ಒಟ್ಟು 4790 ಕಡೆಗಳಲ್ಲಿ , 128 ದಾಸರು , 3230 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪ್ರಾಚೀನ ಕರ್ಮವು ಬಿಡಲರಿಯದುಯೋಚನೆಯ ಮಾಡಿ ನೀ ಬಳಲಬೇಡ ಪ.ಮುನ್ನಮಾಡಿದಕರ್ಮ ಬೆನ್ನಟ್ಟಿ ಬರುತಿರಲುತನ್ನಿಂದ ತಾನೆ ತಿಳಿಯಲರಿಯದೆಇನ್ನು ದೇಹವನು ಆಶ್ರಯಿಸಿ ಫಲವೇನುಉನ್ನತ ಹರುಷದಲಿ ಮನದಿ ಯೋಚಿಸುವ 1ಲೋಕಾದಿ ಲೋಕಗಳ ತಿರುಗುವರವಿ ರಥಕೆಏಕಗಾಲಿಗೆ ಏಳು ಕುದುರೆಕಟ್ಟಿಆಕಾಶ ಮಾರ್ಗದಲಿ ತಿರುಗುವ ಅರುಣನಿಗೆಬೇಕಾದ ಚರಣಗಳ ಕೊಡಲಿಲ್ಲ ಹರಿಯು 2ಸೇತುವೆಯುಕಟ್ಟಿ ಲಂಕೆಗೆ ಹಾರಿ ಹನುಮಂತಖ್ಯಾತಿಯನೆ ಮಾಡಿ ರಾವಣನ ಗೆದ್ದುಸೀತೆಯನು ತಂದು ಶ್ರೀರಾಮನಿಗೆ ಕೊಡಲಾಗಿಪ್ರೀತಿಯಿಂ ಕೌಪೀನವ ಬಿಡಸಲಿಲ್ಲ ಹರಿಯು 3ನಿತ್ಯದಲಿ ಗರುಡ ಸೇವೆಯ ಮಾಡಿ ವಿಷ್ಣುವನುಹೊತ್ತುಕೊಂಡು ಇದ್ದ ಜಗವರಿಯಲುಅತ್ಯಂತ ಸೇವಕನೆಂದು ಮೂಗಿನಡೊಂಕುಎತ್ತಿ ನೆಟ್ಟಗೆ ಮಾಡಲಿಲ್ಲ ಶ್ರೀ ಕೃಷ್ಣ 4ಇಂತೆಂದು ಈಪರಿ ತಮ್ಮೊಳಗೆ ತಾವು ತಿಳಿದುಭ್ರಾಂತನಾಗದೆ ಬಯಕೆಗಳನುಜರಿದುಶಾಂತ ಮೂರುತಿಸಿರಿ ಪುರಂದರವಿಠಲನ
--------------
ಪುರಂದರದಾಸರು
ಫಣಿವೇಣಿ ಶುಕಪಾಣಿ ವನಜಾಕ್ಷಿ ರುಕ್ಮಿಣಿ ಪ.ಈರೇಳುಲೋಕದ ಮಾತೆ ಭೂಲೋಲಭೀಷ್ಮ ಕಜಾತೆಗುಣಶೀಲೆ ಗುಣಾತೀತೆ ತ್ರಿದಶಾಲಿಸನ್ನುತೆ 1ಶ್ರೀವಾಸುದೇವನ ರಾಣಿ ಲೋಕೇಶಮುಖ್ಯರಜನನಿಸುಪ್ರಕಾಶಿನಿ ಕಲ್ಯಾಣಿ ಕಲಹಂಸಗಾಮಿನಿ 2ಸುವಿಲಕ್ಷಣೈಕನಿಧಾನಿ ಮೀನಾಕ್ಷಿ ಪಲ್ಲವಪಾಣಿಸುಕ್ಷೇಮಸುಖದಾಯಿನಿ ಲಕ್ಷ್ಮೀನಾರಾಯಣಿ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಫಲಾಹಾರವನು ಮಾಡೊ ಪರಮಪುರುಷ ಭೂಲಲನೆಲಕ್ಷ್ಮೀ ಕಂದರ್ಪರ ಸಹಿತಪ.ಕದಳಿ ಕೆಂಬಾಳೆ ಕಿತ್ತಳೆ ಕಂಚಿ ಫಲಗಳುಬದರಿ ಬೆಳುವಲ ಜಂಬೀರ ದ್ರಾಕ್ಷಿಗಳು ||ಮಧುರದ ಮಾದಾಳ ಮಾವಿನ ಹಣ್ಗಳುತುದಿ ಮೊದಲಿಲ್ಲದ ಪರಿಪರಿ ಫಲಗಳ 1ಉತ್ತತಿ ಜಂಬುನಾರಂಗ ದಾಳಿಂಬವುಮುತ್ತಾದೌದುಂಬರ ಕಾರಿಯು ಕವಳಿ ||ಕತ್ತರಿಸಿದ ಕಬ್ಬು ಪಲಸು ತೆಂಗಿನಕಾಯಿಒತ್ತಿದ ಬೇಳೆ ನೆಲಗಡಲೆ ಖಜ್ಜೂರ ಹಣ್ಣ 2ಹಾಲು ಸಕ್ಕರೆ ಜೇನುತುಪ್ಪ ಸೀಕರಣೆಯುಹಾಲು ರಸಾಯನ ಬೆಣ್ಣೆ ಸೀಯಾಳು ||ಮೂಲೋಕದೊಡೆಯ ಶ್ರೀ ಪುರಂದರವಿಠಲನೆಪಾಲಿಸೋ ನಿನ್ನಯ ಕರಕಂಜದಿಂದಲಿ 3
--------------
ಪುರಂದರದಾಸರು
ಫಾಲಲೋಚನೆ ನನ್ನ ಪಾಲಿಸೆಂದಿಗು ಎನ್ನಪಾಹಿಪಾರ್ವತಿ ರಮಣ ಪಾವನಚರಣಪಾಪನಾತ್ಮಕ ಘನ್ನ ಪಾಪ ನಿವಾರಣಪಾಹಿಪನ್ನಗಭೂಷಣ ಪಂಚಾನನ ಪಅಂಬುಜೋದ್ಭವನು ತಾ ಅಮರಪೂಜಿತ ವಂದ್ಯಅಮಿತ ಮಂಗಲ ರೂಪನೆ ಆಶ್ರಿತದಾತಅಂಬರಕೇಶಿ ಚಿದಂಬರವಾಸನೆಅಗಣಿತಗುಣಮಹಿಮಅಂಗಜಭಂಗ 1ನಿಗಮಗೋಚರ ನೀನೆ ನೀಲಕಂಧರನೀನೆನಿರತನಂಬಿದೆ ನಿನ್ನನ್ನೆ ನಿಶ್ಚಲನೆನಿತ್ಯಾನಂದನು ನೀನೆನಿತ್ಯತೃಪ್ತನುನೀನೆನಿತ್ಯನಿರ್ಮಲ ರೂಪನೆ 2ತ್ರಿಪುರಸಂಹಾರನೆತ್ರಿಜಗಸಂಚಾರನೆತ್ರಿಯಂಬಕನೆ ಶಿವನೆ ತ್ರಿನೇತ್ರನೆತ್ರಿಮೂರ್ತಿಗಳ ಖ್ಯಾತ ತ್ರಿಶೂಲಧಾರನೆತ್ರಿಗುಣಾತ್ಮಕ ಗೋವಿಂದನಾ ದಾಸನವಂದ್ಯ3
--------------
ಗೋವಿಂದದಾಸ
ಬಗೆಬಗೆ ಆಟಗಳೆಲ್ಲಿ ಕಲಿತೆಯೊ |ಜಗದ ಮೋಹಕನೆ ಪಖಗವರಗಮನನೆಅಗಣಿತಮಹಿಮನೆ |ಜಗದೊಳು ನೀ ಬಹು ಮಿಗಿಲಾಗಿ |ಪರಿಅ.ಪಒಬ್ಬಳ ಬಸಿರಿಂದಲಿ ಬಂದು-ಮ-|ತ್ತೊಬ್ಬಳ ಕೈಯಿಂದಲಿ ಬೆಳೆದು ||ಕೊಬ್ಬಿದ ಭೂಭಾರವನಿಳುಹಲು ಇಂಥ |ತಬ್ಬಿಬ್ಬಾಟಗಳೆಲ್ಲಿ ಕಲಿತೆಯೊ 1ಮಗುವಾಗಿ ಪೂತಣಿ ಮೊಲೆಯ-ಉಂಡು |ನಗುತಲವಳ ಅಸುವನೆ ಕೊಂಡು |ಅಘಹರ ನೀ ಗೋಪಿಯೊಳು ಜನಿಸಿ ಇಂಥ |ಸೊಗಸಿನ ಆಟಗಳೆಲ್ಲಿ ಕಲಿತೆಯೊ 2ಲೋಕರಂತೆ ನೀ ಮಣ್ಣನು ತಿನಲು |ತಾ ಕೋಪಿಸಿ ಜನನಿಯು ಬೇಗ ||ಓಕರಿಸೆನ್ನಲು ಬಾಯೊಳು ಸಕಲ |ಲೋಕವ ತೋರಿದುದೆಲ್ಲಿ ಕಲಿತೆಯೊ | 3ಮಡುವ ಧುಮುಕಿ ಕಾಳಿಂಗನ ಪಿಡಿದು |ಪಡೆಯ ಮೇಲೆ ಕುಣಿದಾಡುತಿರೆ ||ಮಡದಿಯರು ನಿನ್ನ ಬಿಡದೆ ಬೇಡಲು |ಕಡುದಯೆದೋರಿದುದೆಲ್ಲಿ ಕಲಿತೆಯೊ | 4ಒಂದುಪಾದಭೂಮಿಯಲಿ ವ್ಯಾಪಿಸಿ ಮ-|ತ್ತೊಂದುಪಾದಗಗನಕ್ಕಿಡಲು ||ಅಂದದಿ ಬಲಿಯ ಶಿರದಿ ಮೂರನೆಯದಿಟ್ಟು |ಬಂಧಿಸಿದಾಟಗಳೆಲ್ಲಿ ಕಲಿತೆಯೊ | 5ಭರದಿ ಭಸ್ಮಾಸುರ ವರವನು ಪಡೆದು |ಹರನು ಶಿರದಿ ಕರವಿಡ ಬರಲು ||ತರುಣಿರೂಪವ ತಾಳಿ ಉರಿಹಸ್ತದವನ |ಮರುಳುಗೊಳಿಸಿದುದನೆಲ್ಲಿ ಕಲಿತೆಯೊ | 6ಜಗಕೆ ಮೂಲನೆಂದು ನಾಗರಾಜ ಕರೆಯೆ |ಖಗವಾಹನನಾಗದೆ ನೀ ಬಂದು ||ನಗುತ ನಗುತ ಆ ವಿಗಡನಕ್ರನ ಕೊಂದ |ಹಗರಣದಾಟಗಳೆಲ್ಲಿ ಕಲಿತೆಯೊ 7ವೇದಗಳರಸಿಯು ಕಾಣದ ಬ್ರಹ್ಮ ನೀ-|ನಾದರದಲಿ ವಿದುರನ ಗೃಹದಿ ||ಮೋದದಿ ಒಕ್ಕುಡಿತೆಯ ಪಾಲನೆ ಕೊಂಡು |ಹಾದಿಯೊಳ್ ಹರಿಸಿದುದೆಲ್ಲಿ ಕಲಿತೆಯೊ 8ಡಂಬಕಹಿರಣ್ಯಕಶಿಪು ಪ್ರಹ್ಲಾದನ |ಹಂಬಲವಿಲ್ಲದೆ ಶಿಕ್ಷಿಸಲು ||ಸ್ತಂಭದಿ ಭಕ್ತಗೆ ರೂಪವ ತೋರಿ |ಸಂಭ್ರಮವಿತ್ತುದನೆಲ್ಲಿ ಕಲಿತೆಯೊ 9ಚಕ್ರಧರನೆ ಜರಾತನಯನೊಂದಿಗೆ ಕಾದಿ |ಸಿಕ್ಕಿ ಓಡಿದವನಿವನೆಂದೆನಿಸಿ ||ಭಕ್ತ ಭೀಮನ ಕೈಯಲಿ ಕೊಲ್ಲಿಸಿದ |ಠಕ್ಕಿನಾಟಗಳನೆಲ್ಲಿ ಕಲಿತೆಯೊ | 10ಆ ಶಿರವಾತನ ತಂದೆಯ ಕರದೊಳು |ಸೂಸುತ ರಕ್ತವ ಬೀಳುತಿರೆ ||ಸೋಸಿ ನೋಡದೆ ರುಂಡ ಬಿಸುಡಲವನ ಶಿರ |ಸಾಸಿರ ಮಾಡಿದುದೆಲ್ಲಿ ಕಲಿತೆಯೊ 11ಪ್ರಾಣ ಸೆಳೆವನೀ ದಿನವೆಂದರ್ಜುನ |ಧೇನಿಸದಲೆ ಸೈಂಧವಗೆನಲು ||ಕಾಣದಂತೆ ಸೂರ್ಯಗೆ ಚಕ್ರವನಿಟ್ಟು |ಬಾಣ ಹೊಡಿಸಿದುದನೆಲ್ಲಿ ಕಲಿತೆಯೊ 12ಸರ್ಪನ ಬಾಣವು ಉರಿಯುತ ಬರಲು ಕಂ-|ದರ್ಪನ ಪಿತ ನೀ ಕರುಣದಲಿ ||ತಪ್ಪಿಸಿ ಪಾರ್ಥನ ರಥ ನೆಲಕೊತ್ತಿ |ತೋರ್ಪಡಿಸಿದಾಟವೆಲ್ಲಿ ಕಲಿತೆಯೊ 13ದುರುಳದುಃಶಾಸನ ದ್ರೌಪದಿ ಸೀರೆಯ |ಕರದಿಂದ ಸಭೆಯೊಳು ಸೆಳೆಯುತಿರೆ ||ಹರಿಶ್ರೀ ಕೃಷ್ಣ ನೀ ಪೊರೆಯೆನಲಾಕ್ಷಣ |ಅರಿವೆ ರೂಪದೆ ಬಂದುದೆಲ್ಲಿ ಕಲಿತೆಯೊ 14ಕುರುಪತಿ ಸಭೆಯೊಳು ಗುರುವಿನಿಂದಿರುತ |ಸಿರಿಕೃಷ್ಣನು ಬರೆ ವಂದಿಸದೆ ||ಸ್ಥಿರವಾಗಿ ಕುಳಿತಿರೆ ಚರಣದಿ ಧರೆಮೆಟ್ಟಿ |ಕುರುಪನನುರುಳಿಸಿದ್ದೆಲ್ಲಿ ಕಲಿತೆಯೊ | 15ದುರಿಯೋಧನ ಪಾಂಡವರ ಶಿಕ್ಷಿಸಲು |ಮೊರೆಯಿಡಲವನ ಮರುಳುಗೊಳಿಸಿ ||ಧುರದೊಳುಪಾರ್ಥಗೆ ಸಾರಥಿಯಾಗಿ ನೀ |ಕುರುಕುಲವಳಿದುದನೆಲ್ಲಿ ಕಲಿತೆಯೊ | 16ಪತಿಶಾಪದಿ ಶಿಲೆಯಾದ ಅಹಲ್ಯೆಯ |ಹಿತದಿಂದವಳನು ಉದ್ಧರಿಸಿ ||ಪತಿಯೊಡಗೂಡಿಸಿ ಪತಿವ್ರತೆಯೆನಿಸಿದ-ಅ-|ಮಿತಮಹಿಮೆಯ ಕೃತಿಯೆಲ್ಲಿ ಕಲಿತೆಯೊ 17ಅಂಬರೀಷ ದ್ವಾದಶಿ ವ್ರತ ಸಾಧಿಸೆ |ಡೊಂಬೆತನದಿದೂರ್ವಾಸಬರೆ ||ಇಂದುಧರಾಂಶನು ರಾಜನ ಪೀಡಿಸ-|ಲಂದು ಚಕ್ರದಿ ಕಾಯ್ದುದೆಲ್ಲಿ ಕಲಿತೆಯೊ | 18ಕುಲಛಲಗಳನಳಿದ ಅಜಮಿಳ ಸರಸದಿ |ಹೊಲತಿಯ ಕೂಡಿರೆ ಮರಣ ಬರೆ ||ಬಲು ಮೋಹದ ಸುತ ನಾರಗನೊದರಲು |ಒಲಿದು ಗತಿಯನಿತ್ತುದೆಲ್ಲಿ ಕಲಿತೆಯೊ 19ಬಡತನ ಪಾರ್ವನ ಬಿಡದೆ ಬಾಧಿಸಲು |ಮಡದಿಯ ನುಡಿಕೇಳಿಆಕ್ಷಣದಿ ||ಒಡೆಯ ನೀನವನೊಪ್ಪಿಡಿಯವಲನು ಕೊಂಡು |ಕಡುಭಾಗ್ಯನಿತ್ತುದನೆಲ್ಲಿ ಕಲಿತೆಯೊ | 20ಎಂದೆಂದು ನಿನ್ನ ಗುಣವೃಂದಗಳೆಣಿಸಲು |ಇಂದಿರೆಬೊಮ್ಮನಿಗಸದಳವು ||ಮಂದರಧರಸಿರೆಪುರಂದರವಿಠಲನೆ |ಚೆಂದ-ಚೆಂದದಾಟಗಳೆಲ್ಲಿ ಕಲಿತೆಯೊ 21
--------------
ಪುರಂದರದಾಸರು
ಬಣ್ಣಿಸಲಳವೆ ನಿನ್ನ |ಪನ್ನಗಶಯನಪ್ರಪನ್ನವತ್ಸಲ ರಂಗ ಪಮಧು ಕೈಟಭಾಂತಕನೆ ಮಧುರಾಪತಿ ಜಿತನೆ |ಮಧುಸಖಜನಕನೆ ಮಧುಮಾಂಶ್ರಿಯಾಂಬಕನೇ1ಋಷಿ ಪತ್ನಿಯರ ಮೋಹಕ, ಋಷಿ ಪತ್ನಿಯತಾರಕ|ಋಷಿ ಪತ್ನಿಯ ನಾಶಕ ಋಷಿ ಪತ್ನೀ ಬಾಲಕ 2ಪದುಮ ಸಂಭವನಯ್ಯ ಪದುಮೇಶಕವಿಗೇಯ |ಪದುಮಾವರದಜೀಯಪದುಮಜಾಂಡದೊಡೆಯ3ಭಾನುಕೋಟಿ ಪ್ರಕಾಶ ಭಾನುಲೋಚನಾಧೀಶ |ಭಾನುಪ ಸುತ ಪೋಷ ಭಾನುಪಾಣಿ ನಿರ್ದೋಷ 4ಹರಿಪ್ರಾಣೇಶ ವಿಠಲಯ್ಯಹರಿಶಯನ ಮತ್ಪ್ರಿಯ |ಹರಿಯಾಸ್ಯ ನರದೇಹ ಹರಿಸುವುದಘ ತ್ವರಿಯಾ 5
--------------
ಪ್ರಾಣೇಶದಾಸರು
ಬಣ್ಣಿಸಲಳವೇ ನಿನ್ನ ಪಬಣ್ಣಿಸಲಳವಲ್ಲ ಭಕುತವತ್ಸಲ ದೇವಪನ್ನಗ ಶಯನ ಪಾಲ್ಗಡಲೊಡೆಯನೆ ರಂಗಅ.ಪಅಸಮ ಪರಾಕ್ರಮಿ ತಮನೆಂಬ ದೈತ್ಯನುಶಶಿಧರನ ವರದಿ ಶಕ್ರಾದ್ಯರಿಗಳುಕದೆಬಿಸಜಸಂಭವನ ಠಕ್ಕಿಸಿ ನಿಗಮವ ಕದ್ದುವಿಷಧಿಯೊಳಡಗಿರಲ್ ಒದಗಿ ಬಂದಮರರುವಸುಧೀಶ ಕಾಯಬೇಕೆಂದೆನಲವನ ಮ -ರ್ದಿಸಿ ವೇದಾವಳಿಯ ತಂದು ಮೆರೆದ ದಶದಿಸೆಯೊಳು ಬೊಮ್ಮಗಂದು ವೇದವ ಕರುಣಿಸದೆ ಕಂಜಾಕ್ಷ ಕೇಶವ ದಯಾಸಿಂಧು 1ಇಂದ್ರಾದಿ ಸಕಲ ದೇವತೆಗಳೆಲ್ಲರು ದೈತ್ಯವೃಂದವೊಂದಾಗಿ ಮತ್ಸರವ ಮರೆದು ಕೂಡಿಬಂದು ನೆರೆದುಮುರಹರ ನಿನ್ನ ಮತದಿಂದಮಂದರಾದ್ರಿಯ ಕಡೆಗೋಲ ಗೈಯ್ದತುಳ ಫಣೀಂದ್ರನ ತನು ನೇಣಿನಂದದಿ ಬಂಧಿಸಿ ||ಸಿಂಧು ಮಥಿಸುತಿರಲು ಘನಾಚಲವಂದು ಮುಳುಗಿ ಪೋಗಲು ಬೆನ್ನಾಂತು ಮುಕುಂದ ನೆಗಹಿದೆಸುರರು ಜಯ ಜಯವೆನಲು2ಖಳಶಿರೋಮಣಿ ಕನಕಾಕ್ಷನೆಂಬಸುರ ನಿನ್ನೊಳು ಸೆಣಸುವೆನೆಂಬ ಗರುವದಿಂದಲಿ ಬಹುಬಲದಿಂದುದ್ಧಟನಾಗಿ ದಿವಿಜರನಂಜಿಸಿಇಳೆಯ ಕದ್ದು ರಸಾತಳದೊಳಗಿರೆ ನಿನ್ನಪೊಳೆವ ಕೋರೆಗಳಿಂದ ತಿವಿದು ರಕ್ಕಸನ ಅ ||ಪ್ಪಳಿಸಿ ಕೊಂದವನ ದಿಂಡು ಗೆಡಹಿ ಮಹೀಲಲನೆಯೊಡನೆ ಕೈಕೊಂಡು ಪಾಲಿಸಿದೆ ಪೂಮಳೆಗರೆದರುಅಮರರು ನೆಲೆಗೊಂಡು3ಹಗಲಿರುಳಳಿವಿಲ್ಲದಸುರ ಕಶಿಪು ತನ್ನಮಗನ ಹರಿಯ ತೋರೆಂದಧಿಕ ಬಾಧಿಸುತಿರೆಬಗಿದು ಕಂಬವನೊಡೆದಧಿಕ ರೋಷಾಗ್ನಿ ಕಾರ್ಬೊಗೆ ಸೂಸಿ ಗಗನಮಂಡಲ ಧಗ - ಧಗಧಗಧಗಿಪ ಪ್ರಜ್ವಾಲೆಯನುಗುಳಿ ಹಿರಣ್ಯಕನ ಕುರುಗುರಿಂದೊಡಲ ಸೀಳಿ ಕರುಳಮಾಲೆತೆಗೆದು ಕಂಠದಲಿ ತಾಳಿ ಒಪ್ಪಿದೆನರಮೃಗರೂಪೀ ತ್ರಾಹಿಯೆನಲು ಶಶಿಮೌಳಿ 4ಕುಲಿಶಧರನ ಗೆದ್ದು ಕುವಲಯದೊಳು ಭುಜಬಲವಿಕ್ರಮದಲಿ ಸೌಭಾಗ್ಯದುನ್ನತಿಯಿಂದಬಲಿ ವಾಜಿಮೇಧ ಗೆಯ್ಯಲು ವಟುವೇಷದಿಂದಿಳಿದು ತ್ರಿಪಾದ ಭೂಮಿಯ ದಾನವ ಬೇಡಿಬಲುಹಮ್ಮ ಮುರಿಯಬೇಕೆಂದವನ ಶಿರಮೆಟ್ಟಿ ||ನೆಲನ ಈರಡಿಮಾಡಿದೆ ಚರಣವಿಟ್ಟುಜಲಜಜಾಂಡವನೊಡೆದೆ ಅಂಗುಷ್ಟದಿಸುಲಲಿತಸುಮನಸ ನದಿಯ ನೀ ಪಡೆದೆ5ಪೊಡವಿಪತಿಗಳೊಳಗಧಿಕ ಕಾರ್ತವೀರ್ಯಕಡುಧೀರ ದೇವ ದೈತ್ಯರಿಗಂಜದವನ ಬೆಂಬಿಡದೆ ಸಂಗ್ರಾಮದೊಳಧಿಕ ಸಮರ್ಥನಹೊಡೆದು ತೋಳ್ಗಳ ಕುಟ್ಟಿ ಕೆಡಹಿ ಆಗಸದೊಳುಮೃಢಮುಖ್ಯ ದೇವಸಂತತಿ ನೋಡೆ ಕ್ಷತ್ರಿಯರಪಡೆಯನೆಲ್ಲವ ಸವರಿ ಮಾತೆಯ ಶಿರಕಡಿದು ತತ್ಪತಿಗೆ ತೋರಿ ಪಿಡಿದೆ ಗಂಡುಗೊಡಲಿಯ ಕರದಿಬಲ್ಲಿದ ದನುಜಾರಿ6ದಶರಥರಾಯ ಕೌಸಲ್ಯಾನಂದನನಾಗಿಋಷಿ ವಿಶ್ವಾಮಿತ್ರನಧ್ವರವ ರಕ್ಷಿಸಿಘನವಿಷಕಂಠಧನುವ ಖಂಡಿಸಿ ಜಾನಕಿಯ ತಂದುತ್ರಿಶಿರದೂಷಣ ಖರರಳಿದು ವಾಲಿಯನಂದುನಿತಿ ಶಾಸ್ತ್ರದಿಂದ ಸಂಹರಿಸಿ ಸಾಗರವ ಬಂಧಿಸಿ ರಾವಣನ ಶಿರವ ಕತ್ತರಿಸಿ ರಂಜಿಸುವ ಲಂಕಾಪುರವ ವಿಭೀಷಣಗೆಎಸೆವ ಪಟ್ಟವ ಕಟ್ಟಿದೆಲೆ ದೇವಗರುವ 7ದೇವಕಿ ವಸುದೇವರಲ್ಲಿ ಜನಿಸಿ ಲೋಕಪಾವನಗೆಯ್ದು ಪನ್ನಗನ ಪೆಡೆಯ ಮೆಟ್ಟಿಗೋವಳನಾಗಿ ಗೋವರ್ಧನ ಗಿರಿಯೆತ್ತಿಮಾವ ಮಲ್ಲರ ಕೊಂದು ಪಾರಿಜಾತವ ತಂದುಆ ವಿಪ್ರನಲಿ ಓದಿ ಪೋದಪತ್ಯವನಿತ್ತ ||ತಾವರೆದಳಸುನೇತ್ರ ತ್ರಿಭುವನ ಸಂಜೀವಪರಮ ಪವಿತ್ರ ಶ್ರೀ ರುಕ್ಮಿಣಿದೇವಿ ಮನೋಹರ ಶುಭನೀಲಗಾತ್ರ 8ಸರಸಿಜಾಸನಭವ ಇಂದ್ರಾದಿಗಳುಕದೆದುರುಳ ದಾನವರಿರಲಂದು ಖೇಚರದೊಳುನಿರುಪಮ ನೀನೆ ಒಂದೊಂದು ರೂಪಗಳಿಂದಹರಗೆ ಸಹಾಯವಾಗಿ ದನುಜಸ್ತ್ರೀಯರ ವ್ರತಪರಿಹಾರ ಮಾಡಿ ಆಯಾಸವಿಲ್ಲದಲೆ ಮುಪ್ಪುರವ ಅಳಿದ ನಿಸ್ಸೀಮ ಅಖಿಳಶ್ರುತಿಯರಸೆ ಕಾಣದ ಮಹಿಮ ಹೇಸಾಮಜವರದ ಸುಪರ್ಣವಾಹನ ಸಾರ್ವಭೌಮ 9ಮಣಿಮಯ ಯುಕ್ತ ಆಭರಣದಿಂದೆಸೆವ ಲಕ್ಷಣವುಳ್ಳ ದಿವ್ಯ ವಾಜಿಯನೇರಿಧುರದೊಳುಕುಣಿವ ಮೀಸೆಯ ಘೋರವದನ ಖಡ್ಗ ಚರ್ಮವನು ಕೊಂಡು ದ್ರುಹಿಣಾದಿಗಳು ಪೊಗಳಲುಕಲಿದನುಜರೆಲ್ಲರನೊಂದೆ ದಿನದೊಳು ಸವರಿದ ||ರಣಭಯಂಕರ ಪ್ರಜಂಡ ಮೂಜಗದೊಳುಎಣೆಗಾಣಿನೆಲೊಉದ್ದಂಡ ಕಲ್ಕಿ ದಿನಮಣಿ ಕೋಟಿತೇಜ ದುಷ್ಕøತ ಕುಲ ಖಂಡ10ಚಿತ್ತಜನಯ್ಯನೆ ಚಿನ್ಮಯ ಗಾತ್ರನೆಉತ್ತಮದರ ಚಕ್ರ ಗದೆ ಜಲಜಾಂಕನೆಸುತ್ತಲು ಅರಸಲು ನಿನಗೆಲ್ಲಿ ಸರಿಕಾಣೆಹೊತ್ತು ಹೊತ್ತಿಗಾದಿತ್ಯರಬಿನ್ನಪಕೇಳಿಹತ್ತವತಾರದಿ ಅಸುರರ ಮಡುಹಿದೆನಿತ್ಯ ತ್ರಿಸ್ಥಾನವಾಸ ವಾಗಿಹ ಸರ್ವಭಕ್ತರ ಮನೋವಿಲಾಸ ಸಲಹೋ ಪುರುಷೋತ್ತಮಪುರಂದರ ವಿಠಲ ತಿರುಮಲೇಶ11
--------------
ಪುರಂದರದಾಸರು
ಬಂದನು ಸರದಾರ ಸರದಾರಅಂಧಕರಿಪು ಸುಕುಮಾರ ಪ.ಶರಣಾಗತಜನಸುರಮಂದಾರ ದುರಿತಾರಣ್ಯಕುಠಾರಸುರನರಾದಿತ್ರೈಲೋಕೋದ್ಧಾರ ಗಿರಿಜಾಂಕಾಲಂಕಾರ 1ವಲ್ಲೀದೇವಿಮನೋಹಾರ ಒಲ್ಲದಜನಕತಿದೂರಬಲ್ಲವವೇದವೇದಾಂತದಸಾರಖುಲ್ಲದನುಜ ಸಂಹಾರ2ಸುಕ್ಷೇತ್ರಪಾವಂಜಾಖ್ಯಪುರವರ ಸುಜ್ಞಾನನಿಧಿ ಗಂಭೀರಲಕ್ಷ್ಮೀನಾರಾಯಣನಕಿಂಕರರಕ್ಷಿಸು ನಮಿತಕುಬೇರ3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಬಂದು ನಿಂದಿಹ ನೋಡಿ- ಭೂತಳದಿ ವೆಂಕಟಇಂದಿರೆಯನೊಡಗೂಡಿ- ಒಪ್ಪುವ ನಿರಂತರಪೊಂದಿ ಭಜನೆಯ ಮಾಡಿ- ಆನಂದ ಬೇಡಿ ಪವಂದಿಸುತ ಮನೆದೊಳಗೆ ಇವನಡಿ-ದ್ವಂದ್ವ ಭಜಿಸಲು ಬಂದ ಭಯಹರ |ಇಂದುಧರಸುರವೃಂದನುತ ಗೋ-ವಿಂದಘನದಯಾಸಿಂಧು ಶ್ರೀಹರಿ ಅ.ಪದ್ವಾರದೆಡಬಲದಲ್ಲಿ- ಜಯವಿಜಯರಿಬ್ಬರುಸೇರಿ ಸೇವಿಪರಲ್ಲಿ- ಸನಕಾದಿನುತ ಶೃಂ-ಗಾರನಿಧಿ ಅಂಗದಲಿ- ಮುತ್ತಿನಲಿ ಶೋಭಿಪಹಾರ ಹೊಂದಿಹುದಲ್ಲಿ- ವಿಸ್ತಾರದಲ್ಲಿ ||ವಾರವಾರಕೆ ಪೂಜೆಗೊಂಬುವಹಾರ ಮುಕುಟಾಭರಣ ಕುಂಡಲ-ಧಾರಿ ಭುಜ ಕೇಯೂರ ಭೂಷಿತಮಾರಪಿತಗುಣಮೋಹನಾಂಗ ||ಚಾರುಪೀತಾಂಬರ ಕಟಿಯ ಕರ-ವೀರ ಕಲ್ಹಾರಾದಿ ಹೂವಿನಹಾರ ಕೊರಳೊಳು ಎಸೆಯುತಿರೆ ವದ-|ನಾರವಿಂದನು ನಗುತ ನಲಿಯುತ 1ಎಲ್ಲ ಭಕುತರಭೀಷ್ಟ-ಕೊಡುವುದಕೆ ತಾ ಕೈ-ವಲ್ಯ ಸ್ಥಾನವ ಬಿಟ್ಟ- ಶೇಷಾದ್ರಿ ಮಂದಿರದಲ್ಲಿ ಲೋಲುಪ ದಿಟ್ಟ-ಸೌಭಾಗ್ಯನಿಧಿಗೆದುರಿಲ್ಲ ಭುಜಬಲ ಪುಷ್ಪ-ಕಸ್ತೂರಿಯಿಟ್ಟ ||ಚೆಲ್ವ ಪಣೆಯಲಿ ಶೋಭಿಸುವ ಸಿರಿ-ವಲ್ಲಭನಗುಣಪೊಗಳದಿಹ ಜಗ-ಖುಲ್ಲರೆದೆದಲ್ಲಣ ಪರಾಕ್ರಮಮಲ್ಲಮರ್ದನಮಾತುಳಾಂತಕ||ಫಲ್ಗುಣನಸಖಪ್ರಕಟನಾಗಿಹದುರ್ಲಭನು ಅಘದೂರ ಬಹುಮಾಂಗಲ್ಯ ಹೃಯಯವ ಮಾಡಿ ಸೃಷ್ಟಿಗೆಉಲ್ಲಾಸ ಕೊಡುತಲಿ ಚೆಂದದಿಂದಲಿ 2ಪದಕ-ಕೌಸ್ತುಭದಾರ-ಸರಿಗೆಯ ಸುಕಂಧರಸುದರ್ಶನ-ದರಧಾರ-ಸುಂದರ ಮನೋಹರಪದಯುಗದಿ ನೂಪುರ-ಇಟ್ಟಿಹನು ಸನ್ಮುನಿಹೃದಯ ಸ್ಥಿತ ಗಂಭೀರ-ಬಹುದಾನ ಶೂರ ||ವಿಧಿ-ಭವಾದ್ಯರ ಪೊರೆವ ದಾತನುತುದಿ ಮೊದಲು ಮಧ್ಯವು ವಿರಹಿತನುಉದುಭವಾದಿಗಳೀವ ಕರ್ತನುತ್ರಿದಶಪೂಜೀತ ತ್ತಿಭುವನೇಶ ||ಸದುನಲಾಸದಿ ಸ್ವಾಮಿ ತೀರ್ಥದಿಉದುಸುತಿರೆಸಿರಿಮಹಿಳೆ ಸಹಿತದಿಪದುಮನಾಭಪುರಂದರವಿಠಲನುಮುದದಿ ಬ್ರಹ್ಮೋತ್ಸವದಿ ಮೆರೆಯುತ 3
--------------
ಪುರಂದರದಾಸರು
ಬಂದೆಯಾ ಬಾರೊ ಗೋಪಾಲ ಕೃಷ್ಣಬಂದೆಯಾ ಬಾರೊ ಪ.ಇಲ್ಲಿಯ ಗೊಲ್ಲತೇರೆಲ್ಲರುಬಲ್ಲಿದಕಾಮುಕ ನಲ್ಲೇರುಫುಲ್ಲಲೋಚನ ನಿನ್ನ ಮುದ್ದಿನ ಮೊಗವಮೆಲ್ಲನೆ ಚುಂಬಿಸಿ ಬಿಡರೊ ಮಗುವೆ 1ಚಿಕ್ಕವನೆಂದಾಡಿಸಿ ನಿನ್ನಚಕ್ಕಂದಿಲಿ ಬಾಡಿಸಿ ಚಿನ್ನಸಕ್ಕರೆ ಮಾತಲಿ ಬಿಗಿದಪ್ಪುವರೊಕಕ್ಕಸಕುಚದಂಗನೆ ಗೋಪಿಯರೊ 2ಇರುಳ್ಹಗಲೆನ್ನ ಕಂದನ್ನಮರುಳಿಕ್ಕುವರೆಂದಂಜುವೆ ನಾತರಳನ ಕಾಲಿಂಗೆರಗುವೆ ನೋಡೋತರಳೇರೊಡಗೂಡಾಡಲಿ ಬೇಡೊ 3ನಿಲ್ಲದೆ ನಿನ್ನ ಬರಮಾಡುವರೊಚೆಲ್ವಹ ಹಣ್ಣುಗಳ ನೀಡುವರೊಒಳ್ಳೆ ನಾರೇರನುದಿನ ನಿನ್ನಬುಲ್ಲಿ ಬೆಲ್ಲಕೆ ಮನಸೋತಿಹರಣ್ಣ 4ವಿಗಡೇರ ದೃಷ್ಟ್ಯಾಗಲೆತಗಲಿದವೈ ನಿನ್ನ ಮೈಯಲಿಅಗಲದಿರೆನ್ನ ಪ್ರಸನ್ನವೆಂಕಟನಗಪತಿ ಬಡವರ ಧನವೆ ಕೃಷ್ಣ 5
--------------
ಪ್ರಸನ್ನವೆಂಕಟದಾಸರು
ಬರಿದೆ ಬಯಸದಿರಿಹಲೋಕಸುಖವೆಂಬ ಬರಗಿನ ಪಾಯಸವ |ಶರಿಧಿಶಯನನ ಬೇಡೊ ಪರಲೋಕಸುಖವೆಂಬಸೇವಗೆ ಪಾಯಸವ ಪ.ಮುಂದರಿಯದೆ ಮಾಳ್ಪ ಮೂಢನೃಪನ ಸೇವೆ ಮುಗ್ಗುರಾಗಿಯ ಹಿಟ್ಟು |ಮಂದಮತಿಯೆ ನೀನನ್ಯರಲಿ ಬಯಸುವ ನೀಚಮಾರ್ಗವ ಬಿಟ್ಟು ||ಕಂದರ್ಪಜನಕನ ಕಿಂಕರನೆಂಬುವ ಕಲಸೋಗರ ಕಟ್ಟು |ಸಂದೇಹಿಸದೆಪರಾತ್ಪರವಸ್ತು ಮುಕುಂದನಂಘ್ರಿಯ ತಟ್ಟು1ಅಗ್ಗದಾಸೆಗೆ ಸಂಗ್ರಹಿಸದಿರಘವೆಂಬ ಅಡಿಗಂಟು ದವಸವನು |ಬಗ್ಗನುಳಿದು ಸಂಪಾದಿಸು ಪರವೆಂಬ ಪುಣ್ಯದ ದವಸವನು ||ಯೋಗ್ಯರನರಿಯದೆ ಏತಕೆ ಬೇಡುವೆ ಸಾಕಾರ ಕೇಶವನು |ಕುಗ್ಗಗೊಡದೆ ಸಂಸಾರವೆಂತೆಂಬುವ ಕೋಟಲೆ ತಪ್ಪಿಸುವನು 2ಸಕ್ಕರಿ ಚಿಲಿಪಾಲು ಘ್ರತ ರಾಜಾನ್ನಕೆ ಸವಿಯೀವಹರಿಕಥೆಯ - ಬಿಟ್ಟು |ಅಕ್ಕರೆಯಿಂದಪೇಕ್ಷಿಸುವರೆ ನೀ ಅಲ್ಪರ ಸಂಗತಿಯ ||ಸೊಕ್ಕೊಳಿತಲ್ಲೆಲೊ ಮದಡು ಜೀವಾತ್ಮನೆ ಸ್ವಾಮಿಕಾರ್ಯಸ್ಥಿತಿಯ |ಗಕ್ಕನಂತು ಸೇರು ಪುರಂದರವಿಠಲನ ಚರಣಕಮಲದ್ವಿತಯ 3
--------------
ಪುರಂದರದಾಸರು
ಬಲ್ಲಿದ ನೀನೆಂದು ಬಡವರ ಬಾಯನು ಬಡಿಯದಿರೆಚ್ಚರಿಕೆ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಎಳ್ಳಷ್ಟು ತಪ್ಪಿದರೆ ಯಮನವರೆಳೆದೊಯ್ವರು ಎಚ್ಚರಿಕೆಚ್ಚರಿಕೆ ಪ.ಮಾಡು ದಾನ - ಧರ್ಮಪರ ಉಪಕಾರವ ಮರೆಯದಿರೆಚ್ಚರಿಕೆಕೇಡ ನೆಣಿಸಬೇಡ ನಂಬಿದ ಠಾವಿಗೆ ಕೆಡುವೆ ಮತ್ತೆಚ್ಚರಿಕೆಮೂಢರ ಒಡನಾಡಿ ಮುಂದರಿಯದೆ ನೀನು ಮುನಿಯದಿರೆಚ್ಚರಿಕೆನೋಡಿ ನಡೆವ ಸುಗುಣರ ನೋಡಿ ನಡೆಯೊನೀ ನಟನೆ ಬೇಡಚ್ಚರಿಕೆ 1ಹೊನ್ನ - ಹೆಣ್ಣು - ಮಣ್ಣು ತನ್ನನೆಅಣಕಿಸಿ ಹೋಹುವು ಎಚ್ಚರಿಕೆಮುನ್ನ ಮಾಡಿದ ಫಲದಿಂದಲಿ ಬಂದೆಯೊ ಮುಂದೆ ಇನ್ನಚ್ಚರಿಕೆಚೆನ್ನಾಗಿ ತಾ ಬಾಳಿ ಬದುಕುವೆನೆಂತೆಂಬ ಚೇಷ್ಟೆ ಬೇಡೆಚ್ಚರಿಕೆಬೆನ್ನನು ಬಡಿಯದೆ ಬಿಡುವರೆ ಯಮನವರು ಮರೆಯದಿರೆಚ್ಚರಿಕೆ 2ಬಾಳಿ ಬದುಕಿ ಸಿರಿವಾಹಗೆ ಟವಳಿಯಬಣಗು ಬೇಡದೆಚ್ಚರಿಕೆಹಾಳು ಬದುಕಿಗಾಗಿ ಹಲವರ ಕೂಡಣ ಹಗಣ ಬೇಡಚ್ಚರಿಕೆಕಾಲನವರು ಬಂದುಆವಾಗ ಕರೆವರೊ ಕಾಣದು ಎಚ್ಚರಿಕೆಶ್ರೀಲೋಲ ಪುರಂದರವಿಠಲರಾಯನ ಮರೆಯದಿರೆಚ್ಚರಿಕೆ 3
--------------
ಪುರಂದರದಾಸರು
ಬಾ ದೀನವತ್ಸಲ ಲಕ್ಷ್ಮೀನಿವಾಸ ಶ್ರೀವೆಂಕಟೇಶಮಾಧವಮಧುರಿಪು ಮಾನುಷವೇಷ ಶರಣಾಗತಪೋಷಪ.ವೇದಾಗಮ್ಯ ದಯೋದಧಿ ಗೈದಪ-ರಾಧ ಕ್ಷಮಿಸಿ ಸುಗುಣೋದಯನಾಗುತ ಅ.ಪ.ಅನಾಥ ಜನರ ಕಾಮಧೇನು ಕಾಯೊ ಎಮ್ಮನುದಾನವಕಾನನಕಲ್ಪಕೃಶಾನು ಸರ್ವೋತ್ತಮ ನೀನುಆನತಜನ ಸುತ್ರಾಣಿಸುವಂತೆ ಪ್ರ-ದಾನಿಯಂತೆ ಶತಭಾನು ಪ್ರಕಾಶದಿ 1ಕೋಟಿ ಬ್ರಹ್ಮಾಂಡವ ಕಾಯುವ ಮಹಿಮ ಸದ್ಗುಣಗಣಧಾಮಹಾಟಕವಸನ ಕೈರವಶ್ಯಾಮ ಮುನಿಮನವಿಶ್ರಾಮಕಾಟಕ ಮನಸಿನ ಮಾಟವ ನಿಲ್ಲಿಸಿಘೋಟಕಾಸ್ಯ ನರನಾಟಕಧಾರಿ 2ಸೇನಾನಾಯಕನಿಲ್ಲದ ಸೇನೆ ಕಂಡರೆ ತಾನೆಭೂನಾಥಗಿಲ್ಲವೇನು ಬೇನೆ ಉಂಟೆಂಬುದು ನೀನೆಕಾಣಿಸದೆಮ್ಮಲಿ ಮೌನವ ಮಾಳ್ಪರೆದೀನಜನರ ದುಮ್ಮಾನಗೊಳಿಸುವರೆ 3ಹಿಂದೆಮ್ಮ ಕಾಯ್ದವ ನೀನೆಹರಿಸುರನರ ಕೈವಾರಿಮಂದಜ್ಞಾನಿಗಳ ತಪ್ಪನುಮಾರಿಮೂರ್ಲೋಕೋದ್ಧಾರಿಹೊಂದಿದವರಿಗೆಂದೆಂದಿಗು ಬಿಡನೆಂ-ಬಂದವ ತೋರಿ ಆನಂದವ ಬೀರುತ 4ಸರ್ಪಾದ್ರಿಯಿಂದ ಓಡಿಬಂದ ಕಾರ್ಕಳದೊಳು ನಿಂದಚಪ್ಪರ ಶ್ರೀನಿವಾಸ ಮುಕುಂದ ಪರಿಪೂರ್ಣಾನಂದಒಪ್ಪಿಸಿದೆಮ್ಮಭಿಪ್ರಾಯವ ತಿ-ಮ್ಮಪ್ಪ ಲಕ್ಷ್ಮೀನಾರಾಯಣ ಸಲಿಸಲು 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಬಾ ಬಾ ಬಾ ಬಾರೋ ಕೃಷ್ಣಬಾರೋ ಮುಖವ ತೋರೋ ಪಬಾರೋ ಮುಖವ ತೋರೋಸರಸಾಮೃತ ಬೀರೋ ಬಾ ಬಾ ಬಾ 1ಸಾ ಸಾ ಸಾ ಸಾಕೋ ನಿನಗೀಲೋಕಮಾಯ ಮೋಹನಾ |ಲೋಕಮಾಯ ಮೋಹನಾ |ಶೋಕನೇಕ ನಾಶನಾ 2ಕೋ ಕೋ ಕೋ ಕೊಡಿಸೊನಮ್ಮ ಉಡುವ ಶೀರೆಕುಪ್ಪಸಾ |ಉಡುವ ಶೀರೆ ಕುಪ್ಪಸಾ |ಮಡದಿಯರಿಗೆ ಒಪ್ಪಿಸಾ 3ಅಲ್ಲ ಲ್ಲ ಲ್ಲ ಲ್ಲದಿದನೆಲ್ಲಗೋಪಿವಲ್ಲಭನೊಳ್ | ಎಲ್ಲಗೋಪಿವಲ್ಲಭನೊಳ್ |ಸೊಲ್ಲಿಸುವೆವು ನಿಲ್ಲದೇ 4ನಂದಂದನ ನಂದಗೋಪಿ|ಕಂದನೇ ಮುಕುಂದನೆ |ಕಂದನೇ ಮುಕುಂದನೇ|ಸುಂದರಾ ಗೋವಿಂದನೇ 5
--------------
ಗೋವಿಂದದಾಸ
ಬಾ ಬಾ ಬಾ ಹರಿಯೇ ಮೂರ್ಲೋಕದ ದೊರೆಯೇ ಪ.ಸರ್ವೋತ್ತಮ ಸರ್ವಾಂತರ್ಯಾಮಕಸರ್ವಾಧಾರ ಪ್ರವೀರ ಶೂರವರ 1ನಿತ್ಯಮುಕ್ತ ಪರಿಪೂರ್ಣಗುಣಾರ್ಣವಸತ್ಯನಿಯಾಮಕ ಸತ್ಯವಾದರೆ ತ್ವರೆ 2ರೂಪತ್ರಯ ಭವತಾಪಶಮನ ಸ-ದ್ವ್ಯಾಪಕ ಸ್ಥಾಪಕ ಶ್ರೀ ಪುರುಷೋತ್ತಮ 3ಭಜಕರ ಭಾಗ್ಯನಿಧಿಯು ನೀನೆಂಬುದುನಿಜವಾಗಿರೆ ಶ್ರೀ ರುಜುಗಣೇಶಪತಿ 4ಶ್ರೀಲಕ್ಷ್ಮೀನಾರಾಯಣ ನಿರ್ಗುಣಮೂಲೇಶ ಮುಕುಂದ ಮುನೀಂದ್ರವಂದಿತ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ