ಒಟ್ಟು 80 ಕಡೆಗಳಲ್ಲಿ , 36 ದಾಸರು , 76 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಗಿಣಿ ತೀರದ ಯೋಗಿವರ್ಯ ಗುರುವೇ | ನಿನ್ನಲಿ ಮೊರೆಯಿಡುವೆ ಪ ಭೋಗಿಶಯನ ಗುಣ ಯೋಗದಿಂದ ಭಜಿಪಾ | ಹರಿ ಪದಾಬ್ಜ ಮಧುಪಾ ಅ.ಪ. ಸಿಂಗರವೆನಿಸಿದ ಮಂಗಳವೇಡಿಯಲಿ |ನೀನುದಿಸುತಲಲ್ಲೀಸಿಂಗರಿಸಿಹ ಬಲು ರಂಗ ಕುದುರೆ ನೇರಿ | ರಾವುತರೊಡಸೇರೀ ||ಕಂಗೆಡುತಲಿ ಬಲು ತುಂಗೆ ಕಾಗಿಣೀಯಾ | ಸಾರುತ ತನಹಯಾ ಹಿಂಗದೆ ನದಿಯಲಿ ಮಂಗಳ ಹಯವೇರಿ | ನೀರ್ಗುಡಿದ ಬಾಯಾರಿ 1 ಆಚೆ ತಟದಿ ಅಕ್ಷೋಭ್ಯಮುನಿಪ ನೋಡಿ | ಸ್ವಪ್ನದರ್ಥ ಮಾಡೀಸೂಚಿಸಿದನು ತವ ಶಿಷ್ಯನ ಕೈಯಲ್ಲೀ | ಬಂದ ಸಾದಿ ಅಲ್ಲೀ ||ಯಾಚಿಸಿದನು ಮುನಿ ಪದಕೇ ಬಾಗೀ | ತುರ್ಯಾಶ್ರಮಕಾಗೀಖೇಚರ ವಹನಾಜ್ಞೆಯೆಂದು ತ್ವರ್ಯಾ | ಮಾಡ್ದ ಸಾದಿ ಯತಿಯಾ 2 ತಂದೆ ಬಹು ಕೋಪದಿಂದ ಬಂದೂ | ಯತಿಯ ನಿಂದಿಸ್ಯಂದೂತಂದು ಮಗನ ಏಕಾಂತ ಗೃಹಕೆ ಆಗ | ಸತಿಯನು ಕೂಡಿಸಿ ವೇಗ ||ಅಂದು ಕಂಡು ಸರ್ಪಾಕೃತಿ ಪತಿಯಾ | ಚೀರಿದಳ್ ಬಲ್ಪರಿಯಾತಂದೆ ಕೊಂಡು ಮಗನರ್ಪಿಸಿದನುಯತಿಗೇ | ಕ್ಷಮೆ ಬೇಡಿದನಾಗೇ 3 ತ್ರ್ಯಕ್ಷನಂಶ ಅಕ್ಷೋಭ್ಯ ಮುನಿಪ ಆಗ | ಸನ್ಯಾಸ ವೇಗಭಿಕ್ಷುಕ ಮಧ್ವರ ಗ್ರಂಥ ಪೊತ್ತ ವೃಷಭ | ಎನುತೀತನ ಪ್ರಭಾ ||ಲಕ್ಷಿಸಿವರ ಕರೆದನೂ ನಾಮಾನ್ವರ್ಥ | ಯತಿಯನೆ ಜಯತೀರ್ಥಕುಕ್ಷಿಲಿ ಮೆರೆವರಗೋಳ ಗುಹೆಯು ಅಲ್ಲೀ | ರಚಿಸಿದ ಟೀಕೆಗಳಲ್ಲೀ4 ಮಧ್ವಭಾಷ್ಯಕೇ ರಚಿತ ಟೀಕಾ ಗ್ರಂಥಾ | ನೋಡಿದ ಮುನಿ ಮತ್ತವಿದ್ಯಾರಣ್ಯರ ಗೆದ್ದ ಆರ್ಯ ಧೀರಾ | ಅಕ್ಷೋಭ್ಯರ ಕುವರ ||ಅದ್ವೈತಾದಿಗಳೇಕವಿಂಶ ಪಂಥ | ಗೆಲ್ಲುತ ಸುಧೆ ಗ್ರಂಥಅದ್ವಿತೀಯ ಗುರುಗೋವಿಂದ ವಿಠ್ಠಲಗೇ | ಅರ್ಪಿಸಿದನು ಆಗೇ 5
--------------
ಗುರುಗೋವಿಂದವಿಠಲರು
ಕಾಯ ಕರವ ಪಿಡಿಯೊ ಗೋಪಾಲ ಪ ಜಾಳು ಜೀವನದ ಗೋಳಿಗೆ ಸಿಲುಕಿದೆ ಕೇಳುವರುಂಟೆ ದಯಾಳು ನೀನಲ್ಲದೆ ಅ.ಪ ತನುಬಲ ಧನಬಲ ಜನಬಲವೆಲ್ಲವು ಅನುಸರಿಸುವುವೇ ಕೊನೆತನಕ ಧನವು ತಪ್ಪಿದರೆ ಜನರು ತ್ಯಜಿಸುವರು ಜನಕ ನೀನಲ್ಲದೆ ಪೊರೆವರ ಕಾಣೆನೊ 1 ಸಟೆಯನಾಡುವುದು ದಿಟವ ತೊರೆಯುವುದು ಕಟುತರ ವಚನಕೆ ನಗುತಿಹುದು ಕಪಟ ಜೀವನವು ತುಟಿಯ ಮೀರಿದ ದಂತಗಳಂತಿರುವುದು 2 ನಿಮಿಷದ ಸೌಖ್ಯಕೆ ವರುಷದ ಕ್ಲೇಶವು ಪುರುಷ ಜೀವನವಿದು ಧರೆಯೊಳಗೆ ಪುರುಷೋತ್ತಮನೆ ಪ್ರಸನ್ನ ಹೃದಯನಾಗಿ ಕಲುಷರಹಿತವಾದ ಹರುಷವÀ ನೀಡೆಲೋ 3
--------------
ವಿದ್ಯಾಪ್ರಸನ್ನತೀರ್ಥರು
ಕಾಲವೆಂತು ಕಳೆಯಲೆನ್ನಯ್ಯ ಪ ಕಾಲಕಳೆಯಲೆಂತು ನಾನು ತಾಳಿಮೂಗುತಿ ಕಾಣದೊನಿತೆಯ ಹಾಳುಮುಖವ ನೋಡೆವೆಂದು ಶೀಲಮುತ್ತೈದೇರ್ಹಳಿಯುತಿಹ್ಯರು ಅ.ಪ ಏಳುಸುತ್ತಿನಕೋಟಿ ಪಟ್ಟಣದಿ ಖೂಳರುಪಟಳ ಹೇಳಲಳವಲ್ಲ ಸೇರಿ ವಿಧ ವಿಧದಿ ದಾಳಿನಿಕ್ಕಿ ಹಾಳು ಮಾಡ್ವರು ಮನಕೆ ಬಂದತೆರದಿ ಗೋಳು ಕೇಳುವರಿಲ್ಲವೋರ್ವರು ತಾಳೆನೀಬಾಧೆ ಶೀಲದೆನ್ನ ಬಹು ಜೋಕಿಯಿಂ ಮೇಲ್ಮಾಲಿನೋಳಿಟ್ಟು ಆಳುವಂಥ ಮೂಲಪುರಷನಿಲ್ಲದಿನ್ನು 1 ಆರು ಕೇಳುವರಿಲ್ಲ ಇವಳಿಗೆಯೆನುತ ಕೀಳ ಮೂರು ಮಂದಿ ಊರ ಬೀದಿಯೊಳಗೆ ದಾರಿ ತರುಬಿ ಸಾರಿ ತರಿವರು ಮಾರಕೇಳಿಗೆ ಸೈರಿಸಲಿ ಹ್ಯಾಗೆ ಚೋರನೋರ್ವನು ಮೀರಿ ಬಾಧಿಪ ಆರು ಮಂದಿ ಬಿಡದೆ ಎನ್ನನು ಘೋರಿಸುವರು ನಾನ ವಿಧದಿ ಪಾರುಗಾಣೆನು ವ್ರತದಿ ಇನ್ನು 2 ಪತಿಯು ಇಲ್ಲದ ಜನ್ಮವ್ಯಾತಕ್ಕೆ ಕ್ಷಿತಿಯಮೇಲೆ ಸತಿಗೆ ಪರಮ ಗತಿಯ ಕೊಡಲಿಕ್ಕೆ ಪತಿಯೆ ಬಾಧ್ಯ ಇತರರು ಕಾರಣಲ್ಲ ಕಾಯಕ್ಕೆ ಜತನ ಗೈಲಿಕ್ಕೆ ಪ್ರಥಮ ಮುತ್ತಿನ ಮೂಗುತಿಯನು ಹಿತದಿ ಕರುಣಿಸಿ ಪತಿಯಾಗೆನಗೆ ಗತಿಯ ನೀಡಿ ಹಿತದಿಂ ಸಲಹು ಪತಿತ ಪಾವನೆನ್ನ ಪ್ರಾಣ ಶ್ರೀರಾಮ 3
--------------
ರಾಮದಾಸರು
ಗಂಗೆ ನಿನಗೋಸ್ಕರ ನಾನು ನಮೋ ಎಂಬೆತುಂಗೆ ಎನ್ನ ಪಂಥವ ಕೇಳಿ ಗೆಲಿಸೆಂಬೆ ಪ. ಅಚ್ಯುತನ ನಖತಾಕಿ ಬಿಚ್ಚಿ ಬ್ರಹ್ಮಾಂಡವುಸ್ವಚ್ಚಜಲವಾಗಸುರಿದಾವುಸ್ವಚ್ಚ ಜಲವಾಗ ಸುರಿದಾವುಅಜನೋಡಿ ಉತ್ಸಾಹದಿ ನುತಿಸಿದ1 ತಂದೆಯ ನಖದಿಂದ ಬಂದ ಜಲಕಂಡು ಮಂದಜಾಸನು ಸ್ತುತಿಸಿದಮಂದಜಾಸನು ಸ್ತುತಿಸಿದ ಸರಸ್ವತಿಬಂದು ಆರುತಿಯ ಬೆಳಗೋಳು 2 ತುಂಬಿ ಭೂಮಂಡಲ ಪತಿಯ ಚರಣವಭೂಮಂಡಲ ಪತಿಯ ಚರಣವ ತೊಳೆಯಲುಕೊಂಡಾಡಿ ಹರನು ಧರಿಸಿದ 3 ರೇಣು ರೇಣು ಹರಿದಿಲ್ಲಿ ಬಂತೆಂದುಸುರರು ಸಂತೋಷಪಡುತಲಿ4 ವಿಷ್ಣುಪದಿಯೆಂದು ಇಟ್ಟರು ನಾಮವಧಿಟ್ಟ ರಾಮೇಶನ ಮಗಳಿಗೆ ಧಿಟ್ಟ ರಾಮೇಶನ ಮಗಳಿಗೆ ಧೃವರಾಯಎಷ್ಟು ಭಕ್ತಿಂದ ಸ್ತುತಿಸಿದ 5
--------------
ಗಲಗಲಿಅವ್ವನವರು
ಘೋರವಿದು ಮಹ ಘೋರವಿದು ಸಂ ಸಾರದ ನೆಲೆ ದಾರಿಗರಿತಿಹ್ಯದು ಪ ತೋರದೆ ಮೂಜಗ ಹಾರೈಸಿದನು ದು:ಖ ವಾರಿಧಿಯೊಳು ಘೋರ ಬಡುತಿಹ್ಯದು ಅ.ಪ ಪರಮೇಷ್ಠಿ ಶಿರವಂದು ತೆಗೆಸಿಹ್ಯದು ಮುರಹರನನು ಸುಡುಗಾಡು ಹೊಗಿಸಿಹ್ಯದು ಸಿರಿವರ ಹರಿಯನು ಪರಿಪರಿ ಜನುಮವ ಧರಿಸುತ ಧರೆಮೇಲೆಳೆಸಿಹ್ಯದು 1 ಚಂದ್ರಗೆ ಕುಂದುರೋಗ್ಹಚ್ಚಿಹ್ಯದೋ ಬಲು ಮೇಂದ್ರ ಸೂರ್ಯನ ಪೊಲ್ಲ ಕಳಚಿಹ್ಯದು ಇಂದ್ರನ ಅಂಗಾಂಗ ಸಂದು ಬಿಡದಲತಿ ರಂಧ್ರಗೊಳಿಸಿ ಹೇಯ ಸುರಿವುವುದು 2 ಕಾಲ ತಂದಿಹ್ಯದು ಪಾ ತಾಳಕೆ ಬಲಿಯನು ಇಳಿಸಿಹ್ಯದು ವಾಲಿಯ ನಿಗ್ರಹ ಮಾಡಿಸಿ ಲಂಕೆಯ ಪಾಲದಶಕಂಠನ ವಧಿಸಿಹ್ಯದು 3 ಪರಮ ಪಾಂಡವರನ್ವನಕೆಳಸಿಹ್ಯದು ಆ ಕುರುಪನ ಕುಲನಾಶ ಮಾಡಿಹ್ಯದು ಪರಮ ತ್ರಿಪುರ ಶಿರಸೆರೆ ಸೂರೆಮಾಡಿಸಿ ಸುರನಿಕರರಿಗ್ಹಂಚಿಕೊಟ್ಟಹ್ಯದೊ 4 ಹಿರಿಯರನೀ ಪಾಡ ಪಡಿಸಿಹ್ಯದು ಈ ಮರುಳ ನರರ ಪಾಡೇನಿಹ್ಯದು ಗುರುವರ ಶ್ರೀರಾಮನೋರ್ವನ ಹೊರತಾಗಿ ಸರುವ ಜಗವ ಗೋಳಾಡಿಸಿಹ್ಯದು 5
--------------
ರಾಮದಾಸರು
ಚಿಂತೆ ಮಾಡುವುದ್ಯಾಕೆ ಮನವೆ ನೀನು ಕರ್ಮ ಎಂದಿಗಾದರೂ ಬಿಡದು ಪ ಮಗÀನಾರು ನೀನಾರು ಪೇಳೊ ಸಿದ್ಧ ನಿಗಮಾರ್ಥಗಳಿಂದ ಸಜ್ಜನರ ಕೇಳೊ ತಗಿದು ಕಳಿ ಶೋಕದ ಗೋಳು ನಿತ್ಯ ನಗಧರನ ಭಕ್ತಿಯಲಿ ಸುಖದಲ್ಲಿ ಬಾಳೋ 1 ಸಾಹನಶಕ್ತಿಯನ್ನು ಮಾಡೊ ಬರಿದೆ ಸ್ನೇಹ ಮಾಡಿದರಿಂದ ಜ್ಞಾನಕ್ಕೆ ಕೇಡು ತಾಹಾದು ಸ್ಥಿರವೆಂದು ನೋಡೊ ನೀನೂ ಮಾಹಪದವಿಗೆ ಬಂದೆ ಸುದೃಢವೆ ಬೇಡು2 ವಿರಕ್ತಿ ತೊಡು ತೊಡು ಬಿಡದೆ ಎಂದು ಸಾರಿದೆ ಪೇಳಿ ಧರ್ಮದಲಿನ್ನು ನುಡಿದೆ ವಾರವಾರಕೆ ಹೀಗೆ ಕೆಡದೇ ಶ್ರಿಂ ಗಾರ ಶ್ರೀ ವಿಜಯವಿಠ್ಠಲಲೆನ್ನು ದು:ಖಬಡದೆ 3
--------------
ವಿಜಯದಾಸ
ಜಯ ಮಂಗಳಂ ಸತ್ಯಧೀರತೀರ್ಥರಿಗೆ ಶುಭಮಂಗಳಂ ಯತೀ ಗುಣಮಣಿಗೆ ಪ ಜಗದುದರಧರನಾದ ಜಗವ ಸೃಷ್ಟಿಸಿದಂಥ ಜಗವ ಪಾಲಿಸುವ ಶ್ರೀ ಜಗದೀಶನಾ ತ್ರಿಗುಣಮಾನಿಯಳಿಂದ ಬಗೆ ಬಗೆಯ ಸ್ತುತಿಗೋಳ್ವ ರಘುವರನ ದಿವ್ಯ ಚರಣಗಳ ಸೇವಿಪಗೆ 1 ಜಗದೀಶನಾಜ್ಞೆಯಿಂ ಜಗಕೆ ಗುರುವೆನಿಸಿ ನಾ- ಲ್ಮೊಗನೈಯ್ಯ ಸರ್ವಪರಿಹಾರನೆನಿಸಿದವಗೆ ಜಗದೊಳಿರುವ ಅಜ್ಞ ಜನರುಗಳಿಗೆ ಪಂಚಮು- ದ್ರೆಗಳನೇ ಇತ್ತು ಪಾಪಗಳ ತರಿದವಗೆ 2 ಸತ್ಯವೀರರು ಕರಗಳೆತ್ತಿ ಉತ್ತಮಪದವ ಇತ್ತದ್ದೆ ಪುಸಿಯೆಂದು ನುಡಿದವರ ಮುಖಕೆ ಮೃತ್ತಿಕೆಯನು ಹಚ್ಚಿ ಹತ್ತುಯಂಟೋ ರೂಪ ಸ- ರ್ವೋತ್ತಮನ ಪೂಜಿಸಿದ ಸತ್ಯಧೀರರಿಗೆ 3 ಪುರಕಾಶಿಯಿಂದ ರಾಮೇಶ್ವರದ ಪರಿಯಂತ ಇರುವ ಕ್ಷೇತ್ರಗಳಲ್ಲಿಯ ಮಹಿಮೆಯಾ ದುರುಳ ಕಲಿಯಲಿ ಕಡಿಮೆಯಾಗಬಾರದು ಮನುಜ ಸಿರಿರಾಮನಾಶ್ರಯದಿ ಜನಿಸಿ ಬಂದವಗೆ 4 ಕರುಣಾಸಾಗರನಿಗೆ ಕರೆದಲ್ಲಿ ಬರುವಗೆ ಶರಣುಬಂದವರ ಪರಿಪಾಲಿಸುವಗೆ ವರಗುರು ಮಧ್ವರಾಯರ ಪೀಠಪಾತ್ರಗೆ ಧೀರ ಹನುಮೇಶವಿಠಲ 5
--------------
ಹನುಮೇಶವಿಠಲ
ತ್ರ್ಯಕ್ಷಾಂಶ ಸಂಭೂತ | ಅಕ್ಷೋಭ್ಯ ಕರಜಾತಕುಕ್ಷಿಯೊಳಗೆ ಖ್ಯಾತ | ಟೀಕಾರ್ಯರೆಂಬಾತ ಪ ಮರುತ ಮತಾಬ್ಧಿ ಸೋಮ | ಹರಿಗುಣ ಗಣಸ್ತೋಮಬರೆದು ವಿಬುಧಸ್ತೋಮ | ಪೊರೆದ ನಿಸ್ಸೀಮಾ ಅ.ಪ. ಎರಗೋಳ ಗುಹೆಯಲ್ಲಿ | ಮರುತ ಮತ ಗ್ರಂಥದಲಿನಿರುತ ಬಹು ಆಸಕ್ತ | ಟೀಕೆಗಳ ಕರ್ತಾ 1 ವೃಷಭದಾಕೃತಿ ಧರಿಸಿ | ಅಸುಪತಿಯ ಸೇವಿಸೀಎಸೆವ ಗ್ರಂಥಗಳ್ಹೊತ್ತು | ಜನ್ಮ ಸ್ಮøತಿ ಪೊತ್ತೂ 2 ಭೋಗಿ ಆವೇಶಿತನೆಯೋಗಿ ಕುಲ ಕಮಲಾಪ್ತ | ಮಾಯಿ ಮತ ಹರ್ತಾ 3 ವೇನ ಮತ ದುಧ್ರ್ವಾಂತ | ಕಳೆಯಲ್ಕೆ ಸುಧೆ ಗ್ರಂಥಜ್ಞಾನ ಸೂರ್ಯನೆ ಇತ್ತೂ | ಕಳೆದೆ ಆಪತ್ತೂ4 ಗೋವುಗಳ ಪಾಲ ಗುರು | ಗೋವಿಂದ ವಿಠಲದೇವ ಗುಣಗಳ ಜಾತ | ಬರೆದ ವಿಖ್ಯಾತಾ 5
--------------
ಗುರುಗೋವಿಂದವಿಠಲರು
ದಯದಿ ಎಮ್ಮನು ಸಲಹ ಬೇಕಯ್ಯ | ಮಳಖೇಡ ನಿಲಯ ದಯದಿ ಎಮ್ಮನು ಸಲಹ ಬೇಕಯ್ಯ ಪ ದಯದಿ ಎಮ್ಮನು ಸಲಹ ಬೇಕೈ | ವಿಯದಧಿಪ ಸದ್ದಂಶ ಸಂಭವ ಭಯ ವಿದೂರನ ತೋರು ಎನುತಲಿ | ಜಯ ಮುನೀಂದ್ರನೆ ಬೇಡ್ವೆ ನಿನ್ನನು ಅ.ಪ. `ಇಂದ್ರಸ್ಯನು ವೀರ್ಯಾಣ’ ಎಂದೆನುತ | ಇತ್ಯಾದಿಋಕ್ಕುಗಳಿಂದ ಬಹುತೆರೆ ನೀನು ಪ್ರತಿಪಾದ್ಯ ||ಅಂದು ಮೇಘದ ಜಲವು ಬೀಳದೆ | ಬಂಧಗೈದಹಿನಾಮ ದೈತ್ಯನಕೊಂದು ಉದ್ಧರಿಸಿರುವ ಪರಿಯಲಿ | ಮುಂದೆ ದುರ್ವಾದಿಗಳ ಖಂಡಿಪೆ 1 ವಾಲಿಯಂದದಿ ದೃಷ್ಟಿಮಾತ್ರದಲಿ | ಶತೃಗತಬಲಲೀಲೆಯಿಂದಪಹರಿಪೆ ನಿಮಿಷದಲಿ ||ಕಾಲ ತ್ರೇತೆಯಲಂದು ದುಷ್ಟರ | ವಾಲಿರೂಪದಿ ವಾರಿಸಿದ ಪರಿಕಾಲ ದ್ವಾಪರದಲ್ಲಿ ಪ್ರಾರ್ಥನೆ | ಲೀಲೆ ರೂಪಿಯು ಕೃಷ್ಣಸೇವಕ 2 ದೃಷ್ಟಿ ಮಾತ್ರದಿ ಕರ್ಣಗತ ಬಲವ | ಅಪಹರಿಸಿ ನೀನುಕ್ಲಿಷ್ಟ ಯುದ್ಧದಿ ಗಳಿಸಿ ನೀ ಜಯವ ||ಶ್ರೇಷ್ಠ ಕರ್ಣನ ಅಸುವ ಕೊಳ್ಳುತ | ಸುಷ್ಠು ಅರಿಬಲ ನಾಶಮಾಡುತಭ್ರಷ್ಟ ಕೌರವನೀಗೆ ದುಃಖದ | ಕೃಷ್ಣಗರ್ಪಿಸಿ ಕೈಯ್ಯ ಮುಗಿದೆಯೊ 3 ಕಾಲ ಕಲಿಯುಗದಲ್ಲಿ ಬಲ ಭೀಮ | ಮಧ್ವಾಭಿಧಾನದಿಮೂಲ ಮೂವತ್ತೇಳು ಸೂನಾಮ ||ಭಾಳ ಗ್ರಂಥಗಳನ್ನೆರಚಿಸೀ | ಕಾಲಟಿಜಕೃತಮಾಯಿ ಮತವನುಲೀಲೆಯಿಂದಲಿ ಖಂಡಿಸುತ್ತ | ಪಾಲಿಸುತ್ತಿರೆ ಸುಜನರನ್ನು 4 `ವೃಷಾಯ ಮಾಣೆಂಬ` ಋಕ್ಕಿನಲಿ ದೇವ ಇಂದ್ರಗೆವೃಷಭದಾಕೃತಿ ಪೇಳಿಹುದು ಅಲ್ಲಿ ||ವೃಷಭ ನೀನಾಗಂತೆ ಕಲಿಯಲಿ | ಎಸೆವ ಶ್ರೀ ಮನ್ಮಧ್ವ ಗ್ರಂಥದಹಸಿಬೆ ಚೀಲವ ಹೊತ್ತು ತಿರುಗುತ | ಅಸುಪತಿಯ ಸೇವಿಸಿದ ಮಹಿಮ5 ಅಗಸ್ತ್ಯ ಮುನಿ ಸಕಲ ತೀರ್ಥಗಳ | ಸಂಗ್ರಹಿಸಿ ಕರದಿಸಾಗಿ ಗಿರ್ಯಾನಂತ ಕಮಂಡೂಲ ||ವೇಗ ಕೆಳಗಿಟ್ಟಾಚಮನ ಅಲ್ಪ | ಕಾಗಿ ಸ್ವಲ್ಪವುದೂರ ಪೋಗಲುಕಾಗೆ ರೂಪದಿ ಬಂದು ಇಂದ್ರನು | ವೇಗ ಉರುಳಿಸೆ ಜಲವು ಹರಿಯಿತು 6 ದೆವರಾಜನು ಕಾಣಿಸಿ ಕೊಳಲು | ಮುನಿಯು ಆಕ್ಷಣದೇವ ಕಾರ್ಯದ ಭಾವ ತಿಳಿಯಲು ||ಓವಿ ತತ್ಕಾಗಿಣಿಯ ನಾಮದಿ | ಭೂವಲಯದೊಳ್ಬಾತಿಸಲಿ ಎನೆತೀವರಾಶೀರ್ವಾದ ದಿಂದಲಿ | ಪಾವನವು ತತ್ ಕ್ಷೇತ್ರ ವಾಯಿತು 7 ಪಾಂಡು ಮಧ್ಯಮನಾದ ಅರ್ಜುನನು | ಇಲ್ಯುದಿಸಿ ಪೊತ್ತಧೋಂಡು ರಘುನಾಥ ಪೆಸರನ್ನು || ಗೊಂಡು ನಾಯಕ ತನವ ಅಶ್ವಕೆ | ಅಂಡಲೆದು ಬರುತಿಲ್ಲಿ ಬಿಸಿಲಲಿ ಉಂಡು ಉಂಬುದ ಜಲವ ಪಶುಪರಿ | ಕಂಡು ಮುನಿ ಅಕ್ಷೋಭ್ಯ ಬೆಸಸಿದ 8 ಸ್ವಪ್ನ ಸೂಚಿಸಿದಂತೆ ಮುನಿಶ್ರೇಷ್ಠ | ನೀರ್ಗುಡಿದವ ನರೆ ಬಪ್ಪುವನು ತಮ ಪೀಠಕೆನ್ನುತ್ತ || ಸ್ವಲ್ಪ ಹಾಸ್ಯದಿ ಪಶುವು ಪೂರ್ವದಿ | ಒಪ್ಪುವೆಯಾ ನೀನೆನ್ನ ಸಾದಿಗೆ ನೆಪ್ಪು ಬಂದುದು ವೃಷಭ ಜನ್ಮದಿ | ಕೃಪ್ಪೆಗೈದಿಹ ಮಧ್ವರನುಗ್ರಹ 9 ಸಾದಿ ಭೂಪನು ಕಳುಹಿ ತನ್ನ ಸೈನ್ಯ | ಅಕ್ಷೋಭ್ಯ ಮುನಿಪರ ಪಾದಕೆರಗುತ ಆಶ್ರಮವು ತುರ್ಯ ||ಮೋದದಿಂದ್ಯಾಚಿಸಲು ಮುನಿವರ | ಆದಿಯಿಂದಲಿ ಬಂದ ಪೀಠಕೆಸಾದರದಿ ಪಟ್ಟಾಭಿಷಕ್ತನ ಗೈದು ಆಶೀರ್ವಾದ ಮಾಡಿದ 10 ಸುತನು ತುರ್ಯಾಶ್ರಮವ ಪೊತ್ತುದನ | ಕೇಳುತ್ತ ತಂದೆಅತುಳ ಕೋಪದಿ ನಿಂದಿಸಿದ ಮುನಿವರನ |ಸುತನ ಗೃಹ ಕೆಳತಂದು ಪತ್ನಿಯ | ಜೊತೆಯಲಿಡೆ ಏಕಾಂತ ಗೃಹದಲಿಅತುಳ ಸರ್ಪಾ ಕೃತಿಯ ಕಾಣುತ | ಭೀತಿಯಲಿ ಚೀರಿದಳು ಕನ್ಯೆಯು11 ಸೋಜಿಗದ ತನಯನ್ನ ಕೊಳ್ಳುತ್ತ | ಮುನಿವರರ ಬಳಿಗೆ ಯೋಜಿಸೀದನು ಕ್ಷಮೆಯ ಬೇಡುತ್ತ ||ಆರ್ಜವದ ಮುನಿ ಕ್ಷಮಿಸಿ ತಂದೆಯ | ಮಾಜದಲೆ ತಮ್ಮ ಶಿಷ್ಯಭೂಪಗೆಯೋಜಿಸಿದರನ್ವರ್ಥನಾಮವ | ಶ್ರೀ ಜಯಾಭಿಧ ತೀರ್ಥರೆನ್ನುತ 12 ಪರ ಕರಿ ಹರ್ಯಕ್ಷರಾದಿರಿ 13 ಮಧ್ವಭಾಷ್ಯಕೆ ಟೀಕೆ ರಚಿಸುತ್ತ | ಯರಗೋಳ ಗುಹೆಯಲಿಶುದ್ಧ ಭಾವದಿ ಇರಲು ಮದಮತ್ತ ||ವಿದ್ಯ ಅರಣ್ಯಭಿಧ ನೋಡೀ | ಮಧ್ವಕೃತ ಸನ್ಮಾನ ಲಕ್ಷಣಬುದ್ಧಿಗೇ ನಿಲುಕದಲೆ ಟೀಕೆಯ | ಪದ್ಧತಿಯ ಕಂಢರ್ಷಪಟ್ಟನು 14 ಮಾಧ್ವಭಾಷ್ಯವ ನೇರಿಸಿ ಗಜವ | ತಟ್ಟೀಕೆ ಅಂತೆಯೆಅದ್ಧುರೀಯಲಿ ಗೈದು ಉತ್ಸವವ ||ವಿದ್ಯವನ ಮುನಿಪೋತ್ತುಮನು ಬಹು | ಶುದ್ಧಭಾವದಿ ಗೈದು ಸಂತಸಬುದ್ಧಿಯಲಿ ಪರಿವಾರ ಸಹಿತದಿ | ಸದ್ದುಯಿಲ್ಲದೆ ಪೋದನಂದಿನ 15 ಹತ್ತೆರಡು ಮತ್ತೊಂದು ಕುಭಾಷ್ಯ | ವಿಸ್ತರದಿ ಖಂಡಿಸೆಕೃತ್ಯವೂ ಮಧ್ವಕೃತವನುವ್ಯಾಖ್ಯಾ ||ಮತ್ತಿದಕೆ ಸೂಧಾಖ್ಯ ಟೀಕವ | ವಿಸ್ತøತವು ನಿಮ್ಮಿಂದ ಜಯಮುನಿಮೊತ್ತದಿಂಧ್ಹತ್ತೆಂಟು ಗ್ರಂಥಕೆ | ಕೃತ್ಯವಾಯಿತು ನಿಮ್ಮ ಟೀಕೆಯು16 ಪಾದ ಪಾದ ತೋರ್ವುದು ||
--------------
ಗುರುಗೋವಿಂದವಿಠಲರು
ದೇವ ತನದ ಮಹಿಮೆಯಗಳೆದೇ ಅವಲೀಲೆಯೋ ನರನಾಗಿ ಗೋಪಾಲಕೃಷ್ಣಾ ಪ ಕುಂಡ ಗೋಳಕರರ ಸನ ಮನಿಯಲಿ ಜನ ಉಂಡ ವೆಂಜಲ ಬಳಿದು ಹಿಂಡ ರಾಯರ ಮುಂದ ಕುದುರೆಯ ತೊಳೆವುತ ಭಂಡಿಯ ಹೊಡೆವುತ ಪಾರ್ಥನವಶವಾಗಿ1 ಗೊಲ್ಲತೆಯೊಬ್ಬಳು ನೀರಕೊಡುವ ಪೊತ್ತು ನಿಲ್ಲದೇ ಮಾರ್ಗದಿ ಬರುತಿರಲು ಮುಳ್ಳು ಮುರಿಯವಳ ಕಾಲವ ಹಿಡಿವುತ ಸಂತೈಸಿ ಕಳುಹಿದ 2 ಜಾರ ಚೋರನೆನಿಸಿ ನಿರುತ ಗೋವಳರುಂಡನ್ನ ಸವಿದು ಗುರುವರ ಮಹಿಪತಿ ಪ್ರಭು ಜನ್ಮರಹಿತನವ ತರಿಸಿ ಯಶೋಧೆಯ ಮೊಲೆ ಪಾಲವನುಂಡು3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಂಬಿ ಭಜಿಸಿರೋ _ ಜನರೆಲ್ಲರೂ _ ನಂಬಿ ಭಜಿಸಿರೊ ಪ ಅಂಬುಜಾಕ್ಷ ಪ್ರಿಯಾ _ ನಮ್ಮ ಜಯರಾಯರಾ ಅ.ಪ ಕ್ಲೇಶ ಯಾತಕೇ ಕಾಸು ಕಳಕೊಂಡು _ ಅತಿಘಾಸಿ ಯಾತಕೇ ಶ್ರೀಶನಂಘ್ರಿ ಭಜಕರಾದ _ ವಾಸವಾವೇಶರಿವರ ಪಾದ ಆಶೆಯಿಂದ ಭಜಿಸಲೂ _ ವಾಸುದೇವನೊಲಿವನು 1 ನೇಮ ಯಾತಕೇ _ ನಿಷ್ಠೆ ಯಾತಕೇ ಹೋಮ ಯಾತಕೇ _ ಕಷ್ಟಯಾತಕೇ ಪ್ರೇಮದಿಂದಲೀ _ ಇವರ ಭಜಿಸಲೂ ತಾಮಸಗುಣ _ ತಾನೇ ಓಡೋದು 2 ಮಧ್ವಶಾಸ್ತ್ರದ _ ಚಂದ್ರರಿವರು ಅದ್ವೈತವಾದವ _ ಗೆದ್ದಸಿಂಹರು ಮಧ್ವರಾಯರಾ _ ಮುದ್ದುಮೊಮ್ಮಗ ಸಿದ್ಧಸೇವ್ಯರು _ ಸುಧೆಯ ಕರ್ತರು 3 ಇವರ ಧ್ಯಾನವೂ _ ಜ್ಞಾನದಾಯಕಾ ಇವರ ಪೂಜೆಯೂ _ ಪಾಪನಾಶನ ಇವರ ಸ್ಮರಣೆ _ ಕಲಿವಿ ಭಂಜನೆ ಇವರ ಸೇವೆಯು _ ಮುಕ್ತಿಸೋಪಾನ 4 ಶ್ರೀಕಳತ್ರನಾ _ ಆಜ್ಞೆಯಿಂದಲಿ ನಾಕದಿಂದಲೀ _ ಇಲ್ಲಿ ಬಂದರು ಏಕಮನದಿ _ ಶರಣು ಹೋಗಲು ಪಾಪನಾಶನ _ ಪುಣ್ಯವೆಗ್ಗಳಾ 5 ಮಳಖೇಡದೀ _ ನೆಲಸಿ ಇಪ್ಪರೂ ನಳಿನನಾಭನ _ ಒಲಿಸುತನುದಿನಾ ನಲಿಸಿ ಮನದೊಳು _ ಒಲಿಸುವಾತನೆ ಶೀಲವಂತನು _ ಧನ್ಯ ಮಾನ್ಯನು6 ನರನ ವೇಷದಿ _ ಸುರರ ಒಡೆಯನೊ ಹರಿಯ ಕರುಣದಿ _ ಮೆರೆಯುತಿರ್ಪರು ಶರಣಜನರ _ ದುರಿತರಾಶಿಯ ತರಿದು ಶೀಘ್ರದಿ _ ಪೊರೆಯುತಿಪ್ಪರು7 ಎತ್ತಿನ್ವೇಷದಿ _ ವಾತದೇವನ ಪ್ರೀತಿ ಪಡೆದು _ ಖ್ಯಾತಿಆದರು ಮತ್ತೆ ಯತಿಯಾಗಿ _ ಕೀರ್ತಿಯಿಂದಲಿ ಬಿತ್ತರಿಸಿದರು, ತತ್ತ್ವಶಾಸ್ತ್ರವ 8 ಕಾಗಿನೀನದೀ _ ತೀರವಾಸರು ವಿಗತರಾಗರು _ ನಿತ್ಯತೃಪ್ತರು ಜಾಗರೂಕದಿ _ ಪೊಗಳಿ ಪಾಡಲು ನಿಗಮವೇದ್ಯನು _ ಬೇಗ ಪೊರೆಯುವ 9 ಶೇಷಾವೇಷದಿ _ ವಾಸಿಸುವರು ಶೇಷಶಯನನ _ ದಾಸರೀವರು ಬೆಸರಿಲ್ಲದೆ _ ಆಸೆ ತೊರೆದು ದಾಸನೆನ್ನಲು _ ಪೋಷಿಸೂವರು 10 ಕೆರೆಯ ಏರಿಯು _ ಬಿರಿದು ಪೋಗಲು ಮೊರೆಯ ಇಟ್ಟರು _ ಇವರ ಅಡಿಗೆ ಭರದಿ ಕರುಣದಿ ಹರಿಯ ಸ್ತುತಿಸಿ ಕರದಿ ಮುಟ್ಟಲು _ ಏರಿ ನಿಂತಿತು 11 ಯರಗೋಳದ _ ಗುಹೆಯ ಒಳಗೆ ಮರುತದೇವನ _ ಕರುಣದಿಂದಲಿ ಪರಿಪರಿಯಲಿ _ ಬರೆದು ಟೀಕೆಯ ಕರೆದು ಸುರಿದರು _ ತತ್ತ್ವಕ್ಷೀರವ 12 ಇವರ ನಾಮವು _ ವಿಜಯ ಸೂಚಕ ಇವರ ಕೀರ್ತನೆ _ ಭವಕೆ ಔಷಧ ಇವರ ಕರುಣದಿ _ ಅನಿಲನೊಲಿವನು ಇವರ ಶಿಷ್ಯರೇ _ ಅವನಿಶ್ರೇಷ್ಠರು 13 ಸರ್ವಕ್ಷೇತ್ರದ _ ಯಾತ್ರೆಯಾ ಫಲ ಸರ್ವದಾನವ _ ಮಾಡಿದ ಫಲ ಇವರ ಪಾದವ _ ನಂಬಿ ಭಜಿಸಲು ತವಕದಿಂದಲಿ _ ತಾನೇ ಬರುವುದು 14 ಜಯತೀರ್ಥರ _ ಹೃದಯವಾಸಿಯು ವಾಯುಹೃದಯಗ _ ಕೃಷ್ಣವಿಠ್ಠಲನು ದಯದಿ ನುಡಿಸಿದಾ _ ಪರಿಯು ಪೇಳಿದೆ ಜೀಯ ಕೃಷ್ಣನೆ _ ಸಾಕ್ಷಿ ಇದಕ್ಕೆ15
--------------
ಕೃಷ್ಣವಿಠಲದಾಸರು
ನಾರಗಾ ಎನುತಂದು ಸಾರಲಾ ನುಡಿಕೇಳಿ ಆರಯ್ದು ಕಯ್ವಿಡಿದು ಕಾಯ್ದೆ ದ್ವಿಜನ ಗೋವಿಂದ ಪೊರೆ ಎಂದು ಗೋಳಿಟ್ರಗಜರಾಜಗಾ ದಿವ್ಯದರ್ಶನಾನಂದಮಾಯ್ತು ಅಕ್ಷಯನೆ ಕಾಪಿಡೆಂದಾಕ್ಷಣವೆ ಪಾಂಚಾಲಿ ಗಕ್ಷಯಾಂಬರಗಳಿಂ ರಕ್ಷೆಯಾಯ್ತು ಪಾರ್ಥಸೂತನೆ ನಿನ್ನನರ್ಥಿಯಿಂ ಕೆಲಸಾರ್ದು ಪ್ರಾರ್ಥಿಸುತ್ತಿರ್ಪೆನೈ ಪರಮಪುರುಷ ವರಶೇಷಗಿರಿನಿಲಯ ಸುಗುಣವಲಯ ಶರದಿಂದು ನಿಭವದನ ಚತುರವಚನ ದಮನ ಗರುಡಗಮನ ಪರಿಪಾಹಿ ಮಮದೇವ ಸುಪ್ರಭಾವ
--------------
ನಂಜನಗೂಡು ತಿರುಮಲಾಂಬಾ
ನಿಂತು ಲಾಲಿಸಲಿ ರಾಧಾ ಕಂತುಪಿತನ ಪದನಾದ ಪ ಬಲದ ಕಾಲೆಡದೊಳಿಟ್ಟು ಇಳೆಗೆ ಎಡದ ಪದ ಕೊಟ್ಟು ಒಲಿದು ಮುರಲಿ ಮುಖವಿಟ್ಟು ಉಲಿಯೆ ಮಧುರ ರವ ಪುಟ್ಟಿ ಬಲಬಾಲರೆಲ್ಲ ನಲಿಯುತಲಿಗೋ ಪೂರ್ವ ಮಳೆಗರೆವುತಲಿ ನಾನೆಂತು ಬಣ್ಣಿಸಲಿ ಹರಿಯ ಲೀಲೆಗಳ ಉಲಿಯುವ ಶ್ರುತಿನಾದ ಬಲದ ಸಿಂಹದ ನಾದ ಸಲೆ ವಟುವಿನ ನಾದ ಬಲವಾದ ಪರಶುವಿನತಿನಾದವು ಯಶೋಜಿತ ನಾದವು ಬಲು ವಾಜಿನಾದಗಳ್ ಕೊಳಲಲಿ ಕೇಳುತ ನಿಂದು 1 ಪಾಲು ಮೊಸರುಗಳನುಂಡು ಲೀಲೆಯಾಡುತಿರೆ ಕಂಡು ಬಾಲೆಯರತಿ ಖತಿಗೊಂಡು ಗೋಳಿಡುತಲೆ ಹಿಂಡಿಂಡು ಎಮ್ಮಾಲಯದೊಳು ಬೆಣ್ಣೆ ಮೆಲುತಲಿ ಸಣ್ಣ ಬಾಲೆರಿಟ್ಟ ಪಾಲ್ ಕುಡಿವುತಲಿ ಕೆಳಮೇಲಾಗಿ ಧದಿಯನು ಸುರಿವುತಲಿ ಜಲದೊಳು ಧುಮುಕಿದ ಕಲಕದ ಚಲವಿಡಿದ ಬಲುಬೇರ ಕೋರೆಯಿಂದಗಿದು ತಿಂದಾ ಒಲಿದು ಕಂಬವ ನೋಡಿದಾ ಬಲಿಗೆ ಬಾಯಿ ತೆರೆದಾ ಮೊಲೆ ಕೊಟ್ಟ ಜನನಿಯ ಶಿರಕಡಿದಾ ಕುಲಹೀನೆಂಜಲ ತಿಂದಾ ಖಳಪೂತನಿಯಳಿದಾ ತಿಳಿಗೆಟ್ಟು ಮೈಬಟ್ಟೆ ಕಳೆದೊಗೆದಾ ಬಲು ಮಿಂದೇರಿ ವಾಜಿ ಭಟರ ಬೆನ್ನಟ್ಟಿದಾ ನಿಂತು 2 ಸುರಿವುತಿರಲು ಮಳೆ ಭಾರಿ ಚರಿವಾವ್ಗಳು ಹೌಹಾರಿ ಮರೆಯ ಕಾಣದೆಲೆ ಹೋರಿ ಕರವುತಿರಲು ಮುರವೈರಿ ಕಿರಿಬೆರಳಲಿ ಕೊಡೆವಿಡಿವುತಲಿ ಸಣ್ಣ ಕರಗಳಾವುಗಳ್ ಸಲಹುತಲಿ ಮುದ ಗೋವುಗಳ ನೋಡುತಲಿ ನಾನೆಂತು ಬಣ್ಣಿಸಲಿ ಶಿರಿವರನಾನಂದ ಭರದಿ ವೇದವ ತಂದ ನೆರೆಶೈಲನೆಗಹಿದ ಧರಾಲಲನೀಯ ನಾಸದಿ ಪಿಡಿದ ಸುರನದಿ ದ್ವಿಜರಿಗೆ ದಾನವ ಮಾಡಿದಾ ಹರಿಗೆ ಯಜಪದ ನೀಡ್ದಾ ಗುರುಪುತ್ರರನೆ ಪಡಿದಾ ಹರಿಯೇರಿ ಮೆರೆವುದು ನಿಂತು 3
--------------
ನರಸಿಂಹವಿಠಲರು
ನಿನ್ನ ಕ್ಲೇಶವ ಕೇಳೆ ಎನಗೆ ಮರುಕಪ ಎನ್ನ ಕ್ಲೇಶವ ನಿನಗೆ ತಿಳಿಸಬಹುದೆ ದೇವ ಅ.ಪ ಹದಿನಾಲ್ಕು ಲೋಕಗಳ ಹುಡುಗತನದಲಿ ಪಡೆದು ಅದಕೆಲ್ಲ ಅನ್ನವೀಯುವ ಚಿಂತೆಯು ಹದಿನಾಲ್ಕು ಲೋಕಗಳ ಸರ್ವಕರ್ಮಗಳಿಗೂ ಹಗಲಿರುಳು ಪ್ರೇರಣೆಯ ಮಾಡುವಾತಂಕ 1 ಹಿರಿಮಗನದೊಂದುಸಿರ ತರಿದರೆಂಬಾತಂಕ ಕಿರಿಮಗನ ದೇಹ ಪೊಸಕಿದ ಚಿಂತೆಯು ಹರನು ಮೊಮ್ಮಗ ಹಾಲಾಹಲವ ಕುಡಿಯುತ ಹಲ್ಲು ಕಿರಿಯುವಾತಂಕಕ್ಕೆ ಹರವು ತೆರವಿಲ್ಲ 2 ಚಂಚಲಳು ಸತಿಯೆಂದು ಹೊಂಚು ಕಾಯುವ ಚಿಂತೆ ಮಂಚದಲಿ ಘಟಸರ್ಪ ವಿಷದ ಚಿಂತೆ ಸಂಚಿತಾಗಮ ಪ್ರಾರಭ್ಧಗಳನಳಿಸುವಗೆ ವಂಚಕರು ಏನು ಮಾಡುವರೆಂಬ ಚಿಂತೆ 3 ಹಲವು ವಿಧ ವೇಷಗಳ ತಾಳಿ ಜಗಂಗಳಲಿ ನೀ ತಲೆಯ ಮರಿಸಿಕೊಂಡರೇನು ಫಲವೊ ಬಳಸಿ ಹುಡುಕಿ ಗೂಢಚಾರಿ ಯೋಗಿಯು ನಿನ್ನ ತಿಳಿದು ಬೆಳಕಿಗೆ ತರುವ ಮರೆಮಾಚಲೇಕೊ 4 ತಾಪತ್ರಯ ತಳೆಯೆ ಗೋಪನಲಿ ಪುಟ್ಟಿದರು ಗೋಪಿಯರ ಸಾಸಿರದ ಗೋಳು ನಿನಗೆ ಭೂಪ ದಶರಥನ ಮಗನಾಗಿ ಪುಟ್ಟಿದರಯ್ಯೊ ಪಾಪ ಸತಿಯಳ ಕಳೆದುಕೊಂಡ ಬಲುಚಿಂತೆ 5 ನಿನ್ನ ಬೇಡುವುದಿಲ್ಲ ನಿನ್ನ ಕಾಡುವುದಿಲ್ಲ ನಿನ್ನ ನೋಡಲು ಎನಗೆ ಬೇಸರವು ಜಗಕೆ ನಿನ್ನ ಚಿಂತೆಯು ಮನ ಪ್ರಸನ್ನತೆ ನೀಡುವುದು ಇನ್ನೇನು ನಿನಗೆ ಚಿಂತೆಯೊ ತಿಳಿಸಿ ಪೊರೆಯೊ 6
--------------
ವಿದ್ಯಾಪ್ರಸನ್ನತೀರ್ಥರು
ನಿನ್ನನು ನಂಬಿದೆ ಶಾರದೆ ನೀನು ಪ್ರಸನ್ನಳಾಗಬಾರದೆ ಪನಿನ್ನನು ಬಿಟ್ಟg ಎನ್ನಯ ದುಃಖಗಳನ್ನು ಕಳೆಯುವರಿನ್ನಾರಿರುವರು ಅ.ಪಹೇಳಿಕೊಳ್ಳುವೆ ತಾಯೇ ದುಃಖವಕೇಳು ಮಹಾಮಾಯೆಹಾಳು 'ಷಯಗಳ ಜಾಲದಿ ಸಿಕ್ಕಿಹಗೋಳನು ನಾನೀಗ ತಾಳಲಾರೆನು ಹಾಯ್ 1ಆಟದ ವಸ್ತುಗಳ ಕೊಟ್ಟು ಚೆಲ್ಲಾಟವಾಡುವೆಯಾಸಾಟಿ ಇಲ್ಲದೀಆಟವ ಸಾಕು ಸಾಕುಕಾಟವಕಳೆನೀಂ ಭೇಟಿಯ ಕೊಟ್ಟು 2ಹರಿಹರಿಯೆನ್ನದೆ ಈ ನಾಲಿಗೆಯನರಗಳು ಸೊಕ್ಕಿಹವುನಿರುತವು ಹರಿನಾಮ ಭರವೆಡೆಬಿಡದಂತೆಹರಸಿ ಕಾಯೆ ಚಿಚ್ಛರೀರದ ತಾಯೆ3
--------------
ಹೊಸಕೆರೆ ಚಿದಂಬರಯ್ಯನವರು