ಒಟ್ಟು 52 ಕಡೆಗಳಲ್ಲಿ , 1 ದಾಸರು , 52 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಲ್ಲಿರುವನೋ ರಂಗ ಎಂಬ ಸಂಶಯ ಬೇಡ ಪ ಎಲ್ಲಿ ಭಕ್ತರು ಕರೆಯೆ ಅಲ್ಲಿ ಬಂದೊದಗುವನುಅ ತರಳ ಪ್ರಹ್ಲಾದ ಹರಿ ವಿಶ್ವಮಯನೆಂದುಬರೆದೋದಲವನ ಪಿತ ಕೋಪದಿಂದಸ್ಥಿರವಾದಡೀ ಕಂಬದಲಿ ತೋರು ತೋರೆನಲುಭರದಿಂದ ಬರಲದಕೆ ವೈಕುಂಠ ನೆರೆಮನೆಯೇ1 ಪಾಪ ಕರ್ಮವ ಮಾಡಿದಜಮಿಳನ ಯಮಭಟರುಕೋಪದಿಂದೆಳೆಯುತಿರೆ ಭೀತಿಯಿಂದತಾ ಪುತ್ರನನು ಕರೆಯೆ ಕೇಳಿ ರಕ್ಷಿಸೆ ಶ್ವೇತದ್ವೀಪವೀ ಧರೆಗೆ ಸನಿಹದಲ್ಲಿಹುದೆ 2 ನೆಗಳು ನುಂಗುತಿರೆ ಭಯದಿಂದಮೊರೆಯಿಡಲು ಕೇಳಿ ತ್ವರಿತದಲಿ ಬಂದುಕರುಣದಲಿ ಬಂಧನವ ಪರಿಹರಿಸೆ ಗಜರಾಜನಿರುವ ಸರಸಿಯು ಅನಂತಾಸನಕೆ ಮುಮ್ಮನೆಯೆ 3 ಕುರುಪತಿಯು ದ್ರೌಪದಿಯ ಸೀರೆಯನು ಸೆಳೆಯುತಿರೆತರುಣಿ ಹಾ ಕೃಷ್ಣ ಎಂದೊದರೆ ಕೇಳ್ದುಭರದಿಂದ ಅಕ್ಷಯಾಂಬರವೀಯೆ ಹಸ್ತಿನಾಪುರಿಗೆ ದ್ವಾರಾವತಿಯು ಕೂಗಳತೆಯೆ 4 ಅಣು ಮಹತ್ತಿನೊಳೆಲ್ಲ ಪರಿಪೂರ್ಣ ವಿಶ್ವಮಯಗಣನೆಯಿಲ್ಲದ ಮಹಾಮಹಿಮನೆನಿಪಘನ ಕೃಪಾನಿಧಿ ಕಾಗಿನೆಲೆಯಾದಿಕೇಶವನುನೆನೆದವರ ಮನದೊಳಿಹನೆಂಬ ಬಿರುದುಂಟಾಗಿ5
--------------
ಕನಕದಾಸ
ಏನು ಇಲ್ಲದ ಎರಡು ದಿನದ ಸಂಸಾರಜ್ಞಾನದಲಿ ದಾನಧರ್ಮವ ಮಾಡಿರಯ್ಯ ಪ ಹಸಿದು ಬಂದವರಿಗೆ ಅಶನವೀಯಲು ಬೇಕುಶಿಶುವಿಗೆ ಪಾಲ್ಬೆಣ್ಣೆಯನುಣಿಸಬೇಕುಹಸನಾದ ಭೂಮಿಯನು ಧಾರೆಯೆರೆಯಲು ಬೇಕುಪುಸಿಯಾಡದಲೆ ಭಾಷೆ ನಡೆಸಲೇ ಬೇಕು1 ಹೊರೆಯಲು ಬೇಡಕುಳ್ಳಿರ್ದ ಸಭೆಯೊಳಗೆ ಕುತ್ಸಿತವು ಬೇಡಒಳ್ಳೆಯವ ನಾನೆಂದು ಬಲು ಹೆಮ್ಮೆಪಡಬೇಡಬಾಳ್ವೆ ಸ್ಥಿರವೆಂದು ನೀ ನಂಬಿ ಕೆಡಬೇಡ 2 ದೊರೆತನವು ಬಂದಾಗ ಕೆಟ್ಟುದ ನುಡಿಯಬೇಡಸಿರಿ ಬಂದ ಕಾಲಕ್ಕೆ ಬಲು ಮೆರೆಯಬೇಡಸಿರಿವಂತ ಶ್ರೀ ಕಾಗಿನೆಲೆಯಾದಿಕೇಶವನಚರಣ ಕಮಲವ ಸೇರಿ ಸುಖಿಯಾಗು ಮನುಜ 3 * ಕೀರ್ತನೆ ಪುರಂದರದಾಸರ ಅಂಕಿತದಲ್ಲೂ ದೊರೆತಿದೆ.
--------------
ಕನಕದಾಸ
ಕೂಸನು ಕಂಡೀರ್ಯಾ ಸುಪ್ರ-ಹ್ಲಾದನ ಕಂಡೀರ್ಯಾ ನಮ್ಮಕೂಸನು ಕಂಡೀರ್ಯಾ ಪ ರಾಕ್ಷಸ ಕುಲದಲಿ ಜನಿಸಿತು ಕೂಸುರಾಧಾಕೃಷ್ಣನ ಭಜಿಸಿತು ಕೂಸುರಾಗ ದ್ವೇಷಗಳ ಬಿಟ್ಟಿತು ಕೂಸುರಾಮ ಪಾದವ ನೆನೆಯುವ ಕೂಸು 1 ಘನ ಹರಿ ಕಂಬದಿ ತೋರಿತು ಕೂಸುಗಳಿಸಿತು ಕೃಷ್ಣನ ಪ್ರೇಮವ ಕೂಸುಘನ ಪಂಪಾಲಯದಿ ವಾಸಿಪ ಕೂಸುಗಣೆ ಗೋಪಾಲನ ಪ್ರೀತಿಯ ಕೂಸು2 ಪ್ರಸಿದ್ಧ ವ್ಯಾಸರಾಯರೆಂಬ ಕೂಸುಪ್ರವೀಣ ವಿದ್ಯೆಯೊಳೆನಿಸಿದ ಕೂಸುಪ್ರಹ್ಲಾದನೆಂಬುವ ಆಹ್ಲಾದ ಕೂಸುಪ್ರಸನ್ನ ಕಾಗಿನೆಲೆಯಾದಿಕೇಶವನ ಕೂಸು3
--------------
ಕನಕದಾಸ
ಕೇಳಿರೈ ಶಿವಶರಣರು ಹೇಳಲಂಜಿಕೆ ಆವುದು ಪ ಭಾಳನೇತ್ರನ ಭಕ್ತರಿಂತು ನೋಡಿಕೊಳ್ಳಿರೈಅ ಮೂರುಲಿಂಗ ತನ್ನೊಳು ಮುಖ್ಯವಾಗಿರುವಾಗಬೇರೊಂದು ಲಿಂಗ ಬೆಲೆ ಮಾಡಿ ತಂದುತೋರುವಂಗೈಲಿಟ್ಟು ತೋಯ ಪುಷ್ಪವ ನೀಡಿಯಾರ ಮನಕೊಪ್ಪಿಸುವರೀ ಶೀಲವಂತರು 1 ಲಿಂಗವೊಂದು ತನ್ನೊಳು ಲೀನವಾಗಿರುವಾಗಅಂಗಭವಿಗಳು ಕೂಡಿ ಆಡಿಕೊಂಬರುಅಂಗದನುಭವದರ್ಥವನರಿಯದ ಇಂತಹಭಂಗಿ ಹುಚ್ಚರೆಲ್ಲ ಶಿವನ ಭಕ್ತರಹರೆ 2 ನಾಗಲಿಂಗ ತನ್ನೊಳು ನಾಟ್ಯವಾಡುತಲಿರಲುಆಗಮಿಸಿದ ಲಿಂಗವ ಬೆದಕಲೇತಕ್ಕೆಕಾಗಿನೆಲೆಯಾದಿಕೇಶವನೆ ನಾಗಶಯನನಾಗಿರಲು ಬೇರೊಂದನರಸಲೇತಕ್ಕೆ 3
--------------
ಕನಕದಾಸ
ಕೈವಲ್ಯ ಪಡೆವರು ಜನರು - ಹರಿ ಪ ಮೂರ್ತಿ ಶ್ರೀ ಚೆನ್ನಕೇಶವನ ಮನದೊಳಗಿಟ್ಟು ಅ ಹಗೆ ಮಾಡಬೇಡಕುಲದಲ್ಲಿ ಜನಿಸಿ ಕುಚೋದ್ಯ ಮಾಡಲುಬೇಡನಲಿದು ಹರಿಯ ಪೊಗಳದ ನಾಲಗೆಯು ಬೇಡ 1 ಮಂದಮತಿಗಳ ಕೂಡ ಮಹಕಥೆಯ ನುಡಿಬೇಡಯತಿಯಾದ ಮೇಲೆ ಸತಿಸುತರಾಸೆ ಬೇಡ..................................................................ಹಿತ ತಪ್ಪಿ ನಡೆವಂಥ ಹೆಂಡತಿಯು ಬೇಡ 2 ಕೆಟ್ಟು ಹೋದವರನ್ನು ತಿರುಗಿ ಕರೆತರಬೇಡಮುಟ್ಟಾದ ಮೇಲೆ ಮೋಹಿಸಿ ಕೂಡಬೇಡಭ್ರಷ್ಟನಾಡಿದನೆಂದು ಸಿಟ್ಟಿನಲಿ ನುಡಿಬೇಡಕಷ್ಟದೆಸೆಯೊಳು ಧೈರ್ಯ ಬಿಟ್ಟು ಕೆಡಬೇಡ 3 ಜಂಭ ಬೇಡ 4 ತೀರ್ಥ ಯಾತ್ರೆಗೆ ಪೋಗಿ ತಿರುತಿರುಗಿ ಬಳಲಿ ಕೃ-ತಾರ್ಥನಾದೆನು ಎಂಬ ಘನತೆ ಬೇಡಪಾರ್ಥಸಾರಥಿ ಕಾಗಿನೆಲೆಯಾದಿಕೇಶವನಸಾರ್ಥಕದಿ ಭಜಿಸಿ ಸುಖಿಯಾಗು ಮನುಜ 5
--------------
ಕನಕದಾಸ
ಜಗದಂತರ್ಯಾಮಿಯೆಂದೆನುತ ನಿನ್ನನಿಗಮ ಸಾರುವ ಮಾತು ಪುಸಿಯೆ ರಂಗ ಪ ಸಿರಿ ಸಂಪತ್ತುಗಳನೀವಶ್ರೀದೇವಿ ನಿನ್ನ ಹಿರಿಯರಸಿಯೋ ದೇವ 1 ಎಂಬತ್ತುನಾಲ್ಕು ಲಕ್ಷ ಜೀವರಾಶಿಗಳನ್ನುಬೊಂಬೆಗಳ ಮಾಡಿ ಭವರಂಗದಲಿತುಂಬಿ ಕಲೆಗಳನೊತ್ತಿ ನೊಸಲ ಬರೆಹವ ಬರೆವಅಂಬುಜೋದ್ಭವ ನಿನ್ನ ಹೆಮ್ಮಗನು ದೇವ 2 ಸಕಲ ಜೀವರಾಶಿಗಳನು ಕಲ್ಪಿಸುವ ಬೀಜಸುಖದಿಂದ ಮಾಯಾಂಗನೆಯರೊಡಲೊಳುಅಕ್ಕರದಿ ಪಿಂಡಾಂಡಗಳ ಕಟ್ಟಿ ಬಲಿಸುವಮಕರಾಂಕ ನಿನ್ನ ಕಿರಿಮಗ ದೇವ 3 ರಾಮನಾಮವ ಜಪಿಸಿ ಪರಮ ವೈಷ್ಣವನಾಗಿಹೇಮಗಿರಿ ಸನಿಹ ಸಾಹಸ್ರನಾಮಪ್ರೇಮದಲಿ ಜಪಿಸುತ್ತ ವೈರಾಗ್ಯನಿಧಿಯಾದಸೋಮಶೇಖರನು ನಿನ್ನ ಮೊಮ್ಮಗನು 4 ಜಂಗಮ ಸ್ಥಾವರಕಾಧಾರವಾಗಿಹಳುಭಂಗಪಡುವ ಜನರ ಕರ್ಮವ ಕಳೆವಳುಹಿಂಗದೆ ಜಗವ ಪಾವನವ ಮಾಡುವ ಪುಣ್ಯಗಂಗೆಯೆಂಬಾಕೆ ನಿಮ್ಮಯ ಮಗಳು ದೇವ 5 ಶುದ್ಧ ಬುದ್ಧಿಯನುಳ್ಳ ಪ್ರದ್ಯುಮ್ನನಾ ಮಗಳುಶ್ರದ್ಧೆಯೆನಿಸಿಕೊಂಡು ಸೂತ್ರಗೆ ಸತಿಯಾಗಿಸದ್ಯೋಜಾತನ ಪಡೆದು ಪ್ರಸಿದ್ಧವಹ ದೇವಿ ಈ ಧರೆಯೊಳು ಪುಟ್ಟಿ ನಿನ್ನ ದಾಸಿಯಾದಳು 6 ಇಂತು ಅಣುರೇಣು ತೃಣ ಕಾಷ್ಠದೊಳಗೆಲ್ಲಸಂತೋಷವಾಗಿಹುದು ನಿನ್ನ ಸ್ಮರಣೆಯಂತ್ರವಾಹಕನೆಂಬ ಬಿರುದು ಸಲುವುದು ನಿನಗೆಕಂತುಪಿತ ಕಾಗಿನೆಲೆಯಾದಿಕೇಶವನೆ 7
--------------
ಕನಕದಾಸ
ಡಿಂಬದಲ್ಲಿ ಇರುವ ಜೀವ ಕಂಬಸೂತ್ರ ಗೊಂಬೆಯಂತೆಎಂದಿಗಿದ್ದರೊಂದು ದಿನ ಸಾವು ತಪ್ಪದು ಪ ಬಟ್ಟೆ ಕಾಣದು1 ಹತ್ತು ಎಂಟು ಲಕ್ಷ ಗಳಿಸಿ ಮತ್ತೆ ಸಾಲದೆಂದು ಪರರಅರ್ಥಕಾಗಿ ಆಸೆಪಟ್ಟು ಸುಳ್ಳು ನ್ಯಾಯ ಮಾಡ್ವರುಬಿತ್ತಿ ಬೆಳೆದು ತನ್ನದೆಂಬ ವ್ಯರ್ಥಚಿಂತೆಯನ್ನು ಮಾಡೆಸತ್ತು ಹೋದ ಮೇಲೆ ಅರ್ಥ ಯಾರಿಗಾಹುದೊ 2 ಹೊನ್ನು ಹೆಣ್ಣು ಮಣ್ಣು ಮೂರು ತನ್ನಲಿದ್ದು ಉಣ್ಣಲಿಲ್ಲಅಣ್ಣತಮ್ಮ ತಾಯಿ ತಂದೆ ಬಯಸಲಾಗದುಅನ್ನ ವಸ್ತ್ರ ಭೋಗಕಾಗಿ ತನ್ನ ಸುಖವ ಕಾಣಲಿಲ್ಲಮಣ್ಣುಪಾಲು ಆದಮೇಲೆ ಯಾರಿಗಾಹುದೊ 3 ಬೆಳ್ಳಿ ಬಂಗರಿಟ್ಟುಕೊಂಡು ಒಳ್ಳೆ ವಸ್ತ್ರ ಹೊದ್ದುಕೊಂಡುಅಳ್ಳಾಚಾರಿ ಗೊಂಬೆಯಂತೆ ಆಡಿ ಹೋಯಿತುಹಳ್ಳ ಹರಿದು ಹೋಗುವಾಗ ಗುಳ್ಳೆ ಬಂದು ಒಡೆಯುವಂತೆಉಳ್ಳೆ ಪೊರೆಯಂತೆ ಕಾಣೊ ಸಂಸಾರದಾಟವು 4 ವಾರ್ತೆ ಕೀರ್ತಿಯೆಂಬುವೆರಡು ಸತ್ತ ಮೇಲೆ ಬಂದವಯ್ಯವಸ್ತು ಪ್ರಾಣನಾಯಕನು ಎಲ್ಲಿ ದೊರಕ್ಯಾನುಕರ್ತೃ ಕಾಗಿನೆಲೆಯಾದಿಕೇಶವನ ಚರಣಕಮಲನಿತ್ಯದಲ್ಲಿ ಭಜಿಸಿ ಸುಖಿಯಾಗಿ ಬಾಳೆಲೊ 5
--------------
ಕನಕದಾಸ
ಡೊಂಕು ಬಾಲದ ನಾಯಕರೆ ನೀವೇನೂಟವ ಮಾಡಿದಿರಿ ಪ ಕಣಕ ಕುಟ್ಟೋ ಅಲ್ಲಿಗೆ ಹೋಗಿ ಹಣಿಕಿ ಇಣಿಕಿ ನೋಡುವಿರಿಕಣಕ ಕುಟ್ಟೋ ಒನಕಿಲಿ ಹೊಡೆದರೆ ಕುಯ್ ಕುಯ್ ರಾಗವ ಪಾಡುವಿರಿ 1 ಹುಗ್ಗಿ ಮಾಡೋ ಅಲ್ಲಿಗೆ ಹೋಗಿ ತಗ್ಗಿ ಬಗ್ಗಿ ನೋಡುವಿರಿಹುಗ್ಗಿ ಮಾಡೋ ಸೌಟಲಿ ಹೊಡೆದರೆ ಕುಯ್ ಕುಯ್ ರಾಗವ ಪಾಡುವಿರಿ 2 ಹಿರಿಯ ಹಾದಿಲಿ ಓಡುವಿರಿ ಕರಿಯ ಬೂದಿಲಿ ಹೊರಳುವಿರಿಸಿರಿ ಕಾಗಿನೆಲೆಯಾದಿಕೇಶವನ ಸ್ಮರಿಸದವರ ಗತಿ ತೋರುವಿರಿ 3 * ಈ ಕೀರ್ತನೆ ಪುರಂದರದಾಸರ ಅಂಕಿತದಲ್ಲೂ ದೊರೆತಿದೆ.
--------------
ಕನಕದಾಸ
ದಾಸನಾಗಬೇಕು ಸದಾಶಿವನ ದಾಸನಾಗಬೇಕು ಪ ದಾಸನಾಗಬೇಕು ಕ್ಲೇಶಪಂಚಕವಳಿದು |ಆಸೆಯಲ್ಲಿ ಮನ ಸೂಸದೆ ಸರ್ವದಾ ಅ ಮನದ ಕಲ್ಮಷ ಕಳೆದು - ಮಹಾದೇ-ವನ ಮಹಿಮೆಯ ತಿಳಿದುಇನಿತು ಈ ಜಗವೆಲ್ಲ ಈಶ್ವರಮಯವೆಂದುಘನವಾದ ಮೋಹದ ಗಡಿಯನು ದಾಟುತ 1 ತನುವು ಅಸ್ಥಿರವೆನುತ - ತಿಳಿದು ಶಂಕರನ ಹೃದಯವ ಕಾಣುತಘನವಾದ ಇಂದ್ರಜಾಲವ ಮಾಯೆಯೆನುತಬಿನುಗು ಸಂಸಾರದ ಮಮತೆಯ ಬಿಡುತ 2 ಆರು ಚಕ್ರದಿ ಮೆರೆವ - ಅಖಂಡನಮೂರು ಗುಣವ ತಿಳಿದುಆರು ಮೂರು ಹದಿನಾರು ತತ್ತ್ವವ ಮೀರಿತೋರುವ ಕಾಗಿನೆಲೆಯಾದಿಕೇಶವನಡಿ 3
--------------
ಕನಕದಾಸ
ದ್ರೋಹಿಗಳ ವಿವರವನು ನಾ ಪೇಳ್ವೆನಯ್ಯ ಕೂಡಿದೆಡೆಯಲಿ ಕಪಟವೆಸಗುವನೆ ದ್ರೋಹಿಮಾಡಿದುಪಕಾರವನು ಮರೆವವನೆ ದ್ರೋಹಿಚಾಡಿ ಕೊಂಡೆಗಳನಾಡಿ ನಡೆವವನೆ ದ್ರೋಹಿರೂಢಿಯೊಳು ಬಾಳುವರ ಸಹಿಸದನೆ ದ್ರೋಹಿ 1 ಸತಿಯಿದ್ದು ಪರಸತಿಯ ಬಯಸುವನೆ ದ್ರೋಹಿಹೆತ್ತವರೊಡನೆ ಕಲಹ ಮಾಡುವನೆ ದ್ರೋಹಿಯತಿಗಳನು ಒಂದೆ ಸಮ ನಿಂದಿಸುವನೆ ದ್ರೋಹಿಸತಿಯನ್ನು ಪರರ ವಶ ಗೈವವನೆ ದ್ರೋಹಿ 2 ಹೊನ್ನಿದ್ದು ಅನ್ನದಾನ ಮಾಡದವನೆ ದ್ರೋಹಿತನ್ನ ಗುರು ಸತಿಯ ಬಯಸುವವನೇ ದ್ರೋಹಿಸನ್ನುತಾಂಗ ಕಾಗಿನೆಲೆಯಾದಿಕೇಶವನತನ್ನೊಳಗೆ ತಾ ತಿಳಿದು ಸುಖಿಸದವ ದ್ರೋಹಿ 3
--------------
ಕನಕದಾಸ
ನಮಗೆಲ್ಲಿ ಮನೆಗಳಯ್ಯ ನಾರಾಯಣ ಪ ಕಮಲ ಬ್ರಹ್ಮಾಂಡ ಕೋಟಿ ಒಡಲೊಳು ತಾಳ್ದಂಥರಮಾಧವ ನಿಮಗೆ ನೀರೊಳಗೆ ವಾಸವಾಯಿತುಅ ಜಲನಿಧಿಯನುತ್ತರಿಸಿ ಲಂಕೆಯನೈವುದಕೆಕುಲಗಿರಿಯ ಕಿತ್ತು ತಂದು ಸೇತುವೆ ಕಟ್ಟಿಸಲೆ ದೈತ್ಯನ ಕೊಂದು ಸೀತೆಯ ತಂದನಿಗೆ ಗಿರಿತಲೆಯ ಮೇಲೆ ಇಹ ಪ್ರಾಪ್ತಿಯಾಯಿತು 1 ಪೃಥ್ವಿಯ ತಲೆಯನು ಪರೆಮಾಡಿ ತಾಳಿದಳುತ್ಯಾನಮಮ್ಮನ ತಂದೆಯ ಮೆಲುವನಮೃತ್ಯುನಾಶಕನೆಂದು ಸುತ್ತಿದ್ದಾನೆಹುತ್ತಿನೊಳಗೆ ಇಹ ಪ್ರಾಪ್ತಿಯಾಯಿತು 2 ನಾಡದೇವತೆಗಳ ಸೆರೆಗಳ ಬಿಡಿಸಿಕ್ರೀಡೆಯಾಯಿತು ನಿಮ್ಮ ದಯದಿಂದಲಿರೂಢಿಯೊಳತಿ ಸೇವಕನಾದ ಗರುಡನಿಗೆಬೋಡು ಮರದ ಮೇಲೆ ಇಹ ಪ್ರಾಪ್ತಿಯಾಯಿತು 3 ಜಲನಿಧಿ ಸುತನ ಮೊಮ್ಮಗನ ಕೊಂದ ಶೂರ ನಕುಲ ಸಹದೇವ ಪಾಂಡವರೈವರುಲಲನೆ ದ್ರೌಪದಿಯೊಂದಿಗೆ ವನವಾಸ ಹೋಗಿಹೊಲದೊಳಗೆ ಇಹ ಪ್ರಾಪ್ತಿಯಾಯಿತು4 ಇಂಥಿಂಥವರಿಗೆಲ್ಲ ಮನೆಯಿಲ್ಲದಿರಲು ನ-ನ್ನಂಥವನಿಗಿನ್ನೆಲ್ಲಿ ಇರಲು ಸಾಧ್ಯಕಂತುಪಿತ ಕಾಗಿನೆಲೆಯಾದಿಕೇಶವನೆ ನಿ-ಶ್ಚಿಂತನಾಗಿ ನಿಮ್ಮ ಗುಡಿಯಲಿಪ್ಪೆನು 5
--------------
ಕನಕದಾಸ
ನಾರಾಯಣ ಎಂಬ ನಾಮದ ಬೀಜವನು ನಾಲಗೆಯಕೂರಿಗೆಯ ಮಾಡಿ ಬಿತ್ತಿರಯ್ಯ ಪ ತನುವ ನೇಗಿಲು ಮಾಡಿ ಹೃದಯ ಹೊಲವನು ಮಾಡಿತನ್ವಿರಾ ಎಂಬ ಎರಡೆತ್ತ ಹೂಡಿಜ್ಞಾನವೆಂಬೊ ಮಿಣಿಯ ಕಣ್ಣಿ ಹಗ್ಗವ ಮಾಡಿಧ್ಯಾನವೆಂಬ ಧಾನ್ಯವ ನೋಡಿ ಬಿತ್ತಿರಯ್ಯ 1 ಕಾಮಕ್ರೋಧಗಳೆಂಬ ಗಿಡಗಳನು ತರಿಯಿರಯ್ಯಮದಮತ್ಸರವೆಂಬ ಪೊದೆಯ ಇರಿಯಿರಯ್ಯಪಂಚೇಂದ್ರಿಯಗಳೆಂಬ ಮಂಚಿಕೆಯ ಹಾಕಿರಯ್ಯಚಂಚಲವೆಂಬ ಹಕ್ಕಿಯ ಓಡಿಸಿರಯ್ಯ 2 ಉದಯಾಸ್ತಮಾನವೆಂಬ ಎರಡು ಕೊಳಗವ ಮಾಡಿ ಆಯುಶ್ಯದ ರಾಶಿಯನು ಅಳೆಯಿರಯ್ಯಇದು ಕಾರಣ ಕಾಗಿನೆಲೆಯಾದಿಕೇಶವನಮುದದಿಂದ ನೆನೆನೆನೆದು ಸುಖಿಯಾಗಿರಿಯ್ಯ3
--------------
ಕನಕದಾಸ
ನಾರಾಯಣನೆ ಈತ - ನಾರಿ ಒಳ್ಳೆಯವರಿಗೆ ಮಾಡ್ದ ವಿಘಾತ ಪ ಪರಿಪರಿಯಲಿ ಪೊಗಳುವ ಗೀತ - ನಾನೆಂದವರ ಮುರಿದ ಪ್ರಖ್ಯಾತ ಅ ಕೈಕಾಲಿಲ್ಲದೆ ಆಡ್ದಾಮೈಮೇಲ್ಭಾರವ ಪೊತ್ತು ನೋಡ್ದಾಕೋರೆಯಲಿ ತಿವಿದು ಹತ ಮಾಡ್ದಾತಾಕೊ ಎಂದು ಒದರಿ ಬಗೆದು ಬೀರ್ದಾಅರ್ತಿಯಿಂದ ಪಾತಾಳಕೆ ದೂಡ್ದಾಮುನಿಯ ಮಗನಾಗಿ ಕ್ಷತ್ರಿಯರ ಕಾಡ್ದಾರಾವಣಗಾಗಿ ಅಂಬುತೆಗೆದು ಹೂಡ್ದಾಆ ಜಮುನೆ ಪೊಕ್ಕು ಮೋಜು ಮಾಡ್ದಾದಿಗಂಬರ ವೇಷವ ತಾಳ್ದಾದಿಗಿದಿಗಿ ಎಂದು ಅಶ್ವವೇರ್ದಾ 1 ಪಾದ ಭೂಮಿ ತಾನೊಲ್ಲಇವನ ಕೊಡಲಿಬಾಯಿಗಿದಿರಿಲ್ಲಕೋ ಎಂದ ಲಂಕೆಗೆ ಬೆಂಕಿ ಮಲ್ಲಕೊಂಕಲಿ ಕೊಳಲನೂದಿ ಗೊಲ್ಲಮೈಮೇಲ್ ಗೇಣರಿವೆಯಿಲ್ಲಇವ ಮೇಲಾದ ತೇಜಿಯನೇರಬಲ್ಲ 2 ವೈರಿ ವನಕ್ಕೆ ಕೇಡು ತಂದಹಾಲ್ಮೊಸರ ಮೀಸಲು ಮುರಿದು ತಿಂದಬತ್ತಲೆ ನಿಂದು ಹತ್ತುವೆ ಕುದುರೆ ಎಂದಭರದಿ ಕಾಗಿನೆಲೆಯಾದಿಕೇಶವನೆಂದ3
--------------
ಕನಕದಾಸ
ನಾರಾಯಣಾ ನಮೋ ನಾರಾಯಣಾ ಪ ಘೋರ ಸಂಸಾರ ಭವದೂರ ಋಷಿಜನ ಮನೋ-ಹಾರ ಸಾಕಾರ ಸಿರಿಧರ ರೂಪನೆ ನಮೋಅ ನೆಗಳು ನುಂಗಿದ ಕುಮಾರಕನ ತಂ-ದಿತ್ತೆ ಮುನಿವರನಿಗೆ ನಾರಾಯಣಾಚಿತ್ತಜಾರಿ ಕೊಲ್ಲಲಂಬರೀಷ ಭೂಪೋತ್ತಮನ ಕಾಯ್ದೆ ಶ್ರೀನಾರಾಯಣಾ 1 ನಕ್ರಂಗೆ ಸಿಲ್ಕಿ ನಡುನೀರೊಳೊದರುವ ಗಜವಚಕ್ರದಿಂ ಕಾಯ್ದೆ ಶ್ರೀನಾರಾಯಣಾಶುಕ್ರನುಪದೇಶವನು ತವೆ ಜರಿದ ವೈಷ್ಣವರಅಕ್ಕರದಿ ಪಾಲಿಸಿದೆ ನಾರಾಯಣಾಶಕ್ರಜಿತುಪಿತ ಸಹೋದರಗೆ ಸ್ಥಿರರಾಜ್ಯವನುಉತ್ಕøಷ್ಟದಿಂ ಕೊಟ್ಟೆ ನಾರಾಯಣಾದುಷ್ಕøತದಿ ಸುತನ ಪೆಸರ್ಗೊಂಡವನ ಕಾಯ್ದೆಯೊ ತ್ರಿ-ವಿಕ್ರಮಾಂಕಿತ ವೀರ ನಾರಾಯಣಾ2 ದುರಿತ ಮೃಗ ವ್ಯಾಘ್ರನೆದುರಿತ ವನದಾವಶಿಖಿ ನಾರಾಯಣಾದುರಿತ ಜೀಮೂತಪವನ ದುರಿತಾಂಧಕಾರ ರವಿದುರಿತ ಲತಾಲವಿತ್ರ ನಾರಾಯಣಾದುರಿತ ಮರ್ದನ ಕಾಗಿನೆಲೆಯಾದಿಕೇಶವನೆದುರಿತ ಬಂಧವ ಪರಿದೆ ನಾರಾಯಣಾ 3
--------------
ಕನಕದಾಸ
ನಾರಾಯಣೆನು ಮನವೆ ನರಹರಿಯ ನೆನೆ ಮನವೆಘೋರ ದುರಿತಗಳ ಬೆದರಿಸಿ ಓಡಿಸುವುದು ಪ ಗುರುವಿನುಪದೇಶದಲ್ಲಿ ಪರಮ ರಹಸ್ಯವನರಿತುಮರೆಯದಲೆ ಅಲ್ಲಿ ಅಧಿಕಾರಿಯಾಗೊತಿರುಮಂತ್ರವನು ಜಪಿಸು ತಿರುಲಾಂಛನವ ಧರಿಸುಪರಮ ವೈಷ್ಣವರ ಪಂಕ್ತಿಯ ಸೇರು ಮನವೆ 1 ನಿತ್ಯ ಸುಖಿಯಾಗೋ 2 ಶೇಷವಿಶೇಷವೆಂದೆನಿಪ ಪರಮಾರ್ಥದೊಳುಮೀಸಲಳಿಯದ ಪಾಪರಹಿತನಾಗುವಾಸಾಧಿಪತಿ ಕಾಗಿನೆಲೆಯಾದಿಕೇಶವನದಾಸಾನುದಾಸರಿಗೆ ದಾಸ ನೀನಾಗೊ 3
--------------
ಕನಕದಾಸ