ಒಟ್ಟು 20 ಕಡೆಗಳಲ್ಲಿ , 13 ದಾಸರು , 20 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯತು ಜಯತು ಜಯತು ಶ್ರೀ ಜಗ ಪ್ರೀತೆಜಯತು ಹರಿಹರ ಮಾತೆಜಯತು ಸುರಮುನಿಪೂತೆಭುವನವಿಖ್ಯಾತೆಪಜಡಿ ಜಡಿಜಡಿದುಕೋಪದಲಿ ಮಧು ಕೈಟಭರಿಬ್ಬರನುಘುಡು ಘುಡು ಘುಡಿಸು ಸಹಸ್ರ ಪಂಚಬುದ ಕಾದಿತಡೆ ತಡೆ ತಡೆಯೆ ಸುದರ್ಶನಾಸ್ತ್ರದಿಂದವರ ಶಿರವಕಡಿ ಕಡಿ ಕಡಿದೆ ಬಗಳಾಂಬ ಭಳಿರೆ ಜಗದಾಂಬ1ಒದ ಒದ ಒದರಿ ಭೋ ಎಂದು ಮಹಿಷಾಸುರನ ಬಲವಗದೆ ಗದೆಗದೆಯಿಂದವರ ಬೀಳಗೆಡಹಿಬೆದ ಬೆದ ಬೆದಕಿ ಸುಭಟಾಗ್ರಣಿಗಳೆಂಬುವರನ್ನೆಲ್ಲಸದೆ ಸದೆ ಸದೆದು ನೀಬಿಟ್ಟೆ ಅಖಿಲರಣದಿಟ್ಟೆ2ಭರ ಭರ ಭರದಿ ಬರಲು ಮಹಿಷಾಸುರನೆಂಬುವನತರಿ ತರಿ ತರಿದು ಅವನ ಸಾಹಸವ ಮುರಿದುಗರಗರಗರನೆ ಪಲ್ಗಳನೆ ಕೊರೆದು ಪದದಿಂದಲೊದ್ದೆಸರಿ ಸರಿ ಸರಿಯೆ ಶಾರದಾಂಬ ಭಳಿಕೆ ತ್ರಿಪುರಾಂಬ3ಖಣಿಖಣಿಖಣಿಲು ಖಣಿಲೆಂದುಶುಂಭನಿಶುಂಭರನುದಣಿ ದಣಿ ದಣಿಸಿ ಕಾಳಗದಿ ಬೇಸರಿಸಿ ಬಳಿಕಕಣೆಕಣೆಕಣೆಯಿಂದಲವರ ತಲೆಗಳನೆ ತರಿಸಿದೆ ನಿನಗೆಎಣೆ ಎಣೆ ಎಣೆಯಾರು ದಿನಮಣಿಯೆ ಕಣಿಯೆ4ಇಂತು ರಕ್ಕಸರನೆಲ್ಲ ಮರ್ದನವ ಮಾಡಿಸಂತಸದಿ ದಿವಿಜರಿಗೆ ಅಭಯವಿತ್ತೆಚಿಂತಾಯಕ ಚಿದಾನಂದಾವಧೂತನಿಗೆಪಂಥದಾಸತಿ ಎನಿಪ ಪ್ರೀತೆ ವಿಖ್ಯಾತೆ ಜಯತು ಜಯತು5
--------------
ಚಿದಾನಂದ ಅವಧೂತರು
ಜಯಮಂಗಳಂನಿತ್ಯಶುಭಮಂಗಳಂಪ.ದುರುಳತಮ ವೇದವನು ಕದ್ದು ವಾತಾಳದಲಿಇರಲವನ ಕೊಂದು ವೇದಾವಳಿಗಳಸರಸಿಜೋದ್ಭವಗಿತ್ತು ಸುರಮುನಿಗಳನ್ನೆಲ್ಲಪೊರೆದ ಶ್ರೀ ವತ್ಸಾವತಾರಿ ಹರಿಗೆ 1ಸುರರು ದೈತ್ಯರಕೂಡಿ ಸಿಂಧುವನು ಮಧಿಸುತಿರೆಗಿರಿಮುಳಗಿ ಪಾತಳಕಿಳಿದು ಪೋಗೆಭರದಿಂದ ತಾ ಬಂದು ಗಿರಿಯ ಬೆನ್ನಳಗಾಂತುಸುರರ ಸಂರಕ್ಷಿಸಿದ ಶ್ರೀಕೂರ್ಮಹರಿಗೆ2ಭೂಮಿಯನು ಹಿರಣ್ಯಕ್ಷನೆಂಬ ದೈತ್ಯನು ಸುತ್ತಿಭೀಮ ವಿಕ್ರಮನು ಪಾತಾಳಕೊಯ್ಯುತಾಮರಸ ಸಂಭವನು ಬಿನ್ನೈಸಲವನಳಿದುಭೂಮಿಯನು ತಂದು ಶ್ರೀ ಭೂ ವರಾಹನಿಗೆ 3ಪರಮಭಾಗವತ ಪ್ರಲ್ಹಾದನ ಹಿರಣ್ಯಕನುಪರಿಪರಿಯ ಭಾದೆಯಿಂದಲಿ ಪೀಡಿಸಿಕರುಣಾಳು ಕೋಪದಲಿ ದೈತ್ಯನುದರವ ಬಗೆದಶರಣ ರಕ್ಷಕನಾದ ಶ್ರೀ ನರಸಿಂಹಗೆ 4ಬಲಿಚಕ್ರವರ್ತಿ ಭೂಮಿಯ ಧಾರೆಯರೆಯಲುಇಳೆಯನಳೆದವನ ಸುತಳಕೆ ಕಳುಹಿಸಿದಸಿಲುಕಿಭಕುತಿಗೆ ಮೆಚ್ಚಿ ಬಾಗಿಲವಕಾಯ್ದ ಶ್ರೀಬಲವಂಥಹರಿವಾಮಾನಾವತಾರನಿಗೆ5ಕಾರ್ತವೀರ್ಯಾರ್ಜುನನ ಸಂಹರಿಸಿ ಮುದದಿಂದಕೀರ್ತಿಯನು ಲೋಕದೊಳು ವಿಸ್ತರಿಸಿದಪ್ರಾರ್ಥಿವಾಂತಕ ಬಾಹುಬಲದಿ ಪರಿಪೂರ್ಣಗೆಆರ್ತಬಾಂಧವಗೆಭಾರ್ಗವರಾಮಗೆ6ದಶರಥನ ಮನೆಯುದ್ಭವಿಸಿ ಆ ರಾವಣನದಶಶಿರವ ನೀಡಾಡಿ ಅವನನುಜಗೆವಸುಧಾಧಿಪತ್ಯವನು ಲಂಕೆಯೊಳಗವಗಿತ್ತಅಸಮವಿಕ್ರಮ ರಾಮಚಂದ್ರ ಹರಿಗೆ 7ಯದುಕುಲದಿ ತಾ ಬಂದು ಕೊಂದು ಕಂಸನನಂದುಮುದದಿಂದ ಪಾಂಡವರನುದ್ಧರಿಸಿದಒದೆಗೆ ಕೌರವ ಬಲವ ಸಂಹರಿಸಿ ಪದವಿತ್ತುಮುದದಿ ಮನ್ನಿಸಿದ ಶ್ರೀ ಕೃಷ್ಣ ಹರಿಗೆ 8ತ್ರಿಪುರದ ಮುರಾರಿಗಳ ಸತಿಯರ ಪತಿವ್ರತವಅಪಹರಿಸಿ ದಿವ್ಯ ಮೋಹಕರೂಪದಿತ್ರಿಪುರಹರಗಂಬಾಗಿ ಶಿವಗೆ ಕೀರ್ತಿಯನಿತ್ತಅಪರಮಿತ ಬುದ್ಧಾವತಾರ ಹರಿಗೆ 9ಕರಿಯುಗದ ಕಡಯಲಿ ಖಲನೃಪರನೆಲ್ಲರನುತುಳಸಿ ಕುದುರೆಯ ಖುರದ ಪುಟಗಳಿಂದಸುಲಭದಿಂ ನಡೆಸುತೀ ಕೃತಯುಗದ ಧರ್ಮವನುಒಲಿದಂಥ ಕಲ್ಕಿಯವತಾರ ಹರಿಗೆ 10ಮಂಗಳ ಪದಂಗಳನು ಭಕ್ತಿಯಲಿ ಮೋಹನತರಾಂಗನೆಯರೆಲ್ಲ ರಾಗದಿ ಪಾಡುತಮಂಗಳಾತ್ಮಕಗೆಸಿರಿ ಪುರಂದರವಿಠಲಗೆಅಂಗನೆಯರೆಲ್ಲ ಆರತಿಯೆತ್ತಿರೆ 11
--------------
ಪುರಂದರದಾಸರು
ಜಯಮಂಗಳಂನಿತ್ಯಶುಭಮಂಗಳಂಪ.ದುರುಳತಮ ವೇದವನು ಕದ್ದು ವಾತಾಳದಲಿಇರಲವನ ಕೊಂದು ವೇದಾವಳಿಗಳಸರಸಿಜೋದ್ಭವಗಿತ್ತು ಸುರಮುನಿಗಳನ್ನೆಲ್ಲಪೊರೆದ ಶ್ರೀ ವತ್ಸಾವತಾರಿ ಹರಿಗೆ 1ಸುರರು ದೈತ್ಯರಕೂಡಿ ಸಿಂಧುವನು ಮಧಿಸುತಿರೆಗಿರಿಮುಳಗಿ ಪಾತಳಕಿಳಿದು ಪೋಗೆಭರದಿಂದ ತಾ ಬಂದು ಗಿರಿಯ ಬೆನ್ನಳಗಾಂತುಸುರರ ಸಂರಕ್ಷಿಸಿದ ಶ್ರೀಕೂರ್ಮಹರಿಗೆ2ಭೂಮಿಯನು ಹಿರಣ್ಯಕ್ಷನೆಂಬ ದೈತ್ಯನು ಸುತ್ತಿಭೀಮ ವಿಕ್ರಮನು ಪಾತಾಳಕೊಯ್ಯುತಾಮರಸ ಸಂಭವನು ಬಿನ್ನೈಸಲವನಳಿದುಭೂಮಿಯನು ತಂದು ಶ್ರೀ ಭೂ ವರಾಹನಿಗೆ 3ಪರಮಭಾಗವತ ಪ್ರಲ್ಹಾದನ ಹಿರಣ್ಯಕನುಪರಿಪರಿಯ ಭಾದೆಯಿಂದಲಿ ಪೀಡಿಸಿಕರುಣಾಳು ಕೋಪದಲಿ ದೈತ್ಯನುದರವ ಬಗೆದಶರಣ ರಕ್ಷಕನಾದ ಶ್ರೀ ನರಸಿಂಹಗೆ 4ಬಲಿಚಕ್ರವರ್ತಿ ಭೂಮಿಯ ಧಾರೆಯರೆಯಲುಇಳೆಯನಳೆದವನ ಸುತಳಕೆ ಕಳುಹಿಸಿದಸಿಲುಕಿಭಕುತಿಗೆ ಮೆಚ್ಚಿ ಬಾಗಿಲವಕಾಯ್ದ ಶ್ರೀಬಲವಂಥಹರಿವಾಮಾನಾವತಾರನಿಗೆ5ಕಾರ್ತವೀರ್ಯಾರ್ಜುನನ ಸಂಹರಿಸಿ ಮುದದಿಂದಕೀರ್ತಿಯನು ಲೋಕದೊಳು ವಿಸ್ತರಿಸಿದಪ್ರಾರ್ಥಿವಾಂತಕ ಬಾಹುಬಲದಿ ಪರಿಪೂರ್ಣಗೆಆರ್ತಬಾಂಧವಗೆಭಾರ್ಗವರಾಮಗೆ6ದಶರಥನ ಮನೆಯುದ್ಭವಿಸಿ ಆ ರಾವಣನದಶಶಿರವ ನೀಡಾಡಿ ಅವನನುಜಗೆವಸುಧಾಧಿಪತ್ಯವನು ಲಂಕೆಯೊಳಗವಗಿತ್ತಅಸಮವಿಕ್ರಮ ರಾಮಚಂದ್ರ ಹರಿಗೆ 7ಯದುಕುಲದಿ ತಾ ಬಂದು ಕೊಂದು ಕಂಸನನಂದುಮುದದಿಂದ ಪಾಂಡವರನುದ್ಧರಿಸಿದಒದೆಗೆ ಕೌರವ ಬಲವ ಸಂಹರಿಸಿ ಪದವಿತ್ತುಮುದದಿ ಮನ್ನಿಸಿದ ಶ್ರೀ ಕೃಷ್ಣ ಹರಿಗೆ 8ತ್ರಿಪುರದ ಮುರಾರಿಗಳ ಸತಿಯರ ಪತಿವ್ರತವಅಪಹರಿಸಿ ದಿವ್ಯ ಮೋಹಕರೂಪದಿತ್ರಿಪುರಹರಗಂಬಾಗಿ ಶಿವಗೆ ಕೀರ್ತಿಯನಿತ್ತಅಪರಮಿತ ಬುದ್ಧಾವತಾರ ಹರಿಗೆ 9ಕರಿಯುಗದ ಕಡಯಲಿ ಖಲನೃಪರನೆಲ್ಲರನುತುಳಸಿ ಕುದುರೆಯ ಖುರದ ಪುಟಗಳಿಂದಸುಲಭದಿಂ ನಡೆಸುತೀ ಕೃತಯುಗದ ಧರ್ಮವನುಒಲಿದಂಥ ಕಲ್ಕಿಯವತಾರ ಹರಿಗೆ 10ಮಂಗಳ ಪದಂಗಳನು ಭಕ್ತಿಯಲಿ ಮೋಹನತರಾಂಗನೆಯರೆಲ್ಲ ರಾಗದಿ ಪಾಡುತಮಂಗಳಾತ್ಮಕಗೆಸಿರಿ ಪುರಂದರವಿಠಲಗೆಅಂಗನೆಯರೆಲ್ಲ ಆರತಿಯೆತ್ತಿರೆ 11
--------------
ಪುರಂದರದಾಸರು
ತಾಪಡೆದು ಬಂದುದಕುಪಾಯವೇನು |ಕೋಪದಲಿ ಶ್ರೀಪತಿಯ ಶಾಪಿಸಿದರೇನು ಪ.ಅನ್ನವಸ್ತ್ರವಿಲ್ಲವೆಂದು ಅತಿ ಕ್ಲೇಶಪಟ್ಟರೇನು |ಧಾನ್ಯಧನಗಳ ಬೇಡಿ ಧರೆಗಿಳಿದರೇನು |ಎಣ್ಣಿಯನು ಪೂಸಿ ಹುಡಿಯೊಳಗೆ ಹೊರಳಿದರೇನು |ತನ್ನ ತಲೆ ಅಡಿಮಾಡಿ ತಪವ ಮಾಡಿದರೇನು 1ಸರಿಯ ಸುಜನರ ಕಂಡು ಕರುಬಿ ಕೊರಗಿದರೇನು |ಬರಿಮಾತುಗಳನಾಡಿ ಭ್ರಷ್ಟನಾದರೆ ಏನು ||ಇರುಳು ಹಗಲೂ ಹೋಗಿ ಆರ ಮೊರೆಯಿಟ್ಟರೇನು |ಅರಿಯದ - ಮನುಜರಿಗೆ ಆಲ್ಪರಿದರೇನು 2ಹೋಗದೂರಿನ ದಾರಿಕೇಳಿ ಮಾಡುವದೇನು |ಮೂಗನ - ಕೂಡ ಏಕಾಂತವೇನು ||ಯೋಗೀಶ ಪುರಂದರವಿಠಲನ ನೆನೆಯದವ |ತ್ಯಾಗಿಯಾದರೆ ಏನು ಭೋಗಿಯಾದರೆ ಏನು 3
--------------
ಪುರಂದರದಾಸರು
ಧರಣಿಗೆ ದೊರೆಯೆಂದು ನಂಬಿದೆ - ಇಂಥ - |ಪರಮಲೋಭಿಯೆಂದು ಅರಿಯೆ ಶ್ರೀ ಹರಿಯೆ ಪಕಾಡಿಬೇಡುವರಿಗೆ ಕೊಡಲಾರದೆ ಅಂಜಿ |ಓಡಿ ನೀರೊಳು ಸೇರಿಕೊಂಡೆ ಬೇಗ ||ಹೇಡಿಯ ತೆರದಲಿ ಮೋರೆಯ ತೋರದೆ |ಓಡಿ ಅರಣ್ಯದಿ ಮೃಗಗಳ ಸೇರಿದೆ 1ಬಡವರಬಿನ್ನಪ ಲಾಲಿಸದಲೆ ಹಲ್ಲ |ಕಡುಕೋಪದಲಿ ತೆರೆದಂಜಿಸಿದೆ ||ತಡೆಯದೆ ಭಿಕ್ಷುಕನಾದರು ಬಿಡರೆಂದು |ಕೊಡಲಿಯ ಪಿಡಿದುಕೋಡಗ ಹಿಂಡ ಕಾಯ್ದೆಯೊ2ಉತ್ತಮನೆಂದರೆ ಮತ್ತೆ ಚೋರನಾದೆ |ಬತ್ತಲೆ ನಿಂತು ತೇಜಿಯನೇರಿದೆ |ಎತ್ತಪೋದರು ಬಿಡೆ ಬಿಡೆ ನಿನ್ನ ಪಾದವ |ಚಿತ್ತಜ ಜನಕ ಶ್ರೀ ಪುರಂದರವಿಠಲನೆ3
--------------
ಪುರಂದರದಾಸರು