ಒಟ್ಟು 14471 ಕಡೆಗಳಲ್ಲಿ , 133 ದಾಸರು , 7276 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೀನೆ ದಯ ಸಂಪನ್ನನೆಲೋ ದೀನನಾಥ ಜಾಹ್ನವೀ ತಾತ ಪ ವಿಮಲಹೃದಯಭಕ್ತಿ ಜನಕೆ ನಮಿಪೆ ನಿನ್ನ ಪಾದಕಮಲ ವಿಮಲಸುಖದ ಪಥದೋರೋ 1 ಕೊಟ್ಟು ಎನಗೆ ಶಿಷ್ಟಸಂಗ ಇಟ್ಟು ನಿನ್ನ ಭಜನಾನಂದ ನಿಷ್ಠೆ ಭಕುತಿ ನಿನ್ನ ಪಾದ ದಿಟ್ಟ ದಾಸನೆನಿಸಿ ಕಾಯೋ 2 ರಾಕ್ಷಸಾರಿ ಎನ್ನ ಮನದ ಪೇಕ್ಷ ಪೂರ್ತಿಮಾಡಿ ಮೆರೆವ ಮೋಕ್ಷಪುರಿಗೆ ತಲ್ಪಿಸೆನ್ನ ಮೋಕ್ಷದಾಯಕ ಶ್ರೀರಾಮ ಪ್ರಭೋ 3
--------------
ರಾಮದಾಸರು
ನೀನೆ ದಯಮಾಡಲು ನಾನುದ್ಧಾರಾಗುವೆನು ಏನೇನು ಪರಲೋಕ ನಾನರಿಯೆ ಶ್ರೀಹರಿಯೆ ಪ ಹೀನಸಂಸಾರದೊಳಗೆ ಮುಳುಗಿ ಶ್ವಾನನಂದದಿ ಕರಗಿ ಕೊರಗಿ ಜ್ಞಾನಶೂನ್ಯನಾಗಿ ಬಳಲುವೆ ಜ್ಞಾನಮೂರುತಿ ಅಭಯ ಪಾಲಿಸು ಅ.ಪ ಉದಯದಲ್ಲೇಳುತ ಸದಮಲ ತವಪಾದ ಮುದದಿಂದ ನೆನೆಯದೆ ಅಧಮತನದಿ ವಿಧವಿಧದಿ ಅಧಮಜನರ ಸುದ್ದಿ ವದನದಿಂದಾಡುತ ಮುದಿಕೋಣನಂದದಿ ಮದಮುಚ್ಚಿ ನಡೆದೆ ಎಡಬಿಡದೆ ಕುದಿದೆನನುದಿನ ಪರರ ಮನೆ ಸಂ ಪದವ ನೋಡಿ ಸಹಿಸದವರ ಸದನ ಮುರಿಯುವ ಬುದ್ಧಿ ಹುಡುಕಿದೆ ಪದುಮನಾಭಪರಾಧ ಕ್ಷಮಿಸಿ1 ಒಂದು ನಾನರಿಯದೆ ಮುಂದೆ ಭಲಾಯೆಂದು ಹಿಂದೆ ನಿಂದಿಸಿ ನಕ್ಕೆ ದ್ವಂದ್ವಕರ ಬಡಿದು ಬಲು ಜರಿದು ಹಂದ್ಯಮೇದ್ಯಕಂಡಾನಂದಿಪತೆರದನ್ಯ ಸುಂದರಿಯರ ನಯನದಿಂದ ನೋಡಿದೆ ಎವೆಯಿಕ್ಕದೆ ಇಂದಿರೇಶನೆ ನಿಮ್ಮ ಪಾದವ ಒಂದೆ ಮನದಿಂ ಭಜಿಸದೆ ಭವ ದಂದುಗದಲಿ ಬಿದ್ದು ನೊಂದವ ಕಂದನೊಳು ಕೃಪಾದೃಷ್ಟಿಯಿತ್ತು 2 ದಾಸಜನರ ಆವಾಸ ನಾ ಬಯಸದೆ ಈಷಣ ಪ್ರಪಂಚದ್ವಾಸನದಲ್ಲಿ ಬಹು ತೊಳಲಿ ಆಸೆಯೆಂಬುವ ಮಹಪಾಶದಬಲೆಯೊಳು ಘಾಸಿಯಾಗುವೆ ಸಿಲ್ಕಿ ಸೋಸಿ ನೋಡದಲೆ ಮರೆ ಮೋಸದಲಿ ದಾಸ ಬುದ್ಧಿಯಿಂದ ಮಾಡಿದ ಬಲು ದೋಷರಾಶಿಗಳೆಲ್ಲ ನಾಶಿಸಿ ಶ್ರೀಶ ಶ್ರೀರಾಮ ನಿಮ್ಮ ಪಾದ ದಾಸನಿಗೆ ನಿಜಧ್ಯಾಸ ನಿಲ್ಲಿಸು 3
--------------
ರಾಮದಾಸರು
ನೀನೆ ದಯಾನಿಧಿಯು ಶ್ರೀ ಗುರುರಾಯ ನೀನೆ ದಯಾನಿಧಿಯು ಧ್ರುವ ಕರುಣದಿ ಕುಂತಿಯ ಪುತ್ರರಿಗೆ ಒಲಿದು ಕಾಳ ನಿರ್ಮಿಸಿ ಕೌರವರಳಿದು ಉಳಿಯದೆ ಇಳೆಯೊಳು ವಂಶವ ಸವರಿದ ಶೇಷಶಯನ ಶ್ರೀ ಕೇಶವ ನೀನೆ 1 ನರಗೊಲಿದು ನರಕಾಸುರನ ಮರ್ದಿಸಿ ನಾರಗನೆಂದಜಮಿಳನ ನೀ ತಾರಿಸಿ ನಾರದಗೊಲಿದು ನಾಟ್ಯವನಾಡಿದ ನರಹರಿಯು ನಾರಾಯಣ ನೀನೆ 2 ವೇದವ ಕದ್ದೊಯಿದಸುರನ ಸೀಳಿ ಮಚ್ಛವತಾರದ ರೂಪವ ತಾಳಿ ಮಾವನ ಕೊಂದ ಮಾನ್ಯರ ಮಡುಹಿದ ಮಾಧವ ನೀನೆ 3 ಗೋಕುಲದಲಿ ಪುಟ್ಟಿ ಧರೆಯೊಳು ಬೆರಳಲಿ ಗೋವರ್ಧನ ಗಿರಿಯನೆತ್ತಿ ಗೋಕುಲ ಕಾಯ್ದಿ ಗೋಪಿಯರಿಗೊಲಿದ ಗೋಪಾಲಕೃಷ್ಣ ಗೋವಿಂದನು ನೀನೆ4 ಸೃಷ್ಟಿನೆಲ್ಲ ಬೆನ್ನಿಲಿ ತಾಳಿದ ಶೇಷನ ಸಂ ಕಷ್ಟವ ಪರಿಹರಿಸಿದ ಶಿಷ್ಟ ವಿಭೀಷಣಗೊಲಿದು ಪಟ್ಟವಗಟ್ಟವು ವಿಷ್ಣವು ನೀನೆ 5 ಮದನನೊಲಿದು ಕಾಳಿಂಗನ ತುಳಿದು ಕದನದಲಿ ಬಾಣಾಸುರನಳಿದು ಮೇದಿನಿಯೊಳು ಮರೆ ಇಲ್ಲದೆ ದೈತ್ಯರ ಮರ್ದಿಸಿದ ಮಧುಸೂದನನು ನೀನೆ 6 ತ್ರಿಪುರವನಳಿದು ತ್ರಿಗುಣವ ತಾಳಿದ ತೆತ್ತೀಸ ಕೋಟಿ ದೇವರುಗಳಿಗಾಳಿದ ಅಕ್ರೂರಗೊಲಿದು ಚರಿತ್ರವದೋರಿದ ತ್ರಿಜಗಪತಿ ತ್ರಿವಿಕ್ರಮ ನೀನೆ7 ವಾಲಿಯನಳಿದು ವಾಲ್ಮೀಕಿಗೊಲಿದು ಬಲಿಚಕ್ರನ ಮುನಿಮುಂದಲಿ ಸುಳಿದು ಬ್ರಾಹ್ಮಣನಾಗಿ ದಾನವ ಬೇಡಿದ ಮಾನ್ನವಗೊಲಿದ ಶ್ರೀ ವಾಮನ ನೀನೆ 8 ಸೃಷ್ಟಿನೆಲ್ಲ ನಿರ್ಮಿಸಿ ವಕ್ಷ ಸ್ಥಳದಲಿ ಶ್ರೀ ಮಹಾಲಕ್ಷ್ಮಿಯ ಧರಿಸಿದ ಶ್ರೀನಿಧಿ ಶ್ರೀಪತಿ ಶ್ರೀಗುರುಮೂರುತಿ ಶ್ರೀದೇವಿಗೊಲಿದಿಹ ಶ್ರೀಧರ ನೀನೆ 9 ದಾಸರ ಕ್ಲೇಶಕಿಲ್ಮಿಷಗಳ ತೊಳೆದು ಅಂಬರಿಷ ರುಕ್ಮಾಂಗದಗೊಲಿದು ಶುಕ ಶೌನಕ ಪರಾಶರ ಮುನಿಗಳಿಗೆ ಹರುಷನಿತ್ತ ಹೃಷಿಕೇಶನು ನೀನೆ 10 ಕ್ಷಿತಿಯೊಳು ದೃಢ ಪತಿವ್ರತೆಗೊಲಿದು ಯತಿ ಮುನಿಗಳಿಗಿನ್ನು ಗತಿಗಳನಿತ್ತು ಪತಿತರ ತಾರಿಸಿ ಪಾವನಗೈಸಿದ ಪರಂಜ್ಯೋತಿ ಪದ್ಮನಾಭನು ನೀನೆ 11 ದೇವಕಿಗೊಲಿದು ಸ್ಥಾಪಿಸಿ ಧರೆಯೊಳು ದ್ವಾರಕಿಯಲಿ ನಿಜ ಲೀಲೆಯು ತೋರಿದ ದುರಿತ ವಿಧ್ವಂಸನ ದೇವಕಿ ಪುತ್ರ ದಾಮೋದರ ನೀನೆ 12 ಸಿದ್ದ ಶರಣರಿಗೊಲಿದ ಸದ್ಗತಿ ಸುಖಸಾಧನ ಸಹದೇವಗದೋರಿದ ಸಂಭ್ರಮದಿ ಸುಧಾಮಗ ಒಲಿದು ಸಂತೋಷವನಿತ್ತ ಸಂಕರುಷಣ ನೀನೆ 13 ವಸುಧಿಯೊಳು ಭಸ್ಮಾಸುರನ ಮರ್ದಿಸಿ ಭಾಷೆಯನಿತ್ತು ಭಕ್ತರ ಪಾಲಿಸಿ ಋಷಿ ವೇದವ್ಯಾಸಗೊಲಿದಾತನು ವಸುದೇವಸುತ ವಾಸುದೇವನು ನೀನೆ 14 ವಿದುರುದ್ಧವ ಗರುಡಗೊಲಿದು ಭೃಗುಮುನಿ ಕಪಿಲ ಯೋಗೇಂದ್ರನ ಸಲಹಿದ ಸ್ಥಿರಪದವಿತ್ತರೊಂದು ಮಂದಿಗೆ ಪ್ರಸನ್ನವಾದ ಪ್ರದ್ಯುಮ್ನನು ನೀನೆ 15 ಸೀತಾ ಸುದ್ದಿಯ ತಂದವಗೊಲಿದು ಹತ್ತು ತಲೆಗಳ ಇದ್ದವನಳಿದು ಕದ್ದುಬೆಣ್ಣೆಯ ಮುದ್ದೆಯ ಮೆದ್ದು ಉದ್ದವಗೊಲಿದ ಅನಿರುದ್ಧನು ನೀನೆ 16 ಸೋಕಿಸಿ ಪೂತಣಿಯ ಕಾಯವು ಹೀರಿದ ಭಕ್ತ ಪುಂಡಲೀಕನ ಸಲಹಿದ ಭಕ್ತಿಗೆ ಒಲಿದು ಮುಕ್ತಿಯನಿತ್ತ ಪರಮ ಪರುಷ ಪುರುಷೋತ್ತಮನು ನೀನೆ 17 ಅಕ್ಷಯವೆಂದು ರಕ್ಷಿಸಿ ಸಭೆಯೊಳು ದ್ರೌಪದಿ ಕರುಣಕಟಾಕ್ಷದಿ ಸಲಹಿದ ಭಕ್ತವತ್ಸಲನಾಗಿ ಗಜೇಂದ್ರಗೆ ಅಧೋಕ್ಷಜ ನೀನೆ 18 ನರನಾರಿಯು ನಾಂಟೀಶರನಾಗಿ ನಖಮುಖದಲಿ ಹಿರಣ್ಯಕನ ಸೀಳಿ ಭಕ್ತಪ್ರಹ್ಲಾದಗ ಒಲಿದು ಸ್ತಂಭದಿ ಪ್ರಕಟಿಸಿದ ನರಸಿಂಹನು ನೀನೆ 19 ಅನಿಳ ಸ್ನೇಹಿತ ಅಜಗ್ನಾನಗ ಒಲಿದು ಅಹಲ್ಯಾ ಶಾಪ ವಿಮೋಚನ ಮಾಡಿದ ನೆಚ್ಚಿದ ಧ್ರುವನ ನಿಜ ಭಕ್ತಿಗೆ ಒಲಿದು ಅಚಲ ಪದವಿತ್ತುಚ್ಯುತ ನೀನೆ 20 ಜಗದೊಳು ಭಕ್ತಜನರಿಗೆ ಒಲಿದು ಜಾಹ್ನವಿ ನಿರ್ಮಿಸಿ ಜನಕನ ಸಲಹಿದ ಸಾಧು ಸಜ್ಜನ ಮುನಿ ಸಂಜೀವನ ಜಾನಕೀಪತಿ ಜನಾರ್ಧನನು ನೀನೆ 21 ಅಂಗದಗೊಲಿದಾನಂದವನಿತ್ತು ಕುಂದದೆ ಕರೆದುಪಮನ್ಯುನ ಸಲಹಿದ ದಿನಕರ ಚಂದ್ರ ಕಳಿಯಗಳಿತ್ತು ಇಂದ್ರಗೆ ಒಲಿದ ಉಪೇಂದ್ರನು ನೀನೆ 22 ಧರೆಯೊಳು ಭಕ್ತನ ಜನ್ಮವು ಹರಿಸಿ ಹರಿಶ್ಚಂದ್ರನ ಕ್ಲೇಶವು ಪರಿಹರಿಸಿದ ಸುರಮುನಿಗೊಲಿದ ಶ್ರೀ ಹರಿಯು ನೀನೆ 23 ಕಾಳಿ ಮಥನವು ಮಾಡಿ ಕರುಣದಿ ಸುರರಿಗೆ ಅಮೃತವನಿತ್ತು ಸಲಹಿದ ಕಲ್ಕ್ಯಾವತಾರದ ಲೀಲೆಯ ತೋರಿದ ಕಪಟ ನಾಟಕ ಶ್ರೀ ಕೃಷ್ಣನು ನೀನೆ 24 ಸಂಧ್ಯಾನದ ಸಾಹಾಯವನಿತ್ತು ಕಾಯದಿ ಸದ್ಗತಿ ಸಾಧನದೋರಿದ ನರಕೀಟಕ ಮಹಿಪತಿ ತಾರಕ ಗುರುಮೂರ್ತಿಯ ಪರಮ ದಯಾನಿಧಿಯು ನೀನೆ 25
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೀನೆ ದಯಾಸಿಂಧು ದೀನಜನರ ಬಂಧು ಧ್ಯಾನಿಪ ಭಕುತರ ಪ್ರಾಣಪದಕನೆ ರಂಗ ಪ ತೊಳಲಿಬಳಲುವ ಮಾನರಕ್ಷಿಸು ಜಾನಕೀಶ ಅ.ಪ ಎಷ್ಟುಪರಿ ಅನೃತವನಾಡಿದೆ ಈ ಹೊಟ್ಟೆಗಾಗಿ ಕೆಟ್ಟ ಕೃತ್ಯಮಾಡಿ ನಾ ದಣಿದೆ ಇ ನ್ನೆಷ್ಟುದಿನ ಈ ದುಷ್ಟ ಬವಣೆ ಎನಗೆ ಸ್ಥಿರವಿದೇ ಭ್ರಷ್ಟನಾಗುಳಿದೆ ಕೊಟ್ಟ ಒಡೆಯರು ಬಿಡದೆ ಕಟ್ಟಿಕಾಡ್ವರು ನಿಲ್ಲಗೊಡದೆ ಇಷ್ಟ ಸತಿಸುತರ್ಹೊಟ್ಟೆಗಿಲ್ಲೆಂದಟ್ಟಿ ಬಡಿವರು ಬಿಟ್ಟುಬಿಡದೆ ಬಿಟ್ಟಿದುಡಿದೆಷ್ಟು ಬಳಲಲಿ ಸೃಷ್ಟಿಗೀಶ ದಯಾದೃಷ್ಟಿಯಿಂ ನೋಡೋ ಕೃಷ್ಣ 1 ಮೋಸಹೋದೆ ಬಲು ಭ್ರಮಿಸದ್ದನು ಭ್ರಮಿಸಿ ತುಸು ಕರುಣವಿಲ್ಲದೆ ಘಾಸಿಯಾದೆ ಮಾತೆಪಿತರ ಮನ ನೋಯ್ಸಿ ವ್ಯಸನಕೂಪದಿ ವಾಸಮಾಡಿದೆ ಕಾಸುಹಣಬಯಸಿ ಅಧಮಸುಖನೆನೆಸಿ ಆಸೆÀಯೆಂಬುವ ಪಾಶ ಎನ್ನನು ನಾಶಮಾಡಿತು ಮುಸುರೆಯನು ಕಟ್ಟಿ ಭಾಷೆ ಕೆಡಿಸಿ ದೋಷಕೆಳಸಿತು ದೋಷ ಗಣಿಸದೆ ಶ್ರೀನಿವಾಸ ಜಗದೀಶ ಕೇಶ 2 ಪಾಪಲೋಪನೆ ಶ್ರೀಶ ಶ್ರೀರಾಮ ಕೃಪೆಯಿಂದ ನೋಡೊ ಪಾಪಿಯಿವನೆಂದು ಮರೆಯದಿರು ಪ್ರೇಮ ಹೇ ಪರಮನೆನ್ನಯ ಪಾಪರಾಶಿಯ ಕಳೆದುಕೊಡಲಿ ಕ್ಷೇಮ ಹೇ ಪರಬ್ರಹ್ಮ ಸ್ಥಾಪಿಸೆನ್ನಯ ಉದರಕಮಲದಿ ಶ್ರೀಪತಿಯೆ ನಿಮ್ಮ ನಾಮ ಅಮೃತ ತಾಪಬಿಡಿಸದೆ ಗಜವ ಸಲಹಿದೆ ಶಾಪದಿಂ ಪೊರೆದಂಬರೀಷನ ದ್ರುಪದನುಜಳ ಮಾನಕಾಯ್ದಾಪತ್ತು ಬಾಂಧವ ಭಕ್ತವತ್ಸಲ ದೇವ 3
--------------
ರಾಮದಾಸರು
ನೀನೆ ನಮ್ಮ ಕಾವ ಕರುಣನು ಶ್ರೀನಾಥ ಪೂರ್ಣ ನೀನೆ ನಮ್ಮ ಕಾವ ಕರುಣನು ಧ್ರುವ ನೀನೆ ನಮ್ಮ ಕಾವ ಕರುಣ ಭಾನುಕೋಟಿತೇಜಪೂರ್ಣ ದಾತ ಶ್ರೀನಾಥ ಸದ್ಗುರುರಾಯ ರನ್ನ 1 ನೇಮದಿಂದ ಭೋರ್ಗರೆವ ನಾಮ ನಿಮ್ಮ ಕಾಮಧೇನು ಕಾಮ್ಯ ಪೂರಿಸುವ ನಿಮ್ಮ ಕರುಣ ಕಲ್ಪವೃಕ್ಷವಯ್ಯ 2 ಹೇಮರೌಪ್ಯ ರತ್ನವಾದ ದಯವೆ ನಿಮ್ಮ ನವನಿಧಿಯ ನಿಮ್ಮ ಅಭಯಪೂರ್ಣವೆನಗೆ ಅಷ್ಟಮ ಸಿದ್ಧಿವಯ್ಯ3 ಸಂಜೀವ ನಮಗೆ ಸೌಖ್ಯನಿತ್ತು ಹೊರೆವ ನಿಮ್ಮ ಸ್ಮರಣೆ ಚಿಂತಾಮಣಿಯ 4 ತಂದೆಯಹುದೊ ಮಹಿಪತಿಯ ಚೆಂದಮಾಡುವ ಬಂದು ಜನ್ಮ ಬಂಧು ಬಳಗೆ ನೀನೆ ಅಯ್ಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೀನೆ ನಮ್ಮ ಕುಲದೈವ ಅನುದಿನಾರಾಧಿಸುವ ಮುನಿಜನರೊಂದಿಸುವ ಘನಗುರು ದೇವಾದಿ ಶ್ರೀದೇವ 1 ಮಾಡಲರಿಯೆ ನಿಮ್ಮ ನಿಜಭಕ್ತಿ ಕೂಡಿಕೊಳ್ಳಯ್ಯ ಸೇವೆ ಶ್ರೀಪತಿ 2 ಮಾತಿಗಿಲ್ಲವೊ ಅನ್ಯಥಾ ಸ್ವಾಮಿ ನೀನೆವೆ ನಮ್ಮ ದೈವತ ಬ್ರಹ್ಮಾದಿಗಳಿಗೆ ಸನ್ನತ 3 ಅಯ್ಯ ನಿಜಬಾಲಕ ನಾ ನಿಮ್ಮ ತಾಯಿತಂದೆಯು ನೀನೆ ನಮ್ಮ ಸಾಹ್ಯಮಾಡುವ ಸರ್ವೋತ್ತಮ 4 ದೈವ ನೀನಹುದೊ ಸಾಕ್ಷಾತ ಕೈವಲ್ಯನಿಧಿಯು ಶ್ರೀನಾಥ ಭಾವಿಸುವರ ಭಾವಪೂರಿತ ಮಹಿಪತಿಯ ಪ್ರಾಣನಾಥ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೀನೆ ನಿರ್ದಯನಾಗಲಿನ್ನೇನು ಗತಿಯೋ ದೀನಜನಮಂದಾರ ಜಾನಕೀ ಮನೋಹರ ಪ ಪಿತ ಮಾತೆಯರ ಸುತರ ಹಿತದಿಂದ ನೋಡದಿರೆ ಕ್ಷಿತಿಯೊಳಗಿತರರು ಹಿತದಿಂ ನೋಡುವರೊ ಪಿತ ನೀನೆ ಮೂಜಗಕೆ ನುತಿಸುವ ಭಕ್ತರ ಸ್ಥಿತಿ ವಿಚಾರಿಸದಿರೆ ಗತಿಯೇನು ಮುಂದೆ 1 ಲೋಕ ಎರಡೇಳು ನೀ ಕರುಣದೊಡಲೊಳಿಟ್ಟು ಜೋಕೆ ಮಾಡುವಿ ನಿನ್ನೊಳ್ಯಾಕೆ ದಯವಿಲ್ಲ ಬೇಕೆಂದು ನಿನ್ನಪಾದ ಏಕಭಕ್ತಿಲಿ ನುತಿಪೆ ಮೂಕನಾಗಲು ಬೇಡ ಶ್ರೀಕರನೆ ದಯಮಾಡೊ 2 ನರಜನ್ಮವಿತ್ತೆನಗೀಪರಿ ಬವಣೆ ಬರಲಿಕ್ಕೆ ಕರುಣವನಿತು ನಿನಗೆ ಬರಲಿಲ್ಲವೇನೋ ಹರಿಯೆನ್ನ ಬರೆಹ ಹೀಗೆ ಬರೆದದ್ದೇ ತಪ್ಪು ನೀ ಮರೆಯಾದರೆ ಬಿಡದಯ್ಯಾ ತ್ವರೆಬಾರೋ ಶ್ರೀರಾಮ 3
--------------
ರಾಮದಾಸರು
ನೀನೆ ಪಾಲಿಸೊ ಎನ್ನ ಮಾರುತಿರಾಯ ಪ ನೀನೆ ಪಾಲಿಸೊ ಮಹಾನುಭಾವನೆ ಸದಾ ಙÁ್ಞನ ಭಕುತಿನಿತ್ತು ಮಾನಾದಿ ನೀ ವೇಗ ಅ.ಪ ನಿನ್ನ ಆಧಾರ ಲೋಕಾ ಜನರು ಸದಾ ನಿನ್ನ ಭಜಿಸುವೊರೇಕಾ ಪ್ರಕಾರದಿ ನಿನ್ನ ಸೇವಿಪರನೀಕಾ ಸಂಗಾವಿತ್ತು ನಿನ್ನ ಧ್ಯಾನಿಪ ವಿವೇಕಾ ಮತಿಯನಿತ್ತು ಮನ್ನಿಸೊ ಮಜ್ಜನಕಾ ನಿನ್ನಾ ಭಜಿಪರಿಗೆ ಅನ್ಯಾಲೋಕಗಳುಂಟೆ ಘನ್ನಾ ಹರಿಯ ಲೋಕವನ್ನೆ ಸೇರುವರಯ್ಯಾ 1 ರಂತರ ದೊಳಗಿಹನು ಎಂದು ನಿನ್ನಾ ನಂತ ರೂಪಗಳನ್ನು ಭಜಿಸುವ ಗಂತು ಜ್ಞಾನವನ್ನು ನೀಡುತ ಜನ ರಂತರದಲಿ ನೀನು ನಿಂತು ಪಾಲಿಸಿ ಜೀವರಂತೆ ಗತಿಯನಿತ್ತು ಕಂತುºರಾದ್ಯರ ಸಂತತಿ ವಂದ್ಯನೆ 2 ಸೀತಾರಾಮನ ಪಾದವಾ ಸೇವಿಸಿ ನಿತ್ಯ ಪಾತಕಾಂಬುಧಿಗೆ ದಾವಾನಂತೆ ಜಗದಿ ಈ ತೆರದಲಿ ಮೆರೆವಾನೆಂದು ಈಗ ಸೋತು ನಾ ಬಂದೆ ದೇವಾ ನೀನೇ ಎನ್ನ ಮಾತು ಲಾಲಿಸೊ ದ್ಯುಧವಾ ಮಾತರಿಶ್ವ ನಿಜ ದೂತಾನು ನಾನಯ್ಯ ನೀತ ಗುರು ಜಗನ್ನಾಥವಿಠಲಪ್ರಿಯ 3
--------------
ಗುರುಜಗನ್ನಾಥದಾಸರು
ನೀನೆ ಬಲ್ಲಿದನೋ ರಂಗಾನಿನ್ನ ದಾಸರು ಬಲ್ಲಿದರೋ ಪ ನಾನಾ ತೆರದಿ ನಿಧಾನಿಸಿ ನೋಡಲುನೀನೆ ಭಕ್ತರಾಧೀನನಾದ ಮ್ಯಾಲೆ ಅ.ಪ ಪರಮ ಪುರುಷ ಪರಬೊಮ್ಮನೆಂದೆನುತಲಿನಿರುತದಿ ಶ್ರುತಿಯು ಕೊಂಡಾಡಲು ನಿನ್ನನುನರ ಧರ್ಮಜನರ ಮನೆಯ ಒಳಗೆ ನಿಂ-ದ್ಹರುಷದಿಂದ ಕರೆದಲ್ಲಿ ಪೋದ ಮ್ಯಾಲೆ 1 ಪುರುಹೂತ ಸಹಿತ ಸುರ-ವ್ರತವು ನಿನ್ನನು ವಾಲೈಸುತಿರೆಭೂತಳದೊಳು ಸಂಪ್ರೀತಿಯಿಂದಪಾರ್ಥನ ರಥಕೆ ನೀ ಸೂತನಾದ ಮ್ಯಾಲೆ 2 ಜಲಜಭವಾಂಡದೊಡೆಯನೆಂದೆನಿಸುವಬಲು ಬಲು ದೊಡ್ಡವನಹುದಾದಡೆಒಲಿದು ಸದ್ಗತಿಯೀವೆ ಅನುದಿನದಲಿ ನೀಬಲಿಯ ಮನೆಯ ಬಾಗಿಲ ಕಾಯ್ದ ಮ್ಯಾಲೆ 3 ಧುರದೊಳು ಪಣೆಯನೆಚ್ಚೊಡೆದ ಭೀಷ್ಮನಮರಳಿಪುದೆನುತಲಿ ಚಕ್ರವ ಪಿಡಿಯಲುಹರಿ ನಿನ್ನ ಕರುಣದ ಜೋಡÀು ತೊಟ್ಟರಲವ -ನಿರವ ಕಂಡು ಸುಮ್ಮನೆ ತಿರುಗಿದ ಮ್ಯಾಲೆ 4 ತರಳನು ಕರೆಯಲು ಒಡೆದು ಕಂಬದಿ ಬಂದುನರಮೃಗ ವೇಷದಿ ಭಕುತರ ತೆತ್ತಿಗನಾದೆಕರುಣದಿ ಸಲಹೋ ಶ್ರೀರಂಗವಿಠಲ ನಿನ್ನಸ್ಮರಿಪರ ಮನದಲಿ ಸೆರೆಯ ಸಿಕ್ಕಿದ ಮ್ಯಾಲೆ 5
--------------
ಶ್ರೀಪಾದರಾಜರು
ನೀನೆ ರಕ್ಷಿಸೊ ಎನ್ನ ಪೂರ್ಣ ನೀ ಸ್ವಾನುಭವಸುಖದಾಯಕ ಅನುದಿನಪಾಲಕ ಅನಾಥಜನ ನೀ ರಕ್ಷಕ 1 ನ್ಯೂನಪೂರ್ಣಕಾಗುತಿಹ್ಯ ನಿಜದೀನಬಂಧು ಶಾಶ್ವತ ಘನ ದಯ ಸದೋದಿತ ನೀನೆಮ್ಮ ಸುಸ್ವಹಿತ 2 ತಂದೆತಾಯಿಯು ನೀನೆ ಸದ್ಗುರು ಬಂಧುಬಳಗ ಸನಾತನ ಭೂಷಣ ನೀನೆ ಪಾಲಿಸೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೀನೆ ರಕ್ಷಿಸೋ ಎನ್ನನು ಕೃಪೆಮಾಡಿ ಜ್ಞಾನ ಮೂರುತಿ ಗುರುವರನೆ ದಿಗಂಬರ ಪ ಕಾಲ ಹಿಡುದು ಬೇಡಿ ಕೊಂಡುಪದೇಶವ ಕೇಳಿಹೆ ನಾನು ದಿಗಂಬರ ಮೂರ್ತಿಯೆ 1 ವಿಲಾಸದಿ ಜಗವೆ ಚಿದಂಬರನೆಂದು ಮೂರ್ತಿ 2 ಈ ಧರೆಯ ಜನರನು ಪವಿತ್ರಿ ಕರಿಪ ಪುಣ್ಯಪುರುಷರೆಂಬುದನು ಬಲ್ಲವರೆ ಬಲ್ಲರು ಮೂಢ ಮೂರ್ತಿ 3 ಕಣ್ಣಾರೆ ಕಂಡೆ ನಿಂದಿನ ದಿನವೆನ್ನ ಪುಣ್ಯೋದಯದಲಿ ನಿಮ್ಮ ದರುಶನವೆನಗೆ ಸಂಪೂರ್ಣವಾಯಿತು ಕೃತಕೃತ್ಯನಾದೆನು ಮೂರ್ತಿ 4 ನಂಬಿದೆ ನಿಮ್ಮ ಪಾದಾಂಬುಜವನು ಕರುಣಾಂಬುಧಿ ಕಾಯೊ ಕಮಲ ಮಿತ್ರತೇಜ ಸುಖಾಂಬುಧಿ ರೂಪ ನಿರಂಜನಗುರುವೆ ಸೂನು ಮೂರ್ತಿ 5
--------------
ಕವಿ ಪರಮದೇವದಾಸರು
ನೀನೆ ಸಕಲವೆನ್ನ ಸ್ವಾಮಿ ಶ್ರೀ ಹರಿಯೆ ದೀನ ದಯಾಳು ನೀನೆವೆ ನಿಜಧೊರಿಯೆ ಧ್ರುವ ತಂದೆ ತಾಯಿಯು ನೀನೆ ಬಂಧುಬಳಗ ನೀನೆ ಹೊಂದಿಕಿ ಹೊಲಬು ನೀ ಎನ್ನ ನೀನೆ ಎಂದೆಂದು ಸಲಹುವಾನಂದ ಮೂರುತಿ ನೀನೆ ಕುಂದ ನೋಡದಿಹ್ಯ ಮಂದರಧರ ನೀನೆ 1 ಕುಲದೈವವು ನೀನೆ ಮೂಲಪುರಷ ನೀನೆ ಒಲಿವ ಭಾಗ್ಯದ ಫಲಶ್ರುತಿಯು ನೀನೆ ಸಾಲವಳಿಯು ನೀನೆ ಹಲವು ಭೂಷಣ ನೀನೆ ಕುಲಕೋಟಿ ಬಳಗಾದ ಭಕ್ತವತ್ಸಲ ನೀನೆ 2 ಧನದ್ರವ್ಯಾರ್ಜಿತ ನೀನೆ ಘನಸೌಖ್ಯಾಕರ ನೀನೆ ಅನುದಿನಲಿಗನುಕೂಲ ನೀನೆ ದೀನ ಮಹಿಪತಿಸ್ವಾಮಿ ಭಾನುಕೋಟಿ ತೇಜನೆ ಮನೋಹರ ಮಾಡುವ ಮಹಾಮಹಿಮ ನೀನೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೀನೆ ಸಜ್ಜನರ ಬಂಧು ಪ ಕರಿಮರಿಬಳಗ ಬಂದೊದಗಿದರೇನು ಪರಿಪರಿ ಕ್ಲೇಶವ ಬಿಡಿಸಲಿಲ್ಲ ಹರಿ ನೀನೆ ಗತಿಯೆಂದರೆ ಆ ಕ್ಷಣದಲ್ಲಿ ಕರಿಬಂಧನ ಪರಿಹರಿಸಿದೆ ಕೃಷ್ಣ 1 ಪಿತರು ಮಾತೆಯರಿದ್ದರೇನು ಸುತರಾಪತ್ತಿಗೊದಗಲಿಲ್ಲ ಗತಿ ನೀನೆಂದರೆ ಧ್ರುವ ಪ್ರಹ್ಲಾದರಿ- ಗ್ಹಿತ ಮಾಡಿದೆ ಶ್ರೀಪತಿ ಪರಮಾತ್ಮ 2 ವಲ್ಲಭರೈವರಿದ್ದರೇನು ವಸನ ದ್ರೌಪದಿಗುಡಿಸಲಿಲ್ಲ ಫುಲ್ಲಾಕ್ಷನೆ ಗತಿಯೆಂದರೆ ನೀ ತಡ- ವಿಲ್ಲದಲಕ್ಷಯ ನೀಡಿದೆ ದೊರೆಯೆ 3 ಮನೆಧನ ಧಾನ್ಯಗಳಿದ್ದರು ಧನಂಜಯ- ನ್ವನವಾಸಗಳನು ಬಿಡಿಸಲಿಲ್ಲ ವನಜಾಕ್ಷನೆ ವಾರಣಾವತಿ ದೊರೆತನ ವಿನಯದಿ ಕೊಟ್ಟಿದ್ದಿಂದಿರಾಪತಿಯೆ 4 ಭವ ಘೋರ ದುರಿತ ಯಮಬಾಧೆಗಳ ತಪ್ಪಿಸುವೋರಿಲ್ಲ ಶ್ರೀರಮಣನೆ ಭೀಮೇಶಕೃಷ್ಣನೆಂದು ಸಾರುವರಿಗೆ ಕರುಣಾವಾರಿಧಿ ಹರಿಯೆ 5
--------------
ಹರಪನಹಳ್ಳಿಭೀಮವ್ವ
ನೀನೆಂನ ಕಾಯಬೇಕೊ ಕೇಶವನೇ ನೀನೆಂನ ಸಲಹಬೇಕು ಪ ನೀನೆಂನ ಕಾಯದಿದ್ದರೆ ಕಾವರಾರಯ್ಯಾ ನಾನಂಬಿ ಮರೆಹೊಕ್ಕೆ ಶರಣರಕ್ಷಕನೇ ಅ.ಪ. ಮುಂದೆ ನೋಡಿದರೆ ಹೆಬ್ಬಾವು ನುಂಗುತಲಿದೆ ಬಂದು ಬಾಂಧವರೆಲ್ಲ ತಲೆಯ ಮೇಲೆರಿವರು ಬಂದೆನ್ನ ಕಾಯ್ವರನೊಬ್ಬ ಕಾಣೆ 1 ನಂಬುತ್ತ ಗಿಡವೇರೆ ಗಿಡವು ಬಾಗುತಲಿದೆ ನಂಬಿದ ಹರಿಗೋಲು ಮುಳುಗುತ್ತಲಿದೆಯೋ ತುಂಬಿದ ಪಟ್ಟಣ ಸೂರೆಯಾಗುತಲಿದೆ ಕಂಬನಿ ನೀಗುವ ಪ್ರಾಣೆಯಕಾಣೆ2 ಪಶುಗಳ ಕಾಯ್ದೆ ನೀ ಬಾಲ ಕ್ರೀಡೆಯೊಳಾಗ ವಿಷದ ಕಾಳಿಂಗನ ಸೊಕ್ಕನು ಮುರಿದೇ ದಶರೂಪಗಳ ತಾಳ್ದು ಸುಜನರ ಪೊರೆದಂತೆ ಶಿಶುವನು ರಕ್ಷಿಸೈ ಚನ್ನಕೇಶವನೇ 3
--------------
ಕರ್ಕಿ ಕೇಶವದಾಸ
ನೀನೆನನ್ಹುಟ್ಟಿಸಿದ್ಯೋ ನಾನೆ ನಿನ್ನ್ಹುಟ್ಟಿಸಿದೆನೋ ಜಾನಕೀಶ ನೀನೆನಗೆ ಸಿಟ್ಟಾಗದ್ಹೇಳೈ ಪ ತಂದೆ ಮಗನ್ನ್ಹೆತ್ತನೋ ಮಗ ತಂದೆನ್ಹೆತ್ತನೋ ತಂದೆ ಮಗನ್ನೀರ್ವರನು ತಾಯಿ ಹೆತ್ತಳೇನೋ ತಂದೆತಾಯಿಮಗತ್ರಯರು ಬಿಂದಿನಲುದ್ಭವಿಸಿದರೆ ಅಂದಮಾದ ಸಂಧಿದನು ಚೆನ್ನಾಗಿ ಬಿಡಿಸೈ 1 ಬೀಜದಿಂದ್ವøಕ್ಷಾಯ್ತೋ ವೃಕ್ಷದಲಿ ಬೀಜಾಯ್ತೋ ಬೀಜವ್ಯಕ್ಷಗಳೆರಡು ಹಣ್ಣಿನೋಳ್ಹುಟ್ಟಿದವೇ ಬೀಜವೃಕ್ಷ್ಹಣ್ಣುಮೂರು ಭೂಮಿಯೋಳ್ಹುಟ್ಟಿದವೇ ಸೋಜಿಗದ ಸಂಧಿದನು ನೈಜದಿಂ ಬಿಡಿಸೈ 2 ಜೀವದಿಂ ಮಾಯವೋ ಮಾಯದಿಂ ಜೀವವೋ ಜೀವಮಾಯಗಳೆರೆಡು ಭಾವದ್ಹುಟ್ಟಿಹ್ಯವೋ ಜೀವ ಮಾಯ ಮೂರು ಕಾಯದಲಿ ಜನಿಸಿದವೋ ನ್ಯಾಯದ ಸಂಧಿದನು ದಿವ್ಯವಾಗಿ ಬಿಡಿಸೈ 3 ಉತ್ಪತ್ತಿಯಿಂ ಲಯವೋ ಲಯದಿಂದ ಉತ್ಪತ್ತ್ಯೋ ಉತ್ಪತ್ತಿಲಯವೆರಡು ಸ್ಥಿತಿಯಿಂ ತೋರುವವೋ ಉತ್ಪತ್ತಿಲಯಸ್ಥಿತಿ ತತ್ವದೊಳು ಜನಿಸಿಹ್ಯವೋ ಗುಪ್ತದ ಸಂಧಿದನು ನಿರ್ತಾಗಿ ಬಿಡಿಸೈ 4 ವೇದದಿಂ ಸಾಧನವೋ ಸಾಧನದಿಂ ವೇದವೋ ವೇದಸಾಧನವೆರಡು ನಾದದ್ಹುಟ್ಟಿಹ್ಯವೋ ವೇದಸಾಧನ ನಾದಶೋಧದಿಂ ಜನಿಸಿಹ್ಯವೋ ಮೋದದ ಸಂಧಿದನು ಬೋಧದಿಂ ಬಿಡಿಸೈ 5 ಪಿಂಡಾಂಡದಿಂ ಬ್ರಹ್ಮಾಂಡೋ ಬ್ರಹ್ಮಾಂಡದಿಂ ಪಿಂಡಾಂಡೋ ಪಿಂಡಾಂಡಬ್ರಹ್ಮಾಂಡೆರಡು ಖಂಡನಿಂದ್ಹುಟ್ಟಿಹ್ಯವೋ ಪಿಂಡಾಂಡಬ್ರಹ್ಮಾಂಡ ಖಂಡನ್ಯೋಗಿಯಲಿ ಜನಸಿಹ್ಯವೊ ಗಂಡಾಂತರದ ಸಂಧಿದನು ಖಂಡಿತದಿಂ ಬಿಡಿಸೈ 6 ಕಾಮದಿಂ ನೇಮವೋ ನೇಮದಿಂ ಕಾಮವೋ ಕಾಮನೇಮಗಳೆರಡು ನಿತ್ಯದ್ಹುಟ್ಟಿಹ್ಯವೋ ನಿತ್ಯ ಶ್ರೀರಾಮ ನಿನ್ನಾಟವೋ ಈ ಮಹಸಂಧ್ಯೆನಗೆ ಪ್ರೇಮದಿಂ ಬಿಡಿಸೈ 7
--------------
ರಾಮದಾಸರು