ಒಟ್ಟು 26 ಕಡೆಗಳಲ್ಲಿ , 18 ದಾಸರು , 26 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸುಲಿದ ಬಾಳೆ ಹಣ್ಣು ಸುಟ್ಟು ತಿನ್ನಬೇಡಿರೊ ಹಳೆಯ ಜನರ ಅನುಭವಗಳ ಹಳಿಯಬೇಡಿರೊ ಬಿಳಿಯ ವಸ್ತುವೆಲ್ಲ ಕ್ಷೀರವಲ್ಲ ಕಾಣಿರೊ ಥಳಥಳಿಸುವುದೆಲ್ಲ ರಜತವಲ್ಲ ಕಾಣಿರೊ ಸಿರಿಯು ಬಂದ ಕಾಲದಲ್ಲಿ ಮೆರೆಯಬೇಡವೋ ಶಿರವು ಗಟ್ಟಿಯೆಂದು ಕಂಬ ಗುದ್ದಬೇಡವೊ ಮನಕೆ ತುಷ್ಟಿಕೊಡದ ಕಾರ್ಯಗಣನೆ ಬೇಡವೊ ಅನುವಿನಲ್ಲಿ ಪಿಡಿದ ಕಾರ್ಯ ಕೊನೆಯಗಾಣಿಸೊ ಹಾವು ಕೊಂದು ಹದ್ದುಗಳಿಗೆ ಹಾಕಬೇಡವೊ ಗೋವು ಕೊಂದು ಪಾದರಕ್ಷೆ ದಾನಬೇಡವೊ 10 ಅರಿಯದ ಜನರಲ್ಲಿ ಅಂತರಂಗಬೇಡವೊ ಪರರ ಗೋಪ್ಯ ತಿಳಿದರೆ ಬಹಿರಂಗಬೇಡವೊ ಜಂಭ ಕೊಚ್ಚಬೇಡವೊ ರಗಳೆ ರಂಪದಿಂದ ಪರರ ಒಲಿಸಬೇಡವೊ ಗೆದ್ದರಾ ಎತ್ತು ಬಾಲವನ್ನು ಹಿಡಿಯಬೇಡವೊ ಒದ್ದರೆ ಅದು ಹಲ್ಲುಗಳನು ಕಿರಿಯಬೇಡವೊ ಮೂರ್ಖ ಜನಗಳಲ್ಲಿ ವಾದ ಮಾಡಬೇಡವೊ ಮಕ್ಕಳೆದುರಿನಲ್ಲಿ ಗ್ರಾಮ್ಯವಚನ ಬೇಡವೊ ಬಳಿಕ ಮಾತನಾಡುವನು ಗೆಳೆಯನಲ್ಲಯ್ಯ ಕುಳಿತು ತಿನ್ನುವವನು ಸಾಹುಕಾರನಲ್ಲಯ್ಯ 20 ಗಂಟು ಜಗಳ ಕದನಗಳಲಿ ತಂಟೆಬೇಡಯ್ಯ ನಂಟರಿಷ್ಟರಲ್ಲಿ ಭಂಟನಾಗಬೇಡಯ್ಯ ನಾಕು ಜನರ ಮಾತ ಮೀರಿ ನಡೆಯಬೇಡÀಯ್ಯ ಪೋಕರಿ ಜನಗಳಲಿ ಮೂಕ ಬದಿರನಂತಿರೊ ಕಾಲದಲ್ಲಿ ಕೆಲಸಮಾಡಿ ಮುಗಿಸೆಲೊ ನಾಳೆ ನಾಳೆಯೆಂಬ ಕೆಲಸ ಹಾಳು ಕಾಣಿರೊ ಬಿಂಕದಿಂದ ಹರಿಗುರುಗಳ ಮರೆಯಬೇಡಯ್ಯ ಸಂಕಟ ಬಂದಾಗ ವೆಂಕಟೇಶ ಬರುವನೆ ಸಾಲ ಸೋಲ ಮಾಡಿ ದಾನ ಧರ್ಮ ಬೇಡಯ್ಯ ಕೇಳದಿರಲು ನೀತಿ ಹೇಳ ಹೋಗಬೇಡಯ್ಯ 31 ಪರರು ನೋಯುವಂಥ ಮಾತನಾಡಬೇಡಯ್ಯ ಉರಿವ ಒಲೆಗೆ ಉಪ್ಪುಕಾಳನೆರಚಬೇಡಯ್ಯ ನೆರೆಯು ಬಾಳುತಿರಲು ನೋಡಿ ಕರಗಬೇಡಯ್ಯ ಬರಿದೆ ಅಯ್ಯೊ ಪಾಪವೆನಲು ಮರುಕವಲ್ಲವೊ ದುರುಳ ಜನಗಳಲ್ಲಿ ಸರಳನಾಗಬೇಡಯ್ಯ ಹರಿಯ ಭಜನೆಯಲ್ಲಿ ಮನದಿ ನಾಚಬೇಡವೊ ತಿರುಕನಂತೆ ಜ್ಞಾನದ ಭಿಕ್ಷೆಯನು ಬೇಡೆಲೊ ತುರುಕನಂತೆ ಕಾಮದ ತಲೆ ಬಡಿದು ಜೀವಿಸೊ ಸಜ್ಜನಗಳು ಸಮ್ಮತಿಸುವ ಮಾರ್ಗದಲಿ ನಡಿ ದುರ್ಜನಗಳು ಪೇಳಿ ತೋರಿದೆಲ್ಲವನು ಬಿಡಿ40 ಫಲದ ಚಿಂತೆಯಿಲ್ಲದಂತೆ ಧರ್ಮಗಳಿಸಿರೊ ಫಲವು ಹರಿಯಧೀನ ಕೆಲಸ ಮಾತ್ರ ನಿನ್ನದೊ ಧ್ಯಾನ ಮಾಡದಿರಲೊ ಮನದಿ ದುಷ್ಟ ವಿಷಯದ ಧ್ಯಾನದಿಂದ ವಿಷಯದಲ್ಲಿ ಸಂಗ ಬರುವುದೊ ಸಂಗದಿಂದ ದುಷ್ಟಭೋಗ ಕಾಮ ಬರುವುದೊ ಭಂಗವಾದ ಕಾಮದಿಂದ ಕೋಪ ಬರುವುದೊ ಕೋಪದಿಂದ ಮನದಲಿ ವ್ಯಾಮೋಹ ಬರುವುದೊ ಈ ಪರಿಮೋಹದಲಿ ಸ್ಮರಣೆ ನಾಶಪಡುವುದು ಸ್ಮøತಿಯು ತಪ್ಪಿದವನ ಬುದ್ಧಿಮೃತಿಯು ಪೊಂದಲು ಕ್ಷಿತಿಯೊಳವಗೆ ಸರ್ವನಾಶವೆಂದು ನುಡಿಯಿದೆ 50 ಜ್ಞಾನಕೆ ಸಮ ಸಂಪತ್ತಿಲ್ಲ ಜನಕೆ ಲೋಕದಿ ಮೌನಕೆ ಸಮ ಗುಹ್ಯಕೆ ಪಾಲಕರಿಲ್ಲವೊ ಜ್ಞಾನ ಸರ್ವಕರ್ಮಗಳನು ದಹಿಸಿಬಿಡುವುದೊ ಜ್ಞಾನದಿಂದ ಪರಮಶಾಂತಿ ಪಡೆಯುಬಹುದೆಲೊ ಚಿರತನ ವರ್ಣಾಶ್ರಮಗಳ ಧರ್ಮ ಬಿಡದಿರೊ ಮಿತಿಯ ಮೀರಿ ಭೋಜನವನು ಮಾಡಬೇಡವೊ ಕಾಲ ಕಳೆಯಬೇಡವೊ ಲೋಕವ ಭಯಪಡಿಸಬೇಡ ನಡೆನುಡಿಗಳಲಿ ಲೋಕಕೆ ಭಯಪಡಲಿಬೇಡ ಧರ್ಮ ಪಥದಲಿ 60 ಶತುಮಿತ್ರರಲ್ಲಿ ಒಂದೆ ಭಾವ ಪಡೆಯೆಲೊ ಸ್ತೋತ್ರ ನಿಂದೆಗಳಿಗೆ ಹಿಗ್ಗಿ ಕುಂದಬೇಡವೊ ಭಕ್ತಜನರ ನಡೆನುಡಿಗಳ ನಿಂದಿಸದಿರೆಲೊ ಯುಕ್ತರವರು ಹಿರಿಯ ದಯಕೆ ಪಾತ್ರರಿವರೊ ಜಗವು ಸತ್ಯ ಬಗೆ ಬಗೆಯಲಿ ಸೊಗಸ ನೋಡೆಲೊ ಜಗಕೆ ಕರ್ತನೋರ್ವಗೆ ಕೈ ಮುಗಿದು ಬೇಡೆಲೊ ದೇಶಕಾಲ ಪಾತ್ರವರಿತು ದಾನ ಮಾಡೆಲೊ ಆಸೆ ಮೋಸಗಳಿಗೆ ಮನವ ಲೇಸು ಕೊಡದಿರೊ ಪರರ ಮನವು ಕೆದರದಂತೆ ನಿಜಹಿತ ನುಡಿಯು ಗುರುತರ ವಾಚನಿಕ ತಪವ ಮರೆಯಬೇಡವೊ 70 ಸರ್ವಕರ್ಮ ಫಲಗಳನ್ನು ಬಿಡುವನೆ ಯತಿಯು ಗರ್ವಮತ್ಸರಾದಿಗಳನು ಬಿಡುವುದೆ ಮತಿಯು ಶರಣು ಹೊಡೆಯೊ ಕರುಣಮಯನ ಚರಣಯುಗಳದಿ ಕರಗತವಾಗುವುದು ನಿನಗೆ ಇಹಪರ ಸುಖವು ಮಮತೆ ಬಿಟ್ಟು ಜಗದಿ ತಗಲಿ ತಗಲದೆ ಇರೆಲೊ ಕಮಲಪತ್ರಗಳಲಿ ಜಲದ ಕಣಗಳ ತೆರದಿ ಶುದ್ಧ ಧರ್ಮಲೇಶವು ತಲೆ ಕಾಯಬಲ್ಲದೊ ಪದ್ಮನಾಭ ಜನರ ಚಿತ್ತಶುದ್ಧಿ ನೋಡುವ ನಾನೆ ಬ್ರಹ್ಮನೆಂಬ ವಾದ ಬಾಳಬಲ್ಲದೆ ತಾನೆ ಬೀಳಲಿರುವ ಮರಕೆ ಕೊಡಲಿ ಏತಕೆ 80 ಜ್ಞಾನತೀರ್ಥಗಳಲಿ ಮುಳುಗಿ ಸ್ನಾನ ಮಾಡೆಲೊ ಜ್ಞಾನಕೆ ಜ್ಯೋತಿಗಳ ಬೆಳಕು ಕಾಣುತಿರುವುದೊ ದಾರುಣ ಸಂಸಾರ ಜಲದಿ ಪಾರುಗಾಣಲು ಧೀರನಾಗಿ ಈಜುವವಗೆ ತಾರಣ ಸುಲಭ ತಲೆಯ ಮೇಲೆ ಕೈಯನಿಟ್ಟು ಕೂಡ ಬೇಡವೊ ಬೆಳಸಿದಂತೆ ತರುಲತೆಗಳು ಫಲಕೊಡುವುದೊ ಮುಂದೆ ಇಟ್ಟ ಹೆಜ್ಜೆಗಳನು ಹಿಂದೆಗೆಯದಿರೊ ಮಂದಿಗಳಿಗೆ ಫಲದಲಿ ಸಂದೇಹ ಬೇಡವೊ ಹುಳಿಯ ರಕ್ತವಿರುವತನಕ ತಲೆಯು ಬಾಗದು ಕಾಲ ಸಾಲದೊ 90 ಪರರ ನುಡಿಗಳನ್ನು ಕದ್ದು ಕೇಳಬೇಡವೊ ಅರಿತು ನಿನ್ನ ಹರಿಯು ಗುದ್ದಿ ಬುದ್ಧಿ ಕಲಿಸುವ ಚಾಡಿಯಾಡ ಬೇಡ ಚಾಡಿ ಕೇಳಬೇಡವೊ ಸೇಡನು ತೀರಿಸುವ ಹೇಡಿಯಾಗಬೇಡವೊ ನಿನ್ನ ಮಾನದಂತೆ ಪರರ ಮಾನವೆಂದರಿಯೆಲೊ ಅನ್ನ ಹಾಕುವವರ ಹರಿಸಿ ಘನ್ನವೆನಿಸೆಲೊ ಕುಲವ ಶೋಧಿಸುತಲಿ ಕನ್ಯೆದಾನ ಮಾಡೆಲೊ ತಲೆಯ ಕ್ರಾಪು ಯೋಗ್ಯತೆಗೆ ಪ್ರಮಾಣವಲ್ಲವೊ ಕರವ ಪಿಡಿಯೆಲೊ ಥಳಕು ಬೆಳಕು ನೋಡಿ ಬಲೆಗೆ ಬೀಳ ಬೇಡವೊ 100 ಗಾಳಿಯು ಬಂದಾಗ ಬೇಗ ತೂರಿ ಕೊಳ್ಳಲೊ ಕಾಲದ ಸ್ಥಿತಿಯರಿತು ತಗ್ಗಿ ಬಗ್ಗಿ ನಡೆಯೆಲೊ ಮೇಲಿನ ದರ್ಜೆಯಲಿ ನಡೆದು ಕೇಳಬೇಡವೊ ನಾಲಗೆ ಚೆನ್ನಿರುವ ನರಗೆ ಜಗಳವಿಲ್ಲವೊ ಇರುಳು ಕಂಡ ಬಾವಿಗೆ ನೀ ಉರುಳಬೇಡವೊ ಶಕ್ತಿ ಇರುವ ಕಾಲದಲ್ಲಿ ಉತ್ತಮನೆನಿಸೊ ಶಕ್ತಿಯಲ್ಲಿದಾಗ ಇದ್ದು ಸತ್ತ ಪ್ರಾಯವೊ ಸ್ವೊತ್ತಮ ಜನರಲ್ಲಿ ನಿಯತ ಭಕ್ತಿ ಮಾಡೆಲೊ ಭಕ್ತಿಯಿಲ್ಲದವಗೆ ಮುಕ್ತಿಯಿಲ್ಲ ಕಾಣಿರೊ 110 ಪಾಪಿಯಾಗಬೇಡ ಇತರ ಜನರ ವಂಚಿಸಿ ಕೋಪ ಮಾಡಬೇಡ ಕೊಟ್ಟ ಋಣವ ಕೇಳಲು ಕೂಪ ಕೂರ್ಮದಂತೆ ಜಗವ ನೋಡಬೇಡವೊ ರೂಪುರಂಗುಗಳಿಗೆ ಮನವ ಸೋಲಬೇಡವೊ ಹಡೆದ ಮಕ್ಕಳುಗಳ ಕಾಲದಲ್ಲಿ ತಿದ್ದೆಲೊ ಗಿಡದಲಿ ಬಗ್ಗಿಸದ ಮರವು ಬಗ್ಗಲಾರದೊ ಕೊಡಲಿಯನ್ನು ಸೇರಿ ಮರದ ಕಾವಿನಂದದಿ ನಡತೆ ಕಲಿಸದಿದ್ದರವರು ಬುಡಕೆ ತರುವರೊ ಗಳಿಸಿದವನ ಧನವು ಬಳಸಿದವನಿಗೆಂದರಿಯೆಲೊ ಬಳಸಲು ನೀತಿಯಲಿ ಧನವ ಗಳಿಸಿ ಸುಖಿಸೆಲೊ 120 ತಿಳಿದು ಮರ್ಮ ಕಲಿ ಪುರುಷನ ನೆಲಕೆ ತುಳಿಯಿರಿ ಗುಹ್ಯ ತತ್ವ ಪೇಳಬೇಡವೊ ನಾಯಿಗಳಿಗೆ ಹವ್ಯದಾನ ಮಾಡಬೇಡವೊ ಕಾಯುವ ಗುರುಚರಣವೆ ಬಲುಶ್ರೇಯವೆನ್ನದೆ ಕರ್ಮ ಸುಡುವುದೆ ಉಣಲು ಬದುಕಬೇಡ ಜಗದಿ ಬದುಕಲು ಉಣೆಲೊ ಜನನ ಮರಣ ನಿಯತ ಕಾಲಗಳಲಿ ಬರುವವೊ ಕೊನೆ ಮೊದಲುಗಳಿಲ್ಲವು ಈ ಜಗಪ್ರವಾಹಕೆ ತನಗೆ ತಾನೆ ಬೀಳದು ಜಗದಾಖ್ಯ ವೃಕ್ಷವು 130 ತಾಳಿದವನು ಬಾಳುವನೆಂದರಿತು ನಡೆಯೆಲೊ ಗಾಳಿಗುದ್ದಿ ಕರಗಳನ್ನು ನೋಯಿಸದಿರೆಲೊ ಬಾಲನೆಂದು ಅರಿತು ಸತತ ಜ್ಞಾನವ ಗಳಿಸೆಲೊ ನಾಳೆಯ ದಿನ ನಂಬದಂತೆ ಧರ್ಮಗಳಿಸೆಲೊ ಹರಿಯುಕೊಟ್ಟ ಕಾಲದಲ್ಲಿ ಪರರ ರಕ್ಷಿಸೊ ಹರಿಯು ಕೊಡದ ಕಾಲದಲ್ಲಿ ಹರುಷ ಬಿಡದಿರೊ ದೂಷಕರನು ಎಂದಿಗು ನೀ ದ್ವೇಷಿಸದಿರೆಲೊ ಹೇಸಿಗೆಯನು ನಾಲಿಗೆಯಲಿ ತೆಗೆದುಬಿಡುವರೊ ಹಳ್ಳಕೆ ಬಿದ್ದವನಮೇಲೆ ಕಲ್ಲೆಸೆಯದಿರೊ ಟೊಳ್ಳು ಹರಟೆಗಾರನೆದರು ನಿಲ್ಲ ಬೇಡವೊ 140 ಒಳ್ಳೆಯ ಫಲಕೊಡುವ ಕಾರ್ಯಗಳು ಚಿಂತಿಸೊ ಜಳ್ಳು ಹುಲ್ಲಿಗಾಗಿ ಬೆವರು ಸುರಿಸಬೇಡವೊ ಬಿಂದು ಬಿಂದು ಸೇರಿ ಸಿಂಧುವಾಯಿತೊ ಹಿಂದಿನ ಮೊಳೆಯಿಂದ ದೊಡ್ಡ ವೃಕ್ಷವಾಯಿತೊ ಒಂದನು ಇನ್ನೊಂದು ಸೇರಿ ಕೋಟಿಯಾಯಿತೊ ಮಂದಿಗಳಿದನರಿತು ಪುಣ್ಯರಾಶಿ ಗಳಿಸಿರೊ ನೆರಳು ನೀರು ಕೊಟ್ಟ ಜನರ ಮರೆಯ ಬೇಡವೊ ಸರಿಯುತಿರುವ ಮಾರಿ ಮಸಣಿ ಕರೆಯಬೇಡವೊ ಅರಿಯದ ಅಜ್ಞಾನಿಯೊಡನೆ ಸರಸಬೇಡವೊ ತರುಗು ತಿನ್ನುವವನ ಕೇಳಬೇಡ ಹಪ್ಪಳ 150 ದೇಹಿಯೆಂದು ಬಂದವನಿಗೆ ನಾಸ್ತಿಯೆನದಿರೊ ಸಾಹಸವನು ಮಾಡದಿರೊ ಪ್ರಬಲ ಜನರಲಿ ಮೋಹಕೆ ತುತ್ತಾಗದಿರೆಲೊ ಪರಸತಿಯರಲಿ ದೇಹಕೆ ಬಲ ಶುದ್ಧಿ ಕೊಡುವ ನಿಯಮ ಬಿಡದಿರೊ ಭಾಗ್ಯಹೀನ ಬಡವನೆಂದು ಜರಿಯಬೇಡವೊ ಯೋಗ್ಯತೆಯನು ತಿಳಿಯಲು ಬಲು ಸುಲಭವಲ್ಲವೊ ಶ್ಲಾಘ್ಯವಾದ ಮೂಲಿಕೆಗಳನರಿಯೆ ಸುಲಭವೆ ಯೋಗ್ಯತೆಯನುಸರಿಸಿ ಬರುವ ಭಾಗ್ಯ ಬೇರಿದೆ ಖ್ಯಾತಿಗಾಗಿ ಆತ್ಮಸ್ತುತಿಯ ಮಾಡಬೇಡವೊ ಕೋತಿಯಂತೆ ಕುಣಿಯಬೇಡ ಸರಿಸಮರೊಳಗೆ 160 ಮೂತಿ ತಿರುಗಬೇಡ ಪರರ ಹಿತನುಡಿಗಳಿಗೆ ಸೋತ ಹಾಸ್ಯ ಮಾಡಬೇಡ ರಸಿಕ ಜನರಲಿ ಹಿರಿಯರು ಸಂದೇಹಪಡುವ ಮಾರ್ಗ ತ್ಯಜಿಸೆಲೊ ಬರಿಯ ಮಾತನಾಡಿ ಬೆನ್ನು ತಟ್ಟ ಬೇಡವೊ ಪರರ ಹಳ್ಳಕ್ಕಿಳಿಸಿ ಆಳ ನೋಡಬೇಡವೊ ಕರಕೆ ಸಿಕ್ಕಿದಾಗ ಹಲ್ಲು ಕಿರಿಯಬೇಡವೊ ಅರಳು ಹುಡುಕಬೇಡವೊ ಎದೆಯು ಒಡೆಯುವಂತೆ ಸುದ್ದಿ ಪೇಳಬೇಡವೊ ಬೀದಿಯಲಿರುವ ಜನಗಳ ಬೇಸರಿಸಬೇಡವೊ ಬೆದೆಯಲಿರುವ ದುರುಳನನ್ನು ಕೆಣಕಬೇಡವೊ 170 ಊರು ಕುರಿಯ ಕಾದು ಗೌಡನೆನಿಸಬೇಡವೊ ದೂರು ತರುವ ಜನರ ಕ್ಷಣದಿ ನಂಬಬೇಡವೊ ನಾರಿಯ ಸಾಹಸವ ನಂಬಿ ದುಡುಕಬೇಡವೊ ಎರಡು ಕರವು ಸೇರದೆ ಚಪ್ಪಾಳೆಯಾಗದು ಕುರುಡನು ತೋರಿಸುವುದೆಲ್ಲ ಮಾರ್ಗವಾಗದು ಕರಡಿಯು ಮೈಯಪರಚಲದು ಸೌಖ್ಯವಾಗದು ಗುರುಗಳ ಬಿಟ್ಟೋದಲು ಉಪದೇಶವಾಗದು ಹರಿಯಭಕುತಿ ಹರಿಯದಿರಲು ಗಾನವಾಗದು ಬರಿಯ ಸ್ವರಗಳುರುಳಿಸೆ ಕೀರ್ತನೆಯದಾಗದು 180 ಕರದಿ ತಟ್ಟೆ ಹೊಳೆಯುಂತಿರೆ ಪುರಾಣವಾಗದು ಕಿರಿಯ ಜನರ ಗುಣಗಾನವು ಭಜನೆಯಾಗದು ಅಕ್ಕಿಗಾಗಿ ಅಲೆವರೆಲ್ಲ ದಾಸರಾಗರು ಬೆಕ್ಕಿನಂತೆ ಕಣ್ಣು ಮುಚ್ಚಿ ಯತಿಗಳಾಗರು ಚಿಕ್ಕ ಜಿರಳೆ ಮೀಸೆಯಿರಲು ರಾಯರಾಗದು ಚಿಕ್ಕ ಕೊಳೆಯ ಚೌಕ ಧರಿಸೆ ಮಡಿಯದಾಗದು ಕದ್ದು ಅವಿತುಕೊಂಬರೆಲ್ಲ ಗರತಿಯಾಗರು ಮದ್ದು ಮಾಟ ಮಾಡುವವರು ಸುದತಿಯಾಗರು ಶುದ್ಧ ಧೈರ್ಯ ನಡತೆಯಿಂದ ನಿಂದ್ಯರಾಗರು ಬುದ್ಧಿ ಬದುಕು ಹೇಳುವವರು ದ್ವೇಷಿಯಾಗರು 190 ರೀತಿ ನೀತಿಗಳನು ಪರಗೆ ಹೇಳಲು ಸುಲಭ ಮಾತನಾಡಿದಂತೆ ಮಾಡಿ ತೋರುವರಿಹರೇ ತಾತನ ಕಾಲದಲ್ಲಿ ನುಡಿದ ಮಾತಿದಲ್ಲವು ಹೋತನ ಗಳಸ್ತನವಿದಲ್ಲ ಕೂತು ಕೇಳರಿ ಗಾದೆಗಳನು ವೇದವೆಂದು ಪೇಳಲುಚಿತವು ಮಾದರಿ ಅಣುಶಕ್ತಿಯಿಂದೆ ಗಾದೆ ಗಾದೆಗು ಪರಮ ಭಾಗವತರ ಚರಿತೆಯೋದಿ ನೋಡಿರಿ ಅರಿಯಬಹುದು ನುಡಿದ ನೀತಿಸಾರವೆಲ್ಲವ ನಾಡುನುಡಿಗಳೆಂದು ಮರೆಯಬೇಡವೆಂದಿಗು ಪಾಡಿದರೆ ಪ್ರಸನ್ನ ಹರಿಯು ನೀಡುವ ಫಲವ 200
--------------
ವಿದ್ಯಾಪ್ರಸನ್ನತೀರ್ಥರು
4 ಲೋಕನೀತಿ294ಅಂದೇನಿಂದೇನಯ್ಯ ಶ್ರೀಅರವಿಂದನಾಭನ ಹಗೆಯವ ಅಸುರಎಂದಿಗೆ ಮತಿ ಕವಲಿಲ್ಲದೆ ಹರಿಪದಹೊಂದಿದಗೆ ಮುಕ್ತಿಯವಸರ ಪ.ಅಂದಿಗೆ ಹರಿಮಹಿಮೆಗಳನ್ನು ಆನಂದದಿಂದ ಕೇಳದವ ದ್ವೇಷಿಇಂದಿಗೆ ಹರಿಕಥೆ ತಾತ್ವಿಕ ಜನರನುನಿಂದಿಸುವವನೆ ನಿಜದ್ವೇಷಿ 1ಸರ್ವಹ ಕೃಷ್ಣಾಕೃತಿಗೆ ವೈರ್ಯಾಗಿ ಬಹುಗರ್ವಿಪ ಕಂಸನು ಅತಿತಾಮಸಉರ್ವಿಲಿ ನರಹರಿ ಚರಣವರ್ಚಿಸದೆಶರ್ವಸರ್ವೋತ್ತಮನೆಂಬವತಾಮಸ2ವಾಸುದೇವನ ಪಾಶದಿ ಬಿಗಿಸುವೆನೆಂದುಆಶಿಸಿ ಕೆಟ್ಟ ಕೌರವ ಕುಮತಿದೋಷ ಧರ್ಮವನೆಲ್ಲ ಸರಿಮಾಡಿ ಶಾಕ್ತನಾಗ್ಯಾಸುರಿ[ಯ] ಪೂಜಿಪ ಹೊಲೆ ಕುಮತಿ 3ರುಕ್ಮಿಣಿ ದೇವಿಯೆ ಲಕ್ಷ್ಮಿಯೆಂದು ತಿಳಿಯದರುಕ್ಮನು ಮದಸೊಕ್ಕಿದ ಪಾಪಿಲೆಕ್ಕವರಿಯದೆ ಜೀವೇಶರು ಸಮರೆಂದುಲೆಕ್ಕಿಸುವವ ನರರೊಳು ಪಾಪಿ 4ಕೃತಕ ಹಕ್ಕಿಯನೇರಿ ತಾ ವಾಸುದೇವನೆಂದುಅತಿಕ್ಲೇಶವುಂಡ ಪೌಂಡ್ರಕ ಕಲಿಯುಸಕಳ ಜಗದೊಡೆಯ ಪ್ರಸನ್ವೆಂಕಟೇಶನಭೃತ್ಯನಾಗದೆಯೆ ನಾನೆಂದವ ಕಲಿಯು 5
--------------
ಪ್ರಸನ್ನವೆಂಕಟದಾಸರು
ಆಗಮವ ತಮನೊಯ್ಯೆ | ಅವನ ಪಾತಾಳದಲಿ |ತಾಗಿದಲೆವರಿದು ವೇದಾವಳಿಗಳಾ |ಆಗ ತಂದ್ದತ್ತ ಮಚ್ಛಾಮಾರನೆ ವುದಯವಾಗುತಿದೆವುಪ್ಪುವಡಿಸೊ ಪಹರಿಯ ಭಾಗೀರಥಿ ಪಿತನೆ |ಭಾಗವತ ಜನಪ್ರಿಯನೆ |ಯೊಗಧೆಯ ವಪ್ಪುವಡಿಸೊ ಹರಿಯೆ | ಭಾಗೀರಥಿ ಪಿತನೆ 1ದೇವಾಸುರರು ಶಿಂದ್ಧು | ಮಥನದಲಿ ಗಿರಿ ಮುಳುಗೆ |ದೆವಾ ರಾಕ್ಷಿಸುತಾ ಕ್ಷಿಶನ ಉಳಿದೂ |ಆನೊಯಲು ವಾಗಿರಿಯ | ನಂತ ಕೂರ್ಮನೆ ವುದಯವಾಗುತಿದೆವಪ್ಪುವಡಿಸೊ ಹರಿಯೆ 2ಭೂತಳವ ಕಾದ್ದೊಯಿದ | ಹರಂಣ್ಯಕ್ಷನೆಂಬ ನರಪಾತಳದ |ಲೊರಶಿನಿಲಿಶಿದ ಜಗಂಗಳಾ | ಖ್ಯಾತಿ ಪಡೆದ ಪ್ರತಿಮ |ವರಹಾರೂಶಪನೆ ಸುಪ್ರಭಾತದಲಿವುಪ್ಪವಡಿಸೊ ಹರಿಯೇ 3ಭೂದೇವದೆವರನು | ಭಾಜಿಸುವ ಶಿವುವ ಪ್ರಹ್ಲಾದಗಾ | ಗಾಹವನುಕವಲುಗಿಶಿ ಉಗದೆ | ತೂದ ಕರುಳಿನಮಾಲೆ |ಯಪ್ಪನರಶಿಂಹ ಕಾರುಣೋದಯದೊ ವಪ್ಪವಡಿಸೊ ಹರಿಯೆ 4ಬರಿ ಭಕತಿಯಿಂದ ಮೊರಡಿನೆಲನ ಮಾತು ಕೂಡೆ |ನೆಲ ನಭನೆ ನೀರಡಿಯ ಮಾಡಿ ಬೆಳೆದೆ |ನಳಿನ ಜಾಂಡವನೊಡದೆ | ವಾಮನ ತ್ರಿವಿಕ್ರಮನೆಬೆಳಗಾಯಿತುಪ್ಪವಡಿಸೋಹರಿಯೆ 5ಕಾತ್ರ್ತವಿಯ್ರ್ಯಾರ್ಜುನನ ಕಡಿದು ಕ್ಷತ್ರಿಯ ಕುಮುದು |ಮಾತ್ರ್ತಂಡನಾದೆ ಮಾತೆಯ ಮಾತಿಗೆ ಆತ್ರ್ತಜನಬಂಧುವೆ | ಪರಶುರಾಮನೆ ಬ್ರಾಹ್ಮಿ ಮೂಹೋರ್ತದಲ್ಲಿವುಪ್ಪವಡಿಸೊ ಹರಿಯೆ 6ಪಂಪಾದಿಪನವರದ | ಅಮರಪತಿಯಾದ ಷ್ಕಂಪ್ಪರಾವಣನಗೆಲಿದವನನುಜಗೆ ಸಂತ್ಪಾರಂಪರೆಯಯಿತ್ತರಘುರಾಮದೆಶೆ | ಕೆಂಪಾಯಿತುಪ್ಪ ವಡಿಸೊಹರಿಯೆ 7ಯಿಂದು ರವಿಕುಲಗಳಲಿ | ಜನಿಶಿದಮಜರಾಜ| ಬೃಂದಾರಿಯಾಗಿಭೂಭರವಿಳಿಪಿದೆ | ನಂದನಂದನ ಕೃಷ್ಣ |ಆಂಗಯಗರಗಾಣ ಬಂದವಿದವುಪ್ಪ ವಡಿಸೊ ಹರಿಯೇ 8ತ್ರಿಪುರದಮಕಾರಿಗಳ | ಸತಿಯರಿಗೆವುಪಸತಿಗಳುಪದೆಶಗಳ ತೊಟ್ಟುಭ್ರಮಗೊಳಿಶಿದುತ್ರಿಪುರ ಹತಗಂಬಾದೆ |ತ್ರಿಪುರ ಸಾಧಕ ಜಾದ್ಕ ತಪ ನವಿದೆವುಪ್ಪವಡಿಸೊ ಹರಿಯೆ9ಆಶಿ ಖಾಡವಿಡಿದಾಶ್ವವೇರಿ ಕೋಪದಿ ವಿಷ್ಣು |ಯಶಶಿನಲಿ ಕಲ್ಕ್ಯಾವ | ತಾರನಾದೆ |ಕುಶಿರಿದರಿದಶಸುವೇಪದಶ್ಯೂಗಳಗೆಲಿದೆ | ಬಿಶಿಲಾಯಿತುಪ್ಪವಡಿಸೊ ಹರಿಯೆ 10ಯಿಂದ ಚಂದ್ದ್ರ್ಯಾದಿಗಳ್ ಬ್ರಹ್ಮ ರುದ್ದ್ರಾದಿಗಳುಪೇಂದ್ರಜಯ |ಜಯಯೆನುತ ಬಂದೈಧರೆ | ವೀಂದ್ದ್ರವಾಹನ ಪುರಂದರವಿಠಲಸೌಭಾಗ್ಯ ಸಾಂದ್ದ್ರನಿಧಿ ವುಪ್ಪವಡಿಸೊ ಹರಿಯೆ 11
--------------
ಪುರಂದರದಾಸರು
ಕದವನಿಕ್ಕಿದಳಿದೆಕೊ ಗಯ್ಯಾಳಿ ಮೂಳಿ ಪ.ಕದವನಿಕ್ಕಿದಳಿದಕೊ ಚಿಲಕವಲ್ಲಾಡುತಿದೆ |ಒದಗಿದ ಪಾಪವು ಹೊರಗೆ ಹೋದೀತೆಂದು ಅ.ಪಭಾರತ - ರಾಮಾಯಣ ಪಂಚರಾತ್ರಾಗಮ |ಸಾರತತ್ವದ ಬಿಂದು ಕಿವಿಗೆ ಬಿದ್ದೀತೆಂದು 1ಹರಿಯ ಪಾದಾಂಬುಜಯುಗಳವ ನೆನೆವ ಭ - |ಕ್ತರ ಪಾದದರಜ ಒಳಗೆ ಬಿದ್ದೀತೆಂದು 2ಮಂಗಳ ಮೂರುತಿ ಪುರಂದರವಿಠಲನ |ತುಂಗವಿಕ್ರಮಪಾದ ಅಂಗಳ ಪೊಕ್ಕೀತೆಂದು 3
--------------
ಪುರಂದರದಾಸರು
ನಾರಾಯಣ ಪಂಜರನಾರಾಯಣಾಯ ನಮೊ ನಾರಾಯಣಾಯ ನಮೊನಾರಾಯಣಾಯ ನಮೊ ನಾರಾಯಣನಾರದರ ಮುಖದಿಂದ ನರಕಸ್ಥರೆಬ್ಬಿಸಿದೆನಾರಾಯಣಾಯ ನಮೊ ನಾರಾಯಣ ಪ.ಮತ್ತಕರಿಯವಸಾನಕಂಜಿ ಹರಿಯೆ ನೀ ಕಾಯ್ದೆ *ಭಕ್ತ ಪ್ರಹ್ಲಾದನೇಕಾಂಗ ನಿಷ್ಠೆಗೆ ಒಲಿದೆ 1ಪೃಥುವಿಗಳ್ಳನನಿರಿದು ಸತಿಯನುದ್ಧರಿಸಿದೆಪೃಥುಚಕ್ರವರ್ತಿಗೆ ಪ್ರತ್ಯಕ್ಷನಾಗ್ಯೊಲಿದೆ2ಶೂಲಿಯನು ಬೆಂಬತ್ತಿ ಸುಡುವೆನೆಂಬನ ಸುಟ್ಟೆಶೀಲವಿಡಿದಂಬರೀಷನ ಮತವ ಗೆಲಿಸಿದೆಯೊ 3ಮಕರರೂಪದಿ ಸತ್ಯವ್ರತಗೆ ತತ್ವವನೊರೆದೆಮುಖದಿಶ್ರುತಿಪಿಡಿತಂದು ವಾರಿಜಾಸನಗಿತ್ತೆ4ಪುರುಹೂತಗಖಿಳ ಪರಮಾರ್ಥವನು ಅರುಹಿದೆಸುರಪನ್ನ ಭಯವಟ್ಟಿ ಧ್ರುವಗೆ ಧ್ರುವಪದವಿತ್ತ್ತ್ತೆ 5ಮಹಾಪಾಪನಿರತ ಅಜಾಮಿಳನಿಷ್ಟ ಕರಿಸಿದೆಮಹಿದಾಸನಾಗಿ ತಾಯಿಗೆ ತತ್ವವನು ಪೇಳ್ದೆ 6ಮುನಿ ಕಾಲಲೊದೆಯೆ ಎದ್ದು ಕರುಣಿಸಿದೆ ಕರುಣಾನಿಧಿಮುನಿವೆಂಗಳರೆಯಾಗೆ ಪದಸೋಂಕಿಸ್ಯೆತ್ತಿದೆಯೊ 7ಮಖವ ರಕ್ಷಿಸಿ ರಾಜಋಷಿಗಭೀಷ್ಟೆಯನಿತ್ತೆಮಕರಧ್ವಜಾರಿ ಧನು ಮುರಿದವನಿಜೇಶ8ಶುಭಕಪೀಶಗೆ ಅಭಯವರವಿತ್ತು ಕೈಪಿಡಿದೆಶುಭಕಂಠನಂಜಿಕೆಯ ಹನುಮ ಹೇಳಲು ಕಳೆದೆ 9ಶರಣು ಹೊಕ್ಕಿರೆ ವಿಭೀಷಣಗರಸುತನ ಕೊಟ್ಟೆಶರದಿ ರಾವಣನರಿದು ಸುರರ ಸಂಕಟ ಹರಿದೆ 10ಅನುಜನಗ್ನಿಗೆÉ ಧುಮುಕಲವಧಿ ಮೀರದೆ ಪೊರೆದೆಅನಿಮಿಷರ ನಿಕರಕತಿ ಆಹ್ಲಾದ ಬೆಳೆಯಿಸಿದೆ 11ಉರಿನುಂಗಿ ಗಿರಿನೆಗಹಿ ವ್ರಜವ ಪಾಲನೆ ಮಾಡ್ಡೆಉರಗನೆಳೆತಂದವನ ರಾಣಿಯರ ಸ್ತುತಿಗೊಲಿದೆ 12ಕ್ರತುನಾರಿಯರನ್ನ ಸವಿದುಂಡು ಸುಖವಿತ್ತೆಕ್ರತುಭೋಕ್ತø ಕ್ರತುಗಾತ್ರ ಕ್ರತುಪಾಲ ಕ್ರತುಶೀಲ13ಗೋಪ ಸ್ತ್ರೀಯರ ಕುಚದಿ ನ್ಯಸ್ತ ಚರಣಾಬ್ಜಯುಗಗೋಪೀ ಜನಜಾರನವನೀತದಧಿಚೋರ14ವಂಶಗಾಯನ ಪ್ರಿಯ ವಿಧುಕುಲೋದ್ಭವ ಕೃಷ್ಣವಂಶವರ್ಧಕಸುಜನವಂಶಮರ್ದಕ ಕುಜನ15ಅಕ್ರೂರವಂದ್ಯಕಂಸಾರಿಕುಬ್ಜಾರಮಣಆಕ್ರಂದಿಸಿದ ತಂದೆ ತಾಯಿಯರ ಭಯವಳಿದೆ 16ಅದಿತಿ ಕುಂಡಲದಾತ ಭಗದತ್ತವರದನೆಅಧಿಪತಿಗಳಧಿಪತಿಯೆ ಭೈಷ್ಮಿ ಸತ್ಯಾರಮಣ 17ಶಂಭುವಂದಿತಪಾದ ಸಾಂದೀಪೋದ್ಧವ ಪ್ರಿಯಶಂಬರಾರಿಯ ಜನಕ ಯಜÕಪೂಜಾಗ್ರಣಿಯೆ 18ಪಾಂಡವರ ಪ್ರಾಣ ದ್ರೌಪದಿ ಮಾನರಕ್ಷಕನೆಪೌಂಡ್ರಕಶೃಗಾಲಕೌರವ ಭೂಮಿ ಭಾರಹರ19ಅಭಿಮನ್ಯುನಾತ್ಮಜನ ಬಸುರೊಳಗೆ ಸಲಹಿದೆಯೊಅಭಯದಲಿ ಪಾಂಡವರ ಸಂತತಿಯ ಬೆಳೆಸಿದೆಯೊ 20ಗರುಡ ಗಂಧರ್ವಕಿನ್ನರಗೀತ ಸಂಪ್ರೀತಗರುವೆ ಲಕುಮಿಯ ಕೂಡ ಕ್ರೀಡಾದ್ರಿಯಲ್ಲಿರುವೆ 21ಶಂಖ ಚಕ್ರ ಗದಾಬ್ಜ ಶ್ರೀವತ್ಸ ಶೋಭಿತನೆಸಂಖ್ಯೆರಹಿತಾಭರಣ ಭೂಷಣಾವ್ಯಾಕೃತನೆ 22ಮೀನ ಕಶ್ಯಪ ಪೋತ್ರಿ ನೃಹರಿ ವಾಮನ ಭಾರ್ಗ್ವಮಾನವಪ ಕೃಷ್ಣಬುದ್ಧಕಲ್ಕಿ ಕಪಿಲಾತ್ರೇಯ23ಸ್ವಾಮಿ ತೀರ್ಥಾಂಬು ಅಂತರ್ಗಂಗಾಭಿಷಿಕ್ತಸ್ವಾಮಿ ಭೂವರಾಹ ವೈಕುಂಠನಾಥ ವಿಶ್ವೇಶ 24ಷಟ್ಕೋಟಿ ತೀರ್ಥಯುತಚರಣ ಶ್ರೀಭೂರಮಣಷಟ್ಕಮಲನಿಲಯ ಚಿನ್ಮಯ ಚಿದ್ಗುಣಾರ್ಣವನೆ 25ಭಕ್ತಾಭಿಮಾನಿ ಭವದೂರ ಭಕ್ತರ ಪ್ರಭುವೆಭಕ್ತವತ್ಸಲ ಕೃಪಾಂಬುಧಿಪರಾತ್ಪರಕೃಷ್ಣ26ವಸುಧೆವೈಕುಂಠ ಮಂದಿರವಾಸ ಶ್ರೀನಿವಾಸವಸುಪ್ರೀತ ವಸುಕರ್ತ ವಸುದಾತ ವಸುಪೂರ್ಣ 27ಆದಿನಾಥÀಪ್ರಮೇಯಾದಿ ಪುರುಷೋತ್ತಮನೆಆದಿಮಧ್ಯಾಂತ ರಹಿತಾದ್ಯಮೂರುತಿ ವಿಷ್ಣು 28ಬದುಕಿಪ್ಯಾದರೆ ನಿನ್ನ ಹೊಗಳಿಕೆಲಿ ಬದುಕಿಸೈಬುಧರ ಸಂಗತಿ ಕೊಟ್ಟು ಮನ್ನಿಸೆನ್ನನು ತಂದೆ 29ಕಿವಿಯಲ್ಲಿ ಮುಖದಲ್ಲಿ ನಾಮಾಮೃತವÀ ತುಂಬುಕವಲಾಗದೆ ಮನೋಳಿ ಮಿಗೆ ಪದಾಬ್ಜವ ತೋರು 30ಭವಭವದಿ ತೊಳತೊಳಲಿ ಬಳಬಳಲಿ ಬಲುದಣಿದೆಭವವಿರಿಂಚ್ಯಾದಿ ಕರಿಗಭಯದನೆ ನೀ ಸಲಹು31ನೀ ತಾಯಿ ನೀ ತಂದೆ ನೀ ಬಂಧು ನೀ ಬಳಗನೀತಿಗಳನರಿಯೆ ನಿನ್ನಯ ನಾಮವೆ ಗತಿಯು 32ತನು ನೆಚ್ಚಿಕಿಲ್ಲ ಚಿತ್ತದ ಗತಿಯು ನೀಟಿಲ್ಲತನಯತರುಣಿ ಕೊನೆಯ ಸಂಗತಿಗೆ ಆರಿಲ್ಲ33ದೋಷಗಳನರಸದೆನ್ನನು ಸಾಕು ಸಾಕಯ್ಯದಾಸಪಾಲಕ ದೇವ ಡಿಂಗರರ ಸಂಜೀವ 34ನಿನ್ನ ಮೂರುತಿ ನೋಡಿ ನೋಡಿ ನೋಡಿ ನೋಡಿನಿನ್ನ ಬಿಂಬವನೆಂದು ಕಂಡು ಕೊಂಡಾಡುವೆನೊ 35ನಿನ್ನ ಮೈ ಬೆಮರ್ಹೊಳೆಯಲ್ಲೆನ್ನ ಮುಳುಗಿಸಿನಿನ್ನವ ನಾ ನಿನ್ನವರ ಕೈಲಿ ಕೊಡು ಗಡಗಡ 36ವಾರಿಯಲಿ ಸ್ಥಳದಲ್ಲಿ ಅಡವಿಲೆಲ್ಲೆಲ್ಲಿ ಕಾಯೊವಾರಾಹ ವಾಮನ ನೃಸಿಂಹ ಕೇಶವ ಸ್ವಾಮಿ 37ಸತ್ಕುಲೋದ್ಭವನಾದೆ ಸನ್ಮಾರ್ಗರಿಯಲಿಲ್ಲಸತ್ಕರ್ಮಗಳಿಗೆ ಬಹಿಷ್ಕøತನಾಗಿ ಬಾಳುತಿಹೆ 38ಒಂದು ಜಾವದ ತಪ್ಪನೆಂದೆಂದಿಗುಣಲಾರೆವಂದಿಸುವೆ ಸಾಷ್ಟಾಂಗತ್ರಾಹಿತ್ರಾಹಿಪಾಹಿತ್ರಾಹಿ39ಮಧ್ವೇಶ ಮಧ್ವಪ್ರಿಯ ಮಧ್ವಮತ ಪ್ರತಿಪಾಲಮಧ್ವಗುರು ಸ್ತುತ್ಯ ಮಧ್ವಾರ್ಚಿತ ಪದಾಬ್ಜಹರಿ40ಏನರಿಯೆನೇನರಿಯೆ ನೀನೆ ನೀಗೆಲೆಲೆಎನ್ನಘವ್ರಜ ಪ್ರಸನ್ನವೆಂಕಟ ಕೃಷ್ಣ 41
--------------
ಪ್ರಸನ್ನವೆಂಕಟದಾಸರು
ಬಗಳ ಸ್ಮರಣೆಯಲ್ಲಿ ಫಲವು ಸಂಶಯವೆಂಬುವನ ಬಾಯನೀಗ ಸೀಳಬೇಡವೆಬಗೆಯುತ್ತಂ ತನಗೆ ತಾನಾಗಲಾಗಿ ಬರೆಯನೀಗಬ್ರಷ್ಟಗೆ ಬರೆಯಬೇಡವೆಪನೆನಸದ ಮುನ್ನಕಾಮ್ಯನಿಜವೆತಾನಾಗಲು ನೀಚನ ನಾಲಗೆಯ ಕೀಳಬೇಡವೆದಿನದಿನಕೆ ಸಂಪತ್ತು ದಟ್ಟವಾಗಿ ಹೆಚ್ಚುತಿರಲು ದಿಂಡೆಯ-ವನದವಡೆ ದವಡೆ ತಿವಿಯಬಾರದೆ1ಕವಲಿಲ್ಲದಲೆ ಕಲ್ಯಾಣ ತನಗಾಗಲು ಕುಹಕಿಕಿವಿಯ ಕೊಯ್ಯಬೇಡವೆಯವೆಯ ಮಾತ್ರ ಅಷ್ಟರೊಳು ಯೋಚಿಸಿದ್ದು ಸಿ-ದ್ಧವಾದೆ ದುರ್ಜನನ ಎದೆಯನೀಗ ನಿರ್ದಯದಿ ಒದೆಯ ಬೇಡವೆ2ಆವುದನ್ನೆ ಚಿಂತಿಸಲು ಆ ಕ್ಷಣದಿ ಆಗಲಾಗಿ ಅದನು ತೆಗಳು-ವವನ ಮೂಗ ಕೊರೆಯಬೇಡವೆದೇವ ದೇವ ಚಿದಾನಂದ ಬಗಳೆ ಕರು-ಣವಿರೆ ದಬಕು ದಬಕು ಎಂದು ನನಗೆ ಇಕ್ಕ ಬೇಡುವೆ3
--------------
ಚಿದಾನಂದ ಅವಧೂತರು
ಬಂದೆಯಾ ಪರಿಣಾಮದಿ ನಿನ್ನಬಂಧು ಬಳಗವನೆಲ್ಲ ಬಿಟ್ಟು ಸನ್ಮಾರ್ಗದಿ ಪಸಂಚೀತ ಪ್ರಾರಬ್ಧ ಕರ್ಮಂಗಳನೆಲ್ಲಕಿಂಚಿತು ಮಾಡಿ ಸಂಕೋಲೆಯ ಹಾಕಿ ||ಮಿಂಚುವ ಧನ - ಪುತ್ರ ದಾರೇಷಣಂಗಳವಂಚಿಸಿ ಕವಲು ದಾರಿಯ ಬಿಟ್ಟು ಮಾರ್ಗದಿ 1ಕಾಮವ ಖಂಡಿಸಿ ದ್ರೋಹವ ದಂಡಿಸಿನಾಮರೂಪ ಕರ್ಮಂಗಳ ನಿಂದಿಸಿ ||ತಾಮಸಕರ್ಮನಡತೆಯ ತಗ್ಗಿಸಿ ನಿರ್ನಾಮ ಮಾಡಿ ಮದ-ಮತ್ಸರಂಗಳನೀಗಿ2ಅಷ್ಟಭೋಗಂಗಳ ನಷ್ಟಂಗಳ ಮಾಡಿಅಷ್ಟೈಶ್ಚರ್ಯವ ಮಟ್ಟು ಮಾಡಿ ||ಅಷ್ಟ ಪ್ರಕೃತಿಗಳ ಕುಟ್ಟಿ ಕೆಡಕಿ ಬಹಳನಷ್ಟತುಷ್ಟಿಗಳಲ್ಲಿ ದೃಷ್ಟಿಯೇನಿಲ್ಲದೆ 3ಸ್ಥೂಲ ಸೂಕ್ಷ್ಮ ಕಾರಣ ದೇಹಂಗಳನೆಲ್ಲಬೀಳುಗೆಡಹಿ ಪಂಚಭೂತಂಗಳ ||ಪಾಳು ಮಾಡಿ ಪಂಚ ಪಂಚ ಇಂದ್ರಿಯಗಳಕೋಳಕೆ ತಗುಲಿಸಿ ಕೊನಬುಗಾರನಾಗಿ 4ಹೊಳೆವ ಪ್ರಪಂಚದ ಬಲೆಯ ಬೀಸಿ ಸಂಗ-ಡಲೆ ಸಾಗಿ ಬರುತಿಹ ದಾರಿಯೊಳು ||ಒಲಿದು ಮುಕ್ತಿಯನೀವ ಪುರಂದರವಿಠಲನುಬಲವನಿತ್ತುದರಿಂದೆ ನಾನು ನೀನೆನ್ನದೆ 5
--------------
ಪುರಂದರದಾಸರು
ಮರುಳಾಟವ್ಯಾಕೆ ಮನುಜಗೆ ಮರುಳಾಟವ್ಯಾಕೆಹರಿಭಕ್ತನಲ್ಲದವಗೆ ಹಲವಂಗವ್ಯಾಕೆ ಪ.ಮೃತ್ತಿಕಾಶೌಚವಿಲ್ಲದೆ ಮತ್ತೆ ಸ್ನಾನ ಜಪವ್ಯಾಕೆಹತ್ತು ಕಟ್ಟದವಗೆ ಅಗ್ನಿಹೋತ್ರವ್ಯಾತಕೆತೊತ್ತುಬಡಕಗೆ ಬಹು ತತ್ವವಿಚಾರವ್ಯಾಕೆಕರ್ತಕೃಷ್ಣನ್ನೊಪ್ಪದ ವಿದ್ವತ್ತವ್ಯಾತಕೆ1ಹಸಿವೆತೃಷೆತಾಳದವಗೆಹುಸಿವೈರಾಗ್ಯವ್ಯಾತಕೆವಿಷಮ ಚಿತ್ತಗೆ ಪರರ ಕುಶಲ ಬಯಕ್ಯಾಕೆದಶ ಜಪ ಮಾಡಲಾರ ಮುಸುಕಿನ ಡಂಬವ್ಯಾಕೆಕುಶಶಾಯಿಗರ್ಪಿಸದ ಅಶನವ್ಯಾತಕೆ 2ಮೂಲಮಂತ್ರವರಿಯದ ಮೇಲೆ ದೇವಾರ್ಚನೆ ಯಾಕೆಸಾಲಿಗ್ರಾಮವಿಲ್ಲದ ತೀರ್ಥವ್ಯಾತಕೆಸೂಳೆಗಾರಗೆ ತುಳಸಿಮಾಲೆ ಶೃಂಗಾರವ್ಯಾಕೆಮೇಲೆ ಮೇಲೆ ಹರಿಯೆನ್ನದ ನಾಲಿಗ್ಯಾತಕೆ 3ಊಧ್ರ್ವಪುಂಡ್ರಿಲ್ಲದಾಸ್ಯ ತಿದ್ದಿನೋಡಬೇಕ್ಯಾಕೆಶುದ್ಧ ಸಾತ್ವಿಕವಲ್ಲದ ಬುದ್ಧಿ ಯಾತಕೆಕದ್ದು ಹೊಟ್ಟೆ ಹೊರೆವವಗೆ ಸಿದ್ಧ ಶೀಲವೃತ್ತಿಯಾತಕೆಮಧ್ವ ಮತವÀ ಬಿಟ್ಟಿತರ ಪದ್ಧತ್ಯಾತಕೆ 4ಕಂಡ ನಾರೇರಿಚ್ಛೈಸುವ ಲೆಂಡಗೆ ಪುರಾಣವ್ಯಾಕೆಭಂಡು ಮಾತಿನ ಕವಿತ್ವ ಪಾಂಡಿತ್ಯಾತಕೆಕುಂಡಲಿಪ್ರಸನ್ವೆಂಕಟ ಮಂಡಲೇಶನ ಶ್ರೀಪಾದಪುಂಡರೀಕಬಿಟ್ಟವನ ವಿತಂಡವ್ಯಾತಕೆ5
--------------
ಪ್ರಸನ್ನವೆಂಕಟದಾಸರು
ಶ್ರೀ ತಿರುವಳ್ಳೂರ್ ಶ್ರೀ ವೀರರಾಘವ ಸ್ತೋತ್ರ51ವೀರರಾಘವ ಸ್ವಾಮಿಸಿರಿಕನಕವಲ್ಲೀಶಶರಣಾದೆಪೊರೆಎನ್ನ ಕರುಣಾ ಸಮುದ್ರಪಮರುತಾದಿ ಸುರಸೇವ್ಯ ಉರುಗುಣಾರ್ಣವ ದೋಷದೂರ ಸ್ರಷ್ಟಾಪಾತ ಪರಮೈಕ ಈಶ ಅ ಪಜಗಜ್ಜನ್ಮಾದ್ಯಷ್ಟಕ ಸುಕತೇ ನೀನೇವೆನಿಗಮೈಕವೇದ್ಯನೇ ಏಕಾತ್ಮ ಭೂಮನ್ಗೋಗಣಗಳೆಲ್ಲವೂ ಪೊಗುಳುತಿವೆ ನಿನ್ನನ್ನೇಏಕ ವಿಧದಲ್ಲಿ ಇದಕೆ ಸಂದೇಹವಿಲ್ಲ 1ನಿವ್ರ್ಯಾಜ ಭಕ್ತನ ಆತಿಥ್ಯವನು ಸ್ವೀಕರಿಸಿಸತ್ಯವಾಗಿ ವರವ ಈವಿ ಭಕ್ತರಿಗೆ ಎಂದಿಸತ್ಯಲೋಕಾಧಿಪ ಪದಾರ್ಹನನುಯಾಯಿಗಳಭೃತ್ಯನಾದೆನ್ನಪೊರೆಉದ್ಯಾಕರ್Àತೇಜ2ನೀನಾಗಿಯೇ ನೀನು ನಿನ್ನ ಸ್ಥಳಕೆ ಕರೆನಿನ್ನದರುಶನವಿತ್ತಿ ನಿನಗೇವೆ ನಾ ಶರಣುಮನೋವಾಕ್ ಕಾಯದ ಎನ್ನ ಸರ್ವಕರ್ಮಗಳೊಪ್ಪಿಘನದಯವ ಬೀರೊ ' ಪ್ರಸನ್ನ ಶ್ರೀನಿವಾಸ&ಡಿsquo;3
--------------
ಪ್ರಸನ್ನ ಶ್ರೀನಿವಾಸದಾಸರು
ಸಂತರವರೆ ನೋಡಿರೈ ಕೈವಲ್ಯದಸಂತರವರೆ ನೋಡಿರೈ ಪ.ಸತ್ಯ ರಮೇಶನ ಸೃಷ್ಟಿಯೆ ಸತ್ಯಹತ್ತೆರಡೈದು ತತ್ವವೆ ಸತ್ಯಸತ್ಯಾತ್ಮೇಶರ ಭೇದವೆ ಸತ್ಯಸತ್ಯಾತ್ಮಕನ ಪದ ಸತ್ಯೆನುವ 1ಹರಿಭಕ್ತರ ಕಂಡಪ್ಪುತ ನಿರುತಹರಿಸಲ್ಲಾಪ ಕಥಾಶ್ರಯ ಬಲಿದಹರಿಭೃತ್ಯರಿಗನ್ನೋದಕನೀವರುಹರಿಸಂಕೀರ್ತನೆ ಮನಮನೆಯವರು2ಆನಂದಕೆ ಕವಲಿಲ್ಲದ ಸುಖದು:ಖಾನಂದವನನುಭವಿಸಿ ಬಿಡುವರುಆನಂದಮುನಿಯ ಮತಪ್ರಿಯನಿತ್ಯಆನಂದ ಪ್ರಸನ್ವೆಂಕಟಪತಿಯವರು 3
--------------
ಪ್ರಸನ್ನವೆಂಕಟದಾಸರು
ಸುವ್ವಿ ಸುವ್ವಾಲಿ |ಸುವ್ವಿ ಸಾಧ್ವಿಯರು ರಾಘವೇಂದ್ರರ ಪಾಡಿ ಪಅಂದಿನ ಕಾಲದ ಮಧ್ವಶಾಸ್ತ್ರವ ಮನಕೆ ತಂದು |ಅಂದದಿ ಟಿಪ್ಪಣಿ ಮಾಡಿದ ದೇವರಾರು | ಸುವ್ವಿ ||ಅಂದು ವಾದಿಸುವ ಜನರನ್ನು ಬಾಯಿ ಮುಚ್ಚಿಸಿದ |ಚಂದಿರ ವದನೆ ಈತನಮ್ಮ ಗುರುವು | ಸುವ್ವಿ 1ಇವರ ಚರಿತೆಯನ್ನು ತೋರಿದಷ್ಟು ತುತಿಸುವೆ |ಕಿವಿಗೊಟ್ಟು ಕೇಳುವದುಬುಧಜನರು | ಸುವ್ವಿ ||ಪವನಾಂಶರಿವರು ಕವಲಿಲ್ಲ ಖ್ಯಾತರಾಗಿ |ಅವನಿಯ ಸುರರಿಂದರ್ಚನೆಗೊಂಗುವರು | ಸುವ್ವಿ 2ಅಷ್ಟಾಕ್ಷರ ಮಂತ್ರವನು ತಪ್ಪದಲೆ ನಿತ್ಯವಾಗಿ |ನಿಷ್ಠೆಯಿಂದ ಭಜಿಸಲು ಭೂತ ಭಯವು | ಸುವ್ವಿ ||ಕುಷ್ಠರೋಗ ಕ್ಷಯ ಪಾಂಡು ಜ್ವರ ಸನ್ನಿ ಮೊದಲಾದ |ಅಷ್ಟುಪದ್ರವಾಕ್ಷಣ ಬಿಟ್ಟು ಓಡುವುದು | ಸುವ್ವಿ 3ಮೃತ್ತಿಕೆಮಾಲೆಅಂಗಾರದಿವ್ಯ ಮಂತ್ರಾಕ್ಷತೆಯು |ಹತ್ತಿರವಿರಲು ಕ್ಲೇಶವ ಲೇಶ ಕಾಣರು | ಸುವ್ವಿ ||ಎತ್ತ ಹೋದರು ಜನರಿಗೆ ಜಯಪ್ರದ ತೋರುವದು |ಕತ್ತಲಿಲ್ಲ ಶತಸಿದ್ಧ ಮತ್ತೇನುಕೇಳಿ| ಸುವ್ವಿ 4ಪಂಡಿತರು ಮೊದಲಾಗಿಹಸ್ತಿಉಷ್ಟ್ರ ಕುದುರೆಯ |ಹಿಂಡುಗಳು ತೃಷೆಯಿಂದ ಬಳಲುತಿರೆ | ಸುವ್ವಿ ||ದಂಡ ಜಗತಿಗೂರಿ ತೋಯ ತೆಗಿಸಿಯವನೀ |ಮಂಡಲದೊಳಗೆ ಪೆಸರಾದರಿವರು | ಸುವ್ವಿ 5ಕಟ್ಟಲಿಯ ಭತ್ತದೊಳು ಭೂಪದಳಯುಕ್ತ ಬರ |ಲಿಟ್ಟುಕೊಂಡು ಉಣಿಸಿ ಉತ್ತಮ ವರವ | ಸುವ್ವಿ ||ಕೊಟ್ಟು ಕಳಿಸಿದ ಮೇಲೆ ಆವು ಕೊಂಚಿಯಾಗಲಿಲ್ಲ |ಗಟ್ಟಿ ಸಂಕಲ್ಪರಿವರು ಮುನಿವರರು | ಸುವ್ವಿ 6ವಿಪ್ರರೆಲ್ಲರು ಹೇಳಿಸಿ ಕಟ್ಟಿಸಿದ ಸದನವ |ಥಟ್ಟನೆ ಕೆಡಿಸಿ ಭೂಪ ಮೆಚ್ಚುವಂದದಿ | ಸುವ್ವಿ ||ನೆಪ್ಪು ಧರೆಗಾಗಲೆಂದುಗುರುಸುಧೀಂದ್ರ ಕುಮಾರ |ಸರ್ಪನ ತೋರಿಸಿ ಸುಪ್ರಖ್ಯಾತರಾದರು | ಸುವ್ವಿ 7ದ್ವಿಜರ ಸ್ತೋಮವು ಬಾಯಿ ಬಿಡುತಿರೆ ದಯದಿಂದ |ನಿಜಕಾಷ್ಟವಿಳೆಗೆ ನಿಲ್ಲಿಸಿ ಮರವ | ಸುವ್ವಿ ||ಸೃಜಿಸಿ ಪಲ್ಲವ ಫಲಯುಕ್ತವಾಗಿ ತೋರಿಸಿದ |ಭಜಿಸಿರಿವರನ್ನು ಮಕ್ಕಳು ಬೇಡುವವರು | ಸುವ್ವಿ 8ಮುತ್ತಿನ ಮಾಲಿಕೆನೃಪಭಕ್ತಿಯಿಂದ ಕೊಡಲಾಗಿ |ಸಪ್ತಜಿಹ್ವಗುಣಿಸಿದ ಸರ್ವರು ನೋಡಿ | ಸುವ್ವಿ ||ಮತ್ತೆ ಬೇಡಲು ಪಾವಕನಿಗೆ ಪ್ರಾರ್ಥನೆಯ ಮಾಡಿ |ಮತ್ರ್ಯಪಗೆ ಇತ್ತರು ಮೊದಲಂತೆಯೆ ತಂದು | ಸುವ್ವಿ 9ಹಿಂದೆ ಮಾಡಿದ ದುಷ್ಕರ್ಮ ತೀರ ಬಂದದನು ನೋಡಿ |ಬಂದಾಕ್ಷಣದಲ್ಲಿ ಅವನ ವಿಚಾರಿಸಿ | ಸುವ್ವಿ ||ಇಂದಿರೇಶನ ಕಾರುಣ್ಯ ಬಲದಿಂದ ಜನನೋಡೆ |ಸಂದೇಹವಿಲ್ಲದೆ ಸುಲೋಕವನಿತ್ತರು | ಸುವ್ವಿ 10ತುಂಗಾತೀರ ಮಂತ್ರಾಲಯದಲ್ಲಿಶ್ರಾವಣಬಹುಳ |ಮಂಗಳ ಬಿದಿಗಿಯಲ್ಲಿ ನಿವಾಸವಾದರು | ಸುವ್ವಿ ||ಶೃಂಗಾರ ವೃಂದಾವನ ದ್ವಾದಶನಾಮ ಶ್ರೀ ಮುದ್ರೆಯು |ಕಂಗಳುಸಾಲವು ನೋಡ ಹೊದ್ದ ಶಾಠಿಯ | ಸುವ್ವಿ 11ಅಂಧಕಬಧಿರಕುಂಟ ನಾನಾ ರೋಗಿಗಳು ಮತ್ತೆ |ಕಂದ ವಜ್ರ್ಯ ಮೊದಲಾದವರಿಗೆಕಾಮ್ಯ| ಸುವ್ವಿ ||ತಂದುಕೊಡುವರು ಬೇಗ ಇತರ ಸಂಶಯವಿಲ್ಲ |ಮಂದಭಾಗ್ಯರಿಗೆ ಇವರ ಸೇವೆ ದೊರೆಯದೇ || ಸುವ್ವಿ 12ಕೌತುಕವೇನೆನ್ನಲಿ ಮುಂಜಿ ವಿವಾಹ ಮಾಡಿಸುವರು |ಚಾತುರ್ಮಾಸದೊಳಗೆ ಗ್ರಹಗಳಸ್ತವಾಗೆ | ಸುವ್ವಿ ||ಧಾತಾ ಪಿತ ನಿಲಯವಿದೇನೋಯೆಂದು ತೋರುವದು |ಪ್ರೀತಿಯುಳ್ಳ ಭಕ್ತರಿಗೆ ಅಧಮರಿಗಲ್ಲ | ಸುವ್ವಿ 13ಪಾಡ್ಯ ಪೂರ್ವಾರಾಧನೆ ಉತ್ತರಾರಾಧನೆಗೆ |ಒಡ್ಡಿಬರುವುದು ಎಂಟು ದಿಕ್ಕುಗಳಿಂದ ಜನವು | ಸುವ್ವಿ ||ಕಡ್ಡಿಹಿಡಿಯದಂಥ ಸಂದಣಿಯೊಳು ಸನ್ಮುಹೂರ್ತದಿ |ದೊಡ್ಡ ರಥವೇರಿ ಮಠವ ಸುತ್ತುವರು | ಸುವ್ವಿ 14ಇಷ್ಟೇಯೆನ್ನಲು ವಶವಲ್ಲ ಮಹಿಮೆಗಳಿನ್ನೂ ಉಂಟು |ನಷ್ಟ ಮಾಡುವರು ದುರ್ಮತ ದಾರಿದ್ರ್ಯವ | ಸುವ್ವಿ ||ಸೃಷ್ಟಿಗೊಡೆಯ ಪ್ರಾಣೇಶ ವಿಠ್ಠಲನೆಂದು ಪೇಳ್ವರು |ಎಷ್ಟು ಪೇಳಿದರೂ ಎನ್ನಿಂದಲಿ ತೀರದು | ಸುವ್ವಿ 15
--------------
ಪ್ರಾಣೇಶದಾಸರು