ಒಟ್ಟು 29 ಕಡೆಗಳಲ್ಲಿ , 16 ದಾಸರು , 29 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಷಷ್ಠಿಯ ದಿವಸ (ಶ್ರೀ ವೆಂಕಟೇಶನ ಅವಭೃಥ ಸ್ನಾನ) ರಂಭೆ :ಸಖಿಯೆ ಕೇಳೀಗ ಸಲುಗೆವಂತಳೆ ಮುಕುತಿದಾಯಕ ಮೂಲಪುರುಷಗೆ1 ಭೇರಿಶಬ್ದವು ನಗಾರಿಘರ್ಜನೆ ಮೌರಿತಾಳವು ಮೃದಂಗಶಬ್ದವು 2 ಉದಯಕಾಲದಿ ಒದಗಿ ಭಕುತರು ಪದುಮನಾಭನ ಪಾಡಿ ಪೊಗಳ್ವರು3 ಭೂರಿಮಂಗಲಕರದ ಶಬ್ದವು ಸೇರಿ ಕಿವಿಯೊಳು ತೋರುವುದಲ್ಲೆ4 ನಿದ್ದೆಬಾರದು ನಿಮಿಷಮಾತ್ರಕೆ ಎದ್ದು ಪೇಳೆಲೆ ಏಣಲೋಚನೆ5 ಸುಮ್ಮನೀನಿರು ಸುಳಿಯಬೇಡೆಲೆ ಎಮ್ಮುವುದು ನಿದ್ರೆ ಏನ ಪೇಳಲಿ6 ಬೊಮ್ಮಸುರರಿಗು ಪೊಗಳತೀರದು ತಿಮ್ಮರಾಯನ ಮಹಿಮೆ ದೊಡ್ಡಿತು7 ನಿನ್ನೆ ದಿವಸದ ನಿದ್ರೆವಿಹುದೆಲೆ ಕಣ್ಣಿಗಾಲಸ್ಯ ಕಾಂಬುವದಲ್ಲೇ8 ಬಣ್ಣಿಸುವದೆಲೆ ಬಹಳವಿಹುದಲೆ ಪನ್ನಗವೇಣಿ ಪವಡಿಸೆ ನೀನು9 ಏಳು ಏಳಮ್ಮ ಅಲಸ್ಯವ್ಯಾತಕೆ ಕಾಲಿಗೆರಗುವೆ ಹೇಳಬೇಕಮ್ಮ10 ಜಯಜಯ ವಾಧಿಶಯನ ಜಯಜಯ ದೈತ್ಯವಿನಾಶ ಜಯಜಯ ಶ್ರೀನಿವಾಸ1 ಗಂಧಕಸ್ತೂರಿಪುಣುಗಚಂದನಪನ್ನೀರುಗಳ ಹೊಂದಿಸಿ ತೋಷದಿ ಮಂದರಧರಗೆ2 ಆಕಾಶರಾಯನ ಮಗಳು ಹರುಷದಿಂದೊಡಗೂಡಿ ಶ್ರೀಕರ ವೆಂಕಟಪತಿಯು ಸರಸವಾಡಿ3 ಮಾಧವ ಸಹಿತಲಿ ಸಾದರದಿಂದಲಿ ಸರಸವಾಡಿ4 ಬಡನಡು ಬಳುಕುತಲಿ ಎಡಬಲದಲಿ ಸುಳಿದು ಕಡಲೊಡೆಯಗೆ ಲಕ್ಷ್ಮಿ ಚೆಲ್ಲಿದಳಾಗ5 ಛಲದಿ ಪದ್ಮಾವತಿಯು ಜಲಜನಾಭನ ಮೇಲೆ ಒಲವಿನಿಂದಲಿ ಬಂದು ಚೆಲ್ಲಿದಳಾಗ6 ಭರದಿ ಶ್ರೀದೇವಿಯು ಸರಸಿಜಮುಖದಲ್ಲಿ ಪರಮ ಸುಸ್ನೇಹದಿ ಬೆರಸಿದಳಾಗ7 ಭೂದೇವಿ ಭುಲ್ಲವಿಸಿ ಮಾಧವನ ಮುಖದೊಳಗೆ ಮೋದದಿಂದಲಿ ಬಂದು ಚೆಲ್ಲಿದಳಾಗ8 ಸುತ್ತುಮುತ್ತಲು ಇವರ ಆರ್ತಿಯಿಂದಲಿ ಹರಿಯು ವೃತ್ತಕುಚವ ನೋಡಿ ಚೆಲ್ಲಿದನಾಗ 9 ಝಣಝಣಾಕೃತಿಯಿಂದ ಮಿನುಗುವಾಭರಣದ ಧ್ವನಿಯ ತೋರುತ ಬಲು ಸರಸವಾಡಿ10 ಓಕುಳಿಯಾಡಿದ ನೀರಾನೇಕಭಕ್ತರು ಮಿಂದು ಏಕಮಾನಸರಾಗಿ ಪೊರಟರು ಕಾಣೆ11 * * * ಆಡಿದರೋಕುಳಿಯ ಶರಣರೆಲ ಆಡಿದರೋಕುಳಿಯಪ. ಕಾಡುವ ಪಾಪವ ಓಜಿಸಿ ಹರಿಯೊಳ- ಗಾಡಿ ನಿತ್ಯಸುಖ ಬೀಡಿನ ಮಧ್ಯದಿ1 ಅಬ್ಬರದಿಂದಲಿ ಉಬ್ಬಿ ಸಂತೋಷದಿ ಒಬ್ಬರ ಮೈಗಿನ್ನೊಬ್ಬರು ಚೆಲ್ಲುತ 2 ಚೆಂಡು ಬುಗರಿನೀರುಂಡೆಗಳಿಂದಲಿ ಹಿಂಡು ಕೂಡಿ ಮುಂಕೊಂಡು ಪಿಡಿಯುವರು3 ಸುತ್ತುಮುತ್ತ ಒತ್ತೊತ್ತಿ ಮುತ್ತಿ ಜಲ- ವೆತ್ತಿ ಚಿತ್ತತನುನೆತ್ತಿಗೆ ಸೂಸುತ್ತ4 ರಂಭೆ : ನಾರಿ ಕೇಳೀಗ ಭೂರಿಭಕುತರು ಶ್ರೀರಮಾಧವ ಸಹಿತ ಬಂದರು1 ಭಾವ ಶ್ರೀಹರಿ ಪ್ರತಿರೂಪದೋರುತ ದೇವ ತಾನೆ ನಿದ್ರ್ವಂದ್ವನೆನ್ನುತ 2 ಹೇಮಖಚಿತವಾದಂದಣವೇರಿ ಪ್ರೇಮಿಯಾಗುತ ಪೊರಟು ಬರುವನು 3 ವಲ್ಲಭೆಯರ ಕೂಡಿ ಈ ದಿನ ಫುಲ್ಲನಾಭನು ಪೊರಟನೆತ್ತಲು4 ಊರ್ವಶಿ : ನಾರಿ ನೀ ಕೇಳಿದರಿಂದ ಈಗ ಭೂರಿಭಕುತರಾನಂದ ಶ್ರೀರಮಾಧವ ಮಿಂದ ನೀರಿನೊಳಾಡುತ್ತ ಓರಂತೆ ತುಳಸಿಮಾಲೆಯ ಧರಿಸುತ್ತ ಭೇರಿಡಂಕನಗಾರಿಶಬ್ದ ಗಂ- ಭೀರದೆಸಕವ ತೋರಿಸುತ್ತ ವೈ- ಯಾರದಿಂದಲಿ ರಾಮವಾರ್ಧಿಯ ತೀರದೆಡೆಗೆಲೆ ಸಾರಿ ಬಂದರು1 ವರದಭಿಷೇಕವ ರಚಿಸಿ ಬಕು- ತರ ಸ್ನಾನವನನುಕರಿಸಿ ಭರದಿಂದ ಪೂಜಾಸತ್ಕಾರ ಸೇವೆ ಕೈಗೊಂಡು ತ್ವರಿತದಿ ನಗರಾಂತರಕನುವಾದನು ಬರುತ ದಿವ್ಯಾರತಿಗೊಳ್ಳುತ ಚರಣ ಸೇರಿದ ಭಕ್ತರಿಷ್ಟವ ನಿರುತ ಪಾಲಿಸಿ ಮೆರೆವ ಕರುಣಾ- ಕರ ಮನೋಹರ ಗರುಡವಾಹನ2 ರಂಭೆ : ಸರಸಿಜಾನನೆ ಈ ಸೊಲ್ಲ ಲಾಲಿಸೆ ಕರವ ಮುಗಿಯುತ್ತಕೈಯ ತೋರುತ1 ಪರಮಪುರುಷ ಗೋವಿಂದ ಎನುತಲಿ ಹೊರಳುತುರಳುತ ಬರುವದೇನಿದು2 ಊರ್ವಶಿ :ಅಂಗದಾಯಾಸವೆಲ್ಲವನು ಪರಿ- ಭಂಗಿಪ ಸೇವೆಯೆಂಬುದನು ಅಂಗಜಪಿತಚರಣಂಗಳ ರಜದಲಿ1 ಹೊಂಗಿ ಧರಿಸಿ ಲೋಟಾಂಗಣ ಎಂಬರು ರಂಗನಾಥನ ಸೇವೆಗೈದ ಜ- ನಂಗಳಿಗೆ ಭಯವಿಲ್ಲವದರಿಂ- ದಂಗವಿಪ ಲೋಲೋಪ್ತಿ ಕೋಲಾ- ಟಂಗಳನು ನೀ ನೋಡು ಸುಮನದಿ2 ಕೋಲು ಕೋಲೆನ್ನಿರೊ ರನ್ನದ ಕೋಲು ಕೋಲೆನ್ನಿರೊಪ. ಪಾಲಾಬ್ಧಿಶಯನ ನಮ್ಮಾಲಯಕೆದ್ದು ಬಂದ ಲೀಲೆಗಳಿಂದ ಜನಜಾಲಗಳೆಲ್ಲರು1 ಗುಂಗಾಡಿತಮನನ್ನು ಕೊಂದು ವೇದವ ತಂದು ಬಂಗಾರದೊಡಲನಿಗಿಟ್ಟನು ನಮ್ಮ ದೇವ2 ಅಡ್ಡಿಮಾಡದೆ ಸುರವಡ್ಡಿಗೆ ಸುಧೆಯಿತ್ತು ಗುಡ್ಡೆಯ ಬೆನ್ನಿಲಿ ಧರಿಸಿದ ನಮ್ಮ ದೇವ3 ರೂಢಿಯ ಕದ್ದನ ಓಡಿಸಿ ತನ್ನಯ ದಾಡೆಯಿಂದಲೆ ಸೀಳ್ದ ಕಾಡವರಾಹನಮ್ಮ4 ಸಿಂಗನ ರೂಪತಾಳಿ ಹೊಂಗಿ ಕಂಬದಿ ಬಂದು ಬಂಗಾರಕಶ್ಯಪುವಂಗವ ಕೆಡಹಿದ5 ಗಿಡ್ಡನಾಗುತ ಕೈಯೊಡ್ಡಿ ದಾನಕೆ ಮನ- ಸಡ್ಡಿಮಾಡದೆ ಮೇಣು ದೊಡ್ಡವನಾದನಮ್ಮ6 ಕಾಮಧೇನುವಿಗಾಗಿ ಕಾರ್ತವೀರ್ಯನ ಕೊಂದು ಭೂಮಿಯ ಬುಧರಿಗೆ ಪ್ರೇಮದಿನಿತ್ತನಮ್ಮ7
--------------
ತುಪಾಕಿ ವೆಂಕಟರಮಣಾಚಾರ್ಯ
ಆಜೆÕಯಿಂದಾಳಬೇಕಣ್ಣ -ಗಂಡ <?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ನಾಜೆÕಯ ಮೀರಿ ನಡೆವ ಲಂಡಹೆಣ್ಣ ಪ.ಅತ್ತೆ - ಮಾವನಿಗಂಜದವಳ - ತನ್ನಉತ್ತಮ ಪುರುಷನಜರಿದು ಝಂಕಿಪಭೃತ್ಯರ ಕಂಡು ಬಾಧಿಪಳ - ನಡುನೆತ್ತಿಯಿಂದಲೆ ಮೂಗ ಕೆತ್ತಬೇಕವಳ 1ಹಟ್ಟಿ - ಹಟ್ಟಿ ತಿರುಗುವಳ - ತನ್ನಗಟ್ಟಿತನದಿ ಮಾಕು ಮಲುಕು ನುಡಿಯುವಳಬಿಟ್ಟಕುಚವ ತೋರಿಸುವಳ - ಇನ್ನುಹುಟ್ಟು ಹುಟ್ಟಿಲಿ ಬಾಯಿ ಕುಟ್ಟಬೇಕವಳ 2ಎಂದೂ ಈ ಪರಿಯಿರುವವಳ - ಇನ್ನುಕೊಂದು ಮಾಡುವುದೇನು ಬಿಡಬೇಕವಳಒಂದಿಷ್ಟು ಗುಣವಿಲ್ಲದವಳ - ಪುಪುರಂದರವಿಠಲರಾಯನಗಲ್ಲದವಳ 3
--------------
ಪುರಂದರದಾಸರು
ಎತ್ತಿಕೊಳ್ಳೆ ಗೋಪೀ ರಂಗನ |ರಚ್ಚೆಮಾಧವರಾಯ ನಿಲುವನಲ್ಲ||ಪ||ಕರ್ಣದ ಮಾಗಾಯಿ ಕದಪಲಿ ಹೊಳೆಯುತ |ಎಣ್ಣೆಮಣಿಯ ಕೊರಳಲಿ ಹುಲಿಯುಗುರು ||ಚಿನ್ನದ ಬಾಯೊಳು ಅಮೃತವ ಸುರಿಯುತ್ತ |ಬೆಣ್ಣೆ-ಹಾಲನುಂಬುವೆನೆಂದು ಬಂದ 1ಅಂಬೆಗಾಲಿಕ್ಕುತ ತುಂಬಿಯೊಲ್ ಮೊರೆಯುತ &mಜಚಿsh; |[ಚೆಂದದ] ಅರಳೆಲೆ ನಲಿದಾಡುತ ||ಬಂದು ಸರಳನಂದದಿ ಬಾಯ ಬಿಡುತ ಮು &mಜಚಿsh; |ಕುಂದನು ಮೊಲೆಯನುಂಬುವೆನೆಂದು ಬಂದ 2ಬಿಗಿದ ಪಟ್ಟೆಯಲಿ ಬಾಯ್‍ತಲೆಯು ಹೊಳೆಯುತಿರೆ |ಚಿಗುಟುತ ಎಡದ ಕೈಯಲಿ ಕುಚವ ||ನಗುತ ನಾಚುತ ಗೋಪಿಯ ಮುಖ ನೋಡುತ |ಮಿಗೆ ನಲಿನಲಿದುಂಡ ಪುರಂದರವಿಠಲ 3
--------------
ಪುರಂದರದಾಸರು
ಎಂಥ ಬಾಲಕೃಷ್ಣ ಗೋಪೇರಂತಃಚೋರಾನಂತನೆಕಂತುಪಿತ ಕೋಟಿ ಕಾಂತಿಯಲ್ಲಿ ಭ್ರಾಂತ ಮಾಡಿದನಿವ ಪ.ಬಾಲನಾದರೊಳಿತು ಒಳ್ಳೆ ಬಾಲೆಯರಮೊಳೆಮೊಲೆಗಾಲದ ಹಣ್ಣೆಂದು ನಖದಲಿ ಸೀಳಿ ನೋಡುವರೆಹೇಳಲೇನೆಂತೆನ್ನ ನಳಿತೋಳಲಪ್ಪಿ ತೊಂಡೆಹಣ್ಣಿಗ್ಹೋಲುವದೆಂದಧರನುಂಡ ತಾಳಬಹುದೇನಮ್ಮ 1ನಿಚ್ಚಟಮೈಯೊಳು ನಾವುನಿಚ್ಚಮೈಯ ತೊಳೆಯುವಾಗಬಚ್ಚಲೊಳು ಬಂದು ಕಣ್ಣಮುಚ್ಚಿ ಅಟ್ಟಹಾಸದಿಸಚ್ಚಿದಾನಂದಗೋಪಾಲ ವಚ್ಚೆರೆಗಂಗಳೆಯರಹುಚ್ಚುಮಾಡಿ ಹೋದನಿವನ ನೆಚ್ಚಬಹುದೇನಮ್ಮ 2ಹತ್ತಿಲಿದ್ದ ಸುಪ್ತ್ತಪುರುಷನ್ನೊತ್ತಿ ರತಿಕಳೆದೋರಿಚಿತ್ತ ಸೂರೆಗೊಂಬುದಾವ ಕೃತ್ಯವಮ್ಮ ರಂಗಗೆಸುತ್ತಿನವರರಿಯರೆಂದು ಚಿತ್ತವಾಯಿತಲ್ಲದೆಅತ್ತೆ ಮಾವ ಕಂಡರೆಮ್ಮ ತೊತ್ತು ಮಾಡಿ ಬಡಿವರೆ 3ಹಟನೆಂದು ಬಾಯೊಳು ಬಾಯಿಟ್ಟು ಮುದ್ದನಿಡಲುಬಟ್ಟಕುಚವಿಡಿದೆಮ್ಮ ರಟ್ಟು ಮಾಡಬಹುದೆದಿಟ್ಟ ಜಾರನಿಗೆ ಕೈಯ ಕಟ್ಟುವೆವೆಂದರೆ ಚೆಲ್ವಬಟ್ಟಗಲ್ಲ ಕಚ್ಚಿ ಕ್ಷತವಿಟ್ಟೋಡಿದ ನಮ್ಮಯ್ಯ 4ಚಿನ್ನನಾದರೇನು ಚೊಕ್ಕ ಚಿನ್ನದಂಥ ಗುಣವುಳ್ಳಚೆನ್ನಿಗನ ರೂಪಕೊಲಿದ ಕನ್ಯೆಯರು ಪೂರ್ವದಪುಣ್ಯವಂತರಲ್ಲದುಳಿದಿನ್ನಾರಿಗೆಲ್ಲಿ ಎಂದೂ ಪ್ರಸನ್ವೆಂಕಟೇಶ ಸಿಕ್ಕ ಇನ್ನು ಸುಖ ದಕ್ಕೀತೆ 5
--------------
ಪ್ರಸನ್ನವೆಂಕಟದಾಸರು
ಕಣ್ಣೆತ್ತಿ ನೋಡಲುಬೇಡ - ಅವಳಸಣ್ಣ ಜೈತಲೆ ಕಂಡು ಮರುಳಾಗಬೇಡ ಪ.ಕಣ್ಣಿಟ್ಟ ಕೀಚಕ ಕೆಟ್ಟ -ಪರಹೆಣ್ಣಿಗಾಗಿ ರಾವಣ ತಲೆಕೊಟ್ಟಏನು ಮಾಡಿದಳಣ್ಣ ನಷ್ಟ -ಪರಹೆಣ್ಣನು ಮೋಹಿಸಿದವ ಬಲು ಭ್ರಷ್ಠ 1ದೂರದಲ್ಲಿಯ ಸುಖದಣ್ಣ - ಅವಳಚಾರು ಕಂಚುಕದೊಳಗಿನ ಕುಚವಣ್ಣಸೀರೆಯ ಬಿಗಿದುಟ್ಟ ಹೆಣ್ಣ - ಅವಳಓರೆನೋಟ ನೋಡಿ ಹಾರಬೇಡಣ್ಣ 2ಹಸಿವು ಇಲ್ಲರ ಸವಿಯೂಟ - ತನ್ನವಶಕೆ ಬಾರದ ಪರಹಸ್ವಿನ ಕೂಟದೆಸೆದೆಸೆಗಪಕೀರ್ತಿಯಾಟ - ನಮ್ಮವಸುಧೀಶ ಪುರಂದರವಿಠಲನೊಳ್ನೋಟ 3
--------------
ಪುರಂದರದಾಸರು
ಕರುಣಿಸಿ ಬಾರೆಲೆ ತಾಯೆ ಮಾಧವನಾವ್ಯಾಕೃತನಕರೆತಾರೆ ನೀರೆ ಬೇಕಾದವಳನಿನಿತುವಿರಹವಾರಿಧಿಯಲ್ಲಿ ನೂಕಿ ಓಡಿರುವನಲ್ಲೆ ಸಲೆ ಪ.ಬಿಸಜಕುಟ್ಮಳಕುಚವಸೋಂಕಿಮುದದಿ ಪಿಡಿದುಶಶಿಮೊಗದಿ ಮೋಹವನಿಡುವ ನುಡಿವಎಸೆವ ಕೊನೆವಲ್ಲಲಳುಕಿಸಿ ಎನ್ನಅಧರಪೀಯೂಷವನೊಲಿದೊಲಿದು ಸವಿದಕೋವಿದಪೊಸಮದಕರಿಯ ಸೊಂಡಿಲ ತೋಳಲಮರ್ದಪ್ಪಿಮಿಸುನಿಪುತ್ಥಳಿಯ ತೆರದಿ ಮೆರೆದಅಸಿಯ ಮಾಣಿಕಳೆ ಕೇಳಸುರಹರನಾಳಿದನೀಅಸುತೊರೆವೆ ತಾನಪಕಾರೆ ನೀರೆ1ಎಂಟೆರೆಡು ಕಳೆದೋರಿ ಸವಿದೋರಿ ಸುಖಬೀರಿ ಸಲೆಕಂಠಮಾಲೆಯ ಕೊಟ್ಟನೆ ನೆಟ್ಟನೆಎಂಟೆರಡವಸ್ಥೆಗಳ ಮೇಳಿಗೆಯ ಕ್ಷಣಲವಕೆವೆಂಠಣಿಸಿ ಅಮೃತವೆರೆದ ನೆರೆದಕಂಟಕಿಯು ದಾವಳೊ ಹರಿಯನೊಯ್ದಳಕದಿಂಗಂಟಿಕ್ಕಿದಳೊ ಬಿಡದೆ ಮಡದೆಉಂಟು ಮಾಡಿದನಲಾಮಂದಮುಗ್ಥೆಗೆ ಅಸಿಕಕಂಟಕಬಲೆಯ ಕಾಣೆ ಜಾಣೆ 2ಸರಸವಾತಿನ ಜಾಣ್ಮೆಯೆಂತುಸುರುವೆನಬಲೆಹರಣಳಿಯದೆಂದು ಪೇಳೆ ಕೇಳೆನಿರುತವನ ಕಿರುವೆರಳ ಸೌಂದರ್ಯಮಂ ನೆನೆಯುತಿರುವೆ ಪುಸಿಯಲ್ಲ ಕಾಣೆ ಪ್ರಾಣೆಕರುಣಿ ಬಲುನೊಂದರೆಂದದು ತನಗೆಕುಂದುಮರೆಯದಿನಿತೆಲ್ಲ ಒರೆಯೆ ಚತುರೆಯೆಭರದಲೊಮ್ಮದೊಮ್ಮೆ ಬಂದು ಪ್ರಸನ್ನವೆಂಕಟಗಿರಿಯರಸನೆಂದನಕ್ಕ ರಸಿಕ 3
--------------
ಪ್ರಸನ್ನವೆಂಕಟದಾಸರು
ಕೇಳೆಗೋಪಿಗೋಪಾಲ ಮಾಡಿದ ಬಲು |ದಾಳಿಯ ಗೋಕುಲದಿ ಪತಾಳೆಲಾರೆವೆ ತವಕದಲಿ ಕಂದಗೆ ಬುದ್ಧಿ |ಹೇಳೆ ಕೃಷ್ಣವ ಕರೆದು ಅ.ಪಸರಿರಾತ್ರಿಯೊಳು ಸರಸರನೆ ಮನೆಗೆ ಬಂದು |ಸುರಿದು ಪಾಲ್ಪೆಣ್ಣೆಗಳ ||ಉರೋಜಗಳಿಗೆಕರಸರಿಸಿ ಕಣ್ಗಳನು |ತೆರೆದು ನೋಡುವನೆ ನಮ್ಮ 1ಗಂಡನು ಮನೆಯೊಳಗಿರಲು ಬಂದು ಕೃಷ್ಣ |ಭಂಡ ಮಾತುಗಳ ಬಹು ||ತುಂಟತನದಲಾಡಿಉದ್ದಂಡಕಠಿಣಕಾಯ |ದುಂಡುಕುಚವ ಪಿಡಿದ 2_______ವದ ಮೇಲಿರಲು ತಾ |ಸೀರೆಯ ಸೆಳೆವ ನೋಡೆ ||ಆರಿವರೆಂದು ವಿಚಾರಿಸಿ ನೋಡಲು |ಮೋರೆಯ ಬಾಗಿದನೆ 3ಕೇರಿಯೊಳಗೆದಧಿಮಾರುತಿರಲು ಕೃಷ್ಣ |ಸಾರಿ ಬಂದು ಮೊಸರ ||ಸೂರೆಗೊಂಡು ಪರನಾರಿಯರ ನೆರೆದು ತಾ |ಘೋರರೂಪದಿ ಮೆರೆದ 4ಆಡಲೇತಕೆ ನಮ್ಮ ಬಾಗಿಲಂಗಳದೊಳು |ಬೇಡುವ ಜಲ ದೈನ್ಯದಿ ||ನೀಡುವೆ ಜಲ ಜಲಜಾಕ್ಷ ಬಾಬಾ ಎನೆ |ಮಾಡುವರತಿಎಂಬನೆ5ಹುಡುಗನೆಂದು ಕೈಯ ಪಿಡಿಯ ಪೋಗಲು ನಮ್ಮ |ಉಡೆಮುಡಿ ಪಿಡಿದ ನೋಡೆ ||ಪಡೆದವಳಿಗೆ ಪೇಳುವೆ ನಡೆ ಎನೆ ಮಚ್ಚ |ಕೊಡಲಿ ತೋರುವನೆಗೋಪಿ6ಮಡದಿಯರೆಲ್ಲರು ಮಿಯುತಲಿರೆ ಮೈ |ಉಡುಗೆಯ ತೆಗೆದುಕೊಂಡು ||ಸಡಗರದಲಿ ಬೇಡಿಕೊಳ್ಳೆ ವಸ್ತ್ರಗಳನು |ಕೊಡದೆ ಅಡವಿಗೆ ನಡೆದ 7ಬೆಣ್ಣೆಯ ತಿಂದು ತಮ್ಮಣ್ಣಗೆ ತಾ ಕೊಟ್ಟು |ಚಿಣ್ಣರ ಬಡಿವ ನೋಡೆ ||ಬಣ್ಣಿಸಿ ನಮ್ಮ ಬಾಯಿಗೆ ಬೆಣ್ಣೆ ತೊಡೆಯುತ |ಬೆಣ್ಣೆಯ ತಿಂದಿರೆಂಬ 8ಏಣಲೋಚನೆ ಸರ್ಪವೇಣಿ ನಮ್ಮ ಮನೆ |ಓಣಿಯೊಳಗೆ ಪೋಗುತ ||ಕಾಣದಂತೆ ಚಕ್ರಪಾಣಿ ನಮ್ಮೊಳು ತನ್ನ |ತ್ರಾಣವ ತೋರಿದನೆ 9ಪದುಮನಾಭನು ಪುರದ ಚದುರಿಯರಿಗೆ ತಾನು |ಮದನಶಾಸ್ತ್ರವ ಪೇಳುತ ||ಮುದದೊಳಗಿರಲವರೊಡೆಯ ಬರಲು ಕೃಷ್ಣ |ಕುದುರೆಯ ನೇರಿದನೆ 10ಎಷ್ಟುಪದ್ರವ ಕೊಟ್ಟರು ಗೋಕುಲದೊಳು |ಬಿಟ್ಟವನಿರಲಾರೆವೆ ||ಸೃಷ್ಠಿಯೊಳಗೆ ಸರ್ವಾಭಿಷ್ಟದ ಪುರಂದರ-|ವಿಠಲ ಸಲಹುವನೆ 11
--------------
ಪುರಂದರದಾಸರು
ಗುಟ್ಟ ಪೇಳಿದಳೊಂದು ಗುಣು ಗುಣು ಗುಣು ಎಂದು |ಗಟ್ಟಿ ಪೇಳಿದರತ್ತೆ ಬೈಯ್ಯುವಳೆಂದು ಪಪಚ್ಚೆ ಮಂಚದಿ ಬಂದು ಮಲಗಿಕೊಳ್ಳೆಂದು |ನಟ್ಟಿರುಳಲಿ ಬಹೆ ಕೃಷ್ಣ ಕೇಳೆಂದು ಅ.ಪಹದಿನಾರು ಸಾವಿರ ಸುದತಿಯರನು ಸೇರಿ |ಮದನಕೇಳಿದೊಳೆನ್ನ ಮರೆತೆಯಶೌರಿ|ಮದುವೆಯಾದವನೂರೊಳಿಲ್ಲ ಬಿಕಾರಿ |ಮದನತಾಪದಿ ಬೆಂದು ಬಳಲಿ ಬಾಯಾರಿ 1ಗುರುಕುಚವನುನೋಡುಹರುಷ ಮಾತಾಡು |ಮರುಗ ಮಲ್ಲಿಗೆ ಜಾಜಿ ಸರವ ತಂದೀಡೊ |ಕರುಪುರ ವೀಳ್ಯವ ಸವಿದು ನೀನೋಡು|ಪರಿಪರಿಯಲಿ ನಿನ್ನ ಕೃಪೆಯನೀಡಾಡು 2ಚಂದ್ರಗಾವಿಯ ಸೀರೆ ನೆರಿ ಹಿಡಿದುಟ್ಟು |ಚಂದದಿ ಕುಪ್ಪಸ ತೊಟ್ಟು ಜಡೆಬಿಟ್ಟು |ಚಂದನಕುಂಕುಮ ಕಸ್ತೂರಿ ಬೊಟ್ಟು |ಮಂದರಧರ ಗೊೀವಿಂದಗೆ ಚುಂಬನ ಕೊಟ್ಟು 3
--------------
ಗೋವಿಂದದಾಸ
ಗೋಕುಲ ಕೃಷ್ಣ ಗೋಪಿಸ್ತ್ರೀಯರ ಕೂಡೆ ||ಲೋಕ ಮೋಹನ ಲೀಲೆ ತೋರಿದನಲ್ಲಿ ||ಆ ಕನ್ಯೆಯರಿಗೆಲ್ಲ ಬೇಕಾದರೂಪ ತೋರಿ ||ಸಾಕಾರಿಯಾಗಿರೆ ಬಳಿಕೊಂದು ದಿವಸ 1ಸೀರೆ ಕುಪ್ಪಸ ತೊಟ್ಟು | ಹಾರ ಕಡಗವಿಟ್ಟು |ನಾರಿಯೊಬ್ಬಳುಕ್ಷೀರಮಾರುತ್ತ ಬರಲೂ ||ಕೇರಿ ಕೇರಿಗಳಲ್ಲಿ ಚರಿಸುತ್ತಲಿರೆ ಕಂಡು |ವಾರಿಜಾಕ್ಷನು ನಡೆತಂದು ತಾ ನಗುತ್ತ 2ನೀಲಕುಂತಳೆ ಗುಣಶೀಲೆ ಚಂದಿರಮುಖಿ |ಹಾಲ ಸುಂಕವ ಕೊಟ್ಟು ಪೋ | ಗವ್ವ ಚದುರೆ ||ಕೇಳಿಮಾನಿನಿಕ್ರೋಧ ತಾಳಿ ಕೃಷ್ಣನ ಕೂಡೆ |ಹಾಲ ಸುಂಕದ ಕಟ್ಟೆ ಯಾವುದಯ್ಯ ನಿನಗೆ 3ಎಂದು ನಿಂದಿಸಿ ಹಿಂದೆ ತಿರುಗಿ ಪೋಗಲು | ಕಂಡು |ನಂದಕಂದನು ತಾ | ಸೆರಗ ಪಿಡಿದು ತಾ ನಿಲಿಸೆ ||ಚಂದಿರಮುಖಿ ತಾನು ಸೆಣಸಿ ಕೃಷ್ಣನೊಳ್ ಸೋತುಕಂದಿ ಕುಂದುತ ಕೈಯ ಮುಗಿದು ಪೇಳಿದಳು 4ತಂದೆ ಸೆರಗ ಬಿಡು ಕಂದ ಸೆರಗ ಬಿಡು |ಇಂದೆನ್ನ ಗುರುವರ್ಯ | ಸೆರಗ ಬಿಡಯ್ಯ ||ತಂದೆಯು ನಾನಲ್ಲ | ಕಂದನಾನಲ್ಲವೊ | ನಿನ್ನ |ತಂದೆಗಳಿಯನೆಂದು ಭಾವಿಸೆ ತರುಣಿ 5ಮಾವ ಸೆರಗ ಬಿಡು |ಭಾವಸೆರಗ ಬಿಡು |ಸೇವಕಿ ನಿನಗೆ ನಾ ಸೆರಗ ಬಿಡಯ್ಯ ||ಮಾವನಲ್ಲವೊ | ಕೇಳೆ ಭಾವನಲ್ಲವೊ | ನಿನ್ನ ||ಮಾವನ ಮಗನು ನಾ ಕಾಣೆಂದ ಕೃಷ್ಣಾ 6ವಿಧ ವಿಧದಲಿ ಮಾತನಾಡುತಾ ಕೃಷ್ಣ |ಮದನತಾಪವ ಹೆಚ್ಚಿಸಿದನು ಮಾನಿನಿಗೆ |ಪದುಮಾಕ್ಷಿ ಭ್ರಮೆಗೊಂಡುಮದನತಾಪದಿ ನೊಂದು |ಮದನತಾತನನಪ್ಪಿ | ಮುದ್ದಿಸೆ ಕಂಡು 7ತಾಳು ತಾಳೆಲೆ ಸಖಿ ತಾಯಿ ತಂಗಿಗೆ ಸಮ |ಕೇಳು ಜಗದಿ ಪರದಾರಾಂಶ ಜನಕೆ ||ಲೋಲಲೋಚನ ಎನ್ನ ಗೋಳು ಗುಡಿಸದೀಗ |ಆಳು ನಿನ್ನಯ ಜನನಿಗೆ ಸೊಸೆ ಎಂದು ದಯದಿ 8ಇಂತೆಂದು ಕೃಷ್ಣನ ಎದೆಗೆ ಕುಚವನಿತ್ತು |ಸಂತೋಷದಿಂದಲಪ್ಪೀ ಸ್ಮರಿಸುತ್ತಲಿರಲುಕಂತುಜನಕೆ ಗೋವಿಂದಗೆ ದಾಸರೋಳೆಂತು |ಕೃಪೆಯೋ | ನಾರಿಗೊಲಿದಿಷ್ಟ ಸಲಿಸೆ ಗೋಕುಲ 9
--------------
ಗೋವಿಂದದಾಸ
ನಿನ್ನ ಮಗನ ಮುದ್ದು ನಿನಗಾದರೆಗೋಪಿಆರಿಗೇನೆ? |ಎನ್ನ ಕೂಡ ಸರಸವಾಡಲು ಓರಗೆಯೇನೆ? ಪಹೆಚ್ಚಿನ ಸತಿಯರ ಕಚ್ಚೆಯ ಬಿಚ್ಚುವ ಹುಚ್ಚನೇನೆ?-ಅಮ್ಮ |ಇಚ್ಛೆಯರಿತು ನಮ್ಮ ಗಲ್ಲವ ಕಚ್ಚುವ ನೆಚ್ಚನೇನೆ? 1ಚೆಂಡೆಂದು ಮಿಂಡೆಯರು ದುಂಡು ಕುಚವ ಪಿಡಿವ ಗಂಡನೇನೆ? |ಕಂಡಕಂಡಲ್ಲಿ ಉದ್ದಂಡವ ಮಾಡುವ ಪುಂಡನೇನೆ 2ಹೊಸ ಕೂಟವರಿತು ಹಾಸಿಗೆಯನು ಹಾಕುವ ಶಿಶುವು ಏನೆ? |ಅಸಹಾಯ ಶೂರ ಶ್ರೀ ಪುರಂದರವಿಠಲರಾಯ ಕಾಣೆ 3
--------------
ಪುರಂದರದಾಸರು
ಬಾಲನ ಮೇಲೆ ನಿನ್ನ ಮೋಹವಮ್ಮ ನಾವುಹೇಳಿದ ಮಾತು ನೀ ಕೇಳೆಯಮ್ಮ ಪ.ಚಿಣ್ಣಗಿಣ್ಣನೆಂಬುವÀ ಬಣ್ಣ ಬ್ಯಾಡೆ ನಮ್ಮಬೆಣ್ಣೆ ಕದ್ದು ಮೆದ್ದ ಕಟವಾಯಿ ನೋಡೆಸಣ್ಣಗಿಣ್ಣವನಿವನಾದರೆ ಪರರ ಚೆಲುವಹೆಣ್ಣಿನೊಳಗಾಡುವನೆ ಕುವರ 1ಪುಟ್ಟಗಿಟ್ಟನೆಂಬುವ ಮಾತು ಬೇಡೆ ನಮ್ಮರಟ್ಟು ಮಾಡುವ ಜನರೊಳು ನೋಡೆಸಿಟ್ಟುಗಿಟ್ಟಿಗೆ ಕೃಷ್ಣ ಅಳುಕನಮ್ಮ ನಮ್ಮಬಟ್ಟ ಕುಚವಿಡಿವ ದಿಟ್ಟನಮ್ಮ 2ಚಿಕ್ಕಗಿಕ್ಕವನೆಂಬುದುರೂಢಿಕಾಣೆ ನಮ್ಮಪಕ್ಕವ ಬಿಡನು ಬಾಲಕಾರ್ಯವೇನೆಅಕ್ಕೊ ಇಕ್ಕೊ ಎಂಬುವನ್ನಕ್ಕ ಕಳ್ಳ ನಮ್ಮಠÀಕ್ಕಿಸೆದ್ದೋಡುವ ಸಿಕ್ಕುವನಲ್ಲ 3ಕಕ್ಕುಲಾತಿತೋರೆ ನಮ್ಮ ಮನೆಗಳ ಪೊಕ್ಕು ಸಣ್ಣಮಕ್ಕಳಾಟವಾಡದೆಮ್ಮ ನೋಡಿ ನಕ್ಕುತಕ್ಕೈಸಿ ಓಡುವ ಮಹಾಮಾಯಗಾರನಮ್ಮದಕ್ಕಲೀಸ ಪತಿವ್ರತಧರ್ಮಜಾರಕೃಷ್ಣ4ಕೂಸುಗೀಸು ಇನ್ನೆನ್ನಬಾರದವಗೆಭವಘಾಸಿಯ ತಪ್ಪಿಸುವ ಎಂದಿಗೆಮಗೆಬೇಸರ ಗೀಸರದೆ ನೆನೆವರ ಒಡೆಯಲಕ್ಷ್ಮೀಶ ಪ್ರಸನ್ವೆಂಕಟ ರಂಗಯ್ಯ 5
--------------
ಪ್ರಸನ್ನವೆಂಕಟದಾಸರು
ಮನವೆ ಶ್ರೀನಾರಾಯಣನನು ಸ್ಮರಿಸದೆಮಾಯಾಪಾಶಕೆ ಸಿಲುಕುವರೇ ಪ.ವನಜನಾಭನ ಪದ ವನರುಹಯುಗ್ಮವಅನುದಿನನೆನೆಯದೆ ಒಣಗುವರೇವನಿತಾಲಂಪಟನಾಗುತ ಸಂತತಮನಸಿಜಯಂತ್ರಕೆ ಮನಮರಗುವರೇ ಅ.ಪ.ತುಂಡು ಸೂಳೆಯರ ದುಂಡುಕುಚವ ಪಿಡಿದುಗಂಡಸುತನವನು ಕೆಡಿಸುವರೆದಂಡಧರನ ಬಾಧೆ ಹೆಂಡತಿಯನು ಪಡಕೊಂಡು ವೇದನೆಯನು ತಾಳುವರೆಕಂಡು ಕಂಡು ನೀ ಗುಂಡಿಗೆ ಬಾಳ್ವರೆಹೆಂಡಿರ ಸುಖರಸ ಉಂಡರು ಸಾಲದೆ 1ಬಂದ ಸುಖಕೆ ನೀ ಮುಂದುವರೆಯುತಲಿಮಂದಅಸಮ ದುಃಖ ತಾಳುವರೇಬಂದುದೆನ್ನ ಕಣ್ಣ ಮುಂದೆಯನುಭವಿಪೆಎಂದಿಗೆನ್ನಾಜೆÕಯು ಬಂದಪುದೋ ನಿಜ 2ಇಷ್ಟು ದಿನದಿ ನೀ ಭ್ರಷ್ಟೆಯರಲಿ ಮೋಹಪಟ್ಟ ಭಾಗ್ಯವನೆಲ್ಲ ತೋರೊ ನೀನುಕಷ್ಟ ಮಾನಧನ ನಷ್ಟವಲ್ಲದೆ ಎಳ್ಳಿ-ನಷ್ಟು ಸುಖವನ್ನು ಕಾಣೆನಿನ್ನುಇಷ್ಟಾರ್ಥಗಳೆಲ್ಲ ದೊರೆಕುವುದೈಪರಮೇಷ್ಠಿ ಪಿತನ ಮನಮುಟ್ಟಿ ನೀವ್ ಭಜಿಸಿರೊ 3ವಿಷಯ ಪಳಂಚಿತನಾಗುವ ಸಂತತಪಂಚಡಕೀರನು ಆಗುವರೇಮುಂಚೆ ಮಾಡಿದಕರ್ಮಸಾಲದೆಂದೆನುತಲಿಸಂಚಿತಪಾಪವ ಸಂಗ್ರಹಿಸುವರೇಚಂಚಲಾಕ್ಷಿಯರ ಚಪಲದ ಮಾತನುವಂಚನೆ ಎಂಬುದು ತಿಳಿಯದೆ ಇರುವರೆ 4ಸಾರಿಸಾರಿ ಕೈ ಮುಗಿದು ಬೇಡುವೆನು ವಿ-ಕಾರ ದುರ್ಬುದ್ಧಿಯ ಬಿಡು ಎಂದುಭಾರಿ ತಪ್ಪುಗಳ ಕ್ಷಮಿಸಿಕಾವಲಕ್ಷ್ಮೀನಾರಾಯಣ ನೀನೇ ಗತಿಯೆಂದುಪಾರಮಾರ್ಥಿಕ ವಿಚಾರವ ಮಾಡುತಶ್ರೀ ರಮೇಶನ ಚರಣಾರವಿಂದವ ಸೇರೋ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಷಷ್ಠಿಯ ದಿವಸ(ಶ್ರೀ ವೆಂಕಟೇಶನ ಅವಭೃಥ ಸ್ನಾನ)ಮುಕುತಿದಾಯಕ ಮೂಲಪುರುಷಗೆ 1ಭೇರಿಶಬ್ದವು ನಗಾರಿಘರ್ಜನೆಮೌರಿತಾಳವು ಮೃದಂಗಶಬ್ದವು 2ಉದಯಕಾಲದಿ ಒದಗಿ ಭಕುತರುಪದುಮನಾಭನ ಪಾಡಿ ಪೊಗಳ್ವರು 3ಭೂರಿಮಂಗಲಕರದ ಶಬ್ದವುಸೇರಿ ಕಿವಿಯೊಳು ತೋರುವುದಲ್ಲೆ 4ನಿದ್ದೆಬಾರದು ನಿಮಿಷಮಾತ್ರಕೆಎದ್ದು ಪೇಳೆಲೆ ಏಣಲೋಚನೆ 5ಸುಮ್ಮನೀನಿರು ಸುಳಿಯಬೇಡೆಲೆಎಮ್ಮುವುದು ನಿದ್ರೆ ಏನ ಪೇಳಲಿ 6ಬೊಮ್ಮಸುರರಿಗು ಪೊಗಳತೀರದುತಿಮ್ಮರಾಯನ ಮಹಿಮೆ ದೊಡ್ಡಿತು 7ನಿನ್ನೆ ದಿವಸದ ನಿದ್ರೆವಿಹುದೆಲೆಕಣ್ಣಿಗಾಲಸ್ಯ ಕಾಂಬುವದಲ್ಲೇ 8ಬಣ್ಣಿಸುವದೆಲೆ ಬಹಳವಿಹುದಲೆಪನ್ನಗವೇಣಿ ಪವಡಿಸೆ ನೀನು 9ಏಳು ಏಳಮ್ಮ ಅಲಸ್ಯವ್ಯಾತಕೆಕಾಲಿಗೆರಗುವೆ ಹೇಳಬೇಕಮ್ಮ 10ಜಯಜಯ ವಾಧಿಶಯನಜಯಜಯ ದೈತ್ಯವಿನಾಶ ಜಯಜಯ ಶ್ರೀನಿವಾಸ 1ಗಂಧಕಸ್ತೂರಿಪುಣುಗಚಂದನಪನ್ನೀರುಗಳಹೊಂದಿಸಿ ತೋಷದಿ ಮಂದರಧರಗೆ 2ಆಕಾಶರಾಯನ ಮಗಳು ಹರುಷದಿಂದೊಡಗೂಡಿಶ್ರೀಕರ ವೆಂಕಟಪತಿಯು ಸರಸವಾಡಿ 3ಶ್ರೀದೇವಿ ಭೂದೇವಿಮಾಧವಸಹಿತಲಿಸಾದರದಿಂದಲಿ ಸರಸವಾಡಿ 4ಬಡನಡು ಬಳುಕುತಲಿ ಎಡಬಲದಲಿ ಸುಳಿದುಕಡಲೊಡೆಯಗೆ ಲಕ್ಷ್ಮಿ ಚೆಲ್ಲಿದಳಾಗ 5ಛಲದಿ ಪದ್ಮಾವತಿಯು ಜಲಜನಾಭನ ಮೇಲೆಒಲವಿನಿಂದಲಿ ಬಂದು ಚೆಲ್ಲಿದಳಾಗ 6ಭರದಿ ಶ್ರೀದೇವಿಯು ಸರಸಿಜಮುಖದಲ್ಲಿಪರಮಸುಸ್ನೇಹದಿ ಬೆರಸಿದಳಾಗ7ಭೂದೇವಿ ಭುಲ್ಲವಿಸಿ ಮಾಧವನ ಮುಖದೊಳಗೆಮೋದದಿಂದಲಿ ಬಂದು ಚೆಲ್ಲಿದಳಾಗ 8ಸುತ್ತುಮುತ್ತಲು ಇವರ ಆರ್ತಿಯಿಂದಲಿ ಹರಿಯುವೃತ್ತಕುಚವ ನೋಡಿ ಚೆಲ್ಲಿದನಾಗ 9ಝಣಝಣಾಕೃತಿಯಿಂದ ಮಿನುಗುವಾಭರಣದಧ್ವನಿಯ ತೋರುತ ಬಲು ಸರಸವಾಡಿ 10ಓಕುಳಿಯಾಡಿದ ನೀರಾನೇಕಭಕ್ತರು ಮಿಂದುಏಕಮಾನಸರಾಗಿ ಪೊರಟರು ಕಾಣೆ 11* * *ಆಡಿದರೋಕುಳಿಯ ಶರಣರೆಲ್ಲಆಡಿದರೋಕುಳಿಯ ಪ.ಕಾಡುವ ಪಾಪವ ಓಜಿಸಿ ಹರಿಯೊಳ-ಗಾಡಿನಿತ್ಯಸುಖಬೀಡಿನ ಮಧ್ಯದಿ1ಅಬ್ಬರದಿಂದಲಿ ಉಬ್ಬಿ ಸಂತೋಷದಿಒಬ್ಬರ ಮೈಗಿನ್ನೊಬ್ಬರು ಚೆಲ್ಲುತ 2ಚೆಂಡು ಬುಗರಿನೀರುಂಡೆಗಳಿಂದಲಿಹಿಂಡುಕೂಡಿ ಮುಂಕೊಂಡು ಪಿಡಿಯುವರು3ಸುತ್ತುಮುತ್ತ ಒತ್ತೊತ್ತಿ ಮುತ್ತಿ ಜಲ-ವೆತ್ತಿ ಚಿತ್ತತನುನೆತ್ತಿಗೆ ಸೂಸುತ್ತ 4ರಂಭೆ : ನಾರಿ ಕೇಳೀಗ ಭೂರಿಭಕುತರುಶ್ರೀರಮಾಧವ ಸಹಿತ ಬಂದರು 1ಭಾವಶ್ರೀಹರಿ ಪ್ರತಿರೂಪದೋರುತದೇವ ತಾನೆ ನಿದ್ರ್ವಂದ್ವನೆನ್ನುತ 2ಹೇಮಖಚಿತವಾದಂದಣವೇರಿಪ್ರೇಮಿಯಾಗುತ ಪೊರಟು ಬರುವನು 3ವಲ್ಲಭೆಯರ ಕೂಡಿ ಈ ದಿನಫುಲ್ಲನಾಭನು ಪೊರಟನೆತ್ತಲು 4ಊರ್ವಶಿ : ನಾರಿ ನೀ ಕೇಳಿದರಿಂದ ಈಗಭೂರಿಭಕುತರಾನಂದಶ್ರೀರಮಾಧವ ಮಿಂದ ನೀರಿನೊಳಾಡುತ್ತಓರಂತೆ ತುಳಸಿಮಾಲೆಯ ಧರಿಸುತ್ತಭೇರಿಡಂಕನಗಾರಿಶಬ್ದ ಗಂ-ಭೀರದೆಸಕವ ತೋರಿಸುತ್ತ ವೈ-ಯಾರದಿಂದಲಿ ರಾಮವಾರ್ಧಿಯತೀರದೆಡೆಗೆಲೆ ಸಾರಿ ಬಂದರು 1ವರದಭಿಷೇಕವ ರಚಿಸಿ ಬಕು-ತರ ಸ್ನಾನವನನುಕರಿಸಿಭರದಿಂದ ಪೂಜಾಸತ್ಕಾರ ಸೇವೆ ಕೈಗೊಂಡುತ್ವರಿತದಿ ನಗರಾಂತರಕನುವಾದನುಬರುತ ದಿವ್ಯಾರತಿಗೊಳ್ಳುತಚರಣಸೇರಿದ ಭಕ್ತರಿಷ್ಟವನಿರುತ ಪಾಲಿಸಿ ಮೆರೆವ ಕರುಣಾ-ಕರಮನೋಹರ ಗರುಡವಾಹನ2ರಂಭೆ : ಸರಸಿಜಾನನೆ ಈ ಸೊಲ್ಲ ಲಾಲಿಸೆಕರವಮುಗಿಯುತ್ತಕೈಯ ತೋರುತ1ಪರಮಪುರುಷ ಗೋವಿಂದ ಎನುತಲಿಹೊರಳುತುರಳುತ ಬರುವದೇನಿದು 2ಭಂಗಿಪ ಸೇವೆಯೆಂಬುದನುಅಂಗಜಪಿತಚರಣಂಗಳ ರಜದಲಿ 1ಹೊಂಗಿ ಧರಿಸಿ ಲೋಟಾಂಗಣ ಎಂಬರುರಂಗನಾಥನ ಸೇವೆಗೈದ ಜ-ನಂಗಳಿಗೆ ಭಯವಿಲ್ಲವದರಿಂ-ದಂಗವಿಪ ಲೋಲೋಪ್ತಿ ಕೋಲಾ-ಟಂಗಳನು ನೀನೋಡುಸುಮನದಿ2* * *ಕೋಲು ಕೋಲೆನ್ನಿರೊ ರನ್ನದಕೋಲು ಕೋಲೆನ್ನಿರೊ ಪ .ಪಾಲಾಬ್ಧಿಶಯನ ನಮ್ಮಾಲಯಕೆದ್ದು ಬಂದಲೀಲೆಗಳಿಂದ ಜನಜಾಲಗಳೆಲ್ಲರು 1ಗುಂಗಾಡಿತಮನನ್ನು ಕೊಂದು ವೇದವ ತಂದುಬಂಗಾರದೊಡಲನಿಗಿಟ್ಟನು ನಮ್ಮ ದೇವ 2ಅಡ್ಡಿಮಾಡದೆ ಸುರವಡ್ಡಿಗೆ ಸುಧೆಯಿತ್ತುಗುಡ್ಡೆಯ ಬೆನ್ನಿಲಿ ಧರಿಸಿದ ನಮ್ಮ ದೇವ 3ರೂಢಿಯ ಕದ್ದನ ಓಡಿಸಿ ತನ್ನಯದಾಡೆಯಿಂದಲೆ ಸೀಳ್ದ ಕಾಡವರಾಹನಮ್ಮ 4ಸಿಂಗನ ರೂಪತಾಳಿ ಹೊಂಗಿ ಕಂಬದಿ ಬಂದುಬಂಗಾರಕಶ್ಯಪುವಂಗವ ಕೆಡಹಿದ 5ಗಿಡ್ಡನಾಗುತ ಕೈಯೊಡ್ಡಿ ದಾನಕೆ ಮನ-ಸಡ್ಡಿಮಾಡದೆ ಮೇಣು ದೊಡ್ಡವನಾದನಮ್ಮ 6ಕಾಮಧೇನುವಿಗಾಗಿ ಕಾರ್ತವೀರ್ಯನ ಕೊಂದುಭೂಮಿಯ ಬುಧರಿಗೆ ಪ್ರೇಮದಿನಿತ್ತನಮ್ಮ 7ಬೆಟ್ಟಗಳೆಲ್ಲ ತಂದೊಟ್ಟಿಸಿ ಶರಧಿಯಕಟ್ಟಿದೈತ್ಯರ ತಲೆ ಕುಟ್ಟಿದ ನಮ್ಮ ದೇವ8ಚಂಡಗೊಲ್ಲತಿಯರ ಹಿಂಡುಗಳೊಳು ಕೂಡಿಉಂಡ ಪಾಲ್‍ಬೆಣ್ಣೆಯ ಪುಂಡ ಗೋಪಾಲನಮ್ಮ 9ಯುವತಿಯರ ವ್ರತವ ತವಕದಿ ಖಂಡಿಸಿಶಿವನ ರಕ್ಷಿಸಿ ತ್ರಿಪುರವನು ಕೆಡಹಿಸಿದ 10ಕುದುರೆಯ ಮೇಲೇರಿ ಕುಮತಿ ಮ್ಲೇಂಛರನೆಲ್ಲಸದೆಬಡಿಯುವ ನಮ್ಮ ಮಧುಕೈಟಭಾರಿ ದೇವ 11ಕಲಿಯುಗದೊಳು ಬಂದು ನೆಲೆಯಾಗಿ ತಿರುಪತಿ-ಯೊಳಗೆ ಭಕ್ತರನೆಲ್ಲ ಸಲಹುವ ನಮ್ಮ ದೇವ 12ದುಷ್ಟರ ಬೇಗ ಕಂಗೆಟ್ಟು ಓಡುವ ಭಕ್ತ-ರಿಷ್ಟವ ಕೊಡುವರೆ ದೃಷ್ಟಿಗೋಚರನಾದ 13ತಪ್ಪದೆ ಸ್ವಪ್ನದಿ ಬಪ್ಪೆನೆನ್ನುತ ಪೇಳಿಸರ್ಪಪರ್ವತದಿಂದ ಒಪ್ಪಿಲ್ಲಿ ಬಂದನಮ್ಮ 14ಸೃಷ್ಟಿಯೊಳುತ್ತಮ ಶ್ರೇಷ್ಠ ಕಾರ್ಕಳದಲ್ಲಿಪಟ್ಟದರಸ ತಿಮ್ಮ ಸೆಟ್ಟಿಯೆಂದೆನಿಸಿದ 15ಊರ್ವಶಿ :ನಾರೀರನ್ನಳೆ ಕೇಳಿದ್ಯಾ ಶ್ರೀಹರಿನಿತ್ಯಭೂರಿಸೇವೆಗೆ ಸಾನ್ನಿಧ್ಯತೋರುತ ಆರತಿಯ ಶೃಂಗಾರದೋರುತ ಕಾಣಿಕೆಯ ಕಪ್ಪುವು ಸೇರಿತುಸೇರಿದಾನತಜನರ ಮನಸಿನಕೋರಿಕೆಗಳನ್ನಿತ್ತು ಸಲಹುವವೀರವೆಂಕಟಪತಿಯ ಸದನ-ದ್ವಾರ ದಾಟುತ ಸಾರಿಬಂದನು 1ಬಳಿಕಲ್ಲಿ ತುಲಾಭಾರದ ಹರಕೆಯನ್ನು ಕೈ-ಗೊಳುತಲೀಪರಿ ಮೋದವನಲವಿನಲಿ ಮಂಗಲದ ವಿಭವದಗೆಲುವಿನಲಿ ವಿಧಕಲಶ ವೇದದನಲವಿನಲಿ ಸುಲಲಿತಭಿಷೇಕವನು ಕೊಳುತಲಿಜಲಜನಾಭನು ಸುರಚಿರದ ನಿ-ಶ್ಚಲಿತ ಸಿಂಹಾಸನದಿ ಮಂಡಿಸಿಒಲಿದ ವಂದಿತ ಜನರ ಭಕ್ತಿಗೆ 2ವಲ್ಲಭೆಯರ ಸಹಿತ ಸಮರ್ಪಿಸಿ-ದೆಲ್ಲ ಸ್ವೀಕರಿಸಿ ಮತ್ತಾಪಲ್ಲವಪಾದಗಳ ತೋರಿಸಿಎಲ್ಲವ ರಕ್ಷಿಸಿ ದಯಾರಸವುಳ್ಳವಫುಲ್ಲನಾಭನು ಪೂರ್ಣಕಾಮ ಶ್ರೀ-ವಲ್ಲಭನು ನರನಾಟಕದಿ ಜಗ-ಎಲ್ಲ ರಕ್ಷಿಸಿ ಮೆರೆವ ಭಕ್ತರಸುಲ್ಲಭನು ಸುಮನೋನುರಾಗನು 3ಶರದಿಯೇಳರ ಮಧ್ಯದ ಧಾರಿಣಿಯೊಳುಮೆರೆವ ಹೇಮಾಚಲದಸ್ಫುರಿತದಾ ಮಹಾಜಂಬುದ್ವೀಪ ವಿ-ಸ್ತರಿತದಾ ಭರತಾಖ್ಯ ಖಂಡದಿಹರುಷದಿ ನಿರುತ ತೌಳವದೇಶಮಧ್ಯದಿಮೆರೆವ ಕಾರ್ಕಳಪುರವರವೆ ಪಡುತಿರುಪತಿಯು ಎಂದೆನಿಸಿ ಭಕುತರನೆರವಿಯನು ಪರಿಪಾಲಿಸುವನೆಲೆ 4ಈಪರಿವಿಭವದಲಿ ಪ್ರತಿವರುಷಕೆಶ್ರೀಪರಮ್ಮಾತನಲ್ಲಿವ್ಯಾಪಿಸಿ ಭಕ್ತರನುಕಾವನಿ-ರೂಪಿಸಿ ಸೇವೆಯನು ಕೈಕೊಂಡೊಪ್ಪಿಸಿಪಾಪವೆಲ್ಲವ ಪರಿಹರಿಸಿ ಚಿ-ದ್ರೂಪನಂದದಿ ಹೊಳೆವ ಪರತರ-ರೂಪಕರುಣಾಲಾಪ ಸದ್ಗುಣ-ದೀಪ ಚಪ್ಪರ ಶ್ರೀನಿವಾಸನು 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಸಿಕ್ಕಿದನೆಲೆ ಜಾಣೆ ಶ್ರೀ ವೇಣುಗೋಪಾಲ |ಭಕ್ತವತ್ಸಲ ದೇವನು ಪಮಕ್ಕಳ ಚೆಂಡಿಕೆ ಮರದ ಕೊನೆಗೆಕಟ್ಟಿ|ಗಕ್ಕನೆ ಕೃಷ್ಣ ಚೆಪ್ಪಾಳಿಕ್ಕಿದನಮ್ಮ ಅ.ಪಹೆಣ್ಣು ಮಕ್ಕಳು ಬಚ್ಚಲೊಳಗೆಣ್ಣೆ ಮಂಡೆಯೊಳು |ಬಣ್ಣವಸ್ತ್ರವ ಬಿಚ್ಚಿ ಬರಿಮೈಯಲಿರುತಿರೆ ||ಕಣ್ಣಿಗೆ ಬಿಸಿನೀರ ಚೆಲ್ಲಿ ಸೀರೆಯನೊಯ್ದು |ಉನ್ನತವಾದ ವೃಕ್ಷವನೇರಿದನೆ ರಂಗ 1ಪಟ್ಟೆಮಂಚದ ಮೇಲೆ ಪತಿಯಂತೆ ಕುಳಿತಿರುವ |ಎಷ್ಟು ಸ್ವಾತಂತ್ರ್ಯವೆಗೋಪಿ||ಉಟ್ಟ ಸೀರೆಯನೆಳೆದು ಬಟ್ಟಕುಚವ ಪಿಡಿದು |ಅಷ್ಟು ಮಂದಿಗಳೊಳಗೆ ಗಟ್ಟಿ ಅಪ್ಪಿಕೊಂಡನೆ 2ಸಡಗರದಿಂದ ಗೋವಳಿತಿಯರೊಡಗೂಡಿ |ನುಡಿಸುತ ಕೊಳಲನು ಪುರದೊಳಗೆ ||ಕಡೆವ ಮಡದಿಯರ ಕೈ ಪಿಡಿದಾಡುವ |ಒಡೆಯನೆ ನಮ್ಮ ಶ್ರೀಪುರಂದರವಿಠಲ 3
--------------
ಪುರಂದರದಾಸರು