ಒಟ್ಟು 81 ಕಡೆಗಳಲ್ಲಿ , 34 ದಾಸರು , 77 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣಿಸಯ್ಯಾ ಕಂಜಜನಯ್ಯಾ | ಕರ್ಣರಹಿತ ಶಯ್ಯಾ ಕನಕಾದ್ರಿರಾಯಾ ಪ ಕರಿವರದನೆ ನಿನ್ನ ಚರಣ ನಂಬಿದೆ ಎನ್ನಪರಿಪಾಲಿಸುವದು ಪರಮ ಕೃಪಾಳೊ ಅ.ಪ. ಕೋಟಲೆ ಸಂಸಾರವೆಂಬೊ | ನೀಟು ಶರಧಿಯನ್ನುದಾಟಲಾರೆನೊ ನಾನೂ | ಇದೇನೊ ||ನಾಟಕಾಧಾರ ನಿನ್ನ | ನಂಬಿದಾ ಮೇಲೆ ಎನ್ನಬೂಟಕನೆನಸುವರೇ | ಮುರಾರೇ ||ಹಾಟಕಾಂಬರ ಧರ ಹರಿಯೇ ಕೇಳ್ವುದಿನ್ನು | ಕೋಟಿ ವ್ಯಾಳೆಗೆ ಭಕ್ತ ಕೋಟಿಯೊಳಗಿಟ್ಟು ಎನ್ನ | ನೀಟು ಮಾರ್ಗವ ತೋರಿ ಪಾಟುಪಡಿಪ ಯಮಕಾಟ ಕಳೆದು ದಿವ್ಯ ನೋಟದಿ ನೋಡು 1 ಕಂಸಾರಿ ಮುರಾರಿ2 ಇಂದಿರೆ ಜನನಿ ಗೋ-ವಿಂದ ಇನ್ನೊಬ್ಬರಿಲ್ಲ | ನೀ ಬಲ್ಲೆಲ್ಲಾ ||ಸುಂದರ ವಿಗ್ರಹನೆ | ಸುಗುಣ ಸಾಕಾರ ಶುಭಸಾಂದ್ರಾ ಭಕುತ ವತ್ಸಲ | ಗೋಪಾಲಾ ||ಎಂದೆಂದಿಗೆ ಎನ್ನಿಂದ ಅಗಲದೆ ಮುಕುಂದ ಮುನಿ ವೃಂದವಂದಿತ ಚರಣನೇ | ಸಿಂಧುಶಯನ ಶಿರಿ ಮೋಹನ ವಿಠಲ ಬಾ ಲೇಂದು ವದನ ಸುಗುಣ ಸಾಂದ್ರಾ ಉಪೇಂದ್ರಾ 3
--------------
ಮೋಹನದಾಸರು
ಕಾಲಕಾಲದಲಿ ಕೇಶವನೆನ್ನಿರೊ ಬಾಲ ಮುಕುಂದ ಮಾಧವನೆನ್ನಿರೊ ಧ್ರುವ ಉದಯಕಾಲದಲಿ ಅನಂತಮಹಿಮನೆನ್ನಿ ಮಧ್ಯಾಹ್ನದಲಿ ಪದ್ಮನಾ¨sನೆನ್ನಿ ಸಂಧ್ಯಾಸಾಯಂಕಾಲದಲಿ ಶ್ರೀಧರನೆನ್ನಿ ಸದಾ ಕಾಲದಲಿ ಶ್ರೀ ಹರಿಯೆನ್ನಿರೊ 1 ಏಳುತ ಮಚ್ಛಾವತಾರ ಅಚ್ಯುತನೆನ್ನಿ ಮಲಗುತ ಶೇಷಶಯನನೆನ್ನಿರೊ ಹೇಳುತ ವಿಷ್ಣುವರಾಹವತಾರನೆನ್ನಿ ಕೇಳುತ ಕೃಷ್ಣಾವತಾರನೆನ್ನಿ 2 ನಡೆಯುತ ಸುಗುಣ ನಿರ್ಗುಣ ಸರ್ವೋತ್ತಮನೆನ್ನಿ ನುಡಿಯುತ ನಾರಯಣನೆನ್ನಿರೊ ಮಾಡುತ ಕೃಷ್ಣನಿರ್ಮಿತ ದಾಮೋದರನೆನ್ನಿ ಕೂಡುತ ಕೂರ್ಮಾವತಾರನೆನ್ನಿ3 ಆಡುತ ಗರುಡವಾಹನ ತ್ರಿವಿಕ್ರಮನೆನ್ನಿ ಬೇಡುತ ಸ್ವಾಮಿ ವಾಮನನೆನ್ನಿರೊ ನೋಡುತ ವಾರಿಜನೇತ್ರ ಪ್ರಸಿದ್ದನೆನ್ನಿ ಪಾಡುತ ಪರಮಾತ್ಮನೆನ್ನಿರೊ 4 ಉದ್ಯೋಗದಲಿ ಸಹಕಾರನಿರುದ್ದನೆನ್ನಿ ಉದರ ಕಾಯದಲಿ ಉಪೇಂದ್ರನೆನ್ನಿ ಮೇದಿನೊಯೊಳು ಹರಿಮಧುಸೂದನನೆನ್ನಿ ಆದಿ ಅಂತಿಮ ಅಧೋಕ್ಷಜನೆನ್ನಿರೊ 5 ಹೃದಯಕಮಲದೊಳು ಹೃಷೀಕೇಶನು ಎನ್ನಿ ಶಬ್ದಜಿಹ್ವೆಲಿ ಜನಾರ್ಧನನೆನ್ನಿರೊ ಬುದ್ಧಿಯಲಿ ಸಿದ್ಧಬೌದ್ದಾವತಾರನೆನ್ನಿ ಅದಿಅನಾದಿ ಗೋವಿಂದನೆನ್ನಿ 6 ಅನುದಿನ ಮನದೊಳು ಘನಮಹಿಮನು ಎನ್ನಿ ತನುವಿನೊಳು ಪುರುಷೋತ್ತಮ ನಾನೆನ್ನಿ ಅನ್ನವುದಕ ಸೇವಿಸುವ ಹರಿಭೋಕ್ತನೆನ್ನಿ ಘನಭೂಷಣದಿ ಸಂಕರುಷಣನೆನ್ನಿ 7 ಸತಿಪತಿ ಸಂಯೋಗದಲಿ ಪ್ರದ್ಯುಮ್ನನೆನ್ನಿ ಪತಿತಪಾವನ ಪರಬ್ರಹ್ಮನೆನ್ನಿ ಭಕ್ತವತ್ಸಲ ನರಸಿಂಹಾವತಾರನೆನ್ನಿ ಮುಕ್ತಿದಾಯಕ ದೇವೋತ್ತಮನೆನ್ನಿರೊ 8 ಪಾವನಮೂರುತಿ ಪರಶುರಾಮನೆನ್ನಿ ಜೀವಸಂಜೀವ ಶ್ರೀ ರಾಮನೆನ್ನಿ ಭವಭಯನಾಶ ಕಲ್ಕ್ಯಾವತಾರನೆನ್ನಿ ಮಹಿಪತಿಗುರು ವಾಸುದೇವನೆನ್ನಿ 9
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಶಿಯ ಹಾದಿಯಲಿ ಕೇಶವನಿದ್ದಾನೆ ರಾಮರಾಮ ಕೇಶವನ ದಯದಿ ಕಾಶಿಯಾತ್ರೆಯ ಕಂಡೆ ರಾಮರಾಮ 1 ಬದರಿಕಾಶ್ರಮದಲ್ಲಿ ನಾರಾಯಣನಿದ್ದಾನೆ ರಾಮರಾಮ ಬದರಿಕಾಶ್ರಮ ಕಂಡೆ ನಾರಾಯಣನ ದಯದಿ ರಾಮರಾಮ 2 ಪ್ರಯಾಗ ನದಿಯಲ್ಲಿ ಮಾಧವನಿದ್ದಾನೆ ರಾಮರಾಮ ಪ್ರಯಾಗ ನದಿ ಮಿಂದೆ ಮಾಧವನ ದಯದಿ ರಾಮರಾಮ 3 ಗೋಕುಲದಲ್ಲಿ ಶ್ರೀ ಗೋವಿಂದನಿದ್ದಾನೆ ರಾಮರಾಮ ಗೋಕುಲವನು ಕಂಡೆ ಗೋವಿಂದನ ದಯದಿ ರಾಮರಾಮ 4 ವಿಷ್ಣು ತೀರ್ಥದಲಿ ಶ್ರೀವಿಷ್ಣುವಿದ್ದಾನೆ ರಾಮರಾಮ ವಿಷ್ಣು ತೀರ್ಥದಿ ಮಿಂದೆ ವಿಷ್ಣುವಿನ ದಯದಿಂದ ರಾಮರಾಮ 5 ಮತ್ಸ್ಯತೀರ್ಥದಲ್ಲಿ ಮಧುಸೂದನನಿದ್ದಾನೆ ರಾಮರಾಮ ದಯದಿ ರಾಮರಾಮ6 ತ್ರಿವೇಣಿಯಲ್ಲಿ ತ್ರಿವಿಕ್ರಮನಿದ್ದಾನೆ ರಾಮರಾಮ ತ್ರಿವಿಕ್ರಮನ ದಯದಿ ತ್ರಿವೇಣಿಯಲ್ಲಿ ಮಿಂದೆ ರಾಮರಾಮ7 ವಾಮನ ನಮ್ಮನು ಒಲಿದು ಕಾಯುವನಂತೆ ರಾಮರಾಮ ವಾಮನನ ದಯದಿ ಭೂವೈಕುಂಠವ ಕಂಡೆ ರಾಮರಾಮ8 ಶ್ರೀಧರ ನಮ್ಮ ಹೃದಯದಲ್ಲಿದ್ದಾನೆ ರಾಮರಾಮ ಶ್ರೀಧರನ ದಯದಿಂದ ಹೃದಯವಾಸನ ಕಂಡೆ ರಾಮರಾಮ9 ಋಷಿಗಳಾಶ್ರಮದಲ್ಲಿ ಹೃಷಿಕೇಶನಿದ್ದಾನೆ ರಾಮರಾಮ ಹೃಷಿಕೇಶನ ದಯದಿ ಋಷಿಗಳಾಶ್ರಮ ಕಂಡೆ ರಾಮರಾಮ10 ಪದ್ಮನಾಭದಲ್ಲಿ ಪದ್ಮನಾಭನಿದ್ದಾನೆ ರಾಮರಾಮ ಪದ್ಮನಾಭನ ದಯದಿ ಪದ್ಮನಾಭನ ಕಂಡೆ ರಾಮರಾಮ11 ಸಾಧು ಬೃಂದದಲ್ಲಿ ದಾಮೋದರನಿದ್ದಾನೆ ರಾಮರಾಮ ಸಾಧು ಬೃಂದವ ಕಂಡೆ ದಾಮೋದರನ ದಯದಿ ರಾಮರಾಮ 12 ಸಕಲ ತೀರ್ಥದಲ್ಲಿ ಸಂಕರ್ಷಣನಿದ್ದಾನೆ ರಾಮರಾಮ ಸಂಕರ್ಷಣನ ದಯದಿ ಸಕಲ ತೀರ್ಥವೆ ಮಿಂದೆ ರಾಮರಾಮ 13 ವಸುಧೇಯ ಮೇಲೆಲ್ಲ ವಾಸುದೇವನಿದ್ದಾನೆ ರಾಮರಾಮ ವಾಸುದೇವನ ದಯದಿ ವಸುಧೆಯೆಲ್ಲವ ಕಂಡೆ ರಾಮರಾಮ 14 ವೃದ್ಧಗಂಗೆಯಲ್ಲಿ ಪ್ರದ್ಯುಮ್ನನಿದ್ದಾನೆ ರಾಮರಾಮ ಪ್ರದ್ಯುಮ್ನನ ದಯದಿ ವೃದ್ಧಗಂಗೆಯ ಮಿಂದೆ ರಾಮರಾಮ 15 ಅಲಕನಂದೆಯಲ್ಲಿ ಅನಿರುದ್ಧನಿದ್ದಾನೆ ರಾಮರಾಮ ಅಲಕನಂದನೆ ಮಿಂದೆ ಅನಿರುದ್ಧನ ದಯದಿ ರಾಮರಾಮ 16 ಪುಣ್ಯಕ್ಷೇತ್ರದಲ್ಲಿ ಪುರುಷೋತ್ತಮನಿದ್ದಾನೆ ರಾಮರಾಮ ಪುಣ್ಯಕ್ಷೇತ್ರವ ಕಂಡೆ ಪುರುಷೋತ್ತಮನ ದಯದಿ ರಾಮರಾಮ 17 ವೈತರಣಿಯಲ್ಲಿ ಅಧೋಕ್ಷಜನಿದ್ದಾನೆ ರಾಮರಾಮ ವೈತರಣಿದಾಟಿದೆ ಅಧೋಕ್ಷಜನ ದಯದಿ ರಾಮರಾಮ 18 ನಿರ್ಮಲ ಗಂಗೆಲಿ ನರಸಿಂಹನಿದ್ದಾನೆ ರಾಮರಾಮ ನಿರ್ಮಲ ಗಂಗೆಯ ಮಿಂದೆ ನರಸಿಂಹನ ದಯದಿ ರಾಮರಾಮ 19 ವೈಕುಂಠಗಿರಿಯಲ್ಲಿ ಅಚ್ಯುತನಿದ್ದಾನೆ ರಾಮರಾಮ ವೈಕುಂಠಗಿರಿ ಕಂಡೆ ಅಚ್ಯುತನ ದಯದಿ ರಾಮರಾಮ20 ಜಾಹ್ನವಿಯಲ್ಲಿ ಜನಾದರ್Àನಿದ್ದಾನೆ ರಾಮರಾಮ ಜನಾರ್ದನನ ದಯದಿ ಜಾಹ್ನವಿಯಲಿ ಮಿಂದೆ ರಾಮರಾಮ21 ಉಡುಪಿ ಕ್ಷೇತ್ರದಲ್ಲಿ ಉಪೇಂದ್ರನಿದ್ದಾನೆ ರಾಮರಾಮ ಉಡುಪಿ ಕ್ಷೇತ್ರವ ಕಂಡೆ ಉಪೇಂದ್ರನ ದಯದಿ ರಾಮರಾಮ 22 ಹರಿಯುವ ನದಿಯಲ್ಲಿ ಶ್ರೀ ಹರಿಯಿದ್ದಾನೆ ರಾಮರಾಮ ಹರಿಯ ದಯದಿಂದ ಹರಿವ ನದಿಯ ಮಿಂದೆ ರಾಮರಾಮ 23 ಕೃಷ್ಣನ ದಯದಿ ಸಕಲ ಕಷ್ಟ ಬಿಟ್ಟಿತು ರಾಮರಾಮ 24 ಭಕ್ತಿಲಿಪ್ಪತ್ನಾಲ್ಕು ನಾಮ ಪೇಳುವರಿಗೆ ರಾಮರಾಮ ಭುಕ್ತಿ ಮುಕ್ತಿಯ ನೀವ ವಿಜಯವಿಠ್ಠಲರೇಯ ರಾಮರಾಮ 25
--------------
ವಿಜಯದಾಸ
ಕೂಸಿನಲ್ಲಿ ಬಾಲಕೃಷ್ಣ ಕೇಶವಾರ್ಯ ಪುತ್ರನಲ್ಲಿವಾಸಮಾಡಿ ಸತತ ಮನವ ಪೋಷಿಸೂವನು 1 ತರುಣಿಯಲ್ಲಿ ಮಾಧವವಿರುವ ಶರಣರೊಳಗೆ ವಸುದೇವನರಿತು ತೋಷಿಸುವುದು ಸತತ ಹರುಷದಿಂದಲೀ 2 ವಾಸುದೇವ ಖಗವರೇಣ್ಯನು 3 ದಿವಿಜ ನಾರಾಯಣನು ವಸ್ತಿ ಮಾಡಿಹನು4 ಸುರಭಿಯಲ್ಲಿ ವಿಷ್ಣುರೂಪಿ ತುರಗದಲ್ಲಿ ವಾಮನಾತ್ಮಇರುವ ಸಂಕರ್ಷಣಾಖ್ಯ ಚರಮ ಜಾತಿಯಲೀ 5 ನಿತ್ಯ ವೈಶ್ಯ ಪ್ರದ್ಯುಮ್ನಭೃತ್ಯರಲ್ಲಿ ಮಹಿದ್ರಾಸ ಕೃತ್ಯ ನಡೆಸುವಾ 6 ಮಹಿಷಿಯಲ್ಲಿ ಉಪೇಂದ್ರ ಗಜದಲ್ಲಿ ಚಕ್ರಪಾಣಿಬೆಕ್ಕಿನಲ್ಲಿ ವಿಶ್ವರೂಪ ಸತತ ತಿಳಿವುದೂ 7 ಶುನಕ ಭೂತ ಭಾವನಸರ್ವರೊಳಗೆ ಅನಂತರೂಪ ಹರಿ ನಿವಾಸಿಪ 8 ನಿತ್ಯದಲ್ಲಿ ಹರಿಯು ಹೀಗೆ ಚಿತ್ತವಿಟ್ಟು ಲಕ್ಷಣೀಯುವರ್ತಿಸುತಲಿ ಯದುವರೇಣ್ಯನ ಪತ್ನಿಯಾದಳು 9 ಪರಮಪುರುಷನಮಲ ರೂಪ ಸ್ಮರಿಸುತಲೆ ಪೋಷ್ಯರಲ್ಲಿತೊರೆದು ಕರ್ಮಲೇಪ ಶಿರಿಯ ಹೋದುವಾ 10 ನಂದಸುತನ ತಿಳಿದು ಪೋಷ್ಯ ವೃಂದದಲ್ಲಿ ಭೋಗ ನೀಡಿಇಂದಿರೇಶ ನಮಗೆ ಮೋಕ್ಷಾನಂದ ಕೊಡುವನು 11
--------------
ಇಂದಿರೇಶರು
ಕೃಷ್ಣ ಮುರಾರಿ ಕೇಶವ ಮುರಾರಿಅಚ್ಚುತಾನಂತ ಗೋವಿಂದ ಮುರಾರಿಪ. ವೇಷಧಾರಿಯಾಗಿ ಬಂದು ಅಸುರರ ಸಂಹರಿಸಿಭೂಸುರರಿಗ್ವೊರವನಿತ್ತ್ಯೋ ಕೇಶವ ಮುರಾರಿ 1 ನಾ ತಾಳಲಾರೆನೊ ಲೋಕಾಧಿಪತಿಯೆ ಕಾಯೊಅನಾಥರಕ್ಷಕ ನಾರಾಯಣನೆ ಮುರಾರಿ 2 ಮಾಧವ ಮುರಾರಿ3 ಅನೇಕ ಗೋವ್ಗಳ ಕಾಯ್ದ ಗೋಪಾಲಮೂರುತಿಗೋಪಿಯರರಸ ಗೋವಿಂದ ಮುರಾರಿ 4 ಕಟ್ಟಿದ ಕಾಮನೆಯ ಬಿಟ್ಟು ಕಳಚಿ ಮನ-ದಿಷ್ಟಾರ್ಥವನೀವ ವಿಷ್ಣು ಮುರಾರಿ 5 ಮಧುರವಾಕ್ಯಗಳಿಂದ ಮಂದಿರಕಾಗಿ ಬಾರೊಮನಸಿಜನಯ್ಯ ಮಧುಸೂದನ ಮುರಾರಿ 6 ತಿದ್ದಿದ ಕಸ್ತುರಿತಿಲಕ ತಿಗುರಿದ ಪರಿಮಳಗಂಧಮುದ್ದು ನಸುನಗೆಯ ತ್ರಿವಿಕ್ರಮ ಮುರಾರಿ7 ಕಾಮಿನಿ ಅಗಲಿಬಂದು ಸೀಮೆನಾಳುವೆÀನೆಂದುನೇಮವಾಕ್ಯದಿ ನಿಂದ ವಾಮನ ಮುರಾರಿ 8 ಶ್ರೀಯರಸ ಮೇಳದಿ ರಮಿಸಿ ಬಹುಕಾಲದಿಸಿಂಧುಶಯನ ಶ್ರೀಧರನೆ ಮುರಾರಿ 9 ಋಷಿಗಳಿಗ್ವರವಿತ್ತು ಬೃಂದಾವನದಲ್ಲಿ ನಿಂದುಹರುಷವಾರಿಧಿ ಹೃಷಿಕೇಶ ಮುರಾರಿ 10 ಪಾವನ್ನ ಮೂರುತಿ ಪರಮದಯಾಳು ನೀನೆಪಾಲಿಸೊ ಶ್ರೀಪದ್ಮನಾಭ ಮುರಾರಿ11 ದಾನವರ ಮರ್ದಿಸಿ ಸುಮನಸರಿಗೊಲಿದದಾನದತ್ತನೆ ದಾಮೋದರನೆ ಮುರಾರಿ 12 ಶಂಕೆಯಿಲ್ಲದೆ ಗೆಲಿಸು ಶಂಖಚಕ್ರವ ಧÀರಿಸಿ ಅ-ಲಂಕಾರವಾದ ಸಂಕರ್ಷಣನೆ ಮುರಾರಿ 13 ವಾಸುದೇವ ಮುರಾರಿ 14 ಇದ್ದ ಗೋಪೇರಮನೆಯ ಕದ್ದು ಬೆಣ್ಣೆಯ ಮೆದ್ದಪದ್ಮದಳಾಕ್ಷ ಪ್ರದ್ಯುಮ್ನ ಮುರಾರಿ 15 ಅನಿರುದ್ಧ ಮುರಾರಿ16 ಪುನಗು ಕಸ್ತೂರಿಗಂಧ ಪರಿಮಳಪುಷ್ಪದಿಂದ ಪುಣ್ಯಮೂರುತಿ ಪುರುಷೋತ್ತಮನೆ ಮುರಾರಿ 17 ಅವನಿ ಅಧೋಕ್ಷಜ ಮುರಾರಿ 18 ನಾನೇನ ಪೇಳಲಿ ನಗೆನಗೆಯಲ್ಲಿ ಅಕ್ಷಿಕ್ರೂರವಾಯಿತು ನಾರಸಿಂಹ ಮುರಾರಿ 19 ಮೆಚ್ಚಿದೆ ನಾ ನಿನ್ನ ಪಕ್ಷಿವಾಹನ ಸ್ವಾಮಿಮುಚ್ಚುಮರೆಗಳ್ಯಾಕೊ ಅಚ್ಚುತ ಮುರಾರಿ 20 ಜಾಣತನದಿ ಪೋಗಿ ಜಾರಸ್ತ್ರೀಯರನ್ನುಒಡಗೂಡಿ ಆಡಿದ ಜನಾರ್ದನ ಮುರಾರಿ21 ಉಗುರಲ್ಲಿ ಹಿರಣ್ಯಕನ ಸೀಳಿ ಉರದಲ್ಲಿ ಮಾಲೆಯ ಧರಿಸಿಉಬ್ಬಲ್ಲಿ ಮೆರೆದ ಉಪೇಂದ್ರ ಮುರಾರಿ 22 ಹಿರಣ್ಯಾಕ್ಷತನಯನಂದು ಕರೆಯೆ ಕಂಬದಿ ಬಂದಗರುವದಿಂದಲೆ ನರಹರಿಯೆ ಮುರಾರಿ 23 ಅಟ್ಟಡವಿಯ ತಪಸು ಎಷ್ಟುದಿನವೊ ಸ್ವಾಮಿಪಟ್ಟಣಕಾಗಿ ಬಾರೊ ಕೃಷ್ಣಮುರಾರಿ 24 ಎಲ್ಲರ ಸಲಹಿದ ಫುಲ್ಲಲೋಚನ ಸ್ವಾಮಿಪಾಲಿಸೊ ಶ್ರೀಹಯವದನ ಮುರಾರಿ 25
--------------
ವಾದಿರಾಜ
ಕೇಶವ ಜಗದೀಶ ಸಾಸಿರಭಾಸುರಕೋಟಿಸಂಕಾಶ ವಾಸವಾದಿಗಳ ವಂದ್ಯ ಸೀತಾಪತೆ 1 ನಾರಾಯಣ ಸಕಲವೇದಪಾರಾಯಣ ಕೃಷ್ಣ ನಾರದಾದಿಗಳ ವಂದ್ಯ ಸೀತಾಪತೆ 2 ಮಾಧವ ಮಂಗಳಗಾತ್ರ ವೇದವನ್ನೆ ಕದ್ದು ಒಯ್ದ ಆ ಖಳನ ಕೊಂದೆ ಸೀತಾಪತೆ 3 ಗೋವಿಂದ ಗೋಕುಲಬಾಲ ಗೋಪಿಯರ ಮನೋಹರ ಆದಿ ಕೂರ್ಮಾವತಾರ ಸೀತಾಪತೆ 4 ವಿಷ್ಣುವೆ ಯತಿಗಳ ವಂದ್ಯ ಅಷ್ಟಲಕ್ಷ್ಮಿಯರ ನಾಥ ದಿಟ್ಟ ವÀರಾಹರೂಪನಾದ ಸೀತಾಪತೆ 5 ವೈರಿ ಯದುಕುಲಕ್ಕೆ ತಿಲಕನಾದ ಚೆಲುವನಾದ ಹರಿ ನೀನೆ ಸೀತಾಪತೆ 6 ತ್ರಿವಿಕ್ರಮರೂಪನಾಗಿ ತ್ರಿಜಗವನ್ನೆ ಪಾಲಿಸಿದ ವಾಮನರೂಪಿ ನೀನೆ ಸೀತಾಪತೆ7 ವಾಮನರೂಪವ ತಾಳಿ ಆ ಮಹಾಬಲಿಯನ್ನೆ ತುಳಿದು ನೇಮದಿ ಕ್ಷತ್ರೇರ ಕೊಂದ ಸೀತಾಪತೆ 8 ಶ್ರೀಧರ ನೀನೆಂದೆನಿಸಿ ಶೋಷಿಸಿ ಖಳg Àನೆಲ್ಲ ಜಾನಕಿಯ ತÀಂದ ರಾಮ ಸೀತಾಪತೆ 9 ಹೃಷೀಕೇಶ ನೀನೆಂದು ಋಷಿಗಳು ಸ್ತುತಿಯ ಮಾಡಿ ವಸುದೇವಸುತ ಕೃಷ್ಣ ಸೀತಾಪತೆ 10 ಬುದ್ಧಾವತಾರ ಕೃಷ್ಣ ಸೀತಾಪತೆ 11 ದಾಮೋದರನೆಂದು ನಿಮ್ಮ ದೇವತೆಗಳೆಲ್ಲ ಕರೆಯೆ ಆ ಮಹಾ ಕಲ್ಕ್ಯ್ಕನಾದ ಸೀತಾಪತೆ 12 ಸಂಕರುಷಣ ದೇವ ನಿಮ್ಮ ಕಿಂಕರರು ನಾವೆಲ್ಲರಯ್ಯ ಪಂಕಜಾಸನವಂದ್ಯ ರಾಮ ಸೀತಾಪತೆ 1 3 ವಾಸುದೇವ ನಿಮ್ಮ ಪಾದಕ್ಕೆ ವಂದನೆಯ ಮಾಡುವೆನಯ್ಯ ದೋಷರಾಶಿ ನಾಶಮಾಡು ಸೀತಾಪತೆ 1 4 ಸುರರು ಎದ್ದು ನಿನ್ನೆ ಪೊಗಳುತ್ತಿರೆ ಉದ್ಧಾರ ಮಾಡಿದ ದೇವ ಸೀತಾಪತೆ 15 ಅನುದಿನ ನಿನ್ನ ಕರೆಯೆ ಅನಿಮಿತ್ತಬಂಧು ಕೃಷ್ಣ ಸೀತಾಪತೆ 16 ಮನೋಹರುಷ ನೀಡಿದ ರಾಮ ಸೀತಾಪತೆ 17 ಅಧೋಕ್ಷಜ ಲೋಕಗಳಿಗೆ ಆಧಾರಭೂತನಾ ಗಿರುವೆ ವೇದವೇದ್ಯರಾಮ ಸೀತಾಪತೆ 18 ಬೋಧನೆಯನ್ನು ಮಾಡಿದ ಸೀತಾಪತೆ 19 ಅಚ್ಯುತ ವಿಶ್ವಾಮಿತ್ರ ಅತಿಶಯ ಯಾಗವ ಕಾಯ್ದ ಭಕ್ತವತ್ಸಲ ರಾಮ ಸೀತಾಪತೆ 20 ಜನಾರ್ದನರೂಪನಾಗಿ ಜಾನಕಿಯ ತಂದ ಜಾಹ್ನವೀಜನಕ ರಾಮ ಸೀತಾಪತೆ 21 ಉಪೇಂದ್ರನೆ ಉದ್ಧÀವಗೆ ಉಪದೇಶವನೆ ಮಾಡಿ ಅಪರಿಮಿತಪದವಿ ಕೊಟ್ಟ ಸೀತಾಪತೆ 22 ಕಾಲ ತಪವ ಮಾಡಿ ಚರಿಸುವರಿಗೆ ಮೋಕ್ಷವಿತ್ತೆ ಸೀತಾಪತೆ 2 3 ರÀಕ್ಷಿಸಯ್ಯ ಕೃಷ್ಣ ರಾಮ ರಕ್ಷಿಸಯ್ಯ ಹಯವದನ ಪಕ್ಷಿವಾಹನ ರಾಮ ಸೀತಾಪತೆ 24
--------------
ವಾದಿರಾಜ
ಗಾನಲೋಲನಾದ ಶ್ರೀನಿವಾಸನಾ ಸರ್ವೇಶನಾ ಗಾನದಿಂ ಭಜನೆ ಮಾಡೋ ಜಾನಕೀ ರಮಣನಾ ಪ ಮಲಗಿ ಪಾಡೇ ಮುರಲೀಧರನು ವಲಿದು ಕುಳಿತು ಕೇಳ್ವನೋ ಕುಳಿತು ಪಾಡೇ ನಿಲುವ ನಿಂದರೆ ನಲಿವನೋ ತಾ ವಲಿವನೋ 1 ಬಾಲನಾ ಗೋಪಾಲನಾ ಸುಶೀಲನಾ ಕೃಪಾಲನಾ ನೀಲಮೇಘ ಲಕುಮೀಲೋಲನಾ ವಿಶಾಲನಾ 2 ನಿತ್ಯನಾ ನಿರ್ಲಿಪ್ತನಾ ಪರಮಾತ್ಮ ಸಕಲವ್ಯಾಪ್ತನಾ ಭಕ್ತರಲ್ಲಿ ನಿರುತ ಪ್ರೀತಿಯುಕ್ತನಾ ಸ್ವಶಕ್ತನಾ 3 ಆನಂದನಾ ದಯಾವೃಂದನಾ ಮುಕುಂದನಾ ಚಂದ್ರಕುಲಕೇ ಇಂದ್ರನಾ ಉಪೇಂದ್ರನಾ ಗೋವಿದನಾ 4 ಧೀರನಾ ಗಂಭೀರನಾ ಯದುವೀರನಾ ದಧಿಚೋರನಾ ಮಾರಜನಕ ವರದ ಶ್ರೀ ಹನುಮೇಶ ವಿಠಲರಾಯನಾ 5
--------------
ಹನುಮೇಶವಿಠಲ
ಜಯ ಜಯ ಶ್ರೀ ಹರಿ ಶೌರಿ ಜಯ ಜಯ ಮಂದರಧಾರಿ ಜಯ ಜಯ ಶ್ರೀ ಮುರವೈರಿ ಕಂಸಾರಿ ಪ ಮುತ್ತಿನ ಮಂಟಪದಿ ರತ್ನಪೀಠವನಿರಿಸಿ ಅರ್ಥಿಲಿ ಬಾ ಹಸೆಗೆನ್ನುತ ಕರೆವರು ಮುತ್ತೆ ೈದೆಯರುಗಳು 1 ಇಂದಿರೆ ರಮಣ ಬಾ ಕಂದರ್ಪ ಜನಕ ಬಾ ಸುಂದರಾಂಗನೆ ಬಾ ಹಸೆಗೆನ್ನುತ ಚಂದದಿ ಕರೆದರು 2 ಕಂಬು ಕಂದರೆಯೆ ಬಾ ಅಂಬುಜ ಮುಖಿಯೆ ಬಾ ಸಂಭ್ರಮದಲಿ ಬಾ ಹಸೆಗೆನ್ನುತ ಕರೆದರು ಅಂಬುಜ ಮುಖಿಯರು 3 ನಾರಿ ರುಕ್ಮಿಣಿ ದೇವಿ ನಾರದ ವಂದ್ಯನಿಗೆ ಚಾರು ಪರಿಮಳ ಅರಿಶಿನ ಕುಂಕುಮ ಹಾರವನರ್ಪಿಸುತ 4 ಪರಿ ಕುಸುಮಗಳ ಪದಕÀ ಪುಷ್ಪದ ಮಾಲೆ ಪರಮಾತ್ಮನ ಕೊರಳಿಗೆ ಹಾಕುತ ಅಲಂಕರಿಸಿದಳಾಗ5 ಜಯ ಜಯ ಶ್ರೀ ಕೇಶವನೆ ಜಯ ಜಯ ನಾರಾಯಣನೆ ಜಯ ಜಯ ಶ್ರೀ ಮಾಧವನೆ ಜಯ ಜಯ ಗೋವಿಂದ 6 ಜಯ ಜಯ ಶ್ರೀ ವಿಷ್ಣುಹರೆ ಜಯ ಜಯ ಶ್ರೀ ಮಧುಸೂದನನೆ ಜಯ ಜಯ ಶ್ರೀ ತ್ರಿವಿಕ್ರಮನೆ ಜಯ ಜಯ ವಾಮನನೇ 7 ಜಯ ಜಯ ಶ್ರೀ ಶ್ರೀಧರನೇ ಜಯ ಜಯ ಶ್ರೀ ಹೃಷಿಕೇಶ ಜಯ ಜಯ ಶ್ರೀ ಪದ್ಮನಾಭ ಜಯ ದಾಮೋದರನೆ 8 ಜಯ ಜಯ ಸಂಕರ್ಷಣನೆ ಜಯ ಜಯ ಶ್ರೀ ವಾಸುದೇವ ಜಯ ಜಯ ಶ್ರೀ ಪ್ರದ್ಯುಮ್ನ ಅನಿರುದ್ಧ 9 ಜಯ ಜಯ ಶ್ರೀ ಪುರುಷೋತ್ತಮನೆ ಜಯ ಜಯ ಶ್ರೀ ಅಧೋಕ್ಷಜನೆ ಜಯ ಜಯ ಶ್ರೀ ನಾರಸಿಂಹ ಜಯ ಜಯ ಅಚ್ಚುತನೆ 10 ಜಯ ಜಯ ಶ್ರೀ ಜನಾರ್ದನನೆ ಜಯ ಜಯ ಶ್ರೀ ಉಪೇಂದ್ರಹರೇ ಜಯ ಜಯ ಶ್ರೀ ಹರಿ ಶ್ರೀಶಾ ಜಯ ಜಯ ಶ್ರೀ ಕೃಷ್ಣಾ11 ಇಂತು ದೇವನ ಸ್ತುತಿಸಿ ಸಂತಸದಿ ವೀಳ್ಯವನು ಕಂತು ಪಿತನಿಗೆ ಅರ್ಪಿಸಿ ಮುದದಿ ವಂದಿಸಿ ಭಕ್ತಿಯಲಿ12 ಕಮಲಾಕ್ಷಿಯರು ಕೂಡಿ ಕನಕದಾರತಿ ಪಿಡಿದು ಕಮಲನಾಭ ವಿಠ್ಠಲ ಲಕ್ಷ್ಮೀಯರಿಗೆಬೆಳಗಿದರಾಗ 13
--------------
ನಿಡಗುರುಕಿ ಜೀವೂಬಾಯಿ
ಜಾಹ್ನವಿ ಜನಕ ಮೂಜಗತ್ಪತಿ ಸುರಕುಲ ಸನಕಾ ದೀಜನ ಮನೋಹರ ಮಾಣಿಕ್ಯ ಕನಕಾ ವೈಜಯಂತಿ ಹಾರ ಪಾವನ್ನ ಪದಕ ಪ ಕೇಶಿಭಂಜನ ವ್ಯೋಮಕೇಶ ವಂದಿತ ಪಾದ ಕ್ಲೇಶನಾಶನ ವಾತೇಶನ ಜನಕ ಕೇಶರಿರುಹ ಮುಂಜಿಕೇಶನೆ ಕುಂಕುಮ ಶೌರಿ 1 ವಾರುಣಿ ಪತಿನುತ ವಾರುಣನ ಭಯ ನಿ ವಾರಣಾ ವಾರಣಾಶಿ ಪುರದರಸೆ ವಾರಣ ನಗರಿಯ ವಾರನಹತಪಲ್ಲ ವಾರುಣಿ ಪಾಣಿಯೆ ನಾರಾಯಣನೆ ಜೋ ಜೋ 2 ಮಾದೇವಿ ರಮಣ ಭೂಮಿದೇವಿ ಉದ್ಧಾರ ಮಾಧುರ್ಯ ವಚನ ಉಮಾದೇವಿ ವಿನುತಾ ಮಾಧಾರ ಮಹಶೂರ ಮತ್ಕುಲನೆ ಪ್ರೇ ಮಾಧವ ರಾಯಾ 3 ಗೋವಳಿ ಪರಿಪಾಲ ಗೋವಳೇರಾ ಪ್ರಿಯಾ ಗೋವುಗಳ ಕಾಯಿದ ಗೋವಳರಾಯಾ ವಿಪ್ರ ಸಂರಕ್ಷ ಗೋವಿದಾಂಪತಿ ರಂಗ ಗೋವಿಂದ ನಂದ 4 ಮಧುಕೈಟಭಾಸುರ ಮದಗರ್ವ ಮರ್ದನ ನಿತ್ಯ ಮಧುರನ್ನ ಪಾನಾ ಮಧುರಾಪುರ ಪಾಲ ಮದಗಜ ಹರಣಾ ಶಾ ಮದವರ್ಣ ಶರೀರ ಮಧುಸೂದನನೆ 5 ಇಷ್ಟಭಕ್ತರ ಕುಲ ಇಷ್ಟದೈವವೆ ಸರ್ವ ಇಷ್ಟಾರ್ಥ ಕೊಡುವ ಬಲಿಷ್ಟನು ನಿನ್ನ ಇಷ್ಟ ಅಷ್ಟಯೆಂದು ತಿಳಿಯಲಿ ವಶವಲ್ಲ ವಿಷ್ಣು ಸರ್ವೋತ್ತಮ ವಿಶ್ವನಾಟಕನೆ6 ಅಕ್ರಮದಲಿ ಸ್ವರ್ಗ ಆಕ್ರಮಿಸಿ ಬಲಿ ವಿಕ್ರಮನಾಗಿ ಕಾಲಕ್ರಮಣಿ ಮಾಡೆ ಶಕ್ರಮರ್ಚಿಸೆ ಅನುಕ್ರಮನಾಗಿ ಪ ರಾಕ್ರಮದಲಿ ಬೆಳದೆ ತ್ರಿವಿಕ್ರಮನೆ 7 ವಾಮಲೋಚನೆಯರ ವಾಮನ ಕೆಡಿಸಿದೆ ವಾಮನವಾಶಿಷ್ಟವಾ ಮುನಿವಂದ್ಯ ವಾಮನದಲಿ ದಾನವಾಮನ್ಯಗಳರನ್ನು ಅ ವಮಾನ ಮಾಡಿದೆ ಸಿರಿವಾಮನನೆ 8 ಶ್ರೀಧರ ರಮಣನೆ ಶೃಂಗಾರ ವಾರಿಧಿ ಶ್ರೀಧನ ಸಂಪತ್ತಾಶ್ರಿತ ಜನರಿಗೆ ಶ್ರೀಧೇನು ನೀನಯ್ಯಾ ಶ್ರೀ ಕರುಣಾಕರ ಶ್ರೀದೇವಿ ಉರಭೂಷಾ ಶ್ರೀಧರನಂತಾ 9 ಋಷಿಕೇಶನ ತಾತ ಋಷಿಜನ ಸಂಪ್ರೀತ ಋಷಿಕುಲೋದ್ಭವ ಪುರುಷ ರಾಮ ಮಹಾ ಋಷಿನಾಮಧೇಯನೆ ಋಷಿಪತ್ನಿ ಪಾಲನೆ ಋಷಿಗಳ ಒಡೆಯನೆ ಹೃಷಿಕೇಶ ದೇವ 10 ಪದುಮಜಾಂಡದಲ್ಲಿ ಪದುಮೆ ಮಾತನು ಕೇಳಿ ಪದುಮನಾಭಿಯಲ್ಲಿ ಪದುಮಜನ ಪೆತ್ತ ಪದುಮಾಸ್ಯ ಪದುಮಾಕ್ಷ ಪದುಮಕರನೆ ಪಾದ ಪದುಮ ಮಿಗಲು ಕಾಂತಿ ಪದುಮನಾಭನೆ11 ಧಾಮನಿಧಿಕುಲನು ಧಾಮನೆ ನಿರುತ ತ್ರಿ ಧಾಮನಿವಾಸ ಸುಧಾಮನ ಮಿತ್ರ ಧಾಮ ಪುಣ್ಯಧಾಮ ಭಕ್ತ ಹೃದ್ವನಜ ಧಾಮ ಮಧುಕರನೆ ದಾಮೋದರ ಧರ್ಮಾ 12 ಶಂಖ ಸುರಾಹರಾ ನಿಃಶಂಕ ಚರಿತ ಶಂಖಪಾಣಿ ಶಶಾಂಕ ಸುವದನ ಸಂಖ್ಯೆಯಿಲ್ಲದೆ ತಾಯಿ ಸಂಕಲೆ ಹರಿಗಡಿದೆ ಸಂಕರುಷಣನುವುಜ ಸಂಕರುಷಣನೆ 13 ಪ್ರಧಾನ ಮೂರುತಿ ಪ್ರದ್ವೀಪ ವರ್ಣ ಸುಪ್ರದಾಯಕನೆ ಪ್ರದೇಶ ಪರಿಮಾಣ ವರಪ್ರದ ಸಿದ್ಧನೆ ಪ್ರದ್ಯುಕ್ತ ಅವ್ಯಕ್ತ ಪ್ರದ್ಯುಮ್ನ ವಿಶ್ವ14 ವಾಸುವಾನುಜ ಶ್ರೀನಿವಾಸ ಪುಂಡ್ರೀಕ ವಾಸುದೇವನ ಶಮನಪುರದಲ್ಲಿ ವಾಸಮಾಡಿಸಿದಯ್ಯಾ ವಾಸವಾರ್ಚಿತ ಶ್ರೀ ವಾಸುದೇವ 15 ಅನುಗಾಲವು ನಿನ್ನ ಅನುಸರಿಸಿದೆ ನಾನು ಅನುಕೂಲವಾಗಿ ಎನ್ನನು ಸಾಕುವುದು ಅನುಮಾನವ್ಯಾತಕೆ ಅನಿಮಿತ್ತ ಬಂಧು ಅನಿರುದ್ಧ ಶ್ರೀಶಾ 16 ಪುರುಷ ಪುರುಷ ಶ್ರೇಷ್ಠ ಪುರುಷಾರ್ಥ ಕಾರಣ ಪುರುಷೇಶ್ವರ ತತ್ಪುರುಷಾದಿ ಪುರುಷ ಪುರುಷ ಬೀಜ ವೇದ ಪುರುಷ ಪರಮ ಪುರುಷ ಪುರುಷರು ಮೋಹಿಸುವ ಪುರುಷೋತ್ತಮನೆ 17 ಅಕ್ಷಯ ಬಲ ಸಹಸ್ರಾಕ್ಷ ರಕ್ಷಕ ಅಕ್ಷರಪರ ಬ್ರಹ್ಮ ಗೀರ್ವಾಣಧ್ಯಕ್ಷ ಅಕ್ಷಯ ಪಾತ್ರಿಯ ಶಾಖಾದಳವನ್ನು ಅಕ್ಷಯ ಮಾಡಿದಧೋಕ್ಷಜ ಚಕ್ರಿ 18 ನರಸಖ ನರಹರಿ ನಾರಾಯಣ ವಾ ನರ ದಳನಾಯಕ ನಾರದ ವಿನುತ ನರಕ ಉದ್ಧಾರಕ ನರಕಾಂತಕ ಕಿ ನ್ನರ ಸುರನರೋರಗ ವೃಂದ ನರಸಿಂಹ 19 ಸಚ್ಚಿದಾನಂದಾತ್ಮ ಸಚಲ ವಿಗ್ರಹನೆ ಸಚ್ಚರಾಚರದೊಳೂ ಗುಣಪರಿಪೂರ್ಣ ಸಚ್ಛಾಸ್ತ್ರದಲಿ ನಿನ್ನ ಸಾಮರ್ಥಿ ಪರಿಪೂರ್ತಿ ಸಚ್ಚೂತ ಚುತಿ ದೂರ ಚಿನ್ಮಯ ರೂಪಾ 20 ಜನನ ಮರಣ ನಾಶ ಜನನಾದಿಕರ್ತಾಂ ಜನಸುತಗತಿ ಪ್ರೇಮಾಂಜನ ಗಿರಿಧಾಮ ಜನಕವರದ ಸಜ್ಜನರಘದಹನ ದು ರ್ಜನರ ಕುಲರಾತಿ ಜನಾರ್ದನನೆ 21 ವೀಂದ್ರವಾಹನ ಮಹೇಂದ್ರಧಾರನೆ ಗ ಜೇಂದ್ರನ್ನ ಬಿಡಿಸಿ ನಕ್ಷೇಂದ್ರನ ಸೀಳಿ ನಾ ಗೇಂದ್ರ ಶಯನ ಗುಣಸಾಂದ್ರ ಗೋಕುಲ ಚಂದ್ರ ಇಂದ್ರಮಣಿ ನಿಭ ರಾಮಚಂದ್ರ ಉಪೇಂದ್ರಾ 22 ಹರಿ ಎನುತಾ ಹರಿ ಹರಿದು ಓಡಿ ಬರೆ ಹರಿದು ಪೋಗಿ ಪರಿಹರಿಸಿದ ಖಳನ ಹರಿ ಹರಿಯು ನಲಿವನೆ ಹರಿರೂಪ ಪರಿ ಹರಿನಾಮವೆ ಗತಿ ಹರಿ ಸರ್ವೋತ್ತಮಾ23 ಕೃಷ್ಣದ್ವಯಪಾಯನ ಉತ್ಕøಷ್ಟ ಮುನೇಶ ಕೃಷ್ಟಿಗೆ ಬಂದ ಕಷ್ಟ ಓಡಿಸಿದೆ ಕೃಷ್ಣವತ್ರ್ಮನೆ ಸಂತುಷ್ಟೀಲಿ ಸುಖಬಡುವ ಕೃಷ್ಣಾವತಾರ ಕೃಷ್ಣ ಕಮಲೇಶ 24 ನಿನ್ನ ಮಹಿಮೆಯನ್ನು ಬಣ್ಣಿಸಲಳವಿಲ್ಲ ನಿನ್ನೊಳಗೆ ನೀನು ಬೀಯ ಬೀಜವನು ಎನ್ನ ಪಾಲಿಸುವುದು ವಿಜಯವಿಠ್ಠಲ ಪ್ರಸನ್ನ ಭಕ್ತರ ವರದ ಬಾಲ ಗೋಪಾಲ ಜೋ ಜೋ 25
--------------
ವಿಜಯದಾಸ
ಜೋಜೋ ಜೋಜೋ ಲಾಲಿ ಗೋವಿಂದ ಜೋಜೋ ಜೋಜೋ ಲಾಲಿ ಮುಕುಂದ ಜೋಜೋ ಜೋಜೋ ಲಾಲಿ ಆನಂದ ಜೋಜೋ ಜೋಜೋ ಲಾಲಿ ಗೋಪಿಯ ಕಂದ ಪ ಚಿನ್ನದ ತೊಟ್ಳಿಗೆ ರನ್ನದ ಮಲುಕು ಕನ್ನಡಿ ಹೊಳೆವೊ ಮೇಲ್ಕಟ್ಟಿನ ಬೆಳಕು ಸ್ವರ್ಣ ಮಂಟಪದಿ ರಾಜಿಪದಿವ್ಯ ಹೊಳಪು ಕರ್ನೇರಲಂಕರಿಸಿ ನಲಿಯುವ ಕುಲುಕು ಜೋ ಜೋ1 ಅರಿಶಿನ ಕುಂಕುಮ ಗಂಧ ಪುಷ್ಪಗಳು ಸರಸೀಜಾಕ್ಷಗೆ ಮುತ್ತಿನ್ಹಾರ ಪದಕಗಳು ಸುರರೊಡೆಯಗೆ ಪಟ್ಟೆ ಪೀತಾಂಬರಗಳು ಹರುಷದಿಂದಿರಿಸಿ ನಲಿವ ಸ್ತ್ರೀಯರುಗಳು ಜೋ ಜೋ2 ಮುತ್ತೈದೆಯರೆಲ್ಲ ಬಂದು ನೆರೆದರು ಉತ್ತಮ ಸ್ವರ್ಗ ಕಲಶವ ಪೂಜಿಸುವರು ಚಿತ್ತಜನಯ್ಯನ ಎತ್ತಿಕೊಂಡಿಹರು ಜೋ ಜೋ3 ಕೇಶವನನ್ನು ತನ್ನಿ ನಾರಾಯಣನ್ನ ಮಾಧವ ಗೋವಿಂದನನ್ನ ಸಾಸಿರ ನಾಮದ ವಿಷ್ಣು ಮಧುಸೂದನನ್ನ ಸೋಸಿಲಿ ತ್ರಿವಿಕ್ರಮ ವಾಮನನ್ನ ಜೋ ಜೋ 4 ಶ್ರದ್ಧೆಯಲಿ ಶ್ರೀಧರ ಹೃಷಿಕೇಶನನ್ನ ಪದ್ಮನಾಭನ ಕೊಳ್ಳಿ ದಾಮೋದರನ್ನ ಶುದ್ಧ ಮನದಿ ಸಂಕರ್ಷಣ ವಾಸುದೇವನನ್ನ ಪ್ರದ್ಯುಮ್ನನನು ತನ್ನಿ ಅನಿರುದ್ಧನನ್ನ ಜೋ ಜೋ5 ಪುರುಷೋತ್ತಮನ ಕೊಳ್ಳಿ ಅದೋಕ್ಷಜನನ್ನ ನಾರಸಿಂಹನ ತನ್ನಿ ಅಚ್ಚುತನನ್ನ ಸರಸದಿ ಜನಾರ್ದನ ಉಪೇಂದ್ರನನ್ನ ಹರುಷದಿಂದಲಿ ಕೊಳ್ಳಿ ಹರಿ ಶ್ರೀಕೃಷ್ಣನನ್ನ ಜೋ ಜೋ 6 ಹೀಗೆಂದು ತೂಗುತ ಜೋಗುಳ ಹಾಡಿ ನಾಗವೇಣಿಯರು ಸಂಭ್ರಮದಿಂದ ಕೂಡಿ ಆಗ ಕಮಲನಾಭ ವಿಠ್ಠಲನ್ನ ನೋಡೀ ಬೇಗ ರಕ್ಷೆಗಳನಿತ್ತರು ತ್ವರೆ ಮಾಡಿ ಜೋ ಜೋ 7
--------------
ನಿಡಗುರುಕಿ ಜೀವೂಬಾಯಿ
ಜೋಜೋ ಪದುಮದಳಾಕ್ಷ ಉಪೇಂದ್ರ ಪ ಜೋಜೋ ವೇದವಂದಿತ ನಿತ್ಯಾನಂದ | ಜೋಜೋ ಆದಿಮೂರುತಿ ಶ್ರೀಗೋವಿಂದ ಅ.ಪ ಉದಿಸಿದೆ ವಸುದೇವನರಸಿಯೊಳಂದು 1 ದೇವ ರೋಹಿಣಿ ನಕ್ಷತ್ರದೊಳು ಧರೆಗಿಳಿದೆ 2 ಕೌಸ್ತುಭ ಸಕಲ ಲೋಕೇಶ ಶೋಭಿಸುವೆ ಸಂಭ್ರಮದಿ3 ಪರಿಪರಿ ಶೋಭಿಸಿ ಮೆರೆವೆ ಆನಂದ 4 ಲೀಲಾವಿನೋದವ ಮಾಳ್ಪೆ ಸಂತಸದಿ 5 ಒಂದಾಗಿ ಸುಮವೃಷ್ಟಿ ಸುರಿವ ಸಂಭ್ರಮದಿ 6 ನಾರದ ಮುನಿಪನ ವೀಣಾಗಾನಗಳು | ನಾರಿ ಲಕ್ಷ್ಮಿಯು ರತ್ನದಾರತಿಯೆತ್ತುವಳು 7 ಗಿರಿಜೇಶಪ್ರಿಯನೆ ತ್ರೈಜಗದುದ್ಧಾರಿ8 ತ್ರುವಿತ್ರುವಿ ಶಂಖಚಕ್ರಗದಾಪದ್ಮ ಹಸ್ತ 9 ತ್ರುವಿತ್ರುವಿ ಪರತರ ಪಾವನರಾಮ 10 ನಂತರ್ಯದೊಳಗಿಟ್ಟು ಪೊರೆವೆನಿನ್ನೇನು 11 ಗುರು ದಾಮೋದರ ಶ್ರೀನಿವಾಸ ಆಗಿರುವೆ 12
--------------
ಸದಾನಂದರು
ತಂದೆತಾಯಿ ನೀನೆ ಬಾ ಬೇಗನೆ ಪ ಮಂದರೋದ್ಧಾರ ಮನ್ಮಥ ಜನಕ ಆ- ಮಾಧವ ವಾಸುದೇವ ಗೋವಿಂದ ಮಧುಸೂಧನ ದಾಶರಥೇ ಸಂಕರ್ಷಣ ತ್ರಿವಿಕ್ರಮ ಹೃಷಿಕೇಶ ನಾರಸಿಂಹ ಪರಬ್ರಹ್ಮ 1 ಪದ್ಮನಾಭಾಚ್ಯುತ ದಾಮೋದರ ಜ- ಪ್ರದ್ಯುಮ್ನಧೋಕ್ಷಜ ನಾರಾಯಣ ಅನಿ- ರುದ್ಧ ವಿಷ್ಣು ಭೂಧರ ಉಪೇಂದ್ರ 2 ಅರಿತು ಚತುರ್ವಿಂಶತಿ ನಾಮವ ಶರಣರದುರಿತವ ಪರಿಹರಿಸುವನಮ್ಮ ಗುರುರಾಮವಿಠಲನೆ ನಿನ್ನನೆ ನಾಂ 3
--------------
ಗುರುರಾಮವಿಠಲ
ತಲೆ ಬೆಳಗಾಯಿತು ತಲೆ ಬೆಳಗಾಯಿತು ಎನ್ನ ಬೆಳಗದೊಳು ಕೂಡಿ ಧ್ರುವ ಹಿಂದೆ ಗೋವಿಂದನು ಮುಂದೆ ಮುಕುಂದನು ಅಂದಿಗಿಂದಿಗೆ ಅನಿರುದ್ಧ ತಂದೆ ತಾಯಿಯ ವೃಂದಾವನ ಪತಿಯು ಮಂದರಧರ ಬಂಧು ಬಳಗ 1 ಕುಂದ ನೋಡದೆ ಸಲಹುವ ಸಂಕರುಷಣಾ ನಂದ ಮೂರುತಿ ತ್ರಿ ವಿಕ್ರಮನ ದುರಿತ ದೂರಮಾಡಿ ದಾಮೋದರ ಚಂದ ಮಾಡುವ ಜನಾರ್ದನನು 2 ಎಡಕ ಯಾದವ ನಾರಾಯಣ ಕೃಷ್ಣನು ಬಲಕ ಬಾಲಮುಕುಂದ ಎತ್ತ ನೋಡಿದರತ್ತ ಸುತ್ತ ಪುರುಷೋತ್ತಮ ಚಿತ್ತ ಮನದೊಳು ಅಚ್ಯುತನು 3 ಪ್ರಾಣಪತಿಕರಿಸಿಹ್ಯ ಪ್ರದ್ಯುಮ್ನ ಆಭಯನಿತ್ತಿಹ ಪದ್ಮನಾಭ ಮಾಧವ ಮಧುಸೂದನ ಯದು ಕುಲೋತ್ತಮ ಶ್ರೀಧರನು 4 ತುಂಬಿ ಹೃಷಿಕೇಶ ದೃಷ್ಟಿಮೂರುತಿ ನರಸಿಂಹ ದೃಷ್ಟಿಯೊಳಗೆ ಹರಿ ವಿಷ್ಣು ವಾಸುದೇವ ಸೃಷ್ಟೇಶ ಗುರು ಕೇಶವನು 5 ಲಕ್ಷ್ಮಿಯೊಳಗೆ ಗುರು ಲಕ್ಷುಮಿಕಾಂತನು ರಕ್ಷಿಸುವ ಅಭೋಕ್ಷಜನು ಉಪೇಕ್ಷವಿಲ್ಲದೆ ಹೊರೆವ ಉಪೇಂದ್ರನು ಮೂರ್ತಿ ವಾಮನನು 6 ತುಂಬಿದ ಬಳಗವು ಕಂಡ ಮೇದಿನಿಯೊಳು ಕಂದ ಮಹಿಪತಿ ಸ್ತುತಿಸಿದನು ಬಂದ ಜನ್ಮವು ಕಡೆ ಆಯಿತೆಂದು ಮನದೊಳು ತ್ರಾಹಿ ತ್ರಾಹಿ ಎಂದ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತೋರೆನಗೆ ಶ್ರೀ ಕೃಷ್ಣ ತೋಯಜಾಂಬಕ ನಿನ್ನ ಶ್ರೀ ರಮೇಶನೆ ನಾನಾ ಗುಣನಾಮ ಮಾಲೆ ಪ. ವಾರಿಜಾಂಬಕನೆ ಶ್ರೀ ಗುರುಗಳ ರಚಿಸುತಲಿ ಹಾರಹಾಕಿಹರೊ ನಿನಗೆ ಹರಿಯೆ ಅ.ಪ. ಮೋಹನವಿಠ್ಠಲನೆಂಬಾ ಒದ್ದು ತಾಪತ್ರಯವನು ತಿದ್ದಿ ತಿಳಿಸುತಲಿ ಜ್ಞಾನ ಕರ್ಮ ತಿದ್ದಿ ತಿಳಿಸಿದ ಗುರುಗಳು ಇವರು 1 ಇಂದಿರಾಪತಿ ರಂಗನಾಥ ರಘುರಾಮ ಇಂದಿರೇಶ ದಯಾಪೂರ್ಣ ಸೀತಾಪತೇ ವೇದೇಶ ಯಾದವೇಂದ್ರ ಸ್ವಾಮಿ 2 ಇಂದಿರಾರಮಣ ಜಯ ಗೋಪಾಲನೆ ವರದೇಶ ಪ್ರಾಣನಾಥಾ ಪದ್ಮನಾಭ ಶ್ರೀನಾಥ ಜಗದೀಶನೆ ವರದ ಮೋಹನದೇವಾ 3 ಶ್ರೀಕಾಂತ ಪುರುಷೋತ್ತಮ ಪರಮಾನಂದ ಶ್ರೀ ಸುರೇಂದ್ರ ಕರುಣಾಕರ ವೆಂಕಟ ದಯಾಮಯನೆ ಭವತಾರಕ ಹರಿಯೆ 4 ವಸುದೇವ ಪಾರ್ಥಸಾರಥಿಯೆ ಪ್ರಾಣಪ್ರಿಯ ಪರಿಪೂರ್ಣ ಮಧ್ವವಲ್ಲಭಮುಕ್ತಿ ದಾಯಕ ಸತ್ಯೇಶನೆ ಪರಮಪಾವನ ರಮೇಶ ಕರುಣಾನಿಧೆ ಪುಂಡರೀಕಾಕ್ಷ ಸ್ವಾಮಿ 5 ಕಲ್ಯಾಣಗುಣಪೂರ್ಣ ಚಂದ್ರಹಾಸವರದ ಮಾಯಾಪತಿ ಉಪೇಂದ್ರ ಚಕ್ರಪಾಣಿ ಮುಕ್ತೇಶ ಬದರಿನಾಥಾ ಜಯಪ್ರದ ನಿರ್ಜರೇಶ ಜಾನಕೀಪತಿ ವಿಶ್ವನಾಥಾ ಸ್ವಾಮಿ 6 ಭುವನೇಶ ಗಜರಾಜವರದ ಜನಾರ್ಧನ ಮಧ್ವನಾಥ ಆನಂದ ಅರವಿಂದಾಕ್ಷ ಪುಂಡರೀಕವರದ ಶ್ರೀ ಕೃಷ್ಣಸ್ವಾಮಿ 7 ಮಾಧವ ಕಮಲಾನಾಥ ಕಮಲನಾಭ ಸದಮಲಾನಂದ ವೈಕುಂಠವಾಸ ಪದ್ಮೇಶ ಗುರು ಮಧ್ವೇಶ ಇಂದಿರಾಪತಿ ರಮೇಶ ಶ್ರೀಶÀ 8 ನಿಗಮ ಸಿರಿರಮಣ ಕಮಲಾಕಾಂತನೆ ಸರವ ಪೋಣಿಸಿ ಹಾಕುತ ಪರಮ ಪ್ರಿಯ ಶ್ರೀ ಗುರುಗಳು ಉಳಿದ ನಾಮಾ ಪೊರೆಯೋ 9
--------------
ಅಂಬಾಬಾಯಿ
ದಾಸರಾಯಾ ಎನ್ನ | ಬೆಂಬಿಡದಲೆ ಕಾಯೋ ಬಹು ಪರಿಯಿಂದ ದಾಸರಾಯಾ ಪ ಈರೇಳು ವರುಷವಾರಂಭಿಸಿ ಪ್ರತಿದಿನ | ದಾಸರಾಯ ಜಾವು ಮೂರುಗಳಲ್ಲಿ ಮುಕುಂದನ ಚರಣವ | ದಾಸರಾಯಾ | ಚಾರು ಮನಾಬ್ಜದಿ ಬಹಿರದಿ ಬಗೆ ಬಗೆ | ದಾಸರಾಯಾ | ಭೂರಿ ಭಕುತಿ ಭರಿತನಾಗಿ | ದಾಸರಯ್ಯಾ1 ಪುಂಗವ ಸುಮತೀಂದ್ರ ರಾಯ ಕರೆದ ನಿನ್ನ | ದಾಸರಾಯಾ | ಸಂಗೀತ ರಸನ ಪಾನಮಾಡಿ ಹರುಷದಿ | ದಾಸರಾಯಾ | ಹರಿ | ಡಿಂಗರೊಳುತ್ತುಂಗನೆನಿಸಿಕೊಂಡೆ ದಾಸರಾಯ 2 ಕುಶಲಗಾನವ ಕೇಳಿ ಗುರುಸತ್ಯ ಪೂರ್ಣರು | ದಾಸರಾಯಾ | ಪರಾ ವಸುನಾಮ ಗಂಧರ್ವನವತಾರ ನೀನೆಂದು | ದಾಸರಾಯಾ | ಪೆಸರಿಟ್ಟರಂದು ವಿದ್ವಜ್ಜನ ಮೆಚ್ಚಲು ದಾಸರಾಯಾ | ಎನ ಗೊಶವಹುದೇ ನಿಮ್ಮ ಮಹಿಮೆ ಕೊಂಡಾಡಲು |ದಾಸರಾಯಾ | 3 ಚರಿಸಿದೆ ಪುಣ್ಯಕ್ಷೇತ್ರಗಳ ಭಕುತಿಯಿಂದ | ದಾಸರಾಯಾ | ಪ್ರತಿ | ವರುಷ ಬಿಡದೆ ಶೇಷಗಿರಿಯವಾಸನ | ದಾಸರಾಯಾ | ಪರಿಯಂತ | ದಾಸರಾಯಾ | ಪರಿ ಚರಿಯವ ಕೈಕೊಂಡು ಪಡೆದೆ ಮಂಗಳಗತಿ ದಾಸರಾಯ 4 ಮುನಿಯು ಉಪೇಂದ್ರರಾಯರು ನಿಮ್ಮ ಚರಿತೆಯ | ದಾಸರಾಯಾಕೇಳಿ ಸಾನುರಾಗದಿ ಸರ್ವ ಮಂತ್ರೋಪದೇಶವ | ದಾಸರಾಯಾ | ಆನುಪೂರ್ವಕಮಾಡಿ ಅತಿ ಸಂತೋಷದಿ | ದಾಸರಾಯಾ | ಕೊಟ್ಟರು ಶ್ರೀ ನರಸಿಂಹ ಪ್ರತಿಮೆ ಸಾಲಿಗ್ರಾಮ | ದಾಸರಾಯಾ | 5 ಕಿಂಕರನೆನಿಸಿ ಪರಂದರದಾಸರೆ | ದಾಸರಾಯಾ | ಅವರಿಂ ದಂಕಿತ ವಹಿಸಿ ನಿಶ್ಯಂಕೆಯಿಂದ ನೀನು ದಾಸರಾಯಾ | ಪೊಂಕವ ಪೊಗಳುತ ಪೊಡವಿಯೊಳು ಚರಿಸಿದೆ | ದಾಸರಾಯಾ|ಭವ ಪಂಕವ ದಾಟ ಪರೇಶನನೈದಿದೆ | ದಾಸರಾಯಾ 6 ಪರಿಯಂತ ಕರ ಒಡ್ಡಲೊಲ್ಲೆನೆಂಬುವ ಛಲ | ದಾಸರಾಯಾ | ನಿನಗೆ ಸಲ್ಲಿತು ನಿಜ ಭಾಗವತರ ಪ್ರಿಯ | ದಾಸರಾಯಾ | ನಿಮ್ಮಾ ಅನುಭವೋಪಾಸನೆ ಏನು ತಿಳಿಯದು ದಾಸರಾಯಾ 7 ಕಮಲ ಧ್ಯಾನ ದಾಸರಾಯಾ | ಸ್ನಾನ ವರ ಮಂತ್ರ ಜಪ ತಪ ವಿಹಿತಾಚರಣೆಗಳು | ದಾಸರಾಯಾ ಪೆರತೊಂದು ಸಾಧನ ಮನ ವಾಕ್ಕಾಯಗಳಲಿ | ದಾಸರಾಯಾ | ನಾನೊಂದರಿಯೆ ದಯಾಬ್ಧಿ ಉದ್ಧರಿಸೆನ್ನ ಭವದಿಂದ ದಾಸರಾಯಾ 8 ನಾರಾಯಣಾತ್ಮಜ ಅನಂತಾರ್ಯರುದರದಿ ದಾಸರಾಯಾ |ಪುಟ್ಟಿ | ನೂರೊಂದು ಕುಲಗಳುದ್ಧಾರ ಮಾಡಿದೆ | ದಾಸರಾಯಾ | ಕಾರುಣ್ಯನಿಧಿ ಜಗನ್ನಾಥವಿಠಲ | ದಾಸರಾಯಾ | ನಿಮ್ಮ ಚಾರು ಚರಿತ್ರೆಯ ತುತಿಸಿ ಪಾವನನಾದೆ | ದಾಸರಾಯಾ 9
--------------
ಜಗನ್ನಾಥದಾಸರು