ಒಟ್ಟು 494 ಕಡೆಗಳಲ್ಲಿ , 79 ದಾಸರು , 466 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಇ) ಆತ್ಮನಿವೇದನೆ ಏನು ಮಾಡಲಿ ವೆಂಕಟೇಶ ಈ ಬೆಳೆಯು ಸೋನೆಯಿಲ್ಲದೆ ಉರಿದುದು ಪ ನಾನಾ ಪ್ರಕಾರದೊಳು ಹಾನಿಯಾಯಿತು ಇರವು ಹೀನರಾದೆವು ನಾವು ಶ್ರೀನಿವಾಸನೆ ಕೇಳು ಅ.ಪ ಮೂಡದೆಸೆಯಳು ಬಂದುದು, ಆ ಮಳೆಯು ಬಡಗದೆಸೆಯಳು ಸುರಿದುದು ಎಡಬಿಡದೆ ತೆಂಕ ಕಡೆಯಲಿ ಹೊಡೆದ ಮಳೆಯು ತಾ ನಡುವೆ ಬಿಡುವುದು ಯಾತಕೆ 1 ಕಟ್ಟುಕಡು ಮದಗ ಸಹಿತ, ಈ ಊರ ತಲೆ ಗಟ್ಟಿನೊಳು ನಾ ಕಾಣೆನು ಕೆಟ್ಟು ಹೋಯಿತು ಮಳೆಯು ಹೊಟ್ಟೆಯನು ಉರಿಸುತ್ತ ದೃಷ್ಟಿಯಲಿ ನೋಡು ನೀನು 2 ಮಳೆಯಿಲ್ಲದಿಳೆಯಾರಿತು, ನಟ್ಟಿರ್ದ ಫಲವೆಲ್ಲ ಬೆಳೆ ಕೆಟ್ಟಿತು ಸ್ಥಳದ ತೆರಿಗೆಯ ಬಿಟ್ಟು ಕಳುಹುವನೆ ದೊರೆ ತಾನು ಎಳೆದೆಳೆದು ಕೊಲುವನಲ್ಲ 3 ಕಷ್ಟ ಬಂದುದು ನಮ್ಮ ಕಡೆಗೆ, ಈ ವೃಷ್ಟಿ ಬಿಟ್ಟು ಪೋದುದು ಇಳೆಯನು ಸುಟ್ಟ ಊರೆಲ್ಲವನು ತಟ್ಟಿನಾರಿದ ಮೇಲೆ ಮುಟ್ಟಿ ನೋಡುವರಿಲ್ಲವೊ 4 ಹದಿನಾಲ್ಕು ಲೋಕವನು ನೀ ನಿನ್ನ ಉದರದೊಳಗಳವಟ್ಟಿಹೆ ಬೆದರುತಿದೆ ಈ ಲೋಕ ಒದರುವುದು ಜನರೆಲ್ಲ ಉದುರದೇತಕೆ ಇಳೆಗೆ ಮಳೆಯು 5 ಎಲ್ಲ ಬೇಡಿಯೆ ಕೊಂಬರು, ಈ ಹರಕೆ ಯಲ್ಲಿ ಅಂತರಬಾರದು ಹಲ್ಲು ಬಾಯಾರಿರ್ದ ಮಕ್ಕಳಿಗೆ ಎಳೆನೀರು ಬೆಲ್ಲವಾಗಿಹ ಮಳೆಯನೆರೆಯೊ 6 ನೀಲಮೇಘಶಾಮ ವರ್ಣ, ಕಾಣಲಾ ಮೂಲೋಕದೊಡೆಯಾ ನಿನ್ನ ಕಾಲಮೇಘವು ನಿನಗೆ ದೂರವಾಗುವುದುಂಟೆ ಆಲಸ್ಯ ಮಾಡಬೇಡ 7 ಬಡವರೆಲ್ಲರು ಕೂಡಿಯೇ, ಒಪ್ಪು ಕೈ ವಿಡಿದು ಬೇಡಿಯೇ ಕೊಂಡೆವು ಸಿಡಿಲು ಮಳೆ ಮಿಂಚುಗಳು ಹೊಡಕರಿಸಿ ಬರುವಂತೆ ಒಡೆಯ ದಯದೋರೊ ನೀನು 8 ಸ್ವಾಮಿ ನಿನ್ನಯ ನಾಮವು, ಜನರಿಂಗೆ ಕಾಮಿತಾರ್ಥವನೀವುದು ಪ್ರೇಮವಾಗಿಹ ಮಳೆಯ ಭೂಮಿಯಲಿ ಇಳಿಬಿಟ್ಟು ನಾಮವಾಗೆವು ಸ್ವಾಮಿ ವರಾಹತಿಮ್ಮಪ್ಪ 9
--------------
ವರಹತಿಮ್ಮಪ್ಪ
(ಏ) ವಿಶೇಷ ಸಂದರ್ಭದ ಹಾಡುಗಳು (1) ಶ್ರೀ ಶೃಂಗೇರಿ ಸ್ವಾಮಿಗಳ ಜಯತಿಯ ಮೆರವಣೆಗೆ ಗುರುವೆ ಪೂಜಿಪೆ ನಿಮ್ಮಯ ಚರಣಗಳನೂ ಪ ದರುಹಿನೊಳಗೆನ್ನನಿರಿಸಿ ಪಾಲಿಸೊ ದುರಿತದೂತವಿಚಾರ ಶ್ರೀಮದ್ಗುರು ಅ.ಪ ಶ್ರೀಸರಸ್ವತಿಸುಪ್ರಸನ್ನ ವಿಶೇಷ ದಿವ್ಯಪಾದಾಬ್ಜ ಕುಶಲನೆ ಬೇಸರಾಂತಕಮಾದ ಶಾಸ್ತ್ರಾಭ್ಯಾಸ ನಿಜಸನ್ಯಾಸಿ ಕಾರಣ 1 ವೇದನಾಲ್ಕು ಪ್ರಣವ ಪ್ರಸಾದ ವಿದ್ಯ ಸಬೋಧದಾಯಕ ಆದಿಗುರು ಶೃಂಗೇರಿಮಠವೆಂದೋದಿಹೇಳುವುದಾದ ಕಾರಣ 2 ರಾಜಸೋಮಿ ಜಗದ್ಗುರು ಜಯ ಆದಿ ಬೀಜಸಪೂಜ ದೈವಸಮಾಜ ಸತ್ಯಸಭೋಜ ಕಾರಣ 3 ರಾಜ ರಾಜ ಸಮಾಜದೊಳು ದುರ್ಬೀಜ ವಸ್ತುಗಳಿಡಲು ನಿಜಯತಿ ರಾಜಧಾನಿಗೆ ರಮ್ಯವಾದ ಸುವಸ್ತು ಪುಷ್ಪಗಳಾದಕಾರಣ 4 ಕುಂಪಿಣೀಧೊರೆಯ ನೀನೆ ಪರಮಪದನೆಂದೊಗಳಿ ಇಂಪಾದ ಸವಾರಿಯೆದುರಿಗೆ ದಂಪತಿಗಳಡಿಯಾದ ಕಾರಣ 5 ಎಲ್ಲ ದೇಶದ ರಾಜರೆಲ್ಲರು ಬಲ್ಲ ಗುರು ನೀನೆಂದು ನಿಮಗತಿ ಬಿಲ್ಲು ಬಾಣಗಳಿತ್ತು ಗುರುತುಗಳುಳ, ಸತ್ಯಸಮಾಜಭೋಜನೆ 6 ಆನೆಕುದುರೆಗಳೆತ್ತಲೆತ್ತಲು ಮತ್ತೆ ಮುತ್ತಿನ ತೊಂಪೆ ವೈಭವ ಏನು ಸಂಭ್ರಮದಿಂದ ಬಂದೆಯೊ ಭಾನುಕೋಟಿಪ್ರಕಾಶ ಕಾರಣ 7 ವೀರಶೈಯ್ಯಾಚಾರ ರತ್ನ ತಿರಿವುಮುತ್ತಿನಹಾರ ನಿರ್ಗುಣ ಧೀರ ತತ್ವವಿಚಾರ ಕಲ್ಮಷದೂರ ಅದ್ವಯಸಾರ ಕಾರಣ8 ಗೌರ್ನಮೆಂಟಿನೊಳಿತ್ತ ಸತ್ಯಾ ಮುಖ್ಯ ಜನರಲ್ ಬಾವುಟಗಳೂ ಶೌರಿ ತಮ್ಮ ಸವಾರಿಯೊಳಗದು ಫಾರಮೆಂಟಿನನೊಳಿರುವ ಕಾರಣ9 ಪಾದಸೇವೆಗೆ ಬರುವ ಭಕ್ತರ ಪಾಪಅಂತಕ ಪರಮಹಂಸನೆ ದೀಪವಿಲ್ಲದ ಬೆಳಕು ತಮ್ಮೊಳಗಾ ಪಯೋನಿಧಿ ಕಂಡ ಕಾರಣ10 ದಿಕ್ಕು ದೇಶದಿ ನಿಬಿಡಮಾಗಿದೆ ನಿಮ್ಮ ನಾಮಜಯಂತಿಯುತ್ಸವ ಮುಕ್ತಿಯಂಬೆನಗೀವ ನಿಜಪದ ಮೋಕ್ಷದಾಯಕನಾದ ಕಾರಣ11 ಕೈವಲ್ಯ ಪರಶಿವನೆಂಬೊ ನಿಶ್ಚಯ ಬಲ್ಲೆನೆಂಬುವ ಭಾಗ್ಯವಂ ಜನಕಿಲ್ಲಿ ಕೊಟ್ಟಕಾರಣ 12 ವಿಜಯನಗರಕ್ಕೈದ ಸಂಪದ ಅಜನು ಪೊಗಳಲ್ ತೋರಿಸಾಕ್ಷಾತ್ ದ್ವಿಜಪ್ರಜಾವತಿ ನಿಮ್ಮಭಜಿಸುವೆ ನಿಜಗುರು ನೀನಾದ ಕಾರಣ 13 ಸೀಮೆ ಭೂಮಿಯ ಜನಗಳೆಲ್ಲರು ಕಾಮಿತಾರ್ಥವ ಬೇಡುತಿರ್ಪರು ಸ್ವಾಮಿಯಹುದೋ ಜಗದ್ಗುರು ಶೃಂಗೇರಿಮಠದೊಳಗಿರುವಕಾರಣ 14 ವೀರಕಂಕಣ ಧೀರ ತತ್ವವಿಚಾರ ಶುಭಕರ ಧೀರನಹುದೆಲೊ ದಾರಿತೋರಿದ ಗುರುವು ತುಲಸೀಹಾರ ಕಂಟಕದೂರ15
--------------
ಚನ್ನಪಟ್ಟಣದ ಅಹೋಬಲದಾಸರು
(ಕೇಶವಾಯ ನಮಃ ದಿಂದ ಆರಂಭವಾಗುವ ಆಚಮನ ಸ್ತುತಿ) ಶ್ರೀನಿವಾಸಾಯ ನಮೋ ಪ. ಶ್ರೀನಿವಾಸಾಯ ಶತಭಾನುಪ್ರಕಾಶಾಯ ಶ್ರೀನಿವಾಸಾಯ ನಿಜ ಭಕ್ತಜನಪೋಷಾಯ ಶ್ರೀನಿವಾಸಾಯ ಪರಮಾನಂದಘೋಷಾಯ ಅ.ಪ. ದೋಷಗಂಧವಿದೂರ ಕೇಶಿಮುಖದಾನವ ವಿ- ನಾಶವಿಧಿಭವಸುಖನಿವಾಸ ವಾಸುಕಿಶಯನ ವಾಸವಾದ್ಯಮರಗಣಪೋಷ ಪಾವನವೇಷ ಶ್ರೀಶ ನಿರ್ಗತವಿಶೇಷ ದಾಸಜನಹೃದಯಾಬ್ಧಿಭೇಶ ಕೌಸ್ತುಭಮಣಿವಿ- ಭೂಷ ಭೂತಾತ್ಮ ಭವಪಾಶಹರ ಪರತರ ದ- ಕೇಶವಾಯ ನಮೋನಮಃ 1 ಕ್ಷೀರಸಾಗರವಾಸ ಶ್ರೀರಮಾಪ್ರಾಣೇಶ ಸಾರಭೋಕ್ತøಸ್ವತಂತ್ರ ಚಾರುಷಡ್ಗುಣಭರಿತ ಸನ್ನುತ ಪಾದನೀರರುಹದ್ವಂದ್ವನೆ ಸುರರು ತಿಳಿಯರು ನಿನ್ನ ಭೂರಿಮಹಿಮೆಗಳ ಸಾಕಾರವನು ಬಣ್ಣಿಸುವ ನಾರಾಯಣಾಯ ನಮೋ 2 ವೇದವೇದ್ಯನೆ ದುರಿತಶೋಧನೆ ದೈತ್ಯಗಣ- ಛೇದಕನೆ ಸುರಸುಪ್ರಸಾದಕನೆ ಭಕ್ತಜನ- ಸಮಾನಾಧಿಕ್ಯರಹಿತ ಸತತ ಆದಿತ್ಯ ಶತಕೋಟಿತೇಜೋವಿರಾಜ ಮಹ- ದಾದಿಕಾರಣ ಮಧುವಿರೋಧಿ ಮಂಗಲಸುಖಾಂ- ಮಾಧವಾಯ ನಮೋನಮಃ 3 ಇಂದಿರಾಹೃದಯಾಬ್ಧಿ ಚಂದ್ರ ಚಾರ್ವಂಗ ಮುಚು- ಕುಂದಾಪ್ತ ಸರ್ವಶ್ರುತಿವೃಂದಪ್ರತಿಪಾದ್ಯ ಸಾ- ಸನ್ನುತ ಮಹೇಂದ್ರ ವಂದಾರುಜನತ್ರಿದಶಮಂದಾರ ಕೋಮಲಿತ ವೃಂದಾವನವಿಹಾರ ಕಂದರ್ಪಜನಕ ಬಾ- ತುಭ್ಯಂ ನಮಃ 4 ಜಿಷ್ಣುರಥಸಾರಥಿ ತ್ರಿವಿಷ್ಟಪಸಭಾಧ್ಯಕ್ಷ ಮುಷ್ಟಿಕಾಸುರವೈರಿ ಮುನಿಜನಮನೋಹಾರಿ ಮುಟ್ಟಿ ಭಜಿಪರ ಮನೋಭೀಷ್ಟವ ಸಲ್ಲಿಸುವ ಶ್ರೇಷ್ಠ ಪೂರ್ಣಬ್ರಹ್ಮನೇ ಭ್ರಷ್ಟಸಂಸಾರದೊಳು ನಷ್ಟ ಬುದ್ಧಿಗಳಿಂಗೆ ತುಷ್ಟಿಯನು ನೀನಿತ್ತು ಸಲಹೊ ಸಾಮಜವರದ ತುಭ್ಯಂ ನಮೋ 5 ವಿಧಿಭವಾದಿ ಸಮಸ್ತ ತ್ರಿದಶಜನಸುಖದಾತ ಬುಧಜನಪ್ರಿಯ ಭೂತಭಾವನ ಜಗನ್ನಾಥ ಮದನಕೋಟಿಸ್ವರೂಪ ವಿದುರನಾಲಯದಲ್ಲಿ ಪಾಲುಂಡ ಬ್ರಹ್ಮಾಂಡ- ಕಧಿಪತಿ ಕಲಿಮಲನಾಶ ಕವಿಜನಮನೋಲ್ಲಾಸ ಮಧುಸೂದನಾಯ ನಮೋ 6 ಅಕ್ರೂರವರದ ಸದತಿಕ್ರಮರ ಗೆಲಿದ ಹಯ- ವಕ್ತ್ರ ವೈಕುಂಠಾಖ್ಯ ಪುರವಾಸ ಜಗದೀಶ ಶುಕ್ರ ಶಿಷ್ಯರನೆಲ್ಲ ಪರಿಹರಿಸಿ ಪಾಲಿಸಿದೆ ಶಕ್ರಾದಿಸುರಗಣವನು ಚಕ್ರ ಶಂಖ ಗದಾಬ್ಜಧರ ಚತುರ್ಭುಜ ದೇವ- ಚಕ್ರವರ್ತಿಯನಂತಕೀರ್ತಿ ಪಾವನಮೂರ್ತಿ ತ್ರಿವಿಕ್ರಮಾಯ ನಮೋನಮಃ 7 ರಾಮಣೀಯಕ ವಪು ನಿರಾಮಯ ನಿರಾಶ್ರಯ ಸು- ದಾಮಸಖ ಪರಿಪೂರ್ಣಕಾಮ ಕೈರವದಳ- ಸುಜನಸ್ತೋಮಸುರಕಾಮಧೇನು ಗೋಮಿನೀಪತಿ ಗೋಗಣಾನ್ವಿತನೆ ಗೋಪೀಲ- ಲಾಮ ಗೋವರ್ಧನೋದ್ಧಾರ ಗೋವಿದಾಂಪತಿ ವಿ- ಪ್ರಾಜ್ಞ ವಾಮನಾಯ ನಮೋನಮಃ 8 ಆದಿಮಧ್ಯಾಂತವಿರಹಿತ ನಿಖಿಲಸಾರ್ಚಿತ ವಿ- ರಾಧಭಂಜನ ಭವಾಂಬೋಧಿಕುಂಭಜ ಭಜಕ- ಚತುಷ್ಟಾದ ಪಾವನಚರಿತನೆ ಗಾಧಿಜಾಧ್ವರಪಾಲ ಗರುಡಧ್ವಜ ದಯಾಳು ನಾದಬಿಂದು ಕಲಾತೀತ ರುಕ್ಮಿಣಿನಾಥ ಶ್ರೀಧರಾಯ ನಮೋನಮಃ 9 ಪಾಶಧರನುತ ವೆಂಕಟೇಶ ಸರ್ವೇಂದ್ರಿಯಪ್ರ- ಕಾಶ ಪಾಲಿತನಿಖಿಳಭೂಸುರವ್ರಜ ಮಂದ- ದೂಷಣಾದ್ಯ ಸುರಹರನೆ ಈಶಪತಿಸೇವ್ಯಾಂಬರೀಶನೃಪವರದ ಪರ- ಮೇಶ ಕೋವಳಪೀತವಾಸ ಕರ್ದಮಶುಕಪ- ಹೃಷೀಕೇಶಾಯ ತುಭ್ಯಂ ನಮೋ 10 ಶುದ್ಧ ತ್ರಿಗುಣಾತೀತ ತ್ರಿವ್ರತ ತ್ರಿಜಗತ್ಪಾಲ ಪ್ರದ್ಯುಮ್ನ ಪ್ರಥಮಾಂಗದೊಡೆಯ ಪರಮಾತ್ಮ ಸುರ- ಬುದ್ಧ ಬುಧಜನಸುಲಭ ಮಧ್ವವಲ್ಲಭ ಮಂತ್ರಮೂರ್ತಿ ಕ್ಷೀರಾಬ್ಧಿ ಶ್ವೇ ತದ್ವೀಪವೈಕುಂಠಮಂದಿರತ್ರಯ ಸಾಧು- ಹೃದ್ಯ ಭಕ್ತದ್ವೇಷಭಿದ್ಯ ನಿತ್ಯಾತ್ಮ ಶ್ರೀಪದ್ಮನಾಭಾಯ ನಮಃ11 ಸಾಮಗಾನವಿನೋದ ಸಾಧುಜನಸುಖಬೋಧ ಕಾಮಿತಾರ್ಥಪ್ರದಾತ ಕಪಿಲಋಷಿ ಪ್ರಖ್ಯಾತ ಸಮರಂಗ ಭೀಮ ನಾಮಧಾರಕರ ಪರಿಣಾಮರೂಪಕ ಸುಜನ- ಕ್ಷೇಮಪ್ರಾಪಕ ನೀಲಜೀಮೂತನಿಭವರ್ಣ ದಾಮೋದರಾಯ ನಮೋ 12 ಶಂಕರಾಂತರ್ಯಾಮಿ ಶಾಙ್ರ್ಗಪಾಣಿ ಶರಣ್ಯ ವೆಂಕಟಾಚಲಸದಾಲಂಕಾರ ಶೇಷಪರಿ- ಯಂಕ ಪ್ರವಿತತನಿಷ್ಕಳಂಕಚಾರಿತ್ರ ಸುಸಂಕುಲಾರ್ಚಿತ ಪದಯುಗ ಲಂಕಾಧಿಪತ್ಯವ ವಿಭೀಷಣನಿಗೊಲಿದಿತ್ತ ಓಂಕಾರನಿಧನ ಸಾಮಕಭಕ್ತರಾನೇಕ ಸಂಕಟವ ಪರಿಹರಿಪ ಸತ್ಯ ಸಂಕಲ್ಪ ಶ್ರೀಸಂಕರ್ಷಣಾಯ ನಮೋ 13 ಈ ಸಮಸ್ತ ಜಗತ್ತು ನಿನ್ನುದರದೊಳಗಿಹುದು ಈ ಸಕಲಜೀವರೊಳಗಿಹ ನಿತ್ಯನಿರ್ಮುಖ್ಯ ನೀ ಸಲಹೊ ದೇವದೇವ ಭೂ ಸಲಿಲ ಪಾವಕಾಕಾಶಾದಿ ಭೂತಾಧಿ- ವಾಸ ರಾಕ್ಷಸವನಹುತಾಶ ನಾನಾ ರೂಪ- ವಾಸುದೇವಾಯ ನಮೋ 14 ಅದ್ವಿತೀಯನೆಯಮಿತವಿಕ್ರಮನೆ ಗುಣಕಾಲ ವಿದ್ಯಾಪ್ರವರ್ತಕನೆ ವಿಶ್ವಾದಿ ಸಾಹಸ್ರ ಸಿದ್ಧನಾಮ ನರನಾರಾಯಣಪರಾಯಣನೆ ಬುದ್ಧಿಪ್ರೇರಕಪ್ರೇರ್ಯನ ರುದ್ರರೂಪಪ್ರತಾಪ ಋಗ್ಯಜುಸ್ಸಾಮಶ್ರುತಿ- ವೇದ್ಯ ಬ್ರಹ್ಮಾಂಡಕೋಟಿಗಳ ಸಲೆ- ಪ್ರದ್ಯುಮ್ನಾಯ ತುಭ್ಯಂ ನಮಃ 15 ಉದ್ಧವಾದಿ ಸಮಸ್ತ ಭಾಗವತಜನಕಮಲ- ಮಧ್ಯಚರರಾಜಹಂಸಾಯ ಮಾನಸದ ಶ್ರೀಹರಿಯೆ ವೈದ್ಯನಾಥವಿಧಾತನೆ ಬದ್ಧನಾದೆನು ಕರ್ಮಪಾಶದಿಂದ ದೊರೆ ಸಿಕ್ಕಿ- ಬಿದ್ದೆ ಕೈಪಿಡಿದೆಬ್ಬಿಸೆನ್ನನೆಲೆದೇವ ಮರೆ ಅನಿರುದ್ಧಾಯ ತುಭ್ಯಂ ನಮಃ 16 ಕ್ಷರ ಪುರುಷರೆಲ್ಲ ಬ್ರಹ್ಮಾದಿ ಜೀವರು ರಮಾ ಕ್ಷರಪುರುಷಳೆನಿಸುವಳು ನೀನೆ ಉತ್ತಮ ಪರುಷ ಮಂಗಲರಿತ ಗುರುತಮ ಗುಣಧ್ಯಕ್ಷನೆ ಶರಧಿಸೇತುನಿಬದ್ಧ ಶಬರಿ ಹಣ್ಣನು ಮೆದ್ದ ಶರಭಂಗ ಮುನಿಪಾಲ ಶಮಿತದಾನವಜಾಲ ಪುರುಷೋತ್ತಮಾಯನ್ನಮೋ 17 ಅಕ್ಷಯಾತ್ಮನೆ ವಿಶ್ವರಕ್ಷಕನೆ ವಿಶ್ವಭುಗ್- ವಿಶ್ವತೋಮುಖ ವಿಶ್ವತೋಬಾಹು ಕರುಣಾಕ- ದಯಮಾಡು ಶ್ರೀವಕ್ಷಸ್ಥಲನಿವಾಸನೆ ಲಕ್ಷ್ಮಣಾಗ್ರಜನೆ ಸುವಿಲಕ್ಷಣನೆ ಸುಜ್ಞಾನ- ಮೋಕ್ಷದಾಯಕ ಯಜ್ಞಮೂರ್ತಿ ರೂಪತ್ರಯ ಮ- ಅಧೋಕ್ಷಜಾಯ ನಮೋನಮಃ 18 ಕ್ರೂರಕರ್ಮಿ ಹಿರಣ್ಯಕಶಿಪುವಂ ಕೊಂದ ದು- ರ್ವಾರದುರಿತಾಬ್ಧಿಬಾಡಬ ಭಕ್ತವತ್ಸಲ ಮ- ಶಿರಪ್ರಕರಧೀರ ಪ್ರಹ್ಲಾದಾಭಿವರದ ಭೂರೀಕರರೂಪ ಭೂಮಕೀರ್ತಿಕಲಾಪ ಸಾರವಜ್ರಸ್ತಂಭದಿಂ ಬಂದ ನಂದ ಸುಕು- ನಾರಸಿಂಹಾಯ ನಮೋ 19 ನಿಶ್ಚಲಾತ್ಮ ನಿರೀಹ ನಿರ್ವಿಕಾರಾನಂತ ಪ್ರೋಚ್ಛ ಸರ್ವಗ ಸದಾನಂದ ಪರಿಪೂರ್ಣ ತ- ನಿರ್ಮಿಸುವ ಆಶ್ಚರ್ಯಕೃತ ಸಲೀಲ ಮುಚ್ಚುಮರೆ ಯಾಕಿನ್ನು ಮುಗಿದು ಬೇಡುವೆ ಕೈಯ ಸ್ವಚ್ಛತರ ಭಕ್ತಿಭಾಗ್ಯವನಿತ್ತು ಸಲಹೊ ಮಹ- ಶ್ರೀಮದಚ್ಯುತಾಯ ನಮೋನಮಃ 20 ಚೈದ್ಯಮಥನ ಮನೋಜ್ಞಶುದ್ಧಾತ್ಮ ಸರ್ವಜ್ಞ ಹೊದ್ದಿಸಿದ ಪಾರ್ಥನಿಂಗೆ ಇದ್ದು ನೀ ಹೃದಯದೊಳು ತಿದ್ದೆನ್ನ ಮತಿಯ ಸ್ಮರ- ವಿದ್ದ ಮಾನಸವ ಪಾದದ್ವಯದೊಳಿರಿಸೈ ದ- ಜನಾರ್ದನಾಯ ನಮೋನಮಃ 21 ಮಂದಾಕಿನಿಯ ಪಡೆದ ಮಾತೆಯ ಶಿರವ ಕಡಿದ ನಂದಗೋಪನ ಕಂದನೆನಿಸಿ ಬಾಲಕತನದ ಸುಂದರೀರಮಣ ಜಯತು ತಂದೆತಾಯಿಯು ಸರ್ವ ಜೀವರ್ಗೆ ನೀನೆ ನಿಜ- ವೆಂದು ತಿಳಿಯದೆ ಮಾಯೆಯಿಂದ ಮಮಕರಿಸಿ ಪರ- ಉಪೇಂದ್ರಾಯ ತುಭ್ಯಂ ನಮಃ 22 ಸ್ಥಿರಚರಾತ್ಮಕ ಧೇನುಚರ ದೇವಕೀಜಠರ- ಶರಧಿಗುರುರಾಜ ಭಾಸ್ಕರಮಂಡಲಾಂತಸ್ಥ ದುರಿತದೂರ ಗಭೀರನೆ ನಿರತಿಶಯ ನಿಜನಿರ್ವಿಕಲ್ಪ ಕಲ್ಪಾಂತಸಾ- ಗರದಿ ವಟಪತ್ರಪುಟಶಯನ ಪುಣ್ಯಶ್ರವಣ ಹರಯೇ ನಮೋನಮಸ್ತೇ 23 ವೃಷ್ಟಿಕುಲತಿಲಕ ಸರ್ವೇಷ್ಟದಾಯಕ ನಿಮಿತ- ಶಿಷ್ಟಜನಪರಿಪಾಲ ಶಿವಗೌರೀ ಗಣಪಗುಹ- ಸೃಷ್ಟಿಶಕ್ತಿಯನೀವ ಗೋವರ್ಧನಾಚಲವ ಬೆಟ್ಟಿನಿಂದೆತ್ತಿದ ಮಹಾ ದುಷ್ಟ ನರಕಾದಿದಾನವರ ಮರ್ದಿಸಿದ ಜಗ- ಜಟ್ಟಿ ಜನಿಮೃತಿಭಯವಿದೂರ ವಿಷಮಯಸರ್ಪ- ಹರೇ ಕೃಷ್ಣಾಯ ತುಭ್ಯಂ ನಮಃ 24 ಅಕ್ಷೀಣ ಬಲಶಾಲಿಯಾಂಜನೇಯನಿಗಿತ್ತೆ ಅಕ್ಷಯದ ಬ್ರಹ್ಮಪದವಿಯ ಲೋಕದೊಳಗ್ಯಾವ- ದಕ್ಷಮರ್ದನ ನಿನಗೆ ಸರ್ವತಂತ್ರಸ್ವತಂತ್ರ ಪಕ್ಷೀಂದ್ರಭುಜವಿರಾಜ ಸಾಕ್ಷಿಚೈತನ್ಯರೂಪನೆ ಕಮಲನಾಭನೆ ಮು- ಮುಕ್ಷುಜನಧ್ಯಾನಗಮ್ಯನೆ ಗದಾಧರ ದನುಜ- ಲಕ್ಷ್ಮೀನಾರಾಯಣಾಯ ನಮೋ 25
--------------
ತುಪಾಕಿ ವೆಂಕಟರಮಣಾಚಾರ್ಯ
(ಘಟಿಕಾಚಲದ ವಾಯುದೇವರನ್ನು ನೆನೆದು) ಒಲಿದು ಭಕ್ತನು ಸಲಹುವ ಘಟಿಕಾಚಲನಿವಾಸಿ ಹನುಮಾ ತ್ರಿಜಗದ್ವಲಯವÀ ನಡಸುವಿ ಪ. ಎರಡು ಭುಜಗಳನು ಧರಿಸಿ ಪ್ರಪಂಚದೊಳಗಿರುವ ನಿನ್ನ ರೂಪಾ ಸ್ಮರಿಸುವ ಜನರನು ಪೊರೆವ ದೊರೆಯೆ ಈರೆರಡು ಭುಜದಿ ಭೂಪಾ- ದರ ಸುದರ್ಶನಾಕ್ಷರ ಸಂಖ್ಯಾಂಗುಲಿ ವರಮಣಿಮಾಲೆಗಳಾ- ಧರಿಸಿ ಸನ್ಮುಖದೊಳಿರುವ ವಿಚಿತ್ರವನರಿವನಾವನಯ್ಯಾ ತೋರುವೆಯೊ 1 ಸರಮಣಿ ಹಸ್ತದಿ ಚರಿಸುವದೇನಿದು ಹರಿಯ ಗುಣಗಣಗಳೊ ಪರಿಪರಿಯಲಿ ನೀ ತರಿದಿಹ ದಿತಿಜರ ಶಿರಗಳ ಸಂಖ್ಯೆಗಳೊ ಬರುವ ಬ್ರಹ್ಮಪದ ಕುರುವರಿತಾಬ್ಧಗಳಿರವ ಚಿಂತಿಸುವುದೊ ನರಹರಿ ನಿನ್ನೊಳಗಿರಿಸಿದ ದೊರೆತನ ಚಿರತರ ಕಾರ್ಯಗಳೊ ಪರಿಹರಿಸದರನು 2 ಹಿಂದೆ ಅಂಜನಾನಂದನೆನಿಸುತ ಬಂದು ಧಾರುಣಿಯಲಿ ಇಂದಿರೇಶ ರಾಮನ ಪದಕಂಜದ್ವಂದ್ವ ಸಮಾಶ್ರೈಸಿ ಇಂದೀವರ ಸಖ ನಂದನನಿಗೆ ನಿಜ ಬಂಧುವಾಗಿ ಸಲಹಿ ಇಂದಿರಾ ಕೃತಿಗೆ ನಿಜ ರಾಮನ ಮುದ್ರೆಯ ಛಂದದಲಿ ಸಲಿಸಿ ಮುಷ್ಟಿಯಿಂಧೆಂದಿಸಿ ಮೆರೆದನೆ 3 ಸೋಮಕುಲದಿ ಜನಿಸ್ಯಾಮಹದೈತ್ಯರ ಸ್ತೋಮವ ನೆರೆ ತರಿದು ಭೂಮಿಜಾಂತಕನನೇಮದಿ ಜಗದೋದ್ದಾಮನ ಸರಿಸಿಗಿದೂ ಪಾಮರ ಕೀಚಕ ಬಕ ಕಿಮ್ಮೀರರ ನಾಮವಳಿಸಿ ಬಡಿದು ಭೂಮಿಪ ಕುರುಪನ ಹೋಮಿಸಿ ರಂಗದಿ ಕಾಮಿತಾರ್ಥಪಡದು ಧಾಮನಿರ್ಜರೋದ್ಧಾಮ ಸುಮಹಿಮ 4 ಕಲಿಯೊಳು ಮಿಥ್ಯಾವಾದಿಗಳಿಂದಲಿ ಕಲುಷಿತ ಸಜ್ಜನರ ವಾಸರ ಒಲುಮೆಯಿಂದಲುದಿಸಿ ಖಳರ ಕುಶಾಸ್ತ್ರದ ಬಲೆಗಳ ಖಂಡಿಸಿ ನಳಿನಜಾಂಡದೊಳಗೆ ಜಲಜನಾಭ ವೆಂಕಟಗಿರಿರಾಜನ ನೆಲೆಯ ತೋರಿ ಮೆರದೆ ಘಟಿಕಾಚಲದಲಿ ನೆಲಿಸಿದೆ 5
--------------
ತುಪಾಕಿ ವೆಂಕಟರಮಣಾಚಾರ್ಯ
(ರುದ್ರದೇವರು) ಬಾರೋ ಬ್ಯಾಗನೆ ಗಿರಿಜಾರಮಣನೆ ಪ ನಾರದನುತ ಪಾದಾರವಿಂದ ತೋರಲು ಅ.ಪ ಭಕುತರ ವೃಂದಕೆ ಭಕುತಿ ಮುಕುತಿಯಿತ್ತು ಯುಕುತಿಲೆÉ ಪೊರೆಯುವ ಶಕುತಿಯ ತೋರಲು 1 ಭೂಮಿಯೊಳಿಹ ಸರ್ವ ಪಾಮರ ಜನರಿಗೆ ಕಾಮಿತಫಲವೆಲ್ಲ ಪ್ರೇಮದಿ ಈಯಲು 2 ಮಡದಿಯ ನುಡಿಗೆ ನಿನ್ನಡಿಗೆ ಬಂದಂಥ ಬಡವನ ಪೋದಂತೆ ತಡವ ಮಾಡದೆ ಈಗ 3 ಶಿರಿವತ್ಸಾಂಕಿತನೆಂದು ವರಶ್ರುತಿಗಳು ನಿನ್ನ ಕರೆದು ತ್ರಿಜಗದ ನರಪನೆ ಈಗಲೆ 4
--------------
ಸಿರಿವತ್ಸಾಂಕಿತರು
351ಆದಿತ್ಯದೇವ ತ್ವತ್ಪಾದಯುಗಳಕಭಿ ವಾದನವ ಮಾಳ್ಪೆ ಅನುದೀನ | ಅನುದೀನ ಸಜ್ಜನರ ವ್ಯಾಧಿಯ ಕಳೆದು ಸುಖವೀಯೊ 1 352ಸಂಜ್ಞಾರಮಣ ನಿನಗೆ ವಿಜ್ಞಾಪಿಸುವೆನೊ ಸ ರ್ವಜ್ಞ ನೀನೆಂದು ಸರ್ವತ್ರ | ಸರ್ವತ್ರ ಎನಗೆ ಬ್ರ ಹ್ಮಜ್ಞಾನ ಭಕುತಿ ಕರುಣೀಸೊ 2 353 ಸೂರಿಗಮ್ಯನೆ ವಾಕ್ಶರೀರ ಬುದ್ಧಿಜವಾದ ಪಾರ ದೋಷಗಳನೆಣಿಸಾದೆ | ಎಣಿಸಾದೆ ಭಗವಂತ ನಾರಾಧನೆಯನಿತ್ತು ಕರುಣೀಸೊ 3 353 ರೋಹಿಣೀರಮಣ ಮದ್ದೇಹಗೇಹಾದಿಗಳ ಮೋಹ ಪರಿಹರಿಸಿ ಮನದಲ್ಲಿ | ಮನದಲ್ಲಿ ಎನಗೆ ಗರುಡ ವಾಹನನ ಸ್ಮರಣೆಯನು ಕರುಣೀಸೊ 4 354ಕ್ಷೀರಾಬ್ದಿಜಾತ ಮಾರಾರಿಮಸ್ತಕಸದನ ವಾರಿಜೋದ್ಭವನ ಆವೇಶ | ಆವೇಶಪಾತ್ರ ಪರಿ ಹಾರ ಗೈಸೆನ್ನ ಭವತಾಪ 5 355 ದತ್ತದೂರ್ವಾಸನನುಜ ಅತ್ರಿಸಂಭವನೆ ತ್ವ ದ್ಭøತ್ಯ ನಾನಯ್ಯ ಎಂದೆಂದು | ಎಂದೆಂದು ಪ್ರಾರ್ಥಿಸುವೆ ಹೃತ್ತಿಮಿರ ಕಳೆದು ಸಂತೈಸೊ 6 356 ಕೋಲ ಭೂನಂದನ ಪ್ರವಾಳ ಸಮವರ್ಣ ಕರ ವಾಳ ಸಮಖೇಟ ನಿಶ್ಯಂಕ | ನಿಶ್ಯಂಕನಾಖ್ಯ ಸುರ ಮೌಳಿ ನೀಯೆನ್ನ 7 357 ಮಂಗಳಾಹ್ವಯನೆ ಸರ್ವೇಂಗಿತಜ್ಞನೆ ಅಂತ ರಂಗದಲಿ ಹರಿಯ ನೆನೆವಂತೆ | ನೆನೆವಂತೆ ಕರುಣಿಸೊ ಅನುದಿನ 8 358 ಭೌಮರಾಜನೆ ತ್ವನ್ಮಹಾಮಹಿಮೆ ತುತಿಸಲ್ಕೆ ಪಾಮರನಿಗಳವೆ ಎಂದೆಂದು | ಎಂದೆಂದು ಸಜ್ಜನರ ಕಾಮಿತಾರ್ಥವನೆ ಕರುಣೀಸೊ 9 359 ಬುಧನೆ ನೀ ಸುಗುಣವಾರಿಧಿಯೆಂದು ಬಿನ್ನೈಪೆ ಕ್ಷುಧೆಯ ಸಂಹರಿಸಿ ಸುಜ್ಞಾನ | ಸುಜ್ಞಾನ ಸದ್ಭಕ್ತಿ ಸುಧೆಯ ಪಾನವನೆ ಕರುಣೀಸೊ 10 360 ಚಂದ್ರನಂದನ ಸತತ ವಂದಿಸುವೆ ಮನ್ಮನದ ಮಮದೈವ ಸರ್ವ ಗೋ ವಿಂದನಹುದೆಂದು ತಿಳಿಸಯ್ಯಾ 11 361 ತಾರಾತ್ಮಜನೆ ಮಚ್ಛರೀರದೊಳು ನೆಲೆಗೊಂಡು ತೋರು ಸಜ್ಜನರ ಸನ್ಮಾರ್ಗ | ಸನ್ಮಾರ್ಗ ತೋರಿ ಉ ದ್ಧಾರಗೈಸೆನ್ನ ಭವದಿಂದ 12 362 ನತಿಸಿ ಬೇಡುವೆ ಬೃಹಸ್ಪತಿ ಗುರುವೆ ಎನ್ನದು ರ್ಮತಿಯ ಪರಿಹರಿಸಿ ಸುಜ್ಞಾನ ಸುಜ್ಞಾನವಿತ್ತು ಶ್ರೀ ಪತಿಯ ತೋರೆನ್ನ ಮನದಲ್ಲಿ 13 363 ಸುರರಾಜಗುರುವೆ ತ್ವಚ್ಚರಣಾರವಿಂದಗಳಿ ಗೆರಗಿ ಬಿನ್ನೈಪೆ ಇಳೆಯೊಳು ಇಳೆಯೊಳುಳ್ಳಖಿಳ ಬ್ರಾಹ್ಮ ಣರ ಸಂತೈಸೋ ದಯದಿಂದ 14 364 ತಾರಾರಮಣನೆ ಮದ್ಬಾರ ನಿನ್ನದೊ ಮಹೋ ದಾರ ನೀನೆಂದು ಬಿನ್ನೈಪೆ | ಬಿನ್ನೈಪೆ ದುರಿತವ ನಿ ವಾರಿಸಿ ತೋರೊ ತವರೂಪ 15 365 ಶಕ್ರಾರಿಗಳ ಗುರುವೆ ಶುಕ್ರಮುನಿರಾಯ ದರ ಚಕ್ರಾಬ್ಜಪಾಣಿ ಗುಣರೂಪ | ಗುಣರೂಪ ವ್ಯಾಪಾರ ಪ್ರಕ್ರಿಯವ ತಿಳಿಸೊ ಪ್ರತಿದೀನ 16 366 ಕವಿಕುಲೋತ್ತಂಸ ಭಾರ್ಗವ ಬೇಡಿಕೊಂಬೆ ಭಾ ಗವತ ಭಾರತ ಮೊದಲಾದ | ಮೊದಲಾದ ಶಾಸ್ತ್ರಗಳ ಶ್ರವಣ ಸುಖವೆನಗೆ ಕರುಣೀಸೊ | 17 367 ನಿಗಮಾರ್ಥ ಕೋವಿದನೆ ಭೃಗುಕುಲೋತ್ತಂಸ ಕೈ ಮುಗಿದು ಬೇಡುವೆನೊ ದೈವಜ್ಞ | ದೈವಜ್ಞ ಹರಿಯ ಓ ಲಗದಲ್ಲಿ ಬುದ್ಧಿಯಿರಲೆಂದು 18 368 ತರಣಿನಂದನ ಶನೈಶ್ಚರ ನಿನ್ನ ದಿವ್ಯ ಪದಾಬ್ಜ ಕ್ಕೆರಗಿ ಬಿನ್ನೈಪೆ | ಬಿನ್ನೈಪೆ ಬಹುಜನ್ಮಕೃತ ಪಾಪ ತ್ವರಿತದಿಂದಿಳಿಸಿ ಪೊರೆಯೆಂದು 19 369 ಛಾಯಾತನುಜ ಮನೋವಾಕ್ಕಾಯ ಕ್ಲೇಶಗಳಿಂದ ಸಮಯದಿ ಶ್ರೀ ಲಕ್ಷ್ಮೀನಾ ರಾಯಣನ ಸ್ಮರಣೆ ಕರುಣೀಸೊ 20 370 ಇದನೆ ಬೇಡುವೆ ಪದೇಪದೆಗೆ ಪುಷ್ಕರನ ಗುರುವೆ ಹರಿಮೂರ್ತಿ ಕೀರ್ತನೆಗೆ ಳೊದಗಲೆನಗೆಂದು ಬಿನ್ನೈಪೆ 21 371ಅಹಿಕ ಪಾರತ್ರಿಕದಿ ನರಹರಿಯದಾಸರ ನವ ಗ್ರಹದೇವತೆಗಳು ದಣಿಸೋರೆ | ದಣಿಸೋರೆ ಇವರನ್ನು ಅಹಿತರೆಂದೆನುತ ಕೆಡಬೇಡಿ22 372 ಜಗನ್ನಾಥವಿಠ್ಠಲನ ಬದಿಗರಿವರಹುದೆಂದು ಹಗಲಿರುಳು ಬಿಡದೆ ತುತಿಸುವ | ತುತಿಸುವ ಮಹಾತ್ಮರಿಗೆ ಸುಗತಿಗಳನಿತ್ತು ಸಲಹೋರು 23
--------------
ಜಗನ್ನಾಥದಾಸರು
3ಕಾಯೇ ಕಮಲಾಲಯೇ ಮಧು ಮಥನ ಸತಿಯೆ ಪ ಕಾಯಜಾತನ ತಾಯೆನಮಿಸುವೆ ಕಾಯೆ ತ್ರಿಜಗಕೆ ತೋಯ ಜಾಂಬಕಿ ಅ.ಪ ತೋಯಜಾಸನ ಮುಖ್ಯ ತ್ರಿದಶ ನಿ ಕಾಯ ಸಂಶೇವಿತಳೆ ಬೇಡುವೆ ಹೇಯ ವಿಷಯವ ಮರಸಿ ಹರಿಪದ ತೋಯಜಕೆ ಮನವೆರಗುವಂದದಿ 1 ಘೋರತರ ಸಂಸಾರ ಶ್ರಮ ಪರಿ ಹಾರ ಮಾಳ್ಪ ಸಮೀರ ಸಮಯದಿ ಸಾರವನು ಸುಜನರಿಗೆ ಬೋಧಿಪ ಸೂರಿಗಳ ಸಹವಾಸ ಪಾಲಿಸಿ 2 ಭಾರ್ಗವಿಯೆ ಕಾಮಾದಿ ಷಡ್ರಿಪು ವರ್ಗವನು ಗೆಲುವದಕೆ ಗುರುಗಳ- ನು ಗ್ರಹಿಸಿ ಸುಜ್ಞಾನ ಭಕುತಿ ವೈ ರಾಗ್ಯ ವೆಂಬುವ ಭಾಗ್ಯ ಒದಗಿಸಿ 3 ರಾಮನರಸಿಯೆ ನಿಮ್ಮ ಶುಭಪದ ತಾಮರಸವನು ಬಿಡದೆ ಪೂಜಿಪ ಕಾಮಿನೀ ಜನ ಸ್ತೋಮಕನುದಿನ ಕಾಮಿತಾರ್ಥಗಳಿತ್ತು ಕರುಣದಿ 4 ಮಂಗಳಪ್ರದ ಕೃಷ್ಣವೇಣಿ ತ- ರಂಗ ಶೋಭಿತ ಕಾರ್ಪರಾಲಯ ವಿಹಂಗ ರಾಜ ತು ರಂಗ ಶ್ರೀ ನರಸಿಂಗ ನರಸಿಯೆ5
--------------
ಕಾರ್ಪರ ನರಹರಿದಾಸರು
ಅಂಕಿತ ಪದ ಕನಕಾದ್ರಿ ಹರಿ ವಿಠಲ | ಕಾಪಾಡೊ ಇವಳಾ ಪ ಪಾದ | ವನಜ ಸೇವಿಪಳಾ ಅ.ಪ. ನಿತ್ಯ ತೈಜಸ ಸೂಚ್ಯ | ಇತ್ತಿಹೆನೊ ಅಂಕಿತವಸಾರ್ಥಕೆನಿಪುದು ಇದನ | ಭಕ್ತನಾಭಯದನೇ 1 ಪತಿಸೇವೆ ದೊರಕಿಸುತಾ | ಮುಕ್ತಿ ಮಾರ್ಗದಿ ನಡೆಸಿಕೃತಕೃತ್ಯಳೆಂದೆನಿಸೊ | ಕೃತಿರಮಣದೇವಾ |ಹಿತವಹಿತ ವೆರಡುಗಳಾ | ಸಮತೆಯಲಿ ಉಂಬಂಥಧೃತಿಯನ್ನೆ ನೀಕೊಟ್ಟು | ಸತತ ಕೈ ಪಿಡಿಯೋ 2 ಮಧ್ವಮತ ತತ್ವಗಳ | ಶುದ್ಧಭಾವದಿ ತಿಳಿದುಅಧ್ವಯನು ಹರಿಯೆಂಬ | ಬುದ್ಧಿವೃದ್ಧಿಸುತಾಶ್ರದ್ದೆ ಭಕ್ತಿ ಜ್ಞಾನ | ಸಿದ್ಧಾಂತ ಅನುಸರಿಪಶುದ್ಧ ಬುದ್ಧಿಯನಿತ್ತು | ಉದ್ಧರಿಸೊ ಹರಿಯೇ 3 ಕಾಮಿತ ಪ್ರದನಾಗಿ | ಕಾಮಿತಂಗಳನಿತ್ತುಭೂಮಿಯೊಳು ಸದ್ವøಂದ್ಯ ಸ್ತೋಮದಲಿ ಮೆರೆಸೋಶ್ಯಾಮಸುಂದರ ಹರಿಯೆ | ಶ್ರೀಮಹೀ ಸೇವಿತನೆನೀ ಮನವ ಮಾಡೆ ಹರಿ | ಆವುದಾ ಸಾಧ್ಯಾ 4 ಭಾವ ಜ್ಞಾನೀನಿರಲು | ಪೇಳ್ವುದೇನಿಹುದಿನ್ನುಭಾವುಕಳ ಪೊರೆಯಿಂದು | ಓವಿ ಪ್ರಾರ್ಥಿಸುವೆ |ಭಾವಜನಯ್ಯಗುರು | ಗೋವಿಂದ ವಿಠ್ಠಲನೆ ನೀವೊಲಿಯದಿನ್ನಿಲ್ಲ | ಕಾವಕೊಲ್ಲುವನೆ 5
--------------
ಗುರುಗೋವಿಂದವಿಠಲರು
ಅಚ್ಯುತಾನಂತನೆ ನಿನ್ನ ನೆಚ್ಚಿಕೊಂಡಿಹೆನು ಇಚ್ಛಾರೂಪ ಸ್ವಚ್ಛಾಭೂಪ ಸ್ವೇಚ್ಛೋಪಾತ್ತ ಸಗುಣ ರೂಪ ಪ. ನಾಮತ್ರಯ ಮಂತ್ರ ಜಪಿಸಿ ಸೋಮಧರನು ತಾನು ಆ ಮಹಾ ಹಲಾಹಲವನು ನೇಮದಿಂದ ಜಯಿಸಿರುವನು ಕಾಮಚಾರ ಕುಮತಿ ಮನುಜರಾ ಮಾಯಾದಿಗಳನು ಶ್ರೀಮಹೀಶ ಸಿಂಧುವಾಸ ನೀ ಮನ್ನಿಸಲು ನಿಲುವದೇನು 1 ನಗಧರ ನಿನ್ನಂಘ್ರಿಕಮಲಯುಗಳ ಒಂದೆ ಸಾಕು ಎನಗೆ ತ್ರಿಗುಣ ವಿಷಯವಾದ ಸರ್ವ ನಿಗಮಕರ್ಮವ್ಯಾಕೊ ಅಗಣಿತಾತ್ಮ ಅಮೃತಾಂಧಸರ ಮಗುವಿನಂತೆ ಪೊರೆವಿ ನಗುತಲೆನ್ನ ನೀ ಕಾಯ್ದದಕೆ ಪೊಗಳಲು ನಾ ಶಕ್ತನಹುದೆ 2 ಪೋರ ಕೆಟ್ಟುಹೋದನೆಂದು ಊರಜನರು ನುಡಿದಾ ಕ್ರೂರ ಮಾತ ಕೇಳಿ ತಾಳಲಾರದೆ ನಾ ಬಂದು ವಾರಿಜಾಕ್ಷ ನಿನ್ನ ಪದಕೆ ದೂರ ಪೇಳಲಂದು ಶ್ರೀರಮಣಿಯ ಸಹಿತಲೆನಗಾಧಾರವಾದಿ ದೀನಬಂಧು 3 ಇಂದ್ರಿಯಂಗಳೆನ್ನ ವಿಷಯಬಂಧದಿಂದ ಬಿಡಲು ಒಂದು ಕರ್ಮದಲು ಸಾಂಗದಿಂದಲೆನಗೆ ನಿಲಲು ಇಂದಿರೇಶ ಈ ಕಾರಣದಿ ಕುಂದಮನಕೆ ತಾರದಿರೊ ತಂದೆ ನೀನೆ ಶರಣನೆಂದು ಹೊಂದಿರುವದನೆಣಿಸಿ ಸಲಹೊ 4 ನಾಮಸ್ಮರಣವಿತ್ತು ಕಾಯಿ ಕಾಮಿತಾರ್ಥದಾಯಿ ನೇಮ ಒಂದು ನಡೆಸದಂಥ ಪಾಮರನಾಗಿಹೆನು ಸೋಮಧರನ ಶುದ್ಧಿಕರಿಸ ಭೂಮಿತೀರ್ಥ ಜನಕರಾಮಕೃಷ್ಣ ವೇದವ್ಯಾಸ ಸ್ವಾಮಿ ಶ್ರೀನಿವಾಸ 5
--------------
ತುಪಾಕಿ ವೆಂಕಟರಮಣಾಚಾರ್ಯ
ಅಥ ಹನುಮದ್ವ್ರತ ಕಥಾ ಸುಳಾದಿ ಧ್ರುವ ತಾಳ ವೃತವೆ ಉತ್ತಮ ವೃತವೆಂದು ಪೇಳಿಹರು ಅತುಳ ಜ್ಞಾನನಿಧಿ ವಿಜಯಾಖ್ಯ ಗುರುಗಳು | ಸತತ ಅಧ್ಯಾತುಮ ಅನಂತ ವೃತವೆಂದು | ಕ್ಷಿತಿಯೊಳು ಈ ವೃತಕೆÀ ಸರಿಗಾಣೆನೊ | ಪತಿತ ಮಾನವರ ಉದ್ಧಾರಗೋಸುಗವಾಗಿ ದ್ವಿತಿಯ ಉತ್ತಮ ವೃತವು ಹನುಮದ್ಪ್ರತವೂ | ಯತನ ಜ್ಞಾನೇಚ್ಛಾ ಶಕ್ತ್ಯಾದಿಗಳಿಗೆ ನಿರುತ | ಜತೆಯಾಗಿ ಕಾರ್ಯ ಮಾಳ್ಪ ಜ್ಞಾನಾಖ್ಯವೃತವೊ | ಅತಿಶಯವಾದ ಜ್ಞಾನ ಭಕ್ತಿ ವಿರಕ್ತಿವೀವುದು | ಮತಿವಂತರು ಮನಕೆ ತಂದು ತಿಳಿದು | ಕ್ಷಿತಿಪತಿ ಧರ್ಮರಾಜನೆಸಗಿದ ಮಹಾ ವೃತವೊ | ಪತಿಭಕುತಿಯುಕುತಳಾದ ದ್ರೌಪದಿಯು | ಪತಿ ಮೂರ್ಲೋಕದ ಶ್ರೀ ಕೃಷ್ಣನುಪದೇಶದಂತ್ಯೆ | ಮಿತ ಜ್ಯಾನದಿಂದ ಚರಿತ ವ್ರತವೊ | ಹಿತವಂತ ಹನುಮಂತ ಪಿತ ರಾಮನಿಗೆ ಪೇಳೆ ಆ | ಚ್ಯುತನಾದ ರಾಮನುಮತಿವಾನ್ ಹನು | ಮಂತನ ಭಕುತಿಗೊಲಿದು ಮಾಡ್ಡ ವೃತವೊ | ಸತತ ಸೂತರು ಶೌನಕಾದ್ಯರಿಗಿದರ ಮಹಿಮೆ | ಮಿತಿ ಇಲ್ಲದೇ ಪೇಳಿ ಮಾಡಿಸಿದ ವೃತವೊ | ವೃತತಿಜಾಸನ ಪ್ರಿಯ ಸುತ ಸುಂದರ ವಿಠಲನ ಭ | ಕುತಿ ಜ್ಞಾನವೀವ ಮಹಾ ಶ್ರೇಷ್ಠ ವೃತವೊ 1 ಮಟ್ಟತಾಳ ಜಾನ್ಹವೀ ತೀರದಲಿ ಶೌನಕಾದ್ಯ ಮುನಿಗಳು | ಧ್ಯಾನಿ ಸೂತರ ಕುರಿತು ಸಾನುರಾಗದಿ ನಮಿಸಿ | ಮೇಣು ಭಕುತಿಯಿಂದ ಙÁ್ಞನವಂತರೆ ನಿಮ್ಮಿಂ | ನಿತ್ಯ | ಧೇನಿಸುವೆವು ಹರಿಯಾ ಪುನೀತರ ಮಾಡುವಾ | ಕಾಣೋವನ್ಯ ವೃತವು ಆವುದುಪೇಳೆನಲು | ನಿತ್ಯ ಶೂದ್ರಾದಿ ನಾಲ್ಕು | ಜಾಣ ವರ್ಣರಿಂದ ಮಾಡ್ವದಕ್ಕೆ ಯೋಗ್ಯವೊ | ಏನು ಬೇಡಿದರೆ ತಡಿಯದೆ ಕೊಡುವುದೊ | ಜ್ಞಾನಿ ಜನಗಳಿಗೆಲ್ಲ ಮಂಗಳತಮ ವೃತವು | ಪುತ್ರಾದಿಗಳೀವುದು ಶ್ರೇಣಿ ದಿನ ಪ್ರತಿ ದಿನದಲ್ಲಿ ವರವಿದ್ಯ ಪ್ರದವೊ ಹಾನಿ ಲಾಭಗಳಲ್ಲಿ ಹನುಮಂತನ ನೆನಸೆ | ಮಾನನಿಧಿ ಸುತ ಸುಂದರ ವಿಠಲನ | ಧ್ಯಾನ ಧಾರಣವೀವ ಉತ್ತುಮಾಮಹವೃತವೊ 1 ರೂಪಕ ತಾಳ ಒಂದಾನೊಂದು ಸಮಯದಲ್ಲಿ ಶ್ರೀ ವ್ಯಾಸ ಶಿಷ್ಯ | ವೃಂದದಿಂದೊಡಗೂಡಿ ಯುಧಿಷ್ಠರನ ನೋಡಲು | ಅಂದುಳ್ಳ ದ್ವೈತ ವನಕೆ ನಡೆತಂದರು ಏನಂಬೆ | ಚಂದಾದ ನಿರ್ವೈರ ಮೃಗವೃಂದಗಳಿಂ ಕೂಡಿರುವ | ಕುಂದ ಮಂದಾರಾದಿ ಪುಷ್ಪಫಲ ವೃಕ್ಷಗಳಿಂ ಶೋಭಿಪ | ಕುಂದು ದೂರೋಡಿಸಿದ ಜ್ಞಾನಿಗಳ ಸಮೂಹವು | ಛಂದದಲಿ ಕಾವ್ಯಷಡಂಘ್ರಿ ನಿರತರಾಗಿ | ಮುಂದೆ ಅಧ್ಯಯನ ಶ್ರುತಸಂಪನ್ನರಾದವರು | ಒಂದೊಂದು ವೇದ ಋಗು ಯಜು:ಸಾಮಾಥರ್ವಣ ಒಂದೋಂದು ಶಾಖಾಶಾಸ್ತ್ರದಿ ಪ್ರವಚನಾಸಕ್ತರು | ಮಿಂದು ಹರಿಪದಜಲದಿ ಚತುರ ವೇದ ಘೋಷದಿ | ಸಂದೇಹವಿಲ್ಲದಲೇ ಭಗವದ್ಗೀತಾ ಲೀಲಾ | ಎಂದೆಂಬುವ ಹರಿಕಥಾಮೃತ ಪಾನ ಮಾಡುವ | ಸಂದೋಹ ಮುನಿಗಳಿಗೆ ನಿತ್ಯನ್ನದಾನವ ಮಾಡಿ | ಬಂಧುಗಳಿಂ ಸಹಿತ ಇರುವ ಯುಧಿಷ್ಟರನನ್ನು | ಸುಂದರ ವಿಠಲಾತ್ಮಕ ವ್ಯಾಸದೇವನು | ಅಂದು ದ್ವೈತವನದಲ್ಲಿ ಕೃಪಾ ದೃಷ್ಟಿಯಿಂದ ನೋಡಿದನು 3 ಕೃಷ್ಣದ್ವೈಪಾಯನಾ ಮುನಿಗಳಾಗಮ ಕೇಳಿ | ಕೃಷ್ಣೆ ಸಹಿತಾ ಅನುಜರೊಡನೆ ಕೂಡಿ | ಜೇಷ್ಠನಾದ ಯುಧಿಷ್ಠರನು ತಾ ದೂರ ನಡೆತಂದುವಾ | ಸಿಷ್ಟ ಕೃಷ್ಣಗೆ ಸಾಷ್ಟಾಂಗ ಪ್ರಣಾಮಗಳ ಮಾಡಿ ನಿ | ರ್ದಿಷ್ಟವಾದೆಕಾಂತ ಸ್ಥಳಕೆ ಕರೆತಂದು | ಶ್ರೇಷ್ಠವಾದಾಸನದ ಮೇಲೆ ಕುಳ್ಳಿರಿಸಿ | ಜೇಷ್ಟಾದಿಕೃಷ್ಣೇಯೊಡನೆ ಉತ್ಕøಷ್ಠ ಪೂಜೆಯ ಮಾಡೆ ಪರ ಮೇಷ್ಠಿ ಜನಕನು ತಾನು ತುಷ್ಟ ನಾಹೆ | ಶಿಷ್ಟಾಚಾರದಂತೆ ಕುಶಲ ಪ್ರಶ್ನೆಯು ಮಾಡ್ದ ನಿ | ರ್ದುಷ್ಟ ಭೀಮಾರ್ಜುನರೆ ಅಶ್ವಿನಿಯರೇ ಮನ | ಮುಟ್ಟಿ ಹರಿಪಾದ ಭಜನೆಯ ಮಾಡಿ ಸುಖಿಗಳಾಗಿಹ್ಯರೇ? ಧಿಟ್ಟತನದಲೆ ತಪವನೆಸಗಿ ಕಿರಿಟಯು | ನಿಷ್ಠಿಯಲಿ ಮಹರುದ್ರನೊಲಿಸಿ ಪಾಶುಪತವೆಂಬು | ತ್ಕøಷ್ಟಾಸ್ತ್ರ ಸಂಪಾದನೆಯ ಮಾಡಿದದು ಕೇಳಿ | ಹೃಷ್ಟನಾದೆನೊ ನಾನು ನಿಮ್ಮಿಂದಲಿ ಕೂಡಿ | ಕಷ್ಟಬಡುತಿರುವ ನಿನ ದುಃಖ ಶಾಂತ್ಯರ್ಥ | ಇಷ್ಟವೀವುದಕಾಗಿ ಬಂದಿಹನು ರಾಜಾಯು | ದ್ಯಿಷ್ಟರನೆ ಕೇಳುತ್ತಮ ವೃತವು ನಿನಗೋಸುಗ | ನಿಷ್ಠಿಯಿಂದಲಿ ಧರ್ಮತನಯ ನುಡಿದನು 4 ತ್ರಿವಿಡಿ ತಾಳ ನಮೊ ನಮೊ ತಾತ ಮಹಾ ಖ್ಯಾತವಂತರೆ ನಿಮಗೆ | ನಮೊ ನಮೊ ನಮೊ ಎಂದು ಬಿನ್ನೈಸುವೆ | ಶ್ರಮ ಪರಿಹರವೃತವಾವುದದÀರ ಮಹಿಮೆ | ಸುಮನಸರೊಡೆಯನೆ ಪೇಳಯ್ಯಾ ಜೀಯ್ಯಾ | ಕುಮತಿ ಪರಿಹರಿಸುವ ದೇವತೆ ಆರು ಉ | ತ್ತಮ ನಿಯಮ ಆವುದು ಪೂಜಾ ಕ್ರಮವು | ಶಮೆ ದಮೆವೀವ ನಿಯಮ ತಿಥಿ ಆವುದು | ರಮೆ ರಮಣನೆÉ ಆವ ಮಾಸದಲಿ ಮಾಡೋದು | ಶಮಲ ವಿವರ್ಜಿತ ವ್ಯಾಸದೇವನೆ ನಿಮ್ಮಾ | ಗಮನವು ಎಮ್ಮಯ ಕಷ್ಟ ದೊರೋಡಿಸಲು | ಸಮೀಚೀನ ಮತಿಯಿತ್ತು ಭಕ್ತರ ಪಾಲಿಪುದೆನುತ | ಸಮಚಿತ್ತ ಉಳ್ಳ ಮುನಿಗಳ ಕೂಡ ನಮಿಸಲು | ಭ್ರಮಣ ಮತಿಯ ಕಳೆವ ಹನುಮಾನ್ ಹ ನುಮನ್ನಾಮ ಪುನಃ ಪುನಃ ಸ್ಮರಿಸಿ ಶ್ರೀವ್ಯಾಸರು | ಆಮಮ ಪೇಳಲೇನೊ ಹನುಮದ್ವ್ರತವೋ | ಧೀಮಂತ ಹನುಮಂತನ ನಾಮೋಚ್ಚಾರಣೆಯಿಂದ | ಸಮಸ್ತ ಕಾರ್ಯ ಸಿದ್ದಿಪದು ಸಂಶಯ ಬ್ಯಾಡಿ | ಆ ಮಹಾ ದುಷ್ಟ ಗ್ರಹೋಚ್ಛಾಟನ ಜ್ವರಾದಿ | ತಾಮಸ ರೋಗ ನಿವರಣವಾಗುವದು | ಪ್ರೇಮದಿಂದಲಿ ಕೇಳು ಬಹು ವಾಕ್ಯಗಳಿಂದೇನು ? ಸೀಮೆಗಾಣದ ಅಭೀಷ್ಟಪ್ರದಾಯಕವೊ ನೀ ಮರೆಯದಿರು ಹಿಂದೆ ದ್ವಾರಕಿಯಲ್ಲಿ ಶ್ರೀ ಮದ್ವಿಷ್ಣುವೆ ಕೃಷ್ಣ ಪಾಂಚಾಲಿಯನಿ ಸ್ಸೀಮ ಭಕುತಿಗೆ ವೊಲಿದು ಈ ಮಹಾ ಹ ನುಮದ್ವ್ರತವನ್ನು ಉಪದೇಶಿಸಿ | ನೇಮದಿಂದಲೀ ವ್ರತವು ಮಾಡಿರೆನಲು ಕಾಮಿತಫಲವೀವಾ ವ್ರತದ ಮಹಿಮೆ ಆ | ಸ್ವಾಮಿ ಅನುಗ್ರಹದಿ ಸಂಪದೈಶ್ವರ್ಯದಿ ಆ ಮಹಾ ಸ್ತೋಮಗಳು ಪ್ರಾಪ್ತವಾಗಲು ನಿಮಗೆ | ಈ ಮಹಾ ವೃತ ಮಹಿಮೆ ತಿಳಿಯದ ಪಾರ್ಥನು ಪ್ರೇಮದಿಂ ದ್ರೌಪದಿ ಧರಿಸಿದ ದೋರವ ನೋಡಿ ಹೇ ಮಹಿಷಿಯೆ ಇದೆನೆನ್ನಲಾಗಿ | ತಾಮರಸನಯನೆ ಶ್ರೀ ಹನುಮದ್ದೋರವನ್ನೆ | ಆ ಮಹಾ ಐಶ್ವರ್ಯ ಗರ್ವಿಕೆ ಕ್ರೋಧಾದಿ ನಿ ಸ್ಸೀಮ ಪರಾಕ್ರಮಿ ನುಡಿದ ಅರ್ಜುನನು ಕಾಮಿನಿಯೆ ಕೇಳು ಆ ಹನುಮನೆಂಬೊ ಕಪಿ ನಾ ಮುದದಿ ಧ್ವಜದಲ್ಲಿ ಧರಿಸಿರುವೆನು ಈ | ಮರ್ಮವನು ತಿಳಿಯದೆ ಆ ವನಚರ ಶಾಖಾಮೃಗ | ಕಾಮಿತ ಫಲ ಕೊಡಬಲ್ಲದೆ ಕೇಳಿನ್ನು ಪಾಮರ ವ್ರತದಿಂದ ವಂಚಿಸಿದೆಲ್ಲದೇ ನೀನು ಕಾಮಿ ಜನರ ತೆರದಿಂದಲಿ ಅರ್ಜುನನು ಭಾಮೆ ದ್ರೌಪದಿ ಧರಿಸಿದ ತ್ರಯೋದಶ ಗ್ರಂಥಿಯುಕ್ತ ಆ ಮುದದ ದೋರವನು ಹರಿದು ಬಿಸಾಟಲು ಹೇಮಾದಿ ಸಕಲ ಸಂಪದೈಶ್ವರ್ಯ ರಾಜ್ಯವು ಭೂಮಿ ಸಹಿತ ಪ್ರಾಪ್ತವಾದುದೆಲ್ಲ ಪೋಗೆ | ಶ್ರಿಮದಾಂಧದಿಂದ ಪ್ರಾಪ್ತವ್ಯ ದುಃಖ ಫಲವು | ಪರಿಯಂತ | ರಾಮ ಮನೊರಮನು ಇನಿತು ನುಡಿಯೆ | ಸ್ವಾಮಿ ಆಜ್ಞವ ತಿಳಿದ ದ್ರೌಪದಿ ದೇವಿಯು | ಹೇ ಮಹತ್ಮರೆ ಶ್ರೀವ್ಯಾಸರ ನುಡಿ ನಿಜವೋ ನೇಮಗಳೆಲ್ಲಾ ತಿಳಿಯಲೋಶವೆ ಎಂದಿಗು 5 ಧ್ರುವ ತಾಳ ಕೇಳಯ್ಯಾ ಧರ್ಮರಾಜ ಆಲಸ ಮಾಡದೆ | ಪೇಳುವೆ ನಿನಗೊಂದು ಪುರಾತನ ಕಥೆಯು | ಆಲಿಸಿ ಮನಕೆ ತಂದು ಬಾಳು ಚನ್ನಾಗಿ ನೀನು | ಶೀಲೆ ಸೀತೆಯ ನೋಡುವ ಇಚ್ಛಾಉಳ್ಳ ಮಾ ನಿತ್ಯ ಲಕ್ಷ್ಮಣನೊಡಗೂಡಿ | ಮೇಲಾದ ಋಷ್ಯಮೂಕ ಗಿರಿಯ ಮಧ್ಯದಲ್ಲಿ ಶೀಲ ಭಕುತಿಯುಳ್ಳ ಹನುಮಂತನ ದರ್ಶನಾಗೆ ಆಳುವ ಕಪಿ ರಾಜ್ಯ ಸುಗ್ರೀವನ ಸಖ್ಯವನು ಬ ಹಾಳ ಮತಿಯುಳ್ಳ ವಾಯುಜ ಮಾಡಿಸೆ | ಮಾಸ ಮಳೆಗಾಲವು ವಾಸ ಮಾಡ್ಡ | ಕಾಲದಲಿ ಹನುಮನು ರಾಮದೇವಗೆ ನಮಿಸಿ | ನೀಲ ಮೇಘ ಶ್ಯಾಮ ಶ್ರೀ ರಾಮ ನೀನಿನ್ನ | ಬಾಲನ ಬಿನ್ನಪ ಮನಕೆ ತರಲು | ಪೇಳುವೆ ನಿಮ್ಮ ಸನ್ನಿಧಾನದಲೆನ್ನ ನಾಮ ಮಹಿಮೆ ಮೇಲುಸಿಲೆಯನದ್ಧರಿಸಿದ ಶ್ರೀರಾಮ ನೀನಙ್ಞನೆ | ಕಾಲ ಜನನದಲಿ ಇಂದ್ರನಿಂದಲಿ ಎನ್ನ ಮೇಲಾದ ವಜ್ರಾಯುಧದಿಂದ ಹನುಘಾತಿಸಲು ಭೂಲೋಕದಲ್ಲಿ ಅಂದಿನಾರಭ್ಯ ಹನುಮನೆಂದು ಖ್ಯಾತನಾಗಿ | ಕೇಳಯ್ಯಾ ಅಂಜನಾದ್ರಿಯಲ್ಲಿ ಸೂರ್ಯೋದಯ | ಕಾಲಕೆ ಪ್ರಕಟನಾದ ಬಾಲ ರವಿಯ ನೋಡಿ ಹಣ್ಣೆಂದು | ಮೇಲಾಗಿ ಭಕ್ಷಿಪುದಕೆ ಉಡ್ಡಾಣ ಮಾಡಲಾಗಿ | ಈ ಲೀಲೆಯ ತಿಳಿದು ಲೋಕ ಶಿಕ್ಷಣ ಗೋಸುಗ | ಕಾಲವಜ್ರಾಯುಧದಿಂದ ಹೊಡೆಯಲು ಮೂರ್ಛಿತ | ಬಾಲನಂತೆ ಬಿದ್ದವನೆನ್ನ ನೋಡಿ ಸ್ವಾಹಾ | ಲೋಲನ ಸಖನಾದ ವಾಯುದೇವನು ಎನ್ನ | ಮೇಲಿನ ಪ್ರೀತಿಯಿಂದ ಸರ್ವಜೀವರ ಶ್ವಾಸ | ಕಾಲನಾಮಕ ಭಗವಾನಿಚ್ಛೆಯಂತ ತೃಟಿ | ಕಾಲಬಿಡದೆ ಮಾಡ್ವ ಶ್ವಾಸ ನಿರೋಧಿಸೆ ಶಚಿ | ಲೋಲನಿಂದನ್ನ ಪುತ್ರನ ಕೆಡಹಿರಲವನನ್ನು ಈ | ಕಾಲಲವದಲ್ಲಿ ಕೆಡಹೆನೆನಲು ಆ | ಕಾಲದಲಿ ಬ್ರಹ್ಮಾದಿ ದೇವತೆಗಳು ಸಾಕ್ಷಾತ್ಕಾರರಾಗಿ | ಓಲೈಸಿ ಪೆಳ್ದ ಮಾತು ಎನಗೋಸುಗ ಆಂಜನೇಯಾ | ಬಾಲನೆ ಚಿರಜೀವಿಯಾಗು ನೀನೆ ಪರಾಕ್ರಮಿ | ಮೇಲೆನಿಪ ಶ್ರೀರಾಮನ ಕಾರ್ಯಸಾಧಕನಾಗೆನುತ | ಬಾಲ ಹನುಮನ ಪೂಜೆ ಮಾಡ್ಡರು ದೇವತೆಗಳು | ಮೇಲಾದ ಮಾರ್ಗಶಿರ ಶುದ್ಧ ತ್ರಯೋದಶಿ | ಕಾಲ ಅಭಿಜಿನ್ ಮೂಹೂರ್ತದಲ್ಲಿ ಆರು ಪೂಜಿಪರೊ | ಆಲಸವಿಲ್ಲದೆ ಪುರುಷಾರ್ಥ ಹೊಂದುವರೆಂದು | ತಾಳ ಮ್ಯಾಳರೊಡನೆ ವರವ ನೀಡಿ ಪೋದರು | ಆಲಯಾ ಸ್ವರ್ಗ ಸತ್ಯಾದಿ ಲೋಕಕೆ ಅಂದು ಹೀಗೆ | ಪೇಳೆ ಸುಂದರ ವಿಠಲ ರಘುರಾಮನು ನಸುನಗೆ | ಯಾಲಿ ಒಲಿದು ಹನುಮಗೆ ಹಸನ್ಮುಖನಾಗಿ ಇರಲು 6 ಮಟ್ಟತಾಳ ಭಕುತ ವತ್ಸಲ ನೀನು ಭಕುತರಿಚ್ಛವ ನೀನು | ಭಕುತ ಭಾಂಧವ ನೀನು ಭಕುತರೊಡಿಯ ನೀನು | ಭಕುತ ಪಾಲಕನೆಂಬ ಬಿರುದುಳ್ಳವ ನೀನು | ಭಕುತರಿಂದಲಿ ನೀನು ನಿನ್ನಿಂದಲೆ ಭಕುತರು | ಅಕಳಂಕ ಐಶ್ವರ್ಯ ಸತು ಚಿತು ಆನಂದಾತ್ಮಾ | ಮುಕುತಿ ಪ್ರದಾತನೆ ಸರ್ವ ಸ್ವಾಮಿ ನೀನು | ಸಕಲ ಲೋಕಗಳೊಡೆಯ ನಿನ್ನಿಂದಲೆ ಸರ್ವ ವ್ಯಕುತವಾಗ್ವದು ಸತ್ಯ ಸರ್ವಙ್ಞನು ನೀನು | ಭಕುತರ ಮನದಿಂಗಿತ ತಿಳಿಯದವನೆ ನೀನು | ಅಖಿಳ ಬ್ರಹ್ಮಾಂಡÀರಸನೆ ನಮೊ ನಮೊ ನಮೊ ನಮೊ | ಭಕುತರಿಂದಲೇ ನಿನ್ನ ಖ್ಯಾತಿ ಮೂರ್ಲೋಕಕ್ಕೆ ಭಕುತರೇ ನಿನ್ನಯಾ ಮಹಿಮೆಯ ಹೊಗಳುವರು | ಭಕುತರು ನಿನ್ನಿಂದಲೆ ಕೀರ್ತಿವಂತರÀಹರು | ಅಕುಟಿಲ ಪ್ರಭೋ ನೀನು ನಾ ನಿನ ನಿಜ ಭಕ್ತ | ಸಕಲ ಕಾಲದಲ್ಲಿ ನಿನ್ನನಾ ಮರೆಯದಲೇ | ಮಾಳ್ಪದು ನಿಜವಾಗೆ | ಶಕುತನೆ ಎನ ಕೀರ್ತಿ ನಿನ್ನಿಂದಾಗಲಿ ವಿಭೋ | ಉಕುತಿ ಲಾಲಿಸು ಪ್ರಭೋ ತವಚಿತ್ತವ ಧಾರೆ | ಭಕುತ ಹನುಮಂತ ಇನಿತು ವಿಙÁ್ಞಪಿಸಿ ನಿಲಲು | ಪ್ರಕಟಿತ ಅಶರೀರ ವಾಕ್ಯವು ಬಿಡದಲೆ | ಸಕಲ ನುಡಿ ಹನುಮಾ ಸತ್ಯನಾಡಿದನೆನಲು | ಸುಕರ ಏಕಮೇವ ದ್ವಿತಿಯ ಸುಂದರವಿಠಲ ತುಷ್ಟನಾಹೆ 7 ಝಂಪಿತಾಳ ಮಾಸಮಾರ್ಗಶೀರ್ಷ ಶುದ್ಧ ತ್ರೊಯೋದಶಿ | ಆ ಸುಮುಹೂರ್ತ ಜಯಾ ಅಭಿಜಿನ್ ಕಾಲಕೆ | ಶ್ರೀಶರಾಮನು ಹನುಮದ್ವ್ರತವ ಮಾಡ್ಡ ತ್ರಯೋ | ದಶ ಗ್ರಂಥಿüಯುತ ಹರಿದ್ರಾದೋರಗಳಲಿ | ಭಾಸುರಾಮತಿವೀವ ಹನುಮನಾವ್ಹಾನಿಸಿ | ಪೇಶಲಾಪೀತಗಂಧ ವಸ್ತ್ರ ಪುಷ್ಟಿಗಳಿಂದಲೀ | ಶ್ರೀಸೀತೆವಕ್ಷಸ್ಥಳದಿಪ್ಪ ನಿತ್ಯಾವಿಯೋಗಿನಿ | ಆ ಸುಗ್ರೀವ ಲಕ್ಷ್ಮಣಾದಿಗಳೊಡನೆ ನೆಸಗಿದನೇನೆಂಬೆ | ಲೇಶಬಿಡದೇ “ಓಂ ನಮೋಭಗವತೇ ವಾಯುನಂದನಾಯ” | ಈ ಸುಮಂತ್ರವ ಜಪಿಸಿ ತಾ ಸಹಸದಿ ಮಾಡ್ಡನೋ | ದೇಶಪರಿಮಿತ ಪ್ರಸ್ಥತ್ರಯೋಶಗೋಧೂಮವನು | ಆ ಸುದಕ್ಷಣೆ ತಾಂಬೂಲ ಸಹ ದ್ವಿಜರಿಗಿತ್ತದಾನ | ಮೀಸಲಾ ಮನದಿ ಈ ಸತ್ಕಥೆಯನು ಕೇಳಿ | ಭೇಶಮುಖಿ ಸೀತಿಯಳ ಕೊಡ್ದನೆಂಬದು ಖ್ಯಾತಿ | ಆ ಸತ್ಯಲೋಕರಿಗೆ ಆದುದು ಅಚ್ಚರವೆ ಪೂರ್ಣಕಾಮನಿಗೆ | ಕ್ಲೇಶನಾಶನವು ಸುಗ್ರೀವನಿಗೆ ವಿಶೇಷವಾದುದು ಸತ್ಯವೆನ್ನಿ | ತೋಷದಲಿ ವಿಭೀಷಣ ಶ್ರೀರಾಮನಾಙÉ್ಞಯಿಂ ಮಾಡ್ಡು | ದೇಶಲಂಕೆಯ ರಾಜ್ಯವನು ಪಡೆದನು | ಹೇ ಸುಮತಿಯೇ ಕೇಳಂದಿನಾರಭ್ಯ ಭೂಲೋಕಕೆ | ಲೇಸುವಿಶ್ರುತವಾದಿತೈ ಹನುಮದ್ವ್ರತವೂ | ಪರಿಯಂತ ಮಾಡ್ಡುದ ಕೀಸು ಉದ್ಯಾಪನೆಯಯ್ಯಾ ಆದಿ ಮಧ್ಯಾಂತಕೆ | “ಮಾಸಾನಾಂ ಮಾರ್ಗಶೀರ್ಷೋಹಂ” ಎಂದು ಗೀತೆÀಯಲಿ ಆ ಸ್ವಾಮಿ ದಿವ್ಯನುಡಿಯುಂಟು ಕೇಳ್ ಧರ್ಮಜನೆ | ಸ್ತ್ರೀಸಹಿತ ಅನುಜರೊಡನೇ ಈ ವ್ರತವನು | ಮೇಶನಾಜ್ಞೆಯಿದೆಂದು ಮಾಡಲು ನಿನಗೆ ರಾಜ್ಯ | ಕೋಶ ಭಾಂಡಾರಪ್ರಾಪ್ತಿಯಾಗುವದು | ಲೇಶ ಸಂಶಯ ಬ್ಯಾಡೆನಲು ಶ್ರೀ ವ್ಯಾಸ | ಆ ಸುಂದರ ವಿಠಲನ ಭಕುತರು ಮುದಭರಿತರಾಗೆ 8 ರೂಪತಾಳ ರವಿಯು ವೃಶ್ಚಿಕ ರಾಶಿಗೆ ಬರಲಾಗಿ | ಸವೆಯಾದ ಪದವೀವ ವ್ರತವಮಾಡುವದಕ್ಕೆ | ಕವಳಾ ಅಜ್ಞಾನಾಖ್ಯ ರಾತ್ರಿಕಳೆದು | ಸುವಿಮಲಾಜ್ಞಾನಾಖ್ಯ ಪ್ರಾತಃ ಕಾಲದಲೆದ್ದು | ಕವಿವ್ಯಾಸರ ಮುಂದೆ ಮಾಡಿ ಧರ್ಮಜನು | ಸುವಿವೇಕಬುದ್ಧಿಯಿಂ ಸ್ನಾನಾದಿಗಳ ಮಾಡಿ | ಹವಿಷಾದಿ ದ್ರÀ್ರವ್ಯಗಳಲಿ ಹರಿಯಚಿಂತಿಸಿ ಮಾ | ಧವÀನಾಜ್ಞೆಯಂತೆ ಉದ್ಯಾಪನವಂಗೈದು | ಕವ್ಯವಾಹನನಲ್ಲಿ ಮೂಲಮಂತ್ರದಿಂದ | ಲವಕಾಲ ಬಿಡದಲೆ ವೇದಸೂಕ್ತಗಳಿಂ ಹೋಮಿಸಿ | ನವಭಕುತಿಯಲಿ ಹನುಮಂತನ ವ್ರತಾಚರಿಸಲು | ಹವಣಿಸಿ ಸಂವತ್ಸರವು ಪೋಗಲು ಪಾಂಡವರು | ಬವರದಲ್ಲಿ ಕೌರವರಗೆ
--------------
ಸುಂದರವಿಠಲ
ಅಧ್ಯಾಯ :ನಾಲ್ಕು ಪದ್ಯ ಮುಂದೆ ತ್ರೇತಾಯುಗವು ಬಂದಂಥ ಕಾಲದಲಿ ಇಂದಿರೇಶನು ರಾಮಯೆಂದು ದಶರಥನಲ್ಲಿ ಕಂದನಾಗ್ಯವತರಿಸಿ ತಂದೆ ಆಜ್ಞದಿ ಸೀತೆಯಿಂದ ಲಕ್ಷ್ಮಣನಿಂದ ಚಂದಾಗಿ ಬಡಗೂಡಿ ವನ ಚರಿಸಿ ಬಂದ ಯಮುನಾದ್ರಿಯಲಿ ನೊಂದು ನೀರಡಿಸಿ ತನ್ನ ಬಾಣದಿಂದ ಭೇದಿಸಿದಾ|| 1 ತಡವು ಇಲ್ಲದೆ ಭೂಮಿ ಒಡೆದು ಬಂದಿತು ಆಗ ಕಡು ಭೋಗವತಿ ನಾರಿಯು ಗುಡದಂಥ ಸವಿನೀರು ಕುಡಿದು ನರನಂತೆ ದೃಢನಿದ್ರೆಗೊಂಡ ಜಗದೊಡೆಯ ರಾಘವನು|| ದೃಢವಾಗಿ ಬಹುಕಾಲ ಬಿಡದೆ ಅಲ್ಲಿರುವ ಆ ಮೃಡನ ರಾಣಿಯು ತಾನು ನಡೆದು ಬಂದಳು ಅಲ್ಲೇ ಶರಗರಾದಿ ಕೈಯಲ್ಲಿ ಹಿಡಿದು, ಆರತಿಯನ್ನು ದೃಢಭಕುತ ಲಕ್ಷಣನು ದೃಢ ನಿದ್ರಿಗೊಂಡಂಥ ಒಡಿಯಗೆಚ್ಚರ ಮಾಡಗೊಡದೆ ಆಕೆಯ ಕಂಡು ನುಡಿದನೀಪರಿಯ|| ಪದ ರಾಗ:ಭೈರವಿ ಅಟತಾಳ ಸ್ವರ ಋಷಭ ದಾವಾಕಿ ಪೇಳಮ್ಮಾ|| ಬಂದವಳು ನೀ ದಾವಾಕಿ|| ದಾವಾಕಿ ಪೇಳಮ್ಮಾ ದಾವ ರಾಜನ ಸತಿ ದಾವ ಕಾರಣದಿಂದ ಧಾವಿಸಿಲ್ಲಿಗೆ ಬಂದೆ|| ಪ ಸುಂದರಿ ವಾಣಿಯೋ|| ಅಥವಾ ಮುಶುಂದನ ರಾಣಿಯೋ|| ಇಂದ್ರನ ರಾಣಿಯೋ|| ಚಂದ್ರನ ರಾಣಿಯೋ|| ಚಂದ್ರಮುಖಿಯೇ ನೀನು ಚಂದಾಗಿ ಪೇಳಮ್ಮಾ|| 1 ಭಾತೃರಾದವರು ನಾವು|| ಪರಸ್ಪರ ಪ್ರೀತಿಯಿಂದಿರುವೆವು|| ಸೀತಾವಿರಹದಿಂದ ಸೋತುಬಂದೆವು ಇಲ್ಲೆ ಮಾತೇ ಮೌನವು ಬಿಟ್ಟು ಮಾತಾಡು ಬ್ಯಾಗನೇ|| 2 ಬ್ರಹ್ಮಚರ್ಯವೆಂಬುದು|| ಈ ಕಾಲಕ್ಕೆ ನಮ್ಮಲ್ಲಿ ಇರುವುದು|| ತಮ್ಮ ಲಕ್ಷ್ಮಣ ನಾನು ನಿರ್ಮಲ ಗುಣರಾಮ ನಮ್ಮಣ್ಣನಿವ ಪರಬ್ರಹ್ಮಾನಂತಾಧ್ರೀಶಾ|| 3 ಆರ್ಯಾ ಲಕ್ಷ್ಮಣ ನಾಡಿದ ಮಾತೂ|| ಲಕ್ಷಿಗೆ ತರಲಿಲ್ಲ ದೇವಿ ಮಾತಾಡಿದನೂ ಹೀಗೆಂದೂ|| ಪದ ರಾಗ:ಧನ್ಯಾಸಿ ಆದಿತಾಳ ನಡಿ ನಡಿ £ಡಿ ನೀನು || ನುಡಿಯದ ಭಾಗಿಯೇನು|| ನ || ನಡಿ ನಡಿ ಹಿಂದಕು ಬಡಿವಾರೇನಿದು ಬಿಡು ಬ್ಯಾಗನೆ ನಿನ್ನ ಎನಗೆ ಬಿಡದೆ ಬಾಣದಿಂದೊಡೆವೆನು ನಾನು| ಪ ಎಕಾಂತ ಸ್ಥಳಕೆ ಕಾಲಕೆ ಒಬ್ಬಾಕೆ ಬರುವದಿದು ದಿಂದ ನೀ ಬೇಕಾದಲ್ಲೆ|| 1 ವನವನ ಚರಿಸುಲವ ವನವಾಸಿಗಳಿಗೆ ವನುತಿಯ ಸಂದರ್ಶನ ನಮಗ್ಯಾಕಿದು ಗುಣವಂತಿಯೆ ಅರಕ್ಷಣ ನಿಲ್ಲದಲೆ 2 ಕಾಲದಲಿ ಗದ್ದಲ ಮಾಡದೆ ಬುದ್ಧಿವಂತೆಯೆ|| 3 ಅನುಜನ ಈಪರಿ ಸಿಟ್ಟು || ಅನುಸರಿಸುತಾ ಎದ್ದ ನಿದ್ರೆಯನು ಬಿಟ್ಟು || ವನುತಿಯ ನೋಡಿದ ರಾಮ|| ವಿನಯದಿ ಮಾತಾಡಿವನು ಗುಣಧಾಮ || 1 ಪದ ರಾಗ:ದೇಶಿ ಅಟತಾಳ ಸ್ವರ :ಷಡ್ಜ ದಾರ್ಹೇಳಮ್ಮಯಾ ಉದಾರ್ಹಳಗಿರುವೆ ನೀ || ದಾರ್ಹೇಳಮ್ಮಯ|| ದಾರಿಲ್ಲಿ ಸ್ಥಳದಲ್ಲಿ ದಾರನ್ಹುಡುಕುವಿ ನಿ|| ದಾ|| ಪ ವನದಲ್ಲೆ ಇರುವಂಥ ವನದೇವತೆಯೇ ನೀ|| ದಾ|| ಮನಿಯಲ್ಲೇ ಇರುವಂಥ ಮನಿದೇವತೆಯೋ ನೀ || ದಾ|| 1 ಪ್ರಾಯಶ ಶ್ರೀಹರಿ ಮಾಯಾರೂಪಿಯೋ ನೀನು || ದಾ|| ಆಯಾದ ವಿಲ್ಲದೆ ಬಾಯಿಲೆ ಬಿಚ್ಚಾಡು || ದಾ||2 ಕ್ಲೇಶ ವೋಡಿಸುವಂಥ ಈಶನ ರಾಣಿಯೋ || ದಾ|| ದೋಷರಹಿ ತಾನಂತಾಧ್ರೀಶನ ರಾಣಿಯೋ|| 3 ಆರ್ಯಾ ಕೋಮಲತರ ವಚನಗಳೂ || ರಾಮನ ಬಾಯಿಂದ ಮಾತಾಡಿದಳು ಹೀಗೆಂದೂ|| 1 ಪದ ರಾಗ:ದೇಶೀ ಆಟತಾಳ ಸ್ವರ :ಷಡ್ಜÀ ಕೇಳೋ ರಾಮನೆ ನಿನಗ್ಹೇಳುವೆ ಗುರುತವ || ಕೇಳೋ ರಾಮ|| ಕೇಳುತ ನಿನ್ನ ಮಾತು ಬಾಳ್ಹಾನಂದಾಯಿತು || ಕೇಳೋ|| ಪ ವನದೇವತೆ ಅಲ್ಲ ಮನಿಯ ದೇವತೆ ಅಲ್ಲ || ಕೇ|| ವನಜಾಕ್ಷ ತುಳಜಾಯಂದ್ಯನಿ ಕೊಂಬುವೆ ನಾನೂ || ಕೇ|| 1 ಮಾಯಾರೂಪಿಯು ಅಲ್ಲ ಆಯಾಸಯನಗಿಲ್ಲ ||ಕೇ|| ಮಾಯಾರಮಣ ನಿನ್ನ ತಾಯಿ ಯಂದ್ಯನಿಸುವೆ || ಕೇ|| 2 ಶುದ್ಧ ಚಿನ್ಮಯ ಅನಂತಾದ್ರಿರಮಣ ನೀನು || ಕೇ|| ಸಿದ್ಧಾಗಿ ನಾ ಯಮುನಾದ್ರಿಯಲ್ಲಿರುವೆನು||3 ಆರ್ಯಾ ಕಾಯಜ ಪಿತ ಕೇಳಿದನೂ|| ಹಾಯಿದು ಏನೆಂದೂ|| ಮಾತನಾಡಿದನೂ || ಆಯತಾಕ್ಷಿ ಆದವಳೂ || ತಾಯಿಯು ಎನಗ್ನಾಂಗಾದಿ ನೀ ಪೇಳೆ|| 1 ರಾಮನ ಮಾತಿಗೆ ತುಳಜಾ || ಪ್ರೇಮದಿ ಮಾತಾಡಿದಳು ತಾವಿರಜಾ || ರಾಮಗ ಕಥಿ ಆದಂತಾ|| ನೇಮಿಸಿ ಹೇಳಿದಳು ಪೂರ್ವ ವೃತ್ತಾಂತಾ|| 2 ಪದ್ಯ ರಾಮಕೇಳು ಪೂರ್ವದಲ್ಲಿ ಜಮದಾಗ್ನಿಯು ಪರಶುರಾಮನಾಗಿರುವಿ ನೀನಾ ಮಹಾಮುನಿ ಪತ್ನಿ ನಾಮದಲೆ ರೇಣುಕಿಯು ನೀ ಮಗನು ಎನಗಾದಿ ಭೂಮಿಯಲಿ ಪ್ರಾಖ್ಯಾತ ನಾಮತಿ ಕೃತವೀರ್ಯಜನು ಕಾಮಧೇನುವು ಬಯಸಿ ಆ ಮುನಿಯ ಕೊಂದಿರಲು ಆಮ್ಯಾಲ ಪತಿಯಿಂದ ನೇಮದಲಿ ಸಹಗಮನ ನಾ ಮಾಡಿದೆನು|| 1 ಪತಿಯ ಪ್ರೇಮದಲಿ ಸ್ಮರಿಸಿ ಪರಶುರಾಮನು ಎನ್ನಸ್ಮರಿಸಿ ಕೈಮುಗಿದು ಈ ಪರಿಯು ಮಾತಾಡಿದನು ವರ ಮಾತೆಯನು ಕೂಡಿ ಇರದೆ ನೀ ಹೋದಿ ಸಂದರ್ಶನವು ಎಂದಿನ್ನ ತ್ವರದಿ ನೀ ಹೇಳೆನಗೆ ಕೇಳುತಲೆ ತ್ವರದಿಂದ ನಾನು ಸುಂದರ ರೂಪವ ತೋರಿ ಈ ಪರಿಯು ಮಾತಾಡಿದೆನು ವರಪುತ್ರ ಕೇಳು ಮುಂದಿರುವ ತ್ರೇತಾಯುಗವು ಬರುತಿರಲು ಆಗ ಸಂದರ್ಶನವ ಕೊಡವೆ|| 2 ಹೀಗೆಂದು ಹೇಳಿದ್ಯಾಗ ಆತಗ ನಾನು ಈಗ ಆತನೇ ನೀನು ರಾಘವನು ಆಗಿರುವಿ || ಹಿಂಗೆನಲು ಮುಂದೆ ಆ ರಾಘವನು ಕೊಟ್ಟಳಾಗ ತುಳಜಾದೇವಿ ಬ್ಯಾಗ ನಿನ್ನ ಕಾರ್ಯ ಚನ್ನಾಗಿ ಆಗುವುದೆಂದು || ನಾಗವೇಣಿಯು ತಾನು ಹೋಗಿಬರುವೆನೆಂದು ಆಗ ಅಲ್ಲೇವೇ ಗುಪ್ತಾಗಿ ಇರುವುವಳು|| 3 ಪದ ರಾಗ:ಶಂಕರಾಭರಣ ಆದಿತಾಳ ಸ್ವರ :ಮಧ್ಯಮಾ ತಂದನು ಕೇವಳ್ಹಾಗ್ನಿಯ ಸಾಕ್ಷಿಯಿಂದೆ|| 1 ಆದರೂ ಇಷ್ಟಾರ್ಥಗಳು ಕೊಡುವೋದು|| 2 ವರದ ಶ್ರೀರಾಮ ವರವು ಕೊಟ್ಟಿರುವಂಥಾ ತುಳಜಾ ದೇವಿಯ ದಿವ್ಯ ಮಹಿಮೆ || ಹರುಷದಿ ಕೇಳಿದರೆ ಹರುಷವ ಕೊಡುವುದು ಪರಿಹರಿಸೋದು ಕಷ್ಟವೆಲ್ಲಾ 3 ಪುತ್ರರು ಆಗುವರು ಪೌತ್ರರು ಆಗುವರು ಸತ್ಯಮಾತಿದು ಭಾವವ ಬಿಟ್ಟು|| 4 ಗ್ರಂಥವೆಂಬುವದಿಂದು || ಎಂಥಾದಾದರೂ ಎನೂ ಸಂತೋಷ ನಮ್ಮ ಗುರುಗಳಿಗೆ|| ಸಂತರೆಂಬುವರಿಗೆ ಸಂತೋಷಾಗಲಿ ನಮ್ಮಾನಂತಾದ್ರೀಶನೆ ನುಡಿಸಿದಾ|| 5 ಆರ್ಯಾ ವರ ಕವಿತಾ ರZನಕ್ಕೆ|| ತುಳಜಾದೇವಿಯ ದಿವ್ಯ ಚರಿತಕ್ಕೆ || ಚರಿಸದೆನ್ನ ಉಪಾಯಾ || ಗುರುಕೃಪೆಯಿಂದಾಯಿತು ನಾಲ್ಕು ಅಧ್ಯಾಯಾ|| 1 ಪದ ರಾಗ:ಪೂರ್ವಿ ಅಟತಾಳ ಸ್ವರ:ಮಧ್ಯಮಾ ನಿತ್ಯ ಮಂಗಳವನು ಕೊಟ್ಟು ಸಲಹುವ ತಾಯಿಗೆ|| ಪ ಘನತರ ಕೈಲಾಸ ಮನಿಯು ಮಾಡಿದವಳಿಗೆ|| ಅನುದಿನ ಅಲ್ಲಿರುವಂಥಾಕಿಗೆ | ಅನುಭೂತಿ ತಪಸಿಗೆ ಅನುಕೂಲಾಗುವೆನೆಂದು ಅನುಮಾನಿಲ್ಲದೆ ಬಂದಿರುವಾಕಿಗೆ|| 1 ಅಷ್ಟಭುಜಗಳುಳ್ಳಂಥಾಕಿಗೆ || ಅಷ್ಟೆಶ್ಚರ್ಯದಿಂದಿರುವಾಕಿಗೆ|| ದುಷ್ಟದೈತ್ಯನ ಕೊಂದಂಥಾಕೆಗೆ|| 2 ಅಮಿತ ಮಹಿಮೆ ಉಳ್ಳಂಥಾಕೆಗೆ|| ಯಮುನಾದ್ರಿಯಲಿ ಬಂದಿರುವಾಕೆಗೆ|| ಗಮನದಿಂದಲಿ ರಾಮ ಶ್ರಮಬಟ್ಟು ಅಲ್ಲೇ ವಿಶ್ರಾಮಿಸಲು ದರ್ಶನ ಕೆÀೂಟ್ಟಾಕೆಗೆ|| 3 ಕಾಮಿತ ಫಲವನು ಕೊಡುವಾಕೆಗೆ|| ರಾಮನು ಸಾವಿರ ನಾಮದಿ ಸ್ತುತಿಸಲು|| ಪ್ರೇಮದಿವರವು ಕೊಟ್ಟಂಥಾಕಿಗೆ|| 4 ಚಿಂತಿಸುವರ ಮುಂದ ನಿಂತಾಕೆಗೆ|| ಸಂತೋಷವನು ಕೊಡುವಂಥಾಕಿಗೆ|| ಅಂತರಂಗದಲ್ಲಿಹ ಚಿಂತೆಯ ಬಿಡಿಸಿ|| ಅನಂತಾದ್ರೀಶನ ತೋರುವಂಥಾಕೆಗೆ|| 5
--------------
ಅನಂತಾದ್ರೀಶ - ಕಥನಕಾವ್ಯಗಳು
ಅಧ್ಯಾಯ ಎರಡು ಪದ:ರಾಗ:ಯರಕಲಕಾಂಬೋದಿ ತಾಳ:ಬಿಲಂದಿ, ಸ್ವರ ಷಡ್ಜ ದೇವಕಿಯಲಿ ಅವತರಿಸಿದ ದೇವಾಧೀಶನ ಕಂಡು ಆ ವಸುದೇವನು ಸ್ತುತಿಸಿದ ಕೇವಲ ಭಕುತಿಯಲಿ | ಲಾವಣ್ಯಾಂಬುಧಿಯನಿಸುವ ಭಯದಿಂದ || 1 ಲೋಕಾಧೀಶನೆ ನಿನ್ನ ಅತೌಕಿಕ ರೂಪಾವು ಕಂಡು ಆ ಕಂಸನ ಭಯದಲ್ಲಿ ನಾ ವ್ಯಾಕುಲಳಾಗಿರುವೆ| ಸಾಕೀಕಾಲಕ ಈ ಅಪ್ರಾಕೃತರೂಪವು ಎÀÀನಲು ಶ್ರೀಕಾಂತನು ಆಕ್ಷಣದಲಿ ಪ್ರಾಕೃತ ಶಿಶುವಾದಾ|| 2 ಆ ಕಾಲದಲ್ಯಾದುರ್ಗಾ ತಾ ಕಾಲವ ಕಳಿಯದಲೆ ಗೋಕುಲದಲ್ಲಿ ಪುರುಷೆಂದಾಕಿಯು ತಿಳಿಯದೆ ನಿದ್ರಿಲಯಲ್ಯಾಕ್ರಾಂತಾದಳು ಹುಟ್ಟಿರುವಾಕಿಯ ಮಹಿಮೆ ಇದು|| 3 ಪಟ್ಟಣದಲಿ ಸರ್ವರು ಭಯಬಿಟ್ಟು ನಡರಾತ್ರಿಯೋಳ್ ತಟ್ಟಲು ಬಹುನಿದ್ರಿ ಸೃತಿಗೆಟ್ಟು ಮಲಗಿರಲು | ಹÀುಟ್ಟಿದ ಬಾಲಕನ ನಾ ಬಚ್ಚಿಟ್ಟು ಬರುವೆನೆಂದ ಥಟ್ಟನೆ ನಡದನು ಕೃಷ್ಣನ ಘಡ್ದ್ಹಡದು ಶೌರಿ|| 4 ಕಾಲೊಳಗಿನ ಬೇಡಿಯು ತತ್ಕಾಲಕ ಕಡದಿತು ಬಾಗಿಲಕೀಲಿಗಳೆಲ್ಲಾ ಸಾಲ್ಹಿಡದಿಂದ್ಗರಂತೆ| ಬೈಲಾದವು ಬಾಗಿಲಗಳಾ ಕಾಲದಿ ಹೀಂಗಾದದ್ದು ಬಾಲಕ ಹರಿ ಬದಿಲಿದ್ದ ಮ್ಯಾಲೇನಾಶ್ಚರ್ಯ 5 ವಾಸದ ವೃಷ್ಟಿಯ ಮಾಡಲು ಶೇಷನು ಬೆನ್ನಿಲೆ ಬಂದು ಸೂಸಿ ಬಾಹುವ ಯಮುನಿ ವಾಸುದೇವನ ಕಂಡು ಘಾಸಿಯು ಮಾಡದೆ ಕೂಟ್ಟಳು ಅಸಮಯಕೆ ಹಾದಿ 6 ಗೋಕುಲಕ್ಹೋಗುತ ಶೌರಿಯು ಶ್ರೀ ಕೃಷ್ಣನ ಅಲ್ಲಿಟ್ಟು ಆ ಕನ್ನಿಕೆಯ ತಂದು ತನ್ನಕಿಯ ಬದಿಲಿಟ್ಟಾ| ಆ ಕಾಲಕ ಆ ಬೇಡಿಯ ತಾಕಾಲಗಳಲ್ಲಿತಟ್ಟು|| ಶ್ರೀ ಕಾಂತನ ಸ್ಮರಿಸುತಲೆ ಏಕಾಂತದಲ್ಲಿರುವಾ|| 7 ಬಾಗಿಲುಗಳು ಎಲ್ಲಾ ಮತ್ಥಾಂಗೆ ಕೀಲಿಗಳ್ಯಲ್ಲಾ ಬ್ಯಾಗನೆ ಆದವು ಮುಂಚಿನ್ಹಾಂಗೆ ತಿಳಿಗೂಡದೆ| ಆಗಾ ಕೂಸಿನ ಧ್ವನಿ ಛಂದಾಗಿ ಕಿವಿಯಲಿ ಬೀಳಲು ಬಾಗಿಲಕಾಯುವ ಭೃತ್ಯರು ಬ್ಯಾಗನೆದ್ದರು ಭಯದಿ|| 8 ಗಡಿಬಿಡಿಯಿಂದಲ್ಯವರು ಯಡವುತ ಮುಗ್ಗುತ ತ್ಯೋಡುತ ನಡಿದರು ನಿಂದಿರದಲೆ ಬಹುಸಡಗರದರಮನಿಗೆ| ಒಡಿಯಾನಂತಾದ್ರೀಶನ ಖಡುದ್ವೇಷ ಆಸವಗೆ ನುಡಿದರು ದೇವಕಿದೇವಿಯು ಹಡಿದಾಳೆಂತೆಂದು|| 9 ಪದ್ಯ ನುಡಿಯ ಕೇಳೀಪರಿಯ ಖಡುಪಾಪಿ ಕಂಸ ಗಡವಡಿಸಿ ಕೊಂಡೆದ್ದು ಭಯ ಬಡುವತಲೆ ಶ್ವಾಸವನು ಬಿಡುವುತಲೆ ಭರದಿಂದ ಎಡವುತಲೆ ಮುಗ್ಗುತಲೆ ನಡದನಾ ದೇವಕಿಗೆ ಕುಡು ಕೂಸು ಎಂತ್ಯಂದು ನುಡಿಕೇಳಿ ಮನದಲ್ಲಿ ಮಿಡುಕುತಲೆ ದೇವಕಿಯು ದೃಢವಾಗಿ ಕೈಯೊಳಗೆ ಹಿಡಿದು ಆಕೂಸಿನಾ ಕುಡದೆ ಕಂಸನ ಮುಂದೆ ನುಡಿದಳೀ ಪರಿಯು|| 1 ಪದ:ರಾಗ:ನೀಲಾಂಬರಿ ತಾಳ:ತ್ರಿವಿಡಿ ಕುಡಲಾರೆ ಕೂಸಿನ್ನನಾ ನಿನಗೆ || ಅಣ್ಣ ಕುಡಲಾರೆ ಒಡ್ಡಿ ಬೇಡುವೆ ಕಡಿ ಹುಟ್ಟ ಹೆಣ್ಣದು|| ಪ ಸೂಸಿಯು ನಿನಗೆ ಈಕಿ ತಿಳಿ ನೀನು | ಮತ್ತು ಹಸಗೂಸು ಎಂಬುವದರಿಯೇನು | ಇಂಥಾ ಶಿಶುವಿನಳಿದಾರೆ ಪಾಪ ಬರದೇನು| ವಸುಧಿ ಒಳಗೆ ಬಹು ಹೆಸರಾದವನೋ ನೀನು|| 1 ಹಿರಿಯಣ್ಣನಲ್ಲೇನೊ ನೀ ಎನಗೆ | ಸ್ವಲ್ಪ ಕರುಣಾವಿಲ್ಲವೋ ಎನ್ನೊಳು ನಿನಗೆ|| ಮಕ್ಕಳಿರಧಾಂಗ ಮಾಡಿದಿ ಮನಿಯೋಳಗೆ ಗುರುತಕ್ಕಿದು ಒಂದು ನೋಡಿ ಮರೆತೆನ್ಹಿಂದಿನ ದುಃಖ|| 2 ನಾ ಏನು ನಿನಗೆ ಮಾಡಿದೆ ಪೇಳು | ಬಹು ಬಾಯಿತಗುವೆ ಕೋಪವು ತಾಳು| ಇಂಥಾ ಮಾಯಾ ಮೋಹತಳಿಗಿ|| 3 ಪದ್ಯ ಅಪ್ಪ ಕುಡಲಾರೆಂದು ತಪ್ಪದಲೆ ಆ ಕೂಸಿನಪ್ಪಿಕೊಂಡಳುವಾಗ ಕಲ್ಲ ಮ್ಯಾಲಪ್ಪಳಿಸಲಾಕೂಸು ತಪ್ಪನ್ಹಾರಿತು ಮ್ಯಾಲೆ ಅಷ್ಟು ಚಿನ್ಹಿಗಳಂದ ಉಟ್ಟ ಪೀತಾಂಬರದಿ ತೊಟ್ಟ ಹೀಂಗೆ ಸ್ಪಷ್ಟಪೇಳಿದಳು| ಪದ ರಾಗ:ತೋಡಿ ತಾಳ ಬಿಲಂದಿ ಮಂದ ಮತಿಯೇ ಕಂದರನ್ನ ಕೂಂದರೇನು ಫಲವೂ| ಇಂದು ಎನ್ನ ಕೂಂದ ವ್ಯೂಲ ಮುಂದೆ ಬರುವದೇನು| 1 ವೈರಿ ಅನ್ಯರಲ್ಲಿ ಇನ್ನ ಬೆಳೆವುತಿಹನೊ| ಮುನ್ನ ಬಂದು ತನ್ನ ಬಲದಿ ನಿನ್ನ ಕೊಲ್ಲುವೊನು 2 ಅಂತಕನ್ನ ನಿಂತು ಕೊಲ್ಲುವ ಭ್ರಾಂತಿ ಬಿಡೆಲೊ ನೀನು| ಅನಂತಾನಂತಾದ್ರೀಶನಂತು ತಿಳುವದೇನೇ|| 3 ಪದ್ಯ ಆ ಮಹಾ ಪಾಪಿ ಗ್ಯಾಡೀ ಮಾತು ದೇವಿ ತಾ ಭೂಮಿಯಲಿ ಬಂದು ಬಹುಗ್ರಾಮದಲೆ ನಿಂತು ಬಹುನಾವು ಉಳ್ಳವಳಾಗಿ ಕಾಮಿತಾರ್ಥಗಳನ್ನೂ ಪ್ರೇಮದಲಿ ಕುಡುತಿಹಳು ನೇಮದಿಂದಾ|| ಆ ಮಾಯಿ ವಚÀನವನು ಪಾಮರನು ತಾ ಕೇಳಿ ರೋಮಾಂಚಗಳು ಉಬ್ಬಿ ನಾ ಮಾಡಿದಲ್ಲೆಂದು ನೇಮದಲಿ ಇಬ್ಬರಿಗೆ ನೇಮಿಸಿದ ಬೇಡಿಯನು ತಾ ಮೋಚನವು ಮಾಡಿ ಪ್ರೇಮದಿ ನುಡದಾ|| 1 ಪದ:ರಾಗ :ಸಾರಂಗ ಅದಿತಾಳ ಸ್ವರ ಮಧ್ಯಮ ಎಲೆ ತಂಗಿಯೆ ಎಲೊ ಶಾಲಕ ಬಲು ಪಾಪಿಯು ನಾನು| ಬಲು ಮಂದಿ ಮಕ್ಕಳನ ಛಲದಿಂದ ಕೊಂದೆ| ತಿಳಿಯದೆ ನಾ ಇಂಥ ಕೆಲಸಕ್ಕೆ ತೊಡಕಿ ಪರಿ ಪಾಪದ ಫಲ ಭೋಗಿಯು ಆದೆ|| 1 ಅಶರೀರದ ವಾಣಿಯು ಹುಸಿ ಅಯಿತು ಇಂದು ವಸುಧಿಯೋಳಿರುವಾ ಮಾನುಷರಾ ಪಾಡೇನು|| ಶಶಿಮುಖಿ ನಾನಿಮ್ಮ ಶಿಶುಗಳ ಕೂಂದೆ||2 ಅಮಿತಾ ಅಪರಾಧಾಯಿತು ಕ್ಷಮಾ ಮಾಡಿರಿ ನೀವು|| ವಿಮಲ ಮನಸಿನಿಂದ ನಮಿಸಿದೆ ನಿಮಗೆ|| ಕಮಲೋದ್ಭವ ಬರದಂಥಾ ಕ್ರಮ ತಪ್ಪದು ಎಂದು ಶ್ರಮಯಾತಕ ಸುಖದುಃಖವ ಸಮಮಾಡಿರಿ ನೀವು|| 3 ತಿಳಗೇಡಿಯು ಆ ಕಂಸ ತಿಳಿಹೇಳಿಪರಿಯು ಸ್ಥಳಬಿಟ್ಟು ತಾ ತನ್ನ ಸ್ಥಳಕ್ಹೋದನು ಬ್ಯಾಗೆ\ ಬ್ಯಳಗಾಗಲು ಎಲ್ಲಾರಿಗೆ ತಿಳಿಸೀದನು ಆಗೆ ಹೊಳುವಾ ದೇವಿಯ ಮಾತುಗಳನೆಲ್ಲ ಬಿಡದೆ || 4 ಖಳರಂದರು ನಾವಿನ್ನ ಇಳಿಯೊಳ್ಹುಟ್ದರುವಾ| ಉಳದಾ ಬಾಲಕೃಷ್ಣಕರನ್ನ ಕೊಲ್ಲು ವುದ ಸತ್ಯಾ| ತಿಳದೀಪರಿ ಅವರನ್ನ ಕಳಸೀದ ಕಂಸಾ ಚಲುವಾನಂತಾದ್ರೀಶನ ಕೊಲ್ಲವೊದು ಎಂದು|| 5 ಪದ್ಯ ಮುಂದ ಗೋಕುಲದಲ್ಲಿ ನಂದಗೋಪನು ತನ್ನ ಕಂದನಾ ಮುಖವನ್ನು ಛಂದದಲಿ ನೋಡಿ ಆನಂದ ಹಿಡಿಸದೆ ತಾನು ಬಂದ ಬಂದವರಿಗ್ಯಾನಂದ ಬಡಸಿದ ಮನಕ ಬಂದದ್ದು ಕೂಟ್ಟು| ನಂದನಂದನನ ವದನೇಂದು ದರ್ಶನಕಾಗಿ ಬಂಧು ಬಾಂಧವರೆಲ್ಲ ಬಂದು ಒದಗಿದರಲ್ಲೆ ದುಂದುಬಿಯು ಮೊದಲಾದ ಛಂದಾದ ವಾದ್ಯಗಳು ಒಂದಾಗಿ ನುಡದÀವಾನಂದದಿಂದಾ| ಗೀತ ಬಲ್ಲವರು ಸಂಗೀತವನು ಮಾಡಿದರು ಪ್ರೀತಿಯಲಿ ಪಾಡಿದರು ಶ್ರೋತ್ರಸುಖರಾಗಿ ಮಾಡಿದರು ಪ್ರೀತಿಯಲಿ ಪಾಡಿದರು ಶ್ರೋತ್ರಸುಖರಾಗಿ ತಾತನವ ತನ್ನಲ್ಲೆ ಜಾತನಾಥಂಥವಗೆ ಜಾತಕರ್ಮವು ಮಾಡಿ ಪ್ರೀತನಾದಾ| ಪ್ರೀತಗೋಕುಲದಲ್ಲಿ ನೂತನೈಶ್ವರ್ಯಗಳು ಜಾತವಾದವು ಸರ್ವಜಾತಿಗಳಿಗ್ಯಾದರೂ ಯಾತಕ್ಕೂ ಕಡಿಮಿಲ್ಲ ಸೋತಂಥ ದಾರಿದ್ರ್ಯ ಯಾತಕಿರುವದು ರಮಾನಾಥ ಇರಲು|| 1 ಸ್ಥಿರ ಮನಸಿನಿಂದಲ್ಲೆ ಸ್ಥಿರವಾಗಿ ಕುಳಿತು ಈ ಚರಿತವನು ಕೇಳಿದವರ ಪರಿಪರಿಯ ಅಭಿಲಾಷ ಪರಿಪೂರ್ಣವಾಗುವದು ಚರಿಸದಲೆ ಅವರಲ್ಲಿ ಸ್ಥಿರಳಾಗಿ ಇರುವವಳು ವರಮಹಾಲಕ್ಷ್ಮೀ| ಧರಿಯೊಳಗ ಇರುವಂಥ ವರಕವೀಶ್ವರರಂತೆ ಸ್ಥಿರವಲ್ಲ ಗೋಕುಲದಲ್ಲಿ ತ್ವರ ಅವನೇ ಮುಗಿಸಿದಿಲ್ಯರಡು ಅಧ್ಯಾಯಾ|| 2 “ಶ್ರೀ ಕೃಷ್ಣಾರ್ಪಣ ಮಸ್ತು” ಎರಡನೆಯ ಅಧ್ಯಾಯವು ಸಂಪೂರ್ಣವು”
--------------
ಅನಂತಾದ್ರೀಶ - ಕಥನಕಾವ್ಯಗಳು
ಅನುಜ ಭಾವಿ ಮುಖ್ಯಪ್ರಾಣನೆ ಪ ಚರಣಭಕ್ತರಲ್ಲಿ ಮುನ್ನ ಇರಿಸಿ ಸಲಹೊ ಕರುಣಶರಧಿಯೆ ಅ.ಪ. ಹರಿಯಮುಂದೆ ನಿಂದು ಸೇರಿ ಸ್ತುತಿಸೆ ದಿವಿಜವೃಂದ ಧೀರ ಲಾತವ್ಯ ಬಂದೆ ಹಾ ಚಾರು ಯುಕ್ತಿಮಲ್ಲಿಕಾದಿ ಸಾರಗ್ರಂಥರಾಶಿ ಇತ್ತು ಈರಮತವ ಮೆರೆಸಿ ಮೆರೆದ ಶೂರ ನಿನ್ನ ಪೊಗಳಬಲ್ಲೆವೆ 1 ಎರಡು ಹತ್ತು ಮೇಲೆ ನೂರುವರುಷ ಪೊರೆದು ಶಿಷ್ಯಸಂಘ ಕಾಯ ಕುಳಿತೆ ಭರದಿ ವೃಂದಾವನದಲೀ ತೊರೆಯಲಾಗದೇನೆ ನಿನ್ನ ತುರಗವದನ ರಾಮಕೃಷ್ಣ ಅರವಿದೂರ ವೇದವ್ಯಾಸ ಪೊರೆವರೆಲ್ಲ ಸೇವೆಕೊಳ್ಳುತಾ 2 ಸುರರು ಎಲ್ಲ ಮಣಿದು ಕುಣಿದು ನಿನ್ನ ಸಹಿತ ಮಣಿದು ಹರಿಯ ಭಜಿಸುತಿಹರು ತನುವ ಕೆಡಹಿ ರಾಗದಿಂದ ನೆನೆದು ನಿನ್ನ ನೋಡೆಸದನ ಜನುಮ ಜನುಮ ದೋಷ ಕಳೆವ ಘನ ಮಹಾತ್ಮೇಗೀಡುಕಾಣೆ 3 ಎರಡು ಕಮ್ಮಿ ಎರಡುನೂರು ವರವಿರಂಚಿ ಕಲ್ಪಗಳಲಿ ನಿಮ್ಮ ಮಹಿಮೆಗೇನೆಂಬೆ ಸುರರು ವಿವಿಧ ಬಲಿಗಳಿತ್ತು ಚರಣ ಪಿಡಿದು ನಡೆವರೆನಲು ನರನು ಪೊಗಳಬಲ್ಲನೇನು ಹರನಗುರುವೆ ಶಿರವ ಬಾಗುವೆ 4 ವರವಿಮಾನದಲ್ಲಿ ಕುಳಿತು ಚರಿಸುತಿರಲು ಒಮ್ಮೆಯೇನೆ ಸುರರು ಎಲ್ಲ ಕರೆಯೆನಿನ್ನ ಧರಿಸಿ ರೂಪ ನಿಚಯ ನಡೆದೆಯಾ ವರವಿಶೇಷಪೂಜೆಕೊಂಡು ಸ್ಥಿರವಗೈದು ಪದವಿಗಳನು ಕರೆದು ಹರುಷ ದಿವಿಜಗಣಕೆ ಪೊರೆದ ನಿನಗೆ ತುಲ್ಯ ಕಾಣೆವೈ5 ಸಿರಿಯಪತ್ರ ಹರಿಗೆ ಇತ್ತು ಮರುತನಂತೆ ಪಡೆದು ವರವ ಕೊಂಡು ಭುವಿಯಲಿ ಧರಿಸಿನಿಂದು ದಂಡ ಕಾಷ್ಠ ದುರುಳವಾದಿಗಜಗಳಳಿದು ಚರಿಸಿ ದೇಶವೆಲ್ಲ ಕೊನೆಗೆ ಕುರುಹು ತೋರಿನಿಂತ ಸ್ವಾದಿಲಿ6 ಏನು ನಿಮ್ಮ ಮಹಿಮೆ ಗುರುವೆ ತಾನೆ ಬಂದು ವಾಜಿವದನ ಸಾನುರಾಗದಿಂದ ಕೊಂಬ ಹೂರ್ಣಭಕ್ಷ್ಯವೆಲ್ಲ ಪೂರ್ಣ ಪೂರ್ಣನೀನು ಜೀವಗಣದಿ ಪೂರ್ಣತನ್ನ ಕಂದನೆಂದು ದಾನಗೈದ ನಿನ್ನ ಸತಿಗೆ ಜ್ಞಾನಪೂರ್ಣಬಲನು ನೀನ ಹೋ 7 ಚಾರು ಭ್ರಾತೃನಿನ್ನ ಬದಿಲಿ ಮೀರಿ ಇಹುದು ಯಾವುದಿಲ್ಲ ಮೂರುಜಗದಿ ಸತ್ಯಸತ್ಯವೋ ಮೂರುಕಣ್ಣಿನಾತ ಮುಂದೆ ಭಾರಿಭೂತರಾಜ ನಿಮ್ಮ ಸಾರ ಚರಣ ಪಿಡಿದು ಭಜಿಪ ಯಾರು ಸಾಟಿ ಇಲ್ಲ ಸಾರುವೆ8 ಗಂಗೆಮೊದಲು ಎಲ್ಲ ತೀರ್ಥ ತಂಗಿ ಧವಳಗಂಗೆಯಲ್ಲಿ ತುಂಗ ಮಹಿಮ ನಿನ್ನ ಯಜಿಸಿ ಹಿಂಗಿಸುವರು ತಮ್ಮ ಶಮಲ ಭಂಗ ಸತ್ಯಸರ್ವಪಾಪ ಸುರರು ಕೈವಶ 9 ನಿನ್ನ ನಿಲಯ ಸುತ್ತ ನೃತ್ಯ ವನ್ನು ಗೈದು ಭಜಿಸೆ ಹರಿಯ ಘನ್ನ ಜ್ಞಾನ ಚೆನ್ನ ಪಡೆದು ಸನ್ನು ತಾಂಗ ನೆಡೆಯಕಾಣುವ ಅನ್ನಸತ್ರ ನಿನ್ನ ಕ್ಷೇತ್ರ ಅನ್ನಪತಿಯ ತೋರ್ಪನಿನಗೆ ಇನ್ನು ಸರಿಯೆ ಕಾಮಧೇನು ಚಿಣ್ಣನೆಂದು ಪಿಡಿಯೊ ಶರಣನ 10 ಹತ್ತು ಐದು ನಾಲ್ಕು ಆರು ಹತ್ತು ಐದು ಸಹಿತ ಒಂದು ಹತ್ತು ಹತ್ತು ಮತ್ತೆ ಒಂದು ಹತ್ತುನೂರು ಹಾಗನಂತ ನಿತ್ಯ ನಿತ್ಯನುತಿಪೆ ಬೃಹತಿಯಿಂದ ಸತ್ಯಪದವಿಸಿದ್ಧ ನಿನಗೆಲೈ 11 ಗಿರಿಗಳರಸು ಮಗಳ ಸಹಿತ ಕರೆದು ನಿಮ್ಮ ರತ್ನರಾಶಿ ಸುರಿದು ಶಿರದಿ ಪೂಜೆಗೈದು ಪರಮ ಧನ್ಯನಾದ ತಾನಹೋ ತರಣಿ ಜನರು ಮಾರ್ಜನಾದಿ ಪರವಿಶೇಷ ಸೇವೆಗೈದು ಕೊಡುವೆ ಕಾಮಿತಾರ್ಥವ 12 ದೀಪಸಾಲು ಹಚ್ಚಿ ಭಜಿಸೆ ಪೋಪುದೈಯ್ಯ ಭವದ ತಾಪ ಆ ಪರೇಶ ಒಲಿದು ಜ್ಞಾನ ದೀಪ ವಿಡುವ ಹೃದಯಕಮಲದಿ ತಾಪ ದೂರನಾಗಿ ಶ್ರೀಪತಿಯ ದಾಸನಾಗಿ ಕೂಪ ದಾಟ ಪೋಪ ಬೇಗಹೋ13 ಯಮನ ಪುರವ ಸಾರಿ ನೀನು ವಿಮಲರೂಪ ತೋರಿ ಹಾಗೆ ಅಮರ ಜ್ಞಾನ ಬೋಧೆಯಿತ್ತು ಯಮನ ರಾಜ್ಯ ಬರಿದುಗೈದೆಹೊ ಕಮಲೆಕಂದ ಕಾಮಕೊರಗಿ ನಮಿಪ ನಿನ್ನ ರೂಪ ನೋಡಿ ಶ್ರಮವು ಆಯ್ತುಕಾಮನಿಂದ ಅಮರಸ್ತ್ರೀವೃಂದಕ್ಕೆಲ್ಲ ವೈ14 ದುಃಖಕೊಡದ ನಿನ್ನ ಅಸ್ಥಿ ಶಂಖಚಕ್ರ ಮಯವು ಹೌದು ಪಂಕಜಾಕ್ಷ ಅಂಗದಲ್ಲೆ ಅಂಕೆರಹಿತ ಸುಖವು ನುಂಬೆಹೊ ಸೂತ್ರ ತಾನು ಕಿಂಕಿಣೀ ಸುರಾವದಿಂದ ಶಂಕೆ ಕೊಡದೆ ಸಾರುತಿಹನು ಬಿಂಕವಾಗಿ ಪದವಿಬರ್ಪುದ15 ಮೇರುಗಿರಿಯ ಶಿಖರದಲ್ಲಿ ಕ್ರೂರಮದನ ತಾಪದಿಂದ ಚಾರುಕನ್ಯೆಯೊಬ್ಬಳಿನ್ನು ತೋರೆ ಸ್ವಾಂಗ ನಿನ್ನ ಬಯಸುತ ಧೀರನೀನು ಕದಲದಿರಲು ಕ್ರೂರ ತಪದಿ ಹರಿಯ ಒಲಿಸಿ ನೀರೆ ಪಡೆದ ಲೈಯ ನಿನ್ನ ಸೇರಿ ಸುಖಿಪ ಭಾಗ್ಯಮುಂದಕೆ 16 ಗರುಡನೇರಿ ನಿನ್ನ ಸಹಿತ ಹರಿಯು ತೋರಿಸಕಲಲೋಕ ಅಮೃತ ಕರದಿ ಕುಡಿಸಿ ಅರವಿ ದೂರ ನಿನ್ನ ತಬ್ಬಿದ ಮರುತನಂತೆ ವ್ಯಾಜರಹಿತ ಚರಣಭಜರ ನಿನಗೆ ತಾನೆ ಕರೆದು ಕೊಟ್ಟ ವಾಯುಪದವಿ ತುರಗವದನ ಪ್ರಥಮ ಭಕ್ತಹೋ17 ಗೆದ್ದು ವೀರಶೈವಗುರುವ ಗದ್ದುಗೆಯನು ಏರಿ ಮೆರೆದೆ ಮೆದ್ದು ಗರವ ಸುಖದಿ ನಿಂದೆ ತಿದ್ದಪಾಟು ತೋರ್ದೆ ಉಡುಪಿಲಿ ಬದ್ಧನಾದ ವಿಠಲ ನಿನಗೆ ಬಿದ್ದ ನೃಪನ ಗೇಸಿ ಕಾಯ್ದೆ ಶುದ್ಧ ವಿಷ್ಣುಭಕಿÀ್ತ ತೋರಿ ಮಧ್ವಸುತರ ಪೊರೆದ ದಾನಿಹೋ 18 ನೂರುನೂರು ಆನೆಮೀರಿ ಭಾರಿಬಲದ ಮೆರೆವ ಶಕ್ತ ನೇರನಿಲಿಸಿ ಧ್ವಜದಸ್ತಂಭ ದೂರಗೈದೆ ಶಿಷ್ಯಕಳವಳ ಭಾರ ಹೌರ ಸ್ಥೂಲಸೂಕ್ಷ್ಮ ತೋರಬಲ್ಲೆ ಇಚ್ಛೆಯಂತೆ ಮೇರೆ ಇರದ ಮಹಿಮನೆಂದು ಸಾರಿಸಾರಿ ನುತಿಪೆ ಜೀಯನೆ 19 ಗಂಗೆಪಡೆದ ರಂಗನನ್ನು ಅಂಗನಿಂದ ತರಿಸಿ ನೆಟ್ಟು ತುಂಗವಿಭವದಿಂದ ಯಜಿಸಿ ಕಂಗಳಿಂದ ನೋಡಿ ಉತ್ಸವ ಅಂಗಮರೆತು ನಂದ ಕುಡಿದೆ ಸಂಗದಿಂದ ಕಂಡ ಜನಕೆ ಭಂಗವಾಯ್ತು ಸಕಲ ಬಂಧ ಕೊಂಗಿ ಖಳರ ಬಿಟ್ಟು ಸತ್ಯವೈ 20 ಬರಿಯ ಕವನವಲ್ಲ ಕೇಳಿ, ಗುರುವೆ ದ್ವಿಜನ ಸ್ವಪ್ನದಲ್ಲಿ ಅರುಹಿ ತನ್ನ ಚರಿತೆಯನ್ನು ಬರೆಸಿ ಇಹನು ಪೊರೆಯೆ ಶಿಷ್ಯರ ಅರಸಿ ನೋಡಿ ಧನ್ಯರಾಗಿ ಒರೆಸಿ ಕಾಮಕ್ರೋಧವೆಲ್ಲ ಚರಣಪಿಡಿಯೆ ಭಕ್ತಿಯಿಂದ ಗುರುವು ಬಿಡನು ನಿಮ್ಮನೆಂದಿಗು 21 ಸುಧೆಯ ಕರ್ತ ಜಯಮುನೀಂದ್ರ ಹೃದಯವಾಸಿ ವಾಯುವಂದ್ಯ ಪದುಮೆ ರಮಣ ಕೃಷ್ಣವಿಠಲ ಸದರದಿಂದ ಮುಕ್ತಿ ನೀಡುವ ಸದನ ವಾಜಿವಕ್ತ್ರಗೆರಗಿ ಬದರಿನಿಲಯ ನನ್ನ ನೆನೆದು ಪದವನಿದನು ಪಠಿಪ ಭಕ್ತಗೆ22
--------------
ಕೃಷ್ಣವಿಠಲದಾಸರು
ಅಶ್ವಧಾಟೀ ಕೃಷ್ಣನೆ ಎಮ್ಮನು ಪ ಕಾಯ ನಂಬಿದೆ ನಿನ್ನನುಅ.ಪ ಸಾರ ಮಾರ್ಗದ ದಾರಿ ಕಾಣದೆ ಸಾರಿ ಬೇಡುವೆ ನಿನ್ನನು ನೀರಜಾಕ್ಷನೆ ಘೋರಭವದಿ ಪಾರುಗಾಣಿಸೊ ಎಮ್ಮನು 1 ದುಷ್ಟನಾಶಕ ಶಿಷ್ಟಪಾಲಕ ಶ್ರೇಷ್ಠಮೂರುತಿದೇವನೆ ಕಷ್ಟಓಡಿಸಿ ಇಷ್ಟಪಾಲಿಸೊ ಅಷ್ಟಕರ್ತನೆ ಬೇಗನೆ 2 ವೇದಗೋಚರ ಯಾದವೇಂದ್ರ ಸುಧಾಮ ರಕ್ಷಕ ಕೃಷ್ಣನೆ ನಂದಗೋಪ ಸುಕಂದ ನಾಮಕ ರಾಧೆವಂದಿತ ಚರಣನೆ 3 ಗೋಪಿ ಮೋಹಕ ಪಾಪಮೋಚಕ ತಾಪಸ ಪ್ರಿಯರೂಪನೆ ಕೋಪಮಾಡದೆ ಪಾಪಿ ಎನಗೆ ರೂಪ ತೋರಿಸೊ ಬೇಗನೆ 4 ದೋಷದೂರ ವಿನಾಶವರ್ಜಿತ ಕೇಶಿ ಸೂದನ ಶೂರನೆ ಕ್ಲೇಶ ಓಡಿಸಿ ದಾಸನೆನಿಸೊ ಬಿಂಬನೆ 5 ವೇಣುನಾದ ವಿನೋದ ಸುಂದರ ಜಾಣೆ ರುಕ್ಮಿಣಿ ಅರಸನೆ ಸಾನುರಾಗದಿ ಜ್ಞಾನದಂಬಕ ದಾನ ಮಾಡೊ ದಾನಿಯೆ6 ಶ್ಯಾಮಸುಂದರ ಮಾಮನೋಹರ ಭೀಮ ವಿಕ್ರಮ ಭೂತಿಯೆ ಸಾಮಸನ್ನುತ ರಾಮಚಂದಿರ ಕಾಮಜನಕನೆ ಕಲ್ಕಿಯೆ 7 ಸಿಂಧು ಶಯನನೇ ಬಂಧಮೋಚಕ ಮಂದರಾದ್ರಿಧಾರನೇ ಬಿಂಧುಮಾಧವ ಮಂದಹಾಸದ ಸುಂದರಾಂಗ ರೂಪನೆ8 ಲಕ್ಷ್ಮಣಾಗ್ರಜ ಪಕ್ಷಿವಾಹನ ಅಕ್ಷರೇಡ್ಯ ಸುಲಕ್ಷಣ ಮೋಕ್ಷದಾಯಕ ಲಕ್ಷ್ಮಿರಮಣನೆ ರಕ್ಷಿಸಯ್ಯ ಸರ್ವದಾ 9 ವಾರಿಜನೇತ್ರ ವಾರಿಜನಾಭ ವಾರಿಜಾಸನ ವಂದ್ಯನೆ ಸೂರಿ ಶೇಖರ ಮೇರೆಗಾಣದ ಮಹಿಮನೆ 10 ಸರ್ವವ್ಯಾಪ್ತನೆ ಸರ್ವವಂದ್ಯನೆ ಸರ್ವವಾಚ್ಯದ ಈಶನೆ 11 ಪೂರ್ಣಗುಣನೆ ಪೂರ್ಣಶಕ್ತನೆ ಪೂರ್ಣಭೋಧರ ಪ್ರಿಯನೆ ಪೂರ್ಣರೂಪನೆ ಪೂರ್ಣಪೂರ್ಣನೆ ಪೂರ್ಣ ತಂತ್ರ ಸ್ವತಂತ್ರನೆ12 ಬಾಲ ಲೀಲ ಕಲಾವಿಭೂಷಿತ ಲೀಲ ಮಾನುಷ ವಿಗ್ರಹ ಲೋಲ ಸುಂದರ ಜಾಲ ಮೋಹಕ ಕಾಲನಾಮಕ ಪುರುಷ 13 ಕಾಳಿಮರ್ಧನ ಕಾಳಿವರದ ಕಾಳಿಯನುಜ ಕೇವಲ ಮೌಳಿಯಿಂದಲಿ ಕಾಲಿಗೆರಗುವೆ ಪಾಲಿಸಯ್ಯ ಈಗಲೇ 14 ಭಂಜನ ನಿಕಟ ಸರ್ವರ ಕುಟಿಲ ವರ್ಜಿತ ಶ್ರೇಷ್ಟನೆ ನಕ್ರತರಿದ ಚಕ್ರಪಾಣಿಯೆ ಫಕ್ಕನೊಲಿಯೊ ಶುಕ್ರನೇ 15 ವಿಪ್ರಸತಿಯರ ಕ್ಷಿಪ್ರದಿಂದಲಿ ತಪ್ಪದೆ ಪೊರೆದಾತನೆ ತಪ್ಪುನೋಡದೆ ಒಪ್ಪಿಕೊಂಡು ಅಪ್ಪ ಒಲಿಯೊ ವೆಂಕಟ 16 ಪಾಂಡವ ಪ್ರಿಯ ಪುಂಡಮರ್ದನ ಅಂಡಜಾಧಿಪ ಅಂಡಗ ಭಂಡನೆನಿಸದೆ ತೊಂಡನೆನಿಸೊ ಪಾಂಡುರಂಗ ವಿಠ್ಠಲಾ 17 ಸೋಮಶೇಖರ ಭಾಮೆ ಪೂಜಿತ ಕಾಮಿತ ಪ್ರದಸಾಮನೆ ತಾಮಸಾರಿಯ ನೇಮದಿಂದಲಿ ನಾಮನುಡಿಸೊ ಶೀಲನೆ 18 ಸೋಮಕಾಂತಕ ಭಾಮ ರೂಪದಿ ಸೋಮಹಂಚಿದ ಜಾಣನೆ ವಾಮದೇವಗೆ ಭ್ರಮೆಯ ಮಾಡಿದ ಶ್ರೀಮನೋಹರವಾಮನ 19 ಇಂದ್ರಗೊಲಿದ ವೀಂದ್ರವಾಹನ ನಂದಗೋಕುಲ ಚಂದ್ರನೆ ಬಂಧನಪ್ರದ ಬಂಧು ಸರ್ವರ ತಂದೆ ಕಾಯೋ ಬೇಗನೆ 20 ವಿಜಯಸಾರಥಿ ವೃಜಿಜನಾರ್ದನ ಅಜಭವಾದಿ ಪೂಜಿತ ತ್ರಿಜಗವಂದಿತ ಭುಜಗಶಯನನೆ ಅಜಿತ ಶಾಶ್ವತ ವಿಷ್ಣುವೆ 21 ಕಳತ್ರ ಅನೀಕನೆ ವಾಕು ಲಾಲಿಸು ನೂಕುಭವವನು ಏಕರೀತಿಲಿಮೆರೆವನೆ 22 ಜೀವ ಪ್ರೇರಕ ಜೀವಭಾಸರ ಜೀವರಾಶ್ರಯ ಭಿನ್ನನೇ ದೇವದೇವನೆ ಕಾವುದೆಮ್ಮನು ಕೋವಿದಪ್ರಿಯ ಕಪಿಲನೆ 23 ಅನ್ನನಾಮಕ ಅನ್ನದಾಯಕ ಅನ್ನುಉಂಬುವ ಅತಿಥಿಯೆ ಮಾನ್ಯಮಾನದ ಜ್ಞಾನಿಗಮ್ಯನೆ ಬೆನ್ನುಬಿದ್ದೆ ಅನಂತನೆ 24 ಸಾರ ಉಣ್ಣುವ ಗಾರು ಉಣ್ಣದ ಮಾರುತೀಶನೆ ಸ್ವರತನೆ ಧೀರ ಜಯಮುನಿ ವಾಯು ಅಂತರ ಮೆರೆವ ಸಿರಿಪತಿ ಕೃಷ್ಣವಿಠಲನೆ ಬಿಂಬನೆ 25
--------------
ಕೃಷ್ಣವಿಠಲದಾಸರು
ಆನಂದ ಗಿರಿ ವಿಠಲ | ಕಾಪಾಡೊ ಇವಳಾ ಪ ನೀನೊಲಿಯದಿನ್ನಿಲ್ಲ | ಕಾರುಣ್ಯ ಮೂರ್ತೆ ಅ.ಪ. ಮೋದ ಪಡಿಸುವ ಭಾರಾಶ್ರೀಧರನೆ ನೀನದಲ್ಲೆ | ಹೇ ದಯಾಪರನೇ |ಮಾಧವನೆ ತವದಾಸ್ಯ | ಸಾದರದಿ ಬಯಸುವಳುಹೇ ದಯಾಂಬುಧೆ ಚೆನ್ನ | ಉಪದೇಶಿಮನ್ನಿಸೋ 1 ಕಾಮಾದಿ ಅರಿಗಳನ | ನೇಮದಿಂದಲಿ ಸವರಿಭೂಮಗುಣಿತವ ಸ್ತವನ | ಕಾಮದಲಿ ಇರಿಸೀನೇಮ ಸಾಧನೆಗೈಸೀ | ಕಾಮಿತಾರ್ಥವನೀಗೋಶ್ರೀ ಮಹೀಸೇವಿತನೆ | ರಾಮಗುಣಧಾಮಾ 2 ಮೋದ ಮುನಿ ವಂದ್ಯಾ |ಬೇಧ ಸುಖದ್ವಂದಾದಿ | ಸಾದರದಿ ಅನುಭವಿಪಹಾದಿಯಲ್ಲಿರಿಸೊ ಗುರು | ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು