ಒಟ್ಟು 7318 ಕಡೆಗಳಲ್ಲಿ , 132 ದಾಸರು , 4469 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಮಣಿ ಕೇಳೆಲೆ ಮೋಹನ ಶುಭಕಾಯನ ಅಮರ ವಂದಿತ ರವಿಶತಕೋಟಿ ತೇಜನ ವಿಮಲ ಚರಿತ್ರದಿ ಮೆರೆವ ಶ್ರೀ ಕೃಷ್ಣನಕಮಲವದನೆ ನೀ ತೋರೆ ಪ ಬಾಯೊಳಗಿಹಳ ಗಂಡನ ನಿಜ ತಮ್ಮನತಾಯ ಪಿತನ ಮಡದಿಯ ಧರಿಸಿದನಸ್ತ್ರೀಯಳ ಸುತನ ಕೈಯಲಿ ಶಾಪಪಡೆದನದಾಯಾದಿಯ ಮಗನಸಾಯಕವದು ತೀವ್ರದಿ ಬರುತಿರೆ ಕಂಡುಮಾಯಾಪತಿ ಭೂಮಿಯನೊತ್ತಿ ತನ್ನಯಬೀಯಗನ ತಲೆಗಾಯಿದಂಥರಾಯನ ಕರೆದು ತೋರೆ 1 ನಾಲಗೆ ಎರಡರವನ ಭುಂಜಿಸುವನಮೇಲೇರಿ ಬಹನ ತಂದೆ ಇಹ ಗಿರಿಯನುಲೀಲೆಯಿಂದಲಿ ಕಿತ್ತೆತ್ತಿದ ಧೀರನಕಾಳೆಗದಲಿ ಕೊಂದನಲೋಲಲೋಚನೆಯ ಮಾತೆಯ ಪುತ್ರನಣುಗನಮೇಲು ಶಕ್ತಿಗೆ ಉರವನಾಂತು ತನ್ನವರನುಪಾಲಿಸಿದಂಥ ದಾತನಹ ದೇವನಲೋಲೆ ನೀ ಕರೆದು ತೋರೆ 2 ಉರಿಯೊಳು ಜನಿಸಿದವನ ನಿಜ ತಂಗಿಯಸೆರಗ ಪಿಡಿದ ಖಳನಣ್ಣನ ತಂಗಿಯವರನ ತಲೆಯನು ಕತ್ತರಿಸಿದ ಧೀರನಗುರುವಿನೊಳುದಿಸಿದನಶರವ ತಪ್ಪಿಸಿ ತನ್ನ ದಾಸರ್ಗೆ ಅನುದಿನಕರೆದು ವರವನಿತ್ತು ಮನ್ನಿಸಿ ಸಲಹುವಉರಗಗಿರಿಯ ವೆಂಕಟಾದಿಕೇಶವನ ಗರತಿ ನೀ ಕರೆದು ತಾರೆ 3
--------------
ಕನಕದಾಸ
ರಮಾನುತ ಪಾದಪಲ್ಲವ ಶ್ರೀಕರ ಚರಣ ಸೇವಕರ ಸಂಗದೊಳಿರಿಸು ವಿಜಯರಾಯ ಪ ನಿಮ್ಹೊರತು ಪೊರೆವರನ್ಯರನು ನಾಕಾಣೆ ನಿಮ್ಮ ಚರಣವ ನಂಬಿದೆ ಕರುಣದಿ ಕಾಯೊ ಅ.ಪ ಪಂಡಿತ ಪಾಮರರನು ಉದ್ಧಾರ ಮಾಡೆ ಕರುಣದಿಂದ ಸಕಲ ವೇದಗಳ ಕ್ರೋಡೀಕೃತವಾದ ನಿರ್ಣಯ ಭಾಷ್ಯಗಳರ್ಥವ ಮಾಡಿದಿ ಪದಗಳ ಸಕಲರೂ ತಿಳಿವಂದದಿ 1 ನಿನ್ನವರಾದ ರಂಗ ಒಲಿದ ರಾಯರ ನೋಡು ನಿನ್ನ ಉಕ್ತಿಯ ನಂಬಿದ ವೆಂಕಟರಾಯರ ನೋಡು ನಿನ್ನವನೆಂದೆನ್ನನು ಅವರಂತೆ ನೋಡದೆ ಎನ್ನ ಕೈ ಸಡಿಲ ಬಿಡುವದೇನೋ 2 ಎಂದಿಗಾದರು ನಿನ್ನ ದಾಸರ ಕರುಣದಿಂದ ಪಾದದ್ವಂದ್ವ ಹೊಂದದೆ ಹೋಗುವೆನೆ ದಾಸರಪ್ರಿಯನೆ ತಂದೆ ವಿಜಯ ರಾಮಚಂದ್ರವಿಠಲರಾಯನ ಹೊಂದುವ ಮಾರ್ಗವ ಬಂದು ತೋರಿಸಬೇಕೊ 3
--------------
ವಿಜಯ ರಾಮಚಂದ್ರವಿಠಲ
ರಮಾಸಮುದ್ರನ ಕುಮಾರಿ ನಿನ್ನಸರಿ ಸಮಾನರ್ಯಾರಮ್ಮ ಪ ಉಮೇಶ ಮೊದಲಾದ ಅಮರ ನಿಕರವು ಪಾದ ಕಮಲ ಭಜಿಪುದು ಅ.ಪ ಕರುಣಾವಾರಿಧಿಯೆಂದು ಶರಣ ಜನರು ನಿನ್ನ ಸ್ಮರಣೆ ಮಾಡುತ ಲಿಪ್ಪರೆ ಹರಿಣಾಕ್ಷಿ ಕೇಳ್ನಿನ್ನ ಕರುಣಾದಿಂದಲಿ ಅಘ ಹರಣ ಮಾಡಿ ನಿನ್ನ ಚರಣಾವ ತೋರಿಸಮ್ಮ 1 ಅಪಾರ ಮಹಿಮನ ವ್ಯಾಪಾರಗಳ ತಿಳಿದು ಕಾಪಾಡುವೇ ಜಗವಾ ಕೋಪರಹಿತಳಾಗಿ ಶ್ರೀಪತಿಯೊಳು ಎಮ್ಮ ತಾಪತ್ರಯವ ಪೇಳಿ ಕಾಪಾಡಬೇಕಮ್ಮ 2 ವಾಸವ ವಂದಿತ ಸಿರಿಶೇಷವಿಠ್ಠಲನೊಳು ವಾಸವ ಮಾಡುವಳೆ ಘಾಸೀ ಮಾಡದೆ ಎನ್ನ ಈ ಸಮಯದೊಳು ವಾಸುದೇವಗೆ ಪೇಳಿ ಪೋಷಿಸಬೇಕಮ್ಮ 3
--------------
ಬಾಗೇಪಲ್ಲಿ ಶೇಷದಾಸರು
ರವಿಸುತನ ಪ್ರಧಾನಿಯೆ ರಾ ಘವ ಕಾರ್ಯ ಧುರಂಧರಾಗಣಿತ ವಿಕ್ರಮಯಂ- ಮವಗುಣಗಳನೆಣಿಸದೆ ಕಾ ಯುವದೈ ನೀಂ ಪುಟಪರ್ತಿ ವೀರ ಹನುಮನೆ 1 ಮಾರುತನ ಕುಮಾರ ಪವಿ ಶ ರೀರ ಕಪಿವರಾಗ್ರಗಣ್ಯ ವರದಾಯಕ ನೀ ನಾರಾಧಕರಿಗೆ ಕೊಡು ದಿ ವ್ಯಾರೋಗ್ಯವ ಪುಟಪರ್ತಿ ವೀರ ಹನುಮನೆ 2 ವೈರಾಗ್ಯವು ಭಕ್ತಿ ಜ್ಞಾನವಂ ಪಾಲಿಸುವೈ ರಾರಿಳೆಯೊಳು ಪುಟಪರ್ತಿ ವೀರ ಹನುಮನೆ 3 ನೆರೆ ಪ್ರಾಣಗಳಿತ್ತೆ ಧೀರನೊಲಿಯುವಲೀ ತರಳನ ಜ್ವರಾದಿಗಳ ಪರಿ ಹರಿಸುತ ಪೊರೆ ಪುಟಪರ್ತಿ ವೀರ ಹನುಮನೆ 4 ರಾವಣನ ಗುದ್ದಿದಾತನೆ ಪಾವನ ಪರಮ ಪವಿತ್ರ ಕೃ ಪಾವನಧಿಯೇ ಪುಟಪರ್ತಿ ವೀರ ಹನುಮನೆ 5 ನರಿತನುದಿನ ಪಠಿಸುವರಿಗೆಯಾರೋಗ್ಯಸುವು ಸ್ಥಿರ ವೈರಾಗ್ಯಾಯುಗಳನು ಶ್ರೀ ಗುರುರಾಮ ವಿಠಲನು ಬಿಡದೆ ಕರುಣಿಸುತ್ತಿರುವಂ 6
--------------
ಗುರುರಾಮವಿಠಲ
ರಾ‌ಘವೇಂದ್ರ ಗುರುರಾಯ ಬಾಗಿ ನಮಿಸುವೆ ಬೇಗ ಭಾಗವತ ಜನಪ್ರಿಯ ಪ ಮಧ್ವಮತಪಾರಾವಾರ | ಶುದ್ಧಪೂರ್ಣ ಸುಧಾಕರ ಅದ್ವೈತಾದ್ರಿ ಶತಧರ | ಉದ್ಧರಿಸೈ ಯೋಗೀಶ್ವರ 1 ಭೂಷ ಭೂಸುರ ಪರಿವಾರ ಪೋಷ ಪ್ರಹ್ಲಾದವತಾರ 2 ತುಂಗಾಭದ್ರಾ ಸುತೀರದಿ |ಶೃಂಗಾರ ಸದ್ವøಂದಾವನದಿ ಪಿಂಗಳ ಸನ್ನಿಭಾಂಗದಿ | ಕಂಗೊಳಿಸಿದ ದಯಾಂಬುಧಿ 3 ಮರುಥಾವೇಶ ಯಮಿವರಿಯಾ | ದುರಿತಾಹಿ ವೈನತೇಯ | ಪರಮೋದಾರ ಪರಿಮಳಾರ್ಯ | ತರಳನೆಂದು ಕರುಣಿಸಯ್ಯ 4 ಶಾಮಸುಂದರ ಭಕ್ತಾಗ್ರಣಿ | ಭೂಮಿಯೊಳು ನಿನಗಾರಣೆ | ಕಾಮಿತಾರ್ಥ ಚಿಂತಾಮಣಿ | ಸ್ವಾಮಿ ಶ್ರೀ ವ್ಯಾಸ ಸನೌನಿ 5
--------------
ಶಾಮಸುಂದರ ವಿಠಲ
ರಾಘವೇಂದ್ರ ರಾಯರೆಂಬೋ ಮಹಾಯೋಗಿವರರ ನೋಡೈ ಪ ಭಾಗವತರು ಶಿರಬಾಗಿ ಕರೆಯಲತಿವೇಗದಿ ರಥದೊಳು ಸಾಗಿಬರುವ ಶ್ರೀ ಅ.ಪ. ಮಿನಗುವ ಘನವಾಹನಗಳ ರಥ ಶೃಂಗರವೋ ಕರದೊಳುಕನಕಛಡಿ ಕೊಡಿಗಳನುಪಮ ಭಾರವೊಅನಿಳ ನಿಗಮದಿ ನಿಪುಣ ಸುಜನರ ಪರವಾರವೋ ಪರಸ್ಪರಪಣದ ವೇದ ಘೋಷಣ ಸುಸ್ವರ ಗಂಭೀರವೋಘನ ಗುಣ ಗಣಮಣಿ ಮುನಿರಾಯನ ಮನದಣಿಯ ಪಾಡಿ ಕುಣಿಕುಣಿದಾಡಿ ಶಿರವಮಣಿಸುವರೋ ಗುಣವೆಣಿಸುವರೋ ದ-ಕ್ಷಿಣದಿಂ ತೆರಳಿ ವರುಣನ ಬೀದಿಯೊಳು 1 ಧರಣಿ ಸುರವರನಿಕರ ಕುಮುದೋದಯ ಚಂದ್ರನ ಮದ (ನ) ದು-ರ್ಧರ ದ್ವಿರದನ ತೆರಸಿ ಮೆರೆದ ಅಪ್ರತಿಮ ಮುನೀಂದ್ರನಸರಸ ಸುಧಾ ಪರಿಮಳ ಬೆರೆದ ಸುಗುಣಸಾಂದ್ರನ ಧರೆಯೊಳುಸಿರಿ ವಿಜಯೀಂದ್ರರ ಕುವರನೆನಿಪ ಸುಧೀಂದ್ರನಸರಸಿಜ ಸಂಭವ ಶರಣ್ಯ ಸುಂ-ದರ ನಿಜಾಂಘ್ರಿ ಭಜಕರ ಭಾಗ್ಯೋದಯಸುರರ ಸುರಭಿಗೆ ಸಮರೆಂದು ಸಾರಿ ಡಂಗುರ ಹೊಯಿಸುತ್ತ ಉತ್ತರ ಬೀದಿಯೊಳು 2 ವೆಗ್ಗಳ ವಾದ್ಯಗಳ ಸುವಾದ್ಯವೋ ಆರುತಿಯಬೆಳಗುವರು ಹಗಲ ದೀಪಗಳಗಾಧವೋಇಳೆಯೊಳು ಜನುಮ ಸಫಲವೆಂಬುವರ ವಿನೋದವೋ ಹಾಸ್ಯದಲಲಿನೆಯರಡಿ ಘಿಲಘಿಲಕೆಂಬುವ ನಟನ ಭೇದವೋಭಳಿರೆ ಭಳಿರೆ ಭಜಿಸುವರ ಭಕುತಿಬಲಿಗೊಲಿದ ಇಂದಿರೇಶನ ಕರದರಗಿಳಿಯೊ ನಳಿಯೊ ನಳಿನಾಂಘ್ರಿಯುಗದಿನಲಿಯುತ ಸುರರಾಜನ ಬೀದಿಯೊಳು 3
--------------
ಇಂದಿರೇಶರು
ರಾಘವೇಂದ್ರ ಸ್ವಾಮಿಗಳು ಅಂತರಂಗದಿ ಹರುಷವಾಂತೆವೈ ಗುರುವೆ ಪ ಸಂತಸದಿ ಸೇವೆಗಳ ಸ್ವೀಕರಿಸು ಪ್ರಭುವೆ ಅ.ಪ ಮಂಗಳಾಂಗಿಯರೆಲ್ಲ ಮಿಂದು ಮಡಿಗಳನ್ನುಟ್ಟು | ಮಂಗಳಾತ್ಮಕ ನಿನಗೆ ಮಜ್ಜನವ ಗೈಸೆ || ಅಂಗಳದಿ ದಧಿಕ್ಷೀರ ಘೃತಕುಂಭಗಳಧರಿಸಿ | ಸಿಂಗರದಿ ನಿಂದಿಹರೊ ಗುರುರಾಘವೇಂದ್ರ 1 ಧಾರುಣೀಸುರರೆಲ್ಲ ಧೀರಯತಿವರ ನಿನಗೆ | ಚಾರುವಿಭವದಿ ಕವಚ ಧಾರಣೆಯ ಗೈಸೆ || ಸೇರಿ ನುತಿಸುತೆ ನಿನ್ನ ಸಾರಗುಣ ಸಂಪನ್ನ | ಸಾರಿಹರೊ ನಿನ್ನಡಿಗೆ ಗುರುರಾಘವೇಂದ್ರ 2 ನಿಂದು ಭೂಸುರರೆಲ್ಲಾ ಜಯಜಯ ಜಯವೆನಲು| ಮಂದಹಾಸದಲವರ ಸೇವೆಯನು ಕೊಂಡೆ || ಇಂದು ಬೃಂದಾವನದಿ ನಿಂದು ದರ್ಶನವಿತ್ತೆ | ಕುಂದದಿಷ್ಟವ ಸಲಿಸೊ ಗುರುರಾಘವೇಂದ್ರ 3 ಉಡುರಾಶಿಗಳ ಮಧ್ಯೆ ಉಡುಪ ಮೆರೆಯುವ ತೆರದಿ | ಉಡುಗಣಿಕ್ಷೇತ್ರದೊಳು ನಿಂದು ಮೆರೆದೆ || ಕಡುಮಮತೆಯಲಿ ನಿನ್ನ ಸಡಗರದಿ ಸೇವಿಪರ | ಎಡರುಗಳ ಪರಿಹರಿಸೊ ಗುರುರಾಘವೇಂದ್ರ4 ನರಹರಿಯ ಮೆಚ್ಚಿಸಿದೆ ಪ್ರಹ್ಲಾದನೆನಿಸುತಲೆ | ಸಿರಿಕೃಷ್ಣನೊಲಿಸಿದಿಯೊ ವ್ಯಾಸಮುನಿ || ಸಿರಿರಾಮಚಂದ್ರಪ್ರಿಯ ಗುರುರಾಘವೇಂದ್ರನೆ | ಕರುಣದಲಿ ತೋರೀಗ ಶ್ರೀಶಕೇಶವನ5
--------------
ಶ್ರೀಶ ಕೇಶವದಾಸರು
ರಾಘವೇಂದ್ರ ಹರಿ ವಿಠಲ | ಕಾಪಾಡೊ ಇವಳಾ ಪ ಭೋಗಿ ಶಯನನೆ ಹರಿಯೆ | ನಾಗಾರಿವಾಹಾ ಅ.ಪ. ಮಂತ್ರಮಂದಿರ ಧೊರೆಯ ಅಂತರಂಗದಿ ಭಜಿಪಸತತದಿ ವಿಜಯಾರ್ಯ | ಚಿಂತೆಯಲ್ಲಿಹಳಾ |ಅಯೆ ಸತ್ಸುಕೃತದಿಂ ಹರಿದಾಸ್ಯ ಕಾಂಕ್ಷಿಪಳಮಾತೆ ಕೈ ಪಿಡಿ ಹರಿಯೇ | ಸಂತರುದ್ಧರಣಾ 1 ಭಾವದಲಿ ತವ ಮಹಿಮೆ | ಸ್ತವನಗೈಯ್ಯುವ ಕಾರ್ಯದಿವಸ ದಿವಸದಿ ವೃದ್ಧಿ | ಭಾವವನೆ ಪೊಂದೀಕವನ ರೂಪದಿ ಪ್ರವಹ | ಭುವಿಯೊಳಗೆ ಹರಿವಂತೆಹವಣಿಸೋ ಶ್ರೀಹರಿಯೇ | ಪವನ ವಂದಿತನೆ 2 ಭವ ಭಂಗ | ಕಾರುಣ್ಯಪಾಂಗ 3 ಭವ ಶರಧಿ | ದಾಟಿಸೋ ಹರಿಯೇ 4 ಕೈವಲ್ಯಪ್ರದ ಪುರುಷ | ದೇವದೇವೇಶ ಹರಿಗೊವತ್ಸನದಿಗಾವು | ಧಾವಿಸುವ ತೆರದೀನೀವೊಲಿಯು ತಿವಳಿಗೆ | ಭಾವದಲಿ ಮೈದೋರೊಭಾವಜನಯ್ಯ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ರಾಘವೇಂದ್ರಯತಿಗಳು ಗುರುರಾಯರ ನಂಬಿರೋ ರಾಘವೇಂದ್ರ ಗುರುರಾಯರ ನಂಬಿರೋ ಜಗದೊಳು ಪ. ಗುರುರಾಯರ ನಂಬಿ ವರಗಳ ಬೇಡಿರೊ ನರಹರಿ ಪದ ಧ್ಯಾನಿಪ ಕರುಣವ ಬೀರುವಂಥ 1 ಆದಿ ಪ್ರಹ್ಲಾದರು ಮೋದದಿ ಹರಿಪದ ಆದರದಿಂದ ಜಗಕೆ ಸಾಧಿಸಿ ಬೀರಿದರೊ 2 ದ್ವಿತೀಯ ವ್ಯಾಸರಾಜ ಸ್ತುತ ಬ್ರಹ್ಮಣ್ಯಾರ್ಯ ಕರ ಗತಪುರುಷೋತ್ತಮ ಗುಹ ಪಥದೊಳಗಿಪ್ಪರ 3 ತೃತೀಯ ರಾಘವೇಂದ್ರ ಪತಿತ ಪಾವನ ನಾಮ ರತ್ನ ಖಚಿತವಾಗಿದೆ ಭಕ್ತ ಸುಚರಿತರೆಲ್ಲ ಬೇಗ 4 ಭೂತ ಪ್ರೇತಗಳ ಪ್ರೀತಿಯೊಳಳಿದು ಶ್ವೇತ ಕುಷ್ಠಗಳ ದೂರ ಮಾಳ್ಪವರ 5 ಪಾದ ಪಂಕಜ ದುರಿತ ದೂರ ಶ್ರೀ ಶ್ರೀನಿವಾಸನ ಭಜಿಪ ಗುರು 6
--------------
ಸರಸ್ವತಿ ಬಾಯಿ
ರಾಘವೇಂದ್ರರ ಸ್ತೋತ್ರ ಬಂದರಾ ರಾಘವೇಂದ್ರರಾಯರು ಮಂತ್ರ ಮಂದಿರ ವೆಂಬೀ ಸ್ಥಳಕೆ ವಿಭವದಿ ಪ ಇಂದು ಭಜಕ ದ್ವಿಜ ವೃಂದಕೆ ಪರಮಾ ನಂದ ಗರಿಯಲು ಶ್ಯಂದನವೇರಿ ಅ.ಪ ಶ್ಯಂದನವೇರಿ ಧಣಂ ಧಣ ವಾದ್ಯದಲಿ ಪೌರಜನ ಸಂದಣಿಸಿತು ಆನಂದದಿ ನೋಡುತಲಿ ಪ್ರಾರ್ಥಿಪರು ಮುಗಿಯುತಲಿಕೈಯಾ ಕವಿಗೇಯಾ ಶುಭಕಾಯಾ ಸುಧೀಂದ್ರರ ತನಯಾ ಗುರುವರಮಧ್ವ ಮು- ನೀಂದ್ರರಾ ಸುಮತಾಂಬುಧಿ ಚಂದಿರ ಅತಿ ಸುಂದರ ವೃಂದಾವನದಲಿ ನಿಂದಿಹರೆಂದರಿದೊಂದಿಪರಿಗೆ ಭವ ಬಂಧವ ಬಿಡಿಸಲು 1 ಸಡಗರದಲಿ ಬಿಳಿಗೊಡೆ ಚಾಮರ ವ್ಯಜನಾದಿಗಳನು ಪಿಡಿದು ಸೇವಿಸುವ ಎಡಬಲದಲಿ ಸುಜನಾ ಸಚ್ಛಾಸ್ತ್ರ ವೇದ ಪುರಾಣ ಪ್ರವಚನ ಪಾವನ್ನ ಗುರುಗಳ ಗುಣಸ್ತವನ ಮಾಡುವಾ ವರಗಳ ಬೇಡುವಾ ಕುಣಿಕುಣಿದಾಡುವಾ ಪಾಡುವಾ ಪೊಡವಿ ನಿರ್ಜರರ ಕಡು ವೈಭವದಲಿ 2 ಮಣಿ ಮುಕುಟ ದಿಂದ ದಿ- ಗ್ವಲಯ ಬೆಳಗುತಿಹ ಚಲುವ ಮುಖದ ಮಾಟಾ ಗಳದಲ್ಲಿ ಮೌಕ್ತಿಕದ ಹಾರ ಕೇಯೂರ ನೂಪರ ಸ- ಪೊಳೆಯುತ ಭಜಕರ ಕ- ಲುಷಾಭ್ರಕೆ ಮಾರುvರೆÀನಿಸುತ ಇಳೆಯೊಳು ಪಂಡಿತ ಯಳೆಮೇಲಾರ್ಯಗೊಲಿದು ಭಕುತ ವತ್ಸಲರೆಂದೆ ನಿಸುತ3 ಮಂಗಳ ತುಂಗ ತರಂಗಿಣಿ ತೀರದಲಿ ಭಕುತ ಜ- ನಂಗಳಿಗೆ ನಿಖಿಲಾರ್ಧಂಗಳ ಸಲಿಸುತಲೀ ಪಾಲಿಸುವ ದೇವ ಸ್ವಭಾವ ಶರಣ ಸಂಜೀವ ಕರದಲ್ಲಿಗೆ ಬರುವ ಎನ್ನುತ ತುತಿಪರು ದೃಗ್ಭಾಷ್ಪವ ಸುರಿಸುತ ಮೈಮರೆಯುತ ಬಲು ನಿರ್ಮಲ ಅಂತರಂಗದಿತವ ಪದಂಗಳ ಸ್ಮರಿಪರ ಸಂಘಕೆ ಸತತ ಸುಮಂಗಳವೀಯಲು 4 ಪುರದರಸನು ತನ್ನ ಸಿರಿಪರಿವಾರದಲಿ ಚರಿಸುತ ಬರುತ ಕಾಣುತಲೆ ಗುರುವರ ಚರಣದಲಿ ಕಾಣಕೆಯನ್ನಿತ್ತು ಶಿರಬಾಗಿ ಚನ್ನಾಗಿ ಆರುತಿಯ ಬೆಳಗಿ ಬರುತಿರೆ ರಥಸಾಗಿ ತೋರುವಾ ನೋಳ್ಪರ ನಯನಕ್ಕೆ ಪರಮೋತ್ಸವಾ ಶರಣರ ವಾಂಛಿüತಗಳ ಗರಿಯುವಾ ಪೊರೆಯುವ ಧರೆಯೊಳು ಮೆರೆಯುವ 'ಶಿರಿ ಕಾರ್ಪರ ನರಹರಿಯ' ನೊಲಿಸಿರುವ ಗುರು ಪ್ರಹ್ಲಾದರು 5
--------------
ಕಾರ್ಪರ ನರಹರಿದಾಸರು
ರಾಘವೇಂದ್ರರು ಸುಂದರ ಗುರು ರಾಘವೇಂದ್ರರೆಂತೆಂಬುವೋ ಕರ್ಮಂದಿಗಳರಸನೆ ವಂದಿಸುವೆ ಪ ಸನ್ನುತ ಮಹಿಮರೆಂದು ನಾ ಬೇಡುವೆ ಅ.ಪ. ಪರಮ ಕರುಣೀ ನಿಜ ಚರಣ ಸೇವಕರನ್ನು ಉದ್ಧರಿಸುತಲನುದಿನ ಪೊರೆವನೆಂದೂಕರವ ಪಿಡಿದು ತ್ವರ ಪರಿಪರಿಯಲಿ ನಿನ್ನಾತಪೊರೆಯುವೆ ಕೈ ಪಿಡಿಯೆಂದು ಕರೆಯುವೆಧರೆಯೊಳಗೆ ನಿಮ್ಮಯ ಸರಿ ಧ್ವರೆಗಳ ಕಾಣೆ ಮ-ದ್ಗುರುವೆ ಯನ್ನಂಥ ಪಾಮರ ನರನ ಕಾಯೋದು ನಿಮಗಾಶ್ಚರ್ಯವೇವರಯೋಗಿವರ್ಯನೆ ನಿರುತ ಬೃಂದಾವನದಿ ರಾಜಿಪೊಮೆರೆವ ಮಂಗಳ ಚರಣ ತವಪದಸ್ಮರಿಪೆ ಸಂತತ ನೀಡು ತ್ವರಿತದಿಹರುಷದಲಿ ನಿರ್ಜರರ ತರುವೆ 1 ಪಾದ ಚಾರು ಭೂರಿ ಕಿಟೀತಜಧೀರ ನಿನ್ನನು ಸಾರಿದವರನು ಪಾರುಗಾಣಿಪನೆಂದು ಡಂಗುರಸಾರುತಲಿದೆಯದು ವೀರಸಲಿಸೊ 2 ಏಸೇಸು ಜನ್ಮದಿ ಕ್ಲೇಶವನನುಭವಿಸಿಘಾಸಿ ಮಾಡೆನೊ ಮನದಾಶೆಯಿಂದಾಹೇಸಿ ವಿಷಯಂಗಳು ಲೇಸುತಿಳಿದು ಮರೆಮೋಸಾದಿ ದುಷ್ಟರ ಸಹವಾಸದಿ ಸೇರಿದೆಮಂದಹಾಸಾದಿ ಸಂತೈಸು ರವಿ ಸಂಕಾಶಜನಹೃದೋಷ ಸಾಗರದಿಕಾಷಾಯವಸನ ಭೂಷಿತಾಂಗ ವ್ಯಾಸಮುನಿ ಭರದೀಗಜರಾಮಪುರದೀಶ ಮುಖರಿಗೆ ತೋಷ ನೀ ಗರದಿಈ ಸಮಯ ಸ್ತುತಿಸುವೆನುಶ್ರೀ ಸಮೀರ ಮತಾಬ್ಧಿ ಚಂದಿರಈಶಗೆದುರ ರತೀಶ ಸನ್ನುತಶ್ರೀಶ ಗುರು ಇಂದಿರೇಶನಂಘ್ರಿಗೆದಾಸ್ಯ ಭಾವ ರಹಸ್ಯ ತೋರಿದೆ 3
--------------
ಗುರುಇಂದಿರೇಶರು
ರಾಜ ಶಿರೋಮಣಿ ದಯಮಾಡೈ ಪ ಕಾಲವಿಭೀತಿಯಿಂ ಬಾಲನು ಗೋಳಿಡೆ ಶೂಲದೆ ಕಾಲನ ಸಂಹರಿಸಿದೆ 1 ಕ್ಷೀರಾಭ್ದಿ ಮಧ್ಯದೊಳ್ ಹಲವು ಪುಟ್ಟಲು ಲೀಲೆಯೊಳೆಲ್ಲವ ನೀಂಟಿದೆ 2 ಕೈಲಾಸವಾಸ ಶೈಲಾಪ್ತ ಬಂಧುವೆ ಬಾಲರಾಜಾಂಚಿತ ಭೂಷಣ 3 ನಿರ್ಮಲರೂಪ ನಿಷ್ಕಲ ಸ್ವರೂಪ ಬ್ರಹ್ಮಮಸ್ತಕ ಕಾಲರೂಪ 4 ಫಾಲಾಕ್ಷದೇವ ಮಾಲಾ ಮನೋಹರ ನೀಲಲೋಹಿತ ಧೇನುಭೂಪತೆ 5
--------------
ಬೇಟೆರಾಯ ದೀಕ್ಷಿತರು
ರಾಜಕುಲ ವನರಾಶಿ ರಾಜರಾಜೇಶ್ವರಾ | ರಾಜೀವ ನಯನ ಯದುರಾಜ ಎಲೊ ಭಾಪುರೆ ಪ ಗರಳ ಪೇರ್ಮೊಲೆಯಿತ್ತ ಅಸುರಿಯಳ ಸಂಹರಿಸಿ | ಮರಳಿ ಅವಳಿಗೆ ಉತ್ತಮ ಗತಿಯನಿತ್ತೆ | ದುರಳ ಶಕಟಾಸುರನ ಚರಣ ದುಂಗುಟದಲ್ಲಿ | ತರಳಾಟದಿಂದ ಮರ್ದಿಸಿದೆ ಎಲೆ ಭಾಪುರೆ 1 ವ್ರಜ | ಪುರವ ಪಾಲಿಸಿದೆ ಕಾಳಿಂಗನೈದು | ಸಿರದಲ್ಲಿ ತುಳಿದು ರಮಣ ದ್ವೀಪಕೆ ಕಳುಹಿ | ಪರಿಪರಿಯ ಖಳರ ಮರ್ದಿಸಿದೆ ಎಲೊ ಭಾಪುರೆ 2 ಕರೆಯ ಬಂದಾ ಕ್ರೂರ ಭಕ್ತನಿಗೆ ಯಮುನೆಯಲಿ | ಕರುಣದಿಂದಲಿ ನಿಜರೂಪ ತೋರಿ | ಮುರಿದು ಧರಿಗೆ ವರಿಸಿದೆ ಕಂಸನ ಎಲೆ ಭಾಪುರೆ 3 ವನಧಿಯೊಳು ಪುರ ಬಿಗಿದು ಕಾಲಯವನನ ಸದೆದು | ಅನಿಲ ಸುತನಿಂದ ಮಾಗಧನ ಕೊಲ್ಲಿಸಿ | ವನಿತೆಯರ ಸೆರೆ ಬಿಡಿಸಿ ಸೂತತನವನೆ ವೊಹಿಸಿ | ಫಲ್ಗುಣಗೆ ವಿಶ್ವರೂಪವ ತೋರಿದೆ ಎಲೊ ಭಾಪುರೆ 4 ಗುರು ಭೀಷ್ಮ ಶಲ್ಯ ಶಕುನಿ ಸುಬಲ ಭಗದತ್ತ | ತರಣಿಸುತ ದುಶ್ಶಾಸ ಕೌರವೇಶಾ | ಎರಡು ಬಲ ವ್ಯಾಜ್ಯದಲಿ ಭೂಭಾರನಿಳುಹಿ ಸಾ | ವಿರ ತೋಳ ಖಳನ ಭಂಗಿಸಿದೆ ಎಲೊ ಭಾಪುರೆ5 ದ್ವಾರಕಾಪುರದಲ್ಲಿ ನಾರದಗೆ ಸೋಜಿಗವ | ತೋರಿದೆ ಒಬ್ಬೊಬ್ಬ ನಾರಿಯಲಿ | ನಾರಿಯರ ಕೂಡ ಬಲು ಕ್ರೀಡೆಗಳನಾಡಿ ಅ | ವರ ಸಂತಾನವನು ಪಡದೆ ಎಲೊ ಭಾಪುರೆ 6 ವರ ಚಂದ್ರಹಾಸ ಮಿಗಿಲಾದ ಭೂಪಾಲಕರ | ಕರೆಸಿ ಪಾಂಡುವರ ಯಾಗವನೆ ಮುಗಿಸಿ | ಹರುಷದಲಿ ಯದುಕುಲವಾಸ ಮಾಡಿದೆ | ಪರಮ ಪುರುಷ ವಿಜಯವಿಠ್ಠಲನೆ ಎಲೆ ಭಾಪುರೆ 7
--------------
ವಿಜಯದಾಸ
ರಾಜವದನೆ ಸುರರಾಜನ ಪುರದೊಳುರಾಜಿಸುತಿಹ ಕುಜವ ಪ ರಾಜೀವ ಮುಖಿಯೆನಿಸುವ ಸಖಿಗೊಲಿದಿತ್ತರಾಜನ ತೋರೆನಗೆ ಅ ನೆತ್ತಿಯಿಂದಿಳಿದಳ ಹೆತ್ತ ಮಗನ ಮೊಮ್ಮನೆತ್ತಿದಾತನ ಪಿತನ ತುತ್ತು ಮಾಡುವನ ವೈರಿಯನೇರಿ ಜಗವನು ಸುತ್ತು ಬರುತಲಿಪ್ಪನಕತ್ತಲೆಯೊಳು ಕಾದಿ ಅಳಿದಯ್ಯನ ಶಿರವಕತ್ತರಿಸಿದ ಧೀರನಸತ್ತ ಮಗನ ತಂದಿತ್ತವನನು ಎ-ನ್ನೊತ್ತಿಗೆ ಕರೆದು ತಾರೆ 1 ವರುಷವೈದರ ಪೆಸರವನ ತಾಯನುಜನಧರಿಸಿದಾತನ ಸಖನಧುರದೊಳು ತನಗೆ ಬೆಂಬಲ ಮಾಡಿಕೊಂಡು ಭೂವರಗೆ ತಾನೊಲಿದವನಸುರಗಿರಿಯನು ಸುತ್ತಿ ಬಾಹನ ಸುತನ ಕೈಯಲಿಹರಸಿ ದಾನವ ಕೊಂಡನಧರಣಿಜಾತನ ಶಿರವರಿದು ನಾರಿಯರನುಪುರಕೆ ತಂದವನ ತೋರೆ 2 ಹನ್ನೆರಡನೆಯ ತಾರೆಯ ಪೆಸರಾಕೆಯಕನ್ನೆಯಯ್ಯನ ಮನೆಯತನ್ನ ತಾ ಮರೆ ಮಾಡಿಕೊಂಡಿಪ್ಪರಸಿಯಬಣ್ಣವ ಕಾಯ್ದಿಹನಪನ್ನಗಶಯನ ಬೇಲಾಪುರದರಸನುತನ್ನ ನೆನೆವ ಭಕ್ತನಮನ್ನಿಸಿ ಕಾಯುವ ಚೆನ್ನಾದಿಕೇಶವ ಪ್ರ-ಸನ್ನನ ತೋರೆನಗೆ 3
--------------
ಕನಕದಾಸ
ರಾಜೋಪಚಾರರಾಜೋಪಚಾರರಾಜೀವನೇತ್ರ ನೀನವಧರಿಸು ಬೇಗ ಪಸಾವಿರದ ದಳವುಳ್ಳ ಕಮಲವೊಂದಕೆ ಶಕ್ತಿಸಾವಿರದ ಮೌಕ್ತಿಕದ ಸರಗಳೊಪ್ಪಿಹವುಕಾವಿಹುದು ಸಕಲ ದೇವಾತ್ಮಕದ ಶಾರದೆಯುನಾ ವಹಿಸಿ ತುರಿಯ ಕಲಶದ ಛತ್ರವೆಂದೆಂಬ 1ಆವಗವು ಸತ್ವಾದಿ ಗುಣಗಳಿಂದೊಪ್ಪಿರುವಆವರಣ ವಿಕ್ಷೇಪ ಶಕ್ತಿಯೆಂಬೆರಡುದೇವ ನಿನ್ನುಭಯ ಪಾಶ್ರ್ವದಲೊಲವುತಿಹ ಸರ್ವಭಾವದಿಂದುಭಯ ಚಾಮರವೆರಡರಿಂದ 2ಗಂಧರ್ವ ನಗರದಿಂದೈತಂದ ನಾರಿಯರುಛಂದದಿಂ ನರ್ತಿಸುತಲಿಹರೈವರಿವರುಒಂದಾಗಿ ಬಳಿಕಿವರ ಹೊಂದಿ ಮತ್ತೈವರಿರೆಹಿಂದೆ ನಾಲ್ವರುವೆರಸಿ ನಲಿವ ನರ್ತನವೆಂಬ 3ಪರವೆಂದು ನಾಭಿಯಲಿ ಪಶ್ಯಂತಿ ಹೃದಯದಲಿಸ್ವರವಿಹುದು ಕಂಠದಲಿ ಮಧ್ಯಮಾಖ್ಯೆಯಲಿಸ್ಫುರಿಸಿ ಮುಖಕಮಲದಲಿ ವೇದಶಾಸ್ತ್ರಗಳಾಗಿಮೆರೆವ ವೈಖರಿಯೆಂಬ ಗೀತವಿದ ಕೇಳು 4ತಾಳ ಮರ್ದಳೆ ಘಂಟೆ ಭೇರಿ ಶಂಖಗಳಿಂದಮೇಲಾದ ವೀಣೆ ವೇಣುಗಳ ರವದಿಂದಲಾಲಿಸುವ ಛಿಣಿ ಛಿಣೀ ಛಿಣಿಗಳೆಂಬವರಿಂದನೀಲ ಮೇಘಧ್ವಾನ ದಶನಾದದಿಂದ 5ಪರಿಪರಿಯ ಗತಿಯುಳ್ಳ ಚಿತ್ತವೆಂಬಶ್ವವನುವರ ಸತ್ವ ಗುಣವೆಂಬ ಹಲ್ಲಣವ ಬಿಗಿದುನಿರತ ಪರಮಾತ್ಮನೀಕ್ಷಣದ ಕಡಿವಾಣವನುಪಿರಿದಾಗಿಯಳವಡಿಸಿ ಮುಂದೆ ನಿಂದಿಹುದಾಗಿ 6ಒಲವುತಿಹ ಸುಖ ದುಃಖವೆರಡು ಘಂಟೆಗಳಿಂದನೆಲನ ಸೋಕುವ ಕಾಮ ಸುಂಡಿಲದರಿಂದಫಲ ಚತುಷ್ಟಯ ಪಾದ ಮೇಲು ಮಂಟಪದಿಂದಬಲುಮೆಯಹ ಮೂಲ ಕಾರಣವೆಂಬ ಗಜವು 7ಹಿಂದೆಮುಂದರುವರೊಂದಾಗಿ ವಹಿಸಿರಲದಕೆಹೊಂದಿಸಿದ ಚೌಕಿ ಮನವೆಂಬುದದರಲ್ಲಿಮಂದ ಮೃದು ಬಹು ವಿಷಯ ಸುಖದ ಹಾಸಿಕೆ ಹಾಸಿದಂದಳವಿದನುಭವದ ಕೊಂಬಿನಿಂದೊಪ್ಪಿರುವ 8ಆರು ನೆಲೆಯುಳ್ಳ ರಥವದಕೆ ಶಕ್ತಿಗಳೆಂಬಮೂರು ಕಲಶಗಳಲ್ಲಿ ನಾಲ್ಕು ಸತ್ತಿಗೆಯುಮೂರವಸ್ಥೆಗಳದರ ತುರಿಯವೆಂಬುದೆ ನಾಲ್ಕುಮೂರುಲೋಕವನಾಳ್ವ ಮಹಿಮ ನೀ ಪ್ರತಿಗ್ರಹಿಸು 9ನುಡಿವುದೆಲ್ಲವು ವೇದ ನಡೆವುದೆಲ್ಲವು ಶಾಸ್ತ್ರಬಿಡದೆ ನಿನ್ನಾಜ್ಞೆಯೊಳಗಿರೆ ಪುರಾಣದೃಢವಾಗಿ ನಿನ್ನ ಭಜನೆಯ ಮಾಳ್ಪ ದಿವಸವದುಕಡುಪುಣ್ಯವಾದ ಪಂಚಾಂಗವೆನಿಸುವದು 10ಉದಯದಲಿ ನಿನ್ನ ಸ್ಮರಣೆಯ ಮಾಡೆ ಪುಣ್ಯತಿಥಿಒದಗಿಸುವ ಸತ್ಕರ್ಮ ವಾರವೆನಿಸುವದುಅದರಲ್ಲಿಯನುಭವವೆ ನಕ್ಷತ್ರ ನಿನ್ನಲ್ಲಿಹುದುಗೆ ಜೀವನು ಯೋಗ ಹುದುಗುವದೆ ಕರಣ 11ಸಕಲ ವೇದಂಗಳಲಿ ಪ್ರತಿಪಾದಿಸಿದ ಫಲವುವಿಕಳವಿಲ್ಲದೆ ನಿನ್ನ ನಿಮಿಷ ಧ್ಯಾನಿಸಲುಸಕಲ ತೀರ್ಥಸ್ನಾನ ದಾನ ಜಪ ತಪ ಯಜ್ಞಸಕಲವೂ ಬಹುದೆಂಬ ಸರ್ವೋಪಚಾರ 12ಸುರ ಸಿದ್ಧ ಮುನಿವೃಂದ ನಿರತ ಸೇವಿತ ಚರಣಶರಣಾಗತೋದ್ದರಣ ಶರಧಿಜಾರಮಣತಿರುಪತಿಯ ಸ್ಥಿರವಾಸ ನಿರುಪಮ ಮಹಾಕರುಣಮರೆಯೊಕ್ಕೆ ಸಲಹೆನ್ನ ಪ್ರಾಣ ವೆಂಕಟರಮಣ 13ಓಂ ಜುನೇ ನಮಃ
--------------
ತಿಮ್ಮಪ್ಪದಾಸರು