ಒಟ್ಟು 37 ಕಡೆಗಳಲ್ಲಿ , 18 ದಾಸರು , 34 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನ್ನಿ ಮನ್ನಿಗೆ ಉಣ್ಣ ಬಂದಾ | ತನ್ನವರೊಳಗಿದ್ದ ಸರ್ವ ಸಾರಭೋಕ್ತಾ ಪ ಭಕುತರಗೋಸುಗ ಭಕುತಿಯ ಕೈಕೊಂಡು ಇಂದು 1 ಭೂವದರೊಳಗಿದ್ದು ದೈತ್ಯರ ಗೆದ್ದಂತೆ | ಆವಿಷ್ಣುವಾಗಿ ಮನ್ನಣೆಯ ಕೈಕೊಳುವಲಿ 2 ನಂಬಿದ ದಾಸರ್ಗೆ ಪ್ರಾರಬ್ಧ ಕರ್ಮವು | ಉಂಬೋದು ಬಿಡದಂದು ತದಾಕಾರ ರೂಪದಿ3 ದಿವಿಜರ ಒಡಗೂಡಿ ದಿನ ಪ್ರತಿದಿನದಲ್ಲಿ 4 ತನ್ನ ಸಂಕಲ್ಪವು ಸಿದ್ಧಿ ಮಾಡುವೆನೆಂದು ಘನ್ನತೆಯಲಿ ನಮ್ಮ ವಿಜಯವಿಠ್ಠಲಸ್ವಾಮಿ 5
--------------
ವಿಜಯದಾಸ
ಮೀಸಲಾಗಿ ನಿನ್ನದೊಂದು ಚೆಲ್ವರೂಪವನ್ನಿಡೋವಾಸುದೇವ ನಿನ್ನನಂತ ದಿವ್ಯರೂಪಗಳಲಿ ಎನಗೆ ಪ ಮಣಿವ ಭಕುತ ಜನರು ಕರೆದಕ್ಷಣಕೆ ಓಡಿಬಂದು ಮುಂದೆಕುಣಿದು ಕುಣಿದು ಕುಣಿದು ಹೋಗಿ ಬಂದುದಣಿದುಕೊಳುವ ಮೊದಲು ಎನಗೆ 1 ಎಷ್ಟು ನೋಡಿದರು ಎನಗೆತುಷ್ಟಿಯಿಲ್ಲವಯ್ಯ ಕೃಷ್ಣಅಷ್ಟಷ್ಟಕೆ ಹೋಗಿಬರುವಕಷ್ಟವೇಕೆ ದಯದಿ ಎನಗೆ 2 ಮಾಡಿದಘವ ಕುಟ್ಟಿ ಹಣಿವೆನೋಡಿ ನೋಡಿ ಪದಕೆ ಮಣಿವೆಹಾಡಿಹಾಡಿ ನಲಿದು ಕುಣಿವೆನಾಡೆ ಕುಣಿದು ತುಂಬ ತಣಿವೆ 3 ಸಾವಿರಾರು ಭಕ್ತಜನರುದೇವ ನಿನಗೆ ಗೈವೆಯೆಂತುಪಾವನಾತ್ಮ ಗದುಗು ವೀರನಾರಾಯಣ ದಯವ ತೋರಿ 4
--------------
ವೀರನಾರಾಯಣ
ಮುಂಚೆ ನೋಡಣು ಬನ್ನಿ ಜನಗಳೆ ಹಂಚಿನಾಳಿನವ ಹನುಮನ ವಾಂಛಿತಾರ್ಥಗಳೀವ ಭಾವಿ ವಿರಂಚಿದೇವ ಪದಾರ್ಹನಾ ಪ ಅಂದು ಕಪಿಕುಲದಿಂದ ದುಸ್ತರ ಸಿಂಧು ದಾಟಿದ ಧೀರನ ವಂದಿಸುತ ಭೂನಂದನೆಯು ಕ್ಷೇಮೆಂದು ರಾಮಗೆ ಪೇಳ್ದನ 1 ಧಾರುಣಿಯೊಳವತರಿಸಿ ಕುಂತಿ ಕುಮಾರನೆನಿಸಿದ ಧೀರನ ಕೌರವಾಂತಕನೆನಿಸಿ ಕೃಷ್ಣನ ಭೂರಿ ಕರುಣವ ಪಡೆದನ 2 ವಾದಿಗಳ ನಿರ್ವಾದ ಗೈಸಿದ ಬಾದರಾಯಣನ ಶಿಷ್ಯನ ಭೇದಮತವನು ಸ್ಥಾಪಿಸಿದ ಗುರು ಮೋದ ತೀರ್ಥ ಯತೀಂದ್ರನಾ 3 ಪಾಲಕಿಯ ಉತ್ಸವದಿ ಮೆರೆಯುತ ವಾಲಗವ ಕೈಕೊಳುವನ ಕಾಲಕಾಲಗಳಲ್ಲಿ ಭಜಕರ ಮ್ಯಾಳವನು ಪಾಲಿಸುವನಾ 4 ಶೇಷಭೂಷಣ ವಾಸವಾದಿಸು ರೇಶ ಭಕುತರ ಪೋಷನ ಶ್ರೀಶ ಕಾರ್ಪರವಾಸ ಸಿರಿನರ ಕೇಸರಿಗೆ ಪ್ರಿಯ ದಾಸನ5
--------------
ಕಾರ್ಪರ ನರಹರಿದಾಸರು
ಮುಯ್ಯದ ಹಾಡುಗಳು ನೋಡೆ ಧರಣಿ ನಿನ್ನ ಬೀಗರೋಡಿ ಬರುವುದಾ ಕಾಡು ಜನರು ನಗುವ ರೀತಿ ಮಾಡಿ ಮೆರೆವುದಾ ಪ. ಸುತ್ತ ನಾಲ್ಕು ಮುಖದಿ ವೇದ ತತ್ವ ಪೇಳ್ವ ಹಂಸ ಪಕ್ಷಿ ಹತ್ತಿಕೊಂಡು ಬಂದ ಹಳಬ ಮುತ್ಯನೊಬ್ಬನು ಹಸ್ತದೊಳಗಕ್ಷಮಾಲೆಯೆತ್ತಿ ಮಣಿಗಳೆಣಿಸುವಗಿ ನ್ನೆತ್ತ ಪೂಜೆಯಿಲ್ಲವೆಂಬರತ್ಯಾಶ್ಚರ್ಯವರಿಯೆಯ 1 ಮತ್ತೊಬ್ಬನ ನೋಡೆ ಮುದಿಯೆತ್ತನೇರಿ ಬರುವನಿವನ ಜೊತೆಯಲಿರುವ ಭೂತಗಣವು ಸುತ್ತ ಮೆರೆವುದ ಬತ್ತಲಿದ್ದು ಭಸ್ಮ ಪೂಸಿ ಕೃತ್ತಿವಾಸನನಾದ ಫಾಲ ನೇತ್ರ ರುಂಡಮಾಲಶೂಲವೆತ್ತಿ ಕುಣಿವ ಮುತ್ಯತನವ 2 ಗರುವದಿಂದ ಗಜವನೇರಿ ಬರ್ವನ ನೋಡಮ್ಮ ಶತ ಪರ್ವವನ್ನು ಪಿಡಿದ ಸಕಲ ಗೀರ್ವಾಣೀಶನ ಸರ್ವಾವಯವದಲ್ಲಿ ಕಣ್ಣಾಗಿರ್ವದೇನೊ ತಿಳಿಯದು ನಿ ಗರ್ವಿ ಶಿರೋಮಣಿಯೆ ಈತ ಪರ್ವತಾರಿಯೆಂಬುವುದನು 3 ಠಗರು ಕೋಣನೆಗಳ ಮೇಲೆ ಸೊಗಸಿನಿಂದಲೇರ್ದ ಕೆಲಸ ಬಗೆ ಬಗೆ ಬೈರೂಪ ವರ್ಣನೆಗಳು ಸಾಕಿನ್ನು ಸುಗುಣೆ ಮೊದಲೆ ತಿಳಿಯದೆ ನೀ ಮಗಳನೀವ ಭಾಷೆ ಕೊಟ್ಟ ಬಗೆಯ ಪೇಳೆ ಭಾಗ್ಯದ ಹಮ್ಮಿಗೆ ತಕ್ಕಂಥ ನಗೆಯ ಕೇಳೆ 4 ಎರಡು ಮಗುಗಳದರಳೊಂದು ಬಿರುದ ಹೊಟ್ಟೆ ಮೇಲೆ ಕಟ್ಟಿ ದುರಗ ಬೆಳೆವ ಪೋರ ನೋಡೆ ಕರಿಯ ಕುವರನು ಕಿರಿಯ ಕೂಸಿನೊಂದು ನವಿಲ ಮರಿಯನೇರುತ್ತಾರು ಮುಖದಿ ಮೆರೆವ ಛಂದವೇನನೆಂಬೆ ಥರವೆ ನಿನಗೆ ಮಿಸುಣಿ ಗೊಂಬೆ 5 ಅಳಿಯನ ಸಂಸ್ಥಿತಿಯ ನೋಡಿ ತಿಳಿವದೆಂತು ಸುಲಭವಲ್ಲ ಹಲವು ಜನರ ಕೂಡಿಕೊಂಡು ಸುಳಿವರೆ ಬಲ್ಲ ನೆಲೆಯ ಕಾಣದಖಿಳ ವೇದ ಕುಲವು ಭ್ರಮೆಯ ತಾಳ್ವದಿಂಥಾ ಕುಲವೆಂದರಿಯಳಾಗಿ ಲೋಕ ಚೆಲುವೆ ಮಗಳನಿತ್ತೆಯಲ್ಲೆ 6 ಆದರೀತ ಭಕ್ತಜನರ ಕಾದುಕೊಳುವನೆಂಬ ಗುಣವ ಶೋಧಿಪರಿಗೆ ಸಕಲಾನಂದ ಸಾಧಕನೆಂದು ಬೋಧಗೊಳದೆ ನುಡಿದ ಸ್ವಾಪರಾಧವೆಲ್ಲ ಕ್ಷಮಿಸಿ ನಮ್ಮ ಶ್ರೀದ ವೆಂಕಟಾದ್ರಿನಾಥ ಕಾದುಕೊಳಲಿ ಕರುಣವಿಡಲಿ 7
--------------
ತುಪಾಕಿ ವೆಂಕಟರಮಣಾಚಾರ್ಯ
ರಾಮನ ನೋಡಿರೈ ಮಂಗಳ ನಾಮನ ಪಾಡಿರೈ ಪ ಪೂಜಿತನ ಸೀತಾನ್ವಿತನ ಅ.ಪ ದಶರಥ ಗೃಹದಿ ಸುಜನರ ಸಲುಹಿ ಬೆಸಗೊಳಲಂದು ಸೀತಾವರನಾ 1 ಚಿಂತಿಸು ರಾಮನ ಶುಭಲಕ್ಷಣಗಳನೇಕ ಕರ್ಮವಿಪಾಕ ದೊಳಗೀ ವಿಷಯಾ- ಖರೆಯ ಯತಿಕುಲವರ್ಯ ಚರಣ ಸುಜನೋದ್ಧರಣ 2 ಕುಂದಣ ಮಣಿಮಯದ ಕಿರೀಟ ಯುಕ್ತಲಲಾಟ ಚಿನ್ಮಯಗಾತ್ರದಿ ಮಿನುಗುವ ರತ್ನಾಭರಣ ಜಿತರವಿ ಕಿರಣ ಹರಣ ಕರುಣಾಪೂರ್ಣ ರಿಪುಕುಲಮಥನಾ 3 ಶುಭಕಾಯಾಕವಿಜನಗೇಯಾ ಹೇಮ ಕೊಳುವ ಮನದೊಳು ಪೊಳೆವ ವೇದಾ ಮನಕತಿಮೋದಾ ಮುನಿ ಸಂಶೇವÀ್ಯ 4 ಶುಭಚರಿಯ ಬಹು ಆ ಮಂದಿರದಿ ಪಾರಾ- ಸುನಾದ ಕೇಳಲು ಮೋದ ಪೊಕ್ಕರು ಗೃಹದಿ 5 ಪೊಂದಿರೆ ಮುದವ ಪುಡಕಿದರಾಗೆ ಬಾಲವ ಹೀಗೆ ಕುಂಡಲಿಶಯನ ಶ್ರೀರಾಮನೆ ದರ್ಶನವಿತ್ತ ಲಕ್ಷ್ಮಣಸಹಿತ6 ಧರೆಯೊಳು ಬಹುಯತಿಕರ ಪೂಜಿತ ಪದಪದುಮಸ- ಧಾಮ ನಿರುತ ಶೇವಿಸುವ ಧರೆಸುರ ನಿಕರಕೆ ಕೊಡುವ ಬೇಡಿದ ವರವ ಶರಣು ಜನಕೆ ಸುರ ತರುವೆನಿಸಿದ ಸುರಪ್ರಿಯ ಕಾರ್ಪರನಿಲಯ ತರು ಪಿಪ್ಪಲಗತ ಶಿರಿನಾರಸಿಂಹನೆ ಈತ ಶ್ರೀರಘುನಾಥಾ7
--------------
ಕಾರ್ಪರ ನರಹರಿದಾಸರು
ವೆಂಕಟರಮಣ ಮಾಂಪಾಹಿ ಸಂಕಟಹರಣ ಸರ್ವಲೋಕಕಾಧಾರ ಪ ಮತ್ಸ್ಯರೂಪವತಾಳಿ ವೇದಗಳ ರಕ್ಷಿಸಿದೆ ಮತ್ತೆ ಬೆಟ್ಟವ ಪೊತ್ತೆ ಕೂರ್ಮನಾಗಿ ಹೊತ್ತು ಭೂಮಿಯ ಪೊರೆದೆ ವರಾಹಾವತಾರದಲಿ ಬತ್ತಿ ಕಂಬದಿ ಬಂದೆ ನರಸಿಂಹನಾಗಿ ನೀ ಇತ್ತೆ ವರವನು ತುಳಿದು ಬಲಿಯು ನೀಡಲು ತಲೆಯ ವಟುರೂಪಿನಿಂದ ವೆಂಕಟರಮಣ ಮಾಂ ಪಾಹಿ 1 ಹೊತ್ತು ಪರಶುವ ಭುವಿಯ ಕ್ಷಾತ್ರಿಯರನೀ ಕೊಂದೆ ಮತ್ತೆ ರಾಮಾವತಾರದಲಿ ರಾವಣನ ಕೊಂದೆ ನಿತ್ತು ಕಾಪಾಡಿದೆಯೋ ಕೃಷ್ಣ ಪಾಂಡವರನ್ನು ಮತ್ತೆ ಬುದ್ದನರೂಪ ತಾಳಿ ಮೆರೆದೆ ತಾಳಿ ದರುಳ ದುರ್ಜನರನ್ನು ಮೆಟ್ಟಿ ಕುಟ್ಟಿದೆಯೋ ವೆಂಕಟರಮಣ ಮಾಂ ಪಾಹಿ 2 ಬೇಡಿದವರ ಇಷ್ಟಾರ್ಥಗಳನೀವ ಕಾಡಿದ ರಕ್ಕಸರ ಜೀವ ಕೊಳುವ ನೋಡಿ ದಯಮಾಡಿ ನೀಸುಜನರನು ಕಾವ ಆಡಿ ಅಡಗಿಸೋ ನೀನೇ ಮನದ ನೋವ ಗಾಢ ರಕ್ಷಿಸು ಕಡು ಬಾಡಿದೆ ಭಯದಲ್ಲಿ ವೆಂಕಟರಮಣ ಮಾಂ ಪಾಹಿ 3 ವರ ಅಜಾಮಿಳಗೆ ವರವಿತ್ತು ಸಲಹಿದೆಯೋ ಕರಿ ರಾಜ ಬರಲಿದಡೆ ಬಂದು ಕಾಯ್ದೆ ದುರುಳ ಕಾಳಿಂಗನನು ಮೆಟ್ಟಿಕುಣಿದಾಡಿದೆಯೋ ಧರಿಸಿ ಗೋವರ್ಧನವ ಕಾಯ್ದೆಗೋವಳರನ್ನು ವೆಂಕಟರಮಣ ಮಾಂ ಪಾಹಿ 4 ಇಳೆಯೊಳಗೆ ಮೂಡಲಗಿರಿವಾಸನಾಗಿ ನೆಲೆಯ ನರಿದು ಭಜಿಪರ ಪಾಪನಾಶ ಸೂರ್ಯ ಕೋಟಿ ಪ್ರಕಾಶ ಕಲಿಯುಗದೊಳು ನಿನ್ನ ಮಹಿಮೆ ವಿಶೇಷ ಸಲಹೋ ಪಾತಳ ಸೇವೆಯ ಗೆಣಸಿನ ಕುಣಿ ವೆಂಕಟರಮಣ ಮಾಂ ಪಾಹಿ 5
--------------
ಕವಿ ಪರಮದೇವದಾಸರು
ಶರಣೆಂಭೆ ತನುಮನದಿಂದ ಗಣರಾಯಾ ನರಮೃಗ ಕಾಯಾ ಸುರಾಸುರರ ಕೈಯ್ಯ ಸೇವೆ ಕೊಳುವ ಚರಣವನು ಮೊರೆಯ ಹೊಕ್ಕೆನು ಕೇಳಿ ಕೀರುತಿಯಾ ಕೊಂಡಾಡುವಂತೆ ಪದ ಪದ್ಯದಿ ನಿನ್ನ ಚರಿಯಾ ಶುಭ ಮುಖ ಕೊಡುಮತಿಯನಾ ಎಂದೆಂದು ನೊಡಲು ಅಪರಾಧಿನಾ ಮೊದಲು ಕುಂದನಾರಿ - ಸದೇ ನೋಡೆನ್ನ ಮ್ಯಾಲಿನ್ನಾ ಅಗಜ ನಂದನ ಗುರು ಮಹೀಪತಿ ಸುತ ಸ್ವಾಮಿ ಭಕುತ ರಕ್ಷಕ ಮುನಿಜನ ಪ್ರೇಮೀ
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶ್ರೀ ಕರಗ್ರಹ ಎನ್ನ ಸಾಕಲಾರದÉ ಹೀಗೆ ನೂಕಿ ಬಿಡುವುದು ನ್ಯಾಯವೆ ಪ. ಬೇಕೆಂದು ನಿನ್ನ ಪದ ನಾ ಕಾಣ ಬಂದರೆ ಈ ಕಪಟತನವು ಸರಿಯೆ ಹರಿಯೆ ಅ.ಪ. ಎಲ್ಲರನು ಸಲಹಿದಂತೆನ್ನ ನೀ ಸಲಹೆನ ನಿಲ್ಲದೆ ನೀರ ಪೊಗುವೆ ಸೊಲ್ಲು ಸೊಲ್ಲಿಗೆ ನಿನ್ನ ಸ್ತುತಿಪೆನೊ ಬಾರೆನಲು ಕಲ್ಲಡೀ ಅವಿತುಕೊಳುವೆ ಖುಲ್ಲನಲ್ಲವೊ ನಾನು ತಲ್ಲಣಿಪೆ ಪೊರೆ ಎನಲು ಹಲ್ಲು ಕೋರೆಯ ತೋರುವೆ ಎಲ್ಲಿ ಹೋಗಲೊ ನಾನು ಇಲ್ಲವೊ ಇನ್ನೊಬ್ಬ ಸೊಲ್ಲು ಕೇಳುವರನರಿಯೆ | ದೊರೆಯೆ 1 ತಡಬಡಿಸುತಿಹೆನೆನ್ನ ಪಿಡಿದು ಕೈ ಸಲಹೆನಲು ಘುಡು ಘುಡಿಸಿಕೊಂಡು ಬರುವೆ ಬಡವನೋ ನಾನು ನಿನ್ನಡಿಯನೇ ನೀಡೆನಲು ಹುಡುಗತನದಲಿ ಬೇಡುವೆ ತಡೆಯಲಾರೆನೊ ಭವದ ದಡವ ಸೇರಿಸು ಎನಲು ಕೊಡಲಿಯ ಪಿಡಿದು ಬರುವೆ ಕಡು ಬವಣೆ ಬಿಡಿಸೆಂದು ಅಡಿಗಡಿಗೆ ಎರಗಲು ಅಡವಿ ಅಡವಿಯ ತಿರುಗುವೆ | ಥರವೇ 2 ಹತ್ತು ನಾಲ್ಕು ಲೋಕಕೆ ತೆತ್ತಿಗನೊ ನೀನೆನಲು ಮುತ್ತ್ಯದೊರೆ ಎಂದೆನ್ನುವೆ ಸುತ್ತಿರುವ ಆವರಣ ಮತ್ತೆ ನೀ ಛೇದಿಸೆನೆ ಬತ್ತಲೆ ನೀ ನಿಲ್ಲುವೆ ಭೃತ್ಯ ನಾ ನಿನಗೆನಲು ಹತ್ತಿ ಕುದುರೆಯ ಓಡುವೆ ನಿತ್ಯ ಮೂರುತಿ ನಿನ್ನ ಕೃತ್ಯವೇ ಹೀಗಿರಲು ಮತ್ತಿನ್ನ ಹ್ಯಾಗೆ ಪೊರೆವೆ | ಕರೆವೆ 3 ದÉೂರೆಯು ನೀ ಜಗಕೆಂದು ಸುರರೆಲ್ಲ ನುಡಿಯುವರೊ ಅರಿಯೆ ನಾನದರ ಮಹಿಮೆ ಸಿರಿಗೊಡೆಯನಾದರೆ ಪೊರೆಯದೆಲೆ ಎನ್ನನು ಕರೆಕರೆಗೊಳಿಸುವರೆ ತಿರಿಯ ಬರಲಿಲ್ಲ ನಾ ಸಿರಿಯ ನೀಡೆಂದೆನುತ ಉರುತರದ ಭಯವೇತಕೆ ಚರಣ ಧ್ಯಾನವನಿತ್ತು ಪರಮ ಭಕ್ತರೊಳಿಡಿಸಿ ದೊರೆಯೆ ನೀ ಸಲಹ ಬೇಕೋ | ಸಾಕೋ4 ಆಪಾರ ಮಹಿಮನೆ ಆರ್ತಜನ ರಕ್ಷಕ ಪಾಪಿ ನಾನಿಹೆನೋ ಈಗ ನೀ ಪಿಡಿದು ಪೊರೆಯದಿರೆ ಕಾಪಾಡುವವರ್ಯಾರೊ ಶ್ರೀ ಪತಿಯೆ ನೀನೆ ತೋರೊ ತಾಪಪಡಲಾರೆ ಭವಕೂಪದೊಳು ಬಿದ್ದಿಹೆನು ನೀ ಕೃಪಾದಿಂದೀಕ್ಷಿಸೋ ಗೋಪಾಲಕೃಷ್ಣವಿಠ್ಠಲನೆ ನೀನಲ್ಲದಲೆ ಕಾಪಾಡುವವರನರಿಯೆ ದೊರೆಯೆ 5
--------------
ಅಂಬಾಬಾಯಿ
ಶ್ರೀಲೋಲನೆ ಪರಿಪಾಲಿಪುದೆಮ್ಮನು ಕಾಲವಿಳಂಬಿಸದೇ ಪ. ಪೇಳಲೆಮಗೀ ನಾಲಿಗೆ ಸಾಲದು ಅ.ಪ ಅನಿಮಿಷರೂಪದಿಂದಾಗಮವನು ನೀನಜನಿಗೆ ತಂದಿತ್ತೆ ಪೂರ್ವದಿ ಘನ ಕಚ್ಛಪರೂಪದೊಳಾಗಿರಿಯನು ಬೆನ್ನೊಳಗಾಂತೇ ಅನಿಮಿಷರೊಡೆಯನ ಮನವನು ತಣಿಸಿದ ಫನಮಹಿಮನೆ ಶ್ರೀ ವನಜಜ ಜನಕನೆ ಶ್ರೀಲೋಲನೆ 1 ದುರುಳನ ಕರದಲಿ ಧರಣಿಯು ಸಿಲುಕುತ ಕರೆಕರೆಗೊಳ್ಳುತಿರೆ ವರಸೂಕರನಾಗುತ ದುರುಳನ ಛೇದಿಸಿ ಧರಣಿಯ ಕೈಪಿಡಿದೆ ಮತ್ತೆ ತರಳನ ಪೊರೆಯಲು ನರಕೇಸರಿ ರೂಪದಿ ಹಿರಣ್ಯಕನುದರದ ಕರುಳನು ಕಿತ್ತೆಸೆದೆÉೀ ಶ್ರೀಲೋಲನೆ 2 ಕಪಟತನದಲಿ ವಟುವಂದದಿ ಬಂದು ನೆಲವದಾನವ ಬೇಡಿ ಕಪಟವನರಿಯದೆ ದಾನವ ಕೊಟ್ಟನ ಪಾತಾಳಕೆ ಗುರಿ ಮಾಡಿ ಅಪರಿಮಿತಾನಂದದಿ ಮೆಚ್ಚಿ ಬಲೀಂದ್ರನ ಮನೆಬಾಗಿಲ ಕಾಯುವ ಗೊಲ್ಲ ನೀನೆನಿಸಿದೆ 3 ವರಮುನಿ ಜಮದಗ್ನಿಯ ರೇಣುಕಾಸುತ ಭಾರ್ಗವ ನೀನಾಗಿ ವರಪರಶುದರನೆಂದೆನ್ನಿಸಿ ಭೂಭುಜರನು ತರಿದಟ್ಟಿ ಧರಣೀಸುರರಿಗೆ ಸುರತರುವೆನಿಸಿದ 4 ಹರವಿರಂಚಿಯರ ವರಗಳ ಗರ್ವದೆ ದಶಶಿರದೈತ್ಯನು ಮೆರೆದು ಪರಿಪರಿ ವಿಧದಿಂ ಸುರಭೂಸುರರನು ಕರೆಕರೆಗೊಳಿಸುತಿರೆ ಧರಣಿಪ ದಶರಥ ತನುಭ ವರೆನ್ನಿಸಿ ನಿಶಿಚರ ಕುಲವನೇ ಸವರಿದ ರಾಘವ 5 ಅಷ್ಟಮದಂಗಳ ದಟ್ಟಣೆಯಿಂದತಿ ಅಟ್ಟಹಾಸದಿ ಮೆರೆದಾ ದುಷ್ಟ ಕಂಸನ ಮರ್ಧಿಸಿ ಧರಣಿಯ ಶಿಷ್ಟರ ಪಾಲಿಸಲು ವೃಷ್ಟಿವಂಶದಿ ಬಂದು ಕೃಷ್ಣನೆನಿಸಿ ತನ್ನ ಇಷ್ಟರಾದ ಪಾಂಡುಪುತ್ರರ ಸಲಹಿದ6 ಸಿದ್ದಿ ಸಂಕಲ್ಪದಿ ಬಲಭದ್ರನೆನ್ನಿಸಿ ಭವಬದ್ಧ ಜೀವಿಗಳಂ ಶುದ್ಧ ಮಾರ್ಗದಿ ಸಂಸ್ಕರಿಸಿ ಜಗವನು ಉದ್ಧರಿಸಲ್ಕಂಡು ಬುದ್ಧನೆಂದೊಳಿಸಿ ಮೆರೆದ ಸಂಕರ್ಷಣ ಭದ್ರಮಂಗಳ ಭವ್ಯಸ್ವರೂಪನೆ7 ಕಲಿಮಲದೋಷವ ತೊಳೆಯಲು ಪುನರಪಿ ಕಳೆಯೆ ನೀನೈತರುವೆ ಫಲತೆರದಲಿ ಭಕ್ತರ ಸಲಹಲು ಫಲರೂಪಗಳ ಕೈಕೊಳುವೆ ಹಲುಬುವ ಕಂದನ ಸಲಹೈ ಸಿರಿದೊರೆ 8
--------------
ನಂಜನಗೂಡು ತಿರುಮಲಾಂಬಾ
ಸಾರಿದೆನೋ ನಿನ್ನ ವೆಂಕಟರಮಣ ಪ ನಾರಪ್ಪಯ್ಯನಿಗೊಲಿದು ಗೋರೂಪದಲಿ ಬಂದಿಯೊ ಅ.ಪ ಸುಂದರ ಶುಭಕಾಯಾ ಆಕಾಶರಾಜನ ನಂದಿನಿಯಳ ಪ್ರೀಯ ವಂದಿಸುವೆನು ಭವಬಂಧನ ಬಿಡಿಸಯ್ಯ 1 ಕುರಕಿಹಳ್ಳಿಯ ಗ್ರಾಮದಿ ಶಿಲೆಯೊಳಗೆನಿಂದು ವರಕೃಷ್ಣಾನದಿ ಜಲದೀ ಅರುಣನುದಯದಲ್ಲಿ ನಿರುತ ಪೂಜೆಯಕೊಳುವಿ 2 ನೀರದ ನಿಭಕಾಯಾ ಧರೆಯೊಳುಕೃಷ್ಣಾ ತೀರ ಕಾರ್ಪರನಿಲಯಾ ಘೋರ ಪಾತಕಹರ ನಾರಸಿಂಹಾತ್ಮಕನೆ 3
--------------
ಕಾರ್ಪರ ನರಹರಿದಾಸರು
ಸಾಲವನು ಕೊಳುವಾಗ ಸಡಗರದ ಸಿರಿಯೋ ಸಾಲಿಗನು ಬಂದು ಕೆಳಲಾಗಡರಿತುರಿಯೋ ಪ ಡಬ್ಬುಗೈದಿದ್ದವನೊಳ್ ಎಬ್ಬಿಸಿ ಹಣತಂದು ಉಬ್ಬುಬ್ಬಿ ಸತಿಮುಂದೆ ಹೆಬ್ಬುಲಿಯ ತೆರದಿ ಒಬ್ಬರೀಡಿಲ್ಲೆನಗೆಂದಬ್ಬರಿಸುತ್ಹೇಳುವನು ತಬ್ಬಲು ಧಣಿಬಂದು ಮಬ್ಬಿನೊಳೆದ್ದೋಡ್ವ 1 ಹಣತಂದ ದಿನ ಅವನ ಮನೆಯೊಳಗೆ ಹಬ್ಬೂಟ ವನಿತೆಯೊಳೆನುತಿಹ್ಯನು ನನಗಾರು ಸರಿಯೆ ಹಣಕೊಟ್ಟ ಧಣಿಬಂದು ಮನೆಮುಂದೆ ಕುಳ್ಳಿರಲು ಹೆಣಇರುವ ಮನೆಗಿಂತ ಘನದು:ಖಕೇಳೊ 2 ಕಡುಹಿಗ್ಗಿನಿಂದೊಸನ ಒಡವೆ ಉದ್ದರಿತಂದು ಬಡಿವಾರ ಬಿಂಕ ಕೊಡುವ ವಾಯಿದೆ ಕಳೆದು ಬಡಿಗೆಯು ಬರಲಾಗ ಮಡದಿ ಸತ್ತವನಂತೆ ಇಡುವ ತಲಿ ಬುವಿಗೆ 3 ಅಕ್ಕಿಬೇಳೆ ಬೆಲ್ಲತಂದು ಅಕ್ಕರದಿಂ ಸತಿಸುತರಿ ಗಿಕ್ಕುವಾಗ ನೋಡವನವಕ್ಕರಂಗಳನು ಮಕ್ಕಮಾರಿಯಂದದಿ ತಿಕ್ಕುವಾಗಕೊಟ್ಟವರು ಸಿಕ್ಕದೆ ತಿರುಗುವನು ಬಿಕ್ಕೆ ಬೇಡುಣುತ 4 ಮನೆಮುರಿದು ಹೋಗಲಿ ವನಿತೆಯರು ಜರಿಯಲಿ ಎನಗೆಡರು ಬಂದೊದಗಿ ಅನ್ನ ಸಿಗದಿರಲಿ ಘನಮಹಿಮ ಶ್ರೀರಾಮ ಮಣಿದುಬೇಡುವೆ ನಿನಗೆ ಋಣದ ಬಾಳುವೆ ಬೇಡ ಜನಮಜನುಮಗಳಲಿ 5
--------------
ರಾಮದಾಸರು
ಸಿಂದೂರಗಮನೆ ಸಾರೆ ಮಲಗಿರುವನ್ಯಾರೆ ಪ ಸಂದರೀ ಮಂದಿರದೊಳಿವನ್ಯಾರೆ ಸೌಂದರ್ಯದ ಮ್ಯಾರೆ ಛಂದದಲಿ ನೀ ಸಾರೆ ಇಂದು ನಭದಲಿ ಚರಿಸುತಲಿ ಮನ ನೊಂದು ಬೇಸರದಿಂದ ಇಲ್ಲಿಗೆ ಬಂದು ಮಲಗಿಹನೇನೆ ಸುಖದಿ 1 ಶೀಲೆ ನೋಡಿವನ ಮುಖಕಮಲ ಸಂಗರದೊಳತಿ ಚಟುಲ ಸುವಿಶಾಲ ಭುಜಯುಗಲ ಶ್ರೀ ಲಕುಮಿವರ ಪಾಲ ನಯನ ಮರಾಳ ಧ್ವಜರೊಳ ಗಾವನೊ ಇವ ಪೇಳುವದು ಕೀಲಾಲಜಾಂಬಕಿ2 ನಾರಿ ಮಾತನಾಡಿಸೇ ಇವನ ಮನ ಮೋಹದವರನ ಕಮನೀಯ ಗುಣಯುತನ ವಾರಿಜಾಸನ ಮುಖ್ಯ ಸುರಪರಿವಾರ ಸೇವಿಯ ಕೊಳುವ ಕಾರ್ಪರನಾರಸಿಂಹನೆ ಪವಡಿಸಿಹನೆ 3
--------------
ಕಾರ್ಪರ ನರಹರಿದಾಸರು
ಹೊಂದದಿರುವಿ ಯಾಕೆ ಮನವೆ ಇಂದಿರೇಶನ ಹಿಂದೆ ಮುಂದೆ ಸುಖವನೀವ ಮಂದರಾದ್ರಿಧರನ ಬೇಗ ಪ. ಸುತ್ತಿ ಬರುವಿ ನೀ ಮತ್ತೆ ವಿಷಯದಿ ಎತ್ತಲಾದರೀಶನಂಥ ವೃತ್ತಿ ದೊರೆವುದುಂಟೆ ನಿನಗೆ 1 ತೋಷಗೊಳುವೆನೆಂಬಾಸ್ಥೆ ತಾಳುವಿ ದೋಷಗಳಲಿ ಸಿಲುಕಿ ಬಹಳ ಘಾಸಿಯಾಗಿ ನೊಂದುಕೊಳುವಿ 2 ಅರಿಯದಾದಿ ನೀ ಹರಿಯ ಗುಣಗಳ ಚರಣಪದ್ಮ ಮಧುರ ರಸವ ಸುರಿವ ಸುಖವನೆಂದು ತಿಳಿವಿ 3 ಕೇಳು ನುಡಿಯನು ಕರುಣಾಳು ಒಡೆಯನು ತಾಳ ತನ್ನ ನಂಬಿದವರ ಗೋಳ ಬಿಡಿಸಿ ಸಲಹುತಿಹನು 4 ಭ್ರಾಂತಿಗೊಳದಿರು ಶ್ರೀಕಾಂತನಲ್ಲಿರುಕಂತುಜನಕ ವೆಂಕಟೇಶ ಚಿಂತಿತಾರ್ಥವಿತ್ತು ಕಾವ 5
--------------
ತುಪಾಕಿ ವೆಂಕಟರಮಣಾಚಾರ್ಯ
ಹ್ಯಾಗೆ ಕಾಂಬೆ ನಿನ್ನ ಪಾದವ ಶ್ರೀನಿವಾಸ ಯೋಗಿ ಗಮ್ಯ ರೂಪ ಮಾಧವಾ ರಾಗ ರೋಗ ಸಾಗರಸ್ತನಾಗಿ ಮುಳುಗಿ ಬಾಯ ಬಿಡುವೆ ನಾಗರಾಜಗೊಲಿದ ತೆರದಿ ಬೇಗಲೊದಗಿ ಬಂದು ಕಾಯೊ ಪ. ಮನಸು ಎನ್ನ ವಶಕೆ ಬಾರದೆ ಭಕ್ತಿ ಸಾ- ಧನಗಳೆನಗೆ ಸೇರಿ ಬಾಹದೆ ನೆನಸಿಕೊಳುವ ಕಾರ್ಯ ದೊರೆಯದೆ ಸರ್ವಕಾಲ ತನುವ ಕೆಡಿಸಿ ವ್ಯರ್ಥಮಾಡಿದೆ ಕನಲಿ ಕೂಗುತಿರುವ ಶಿಶುವ ಜನನಿ ಕರದೊಳೆತ್ತುವಂತೆ ಮೂರ್ತಿ ದೋರೊ 1 ಕಲಿಯ ಬಾಧೆಯಿಂದ ನೊಂದೆನು ಮಲಿನ ಮೋಹದೊಳಗೆ ನಿಂದೆನು ತ್ಯಾಜ್ಯವಾದ ಫಲಗಳೆಲ್ಲ ತಂದು ತಿಂದೆನು ಗಾಳಿಗೆ ಸಿಲುಕಿದೆಲೆಯ ತೆರದಿ ಹೊರಲುಗಾಣೆನೀ ದೇಹ ಪಾದ ನೆಳಲ ಬಯಸಿ ಬೇಡಿಕೊಳುವೆ 2 ಗಣನೆಯಿಲ್ಲವಾದ ಮರಗಳು ಇರಲು ಪುರು ತನುವಿನಂತೆ ಮುಖ್ಯವಾವದು ಅನುಭವಾತ್ಮ ಸುಖವನೀವದು ಆದರೇನು ಕನಸಿನಂತೆ ಕಾತಿರುವುದು ಪಾದ ವನಜಯುಗವನಿತ್ತು ಎನ್ನ ಮನದೊಳದಯವಾಗು ಮಾರಜನಕ ಮೂಡಲದ್ರಿವಾಸ3
--------------
ತುಪಾಕಿ ವೆಂಕಟರಮಣಾಚಾರ್ಯ
ಅವನೆ ಜೀವಾಂಕಿತ ಪ್ರೇತ ನೋಡಿಭುವಿಗೆ ಭಾರನು ಅವನುಹರಿಹಗೆಯನುಪ.ಹರಿಕಥೆಗೆ ಬೇಸತ್ತು ಹರಟೆಯನೆ ಕೇಳುವವಹರಿಯಗುಣ ಹೊಗಳದೊಣಪಂಟ ಬಡಿವವಹರಿಮರೆದು ಮಲಭಾಂಡವನು ತುಂಬಿಕೊಳುವವಹರಿಭಟರ ನಡೆನುಡಿಗೆ ಸೈರಿಸದವ 1ಹರಿಪ್ರಿಯರ ನೆರೆಗಾರದತ್ತತ್ತ ಜಾರುವವಹರಿಯವರಿಗುಣಿಸದೆ ಧನ ಕಳೆವವಹರಿಯಾತ್ರೆಗಂಜಿ ಬಲವನೆ ಕೊಳುವವಹರಿವ್ರತವ ಬಿಟ್ಟಿತರ ವ್ರತ ಕೊಳುವವ 2ಹರಿಪದಾಂಬುಜವಜರಿದುಹಲವು ನೀರ್ಕುಡಿವವಹರಿಲಾಂಛನಿಲ್ಲದ ಚೆಲುವಿಕೆಯವಹರಿಪ್ರಸನ್ವೆಂಕಟೇಶನ ಪಾದಾಬ್ಜವ ಭಜಿಸಿಹರಿಪರದೈವವೆನ್ನದ್ಹೊಲೆಮನದವ3
--------------
ಪ್ರಸನ್ನವೆಂಕಟದಾಸರು