ಒಟ್ಟು 57 ಕಡೆಗಳಲ್ಲಿ , 18 ದಾಸರು , 55 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾರಸಿಂಹನೆ ಧೀರ | ನಂಬಿದೆನೊ ಪೊರೆಯೊ ಶ್ರೀ ರಮಾಪತಿ ವೀರ | ಕರಿಗಿರಿ ವಿಹಾರ ಪ. ಸಾರಿದೆನೊ ನಿನ್ನ ಪದವ ಅನುದಿನ ಸೇರಿಸೆನ್ನನು ಭಕ್ತಕೂಟದಿ ಗಾರು ಮಾಡುವುದುಚಿತವೇ ಹರಿ ಭವ ಸಮುದ್ರದಿ ಅ.ಪ. ತಾಪ | ನಾನಾರಿಗುಸುರಲೊ ಒಡಲ ದುಃಖವ ಭೂಪ | ನೀನಲ್ಲದಿಲ್ಲವೊ ಭವ ಶ್ರೀಪ | ತೋರದಿರು ಕೋಪ ಘುಡು ಘುಡುಸಿ ನೀ ಎನ್ನ ಬೆದರಿಸೆ ತಡೆವೆನೇ ನಿನ್ನ ಕೋಪದಗ್ನಿಗೆ ಬಿಂಕ ಎನ್ನೊಳು ತಡೆಯೊ ಎನ್ನ ದುರುಳತನಗಳ ಕಡುಕರುಣಿ ನೀನಲ್ಲವೆ ಹರಿ ಒಡಲೊಳಗೆ ಪ್ರೇರಕನು ನೀನೆ ನಡಸಿದಂದದಿ ನಡೆವೆನಲ್ಲದೆ ಒಡೆಯ ಎನ್ನ ಸ್ವತಂತ್ರವೇನೊ? 1 ದುರುಳತನದಲಿ ದೈತ್ಯ | ಭೂವಲಯವೆಲ್ಲವ ಉರವಣಿಸಿ ದುಷ್ಕುತ್ಯ | ಎಸಗುತಿರೆ ದುಃಖದಿ ಸುರರು ಮೊರೆಯಿಡೆ ಸತ್ಯ | ದೃಢಮನದಿ ಭೃತ್ಯ ಕರಕರೆ ಪಿತ ಬಡಿಸುತಿರಲು ದೊರೆಯೆ ನೀ ಪೊರೆ ಎಂದು ಮೊರೆಯಿಡೆ ಸರ್ವವ್ಯಾಪಕನೆಂದು ತೋರಲು ತ್ವರಿತದಲಿ ಕಂಭದಲಿ ಬಂದು ಸರಸಿಜವು ಕಂಗೆಡುವೊ ಕಾಲದಿ ಧರಿಸಿ ತೊಡೆಯ ಮೇಲಸುರ ಕಾಯವ ಕರುಳ ಬಗೆದು ಮಾಲೆ ಧರಿಸಿ ಪೊರೆದೆಯೊ ಸ್ತುತಿ ಕೇಳಿ ಬಾಲನ 2 ಅಜಭವಾದಿಗಳೆಲ್ಲ | ಸ್ತುತಿಸಿದರೆ ಮಣಿಯದ ಭುಜಗಶಾಯಿ ಶ್ರೀ ನಲ್ಲ | ನಾ ನಿನ್ನ ಸ್ತುತಿಸಿ ಭಜಿಸಲಾಪೆನೆ ಕ್ಷುಲ್ಲ | ಮಾನವನ ಸೊಲ್ಲ ನಿಜಮನವ ನೀ ತಿಳಿದು ಸಲಹೊ ಕಮಲ ತೋರಿ ಕುಜನನಲ್ಲವೊ ಹಿರಿಯರೆನಗೆ ಪಥ ತೋರುತಿಹರೊ ರಜ ತಮವ ದೂರಟ್ಟಿ ಶುದ್ಧದಿ ಭಜಿಸುವಂದದಿ ಕೃಪೆಯ ಮಾಡಿ ಸುಜನರೆನ್ನನು ಪಾಲಿಸುತ್ತಿರೆ ನಿಜದಿ ಗೋಪಾಲಕೃಷ್ಣವಿಠ್ಠಲ3
--------------
ಅಂಬಾಬಾಯಿ
ನಿನ್ನ ನೋಡಲಿ ಬಂದೆ ಘನ್ನ ಮಹಿಮನೆ ಕೃಷ್ಣಾ ಮನ್ನಿಸಿ ಕೃಪೆಯ ಮಾಡೊ ಪ. ನಿನ್ನ ದರುಶನವಿತ್ತು ಎನ್ನ ಪಾಪವ ಕಳೆದು ನಿನ್ನ ಪಾದವನೆ ತೊರೋ ಸ್ವಾಮಿ ಅ.ಪ. ರಜತಪೀಠಾಪುರದಿ ರಮ್ಯ ಮಂದಿರದಲ್ಲಿ ರಾಜಿಸುತ್ತಿಹ ದೇವನೆ ಕುಜನಮರ್ಧನ ಎನ್ನ ರಜ ತಮೋಗುಣ ಕಳದು ನಿಜಭಕ್ತರೊಡನಾಡಿಸಿ ಸುಜನವಂದಿತ ನಿನ್ನ ಭಜನೆಯಿಂದಲಿ ನಲಿದು ನಿಜರೂಪ ನೋಡುವಂತೆ ವಿಜಯಸಾರಥಿಯೆ ನೀ ಈ ತೆರದಿ ಪೊರೆಯದಿರೆ ಭಜಿಸಲ್ಯಾತಕೆ ನಿನ್ನನು ದೇವ 1 ಶ್ರೀ ತಂದೆ ಮುದ್ದುಮೋಹನದಾಸರೆಂತೆಂಬ ನೀತ ಗುರುದ್ವಾರದಿಂದ ನಾ ತಿಳಿದು ಬಂದೆ ನಿನ್ನಯ ಮಹಿಮೆ ಜಾಲಗಳ ಪ್ರೀತನಾಗಿ ಕಾಯೋ ನೀತಿಯಲ್ಲವು ನಿನಗೆ ಮಹಿಮೆ ತೋರದೆ ಎನ್ನ ಘಾತಿಗೊಳಿಸುವರೆ ಹೀಗೆ ನಾಥ ನಿನ್ನಗಲಿ ನಾನರಘಳಿಗೆ ಇರಲಾರೆ ಸೋತು ಬಂದಿಹೆನೊ ಭವದಿ ಮನದಿ 2 ಸತ್ಯಸಂಕಲ್ಪ ನೀನಾದಡೆ ಎನಗಿನ್ನು ಅತ್ಯಧಿಕ ರೂಪ ತೋರೊ ಮೃತ್ಯು ಬೆನ್ಹತ್ತಿ ಆಯುಷ್ಯವ ಪರಿಹರಿಸುವುದು ಎತ್ತ ಪೋದರು ಬಿಡದೆಲೊ ಭೃತ್ಯತನವನೆ ವಹಿಸಿ ನಿನ್ನ ತೋರೆಂದೆನಲು ಮತ್ತೆ ಕರುಣವಿಲ್ಲವೆ ಚಿತ್ತಜಾಪಿತ ನಿನ್ನ ಒಲುಮೆ ಮಾರ್ಗವನರಿಯೆ ಚಿತ್ತಕ್ಕೆ ತಂದು ಕಾಯೊ ಕೃಷ್ಣ 3 ಆನಂದಮುನಿವರದ ಆನಂದ ಕಂದನೆ ಆನಂದನಿಲಯವಾಸ ಆನಂದರತ್ನಪ್ರಭಾದಿಂದ ರಾಜಿತನೆ ಆನಂದಮೂರ್ತಿ ಕೃಷ್ಣ ಆನಂದಗೋಕುಲದಿ ಆನಂದದಲಿ ಮೆರೆದು ಆನಂದ ಸುಜನಕಿತ್ತೆ ನೀನಿಂದು ಎನ್ನ ಮನಕೆ ಆನಂದವನೆ ಇತ್ತು ಆನಂದರೂಪ ತೋರೊ ಕೃಷ್ಣ 4 ಥರವಲ್ಲ ನಿನಗೆನ್ನ ಕರಕರೆಗೊಳಿಸುವುದು ಪೊರೆವರಿನ್ಯಾರು ಜಗದಿ ಮರೆತು ಗರ್ವದಿ ಎನ್ನ ಮರೆವರೆ ನೀನ್ಹೀಗೆ ಗುರುಗಳಂತರ್ಯಾಮಿಯೆ ಸರ್ವನಿಯಾಮಕ ಸರ್ವವ್ಯಾಪಕನೆಂಬ ಬಿರುದು ಪೊತ್ತಿಲ್ಲವೇನೊ ಕರುಣಾಳು ಗೋಪಾಲಕೃಷ್ಣವಿಠ್ಠಲ ನಿನ್ನ ಪರಿಪರಿಯ ರೂಪ ತೋರೊ ಕೃಷ್ಣ 5
--------------
ಅಂಬಾಬಾಯಿ
ನಿರವದ್ಯ ಪ ಸದ್ಗುಣಪೂರ್ಣ ನೀನೇನೊ ಮೂಢ ಅ.ಪ ಬ್ರಹ್ಮಜಿಜ್ಞಾಸದ ಕ್ರಮವ | ನಿರ- ಸಮ್ಯಕ್ ಶೋಧಿಸದೇ ಅಹಂ ಬ್ರಹ್ಮಾಸ್ಮಿ ಎಂಬುವ ಆಮ್ನಾಯ ವಾಕ್ಯಕೆ ಅರ್ಥವ ತಿಳಿಯದೆ 1 ಕಾಕುಮಾಡುತಲರ್ಥ ಪೇಳ್ವುದಧರ್ಮ ಏಕವಾವುದು ಇನ್ನು ಏಕವಾವುದು ಎಂದು ನೀಕಳವಳಿಸುತ ನಿಜತತ್ವವರಿಯದೆ 2 ಆತ್ಮನಾತ್ಮಗಳೆಂದರೇನೊ | ಪರ- ಮಾತ್ಮ ಜೀವಾತ್ಮರೊ ಜೀವದೇಹಗಳೊ ಸ್ವಾತ್ಮಾನುಸಂಧಾನದಿಂದಲಿ ನೋಡ- ಧ್ಯಾತ್ಮ ವಿದ್ಯಾಭ್ಯಾಸ ಮಾಡದೆ ಬಾಯೊಳು 3 ರವಿ ಗಣಪತಿ ಶಿವ ಶಕ್ತಿ | ಭೈ- ರವ ವಿಷ್ಣು ಎಂಬುವ ಷಣ್ಮತಯುಕ್ತಿ ಎವೆ ಮಾತ್ರ ಸ್ವಾತಂತ್ರ್ಯವಿಲ್ಲ ಕೇಳ್ ಸರ್ವಶ- ಬ್ದವುಯಾವನಲ್ಲಿ ಸಮನ್ವಯವರಿಯದೆ 4 ಜೀವ ಜೀವರಿಗೆಲ್ಲ ಭೇದ | ವಿದುಸ್ವ ಭಾವವಾಗಿರುವುದು ಯಾತಕೀವಾದ ಜೀವರೂಪದಿ ಸರ್ವಜೀವರೊಳಗಿದ್ದು ದೇವಸಕಲ ಕರ್ಮಗಳ ಮಾಡಿಸುವನು 5 ಕರ್ಮವೆಂಬುದು ಅವನಿಗೆ ಲೋಪವಿಲ್ಲ ನಿರ್ಮಲ ಸಚ್ಚಿದಾನಂದ ಬ್ರಹ್ಮ ಎಂದು ನೀನೆ ಪೇಳುವೆಯಲ್ಲ ನಿನಗೆ ನಿಜವಿಲ್ಲ 6 ಸೂರ್ಯ | ಚಂದ್ರ ಕಿನ್ನರ ಸಿದ್ಧ ಸಾಧ್ಯ ನರತಿರ್ಯಕ್ ಪಶುಪಕ್ಷಿ ಕೀಟಾದಿ ನಾಮಗಳು ಪರಮಾತ್ಮನಲಿ ಸಮನ್ವಯವರಿಯದೆ 7 ಮಾಯಾ ಪ್ರಪಂಚವಿದೆನ್ನುತ | ನಿ- ಮಾಯೆಯಧಿಷ್ಠಾನದೊಳನಂತ ಜೀವನಿ- ಕಾಯವು ಗುಣಗಳಿರುವ ಮರ್ಮವರಿಯದೆ 8 ಸಾರ ಭೇದವಬದ್ಧ ಅಭೇದ ನಿಶ್ಚಯವೆಂದು ವಾದಿಸುವುದಕೇನಾಧಾರ ನಿನಗುಂಟೊ 9 ಜೀವಬ್ರಹ್ಮೈಕ್ಯವೆ ಮುಕ್ತಿ | ವೇ- ದಾವಳಿಗಳ ಪರಮಾರ್ಥದ ಉಕ್ತಿ ಜೀವನಿಂದೇನಾಗುವುದೆಂಬುದರಿಯದೆ 10 ದ್ವಾಸುಪರ್ಣವೆಂಬುವುದಕೆ | ವಿಷ- ಯಾಸಕ್ತ ಜೀವ ಆತ್ಮನು ಸಾಕ್ಷಿಯದಕೆ ನೀಸರ್ವೋತ್ತಮನಾದರೆ ಇನ್ನು ಮಹದಾದಿ ಈ ಸೃಷ್ಟಿ ಸ್ಥಿತಿಲಯವೇತಕೆ ತಿಳಿ ಜೋಕೆ 11 ಅಂಧ ಪರಂಪರವಾದ | ಬಿಟ್ಟು ಚಂದಾಗಿ ಪರಿಶೋಧಿಸು ಭÉೀದಾಭÉೀದ ತಂದೆತಾಯಿಗು ಮಗನಿಗೂ ಎಷ್ಟು ಭÉೀದ ಆ- ಪರಿ ತಿಳಿದರೆ ನಿರ್ವಾದ 12 ಪೂರ್ವೋತ್ತರ ವಿರೋಧವಿಲ್ಲ | ದಂತೆ ಸರ್ವಶೃತಿಗಳರ್ಥ ತಿಳಿದು ನುಡಿಸೊಲ್ಲ ಗರ್ವವೇತಕೆ ನಿನಗಿದರೊಳೇನಿಲ್ಲ ನೀ ಸರ್ವಜ್ಞನೊ ಕಿಂಚಜ್ಞನೊ ನೋಡು ದೃಢಮಾಡು 13 ಯೋಗ ಒದಗಿದಾಗ ಒಂದೆ ಎಂಬುವರೆ ಈಗೇನು ಆಗೇನು ಇಲ್ಲೇನು ಉಂಟೆ ನಾ- ವಾಗಲು ಜೀವರಿಗೆ ಹರಿಕರ್ತನಾಗಿರೆ 14 ಕಾಲಕರ್ಮ ಸ್ವಭಾವ ಜೀವ | ಹರಿಯ ಆಲಸ್ಯ ಬಿಟ್ಟು ಅವನಿಗೆ ದಾಸನಾಗದೆ 15 ಆಲೋಚಿಸಿದರರ್ಥ ನಿಜವಾಗಿ ತಿಳಿಯದೆ 16 ಜ್ಞಾನವೆ ನಾನು ಕರ್ಮವೆ ಮಿಥ್ಯವೆಂದು ನೀನಾಡುವುದಕೇನು ನೆಲೆ ಮೂಲ ಯಾವುದು ಸ್ವಾನುಭವವೋ ಶಾಸ್ತ್ರವೊ ಮನಕೆ ತೋರಿದ್ದೊ 17 ಹೋಮ ಜಪವು ಸ್ನಾನ ದಾನ | ನಿತ್ಯ ಭೃತ್ಯ ನ್ಯಾಯವರಿಯದವನು ಶುದ್ಧ ತತ್ವಾರ್ಥಿ ಎನಿಸುವನೆ 18 ಕರ್ತನು ನೀನೆಂದು ಭೃತ್ಯನು ನಾನೆಂದು ತೀರ್ಥಪಾದನ ದಿನದಿನದಿ ಸಂಸ್ತುತಿಸದೆ 19 ಪಾದ ವನಜಕೊಪ್ಪಿಸಿ ಸಂಸಾರದ ಕರಕರೆಯ ಮನದಿ ಲೆಕ್ಕಿಸದೆ ಚಿಂತನಗೈದು ಸರ್ವತ್ರ ಘನಮಹಿಮನ ದಿವ್ಯಗುಣರಾಶಿ ಪೊಗಳದೆ 20 ಹೊರಗಣ್ಣ ಮುಚ್ಚಿ ಮೋದದಲಿ | ಒಳ- ಗಿರುವಾಧಾರಾದಿ ಚಕ್ರಗಳ ಸ್ಥಾನದಲಿ ಸರಸಿಜಭವ ಶಂಕರಾದಿ ಸುರರ ನೋಡಿ ತರತಮವಾಗಿ ಮುಂದಿನ ಪರಿಯ ತಿಳಿಯದೆ 21 ಮಂಗಳ ಮೂರ್ತಿಯ ನೋಡಿ ಕೊಂಡಾಡಿ ಅ- ನಂಗಗೆ ಸಿಲುಕದೆ ಅರ್ಥಿಯ ಪೊಂದದೆ 22 ಎಪ್ಪತ್ತೆರಡು ಸಹಸ್ರನಾಡಿ | ಗಳೊ- ಳೊಪ್ಪುವ ಭಗವದ್ರೂಪಗಳನು ನೋಡಿ ಅಪ್ಪ ನೀನೆಂದು ಭಕ್ತಿಯಲಿ ಕೊಂಡಾಡಿ ಪುನ- ರಾವರ್ತಿರಹಿತ ಶಾಶ್ವತ ಸುಖಿಯಾಗನೆ 23 ವಿಪರೀತ ಮತಿಪುಟ್ಟದಂತೆ | ಧ್ಯಾನ- ಗುಪಿತವಾಗಿರುತ ಜನರಿಗೆ ಹುಚ್ಚನಂತೆ ಅಪವರ್ಗಾಪೇಕ್ಷಯಿಂ ನಿಷ್ಕಾಮಿಯಾಗದೆ24 ಆಪಾದಮಸ್ತಕ ದೇಹ | ದಿಸು ರಾಪದಜನಕ ಶ್ರೀಗುರುರಾಮವಿಠಲ ವ್ಯಾಪಾರವೆಲ್ಲ ಮಾಡಿಸುವನೆಂದರಿತರೆ ಸಾಫಲ್ಯನಾಗಿ ಜೀವನು ಧನ್ಯನಾಗುವ 25
--------------
ಗುರುರಾಮವಿಠಲ
ನೀಲವರ್ಣ ಗೋಪಾಲನು ಎಲ್ಲೆ ಕಾಣಿರೇನೇ ವ್ರಜದ ಒಳಗೆ ಲೀಲಿ(ಲೆ ಇ?) ದೇನೆ ನಮ್ಮ ಸಂಗಡ ಹೇಳೇ ಗೋಪ್ಯಮ್ಮ 1 ಚಿಣ್ಣಿಕೋಲು ಚೆಂಡು ಬುಗುರಿ ವೇಣುಕೊಳಲಧ್ವನಿಯ ಆಲಿಸಿ ಓಣಿ ಓಣಿ ಹುಡುಕಲು ನಂದ- ಸೂನು ಎಲ್ಲಿಹನೆ 2 ಗೋಪಿ ಗೋಪಾಲ ಕೂಡಿ ಧಾಳಿ ಮಾಡ್ವುದು ದಾರಿಗೆ ತರವೆ ಗೂಳಿಮಾಡಿದಿ ಗೋಕುಲದೊಳು ನಿನ- ಗ್ಹೇಳುವುದಿನ್ನೇನೆ 3 ನವನೀತ ದಧಿ ಘೃತ ಸುರಿದೋಡಲು ನೀ ಸುಮ್ಮನೆ ಬಿಟ್ಟು ಯಾತಕೆ ಹಿಡಿತಾರದೆ ದೂರ್ಹೇಳುವಿ ಈ ಮಾತು ನಿರ್ಧಾರವೇನೆ 4 ಹೆತ್ತತಾಯಿ ನೀ ಬಳಲುವಿ ಎಂದು ಸಿಕ್ಕೊರಳಿಗೆ ಕಟ್ಟಿಸಿ ಕೊಂಡೆಳೆದು ಸಿಕ್ಕುವುದುಂಟೇನೆ 5 ವಜ್ರದ್ಹಾರ ಪದಕ ಹÉೂನ್ನರಳೆಲೆ ಗೆಜ್ಜೆ ಕಾಲಂದಿಗೆ ಝಳಿ ಝಳಿಸುತ ಮೂರ್ಜಗದೊಳು ಮುದ್ದಿರಲೀಕೂಸ್ಹೊರ- ಗ್ಹೆಜ್ಜೆನಿಡುವುದೇನೆ 6 ಶಿಶುವೇನೇ ಅಸುವ್ಹೀರಿ ಪೂತನಿ ಕೇಶಿ ಧೇನು ತೃಣಾವರ್ತ ಶಗಟಾಸುರ ಬಕನ ಕೊಂದವಗೆಂತು ನೀ ಅರ್ಭಕ- ನೆಂತಾಡುವಿಯೆ 7 ಹೆಡೆಯ ತುಳಿದ ಕಾಳಿಂಗನ ಮಡುವ ಕಲಕಿದ ಕಡುವಿಷಕಂಜದೆ ಹುಡುಗರ ಕಾರ್ಯವಿದೇನೆ ಬಿಡು ನಿನ್ನ ಬಡಿವಾರವು ಸಾಕೆ 8 ಕಾಡುಕಿಚ್ಚನು ನುಂಗಿದ ನಿನಸುತ ಬೇಡಿಯಜ್ಞದೊಳುಂಡನ್ನವನು ಸಾಲದೆ ಇಂದ್ರನ ಪುರವುಂಡ್ಹೊಟ್ಟೆ ಗಿ- ನ್ನೀಡೆಲ್ಲಿಹುದ್ಹೇಳೆ 9 ಶಕÀ್ರನ ಬಲಿ ಅನ್ನವ ದಕ್ಕಿಸಲವ ಸಿಟ್ಟಲಿ ಸಪ್ತದಿನ ಮಳೆಕರೆಯೆ ಎತ್ತಿ(ದ) ಗೋವರ್ಧನಗಿರಿ ನಮ್ಮದಾರಿ- ಚ್ಚೆಗೆ(?) ಸಲಹುವನೆ 10 ಕಾತ್ಯಾಯಿನಿ ವ್ರತಮಾಡೋ ಸ್ತ್ರೀಯರ ವಸ್ತ್ರಗಳನೆ ಕದ್ದು ಮರನೇರಿದ ಬತ್ತಲೆ ಚಪ್ಪಾಳಿಕ್ಕುತ ತಿರುಗಲಿನ್ನೆ- ಷ್ಟಂತ್ಹೇಳುವೋಣೆ 11 ಚೋರತನವೊಂದಲ್ಲದೆ ಕಲಿತಿಹ ಜಾರತನ ಕೇಳರಿಯೆ ಯಶೋದ ನೀರುತಿದ್ದುವ ಎಲ್ಲರ ಒಗತನಕಿವ ಪಾರುಗಾಂಬುವುದ್ಹ್ಯಾಗೆ 12 ಗಂಡರುಳ್ಳ ಗರತಿಯೇರೆನ್ನದೆ ಪುಂಡೆಬ್ಬಿಸಿ ಬೃಂದಾವನದೊಳಗೆ ಬಂದಮ್ಮನ ಹಿಂದಡಗಲು ನಿನಗೆ ಮುದ್ದಿನ್ಯಾರಿಗೆ ಹೇಳೆ 13 ಮಾಧವ ತಾ ಕೊಳಲೂದು- ತಿರೆ ನಾವು ಮೋಹಿತರಾಗಿ ಹೋದ ಸುದ್ದಿಗಳೊಂದ್ಹೇಳೆ ಲಜ್ಜೆ ಬಾ- ಹೋದೆ ನಮಗಿನ್ನು 14 ಬಳೆ ಬಾಪುರಿ ಕಂಕಣ ಚೂಡ್ಯ ಗಳನು ತೊಡೆಗÉೀರಿಸಿ ಕಾಲಂದಿಗೆ ಕರದಿ ಕಾಲುಂಗುರ ಕಿವಿಗಿಟ್ಟು ಬಾವುಲಿ ಪಾದದಿ ರಚಿಸಿದೆವೆ 15 ಹೊನ್ವಾಲೆ ಹೊಸಕೊಪ್ಪು ಮೂಗುತಿ ಚಿನ್ನದ ಒಡ್ಯಾಣದ ನಡುವಿಟ್ಟು ಕಣ್ಣಿಗೆ ಕಸ್ತೂರಿಬಟ್ಟು ಕುಂಕುಮ ಕಾಡಿಗೆ ನೊಸಲಿಗೆ ರಚಿಸಿ 16 ಬಿಟ್ಟಮಂದೆ ಕಟ್ಟದೆ ಕರುಗಳ ತೊಟ್ಟಿಲೊಳಗಿಟ್ಟು ಶಿಶುವಿಗೆ ಕಣ್ಣ ್ಹ(ಣ್ಣಿ ಹ?)ಚ್ಚಿ ನಾವೆಚ್ಚರಿಕಿಲ್ಲದೆ ಪೋದೆವೆ ಅಚ್ಚುತನಿದ್ದೆಡೆಗೆ 17 ಬಂದವರನೆ ಮನ್ನಿಸದೆ ನಿನಸುತ ಅ- ಲ್ಲಿಂದೊಬ್ಬಳ ಹೆಗಲೇರಿಸಿ ಪೋಗೆ ಹಿಂದಾಲ್ಪರಿದ್ವನವನಿತೆಯರ್ಕೂಡಿ ಬಂದೆವ್ಯಮುನೆ ದಡಕೆ18 ಇಬ್ಬರಿಬ್ಬರ ನಡುವೆ ನಿನಸುತ ಒಬ್ಬನಾಗಿ ಜಲದ ಒಳಗೆ ಅಬ್ಬರದಿಂದಾಡಲು ಜಲಕ್ರೀಡೆ ಕ- ಣ್ಗ ್ಹಬ್ಬವಾಗಿರೆ ಜನಕÉ 19 ಗೋಪಿ ಗೀತವಿದೆಂದು ನಿನಸುತ ಖ್ಯಾತಿ ಮಾಡಿದ ಜಗದ ಒಳಗೆ ಯಾತಕೆ ಕೂಸೆಂದಾಡುವೆ ತಿಳಿ ನಿನ್ನ ಪ್ರೀತಿ ಮೋಹಗಳೆಂದು 20 ಅಂಕದಲ್ಯಾರೋಪಿತನಾಗೆ ಶÀಂಕಿಲ್ಲದೆ ಹಾರ ಭಾರವನೆ ತಾಳಿದೆ ಬಿಂಕವ ಬಿಡು ಮಗನೆಂದಾಡುವುದು ಈ ಮಂಕು ಬುದ್ಧಿಗಳಿನ್ನು 21 ಮಗುವೇನೆ ಹೃದಯದೊಳ್ಹದಿನಾಲ್ಕು ಜಗವ ಕಂಡು ನೀ ತೆಗೆಯದೆ ನೇತ್ರ ಜಗಜಗಿಸುವ ಚಂದ್ರಮನಂಗೈಯಲಿ ಈ ಬಗೆ ನಿನಗರಿಕಿಲ್ಲೆ 22 ಗೋಪಾಂಗನೆಯರಾಡುವ ಮಾತು ಕೋಪದಿ ಕೇಳುತಲೆಶೋದೆ ಗೋಪಾಲಕೃಷ್ಣ ನಿನ್ನೆಲ್ಲಿ ಕಳುಹಲೆಂದಳು 23 ದುಷ್ಟ ಕಾಲನೇಮಿ ಕಂಸನು ನಿನ್ನ ಕರೆಯಕಳುಹಲು ಕರಕರೆಯಾಕೋ ನಾರಾಯಣ ನಿನ್ನಟ್ಟುವೆ(ವು) ಮಧುರೆಗೆ ನಾವೆಲ್ಲರು ಕೂಡಿ 24 ದುಷ್ಟತನವ ಬಿಡೋ ಭೀಮೇಶ- <ಈಔಓಖಿ s
--------------
ಹರಪನಹಳ್ಳಿಭೀಮವ್ವ
ಪರಮ ಕರುಣಾಕರನೆ ಕರಪಿಡಿದು ಸಲಹೆನ್ನ ವರ ತಂದೆ ಮುದ್ದುಮೋಹನರೊಡೆಯನೆ ಪ. ಸಿರಿಯರಸ ಶ್ರೀ ಶ್ರೀನಿವಾಸ ಶ್ರೀ ಕೃಷ್ಣಹರೆ ಪರಮದಯಾಳು ದೇವ | ದೇವಅ.ಪ. ನಿರುತ ನೀ ಸ್ವಪ್ನದಲ್ಲಿ ಪರಿಪರಿಯ ರೂಪದಲಿ ತ್ವರಿತದಲಿ ತೋರಿ ಕಾಯ್ದೆ ಪರಮಪಾವನಮೂರ್ತಿ ಗುರು ಅಂತರ್ಯಾಮಿಯೆ ಕರಕರೆಯ ಬಿಡಿಸಿ ಸಲಹೊ | ದೇವ 1 ವಿಶ್ವತೈಜಸ ಪ್ರಾಜ್ಞ ತುರಿಯ ರೂಪಗಳಿಂದ ನೀ ಸ್ವಪ್ನಗಳನೆ ತೋರ್ವೆ ವಿಶ್ವೇಶ ಎನ್ನೊಳಗೆ ಸಾಕ್ಷಿಯಾಗಿರುತ್ತಿರ್ದು ವಿಶ್ವಮಯ ಚೇಷ್ಟೆ ಮಾಳ್ಪೆ | ದೇವ 2 ಈ ಶರೀರದೊಳಗೆ ಶ್ರೀ ತೈಜಸನೆ ನೀನು ವಾಸವಾಗಿರುತಲಿರ್ದು ನಾಶರಹಿತನೆ ಮೋಹಪಾಶದಲಿ ಸಿಲುಕಿಸಿ ಮೋಸಪಡಿಸುವರೆ ಎನ್ನ | ದೇವ 3 ಬಿಡಿಸೊ ದುರ್ವಿಷಯಗಳ ತಡವಾಕೊ ಹರಿ ಇನ್ನು ಒಡಲಿಗೊಡೆಯನೆ ಶ್ರೀಹರಿ ಕೊಡು ನಿನ್ನ ಪದಸೇವೆ ನುಡಿಸು ನಿನ್ನಯ ನಾಮ ಪಡಿಸು ಸುಖ ಅನವರತದಿ | ದೇವ 4 ಸ್ವಪ್ನ ವ್ಯಾಪಾರದಲಿ ಅಪ್ರತಿಮಮಹಿಮೆಗಳ ಕ್ಷಿಪ್ರದಿಂದಲಿ ತೋರಿದೆ ಸಪ್ತಫಣಿಮಂಡಿತನೆ ಒಪ್ಪದಿಂದಲಿ ಎನ್ನ ತಪ್ಪನೆಣಿಸದಲೆ ಕಾಯೋ | ದೇವ 5 ನೀತ ಗುರುಗಳ ದ್ವಾರ ಪ್ರೀತನಾದ ಹರಿಯೆ ಪಾತಕವÀ ಕಳದೆ ಸ್ವಾಮಿ ವಾತಜನಕನೆÀ ನಿನ್ನ ಖ್ಯಾತಿ ಪೊಗಳಲು ಅಳವೆ ಪ್ರೀತನಾಗಿದ್ದು ಸಲಹೊ | ದೇವ 6 ಶ್ರೀಪತಿಯೆ ಪರಮಪಾವನಮೂರ್ತಿ ವಿಖ್ಯಾತ ನೀ ಪ್ರೀತಿಲೀಲೆ ತೋರ್ದೆ ಕಾಪಾಡಿದೆಯೊ ಎನ್ನ ಶ್ರೀ ಗುರುಗಳೊಳಗಿರ್ದು ಗೋಪಾಲಕೃಷ್ಣವಿಠ್ಠಲ ದೇವ 7
--------------
ಅಂಬಾಬಾಯಿ
ಪರಮ ಪಾವನಕಾಯ ಗುರುರಾಯ ಜೀಯ ವರ ಭಾಗವತರ ಪ್ರಿಯ ಸುರರ ಸಹಾಯ ಪ. ಶ್ರೀ ತಂದೆ ಮುದ್ದುಮೋಹನ ದಾಸರೆಂದೆನಿಸಿ ವಾತ ಜನಕನ ಒಲಿಸಿ ವೈರಾಗ್ಯ ಧರಿಸಿ ಖ್ಯಾತಿಯನು ಪಡೆದ ಅನಾಥ ರಕ್ಷಕ ಸ್ವಾಮಿ ನೀತ ಗುರು ನಿಮ್ಮ ಪದಕೆ ನಾ ತುತಿಸಿ ನಮಿಪೆ 1 ಘನ ಅಂಶದಲಿ ನೆಲಸಿ ಅನವರತ ಸಲಹುವೊ ಮನವ ಮಾಡಿರಬಲೆ ಅಂಜಿ ಬೆದರೆ ಘನ ಜ್ಯೋತಿ ಸ್ವೀಕರಿಸಿ ತನುವಿಗಭಯ ತೋರಿ ಮನದಿ ಪದವನೆ ನಂಬೆ ರಕ್ಷಿಸಿದ ಗುರುವೆ 2 ಅಪಮೃತ್ಯು ಬಂದು ಬಹು ಅಪರಿಮಿತ ಭಯಪಡಿಸಿ ಸುಪಥ ಕಾಣದೆ ನಿಮ್ಮ ಪದವ ನಂಬಿರಲು ಸ್ವಪ್ನದಲಿ ನಿಜರೂಪ ಗುಪ್ತದಿಂದಲಿ ತೋರಿ ಆಪತ್ತು ಪರಿಹರಿಪೆನೆಂದಭಯವಿತ್ತ 3 ಪರಿಪರಿ ಅಪಮೃತ್ಯು ಪರಿಹಾರವನೆಗೈದು ಪರಮ ಹರುಷದಿ ಕಾಯ್ದು ಆಯುವನೆ ಇತ್ತು ಕರಕರೆಯ ಬಿಡಿಸಿ ಕಾಯ್ದಂಥ ಘನ ಚರಿತೆಯನು ಅರಿತು ವರ್ಣಿಸಲರಿಯೆ ಪರಮ ಪ್ರಿಯ ದೊರೆಯೆ 4 ಆಪನ್ನ ರಕ್ಷಕರೆ ಶ್ರೀ ಪತಿಯ ತೋರುವ ಘನಶಕ್ತರೆ ಕಾಪಾಡುವೋ ಕರ್ತರೆಂದು ನಾ ನಂಬಿರುವೆ ಗೋಪಾಲಕೃಷ್ಣವಿಠ್ಠಲನ ನಿಜ ಪ್ರಿಯರೆ 5
--------------
ಅಂಬಾಬಾಯಿ
ಪರಿ ನಿರ್ದಯಗೈದಿರಿ ತಂದೆ ಶ್ರೀ ಗುರುವೆ ಪೇಳಿ ಪ. ನೊಂದೆನು ಈ ದಿನ ನಿಮ್ಮ ವಾರ್ತೆ ತಿಳಿಯದೆ ಕುಂದೇನು ತೊರಿತೋ ಎನ್ನಿಂದ ಕ್ಷಮಿಸಿರಿ ಅ.ಪ. ಪ್ರತಿದಿನದಲಿ ನಿಮ್ಮ ಹಿತವಾರ್ತೆ ಕೇಳುತ ಅತಿಶಯಾನಂದವ ಪಡುತಲಿದ್ದೆ ಇಂದು ಅತಿಶಯದ ನಿಮ್ಮ ಹಿತವಾರ್ತೆ ತಿಳಿಯದೆ ಮತಿ ಹೀನಳಾಗಿಹೆ 1 ಉಲ್ಲಾಸಗೊಳಿಸುವ ಪುಲ್ಲನಾಭವ ಮಹಿಮೆ ಸೊಲ್ಲು ಸೊಲ್ಲಿಗೆ ನುಡಿಸಿ ಭವದಾಟಿಸಿ ಒಲ್ಲೆನು ನಾನೊಂದು ಇಹಪರ ಸೌಖ್ಯವು ನಿಲ್ಲಲಿ ಎನ್ನಮನ ನಿಮ್ಮ ಪಾದದಿ ನಿರುತ 2 ತನುಮನ ಒಪ್ಪಿಸಿ ಮನದಿ ಧ್ಯಾನಿಸುವುದು ಘನಮನಕಿನ್ನೀಗ ಬರಲಿಲ್ಲವೆ ವನಜಜಾಡಂಡದೊಳಿನ್ನು ಎನ್ನ ರಕ್ಷಿಸುವರ ಮನದಿ ನಾ ಕಾಣೆನು ವನಜಾಕ್ಷ ಬಲ್ಲನು 3 ಮೊರೆಯ ಕೇಳುತಲೀಗ ತ್ವರಿತದಿಂ ಬನ್ನಿರಿ ಸರಸಿಜಾಕ್ಷನ ತೋರಿ ಹರುಷವಿತ್ತು ದುರಿತವ ತೊಲಗಿಸಿ ಕರಕರಗೊಳಿಸದೆ ಪರಮಪ್ರಿಯರು ಎಂಬೊ ಬಿರುದುಳ್ಳ ಶ್ರೀ ಗುರುವೆ 4 ತಡಮಾಡದೆ ಭವಕಡಲ ದಾಟಿಸಿ ಈಗ ಮೃಡಸಖನನು ತೋರಿ ದೃಢ ಮನದಿ ಒಡೆಯ ಶ್ರೀ ಗೋಪಾಲಕೃಷ್ಣವಿಠ್ಠಲ ಜಗಕೆ ಬಿಡದೆ ಪೊರೆಯುವನೆಂಬೊ ದೃಢವೆನಗೆ ಕರುಣಿಸಿ 5
--------------
ಅಂಬಾಬಾಯಿ
ಪಾಲಿಸೀ ಪಸುಳೆಯನು ಪರಮ ಪುರುಷ ಪ. ಬಾಲೆ ನಿನ್ನವಳೆಂದು ಶ್ರೀ ಕರಿಗಿರೀಶ ಅ.ಪ. ನರಹರಿಯೆ ಲಕ್ಷೀಶ ತರಳೆ ನಿನ್ನವಳಿನ್ನು ತ್ವರಿತದಲಿ ಕಾಪಾಡು ತಡಮಾಡದೆ ಕರಕರೆಯ ರೋಗ ಬಾಧೆಯ ಬಿಡಿಸಿ ಹರಿ ನಿನ್ನ ಕರುಣಾಮೃತವಗರೆದು ಕಡುಕೃಪೆಯೊಳಿನ್ನು 1 ಫಣಿರಾಜಶಯನ ಪರ್ಯಂಕ ದೇವರದೇವ ಬಿನಗು ದೇವರ ಗಂಡ ಎಣೆಯುಂಟೆ ನಿನಗೆ ಮಣಿಯದಾಗ್ರಹದೇವಗಣ ಉಂಟೆ ನಿನಗಿನ್ನು ಕ್ಷಣ ಬಿಡದೆ ಸರ್ವಬಾಧೆಯ ಬಿಡಿಸಿ ಸತತ 2 ಪ್ರಾಣದೇವನೆ ಸರ್ವ ದೇವತೆಗಳಧಿನಾಥ ಪ್ರಾಣದೇವನು ನಿನ್ನ ಪ್ರಾಣ ಪದಕ ಪ್ರಾಣದೇವಗೆ ಪೇಳಿ ಪ್ರಾಣ ಭಯವನೆ ಬಿಡಿಸಿ ಪ್ರಾಣಸೂತ್ರವ ನಡಿಸಿ ತ್ರಾಣಗೆಡದಂತೆ 3 ನಿನ್ನ ದಾಸರ ದಾಸಳಿವಳು ಶ್ರೀಹರಿ ಕೇಳು ಎನ್ನ ಬಿನ್ನಪವ ನೀ ಬರಿದೆನಿಸದೆ ಚನ್ನಾಗಿ ಆಯುರಾರೋಗ್ಯ ಸಂಪದವಿತ್ತು ಮನ್ನಿಸಿ ಕಾಪಾಡು ಮಂಗಳಾತ್ಮಕನೆ 4 ಗುರುಕರುಣ ವರಬಲದಿ ಪುಟ್ಟಿದಾ ಶಿಶು ಇವಳು ಪರಮ ಮಂಗಳೆ ಎನಿಸಿ ಪಾಲಿಸೈ ಜಗದಿ ನಿರುತದಲಿ ನಿನ್ನ ಪದಭಕ್ತಿ ಜ್ಞಾನವ ಕೊಟ್ಟು ಹರಸಿ ಪೊರೆ ಗೋಪಾಲಕೃಷ್ಣವಿಠ್ಠಲನೆ 5
--------------
ಅಂಬಾಬಾಯಿ
ಬಂದನಿಂದು ರಾಘವೇಂದ್ರನು ಆನಂದದಿಂದಲಿ ಬಂದನಿಂದು ರಾಘವೇಂದ್ರನು ಪ. ಕಂದರಾದ ಭಕ್ತ ಜನರ ಚಂದದಿಂದ ಪೊರೆವೆನೆಂದು ಅ.ಪ. ಪರಿಪರಿಯ ವೈಭವವನು ಪಡಲಿಬೇಕೆಂದು ಕರದು ತರಲು ಕರಕರಿಯ ಕರದು ಮನವ ನೋಡಬೇಕೆಂದು 1 ಕರುಣಾನಿಧಿ ಎಂದೆನಿಸಿ ನಿನಗೆ ಥರವೆ ಇದು ಎಂದು ಪರಿಪರಿಯಲಿ ಸ್ತುತಿಸುತಿರಲು ಸ್ಥಿರವಾರದಿ ಹರುಷ ತೋರಲು 2 ಬಂದ ಬುಧರಿಂದ ಪೂಜೆನಂದಗೈಸ ಬೇ ಕೆಂದು ತುಂಗಜಲವ ತರುತಿರÉ ಬಂದ ಮಾಯದಿಂದ ಹರಿಯು 3 ದ್ವಿಜರ ಹಸ್ತಜಲವ ಶ್ರೀನಿವಾಸ ಬೇಡಲು ದ್ವಿಜರು ಕೊಡಲು ಗುರುಗಳನ್ನು ಪೂಜೆಗೈದೆನೆಂದು ನುಡಿದ 4 ಈ ತೆರದ ಕೌತುಕವ ಶ್ರೀನಾಥ ತೋರುತ ಆ ತಕ್ಷಣದಿ ಮಾಯವಾಗೆ ರೀತಿಯಿಂದ ಪೂಜೆಗೈಯ್ಯಲು 5 ಮಂತ್ರಾಲಯದ ಮಂದಿರನಿಗೆ ಪಂಚಾ ಮೃತದಿಂದ ಸಂತೋಷದಲಿ ಪೂಜೆ ಗೈದು ಪಂಚಮೃಷ್ಟಾನ್ನ ಬಡಿಸೆ6 ಶ್ರೀನಿವಾಸ ಸಹಿತ ಶ್ರೀ ರಾಘವೇಂದ್ರರು ಸಾನುರಾಗದಿ ಸೇವೆಕೊಂಡು ನಾನಾ ವಿಧದ ಹರುಷಪಡಿಸೆ 7 ಎನ್ನ ಮನಕೆ ಹರುಷಕೊಡಲು ನಿನ್ನ ಭಜಿಸುವೆ ನಿನ್ನ ಮನಕೆ ಬಾರದಿರ್ದೊಡೆ ಮುನ್ನೆ ಪೋಗಿ ಬಾರೆಂದೆನಲು 8 ತುಂಗಮಹಿಮ ರಾಘವೇಂದ್ರರ ಮಂಗಳದ ಪುತ್ರ ಕಂಗಳೀಗೆ ತೋರಿ ಅಂತ ರಂಗದಲ್ಲಿ ಹರುಷವಿತ್ತು 9 ಶ್ರೀ ಗುರುಗಳ ಕರುಣದಿಂದ ರಾಘವೇಂದ್ರನು ಭಾಗವತರ ಪೊರೆವೆನೆಂದು ಯೋಗಿ ಶೇಷಾಂಶ ಸಹಿತ 10 ಇಂತು ರಾಘವೇಂದ್ರ ಗುರು ತಾ ಶಾಂತನಾಗುತ ಶಾಂತ ಗೋಪಾಲಕೃಷ್ಣವಿಠ್ಠಲನ ಅಂತರಂಗದಿ ತೋರ್ವೆನೆಂದು 11
--------------
ಅಂಬಾಬಾಯಿ
ಬಂದೆನ್ನ ಮನಮಂದಿರದಲಿ ನಿಲ್ಲೊ | ಹೇ ಶ್ರೀನಿವಾಸ ಬಂದೆನ್ನ ಮನಮಂದಿರದಲಿ ನಿಲ್ಲೊ ಪ. ಇಂದಿರೇಶ ವೈಕುಂಠದಿಂದ ನೀ ಬಂದು ಈಗ ಎನ್ನ ಹೃದಯ ಕಮಲದಿ ಅ.ಪ. ಜಗದಂತರಾತ್ಮ ನಿರ್ಮಲಾತ್ಮ | ನಿರ್ಗತ ದುರಿತಾತ್ಮ ನಿಗಮಾದಿಗಳೊಂದ್ಯ ನೀ ನಿತ್ಯಾತ್ಮ | ಜೀವಂತರಾತ್ಮ ಸುಗುಣವಂತ ನಿನ್ನ ಬಗೆ ಬಗೆ ಮಹಿಮೆಯ ಪೊಗಳಬಲ್ಲೆನೆ ನಾ ಖಗವಾಹನನೆ 1 ಅರಿಯೇನೋ ಅನ್ಯರ ಹರಿ ಸರ್ವೇಶ | ಹೃತ್ಕಮಲದಿ ವಾಸ ಪರಿಹಾರಗೈಸೊ ಈ ಭವಕ್ಲೇಶ | ನಂಬಿದೆ ಸರ್ವೇಶ ಅರಘಳಿಗೆ ನಿನ್ನಗಲಿರಲಾರೆನೊ ಸಿರಿಸಹಿತದಿ ನಿನ್ನರಮನೆಯಿಂದಲಿ 2 ಇಂದು | ನೀ ರಕ್ಷಕನೆಂದು ಕರಕರೆಗೊಳಿಪುದು ಧರ್ಮವೆ ನಿಂದು | ನೀ ಕಾಯಲಿಬೇಕಿಂದು ಸರಿಯಲ್ಲವು ಈ ತೆರದಲಿ ತೊರೆವುದು ಶರಣ ರಕ್ಷಕನೆಂಬೊ ಬಿರುದು ಪೊತ್ತಿಲ್ಲವೆ 3 ಎಂತೆಂತು ಸಹಿಸಲಿ ಈ ಭವಕ್ಲೇಶ | ಜೀವಾಂತರವಾಸ ಕಂತುಪಿತ ಎಣಿಪರೆÀ ಎನ್ನಯ ದೋಷ | ಸರಿಯಲ್ಲ ಸುರೇಶ ಇಂತು ನಿನಗೆ ಒಪ್ಪಿಸಿದರೊ ಗುರುಗಳು ಚಿಂತಿತಾರ್ಥ ನಿನಗೆನ್ನ ತರ ತಿಳಿಯದೆ 4 ಬೆಟ್ಟದ ಒಡೆಯ ಬೇಗನೆ ಬಾರೊ | ಹೃತ್ಕಮಲದಿ ತೋರೊ ಶ್ರೇಷ್ಠ ಶ್ರೀ ಗುರುಗಳ ಕರುಣವ ಬೀರೊ | ಸಲಹುವರಿನ್ಯಾರೊ ಮುಟ್ಟಿ ಭಜಿಪೆ ನಿನ್ನ ಶ್ರೇಷ್ಠ ಪದಂಗಳ ಸೃಷ್ಟೀಶ ಗೋಪಾಲಕೃಷ್ಣವಿಠ್ಠಲನೆ 5
--------------
ಅಂಬಾಬಾಯಿ
ಮಡದಿ ಭಾಗ್ಯ ಎಂಬುವಿಯಾಕೊ ರಂಗಯ್ಯನಿನ್ನ ಬಡಿವಾರವ ಹೇಳಿಕೊಂಬೆ ಸಾಕೊ ಕೃಷ್ಣಯ್ಯ ಪ. ಬಿಡು ಬಿಡು ಸಣ್ಣ ಮಾರಿಯನ್ನು ನೀ ಮಾಡಬ್ಯಾಡ ಬಡಿವಾರವ ಹೇಳಿಕೊಂಬುವುದೇನೊಕಡುಭಾಗ್ಯ ಪುರುಷನಾಗೊ ನೀನು ಎತ್ತಿಕೊಂಡ್ಹೋಗಿ ಮಡುವು ಸೇರಿಕೊಂಡಿ ಮತ್ತೇನೊ1 ದೊರೆತನ ಹೇಳಿಕೊಂಬೆ ಸಾಕೊ ರಂಗಯ್ಯನಿನ್ನ ಕರಕರ ಹಲ್ಲು ತಿಂಬೊ ಸಿಟ್ಟು ಕೃಷ್ಣಯ್ಯಬಿರುಗಣ್ಣು ಬಿಡವೋದ್ಯಾಕಿಷ್ಟು ರಂಗಯ್ಯನಿನ್ನ ಉರಿಮಾರಿಗೆ ಅಂಜೋರೆಲ್ಲೊ ಅಷ್ಟು 2 ಧರೆ ಮ್ಯಾಲೆ ರಾಜ್ಯ ಹ್ಯಾಂಗ ರಂಗಯ್ಯನಿನ್ನ ತಗಿ ತಗಿ ಬಲುಲೀಲಾ ಕೈಯ್ಯ ಕೃಷ್ಣಯ್ಯಸುಗುಣನೆಂತೆಂಬೊ ಮತಿಯಾದುದಕ್ಕೆಜನರು ನಗದೆ ಸೈ ಸೈ ಎಂದಾರು ಬರಿಯ ಕೃಷ್ಣಯ್ಯ3 ಧೀರ ಧನವಂತನಲ್ಲೊ ಸಾಕೊ ರಂಗಯ್ಯಆದರೆ ವನದಿನಾರು ವಸ್ತ್ರವನುಟ್ಟುಕೊಂಡಿ ಯಾಕೊ ಕೃಷ್ಣಯ್ಯಚೋರನಂತಾಡಿಕೊಂಬಿ ಸಾಕೊ ರಂಗಯ್ಯಇದ ಕೇಳಿದ ವೀರರೆಂಬವರು ನಗತಾರೊ ಕೃಷ್ಣಯ್ಯ 4 ವಸ್ತ್ರವಿಲ್ಲೆಂಬೊ ಎಚ್ಚರಿಕಿಲ್ಲೊ ರಂಗಯ್ಯತೇಜಿ ಹತ್ತೇನು ಎಂದು ಬರುವಿಯಲ್ಲೊ ಕೃಷ್ಣಯ್ಯಕತ್ತಿ ಕೈ ಶೂರನೆಂಬೊದೆಲ್ಲೊ ರಂಗಯ್ಯರಾಮೇಶ ನಿನ್ನ ಹತ್ತಿಲ್ಲಿದ್ದರೆಲ್ಲ ನಗುವರೊ ಕೃಷ್ಣಯ್ಯ5
--------------
ಗಲಗಲಿಅವ್ವನವರು
ಮಾಯವಾಯಿತು ರತುನ | ಮರೆ ಮೋಸಮಾಡಿ ಪ. ಮಾಯವಾಯಿತು ಎನ್ನ ಮೋಹದ ಮಮ ಗುರುವೆಂತೆಂಬ ರತುನ ನೋಯಲೇಕಿದಕಿನ್ನು ನೃಹರಿ ಉ- ಪಾಯದಿಂದಪಹರಿಸಿವೈದನು ಅ.ಪ. ಕರಗತವಾಗಿ ಇತ್ತು | ಪ್ರಕಾಶವು ಧರಣಿಯಲ್ಲಿ ವ್ಯಾಪಿಸಿತ್ತು ಪರಿಪರಿ ಸಜ್ಜನಕೆ ತತ್ವದ ವರ ಸುಧೆಯನುಣಿಸುತ್ತಲಿತ್ತು ಕರಕರದು ಅಂಕಿತವ ಕೊಡುತಲಿ ಪರಮ ಸಾಧನಗೈಸುತಿತ್ತು 1 ಸುಂದರವಾಗಿ ಇತ್ತು | ದುರ್ಜನರಿಗದ ರಂದ ತೋರದಲೆ ಇತ್ತು ಒಂದೊಂದೂ ಗುಣ ವರ್ಣಿಸಲು ಈ ಮಂದ ಮತಿಗಳವಲ್ಲವಿನ್ನು ತಂದೆ ಮುದ್ದುಮೋಹನಾರೆಂ- ತೆಂದು ಜಗದಲಿ ಮೆರೆಯುತಿತ್ತು 2 ಮಾಸಿ ಪೋದಂಥ ಹರಿ | ದಾಸಕೂಟ ತಾ ಸ್ಥಾಪಿಸುತ ಈ ಪರಿ ವಾಸುದೇವನ ಗುಣಮಣಿಗಳ ರಾಶಿಭೂತದಿ ಅರುಹಿ ಶಿಷ್ಯರ ಸಾಸಿರಾನೂರ್ಮೇಲೆ ಹೆಚ್ಚಿಸಿ ತಾ ಸೂರೆಗೊಂಡಾನಂದವನು3 ಗತಶಾಲಿ ಸಾಹಸ್ರವು | ಮೇಲೆಂಟು ಶತವು ಮತ್ತರವತ್ತೆರಸುವು ವತ್ಸವಿಕ್ರಮ ಪ್ರಥಮ ಮಾಸವು ಪ್ರಥಮ ಪಕ್ಷದ ರಾಮನವಮಿ ಹಿತದಿ ಮಂಗಳವಾರ ಸೂರ್ಯನ ಗತಿಯು ನೆತ್ತಿಯೊಳೋರೆ 4 ಎಷ್ಟು ಪೊಗಳಲಳವು | ಆನಂದ ರತ್ನದ ಗುಟ್ಟರಿಯದು ಜಗವು ಶ್ರೇಷ್ಠ ಗೋಪಾಲಕೃಷ್ಣವಿಠಲನು ಕೊಟ್ಟು ಕಳುಹಿಸಿ ಧರೆಯೊಳ್ಮೆರಸಿ ಥಟ್ಟನೇ ತಾ ಕರೆಸಿಕೊಂಡು ಶ್ರೇಷ್ಠ ಶಯ್ಯೆಯ ಮಾಡಿಕೊಂಡನು 5
--------------
ಅಂಬಾಬಾಯಿ
ಮುದ್ದು ಮುಖದ ಲಕುಮಿ ಎನಗೆ ಶುದ್ಧ ಜ್ಞಾನವÀ ನೀಡೆ ಪ. ಬಿದ್ದಿಹೆ ನಿನ್ನ ಪದದಲಿ ನಿರುತ ಮದ್ಬಿಂಬನ ತೋರೆ ಅ.ಪ. ಹರಿಸರ್ವೋತ್ತಮ ಸುರರಕ್ಷಕನೆಂಬ ಖರೆಯ ಜ್ಞಾನವ ನೀಡೆ ಕರಕರೆಗೊಳಿಸದೆ ದುರ್ವಿಷಯದಲೆನ್ನ ಹರಿಯ ಧ್ಯಾನವನೀಡೆ 1 ನಗೆಮೊಗ ಚಲುವೆ ಖಗವಾಹನ ಪ್ರಿಯೆ ಜಗದೊಡೆಯನ ತೋರೆ ನಿತ್ಯ ಬಗೆ ಬಗೆ ಲೀಲೆಯ ಸುಗುಣವಂತೆ ತಿಳಿಸೆ 2 ಸೃಷ್ಟಿಕರ್ತಗೆ ಪಟ್ಟದ ನಾರಿಯೆ ದೃಷ್ಟ ಇಂದ್ರಿಯವಳಿಯೆ ಮುಟ್ಟಿ ಭಜಿಪೆ ನಿನ್ನ ಶ್ರೇಷ್ಠ ಶ್ರೀ ಗೋಪಾಲಕೃಷ್ಣವಿಠ್ಠಲ ಸತಿಯೆ 3
--------------
ಅಂಬಾಬಾಯಿ
ಯಾರಿಗೆ ದೂರುವೆನು ವೆಂಕಟರಾಯ ಚಾರದ ಮಹಿಮೆಯನು ಪ ಈರಾರು ಸ್ಥಳವಲ್ಲಿ ಮೂರಾರು ಸೇರಿಸಿ ಹೋರಾಟವನಿತ್ತು ಮಾರಿದೆಯೆನ್ನನು ಅ.ಪ ತೇಜವುಳ್ಳವನೊಬ್ಬನು ಐದನೆಯಲ್ಲಿ ಮೋಜಾಗಿ ಒಳಹೊಕ್ಕನು ಹೂಜಿ ತುಂಬಿದ್ದುದ ಸೋಜಿಗದೊಳು ಕದ್ದು ಪಾಜಿ ಮಾಡಿದನೆನ್ನ ಮೂಜಗದೊಡೆಯ 1 ಸೀತವಾದವನೊಬ್ಬನು ಅಷ್ಟಮದದಲ್ಲಿ ಕಾತುರದೊಳು ಬಂದನು ಘಾತಕತನ ಮಾಡಿ ಭೀತಿಗಳನು ತೋರಿ ದಾತ 2 ಮೂರನೆಯವನೊಬ್ಬನು ಏಳನೆಯಲ್ಲಿ ಸೇರಿಯೆ ಕಳುತಿದ್ದನು ಏರಿ ಬಂದುದನೆಲ್ಲ ಆರಿಸಿ ಮಾರಿಸಿ ಸೂರೆಗೊಂಡನು ಎನ್ನ ವಾರಿಜನಾಭ 3 ಅತ್ರಿಯ ಮೊಮ್ಮಗನು ನಾಲ್ಕನೆಯಲ್ಲಿ ಶತ್ರುವಾಗಿಯೆ ನಿಂತನು ಗೋತ್ರದಿ ಕಲಹವ ಬೆಳಸಿಯೆಯಿದ್ದಂಥ ಪಾತ್ರವÀ ತೀರಿಸಿ ಗಾತ್ರವ ಕೆಡಸಿದ 4 ಸುರಗುರುವೆಂಬುವನು ಮೂರನೆಯಲ್ಲಿ ಸ್ಥಿರವಾಗಿ ನಿಂತಿಹನು ಗುರುಗಳ ಮುಖದಿಂದ ಕರಕರೆ ಹತ್ತಿಸಿ- ದರು ಪಾಡಿ ಹರಿಯನ್ನು ತಿರುಕನಾದೆನು ನಾನು 5 ಆರನೆ ಮನೆಯೊಳಗೆ ದೈತ್ಯರ ಆ- ಚಾರಿಯನು ನಿಂತಿಹನು ಹಾರುಮಾತುಗಳೇಕೆ ತೂರಿದನೆಲ್ಲವ ಪಾರಾದೆನು ನಾನು ವಾರಿಜನೇತ್ರ 6 ಆದಿತ್ಯ ಪುತ್ರನಾದ ಶನೈಶ್ವರ ಬಾಧಿಪ ಮನೆಗಳಾರು ದ್ವಾದಶ ಆದಿಯು ದ್ವಿತೀಯ ಪಂಚಮದಲ್ಲಿ ವೇದಗಳೆಲ್ಲವು ಏಳುಯೆಂಟಿರಲಿ 7 ನಾಡನಾಳುವ ರಾಯರ ಕೆಡಿಸಿ ಮುಂದೆ ಕಾಡಿಗೆ ಸೇರಿಸಿದ ಈಡಿಲ್ಲ ಈತಗೆ ಜೋಡಿಲ್ಲ ಗ್ರಹರೊಳು ಪಾಡೆಲ್ಲ ಕೆಡಿಸಿದ ರೂಢಿಗೆ ಒಡೆಯ 8 ವಾರಿಧಿ ಮಥನದಲಿ ಸುಧೆಯನ್ನುಂಡು ಸೇರಿದ ಗೃಹರೊಳಗೆ ಮೀರಿದರಿಬ್ಬರ ಪಾರುಪತ್ಯಗಳನ್ನು ಮಾರ ಸನ್ನಿಭನೆ 9 ಸಂಧಿ ಸಂಧಿಯಲಿವರು ಬಂದೆನ್ನನು ದಂದುಗ ಬಡಿಸುವರು ಇಂದ್ರಾದಿ ದೇವರಿಗಳವಲ್ಲ ಇವರೊಳು ಹಿಂದು ಮುಂದರಿಯೆನು ಬಂದ ಬವರವನ್ನು 10 ಶುಭದಲ್ಲಿ ಶುಭವಿತ್ತರು ವೆಂಕಟರಾಯ ಶುಭ ತೋರಿಸೊ ಅಭಯವನಿಪ್ಪಂಥ ವರಾಹತಿಮ್ಮಪ್ಪನೆ ಪ್ರಭುವೆಂದು ನೀ ಹೇಳಿ ವಿಭವಗಳೆನಗೀಯೊ 11
--------------
ವರಹತಿಮ್ಮಪ್ಪ
ಲೋಕನೀತಿಯ ಪದಗಳು ಕೇಶವನ ದಾಸರಿಗೆ ಘಾಸಿಯುಂಟೆ ವಾಸವನ ವಜ್ರಕೆ ಗಿರಿನಿಕರದಂಜಿPಯೆ ಪ ಇದ್ದಲಿಯನು ಗೊರಲಿ ಮೆದ್ದು ಜೀವಿಪದುಂಟೆ ಮದ್ದಾನೆಗಳಿ ಗಲ್ಪ ನರಿಯ ಭಯವೇ ಅಬ್ದಗಳು ಮರುತನೊಳು ಯುದ್ಧ ಬಯಸುವದುಂಟೆ ಸಿದ್ಧರಿಗೆ ಭವಪಾಶ ಪದ್ಧತಿಯು ಉಂಟೆ 1 ಗುರುಕೃಪೆಯ ಪಡೆದವಗೆ ಪರಸೌಖ್ಯ ತಪ್ಪದೇ ಹರಿಯ ಸ್ಮರಿಸುವ ನರಗೆ ನರಕ ಭಯವೇ ಉರಗ ನಭಚರನೆದುರಲ್ಲಿಪ್ಪದೆ ನರಚಂಡಕರಕರ ಕಂಡು ಅರುಳುವುದೆ ಕುರುಕುಮುದಾ 2 ಮೇರುವಿಗೆ ಛಳಿ ಭಯವೇ ವಾರಿಧಿಗೆ ಮಳಿ ಭಯವೇ ಮಾರನ್ನ ಗೆದ್ದವಗೆ ನಾರಿ ಭಯವೇ ತಾರಕಾ ಪ್ರೀಯ ಶಿರಿಗೋವಿಂದವಿಠಲಗೆ ಸೇರಿರುವ ಶೂರರಿಗೆ ಆವ ಭಯವೈಯ್ಯಾ 3
--------------
ಅಸ್ಕಿಹಾಳ ಗೋವಿಂದ