ಒಟ್ಟು 4759 ಕಡೆಗಳಲ್ಲಿ , 126 ದಾಸರು , 3131 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯಾಕೆ ನಿನ್ನ ಮನಕೆ ಬಾರೆನೋ ಹೇ ವೇಂಕಟೇಶ ಪಕಾಕುಬುದ್ಧಿ ಎನಗಿಲ್ಲೋ ಹೇ ವೆಂಕಟೇಶಾಅ.ಪಬೆದರಿ ನಿನ್ನ ನೊದೆಯಲಿಲ್ಲೊ ಹೇ ವೆಂಕಟೇಶಾ 1ತಿನಿಸಿದ ತರ ನಾ ತಿನಿಸಲಿಲ್ಲವೋ ಹೇ ವೆಂಕಟೇಶಾ 2ಭಂಡಿ ಹೊಡಿ ಎಂದು ನಡೆಸಲಿಲ್ಲವೋ ಹೇ ವೆಂಕಟೇಶಾ 3ಕಟ್ಟಿಗೆಯ ಹೊರಿಸಲಿಲ್ಲವೋ ಹೇ ವೆಂಕಟೇಶಾ 4ಕೆಟ್ಟ ಕಾರ್ಯ ಮಾಡಿಲಿಲ್ಲವೊ ಹೇ ವೆಂಕಟೇಶಾ 5ಮುಟ್ಟಿ ನಿನ್ನ ಭಜಿಸಿದ ಫಲವೇನೋ ಹೇ ವೆಂಕಟೇಶಾ 6ದಾತಶ್ರೀ ಗುರುಜಗನ್ನಾಥ ವಿಠಲನೆಂದು ನಾಪ್ರೀತಮನದಿ ಬಂದೆನೋ ವೆಂಕಟೇಶಾ 7
--------------
ಗುರುಜಗನ್ನಾಥದಾಸರು
ಯಾಕೆ ಮೂಕನಾದೆಲೋ ಗುರುವೆ ನೀ -ನ್ಯಾಕೆ ಮೂಕನಾದ್ಯೋ ಪಸಾಕುವೊರಾರಯ್ಯಾ ಶ್ರೀಕರ ರಾಘವೇಂದ್ರ ಅ.ಪಮಂದಿಯಂದಿದ ಎನ್ನ - ಮಂದನ ಮಾಡೀಗ 1ಬೇಕಾಗದಿದ್ದರೆನ್ನ - ಯಾಕೆ ಕೈಯಾ ಪಿಡಿದಿಕಾಕುಜನರೊಳೆನ್ನ- ನೂಕಿ ಬಿಟ್ಟು ಈಗ2ನಿನ್ನಂಥ ಕರುಣಿಲ್ಲ - ಎನ್ನಂಥ ಕೃಪಣಿಲ್ಲಘನ್ನ ಮಹಿಮ ನೀ - ಎನ್ನನು ಬಿಟ್ಟೀಗ 3ಇಂದುನೀ ಬಿಟ್ಟರೆನ್ನ- ಮುಂದೆ ಕಾಯುವರ್ಯಾರೋ4ಜನ್ಯಾನು - ನಾನಯ್ಯ - ಎನ್ನ ಜನಕನು ನೀನುಮನ್ನಿಸು ನೀ ನಿತ್ಯಾ - ನನ್ನ ಶರಣನಲ್ಲೆ 5ಈಗ ಪಾಲಿಸದರೆ-ಯೋಗಿಕುಲವರ್ಯರಾಘವೇಂದ್ರನೇಭವ- ಸಾಗುವಧ್ಯಾಗಯ್ಯ6ನಾಥನು ನೀನಯ್ಯಾ - ನಾಥನು ನಾನಯ್ಯಾಪಾಥೋಜ ಗುರುಜಗ -ನ್ನಾಥ ವಿಠಲ ಪ್ರೀಯ 7
--------------
ಗುರುಜಗನ್ನಾಥದಾಸರು
ಯಾತರ ಬಲ್ಲತನವೊ ಕೃಷ್ಣಯ್ಯ ನಿನಗ್ಯಾತರ ಬಲ್ಲತನವೊ ಪ.ಯಾತರ ಬಲ್ಲತನನಾಥರ ನಮ್ಮ ಸನಾಥರ ಮಾಡಿ ಸಂಪ್ರೀತಿಯ ಬಡಿಸದಿನ್ಯಾತರ 1ಬಿರುದಂತೆ ಭಕುತರ ಪೊರೆವುದು ಗಡ ನಿನ್ನಸ್ಮರಣೆಗೆ ಮರೆವಿತ್ತು ದುರಿತಕೊಪ್ಪಿಸುವುದಿನ್ಯಾತರ 2ಬಲ್ಲತನದ ಗುರುತೆಲ್ಲ ದೇಶದೊಳು ನನ್ನಲ್ಲಿ ಅಜ್ಞಾನದ ಬಳ್ಳಿಯ ತೊಡಕಿಸೂದ್ಯಾತರ 3ನಿಜರವಮಾನದ ಕುಜಕೆ ಪರಶುರಾಮತ್ರಿಜಗವಂದಿತ ನಿನ್ನ ಭಜಕರೊಳಿಡಲೊಲ್ಲದ್ಯಾತರ 4ದುರಿತಗಿರಿತ ಅರಿಗಿರಿಗಂಜೆ ನಾಮವಜ್ಜರವಿರೆ ಪ್ರಸನ್ವೆಂಕಟರಸ ಮನ್ನಿಸಲೊಲ್ಲದ್ಯಾತರ 5
--------------
ಪ್ರಸನ್ನವೆಂಕಟದಾಸರು
ಯಾತರಭಿಜÕತೆ ಯಾತರ ಭಕುತಿ ಶ್ರೀನಾಥಾಂಘ್ರಿ ವಿಮುಖಾದ ಸೂತಕಿಗಯ್ಯ ಪ.ಕಪಟನಾಟಕಸೂತ್ರಅನಂತಗುಣನಿತ್ಯತೃಪುತಮುಕುತನಿತ್ಯಸ್ವತಂತ್ರಗೆಉಪಾಧಿಸಗುಣನೆಂದನಾದಿ ನಿರ್ಗುಣನೆಂದುಉಪಾಸನೆವಿಡಿದ ಸೋಹಂಭಾವದವಗೆ 1ಅಪುಶಾಯಿಅಗಣಿತಆನಂದ ಬ್ರಹ್ಮಾದಿತಾಪಸರರಸ ಪುರುಷೋತ್ತಮಗೆಉಪಚಾರಕ್ಹರಿಯೆಂದು ಹರಕರ್ಮ ರವಿಗಣಾಧಿಪರೆ ಉತ್ತಮರೆಂಬ ಕಪಟಮಾನಿಸಗೆ 2ಪೂರ್ಣಪ್ರಜÕರ ಮತ ನವಭಕುತಿಗಳನಿರ್ಣಯದಲಿ ತರತಮವಿಲ್ಲದೆಅರ್ಣವಕಲಿತೇನಿನ್ನಾಕಾಶ ಚರಿಸೇನುಪೂರ್ಣ ಪ್ರಸನ್ವೆಂಕಟೇಶನೊಪ್ಪಿರದೆ 3
--------------
ಪ್ರಸನ್ನವೆಂಕಟದಾಸರು
ಯಾರೂ ಸಂಗಡ ಬಾಹೋರಿಲ್ಲನಾರಾಯಣ ನಿಮ್ಮ ನಾಮವೊಂದಲ್ಲದೆ ಪ.ಹೊತ್ತು ನವಮಾಸ ಪರಿಯಂತರವು ಗರ್ಭದಲಿಹೆತ್ತು ಬಲು ನೋವು ಬೇನೆಗಳಿಂದಲಿತುತ್ತು ಬುತ್ತಿಯ ಕೊಟ್ಟು ಸಲಹಿದಂಥ ತಾಯಿಅತ್ತು ಕಳುಹುವಳಲ್ಲದೆ ನೆರೆಬಾಹಳೆ 1ದೇವವಿಪ್ರರು ಅಗ್ನಿಸಾಕ್ಷಿಯಿಂದಲಿ ತನ್ನಭಾವಶುದ್ಧಿಯಲಿ ಧಾರೆಯೆರಿಸಿಕೊಂಡದೇವಿ ತನ್ನ ತಲೆಗೆ ಕೈಯಿಟ್ಟುಕೊಂಡು ಇನ್ನಾವ ಗತಿಯೆಂದೆನುತ ಗೋಳಿಡುವಳಲ್ಲದೆ 2ಮತ್ತೆ ಪ್ರಾಣನು ತನುವ ಬಿಟ್ಟು ಹೋಗುವಾಗಎತ್ತಿವನ ಹೊರಗೊಯ್ಧ ಹಾಕೆಂಬರುಎತ್ತಿದ ಕಸಕಿಂತ ಕಡೆಯಾಯಿತೀ ದೇಹವಿತ್ತವೆಷ್ಟಿದ್ದರೂ ಫಲವಿಲ್ಲ ಹರಿಯೆ 3ಪುತ್ರಮಿತ್ರರು ಸಕಲ ಬಂಧು ಬಳಗಗಳೆಲ್ಲಹತ್ತಿರ ನಿಂತು ನೋಡುವರಲ್ಲದೆಮೃತ್ಯುದೇವಿಯ ಬಂದು ಅಸುಗಳನು ಸೆಳೆವಾಗಮತ್ತೆ ತನ್ನವರಿದ್ದು ಏನು ಮಾಡುವರು 4ಯಮನ ದೂತರು ಬಂದು ಪಾಶಂಗಳನೆ ಎಸೆದುಮಮತೆಯಿಲ್ಲದೆ ಪ್ರಾಣ ಎಳೆಯುತಿರಲುವಿಮುಖನಾಗಿ ತಾನು ವ್ಯಥೆಯಿಂದ ಪೋಪಾಗಕಮಲಾಕ್ಷ ಪುರಂದರವಿಠಲ ನೀನಲ್ಲದೆ * 5
--------------
ಪುರಂದರದಾಸರು
ಯಾವ ಭಯವು ನಮಗೆ |ಶಂಕರ ದೇವನೊಲಿದು ಕಡೆಗೆ ಪಸಾವಧಾನದಿ ಸರ್ವಭಕ್ತ ಜನರಕಾವ|ದೇವ ದೇವೇಶ ಸರ್ವೇಶ ನೀನೊಲಿದರೆ ಅಪದುರಿತದ ಭಯವೇನಲೇ | ಶಂಕರ ನಿನ್ನ |ಸ್ಮರಿಸಲು ದೂರವಲೇ |ಮರಣದ ಭಯವೆನೆ | ಅಂತಕಾಂತಕ ನೀನು ||ಉರಗನ ಭಯವೆನೆ | ಗರಳಕಂಧರನೂ 1ಚೋರರ ಭಯವೇನೂ | ದಧಿಘೃತ |ಚೋರ ನಿನ್ನಯ ಸಖನೂ ||ನಾರೀ ಚೋರನ ದೇವ | ಧೀರಕೈರಾತನೀ |ಘೋರರಕ್ಕಸರೆನೆ | ತ್ರಿಪುರಸಂಹಾರ2ಮೃಗಪಕ್ಷಿ ಭಯವೆನಲೇ |ಸತಿಸುತಸಖ|ಖಗಮೃಗವೇರ್ದರೆಲೇ |ಜಗದೊಡತಿಯು ಲಕ್ಷ್ಮೀ | ಗಗ್ರಜನೆನಿಸಿಹೆ ||ಭಗಪೀಠನು ಧನ | ಮಾನಾಭಿಮಾನಕೇ 3ವಸನಕ್ಕೆ ಚರ್ಮಾಂಬರನೂ |ಸಂಸಾರವೆಂಬ ವ್ಯಸನಕೆ ದಿಗಂಬರನೂ ||ತೃಷೆಗೆ ಗಂಗಾಧರ | ಅಶನಕ್ಕೆ ಬಿಕ್ಷುಕನೀ |ಅಂಗ ಶೃಂಗಾರಕೆ | ಭಸ್ಮಲೇಪನನೂ 4ಪೊಗಳಲಳವೇ ನಿನ್ನಾ | ಮಹೇಶ್ವರ |ಜಗದಿ ಭಕ್ತರ ಸಂಪನ್ನಾ ||ಭೃಗುಲಾಂಛನಧರ ಗೋವಿಂದದಾಸನ |ಹಗಲಿರುಳೆನ್ನದೆಪೊರೆಯೋ ಮಹಾದೇವ 5
--------------
ಗೋವಿಂದದಾಸ
ಯೋಗವೆಂದರೆ ದಾವುದು ಮಾನಿಸಗೆಯೋಗವೆಂದರೆ ದಾವುದುನಾಗಶಯನನ ನಾಮ ಕೂಗುವುದೆ ಮಹಾಯೋಗ ಪ.ಪೂಸರಳನ ಬಲೆಗೆ ಸಿಲುಕಿ ದೃಢಆಸನಬಲಿದಹಗೆಹಾಸ್ಯವದನೆಯರ ಲೇಶ ಹಾರೈಸದೆದಾಸಾಗಿ ಹರಿಯ ಸದಾಧ್ಯಾಸವೆ ಮಹಾಯೋಗ 1ವಾಗಾದಿಂದ್ರಿಯ ಕಟ್ಟದೆ ಕುಂಭಕವೆಂದುಮೂಗಿನುಸಿರ ಕಟ್ಟಿದಭೋಗಬಯಸದೆ ತಾನಾಗಿ ಬಂದದನುಂಡುಲೋಗರ ಹಣ ಹೆಣ್ಣಿನ ತ್ಯಾಗವೆ ಮಹಾಯೋಗ 2ಭಾವಶುದ್ಧಿಯ ಮಾಡದೆ ಯೋಗ ಮಾರ್ಗದಠಾವ ಸಿದ್ಧವ ಮಾಡಿದದೇವ ಪ್ರಸನ್ವೆಂಕಟವರದನ ಸದ್ಭಾವುಕರ ಪಾದಾಬ್ಜಸೇವೆಯೆ ಮಹಾಯೋಗ 3
--------------
ಪ್ರಸನ್ನವೆಂಕಟದಾಸರು
ಯೋಗಿಯ ಭಾವವು ಆರಿಗು ತಿಳಿಯದುಯೋಗಿಯೆಂದೆನಿಪುದು ಸುಖವೋ ದುಃಖವೋಪನಾದವ ಸಾಧಿಸಿ ನಾದವ ಭೇದಿಸಿನಾದಾನಂದದಲಿ ಮುಳುಗಿರ್ದುನಾದಾಮೃತವನು ಸವಿಸವಿದುಂಬುವನಾದ ಮೂರುತಿಯವ ನರನೋ ಹರನೋ1ಅಂತರ್ಲಕ್ಷ್ಯ ಬಹಿರ್ಲಕ್ಷ್ಯವನೊಂದನು ತರಿಸಿದೆ ಸಮನಿಸುತಿರ್ದುಸಂತತ ಪೂರ್ಣಾನಂದದಿ ಮುಳುಗಿ ನಿ-ರಂತರ ಸುಖಿಪುದು ಉರಿಯೋ ಸಿರಿಯೋ2ಬಯಲಾಟವ ನೋಡಿ ಬಯಲೆಲ್ಲವ ಮಾಡಿಬಯಲ ಬಗೆಗೆ ತಾ ಓಲಾಡಿಬಯಲಿಗೆ ಬಯಲು ಬಯಲಾಗಿರುತಿಹಬಯಲಾನಂದವು ಭಯವೋ ಜಯವೋ3ಮೂರವಸ್ಥೆಯ ಮೂವರಿಗೊಪ್ಪಿಸಿಬೇರೆ ಸಾಕ್ಷ್ಯಗೆ ತಾನಿರುತಿದ್ದುತೋರುವುದೆಲ್ಲ ತನ್ನತನವೆಂದರಿತುಶೂರನಾಗಿರುವುದು ಗೆಲುವೋ ಒಲವೋ4ಗುರುಕೀಲನೆ ನೋಡಿ ಗುರುವೆಲ್ಲವ ಮಾಡಿಗುರುಲೀಲೆ ಯಂತಿರುತಿದ್ದುಗುರುಚಿದಾನಂದ ಮೂರುತಿಯ ಕೂಡಿರುತಿಹಗುರುತರ ತಾನದು ದೊರೆಯೋ ಚರಿಯೋ5
--------------
ಚಿದಾನಂದ ಅವಧೂತರು
ಯೋಗಿಯಹುದಹುದೋ ಚಿದಾನಂದಯೋಗಿಯಹುದುಹುದೋ ದಯಾಸಾಗರ ಕಾರಣ್ಯದಾಗರ ನಿತ್ಯಾತ್ಮಪಅಷ್ಟಮದಂಗಳನ್ನು ಸುಟ್ಟು ಭಸ್ಮವ ಮಾಡಿಹಅಷ್ಟ ಪ್ರಕೃತಿಯನ್ನು ಕಾರಿ ಕಾರಿ ಮಹದಷ್ಟ ಯೋಗವ ಸಾಧಿಸಿ ಶ್ರವಣವನ್ನುಕೊಟ್ಟುನಾದವ ಭೇದಿಸಿ ಆತ್ಮದಲ್ಲಿದೃಷ್ಟಿ ಎಂಬುದ ನಿರಿಸಿ ಸರ್ವಕಾಲಶಿಷ್ಟರೆಂದೆನಿಪ ಉತ್ಕøಷ್ಟಮಾರ್ಗದವಾಸಿ1ಆರು ಅರಿಯ ಮೀರಿದರು ಭ್ರಮೆಯ ವಿಕಾರವ ತರಿದುತರಿದು ಹೀರಿ ಆರು ಚಕ್ರದ ಮೇಲೆಏರಿ ಸಹಸ್ರಾರ ಸ್ಥಳದಿನಿಂದುಜ್ಯೋತಿರ್ಮಯಸಾರವ ಸೇವಿಸುತಲಂದು ನಿತ್ಯಾನಿತ್ಯಘೋರತಪದಿಯೋಗಿಶೂರ ಭಕ್ತರ ಬಂಧು2ಸಪ್ತವ್ಯಸನರೂಪಕೆಡಿಸಿ ಬಳಿಕ ದುಷ್ಟಸಪ್ತಾವರಣವನ್ನು ತುಳಿದು ಪಾದದಲೊದ್ದುಗುಪ್ತವಾಗಿಹ ಪ್ರಭೆಯ ಶೋಧಿಸಿಘನತೃಪ್ತ ಅಮೃತ ಸುಧೆಯ ಸುರಿದು ಮೇರುಕಾಂಚನ ಗಿರಿಯ ಸೇರಿಯೆ ಜ್ಯೋತಿವ್ಯಾಪಕಭಾಸ್ಕರದೀಪ್ಯಮಾನ ಪ್ರಭಾ3ಕರ್ಮಪಾಪವು ಪುಣ್ಯಹಮ್ಮುವಾಸನಕ್ಷಯದುರ್ಮತಿ ದುರ್ಗುಣವೆಲ್ಲ ದೊಡ್ಡಬ್ರಹ್ಮಾನಂದದ ಲಕ್ಷಣ ತಿಳಿದಾ ನಿತ್ಯಾನಿರ್ಮಳ ನಿರಾವರಣ ರೂಪಿತ ಆತ್ಮಸ್ವರ್ಮಣಿ ಸುಗುಣನಿರ್ಗುಣಪರಬ್ರಹ್ಮವೇ ತಾನಾಗಿ ಬೆಳಗುವ ಯತಿ ಜಾಣ4ಸಾಧನ ನಾಲ್ಕನು ಸಾಧಿಸಿನಾದವ ಭೇದಿಸಿ ಜ್ಯೋತಿ ಸಂಪಾದಿಸಿ ಆತ್ಮನಭೇದವೆಂಬುದನರಿತ ಬಳಿಕಘನಸಾಧನಗುಣಚರಿತಯೋಗಿ ತಾನೆನಿಸಿ ಕೈವಿಡಿಯೆನ್ನಬೋಧಸದ್ಗುರು ಚಿದಾನಂದಅವಧೂತ5
--------------
ಚಿದಾನಂದ ಅವಧೂತರು
ರಂಗ ಕುಣಿದ ಮುದ್ದು ರಂಗ ಕುಣಿದ ಪ.ರಂಗ ಕುಣಿದ ಗೋಪಿಕಂಗಳ ಮುಂದೆಪೊಂಗೆಜ್ಜೆ ರವದೊಳು ಅಂಗಳದೊಳು 1ಗೆಳೆಯರೆಂದೆನಿಸುವ ಎಳೆಮಕ್ಕಳೊಡಗೂಡಿಬಳುಕುತ ಬಾಗುತ ನಲಿನಲಿದಾಡಿ 2ಮೊಳೆವಲ್ಲು ಬಾಯಿಜೊಲ್ಲು ಗಿಳಿಸೊಲ್ಲಿನಿಂದಲಿಕಳಕಳಿಸಿ ನಕ್ಕು ನಗಿಸಿ ಬಿದ್ದೆದ್ದು 3ಸುಳಿಗುರುಳು ಪಣೆಯಲಿ ಒಲಿದಾಡಲುಬಲರಾಮ ತಿದ್ದಿದರಳುತ ಅಳುಕುತ 4ಅರಳೆಲೆ ಮಾಗಾಯಿ ಬೆರಳ ರನ್ನುಂಗುರಕಿರುಗೆಜ್ಜೆ ಭಾರೆಂದು ತರಳರಿಗಿತ್ತು 5ಮಕ್ಕಳ ರತುನ ಶ್ರೀ ಚಿಕ್ಕಕೃಷ್ಣಯ್ಯನುಬೆಕ್ಕಿಗೆ ಬೆದರ್ಯೆವೆ ಇಕ್ಕದೆ ನೋಡಿ 6ನಗುತತಿ ಮುದ್ದಿಸಿ ಬಿಗಿದಪ್ಪಲೆಶೋದೆಯಮಗ ಪ್ರಸನ್ವೆಂಕಟೇಶ ಚಿಗಿದುಡಿಯಲ್ಲಿ 7
--------------
ಪ್ರಸನ್ನವೆಂಕಟದಾಸರು
ರಂಗ ನೀ ಎನ್ನೊಡೆಯನಾಗಿ ಅಮಂಗಳಾತ್ಮರ ಮನೆಗೆ ಹೋಗ್ಯೆನ್ನಿಂಗಿತವನುಸುರಿದರೆ ಕುಂದಿನ್ನಾರಿಗೆಲೆ ತಂದೆ ಪ.ಹಂಚಿನೆದುರಲಿ ಹಲ್ಲು ತೆರೆದರೆಮಿಂಚುಕನ್ನಡಿಯಾಗಬಲ್ಲದೆವಂಚಕರ ಅನುಸರಿಸಿ ಒಡಲಾಸೆಯಲಿ ಬಳಲಿದರೆಕಿಂಚಿದಭಿಮಾನಿಲ್ಲೆ ನಿನಗೆ ಪ್ರಪಂಚ ಸೂತ್ರಿ ಮುರಾರಿ ಎನ್ನಯಸಂಚಿತಾರಬ್ಧಾಗಮವ ನೂಕುವರು ದಾರುಂಟೈ 1ಅರಸು ಮುಟ್ಟಿದ ನಾರಿ ಮಾನ್ಯಳುಪರಸುಹೊಂದಿದ ಲೋಹ ಪ್ರಿಯಪರಮಪುರುಷ ನಿನ್ನವನೆನಿಸಿ ಕ್ಷುದ್ರರ ವಶವ ಮಾಡುವರೆಅರಿದುದಾವುದಘಟಿತಘಟಕನೆಶಿರಿವಿರಿಂಚಿ ಶಿವೇಂದ್ರರೊಡೆಯನೆಪರಮಪಾತಕಿಯಾದರೇನ್ಮ್ಮುದ್ರಾಂಕಿತನು ಕಾಣೈ ರಂಗ2ಮಧ್ವರಗಣನೆ ನಿನ್ನ ಶರಣರುಒದ್ದು ಭವಸಾಗರವ ದಾಟಿದರುದ್ಧಟರು ನಾಕೇಳಿಕಕುಲತೆಯಿಂದ ಮೊರೆ ಹೋಗುವೆಅದ್ದು ವಿಷದೊಳಗೆ ಸುಧೆಯೊಳುಅದ್ದು ನಿನ್ನ ನಂಬಿದವನು ನಾಶುದ್ಧ ಭಟಜನಪಾಲ ಪ್ರಸನ್ವೆಂಕಟಾದ್ರೀಶ 3
--------------
ಪ್ರಸನ್ನವೆಂಕಟದಾಸರು
ರಂಗ ರಂಗ ಎಂಬ ನಾಮವ ನೆನೆವರ |ಸಂಗದೊಳಿರಿಸು ಎನ್ನ ಪಅಂಗದೊಳ್ಲೆವರು ದೆಸೆದಸೆಗೆಳೆಯುವ |ಭಂಗವ ಬಿಡಿಸೊ ಹರಿಯೆ-ಸ್ವಾಮಿ ಅ.ಪಹರೆಕೃಷ್ಣ ಎಂದೆಂಬೆಜಿಹ್ವೆತಾನಿರುತಿರೆ |ಬರಿಯೆ ಮಾತಾಡುವೆ ನಾ ||ಗುರು-ಹಿರಿಯರ ವಂದನೆಗೆ ಕರ-ಶಿರವಿರೆ |ಗುರುವಹಂಕಾರತನ ||ಪರಿಪರಿ ಪುಷ್ಪದಲಿ ಪೂಜಿಸದೆ ಅಚ್ಯುತನ |ಮರೆತಿಹೆ ನಾನನುದಿನ |ಅರಿವ ನೋಡಿದರೆ ಎನ್ನಲಿ ಕಾಣೆನೈ ದೇವ |ಮೊರೆಹೊಕ್ಕೆ ಸಲಹೊ ಎನ್ನ-ಸ್ವಾಮಿ 1ವೇದ ಶಾಸ್ತ್ರ ಪುರಾಣ ನಾಮವ ನೆನೆವರ |ಚೋದ್ಯವ ನಾನರಿಯೆನು ||ಹಾದಿಬೀದಿ ತಿರುಗುವ ಜಾರಸ್ತ್ರೀಯಳ ಕಂಡು-ವಿ-|ನೋದಗಳ ಮಾಡುತಿಹೆನು ||ಮಾಧವಗೋವಿಂದ ಎನ್ನದೆ ಕಾಲನ |ಬಾಧೆಗಳಿಗೊಳಗಾದೆನೊ ||ಈ ಧರೆಯೊಳಗೆನ್ನ ರಕ್ಷಿಸುವವರ ಕಾಣೆ |ಶ್ರೀಧರ ನೀನೆ ಸಲಹೊ-ಸ್ವಾಮಿ 2ಮಡದಿ-ಮಕ್ಕಳಿಗೆಲ್ಲ ಒಡವೆ ಬೇಕೆಂಬುವ |ಕಡುಲೋಭತನವ ಬಿಡಿಸೊ ||ಅಡಿಗೆ ಅಡಿಗೆ ನಾರಾಯಣನೆಂಬ ನಾಮವನು |ನುಡಿವ ನಾಲಗೆಗಿರಿಸೊ ||ಪೊಡವಿಯೊಳುಪುರಂದರವಿಠಲರಾಯನೆ ನಿನ್ನ |ಅಡಿಯದಾಸನೆನಿಸೊ-ಸ್ವಾಮಿ 3
--------------
ಪುರಂದರದಾಸರು
ರಥವಾನೇರಿದ ಯತಿವರನ್ಯಾರೇ ಪೇಳಮ್ಮಯ್ಯಾ ಪವಿತತ ಮಹಿಮಾ - ನತಜನರನತಿಹಿತದಿ ಪಾಲಿಸುವ - ಅತುಲ ಮಹಿಮ ಕಾಣಮ್ಮ ಅ.ಪಸ್ಮರಿಸುವ ಭಕುತರಪರಿ-ಪರಿಸಲಹುವನ್ಯಾರೇ ಪೇಳಮ್ಮಯ್ಯಾಗುರುವರ ರಾಘವೇಂದ್ರ ಕಾಣಮ್ಮಾ 1ಸ್ತುತಿಸುವ ಜನರಿಗೆ ಸತಿಸುತ ಸಂಪದ -ಮತಿರಹಿತರಿಗೆ ಸುಮತಿಯ ನೀಡುವನ -ಭೂತಳಜನನಾಥನೆನಿಸಿ ಮಹಾ -ಭೂತಿದಾಯಕ ರಾಘವೇಂದ್ರ ಕಾಣಮ್ಮಾ 2ಭೂತಪ್ರೇತ ಪಿಶಾಚ ಸುಮಹ -ಪಾತಕವನುಕುಲವೀತಿಹೋತ್ರಸುಖದೂತನೆನಿಪ ಗುರುರಾಯ ಕಾಣಮ್ಮ 3
--------------
ಗುರುಜಗನ್ನಾಥದಾಸರು
ರಾಘವೇಂದ್ರಾ - ಸದ್ಗುಣಸಾಂದ್ರಾ ಪರಾಘವೇಂದ್ರಾ ಅನು - ರಾಗದಿ ಭಕ್ತರರೋಗವ ಕಳೆದು ಸು - ಭೋಗವ ಸಲಿಸೋ ಅ.ಪಧೀಮಂತರಿಗತಿ - ಕಾಮಿತವೀವೊಶ್ರೀಮಂತನೆ ಎನ - ಕಾಮಿತ ಸಲಿಸೋ 1ಆಪದ್ಬಾಂಧವ - ಕೋಪವ ಮಾಡದೆನೀ ಪಾಲಿಸೋ ಎನ್ನ - ಪಾಪವ ನೋಡದೆ 2ಅನ್ಯನಲ್ಲವೊ - ನಿನ್ನ ಸುಭಕ್ತನುಮನ್ನಿಸಿ ದಯದಿ ನೀ - ಎನ್ನನು ಕಾಯೋ 3ಜನ್ಯನ ಜನಕನು - ಮನ್ನಿಸದಿರಲುಅನ್ಯರು ಕಾಯ್ವರನನ್ಯಪಾಲಕನೇ 4ಈಶನು ನೀನೈ - ದಾಸನು ಎನ್ನನು -ದಾಶಿನ ಮಾಡದೆ - ಪೋಷಿಸಿ ಪೊರೆಯೈ 5ಎಂದಿಗೆ ನಿನ್ನನು - ಪೊಂದುವೆ ಗುರುವರತಂದೆಯೆ ತೋರಿಸೋ - ಮುಂದಿನ ಗತಿಯಾ 6ಪೋತನು ನಾನೈ - ಮಾತನು ಲಾಲಿಸೊನೀತ ಗುರುಜಗನ್ನಾಥ ವಿಠಲ ಪ್ರಿಯ 7
--------------
ಗುರುಜಗನ್ನಾಥದಾಸರು
ರಾಜ ರಾಜ ಮಹಾರಾಜ ಶ್ರೀಧವಾಗೋವಿಂದರಾಜ ಅಚರಾಚರ ಸಬೀಜಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಆದಿಯುಗದಿಮತ್ಸ್ಯಕೂರ್ಮ- |ನಾದಿವರಾಹನರಸಿಂಹ- |ನಾದಿಹಿರಣ್ಯಕಶ್ಯಪನ |ಛೇದ ಮಾಡಿ ರಕ್ತ ಕುಡಿದಿ1ದ್ವಿತೀಯಯುಗದಿ ವಾಮನದ್ವಿತೀಯಉದರದಲಿ ಬಂದು | ಮಥಿಸಿ ಬಲಿಯ ಕ್ರೋಧದಿಂದ |ಸುತಳಕ್ಕೊತ್ತಿ ಬಿಟ್ಟೆಯಾ2ಪರಶುರಾಮ ರೇಣುಕಿಯ |ವರಸುಪುತ್ರನಾಗಿಜನಿಸಿ | ವೀರಸದಿಂದ ಕ್ಷತ್ರಿ (ಯರ)ನಿರಸ ಮಾಡಿ ಬಿಟ್ಟಿ3ರಾಮಚಂದ್ರ ದಾಶರಥಿಯ |ಶ್ಯಾಮನೀಲಮೇಘವರ್ಣ |ಸ್ತೋಮರಾವಣನ ಉದ್ದಾಮನವರ ವಂಶ ತರಿದಿ4ದ್ವಿತೀಯದ್ವಾಪರದಲ್ಲಿ | ಮಥಿಸಿ ಕಂಸ ಪೂತನೆಯ |ಕಾತರ ಮಾಡಿ ಕೌರವನು |ಪಥಕೆ ಹೊಂದಿಸಿ ಬಿಟ್ಟ ಕೃಷ್ಣ5ಕಲಿಯುಗ ಬರಲು ಬೌದ್ಧನಾಗಿ |ಛಲ ದ್ವೇಷಖಲಜನರ ಕಲಹ ಹೆಚ್ಚಲಾಗುತಿರೆ |ಕಲ್ಕಿ ಹಯಗ್ರೀವನಾದಾ6ಮೂರು ತಾಪದಿಂದ ಬೆಂದ |ಘೋರದುರಿತಭವದಮೂಲ ಬೇರ ಕಿತ್ತಿ ಬಿಸುಟಿದ ಶ್ರೀಶಪಾಲ ಶಂಕರೇಶ7
--------------
ಜಕ್ಕಪ್ಪಯ್ಯನವರು