ಒಟ್ಟು 143 ಕಡೆಗಳಲ್ಲಿ , 53 ದಾಸರು , 139 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಓ ಎನ್ನಬಾರದೆ ಓಂಕಾರ ಪ್ರತಿಪಾದ್ಯ ಪ ಕರಿರಾಜ ಕರೆಯಲು ತ್ವರಿತದಿಂದಲಿ ಬಂದು ಪೊರೆಯಲು ನಿನಗವ ಮರಿಮಗನೇನೋ 1 ಅಂದು ಅಜಾಮಿಳ ಕಂದನ ಕರೆಯಲು ಬಂದು ಸಲಹಿದೆ ಬಂಧು ನೀನವಗೇನೋ 2 ಕರುಣಾಸಾಗರ ದೊರೆ ಶ್ರೀದವಿಠ್ಠಲ ಕರವ ಮುಗಿದು ಕೂಗೆ ಬರದಿರೆ ಘನವೇನೋ 3
--------------
ಶ್ರೀದವಿಠಲರು
ಕಂಡೆನದ್ಭುತ ಮೂರ್ತಿಯನೂ ಹಿಂಡು ದೈವದಗಂಡ ವೇಲಾಪುರಾಧೀಶನನು ಪ ಪರಮಪದನಾಥ ಜಯ ಪರಮಪುರುಷನೆ ಜಯ ಮರಮೇಷ್ಠಿಜನಕಜಯ ಪರಮಪಾವನನೆ ಜಯ ಪರಮ ಸುಖವಾರ್ಧಿಜಯ ಪರಮಸುಜ್ಞಾನಿ ಜಯ ಪರಮ ಶುಭಗಾತ್ರಜಯ ಪರಮಸಂತೋಷಿ ಜಯತು 1 ಪರಮಸ್ವತಂತ್ರಜಯ ಪರಮ ಕಾರಣನೆಜಯ ಪರಮತ್ರಿಗುಣಾತ್ಮಜಯ ಪರಮಪಂಡಿತನೆ ಜಯ ಪರಮಗುರುವರ್ಯಜಯ ಪರಮಮುನಿವಂದ್ಯಜಯ ಭಾಗವತ ಪ್ರಿಯ ಜಯಜಯತು2 ಸರ್ವೋತ್ತಮನೆ ಜಯಜಯತು ಸ್ವಾಮಿ ಕರಿರಾಜವರದ ಜಯಜಯತು ಹರಿಯೇ ಅರವಿಂದನಾಭ ಜಯಜಯತು ಅಸುರ ಶರಧಿ ಬಡಬಾನಲನೆ ಜಯಜಯತು 3 ತರಳನ ಕಾಯ್ದವನೆ ಜಯಜಯತು ಶಿಶುವು ಕರೆಯೆ ಬಂದವನೆ ಜಯಜಯತು ತಪವ ಚರಿಸಿದನ ಕಾಯ್ದವನೆ ಜಯತು ನಿಜ ಶರಣರಿಗೆ ಪದವನಿತ್ತವನೆ ಜಯಜಯತು 4
--------------
ಬೇಲೂರು ವೈಕುಂಠದಾಸರು
ಕಮಲನಯನನ ಕರತಾರೆ ಕರುಣ ಸಾಗರನ ಕರಿರಾಜ ವರದನ ಪ -------ಪನ ಕಂಬುಕಂಧರನ ಲೋಕನಾಯಕ ಶ್ರೀಯದು ವೀರನಾ ರಾಕೇಂದು ಮುಖಿ ವರ ಲಕ್ಷ್ಮೀನಾಯಕನ ನೀರಜ ನಾಭನಾ 1 ಸುಜನ ವಿಲಾಸನಾ ಕಂದ ಪ್ರಹ್ಲಾದನಾ ಕಾಯ್ದದೇವನಾ ಸುಂದರ ವದನ ಗೋವಿಂದ ಮುಕುಂದನಾ ಮಾಧವ ಕೃಷ್ಣನಾ 2 ಯದುಕುಲಾಬ್ಧಿಚಂದ್ರ ವೇದಗೋಚರನಾ ಮಧÀು ಸೂದನ ರೂಪ ಮಹಿಮ ಪ್ರಕಾಶನಾ ಬುದ್ಧ ಜನರ ಸಿರಿಯ ನಾ ಪೂರ್ಣಾನಂದನ ಚದುರೆ ನೀ ಬೇಗ ಹೋಗಿ ಚಲುವ ಸಂಪನ್ನನಾ 3 ಆನಂದ ನಿಲಯನಾದ ಅಖಿಲವೈಭವನಾ ಜ್ಞಾನಿಗಳ ಪೊರೆವ ಘನ ಗಂಭೀರನಾ ಧೇನು ಪಾಲಕ ದೇವಾದಿ ದೇವನ ಗಾನಲೋಲನಾದ ವೇಣು ಗೋಪಾಲನ 4 ಗರುಡವಾಹನನಾ-----ಜನ ಕಾಯ್ದವನಾ ಸ್ಥಿರ ಹೆನ್ನ ತೀರದಿ ವಾಸವಾಗಿಹನ ದೊರೆ 'ಹೆನ್ನ ವಿಠ್ಠಲನ’ ----ದೇವನಾ ಪೊರೆವನು ನಮ್ಮ ನಿಂದು ಪರಮಹರುಷದಿಂದಾ5
--------------
ಹೆನ್ನೆರಂಗದಾಸರು
ಕರಿರಾಜ ವರದ ಕಾಯೊ ಪ ವರ ಕರಿರಾಜ ವರದ ಕಾಯೊ ಕರವ ಪಿಡಿದು 1 ವರಕರಿರಾಜವರದ ಕಾಯೊ ಶರಣರ ಚರಣ ಸ್ಮರಣೆಯ ಕರುಣಿಸಿ 2 ಸಿರಿ ಪ್ರಾಣನಾಥ ವಿಠ್ಠಲ ನಿನ್ನಧ್ಯಾನ ಕೊಟ್ಟೆನ್ನ ಕಾಯೊ 3
--------------
ಬಾಗೇಪಲ್ಲಿ ಶೇಷದಾಸರು
ಕರಿರಾಜ ವರದ ಗುರುರಾಜ ವರದ ಸುರಾಜ ನಿನ್ನ ನಾಮ ಕೇಳು ಪೇಳುವೆ ಗುಣಮಿತಿ ಮೀರಿ ದನುಜರ ವೈರಿ ಗುಣಿಜ£ಕಾಧಾರಿ ನಿನ್ನ ನಾಮ ಕೇಳು ಪೇಳುವೆ ಪ ಶಣಸೀದ ಸೋಮ ಕನ್ನರಿದಿ ಮೀನನಾಗಿ ವೇದವಾ ತಂದಿ ಗುಣತಪ್ಪಿದ ಚಲವನು ಬಿಡದೆ ಮುಣಿಗ್ಯೊಳಗೆ ಕೂರ್ಮನಾಪಿಡಿದಿ ನೊಣಶಣತಾಕ್ಷನ ಬಿಡದಳಿದಿ ಗುಣಿವರಹನಾ ಗಿಳಿಯ ತಂದಿ ಪ್ರಲ್ಹಾದನ ಪೊರೀದಿ 1 ವಟುರೂಪಿಲಿ ಬಲಯನು ತುಳಿದಿ ನಟಿಸುವ ವಾಮನನಾದಿ ಕಟಹಾರದಿ ಕ್ಷತ್ರಿಯರಳಿದಿ ಹಟದಿಂದ ಪರಶುರಾಮಾದಿ ಭಟ ರಾವಣನಸುವಾನಳಿದಿ ದಿಟರಾಮನೆಂದು ಪೆಸರಾದಿ ಜಟಿಯ ಪಿಡಿದು ಭೂತಹಟಕೆ ಘಟ್ಟಿಸಿ ಕೃಷ್ಣನೆನಿಸಿದಿ 2 ಯುವತೀಯರ ವ್ರತವನ್ನಳಿದಿ ಭುವನದಿ ಬೌದ್ಧನಾಗಿ ನಿಂದಿ ದಿವ್ಯ ಹಯವನೇರಿ ನೀ ಬಂದಿ ಭುವಿ ದುಷ್ಟರಾಂತಕ ಕಲ್ಕ್ಯನೀಡಿ ತವ ಶರಣರ ಪೊರೆಯುವ ನೆವದಿ ವಿಧವಿಧ ರೂಪ ನೀ ತಾಳ್ದಿ ಭವದಿಂದೆನ್ನನು ಉದ್ಧರಿಸೊ 3
--------------
ನರಸಿಂಹವಿಠಲರು
ಕರುಣದಿ ಪೊರೆಯೆನ್ನ ಪ್ರಭುವೇ ಮೂಲ ಗುರುವೆ ಪ ಪರಮ ದಯಾನ್ವಿತ ಸುರಕಲ್ಪತರುವೆ ಅ.ಪ. ಅಂಗಜಪಿತನಾಜ್ಞೆ ಹಿಂಗಾದೆ ನೀಯಾಂತು ಅಂಗನೆ ಸೀತೆಯ ಅರಸುತ್ತ ಪೋದೆಯೊ ತುಂಗವಿಕ್ರಮ ನೀನು ಮಂಗಳಾಂಗಿಯ ಕಂಡು ಶೃಂಗಾರವನವನ್ನೆ ಭಂಗಮಾಡಿದೆಯೊ 1 ಕರಿಪುರದರಸನ ವರಪುತ್ರ ನೀನಾಗಿ ಕರಿರಾಜವರದಗೆ ಭಾವನಾಗಿ ಧರಣಿ ಭಾರವೆಲ್ಲ ಹರಿಸಿದೆ ನೀನು 2 ಯತಿಯ ರೂಪವ ತಾಳಿ ಕ್ಷಿತಿಯೊಳು ಚರಿಸುತ ದಿತಿಜರ ಬಾಯ್ಗಳ ಬಡಿಯುತಲಿ ಪತಿತ ಪಾವನ ಶ್ರೀ ರಂಗೇಶವಿಠಲನೆ ಪ್ರತಿಯಿಲ್ಲವೆಂತೆಂಬ ಮತಿಯಿತ್ತದೇವ 3
--------------
ರಂಗೇಶವಿಠಲದಾಸರು
ಕರುಣದಿ ಬಂದು ನಿನ್ನ ಚರಣ ಕಮಲವೆನ್ನ ಶಿರದ ಮೇಲಿಟ್ಟು ನೀ ಪೊರಿಯೊ ಕೃಪಾರಸ ಸುರಿಯೋ ಗರುಡಧ್ವಜ ನೀನು ಸ್ಮರಮಣ ನಿನ್ನ ಭಕುತರ ಸುರಧೇನೆಂದು ಕರೆವರು ನಿನ್ನನು ಪ ಸರಸಿಯೊಳ್ಕರಿರಾಜ ಭರದಿಂದ ತನ್ನವುದ್ಧರಿಸೆಂದು ಮೊರೆಯಿಡೆ ಪೊರೆದೆಯಲ್ಲೊ ಶಿರಿಯೊಳುನುಡಿಯದೋ ಶರಣಾಗತರನ್ನು ಪೊರೆವೆನೆಂಬ ನಿಜ ಬಿರಿದನು ಮೆರಿಸಿದಿ1 ಆಗಮವಂದಿತ ನಾಗಭೂಷಣ ತಾತ ಮೇಘವಾಹನ ಸುತನ ಬ್ಯಾಗ ರಕ್ಷಿಸಿದಿ ಜಾಗುಮಾಡದೆ ಎನ್ನ- ದಾಗಲು ರಕ್ಷಿಸೆಂದು ಬಾಗಿ ಬೇಡುವೆನು 2 ಕಾವನು ನೀನಲ್ಲದೆ ಯಾವ ದೇವರನು ನಾ ಆವಲ್ಯು ಕಾಣೆನು ಭಾವಜಜನಕನೆ ಶ್ರೀವಾಸುದೇವನ ಗೋವೃಂದ ರಕ್ಷಕನೆ ಪತಿ ಶ್ರೀವತ್ಸಾಂಕಿತನೆ 3
--------------
ಸಿರಿವತ್ಸಾಂಕಿತರು
ಕರುಣಸಾಗರನಹುದೊ ಶರಣ ಜನರ ಪ್ರಿಯ ಧ್ರುವ ಕರಿರಾಜ ಮೊರೆ ಇಡಲು ಭರದಿಂದೊದಗಿ ಬಂದ್ಯೊ ದುರಿತ ಬಂದಡರಿದಾವಸರದೊಳು ನೀ ಪರಿಹರಿಸಿದ್ಯೊ ಶ್ರಮ ಪರಮ ದಯಾಳು 1 ದುರಿತ ನಿರ್ಮಿಸಿದವನ ಬೆರಳಲಿ ಸೀಳಿದ್ಯೊ ಪೂರ್ಣ ಹರಿಯಂದಾ ಮಾತಿಗೆ ಕರುಣದಿಂದೊದಗಿ ನೀ ಪರಪರಗಾಯಿದ್ಯೊ ತರಳ ಪ್ರಹ್ಲಾದನ 2 ಧರ್ಮಪತ್ನಿಯ ಸೆರಗೆ ಭರದಿಂದೆಳೆಯುವ ಸಮಯ ಸ್ಮರಣಿ ಒದಗಿ ಬಂದೊ ಪರಿಪರಿ ವಸ್ತುವ ಪೂರಿಸಿದ್ಯೊ ಶ್ರೀ ಹರಿ ಕೃಷ್ಣ ಕೃಪಾಳು 3 ಅರಗಿನ ಮನೆಯೊಳು ಮರೆ ಮೋಸ ಮಾಡಿರಲು ಶರಣಾಗತವತ್ಸಲ ಪಾಂಡವಪ್ರಿಯ 4 ಹಲವು ಪರಿಯಲೆನ್ನ ಸಲಹುವ ಸದ್ಗುರುಪೂರ್ಣ ಬಾಲಕ ಮಹಿಪತಿಯ ಪಾಲಕ ನೀನಹುದೊ ಮೂಲೋಕದೊಡೆಯ ಶ್ರೀ ಹರಿ ದಯಾಳ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕರುಣಾಕರಾ ಕಮಲಾರಮಣ ಕರಿರಾಜ ಬಂಧನ ಹರಣಾ ಸುರ ಬ್ರಹ್ಮ ಮುಖಾರ್ಚಿತ ಚರಣಾ ಶರಣಾಗೆಲೋ ದೀನೋದ್ಧರಣಾ ಪ ಅತಿಸುಂದರ ನಂದ ಕುಮಾರಾ ಸುತ ನಾಗೈ ತಂದನು ಮಾರಾ ಅತನೇ ಕುಸುಮದ ಶರೀರಾ ಸುತ ಸದ್ಗುಣ ಗಣ ಮಂದಾರಾ ಪ್ರತಿಯುಗದಲಿ ಧರಿಸೈವತಾರಾ ಕ್ಷಿತಿಯೊಳು ಪಾಲಿಪ ಸುರನಿಕರಾ 1 ಜಲಧಿ ಯೊಳಗೆರಡು ರೂಪಾದೆ ಸಲೆ ವೇದಾಮೃತವನು ತಂದೆ ಬಲಿದೀ ಕ್ರೂರಾಂಗವ ವಿಡಿದೆ ಇಳೆಸಲೆ ಪ್ರಲ್ಹಾದರ ಹೊರೆದೆ ನೆಲೆ ಪ್ರಥಮಾಶ್ರಮದಲಿ ನಿಂದೇ ಬಲಿ ಜಮದಗ್ನ್ಯರ ತೋಷಿಸಿದೆ 2 ಎರಡನೆ ವರ್ಣದೊಳಗೆ ಜನಿಸಿ ಸುರ ಪಾಂಡವರೇಳಿಗೆ ಬಲಿಸಿ ನೆರೆ ಅಂತ್ಯಯುಗದಿ ಅವತರಿಸಿ ಪುರಹರ ದ್ವಿಜರಭಿಮತ ಸಲಿಸಿ ಗುರು ಮಹಿಪತಿ ಪ್ರಭು ಕರುಣಿಸಿ ಹೊರಿಯೋ ನಿನ್ನೆಚ್ಚರ ನಿಲಿಸಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕರುಣಾಸಾಗರ ದೀನೋದ್ಧಾರಣ ಎನ್ನನು ಕಾಯ್ವ ಪರಿಯ ಚಿಂತಿಸಿ ರಕ್ಷಿಸೊ ಪರಮ ಪಾವನ ನಾಮಸ್ಮರಣೆಯಲ್ಲದೆ ಕರ್ಮ ಚರಣರಹಿತ ಪಾಪಕರನಾಬ್ಧಿಪತಿತನ ಪ. ವರ್ಣಾಶ್ರಮಾಚಾರ ಕರ್ಮಕೃತ್ಯವ ನೀಗಿ ನಿರ್ಮಲಚಿತ್ತದಿ ನಿನ್ನ ಪೂಜಿಸದೆ ವರ್ಮವಿಡಿದು ವರ ದ್ರೋಹ ಚಿಂತೆಗಳಿಂದ ಧರ್ಮಮಾರ್ಗವ ದೂರದಲಿ ತ್ಯಜಿಸಿ ನಿರ್ಮಲಾಂತ:ಕರಣ ನಿಜಕುಲ ಧರ್ಮರತ ಸಜ್ಜನರ ದೂಷಿಸಿ ದುರ್ಮದಾಂಧರ ಸೇರಿ ಕೂಪದ ಕೂರ್ಮನಂದದಿ ಬರಿದೆ ಗರ್ವಿಪೆ 1 ನೇತ್ರ ದರ್ಶನಕೆ ಸಂಸ್ಮರಕೆ ಜಿಹ್ವೆಯ ಗಾತ್ರ ಸೇವೆಗೆ ನೈರ್ಮಲ್ಯಕೆ ಶಿರವ ಶ್ರೋತ್ರವ ಮಾಹಾತ್ಮ ಶ್ರವಣಕೆ ಪಾದಗಳ ಕ್ಷೇತ್ರಯಾತ್ರೆಗೆ ಕರಗಳ ಪೂಜಾವಿಧಿಗೆ ಇತ್ತ ದೊರೆಯನು ಮರೆತು ಇಂದ್ರಿಯ ವೃತ್ತಿಗಳ ಸ್ವೈರಿಣಿಯ ದರುಶನ ಭುಕ್ತಿ ಚುಂಬನ ಧ್ಯಾನ ದುಷ್ಟ ಕಥಾ ಶ್ರವಣಸಲ್ಲಾಪಕಿತ್ತೆನು 2 ಪತಿತ ಪಾವನ ನೀನು ಪತಿತಾಗ್ರೇಸರ ನಾನು ಅತಿಶಯಿತನು ನೀನು ಅತಿನೀಚನು ನಾನು ಗತಿಹೀನ ಜನಕ ಸದ್ಗತಿಯೆಂಬ ಬಿರುದುಳ್ಳ ಮಿತಚಿತ್ರ ಚರಿತಾತ್ಯದ್ಘುತರೂಪ ಗುಣಪೂರ್ಣ ಪಶುಪತಿ ಸುರೇಶ ಪ್ರ- ಭೃತಿ ದಿವಿಜಗಣ ಸುತ ಪದಾಂಬುಜ ಕ್ಷಿತಿಜಲಾಗ್ನಿ ಮರುನ್ನಭೋಹಂ ಕೃತಿ ಮಹ ಸುಖತತಿನಿಯಮಕ 3 ಕರಿರಾಜ ಧ್ರುವಾಕ್ರೂರನರ ವಿಭೀಷಣ ನಾರದರು ಮೊದಲಾಗಿ ನಿನ್ನನುದಿನವು ಸ್ಮರಿಸಿ ಪೂಜಿಸಿ ಮನವೊಲಿಸಿದವರನ್ನು ಪರಿಪಾಲಿಸಿದನೆಂಬೊ ಗರುವದಿಂದ ನಿರುಪಮಾನಂದೈಕ ಸದ್ಗುಣ ಭರಿತರೆಂಬುದ ಹೆಮ್ಮೆಯಿಂದಲಿ ಮರೆತರೆನ್ನನು ಪರಮಕರುಣಾ ಶರಧಿಯೆಂದ್ಹೆಸರಿರುವುದೇತಕೆ 4 ನಾ ನಿನ್ನ ಮರೆತರು ನೀ ಎನ್ನ ಮರೆದರೆ ಹಾನಿಯಾಗದೆ ನಿನ್ನ ಭಕ್ತ ವತ್ಸಲಕೆ ದಾನವಾಂತಕ ಅಕಿಂಚನಾರೆ ಎಂಬ ಪ್ರಮಾಣ ಉನ್ನತ ವಚನವಾಗದೆ ಮಾನನಿಧಿ ಪವಮಾನ ತತ್ವಮತ ಮಾನಿಜನ ಸಂಸ್ತುತ ಪದಾಂಬುಜ ಶ್ರೀನಿವಾಸ ಕೃಪಾನಿಧೆ ಕಮಲಾ ನಿಲಯ ವೆಂಕಟನಿಜಾಲಯ 5 ವೇದವನು ತಂದು ಭೂಧರನ ಬೆನ್ನಲಿ ನೆಗಹಿ ಈ ಧರೆಯ ಸಲಹೆ ಪ್ರಹ್ಲಾದನನು ಕಾಯ್ದೆ ಮೇದಿನಿಯನಳೆದಿ ಕಾರ್ತದಶಾಸ್ಯ ಕಂ ಸಾದಿಗಳ ತರಿದ ಬೌದ್ಧಾದಿ ಕಲ್ಕಿ ಧಾರಣನೆ ಪತಿತ ಪಾವನನೆಂಬ ಪರಮ ಬಿರುದನು ವಹಿಸಿ ಜತನ ಮಾಡುವಿ ಭಕ್ತತತಿಗಳನು ಬಿಡದೆ ಪತಿತ ಶೇಖರನನ್ಯಗತಿಯಾಗಿರುವ ಎನಗೆ ಗತಿಯ ಪಾಲಿಸು ರಮಾಪತಿಯೆನ್ನುಪೇಕ್ಷಿಸದೆ 6 ನಾರದಕ್ರೂರ ನರ ಹೈರಣ್ಯಕಾದಿಗಳು ಪಾದ ನೀರರುಹಗಳನು ಘೋರತರ ಸಂಸಾರಪಾರವಾರವ ದಾಟಿ ಧೀರರೆನಿಸಿದರೆಲ್ಲಪಾರಸನ್ಮಹಿಮ ತರಣಿ ಉದಿಸಿದ ಮೇಲೆ ತಿಮಿರದೊಂದಿರವ್ಯಾಕೆ ಗರಳ ಭಯವ್ಯಾಕೆ ಸಿರಿಸಹಿತ ಶೇಷಾದ್ರಿ ವರ ನಿನ್ನಪಾದ ಸಂ- ದರುಶನವು ದೊರೆತಮ್ಯಾಲರಿಬಾಧೆಯಾಕೆ ಎನಗೆ 7
--------------
ತುಪಾಕಿ ವೆಂಕಟರಮಣಾಚಾರ್ಯ
ಕರುಣಿಸೊ ಗುರುವೆ ಚರಣ ಸ್ಮರಣೆಯು ನಿಮ್ಮ ಧ್ರುವ ಸ್ಮರಿಸಲಿಕ್ಕೆ ನಾ ನಿಮ್ಮ ತರಳ ಪ್ರಹ್ಲಾದನಲ್ಲ ಅರಿತು ಮಾಡುವದು ದಯ ತರಣೋಪಾಯದ 1 ಒಲಿಸಿಕೊಳ್ಳಲು ನಿಮ್ಮ ಫÀಲ್ಗುಣನಂಥವನಲ್ಲ ಗೆಲಿಸುವದೊ ನೀ ಸುಪಥ ನೆಲೆನಿಭದೋರಿ 2 ಮೊರೆ ಇಡಲು ನಾ ನಿಮ್ಮ ಕರಿರಾಜನÀಂಥವನಲ್ಲ ಕರುಣಿಸುವದೊ ಎನಗೆ ಕರವಿಡಿತು ಪೂರ್ಣ 3 ಶರಣ ಹೋಗಲು ನಿಮ್ಮ ಧೀರ ವಿಭೀಷಣನಲ್ಲ ಪಾರ ಗೆಲಿಸುವದೊ ನಿಮ್ಮ ವರಕೃಪೆಯಿಂದ 4 ಭಕ್ತಿ ಮಾಡಲು ನಿಮ್ಮ ಶಕ್ತಸಮಥನಲ್ಲ ಯುಕ್ತಿದೋರುವದೊ ನಿಮ್ಮ ಮುಕ್ತಿಮಾರ್ಗದ 5 ಸ್ತುತಿಯ ಮಾಡಲು ನಿಮ್ಮ ಅತಿಶಯ ಭಕ್ತ ನಾನಲ್ಲ ಗತಿಸುಖದೋರುದೆನಗೆ ಪತಿತಪಾವನ 6 ದಾಸರ ದಾಸನೆಂದು ಲೇಸಾಗಿ ಮಹಿಪತಿಗೆ ವಾಸನೆ ಪೂರಿಸೊ ಪೂರ್ಣ ದೇಸಿಗರ ದೇವ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಪಾಡೆಲೊ ದೇವ ಕರುಣಾರ್ಣವ ಪ ನಾ ಪಾಪಿಯು ಎಂದು ನೀ ಪರಿ ಪಾಲಿಸದೀಪರಿಗೈದರೆ ಆಪದ್ಭಾಂಧವ ಅ.ಪ. ಮೊರೆಯಿಡುವೆನು ಇನ್ಯಾರಿಗೆ | ನೀನಿಲ್ಲದೆ ಪೊರೆವ ಪ್ರಭುವಾರೆನಗೆ | ಶರಣ ಮಂ ದಾರನೆಂದರಿತು ನಿನ್ನಯ ಪಾದ ನೆರೆ ನಂಬಿದೆನು ಇನ್ನು ಪೊರೆಯಬೇಕೆನ್ನನು 1 ಕರಿರಾಜನ ಭಯ ಪರಿಹರಿಸಿದ | ವರ ಗರುಡಗಮನ ಸಿರಿವರದ | ಜನಾದರ್Àನ ಪರಮ ಪುರುಷ ಶ್ರೀ ಕರಿಗಿರಿ ಮಂದಿರ ನರಹರಿ ನಮಿಪೆನು ಚರಣ ಸರಸಿಜಕೆ 2
--------------
ವರಾವಾಣಿರಾಮರಾಯದಾಸರು
ಕಾಯೊ ಕರುಣಾಕರನೆ ನೀಯನ್ನಾ ಕಾಯೋ ಆನಾಥರಕ್ಷಕ ದಯಾಸಿಂಧೂ ಪ. ಕಾಯೊಯನ್ನನು ಕರವಿಡಿದು ಕೃಪೆಯಿಂದ ನೀಯನ್ನಾ ಕಾಯೊದೇವರದೇವ ಶ್ರೀ ವೆಂಕಟೇಶ್ವರನೆ ಕಾಯೊ ಅ.ಪ. ನೀನಲ್ಲದೆ ಅನ್ಯತ್ರ ತಾಯಿ ತಂದೆಗಳಿಲ್ಲಾ ನೀನಲ್ಲದೆ ಬಂಧುಬಳಗವೆನಗಿಲ್ಲಾ ನೀ ಯನ್ನ ಕಾಯೊ ಶ್ರೀ ವೆಂಕಟೇಶ್ವರನೆ 1 ತರುಳ ಕರಿಯಲು ಕಂಭದಿ ಬಂದು ಹಿರಣ್ಯಾಕ್ಷಕನ ಕರುಳ ತೆಗದು ವನಮಾಲೆ ಹಾಕಿ ನಿಂದೀ ನರಮೃಗರೂಪಿನಲಿ ಪ್ರಹ್ಲಾದಗೆ ವರವಿತ್ತೆ ನೀಯನ್ನ ಕಾಯೊ ಶ್ರೀ ವೆಂಕಟೇಶ್ವರನೆ 2 ಜಲದೊಳಗೆ ನೆಗಳೆಯು ಹಿಡಿದು ಎಳೆಯುತ್ತಿರೆ ಬಹುಬಾಧೆಬಡಿಸೆ ನಿಮ್ಮ ನೆನೆಯಲು ನಿಲ್ಲದೆ ಬಂದೊದಗಿನೆಗಳೆಯನು ಶೀಳ್ದು ಕರಿರಾಜಗೊಲಿದು ರಕ್ಷಿಸಿದೊ ಶ್ರೀ ವೆಂಕಟೇಶ್ವರನೆ 3 ದುರುಳದುಶ್ಯಾಸ ದ್ರೌಪತಿ ಸೀರೆಯನು ಸೆಳೆಯೆ ಹರಿಣಾಕ್ಷಿ ಸಭೆಯೊಳಗೆ ಕೃಷ್ಣಾಯೆಂದುವದರೆ ಪರಿಪರಿ ವಸ್ತ್ರವನು ಕೊಟ್ಟೆ ಅಭಿಮಾನವನು ಕಾಯ್ದೊ ದೇವರದೇವ ಶ್ರೀ ವೆಂಕಟೇಶ್ವರನೆ 4 ಶಂಖಚಕ್ರಧರ ನಿನ್ನ ಚರಣವನು ನಂಬಿದೆ ಪಕ್ಷಿವಾಹನಸ್ವಾಮಿ ಕರುಣಾನಿಧೆ ಹೆಳವನಕಟ್ಟೆಯೊಳು ನಿಂದು ಭಕ್ತರನ್ನೆಲ್ಲಾ ಕಾಯ್ದ ದೇವರದೇವ ಶ್ರೀ ವೆಂಕಟೇಶ್ವರನೆ 5
--------------
ಹೆಳವನಕಟ್ಟೆ ಗಿರಿಯಮ್ಮ
ಕಾಯೋ ಬಾರೋ ಹರಿ ಈಯ್ಯೋ ವರ ಥೋರೀ ಜಾರಚೋರಖರ ಅರಿನಾಶಕಾರಿ ಪ ವಾಯುದೇವಪಿತ ತೋಯಜಾಕ್ಷಿ ಸೀತಾ ಪ್ರಿಯ ನೀನು ತ್ರಾತ ರಾಯ ಜಗನ್ನಾಥ 1 ಕಾಮನಯ್ಯ ನೀನು ಮಾಮನೋಹರನು ವಾಮನಾದಿ ನೀನು ರಾಮನಾಮಕನು 2 ಕರಿರಾಜನನ್ನು ತ್ವರಿತಾದಿ ಕಾಯ್ದಿ ಶ್ರೀವತ್ಸಾಂಕಿತ ಹರಿ ವೆಂಕಟೇಶ3
--------------
ಸಿರಿವತ್ಸಾಂಕಿತರು
ಕೃಪೆ ಮಾಡೋ ಕೃಷ್ಣ ಕೃಪೆಮಾಡೋ ತಪ್ಪದೆ ಪ್ರಾತಃ ಸಂಜೆ ನಿನ್ನ ಸ್ತುತಿ ಮಾಡುವಂತೆ ಪ ಚಂದ್ರಹಾಸನಂತೆ ವ್ರತ ಮಾಡಲರಿಯೆ ಅಂದಿನ ಧ್ರುವನಂತೆ ತಪಗೈಯಲಾರೆ ಕಂದ ಪ್ರಹ್ಲಾದನಂತೆ ಬಿಡದೆ ನುತಿಸಲಾರೆ ಸಂದ ನಚಿಕೇತನಂತೆ ಮೃತ್ಯುಗೆಲ್ಲಲರಿಯೆ 1 ಕರಿರಾಜನಂತೆ ಕೂಗಲರಿಯೆನೋ ಗರುಡನಂತೆ ಸದಾ ಹೊತ್ತು ತಿರುಗಲಾರೆ ಮರುತಜನಂತೆ ಭಂಟನಾಗಲರಿಯೆ ಉರಗರಾಜನಂತೆ ಶಯನಕಾಗಲಾರೆ 2 ದ್ರೌಪದಿಯಂತೆ ಅತ್ತು ಮೊರೆಯಿಡಲಾರೆ ರೂಪೆ ಭಾಮೆಯಂತೆ ಬಲು ಮೋಹಿಸಲಾರೆ ಆಪಾಟಿ ಸಖನಾಗರಿಯೆನು ಮಕರಂದನೊಲು ವಿಪ್ರನಾರಾಯಣನಂತೆ ಭಕ್ತಿಯರಿಯೆನೊ ಹರಿಯೆ 3 ಜಾಜಿಪುರೀಶ ನಿನ್ನ ಚರಣ ಸೇವೆಯ ಕೊಡೊ ಸಾಜದಿ ಮಾಡುವೆ ತಿಳಿದಂತೆ ಪಾಮರನು 4
--------------
ನಾರಾಯಣಶರ್ಮರು