ಒಟ್ಟು 210 ಕಡೆಗಳಲ್ಲಿ , 50 ದಾಸರು , 180 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇದಕೊ ಕಾಶಿಯನು ಮನವೇ ಬೆದಕುಗೊಳ್ಳಲು ಬೇಡ ತೋರುವೆನು ಪ ಬಲ್ಲವನಾದರೆ ಇಲ್ಲಿಯೆ ಕಾಶಿ ಕಲ್ಲೆದೆಯಾದವನಲ್ಲವೆ ದೋಷಿ ಎಲ್ಲವ ತಿಳುಹುವೆ ಚಲ್ವ ಸಂತೋಷಿ ಸೊಲ್ಲ ಲಾಲಿಸಿ ಕೇಳು ಪೇಳ್ವೆ ನಿರ್ದೋಷಿ 1 ಕಾಶಿಯ ದರುಶನವಿಲ್ಲದ ಜನರು ವಿ- ಶೇಷವಾಗಿಯೆ ಇಲ್ಲಿ ನಡೆಕೊಂಬುತಿಹರು ದೂಷಣ ಮಾಡದೆ ಪೋಷಿಸುವವರು ಕಾಶಿಗಿಮ್ಮಡಿಯಾಗಿ ಲೇಸ ಪಡೆಯುವರು 2 ವೇದವನೋದಿದ ವಿಪ್ರನೆ ಕಾಶಿ ವಾದಗಳಿಲ್ಲದ ಸೋದರನೆ ಕಾಶಿ ಆ ಧನ ಕೈಯೊಳು ಇದ್ದರೆ ಕಾಶಿ ಮಾಧವ ಧ್ಯಾನವು ಮನದೊಳು ಕಾಶಿ 3 ಅವ್ವೆ ತಂದೆಯ ಸೇವೆ ಮಾಳ್ಪುದೆ ಕಾಶಿ ದೇವರ ಪೂಜೆಯ ನೋಳ್ಪುದೆ ಕಾಶಿ ಜೀವರಕ್ಷಣ್ಯವ ಮಾಳ್ಪುದೆ ಕಾಶಿ ಭಾವಶುದ್ಧತ್ವದಿ ಇಪ್ಪುದೆ ಕಾಶಿ 4 ಗುರುಗಳಿಗೆರಗುವ ಪರಿಯೊಂದು ಕಾಶಿ ಹಿರಿಯರ ಆಜ್ಞೆಯೊಳಿರುವುದು ಕಾಶಿ ಪರವುಪಕಾರವು ಸ್ಥಿರವಾದ ಕಾಶಿ ಕರೆದು ಮೃಷ್ಟಾನ್ನವನೆರೆವುದು ಕಾಶಿ 5 ಅರಳಿಯ ವೃಕ್ಷವ ನೆಟ್ಟರೆ ಕಾಶಿ ಕೆರೆ ಬಾವಿ ಕಟ್ಟಲು ಇಷ್ಟದ ಕಾಶಿ ಅರವಟ್ಟಿ ನೀರಿರಿಸಲು ದೃಷ್ಟ ಕಾಶಿ ಸಿರಿಲಕ್ಷ್ಮಿಯರಸನ ಕರೆವುದು ಕಾಶಿ 6 ದುಷ್ಟರ ಸಂಗವ ಬಿಡುವುದೆ ಕಾಶಿ ಕಷ್ಟದ ಮಾರ್ಗವ ತೊರೆವುದು ಕಾಶಿ ಶಿಷ್ಟರ ಸೇರುವುದು ಇಷ್ಟದ ಕಾಶಿ ಬೆಟ್ಟದ ಒಡೆಯನ ನೆನೆವುದೆ ಕಾಶಿ 7 ಏಕಾದಶಿ ಉಪವಾಸವೆ ಕಾಶಿ ಆಕಳ ದಾನವ ಮಾಳ್ಪುದೆ ಕಾಶಿ ಬೇಕಾದುದಿದ್ದರೆ ಮನೆಯೆಲ್ಲ ಕಾಶಿ ಕಾಕು ಸೇವೆಯಿಲ್ಲದ ಮನುಜನೆ ಕಾಶಿ 8 ಉದಯದಿ ಸ್ನಾನವ ಮಾಳ್ಪುದೆ ಕಾಶಿ ಪದುಮನಾಭನ ಧ್ಯಾನ ಮೃದುವಾದ ಕಾಶಿ ಕದನವಿಲ್ಲದ ಊರ ನೋಡಲು ಕಾಶಿ ಉದರವು ತುಂಬಲು ಬಡವಗೆ ಕಾಶಿ 9 ರುದ್ರ ದೇವನ ಪೂಜೆ ಇದ್ದಲ್ಲಿ ಕಾಶಿ ವಿಧ್ಯುಕ್ತ ಮಾರ್ಗದಿ ನಡೆವುದು ಕಾಶಿ ಬದ್ಧವಾಗೈವರ ಕಟ್ಟಲು ಕಾಶಿ ಶುದ್ಧವಾದ ಹೆಂಡತಿ ಮುದ್ದಿನ ಕಾಶಿ 10 ಸನ್ಯಾಸ ಮಾರ್ಗವು ಚೆನ್ನಾದ ಕಾಶಿ ಅನ್ಯಾಯವಿಲ್ಲದ ಅರಸನೆ ಕಾಶಿ ಕನ್ಯಾದಾನವು ಮುನ್ನಿನ ಕಾಶಿ ಮನ್ನಿಸಿಕೊಂಡರೆ ತನ್ನಲ್ಲೆ ಕಾಶಿ 11 ಅಧ್ಯಾತ್ಮ ವಿದ್ಯೆಯ ಹೊದ್ದಲು ಕಾಶಿ ಬದ್ಧ ನಡೆನುಡಿ ಇದ್ದರೆ ಕಾಶಿ ಮಧ್ವರಾಯನು ಕುಳಿತಿದ್ದಲ್ಲಿ ಕಾಶಿ ಪದುಮನಾಭನ ನೆನವಿದ್ದರೆ ಕಾಶಿ 12 ದಾನದೊಳಗೆ ಸಮಾಧಾನವೆ ಕಾಶಿ ಮಾನದೊಳಗೆ ಅಭಿಮಾನವೆ ಕಾಶಿ ಸ್ನಾನದೊಳಗೆ ಭಕ್ತಿ ಸ್ನಾನವೆ ಕಾಶಿ ಜ್ಞಾನದೊಳಗೆ ಶುದ್ಧಜ್ಞಾನವೆ ಕಾಶಿ 13 ದೇವರೊಳಗೆ ಸಾಲಿಗ್ರಾಮವೆ ಕಾಶಿ ಜೀವರೊಳಗೆ ಗೋವುಚಯವೆಲ್ಲ ಕಾಶಿ ಹೂವಿನೊಳಗೆ ಬಿಲ್ವಪತ್ರಿಯೆ ಕಾಶಿ 14 ಹಲವು ಮಾತುಗಳೇನೀಪರಿ ಕಾಶಿ ಛಲ ಭಕ್ತಿಯಿದ್ದರೆ ಜಲವೆಲ್ಲ ಕಾಶಿ ಒಲವುಳ್ಳ ವರಾಹತಿಮ್ಮಪ್ಪನೆ ಕಾಶಿ ಕುಲವೃಕ್ಷವೆಂಬುದು ಫಲವಾದ ಕಾಶಿ 15
--------------
ವರಹತಿಮ್ಮಪ್ಪ
ಇಂದಿರೆ ಅರಸ ಚಂದ್ರಮಂಡಲಮಂದಿರಾಖಿಳವಂದ್ಯ ಹಯಮುಖಎಂದೆಂದೆನ್ನ ಮನದಿಂದಗಲದಿರುಮಂದರಾದ್ರಿಧರ ಪ. ತುಂಗಮಹಿಮ ತುರಂಗವದನ ಶು-ಭಾಂಗ ರಿಪುಕುಲಭಂಗ ಸುಜನರಸಂಗ ಎನ್ನಂತರಂಗ ಮಲಿನವಹಿಂಗಿಸುವುದೆಂತೊಮಂಗಳಾಬ್ಧಿತರಂಗದುಬ್ಬಿಗೆತಿಂಗಳೆನಿಸುವ ಅಂಗಜನ ತಂದೆರಂಗ ನಿನ್ನ ಪಾದಕೆಂಗಮಲದಲ್ಲಿಭೃಂಗನಪ್ಪುದೆಂತೊ 1 ವಾರಿಜಾಕ್ಷ ಮುರಾರಿ ಮದವೆಂಬೋಮಾರಿ ಮುಸುಕಿತು ಸಾರಿ ಮತ್ಸರಮಾರನೊಡಗೂಡಿ ದಾರಿ ತಪ್ಪಿಸಿಗಾರುಮಾಡಿತೆನ್ನ ನಾ-ನಾರೆ ಕ್ರೋಧಮಹೋರಗನ ವಿಷ-ಧಾರೆಗೆ ಭಯಕಾರಿ ಹರಿ ನಿನ್ನಚಾರುಚರಣವ ಸಾರಿದೆನಿಂದುತೋರಿ ಸಲಹಬೇಕು 2 ಧsÀನ್ಯ ಸುರರಜೀವನ್ನ ಕರುಣಸಂ-ಪನ್ನ ನಿತ್ಯಪ್ರಸನ್ನ ಚಿನುಮಯಪನ್ನಗಾರಿವಾಹನ್ನ ಶಶಿಸಮ-ವರ್ನ ಹಯವದನನಿನ್ನ ಪಾದಪಾವನ್ನಸುರತರು-ವಿನ್ನ ನೆಳಲೊಳಿಟ್ಟೆನ್ನ ಸಲಹಬೇ-ಕನ್ಯಥಾ ಗತಿಶೂನ್ಯ ನಾನೆಲೊಪೂರ್ಣಪುರುಷರನ್ನ 3
--------------
ವಾದಿರಾಜ
ಇಂದು ರಂಗಾನಟ್ಟೂಳಿಗೆ | ಇರಲಾರೆವಮ್ಮಾ ನಾವುಬಂದುಪಾಯವ ಕಾಣೆವೆ | ವನಿತೆ ಗೋಪ್ಯಮ್ಮಾ ಕೇಳೆ ಪ ಹಿರಿಯರಾದವರಿಗೆ | ಭರದಿ ಪೇಳೇವೆಂದರೆಸರಸಿಜ ಸಂಭವನಿಗೆ ಹಿರಿಯನೀತ ಕಾಣಮ್ಮ 1 ಮಾಯಗಳ ಮಾಡಿ ನಾವೂ | ಹೊಯಿಲೆಬ್ಬಿಸೇವೆಂದರೆಮಾಯಾದೇವಿಗೆ ಸಿಗದೆ | ಮಾಯಾವ ತೋರುವನಮ್ಮ 2 ಗುಮ್ಮನ ತೋರಿದರೀಗಾ | ಒಮ್ಮೊಮ್ಮೊ ಲೆಕ್ಕಿಸನಮ್ಮ ಅಮ್ಮಮ್ಮ ಶ್ರೀ ನಾರಸಿಂಹ | ಅದ್ಭತಾದ ದೈವ ಕಾಣಮ್ಮ 3 ಅರಿವಿ ಸರ್ಪಾನ ಮಾಡಿ | ಭರದಿ ಅಂಜಿಸೇವೆಂದರೆಖರೆಯವಾಗಿದ್ದ ದೊಡ್ಡಾ | ಉರಗಶಾಯಿ ಕಾಣಮ್ಮ 4 ಅರಸರಿಗ್ಹೇಳಿದರೂ | ಬರಿದಾಗುವುದೇ ನಿಜಧರೆ ಗಗನ ಪಾತಾಳದ | ಅರಸನಲ್ಲವೇನಮ್ಮ 5 ಕಾಸು ವೀಸಾ ಕೈಯ್ಯಾಳಿಟ್ಟೂ | ಕೂಸಿಗೆ ಬುದ್ಧಿ ಹೇಳುವೆಕೋಶ ಭಾಗ್ಯದಭಿಮಾನಿ | ಶ್ರೀಶನೇ ಈಶ ಕಾಣಮ್ಮ 6 ಪಾಪದ ಭೀತಿ ತೊರದು | ಭೂಪ ರಂಗ ಅಂಜಾನಮ್ಮಪಾಪ ರಹಿತರಾದವರ | ತಪಸಿಗಳೊಡೆಯಾನಮ್ಮ 7 ಮ್ಯಾಣದ ಚೇಳು ತೋರುವೆ | ಜಾಣ ರಂಗ ಅಂಜಾನಮ್ಮಮೇಣು ಮೂವತ್ತಾರು ಲಕ್ಷ | ತಾಂ ಶಿಂಶುಮಾರಾನಮ್ಮ 8 ಅನ್ನ ವಸನಗಳಿತ್ತು | ಮನ್ನಿಸೆವೆಂದಾರೆ ಪುಸಿಕನ್ಯೆ ದ್ರೌಪದಿ ದುಮ್ಮಾನ | ಮುನ್ನೆ ಇದಕ್ಕೇ ಸಾಕ್ಷಿಯಲ್ಲೆ 9 ಅಣ್ಣ ತಮ್ಮಾ ಬಂಧೂ ಬಳಗ | ಜನರುಂಟೇನೆ ಹೇಳೇವೆಅನಾದಿ ಕಾಲದಿಂದಾ | ಘನ್ನ ತಾನೇ ಏಕಮೇವ 10 ಚಿಣ್ಣ ನೀ ಅಣ್ಣಾ ಬಾಯೆಂದು | ಮನ್ನಿಸೇವೆಂದಾರೆ ಪುಸಿಅನಂತ ವೇದಗಳಿವನ | ಬಣ್ಣಿಸಿ ಹಿಂದಾಗಲಿಲ್ಲೆ 11 ಊರು ಕೇರಿಗಳಾ ಬಿಟ್ಟು | ದೂರ ಬಾರ ಹೋದೇವೇನೆಸಾರ ವ್ಯಾಪ್ತನಾಗಿ ಇಪ್ಪಾ | ಯಾರಿಗೆ ದೂರುವೆನಮ್ಮಾ 12 ಕದ್ದು ಕದ್ದೋಡುವಾ ನಮ್ಮ | ಲಿದ್ದು ಪಿಡಿಯಾಲೊಶವಲ್ಲೆ ರುದ್ದರನ್ನಾ ಓಡೀಸಿದಾ | ಮುದ್ದು ರಂಗಾನಿವನಮ್ಮ 13 ಹಗ್ಗದಿ ಕಟ್ಟೀದರಾಗ | ಬಗ್ಗನಮ್ಮಾ ನಿನ್ನ ಮಗಅಗ್ಗಳೀಕೆ ಖಳರ ಉಕ್ಕು | ತಗ್ಗಿಸಿ ಬಂದಿಹಾನಮ್ಮ 14 ಇಂದು ನಿನ್ನಾ ಕಂದನಾಟಾ | ಚಂದಾವೆಂದೂ ವಂದಿಸುವೆವೆತಂದೆ ವ್ಯಾಸಾ ವಿಠಲೆ*ಮಗೆ | ಬಾಂಧವಾನಾದನು ಕಾಣೆ 15
--------------
ವ್ಯಾಸವಿಠ್ಠಲರು
ಉದಯ ಕಾಲವಿದು ನಮ್ಮ ಪದುಮನಾಭನ ಉದಯಕಾಲವಿದು ಪ ಉದಯಕಾಲವಿದು ಪದುಮನಾಭನ ದಿವ್ಯ ವಿಧವಿಧ ಸೃಷ್ಟಿಯ ಮುದದಿ ಸಾಗಿಸುವಂಥ ಅ.ಪ ಪರಮ ಕರುಣಿ ದೇವ ತನ್ನ ಚರಣದಾಸರ ಕಾವ ಮರವೆ ಮಾಯದೊಳು ಹೊರಳುತ ಒರಲುವ ನರರಿಗರಿವನಿತ್ತು ವರವ ಪಾಲಿಸುವ 1 ಅನ್ನ ಆಹಾರವಿತ್ತು ಸೃಷ್ಟಿಯ ಭಿನ್ನವಿಲ್ಲದೆ ಪೊತ್ತು ಬನ್ನಬಡುತ ಬಲು ಕುನ್ನಿಪ್ರಾಣಿಗಳ್ಗೆ ಉನ್ನತ ಸುಖವಿತ್ತು ತನ್ನಂತೆ ನೋಡುವ 2 ಮಾಧವ ಸುಜನರ ಪಾಲಿಸುವ ನಿಜಮನದೊಳು ತನ್ನ ಭಜಿಸುವ ಜನರಿಗೆ ಸಾಯುಜ್ಯ ನೀಡುವ 3 ಯೋಗಿ ಜನರ ಪ್ರಿಯ ಕ್ಷೀರಸಾಗರಕನ್ಯೆಯೊಡೆಯ ಬಾಗಿ ಸದೃಢದಿ ಸುರಾಗದಿ ಪಾಡುವ ಭಾಗವತರ ನಿಜ ಯೋಗಕ್ಷೇಮ ಕೇಳ್ವ 4 ಶಾಮಸುಂದರಾಂಗ ಪುಣ್ಯನಾಮ ಕೋಮಲಾಂಗ ಕಾಮಿತಜನಪೂರ್ಣ ಕಾಮಜನಕ ತ್ರಿ ಭೂಮಿಗಧಿಕ ಮಮಸ್ವಾಮಿ ಶ್ರೀರಾಮ 5
--------------
ರಾಮದಾಸರು
ಉದ್ದಾಳಿಕನ ಕಥೆ ಪಾಶಾಂಕುಶ ಧರನೆ ಕರಿಣಿಸೊ ಮತಿಯ 1 ಮಾನಿನಿಕುಲಕೆ ಕಟ್ಟಾಣಿ ಕರುಣಿಸೆ ಮತಿಯ2 ಮನೋಹರನೆ ನಿಜಮತಿಯ 3 ಅಂಬರ ಮೇಲಾದಷ್ಟದಿಕ್ಪಾಲಕರು ಪುಣ್ಯಕಥೆಯ 4 ಓಣ್ಯೊಳು ಚೆಲ್ಲಿದ ಅಣಿ ಮುತ್ತಾರಿಸಿ ನೂಲಿಗೆ ಪೋಣಿಸಿದಂತೆ ಯೋಗಿಗಳರಸುದ್ದಾಳಿಕನ ಕಥೆಯನು ಹೇಳುವೆ ಚರಿತೆಯ ಮಾಡಿ5 ವೇದವೇದಾಂತ ಪಾರಗನು ಧರ್ಮ ಪತ್ನಿ 6 ಸುತಜನಿಸಿದ ಉದ್ದಾಳಿಕ ಮಾಡಿದ ಕ್ರಮದಿಂದ 7 ಮೌಂಜಿಯ ಕಟ್ಟಿ ನಡೆದರು ಪರಗತಿಗೆ 8 ನಾಲ್ಕು ವೇದಗಳ ಘನತಪವನಕಾಗಿ ನಡೆದ 9 ನಿಂದು ಬೆಳಗುವ ಜ್ಯೋತಿಯಂತೆ ಸಂದವರುವತ್ತು ಸಾವಿರವು 10 ಪಟ್ಟಣದಿ ರಾಜ್ಯವಾಳುವನು 11 ಕನ್ಯಾದಾನವು ಭೂದಾನ ರಾಜ್ಯವಾಳುವನು 12 ಹೆತ್ತ ತಾಯಿ ಮಕ್ಕಳಗಲರೆಂದೆದಿಗು ಬತ್ತದೆ ಕರೆವ ಧೇನುಗಳು ದೇಶದೊಳಗೆ 13 ಪುಣ್ಯಸಾಧನರು ಸಜ್ಜನರು ಧರ್ಮಗಳಾ ದೇಶದೊಳಗೆ 14 ಬಡವರಿಲ್ಲಿ ಚಾರರುಂಟು ದೇಶದೊಳಗೆ 15 ಧರ್ಮವ ನಡೆಸಿ ರಾಜ್ಯವಾಳುವನು 16 ಮಕುಟವೆಂದೆನಿಸಿ ಪಟ್ಟದರಸಿಯಲ್ಲದನ್ಯತ್ರ ನೋಡೇಕ ಪತ್ನಿಯ ವ್ರತವ ನಡೆಸಿದನು17 ಸಂತೋಷದೋರಲು ಹುಟ್ಟಿದಳ್ ಚಂದ್ರಾವತಿಯು 18 ಹೊನ್ನಿನ ರಾಸಿ ಸುವರ್ಣದ ಬೆಟ್ಟವು ಕನ್ಯಾದಾನದ ಹೆಬ್ಬೆಳಸು ಮಾಣಿಕವೆ ಸಂತಾನ 19 ನಡೆಯೋಳು ದಟ್ಟಡಿಯಿಡುತ ಕಡುಲಾಲಿಕೆ ಬಾಲಲೀಲೆ 20 ಬಡವಾದಾಳೆಂದು ಕಡುಹರುಷದಲಿ ಹಿಗ್ಗಿದರು 21 ಅಕ್ಷರಾಭ್ಯಾಸವ ಮಾಡಿಸಿ ಕುಮಾರಿಗೆ ನರ್ತನ ಗೀತವ ಕಲಿಸಿ ಪುತ್ರಿಗಭ್ಯಾಸ ಮಾಡಿಸಿದ 22 ಯೌವನವು ತೋರಿದವು ಆಲಯವನೆ ಕಟ್ಟಿಸಿದ 23 ಪುತ್ರಿಯ ಸೇವೆಗೆ ಇಟ್ಟನೆ ಭೂಪಾಲ ಹತ್ತುಸಾವಿರ ಕೆಳದಿಯರ ಸುತ್ತಲು ಪ್ರಾಕಾರ ಎಸೆದವು ರಕ್ಷೆಗೆ ಇಟ್ಟನೆ ದ್ವಾರಪಾಲಕರ24 ಮುನಿಕೌಶಿಕನು ನೋಡುತಲಿ 25 ಸತ್ಯಲೋಕ ತಪೋಲೋಕವ ಚರಿಸುತ್ತ ಹೊಕ್ಕ[ನೆ] ಯಮ ಲೋಕವನು ಜೀವಿಗಳ ತಾಕಂಡ 26 ತೃಣದ ಮೂಲಾಗ್ರದಿ ನಡುಗುತಿಪ್ಪರ ಕಂಡು ಬ[ಳಿ] ಯಲ್ಲಿ ನಿಂತು ಮಾತಾಡಿ ತಿಳಿದು ಹೇಳುವುದು ಎನ್ನೊಡನೆ 27 ಜಗದೊಳಗೆ ಎಮಗೆ ಪತನಕ್ಕೆ ಬಿದ್ದೆವೆಂದೆನಲು 28 ಕಾಣಿಸುವ ದೌಹಿತ್ರರು ಮುನಿಯು ಕೇಳಿದನು 29 ಹೆಣ್ಣನೊಲ್ಲದೆ ಅರಣ್ಯವ ಚರಿಸುವ ಉನ್ನಂತ ತಪಸೀಲಿದ್ದ ತಿಳಿದು ಹೇಳುವುದು 30 ಪುತ್ರಸಂತಾನವ ಪಡೆದು ವಿಸ್ತಾರವಾಗಿ ಹೇಳುವುದು 31 ಭೋರನಲ್ಲಿಂದ ತೆರಳಿದನಾಗಲೆ ಮುನಿ ಅರಣ್ಯವ ಚರಿಸುತಲೆ ತಪೋವನವ 32 ಕರವಿಡಿದು ಕರೆ ತಂದನಾಗ ಬರವೇನೆಂದು ಕೇಳಿದನು 33 ಯಮ ಲೋಕವನು ಅತ್ಯಂತ ನರಕಕೈದುವರು 34 ಆಲಸÀ್ಯವಿಲ್ಲದೆ ಬೀಳ್ಪರು ಪತನಕ್ಕೆ º
--------------
ಹೆಳವನಕಟ್ಟೆ ಗಿರಿಯಮ್ಮ
ಎಂತು ಬಿನ್ನೈಸಲೊ ಮುರಾರಿ ಸಾರಿಗೆ ಸಾರಿ | ಸಂತ ಜನರ ಆಧಾರಿ ಪ ಶ್ಲೋಕ - ಘನ ಅನವರತÀ ಕಾಯಾ | ಸ್ವಾಮಿ ಲಕ್ಷ್ಮೀ ಸಹಾಯ | ಅನಿಮಿಷ ಮುನಿಗೇಯಾ ಹೇಯ ಧರ್ಮ ವಿಹಾಯ | ನಗರ ನಿಲಯಾ | ಅಮಿತÀ ಆನಂದ ಕಾಯಾ | ನಾಗ ತಲ್ಪೋರು ಗಾಯಾ 1 ಪದ - ಶರಣು ಶರಣು ಶಾರಣ್ಯನೆ | ಗುಣ ಗುಣ್ಯನೆ | ನಮಗಾನನ್ಯನೆ | ನಿರುತರಂತರ ಕಾರುಣ್ಯನೆ ಪ್ರದದಾನ್ಯನೆ | ಅಪ್ರತಿ ಧನ್ಯನೆ | ಪರಮ ಪುರುಷ ಅಸಮಾನ್ಯನೆ | ಮಹ ಪುಣ್ಯನೆ | ಪ್ರಳಯ ಕನ್ಯೆನೆ | ಕರುಣ ಸಾಕ್ಷಿಗನೆ ಲಾವಣ್ಯನೆ | ಅನುಗಣ್ಯನೆ ಪ್ರಾಕೃತ ಶೂನ್ಯನೆ 1 ಶ್ಲೋಕ - ಪರಿಪರಿ ಹೇಯ ಗಾತ್ರಾ ತೆತ್ತನೊ ಇಷ್ಟ ಮಾತ್ರಾ | ಚರಿಸಿದೆ ವಿಷಯ ಯಾತ್ರಾ | ಪಾರಗಾಣೆನೋ ಮಿತ್ರಾ | ಕೊರಳಿಗೆ ಮಮತೆ ಸೂತ್ರಾ | ಉರುಲು ಬಿದ್ದಿದೆ ಚಿತ್ರಾ | ಸುರಕು ಬಡಿಪ ತನುತ್ತಾ | ಕಮಲ ನಿನೇತ್ರಾ | 2 ಪದ - ನರಕ ನರಕ ಉಂಡು ಬೆಂದೆನೊ | ಇಲ್ಲಿ ನಿಂದೆನೊ | ಗತಿಗೆ ಮುಂದೇನೊ | ಕುರುಡ ಕಿವುಡನಾಗಿ ನೊಂದೆನೊ | ಇನ್ನೊಂದೇನೊ | ಉಪಾಯವಂದೆನೊ | ಮರಹು ಸಾಗರದೊಳು ಸಂದೆನೊ | ಅಂದು ಹಿಂದೆನೊ | ಸುಜನರಿಗಂದೇನೊ 2 ಶ್ಲೋಕ - ಸುಲಲಿತ ರುಚಿರಪಾಂಗಾ | ಶುದ್ದ ಸ್ವಭಾವÀ ರಂಗಾ | ಪಲಿಪರಮಾಣು ಸಂಗಾ | ಪಾವನ ಕೋಮಲಾಂಗಾ | ವೊಲಿಸಿದವರ ಭಂಗಾ | ಪರಿಸುವ ಶಿಂಗ ಶಿಂಗಾ | ವರಬಲಗುಣ ತರಂಗಾ | ಸರಸಿಜ ಹೃತ್ಪುಂಗಾ3 ಪದ - ಚಿಂತಿಸುವೆನೊ ನಿನ್ನ ವಿಗ್ರಹಾ | ಮನೋನಿಗ್ರಹಾ | ವಾಗಲಿ ಅನುಗ್ರಹಾ | ಸಂತತ ಎನಗಿದೆ ಸಂಗ್ರಹಾ | ದೇಹವೈಗ್ರಹಾ | ದುರುಳರ ಪ್ರತಿ ಗ್ರಹಾ | ಮುಂತೆ ಕೈಕೊಂಬ ದುರಾಗ್ರಹಾ | ಯೈವ ವಿಗ್ರಹಾ | ಮಾಣಿಸು ಶಿರಿಗ್ರಹಾ | ಸಂತೈಸು ಕರುಣವಾರುಣಗ ಅನಿಗ್ರಹಾ 3 ನವನೀತ ಗೋಪಿ ವಸ್ತ್ರಾಪಹಾರಾ | ಕಾಲ ಧಾರಾ | ಕಂಸದಾನವ ಸಂಹಾರಾ | ಧ್ರುವ ಬಲಿಕರಿ ಉದ್ಧಾರಾ | ನಾನವತಾರ ಧೀರಾ | ಪವನ ಮನಮಂದಿರಾ ಪಾಲಿಸೊ ವಾರಂ ವಾರ4 ಪದ - ವಿಜಯನಗರಾಧೀಶ ಸರ್ವೇಶಾ | ಮಣಿಮಯ ಭೂಷಾ | ಸೂರ್ಯ ಕೋಟಿ ಪ್ರಕಾಶಾ | ತ್ರಿಜಗದೊಳಗೆ ನೀನೆ ನಿರ್ದೋಷಾ | ಶಕ್ತಿ ವಿಶೇಷಾ | ಐಶ್ವರ್ಯ ವಿಲಾಸಾ | ಋಜುಜ್ಞಾನ ಕೊಡುವದೊ ಮನೋತ್ತರಿಸಾ | ಮಂಜುಳ ಭಾಷಾ | ಭೂದಾ ರಜವಾಸಾ | ನಿರ್ಜರ ಕೋಶಾ | ಹೃದಯ ಕಾಶಾ | ನಾಮಕ ಮಹಿದಾಸಾ 4
--------------
ವಿಜಯದಾಸ
ಏಳಯ್ಯ ಗುರುವೆ ಬೆಳಗಾಯಿತು ಏಳಯ್ಯ ಗುರುರಾಯ ಏಳಯ್ಯ ಶುಭಕಾಯ ಏಳು ಮಹರಾಯ ಏಳು ಎನ ಜೀಯಾ ಪ ಶೀಲ ನಿನ್ನ ಭಕ್ತರು ಸಾಲು ಸಾಲಾಗಿ ನಿಂತಿಹರೋ ಅ.ಪ ಉದಯಾದ್ರಿ ಶೃಂಗದಲಿ ಉದಿಸಿದನು ಭಾಸ್ಕರನು ಸದಮಲ ಬುಧರೆಲ್ಲ ಮುದದಿಂದಲೀ ಎದ್ದು ನದಿಯ ಸ್ನಾನವ ಮಾಡಿ ಉದಕ ಪುಷ್ಪಗಳಿಂದ ಪಾದ - ಸಂದರುಶನಕೆ ಬಂದಿಹರೋ 1 ನಿತ್ಯ ಭಜಿಸುವ ಜನರೆಲ್ಲ ಹೊತ್ತು ಮೀರಿತು ಎಂದು ಚಿತ್ತ ಶುದ್ಧಿಯಲಿಂದ ಉತ್ತುಮಾರ್ಹಣೆಗಳಾ ತಮ್ಮ ನೆತ್ತಿಯಿಂದಾ ಪೊತ್ತು ಜತ್ತಾಯುತಾಗಿ ನಿಂತಿಹರೋ ಉತ್ತಮಾ ನಿನ ನಿದ್ರೆ ಹೊತ್ತು ಮೀರ್ಯಾಯಿತೊ ಪಾದ ಒತ್ತಿ ಬೋಧಿಸುತಿಹರೋ ಚಿತ್ತಕ್ಕೆ ತಂದು ತ್ವರಿತದಿ ಏಳೋ 2 ವಿಮತಾದ್ರಿ ಕುಲಿಶನೇ ವಿಮಲ ಗಾತ್ರನೇ ಏಳೋ ದಾತ ದಿವಿಜದೃಮನೆ ವಾರಿಧಿ ಎಳೋ ತಾಮರಸಾಂಬಕನೆ ಏಳೋ ಆಮಯ ಧ್ವಂಸಕÀ ನೀನೇಳೋ ಗೋಮತೀ ಕುಮುದ ಸೋಮ ಸಾಂದ್ರನೆ ಏಳೋ - ಶ್ರೀ ಪಾದ ಭೃಂಗನೇ ಏಳೋ ಯಾಮ ಮೀರಿತು ವಿಶ್ವನಿಯಾಮಕ ದೂತನೇ ಸಾಮಗಾಯನ ಲೋಲ ರಮಾ ವಲ್ಲಭಪ್ರೀಯ ಗುರುರಾಜವರ್ಯ 3 ಮೌನಿ ಕುಲರನ್ನ ಮಾನ ನಿಧಿಯೇ ಎನ್ನ ಬಿನ್ನಪವ ಕೇಳಯ್ಯ ಜೀಯಾ ನಿನ್ನ ಭೋಧಿಪಕನ್ಯ ಜನರುಂಟೆ ನಿನ್ನಿಂದ ನೀ ಚನ್ನಾಗಿ ಏಳೋ ಮುನೆÀ್ನ ಮಹ ಕಾರ್ಯಂಗಳೂ ಘನ್ನವಾಗಿರುತಿಹವು ನಿನ್ಹೊರತು ಇನ್ನಾರು ಮಾಳ್ಪರು ಎನ್ನ ನುಡಿ ಈಗ ಚನ್ನಾಗಿ ಮನದಿ ತಂದು ಮನ್ನಿಸೀ ಪೊರೆಯೊ ಧ್ವರಿಯೇ 4 ಸೋತು ಮಲಗಿದೆಯಾ ಪಾತಕಾಂಬುಧಿ ಪೋತನೇ ಮಾತರಿಶ್ವನ ತಾತ ಪಾದ ಭವ ಯುಗ್ಮದಲಿ ಸಂ - ಜಾತವಾಗಿಹ ಸುಧಾ - ಪೀತ ಕಾರಣ ಮದಾ ಸಂ - ಭೂತದಿಂದ ಮಲಗಿದೆಯಾ ಭೂತನಾಥನ ಗುರು ಜಗ - ನ್ನಾಥ ವಿಠಲನ ದೂತ ನಾನೆಂಬ ಗರುವಿಂದ ಮಲಗಿದೆಯಾ 5
--------------
ಗುರುಜಗನ್ನಾಥದಾಸರು
ಏಳು ಲೋಕದಲಿ ಹೇಳುವರು ಅವರಕೀರ್ತಿಕೇಳಿ ಕೇಳಿ ಬಲ್ಲೆವಮ್ಮ ದೂತೆ ಬಹಳ ಬಹಳ ಭಾಗ್ಯವೇನೆ ದೂತೆ ಹೇಳಲ್ವಶವಲ್ಲವೇನೆ ದೂತೆ ಪ. ಕೃಷ್ಣನಂಘ್ರಿ ಕಮಲದಲೆ ನಿಷ್ಠನಾಗಿ ಧರ್ಮರಾಯ ಅಷ್ಟು ರಾಜ್ಯನಾಳುವನೇನ ದೂತೆ 1 ದಿಟ್ಟ ಧರ್ಮರಾಯ ದ್ರವ್ಯ ಶ್ರೇಷ್ಟ ದ್ವಿಜರಿಗೆ ಕೋಟಿಕೊಟ್ಟು ಕೊಟ್ಟು ಕಳಿಸೋನೇನೆ ದೂತೆ 2 ಮಾಧವನ ಭಕ್ತರಿಗೆ ಆದರದಿ ದ್ರವ್ಯ ಸಹಿತಗೋದಾನಗಳು ಕೊಡುವೊನೇನೆ ದೂತೆ 3 ನೀಲವರ್ಣನ ಭಕ್ತರಿಗೆ ಸಾಲಿಗ್ರಾಮ ಕೋಟಿ ಲಕ್ಷಮ್ಯಾಲೆ ದ್ರವ್ಯ ಕೊಡುವೋನೇನೆ ದೂತೆ 4 ಶ್ಯಾಮವರ್ಣನ ಭಕ್ತರಿಗೆ ಪ್ರೇಮದಿಂದ ದ್ರವ್ಯ ಸಹಿತ ಭೂಮಿದಾನ ಕೊಡುವೊನೇನೆ ದೂತೆ5 ಪನ್ನಂಗಶಯನನ ಭಕ್ತರ ಮನ್ನಿಸಿ ದ್ರವ್ಯಗಳಿಂದ ಕನ್ಯಾದಾನ ಮಾಡೋನೇನೆ ದೂತೆ 6 ಉತ್ತಮ ದ್ವಿಜರಿಗೆ ರಾಯ ಮುತ್ತು ಮಾಣಿಕರತ್ನ ಸಹಿತಛತ್ರ ಚಾಮರ ಕೊಡುವೋನೇನೆ ದೂತೆ 7 ಆನೆ ಕುದುರೆ ಅಂದಣವು ನಾನಾ ಭೂಷಣಗಳು ವಸ್ತ್ರಜ್ಞಾನಿಗಳಿಗೆ ಕೊಡುವೊನೇನೆ ದೂತೆ 8 ಸಂಪತ್ತು ದ್ವಿಜರಿಗೆ ಕೊಟ್ಟು ದಂಪತ್ತು ಪೂಜೆಗಳ ಮಾಡಿಗುಂಪು ಗುಂಪು ಕಳುಹೋನೇನೆ ದೂತೆ 9 ಮಿತಿ ಇಲ್ಲದೆ ಅನ್ನ ಮಧ್ವಮತದ ಜನಕೆ ಕೊಟ್ಟುಲಕ್ಷ್ಮೀಪತಿಗೆ ಅರ್ಪಿಸುವನೇನೆ ದೂತೆ 10 ಯದುಪತಿಯ ಭಕ್ತರಿಗೆ ಉದಕ ಪಾತ್ರೆ ಕೊಟ್ಟುರಾಯ ಅಧಿಕ ಕೀರ್ತಿ ಪಡೆಯುವನೇನೆ ದೂತೆ11 ತುಷ್ಟರಾಗಿ ಆಶೀರ್ವಾದ ಕೊಟ್ಟುರಾಯಗೆ ದ್ವಿಜರು ಕೃಷ್ಣಗರ್ಪಿಸೆಂಬೋರೇನೆ ದೂತೆ 12 ರತಿ ಇಟ್ಟು ರಾಮೇಶನಲ್ಲೆ ವ್ರತವ ಕೋಟಿ ಮಾಡಿರಾಯಕೃತ ಕೃತ್ಯನಾಗುವನೇನ ದೂತೆ13
--------------
ಗಲಗಲಿಅವ್ವನವರು
ಒಲಿದವಳ ಬಿಡುವುದು ಧರ್ಮವಲ್ಲ | ಚಲುವ ನಿನಗಾಗಿ ನಾ ಯೇಸು ಕಾಲಕೆ ತಪವಿದ್ದೆ ಪ ತಂದೆತಾಯಿಗಳಲ್ಲಿ ಪುಟ್ಟಿದಾಕ್ಷಣದಲ್ಲಿ | ಅಂದೆ ನೇಮಿಸಿದರು ಪೆಸರನಿಟ್ಟು | ಸಂದೇಹಗೊಳದಿರು ಮೈಲಿಗೆಯವಳೆಂದು | ಬಂದ ಪ್ರಾಣವÀ ನೋಡು ಬರಿದೆ ಪೇಳುವಳಲ್ಲ 1 ಕನ್ಯಾವಸ್ಥಿಯಲಿಂದ ನಿನ ನಿನ್ನ ಧ್ಯಾನವಲ್ಲವೇ | ಅನ್ಯಪುರುಷರಾಪೇಕ್ಷೆ ಮಾಡಲಿಲ್ಲ | ಅನ್ಯಾಯವೇನು ಆಗಲಿ ಪೋಗುವರೇನೊ | ಅನ್ಯಥಾ ಈ ನುಡಿಗೆ ನಿಜಕೆ ನಿಲ್ಲುವೆ ನಾನು 2 ಮಲದಲ್ಲಿ ಮೂರುದಿನ ಪೋಗಾಗಿ ಹೋಗಿದ್ದೆ | ಬಲು ಶುಚಿಯಾದೆನೊ ಶುದ್ಧ ಜಲದಿ | ಘಳಿಗೆ ಕಡೆದರೆ ಎನ್ನ ಪ್ರಾಣನಿಲ್ಲವೊ | ಎನ್ನನಗಲಿ ಮೈ ತಪ್ಪಿಸಿ | ದೂರ ಕರೆದೊಯ್ಯೊ ಕರುಣದಲಿ 3 ನಗೆಗೇಡಿ ಮಾಡದಿರು ಜಗದೊಳಗೆ ಇಪ್ಪವಳ | ಸೊಗಸಿಗನೆ ಸರಸವಾಡುವನೆ ಬಾರೊ | ಮಗುಳೆ ಮತ್ತೊಬ್ಬರು ಮೆಚ್ಚಿದರೆ ಇದೆ ಪಾಟು | ಮಗುಳೇನು ಹೊಸ ಪರಿಯು ತೋರುವುದು ನೋಡಿದರೆ 4 ಕಂಡ ಕಾಣದ ಹಾಗೆ ಮಾತನಾಡಿದಿರೆನ್ನ | ಅಂಡೊಲಿವ ಖ್ಯಾತಿ ಎಂದಿಗೆ ತೀರದೂ | ಕುಂಡಲಿಗಿರಿವಾಸ ವಿಜಯವಿಠ್ಠಲ ವೆಂಕಟ | ಹಿಂಡು ಬಂಧುಗಳಿದ್ದರೇನು ಮಾನವನು ತೊರೆದೆ 5
--------------
ವಿಜಯದಾಸ
ಕಣಿಯ ಹೇಳಲು ಬಂದೆ ನಾರಾಯಣನಲ್ಲದೆ ಇಲ್ಲವೆಂದು - ಮಿಕ್ಕಬಣಗು ದೈವದ ಗೊಡವೆ ಬೇಡ ನರಕ ತಪ್ಪದು ಪ ಎಕ್ಕನಾತಿಯರು ಕಾಟಿ ಜಕ್ಕಿ ಜಲಕನ್ಯೆಯರುಸೊಕ್ಕಿನಿಂದ ಸೊಂಟಮುರುಕ ಬೈರೇ ದೇವರುಮಿಕ್ಕ ಮಾರಿ ಮಸಣಿ ಚೌಡಿ ಮೈಲಾರಿ ಮೊದಲಾದಠಕ್ಕು ದೈವದ ಗೊಡವೆ ಬೇಡ ನರಕ ತಪ್ಪದು 1 ಸುತ್ತಣವರ ಮಾತ ಕೇಳಿ ಗುತ್ತಿಯ ಎಲ್ಲಮ್ಮಗೊಲಿದುಬತ್ತಲೆಯೆ ದೇವರೆದುರು ಬರುವುದು ನೋಡಿರೊಮತ್ತೆ ಬೇವಿನುಡುಗೆಯ ಅರ್ತಿಯಿಂದುಟುಗೊಂಡುಮುಕ್ತಿ ಕಾಂಬೆವೆಂಬ ಮೌಢ್ಯ ಬೇಡಿರÉೂ 2 ತೂಳದವರ ಮಾತ ಕೇಳಿ ಖೂಳರೆಲ್ಲ ಕೂಡಿಕೊಂಡುಹಾಳು ಮಾಡಿ ಕೈಯಲಿದ್ದ ಹೊನ್ನು ಹಣಗಳಬಾಳುತಿಪ್ಪ ಕೋಣ ಕುರಿಯ ಏಳಬೀಳ ಕೊರಳ ಕೊಯ್ದುಬೀಳ ಬೇಡಿ ನರಕಕೆಂದು ಹೇಳ ಬಂದೆನೊ3 ಹೊಳ್ಳದ ಬಿಚ್ಚೇರು ಸಹಿತ ಸುಳ್ಳರೆಲ್ಲ ಕೂಡಿಕೊಂಡುಬೆಳ್ಳನ ಬೆಳತನಕ ನೀರ ತಡಿಯಲಿ ಕುಳಿತುಗುಳ್ಳೆ ಗೊರಜೆ ಕೂಡಿ ತಿಂದು ಕಳ್ಳು ಕೊಡನ ಬರಿದು ಮಾಡುವಂಥಪೊಳ್ಳು ದೈವದ ಗೊಡವೆ ಬೇಡ ನರಕ ತಪ್ಪದು4 ಪಾದ ಬಿಡದೆ ಭಜಿಸಿರೊಜಡದೈವಗಳ ಇಂಥ ಪೂಜೆ ಬೇಡ ಕಾಣಿರೋ 5
--------------
ಕನಕದಾಸ
ಕನ್ಯಾರತ್ನವನಿತ್ತನು ಹರಿಗೆ ಸತ್ರಾಜಿತರಾಯನು ಪ ಧನ್ಯನು ತಾನೆಂದೆನ್ನುತ ಯದುಕುಲರನ್ನ ಸುಗುಣ ಸಂಪನ್ನಗೆ ಹರುಷದಿ ಅ.ಪ. ಸನ್ನುತ ಚರಣನಿಗೆ ಕಮನೀಯ ಸ್ವರೂಪಗೆ ಕಮಲಾರಮಣಗೆ ಸ್ವರತನಿಗೆ ಕಾಮಿತ ಫಲದಾತಗೆ ಸುಮಬಾಣನ ಪಿತ ಸುಂದರಗೆ ಸುಮದಳನೇತ್ರನಿಗೆ ನಮಿಪ ಜನರ ಸುರದ್ರುಮನೆಂದೆನಿಸುವ ಅಮಿತ ಮಹಿಮಯುತಸಮವಿರಹಿತನಿಗೆ 1 ಬೃಂದಾರಕ ಬೃಂದ ಸುವಂದಿತಗೆ ಶ್ರೀ ಗೋವಿಂದಗೆ ಬೃಂದಾವನ ವಿಹರಣ ವಿಭವಗೆ ವಿಶ್ವಂಭರನಿಗೆ ಮಂದಾಕಿನಿ ಜನಕಗೆ ಮಾಧವಗೆ ಮರಕತಶ್ಯಾಮನಿಗೆ ಮಂದರಧರ ಮುಚುಕುಂದವರದ ಪೂ ರ್ಣೇಂದು ವದನಗುಣಸಾಂದ್ರ ಮುಕುಂದಗೆ 2 ವರಲೀಲಾ ಮಾನುಷ ವೇಷನಿಗೆ ವದನಾಂಬುಜದಲಿ ಸರಸಿಜ ಜಾಂಡವ ತೋರಿಪಗೆ ಸಾರಸನಾಭ ಪರಮಪಾವನ ಚರಿತಗೆ ಪುರುಷೋತ್ತಮನಿಗೆ ಗರುಡಗಮನ ಶ್ರೀ ಕರಿಗಿರೀಶ ಯದು ವರಕುಲಮಣಿ ಮುರಹರನಿಗೆ ಮುದದಲಿ 3
--------------
ವರಾವಾಣಿರಾಮರಾಯದಾಸರು
ಕನ್ಯಾರೂಪವ ತಾಳಿದ ಚನ್ನಿಗ ಕೃಷ್ಣರಾಯನಾ ಪ ದಾನವರ ಮರಳು ಮಾಡಿ ಮಾಣದೆ ಸುಧೆಯನೆರೆದು ಆ ನಿರ್ಜರರ ಪಾಲಿಸಿದ ಶ್ರೀ ನಾರಾಯಣಿ ವೇಷವಾ 1 ಆರಾರು ಸಾವಿರ ಸಕಲ ಶರೀರದ ಎಡಕೆ ಇಪ್ಪ ಸಾರಸುಂದರವಾಗಿದ್ದ ನಾರಿ ರೂಪಗಳು ಇದೊ 2 ಭೂತಳದೊಳಗೆ ಜನಕೆ ಮಾತೆಯಾಗಿ ಕಾವುತಿಪ್ಪ ಜಾತರಹಿತ ವಿಜಯವಿಠ್ಠಲ ಶ್ರೀ ತರಣಿಯಾಳಿದ ಪೆಣ್ಣಿನ 3
--------------
ವಿಜಯದಾಸ
ಕನ್ಯೆ ಕುವರಿ ಕರುಣಿಸೆಮ್ಮನೂ | ಕಮಲನಯನೆಅನ್ಯ ದೇವತೆಯನ್ನ ಭಜಿಸೆನೇ ಪ ಮನ್ಯು ಮಿಕ್ಕ ದೋಷ ಹರಿಸಿ | ನಿನ್ನ ಪತಿಯ ಚರಣ ಕಮಲವನ್ನೆ ಭಜಪ ಮತಿಯ ಕೊಟ್ಟು | ಘನ್ನ ಪದಕೆ ದಾರಿ ತೋರೆ ಅ.ಪ. ಇಂಬು ಡಿಂಬ ಪೋಗದವರವ ಪಡಿಯೆ 1 ಖುಲ್ಲ ಕಂಸ ತನ್ನ ಭಗಿನಿಯ | ಒಯ್ದ ಬೇಗನಲ್ಲನೊಡನೆ ಗೈದ ಖೈದಿಯ |ಅಲ್ಲಿ ಉದಿಸೆ ಚೆಲ್ವ ಕೃಷ್ಣ | ನಲ್ಲೇ ನೀನು ದುರ್ಗೆ ಎನಿಸೆವಲ್ಲದವರ ಬಿಡದೆ ನೀನು | ಕೊಲ್ವೆನೆಂದು ಹಾರಿ ಪೋದೆ 2 ಶರಧಿ | ನಿಂತೆ ಅಲ್ಲಿ ಕನ್ಯೆಯಾಗಿ 3 ಮದುವೆ ನಿನಗೆ ಮಾಳ್ಪ ಮನದೊಳೂ ವರುಣ ಬೇಡೆರುದ್ರ ಅಜರು ಬಂದು ನಿಲ್ಲಲೂ ||ಒದಗಿ ಕಲಿಯ ಯುಗವು ಆಗ | ವಿಧಿಯು ಹರರು ತಾವು ಬೇಗಸುಧಿಯ ಇಂದ್ರ ಪುರದಿ ನಿಲ್ಲೆ | ಮುದದಿ ನಿಂತೆ ಶರಧಿಯಲ್ಲೇ4 ಇಂದಿರೆ ತವ ಮಾತಿನಂತೆ ಬಂಧ ಹರಿಸಿ ಮುಕ್ತಿ ಸುಖವ | ಛಂದದಿಂದ ಕೊಟ್ಟು ಕಾಯ್ವ 5
--------------
ಗುರುಗೋವಿಂದವಿಠಲರು
ಕಾಪಾಡೆಲೆ ಸಕಲಾಪಧ್ಹಾರಿಣಿ ಕೊಲ್ಲಾಪುರಗತ ಕಮಲೆ ಪ. ಪರಿ ಹರಿಯ ದಯಾಪಾತ್ರಳೆ ಶುಭನೂಪುರಾದಿ ಸುಕಲಾಪೆ ಶೋಭಿತೆ ಭ್ರೂ-ಚಾಪ ಚಲನದಿಂದ ಪವಮಾನನಿ-ಗೆ ಪದದೇ ಭವತಾಪಗಳಳಿದು ಅ.ಪ. ಇಂದೀವರವರಮಂದಿರನಂದಿನಿ ಚಂದ್ರಜಯಿಪ ವದನೆಬೃಂದಾರಕ ಮುನಿವಂದಿತ ಪದಯುಗೆ ಕುಂದಕುಟ್ಮಲರದನೆ ಮದನೆ ಮುಕುಂದ ಹೃದಯಸದನೆಇಂದ್ರನೀಲನಭ ಸುಂದರತನು ಗುಣ-ಸಾಂದ್ರ ಇಂದುಮುಖಿ ಮಂದರಧರಗೋ-ವಿಂದ ಬಂಧುನುತೆ ಬೃಂದಾವನಪತಿನಂದನಂದನನಾನಂದಿನಿ ವಂದಿತೆ 1 ಕನ್ಯಾಮಣಿ ಜಗನ್ಮಾನ್ಯಾಮೃತ ಪಾವನ್ನಾಧರ ಬಿಂಬೆಘನ ಕಲಶ ಕುಚವನ್ನು ಧರಿಪ ಕಟಿಸಣ್ಣ ಘನನಿತಂಬೆ ಅಂಬೆ ಚಿನ್ನಪುತ್ಥಳಿ ಬೊಂಬೆಅನ್ನವಸನ ಧನಧಾನ್ಯಕಾಗಿ ಪರ-ರನ್ನ ಯಾಚಿಸಿ ಬಲು ಖಿನ್ನನಾಗುತಲಿನಿನ್ನನು ಮರೆದೆನು ಎನ್ನವಗುಣಗ-ಳನ್ನು ಎಣಿಸದಿರು ಮನ್ನಿಸು ಬಿನ್ನಪ 2 ಕಪೋಲ ಶೋಭಿತ ಕೀಲಾಲಜಾತಪಾಣಿಕೇಳಿಲಿ ಯಮುನಾಕೂಲದಿ ಹರಿ ದು-ಕೂಲಚೋರನ ರಾಣಿ ಜಾಣೆ ಶುಶ್ರೋಣೆ ಜಗತ್ರಾಣೆಕಾಳಕೂಟಸಮ ಕೀಳು ವಿಷಯದಲಿಬೀಳುವುದೆನ್ನ ಮನ ಕೀಳಿಸಿ ಶ್ರೀಗೋ-ಪಾಲವಿಠಲನನುಗಾಲ ಸೇವಿಪಂತೆಶೀಲವೀಯೆಯೆಂದು ಕೇಳುವೆ ಲಾಲಿಸೆ 3
--------------
ಗೋಪಾಲದಾಸರು
ಕಾಯ ಬೇಕಿವಳಭಯ ಕೃತು ಭಯನಾಶ | ದಯದೋರೊ ಶ್ರೀಶ ಪ ವಾದೀಭ ಮೃಗರಾಜ | ವಾದಿರಾಜರ ದಯದಿಸಾಧನಕೆ ಹೆದ್ದಾರಿ | ನೀ ದಯದಿ ತೋರೀಮೋದ ತೀರ್ಥರ ಸಮಯ | ಧ್ಹಾದಿಯಲಿ ನಡೆವಂತೆಹೇ ದಯಾಂಬುಧಿ ಚೆನ್ನ | ಆದರಿಸೋ ಘನ್ನ 1 ಚಂದ್ರ ಸಮ ಸಂಕಾಶ | ಸಂಧಿಸಲು ಸ್ವಪ್ನದಲಿಇಂದು ಭಾಗ ನಿವಾಸ | ಸಂದರ್ಶನಿತ್ತೂ ಕಂದಿದ್ದ ಕನ್ಯೆಗೇ | ನಂದ ದಾಯಕನಾಗಿಸುಂದರನೆ ನರರೂಪಿ | ಸಂಧಿಸಿದೆ ಭಾಗ್ಯ 2 ಚಂದ್ರ ವದನೆಯು ಲಕುಮಿ | ಮಂದಿರಕೆ ಬರುತಲ್ಲೆನಿಂದಿರಲು ಸೌಭಾಗ್ಯ | ಸಂಧಿಸದೆ ಇಹುದೇಇಂದಿರಾರಾಧವಪದ | ಮಂದಸ್ಮಿತಾನನನೆಮಂದಿಯೊಳಗೀ ಶಿಶುವ | ಛಂದಾಗಿ ಸಲಹೋ 3 ಹರಿಗುರು ಸದ್ಭಕ್ತಿ | ಪರತತ್ವ ಸುಜ್ಞಾನ ಕರುಣಿಸುತ್ತ ಸಂತೈಸು | ಸುರ ವರೇಣ್ಯಾ |ಮರುತಾಂತರಾತ್ಮ ನಿ | ನ್ಹೊರತು ಅನ್ಯರ ಕಾಣೆಪರಿ ಹರಿಸೊ ಪ್ರಾಚೀನ | ಕರ್ಮಾಂಧ ಕೂಪಾ 4 ಭಾವಜ್ಞ ನೀನಾಗಿ | ಭಾವದೊಳು ಮೈದೋರೊಗೋವಿದಾಂ ಪತಿಯೆ ಗುರು | ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು