ಒಟ್ಟು 95 ಕಡೆಗಳಲ್ಲಿ , 36 ದಾಸರು , 90 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಒಪ್ಪಿಸಿದೆ ಒರೆದು ದೂರ ಮುಂದೆನ್ನ ತಪ್ಪನೆಣಿಸದಿರು ಧೀರ ಅಪ್ಪಳಿಸು ಕಡು ಮೂರ್ಖರ ನಿನಗೆಂದು ತಪ್ಪುವುದೆ ಭಕ್ತಭಾರ ಪ. ದುರ್ಗಾಧಿಪತಿ ಲಾಲಿಸು ಮನಸಿಜನ ಮಾರ್ಗಣಕೆ ಸಿಲುಕಿ ಮನಸು ನಿರ್ಗಮಿಸದೊಳಸರಿದು ಮುಳುಗಿ ಸ- ನ್ಮಾರ್ಗಗಾಣದೆ ಕುಂದಿತು 1 ಪಂಚಾಂಗ ಪಲುಗುತಿರಲು ಮನೆಯ ಮ್ಯಾ- ಲ್ಹಂಚುಗಳಸ್ಥಿರವಾಗಲು ಚಂಚಲದಿ ಮನ ಕೆದರಲೂ ತದಧೀನ ಪಂಚಕರಣವು ಕೆಡುವವು 2 ಹೀಗಾದ ಬಳಿಕ ನಿನ್ನ ಸೇವೆ ಚೆ- ನ್ನಾಗುವದ ಕಾಣೆ ಮುನ್ನ ಶ್ರೀ ಗುರುವೆ ತ್ವರೆಯೊಳೆನನ ಮನವ ಪದ ರಾಗಿಯಾಗಿಸು ರನ್ನ 3 ಮೂರು ಋಣಬಾಧೆಯನು ಸಹಿಸುವದ- ಕಾರಿಂದ ಶಕ್ಯವಿನ್ನು ತೋರು ತ್ವಕ್ಕರುಣವನ್ನು ದಾಸನ್ನ ದೂರ ಬಿಡಲ್ಯಾತಕಿನ್ನು 4 ಸಂದಣಿಸಿಕೊಂಡು ಬರುವ ಸರ್ವ ಪ್ರತಿ ಬಂಧಕಗಳೆಲ್ಲ ತರಿವ ಕರವ ಶಿರದಿ ಭುಜ- ಗೇಂದ್ರ ಗಿರಿನಾಥ ದೇವ 5
--------------
ತುಪಾಕಿ ವೆಂಕಟರಮಣಾಚಾರ್ಯ
ಕರುಣಿಸೆನ್ನೊಳು ದೀನಬಂಧು ಪ. ಕರುಣಿಸೆನ್ನೊಳಿರುವ ಸಕಲದುರಿತಜಾತ ರೋಗಗಳನು ಪರಿಹರಿಸಿ ಪಾದಾರವಿಂದ ಸಿರದೊಳಿರಿಸಿ ಸಲಹು ಬೇಗ ಅ.ಪ. ಮೂರು ವಿಧದಲಿ ಸುತ್ತಿಕೊಂಡ ಘೋರ ತಾಪದಿ ಸೂರೆಗೊಳುವ ಗಹನ ಸಂಸಾರ ಕೂಪದಲ್ಲಿ ಬಿದ್ದು ಚೀರುತಿಹೆನು ಚಿತ್ತದಲ್ಲಿ ತಾರೊ ತರಳಗೊಲಿದ ದೇವ 1 ಆದಿ ಭೌತಿಕಾದೇಹಜನಿತಾಗಾಧ ಮೋಹ ತಾ ಬಾಧೆ ಸಹಿಸಲಾರೆ ಮುನಿಸಮಾಧಿಗಮ್ಯ ನಿನ್ನ ಮರವ ವೇಧೆ ವದಗಿ ಬರುವ ಮೊದಲೆ ಮಾಧವನೆ ಮದೀಯನೆಂದು 2 ಮಂದನಾದೆನು ಮಮತೆಯಿಂದ ಕುಂದಿಹೋದೆನು ಮುಂದುಗಾಣವಂದ ಕಾಣದಿಂದು ನಿನ್ನ ಬೇಡಿಕೊಂಬೆ ಇಂದಿರೇಶ ವೆಂಕಟೇಶ ಎಂದು ನಿನ್ನ ಪದವ ಕಾಂಬೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕರ್ಮ ಬೆನ್ನ್ಹತ್ತಿ ಕಾಡಲು ನೀ ಮಾಡುವುದೇನೊ ರಂಗ ಪ ಕೊಟ್ಟು ಕುದಿದೆನು ಮನದಿ ಇಟ್ಟ್ಹಂಗಿಸಿದೆ ಜವÀದಿ ಬಿಟ್ಟುಂಡೆನತಿಥಿಗಳೆಷ್ಟೆಷ್ಟೋ ನಾನು ಕೆಟ್ಟ ಕೃತ್ಯವ ಮಾಡಿ ಕೊಟ್ಟೆ ಪರರಿಗನಿಷ್ಟ ನಿಷ್ಠವಂತರ ಕಂಡು ನಿಷ್ಠೂರವಾಡಿದೆ 1 ಮತಿಭ್ರಷ್ಟನಾಗಿ ಪರಸತಿಯರಿಗೆ ಮನಸೋತೆ ಇತರ ವನಿತೆಯ ಗರ್ಭ ಪತನಗೈಸಿದೆನೊ ಕೃತಿಮಥನದಿ ಬಲುಹಿತಬೋಧವನೆ ಬೋಧಿ ಸುತ ನಾಶಗೈದೆನ್ನಹಿತಕಾಗಿ ಪರರ 2 ಕೊಡುವರಿಗೆ ಕಿಡಿಯಿಟ್ಟೆ ಬಡವರನು ಬಳಲಿಸಿದೆ ಒಡನುಡಿದ ಭಾಷೆಯ ನಡೆಸಲಿಲ್ಲೊಂದು ಒಡಗೂಡಿರ್ದರರೊಳು ಕೆಡಕುಹುಟ್ಟಿಸಿ ನಾನು ಜಡತನದಿ ದಿನಗಳೆದೆ ಕಡುಭ್ರಷ್ಟನಾಗಿ 3 ಪರಧನಪಹರಿಸಿದೆ ಪರರ ಗೃಹ ಮುರಿದೆನು ವರ ಮಾತಾಪಿತರ ಬಲ್ಪರಿಯಿಂ ನೋಯಿಸಿದೆ ಗುರುಹಿರಿಯರ ಜರೆದೆ ಪರನಿಂದೆಗೆಳಿಸಿದೆ ಗರುವದಿಂ ಚರಿಸಿದೆ ಶರಣಜನರೊಂದಿಸದೆ 4 ಕೃಪಣತ್ವ ಕಳಿಲಿಲ್ಲ ಚಪಲ ಚೇಷ್ಟಳಿಲಿಲ್ಲ ಚಪಲಾಕ್ಷನ ದಿನದಿ ಉಪವಾಸ ಗೈಯಲಿಲ್ಲ ಸುಪಥದಿ ಮನವಿಟ್ಟು ಶಪಿಸುತಲೆಡೆವಿಡದೆ ಜಪಿಸಿ ಶ್ರೀರಾಮಪಾದ ಕೃಪೆಯ ಪಡೆದವನಲ್ಲ 5
--------------
ರಾಮದಾಸರು
ಕವಿಗಳು ಪೊಗಳುವ ವಿವರವ ಪೇಳುವೆ ಪ ಅವನಿಯೊಳ್ ಕೃಷ್ಣನು ಅವತರಿಸುವ ಕಥೆ ಅ.ಪ ಸುರರೊಡೆಯನ ದಿವ್ಯ ತರುವನು ಬಲದಲಿ ಸರಸಿಜನಾಭನು ಧರೆಗೆ ತರುವನೆಂದು ಅರಿಯುತ ವರ ಸುಮನಸರೆಲ್ಲ ಕರಗಳಿಂದಲಿ ಸುಮ ಸುರಿದರೆಂದೆನುತಲಿ 1 ಅಂಬುಜನಾಭನು ಶಿಶುವಾಗಿರಲವನ ಸಂಭ್ರಮದಲಿ ತನ್ನ ವಶಗೊಳುವುದಕೆ ತುಂಬುರು ಗಂಧರ್ವರು ಪಾಡಿದರು ರಂಭೆ ಊರ್ವಶಿಯರು ನೃತ್ಯ ಮಾಡಿದರೆಂದು2 ವಾಸುದೇವನು ತನ್ನ ಶಿಶುವೆಂದರಿಯುತ ವಸುದೇವನ ಬಲು ಆಸೆಗೆ ನಗುತಲಿ ವಸುಗಳು ದೇವರು ವಾಸುದೇವನು ತಮ್ಮ ಕೂಸು ಏಕಲ್ಲವೆಂದು ಹರುಷ ಪೊಂದಿದರೆಂದು 3 ಇಂದುವದನನ ಅಂದವ ನೋಡುತ ಚಂದ್ರಕಲೆಯರ್ಧ ಕುಂದಿದನೆನ್ನುತ ಸುಂದರಕೃಷ್ಣನು ಅಂದು ತನ್ನಯ ಕುಲ ದಿಂದ ಬಂದಿರೆ ಬಲು ನಂದ ಪೊಂದಿದನೆಂದು 4 ಪನ್ನಗಶಯನನು ಸಣ್ಣ ಕೂಸಾಗಿರೆ ತನ್ನ ವಿಭುತನಕೆ ಇನ್ನು ಕುಂದಿಲ್ಲವೆಂದು ಉನ್ನತ ಗಗನ ಪ್ರಸನ್ನನಾಗಿ ದಿವ್ಯ ಸಣ್ಣ ತಾರೆಗಳಿಂದ ಬೆಡಗು ತೋರಿದ ಕಥೆ 5
--------------
ವಿದ್ಯಾಪ್ರಸನ್ನತೀರ್ಥರು
ಕೃತಿ 5 ಇಂದು ಎನಗೆ ಗೋವಿಂದ ನಿನ್ನ ಪಾದಾರ ವಿಂದವ ತೋರೊ ಮುಕುಂದ ಪ ಸುಂದರ ವದನನೆ ನಂದಗೋಪನ ಕಂದ ಮಂದರೋದ್ಧರ ಆನಂದ ಇಂದಿರಾ ರಮಣ ಅ.ಪ ನೊಂದೆನಯ್ಯ ಭವಬಂಧನದೊಳು ಸಿಲುಕಿ ಮುಂದೆ ದಾರಿ ಕಾಣದೆ ಕುಂದಿದೆ ಜಗದೊಳು ಕಂದನು ಎಂದೆನ್ನ ಕುಂದುಗಳೆಣಿಸದೆ ಕಂದರ್ಪ ಜನಕನೆ 1 ಮೂಢತನದಿ ಬಹು ಹೇಡಿ ಜೀವ ನಾನಾಗಿ ದೃಢಭಕುತಿಯನು ಮಾಡಲಿಲ್ಲವೊ ಹರಿಯೆ ನೋಡಲಿಲ್ಲವೊ ನಿನ್ನ ಪಾಡಲಿಲ್ಲವೊ ಮಹಿಮೆ ಗಾಡಿಕಾರ ಕೃಷ್ಣ ಬೇಡಿಕೊಂಬೆನೊ ನಿನ್ನ 2 ಧಾರುಣಿಯೊಳು ಭೂಭಾರ ಜೀವ ನಾನಾಗಿ ದಾರಿತಪ್ಪಿ ನಡೆದೆ ಸೇರಿದೆ ಕುಜನರ ಆರೂ ಕಾಯುವರಿಲ್ಲ ಸೇರಿದೆ ನಿನಗಯ್ಯ ಧೀರ ವೇಣುಗೋಪಾಲ ಪಾರಗಾಣಿಸೊ ಹರಿಯೆ 3
--------------
ವಿಜಯೀಂದ್ರತೀರ್ಥರು
ಗಿರಿಜಾತೆಯ ಸುತ ಸುರನರ ಪೂಜಿತ ಪರಮಪುರುಷ ಗುಹ ದಯದೋರೋ ಪ ದುರಿತ ವಿನಾಶ ಗುಹ ದಯದೋರೋ ಅ.ಪ ಸರ್ವೋತ್ತಮೋತ್ತಮ ಗುಹ ದಯದೋರೋ 1 ಇಂದಿರೆಯರಸನ ಕಂದನ ಗತರೂಪಾ- ಕುಂದಿಸಿದಾ ಗುಹ ದಯದೋರೋ 2 ಬಾಲೆ ವಲ್ಲಿಯವರ ಶೀಲ ಸುಗುಣ- ಲೋಲ ಪಾವಂಜೆ ಗುಹ ದಯದೋರೋ 3
--------------
ಬೆಳ್ಳೆ ದಾಸಪ್ಪಯ್ಯ
ಗುರು ಪ್ರಜ್ಞಾನಿಧಿ ತೀರ್ಥ ಚರಣಾಬ್ಜ ಸೇವೆಯ ನಿರುತ ನೀಡಯ್ಯ ಯತಿವರ್ಯ ಯತಿವರ್ಯ ಪೂರ್ಣಪ್ರಜ್ಞಾರ್ಯರ ತತ್ತ್ವವರುಹಯ್ಯ ಅರುಹಯ್ಯ 1 ಕರುಣಾನಿಧಿಯೆ ನಿನ್ನ ಕಾರುಣ್ಯಕೆಣೆಯೆ ಶ್ರೀ ಕಾರುಣ್ಯ ವಿಠಲನಾ ದಯಾಪಾತ್ರ ದಯಾಪಾತ್ರ ಎನ್ನ ತಾಪತ್ರಯವ ಎನ್ನ ತಾಪತ್ರಯವ ಹರಿಸಿ ಸಲಹಯ್ಯ 2 ಶರಧಿ ದಾಟಿದ ಧೀರಾ ಗುರುತೂರ್ಯ ಶ್ರಮವಹಿಸಿ ಮೆರೆಯುವೆ ಮೆರೆಯುವೆ 3 ಮಾರ್ಗದೊಳು ಬರುತಿಹ ದುರ್ಮಾರ್ಗವನು ಜರಿದು ಸ ಯತಿವರ್ಯ ಎನ್ನ ಭವ ದುರ್ಗವನೆ ಹರಿಸಿ ಸಲಹಯ್ಯ ಸಲಹಯ್ಯ 4 ಗುರುವೆ ನಿನ್ನಯ ಕರುಣ ಕವಚವನೆ ತೊಡಿಸಯ್ಯ ಕಾರುಣ್ಯ ವಿಠಲನ ಅರ್ಚಿಪೆ ಅರ್ಚಿಪಾ ನಿನ್ನೊಳು ಕರುಣಾರಸಕೆ ಕುಂದುಂಟೆ ಕುಂದುಂಟೆ 5 ಹಿಂದಿಲ್ಲ ಮುಂದಿಲ್ಲ ಒಂದು ಬೋಧಿಪೋರಿಲ್ಲ ಮುಂದೆ ಬಾ ಎನ್ನುವರು ಮೊದಲಿಲ್ಲ ಮೊದಲಿಲ್ಲ ಇಂದು ನಾ ಮಂದನಾಗಿಹೆ ಎನ್ನ ಕರುಣಿಸೋ ಕರುಣಿಸೋ 6 ಬಂದುದಾಯಿತು ಜನ್ಮ ಸಂದು ಹೋಯಿತು ಆಯು ಕುಂದಿತೆನ್ನಯ ಕರಣ ಇಂದಿನಾ ಇಂದಿನಾ ಪರಿ ಪಥವೆನಗೆ ತೋರಯ್ಯ ತೋರಯ್ಯ7 ಮಂಕು ಮಾನವನ ಮನ ಡೊಂಕವನೆ ತಿದ್ದಿ ಶ್ರೀ ವೇಂಕಟೇಶನ ಭಕ್ತನೆನಿಸಯ್ಯ ಎನಿಸಯ್ಯ ನಿನ್ನಾ ಕಿಂಕರೊಳಗೆ ಕಿಂಕರನೆನಿಸಯ್ಯ 8 ಕಾರುಣ್ಯವಿಠಲಾಭಿನ್ನ ಶ್ರೀ ಉರಗಾದ್ರಿವಾಸವಿಠಲನ ನಿಜದಾಸ ನಿಜದಾಸ ನೀ ಪರಮೋದಾರ ಗುರುವರ್ಯ ಯತಿವರ್ಯ 9
--------------
ಉರಗಾದ್ರಿವಾಸವಿಠಲದಾಸರು
ಗುರುವೆ ನಿಮ್ಮನು ನಾ ಮೊರೆಹೊಕ್ಕೆನಲ್ಲದೆ ಅರಿಯೆ ಅನ್ಯರನಿನ್ನು ಪೊರೆಯಿರೀಗ ಪ. ಸಿರಿಯರಸನ ತೋರಿ ಗುರುವೆ ಕರುಣಿಸಿರಿ ತರತಮ್ಯ ತಿಳಿಸುತ ಹರಿಸಿರಿ ಭವದುಃಖಅ.ಪ. ಬಂದೆನು ಭವದೊಳು ನಿಂದೆನು ತಾಪದಿ ಹಿಂದು ಮುಂದರಿಯದೆ ಕುಂದಿದೆನು ಬಂದು ಕರುಣದಿ ಆನಂದವ ನೀಡುತ ನಂದಕಂದನ ಲೀಲೆಯಿಂದ ರಕ್ಷಿಸಿದಿರಿ1 ಮುಸುಕಿದ ಅಜ್ಞಾನ ಹಸನಾಗಿ ತೊಲಗಿಸಿ ಕುಶಲದ ಮತಿಯಿತ್ತು ಪಾಲಿಸುತ ಬಿಸಜಾಕ್ಷನು ದಯ ಎಸೆವ ಕರುಣದಿಯಿತ್ತು ಘಸಣೆಗೊಳಿಸದಲೆ ವಸುಮತಿಯೊಳು ಪೊರೆವ 2 ಕಷ್ಟವಪಡಲಾರೆ ಸೃಷ್ಟಿಯೊಳಗಿನ್ನು ತಟ್ಟದೆ ಎನ್ನ ಮೊರೆ ಮನಸಿಗೀಗ ಕೊಟ್ಟು ಅಭಯವನು ಘಟ್ಯಾಗಿ ಪೊರೆಯಿರಿ ಕೆಟ್ಟ ಕಲ್ಮಷ ಕಳೆದು ಸೃಷ್ಟಿಗೊಡೆಯನ ತೋರಿ 3 ತಲ್ಲಣಿಸುತಿಹೆ ಕ್ಷುಲ್ಲ ದೇಹದಿ ಬಂದು ಒಲ್ಲೆನು ಈ ದುಃಖಭವ ಎಲ್ಲ ಮನಸು ನಿಮ್ಮ ಪಾದದಲಿರುವುದು ತಲ್ಲಣಗೊಳಿಸದೆ ಪೊರೆಯಿರಿ ಗುರುದೇವ 4 ತಂದೆ ಮುದ್ದುಮೋಹನವಿಠ್ಠಲನೆಂಬೊ ಇಂದಿರೇಶನ ಅಂಕಿತದಿ ಮೆರೆವೊ ಸುಂದರ ಗೋಪಾಲಕೃಷ್ಣವಿಠ್ಠಲನ ಎಂದೆಂದಿಗೂ ಮನಮಂದಿರದಲಿ ಕಾಂಬ 5
--------------
ಅಂಬಾಬಾಯಿ
ಜೋಜೋ ಶ್ರೀ ಗೋಪಾಲಕೃಷ್ಣ ಮೂರುತಿಯೆ ಪತಿ ಲೋಕ ದೊರೆಯೆ ಜೋಜೋ ಈ ಲೋಕದೊಳು ನಿನಗಿನ್ನು ಸರಿಯೆ ಜೋಜೋ ಶ್ರೀ ಗುರುಕರಾರ್ಚಿತದಿ ಬಂದ್ಹರಿಯೆ ಪ. ತಂದೆ ಮುದ್ದುಮೋಹನರು ಕೊಟ್ಟ ಅಂಕಿತದಿ ಪೊಂದಿದ್ದ ರೂಪ ಗ್ರಹದಲ್ಲಿ ಹೊಂದಿ ಮುಂದೆಂಟು ವತ್ಸರಕೆ ಎನ್ನೊಡನೆ ಬಂದಿ ತಂದೆ ಮುದ್ದುಮೋಹನರ ಕರಸ್ಪರ್ಶ ಪೊಂದಿ 1 ನಮ್ಮ ಹಿರಿಯರ ಪೂಜೆ ಒಮ್ಮೊಮ್ಮೆ ಎಂದು ಒಮ್ಮೆ ದುರುಳನು ಮುಟ್ಟೆ ಮಲಿನಾದೆನೆಂದು ನಮ್ಮ ಗುರು ಕರಸ್ಪರ್ಶದಿಂ ಪುನಃ ಬಂದು ಪತಿ ಎನ್ನ ಕರಪೂಜೆ ಬೇಕೆಂದು 2 ಘನ್ನ ಗುಣರು ನಿನ್ನ ಪೂಜಿಸಿ ಪೋಗಲಂದು ಮನೆ ಪೆಟ್ಟಿಗೆಯೊಳ್ ಸುಮ್ಮನಿರಲಾರೆನೆಂದು ಮನಕೆ ಪ್ರೇರಿಸೆ ದುರುಳರಿಗೆ ಕದ್ದು ಒಯ್ದು ಘನ ಮೂರ್ತಿಗಳು ಪೋಗೆ ನೀನೊಬ್ಬ ಬಂದು 3 ಬಹುದಿವಸ ಮಲಿನವಾಗಿರುತಿರಲು ನೀನು ಮಹಮಹಿಮೆ ಅರಿಯಲಿಲ್ಲಾಗ ನಾನಿನ್ನು ಅಹಹ ನಮ್ಮ ಗುರುಗಳೆರೆಯಲು ಜ್ಞಾನವನ್ನು ಮಹಿಯೊಳೆನ್ನ ಪೂಜೆಯನು ಬಯಸಿದೆಯೊ ನೀನು 4 ಮನದಲ್ಲಿ ಪ್ರೇರಿಸಲು ಘನವಲ್ಲವೆಂದು ಕನಸಿನಲಿ ಎನ್ನ ಹಸ್ತದೊಳ್ ಬಂದು ನಿಂದು ಸನುಮತದಿ ಹರುಷದಲಿ ನಿನ್ನ ನಾ ತಂದು ಘನ ಮಹಿಮ ಗುರುಗಳಿಗೆ ಒಪ್ಪಿಸಲು ಅಂದು 5 ಅಂತರಾತ್ಮನ ಗುರುವು ವಿಗ್ರಹದೊಳಿಟ್ಟು ಸಂತೋಷದಿಂದ ಮನಮುಟ್ಟಿ ಕೊಡಲಷ್ಟು ಅಂತಾಯ್ತು ಮಲಿನ ಕುಂದಿತು ತೇಜವೆಷ್ಟು ನಿಂತೆನ್ನ ಕೈಲಿ ಪೂಜೆಯಗೊಂಬ ಗುಟ್ಟು 6 ದಿನದಿನಕೆ ಭಜನೆ ಪೂಜೆಯನೆಗೊಂಬ ಚಂದ ಘನಭಕ್ತರನು ಪೊರೆವ ಬಿರುದು ಆನಂದ ಮುನಿಜನರ ಮೋಹಕನೆ ಸಚ್ಚಿದಾನಂದ ಎನಗೊಲಿದೆ ಗೋಪಾಲಕೃಷ್ಣ ಗೋವಿಂದ 7 ರಮೆ ಬ್ರಹ್ಮ ಸುರರಿಗೆ ಸರಿ ಪೂಜಿಸುವೆನೆ ಕಮಲಾಕ್ಷ ಅಣು ನಾನು ನಿನ್ನ ಒಲಿಸುವೆನೆ ರಮಣೀಯವಾದ ವಸ್ತುಗಳ ನಾ ತಹೆನೆ ಕ್ಷಮಿಸು ನಿನ್ನ ದಾಸಿ ನನ್ನಪರಾಧಗಳನೆ 8 ಅಂತರಂಗದಲಿಪ್ಪ ಬಿಂಬ ಮೂರುತಿಯೆ ನಿಂತು ಈ ವಿಗ್ರಹದಿ ಈ ರೀತಿ ಮೆರೆಯೆ ಸಂತೋಷ ನೋಳ್ಪರಿಗೆ ಕೊಡು ಭಕ್ತಿ ಹರಿಯೆ ಕಂತುಪಿತ ಕಮಲಾಕ್ಷ ಕಾಯೊ ಸಿರಿದೊರೆಯೆ 9 ಪೂಜ್ಯಪೂಜಕನೆಂದು ಪೂಜೆ ಮಾಡುವೆನೊ ಮೂರ್ಜಗತ್ಪತಿ ನಿನ್ನ ಲಾಲಿ ಪಾಡುವೆನೊ ಪೂಜ್ಯ ಶ್ರೀ ಗೋಪಾಲಕೃಷ್ಣವಿಠ್ಠಲ ನೀನು ಗೋಜು ಬೇಡನ್ಯರದು ಪೊರೆಯೊ ದಾಸರನು 10
--------------
ಅಂಬಾಬಾಯಿ
ತೊರೆದು ಪೋಗುವುದುಚಿತವೇ | ಶ್ರೀ ಗುರುವರ ಹರಣ ನೀಗುವುದುಚಿತವೇ ಪ. ಕಮಲ ನಂಬಿ ಇರುವಂಥ ತರಳೆಯ ಜರಿದು ಮೋಸದಿ ಇಂತು ಅ.ಪ. ಆರನಾ ಪೂಜಿಸಲಿ | ಪರಿಪರಿಯಿಂದ ಆರನಾ ಸ್ತುತಿಗೈಯ್ಯಲಿ | ಪೇಳೆನ್ನ ಗುರುವೆ ತೋರದು ಮನಸಿಗೆ ಬೇರೊಂದು ಮತಿ ಇನ್ನು ಕಾರುಣ್ಯಮೂರ್ತಿ ಮತ್ತಾರ ಸೇವಿಸಲಿನ್ನು ಧಾರುಣಿಯೊಳ್ ನಿಮ್ಮ ಹೊರತಿ ನ್ನಾರು ಕಾಯುವರಿಲ್ಲವೆಂದು ಸೇರಿದವಳನು ಬಿಟ್ಟು ಶ್ರೀ ಗುರು ಮಾರನಯ್ಯನ ಪುರಕೆ ಪೋಪರೆ 1 ತುಪ್ಪ ಸಕ್ಕರೆ ಸವಿದಾ | ಶುಭತನುವಿನ್ನು ಒಪ್ಪವಾಯಿತೆ ಶಿಖಿಗೆ | ಕ್ಷಣ ಮಾತ್ರದಲ್ಲಿ ಅಪ್ಪಾವು ಅತಿರಸ ಮೆಲ್ಲುವ ಇಚ್ಛೆಯು ತೃಪ್ತಿಯಾಯಿತೆ ಪೇಳಿ ಅಪ್ಪಯ್ಯ ನಿಮಗಿನ್ನು ಅಪ್ಪ ಅಮ್ಮ ಸರ್ವಬಳಗವು ತಪ್ಪದಲೆ ನೀವೆಂದು ನಂಬಿದೆ ಒಪ್ಪಿಕೊಂಡೊಂಬತ್ತು ವರುಷವು ಇಪ್ಪ ರೀತಿಯ ಬಯಲು ಮಾಡಿ2 ಕಡುಕೃಪೆಯಿಂದಲಿ | ಪೇಳಿದ ಗೋಪ್ಯ ಒಡಲೊಳು ನೆನೆಯುತಲಿ | ಕುಣಿದಾಡುತಿದೆ ಒಡಲೊಳು ದೃಢಭಕ್ತಿಯೊಳ್ ನಂಬಿ ಬಿಡದೆ ನಿಮ್ಮಡಿಗಳು ನಡುವೆ ಬಂದೆಡರುಗಳ್ ಕಡೆಹಾಯ್ದು ಮಿಡುಕದೆ ಅಡಿಗಡಿಗೆ ಬೆಂಬಿಡದೆ ಚರಣವ ಪಿಡಿದು ಕೇಳಲು ಅಭಯವಿತ್ತ ನುಡಿಗಳೆಲ್ಲವು ಎತ್ತ ಪೋಯಿತೊ ಕಡಲಶಯನನ ಮಾಯವಕಟಾ 3 ಹಿಂದೊಬ್ಬರನು ಕಾಣೆನೊ | ನಿಮ್ಮಂದದಿ ಮುಂದೊಬ್ಬರನು ಕಾಣೆನೊ | ಈ ಕರುಣದವರ ಒಂದೊಂದು ಗುಣ ಗಣ ಬಂದು ಸ್ಮರಣೆ ಮನಕೆ ಕಂದಿ ಕುಂದಿಸುತಿದೆ ನೊಂದು ಬೆಂದು ಪೋದೆ ಚಂದವೇ ಇದು ಪೋಪ ತೆರವು ತಂದೆ ಸೈರಿಸಲಾರೆ ಗುರುವರ ತಂದೆ ಮುದ್ದುಮೋಹನರೆನಿಸಿದ ಸುಂದರಾತ್ಮಕ ಸುಗುಣಪೂರ್ಣ 4 ಎನ್ನಂತೆ ಬಳಲುವರು | ನಿಮ್ಮಯ ಶಿಷ್ಯ ರುನ್ನಂತೆ ಇರುತಿಹರೊ | ಬಹು ಭಕ್ತಿ ಉಳ್ಳವರು ಮನ್ನಿಸುತವರ ಸಂಪನ್ನ ಸಲಹಬೇಕು ಬಿನ್ನಪವಿದು ಕೇಳು ಮನ್ನಿಸು ಕೃಪಾಳು ಇನ್ನು ಸೈರಿಸೆ ಸೈರಿಸೆನು ನಿಮ್ಮ ಘನ್ನ ಮೂರ್ತಿಯ ಮನದಿ ತೋರೈ ಇನ್ನು ಗೋಪಾಲಕೃಷ್ಣವಿಠ್ಠಲನು ಭವ 5
--------------
ಅಂಬಾಬಾಯಿ
ತ್ರಾಹಿ ಶ್ರೀ ಗುರುನಾಥ ತ್ರಾಹಿ ಸದ್ಗುರುನಾಥ ತ್ರಾಹಿ ಕರುಣಾಳು ಗುರುಮೂರ್ತಿ ಸದೋದಿತ ತ್ರಾಹಿ ಶ್ರೀನಾಥ ಕರುಣಿಸೆನ್ನನು ತ್ರಾಹಿ ತ್ರಾಹಿ ತ್ರಾಹಿ ತ್ರಾಹಿ ದೀನ ನಾಥ ತ್ರಾಹಿ ಗುರು ಮನ್ನಾಥ ಕಾಯೊ ಎನ್ನನು 1 ಹಿಂದೆ ಅನೇಕ ಜನ್ಮವನು ಸೋಸಿ ಬಂದು ನಾನಾ ಹೀನಯೋನಿ ಮುಖದಲಿ ಜನಿಸಿ ಕಂದಿ ಕುಂದಿದೆ ಗರ್ಭಪಾಶದೊಳು ಅಂದಿಗಿಂದಿಗೆ ನಿಮ್ಮ ಕುರುಹು ಕಾಣದೆ ತಿರುಗಿ ಮುಂದಗಾಣದೆ ಕುರುಡನಂತಾದೆ ಧರೆಯೊಳು ಬಂದೆ ಶ್ರೀಗುರು ಪಾದವನ್ನರಿಯದೆ 2 ಇಂದೆನ್ನ ಜನುಮ ಸಾಫಲ್ಯವಾಯಿತಯ್ಯ ಗುರು ಇಂದು ಮುನ್ನಿನ ಪುಣ್ಯ ಉದಯವಾಯಿತು ಎನಗೆ ಇಂದೆನ್ನ ಜೀವ ಪಾವನವಾಯಿತು ಸಂದು ಹರಿಯಿತು ಜನ್ಮ ಮರಣ ಎನಗಿಂದು ತಾ ಮುಂದೆ ಯಮಬಾಧೆ ಗುರಿಯಾಗುವದ್ಹಿಂಗಿತು ತಂದೆ ಶ್ರೀಗುರು ಚರಣದರುಶನದಲಿ 3 ದೇಶಿಗರ ದೇವನಹುದಯ್ಯ ಶ್ರೀಗುರುಮುನಿಯೆ ಅಶೆಪೂರಿತ ಕಲ್ಪವೃಕ್ಷ ಚಿಂತಾಮಣಿಯೆ ವಿಶ್ವ ವ್ಯಾಪಕ ಆತ್ಮ ಹಂಸಮಣಿಯೆ ಈಶ ದೇವೇಶ ಸರ್ವೇಶ ಸದ್ಗುಣಮಣಿಯೆ ವಾಸುದೇವನು ತ್ರೈಲೋಕ್ಯ ತಾರಕಮಣಿಯೆ ಭಾಸಿ ಪಾಲಿಪ ಭವನಾಶ ಮಣಿಯೆ 4 ಕರುಣ ದಯದಿಂದ ನೋಡೆನ್ನ ಶ್ರೀಗುರುರಾಯ ತರಳ ಮಹಿಪತಿ ಪ್ರಾಣೊಪ್ಪಿಸಿಕೊಂಡು ಈ ದೇಹ ಹೊರೆದು ಸಲಹುವದೆನ್ನ ಇಹಪರವನು ಕರದ್ವಯ ಮುಗಿದು ಎರಗುವೆನು ಸಾಷ್ಟಾಂಗದಲಿ ತಾರಿಸುವದೆಂದು ಸ್ತುತಿಸುವೆ ಅಂತರಾತ್ಮದಲಿ ತ್ರಾಹಿ ತ್ರಾಹಿಯೆಂಬೆನು ಮನದಲಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದೀನರಕ್ಷಕ ದೈತ್ಯ ಶಿಕ್ಷಕ ಏನ ಪೇಳಲಿ ಎಂತು ತಾಳಲಿ ಪ. ಹಗಲು ರಾತ್ರೆಯು ಹಲವು ಚಿಂತೆಯು ದ್ವಿಗುಣವಾಯಿತು ಧೈರ್ಯ ಕುಂದಿತು ನಗುವ ವಿಧಿಯನು ನೆನೆಯದಾಸೆಯ ಬಿಗುವಿನಿಂದ ಬೆಂಡಾದೆ ಕೇಶವ 1 ಸಂದ ಕಾಲವು ಸುಮ್ಮಗ್ಹೋಯಿತು ಮುಂದಿನವಧಿಯ ಮರವು ಮುಸುಕಿತು ಸುಂದರ ಸ್ಮಿತಾನಂದ ಮೂರುತಿ ಇಂದಿರೇಶ ನೀ ಎಂದು ತೋರುತಿ 2 ಗಣನೆಯಿಲ್ಲದಗಾಧ ತಪ್ಪನು ಎಣಿಸಲಾರೆನು ಎಂತು ನುಡಿವೆನು ವನಜನಾಭ ನೀನಾವ ಯುಕ್ತಿಯ ನೆನಸಿ ಸಲಹುವೆ ಎಂಬುದರಿಯೆನು 3 ಅಂತವಿಲ್ಲದಾ ಚಿಂತೆ ಎನ್ನನು ಭ್ರಾಂತಿಗೊಳಿಪುದು ಭಂಡು ಮಾಳ್ಪುದು ಕಂತುಜನಕ ಭೂಕಾಂತ ಕರುಣಿಸು ಸ್ವಾಂತರಂಗದಿ ನಿಂತು ನಿಯಮಿಸು 4 ನಿತ್ಯ ಸಲಹುವ- ನೆಂಬ ಬಿರುದ ನಾನರಿತು ನುಡಿದೆನು ಶಂಭುವಂದ್ಯ ಶೇಷಾದ್ರಿನಾಥ ಪಾ- ದಾಂಬುಜಾಶ್ರಿತನೆನಿಸು ಎನ್ನನು 5
--------------
ತುಪಾಕಿ ವೆಂಕಟರಮಣಾಚಾರ್ಯ
ನಗೆಗೇಡವ್ವಾ ತಂಗಿ ನಗೆಗೇಡು ಹಗರಣ ಸಂಸಾರ ತಿಗಡಿ ಬುಗಡಿ ಬಲು ¥ ಕಾಲನಾಗಿ ದ್ರವ್ಯಕೂಡಿಸಿದ ಮಹ ಮೇಲು ಮಾಳೀಗೆ ಮನೆ ಕಟ್ಟಿಸಿದ ಕೀಳುಸತಿಸುತರೆಂದು ನಂಬಿದ ಮತ್ತು ಮಾಲಿನೊಳಗೆ ಇಟ್ಟು ಆಳಿದ ಕಾಲವೊದಗಿ ಬಂದು ದಾಳಿಟ್ಟೊಯ್ಯಲು ತನ್ನ ಆಳಿಗಿಟ್ಟುಣುತಾರ ಹೋಳಿಗೆ 1 ಕುಂದಿಪೋಗುವಕಾಯ ಖರೆಯೆಂದ ಇದ ರಂದ ತಿಳಿಯದೆ ಬಲುಮೋಹಿಸಿದ ಬಂದಕಾರ್ಯದ ಬಗೆ ಮರೆದ ಸುಳ್ಳೆ ದಂದುಗದೊಳು ಬಿದ್ದು ನಿಗರ್ಯಾಡಿದ ಒಂದೂಕಾಣದೆ ಬಂದದಾರಿಹಿಡಿದ 2 ಪರಮ ಸನ್ಮಾರ್ಗವನು ತೊರೆದ ಬರಿ ಬರಿದೆ ದು:ಖದೊಳಗುರುಳಿದ ಹರಿಯ ಶರಣರನು ನಿಂದಿಸಿದ ಸದಾ ದುರುಳರಾವಾಸದೊಳಗಾಡಿದ ಪರಮ ಕರುಣಾಕರ ವರದ ಶ್ರೀರಾಮನ ಚರಣ ಪಿಡಿಯದೆ ಘೋರನರಕಕ್ಕೀಡಾದ 3
--------------
ರಾಮದಾಸರು
ನಂಬಿ ಬಂದಿಹೆನಯ್ಯಾ ಪ ನಿನ್ನನಾ ಸ್ತುತಿಸಿ ಕೊಂಡಾಡುವೆ 1 ಕುಂದಿದ ಮನದಲಿ ನಿನ್ನನಾ ನೆನೆಯುದೆ ಮುಂದೇನುಗತಿ ಎನಗೆಂದು ತಿಳಿಯದೆ ಇನ್ನಾದರೆನ್ನ ಮನನಿನ್ನಲ್ಲಿ ನಿಲಿಸು 2 ಭೂಮಂಡಲವೆಲ್ಲಾ ತಿರುಗಿದೆ ಪ್ರಭುವೇ ನಿಮ್ಮ ಶರಣು ಬಂದಿಹೆ ನಯ್ಯ ಹೇಗುರುವೇ3 ಇಂದೆನ್ನ ಮೊರೆಕೇಳಿ ಕೇಳಿಸದಂತಿರುವೆಯಾ ಪ್ರಭುವೆ 4 ಪರದೇಶಿಯೆನುತೆನ್ನ ಕೈಬಿಡಬೇಡವೋ ಬಿಡದೆ ನಿನ್ನಡಿಗಳ ಪಿಡಿದಿಹೆನಯ್ಯಾ 5 ದೃಷ್ಟಿಯಿಂಲಿ ನೋಡಿ ರಕ್ಷಿಸು ನಮ್ಮನು | ಘಟ್ಯಾಗಿ ನಿಮ್ಮಪಾದ ಮುಟ್ಟಿ ನಾ ಭಜಿಸುವೆ6 ಸರ್ವಾಪರಾಧವ ಕ್ಷಮಿಸಿ ನೀ ಕಾಯೋ ಕಾಲಮೀರದೆಮ್ಮನು ಪಾಲಿಸಬೇಕಯ್ಯ 7
--------------
ರಾಧಾಬಾಯಿ
ನಂಬಿದೆ ನಿನ್ನ ಪಾದವ ಕಾಣಬೇಕೆಂದು ಹಂಬಲಿಸಿದೆ ಮಾಧವ ಬೆಂಬಲವಾಗು ಪೀತಾಂಬರಧರ ಕುಟುಂಬಿ ಪಾಲಾ ಕಮಲಾಂಬಕ ರಂಗಾ ಪ ಚಂದಿರಹಾಸ ಸರ್ವೇಶ ಚಂಡ ಪ್ರಕಾಶಾ ಇಂದಿರಾ ಮನೋವಿಲಾಸ ವೃಂದಾರಕರ ನಿಜಕೋಶಾ ಮಂದರಧರ ವಸುಂಧರಪತಿ ಪುರಂದರ ವಂದಿತ ಸುಂದರಾಂಗ ಕಂಬು ಇಂದೀಗ ತೊಂದರೆಕಿಡದಿರು 1 ತಂದಿತಾಯಿಗಳವರಾರೊ ತಾವಳಿದು ಸತಿ ನಂದನರೊ ಬಂಧುಬಳಗ ಮತ್ತಾರೊ ಬರಿದೆ ಊರು ಪೊಂದದೆನಲೊ ಇಳಿಜಾರು ಎಂದೆಂದಿಗಿದರ ಗಂಧದೊಳಗೆ ನಾ ಬಂದು ಬಳಲಿ ಸಂ ಬಂಧದೊಳುರಳಿದೆ ಮುಂದಾದರು ದಾರಿ ಒಂದಾದರು ಕಾಣೆ ತಂದೆ ತಾಯಿ ಸರ್ವಂದವು ನೀನೆ 2 ನೊಂದೆನೊ ನಾನಾ ಜೀವಿಲಿ ನೋಡು ನೋವಿನಲಿ ಕುಂದಿದೆ ಎಲ್ಲ ಕಾವಿಲಿ ಬೆಂದೆನೋ ಬಲು ಕೋವಿಲಿ ಅಂದದರ್ಚನೆಯಿಂದ ಮಾಡಿದ ಪಾಪಗೊಂದಿಗೆಳೆದು ಎನ್ನ ಇಂದು ಚರಣರವಿಂದವ ತೋರಿಸುವ ಬಂಧು ವಿಜಯವಿಠ್ಠಲೆಂದಹುದೆಂದು 3
--------------
ವಿಜಯದಾಸ