಧನು ಕರದಿ ಮುರಿದ ಶೌರಿಯಮಾವನಕೆಡಹಿದ ಹೊಂತಕಾರಿಯ4ತನ್ನ ಕರುಣಕೆನಿತ್ಯಗುರಿಯಾಗಿಹನ ಕಾಯುವನು ಪರಂಪರೆಯಎನ್ನ ಕುಲದೈವ ಮೇಲ್ಗಿರಿಯ ಪ್ರಸನ್ನವೆಂಕಟಕೃಷ್ಣ ನಮ್ಮ ಮರೆಯ 5
--------------
ಪ್ರಸನ್ನವೆಂಕಟದಾಸರು
ಕ್ಷಮಾ ಸಮುದ್ರ ನಿನ್ನ ಸಮಾನರಿಲ್ಲರಮಾ ಬ್ರಹ್ಮಾದಿಗಳು ಪೊಗಳೆ ಪಉಮೆಯರಸ ನಿನ್ನ ಚರಣಮಹಿಮೆ ತನ್ನತರುಣಿಯೊಡನೆ ಹಗಲಿರುಳು ಪೇಳುವ ದಿವ್ಯ ಅ.ಪಅರಿಯದೆ ಅಜಮಿಳತರಳನಾರಗನೆಂದುಮರಣ ಕಾಲದಿ ಒದರೆಸರಸೀಜಾಕ್ಷನು ತನ್ನ ಪರಿವಾರದವರೆಂದುಸಿರಿದೇವಿಯೊಳು ಪೇಳಿ ತ್ವರಿತದಿ ರಕ್ಷಿಸಿದ 1ನಕ್ರನ ಬಾಧೆಗೆ ಸಿಕ್ಕಿದ ಗಜರಾಜಚಕ್ರಪಾಣಿಯ ಭಜಿಸೆಆ ಕ್ಷಣದಿ ತನ್ನ ಚಕ್ರಕಾಙÉÕಯ ಮಾಡಿಲಕ್ಷ್ಮೀದೇವಿಗ್ಹೇಳದೆ ಪಕ್ಷಿ ಹೆಗಲೇರಿ ಬಂದ 2ಹಿರಣ್ಯಕಶ್ಯಪು ತನ್ನತರಳಪ್ರಹ್ಲಾದನಿಗೆಪರಿಪರಿ ಬಾಧೆ ಪಡಿಸೆಹರಿಯ ತೋರೆಂದು ಆರ್ಭಟಿಸಿ ನುಡಿಯೆ ದೈತ್ಯನರಮೃಗರೂಪನಾಗಿ ಭರದಿ ಕಂಬದಿ ಬಂದ3ಪತಿಗಳೈವರು ಲಕ್ಷ್ಮೀಪತಿಯ ಧ್ಯಾನದೊಳಿರೆಮತಿಹೀನನೆಳೆತರಲುಗತಿನೀನಲ್ಲದೆ ಮತ್ತೆ ಹಿತರೊಬ್ಬರಿಲ್ಲವೆನೆಅತಿಬೇಗದಿಂದ ಧರ್ಮಸತಿಗೆ ಅಕ್ಷಯವಿತ್ತ 4ಇದರಂತೆ ತರಳಧ್ರÀುವ ಒದಗಿದ ತಾಪದಿಂದಪದುಮನಾಭನÀ ಭಜಿಸೆಮುದದಿಂದಾತಗೆ ಧ್ರುವಪದವಿಯನಿತ್ತು ಕಾಯ್ದೆಪದುಮನಾಭನೆ ನಿನಗೆದುರುಂಟೆ ತ್ರಿಜಗದಿ 5ಘಣಿಶಾಯಿ ನಿನ್ನಗುಣಮಹಿಮೆಯ ಪೊಗಳಲುಅಹಿಭೂಷಣನಿಗಳವೆಕ್ಷಣ ಬಿಡದಲೆ ನಿನ್ನ ಚರಣಸೇವೆಯ ಮಾಳ್ಪಸಿರಿದೇವಿ ಅರಿಯೆನೆಂದೆನಲು ನಿನ್ನಯಗುಣ6ಕರುಣಾಸಾಗರ ದೇವ ವಿಮಲಸ್ವರೂಪನೆ ಕಮಲನಾಭ ವಿಠ್ಠಲಶರಣಜನರ ಬಹುತ್ವರದಿಂದ ಬಂದು ಕಾಯ್ದಪರಮದಯಾಳೊ ನಿನ್ನ ಚರಣಕ್ಕೆ ನಮೋ ಎಂಬೆ7
--------------
ನಿಡಗುರುಕಿ ಜೀವೂಬಾಯಿ
ಕ್ಷೀರಸಾಗರದಲೆರಡೀರೈದು ಯೋಜನದ |ಮೇರೆಯಲಿ ವರತ್ರಿಕೂಟಾದ್ರಿ ಶೃಂಗತ್ರಯದಿ |ರಾರಾಜಿಸುವ ತಾಮ್ರ-ರಜತ-ಕಾಂಚನದಿಂದನಾರಾಯಣಾಂಶದಿಂದ ||ಪಾರಿಜಾತಾಂಭೋಜ ಬಕುಳ ಮಲ್ಲಿಗೆ ಜಾಜಿ |ಸೌರಭದಲಶ್ವತ್ಥಪೂಗಪುನ್ನಾಗಜಂ |ಬೀರತರುಗುಲ್ಮಶಾಖಾಮೃಗಗಳೆಸೆವಲ್ಲಿವಾರಣೀಂದ್ರನು ಮೆರೆದನು 2ಆನೆ ಹೆಣ್ಣಾನೆ ಮರಿಯಾನೆಗಳ ಸಹಿತಲ್ಲಿ |ಕಾನನದಿ ತೊಳಲುತ್ತ ಬೇಸಗೆಯ ಬಿಸಿಲಲ್ಲಿ |ತಾನು ನೀರಡಿಸಿ ಬಂದೊಂದು ಸರಸಿಯ ತಟಕೆಪಾನಾಭಿಲಾಷೆಯಿಂದ ||ನಾನಾಪ್ರಕಾರದಿಂ ಜಲಕ್ರೀಡೆಯಾಡುತಿರ |ಲೇನಿದೆತ್ತಣ ರಭಸವೆಂದುಗ್ರಕೋಪದಿಂ |ಒತ್ತಿ ಪಿಡಿದೆಳೆಯುತಿರೆ ಎತ್ತಣದಿನೇನೆನುತ |ಮತ್ತಇಭರಾಜನೌಡೊತ್ತಿ ನೋಡುತ್ತಂಘ್ರಿ |ಎತ್ತಿ ತಂದನು ತಡಿಗೆ ಮತ್ತೆ ನಡುಮಡುವಿನೊಳುಅತ್ತಲೇ ತಿರುಗೆನೆಗಳೆ||ಇತ್ತಂಡದಿಂತು ಕಾದಿದರು ಸಾವಿರ ವರುಷ |ಉತ್ತರಿಸಿತೇನೆಂಬೆ ಮತ್ತಾ ಗಜೇದ್ರಂಗೆ |ಸತ್ತ್ವ ತಗ್ಗಿತು ತನ್ನ ಮನದೊಳಗೆ ಚಿಂತಿಸಿತುಮತ್ತಾರು ಗತಿಯೆನುತಲಿ 4ಬಂದುದಾ ಸಮಯದಲಿ ಹಿಂದೆ ಮಾಡಿದ ಪುಣ್ಯ |ದಿಂದ ದಿವ್ಯಜಾÕನ ಕಣ್ದೆರೆದು ಮನದೊಳರ |ವಿಂದನಾಭಾಚ್ಯುತ ಮುಕುಂದಮಾಧವಕೃಷ್ಣನಿಖಿಲ ಮುನಿವೃಂದವಂದ್ಯ ||ಇಂದಿರಾರಮಣ ಗೋವಿಂದ ಕೇಶವ ಭಕ್ತ |ಬಂಧು ಕರುಣಾಸಿಂಧು ತಂದೆ ನೀ ಗತಿಯೆನಗೆ |ಇಂದುಸಿಲ್ಕಿದೆನು ಬಲು ದಂದುಗದಮಾಯಾಪ್ರ-ಬಂಧಕನೆ ನೆಗಳಿನಿಂದ 5ಪರಮಾತ್ಮ ಪರಮೇಶ ಪರತತ್ತ್ವ ಪರಿಪೂಜ್ಯ |ಪರತರ ಪರಂಜೋತಿಪರಮಪಾವನಮೂರ್ತಿ |ಪರಮೇಷ್ಟಿಪರಬ್ರಹ್ಮಪರಮಪರಮಾಕಾಶ |ಪರಿಪೂರ್ಣ ಪರಮಪುರುಷ ||ನಿರುಪಮ ನಿಜಾನಂದ ನಿರ್ಲಯ ನಿರಾಕಾರ |ನಿರವಧಿಕನಿರ್ಗುಣನಿರಂಜನನಿರಾಧಾರ |ನಿರವದ್ಯನಿಸ್ಸಂಗ ನಿಶ್ಚಿಂತ ನಿಖಿಲೇಶಇರದೆ ನೀ ಸಲಹೆಂದನು 6ಇಂತೆನುತ ಮೂಚ್ರ್ಛೆಯಲಿ ಗುಪ್ತಕಂಠಸ್ವರದ |ಕಾಂತ ನಡುನೀರೊಳಗೆ ತೇಲಿ ಮುಳುಗುತಲಿರೆ ಅ- |ನೆಗಳ ಬಾಯನು ಚಕ್ರದಲಿ ಸೀಳಿ ಕರಿವರದ |ಒಗುವ ಕರಣದಲಿ ಮೈದಡಹಲ್ಕೆ ಗಜಜನ್ಮ |ತೆಗೆದುದಾಕ್ಷಣಕೆ ಮಣಿಮುಕುಟ - ಕುಂಡಲದಿಂದನಗಧರನು ಓಲೈಸಿದ ||ವಿಗಡದೇವಲ ಮುನಿಯ ಶಾಪದಲಿ ದಾರುಣಿಯೊ- |ಳಗೆ ನಕ್ರನಾಗಿ ಹೂಹೂ ಎಂಬ ಗಂಧರ್ವ |ಮಗುಳಿಪುರವನು ಕಂಡು ನಿಜಗತಿಗೆ ಐದಿದಿನುಕಮಲಾಕ್ಷಮಿಗೆ ಮೆರೆದನು 8ಮಣಿಮುಕುಟಕುಂಡಲಪದಕಹಾರ ಕಡಗಕಂ- |ಕಣ ಕೌಸ್ತು ಭೊಜ್ವ ್ಜಲಾಂಗದವೈಜಯಂತಿಭೂ- |ಷಣ ಶಂಖ-ಚಕ್ರ-ಗದೆ-ಪದ್ಮ ಧರಿಸಿಹಹಸ್ತಪಣಿಯ ಕಸ್ತುರಿ ತಿಲಕದಾ ||ಝಣಝಣಿಪ ನೂಪುರದ ದಂತಪಂಕ್ತಿಯ ಕೃಪೇ- |ಕ್ಷಣದ ಸಿರಿಮೊಗದ ಪೀತಾಂಬರದ ಮೂರುತಿಗೆ |ಮಣಿದು ಜಂiÀi ಜಯಜಯಾಎಂಬ ಸುರನರರಸಂ- |ದಣಿಯಿಂದೆಹರಿಮೆರೆದನು 9ಹರಹರಿಎನುತ್ತಂಘ್ರಿಗೆರಗಲಿಭವರನನಾ- |ದರದಿಂದಲೆತ್ತುತಲಿ ಕೇಳ್ಮಗನೆ ನೀನೆನ್ನ |ವಿರಜಶರಪರಿಧಿಯಾ ಸರವನಹಿಪತಿಯನ್ನುಪರಜನ್ಮನೀ ಲಕುಮಿಯ ||ಪರಮೇಷ್ಟಿ-ಭವರ ಮನು-ಮುನಿಗಳನು ಧರಣಿಯನು |ಆವಾವನಿದನುದಯದಲ್ಲೆದ್ದು ಭಕ್ತಿಯಲಿ |ಭಾವಶುದ್ಧಿಯಲಿ ತಾ ಹೇಳಿಕೊಳುವನೊ ಅವನ- |ಘಾವಳಿಯ ಪರಿಹರಿಸಿ ಸುಙ್ಞÕನವೀವೆ ದೇ-ಹಾವಸಾನದಲೆನುತಲಿ ||ಶ್ರೀವಾಸುದೇವನಾಜಾÕನೆಸಿ ಗಜೇಂದ್ರ ಸಹಿ- |ತಾವಿಹಂಗಾಧಿಪನನೇರಿ ವೈಕುಂಠಕ್ಕೆ |ದೇವ ಬಿಜಯಂಗೈದಪುರಂದರವಿಠಲನ
--------------
ಪುರಂದರದಾಸರು
ಗಂಗಾಧರ ದೇವ ಜಯಗೀಷ ವ್ಯಾನಂಗಾರಿ ಗಿರಿಜಾಧವ |ಮಂಗಳ ಪ್ರದನೆ ಅಮಂಗಳ ಶೀಲ | ಭುಜಂಗ ರೂಪದಿ ಪಾಂಡು |ರಂಗ ಘಾಸಿಗೆಯಾದ ಪವೈಕಾರಿಕಾಹಂಕಾರ ತತ್ವದೊಡೆಯ, ನಾಕುಮೊಗನ ಕುಮಾರ |ಶ್ರೀಕಂಠ, ಸ್ಥಾಣು, ವಿಶ್ಖೋಜನಕ, ಚಂದ್ರಶೇಖರ, ಈಶಪಿನಾಕಿಭಕ್ತವತ್ಸಲ |ಶೋಕನಾಶಕ ಶಂಭು, ಪಶುಪತಿ, ಹೇ ಕರುಣಿ, ಸದ್ಗುಣ ಸುಖಾರ್ಣವ |ಪಾಕಶಾಸನ ಪ್ರಮುಖ ವಂದ್ಯ, ವಿಶೋಕ, ಎನ್ನಭಿಲಾಷೆ ಪೂರ್ತಿಸು1ಪ್ರಾಣನಂದನ ತೈಜಸಾಹಂಕಾರಾಭಿಮಾನಿ ಶ್ರೀಶುಕದೂರ್ವಾಸ|ಕ್ಷೋಣಿಸಂಧೃತ ಧನ್ವಿ, ದಾನವಾಂತಕ, ಶೂಲಪಾಣಿ, ಪ್ರಮಥಾಧಿಪ ಬಾಣವರದಯನ್ನ |ಮಾನನಿನ್ನದು ಚಕ್ರಿ ಪದಕಂಜರೇಣುತೋರಿಸು ತವಕದಿಂದಲಿ |ದ್ರೌಣಿ, ಶಿವ, ಪ್ರಣತ ಜನ ಸುಮನಸಧೇನು, ತವ ಪದ ಸಾರ್ವೆ ಸತತ 2ತಾಮಸಾಹಂಕಾರೇಶ ಸಂಕರ್ಷಣನಾ ಮಗನೇ ಕೊಡು ಲೇಸ ರಾಮನಾಮ ಮಂತ್ರ |ಪ್ರೇಮದಿ ಜಪಿಸುವ ಸ್ವಾಮಿ, ಅನಲ,ವಹ್ನಿಸೋಮಲೋಚನ ಹರ |ವಾಮದೇವ, ಕಪರ್ದಿ,ಭವಭಯ ಭೀಮ ಶ್ರೀ ಪ್ರಾಣೇಶ ವಿಠಲನ |ಪ್ರೇಮ ಪುಟ್ಟಿಸೋ ರೌಪ್ಯ ಪರ್ವತಧಾಮ ಶ್ರೀ ವಿರೂಪಾಕ್ಷ ಗುರುವೇ 3
--------------
ಪ್ರಾಣೇಶದಾಸರು
ಗಂಗಾಧರ ಸುಮತಿ ಪಾಲಿಸೋ | ಪಾಂಡು |ರಂಗನ ಚರಣಾಬ್ಜ ಭಜನೆಮಾಡುನಿತ್ಯ ಪವೈಕಾರಿಕಾದಿತ್ಯರೂಪದನುಜರಿಗೆ |ಶೋಕಕೊಡುವದು ನಿರಂತರದಿ ||ಲೌಕಿಕವೆಲ್ಲ ವೈದಿಕವಾಗಲೆನಗೆ ಮೈನಾಕೀ |ಹೃತ್ಕಮಲಮಾರ್ತಾಂಡಭಕ್ತ ವತ್ಸಲ 1ವಾಸವಾದ್ಯಮರ ವಂದಿತನೆ ಪದ್ಮಜ ಸುತ |ನೀ ಸಲಹುವದೋ ಕೈಲಾಸವಾಸ ||ಕ್ಲೇಶಮೋದವು ಸಮ ತಿಳಿಸೋ ಅಶ್ವತ್ಥಾಮ |ದೋಷರಹಿತನೆ ದಕ್ಷಾಧ್ವ ರನಾಶಕ 2ಪವಮಾನತನಯನಿನ್ನವರಲ್ಲಿ ಕೊಡು ಸ್ನೇಹ |ದಿಙ ವಸನಾದಿಯಲ್ಲಿ ಎನ್ನಿರವ ಬಲ್ಲಿ ||ಅವಲೋಕಿಸದೆ ಎನ್ನನೇಕ ಪಾಪಗಳನ್ನು |ತವಕಉದ್ಧರಿಸೋ ವಿಯತ್ಪತಿ ಜನಕ 3ಸಾಮಜಾಜಿನ ವಸ್ತ್ರ ಭಸ್ಮ ಭೂಷಿತ ದೇವ |ಸೋಮಶೇಖರನೆ ಬಿನ್ನಪವ ಕೇಳು ||ಪ್ರೇಮದಿಂದಲಿ ಭಾಗವತರ ಸಂಗತಿನಿತ್ಯ|ಶ್ರೀ ಮನೋರಮನ ಚರಿತೆ ಪಾಡಿಸುವದಯ್ಯ 4ಶ್ರೀಕಂಠ ನೀ ಪೇಳಿದನ್ಯಶಾಸ್ತ್ರಕೆ ಬುದ್ಧಿ |ಸೋಕದೆಗುರುಮಧ್ವ ಮುನಿಮತವೇ ||ಬೇಕು ಜನುಮ ಜನುಮಕ್ಕೆನಿಸೋ ತ್ರಿಯಂಬಕ |ನಾ ಕೈಯ್ಯ ಮುಗಿವೆ ಪ್ರಾಣೇಶ ವಿಠಲದಾಸ 5
--------------
ಪ್ರಾಣೇಶದಾಸರು
ಗಣೇಶ ಪ್ರಾರ್ಥನೆವಂದಿಪೆ ನಾ ನಿನ್ನನು ಸೊಂಡಿಲ ಗಣಪ ಧಬಂದೆನ್ನ ಸಲಹೊ ನೀನು ಪಪುಂಡರೀಕಾಕ್ಷನುದ್ದಂಡ ಪರಾಕ್ರಮಕೊಂಡಾಡಿಸುವಿ ವಕ್ರತುಂಡನೆಂಬರೊ ನಿನ್ನ ಅಪಪಾಶಾಂಕುಶಧರನೇ ವೂೀದಕಹಸ್ತಭಾಷಿಗ ನೀನಹುದೋಆಶಾಪಾಶಗಳಿಂದ ಘಾಸಿಗೊಂಡಿಹ ಮನಬೇಸರ ಕಳೆದೆಮ್ಮ ಪೋಷಿಪನನು ತೋರೊ 1ಗೌರಿಯ ವರಪುತ್ರನೆ ಪ್ರಾರ್ಥಿಸುವೆ ಶ್ರೀ-ಶೌರಿಯಪಾದಸ್ಮರಣೆಗೌರವದಿಂ ಮಾಳ್ಪ ಶೌರ್ಯ ಎನಗೆ ಕೊಟ್ಟುಮಾರಪಿತನಪಾದತೋರಿಸು ತವಕದಿ2ಅಂತರಂಗದ ಶತ್ರುಗಳಿಂದಲಿ ಮನಚಿಂತೆಗೆ ಗುರಿಗೈಸಿತೊಎಂತು ಈಭವದಾಂಟುವಂಥ ಪಥವ ಕಾಣೆಕಂತÀುಪಿತನಪಾದಚಿಂತನೆ ಕೊಡಿಸಯ್ಯ3ವಾನರನಿಕರದೊಳು ಶ್ರೇಷ್ಠನ ಪ್ರಭುವಾರಿಧಿಯನು ಬಂಧಿಸೆಆದಿಮೂರುತಿ ನಿನ್ನ ಆರಾಧಿಸಿದನೆಂಬಸೋಜಿಗಸುದ್ದಿಯು ಮೂರ್ಜಗದೊಳಗುಂಟು4ಕಮಲನಾಭವಿಠ್ಠಲ ಭಕ್ತರ ಹೃದಯಕಮಲದೊಳಗೆ ಶೋಭಿಪಮಿನುಗುವ ಮಧ್ವಮಂಟಪದೊಳು ರಾಜಿಪಸನಕಾದಿವಂದ್ಯನ ಕ್ಷಣ ಬಿಡದಲೆ ತೋರು 5
--------------
ನಿಡಗುರುಕಿ ಜೀವೂಬಾಯಿ
ಗಣೇಶ ಸ್ತುತಿ1ಗಜಮುಖ ಸಲಹೆನ್ನ ದಯದಿ ಪಗಜಮುಖ ಸಲಹೆನ್ನತ್ರಿಜಗದಿ ಪೂಜ್ಯನೆ ನಿಜಮತಿ ಪಾಲಿಸಿ ಅ.ಪವಿಘ್ನನಾಯಕ ಎನ್ನ ಅಜ್ಞಾನ ಖಂಡ್ರಿಸಿವಿಘ್ನವ ತಾರದೆ ಸುಜ್ಞಾನ ಕರುಣಿಸು 1ಅಮರಾದಿವಿನುತಹಿಮಸುತೆಸಂಜಾತವಿಮಲಸುಚರಿತನೆ ಸುಮನಸಪ್ರೀತ 2ವರದ ಶ್ರೀರಾಮನ ಚರಣಸ್ಮರಣೆಯೆನ್ನಹೃದಯದಿ ಸ್ಥಿರಗೈ ಕರಿಮುಖ ಸ್ಮರಿಸುವೆ 3
--------------
ಶ್ರೀರಾಮದಾಸರ ಕಥನಾತ್ಮಕ ಕೃತಿಗಳು