ಒಟ್ಟು 19 ಕಡೆಗಳಲ್ಲಿ , 15 ದಾಸರು , 19 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಿದಿಗೆಯ ದಿವಸ(ಹನುಮಂತನನ್ನು ಕುರಿತು)ಸಮನಸನಾಗಿ ತೋರುವನಲ್ಲೆ ನೀರೆ ಪ.ಧನ್ಯನಾಗಿರುವ ದೊರೆಯ ಧರಿಸುತ್ತಚೆನ್ನಿಗನಾಗಿ ತೋರುವನಲ್ಲೆ ಈತ 1ಪಟ್ಟೆಕಂಬಿಯ ನಿರುದುಟ್ಟುಕೊಂಡಿರುವಕಟ್ಟಿದುತ್ತರೀಯ ಭೂಷಣದಿಂದ ಮೆರೆವ 2ಸೋಮಾರ್ಕಶಿಖಿಯಂತಿರುವುದು ತ್ರಿನಾಮರಾಮಣೀಯಕ ಮನೋಹರ ಪೂರ್ಣಕಾಮ 3ವೀರವೈಷ್ಣವ ಮುದ್ದು ಮೋಹನಕಾಯಭೂರಿಭೂಷಣಭುಜಬಲ ಹರಿಪ್ರಿಯ 4ರೂಪನೋಡಲು ಕಾಮರೂಪನಂತಿರುವಚಾಪಲ ಪ್ರೌಢ ಚಿದ್ರೂಪನಂತಿರುವ 5ಬಾಲವ ನೆಗಹಿ ಕಾಲೂರಿ ಶೋಭಿಸುವನೀಲದುಂಗುರದ ಹಸ್ತವ ನೀಡಿ ಮೆರೆವ 6ಗೆಜ್ಜೆ ಕಾಲುಂಗರ ಪದಕಕಟ್ಟಾಣಿಸಜ್ಜನನಾಗಿ ತೋರುವನು ನಿಧಾನಿ 7ಊರ್ವಶಿ :ತರುಣಿ ಕೇಳೀತನೆ ದೊರೆಮುಖ್ಯಪ್ರಾಣವರನಿಗಮಾಗಮ ಶಾಸ್ತ್ರಪ್ರವೀಣ1ಮಾಯವಾದಿಗಳ ಮಾರ್ಗವ ಖಂಡಿಸಿದವಾಯುಕುಮಾರ ವಂದಿತ ಜನವರದರಂಭೆ : ದಿಟವಾಯ್ತು ಪೇಳ್ದ ಮಾತಾದರು ಜಾಣೆಚಟುಳ ಹನುಮನ ಉತ್ಕಟರೂಪ ಕಾಣೆ 1ವಾಮನನಾದ ಕಾರಣವೇನೆ ಪೇಳೆನಾ ಮನಸೋತೆ ಎಂತುಂಟೊ ಹರಿಲೀಲೆ 2ಊರ್ವಶಿ : ನಾಗವೇಣಿ ನೀ ಕೇಳೆ ನಾಗವೈರಿಯೊಳುಸಾಗಿತು ಸೇವೆಯೆಂಬುದು ಮನಸಿನೊಳು 1ವಾದವ ಮಾಡಿ ವಿನೋದದಿ ಹರಿಯಪಾದಸೇವೆಗೆ ಮನನಾದ ಕೇಳಿದೆಯೊ 2ವೀರ ವೇಷವನಿದ ಕಂಡು ಶ್ರೀಹರಿಯದೂರವಾದನೋ ಎಂದು ಮನದೊಳು ನಿಜವು 3ತೋರಲು ಬೇಗದಿ ದೊರೆ ಹನುಮಂತಭೂರಿಭೂಷಣ ಸುಂದರ ರೂಪವಾಂತ 4ಇಂದಿನ ಸೇವೆಯೆನ್ನಿಂದತಿ ದಯದಿಮಂದರಧರಿಸಿಕೊಳ್ವುದು ಎಂದು ಭರದಿ 5ಒಯ್ಯನೆ ಪೇಳುತ್ತ ವಯ್ಯಾರದಿಂದಕೈಯನು ನೀಡಿ ಸಾನಂದದಿ ಬಂದ 6ಕಂತುಪಿತನು ಹನುಮಂತ ಮಾನಸಕೆಸಂತಸ ತಾಳಿ ಆನಂತನು ದಿಟಕೆ 7ಏರುತ ಹನುಮನಭೂರಿವೈಭವದಿಸ್ವಾರಿಯು ಪೊರಟ ಸಾಕಾರವ ಮುದದಿ 8ತೋರಿಸಿ ಭಕ್ತರಘೋರದುರಿತವಸೂರೆಗೊಳ್ಳುವನು ವಿಚಾರಿಸಿ ನಿಜವ 9ಹದನವಿದೀಗೆಲೆ ಬಿದಿಗೆಯ ದಿನದಿಮದನಜನಕನು ಮೈದೋರುವ ಮುದದಿ 10ಪ್ರತಿದಿನದಂತೆ ಶ್ರೀಪತಿ ದಯದಿಂದಅತಿಶಯ ಮಂಟಪದೊಳು ನಲವಿಂದ 11ಎಂತು ನಾ ವರ್ಣಿಪೆ ಕಂತುಜನಕನಅಂತ್ಯರಹಿತ ಗುಣಾನಂಮಹಿಮನ 12ಏಕಾಂತದಿ ಲೋಕೈಕನಾಯಕನುಶ್ರೀಕರವಾಗಿ ನಿಂದನು ನಿತ್ಯಸುಖನು 13* * *ರಂಭೆ : ಇವನತಿಜಾಣನಮ್ಮಾ ಇವನ್ಯಾರಮ್ಮಾ ಪ.ಇವನತಿಜಾಣ ಲಕ್ಷ್ಮೀಧವನಿಗಿಂತಲು ಮುಂದೆತವಕದಿ ಬರುವತ್ತಿತ್ತವರನ್ನು ನೋಡದೆ 1ಅಂದಣವೇರಿ ಮತ್ತೊಂದ ತಾ ನೋಡದೆಒಂದೇ ಮನದಿ ಬೇಗ ಮುಂದೆ ಬರುವನಮ್ಮಾ 2ಬಾಲಬ್ರಹ್ಮಚಾರಿ ಶಿಲೆಯಂತಿರುವನುಅಲೋಚಿಸಲಿವ ಮೂಲಪುರುಷನಮ್ಮಾ 3ಪುಟ್ಟನಾದರು ಜಗಜಟ್ಟಿಯಂತಿರುವನುದಿಟ್ಟನಿವನವನ ಮುಟ್ಟಿ ನೋಡಮ್ಮ 4ಊರ್ವಶಿ :ನಾರೀ ಇವನೀಗಹೊಂತಕಾರಿಲೋಕಕ್ಕಾಧಾರಿಪ.ಕೊಬ್ಬಿದ ದೈತ್ಯರಿಗೀತನೆಕಾಲಹಬ್ಬುವದಾತ್ಮಕ್ಕೀತನೆ ಮೂಲಉಬ್ಬುವ ಹರಿಯೆಂದರೆ ಮೈಯೆಲ್ಲಒಬ್ಬನಿಗಾದರೂ ಬಗ್ಗುವನಲ್ಲ 1ಎಲ್ಲಿರುವನುಹರಿಅಲ್ಲಿಹನೀತಬಲ್ಲಿದನಾರಾಯಣಗಿವ ದೂತಖುಲ್ಲರ ಮನಕತಿ ಝಲ್ಲೆನುವಾತಸುಲ್ಲಭನೆಯಿವ ಮುಂದಿನ ಧಾತ 2ಭೇದವಿಲ್ಲೆಂಬುದವರಿಗೆಯಿವ ತುಂಟಮೇದಿನಿಬಾಧಕರಿಗೆ ಯಿವ ಕಂಟಆದಿ ಮೂರುತಿ ಕೇಶವನಿಗೆಬಂಟಮಾಧವಭಕ್ತರಿಗೀತನೆ ನೆಂಟ 3ದುರಿತಾರಣ್ಯದಹನ ನಿರ್ಲೇಪವರವೆಂಕಟಪತಿಯಿದಿರೊಳಗಿಪ್ಪಪರಮಾತ್ಮನ ಪರತತ್ತ್ವ ಸ್ವರೂಪಮರೆಮಾತೇನಿವ ದೊರೆ ಹನುಮಪ್ಪ 4
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಸಾಕ್ಷಾತ್ ಶಿವ ಜಗದೊಳಗೆ ಭವದಿ ಬಂದಿರೆ ಬಳಿಗೆ |ನರನಲ್ಲಾ ನರನಲ್ಲಾ ಗುರುವರ ಪರನು || ನರನಲ್ಲ ನರನಲ್ಲಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಅಲ್ಲಹುದೆಂಬುದು ಭ್ರಾಂತೀ ||ಗುರುವಿಂದಲ್ಲದೆ ಆಗದು ಶಾಂತೀ || ನರನಲ್ಲ ನರನಲ್ಲ1ತಮ್ಮಂತಲೆ ನೋಡುವರು | ದೇಹದಹಮ್ಮಿಂದಲೆ ಕೆಡುತಿಹರೂ || ನರನಲ್ಲ ನರನಲ್ಲ2ಭ್ರಾಂತದ ಮಾತೂ ಗುಹ್ಯೇಕಾಂತದಿ |ಇಹುದೇನೋ | ನರನಲ್ಲ ನರನಲ್ಲ3ಗುರುಶಂಕರ ಪರಬ್ರಹ್ಮ ಒಂದೆ ಎಂದೊದರಿತೊಶ್ರುತಿನಿಯಮಾ || ನರನಲ್ಲ ನರನಲ್ಲ4
--------------
ಜಕ್ಕಪ್ಪಯ್ಯನವರು
ಹರಿಮಂದಿರಹರಿಮಂದಿರ ಈ ಸ್ಥಳವುಹರುಷದಿ ಚಿಂತಿಪರಿಗೆ ಪಹರಿಹರ ಬ್ರಹ್ಮಾದಿಗಳು ಪೊಗಳುತಿರೆಸುರಮುನಿ ನಾರದ ಋಷಿಗಳು ಸ್ತುತಿಸಲುಸುರರುಪುಷ್ಪ ವೃಷ್ಟಿಯ ಕರೆಯಲು ಅ-ಪÀ್ಸರಸ್ತ್ರೀಯರುನರ್ತನ ಮಾಡುವ ಸ್ಥಳಅ.ಪಸಿರಿನಾರಾಯಣ ಶೇಷಶಯನದಲಿಶಯನಿಸಿ ನಿದ್ರಿಸುತಿರೆಸಿರಿಭೂದುರ್ಗಾಂಬ್ರಣಿಯರು ಸೇವಿಸಲುನಾಭಿ ಕಮಲದಲಿಸರಸಿಜೋದ್ಭವ ಸ್ತುತಿಸುತ ಧ್ಯಾನಿಸಲುಕರಜೋಡಿಸಿ ಸುಜನರು ನಮೋ ನಮೋ ಎನೆಭರದಿ ಜಾಗಟೆಭೇರಿತಾಳ ತುತ್ತೂರಿಯುಕರದಿ ಶಂಖು ಗಂಟೆ ನಾದ ಮೊಳಗೆಹರಿಭಜನೆ ಮಾಡುತ ತದ್ಧಿಮಿಕೆನ್ನುವ ಸ್ಥಳ 1ಹರಿವೈಕುಂಠದಿ ಸಿರಿಯೊಡಗೂಡಿರಲುಭೃಗುಮುನಿ ತಾಡನದಿಸಿರಿದೇವಿ ಕೋಪಿಸಿ ಹರಿಯನು ಬಿಡಲುಸಿರಿಇಲ್ಲದೆ ಒಬ್ಬನೆ ಇರಲಾಗದೆ ವೆಂಕಟಗಿರಿಗಿಳಿತರಲುಸರಸಿಜಾಕ್ಷ ಕರಿಬೇಟೆಯ ನಾಡುತಬರುತ ಪದ್ಮಾವತಿಯನು ಮೋಹಿಸಿಕೊರವಿರೂಪತಾಳುತ ಕಣಿ ಹೇಳಲುಭರದಿ ಕಲ್ಯಾಣವು ನಡಸಿದ ಸ್ಥಳವಿದು 2ಸುರರುಅಸುರರು ಶರಧಿಯ ಮಥಿಸಿರಲುಅಮೃತವನೆ ಕಂಡುಹಿರಿ ಹಿರಿ ಹಿಗ್ಗುತ ನುಗ್ಗೆ ದಾನವರುಶ್ರೀಹರಿತಿಳಿದು ತ್ವರದಿಂದ ಮೋಹಿನಿರೂಪ ತಾಳಿಬಿರಿಬಿರಿ ನೋಡುತಲಿರೆ ದಾನವರುಸುರರಿಗೆ ಅಮೃತವನುಣಿಸುತ ಮೋಹಿನಿಪರವಶದಲಿ ಮೈ ಮರತಿರೆ ಅಸುರರುಸುರರಿಗೆ ಅಭಯವ ನೀಡಿದ ಸ್ಥಳವಿದು 3ವಿಶ್ವಾಸದಿ ತಪಗೈದ ಸುರನ ನೋಡಿಮಹದೇವರು ಒಲಿದುಭಸ್ಮಾಸುರ ಬೇಡಿದ ವರಗಳ ಕೊಡಲುನಿಜ ನೋಡುವೆನೆಂದು ಭಸ್ಮಾಸುರ ಬೆನ್ನಟ್ಟುತ ಬರುತಿರಲುವಿಶ್ವವ್ಯಾಪಕಹರಿತಾ ತಿಳಿದುತಕ್ಷಣ ಸ್ತ್ರೀ ರೂಪವ ಧರಿಸುತ ಬರೆಭಸ್ಮಾಸುರ ತನ್ಹಸ್ತದಿ ಮೃತಿಸಲುಭಕ್ತರನುದ್ಧರಿಸಿದ ಈ ಸ್ಥಳವು 4ಲೋಕ ಲೋಕದ ಜನರೆಲ್ಲರು ಕೂಡಿಪ್ರಜಾ ಕಂಟಕನಾದಮೂಕಾಸುರನನು ಗೆಲ್ಲಲು ಸಾಗದಲೆಶ್ರೀಕಾಂತನ ಪ್ರಾರ್ಥಿಸೆಮೂಕಾಂಬಿಕೆ ನಾಮದಿಂದಲಿ ಪ್ರಜ್ವಲಿಸಿಮೂಕಾಸುರನನು ವಧಿಸಿದ ಶ್ರೀ ಕೋಲಾ-ಪುರದಲಿ ವಾಸಿಸುತಲಿ ಸಂತತಶ್ರೀಕರ ಕಮಲನಾಭ ವಿಠ್ಠಲಏಕಾಂತದಿ ಭಕ್ತರ ಸಲಹಿದ ಸ್ಥಳವಿದು 5
--------------
ನಿಡಗುರುಕಿ ಜೀವೂಬಾಯಿ
ಹರಿಯೆ, ಕುಣಿಯೆನುತ -ನರ -ಹರಿಯೆ, ಕುಣಿಯೆಂದು ಕುಣಿಸಿದರಯ್ಯ ಪಲೋಕವ ತಾಳ್ದನ ಮನೆಯಲಿ ಪುಟ್ಟಿ |ತೂಕದ ನುಡಿಗಳ ಕದ್ದವನ ||ನಾಕರಿಸಲು ನಿಜ ಗೋಪರೂಪದಿಂದ |ಆಕರಿಸಿದನಾ ಕುಣಿಸಿದರಯ್ಯ 1ಎಡೆಯಿಲ್ಲದೆ ನಡೆವನ ಕೂಡಿರುವವನ |ಹಿಡಿಲೆಂಬನ ಒಡಹುಟ್ಟಿದನ ||ಒಡೆಯನ ಕಂದನ ವೈರಿಯ ಬಂಡಿಯ |ಹೊಡೆದ ಮಹಾತ್ಮನ ಕುಣಿಸಿದರಯ್ಯ 2ಒಣಗಿದ ಮರ ಎಲೆಯಿಲ್ಲದ ಬಳ್ಳಿ |ಬಣತಿಗೆ ಪುಟ್ಟಿದ ವನದಲ್ಲಿ ||ಕ್ಷಣ ಮುನ್ನರಿಯದೆ ಅದರ ಆಹಾರಕೆ |ಫಣಿಯ ಮೆಟ್ಟಿದನ ಕುಣಿಸಿದರಯ್ಯ 3ಮಾವನೊಡನೆ ಮನೆಮಾಡಿ ಗೋಕರ್ಣದಿ |ಆ ವುರಗನ ಮೇಲ್ಮಲಗಿದನ ||ಮೂವರ ಮೊಲೆಯುಂಡ ಮೂಲೋಕವರಿಯದ |ಮೂವರಣ್ಣನೆಂದು ಕುಣಿಸಿದರಯ್ಯ 4ಗೋಕುಲದೊಳಗಿನ ಗೋಪಿಯರೆಲ್ಲ |ಏಕಾಂತದಿ ತಮ್ಮೊಳು ತಾವು ||ಶ್ರೀಕಾಂತನ ನಮ್ಮ ಪುರಂದರವಿಠಲನ |ಏಕ ಮೂರುತಿಯೆಂದು ಕುಣಿಸಿದರಯ್ಯ 5
--------------
ಪುರಂದರದಾಸರು