ಒಟ್ಟು 24 ಕಡೆಗಳಲ್ಲಿ , 14 ದಾಸರು , 20 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯಜಯ ಶ್ರೀ ರಾಮ ನಮೋ |ಜಯ ಜಯ ಶ್ರೀ ಕೃಷ್ಣ ನಮೋ ಪ.ಸಿರಿಯರಸನು ಶೃಂಗಾರವ ಮಾಡಿ |ಸಿರಿಗಂಧವನೆ ಹಣೆಗಿಟ್ಟು ||ತರುಣ ತುಳಸಿ ವನಮಾಲೆಯ ಧರಿಸಿ |ಹರಿತುರುಕಾಯಲು ಹೊರಗೆ ಹೊರಟನು1ಹೊತ್ತು ಹೋಯಿತುತುರು ಬಿಡಿಯೆನ್ನುತ |ಸಾತ್ತ್ವತ ನುಡಿದನು ಗೋಪಿಯೊಡನೆ ||ತುತ್ತುರು ತುತ್ತುರು ತುರುತುರುಯೆನ್ನುತ |ಒತ್ತಿ ಸ್ವರಗಳನು ಪೊಂಗೊಳಲೂದುತ 2ವನಿತೆ ಸಟ್ಟುಗದೊಳು ಅಕ್ಕಿಯ ತೊಳಸಿ |ಒನಕೆಯಿಂದಓಗರ ಹದನೋಡಿ ||ಮಿನುಗುವ ಸೀರೆಯ ತಲೆಗೆ ಸುತ್ತಿಕೊಂಡು |ವನಕೆ ಹೋಗಲೆಂದು ಹೊರಗೆ ಹೊರಟಳು 3ಹರಿಸ್ವರವೆನ್ನುತ ಒಬ್ಬಳುಕೇಳಿನೆರೆಮನೆಗೆ ಹೋಗಿ ಕಡ ಕೇಳಿದಳು ||ಒರಳು ಕೊಡುವಿರಾ ಅರಸಿನ ಅರೆದು |ಮರಳಿ ಬೇಗ ತಂದೀವೆನೆನುತಲಿ 4ಹಸುವಿಗೆ ಇಟ್ಟಲು ಹಾಲುಓಗರ |ಬಿಸಿಮಡ್ಡಿಯ ಗಂಡಗೆ ಚಾಚಿ ||ಸೊಸೆಯನು ಅಟ್ಟಿಸಿ ತೊತ್ತನು ಪಾಲಿಸಿಮೊಸರ ಕಾಸಿ ಹೆಪ್ಪ ಹಾಕಿದೊಳೊಬ್ಬಳು 5ಗಿಳಿಗೆ ಹಾಸಿದಳು ಹಾಸು ಮಂಚವನು |ಅಳಿಯನ ಪಂಜರದೊಳಗಿರಿಸಿ ||ತಳಿಗೆಯಲ್ಲಿ ತಮ್ಮನ ಮಲಗಿಸಿ ತೊಟ್ಟಿ - |ಲೊಳಗೆ ಎಡೆಯನು ಮಾಡಿದಳೊಬ್ಬಳು 6ಅಟ್ಟವೆಂದು ಹತ್ತಿ ಅಗಳಿಯ ಮೇಲೇಇಟ್ಟಳು ಸಾದೆಂದು ಸಗಣಿಯನು ||ಕಟ್ಟಬಾಯಿಗೆ ಕಾಡಿಗೆಹಚ್ಚಿ |ಕೃಷ್ಣನ ಸ್ಮರಿಸುತ ಹೊರಗೆ ಹೊರಟಳು 7ಅಂಗನೆ ಚೌರಿಯು ಕಾಲಿಗೆ ತಗುಲಿಸಿ |ಮುಂಗೈಯಲಿ ತಾಳಿಯ ಬಿಗಿದು ||ಸಿಂಗರ ಸರವನು ನಡುವಿಗೆಕಟ್ಟಿ |ರಂಗನ ಸ್ಮರಿಸುತ ಹೊರಟಳೊಬ್ಬಳು 8ಕಟ್ಟಿ ಮುತ್ತಿನೋಲೆ ಮೊಣಕಾಲ್ಗಳಿಗೆ |ಗಟ್ಟಿ ಕಂಕಣವ ಕಿವಿಗಿಟ್ಟು ||ತೊಟ್ಟಿಲೊಳಗೆ ಶಿಶು ಅಳುವುದ ಕಂಡು |ಕಟ್ಟಿದ ನೆಲುವನು ತೂಗಿದಳೊಬ್ಬಳು 9ತರುಣಿಯೊಬ್ಬ ಸಂನ್ಯಾಸಿಯ ಕಂಡು |ನೆರೆಮನೆ ಕೂಸೆಂದೆತ್ತ ಬರಲು ||ಅರಿದಾವ ಗಾಳಿ ಸೋಕಿತೆನುತಲಿ |ಪುರಂದರವಿಠಲನು ನಗುತಿದ್ದನು ಸಖಿ 10
--------------
ಪುರಂದರದಾಸರು
ಬಗೆಬಗೆ ಆಟಗಳೆಲ್ಲಿ ಕಲಿತೆಯೊ |ಜಗದ ಮೋಹಕನೆ ಪಖಗವರಗಮನನೆಅಗಣಿತಮಹಿಮನೆ |ಜಗದೊಳು ನೀ ಬಹು ಮಿಗಿಲಾಗಿ |ಪರಿಅ.ಪಒಬ್ಬಳ ಬಸಿರಿಂದಲಿ ಬಂದು-ಮ-|ತ್ತೊಬ್ಬಳ ಕೈಯಿಂದಲಿ ಬೆಳೆದು ||ಕೊಬ್ಬಿದ ಭೂಭಾರವನಿಳುಹಲು ಇಂಥ |ತಬ್ಬಿಬ್ಬಾಟಗಳೆಲ್ಲಿ ಕಲಿತೆಯೊ 1ಮಗುವಾಗಿ ಪೂತಣಿ ಮೊಲೆಯ-ಉಂಡು |ನಗುತಲವಳ ಅಸುವನೆ ಕೊಂಡು |ಅಘಹರ ನೀ ಗೋಪಿಯೊಳು ಜನಿಸಿ ಇಂಥ |ಸೊಗಸಿನ ಆಟಗಳೆಲ್ಲಿ ಕಲಿತೆಯೊ 2ಲೋಕರಂತೆ ನೀ ಮಣ್ಣನು ತಿನಲು |ತಾ ಕೋಪಿಸಿ ಜನನಿಯು ಬೇಗ ||ಓಕರಿಸೆನ್ನಲು ಬಾಯೊಳು ಸಕಲ |ಲೋಕವ ತೋರಿದುದೆಲ್ಲಿ ಕಲಿತೆಯೊ | 3ಮಡುವ ಧುಮುಕಿ ಕಾಳಿಂಗನ ಪಿಡಿದು |ಪಡೆಯ ಮೇಲೆ ಕುಣಿದಾಡುತಿರೆ ||ಮಡದಿಯರು ನಿನ್ನ ಬಿಡದೆ ಬೇಡಲು |ಕಡುದಯೆದೋರಿದುದೆಲ್ಲಿ ಕಲಿತೆಯೊ | 4ಒಂದುಪಾದಭೂಮಿಯಲಿ ವ್ಯಾಪಿಸಿ ಮ-|ತ್ತೊಂದುಪಾದಗಗನಕ್ಕಿಡಲು ||ಅಂದದಿ ಬಲಿಯ ಶಿರದಿ ಮೂರನೆಯದಿಟ್ಟು |ಬಂಧಿಸಿದಾಟಗಳೆಲ್ಲಿ ಕಲಿತೆಯೊ | 5ಭರದಿ ಭಸ್ಮಾಸುರ ವರವನು ಪಡೆದು |ಹರನು ಶಿರದಿ ಕರವಿಡ ಬರಲು ||ತರುಣಿರೂಪವ ತಾಳಿ ಉರಿಹಸ್ತದವನ |ಮರುಳುಗೊಳಿಸಿದುದನೆಲ್ಲಿ ಕಲಿತೆಯೊ | 6ಜಗಕೆ ಮೂಲನೆಂದು ನಾಗರಾಜ ಕರೆಯೆ |ಖಗವಾಹನನಾಗದೆ ನೀ ಬಂದು ||ನಗುತ ನಗುತ ಆ ವಿಗಡನಕ್ರನ ಕೊಂದ |ಹಗರಣದಾಟಗಳೆಲ್ಲಿ ಕಲಿತೆಯೊ 7ವೇದಗಳರಸಿಯು ಕಾಣದ ಬ್ರಹ್ಮ ನೀ-|ನಾದರದಲಿ ವಿದುರನ ಗೃಹದಿ ||ಮೋದದಿ ಒಕ್ಕುಡಿತೆಯ ಪಾಲನೆ ಕೊಂಡು |ಹಾದಿಯೊಳ್ ಹರಿಸಿದುದೆಲ್ಲಿ ಕಲಿತೆಯೊ 8ಡಂಬಕಹಿರಣ್ಯಕಶಿಪು ಪ್ರಹ್ಲಾದನ |ಹಂಬಲವಿಲ್ಲದೆ ಶಿಕ್ಷಿಸಲು ||ಸ್ತಂಭದಿ ಭಕ್ತಗೆ ರೂಪವ ತೋರಿ |ಸಂಭ್ರಮವಿತ್ತುದನೆಲ್ಲಿ ಕಲಿತೆಯೊ 9ಚಕ್ರಧರನೆ ಜರಾತನಯನೊಂದಿಗೆ ಕಾದಿ |ಸಿಕ್ಕಿ ಓಡಿದವನಿವನೆಂದೆನಿಸಿ ||ಭಕ್ತ ಭೀಮನ ಕೈಯಲಿ ಕೊಲ್ಲಿಸಿದ |ಠಕ್ಕಿನಾಟಗಳನೆಲ್ಲಿ ಕಲಿತೆಯೊ | 10ಆ ಶಿರವಾತನ ತಂದೆಯ ಕರದೊಳು |ಸೂಸುತ ರಕ್ತವ ಬೀಳುತಿರೆ ||ಸೋಸಿ ನೋಡದೆ ರುಂಡ ಬಿಸುಡಲವನ ಶಿರ |ಸಾಸಿರ ಮಾಡಿದುದೆಲ್ಲಿ ಕಲಿತೆಯೊ 11ಪ್ರಾಣ ಸೆಳೆವನೀ ದಿನವೆಂದರ್ಜುನ |ಧೇನಿಸದಲೆ ಸೈಂಧವಗೆನಲು ||ಕಾಣದಂತೆ ಸೂರ್ಯಗೆ ಚಕ್ರವನಿಟ್ಟು |ಬಾಣ ಹೊಡಿಸಿದುದನೆಲ್ಲಿ ಕಲಿತೆಯೊ 12ಸರ್ಪನ ಬಾಣವು ಉರಿಯುತ ಬರಲು ಕಂ-|ದರ್ಪನ ಪಿತ ನೀ ಕರುಣದಲಿ ||ತಪ್ಪಿಸಿ ಪಾರ್ಥನ ರಥ ನೆಲಕೊತ್ತಿ |ತೋರ್ಪಡಿಸಿದಾಟವೆಲ್ಲಿ ಕಲಿತೆಯೊ 13ದುರುಳದುಃಶಾಸನ ದ್ರೌಪದಿ ಸೀರೆಯ |ಕರದಿಂದ ಸಭೆಯೊಳು ಸೆಳೆಯುತಿರೆ ||ಹರಿಶ್ರೀ ಕೃಷ್ಣ ನೀ ಪೊರೆಯೆನಲಾಕ್ಷಣ |ಅರಿವೆ ರೂಪದೆ ಬಂದುದೆಲ್ಲಿ ಕಲಿತೆಯೊ 14ಕುರುಪತಿ ಸಭೆಯೊಳು ಗುರುವಿನಿಂದಿರುತ |ಸಿರಿಕೃಷ್ಣನು ಬರೆ ವಂದಿಸದೆ ||ಸ್ಥಿರವಾಗಿ ಕುಳಿತಿರೆ ಚರಣದಿ ಧರೆಮೆಟ್ಟಿ |ಕುರುಪನನುರುಳಿಸಿದ್ದೆಲ್ಲಿ ಕಲಿತೆಯೊ | 15ದುರಿಯೋಧನ ಪಾಂಡವರ ಶಿಕ್ಷಿಸಲು |ಮೊರೆಯಿಡಲವನ ಮರುಳುಗೊಳಿಸಿ ||ಧುರದೊಳುಪಾರ್ಥಗೆ ಸಾರಥಿಯಾಗಿ ನೀ |ಕುರುಕುಲವಳಿದುದನೆಲ್ಲಿ ಕಲಿತೆಯೊ | 16ಪತಿಶಾಪದಿ ಶಿಲೆಯಾದ ಅಹಲ್ಯೆಯ |ಹಿತದಿಂದವಳನು ಉದ್ಧರಿಸಿ ||ಪತಿಯೊಡಗೂಡಿಸಿ ಪತಿವ್ರತೆಯೆನಿಸಿದ-ಅ-|ಮಿತಮಹಿಮೆಯ ಕೃತಿಯೆಲ್ಲಿ ಕಲಿತೆಯೊ 17ಅಂಬರೀಷ ದ್ವಾದಶಿ ವ್ರತ ಸಾಧಿಸೆ |ಡೊಂಬೆತನದಿದೂರ್ವಾಸಬರೆ ||ಇಂದುಧರಾಂಶನು ರಾಜನ ಪೀಡಿಸ-|ಲಂದು ಚಕ್ರದಿ ಕಾಯ್ದುದೆಲ್ಲಿ ಕಲಿತೆಯೊ | 18ಕುಲಛಲಗಳನಳಿದ ಅಜಮಿಳ ಸರಸದಿ |ಹೊಲತಿಯ ಕೂಡಿರೆ ಮರಣ ಬರೆ ||ಬಲು ಮೋಹದ ಸುತ ನಾರಗನೊದರಲು |ಒಲಿದು ಗತಿಯನಿತ್ತುದೆಲ್ಲಿ ಕಲಿತೆಯೊ 19ಬಡತನ ಪಾರ್ವನ ಬಿಡದೆ ಬಾಧಿಸಲು |ಮಡದಿಯ ನುಡಿಕೇಳಿಆಕ್ಷಣದಿ ||ಒಡೆಯ ನೀನವನೊಪ್ಪಿಡಿಯವಲನು ಕೊಂಡು |ಕಡುಭಾಗ್ಯನಿತ್ತುದನೆಲ್ಲಿ ಕಲಿತೆಯೊ | 20ಎಂದೆಂದು ನಿನ್ನ ಗುಣವೃಂದಗಳೆಣಿಸಲು |ಇಂದಿರೆಬೊಮ್ಮನಿಗಸದಳವು ||ಮಂದರಧರಸಿರೆಪುರಂದರವಿಠಲನೆ |ಚೆಂದ-ಚೆಂದದಾಟಗಳೆಲ್ಲಿ ಕಲಿತೆಯೊ 21
--------------
ಪುರಂದರದಾಸರು
ಮೀಸಲ ಗುಣದೆಯರನೆಲ್ಲ ಮೋಸಗೈಸಿ ಕೊಳಲನೂದಿರಾಸಕ್ರೀಡೆ ಮಾಡಿದಾಭಾಸಬಹಳಯ್ಯಾ ಪ.ನೀನೆ ಎಂದವರೆದೊಡ್ಡ ಕಾನನದಿ ಬಿಟ್ಟು ಒಬ್ಬಮಾನಿನಿಯಜರಿದುನಡೆದಿ ಇನ್ನೇನು ಉಚಿತವಯ್ಯ ಕೃಷ್ಣ1ಎಳೆಯಬಳ್ಳಿ ಗಿಳಿಪಕ್ಷಿನಳಿನನಾಭನ ಕಂಡಿರೇನನಳಿನಮುಖಿಯರೆಲ್ಲ ತಿರುಗಿ ಬಳಲಿ ನಿಂತಾರೊ ಕೃಷ್ಣ2ಸೂಸು ಮಲ್ಲಿಗೆ ಸಂಪಿಗೆ ಜಾಜಿ ಹಾಸಿಕೆಯ ಮಾಡಿ ಅವಳಸೋಸುಪೂರೈಸುವ ಬಗಿಯು ಶ್ರೀಶ ರಮಸಿದಿಯೋ ಕೃಷ್ಣ3ಚಂದ್ರವದನೆಗೆ ಅಂಗದಲ್ಲಿ ಗಂಧ ಕಸ್ತೂರಿ ಕುಂಕುಮವಿಟ್ಟುಮಂದಾರಮಲ್ಲಿಗೆಯ ಮುಡಿಸಿ ಆನಂದ ಬಡಿಸಿದಿಯೊ ಕೃಷ್ಣ4ಇಂದಿರೇಶನ ಕಾಣದಲೆ ನೊಂದವರ ಮ್ಯಾಲೆ ಪರಿಮಳತಂದು ಹಾಕಿದ ವಾಯು ಪಾಪಿ ಎಂದು ಬಯ್ಯುತ ಕೃಷ್ಣ 5ತಂದು ಕನ್ನಡಿ ನಿಲ್ಲಿಸಿ ಒಳಗೆ ಚಂದ್ರನ್ಹೊಗಿಸಿಮ್ಯಾಲೆಕಲ್ಲುತಂದು ಹಾಕಿ ಅವನ ನಾವು ಕೊಂದರೆ ಪಾಪಿಲ್ಲ ಎನುತ6ಬೆಂದವರ ಮ್ಯಾಲೆ ಪರಿಮಳ ಚಂದ್ರನುಡಿಸಿದ ಕಂದನಿವನುಹಿಂದಿನ ವೈರವೇ ಸವತಿ ಇಂದಿನವನೆಂದು ಭವಿತ 7ಮಲ್ಲಿಗೆ ಸಂಪಿಗೆ ಜಾಜಿ ಚಲ್ವ ತುಳಸಿ ಯಮುನಾದೇವಿಫುಲ್ಲನಾಭನ ಕಂಡಿರೇನ ನಲ್ಲೆಯರು ಹಲಬುತ ಕೃಷ್ಣ 8ನೋಡುನೋಡುಕೆಳದಿ ಇಲ್ಲೆ ಜೋಡು ಹೆಜ್ಜಿ ತೋರುತಾವಮಾಡಿ ಕಪಟದಿ ರಂಗನ ಒಬ್ಬಳು ಓಡಿಸಿ ಒಯ್ದಾಳೆ ಎನುv 9ನಗಧರಒಬ್ಬ ಬಾಲೆಯಳ ಜಿಗಿದು ಎತ್ತಿದ ಹೆಜ್ಜೆ ನೋಡಿಸಿಗಲಿ ಅವಳು ರಂಗನ ಬೆರೆದ ಬಗಿಯ ತೋರೆನುತ ಕೃಷ್ಣ 10ಹಿಂಡುನಾರಿಯರೆಲ್ಲ ಕೂಡಿಕೊಂಡು ಅವಳ ಮಂಡೆಕುಕ್ಕಿಪುಂಡರಿಕಾಕ್ಷನ ತೋರೆದಿಂಡೆಮನುಜಳೆ ಎನುತ11ಇಷ್ಟು ನಾರಿಯರೊಳು ರಾಧೆ ಶ್ರೇಷ್ಠಳೆಂದು ಗರುವಿಸ್ಯಾಳುಅಷ್ಟರೊಳಗೆ ಅವಳ ನೀನು ಬಿಟ್ಟು ಪೋಗಿದ್ಯೊ ಕೃಷ್ಣ 12ಗಲ್ಲಕುಕ್ಕಿ ಅಂಜಿ ಅವಳು ಎಲ್ಲ ನಾರಿಯರಿಗೆ ಎರಗಿಫುಲ್ಲನಾಭಮಾಡಿದಪಾಟನಎಲ್ಲಿ ಉಸಿರಲೆ ಎನುತ13ವಿಧಿಗೆ ದಯವಿಲ್ಲ ನಮ್ಮ ಚದುರ ರಂಗನ ಅಗಲಿಸಿತುಮದನಬಾಣ ನೆಟ್ಟಿತೆಂದು ಸುದತೆಯರು ಹಲಬುತ ಕೃಷ್ಣ14ಶ್ರೀಶ ರಾಮೇಶನ ಯಾವ ದೇಶದಲ್ಲಿ ಹುಡುಕಲೆಂದುಕ್ಲೇಶಬಡಲು ಕೆಲದೆಯರೆಲ್ಲ ಸರ್ವೇಶ ಬಂದೆಂದ ಪಾರ್ಥ15
--------------
ಗಲಗಲಿಅವ್ವನವರು
ರಂಗ ಕೊಳಲನೂದುವ ಮಂಗಳಸ್ವರಕೆ ಮೂಜ-ಗಂಗಳೂ ಮೋಹಿಸುತಿಹವಲ್ಲೇ ನೋಡೆ ಏ ಸಖಿ ಪಗೋಕುಲದಂಗನೆಯರು ಮೈಮರೆದು ತಮ್ಮ ಮನೆ ಕದ |ಹಾಕದೇ ಹರಿಯೆಲ್ಲಿಹನೆಂದರಸುತ ಬಂದರು ||ಗೋ ಕರುವೇನೆಂದೊಬ್ಬಳು ಹಾಕುವಳೆತ್ತಿಗೆ ದಾಳಿ |ನೂಕು ನೂಕಾಗುತ್ತ ಹಲವಂಗನೆರೋಡಿದರು 1ಕಣ್ಣಿಗೆ ಕುಂಕುಮ ಫಣಿಯಲ್ಲಿ ಕಾಡಿಗೆ ಕೆಲವರು |ಬಣ್ಣದ ಸೀರೆಯ ಮಂಡೆಗೆ ಸುತ್ತುತ್ತ ಕೆಲವರು ||ಚಿನ್ನಗೆ ಹಾಲೆರೆವೆವೆಂದು ಗಂಡರ ಪಿಡಿದು ಒಲ್ಲೆ- |ನೆನ್ನೆ ಕೇಳದಲೆ ನೆಲಕಿಕ್ಕುವರು ಕೆಲವರು 2ಹರಿಯ ನೋಡುವ ಭರದಿಂದ ಆಕಳಿವೇಯೆಂದು |ಹರದೇರು ಅತ್ತೇರಿಗೆ ಕುಟ್ಟಿ ಕಣ್ಣಿಯಿಕ್ಕೊರು ||ಒರಲಿದರೆ ನಾವಾಕಳಲ್ಲವೆಂದು ಕೇಳದಲೆ |ತ್ವರದಿ ಮಾಧವನ ನೋಡಬೇಕೆಂದೋಡಿದರು 3ಕಾಲಿಕೆಕಟ್ಟಾಣಿಆಣಿಮೆಂಟು ಪಿಲ್ಯಾ ಸರ ಮಾಡಿ |ಮಾಲೆಯೆಂದು ಹಾಕುವರು ಕೊರಳಿಗೆ ಕೆಲವರು ||ಹಾಲಿಗೆ ಮೂಗುತಿ ಕಾನ ಬಾವುಲಿ ಮೂಗಿಗೆ ತಮ್ಮ |ಬಾಲೆರೆಂದಾಕಳ ಕರುವೆತ್ತಿಕೊಂಡೋಡುವರು 4ಹೇಳಿದರೆ ಮಾತುಕೇಳಿಕಳ್ಳ ಕೃಷ್ಣಾ ಸಿಕ್ಕೆಂದು ಮೈ |ಘಾಳಿಗೊಂಡಾಳುವರಾ ಕೈ ಕಂಭಕೆ ಕಟ್ಟುವರು ||ಕೀಲ ಕಂಕಣ ಬಾಗಿಲ ಬೀಗವೆಂಜೋಡಿಸಿ ಲಕ್ಷ್ಮೀ |ಲೋಲನಂಘ್ರಿಯ ಕಾಣಬೇಕೆಂದೆಲ್ಲರು ಓಡಿದರು 5ಎಲೆ ಯಶೋದೆಯಮ್ಮ ನಿನ್ನ ಮಗ ಮೊನ್ನೆ ನಿಶಿಯಲ್ಲಿ |ಮಲಗಂಟು ಬಿಚ್ಚಿ ಒಲ್ಲೆನೆನ್ನೆ ಕೇಳಾ ಥರವೆ ||ಬಲು ಶಬ್ದೆನೆಂದು ಕೇಳಲತ್ತೆಗೊಂದು ಪರಿಯಿಂದ |ತಿಳಿಸಿದೆನೆಂದೊಬ್ಬಳು ಅತ್ತೆಯ ಮುಂದೆ ಹೇಳುವಳು 6ಬೀದಿಯೊಳ್ ಹೇಳಿದಂತೆ ನಮ್ಮನಿಗೆ ಬಾಯೆಂದೊಬ್ಬಳು |ಮಾಧವನಿವನೆಂದು ತನ್ನ ಪುರುಷಘೇಳುವಳು ||ಆ ದಿನ ನಾವೇಕತ್ರದಲ್ಲಿರೆಗಂಡಬರಲು ಸ್ತ್ರೀ |-ಯಾದಿ ಸೈ ಸೈಯೆಂದೊಬ್ಬಳು ಪತಿಗೇ ಪೇಳುವಳು7ಬತ್ತಲೆ ಕೆಲವರು ಸೀರ್ಯುಟ್ಟವರ್ಕೆಲವರು ಉ- |ನ್ಮತ್ತರು ಕೆಲವರು ಪಾಡುತ್ತಲಿ ಕೆಲವರು ||ನೆತ್ತಿಹಿಕ್ಕುವರು ಕೆಲವರು ಹೂಸಿಕೊಂಡವರು |ತುತ್ತು ಬಾಯೊಳಿಟ್ಟವರೂ ತ್ವರದಿ ಓಡಿದರು 8ಒಂದಾಡುತೊಂದಾಡುವರುನಿಂದುನಿಂದಾಲಿಸುವರು |ಮಂದಿಗಂಜದಲೆ ಹರಿದು ಹರಿದು ಹೋಗುವರು ||ಕಂದಗಳೆತ್ತಿದವರು ಕರುಗಳೆತ್ತಿದವರು |ಚಂದಿರ ವದನೆಯರು ತವಕದಿ ಓಡುವರು 9ಹೆಂಣುಗಳಾ ಆವಾವ ಕೆಲಸದೊಳಿದ್ದಿರ್ಯಾ ಹ್ಯಾಂಗೆ |ಬನ್ನಿರೆನ್ನ ಬಳಿಗೆಂಬಂತೆವೇಣುಕೇಳಿಸುವುದು ||ಪನ್ನಗಶಯನನಾಜೆÕಯಂತೆ ಪ್ರವರ್ತಿಸಿದ ಮೇಲೆ |ಅನ್ಯಾಯವೇ ಸತಿಯರದು ಕೇಳಿರಿ ಕವಿಗಳು 10ಕರಿಸಿಂಹಗಳು ಹುಲಿತುರುತುರುಗಮಹಿಷಿ|ಮರೆದು ವೈರತ್ವ ಹರಿಸ್ವರ ಕೇಳುತಿಹವು ||ಕರಗುತಿಹವು ಕಲ್ಲು, ಸುರರಾಕಾಶದಿ ಪುಷ್ಪ |ಸುರಿಸುತಿಹರು, ಗಂಧರ್ವರು ಪಾಡುತಿಹರು11ಅಂಬುಜಾಕ್ಷಗೆ ಕೆಲವಂಗನೆರು ಆಲಿಂಗಿಸುವರು |ಚುಂಬಿಸುವರು ಕೆಲವರುನಿಂದುಪ್ರಾರ್ಥಿಸುವರು ||ಶಂಬುಪಾಣಿ ಕರುಣಿಸಿ ಇಬ್ಬರಿಗೊಬ್ಬೊಬ್ಬನಾಗಿ |ಹಂಬಲ ಪೂರೈಸುವಂತೆ ರಾಸಕ್ರೀಡೆಯಾಡಲು 12ಕಾಮನಾ ಪೂರ್ತಿ ಮಾಡುತಿರೆ ಹೆಂಗಳೆರು ಇಂಥ |ಸ್ವಾಮಿಯಮ್ಮ ಕೈ ಸೇರಿದ ನೋಡಿರೆಂದ್ಯೋಚಿಸಲು ||ಭಾಮಿನಿಯರಹಂಕಾರ ತಿಳಿದಾಕ್ಷಣವೊಬ್ಬಳ |ಪ್ರೇಮದಿ ಕೊಂಡೊಯ್ದು ಎಲ್ಲರಿಗೆ ಮಾಯವಾದನು13ಬಹುರೂಪದೊಳೊಮ್ಮಿಂದ ಒಮ್ಮೆ ಬಂದೂ ರೂಪವಿಲ್ಲ |ಮಹೀಪಾಲನೇನಾದನೋ ಆವಳನ ಕೊಂಡೊಯ್ದನು ||ಅಹಿವೇಣಿಯರೇ ನಿಮ್ಮ ನಿಮ್ಮ ಗುಂಪಿನೊಳಗೆ ಎ- |ಷ್ಟಿಹಿರೊ ನಾರೆರು ಎಣಿಸಿರೆ ಯಂದಾಳೊಬ್ಬಳು 14ಒಂದೆರಡು ನೂರಿನ್ನೂರೈನೂರು ಸಾವಿರೆಂದೆಣಿಸಿ |ಮಂದಗಮನೆಯೊಬ್ಬಳಿಲ್ಲವಮ್ಮ ನಮ್ಮೊಳೆಂದರು ||ಇಂದ್ರಜಾಲದವಳೇ ಆವನು ಅಂಥ ವಂಚಕನೆ |ಸಂಧಿಸಿತಿಬ್ಬರಿಗೆ ಮುಂದೇನುಪಾಯವೆಂದರು 15ಹರಿಹೋದಕಷ್ಟೊಂದು ಅವಳ ನಾ ವೈದ ದುಃಖೊಂದು |ಸ್ಮರಣೆದಪ್ಪಿ ಗಂಡರೊಡನೆ ಆಡಿದ್ದೊಂದು ||ಸ್ಮರನ ಬಾಣ ಬಾಧೆಯೊಂದು ಬೆರದಿತಿನಿತುಕ್ಲೇಶ|ಹರದೆರಚ್ಯುತನರಸುತವನಹೊಕ್ಕರು 16ಹರಿಒಬ್ಬಳ ಒಯ್ದನು ಕಂಡಿರಾ ಯಿದ್ದಿರ್ಯಾ ಎಂದು |ನರರೆಂಬೊ ಭ್ರಾಂತಿಯಿಂದ ಮರನ ಕೇಳುವರು ||ಸ್ಮರಣೆ ಬಂದಾಗ ವಮ್ಮೆ ಗಿಡ ಕೇಳುತಿಹವೆಲ್ಲೆ |ಹರಿಹರಿ! ಜೀವಿಸುವದೆಂತು ಹೇಳಿರೆಂಬೊರು 17ಅತ್ತ ಎಲ್ಲರ ವಂಚಿಸಿ ಯನ್ನ ರೂಪಾಧಿಕ ನೋಡಿ |ಎತ್ತಿಕೊಂಡು ಬಂದ ರಂಗನೆಂಬೊಳಾಕಿ ಮುದದಿ ||ಸತ್ಯ ಸಂಕಲ್ಪವಳ ಮನತಿಳಿದು ತಿಳಿಯದಂತೆ |ತೊತ್ತಿಗ ನಂದದಿ ಹೆಗಲೊಳಗಿಟ್ಟು ಪೋಗಲು 18ದಣಿದೆ ಹಸಿದೆ ನೀರಡಸಿದೆನೆಂದರವಳ |ಅಣುಗನಂದದಿಂದಿಳಿಸೇರಿಸಿ ಕೊಂಬುವನು ||ಗೊನೆ ಹಣ್ಣು ನಿಲಕದೆಂದರೆ ನೀಡಿ ಕೊಡುತಲಿ |ಘನಸುಖ ಬಡಿಸುತ ದಕ್ಕಿದಂತಿರುವನು 19ಸಾವಿರ ಪ್ರಕಾರಾ ಘೋರಿಸಿದರೂ ನಗುತಲೆ ಇಹ |ಕೇವಲ ದಕ್ಕಿದನೆಂದು ನಿಶ್ಚಯ ತಿಳಿದಳು ||ಮಾವಿರಿಂಚೇಶ ಜಂಭಾರಿಗಳನು ವಂಚಿಸುವಂಥ |ದೇವನು ಈ ನಾರಿ ಅಹಂಕಾರವ ತಾಳುವನೆ20ಸೊಕ್ಕು ಬಂತಿವಳಿಗಿನ್ನು ಶೀಘ್ರ ತಗ್ಗಿಸಬೇಕೆಂದು |ಚೊಕ್ಕ ಮಾವು ಪಿಡಿಸಿ ಅಪ್ರತ್ಯಕ್ಷವಾಗಲಿತ್ತಲು ||ತುಕ್ಕಿ ತುಕ್ಕ್ಯಾರಂಣ್ಯಾ ಹೆಜ್ಜೆ ಪಿಡಿದಿಲ್ಲಿಹ ಅಲ್ಲಿಹ |ರಕ್ಕಸಾರೆನುತ ಬಂದೆಲ್ಲರವಳನು ಕಂಡರು 21ಜಾರೆ ಚೋರೆ ಕುಲ್ಲೆ ಖೂಳೆ ಕುಲಕಂಟಿಕೆನವನೀತ|ಚೋರನೆಲ್ಲಡಗಿಸಿದ್ದೆ ತೋರೆಲೆ ತೋರೆಂದರು ||ಘೋರಪಾತಕಿಯ ಕುಟ್ಟಿರೆಂದು ಕೆನ್ನಿ ಕುಟ್ಟುವರು |ಗಾರುಮಾಡಿದರೆ ಬಟ್ಟಬವಣೆಹೇಳಿದಳು22ಸಮದುಃಖಿಗಳಾಗಿಹರಿಹರಿಯೆಂದೊದರಲು ಈ |ಶ್ರಮ ನೋಡಿ ಪ್ರಾಣೇಶ ವಿಠಲ ಬಂದಾಲಿಂಗಿಸಿ ||ಸುಮನಗಂಧಿಯರೆ ನಿಮ್ಮಹಂಕಾರ ಬಿಡಿರೆಂದು |ಅಮರೇಶಮುಂಚಿನಂತೆಲ್ಲರೊಳಾಡಿದನು 23
--------------
ಪ್ರಾಣೇಶದಾಸರು
ರಾಮ ರಾಮಾಯೆಂದು ಮಾರುತಿಯು ನಡೆದು |ಸೋಮವದನೆ ಜಾನಕಿಯನು ಹುಡುಕಾ ಪಹರಿಯಿಂದ ಗುರುತು ಪಡೆದು ತನ್ನ ಶಿಖದಲಿ |ಧರಿಸಿಕೊಂಡತಿಶಯ ಭಕುತಿಯಲಿ ||ತೆರಳಿ ಮುಂದು ಮುಂದಕೆ ಕಡಲ ಸಮೀಪದಿ ವಾ- |ನರಾಧೀಶ ಮಾಡಿದ ವಾಸವನೂ1ರವಿಜನ ಭಯದಿಂದ ಕಪಿಗಳೆ- |ಲ್ಲವು ಎದೆಯನೊಡೆದು ನಗದೊಳು ಕುಳಿತಿರಲು ||ಪವನಜನು ಬಂದು ವಿಚಾರವ ಮಾಡಲು ಸಾಗ- |ರವ ದಾಟಲೊಬ್ಬಗೊಶವಲ್ಲವೆಂದರೆಲ್ಲರಲ್ಲಿ 2ನಮ್ಮನು ರಕ್ಷಿಸೋ ಕುಲಮಣಿಯೆ ವಾಸುದೇವನ |ಮೊಮ್ಮಗನೆ ಎಂದು ಕಪಿಗಳು ಯಾಚಿಸೆ ||ಗಮ್ಮನೆ ಹಾರಿ ರಕ್ಕಸಿ ಹೊಟ್ಟೆಯ ಹೊಕ್ಕು ದಾಟಿ ಮತ್ತೇ |ಒಮ್ಮೆ ಒಬ್ಬಳನ್ನು ಸೀಳಿ ಪುರಪ್ರವೇಶ ಮಾಡಿದ3ಗಿಡಗಿಡ ಚರಿಸುತ ಸ್ಥಳ ಸ್ಥಳದಲಿ ಬಲು |ಹುಡುಕುತ ಮೂಜಗ ಪೂಜಿತನ ||ಮಡದಿಯಾಕೃತಿಯನು ಕಾಣಲಾಕ್ಷಣದೊಳು |ತಡೆದನಲ್ಲಿಯೇ ಪದಗಳ ಮುಂದಕ್ಕಿಡದಲೇ4ಋಷಿಗಳಂದದಿ ಪ್ರಾಣೇಶ ವಿಠಲನೆನುತಿರೆ |ಶಶಿಮುಖಿಯಳು ಆಂಜನೇಯ ಪದ |ಬಿಸಜಾಂಘ್ರಿಗಳಿಗೆರಗಿ ಜಯ ಜಯವೆಂದು |ಉಸಿರಿದ ರಘುಪತಿಯ ಸುದ್ದಿ ವಿಸ್ತರದಲಿ 5
--------------
ಪ್ರಾಣೇಶದಾಸರು