ಒಟ್ಟು 43 ಕಡೆಗಳಲ್ಲಿ , 25 ದಾಸರು , 41 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನವವಿಧ ಭಕುತಿ ಶ್ರವಣದಿಂದಲಿ ಪಾಪಹರಣವಾಗುವುದೆಂದು ಕವಿಗಳೆಲ್ಲರು ಕೂಗಿ ಒದರುತಿಹರು ಕಿವಿಗಳಿಗಾನಂದದಾಭರಣದಂತಿಹುದು ಶ್ರೀ- ಹರಿಯ ದಿವ್ಯನಾಮಾಮೃತದರಸವು ಮಾಧವನ ಮೂರ್ತಿಯನು ನೋಡದಿಹ ಕಂಗಳು ನವಿಲು ಕಣ್ಣುಗಳೆಂದು ಪೇಳುತಿಹರು ಕಮಲನಾಭ ವಿಠ್ಠಲನ ಮಹಿಮೆ ಪೊಗಳೆ ಫಣಿರಾಜನಿಗೆ ವಶವಲ್ಲ ದೇವಾ 1 ಕೀರ್ತನವು ಮಾಡಲು ಪಾತಕವು ಪರಿಹರವು ಮಾತುಳಾಂತಕನ ಮಹಿಮೆ ಘನವು ಶ್ರೀಶನನು ಮನದಣಿಯ ಸ್ತೋತ್ರವನು ಮಾಡಲು ನಾಶಗೈವನು ದುರಿತರಾಶಿಗಳನು ಮಾಡಿದಪರಾಧಗಳ ಮಾಧವನು ಮನ್ನಿಸುವ ಶ್ರೀಧರನ ಸ್ತುತಿಸಿ ಕೊಂಡಾಡುತಿಹರ ಕರುಣಾಕರ ಕಮಲನಾಭವಿಠ್ಠಲ ದುರಿತದೂರನು ಕಾಯ್ವ ಶರಣಜನರ 2 ಸ್ಮರಣೆಯನು ಮಾಡುತಿಹ ಮನುಜರಿಗೆ ಇಹಪರದಿ ಪರಮ ಮಂಗಳನೀವ ಪರಮಾತ್ಮನು ದುರಿತ ದೂರನ ಪಾದಸ್ಮರಣೆ ಮಾಡುವರಿಗೆ ಪರಿಪರಿಯ ಸೌಖ್ಯಗಳ ಕೊಡುವ ದೇವ ಮಧುವೈರಿಯನು ಸ್ಮರಿಸೆ ಮುದದಿ ಸಂಪದವೀವ ಮೂರ್ತಿ ಶ್ರೀಮಾಧವ ಕನಕಗರ್ಭನ ಪಿತನು ಕರುಣಾನಿಧಿಯು ಕಮಲನಾಭ ವಿಠ್ಠಲ ಕಾಯ್ವ ಸುಜನರ3 ಶಿಲೆಯಾದ ಅಹಲ್ಯೆಯ ಪರಿಪಾಲಿಸಿದ ಪಾದ ಧರಣಿ ಈರಡಿಗೈದ ದಿವ್ಯಪಾದ ಫಣಿ ಹೆಡೆಯ ತುಳಿದ ಪಾದ ವರ ಋಷಿಗಳೆಲ್ಲ ವಂದಿಸುವ ಪಾದ ಇಂದಿರಾದೇವಿ ಬಹುಚಂದದಿಂದೊತ್ತುತ ಕಂದರ್ಪನಯ್ಯನಿಗೆ ಪಾದಸೇವ ಚಂದದಿಂದಲಿ ಮಾಡಿ ಮಾಧವನಿಗೆ ನಂದಗೋಪಿಯ ಕಂದ ಸಲಹುಎನಲು ಸುಂದರ ಶ್ರೀ ಕಮಲನಾಭ ವಿಠ್ಠಲನು ಒಲಿವ 4 ಅರ್ಚಿಸುತ ಮೆಚ್ಚಿಸುತ ಸಚ್ಚಿದಾನಂದನನು ಸ್ವಚ್ಛ ಭಕುತಿಲಿ ಸ್ತೋತ್ರ ಮಾಡುತಿಹರ ಅಷ್ಟ ಐಶ್ವರ್ಯಪ್ರದನು ನಿತ್ಯಮುಕ್ತಳ ಕೂಡಿ ಭಕ್ತರ ಹೃದಯದಲಿ ಪೊಳೆವ ದೇವ ಸತ್ಯ ಸಂಕಲ್ಪನಿಗೆ ಕಸ್ತೂರಿ ತಿಲಕವು ಮತ್ತೆ ಪಾವಡಿ ಥಳಥಳನೆ ಹೊಳೆಯೆ ಸುತ್ತ ಬ್ರಹ್ಮಾದಿಗಳ ಸ್ತುತಿಗೆ ದೇವ ಚಿತ್ತವಿಟ್ಟು ಕೇಳ್ವ ಮಾಧವನು ಮುದದಿ ಕರ್ತೃ ಕಮಲನಾಭ ವಿಠ್ಠಲನು ಕಾಯ್ವ 5 ವಂದನೆಯನು ಮಾಡೆ ಮುಕುಂದನು ಒಲಿವನು ಮುದದಿ ಕಂದರ್ಪನಯ್ಯ ಕಮಲಾಕ್ಷ ಹರಿಯೂ ಸುಂದರಾಂಗ ಶ್ರೀಹರಿಗೆ ಗಂಧ ಪೂಸಿದಳಾಗ ಇಂದೀವರಾಕ್ಷಿ ನಸುನಗುತ ಬೇಗ ಇಂದ್ರಾದಿ ಸುರರೆಲ್ಲ ಕೊಂಡಾಡೆ ಮಾಧವನ ವಂದಿಸುತ ಸಿರಬಾಗಿ ಚಂದದಿಂದ ಮಂದಾರ ಪಾರಿಜಾತಗಳ ತಂದು ತಂದೆ ಕಮಲನಾಭ ವಿಠ್ಠಲನ ಮುಡಿಗೆ ಸಂಭ್ರಮದಿ ಮಳೆಗರೆಯೆ ಚಂದದಿಂದ 6 ದಾಸ್ಯವನು ಕೈಕೊಂಬ ದಾಸ್ಯಜನರನು ಪೊರೆವ ಮೀಸಲಾಗಿಹನು ಹರಿದಾಸ ಜನಕೆ ಪೋಷಿಸೆಂದೆನುವವರ ದೋಷಗಳನೀಡಾಡಿ ದೋಷರಹಿತನು ಪೊರೆವ ಸರ್ವಜನರ ಪೂಸಿ ಪರಿಮಳ ದ್ರವ್ಯ ಶ್ರೀಸಹಿತ ಮೆರೆವ ವಾಸುಕೀಶಯನ ಸಜ್ಜನರ ಪೊರೆವ ಮುರಳೀಧರ ಮಾಧವನು ಕರುಣದಿಂದ ಶರಣ ಜನರನು ಪೊರೆವ ಮರೆಯದೀಗ ಕಮಲನಾಭವಿಠ್ಠಲನು ಕಾಯ್ವದೇವ 7 ಸಖ್ಯ ಸ್ನೇಹಗಳಿಂದ ಮುತ್ತಿನ್ಹಾರಗಳನು ಕೃಷ್ಣನ ಕೊರಳಿಗ್ಹಾಕುತಲಿಬೇಗ ಅರ್ಥಿಯಿಂದಲಿ ರತ್ನ ಮುತ್ತಿನ ಚಂಡುಗಳ ವಿಚಿತ್ರದಿಂದಾಡುತಿರೆ ನೋಡಿ ಸುರರು ಮುತ್ತಿನಕ್ಷತೆಗಳನು ಮಾಧವನ ಸಿರಿಮುಡಿಗೆ ಅರ್ಥಿಯಿಂದ ಸುರಿಸುತಿರೆ ಹರುಷದಿಂದ ಅಪ್ರಮೇಯನು ಶ್ರೀಶ ಶ್ರೀನಿವಾಸ ಸರ್ಪಶಯನನು ಕಮಲನಾಭ ವಿಠ್ಠಲ ನಿತ್ಯ ತೃಪ್ತನು ಪೊಳೆವ ಭಕ್ತರ ಹೃದಯದಲಿ 8 ನಿತ್ಯ ತೃಪ್ತಗೆ ಮಾಡಿ ಅರ್ಥಿಯಲಿ ಅಪ್ರಮೇಯನನು ಸ್ತುತಿಸಿ ಮುತ್ತು ಮಾಣಿಕ್ಯ ಬಿಗಿದ ತಟ್ಟೆಯಲಿ ತಾಂಬೂಲ ಅಚ್ಚುತಾನಂತನಿಗೆ ಅರ್ಪಿಸುತಲಿ ಭಕ್ತಿಯಲಿ ವಂದನೆಯ ಭಕ್ತವತ್ಸಲನಿಗೆ ನಿತ್ಯ ಮುಕ್ತಳು ಮಾಡಿ ಹರುಷದಿಂದ ಸತ್ಯ ಸಂಕಲ್ಪ ಶ್ರೀ ಮಾಧವನಿಗೆ ಮುತ್ತಿನಾರತಿ ಬೆಳಗಿ ಅರ್ಥಿಯಿಂದ ಕರ್ತೃ ಶ್ರೀ ಕಮಲನಾಭ ವಿಠ್ಠಲನ ಕೊಂಡಾಡಿ9
--------------
ನಿಡಗುರುಕಿ ಜೀವೂಬಾಯಿ
ಪವನಾ ಸಂಭೂತಾ ಒಲಿದೂತವಕಾದಿ ಕಾಯಬೇಕೂ |ಇವನಾರೋ ಎಂದೂ ದಾಸಿನಾ | ಮಾಡದಲೆ ಎನ್ನಾ ಪ ಹರಿವೇಷಧರನೆ ನರ |ಹರಿಭಕುತರ ಪೊರೆಯುವದಕ್ಕೇ ||ಹರಿಯಂತೆ ಒದಗುವೆಯೋ ನೀನೂ | ಹರಿದಾಸ ನಾನೂ 1 ಕಪಿಪಾ ಕಪಿಯಾಜ್ಞದಂತೇ |ಕಪಿಲನ್ನ ಪತ್ನಿಯನ್ನೂ ||ಕಪಿಗಳು ಹುಡುಕಿ ಮಿಡುಕಲು | ಕಾಯ್ದೆ ಆವಾಗಲೂ 2 ಅಜಸುತನ ಶಾಪದಿಂದ |ಅಜಗರನಾದ ವನಪಾದ ||ರಜದೀ ಪೂನೀತನ ಮಾಡಿದನೇ | ಅಜಪದವಿಗೆ ಬಹನೇ3 ಕಲಿಯುಗದಿ ಕವಿಗಳೆಲ್ಲಾ |ಕಲಿಯಾ ಬಾಧೆಗೆ ಬಳಲಿ |ಕಲಿವೈರಿ ಮುನಿಯೆಂದೆನಿಸಿದೇ | ಕಲಿಮಲವಾ ಕಳೆದೆ 4 ಗುರು ಪ್ರಾಣೇಶ ವಿಠಲಾ |ಗುರುವರನೆಂಬೊ ಜ್ಞಾನಾ ||ಗುರು ಮಧ್ವರಾಯಾ ಕರುಣಿಸೋ | ಗುರುಮತಿಯನು ಬಿಡಿಸೋ 5
--------------
ಗುರುಪ್ರಾಣೇಶವಿಠಲರು
ಪವಮಾನ ಜಗದ ಪ್ರಾಣ ಸಂಕರುಷಣ ಭವನೇ ಭಯಾರಣ್ಯದಹನ ಪ ಶ್ರವಣವೆ ಮೊದಲಾದ ನವವಿಧ ಭಕುತಿಯ ತವಕದಿಂದಲಿ ಕೊಡು ಕವಿಗಳ ಪ್ರೀಯ ಅ.ಪ. ಹೇಮ ಕಚ್ಚುಟ ಉಪವೀತ-ಧರಿಪ ಮಾರುತ ಕಾಮಾದಿ ವರ್ಗರಹಿತ ವ್ಯೋಮಾದಿ ಸರ್ವವ್ಯಾಪುತ-ಸತತ ನಿರ್ಭೀತ ರಾಮಚಂದ್ರನ ನಿಜದೂತ ಯಾಮ ಯಾಮಕೆ ನಿನ್ನರಾಧಿಪುದಕೆ ಕಾಮಿಪೆ ಎನಗಿದ ನೇಮಿಸಿ ಪ್ರತಿದಿನ ಪಾಮರ ಮತಿಯನು ನೀ ಮಾಣಿಪುದು 1 ವಜ್ರ ಶರೀರ ಗಂಭೀರ-ಮಕುಟಧರ ದುರ್ಜನವನ ಕುಠಾರ ನಿರ್ಜರಮಣಿ ದಯಾ ಪಾರಾ-ವಾರ ಉದಾರ ಸಜ್ಜನರಘ ಪರಿಹಾರ ಅರ್ಜುನಗೊಲಿದಂದು ಧ್ವಜವಾನಿಸಿ ನಿಂದು ಮೂರ್ಜಗವರಿವಂತೆ ಗರ್ಜನೆಮಾಡಿದೆ ಹೆಜ್ಜೆ ಹೆಜ್ಜೆಗೆ ನಿನ್ನ ಅಬ್ಜಪಾದದ ಧೂಳಿ- ಮೂರ್ಜನದಲಿ ಭವವರ್ಜಿತನೆನಿಸೊ 2 ಪ್ರಾಣ ಅಪಾನ ಉದಾನ-ವ್ಯಾನ ಸಮಾನ ಆನಂದ ಭಾರತೀರಮಣ ನೀನೆ ಯಾಮ ಯಾಮಕೆ ಜ್ಞಾನ ಧನಪಾಲಿಪ ವರೇಣ್ಯ ನಾನು ನಿರುತದಲಿ ಏನೇನನೆಸಗಿದೆ ಕರ್ಮ ನಿನಗೊಪ್ಪಿಸಿದೆನೊ ಪ್ರಾಣನಾಥ ಸತ್ಯ ವಿಜಯವಿಠ್ಠಲನಕಾಣಿಸಿ ಕೊಡುವುದು ಭಾನು ಪ್ರಕಾಶ 3
--------------
ವಿಜಯದಾಸ
ಪೋಷಿಸೆನ್ನ ಜೀಯಾ | ಗುರು |ಪ್ರಾಣೇಶ ದಾಸರಾಯಾ |ಶ್ರೀಶನ ಗುಣ ಸಂತೋಷದಿ ಪಾಡುವ |ದಾಸ ಕುಲಾಗ್ರಣಿಯೇ | ಎಣಿಯೆ ಪ ಹರಿಸ್ಮರಣೆಯ ಮರೆದೂ | ಸರ್ವದ |ಪದದನ್ನಕೆ ಬೆರಿದೂ |ದುರುಳ ಜನರ ಸಹವಾಸವನ್ನು ಮಾಡಿ |ಬಂದೆ ದಿನವ ಕಳೆದೇ ಉಳದೇ 1 ಪವನ ಮತದೊಳಿಟ್ಟೂ | ಶ್ರೀ ಹರಿ |ಸ್ತವನವನ್ನೆ ಕೊಟ್ಟೂ |ಕವಿಗಳ ಮುಖದಿಂ ತತ್ವವಿಚಾರದಿ |ಕವಲ ಮತಿಯ ಪಾಲಿಸೀ, ಉದ್ಧರಿಸೀ 2 ಮನ್ನ ಭಿನ್ನಪವನ್ನು ಕೇಳಿ |ಮನ್ನಿಸು ಸುರಧೇನೂ |ಘನ್ನ ಶ್ರೀಶ ಪ್ರಾಣೇಶ ವಿಠಲನ ಧ್ಯಾನ |ವನ್ನು ಮಾಳ್ವ ಶಕ್ತಾ ವಿರಕ್ತಾ 3
--------------
ಶ್ರೀಶಪ್ರಾಣೇಶವಿಠಲರು
ಬಾರಯ್ಯ ಬಾರಯ್ಯ ಭಕ್ತವತ್ಸಲ ಹರಿ ಶ್ರೀಕೃಷ್ಣ ಪ ಭಕ್ತರು ಬಂದು ದ್ವಾರದಿ ನಿಂದು ಭಕ್ತಿಲಿ ಹಾಡುತ ಪಾಡುತಲಿರುವರು ಮುಕ್ತಿದಾತ ನೀನಲ್ಲದೆ ಸರ್ವ- ಶಕ್ತರಿನ್ಯಾರಿಹರೈ ಎನ್ನುತ ಪೊಗಳ್ವರು 1 ತಾಳಮೇಳದವರೆಲ್ಲರು ನಿನ್ನಯ ಊಳಿಗ ಮಾಡಬೇಕೆನುತಲಿ ಬಂದು ವೇಳೆ ವೇಳೆಗೆ ತಮ್ಮ ಸೇವೆಯ ಸಲಿಸುತ ಭಾಳ ಸಂಭ್ರಮದಿಂದ ಹಾರೈಪರೊ ಹರಿ 2 ತುಂಬುರು ನಾರದರ್ವೀಣೆಯ ನುಡಿಸಲು ರಂಭಾದ್ಯಪ್ಸರ ಸ್ತ್ರೀಯರು ನರ್ತಿಸೆ ವಿಶ್ವ ಕು- ಟುಂಬಿಯೆ ಬಾ ಬಾರೆನ್ನುತ ಸ್ತುತಿಪರು3 ಅಂಬರದಲಿ ದೇವತೆಗಳೆಲ್ಲರು ನೆರೆದು ತುಂಬಿ ಪುಷ್ಪವೃಷ್ಟಿಗಳನೆ ಮಾಡುತ ಕುಸುಮ ಮಳೆ ಗಂಭೀರದಿ ಸುರಿಸುತ ಪ್ರಾರ್ಥಿಸುವರು 4 ಅತ್ರಿ ವಸಿಷ್ಠ ಗೌತಮ ಮೊದಲಾಗಿ ರಾತ್ರಿಹಗಲು ಎಡೆಬಿಡದಲೆ ಸ್ತುತಿಸುತ ವೃತ್ರಾರಿಯ ಸುತನಿಗೆ ಸಾರಥಿಯೆ ವಿ- ಚಿತ್ರ ವ್ಯಾಪಾರಿ ಶ್ರೀಹರಿ ಎಂದು ಪೊಗಳ್ವರು 5 ಅಣುಮಹದ್ರೂಪನೆ ಘನಮಹಿಮನೆ ನಿನ್ನ ಮಣಿದು ಬೇಡಿ ಕೈಮುಗಿಯುತ ಸ್ತುತಿಪರು ಪ್ರಣವ ಪ್ರತಿಪಾದ್ಯನೆ ನಿನ್ನ ಗುಣಗಳ ಎಣಿಸಲಸಾಧ್ಯವೆನುತ ಕೊಂಡಾಡ್ವರು 6 ನವನವ ರೂಪದಿ ನಲಿಯುವ ದೇವನೆ ನವವಿಧ ಭಕುತರು ನಮಿಸುತ ಕರೆವರು ಭುವನ ಮೋಹನ ಸುಂದರಮೂರ್ತಿಯೆ ಎಂದು ಕವಿಗಳು ಪೊಗಳುತ ಕುಣಿಯುತಲಿರುವರು 7 ಎಡಬಲದಲಿ ಶ್ರೀ ಭೂದೇವಿಯರಿರೆ ಬಿಡದೆ ಛತ್ರಚಾಮರಗಳಿಂದೊಪ್ಪುತ ತಡಮಾಡದೆ ಬಾ ಮಡದಿಯರ ಸಹಿತದಿ ದಡ ದಡ ಬಾರೆಂದು ಬಡ ಬಡ ಕರೆವರು 8 ವಿಶ್ವರೂಪಕ ವಿಶ್ವನಾಮಕ ವಿಶ್ವತೋಮುಖ ವಿಶ್ವನಾಟಕ ವಿಶ್ವವ್ಯಾಪಕ ವಿಶ್ವಾಧಾರಕ ವಿಶ್ವ ಕುಟುಂಬಿಯೆ ವಿಶ್ವಾಸದಿ ಬಾ 9 ವಿರೋಧಿಕೃತು ಸಂವತ್ಸರ ಬರುತಿರೆ ಪರೋಪಕಾರವ ಮಾಡುತ ಸುಜನರು ವಿರೋಧಿಗಳ ದೂರಿಡುತಲಿ ಶ್ರೀ ಹರಿ ಸರೋಜದಳ ನೇತ್ರನÀ ಸ್ತುತಿಸುವರು 10 ಕಮಲಾಕ್ಷಿಯ ಒಡಗೂಡುತ ಬಾ ಬಾ ಕಮಲಾಸನ ಜನಕನೆ ಹರಿ ಬಾ ಬಾ ಕಮಲನಾಭ ವಿಠ್ಠಲ ಬೇಗ ಬಾರೆಂದು ಸುಮನಸ ವಂದ್ಯನ ಸ್ಮರಿಸುತ ಕರೆವರು11
--------------
ನಿಡಗುರುಕಿ ಜೀವೂಬಾಯಿ
ಭಜಿಸಿರೊ ಬಿಡದೆ ವಿರಾಜಮಾನರಾಗಿ ನಿತ್ಯ ಕುಜನರೊಳಾಡದಲೆ ನಿಜ ಭಕುತಿಯಿಂದ ಭುಜಬಲವುಳ್ಳ ಪರಜರಟ್ಟುವ ದಿ ಗ್ವಿಜಯ ಸತ್ಯಪೂರ್ಣರ ಸುಜನರೊಂದಾಗಿಪ ಭರದಿಂದ ಬಂದು ನಿಂದು ನಿರೀಕ್ಷಿಸಿ ನಿರ್ಮಳ ಕರಯುಗಳ ಮುಗಿದು ಶಿರವಾನಿಲ್ಲದೆ ಧರಣಿಯಾ ಮ್ಯಾಲೊಂದು ತೀವರ ಸಾಷ್ಟಾಂಗ ನಮ ಸ್ಕರಿಸಿ ಕೊಂಡಾಡಿ ನಿಂದಿರಲಾನರರಿಗೆಲ್ಲ ಪರಿಹರವೊ ಬಂದರಘಳಿಗೆಯಲಿ ದುರುಳರಿಗಾಯ್ತು ಮರಿಯದೆ ಚೆನ್ನಾಗಿ1 ನೆರೆನಂಬಿ ನಿಮ್ಮಯ ಗೋತುರ ಸಹಿತಕ್ಕೆ ಜ್ಞಾನಾಂ ಕುರವಾಗುವುದು ಇದು ಉರುಕಾಲ ಸಿದ್ಧವೆನ್ನಿ ತರತಮ್ಯ ತತ್ವ ತಾತ್ಪರಿಯ ವಿಧ ತಿಳಿದು ಸುರರು ಮೆಚ್ಚುತಲಿರೆ ಮುರರಿಪು ಚತುರ್ದಶ ಧರಣಿಗೆ ಪರನೆಂದು ಬಿರಿದನು ಎತ್ತಿ ಡಂಗುರವ ಹೊಯಿಸಿ ಡಿಂಗರರಿಗೆ ಸಚ್ಛಾಸ್ತ್ರ ಕೊಡುವ ಯತಿಶಿರೋಮಣಿ ಕರ್ನಾ 2 ಪಾದಾಂಬುಜಾತ ಕೃಷ್ಣಾ ತನು ಭವಸರಿತ ನಿವಾಸಾ ದಿವಿಜೇಶನಾಯುಧ ಕವಚದಿಂದಲಿ ತನ್ನವರನ ಪೊರೆದೆತ್ತಿ ನವವಿಧ ಬಗೆ ತೋರಿ ತವಕದಿ ಕೋಲುಪುರ ಪವಿತುರ ಸ್ಥಳದಲ್ಲಿ ರವಿಯಂತೆ ಪೊಳವರು ಭವದೋಷ ಕಳೆವುತಾ ಕವಿಗಳ ಮನೋಹರ ವಿಜಯವಿಠ್ಠಲನ ಶ್ರವಣ ಮನನ ಧ್ಯಾನವನು ಬಲ್ಲವರಾ3
--------------
ವಿಜಯದಾಸ
ಮುರಳಿಯಧರ ಶ್ರೀ ಕೃಷ್ಣನ ನೋಡಲು ಏನೋ ಸಂತೋಷ ಏನೋ ವಿನೋದ ಪ ಹರಿವಳು ಯಮುನೆಯು ಮೆಲ್ಲನೆ ನೋಡಲು ಗೋವಿಂದನನು ಪರಮಾನಂದದಿ ಅ.ಪ ಕೊಳಲೂದಲು ಶ್ರೀಕೃಷ್ಣನು ನಾದದ ಸುಳಿ ಬಾಡುವುದೆಂಬುವ ಭೀತಿಯಲಿ ಜಲ ಮೂಲನು ಬೆಳದಿಂಗಳ ಕರಗಳ ತಳಿರುಗಳಿಂದಲಿ ತಳ ಸೇರಿಸುವ 1 ಶರಧಿ ತರಂಗಗಳೆದ್ದವು ರಂಗನ್ನ ವದನ ಶಕಾಂಕನ್ನ ನೋಡಿ ಅಂಗನೆಯರು ತಮ್ಮಂಗಗಳಲಿ ಭಂಗವ ಪಡೆದರನಂಗನ ಶರದಿ 2 ಭುವನವ ತುಂಬಿತು ಗಗನವು ತುಂಬಿತು ದಿವಿಜರ ಲೋಕಗಳೆಲ್ಲವು ತುಂಬಿತು ಕವಿಗಳು ಬೆರಗಾದರು ವರ್ಣಿಸಲೀ ಸವಿ ಮುರುಳಿಯು ನಾದದ ಪ್ರವಹನನು 3 ತುರುಗಳ ಪಯಧರ ಸ್ರವಿಸಿತು ಕ್ಷೀರವ ಕರೆದರು ಮೋದದ ಕಂಬನಿಯೆಲ್ಲರು ಮರೆತರು ನರಲೋಕದ ಮಂದಿಗಳು ಅರಿತು ಮೋಕ್ಷದ ಸುಖವೆಂತೆಂಬುದ 4 ಈಶನು ಕೈಲಾಸದಲಿ ಕುಣಿದನು ಶೇಷನು ಸಾಸಿರ ಫಣಿಗಳನಾಡಿದ ದೋಷರಹಿತ ವಾಣೀಶನ ವದನ ವಿ ಕಾಸವು ಬೆಳಗಿತು ನಾಕು ದಿಕ್ಕುಗಳ 5 ಆ ಸಮಯವ ಇತಿಹಾಸಗಳಲಿ ಕವಿ ವ್ಯಾಸರಿಗಲ್ಲದೆ ವರ್ಣಿಸಲಳವೆ ಭಾಸುರ ಸುಂದರ ವದನ ಪ್ರಸನ್ನನು ರಾಸಕ್ರೀಡೆಯ ರಸವನು ಹರಿಸುತ 6
--------------
ವಿದ್ಯಾಪ್ರಸನ್ನತೀರ್ಥರು
ರಕ್ಷಿಸೋ ಜಗನ್ನಾಥದಾಸ ರಕ್ಷಿಸೋ ರಕ್ಷಿಸು ಗುರು ಜಗನ್ನಾಥದಾಸ ಪಕ್ಷಿವಾಹನನ ನಿಜದಾಸ ಮು ಮುಕ್ಷು ಮಾರ್ಗವ ತೋರ್ದಧೀಶ ನೀನೆ ಪ್ರ ತ್ಯಕ್ಷ ಪ್ರಹ್ಲಾದನನುಜ- ||ಅಹಾ|| ಈ ಕ್ಷಿತಿಯೊಳು ಸುರಶ್ರೇಷ್ಠನೆನಿಸಿ ವಿ ಶಿಷ್ಟರ ಮನೋಭೀಷ್ಟವನಿತ್ತ ಹರಿದಾಸ 1 ವೇದವಂದ್ಯನ ನಿಜತತ್ತ್ವ ನಿಜ ನಿತ್ಯ (ಸತ್ಯ) ಪೂರ್ಣ ಬೋಧರ ಗ್ರಂಥ ತತ್ತ್ವ ನೀತಿ ತ ಪ್ಪದೆ ಪೇಳ್ದೆ ಮಹತ್ವ ||ಅಹಾ|| ಮೋದಪಡಿಸಿ ಮೋದತೀರ್ಥರ ಮತ ದು ಗ್ಧಾಬ್ಧಿಸುಧೆಯನಿತ್ತ ಬಾದರಾಯಣನ ದಾಸ 2 ಪ್ರಕೃತಿಬಂಧಕರಾದ ಜನರು ನಿನ್ನ ಪ್ರಾಕೃತಗ್ರಂಥನೊಡಿ ಮೋದಿಪರು ಸತತಾ ಪ್ರಾಕೃತನ ತಾ ವಂದಿಪರು ಜನ್ಮ ಸುಕೃತಕ್ಕೆ ತಾವು ಸಾಧಿಪರು ||ಅಹಾ|| ಸಂಸ್ಕøತ ಭಾಷೆಯ ಪ್ರಕರಣಗಳನೆಲ್ಲ ಪ ರಿಷ್ಕøತ ಪಡಿಸಿ ನೀ ಪ್ರಾಕೃತದೊಳು ತೋರ್ದೆ3 ವಿಪ್ರವರೇಣ್ಯನೆ ನೀನು ಜಗದಿ ಅಪ್ರಮೇಯನ ಪ್ರಮೇಯವನ್ನೂ ಅದಕ್ಕೆ ಸಪ್ರಮಾಣಗಳೆಲ್ಲವನ್ನೂ ತೋರಿ ದಿ ಕ್ ಪ್ರದರ್ಶನ ಮಾಡಿ ಇನ್ನೂ ||ಅಹಾ|| ಸ್ವಪ್ರಯೋಜನ ರಹಿತ ಅಪ್ರಮೇಯನ ಮಹಿಮೆ ಕ್ಷಿಪ್ರ ಭೋಧೆಯಾಗಲ್ ತ್ವತ್ಪ್ರಸಾದವನಿತ್ತೆ4 ನಿನ್ನುಪಕಾರದ ಪರಿಯಾ ನಾನು ಜನ್ಮಜನ್ಮಾಂತರಕೆ ಮರೆಯೆ ನೀನೆ ಘನ್ನ ಶ್ರೀಹರಿದಾಸಾಗ್ರಣಿಯೇ ಇನ್ನು ನಿನ್ನ ಹರಿಕಥಾಮೃತಸಾರಕ್ಕೆಣೆಯೇ ||ಅಹಾ|| ಇನ್ನಿಲ್ಲ ನಿನ್ನಂಥ ಘನ್ನ ಕವಿಗಳ ಕಾಣೆ ಪನ್ನಂಗಶಯನ ಶ್ರೀ ವೆಂಕಟೇಶನ ದಾಸಾ 5
--------------
ಉರಗಾದ್ರಿವಾಸವಿಠಲದಾಸರು
ವರಕವಿಗಳ ಮುಂದೆ ನರಕವಿಗಳ ವಿದ್ಯೆ ತೋರಬಾರದು - ಈಧರಣಿಯ ಕಲ್ಲಿಗೆ ಶರಣೆಂದು ಪೂಜೆಯ ಮಾಡಬಾರದು ಪ ಪಾಪಿಗಳಿದ್ದಲ್ಲಿ ರೂಪುಳ್ಳ ವಸ್ತುವ ತೋರಬಾರದು - ಬಹುಕೋಪಿಗಳಿದ್ದಲ್ಲಿ ಅನುಭವಗೋಷ್ಠಿಯ ಮಾಡಬಾರದು1 ಅಡಿ ಸತ್ತ ಮಡಕೆಗೆ ಜೋಡಿಸಿ ಒಲೆಗುಂಡು ಹೂಡಬಾರದು - ಬಹುಬಡತನ ಬಂದಾಗ ನೆಂಟರ ಬಾಗಿಲ ಸೇರಬಾರದು2 ಹರಿಯ ನಿಂದಿಸಿ ಹರ ಘನನೆಂದು ನರಕಕ್ಕೆ ಬೀಳಬಾರದು - ತಾಪರರನು ಬೈದು ಪಾತಕಕೆ ಮುನ್ನೊಳಗಾಗಬಾರದು 3 ಮಡದಿ ನುಡಿಯ ಕೇಳಿ ಜಗಳಕೊಬ್ಬರ ಕೂಡೆ ಹೋಗಬಾರದು - ಬಾ-ಯ್ಬಡಿಕರು ಇದ್ದಲ್ಲಿ ವಸ್ತಿ ಬಿಡಾರವ ಮಾಡಬಾರದು 4 ಮುಂದೆ ಭಲಾ ಎಂದು ಹಿಂದೆ ನಿಂದಿಪರನ್ನು ಕೂಡಬಾರದು - ನಮ್ಮತಂದೆ ಬಾಡದಾದಿಕೇಶವನ ಸ್ಮರಣೆಯ ಬಿಡಬಾರದು5
--------------
ಕನಕದಾಸ
ವ್ಯರ್ಥಕಳೆವರೇನೊ ಕಾಲವ ಹೇ ಪ್ರಾಣಿ ನೀನು ಪ ಕೀರ್ತಿಸದೆ ಕುವಾರ್ತೆಯಿಂದ ಅ.ಪ. ನೇಸರನುದಯಿಸದ ಮುನ್ನ ಕರ್ಮ ನಾಮ ಬೇಸರದಲೇ ಸ್ಮರಿಸದೇ ಗ್ರಾಸದ್ಹರಟೆಗಳನು ಹರಟಿ 1 ಪವನ ಮತವನವಲಂಬಿಸಿದ ಸ್ಥವಿರ ಕವಿಗಳಿಂದ ಕಥಾ ಶ್ರವಣ ರಸವ ಕಿವಿಯ ದಣಿಯೆ ಸವಿದು ಸುಖಿಸಿ ಪ್ರವರನಾಗದೆ 2 ಕ್ಷಿತಿ ಜಲಾಗ್ನಿ ವಾಯು ಖಂ ಅತುಳ ಬುದ್ಧಿ ಅಹಂಕಾರಗಳು ಕೃತಿರಮಣನ ವಿಮಲ ಭಿನ್ನ ಪ್ರತಿಮೆಯೆಂದರಿದು ಭಜಿಸದೆ 3 ಶ್ರೀಪಯೋಜ ಪೀಠ ಶೈಲ ಚಾಪ ಗೋಪಮುಖರು ದ್ವಿತೀಯ ರೂಪರೆಂದು ಹರಿಗೆ ನೀ ಪ ದೇ ಪದೇ ನಮಸ್ಕರಿಸದೆ 4 ಪುತ್ರ ಜನನಿ ಜನಕ ವಿತ್ತ ಕರ್ತ ಜಗನ್ನಾಥವಿಠಲ ಕರ್ಮ ಕಠಿಣ ಕ್ರಿಯಾ ಭೋಕ್ತನು ಮಿತ್ರನೆಂದರಿಯದೆ 5
--------------
ಜಗನ್ನಾಥದಾಸರು
ಶ್ರೀ ತುಳಜಾ ಮಹಾತ್ಮೆ ಅಧ್ಯಾಯ ಒಂದು ರಾಗ:ಸೌರಾಷ್ಟ್ರ ತಾಳ:ತಿವಿಡೆ ಸಿರಿಯ ಸಹಿತಾಗಿರುವ ವೆಂಕಟಗಿರಿಯ ರಮಣನ ಮರೆತು ಎಲ್ಲವನು|| ಚರಕೆರಗುವೆನು|| 1 ಧರೆಯೊಳಗವನ ಮೆಟ್ಟಿ ಹಾರುವ ಹಿರಿಯ ಕವಿಗಳಿಗೆಲ್ಲಾ ನಾನೇ ಕಿರಿಯನೆಂದೆನಿಸಿ ಅವರನು ಮರೆಯದಲೆ ನೆನೆವೆ|| ಕಿರಿಯನಾದರೇನು? ನಾ ಈ ಧರೆಯೊಳಗೆ ಎಲ್ಯಿದ್ದರೇನು? ಮರೆಯದಲೇ ಮಾಡುವರು ಗುರುಗಳು ಮಮತೆ ಎನ ಮೇಲೆ||2 ಕೇವಲಾನಂತಾದ್ರಿ ರಮಣನ ಭಾವ ತಿಳಿಸುವ ನಮ್ಮ ಗುರುಗಳು ಭಾರ ಭಾವದಲ್ಲಿ ಪೇಳುವೇನು ತುಳುಜಾದೇವಿಯ ಮಹಿಮೆಯನು|| 3 ಪದ್ಯ ಪೂರ್ವದಲಿ ಕೃತಯುಗ ಪೂರ್ವದಲ್ಲಿ| ದ್ವಿಜವಯ ನೀರ್ವಕದ್ರುಮನೆಂದು ಊರ್ವಿಯಲ್ಲಿ ಪ್ರಖ್ಯಾತ ಸರ್ವದಾ ಮಾಡುವನು ಸರ್ವರಿಗೆ ಸಮ್ಮತಪೂರ್ವಧರ್ಮವು ಭಕ್ತಿ ಪೂರ್ವಕವಾಗಿ|| ಸರ್ವ ಸ್ತ್ರೀಯ ರೊಳಗ ಪೂರ್ವ ಸುಂದರಿಯಾಗಿ ಇರ್ವಳಾತನ ಮಡದಿ ಊರ್ವಶಿಯ ಪೋಲುವಳು ಊರ್ವಿಯಲಿ ಪತಿಸೇವೆ ಸರ್ವದಾ ಮಾಡುತಲೆ ಇರ್ವಳಾತೆಯು ಮನಃ ಪೂರ್ವಕವಾಗಿ||1 ಆ ಕಾಂತನಿಂದಲ್ಲಿ ತಾಕೂಡಿ ತನ್ನ ಮನಕೆ ಬೇಕಾದ ಸೌಖ್ಯದನೇಕ ವರ್ಷಗಳಲ್ಲಿ ಸ್ವೀಕಾರ ಮಾಡಿದಳು ಶ್ರೀಕಾಂತನ ದಯದಿ ಆಕೆಯ ಹೆಸರುಂಟು ಅನಭೂತಿ ಯಂತೆಂದು|| ಆ ಕರ್ದಮಾಖ್ಯ ದ್ವಿಜತಾಕಾಲದಿಂದ ಭೂತೋಕವನು ಬಿಟ್ಟು ಪರಲೋಕಕೆ ಪೋಗುತಿರೆ ಆಕೆ ಪತಿವುತೆಯು ಎಂಬಾಕೆ ಸಹಗಮನವೆಂಬ ಸಹಗಮನೆಂಬೊ ಆಶಾರ್ಯ ಮಾಡುತಿರೆ| ಆ ಕಾಲದಲ್ಲಿ ಆಯಿತಾಕಾಶವಾಣಿ|| ಪದ ಬ್ಯಾಡ ಬ್ಯಾಡಮ್ಮ ಬ್ಯಾಡದು || ನೀ ಮಾಡೋಕಾರ್ಯ ಬ್ಯಾಡ|| ಬ್ಯಾಡು ಬ್ಯಾಡುಮ್ಮ ಕೇಳು ಮಾಡತಕ್ಕ ಕಾರ್ಯದೂರ ನೋಡಿ ಮಾಡುಬೇಕು ಇಂಥ ಮೂಢ ಬುದ್ಧಿ ಮಾಡುವದು||ಪ ಪತಿಯ ಸರಿಯು ಹಿತಕರಿಲ್ಲವು || ಪತಿವ್ರತೆಗೆ ತನ್ನ ಪತಿಯ ಹೊರತು ಗತಿಯು ಇಲ್ಲವು || ಸುಳ್ಳಲ್ಲವು|| ಪತಿಯು ಇಲ್ಲದಿದ್ದರೇನು ಸುತರು ಸುಗುಣರುಂಟು ನಿನಗೆ ಸುತರು ಇರಲು ಪತಿಯ ಕೂಡಿ ಗತಿಯಸಮ್ಮತವು ಅಲ್ಲ|| 1 ಪತಿಯ ಬಿಟ್ಟು ಸ್ಥಿತಿ ಅಧರ್ಮವೇ| ಆ ಸತಿಗೆ ತನ್ನ ಪತಿಯ ಕೂಡೆ ಗತಿಯು ಧರ್ಮವೇ|| ಸತ್ಕರ್ಮವೇ|| ಪತಿಯ ಮ್ಯಾಲೆ ಸತಿಯು ಊಂಟು ಸತಿಗೆ ಸಮ್ಮತವು ಸತ್ಯ ಪತಿಯಿಂದಲೇ ಪತಿಯಲೋಕ ಗತಿಯು ಪತಿವುಲೆಯೇ ನಿನಗೆ||2 ಮುಖ್ಯಮಾತು ನೀನು ಕೇಳಿದ್ದು|| ಗರ್ಭಿಣಿಯು ಮತ್ತು ಮಕ್ಕಳುಳ್ಳ ಸ್ತ್ರೀಯು ಮಾಳ್ಪುದು || ಧರ್ಮಲಿಲ್ಲದ್ದು|| ಮಕ್ಕಳುಳ್ಳವಳು ನೀನು ಮಕ್ಕಳನ್ನು ಪಾಲಿಸುವುದು ಮುಖ್ಯನಂತಾದ್ರಿ ರಮಣ ತಕ್ಕ ಮುಕ್ತಿಕೂಡುವ ನಿನಗೆ|| 3 ಪದ್ಯ ಆ ಕಾಲಕ್ಕಾಗಿರುವ ಆಕಾಶವಾಣಿಯನ್ನು ತಾ ಕೇಳಿ ಅನುಭೂತಿ|| ಕಾಲ ಮೇರು ಶೈಲದಲ್ಲಿ|| 1 ಚಾರು ಮಂದಾಕಿನಿಯ ತೀರದಲ್ಲಿ ಪರ್ಣದ ಕುಟೀರವನ್ನು ಹಾರಿಸುತಾ ಬಂದನಾ ನಾರಿ ಇದ್ದಲ್ಲಿ||2 ಆಗ ಆಕೆಯ ಕಂಡು ಹೋಗಿ ಬದಿಯಲಿ ನಿಂತು ಹೀಗೆಂದು ಮನಸಿನಲಿ ಯೋಗಿಯಂತಲಿ ನಿಶ್ಚಳಾಗಿಹಳು ದಾವಾಕಿ ದೈವಯೋಗದಲ್ಲಿ ನೋಡಿದರೆ ಯೋಗಿಗಳು ತಮ್ಮ ಉದ್ಯೋಗಿವನ್ನು ಬಿಡುವರು ಹೀಗೆಂದು ಅನುಭೂತಿಯಾಗಿ ಮೋಹಿಸಿ ನುಡಿದ ಭೋಗ ಬಯಸುತಲೇ|| 3 ಪದ ರಾಗ:ಶಂಕರಾಭರಣ ನೀಪೇಳೆ ದಾವದಾವದು ನಿನ್ನ ಜೀವಕ್ಕ ಬೇಕು ಹೇಳೆ|| ಪ ನಿತ್ಯ ಶೋಷಣ ಮಾಡುಬ್ಯಾಡೇ|| 1 ದೇವತೆಗಳು ಎಲ್ಲಾರು ಬಿಡದೆ ಎನ್ನ ಕೋಕರಾಗಿಹರು|| ಸಾವಿರ ಸ್ತ್ರೀಯರು ಸೇವಿಸುವರು ಎನ್ನ ಸೇವಿಸುವರು ನಿನ್ನನ್ನು 2 ಚಿಕ್ಕ ಪ್ರಾಯದಲ್ಲಿ ನೀನು ಇರುವಿ ನಿನ್ನ ತಕ್ಕ ಪುರುಷನು ನಾನು|| ಮುಖ್ಯನಂತಾದ್ರೀಶ ಸಿಕ್ಕ ನಿನಗೆ ನಿನ್ನ ತಕ್ಕಂತೆ ಆಯಿತ್ಹೇಳೆ|| 3 ಪದ್ಯ ಧ್ಯಾನದಲ್ಲಿರಲು ದುಷ್ಟ ದನುಜೇಶ್ವರನು ತಟ್ಟನೆ ಮಾಡಿ ದುಕೃಷ್ಟ ತಾಳ ಧ್ವನಿಯು ಕಟ್ಟು ಇಲ್ಲದೇ ಒಳ್ಳೆ ಗಟ್ಟಿ ವದರಿಸಿ ನೋಡಿ ಒಂದಿಷ್ಟು ನುಡಿಯದೆ ಇರಲು, ದಿಟ್ಟಾಗಿ ತನಗೆ ರೀತಿ|| ಸಿಟ್ಟಲೇ ನುಡಿದಾಳು ಆ ಪತಿವುತೆ|| 1 ದಾ ಪೇಳಲೋ ನೀ ಧಿಟ್ಟ ದಾರಿಲ್ಯಾತಕೆ ಬಂದ್ಯೊ ನೀ ಪಾಪಿಷ್ಠ|| ದೂರದಲ್ಲಿ ಇರೋ ನೀ ದುಷ್ಟ || ಧೈರ್ಯದಿ ನೀ ಎನ್ನ ಮುಟ್ಟಿದ್ಯೋ ಭ್ರಷ್ಟ|| 2 ಸುಖಭರಿತ || ಲಗುಬಗೆಯಲಿ ಮೋಹಿಸುತ || ಬಗೆ ಬಗೆಯಲ್ಲಿ ಮಾತನಾಡಿದನು ನಗುನಗುತ| 3 ಪದ, ರಾಗ:ಶಂಕರಾಭರಣ ಮರುಳು ಗೊಂಡೆನೇ || ತರುಳೆ ನೊಂದೆನೆ|| ಮರಳು ಗೊಂಡೆ ತರುಳೆ ನಿನ್ನ ಹೊರಳಿ ನೋಡುವ ಯ್ಹರಳಿನೋಟಕೆ|| ಪ ಮಾನ್ಯ ಮಾನಣಿ || ರನ್ನೆ ಶಿರೋಮಣಿ || ಚೆನ್ನವಾದ ಚಿನ್ನದಂಥ ನಿನ್ನ ದೇಹವನ್ನು ಕಂಡು|| 1 ಮಾತುಲಾಲಿಸೆ|| ಪ್ರೇತಿ ತೋರಿಸೆ ||ಪ್ರೀತಿ ಎಂಬೊದ್ಯಾತಕಿನ್ನ ಸೋತು ಕಾಮಾಪೂರದಲ್ಲಿ|| 2 ನಿಂತು ಮರೆತೆನಾ || ಅನಂತಾದ್ರೀಶನಾ || ಎಂಥಹವರಿಗೆ ಭ್ರಾಂತಿ ಬಿಡಿಸುವಂಥ ನಿನ್ನ ಕಾಂತಿ ನೋಡಿ|| 3 ಆರ್ಯಾ ಇಂಥಾ ಮಾತವು ಕೇಳಿ || ಚಿಂತಾಕ್ರಾಂತಳಾದಳಾಗ ಆಗ ಆ ಬಾಲಿ|| ಬಂದಿತು ಇಂಥಾ ಘೋರಾ || ಚಿಂತಿಸ ಬೇಕಿನ್ನು ಇವನ ಸಂಹಾರಾ|| 1 ಶಾಪಿಸ ಬಾರದು ಜ್ಞನಿ || ಶಾಪಿಸಿದವರ ಅಗುವುದು ತಪಹಾನಿ|| ಪರಿ ಮನಸಿಗೆ ತಂದು ವ್ಯಾಪಾರವು ಮಾಡಿದಳು ಮತ್ತೊಂದು| 2 ಎಂಬಾಕೆ ನಾಮವೇ ತುಳಜಾ|| 3 ಪದ ರಾಗ :ಸಾರಂಗ ತಾಳ :ತಿವಿಡಿ ಸ್ವರಷಡ್ಜ ಸಲಹಬೇಕೆಂದು ನಿಲ್ಲದೆ|| ಪ ಪಾಶಾಕೃಷ್ಟ ಧರಿಸುತಾ||1 ವರೆಂದು || ದಯಮಾಡಿ ವರಗÀಳ ನೀಡುವಳು ಹಿಡಿಯಂದು|| ಕಾರುಣ್ಯಸಿಂಧು|| ಗಾಢನೆ ಧ್ವನಿ ಮಾಡುತಲೇ ಹಾರ್ಯಾಡುತಲೇ ತ್ವರ ಮಾಡಿಸುತಲೇ ಓಡಿ ಬರುತಿಹ ಪ್ರೌಢಗಣಗಳ ಕೂಡಿ ಸಿಂಹಾರೂಢಳಾಗಿ||2 ಎಂತು ಪೊಗಳಲಿ ನಾನು|| ಅತ್ಯಂತ ಬಹಳಾದಂತ ಮಹಿಮೆಗಳನು ಎಂತೆಂಥವರು ಬೇಕಂತ ಹುಡುಕಿದರೇನು|| ಹಿಗಂತ ಆಕೆಯ ಅಂತೂ ತಿಳಿಯದು ಇನ್ನು|| ಗುಣವತಿ ತಾನು|| ಶಾಂತಿಯಿಂದ ಅನಂತಾದ್ರೇಶನ ಕಾಂತಯಳ ಪೋಲುವಂತ ದೇವಿಯು ಚಿಂತೆಯಲಿ ತನ ಚಿಂತಿಸಿರುವಳ ಚಿಂತೆ ಬಿಡಿಸ ಬೇಕಂತ ಧಾವಿಸಿ|| 3 ಆರ್ಯಾ ಸಾರ ಪರಮಾದರದಿಂದ ಕೂತು ಕೇಳಿದವರು || ಪರಿಪೂಜಿಸುತಾ ತುಳಜಾ ತಾನಾಗುವಳು ಪ್ರತ್ಯಕ್ಷ|| 1 ವರಕವಿತಾ ರಚನಕ್ಕೆ|| ತುಳಜಾದೇವಿಯ ದಿವ್ಯ ಚರಿತಕ್ಕೆ || ಚರಿಸದು ಎನ್ನ ಉಪಾಯ|| ಗುರು ಕೃಪೆಯಿಂದಾಯಿತೊಂದಧ್ಯಾಯ|| ಶ್ರೀಹರೇ ಪ್ರಸೀದ||
--------------
ಅನಂತಾದ್ರೀಶ - ಕಥನಕಾವ್ಯಗಳು
ಶ್ರೀ ಪ್ರಾಣೇಶದಾಸಾರ್ಯರ ಸ್ತುತಿ ತೆರಳಿದರು ಪರಮ ತೋಷದಲಿ ಹರಿಪರಕೆ |ಹರಿಪ್ರೀಯರಾದ ಪ್ರಾಣೇಶದಾಸರು ತ್ವರದಿ ಪ ನಿರುತದಲಿ ಹರಿಪೂಜೆ |ಮರಿಯದಲಿ ಮಾಡಿ ಬಲು |ಸ್ಥಿರ ಬುದ್ಧಿ ಪೂರ್ವಕದಲಿ |ಗುರುಗಳಲಿ ಸರ್ವಜ್ಞರಾಯರಿಂದಧಿಕ ಮ ||ತ್ತಿರಲುಂಟೆ ಎಂದು ತಿಳುಹಿ |ದುರುಳ ಜನರನುಸರಿಸದಲೆ ಕವಿಗಳೊಡನಾಡಿ |ಚರಿಸಿ ದೇಶಗಳಲ್ಲಿ ಮೆರೆದು ಖ್ಯಾತಿಯ ಪಡದು 1 ಭಾಗವತ ಶ್ರೇಷ್ಟ ಜಗನ್ನಾಥ ದಾಸಾಖ್ಯರಡಿ |ಜಾಗುಮಾಡದಲರ್ಚಿಸಿ |ಭೋಗಿವರ ಶಯನ ಪ್ರಾಣೇಶವಿಠಲಾಂಕಿತವ ||ಆ ಗುರುಗಳಿಂದ ಕೊಂಡು |ರಾಗದ್ವೇಷಗಳೆಂಬ ಅರಿಗಳನು ಸಂಹರಿಸಿ |ರಾಗದಲಿ ಹರಿಕಥನ ಕವನ ರೂಪದಿ ಪೇಳಿ2 ಪ್ರಾಣಮತವನನುಸರಿಸಿ ಆಚರಣಿಯನು ಮಾಡಿ |ಪ್ರಾಣಿಗಳಿಗೆ ತಿಳಿಸದೆ |ಕ್ಷೋಣಿಯೊಳಗಿನ್ನು ಇರಸಾಕೆಂದು ಆ |ಚಿತ್ರಭಾನು ಆಶ್ವಯುಜ ಶುದ್ಧ ಸಪ್ತಮಿಯಲಿ ||ಜ್ಞಾನಪೂರ್ವಕ ಲಯ ಚಿಂತನೆಯ ಮಾಡಿ ಗುರು |ಪ್ರಾಣೇಶ ವಿಠಲನಿದ್ದಾ ಪುರಕೆ ಜವದಿಂದ3
--------------
ಗುರುಪ್ರಾಣೇಶವಿಠಲರು
ಶ್ರೀಹರಿಯ ಸ್ತುತಿ ಅಂಬುಜಾಕ್ಷನೆ ಪಾಲಿಸೊ ಅಂಬುಜಾಕ್ಷನೆ ಕೇಳು ಕಂಬುಕಂಧರ ನಿನ್ನ ನಂಬಿದ ಜನರನು ಇಂಬಾಗಿರಕ್ಷಿಸುವ ಪ ಹರಿಯೆ ನೀ ಭಕುತರ ಸುರತರುವೆಂದು ಅರಿದು ನಿನ್ನಡಿಗೆ ಬಂದು ಕರುಣಾಸಿಂಧು ವರವೇನು ಎನ್ನ ಪರಿಚರ್ಯವೆಲ್ಲವನು ಜರಿದು ಎನ್ನನು ಪೊರಿಯೆಂದು ಭಕ್ತರ ಬಂಧು ಕರಿವರದನೀತರಿವಿದುರುಳನ ಪೊರೆವಿ ಸುಜನರ ಅರವಿದೂರನೆ ಸ್ಮರಣೆಮಾತ್ರದಿ ತರಣಿಸುತನ ಪುರದಭಯವನು ಪರಿಹರಿಸುವಿ 1 ಭವರೋಗವೈದ್ಯ ನೀ ಅವಧಿಯೂ ಇಲ್ಲದೆ ಸ್ವವಶವ್ಯಾಪಿಯಾಗಿ ದಿವಿಜಯ ಪೊರೆವಿ ಭಕುತರ ಕಾಯ್ಯಿ ಅವನೀಲಿ ಜನಿಸಿದ ಪವನ ವೈರಿಯ ಕವಿಶಿ ಮೋಹದಿ ಕೆಡಿಶಿದಿ ನರನನ್ನು ಪೊರದಿ ಅವನಿಪಿತ ನಿನ್ನ ಯುವತಿ ವೇಷವ ಕವಿಗಳೆಲ್ಲರು ಸ್ತವನ ಮಾಳ್ಪರು ಪವನ ಪ್ರಿಯನೆ ಭುವನ ತಾತನೆ ಶಿವಗೆ ವರವಿತ್ತೆ ಪವನನಯ್ಯನೆ 2 ತರಳ ಪ್ರಹ್ಲಾದನ ಪೊರೆದು ಪಾಂಚಾಲಿಗೆ ವರವಿತ್ತೆ ಕರಿಪುರಾಡರಸರ ಪ್ರಭುವೆ ಸುರತರು ವೇಷಶರಣಾಗತರನು ಪೊರೆವನೆಂಬ ನಿಜ ಬಿರುದನು ಮೆರಿಸುತ ಶಿರಿಯಿಂದೊಪ್ಪುತ ವರ ಭಕ್ತಾಗ್ರೇಸರ ನರಪಾಂಬರೀಷನ ಪೊರೆವಂಥ ಸುರಪತಿ ಶಿರಿವತ್ಸಾಂಕಿತನೆ 3
--------------
ಸಿರಿವತ್ಸಾಂಕಿತರು
ಸಂಪ್ರದಾಯದ ಹಾಡುಗಳು ಕೋಲು ಹಾಡು ಆಕಾಶಕಭಿಮಾನಿ ಶ್ರೀಕಂಠ ವರಪುತ್ರಏಕದಂತನೆ ವಿಘ್ನೇಶ ಕೋಲೆಏಕದಂತನೆ ವಿಘ್ನೇಶ ನಿನ್ನ ಪದಏಕ ಚಿತ್ತದಲಿ ಬಲಗೊಂಬೆ ಕೋಲೆ 1 ನೆನೆಯಕ್ಕಿ ನೆನೆಗಡಲೆ ಗೊನೆಯ ಬಾಳೆಯ ಹಣ್ಣುಘನವಾದ ಚಿಗುಳಿ ತಂಬಿಟ್ಟು ಕೋಲೆಘನವಾದ ಚಿಗುಳಿ ತಂಬಿಟ್ಟು ತಂದೀವೆಗಣಪತಿ ಮತಿಯ ಕರುಣಿಸು ಕೋಲೆ 2 ಜಾಹ್ನವಿ ಜಾಹ್ನವಿ ಜನಕ ನಾರಾಯಣನಗಧರನ ಮುನ್ನ ಬಲಗೊಂಬೆ ಕೋಲೆ 3 ಮಚ್ಛ ಕೂರುಮ ವರಹ ನರಸಿಂಹ ವಾಮನಸ್ವಚ್ಛ ಭೃಗುರಾಮ ರಘುರಾಮ ಕೋಲೆಸ್ವಚ್ಛ ಭೃಗುರಾಮ ರಘುರಾಮ ಕೃಷ್ಣ ಬೌದ್ಧಅಚ್ಛ ಕಲ್ಕಿಯ ಬಲಗೊಂಬೆ ಕೋಲೆ 4 ಈಶ ಬ್ರಹ್ಮರಿಗೆ ನಿಯಾಮಕನಾಗಿದ್ದುಪೋಷಿಸುತಿಪ್ಪ ಪರಮಾತ್ಮ ಕೋಲೆಪೋಷಿಸುತಿಪ್ಪ ಪರಮಾತ್ಮನಾದ ಶ್ರೀಕೇಶವನ ಮೊದಲೆ ಬಲಗೊಂಬೆ ಕೋಲೆ 5 ನೀರಿಗಾಶ್ರಯನಾಗಿ ನೀರೊಳು ಮಲಗಿಪ್ಪನೀರಜ ನೇತ್ರ ನಿಗಮಾತ್ಮ ಕೋಲೆನೀರಜ ನೇತ್ರ ನಿಗಮಾತ್ಮನಾದ ಶ್ರೀನಾರಾಯಣನ್ನ ಬಲಗೊಂಬೆ ಕೋಲೆ 6 ಯಾದವ ಕುಲಜನೆ ಸಾಧುಗಳರಸನೆಮಾದೇವಿಗಾಶ್ರಯನಾಗಿಪ್ಪ ಕೋಲೆಮಾದೇವಿಗಾಶ್ರಯನಾಗಿ ಪಾಲಿಸುವಮಾಧವನ್ನ ಮೊದಲೆ ಬಲಗೊಂಬೆ ಕೋಲೆ 7 ಚಂದದಿಂದ ವೇದ ವೃಂದ ಪ್ರತಿಪಾದ್ಯನೆಇಂದಿರಾದೇವಿ ರಮಣನೆ ಕೋಲೆಇಂದಿರಾದೇವಿ ರಮಣನಾದ ಗೋ-ವಿಂದನ್ನ ಮೊದಲೆ ಬಲಗೊಂಬೆ ಕೋಲೆ 8 ಸೃಷ್ಟಿಯೊಳಗೆಲ್ಲ ವ್ಯಾಪ್ತನಾಗಿರುತಿಪ್ಪವೈಷ್ಣವಕುಲಕೆ ತಿಲಕನೆ ಕೋಲೆವೈಷ್ಣವ ಕುಲಕೆ ತಿಲಕನಾದ ಶ್ರೀವಿಷ್ಣುವಿನ ಮೊದಲೆ ಬಲಗೊಂಬೆ ಕೋಲೆ 9 ಅಧಮನಾಗಿದ್ದಂಥ ಅಸುರನ ಸಂಹರಿಸಿಮುದವ ಬೀರಿದನೆ ಸುರರಿಗೆ ಕೋಲೆಮುದವ ಬೀರುತ ಸುರರ ಪಾಲಿಸುವಂಥಮಧುಸೂದನನ್ನ ಬಲಗೊಂಬೆ ಕೋಲೆ 10 ಚಿಕ್ಕ ಬ್ರಾಹ್ಮಣನಾಗಿ ಬಲಿಯ ದಾನವ ಬೇಡಿಆಕ್ರಮಿಸಿದನೆ ತ್ರಿಲೋಕವ ಕೋಲೆಆಕ್ರಮಿಸಿ ತ್ರಿಲೋಕವನಳೆದ ತ್ರಿ-ವಿಕ್ರಮನ್ನ ಮೊದಲೆ ಬಲಗೊಂಬೆ ಕೋಲೆ 11 ಭೂಮಿಯೊಳಗೆ ಅತಿ ಸಂಭ್ರಮನಾಗಿದ್ದಕಾಮಿತಾರ್ಥಂಗಳ ಕರೆವನೆ ಕೋಲೆಕಾಮಿತಾರ್ಥಂಗಳ ಕರೆದು ಭಕ್ತರ ಪೊರೆವವಾಮನನ್ನ ಮೊದಲೆ ಬಲಗೊಂಬೆ ಕೋಲೆ 12 ವೇದಾಭಿಮಾನಿಗೆ ಸಾದರವಾಗಿಪ್ಪಬೌದ್ಧ ಮೂರುತಿಯೇ ಭವದೂರ ಕೋಲೆಬೌದ್ಧ ಮೂರುತಿಯೇ ಭವದೂರನಾದ ಶ್ರೀಶ್ರೀಧರನ್ನ ಮೊದಲೆ ಬಲಗೊಂಬೆ ಕೋಲೆ 13 ಸಾಕಾರ ಮೂರುತಿ ಸರ್ವೇಂದ್ರಿ ನಿಯಾಮಕನಾಕೇಶ ವಂದ್ಯ ನಳಿನಾಕ್ಷ ಕೋಲೆನಾಕೇಶ ವಂದ್ಯ ನಳಿನಾಕ್ಷನಾದ ಹೃಷಿ-ಕೇಶ ಹರಿಯ ಬಲಗೊಂಬೆ ಕೋಲೆ 14 ಪದುಮ ಸಂಭವ ಪಿತ ಪದುಮಿನಿ ವಲ್ಲಭಪದುಮ ಪೊಕ್ಕುಳಲಿ ಪಡೆದನೆ ಕೋಲೆಪದುಮ ಪೊಕ್ಕುಳಲ್ಲಿ ಪಡೆದು ಪಾಲಿಸುವಂಥಪದುಮನಾಭನ ಮುನ್ನ ಬಲಗೊಂಬೆ ಕೋಲೆ 15 ಕಾಮಿನಿ ಯಶೋದೆ ಒರಳಿಗೆ ಕಟ್ಟಲುಶ್ರೀ ಮನೋಹರ ಶೆಳೆದೊಯ್ದ ಕೋಲೆಶ್ರೀ ಮನೋಹರ ಶೆಳೆದು ಪಾಪವ ಕಳೆದದಾಮೋದರನ್ನ ಬಲಗೊಂಬೆ ಕೋಲೆ 16 ಕಿಂಕರರ ಚಿತ್ತ ದುರ್ವಿಷಯಕ್ಕೆರಗಲುಪಂಕಜನಾಭ ಶಳೆದನೆ ಕೋಲೆಪಂಕಜನಾಭ ಶಳೆದು ತನ್ನಲ್ಲಿಡುವಸಂಕರುಷಣನ್ನ ಬಲಗೊಂಬೆ ಕೋಲೆ 17 ಏಸು ಬ್ರಹ್ಮಾಂಡದೊಳು ವಾಸವಾಗಿರುತಿಪ್ಪದಾಸವರ್ಗವನೆ ಪೊರೆವನೆ ಕೋಲೆದಾಸ ವರ್ಗವನೆ ಪೊರೆವನೆ ನಮ್ಮ ಶ್ರೀವಾಸುದೇವನ್ನ ಬಲಗೊಂಬೆ ಕೋಲೆ 18 ಅದ್ವೈತ ಮಹಿಮನೆಸದ್ವೈಷ್ಣವರ ಪೊರೆವನೆ ಕೋಲೆಸದ್ವೈಷ್ಣವರ ಪೊರೆವನೆ ಅಜನಯ್ಯಪ್ರದ್ಯುಮ್ನ ಹರಿಯ ಬಲಗೊಂಬೆ ಕೋಲೆ 19 ಅನಿಮಿಷ ದೈತ್ಯರ ಮನಕೆ ಸಿಲುಕದಿಪ್ಪಸನಕಾದಿ ವಂದ್ಯ ಸಕಲೇಶ ಕೋಲೆಸನಕಾದಿ ವಂದ್ಯ ಸಕಲೇಶನಾಗಿಪ್ಪಅನಿರುದ್ಧ ಹರಿಯ ಬಲಗೊಂಬೆ ಕೋಲೆ 20 ಕ್ಷರಾಕ್ಷರದೊಳು ಪರಮೋತ್ತಮನಾದಕರಿರಾಜ ವರದ ಕವಿಗೇಯ ಕೋಲೆಕರಿರಾಜ ವರದ ಕವಿಗೇಯನಾದ ಶ್ರೀಪುರುಷೋತ್ತಮನ್ನ ಬಲಗೊಂಬೆ ಕೋಲೆ 21 ಅಕ್ಷಯ ಮೂರುತಿ ಮೋಕ್ಷದಾಯಕ ಸ್ವಾಮಿಕುಕ್ಷಿಯೋಳ್ ಜಗವ ರಕ್ಷಿಪ ಕೋಲೆಕುಕ್ಷಿಯೋಳ್ ಜಗವ ಪಾಲಿಪ ನಮ್ಮ ಅ-ದೋಕ್ಷಜ ಹರಿಯ ಬಲಗೊಂಬೆ ಕೋಲೆ 22 ಕ್ರೂರ ಖಳನುದರ ಸೀಳಿ ಪ್ರಹ್ಲಾದನಕಾರುಣ್ಯದಿಂದ ಕಾಯ್ದನ ಕೋಲೆಕಾರುಣ್ಯದಿಂದ ಕಾಯ್ದನ ನಮ್ಮ ಶ್ರೀನಾರಸಿಂಹನ್ನ ಬಲಗೊಂಬೆ ಕೋಲೆ 23 ಸಚ್ಚಿದಾನಂದನೆ ಸಕಲಗುಣ ಪರಿಪೂರ್ಣಮುಚುಕುಂದ ವರದ ಮುನಿನುತ ಕೋಲೆಮುಚುಕುಂದ ವರದ ಮುನಿನುತನಾದ ಶ್ರೀಅಚ್ಯುತನ ಮೊದಲೆ ಬಲಗೊಂಬೆ ಕೋಲೆ 24 ದುರ್ಧರ್ಷರಾಗಿದ್ದ ಖಳರ ಸಮುದಾಯವಮರ್ದನ ಮಾಡಿದ ಮಹಮಹಿಮ ಕೋಲೆಮರ್ದನ ಮಾಡಿದ ಮಹಮಹಿಮನಾದ ಜ-ನಾರ್ದನ್ನ ಮೊದಲೆ ಬಲಗೊಂಬೆ ಕೋಲೆ 25 ಇಂದ್ರಾನುಜನಾಗಿ ಸ್ವರ್ಗದೊಳಿರುತಿದ್ದುಸಾಂದ್ರ ಸುಖವೀವೆ ಸುರರಿಗೆ ಕೋಲೆಸಾಂದ್ರ ಸುಖವಿತ್ತು ಸುರರ ಪಾಲಿಸುವ ಉ-ಪೇಂದ್ರನ ಮೊದಲೆ ಬಲಗೊಂಬೆ ಕೋಲೆ 26 ಪರಮ ಭಕ್ತರ ಪಾಪ ಪರಿಹಾರವನೆ ಮಾಡಿಪರಮ ಪದವಿಯ ಪಾಲಿಪ ಕೋಲೆಪರಮ ಪದವಿಯ ಪಾಲಿಪ ನಮ್ಮ ಶ್ರೀ-ಹರಿಯ ಮೊದಲೆ ಬಲಗೊಂಬೆ ಕೋಲೆ 27 ಶಿಷ್ಟ ಪಾಲಕ ಉತ್ಕøಷ್ಟ ಜ್ಞಾನಾನಂದಕೃಷ್ಣೆಯ ಕಷ್ಟ ಬಿಡಿಸಿದ ಕೋಲೆಕೃಷ್ಣೆಯ ಕಷ್ಟ ಬಿಡಿಸಿದ ನಮ್ಮ ಶ್ರೀ-ಕೃಷ್ಣನ್ನ ಮೊದಲೆ ಬಲಗೊಂಬೆ ಕೋಲೆ 28 ಅನಿರುದ್ಧಾದಿ ರೂಪ ವಿಶ್ವಾದಿ ಅಜಿತಾದಿಸನತ್ಕುಮಾರಾದಿ ಅಜಾದಿ ಕೋಲೆಸನತ್ಕುಮಾರಾದಿ ಅಜಾದಿ ರೂಪನಾದಘನ ಮಹಿಮನ್ನ ಬಲಗೊಂಬೆ ಕೋಲೆ 29 ಹಯಗ್ರೀವ ದತ್ತ ಋಷಭ ಸಂಕರ್ಷಣಭಯರಹಿತ ಬಾದರಾಯಣ ಕೋಲೆಭಯರಹಿತ ಬಾದರಾಯಣ ಮಹಿದಾಸವಯಿಕುಂಠ ಹರಿಯ ಬಲಗೊಂಬೆ ಕೋಲೆ 30 ಆತ್ಮಾದಿ ವಾಸುದೇವಾದಿ ಮೂರುತಿಶ್ರೀ ತರುಣೇಶ ವಿಶ್ವೇಶ ಕೋಲೆಶ್ರೀ ತರುಣೇಶ ವಿಶ್ವೇಶ ರೂಪನಾದಜ್ಯೋತಿರ್ಮಯನ ಬಲಗೊಂಬೆ ಕೋಲೆ 31 ಮುನಿ ವೇದವ್ಯಾಸ ಸನತ್ಕುಮಾರ ಮೂರ್ತಿಮಿನಗುವ ದತ್ತಾತ್ರೇಯನೆ ಕೋಲೆಮಿನಗುವ ದತ್ತಾತ್ರೇಯ ಹಯಗ್ರೀವದನುಜಾಂತಕನ್ನ ಬಲಗೊಂಬೆ ಕೋಲೆ 32 ಕಂಗಳಾಪಾಂಗದಿಂ ಕಮಲಾಸನಾದಿಗಳಸಂಗಾತ ಸೃಷ್ಟಿಪ ಮಹಲಕ್ಷ್ಮೀ ಕೋಲೆಸಂಗಾತ ಸೃಷ್ಟಿಪ ಮಹಲಕ್ಷ್ಮೀ ನಿನ್ನ ಪಾ-ದಂಗಳಿಗೆರಗಿ ಬಲಗೊಂಬೆ ಕೋಲೆ 33 ಮಾಯಾ ಜಯಾಕೃತಿ ಶಾಂತಿ ಇಂದಿರಾದೇವಿಕಾಮನ ಜನನಿ ಜಯಂತಿ ಕೋಲೆಕಾಮನ ಜನನಿ ಜಯಂತಿ ಜಾನಕಿ ಸತ್ಯ-ಭಾಮಾ ರುಕ್ಮಿಣಿಯ ಬಲಗೊಂಬೆ ಕೋಲೆ 34 ಪರಮೇಷ್ಠಿ ಪರಮೇಷ್ಠಿ ನಿನ್ನ ಪದಪದುಮವ ಮುನ್ನ ಬಲಗೊಂಬೆ ಕೋಲೆ 35 ಹನುಮ ಭೀಮ ಮಧ್ವ ಮುನಿರಾಯ ಮಾರುತಿದನುಜಾರಿ ಭಕ್ತ ವಿರಕ್ತ ಕೋಲೆದನುಜಾರಿ ಭಕ್ತ ವಿರಕ್ತ ನಿನ್ನ ಪಾದವನಜವ ಮುನ್ನ ಬಲಗೊಂಬೆ ಕೋಲೆ 36 ವಾಣಿ ಅಜನ ಮುದ್ದು ರಾಣಿ ಪಲ್ಲವ ಪಾಣಿಜಾಣೆ ಕೊಡೆಮಗೆ ಮತಿಗಳ ಕೋಲೆಜಾಣೆ ಕೊಡೆಮಗೆ ಮತಿಗಳ ನಿನ್ನ ಪಾದರೇಣುವಿನ ಮುನ್ನ ಬಲಗೊಂಬೆ ಕೋಲೆ 37 ಭಾರತಿದೇವಿ ನಿನ್ನ ವಾರಿಜ ಚರಣವಬಾರಿ ಬಾರಿಗೆ ಭಜಿಸುವೆ ಕೋಲೆಬಾರಿ ಬಾರಿಗೆ ಭಜಿಸುವೆ ಎಮಗೆ ಶ್ರೀನಾರಾಯಣನಲ್ಲಿ ರತಿ ಕೊಡು ಕೋಲೆ 38 ಇಂದ್ರನ ಗೆದ್ದು ಸುಧೆ ತಂದು ಮಾತೆಯಬಂಧನ ಕಡಿದ ಬಲುಧೀರ ಕೋಲೆಬಂಧನ ಕಡಿದ ಬಲುಧೀರನಾದ ಖ-ಗೇಂದ್ರನ್ನ ಮುನ್ನ ಬಲಗೊಂಬೆ ಕೋಲೆ 39 ಸಾಸಿರ ಮುಖದಿಂದ ಶ್ರೀಶನ್ನ ತುತಿಸಿ ಶ್ರೀವಾಸುದೇವಂಗೆ ಹಾಸಿಕೆ ಕೋಲೆವಾಸುದೇವಂಗೆ ಹಾಸಿಕೆಯಾದ ಮಹ-ಶೇಷನ್ನ ಮುನ್ನ ಬಲಗೊಂಬೆ ಕೋಲೆ 40 ಅಪರಿಮಿತ ಕಾರ್ಯ ತ್ರಿಪುರ ದಹನನೆಚಪಲ ಮೂರುತಿ ಚಂದ್ರಚೂಡ ಕೋಲೆಚಪಲ ಮೂರುತಿ ಚಂದ್ರಚೂಡ ಭಜಕರಅಪಮೃತ್ಯು ಹರನ ಬಲಗೊಂಬೆ ಕೋಲೆ 41 ಖಗ ಶೇಷಶಂಭು ರಾಣಿಯರ ಬಲಗೊಂಬೆ ಕೋಲೆ 42 ಶಕ್ರ ಕಾಮಾದಿ ದೇವರ್ಕಳ ಚರಣಕ್ಕೆಅಕ್ಕರದಿಂದ ಅಭಿನಮಿಪೆ ಕೋಲೆಅಕ್ಕರದಿಂದ ಅಭಿನಮಿಸಿ ಪೇಳ್ವೆ ದೇ-ವಕ್ಕಿ ನಂದನನ ಚರಿತೆಯ ಕೋಲೆ 43 ಪದ್ಮನಾಭ ನರಹರಿತೀರ್ಥಶ್ರೀ ಮಾಧವಾರ್ಯ ಅಕ್ಷೋಭ್ಯ ಕೋಲೆಶ್ರೀ ಮಾಧವಾರ್ಯ ಅಕ್ಷೋಭ್ಯ ಜಯತೀರ್ಥಸ್ವಾಮಿಗಳ ಮೊದಲೆ ಬಲಗೊಂಬೆ ಕೋಲೆ 44 ನ್ಯಾಯಾಮೃತ ತರ್ಕ ತಾಂಡವ ಚಂದ್ರಿಕೆನ್ಯಾಯ ಗ್ರಂಥಗಳ ರಚಿಸಿದ ಕೋಲೆನ್ಯಾಯ ಗ್ರಂಥಗಳ ರಚಿಸಿದ ನಮ್ಮ ವ್ಯಾಸ-ರಾಯರ ಮುನ್ನ ಬಲಗೊಂಬೆ ಕೋಲೆ 45 ಜನನಿ ಗರ್ಭದಿಂದವನಿ ಸ್ಪರ್ಶಿಸದೆಜನಿಸಿ ಬ್ರಹ್ಮಣ್ಯ ಮುನಿಗಳ ಕೋಲೆಜನಿಸಿ ಬ್ರಹ್ಮಣ್ಯ ಮುನಿಗಳ ಮೃದು ಹಸ್ತವನಜ ಸಂಭವನ ಬಲಗೊಂಬೆ ಕೋಲೆ 46 ಶ್ರೀಪಾದರಾಯರಲಿ ಸಕಲ ವಿದ್ಯವನೋದಿಶ್ರೀಪತಿ ಪ್ರೀತಿ ಪಡಿಸಿದ ಕೋಲೆಶ್ರೀಪತಿ ಪ್ರೀತಿ ಪಡಿಸಿದ ವ್ಯಾಸಮುನಿಭೂಪನ ಮೊದಲೆ ಬಲಗೊಂಬೆ ಕೋಲೆ 47 ದೇಶಾಧಿಪತಿಗೆ ಬಂದ ಕುಯೋಗವನೆ ನೂಕಿತಾ ಸಿಂಹಾಸನವೇರಿ ಮೆರೆದನೆ ಕೋಲೆತಾ ಸಿಂಹಾಸನವೇರಿ ಮೆರೆದನೆ ವ್ಯಾಸ ಮು-ನೀಶನ್ನ ಮೊದಲೆ ಬಲಗೊಂಬೆ ಕೋಲೆ 48 ದಂಡ ಕಮಂಡಲು ಧರ ಪಂಡಿತಾರಾಧಾರಕುಂಡಲಿಶಯನನ ಭಜಕರ ಕೋಲೆಕುಂಡಲಿ ಶಯನನ ಭಜಕ ರಾಘವೇಂದ್ರರಕೊಂಡಾಡಿ ಪದನ ಗುಣಿಸುವೆ ಕೋಲೆ 49 ತಂತ್ರ ಸಾರಗಳಿಗೆ ಅರ್ಥವನ್ನು ಸ್ವ-ತಂತ್ರದಿಂದಲಿ ರಚಿಸಿದ ಕೋಲೆ ಸ್ವ-ತಂತ್ರದಿಂದಲಿ ರಚಿಸಿದ ರಾಘವೇಂದ್ರರಪಂಥವಿದ್ದಲ್ಲಿ ಬಲಗೊಂಬೆ ಕೋಲೆ 50 ವೇದಶಾಸ್ತ್ರಾಮೃತ ಸಾರಬಲ್ಲ ರಾಮವೇದವ್ಯಾಸರ ಭಜಕರ ಕೋಲೆವೇದವ್ಯಾಸ ಭಜಕ ರಾಘವೇಂದ್ರರಪಾದವಿದ್ದಲ್ಲಿ ಬಲಗೊಂಬೆ ಕೋಲೆ 51 ತುಂಗಭದ್ರಾ ತೀರ ಮಂತ್ರಾಲಯದಲ್ಲಿಮಂಗಳ ಮಹಿಮರೆನಿಪರೆ ಕೋಲೆಮಂಗಳ ಮಹಿಮರೆನಿಪ ರಾಘವೇಂದ್ರ-ರಂಘ್ರಿ ಕಮಲವ ಬಲಗೊಂಬೆ ಕೋಲೆ 52 ಗುರು ರಾಘವೇಂದ್ರರ ಚರಣ ಪಂಕಜವನ್ನುಸ್ಥಿರ ಬುದ್ಧಿಯಿಂದ ಸ್ಮರಿಸುವೆ ಕೋಲೆಸ್ಥಿರ ಬುದ್ಧಿಯಿಂದ ಸ್ಮರಿಸಿ ನಾ ಪೇಳ್ವೆನುಸರಸಿಜಾಕ್ಷನ್ನ ಚರಿತೆಯ ಕೋಲೆ 53 ರಾಜರಾಜೇಶ್ವರ ಸತ್ಯಾಭಿನವ ತೀರ್ಥರಾಜಕರಾಬ್ಜ ಸಂಭೂತ ಕೋಲೆರಾಜಕರಾಬ್ಜ ಸಂಭೂತ ಸತ್ಯಾಧಿ-ರಾಜರ ಮೊದಲೆ ಬಲಗೊಂಬೆ ಕೋಲೆ 54 ಕ್ಷೀರನದಿಯ ತೀರ ವೇಲೂರ ಪುರವಾಸಸಾರ ಸಜ್ಜನರ ಪೊರೆವನೆ ಕೋಲೆಸಾರ ಸಜ್ಜನರ ಪೊರೆವ ಸತ್ಯಾಧಿರಾಜಧೀರ ಯತಿಗಳ ಬಲಗೊಂಬೆ ಕೋಲೆ 55 ಸತ್ಯಬೋಧರೆಂಬ ಸದ್ಗುರು ಚರಣವಚಿತ್ತದೊಳಿಟ್ಟು ಚರಿಸುವೆ ಕೋಲೆಚಿತ್ತದೊಳಿಟ್ಟು ಸ್ಮರಿಸಿ ನಾ ಪೇಳ್ವೆನುಚಿತ್ತದೊಲ್ಲಭನ ಚರಿತೆಯ ಕೋಲೆ 56 ಪುರಂದರ ರಾಯರಪರಮ ಕೃಪಾಪಾತ್ರ ವಿಜಯರಾಯ ಕೋಲೆಪರಮ ಕೃಪಾಪಾತ್ರ ವಿಜಯರಾಯರ ಪಾದಪರಮ ಭಕ್ತಿಯಲಿ ಸ್ಮರಿಸುವೆ ಕೋಲೆ 57 ದೇವ ನಾರಾಯಣ ಭೂದೇವಿ ಮೊರೆ ಕೇಳಿದೇವಕಿಯಲ್ಲಿ ಜನಿಸಿದ ಕೋಲೆದೇವಕಿಯಲ್ಲಿ ಜನಿಸಿ ಧಾರುಣಿದೇವಿ ಭಾರವನೆಲ್ಲನಿಳುಹಿದ ಕೋಲೆ 58 ಶಕಟ ಪೂತನಿ ವತ್ಸ ಬಕಧೇನುಕ ಕಂಸಮುಖಾದ್ಯರನ್ನು ಮಡುಹಿದ ಕೋಲೆಮುಖಾದ್ಯರನ್ನು ಮಡುಹಿ ವಸುದೇವ ದೇ-ವಕಿಯರ ಬಂಧನ ಬಿಡಿಸಿದ ಕೋಲೆ 59 ಹೆತ್ತ ತಾಯಿಯ ಮೊಲೆಯರ್ತಿಲಿ ನಲಿದುಂಡುಮತ್ತೆ ಬಾಲಲೀಲೆ ತೋರಿದ ಕೋಲೆಮತ್ತೆ ಬಾಲಲೀಲೆ ತೋರಿ ತೋಷವ ಪಡಿಸಿಮುತ್ಯಾಗೆ ಪಟ್ಟವ ಕಟ್ಟಿದ ಕೋಲೆ 60 ಜರೆಯ ಸುತನು ತಾನು ಜಗಳಕ್ಕೆ ಬಹನೆಂದುಕರೆಸಿದ ವಿಶ್ವಕರ್ಮನ್ನ ಕೋಲೆಕರೆಸಿದ ವಿಶ್ವಕರ್ಮನ್ನ ದ್ವಾರಕಪುರವ ನಿರ್ಮಿಸೆಂದಾಕ್ಷಣ ಕೋಲೆ 61 ದ್ವಾರಕಪುರದ ಶೃಂಗಾರ ವರ್ಣಿಸಲುಮೂರು ಕಣ್ಣವಗೆ ವಶವಲ್ಲ ಕೋಲೆಮೂರು ಕಣ್ಣವಗೆ ವಶವಲ್ಲ ನಾಲ್ಕಾರುಮೋರೆಯವರಿಗೆ ವಶವಲ್ಲ ಕೋಲೆ 62 ತಳಿರು ತೋರಣಗಳುಮೇರುವಿಗೆ ಪೊನ್ನ ಕಲಶವು ಕೋಲೆಮೇರುವಿಗೆ ಕಲಶ ಕನ್ನಡಿ ಮನೋ-ಹಾರವಾಗಿರುವುದು ಸಟೆಯಲ್ಲಿ ಕೋಲೆ 63 ಹದಿನಾರು ಸಾವಿರ ಚದುರೇರ ಮಂದಿರವುಮದನನಯ್ಯನ ಮನೆ ಮಧ್ಯ ಕೋಲೆಮದನನಯ್ಯನ ಮನೆ ಮಧ್ಯ ಪ್ರದೇಶಅದುಭುತವಾಗಿ ಬೆಳಗೋದು ಕೋಲೆ 64 ನಾರಿ ರುಕ್ಮಿಣಿ ಸತ್ಯಭಾಮೆದೇವಿ ಮತ್ತೆವಾರಿಜಮುಖಿಯರ್ ನಾಲ್ಕೆರಡು ಕೋಲೆವಾರಿಜಮುಖಿಯರ್ ನಾಲ್ಕೆರಡು ಸಹಿತಾಗಿವಾರಿಜನಾಭ ಕುಳಿತಿದ್ದ ಕೋಲೆ 65 ಶ್ರೀ ಭೂರಮಣನಾದ ಶ್ರೀಕೃಷ್ಣನರಮನೆಗೆಸುಭದ್ರೆ ಮುಯ್ಯ ತರುತಾಳೆ ಕೋಲೆಸುಭದ್ರೆ ಮುಯ್ಯ ತರುತಾಳೆ ಗಜಪುರಭೂ ಭುಜರೆಲ್ಲ ಬರುತಾರೆ ಕೋಲೆ 66 ಧರ್ಮ ಭೀಮಾರ್ಜುನ ನಕುಲ ಸಹದೇವರುಪೆರ್ಮೆಯಿಂದಲಿ ಪೊರವಂಟು ಕೋಲೆಪೆರ್ಮೆಯಿಂದಲಿ ಪೊರವಂಟು ದಿಕ್ಪಾಲರುಕೂರ್ಮೆಯಿಂದಲಿ ಬರತಾರೆ ಕೋಲೆ 67 ವಜ್ರ ಧರಿಸಿ ಉ-ಪೇಂದ್ರನರಮನೆಗೆ ಬರುತಾರೆ ಕೋಲೆ 68 ಸತಿ ಸ್ವಾಹಾದೇವಿಯ ಕೂಡಿಅತಿಶಯದಿಂ ಮೇಷವೇರುತ್ತ ಕೋಲೆಅತಿಶಯದಿಂ ಮೇಷವೇರಿ ಶಕ್ತಿಯ ಪಿಡಿದುಕ್ರ್ರತುಪತಿ ಮನೆಗೆ ಬರುತಾನೆ ಕೋಲೆ 69 ಯಮನು ಮಹಿಷವೇರಿ ಗಮನದಿಂದಲಿ ಸತಿಶಾಮಲಾದೇವಿ ಸಹಿತಲಿ ಕೋಲೆಶಾಮಲೆ ಸಹಿತ ದಂಡಾಯುಧ ಧರಿಸಿರಾಮನ ಮನೆಗೆ ಬರುತಾನೆ ಕೋಲೆ 70 ನಿರರುತಿ ತಾನೊಂದು ನರನ ಪೆಗಲನೇರಿಪರಮಾಪ್ತ ಸ್ತ್ರೀಯನೊಡಗೂಡಿ ಕೋಲೆಪರಮಾಪ್ತ ಸ್ತ್ರೀಯನೊಡನೆ ಕುಂತವ ಧರಿಸಿಧರಾಧರನ ಮನೆಗೆ ಬರುತಾನೆ ಕೋಲೆ 71 ವರುಣ ತಾನೊಂದು ಮಕರಿಯನೇರಿಕೊಂಡುಸಿರಿ ಭಾಗೀರಥಿಯನೊಡಗೊಂಡು ಕೋಲೆಸಿರಿ ಭಾಗೀರಥಿಯನೊಡನೆ ಪಾಶಧರಿಸಿಸಿರಿವತ್ಸನರಮನೆಗೆ ಬರುತಾನೆ ಕೋಲೆ 72 ಮರುತದೇವನೊಂದು ಎರಳೆಯನೇರಿತರುಣಿ ಪ್ರಾವಹಿಯೊಡಗೂಡಿ ಕೋಲೆ ತರುಣಿ ಪ್ರಾವಹಿಗೂಡಿ ಧ್ವಜ ಧರಿಸಿ ಶ್ರೀ-ಧರನ ಮನೆಗೇ ಬರುತಾನೆ ಕೋಲೆ 73 ವಿತ್ತಪತಿಯೊಂದು ಉತ್ತಮ ಹಯವೇರಿಚಿತ್ತದೊಲ್ಲಭೆಯ ಒಡಗೂಡಿ ಕೋಲೆಚಿತ್ತದೊಲ್ಲಭೆಯ ಒಡನೆ ಖಡ್ಗ ಧರಿಸಿಕರ್ತನ್ನ ಮನೆಗೆ ಬರುತಾನೆ ಕೋಲೆ 74 ಈಶಾನ ತಾನೊಂದು ವೃಷಭವೇರಿಕೊಂಡುಶ್ರೀ ಸತಿದೇವಿಯೊಡಗೂಡಿ ಕೋಲೆಶ್ರೀ ಸತಿದೇವಿಯೊಡಗೂಡಿ ಶೂಲ ಧರಿಸಿ ನಾ-ರಸಿಂಹನ ಮನೆಗೆ ಬರುತಾನೆ ಕೋಲೆ 75 ಹರಿಯೇ ಸರ್ವೋತ್ತಮ ಹರಿಯೇ ಪರದೇವತೆಹರಿದಾಸರೆಂಬೋ ಬಿರುದಿನ ಕೋಲೆಹರಿದಾಸರೆಂಬೋ ಬಿರುದಿನ ಹೆಗ್ಗಾಳೆಹಿರಿ ಬಾಗಿಲೊಳು ಹಿಡಿಸಿಹರು ಕೋಲೆ 76 ಒಬ್ಬನೆ ವಿಷ್ಣುವಿನ್ನೊಬ್ಬ ದೈವಗಳಿಲ್ಲೆಂ-ದಬ್ಬರದಿಂದ ನಾಗಸ್ವರ ಕೋಲೆಅಬ್ಬರದಿಂದ ನಾಗಸ್ವರಂಗಳಹೆಬ್ಬಾಗಿಲೊಳಗೆ ನುಡಿಸೋರು ಕೋಲೆ 77 ಖಳನ ಬೆನ್ನ ಚರ್ಮ ಸುಲಿದು ಭೇರಿಗೆ ಹಾಕಿಅಲವ ಬೋಧರೆ ಜಗದ್ಗುರು ಕೋಲೆಅಲವ ಬೋಧರೆ ಜಗದ್ಗುರುಗಳೆಂತೆಂದುಛಲದಿಂದ ಭೇರಿಯ ಹೊಡಿಸೋರು ಕೋಲೆ 78 ವಿಷ್ಣು ಸರ್ವೋತ್ತಮ ವಿಷ್ಣು ಪರದೇವತೆವಿಷ್ಣುದಾಸರೆಂಬ ಬಿರುದಿನ ಕೋಲೆವಿಷ್ಣುದಾಸರೆಂಬ ಬಿರುದಿನ ಠೆಕ್ಕೆಯಘಟ್ಯಾಗಿ ಎತ್ತಿ ನಿಲಿಸೋರು ಕೋಲೆ 79 ಮತದೊಳು ಮಧ್ವಮತ ವ್ರತದೊಳು ಹರಿದಿನಕಥೆಯೊಳು ಭಾಗವತವೆನ್ನಿ ಕೋಲೆಕಥೆಯೊಳ್ ಭಾಗವತವೆನ್ನಿ ಇದರಂತೆಪ್ರತಿಮೆಯೊಳ್ ವಿಷ್ಣು ಪ್ರತಿಮೆನ್ನಿ ಕೋಲೆ 80 ಈಚಲ ಬನದೊಳು ಗೋ ಕ್ಷೀರ ಕುಡಿದಂತೆನೀಚರ ಸಂಗ ಸುಜನರು ಕೋಲೆನೀಚರ ಸಂಗ ಸುಜನರು ಮಾಡಲುಈಚೆ ನೋಡುವರಿಗೆ ಅನುಮಾನ ಕೋಲೆ 81 ಸೂರಿ ಜನರ ಸಂಗ ಸುಧೆಯ ಪ್ರಾಶನೆಯಂತೆಹೋರಣೆ ಗುಣವುಳ್ಳ ಅಧಮರ ಕೋಲೆಹೋರಣೆ ಗುಣವುಳ್ಳ ಅಧಮರ ಸಹವಾಸನೀರುಳ್ಳಿ ತಿಂದ ತೆರನಂತೆ ಕೋಲೆ 82 ಒಳ್ಳೆ ಮನುಜರ ಸಂಗ ಮಲ್ಲಿಗೆ ಮುಡಿದಂತೆಖುಲ್ಲ ಕುಮತಿಯ ಸಹವಾಸ ಕೋಲೆಖುಲ್ಲ ಕುಮತಿಯ ಸಹವಾಸ ಮಾಡಲುಮುಲ್ಲಂಗಿ ತಿಂದು ತೇಗಿದಂತೆ ಕೋಲೆ 83 ಭಾವಜ್ಞರ ಸಂಗ ಶ್ಯಾವಿಗಿ ಉಂಡಂತೆಭಾವವನರಿಯದ ಬಲುಹೀನ ಕೋಲೆಭಾವವನರಿಯದ ಬಲುಹೀನರ ಸಂಗಬೇವಿನಹಾಲ ಕುಡಿದಂತೆ ಕೋಲೆ 84 ಬಾಳುವರ ಸಂಗ ಹಾಲೋಗರುಂಡಂತೆಬಾಳುವೆಗೆಟ್ಟ ಅಧಮರ ಕೋಲೆಬಾಳುವೆಗೆಟ್ಟ ಅಧಮರ ಸಹವಾಸಹೇಳಬಾರದ್ದು ತಿಂದಂತೆ ಕೋಲೆ 85 ಹರಿಗುರು ದ್ರೋಹಿ ಮರಳಿ ಮಾತೃ ದ್ರೋಹಿವರ ವೈಷ್ಣವ ದ್ರೋಹಿ ಪಿತೃ ದ್ರೋಹಿ ಕೋಲೆವರ ವೈಷ್ಣವ ದ್ರೋಹಿ ಸ್ವಾಮಿ ದ್ರೋಹಿನೆರಳು ಬಿದ್ದವರ ನೆರೆಹೊಲ್ಲ ಕೋಲೆ 86 ಕತ್ತೆ ಕುದುರೆ ಒಂದೆ ಅತ್ತೆ ಸೊಸೆಯು ಒಂದೆಹೆತ್ತಮ್ಮ ಒಂದೆ ಹೆಂಡ್ತೊಂದೆ ಕೋಲೆಹೆತ್ತಮ್ಮ ಒಂದೆ ಹೆಂಡ್ತೊಂದಾದ ಮೇಲೆವ್ಯರ್ಥದ ಮದುವೆ ನಿನಗ್ಯಾಕೆ ಕೋಲೆ 87 ಅಕ್ಕ ತಂಗಿಯು ಒಂದೆ ಮಕ್ಕಳು ಸೊಸೆ ಒಂದೆಚಿಕ್ಕಮ್ಮ ಒಂದೆ ಹೆಂಡ್ತೊಂದೆ ಕೋಲೆಚಿಕ್ಕಮ್ಮ ಒಂದೆ ಹೆಂಡ್ತೊಂದಾದ ಮೇಲೆರೊಕ್ಕ ವೆಚ್ಚ ಮಾಡಿ ಮದುವ್ಯಾಕೆ ಕೋಲೆ 88 ಹಿಟ್ಟು ಬೂದಿ ಒಂದೆ ರೊಟ್ಟಿ ಮುಚ್ಚಳ ಒಂದೆಕಟ್ಟಿಗೆ ಒಂದೆ ಕಬ್ಬೊಂದೆ ಕೋಲೆಕಟ್ಟಿಗೆಯೊಂದೆ ಕಬ್ಬೊಂದಾದ ಮೇಲೆಕಟ್ಟಿಗೆ ಯಾಕೆ ಮೆಲುವೊಲ್ಲೆ ಕೋಲೆ 89 ಹಾಲು ಮಜ್ಜಿಗೆಯೊಂದೆ ಕೋಳಿ ಕೋಗಿಲೆಯೊಂದೆಮಾಳಿಗೆ ಒಂದೆ ಬಯಲೊಂದೆ ಕೋಲೆಮಾಳಿಗೆಯೊಂದೆ ಬಯಲು ಒಂದಾದರೆಹೇಳಬಾರದ್ದು ತಿನವಲ್ಯ ಕೋಲೆ 90 ಗಂಗೆಯ ತಡಿಯಲ್ಲಿ ಲಿಂಗವನರ್ಚಿಸಿಅಂಗೈಯಲಿಟ್ಟು ಪೂಜಿಸುವೆ ಕೋಲೆಅಂಗೈಯಲಿಟ್ಟು ಪೂಜಿಸುವೆ ಎಲೆ ಪಾಪಿಲಿಂಗನು ನೀನು ವಂದ್ಹ್ಯಾಗೆ ಕೋಲೆ 91 ಶಿವನು ನೀನಾದರೆ ಶಿವೆಯು ನಿನಗೇನುಅವಿವೇಕಿ ಮನುಜ ಈ ಮಾತು ಕೋಲೆಅವಿವೇಕಿ ಮನುಜ ಈ ಮಾತು ಕೇಳಿದರೆಕವಿಗಳು ನಗರೆ ಕೈ ಹೊಯ್ದು ಕೋಲೆ 92 ವೇದ ಪ್ರಾಮಾಣ್ಯಂದು ಸುಜನರಿಗೆಲ್ಲಬೋಧಿಸುತಿಪ್ಪ ಬೌದ್ಧನ ಕೋಲೆಬೋಧಿಸುತಿಪ್ಪ ಬೌದ್ಧನ ಎಳೆದೊಯ್ದುಕಾದೆಣ್ಣೆಯೊಳು ಕೆಡುಹೋರು ಕೋಲೆ 93 ಇಲ್ಲಿ ಮಾತ್ರ ಭೇದ ಅಲ್ಲಿಯೊಂದೆ ಎಂಬಕ್ಷುಲ್ಲಕರ ಹಿಡಿದು ಹಲ್ಮುರಿದು ಕೋಲೆಕ್ಷುಲ್ಲಕರ ಹಿಡಿದು ಹಲ್ಮುರಿದು ಯಮರಾಯಕಲ್ಲುಗಾಣಕ್ಕೆ ಹಾಕಿಸುವ ಕೋಲೆ 94 ಅಪ್ಪ ನಾರಾಯಣನಿಪ್ಪಂಥ ಅರಮನೆಅಪ್ರಾಕೃತದ ವೈಕುಂಠ ಕೋಲೆಅಪ್ರಾಕೃತದ ವೈಕುಂಠವೆಂಬೋದುಸ್ವ ಪ್ರಕಾಶದ ಪರಮಾತ್ಮ ಕೋಲೆ 95 ಸುತ್ತ ವಿರಜಾನದಿ ಮತ್ತೆ ಆನಂದ್ವನಚಿತ್ತಜನೈಯ್ಯನರಮನೆಗೆ ಕೋಲೆಚಿತ್ತಜನೈಯ್ಯನರಮನೆ ಎಂಬುದುಉತ್ತಮೋತ್ತಮ ವೈಕುಂಠ ಕೋಲೆ 96 ನೀಲ ವೈಢೂರ್ಯ ನಿಚ್ಚಳ ವಜ್ರಅಚ್ಚ ಮಾಣಿಕ್ಯದ ಅಳವಟ್ಟು ಕೋಲೆಅಚ್ಚ ಮಾಣಿಕ್ಯದ ಅಳವಟ್ಟು ಹರಿಪುರಅಚ್ಯುತನಿಪ್ಪ ಅರವನೆ ಕೋಲೆ 97 ಸಿರಿಯು ತಾ ಮುರಹರನ ಪಟ್ಟಣದಲ್ಲಿವಿರಜೆಯೆಂತೆಂದು ಕರೆಸೋಳು ಕೋಲೆವಿರಜೆಯೆಂತೆಂದು ಕರೆಸಿ ವೈಕುಂಠಕ್ಕೆಪರಿಖಾ ರೂಪದಲ್ಲಿ ಮೆರೆವಳು ಕೋಲೆ 98 ಉತ್ತರದಿ ನಾಲ್ಕು ತತ್ಥಳಿಸುವ ದ್ವಾರಮುತ್ತು ಮಾಣಿಕ್ಯ ನವರತ್ನ ಕೋಲೆಮುತ್ತು ಮಾಣಿಕ್ಯ ನವರತ್ನ ಝಲ್ಲಿಯಎತ್ತಿ ಮೇಲ್ಕಟ್ಟು ಬಿಗಿದಿದೆ ಕೋಲೆ 99 ಜಯ ವಿಜಯಾದ್ಯೆಂಟು ದ್ವಾರಪಾಲಕರುಜಯದೇವಿ ರಮಣನರಮನೆಗೆ ಕೋಲೆಜಯದೇವಿ ರಮಣನರಮನೆ ಬಾಗಿಲೊಳ್‍ಜಯ ಜಯವೆನುತ ನಿಂದಾರೆ ಕೋಲೆ 100 ಕಸವೆಲ್ಲ ಪರಿಮಳ ಕೆಸರೆಲ್ಲ ಶ್ರೀಗಂಧಬಿಸರುಹ ನೇತ್ರನ ಅರಮನೆ ಕೋಲೆಬಿಸರುಹ ನೇತ್ರನ ಅರಮನೆಯೊಳಗೆಲ್ಲಕುಸುಮದ ಮಳೆಯು ಗರೆವುದು ಕೋಲೆ 101 ಕಾಜಿನ ನೆಲೆಗಟ್ಟು ರಾಜ ಮಾಣಿಕ ಗೋಡೆಈ ಜಡ ದ್ರವ್ಯವಲ್ಲಿಲ್ಲ ಕೋಲೆಈ ಜಡ ದ್ರವ್ಯವಲ್ಲಿಲ್ಲ ಪುಸಿಯಲ್ಲಶ್ರೀ ಜನಾರ್ದನನರಮನೆಯೊಳ್ ಕೋಲೆ 102
--------------
ಮೋಹನದಾಸರು
ಸರಸ್ವತಿದೇವಿ ಸ್ತುತಿ ಶುಕ ವಾಣಿ ಪ ಪ್ರೀಯಳೇ ಹರಿಯಾ |ನವ ವಿಧದಿ ಭಜಿಸುವಾ ||ಕವಿಗಳೊಳಿಡಬೇಕು | ನಿನ್ನನೇ ಒಂದರಿಯಬೇಕು1 ವೀಣಾಪಾಣಿಯೆ ಪಿತನಾ |ಧ್ಯಾನಾದೊಳಿರಿಸೆನ್ನ |ಹೀನಾ ವೈಷಿಕಗಳನ |ನಾನೊಲ್ಲೆನನುಗಾಲಾ 2 ಗುರುಪ್ರಾಣೇಶವಿಠ್ಠಲಾ |ತ್ವರಿತಾ ತಾನೊಲಿವಂತೆ ||ವರಮತಿಯನಿತ್ತೆಮ್ಮ |ಪೊರಿಯಲಿ ಬೇಕಮ್ಮಾ3
--------------
ಗುರುಪ್ರಾಣೇಶವಿಠಲರು