ಒಟ್ಟು 7149 ಕಡೆಗಳಲ್ಲಿ , 128 ದಾಸರು , 3568 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ಮರಿಸು ಸ್ಮರಿಸು ಮನವೇ ಗುರುರಾಯರ ಪ ಸ್ಮರಿಸು ಸ್ಮರಿಸು ಬಿಡದೆ ಸ್ಮರಿಸು ನೀ ಗುರು ಸತ್ಯ ಜ್ಞಾನತೀರ್ಥರ ಪದವ ಸಾರುವೆ ಬೇಡಿದ್ದು ಕೊಡುವೆನೆಂಬುವರನು ಅ.ಪ ಸಂಶಯ ಪಡಬ್ಯಾಡವೋ ಇದಕೆ ನಾ ನಿ ಸ್ಸಂಶಯದಿಂದ ಪೇಳುವೆ ಸಂಶಯಾತಕೆ ಋಷಿ ವಂಶೀಕ ರಾವಣನ ಧ್ವಂಸ ಮಾಡಿದ ರಾಮನ ಸಂಸೇವಿಪರÀ ನೀ 1 ಶಾಪಾನುಗ್ರಹ ಶಕ್ತರೂ ಇವರು ಕಾಮಕ್ರೋಧವ ಬಿಟ್ಟವರೂ ತಾಪತ್ರಯಗಳಳಿದು ಪಾಪಗಳೋಡಿಸಿ ಕಾಪಾಡುವೆನೆಂದು ಜಗದಿ ಮೆರೆದವರ 2 ಗುರುಕರುಣಾಬಲದಿ ಶ್ರೀಹರಿನಪರೋಕ್ಷಿಗೈಸಿದ ಧೀರರ ದುರ್ವಾದಿಗಳ ಮುರಿದು ಗುರು ಮಧ್ವರಾಯರ ಪರಮ ಪ್ರೀತಿಯ ಪಡೆದ ನರಹರಿ ಪ್ರಿಯರ 3
--------------
ಪ್ರದ್ಯುಮ್ನತೀರ್ಥರು
ಸ್ಮರಿಸುಮನವೆ ನೀ ದೇವಕಿ ಕಂದನ ಧ್ರುವ ಪಾಲನ ಕುರುಳರ ನಾಶನ 1 ಉರಗಶಯನನ ಗರುಡವಾಹನನ 2 ಸಿರಿಯ ಲೋಲನ ಪರಮ ಪಾವನನ 3 ಸುರರಾಜವಂದ್ಯನ ಕರಿರಾಜಪ್ರಿಯನ 4 ಗಿರಿಯನೆತ್ತಿದನ ತುರುಗಳಗಾಯದ್ದವನ 5 ಸಾರ ಸಂಜೀವನ 6 ಭಂಜನ ದುರಿತ ನಿವಾರಣ 7 ಸರ್ವಾರ್ಥಕಾರಣ ಹರುಷದ ಜೀವನ 8 ಪರಿಪೂರ್ಣವಿಹನ ಪೂರಿತ ಕಾಮನ 9 ಗುರುಶಿರೋರತ್ನನ ಕರುಣಲೋಚನ 10 ಸ್ಮರಿಸು ಮನವೆ ನೀ ಮಹಿಪತಿ ಈಶನ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ಮರಿಸುವುದು ಗುರು ಸಂತತಿಯನೂ ಪ ನಿತ್ಯ | ಗುರುವರ್ಯ ಸಂತತಿಯ ಹರಿಕರುಣವೂ ದೊರಕಿ | ಸರ್ವ ಆಮಯ ಹರವು ಪರಮ ಪುರುಷಾರ್ಥಕ್ಕೆ ವರ ಮಾರ್ಗವೆಂದೆನಿಪ ಸದ್ಭಕ್ತಿ ಜ್ಞಾನಪ್ರದವು ಅ.ಪ. ಆದಿ ಮೂರುತಿ ಹಂಸ | ಪಾದಾನುವರ್ತಿ ವಿಧಿಆದಿವಿಧಿ ಸುತರು ಸನ | ಕಾದಿ ಪದ ಪದ್ಮಗಳಮೋದದಿಂ ಭಜಿಪ ದೂ | ರ್ವಾಸ ತತ್ಕರಜ ಸುಜ್ಞಾನ ನಿಧಿಗಳ ಪಾದವ ||ಆದರದಿ ಗರುಡವಾಹನ ತೀರ್ಥ ಕೈವಲ್ಯರಾದರಿಸಿ ಜ್ಞಾನೇಶ ತತ್ಕರಜ ಪರತೀರ್ಥಪಾದಾಬ್ಜ ಸೇವಿಸುವ ಸತ್ಯ ಪ್ರಾಜ್ಞ ಕರಜ ಪ್ರಾಜ್ಞ ತೀರ್ಥರು ಯತಿಗಳ 1 ಅಚ್ಯುತ ಮಾಧವ ತೀರ್ಥ | ಆಕ್ಷೋಭ್ಯ ತೀರ್ಥರೂತತ್ಕರಜ ಪರವಾದಿ | ಗಜಸಿಂಹ ಜಯತೀರ್ಥಯತಿಗಳಾ ವಿದ್ಯಾಧಿ | ರಾಜ ಸತ್ಕವೀಂದ್ರರು ವಾಗೀಶ ರಾಮಚಂದ್ರ 2 ಅತ್ಯಂತ ಮಹಿಮರೆನೆ | ವಿಭುದೇಂದ್ರ ವಿದ್ಯೆನಿಧಿಮತ್ತವರ ಕರಜಾತ | ರಘುನಾಥ ರಘುವರ್ಯಭೃತ್ಯ ವೇದವ್ಯಾಸ | ತೀರ್ಥ ವಿದ್ಯಾಧೀಶ ವೇದನಿಧಿ ಸತ್ಯವ್ರತರ ||ಸತ್ಯನಿಧಿ ಸತ್ಯನಾಥಾಖ್ಯ ಸತ್ಯಾಭಿನವಸತ್ಯ ಪೂರ್ಣಾಖ್ಯ ಯತಿ | ಸತ್ಯ ವಿಜಯಾರ್ಯ ವರಸತ್ಯ ಪ್ರಿಯ ತೀರ್ಥಾಖ್ಯ | ಸತ್ಯ ಬೋಧಾಖ್ಯಮಹ ಸತ್ಯ ಸಂಧಾಖ್ಯ ಮುನಿಯ 3 ಸತ್ಯವರ ಸತ್ಯಧರ್ಮಾಖ್ಯ ಸತ್ಯಸಂಕಲ್ಪಸತ್ಯ ಸಂತುಷ್ಟಾಖ್ಯ | ಸತ್ಯ ಪರೆಯಣ ತೀರ್ಥ ಸತ್ಯ ಕಾಮಾಖ್ಯ ಯತಿ | ಸತ್ಯೇಷ್ಟ ಕರಜರೆನೆ ಸತ್ಯ ಪರಾಕ್ರಮ ತೀರ್ಥರ || ಸತ್ಯ ವೀರಾಖ್ಯಯತಿ | ಸತ್ಯಧೀರಾಖ್ಯರಂತತ್ಕರಜ ಶಿರಿಸತ್ಯ | ಜ್ಞಾನಾಖ್ಯ ಅಗ್ನ್ಯಂಶದುಸ್ತಿಮಿರ ಮಾಯ್ಮತದ | ಮಾರ್ತೆಂಡರೆಂದೆನಿಪ ಶಿರ ಸತ್ಯ ಧ್ಯಾನಾಖ್ಯರ4 ನಿತ್ಯ ಗುರು ಗೋವಿಂದ ವಿಠಲ ತಾ ಪೊರೆವ ಸತ್ಯ 5
--------------
ಗುರುಗೋವಿಂದವಿಠಲರು
ಸ್ಮರಿಸುವೆನು ಗುರುರಾಯ ವರಮಂತ್ರ ಪುರಾಧಿಪ ಪೊರೆಯೊ ಎನ್ನನು ಜೀಯಾ ತವ ಮಹಿಮ ವರ್ಣಿಸ ಲರಿಯ ಮುರಹರಪ್ರೀಯಾ ಅಧ ಮಾಧಮನ ಮಮ ಪರಿಯ ನೀ ಬಲ್ಲೆಯ್ಯಾ ತೋರಯ್ಯಾ ದಯ ವರದ ಚರಿತೆಯ ಅರುಹುವದಕೆ ಪರವಾಕ್ಯರಣಿಯನು ಪಾಲಿಸಿ ನಿರುತ ಹರಿಗುರು ಚರಣದಲಿ ರತಿ ತ್ವರಿತ ಕರುಣಿಸು ರಾಘವೇಂದ್ರನೆ ಪ ಹಿಂದೆ ಕೃತಯುಗದಲಿ ಪ್ರಹ್ಲಾದ ನಾಮದಿ ತಂದೆ ಹಿರಣ್ಯಾಕ್ಷನಲಿ ಸರ್ವೋತ್ತಮನು ಹರಿ ದ್ವಂದ್ವ ಕರ್ಮವನಲಿ ಅರ್ಪಿಸಲು ಮಹದಾ ನಂದ ಪೊಂದುವರಲ್ಲಿ ಎಂದು ಪೇಳುತಿರೆ ಮಂದ ದೈತ್ಯವನಂದ ಮಾತಿಗೆ ಬಂಧನಾದಿಗ ಳಿಂದ ಶಿಕ್ಷಿಸೆ ಬಂದ ದುರಿತವನಂದು ಕಳೆದಾ ಕಂದನನು ಹರಿಪೊರೆಯೆ ದಿತಿಜನು ಒಂದೂ ತಿಳಿಯದೆ ಮಂದಿರ ಗೋವಿಂನೆಲ್ಲಿಹ ನೆಂದು ಕೇಳುತ ಮಂದರರೋದ್ಧಾರ ನಿಲ್ಲದಿಹ ಸ್ಥಳ ವಂದೂ ಇಲ್ಲವೂ ಎಂಂದು ಸಾರಿದೆ ತಂದು ತೋರಿಸು ಸ್ತಂಭದಲಿ ತವ ಇಂದಿರಾಪತಿಯೆಂದು ಗರ್ಜಿಸೆ ಕಂದನಾಡಿದ ಮಾತುಗಳನು ನಿಜ ವೆಂದು ನರಹರಿ ಪೊರೆದೆ 1 ಶ್ರೀಶನಾಜ್ಞೆಯ ವಹಿಸಿ ದ್ವಿತೀಯಾವತಾರದಿ ವ್ಯಾಸರಾಯನು ಎನಿಸಿ ಬ್ರಹ್ಮಣ್ಯರÀಲಿ ಸ ನ್ಯಾಸವನು ಸ್ವೀಕರಿಸಿ ಸರ್ವಜ್ಞ ಶಾಸ್ತ್ರಾಭ್ಯಾಸವನು ಪೂರೈಸಿ ವ್ಯಾಸತ್ರಯ ರಚಿಸಿ ದೇಶದೇಶಗಳನ್ನು ಚರಿಸುತ ಆ ಸಮಸ್ತ ಕುವಾದಿಗಳ ಮತ ನಾಶಗೊಳಿಸಿ ರ ಮೇಶ ಶ್ರೀ ವೆಂಕಟೇಶನನು ಬಹುದಿನವು ಪೋಜಿಸಿ ವಾಸಿಸುತ ಗಜರಾಮ ಪುರಧಾಧೀಶರಾಯನ ಕುಹಯೋಗವ ಪುರಂದರ ದಾಸರಿಂದೊಡಗೂಡಿ ಕೃಷ್ಣನುಪಾಸನೆಯ ಭಕ್ತಿಯಲಿ ಗೈಯುತ ವಾಸುದೇವನ ಶಿಲ್ಪ ಶಾಸ್ತ್ರದ ಶಾಸನಕೆ ಪ್ರತಿಯಾಗಿ ನಿಲ್ಲಿಸಿ ತೋಷಿಸಿದ ಸೌಭಾಗ್ಯ ವೈಭವ 2 ಪದುವ ಸಂಭವ ಜಾತ ಶ್ರೀ ರಾಘವೇಂದ್ರ ಸು ಪದವ ಪಡೆದ ಪ್ರಖ್ಯಾತ ಜಯತೀರ್ಥ ಮುನಿಕೃತ ಸುಧೆಗೆ ಪರಿಮುಳ ಗ್ರಂಧ ರಚಿಸಿ ಮೆರೆದಾತ ಬಧಿರ ಮೂಕಾಂಧ ವ್ಯಂಗ್ಯರು ವಿಧ ವಿಧಿದ ಘನರೋಗಗ್ರಸ್ತರು ಸದಯ ನೀಗತಿಯೆಂದು ಸೇವಿಸೆ ತ್ರಿದಶ ಭೂರುಹದಂತೆ ಸಲಹುವಿ ಕುಧರ ತೀರದಿ ಮೂಲ ರಘುಪತಿ ಪದವ ಪೂಜಿಸುತಲಿ ಸಜೀವದಿ ಮುದದಿ ವೃಂದಾವನ ಪ್ರವೇಶಿಸಿ ಪದುಮನಾಭ ಶ್ರೀ ಶಾಮಸುಂದರ ಮಧು ವಿರೋಧಿಯನು ಧ್ಯಾನಿಸುತ ಶಿರಿ ಸದನನು ವಲಿಸುತ್ತ ಕರುಣಾ ನಿಧಿಯು ಭಜಕರ ಪೊರೆವ ಮಹಿಮೆಯ 3
--------------
ಶಾಮಸುಂದರ ವಿಠಲ
ಸ್ಮರಿಸೊ ಮನವೇ ಹರಿಯ ನರಹರಿಯ ಅರಸಾಗ್ಯಾಳುವ ಸಿರಿಯ ಧ್ರುವ ಕರಿಯ ಕೇಳಿದ ಮೊರಿಯ ನೀನರಿಯ ಸುರರ ಬಿಡಿಸಿದ ಸರಿಯ ಧರೆಯೊಳಗಿದು ಖರಿಯ ಯುಗಮೊರಿಯ ಹೊರೆವನು ತಾ ಪರೋಪರಿಯ 1 ಸರ್ವದೈವಕೆ ಹಿರಿಯ ಮುರ ಅರಿಯ ಹರ ಹೃದಯದಲಿ ಪರಿಯ ಸ್ಮರಿಸುವದೀ ಪರಿಯ ದುರಿತ ಕರುಣಕಿಲ್ಲೀತನ ಸರಿಯ 2 ಸೆರಗವಿಡಿದು ಹರಿಯ ಪರಿಪರಿಯ ಅರಿಯೋ ನವವಿಧ ಪರಿಯ ಶರಣಾಗತರ ಸಿರಿಯ ಸುರವರ್ಯಾ ತರಳಮಹಿಪತಿ ದೊರೆಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ಮರಿಸೊ ಹರಿನಾಮ ಏ ಮನುಜಾ ಸ್ಮರಿಸೋ ಹರಿನಾಮ ನಿರವಧಿ ಸುಖಧಾಮ ಪರಮ ಪುರುಷಗಿದು ಪರಿಪೂರ್ಣ ಪ್ರೇಮ ಪ. ತರಳ ಪ್ರಹ್ಲಾದನ ಪೊರದು ಪಾಂಚಾಲಿಗೆ ತ್ವರಿತದೊಳಕ್ಷಯವಿತ್ತು ಸರಸಿಯೊಳಗೆ ಕರಿರಾಜನ ಸಲಹಿದ ನರ ಕಂಠೀರವ ಕರುಣಿಸುವನು ಬೇಗ 1 ಹಲವು ಜನ್ಮಗಳಲ್ಲಿ ಗಳಿಸಿದ ದುಷ್ಕøತ ಗಳನೆಲ್ಲ ನಿರ್ಮೂಲಗೊಳಿಸುವುದು ಜಲಜ ಸಂಭವ ಮಾಳ್ಪ ಕೆಲಸದಿ ಸಿಲುಕದೇ ನೆಲೆಗೊಂಡು ಸೌಖ್ಯವ ಸಲಿಸಬೇಕಾದರೆ 2 ಕಲಿಕೃತ ಕಲ್ಮಷ ಬಲೆಯಿಂದ ಮೋಚನ- ಗೊಳಿಸಲು ಹರಿನಾಮವಲ್ಲದಿನ್ನು ಚಲಿತ ಚಿತ್ತದ ಕರ್ಮಬಲದಿಂದಲಾಹದೆ ನಳಿನನಾಭನೇ ನೀ ಬೆಂಬಲನಾಗು ತನಗೆಂದು 3 ಉದಯಾರಂಭಿಸಿ ಮತ್ತೊಂದು ದಯ ಪರ್ಯಂತ ವಿಧಿವಿಹಿತಗಳೆಲ್ಲ ಸದರವೇನೊ ಪದುಮನಾಭನ ನಾಮ ಒದಗಿದರದು ಪೂರ್ಣ- ವದರಿಂದ ಸರ್ವರ ಹೃದಯ ನೀ ಮರೆಯದೆ 4 ಸಂಚಿತಾಗಾಮಿಗಳಂಚುವಂ ದಿತಿಜರ ಸಂಚಯಕನುದಿನ ಸ್ಮರಿಸುವರ ಕಿಂತಿತಾರಬ್ದ ಪ್ರಪಂಚವ ತ್ವರಿತದಿ ಮಿಂಚಿನಂದದಿ ತೋರಿ ಪರಿಹಾರಗೊಳಿಪರೇ 5 ಕರುಣಾಭಿಮಾನಿಗಳರಿತು ಮಾಡಿಸುತಿಹ ನಿರತ ಕೃತ್ಯಗಳೊಂದು ಮೀರದಲೆ ಹರಿಯಾಜ್ಞೆ ಇದು ಯೆಂದು ಚರಿಸುತಲನುದಿನ ಪರಮೋತ್ತಮ ಕಾರ್ಯಧುರವಿದೆ ತನಗೆಂದು 6 ನಾಗ ಗಿರೀಂದ್ರನ ನೆನೆದರೆ ಇಹಪರ ಭೋಗ ಸಾಮ್ರಾಜ್ಯವು ಸ್ಥಿರವಾಹುದು ವಾಗೀಶನ ಪರಮಾಗಮ ಸಿದ್ಧಾಂತ- ವಾಗಿಹದಿದೆಯೆಂದು ನೀ ಗುರುತವನಿಟ್ಟು 7
--------------
ತುಪಾಕಿ ವೆಂಕಟರಮಣಾಚಾರ್ಯ
ಸ್ಮರಿಸೋ ಆದರಿಸೋ ಆನಮಿಸೊ, ಮಾನವನೆ ಗುರುಪದವ ಪೊಂದು ಮುದವ ಹೇ ಮನವೇ ನೀ ಸ್ಮರಿಸೋ ಪ ದುರಿತ ತಿಮಿರಕೆ ತರಣಿ ಸಮರೆಂದೆನಿಸಿ ದ್ವಿಜರೊಳು ಮೆರೆದು ವಿಭವದಿ ಕರೆದು ಛಾತ್ರರ ಪೊರೆದ ಐಕೂರು ನರಶಿಂಹಾರ್ಯರ ಅ.ಪ ವರವೆಂಕಟಾರ್ಯರ ತರುಣಿ ಸೀತಾಗರ್ಭ ಶರಧಿಯಿಂದ ಜನಿಸಿದ ಶಶಿಯ ತೆರದಿ ಧರಿಸಿ ವಿಪ್ರತ್ವವನು ಶೀಘ್ರದಿ ಇರಿಸಿ ದ್ವಿತಿಯಾಶ್ರಮದಿ ಪದವನು ಚರಿಸುತಲೆ ಸಾಧನಸುಮಾರ್ಗದಿ ಕರೆಸಿದರು ವರಭಾಗವತರೆಂದು 1 ಹರಿಪದದಲಿ ಮನವಿರಿಸಿ ದುರ್ವಿಷಯಧಿಃ ಕರೆಸಿ ಧಿ:ಕರಿಸಿ ಪ್ರಿತಾಜ್ಞಾನುಸರಿಸಿ ಧರಣಿಯೊಳು ಗುರುಕರುಣದಿಂದಲಿ ಮರುತ ಶಾಸ್ತ್ರವನರಿತು ಕರುಣದಿ ಸರಸದಲಿ ಸಚ್ಛಾಸ್ತ್ರ ಮರ್ಮವ- ನರುಹಿ ಜನರನುಧ್ಧರಿಸಿದವರನು 2 ಕರ್ಮ ಹರಿಯೆ ಮೂಡಿಸುವನೆಂದರಿದು ಅರಿದು ಧ್ಯಾನಿಸುತ ಮೈಮರೆದು ಹರಿಯ ಗುಣಗಳ ಪೊಗಳಿ ಹಿಗ್ಗುತ ಶರಣು ಜನ ಮಂದಾರ ಕಾರ್ಪರ ಶರಣಶಿರಿ ನರಹರಿಯ ಪುರವನು ತ್ವರದಿ ಸೇರಿದವರ ಸುಚರಿತೆಯ 3
--------------
ಕಾರ್ಪರ ನರಹರಿದಾಸರು
ಸ್ಮಾರ್ತರ ನಿಂದನೆ ಮಾಡುವ ಕೆಟ್ಟ ಧೂರ್ತನ ಬಾಯ ಮೇಲೆ ಹೊಡೀ ಹೊಡೀ ಪ ಕರ್ತಾರ ಸ್ವರ ಸಮನೆನಿಸುವವರ ಪುರು- ಷಾರ್ಥಯುತ ಶೃತಿ ಶಾಸ್ತ್ರ ಪ್ರವರ್ತರ ಅ.ಪ ಪ್ರಮಾಣವನುಸರಿಸುವರ ವಿಹಿತವಾಗಿ ತಮ್ಮಂತೆ ಸರ್ವರನು ವಿಶೇಷದಿಂದರ್ಚಿಸುವವರ ಪ್ರಕಾಶಿಸುವವರ ಕರ್ಮ ಸಮ್ಯಜ್ಞಾನವಸಂಪಾದಿಸುವರ 1 ವೇದಾಭ್ಯಾಸದಿ ಕಾಲವ ಕಳೆಯುತ ವಿಹಿತರಿವರೆನಿಸಿಕೊಳ್ಳುವರ ಭೇದಾಭೇದಗಳರಿಯುತಲೀ ಬ್ರಹ್ಮವಾದದಲಿ ಸಂತೋಷಿಪರ ಪ್ರೀತಿಯ ಮಾಡುವರ ಹೃದ್ಗುಹೆಯಲಿ ನೋಳ್ಪರ 2 ನಂಬಿರುವವರ ವಿಧಿ ಪರೇಶನಲ್ಲಿಸಮನ್ವಯಿಸುವರ ಭಕ್ತಿಯಲಿ ಪೂಜಿಪರಾ ಸಂಪಾದಿಸೆ ಪಾತ್ರರಾದವರ 3
--------------
ಗುರುರಾಮವಿಠಲ
ಸ್ವಹಿತ ಸುಪಥ ಸಾಧನ ಪಡೆದು ಸ್ವಸುಖಗೂಡಿರೊ ವಿಹಿತ ಮರೆದು ವಿಭ್ರಮಾಚರಿಸಬ್ಯಾಡಿರೋ ಧ್ರುವ ದಾರು ತಿಳಿದು ನೋಡಿರೊ ಜ್ಞಾನ ಹೀನರಾಗಿ ಗರ್ವ ಹಿಡಿಯಬ್ಯಾಡಿರೊ ಸ್ವಾನುಭವಾಮೃತವನ್ನುಂಡು ಸವಿ ಸೂರ್ಯಾಡಿರೊ ನಾನು ನೀನು ಎಂಬ ಬಿನಗುಭ್ರಮ ಈಡ್ಯಾಡಿರೊ 1 ಮನದ ಕೊನಿಯಲಿದ್ದ ಘನದಾಶ್ರಯವು ಮಾಡಿರೊ ತನುವು ಲಂಪಟ್ಹಿಡಿದು ತನ್ನ ಮರಿಯಬ್ಯಾಡಿರೊ ಜನುಮ ಸಫಲವಾಗುವ ಸುಜಾಗ್ರತಿಯ ಪಡೆಯಿರೊ ನೆನವು ನೆಲೆಯಗೊಂಡು ನಿಜದಾಶ್ರಯದಲಿ ನಡೆಯಿರೊ2 ಮರ್ತು ಮೈಯ ವ್ಯರ್ಥ ದಿನವಗಳಿಯಬ್ಯಾಡಿರೊ ನಿರ್ತದಿಂದ ಅರ್ತ ಭಾವದರ್ಥಿ ನೋಡಿರೊ ಕರ್ತು ಭಾನುಕೋಟಿತೇಜನ ಗುರ್ತು ಮಾಡಿರೊ ಅರ್ತು ಮಹಿಪತಿ ಸ್ವಾಮಿಪಾದ ಬೆರ್ತುಕೂಡಿರೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾತಂತ್ರ್ಯವೆನಗುಂಟೆ ಸರ್ವಾಂತರ್ಯಾಮಿ ಪ ನಿಂತು ನೀ ನಡೆಸುವಿಯೊ ಜೀವಾಂತರ್ಯಾಮಿ ಅ.ಪ ಜೀವ ಸ್ವರೂಪದಲಿ ಜೀವನಾಕಾರದೊಳಿದ್ದು ಅನಾದಿಕರ್ಮ ಜೀವರಿಗೆ ಪ್ರೇರಿಸಿ ಜೀವಕೆ ಚೇತನ ಕೊಟ್ಟು ಜೀವಕ್ರಿಯೆಗಳನ- ಭಿವ್ಯಕ್ತಿ ಮಾಡಿ ಸತತ ಪೊರೆಯುವ ಕರುಣಿ 1 ದತ್ತಸ್ವಾತಂತ್ಯ ತನಗಿತ್ತಿಹನು ದೇವನೆಂದು- ನ್ಮತ್ತತನದಿ ತಾ ಕರ್ತನೆಂದೆನಿಸಿ ಸುತ್ತಲಹ ನಿತ್ಯ ಅವಸ್ಥೆಗಳ ಪರಿಹರಕೆ ಶಕ್ತನಾಗನು ಏಕೆ ಆಪತ್ತುಗಳು ಬರಲು 2 ಪೂರ್ಣವಾಗಿ ತಾ ಜಡನಂತಿಹಾ ಕರಣದಲಿ ಶ್ರೀರಮಣ ಸೇರಿ ಚೇತನ ಕೊಟ್ಟು ಕ್ರೀಡೆಗೋಸುಗ ಬಿಡುವ ಸರ್ವ ಜೀವರನಾ 3 ಅನಾದಿಕರ್ಮ ಎನ್ನದೆಂದಿಗು ಸರಿಯೆ ಮುನ್ನ ಪ್ರಳಯದಿ ನಿನ್ನ ಘನ್ನೊಡಲೊಳಿಂಬಿಟ್ಟೆ ಎನ್ನ ಕರ್ಮಗ್ರಂಥಿ ಎನ್ನಿಂದ ಬಿಡಿಸೊ 4 ಅನಿರುದ್ಧ ಲಿಂಗಾ ಅಂಗೋಪಾಂಗದಲಿ ನೀನ್ಹಾಂಗೇ ಮೆರೆವೆ 5 ಹೃಷೀಕಪನೆ ನಿನಗೆ ಇದು ಸಂತೋಷವೇನೊ ಈಷಣತ್ರಯ ಹರಿಸಿ ಪೋಷಿಸೋ ದೇವಾ 6 ತರಣಿ ತರಣಿಕಿರಣನನುಸರಿಸಿ ವೃತ್ತಿಯಹುದೊ ತ್ವರಿತದಲಿ ಸ್ಥೂಲದಲಿ ಕಾರ್ಯಾಭಿವ್ಯಕ್ತಿಯೊ 7 ನಾನತ್ತು ಫಲವೇನೊ ಸ್ಥಿತಿಕಾಲದಿ ನೀನಿಲ್ಲದಿನ್ನಿಲ್ಲ ಪ್ರತಿಬಿಂಬ ಕಾರ್ಯವಹುದೋ 8 ಹೆಚ್ಚು ಮಾತೇನು ಜೀವನಿಚ್ಛೆಯನನುಸರಿಸಿ ಅಚ್ಯುತ ತಾನೆ ಸ್ವೇಚ್ಛಚರಿಸಿ ಎಚ್ಚರಿಸಿ ಸ್ಥೂಲದಿಂದೆಚ್ಚರದಿ ನಡೆವುದೊ 9 ನಿನ್ನ ಸಂಕಲ್ಪವಲ್ಲದಿನ್ನಿಲ್ಲ ಅನ್ಯಥಾಗುವುದುಂಟೆ ಇನ್ನು ಹರಿಸೋದೇವಾ 10 ಶ್ರೀದನಿಂ ದತ್ತಸ್ವಾತಂತ್ರ್ಯ ಸಮ್ಮತವೇನು ಆದರಿಸಿ ಸಲಹಯ್ಯ ಮೋದತೀರ್ಥಾ- ರಾಧ್ಯ ಶ್ರೀ ವೇಂಕಟೇಶಾ11
--------------
ಉರಗಾದ್ರಿವಾಸವಿಠಲದಾಸರು
ಸ್ವಾನಂದದ ಘನಸುಖ ಏನೆಂದ್ಹೇಳಲಿ ಕೌತುಕ ಧ್ರುವ ಬಲಗೊಂಡದೆ ಬ್ರಹ್ಮಭಾವ ನೆಲಗೊಂಡದೆ ಸರ್ವದ ಬಲುದೋರುತದೆ ಸುಸ್ವಾದ ಸುಲಭ ಸದ್ಗುರು ಪ್ರಸಾದ 1 ತಾನಾಗ್ಯದೆ ತಾರ್ಕಣ್ಯಸ್ವಾನುಭವದ ಸುಪುಣ್ಯ ಮುನಿಜನರೆ ಧನ್ಯಧನ್ಯ ಅಣುರೇಣುಕ ತಾ ಮಾನ್ಯ 2 ಮನೋನ್ಮನದಾಶ್ರಯ ಭಾನುಕೋಟಿ ಉದಯ ದೀನ ಮಹಿಪತಿಗಿದೆ ಸಾಹ್ಯ ಅನುದಿನಿದೇ ಉಚ್ಛ್ರಾಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾಮಿ ಗುರು ಗೋವಿಂದ ವಿಠಲ ಪೊರೆ ಇವನಾ ಪ ಶ್ರೀಮನೋಹರನಂಘ್ರಿ | ಕಮಲಕಾಂಕ್ಷಿಪನಾ ಅ.ಪ. ಶರಧಿ | ಮೇಶ ಮಧ್ವೇಶಾ 1 ತುಂಗೆ ತೀರದಿ ಧವಳ | ಗಂಗೆ ತಟವಾಸಯತಿಪುಂಗವರ ಕರುಣಾ | ಪಾಂಗ ವೀಕ್ಷಣವಾಮಂಗಳ ಸ್ವಪ್ನದಲಿ | ಕಂಗಳಿಂದಲಿ ಕಂಡುಸಂಗ ಸಾಧುಗಳ ಉ | ತ್ತುಂಗ ಬಯಸುವನೋ 2 ಜಲಜನಾಭನ ಭಜಿಸೆ | ಕುಲವು ಪ್ರಾಧಾನ್ಯಲ್ಲಹಲವಾರು ದೃಷ್ಠಾಂತ | ಕೇಳಿ ಬರುತಿಹುದೋಸುಲಭ ನೀನೆಂತೆಂದು | ಬಲವಿನಿಂ ಪ್ರಾರ್ಥಿಸುವೆತಿಳಿಪುವುದು ಮರುತಮತ | ಹಲವು ತತ್ವಗಳಾ 3 ಪಾದ್ಯ | ಚೀರ್ಣ ಸತ್ಕತಿಯವನುಪೂರ್ಣಗೈಸಿವನ ಪ್ರಾಚೀನ ಕರ್ಮಗಳಾ 4 ನಾಮಾಧಿಕಾರಿ ಇವ | ನಾಮಸ್ಮøತಿ ಸರ್ವದಾನೇಮದಿಂ ಫಲಿಸಿವಗೆ | ಸೋಮಧರನುತನೇಕಾಮಜನಕನೆ ಗುರೂ | ಗೋವಿಂದ ವಿಠಲಯ್ಯಈ ಮಾತು ಸಲಿಸೆಂದು | ಸ್ವಾಮಿ ಪ್ರಾರ್ಥಿಸುವೇ 5
--------------
ಗುರುಗೋವಿಂದವಿಠಲರು
ಸ್ವಾಮಿ ನಿನಗೆ ಶರಣನೆಂಬೆ ಸೋಮನಾಥಾ ಸಕಲ ಕಾಮಿತಾರ್ಥವಿತ್ತು ಸಲಹೊ ಸೋಮನಾಥಾ ಪ. ಹರಿಯ ಕರುಣಾ ಬಲದಿ ನೀನು ಸೋಮನಾಥಾ ಸರ್ವ ಸುರರಿಗೆಲ್ಲ ಧೊರೆಯಾಗಿರುವಿ ಸೋಮನಾಥ ಪಾದ ನಂಬಿ ಸೋಮನಾಥ ಮೊರೆಯ ಹೊಕ್ಕೆ ನಿಂದು ಬಂದು ಸೋಮನಾಥ 1 ವಿಘ್ನರಾಜ ನಿನ್ನ ಮಗನು ಸೋಮನಾಥಾ ಬೇಗ ಭಸ್ಮಗೈಸು ವೈರಿಗಳನು ಸೋಮನಾಥಾ ಮಗ್ನನಾದೆ ಮಹಾಂಬುಧಿಯೊಳ್ ಸೋಮನಾಥಾ ಸರ್ವ ವಿಘ್ನವೋಡಿಸೈ ಕೃಪಾಳೊ ಸೋಮನಾಥ 2 ಶಂಕರ ಕೈಪಿಡಿಯೊ ತ್ರಿಪುರ ಬಿಂಕವಾರಿ ಶ್ರೀ- ವೆಂಕಟಾದ್ರಿನಾಥನ ಮನೋನುಸಾರೀ ಕಿಂಕರನೆಂದೆನಿಸೆನ್ನ ಮೃಗಾಂಕಧಾರೀ ಪಾದ- ಪಂಕಜವ ನೀಡು ಸರ್ವಾತಂಕಹಾರೀ 3
--------------
ತುಪಾಕಿ ವೆಂಕಟರಮಣಾಚಾರ್ಯ
ಸ್ವಾಮಿ ನಿಮ್ಮ ಕರುಣ ನಮ್ಮ ಸರ್ವಾಭರಣ ಸ್ವಾಮಿ ನಿಮ್ಮ ಚರಣ ನಮ್ಮ ಜನ್ಮೋದ್ಧಾರಣ ಧ್ರುವ ಸ್ವಾಮಿ ನಿಮ್ಮ ದಯ ನಮ್ಮ ಹಿತೋಪಾಯ ಸ್ವಾಮಿ ನಿಮ್ಮ ಭಯ ನಮ್ಮ ಪುಣ್ಯೋದಯ 1 ಸ್ವಾಮಿ ನಿಮ್ಮ ಖೂನ ನಿಜಸ್ಥಾನ ಸ್ವಾಮಿ ನಿಮ್ಮ ಙÁ್ಞನ ನಿಜಧ್ಯಾನ 2 ಸ್ವಾಮಿ ನಿಮ್ಮ ನೋಟ ನಮ್ಮ ಮನದೂಟ ಸ್ವಾಮಿ ನಿಮ್ಮ ಮಾಟ ನಮ್ಮ ಸುಖದಾಟ 3 ಸ್ವಾಮಿ ನಿಮ್ಮ ನಾಮ ನಮ್ಮ ಅತಿಪ್ರೇಮ ಸ್ವಾಮಿ ನಿಮ್ಮ ನೇಮ ನಮ್ಮ ನಿಜಾಶ್ರಮ 4 ಸ್ವಾಮಿ ನಿಮ್ಮ ಸೋಹ್ಯ ನಮ್ಮ ನಿಜಾಶ್ರಯ ಸ್ವಾಮಿ ನಿಮ್ಮ ಸಾಹ್ಯ ಮಹಿಪತಿ ಮನೋತ್ರಾಹ್ಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾಮಿ ನೀನಹುದೋ ಶ್ರೀಗುರು ಸಾರ್ವಭೌಮ ನೇಮದಿಂದಲಿ ಹೊರೆವ ದಯಗುಣನಿಸ್ಸೀಮ ಧ್ರುವ ಜಗತ್ರಯಕ ಜೀವಭಗತ ಜನಕಾವ ಸುಗಮ ಸುಪಥವೀವ ಸುಗುಣ ಶ್ರೀದೇವ 1 ದಾತ ದೀನದಯಾಳು ನೀನಹುದು ಶ್ರೀನಾಥ2 ನಿಜದಾಸರ ಪಕ್ಷ ಸುಜನರ ಸಂರಕ್ಷ ಗಜವರ ಸಮೋಕ್ಷ ಭಜಕರಿಗೆ ಸುಭಿಕ್ಷ 3 ತೇಜೋಮಯ ಸಾಂದ್ರ ನಿಜಸುಖ ಸಮುದ್ರ ರಾಜಾಧಿರಾಜ ಮಹಾ ರಾಜರಾಜೇಂದ್ರ 4 ಶರಣಜನಪಾಲ ಸಿರಿಯ ಸುಖಲೋಲ ತಗಳ ಮಹಿಪತಿ ಸ್ವಾಮಿ ನೀನಹುದೊ ಕೃಪಾಲ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು