ಒಟ್ಟು 138 ಕಡೆಗಳಲ್ಲಿ , 49 ದಾಸರು , 128 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಊ. ವಿಶಿಷ್ಟ ಹಾಡುಗಳು ಅಂಗಡಿ ಗೋವಿಂದನ್ಹಣ ವಿಂಗಡಿಸಿರೊ ಸಂಗಡಿಕ್ಕ ಬೇಡ ನೀವು ಭಂಗಬಡುವಿರಿ ಪ ಮುಂಗಡದ ಬಡ್ಡಿಯನು ಮುಂದೆ ಕಳುಹಿಸಿ ಅಂಗಡಿ ಗೋವಿಂದನ್ಹಣ ವಿಂಗಡಿಸಿರೊ ಅ.ಪ ಕೋಲುಗಾರನೊಬ್ಬನಲ್ಲಿ ಹೊರಟನಂತೆ ಬೇಳುವ ಶಂಖದ ಧ್ವನಿಯ ತೋರ್ಪನಂತೆ ಹೀಲಿಯ ಕುಂಚವು ಕಯ್ಯೊಳಿಪ್ಪುದಂತೆ ಮೇಲೆ ಮೂರು ನಾಮ ಧರಿಸಿ ಬಪ್ಪನಂತೆ 1 ಮೂರುಗಡುಬ ಸುಳ್ಳನಾಡಿ ಮೀರಿ ಹೋಯಿತೀ ಸಾರಿ ಬಂದ ದೂತರಿಂಗೆ ಲಂಚ ನಡೆಯದು ಭಾರಿಯಿಕ್ಕಿ ಕೈಗೆ ಚಿಪ್ಪಳೇರಿಸುವರು ಸಾರಿ ಕಂಡು ಬದುಕುವರೆ ದಾರಿವೊಳ್ಳೆದು 2 ಮೊದಲ ಪತ್ರದ್ಹಣವ ಕೊಟ್ಟು ಬದಲು ಪತ್ರವ ಸದರ ಬಡ್ಡಿಯಿಂದ ಬರೆದು ಚದುರತನದಲಿ ಇದಿರು ಬಿದ್ದು ಕೈಯ ಮುಗಿದುವೊದಗಿನಿಂದಲೆ ಗದರಬೇಡ ಬನ್ನಿ ಚಿನ್ನ ವರದನಲ್ಲಿಗೆ 3 ದುಡ್ಡು ಕೊಟ್ಟು ಮಡ್ಡಿಯನ್ನು ತೆಗೆದು ಉಂಬೆವು ಅಡ್ಡಕೊಂಡು ಅತಿರಸವ ತೆಗೆದುಕೊಂಬೆವು ದೊಡ್ಡ ದೋಸೆ ವ್ಯವಹಾರವ ಮಾಡಿಕೊಂಬೆವು ಕಡ್ಡಾಯದ ಸರಕನೆಲ್ಲ ಕಂಡು ಬಿಡುವೆವು 4 ಗಂಧಿಕಾರನಂಗಡಿ ಗೋವಿಂದನಲ್ಲಿ ಚಂದದ ಔಷಧವನ್ನು ತಿಂಬೆವಲ್ಲಿ ಬಂದ ಭವದ ರೋಗ ಕೊಂದೆವಲ್ಲಿ ಆತ ಮಿಂದ ತೀರ್ಥವನ್ನು ಊರಿಗೆಂದೆವಲ್ಲಿ 5 ಸಾಲವನ್ನು ತಿದ್ದಿ ಮುದದ ಸಾಲವನ್ನು ನಾಲಿಗೆಯ ಪತ್ರದಿಂದ ತಂದೆವಿನ್ನು ನೀಲದ ಮಣಿಯನೊಂದ ಕದ್ದುದನ್ನು ಆಲಿಯೊಳಗಿಟ್ಟುಕೊಂಡು ಬಂದುದನ್ನು 6 ಅಂಗಡಿ ಗೋವಿಂದ ಬಹಳ ಅಂಗವುಳ್ಳವ ಮಂಗಳವ ಮಾರುವಲ್ಲಿ ಶೃಂಗಾರವುಳ್ಳವ ಬಂಗಾರ ವ್ಯಾಪಾರದಲ್ಲಿ ತುಂಗ ವಿಕ್ರಮ ಮುಂಗುಡಿಯ ಜನಕೆ ಅಂತರಂಗ ಕೊಡುವವ 7 ದಾಸರಿಗೆ ಧರ್ಮವನ್ನು ಕೊಡುವನಲ್ಲದೆ ಕಾಸು ಹೊರತು ಮೀಸಲನ್ನ ನೀಡಲರಿಯನು ಶೇಷಗಿರಿಯವಾಸನೆಂದು ಹಾಸಿಕೊಂಬನು ಬೇಸರನ್ನು ಕಂಡು ಸಂತೋಷವೀವನು 8 ಸ್ವಾಮಿಯೆಂಬ ತೀರ್ಥದೊಳಗೆ ಮಿಂದೆವಲ್ಲಿ ಭೂಮಿ ವರಾಹತಿಮ್ಮಪ್ಪನ ಧ್ಯಾನದಿಂದಲಿ ಕಾಮಿತ ವ್ಯಾಪಾರವನ್ನು ತಂದೆವಿಲ್ಲಿ ಆ ಮಹಾ ಚಂದ್ರಾರ್ಕವಾಗಿ ಬಾಳುವಲ್ಲಿ 9
--------------
ವರಹತಿಮ್ಮಪ್ಪ
ಎಂದಪ್ಪಿಕೊಂಬೆ ರಂಗಯ್ಯನ ಎಂದಪ್ಪಿಕೊಂಬೆ ಪ ಎಂದಪ್ಪಿಕೊಂಬೆನೋ ಎಂದು ಮುದ್ದಾಡುವೆನಂದ ಕಂದನ ಗೋವಿಂದನೆಂಬುವ ಕೂಸ ಅ.ಪ. ಕರದಲಿ ತನ್ನಯ ಬೆರಳು ಬಾಯೊಳಗಿಟ್ಟುಜುರು ಜುರು ಚೀಪುವ ವರಮುದ್ದು ಬಾಲನ1 ಗುರುಳು ಮಧ್ಯದಿ ರತ್ನ ಅರಳೆಲೆ ಹೊಳೆಯುತಜರದ ಕುಂಚಿಗೆ ಹೊದ್ದು ಚರಿಸುವ ಕೂಸಿನ್ನ 2 ಪುಟ್ಟ ಪುಟ್ಹೆಜ್ಜೆಯನಿಟ್ಟು ಗೋಕುಲದೊಳುತುಷ್ಟಿ ನೀಡಲು ಬಾಲಕೃಷ್ಣನೆಂಬುವ ಕೂಸ 3 ಬಾಲೆರ ಮನೆಪೊಕ್ಕು ಪಾಲುಮೊಸರು ತಿಂದಲೀಲೆ ಮಾಡುತ ಅಂಬೆಗಾಲನಿಕ್ಕುವ ಕೂಸ 4 ಕಾಲಕಡಗ ರುಳಿಯ ಪೂಲು ಪೈಜಣನಿಟ್ಟುಮ್ಯಾಲೆ ಉಡುದಾರ ಪೊಳೆವಂಥ ಕೃಷ್ಣನ5 ತಂದೆ ತಾಯರ ಮುಂದೆ ನಿಂದು ಮಾತಾಡಿದನಂದ ಬಾಲಕನಾದ ಇಂದಿರೇಶನೆ ಬೇಗ 6
--------------
ಇಂದಿರೇಶರು
ಏನು ಸುಕೃತವ ಮಾಡಿ ಜನಿಸಿದಳೊ ಯಶೋದೆ ದೀನಪಾಲಕ ನಿನ್ನ ಮಗನೆಂದು ಮನದಣಿಯೆ ಸೇವಿಪೆಳೊ ಪ. ಅನುದಿನ ಜಪತಪಾನುಷ್ಠಾನದಿಂದಿರುತಾ ಪಾದ ಸೇವಿಪ ಮುನಿಗಳಿಗೆ ದೊರೆಯುವ ವನಜನಾಭನೆ ನಿನ್ನ ವನರುಹಾನನ ನೋಡಿ ದಿನದಿನದಿ ಸುಖಿಸುವ ಘನ ಪುಣ್ಯ ಗಳಿಸಿದಳೋ 1 ದುಷ್ಟರನು ಸಂಹರಿಸಿ ಮೈ ಎಷ್ಟು ನೋವೊ ಎಂದು ದಿಟ್ಟೆ ಬಿಸಿನೀರೆರೆಯುವಳೊ ಇಷ್ಟ ಮೂರುತಿ ನಿನ್ನ ಶ್ರೇಷ್ಠತರ ಆಭರಣ ದಿಟ್ಟ ಕೃಷ್ಣ ನಿನಗಿಟ್ಟು ನೋಡುವಳೊ 2 ಕಸ್ತೂರಿ ತಿಲಕವನು ಶಿಸ್ತಿನಲಿ ಶೃಂಗರಿಸಿ ಕಸ್ತೂರಿರಂಗ ಶ್ರೀ ಶ್ರೀನಿವಾಸ ನಿನ್ನೆತ್ತಿ ತೊಡೆಯಲ್ಲಿ ಸ್ವಸ್ಥದೊಳು ಮಲಗೆಂದು ಪೊಂಬಟ್ಟಲೊಳು ಕ್ಷೀರವನು ಹಸ್ತಿವರದನೆ ಕುಡಿಯೆಂದು ಜೋಗುಳವ ಪಾಡುವಳೊ 3
--------------
ಸರಸ್ವತಿ ಬಾಯಿ
ಏಳಯ್ಯ ಶ್ರೀ ಲಕ್ಷ್ಮೀರಮಣ ಸುರನÀುತ ಚರಣ ಏಳು ಶ್ರೀ ನೀಲಕಂಠನ ಮಿತ್ರ ಸುಚರಿತ್ರ ಏಳು ಶ್ರೀ ಭಾಗೀರಥೀ ಪಿತನೆ ಮತಿಯುತನೆ ಏಳು ಶ್ರೀ ಕೃಷ್ಣರಾಯ ಸ್ವಾಮಿ ಏಳಯ್ಯ ಬೆಳಗಾಯಿತು ಪ ನಸುಗೆಂಪಾಗಿ ತಾರಕಿಗಳಡುಗುತಿದೆ ಬೊಂಪು ಹರಿದೋಡುತಿದೆಕೋ ಸೊಂಪಡಗುತಿದೆ ಕುಮುದ ಕಮಲವರಳುತಿದೆ ನಾಗ ಸಂಪಿಗೆಯ ಬನದಿ ಸ್ವರ ಗೈಯುತಿದೆ ಮರಿದುಂಬಿ ಸಂಪತ್ತು ಬಡವಗೆ ಬರುವಂತೆ ರವಿ ಬಿಂಬ ಸೊಂಪಿ ನಿಂದೆಸೆಯುತಿದೆಕೋ ||ಸ್ವಾಮಿ|| 1 ಹಲವುಮೃಗ ಜಾತಿಗಳು ಹಳುವನಡ ಹಾಯುತಿವೆ ಫಲ ಪುಷ್ಪಚಯವು ಪಲ್ಲವಿಸಿ ಪಸರಿಸುತಲಿವೆ ಗಿಳಿ ವಿಂಡು ನಲಿಯುತಿದೆ ನವಿಲು ಜೇಂಕರಿಸುತಿವೆ ಹೊಲ ಮನೆಗಳೆಲ್ಲ ಹಸನಾಗಿ ಕಾಣಿಸುತಲಿವೆ ಸುಳಿಗಾಳಿ ಸುಳಿಯುತಿದೆ ಜಲಜಾಕ್ಷನುಪ್ಪವಡಿಸಾ ||ಸ್ವಾಮಿ|| 2 ಹಕ್ಕಿಗಳು ಹಾರುತಿದೆ ಕುಕ್ಕುಟವು ಕೂಗುತಿದೆ ನಕ್ಷತ್ರ ಪತಿಯ ಪ್ರಭೆ ಮಾಸುತಿದೆ ಸುರಭಿ ಬಲು ರಕ್ಕಸಾಂತರನೆವಳು ಮನೆಮನೆ ಬಿಡದೆ ಅಮ್ಮಿಯನು ಹುಡುಕುತಿವೆ ಚೊಕ್ಕ ಬೆಳಗಾಯಿತಿದೆ ಕೋ ||ಕೃಷ್ಣ || 3 ಪತಿವ್ರತೆಯರೆದ್ದು ಪುರುಷನ ಚರಣಕ್ಕೆರಗಿ ಚಮ ತ್ಕøತಿಯಿಂದ ಮುಖ ಮಜ್ಜನವಮಾಡಿ ಪಣೆಗಿಟ್ಟು ದಧಿ ಮಥಕನುವಾಗಿ ಕುಳಿತು ಅತಿಶಯ ದೊಳಗೆಲ್ಲ ಮನೆವಾರ್ತೆಯನು ಮುಗಿಸಿ ನಿಜ ಮತ ವಿಡದು ಭಕ್ತಿಯಲಿ ಗಿಂಡಿಲುದಕವ ತುಂಬಿ ನೀನು ಉಪ್ಪವಡಿಸ 4 ಮದ್ದು ಮಂತ್ರವು ಸಿದ್ದಿಸುವ ಕಳವಿನೊಳಗಿರ್ದ ಚೋರರಿ ಗೆದೆಯ ಧೈರ್ಯಗುಂದುವ ಸಮಯ ಉದ್ಯೋಗವಂತರಿಗೆ ಎಚ್ಚರಿಕೆ ಸಮಯ ದರಿದ್ರರಿಗೆ ನಿದ್ದೆ ಸಮಯ ಬುದ್ದಿಯುತರಾದ ಬುಧಬಾಲರಿಗರ್ಥಗ್ರಂಥ ದ್ಯಾನ ಶಾಸ್ತ್ರ ಪುರಾಣಗಳ ಬಹುವಿದ್ಯೆ ಪಠಿಸುವ ಮುದ್ದು ಗೋಪಾಲಕೃಷ್ಣ 5 ವ್ಯಾಸ ವಾಲ್ಮೀಕಿ ಶುಕನಾರದನು ಶೌನಕ ಪರಾಶರ ವಶಿಷ್ಟ ವೈಶಂಪಾಯ ಕಣ್ವ ವಿಶ್ವಾಮಿತ್ರ ಗೌತಮ ಭರದ್ವಾಜ ಸನಕ ದೂರ್ವಾಸ ಕೌಶಿಕ ಕಪಿಲರು ಕೌಶ್ಯಪ ದಧೀಚಿ ಭಾರ್ಗವರಗಸ್ತ್ಯ ಋಷಿ ಈ ಸಮಸ್ತಾದಿ ಹರಿಯೇ || ಸ್ವಾಮಿ || 6 ಜಾಂಬವ ವಿಭೀಷಣಾಶ್ವತ್ಥಾಮ ಹನುಮಂತ ಜಂಭಾರಿಸುತ ಧನಂಜಯ ಬಲಿಷ್ಠಹಲಾದರೆಂಬಸದ್ಭಕ್ತರುಗಳು ಅಂಬುಜೋದ್ಭವ ಮುಖ್ಯರಮರ ಗಂಧರ್ವಾದಿ ತುಂಬುರ ಭುಜಂಗ ಭೂಸುರರೆಲ್ಲರೊಂದಾಗಿ ಬಿಡದ ಹಂಬಲಿಸುತೈದಾರೆ ಹರಿಯೆ || ಸ್ವಾಮಿ || 7 ಗಂಗೆ ಗೋದಾವರಿಯ ಭೀಮರತಿವರದೆ ವರ ತುಂಗ ಭದ್ರೆಯು ಯಮುನೆ ಕಾವೇರಿ ಸಿಂಧು ಅಂಗನೆಯರೆಲ್ಲರೂ ಕೂಡಿ ರಂಗು ಮಾಣಿಕದ ಆಭರಣಗಳಲಂಕರಿಸಿ ಹಿಂಗದೆಲ್ಲರು ನೆರೆದು ಹರಿ ನಿಮ್ಮ ಬಾಗಿಲೋಳು ಮಂಗಳಭಿಷೇಕಕೆಂದು ಸ್ವಾಮಿ 8 ಕರುಗಳನು ಕಾಯ್ದ ಕಾರುಣ್ಯ ಮೂರುತಿ ಏಳು ವರ ಪಾಂಡುರಂಗ ವಿಠಲ ಹರಿಸುತನ ಹಯವರೂಥವ ಹರಿಸಿದವನೆ ಏಳು ಹರಿಸುತನ ಸುತನ ಸುತನ ಕಾಯ್ದವನೆ ಏಳು ಹರಿಸುತನ ಕೋಣೆ ಲಕ್ಷ್ಮೀರಮಣನೆ ಏಳು ಶ್ರೀ ಹರಿಯೆ ನೀನು ಉಪ್ಪವಡಿಸಾ ||ಕೃಷ್ಣ || 9
--------------
ಕವಿ ಪರಮದೇವದಾಸರು
ಕಥನಕಾವ್ಯಗಳು ಶ್ರೀ ವೆಂಕಟೇಶ ಪಾರಿಜಾತ ಅಧ್ಯಾಯ ಒಂದು ಶ್ರೀಪತಿರ್ಭೃಗುಣಾ ಸರ್ವಲೋಕೋತ್ಕøಷ್ಟ ಇತೀ ಪಿತ: ಗೋಕ್ಷೀರ ಸಿಕ್ತ ಸರ್ವಾಂಗೋ ವಲ್ಮೀಕಸ್ಥ: ಶುಭಂ ದಿಶೇತ | ಶ್ರೀಸಹಿತ ಶ್ರೀವೆಂಕಟೇಶಗೆ ಸಾಸಿನಾರತಿ ಮಾಡಿ ಬೇಡುವೆ ಭಾಷೆ ಭಾಷೆಗೆ ಎನಗೆ ಬುದ್ಧಿವಿಕಾಸ ಕೊಡುಯಂದು ಕರಮುಗಿದು ಬೇಡುವೆ ದಾಶರಥಿ ನಿಜದಾಸ ಕಲ್ಲೊಳ್ಳೀಶಗೊಂದಿಸುವೆ 1 ಸಂತತಿಗೆ ನತಿಸುವೆ ಐಜಿ ವೆಂಕಟರಾಮವರ್ಯರ ಪೂಜೆಯಲ್ಲಿರುವೆ ಜಗತಿಯಲಿ ಜನಿಸಿ ಅವರಾ ಪೂಜಿತಾಖ್ಯವು ವಹಿಸಿದವರನು ಪೂಜಿಸುವೆ ಬಿಡದೆ2 ಪೊಂದಿ ಆ ಗುರು ಪುತ್ರರಾಗಿರುವ ವಿಷ್ಣುತೀರ್ಥರನು ನಮಿಪೆ ಮತ್ತೆ ಸ್ವೋತ್ತಮರಾಗಿ ಇರುವ ಗುರುಗಳಿಗೊಂದಿಸುತ ಸ ರ್ವೋತ್ತಮಾನಂತಾದ್ರಿ ರಮಣನ ಮಹಿಮೆ ಪೇಳುವೆನು3 ವಚನ ಬುದ್ಧಿ ಪೂರ್ವಕ್ಹಿಂ ಸಂಪೂರ್ಣ ಸರ್ವ ದೇವೋತ್ತಮನು ಇರುವನ್ಯಾರೆಂದು ತಿಳಿ ಸರ್ವಲೋಕದಲಿ ಕೇಳಿ ಪೂರ್ವದಲ್ಲಿ ಪೋದ ಪೂರ್ವಿಕನÀ ಮನೆಯಲ್ಲಿ ಗರ್ವ ಅವನಲ್ಲಿ ಕಂಡು ಇರುವ ನಡೆದನಲ್ಲಿ 1 ನೋಡಿದನು ಆಗಲ್ಲಿ ಪ್ರೌಢೆ ಪಾರ್ವತಿಯು ಮಾತಾಡಿದಳು ನಾಚುತಲಿ ಬೇಡಬಿಡು ಪ್ರಾಣೇಶ ನೋಡು ಭೃಗು ಮುನಿಬಂದ ಬೇಡಿಕೊಂಬುವೆನೊ ಗಾಢನೆ ಕಣ್ಕೆಂಪು ಮಾಡಿ ಮುನಿಯಿದ್ದಲ್ಲಿ ಓಡಿಬಂದನು ಪೂಜೆಯ ಬೇಡ ಈ ಲೋಕದಲಿ ನೋಡಿ ಲಿಂಗವ ಪೂಜೆ ಮಾಡಲಿ ಜನರು 2 ಪರಿ ಶಾಪ ಮೆಟ್ಟಿದನು ವೈಕುಂಠ ಥಟ್ಟನೆ ಮತ್ತಲ್ಲಿ ದಿಟ್ಟ ದೇವನ ಕಂಡ ಪಟ್ಟದರಸಿಯಕೂಡಿ ಧಿಟ್ಟಾಗಿ ಮಲಗಿರಲು ಸಿಟ್ಟಿಲÉೂದ್ದನು ಒಳ್ಳೆ ಪೆಟ್ಟು ಅವನೆದಿಗೆ ಮುಟ್ಟಿ ಮುನಿ ಪಾದವನು ತುಷ್ಟನಾಗಿ 3 ಧ್ವನಿ ಮೇಲಿಷ್ಟು ಸಿಟ್ಟು ಕಾರಣ ಪೇಳಿಷ್ಟು ತಪ್ಪಿತು ಕ್ಷಮಿಸಿಷ್ಟು 1 ಎಳ್ಳುಕಾಳಷ್ಟು ನೊಂದು ಕೊಂಡಿದ್ದಾವು ಎಷ್ಟೋ 2 ಧರೆಯೊಳಗೆ ದ್ವಿಜರಿಗೆ ಸರಿಯಾರು ಇಲ್ಲೆಂದು ಬರುವುದು ಭಯ ಬಹಳಷ್ಟು ವರದಾನಂತಾ ದ್ರೀಶನ ಪರಮ ಭಕ್ತರಿಗೆ ಬರಬಾರದೆಂದಿಗೂ ಸಿಟ್ಟು 3 ವಚನ ಇಂದಿರಾಪತಿಯು ಹೀಗೆಂದು ಮುನಿಪಾದಂಗಳÀÀÀ ಚಂದದಿಂದಲಿ ಒತ್ತಿತ್ವರದಿಂದ ಉಷ್ಣೋದಕವನು ತಂದು ತೊಳೆಯುತ ಇಂದು ಪಾವಿತನಾದೆನೆಂದು ಹರುಷದಲ್ಲಿ ಮುಂದೆ ಭೃಗುಮುನಿಯು ಮುಕುಂದನ ಸರ್ವರಿಂದಧಿಕ ಸತ್ಯತಿಳಿರೆಂದ ಮುನಿಗಳೆಲ್ಲ ಮುಂದೆ ವೈಕುಂಠದಲಿ ಇಂದಿರಾದೇವಿ ಗೋವಿಂದನಾಟವ ಕಂಡಂದಳೀ ಪರಿಯು1 ರಾಗ:ಮೋಹನ ಕಲ್ಯಾಣಿ ಆದಿತಾಳ ಹರಿಯೆ ಪೋಗುವೆ ನಾನು ಮುನ್ನಿರುತಿರು ಒಬ್ಬನೇ ನೀನು ತಿರುಕನಾಗಿ ಇರುತಿರುವ ಭೂಸುರನು ಭರದೊಳೊದ್ದ ನಿನ್ಹಿರಿಯತನವೇನು ಪ ನಿನ್ನ ಶ್ರೀವತ್ಸವಿದು ಬಹು ಮಾನ್ಯವು ಎಂದೆನಿಸುವುದು ಮಾನ್ಯ ವಾಗಿಹುದು 1 ಬಡವ ಬ್ರಾಹ್ಮಣರಿಂದ ನೀ ಕಡೆಗೆ ಕೂಡಿರು ಚಂದಾ ಮಡದಿಯ ಹಂಬಲ ಬಿಡುದೂರದಿಂದ ತಡಮಾಡದೆ ನಾ ನಡದೆ ಗೋವಿಂದಾ 2 ಇನ್ನೆನ್ನ ಗೊಡವ್ಯಾಕೊ ಬಿಡು ನಿನ್ನ ಸಂಗತಿ ಸಾಕು 3 ಎನ್ನ ವೈರಿಗಳ ಮನ್ನಿಸುವ್ಯಾಕೋ ನನ್ನಿಚ್ಛೆಯಲಿ ನಾ ಇನ್ನಿರಬೇಕೊ 4 ಹಿಂದಕೆ ಕುಂಭೋದ್ಭವನು ಎನ್ನ ತಂದೆಯ ನುಂಗಿದ ತಾನು ಅಂದಿಗೆ ಎನಗಾನಂದವು ಏನು 5 ಮತ್ತೆನ್ನ ಸೊಸೆಗವರು ಬಹು ಭಕ್ತಿಯಲಿ ಪೂಜಿಸುವರು ವೈರಿಯವರ್ಹೊರತು ಇನ್ಯಾರು 6 ಹುಡುಗ ಬುದ್ಧಿಯು ಎಂದು ನಾ ಕಡೆಗೆ ಬಲ್ಲೆನು ನಿಂದು ಮಡುವ ಧುಮುಕಿ ಕಲ್ಪಡೆಯ ಪೊತ್ತಿಹುದು ಪಿಡಿದು ಭೂಮಿಯ ಕಂಭ ಒಡೆದು ಬಂದಿಹುದು 7 ಬಡವ ಬ್ರಾಹ್ಮಣನಾದಿ ಚಪಗೊಡಲಿಯ ಕೈಯಲಿ ಪಿಡಿದಿ ಮಡದಿಯ ಕಳಕೊಂಡು ತುಡುಗ ನೀನಾದಿ ಹಿಡಿದು ಬತ್ತಲೆ ಖೊಟ್ಟಿ ಕಡವನೇರಿದಿ 8 ಎಷ್ಟು ಪೇಳಲೆ ನಿನಗೆ ನೀನೆಷ್ಟು ಮಾಡಿದಿ ಹೀಗೆ ಅಷ್ಟು ಮನಸಿನೊಳಗಿಟ್ಟುನೂ ಆಗ ಕಟ್ಟಕಡಿಗೆ ಬಲು ಸಿಟ್ಟು ಬಂತೆನಗೆ 9 ಎಲ್ಲರಿಗುತ್ತಮ ನೀನು ಎಂದಿಲ್ಲಿದ್ದೆ ಮೋಹಿಸಿನಾನು ಬಲ್ಲಿದನಂತಾದ್ರಿಯೊಳಿರು ನೀನೆ 10 ರಾಗ:ಸಾರಂಗ ಆದಿತಾಳ ಪರಿ ಕಲಹ ಮಾಡಿ ತ್ವರಿತದಿಂದ ನಡೆದಳು ಕರವೀರಪುರಕೆ ಪ ಪರಮಾತ್ಮನು ತಾ ಮುಂದೀಪರಿ ಚಿಂತಿಸುತಿಹನು ಸಿರಿಯಿಲ್ಲದ ವೈಕುಂಠ ಸರಿಬಾರದು ಎನಗೆ1 ದೀನನಾದೆನು ಹಾ ನಾನು ಕಾಣುವೆನೆಂದು ಪ್ರಾಣ ನಿಲ್ಲದು ಪಟ್ಟದ ರಾಣಿಯ ಬಿಟ್ಟು 2 ಇನ್ಹ್ಯಾಂಗೆ ಇರಲಿ ಇನ್ನಾಕೆಯ ಹೊರತು ಕಣ್ಣಿಗೆ ವೈಕುಂಠಾರಣ್ಯ ತೋರುವುದು ಇನ್ನೆಲ್ಹೋಗಲಿ ಎಂದು ಬಂದ ತನ್ನಿಂದ ತಾನು3 ಶ್ರೀ ವೈಕುಂಠಕಿಂತ ಶ್ರೀ ವೆಂಕಟಗಿರಿಯು ಅಧಿಕವೆಂದು ಭಾವಿಸೀ ಪರಿಯು ಆವತ್ತಿಗೆ ಬೇಗಲ್ಲೇ ತಾ ವಾಸಕೆ ನಡೆದ ದೇವ ತಿಂತ್ರಿಣೆಯೆಂಬೋ ಆ ವೃಕ್ಷವಕಂಡ 4 ಅಡಗಿದ ಮೆಲ್ಲನೆ ಪೋಗಿ ಅಲ್ಲ್ಯಾದೇಶದಲೊಬ್ಬ ಜೋಳಾಖ್ಯನು ಎಲ್ಲರಿಂದಲಿ ತನ್ನ ಪುರದಲ್ಲೆ ಇರುವಾ5 ಶಿವನ ಕರುವಿನ ಮಾಡಿ ತಾನಾಕಳಾಗಿ ಅವನ ತಾಯಿಯು ಲಕ್ಷ್ಮೀ ಅವನ ಮಾರಿದಳು ಕೊಂಡ 6 ನಿತ್ಯ ವರಸಾಧು ಗುಣದಿಂದ ಸರಸಾಗಿ ಕೂಡಿ ಚರಿಸಿ ಬರುವುದು ವೇಂಕಟಗಿರಿಗ್ಹೋಗಿ ನಿತ್ಯ7 ಬಂದ ಕಾರಣವೇನು ಎಂದು ಸ್ಮರಿಸುತಲಿ ಇಂದಿರೇಶಗೆ ಭಕ್ತಿಯಿಂದ ಕ್ಷೀರವನು ಚಂದಾಗಿ ಕರೆವುದು ಬಂದು ಹುತ್ತಿನಲಿ 8 ಹಿಂಡದು ತನ್ನ ಕರುವಿನ ಪರಿ ರಾಜನ ಹೆಂಡತಿಯ ಆಗ ಚಂಡ ಕೋಪದಿ ಗೋಪನ ಕಂಡಂದಳು ಹೀಗೆ 9 ವಚನ ನೀ ಏನು ಮಾಡುವಿನಿತ್ಯ ಕುಡಿವುದೋ ವತ್ಸ ಏನುಮಾಡು ಪ್ರಾಣಕೊಂಬುವೇನು ತಾನು ಗಾಭರಿಗೊಂಡು ಧ್ಯಾನಿಸುತ ಆ ರಾಜ ಮಾನಿನಿಗೆ ನುಡಿದ ಬಹು ದೀನನಾಗಿ 1 ರಾಗ:ದಂತಿ ಆದಿತಾಳ ಅರಿಯೆ ತುರುಗಳ ಕಾಯ್ಕೊಂಡು ಬರುವೆ ನಾ ಇದಹೊರ್ತು ಪ ಕಟ್ಟುವರ್ಯಾರೊ ಅರಿಯೆ ಬರಿದೆ ನೀ ಎನ್ನ ಮೇಲೆ ಹರಿಹಾಯುವದ್ಯಾಕೆ ಅರಿಯೆ 1 ಪಾಲಾಗುವುದೊ ಅರಿಯೆ ಸರಸಾಗಿ ತಿಳಿನೀನು ನೆರೆಯೊರೆಯವರನಾ ಅರಿಯೆ 2
--------------
ಅನಂತಾದ್ರೀಶ - ಕಥನಕಾವ್ಯಗಳು
ಕಂಬುಕಂಧರ ಹರಿಯಪ. ಪಾಲಿತ ಕೌಂತೇಯ ಭಾಗವತ ತನಕಾಗಿ ತಾ ದಯವಗೈದ ಭರದಿಂದ ತೋರ್ವ ಭೋಗಿಶಯನ ಸ- ರಾಗಕಪ್ಪನಿಯೋಗಿಸುವರೆ ಮಹಾಗಿರಿಯಿಂದಲಿ ಸಾಗಿ ಬಂದನ1 ಮಂದವಾರದಿ ಮಿಂದು ಮಡಿಗಳನು ಉಟ್ಟು ಕಾಣಿಕೆಯನಿಟ್ಟು ಮಂದರಾಧರ ನೀನೆ ಗತಿಯೆಂದು ಬಂದು ಕೈಮುಗಿದು ನಿಂದು ವಂದಿಸುತ ಬಲ ಬಂದು ಚರಣದ್ವಂದ್ವಸೇವೆಯ ಕುಂದದರ್ಚಿಸಿ ದಂದುಗವ ಬಿಡಿಸೆಂದು ಪೇಳ್ದರೆ ಮಂದಹಾಸಾನಂದವೀವನು2 ಕಾಸುವೀಸದ ಬಡ್ಡಿ ಭಾಷೆಯನು ಬಿಡನು ನಮ್ಮೊಡೆಯನು ದೇಶದೇಶದಿ ಕಷ್ಟ ತರಿಸುವನು ತಾನು ಭಕ್ತರ ಕಾಯುವನು ಸೂಸಿ ಕರುಣಾರಾಸ ರಾಜ್ಯದ ವಾಸವಾಗಿಹ ಒಕ್ಕಲಿಗರೆಂಬೀ ಸುಮನದಿಂ ಕೇಶವನ ಪದವ3 ಸುಖದಿಂ ಬಾಳುವದು ಪರಿಯ ನೀನರಿಯಾ ನಿನ್ನೊಳಗಿಟ್ಟುಕೊಂಡರೆ ಕೆಟ್ಟು ಹೋಗುವಿ ಒಟ್ಟುಗೂಡಿಸಿ ತಟ್ಟನೆಲ್ಲ ಮುಂದಿಟ್ಟುಯಿರೆ ಕೈಗೊಟ್ಟು ಕಾಯುವ4 ಮಾನನಿಧಿ ಭಕ್ತರನು ಮನ್ನಿಸುವ ನಲಿವ ಕರುಣವ ಗೈವ ಭಾನುಕೋಟಿಪ್ರಕಾಶದಿಂದಿರುವ ಮೆರೆವ ಮಹಾನುಭಾವ ಏನನೆಂಬೆನು ಆದಿ ಶ್ರೀಲಕ್ಷ್ಮೀನಾರಾಯಣ ತಾನೆ ಕಾರ್ಕಳ ಸ್ಥಾನ ರಾಜಧಾನಿಯಲಿ ಮೆರೆವನನವರತದಿ ಶ್ರೀನಿವಾಸನ5
--------------
ತುಪಾಕಿ ವೆಂಕಟರಮಣಾಚಾರ್ಯ
ಕರುಣಿಸಯ್ಯಾ ಕಂಜಜನಯ್ಯಾ | ಕರ್ಣರಹಿತ ಶಯ್ಯಾ ಕನಕಾದ್ರಿರಾಯಾ ಪ ಕರಿವರದನೆ ನಿನ್ನ ಚರಣ ನಂಬಿದೆ ಎನ್ನಪರಿಪಾಲಿಸುವದು ಪರಮ ಕೃಪಾಳೊ ಅ.ಪ. ಕೋಟಲೆ ಸಂಸಾರವೆಂಬೊ | ನೀಟು ಶರಧಿಯನ್ನುದಾಟಲಾರೆನೊ ನಾನೂ | ಇದೇನೊ ||ನಾಟಕಾಧಾರ ನಿನ್ನ | ನಂಬಿದಾ ಮೇಲೆ ಎನ್ನಬೂಟಕನೆನಸುವರೇ | ಮುರಾರೇ ||ಹಾಟಕಾಂಬರ ಧರ ಹರಿಯೇ ಕೇಳ್ವುದಿನ್ನು | ಕೋಟಿ ವ್ಯಾಳೆಗೆ ಭಕ್ತ ಕೋಟಿಯೊಳಗಿಟ್ಟು ಎನ್ನ | ನೀಟು ಮಾರ್ಗವ ತೋರಿ ಪಾಟುಪಡಿಪ ಯಮಕಾಟ ಕಳೆದು ದಿವ್ಯ ನೋಟದಿ ನೋಡು 1 ಕಂಸಾರಿ ಮುರಾರಿ2 ಇಂದಿರೆ ಜನನಿ ಗೋ-ವಿಂದ ಇನ್ನೊಬ್ಬರಿಲ್ಲ | ನೀ ಬಲ್ಲೆಲ್ಲಾ ||ಸುಂದರ ವಿಗ್ರಹನೆ | ಸುಗುಣ ಸಾಕಾರ ಶುಭಸಾಂದ್ರಾ ಭಕುತ ವತ್ಸಲ | ಗೋಪಾಲಾ ||ಎಂದೆಂದಿಗೆ ಎನ್ನಿಂದ ಅಗಲದೆ ಮುಕುಂದ ಮುನಿ ವೃಂದವಂದಿತ ಚರಣನೇ | ಸಿಂಧುಶಯನ ಶಿರಿ ಮೋಹನ ವಿಠಲ ಬಾ ಲೇಂದು ವದನ ಸುಗುಣ ಸಾಂದ್ರಾ ಉಪೇಂದ್ರಾ 3
--------------
ಮೋಹನದಾಸರು
ಕೃಷ್ಣಮೂರುತಿ ಎನ್ನ ರಕ್ಷಿಸೈ ಕಾರುಣ್ಯನಿಧೆ ಸಿರಿ ಕೃಷ್ಣಮೂರುತಿ ಎನ್ನ ರಕ್ಷಿಸೈ ಪ ನಾಗೇಂದ್ರಶಯನನೆ ನಾಗೇಂದ್ರ ಮರ್ದನನೆ ನಾಗೇಂದ್ರಗೊಲಿದವನ್ಹಾಗೆ ನಾನಲ್ಲವೇನೊ 1 ತಾಪಸಸತಿ ಶಿಲಾರೂಪವ ಪೊಂದಿರಲು ಶಾಪ ಬಿಡಿಸಿ ಅವಳ ಕಾಪಾಡಲಿಲ್ಲವೇನೊ 2 ಆ ನೀಚನಿಂದ ಯಜ್ಞಸೇನೆಗೆ ಬಂದ ಮಾನ ಹಾನಿ ತಪ್ಪಿಸಿ ಅಭಿಮಾನಿಸಿ ರಕ್ಷಿಸಿದ 3 ಇಂದಿರೆಯರಸನೆ ವಂದಿಸಿ ಬೇಡುವೆನೊ ಎಂದಿಗು ಎನ್ನ ಹೃದಯಮಂದಿರ ಬಿಡದಿರೊ 4 ವರನಾಮಗಿರಿ ಸಿರಿನರಹರಿಮೂರುತಿಯ ಚರಣಸೇವಕನೆಂದು ಕರುಣ ಎನ್ನೊಳಗಿಟ್ಟು 5
--------------
ವಿದ್ಯಾರತ್ನಾಕರತೀರ್ಥರು
ಕೃಷ್ಣಾರ್ಯರು ಮನವೇ ಲಾಲಿಸಿ ಕೇಳೊ ಬಿನ್ನೈಸುವೆನೊ ನಿನಗೆ ಚೆನ್ನಾಗಿ ವಡೆಯಾನಾ ಪಾದದಲ್ಲಿ ಭಕುತಿಯನ್ನೆ ಮಾಡಿ ಮಮತೆ ವಿಷಯಾದಿ ಅಹಂಕಾರ ಬುದ್ಧಿಯನ್ನೇ ಬೀಸಾಟಿ ದೃಢವಾಗಿ ಧೈರ್ಯದಿಂದ ಇದೇ ಸಾಧನವೆಂದುಗುಪಿತಾದಲ್ಲಿ ಸಂಚರಿಸೆ ಪಾಣಿಯಾ ಪಿಡಿದುತಾ ವಾಣಿ ಅರಸ ನಿರ್ಮಾಣವ ತೋರಿಸುವ ಪ್ರಾಣದೇವರು ಪ್ರಾಣವಪ್ಪಿಸಿ ಸಾಕುವಬಿಡದೆ ಪಂಚಪ್ರಾಣಾತ್ಮಕನಾದ ತಂದೆವರದಗೋಪಾಲವಿಠಲರೇಯಾನ ಭಜಿಸು ಬಿಡದೆ 1 ಇಂದು ಸಾಧನವೆಂದು ತಿಳಿದು ನಿನ್ನಿಂದ ನೀನೇ ಹಿಗ್ಗಿ ಕುಗ್ಗಾದೀರು ಮಗ್ಗುಲೊಳಗಿದ್ದ ಮಧ್ವದ್ವೇಷಿ ಬಂದು ಮದ್ದು ಹಾಕಿ ಮಣಿಸೂವ ಮಧ್ವರಾಯರ ಪಾದಪದ್ಮದಲ್ಲಿ ಬುದ್ಧಿಯನಿಟ್ಟರೆ ಬಾಧೆಯ ತಪ್ಪಿಸಿ ಉದ್ಧರಿಸುವ ಮುದ್ದು ಮುಖದ ತಂದೆವರದಗೋಪಾಲ- ವಿಠಲರೇಯಾನವಲಿಸು ಬಿಡದೆ 2 ಅನಾದಿ ಕಾಲದಿಂದ ನಿಜ ಗುರುರಾಯನು ನಿನ್ನೊಳಿದ್ದು ಜನಿಸಿ ಬಂದ ಸಾಧನ ಬಿಟ್ಟು ಸುಖದುಃಖ ಜಲಮಯ ಸಂಸಾರದೊಳಗೆ ಬಿದ್ದು ಬಾಯ್ಬಿಡುವಿ ಕಂಡ್ಯಾ ಆ ಗುರುರಾಯರ ಮೂರುತಿ ನಿನ್ನೊಳು ನೋಡುತ್ತ ಪಾಡುತ್ತ ಸುಖಿಯಾಗಿ ಸಕಲ ಕರ್ಮಗಳಾಚರಿಸಿ ತದ್ವಾರ ನವನಿಧಿ ರಾಜನ ಚರಣಕ್ಕೆ ಆರೋಪಿಸೆ ಕೈಗೊಂಡು ಹೊಸಹೂವ ಸುಂದರ ಮೂರುತಿ ತಂದೆವರದಗೋಪಾಲವಿಠ್ಠಲರೇಯಾನ ನಿಲ್ಲಿಸೊ ಬಿಡದೇ 3 ಅವರ ಬಳಿಯಲ್ಲಿ ಪೋಗಿ ನೀನೂ ನಿನ್ನದು ಎನ್ನದಿರು ಕಂಡ್ಯಾ ಮುನ್ನ ನಿನಗೆ ಘನ್ನವಾದ ವೈರಾಗ್ಯ ಪುಟ್ಟುವಾದೂ ಇನ್ನು ನೀನು ಮನದಾಶೆ ಎಂಬ ಪಿಶಾಚೀಗೆ ಒಳಗಾಗಿ ಏನಾಹೋದೋ ನಿನ್ನ ಘಾಸಿಯನರಿತು ಕ್ಲೇಶಾಪಾಶಾಗಳಿದ್ಯಾಡಿಪಶುಪತಿಪಿತನ ಪಡೆದ ತಂದೆವರದಗೋಪಾಲವಿಠಲರೇಯಾನ ವಲಿಸೋ ಬಿಡದೆ4 ಸದಾಕಾಲದಲ್ಲಿ ಇವರ ಸ್ಮರಣೆ ಮಾಡಿ ಧ್ಯಾನಕೆ ತಂದು ಯೋಗಾದಿ ನೋಡುವಾದೆ ಮಹಾ ನಿಜವಾದ ಭಕುತಿ ಇವರ ಪಾದಸ್ಮರಣೆ ಮಾಡಾದ ಮನುಜರಿಗೆ ಶ್ರೀಪದ್ಮ ರಮಣಾನು ಸೃಷ್ಟಿಸೂವ ಆ ಮನುಜಗೋಸುಗ ನರಕ ನರಕಾದೊಳಗಿಟ್ಟು ಕುಟ್ಟುವ ಕ್ಷಣ ಬಿಡದೆ ಎಷ್ಟು ಮಾಡಿದರೇನು ಉತ್ತುಮೋತ್ತಮರೆಲ್ಲ ಸೋತ್ತುಮರಾಯರ ದ್ರೋಹಮಾಡಿ ತುತ್ತುತುತ್ತೀಗೆ ಹಾಕಿಸಿಕೊಂಡು ಕುತ್ತೀಗೆ ಕಟ್ಟಿ ನಿತ್ಯಾದಲ್ಲಿ ಸ್ಮರಣೆಯ ಮಾಡಿದರೆ ನೃತ್ಯವಾಗೈಸುವ ಭಕ್ತಾವತ್ಸಲ ತಂದೆವರದಗೋಪಾಲವಿಠಲರೇಯಾನ ನಿಲ್ಲಿಸೋ ಬಿಡದೆ 5 ಜತೆ :ನವವಿಧಭಕುತಿಯನ್ನೇ ಅರಿತು ಗುರುಪೂಜೆ ಮಾಡಲು ತದ್ವಾರಾ ವಲಿದಾ ತಂದೆವರದಗೋಪಾಲವಿಠ್ಠಲಾ 6
--------------
ತಂದೆವರದಗೋಪಾಲವಿಠಲರು
ಕೈವಲ್ಯ ಪಡೆವರು ಜನರು - ಹರಿ ಪ ಮೂರ್ತಿ ಶ್ರೀ ಚೆನ್ನಕೇಶವನ ಮನದೊಳಗಿಟ್ಟು ಅ ಹಗೆ ಮಾಡಬೇಡಕುಲದಲ್ಲಿ ಜನಿಸಿ ಕುಚೋದ್ಯ ಮಾಡಲುಬೇಡನಲಿದು ಹರಿಯ ಪೊಗಳದ ನಾಲಗೆಯು ಬೇಡ 1 ಮಂದಮತಿಗಳ ಕೂಡ ಮಹಕಥೆಯ ನುಡಿಬೇಡಯತಿಯಾದ ಮೇಲೆ ಸತಿಸುತರಾಸೆ ಬೇಡ..................................................................ಹಿತ ತಪ್ಪಿ ನಡೆವಂಥ ಹೆಂಡತಿಯು ಬೇಡ 2 ಕೆಟ್ಟು ಹೋದವರನ್ನು ತಿರುಗಿ ಕರೆತರಬೇಡಮುಟ್ಟಾದ ಮೇಲೆ ಮೋಹಿಸಿ ಕೂಡಬೇಡಭ್ರಷ್ಟನಾಡಿದನೆಂದು ಸಿಟ್ಟಿನಲಿ ನುಡಿಬೇಡಕಷ್ಟದೆಸೆಯೊಳು ಧೈರ್ಯ ಬಿಟ್ಟು ಕೆಡಬೇಡ 3 ಜಂಭ ಬೇಡ 4 ತೀರ್ಥ ಯಾತ್ರೆಗೆ ಪೋಗಿ ತಿರುತಿರುಗಿ ಬಳಲಿ ಕೃ-ತಾರ್ಥನಾದೆನು ಎಂಬ ಘನತೆ ಬೇಡಪಾರ್ಥಸಾರಥಿ ಕಾಗಿನೆಲೆಯಾದಿಕೇಶವನಸಾರ್ಥಕದಿ ಭಜಿಸಿ ಸುಖಿಯಾಗು ಮನುಜ 5
--------------
ಕನಕದಾಸ
ಗಜೇಂದ್ರ ಮೋಕ್ಷ ವರಶಂಖಗದೆ ಪದ್ಮಕರದಿ ಚಕ್ರವ ಪಿಡಿದ ಗರುಡಗಮನ ನಮ್ಮ ಕರಿವರದಹರಿಯನ್ನ ನಿರುತ ನೆನೆನೆನೆದು ಬದಿಕಿರಯ್ಯಾ ಪ ಹರಿಧ್ಯಾನ ಹರಿಸೇವೆ ಹರಿಭಕ್ತಿ ಹರಿಚರಿತೆ ದುರಿತದುರ್ಗಕೆಕುಲಿಶ ವರಮುಕ್ತಿಸೋಪಾನ ಕಾಣಿರಯ್ಯಾ ಅ.ಪ. ಕ್ಷೀರಸಾಗರ ಮಧ್ಯೆ ಗಿರಿತ್ರಿಕೂಟ ದೊಳಗೆ ಇರುವುದೂ ಋತುಮಂತ ವರುಣನ ವರವನವು ಅಲ್ಲಿ ಪರಿಪರಿಯ ಲತೆಬಳ್ಳಿ ಸರಸಸ್ಥಾನಗಳಲ್ಲಿ ಮೆರೆವೋರು ಸುರಸಂಘ ನಾರಿಯರ ಸಹಿತಾ 1 ಪದ್ಮಗಾಶ್ರಯವಾದ ಪದ್ಮಕೊಳಾದೊಳಗೆ ಮದಿಸಿದಾ ಗಜವೊಂದು ಐದಿತು ಪರಿವಾರ ಸಹಿತ ವಿಧಿಯ ಬಲ್ಲವರಾರು ಮುದದಿರ್ದ ಆ ಗಜಕೆ ವಿಧಿ ವಕ್ರಗತಿಯಿಂದ ಪಾದವನೆ ಪಿಡಿಯಿತು ನಕ್ರವೊಂದು 2 ಒಂದು ಸಾವಿರ ವರುಷ ಕುಂದದೆಲೆ ಕರಿಮಕರಿ ನಿಂದು ಹೊರಾಡೆ ಸುರವೃಂದ ಬೆರಗಾಯಿತು ಬಂಧು ಬಳಗವು ಮತ್ತೆ ಅಂದ ಹೆಂಡಿರು ಎಲ್ಲ ಕುಂದು ಅಳಿಸದೆ ಇರಲು ಛಂದದಲಿ ಯೋಚಿಸಿತು ಗಜವೂ 3 ಏನಿದ್ದರೇನಯ್ಯ ಶ್ರೀನಿವಾಸನಕೃಪೆಯು ಇನ್ನಿಲದಾಮೇಲೆ ಕುನ್ನಿಗೆ ಸರಿಎಂದು ಹೀನ ಎನ್ನಯ ಜನ್ಮ ದೀನ ಭಾವದಿ ಹರಿಯ ಮಾನವನು ಬದಿಗಿಟ್ಟು ಧ್ಯಾನಿಸಿ ಸ್ತುತಿಸಿದಾ 4 ಸತ್ಯಶಾಶ್ವತಭೋಕ್ತ ಸೃಷ್ಟ್ಯಾದಿಕರ್ಮವಿಗೆ ನಿತ್ಯ ತೃಪ್ತನು ಆದ ಶಾಡ್ಗುಣ್ಯಪರಿಪೂರ್ಣನೆ ವಂದಿಸುವೆನೋ ಓತಪ್ರೋತದಿ ಜಗದಿ ವ್ಯಾಪ್ತ ಆಪ್ತನು ಆದ ಆರ್ತದಲಿ ಕರೆವೆನೋ 5 ಎಲ್ಲಕಡೆಯಲಿ ಇರ್ಪ ಎಲ್ಲರೂಪವ ತಾಳ್ವ ಎಲ್ಲ ಪ್ರೇರಣೆಮಾಳ್ವ ಎಲ್ಲರಿಂ ಭಿನ್ನನಿಗೆ ವಂದಿಸುವೆನೋ ಎಲ್ಲರಿಂ ಉತ್ತಮಗೆ ಎಲ್ಲರಾ ಬಿಂಬನಿಗೆ ಎಲ್ಲರ ವಾಚ್ಯನಿಗೆ ನಲ್ಲನೆಂತೆಂದು ನಾಕರೆವೆನೋ 6 ಎಲ್ಲರನು ಗೆದ್ದವಗೆ ಎಲ್ಲರಾನಲ್ಲನಿಗೆ ಎಲ್ಲ ದೋಷವಿಹೀನ ಒಳ್ಳೆ ಗುಣ ಪೂರ್ಣನ ಕರೆವೆನೋ 7 ನಿನ್ನ ತಿಳಿದವರಿಲ್ಲ ನಿನ್ನ ಮೀರಿದುದಿಲ್ಲ ಜನನ ಮರಣಗಳಿಲ್ಲ ನಿನಗಿಲ್ಲ ಸಮ ಅಧಿಕ ವಂದಿಸುವೆನೋ ನಿನ್ನನಾಮಕೆ ಗುಣಕೆ ನಿನ್ನ ಅವಯವಕೆ ನಿನ್ನ ಕ್ರಿಯ ರೂಪಗಳಿಗೆ ಇನ್ನಿಲ್ಲವೊ ಭೇದಸಾರಿ ನಾಕರೆವೆನೋ 8 ವೇದಗಮ್ಯನುನೀನೆ ವೇದದಾಯಕ ನೀನೆ ವೇದಾತೀತನು ನೀನೆ ಸಾಧು ಪ್ರಾಪ್ಯನುನೀನೆ ವಂದಿಸುವೆನೋ ಖೇದವರ್ಜಿತನೀನೆ ಅಂದ ಸಾರವು ನೀನೆ ಬಂಧನೀಡುವ ನೀನೆ ಅದ್ಭುತ ಅಚಿಂತ್ಯಶಕ್ತಿವಂತನ ಕರೆವೆನೋ 9 ಜ್ಞಾನಿಗೋಚರನೀನೆ ಗುಣಾತೀತನು ನೀನೆ ಗುಣಪ್ರವರ್ತಕನೀನೆ ಅನಾಥ ಸರ್ವಸಮ ವಂದಿಸುವೆನೋ ಜ್ಞಾನದಾಯಕನೀನೆ ಆನಂದಮಯನೀನೆ ನೀನೇ ಸರ್ವಾಧಾರ ನೀನೆ ಏಕನು ಎಂದು ಕೂಗಿ ನಾಕರೆವೆನೋ 10 ಸಾಕಾರ ನಿರಾಕಾರ ಆಕಾರ ಅಹೇಯ ಓಂಕಾರ ವಾಚ್ಯನೆ ಸಾಕಲ್ಯಸಿಗದವನೆ ಸ್ವೀಕಾರ ಮಾಡೋ ವಿಕಾರ ವರ್ಜಿತನೆ ಲೋಕೈಕವೀರಾನೆ ನೀ ಕೆವಲನು ಮುಕ್ತೇಶ ಸಲಹೋ 11 ಏನು ಕೊಡಲೊ ದೇವ ದೀನನು ನಾನಯ್ಯ ನಿನ್ನದೇ ಈ ಭಾಗ್ಯ ಮನ್ನಿಸುತ ದಯಮಾಡಿ ಸಲಹೋ ಘನ್ನಕರುಣಾಳುವೆ ಅನ್ಯರನು ನಾ ನೊಲ್ಲೆ ನಿನ್ನವನು ನಿನ್ನವನೋ ನಿನ್ನ ಚರಣಕೆ ಶರಣು ಶರಣೂ 12 ಕರಿ ತಾನು ಮೊರೆಯಿಡುತ ಕೂಗಲು ಸುರವೃಂದ ಯೋಚಿಸುತ ಹರಿಯಲ್ಲದನ್ಯತ್ರ ಅರಿಯೆವೀಗುಣವೆಂದು ಅರಿತು ಸುಮ್ಮನಿರಲೂ ಹರುಷದಿಂದಲಿ ಹರಿಯು ಗುರುಡನೇರುತ ಬರಲು ತರಿದು ನಕ್ರನ ಭರದಿ ಕರಿಯಪೊರೆಯೆ ಆದ 13 ಏನೆಂದು ವರ್ಣಿಸಲಿ ಶ್ರೀನಿವಾಸನ ಕರುಣ ದೀನ ಭಕ್ತರ ಮೇಲೆ ಸಾನುರಾಗದಿ ಕರಿಯ ಹಿಡಿದೆತ್ತಿದಾ ಇನ್ಯಾಕೆ ಭಯವಯ್ಯ ಘನ್ನ ಇಂದ್ರದ್ಯುಮ್ನನೆ ಏಳು ಮುನ್ನಿನಾ ದೋಷವಿದು ಇನ್ನು ನೀ ಧನ್ಯನಹುದೋ 14 ದೇವಲನ ಶಾಪದಲಿ ಆ ವರ ನಕ್ರನಾಗಿದ್ದ ಶ್ರೀವರನ ಭಕ್ತ ಹೂಹೂ ಗಂಧರ್ವನೆರಗಿ ಬಿದ್ದನು ಹರಿಗೇ ದೇವೇಶ ಹುಸಿನಗುತ ಈವೆ ವರವನು ಕೇಳಿ ಯಾವಾತ ಈ ಕಥೆಯ ಭಾವಶುದ್ಧದಿ ಭಜಿಸೆ ಉದಯದಲಿ ನಾ ಒಲಿವೆ ತವಕದಲಿ ಎಂದನೂ 15 ಹರಿಗೆ ಸಮರಾರಿಲ್ಲ ಹರಿಭಕ್ತ ಗೆಣೆಯಿಲ್ಲ ಸುರರು ಮೊರೆಯಿಟ್ಟರಾಗ ಹರಿವಾಯುಗುರುಗಳು ಕರುಣದಿಂದಲಿ ಇದನು ಮನ್ನಿಪುದು ಬುಧರೂ 16 ಮುದ್ದುಜಯತೀರ್ಥರ ಹೃದಯದಲಿನಲಿಯುವ ಮಧ್ವಾಂತಃಕರಣದಿ ಮುದ್ದಾಗಿ ಕುಣಿಯುವಂಥ ಮಾಧವ ಶ್ರೀಕೃಷ್ಣವಿಠಲರಾಯನು ಬೇಗ ಮೋದ ಸುರಿಸುವ ಈ ಪದವ ಪಠಿಸಲೂ 17
--------------
ಕೃಷ್ಣವಿಠಲದಾಸರು
ಗುರು ಎಂಥಾ ಗಾರುಡಿಗಗುರುವಿನ ನಂಬಿ ಗುಣವೆಲ್ಲ ಕಳಕೊಂಡೆ ಪ ಶರಣು ಮಾಡೆಂದರೆ ಶರಣು ಮಾಡುತ್ತಲಿರ್ದೆಕರದಲ್ಲಿ ಏನಿತ್ತೋ ಜವೆಯ ಬೂದಿಶಿರದ ಮೇಲೆನ್ನ ಮೈಮೇಲೆ ಎಳೆಯಲು ಶರೀರವಮರೆತೆನೆ ಇದಕೆ ಸಾಕ್ಷಿಯಾದನೆ ಗುರು 1 ಆರು ಇಲ್ಲದುದ ನೋಡಿ ಬೇರೆನ್ನ ಕರೆದೊಯ್ದುಮೋರೆಯನು ಕಿವಿಯೊಳಗಿಟ್ಟು ಮಂತ್ರಿಸಿದನಾರಿ ಬದುಕು ಮನಮಕ್ಕಳನೆಲ್ಲವಸೇರಿ ಸೇರದಂತೆ ಮಾಡಿದನೆ ಗುರು2 ಭವಗೇಡಿ ಕುಲಗೇಡಿ ಸಂಗಗೇಡಿಯಾದೆಇವನ ವಿಶ್ವಾಸದ ಫಲದಲಿಂದಇವನ ಮೇಲೆ ಎನ್ನ ವ್ಯಾಕುಲ ಹತ್ತಿದೆವ್ಯವಹಾರವೆಂಬುದು ಎಡವಟ್ಟಾಯಿತು3 ಮಂತ್ರಿಸಿದ ಕ್ರಿಯೆ ಮರಳಲೀಯದೆ ಎನ್ನಮಂತ್ರ ತಂತ್ರಕ್ಕದು ಬಗ್ಗಲಿಲ್ಲಮಂತ್ರದ ಮಹಿಮೆಯು ಮಹಾಮಹಿಮೆಯುಮಾಂತ್ರಿಕರೊಳಗೆ ದೊಡ್ಡವನಹುದೋ ಗುರು 4 ಇವನ ನಂಬಿದ ಮೇಲೆ ಇವನಂತಲ್ಲದೆಭುವನಕ್ಕೆ ತಿರುಗಿ ತಾ ತಾರೆನೆವಿವರಿಸೆ ಹುರುಳಿಲ್ಲ ಹೇಳಿ ಕೇಳೋದೇನುಭುವನ ರಕ್ಷಕ ಚಿದಾನಂದನೆ ಗುರು 5
--------------
ಚಿದಾನಂದ ಅವಧೂತರು
ಗುರುವರನನು ಭಜಿಪೆ ಶ್ರೀ ಶೃಂಗೇರಿ ಗುರುವರನನು ಭಜಿಪೆ ಪಪರಮ ಪಾವನನಾದ ಗೂಢತತ್ವವನೊರೆವನರಸಿಂಹಭಾರತಿ ಗುರುವರನನು ಭಜಿಪೆ ಅ.ಪಸ್ವರ್ಣಪೀಠದಿ ಕುಳಿತು ಸ್ವರ್ಣಾಂಬರವ ಪೊದ್ದುಚಿನ್ಮುದ್ರೆಯನು ಧರಿಸಿ ಪನ್ನಗಭೂಷಣ ಪರಶಿವನಂದದಿತನ್ನ ಭಕ್ತರ ಕರೆದು ಛಿನ್ನಸಂಶಯರಮಾಳ್ಪ 1ಮಣಿಮಯ ಮಕುಟವ ಮಸ್ತಕದೊಳಗಿಟ್ಟುಮಣಿಮಾಲಿಕೆಯ ಧರಿಸಿ ದಿನಮಣಿಶತತೇಜವನು ಬೆಳಗುತ್ತ ತಾನುಘನ ಶಾಸ್ತ್ರಮಾರ್ಗವನನುವದಿಸುತಲಿಹ 2ಚಂದ್ರಗಾ'ಯನುಟ್ಟು ಚಂದ್ರಮೌಳೀಶ್ವರನಛಂದದಿ ಪೂಜಿಸುತ ಸಿಂಧುಜಾ ಧವನಾದ ತಂದೆ ವೇಂಕಟಪತಿಯಂದದಿ ದಾಸಗಾನಂದವನಿತ್ತು ಪೊರೆವ 3
--------------
ನಾರಾಯಣದಾಸರು
ಗೋಪಸತಿಯರೆಲ್ಲ ಕೇಳೆರೆನ್ನಯ ಮಾತ ಪರಿ ಕೂಸಿನ ಕಂಡೀರ್ಯಾ ಪ ತೊಟ್ಟಿಲೊಳಗಿಟ್ಟು ವತ್ತಿ ಮಾತಾಡದೆ ಮುಟ್ಟದೆ ಉಣಲಿಕ್ಕೆ ಕುಳಿತಿರಲು ಚಿಟ್ಟಕ್ಕಿ ಚೀರೆದ್ದು ಭೇಟಿ ತಾನಳುತಿಹ ಹೊಟ್ಟಿ ತುಂಬಾ ಉಣಲೀಸ ಎಷ್ಟೆಂದೇಳಲೆ ನಾನು 1 ಬಣ್ಣಿಸಿ ಬಣ್ಣಿಸಿ ಪದವ ಪಾಡಿ ತೂಗಿ ಥಣ್ಣಾಗೆ ಬೀಸಿ ಬೀಸಣಿಕೆಯಲಿ ಕಣ್ಣ ಮುಚ್ಚಿಸಿದೆವೆಂದರಿತು ಸುಪ್ಪಾಣಿಸೆ ಅಣ್ಣ ತಾನೇಳುವ ನಿದ್ರೆಗೈಯ್ಯಲೀಸ 2 ಅನಿಮಿಷರಾದೆವೆ ಅನಶನರಾದೆವೆ ಮನಸು ಕೂಸಿನಲ್ಲೆ ನಟ್ಟಿಹುದೆಮಗೆ ಮನೆಕೆಲಸಗಳಲ್ಲ ಎಲ್ಲಿವೆ ನಮಗಿನ್ನು ತನಯ ಪುಟ್ಟಿದ ಪುಣ್ಯದಿಂದಲ್ಲಿನ್ನೇನೆಂಬೆ 3 ಚಿಕ್ಕವರೊಳು ಪೋಗಿ ಮಕ್ಕಳಾಟಿಕೆ ಆಡಿ ಲೆಖ್ಖವಿಲ್ಲದ ದೂರು ಘಕ್ಕನೆ ತರುವ ರಕ್ಕಸರೆನÀಲು ತಾ ಲೆಕ್ಕಿಸದವರ ಸೊಕ್ಕು ಮುರಿವನಿವನಕ್ಕೊಜಾಕ್ಕೇನೆಂಬೆ4 ದೇವತೆಗಳ ಮೀಸಲಾವಾಗ ಮೆಲುವನು ಸೇವಕರಂತಲ್ಲೆ ತಾವಾ ಹೊರೆ ದಾವಾದಿ ಭಯದಿಂದ ಕಾವಾನೀತನೆ ವಾಸು - ದೇವಾವಿಟ್ಠಲನೆಂದು ಭಾವಿಸಿ ತಿಳಿವೆನು 5
--------------
ವ್ಯಾಸತತ್ವಜ್ಞದಾಸರು
ಗೋಪಾಲದಾಸರು ಕರದಾಗ ಬಾರದೇ ವೈದುಗ ಬಂದು ಬೋಧಿಸಿ ಮಾರ್ಗವ ತೋರಿಸಿ ಹೃದಯದಿ ಪಾದನಿಲ್ಲಿಸಿ ಮಂದನ ಪೋಷಿಸಿ ಭಂಗವ ಬಿಡಿಸುತಾ ಮಂಗಳ ಮೂರುತಿ ನಿನ್ನ ಮಹಿಮೆಗೆಣೆಗಾಣೆ ಧವಳ ಗುಣವಂತ ತಂದೆವರದಗೋಪಾಲವಿಠಲರೇಯನ ದಾಸನೆಂದೆನಿಸದೆಯನ್ನ 1 ವೈರಿ ಬನ್ನ ಭವ ಬನ್ನ ಪಡುತಿರೆ ಕಣ್ಣು ಕಾಣದೆ ಕರುಣವ ಬೀರುತ ಪಾಣಿಯ ಪಿಡಿದು ವೀಣಾವನಿತ್ತು ಗಾನವ ಪೇಳಿ ಗುಣವಂತನೆಂದೆನಿಸಿದೇ ಎನ್ನ ಅಣ್ಣಾ ಅಣ್ಣಾ ಭಾಗಣ್ಣ ಗಜಮುಖ ರೂಪದಿ ಬಂದು ಪಾಲಿಸಿದೈನಿನ್ನಾ ಕರುಣಾರಸಕೆಣೆಯುಂಟೆ ಯೆಣೆಯುಂಟೆ ನಿನ್ನ ದೇನಿಪರೊಳಗಿಟ್ಟುಶಿರಿಯರಮಣ ತಂದೆವರದಗೋಪಾಲನ ತೋರೋ 2 ನೂರಾರು ಸಾವಿರ ನಾರಿಯರೊಡಗೂಡಿ ಬೆಡಗು ಮಾಡೆ ನಾರಿಯಾಗಿ ನಿನ್ನಡಿಗಳ ಪೂಜಿಸಿ ಗರುಡನಂತೆ ನನ್ನ ಹೆಗಲೀನ ಕೂಡಿಸಿಕೊಂಡುತಿರುಗುವೆ ನೀತಿ ಕಪಿಯಂತೆ ನಿನ್ನ ಕಪ್ಪಾದಿ ವಲಿಸುವೆ ಕಮತವ ಮಾಡಿಸಿ ಮರ್ಮವ ಘಾಡಿಸಿ ಶರ್ಮವ ಗೂಡಿಸಿ ಚರ್ಮವ ತೊಡಿಸಿ ಕರ್ಮವ ಕೆಡಿಸಿಮೃಡನೊಡೆಯ ವಂದಿತ ತಂದೆವರದಗೋಪಾಲವಿಠಲನಡಿಗಳ ಧೇನಿಸುವಂತೆ ಮಾಡೋ 3 ಅಂಬರ ಭೋಜನೆ ಕಂಬುಕಂಧರನಿಂದ ಡಿಂಗರಪಾಲಿಪ ಡಿಂಬದಿ ಪೊಳೆಯುವಅಂಬಾರಮಣಸುತ ಭೀಮಾಂತರ್ಯಾಮಿ ತಂದೆವರದಗೋಪಾಲ ವಿಠಲನ ನಿಜ ಕೊಂಡಾ 4 ನಿಗಮ ನಿಧಿ ಕೃಷ್ಣಾಂತರ್ಯಾಮಿ ಲಕುಮಿ ಅರಸತಂದೆವರದಗೋಪಾಲವಿಠಲನ ವಾರಿಜದಲ್ಲಿ ತೋರೋ 5 ಜತೆ :ಆವಾಗ ಬಂದು ನೀ ಕಾವದಿರೇ ಸೇವಕನಾಗಲ್ಯಾಕೋ ಭಾವಜಪಿತ ತಂದೆವರದಗೋಪಾಲವಿಠಲರೇಯನ ದೂತ
--------------
ತಂದೆವರದಗೋಪಾಲವಿಠಲರು