ಒಟ್ಟು 46 ಕಡೆಗಳಲ್ಲಿ , 19 ದಾಸರು , 41 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದುಂಡು ಮುಖವುಳ್ಳ ಹುಡುಗನ ಕಂಡಿರಾಚಂಡನಾಡುತ ಬಂದ ಚದುರೆಯರ ಓಣಿಯಲಿ ಪ ಕರದೊಳಗೆ ಕೊಳಲಿಹುದು ಚರಣದೊಳು ರುಳಿಗೆಜ್ಜೆಕೊರಳೊಳಗೆ ಸರಪದಕ ಗುರುಳು ಮುಖದಿಜರದೊಲ್ಲಿ ಹೊದ್ದಿಹನು ಸ್ಮರನ ಮೋಹಿಪ ರೂಪಸಿರಿಯ ಕಂಡರೆ ಅವನ ಪರರು ಬಿಡರಮ್ಮ 1 ವಾರಿಜಾಕ್ಷೆರೆ ಬಹಳ ಜಾರಚೋರೆನ್ನ ಮಗವಾರೆನೋಟದಿ ಮನಸು ಹಾರಿಸುವನುಸಾರಿದರೆ ಮನೆಗಳಿಗೆ ದ್ವಾರಯಿಕ್ಕುತೆ ಬನ್ನಿದೂರು ಪೇಳಲು ಕೇಳಿ ಸಾರಿದೆನು ಮೊದಲೆ 2 ಕಂದನಾಗುವ ಕ್ಷಣದಿ ಒಂದೆ ಪ್ರಾಯದ ಪುರುಷಸುಂದರಾಂಗಿಯಳಾಗಿ ಬರುವನಂದಬಾಲನ ಮಹಿಮೆ ಬಂದು ನಂಬಲಿ ಬೇಡಿಇಂದಿರೇಶನು ಬಹಳ ಮಂದಿ ಮೋಹಿಸುವ 3
--------------
ಇಂದಿರೇಶರು
ನೀರೆ ದ್ವಾರಕೆಯ ಸೊಬಗು ಬ್ರಹ್ಮರಾಯ ಬಟ್ಟಾನು ಬೆರಗು ನೀರೆಪ. ಚದುರೆ ಬಾಜಾರದಿ ಕುದುರೆ ಸಾಲುಗಳೆಷ್ಟುಎದುರಿಗೆ ಬಾಹೋ ರಥಗಳೆಷ್ಟುಎದುರಿಗೆ ಬಾಹೋ ರಥಗಳೆಷ್ಟು ಅಂಬಾರಿಸದರಿನ ಆನೆ ಸೊಬಗೆಷ್ಟು1 ಹಿಂಡು ಗೆಳತಿಯರೆಲ್ಲ ತಂಡ ತಂಡ ನೆರೆದುದುಂಡು ಮಲ್ಲಿಗೆಯ ತುರುಬಿನದುಂಡು ಮಲ್ಲಿಗೆ ತುರುಬಿನ ಕುವರಿಯರು ಚಂಡನಾಡುವÀರು ಕಡೆಯಿಲ್ಲ 2 ನೀಲಮಾಣಿಕ ಬಿಗಿದ ಮೇಲಾದ ಮನೆಗಳುಮ್ಯಾಲೆ ಕನ್ನಡಿಯ ನಿಲ್ಲಿಸ್ಯಾವಮ್ಯಾಲೆ ಕನ್ನಡಿಯ ನಿಲ್ಲಿಸಿದ ಮನೆಯೊಳುಸಾಲು ದೀವಟಿಗೆ ಸೊಬಗೆಷ್ಟು 3 ಬಟ್ಟ ಮುತ್ತಿನ ತೋರಣ ಕಟ್ಟಿದ ಮನೆಯೊಳುಅಟ್ಟಳ ಮ್ಯಾಲೆ ಧ್ವಜಗಳುಅಟ್ಟಳ ಮ್ಯಾಲೆ ಧ್ವಜಗಳು ಗಗನಕ್ಕೆಮುಟ್ಟಿವೆಂಬಂತೆ ನಿಲ್ಲಿಸ್ಯಾವೆ4 ದೊರೆಗಳ ಮನೆಯಿಂದ ಬರೆದ ಚಿತ್ರದÀ ಬೊಂಬೆಗಳುಕರೆದಾವ ಕೈ ಬೀಸುತೆಕೈ ಬೀಸಿ ನಮ್ಮ ಎದುರಿಗೆಬರತಾವೆಂಬಂತೆ ನಿಲ್ಲಿಸ್ಯಾವ 5 ಏಳಂತಸ್ತಿನ ಮಾಳಿಗೆ ಮ್ಯಾಲಿನ ಗೊಂಬೆಗಳು ಬಾಳೆ ಎಲೆಯಂತೆ ಬಳಕುತ ಬಾಳೆ ಎಲೆಯಂತೆ ಬಳಕುತಕಿವಿಮಾತು ಹೇಳ್ಯಾವೆಂಬಂತೆ ನಿಲ್ಲಿಸ್ಯಾವೆ6 ಮದನ ಜನಕನು ಸುಳಿಯೋನೆಒಮ್ಮೊಮ್ಮೆ ಮುದದಿ ಭಕ್ತರನ ಸಲುಹಲಿ 7
--------------
ಗಲಗಲಿಅವ್ವನವರು
ಪುರಂಜನೋಪಾಖ್ಯಾನ ಲಾವಣಿ ಗೆರಗಿ ಮಹೇಶ್ವರನಾ ಶಾರದೆಯ ಸರಸಿಜಸಂಭವನಾ | ಇಂದಿರೆ ಪರಮಭಕ್ತಿಯಲಿ ಪ್ರಾರ್ಥಿಸಿ ಸತ್ಕವಿ ಕರುಣಿಪುದು ಜ್ಞಾನ | ಚರಣಗಳಿಗೆ ಬಿನ್ನೈಸುವೆನಾ 1 ಯತಿಗಣಪ್ರಾಸೊಂದಾದರು ತಿಳಿಯದು ಮತಿಹೀನನು ನಾನು | ನಾನಾಚಮ- ತ್ಕøತಿಗಳರಿಯದವನು | ಆದರೀ ಕೃತಿಯಲಿ ತಪ್ಪೇನು | ಮತಿವಂತರಾಲಿಸುವುದು ನೀವಿದನು 2 ಒಂದರೊಳಗೆ ಎರಡಾಗಿ ಎರಡರೊಳು ಹೊಂದಿ ಮೂರ್ನಾಲ್ಕೈದಾಗಿ ಆರೇಳೆಂಟೊಂಬತ್ತುಗಳಾಗಿ | ಸಕಲದೊಳು ಹೊಂದಿರುವುದುತಾಗಿ ಕುಂದಿಲ್ಲದೆ ಇರುತಿರುವ ಮಹಾತ್ಮನ ರಂದವ ಚನ್ನಾಗಿ | ತಿಳಿದು ಸುಖ ತಂದವನೇಯೋಗಿ 3 ಮೊದಲು ಮಹತ್ ಸೃಷ್ಟಿಯಲಿ ಎಲ್ಲತ- ತ್ವದಲಿ ತೋರುತಿಹುದು ಬೇರೆಬೇರಾಗಿ ಕಾಣಿಸುವುದು ಅದುಭುತವಾಗಿಹ ಅನಾದಿ ಕರ್ಮತ್ರಿ- ವಿಧದಿ ಭಾದಿಸುವುದು | ಅದರೊಳು ಬಿ- ಡದೆ ತಾ ಮುತ್ತುವುದು ಎಂದಿಗು ನಿಜವತಿ ರಹಸ್ಯವಿದು 4 ಮೊಟ್ಟೆವೊಂದು ದಶಸಾವಿರವರುಷಗ ಳಿಟ್ಟು ಜಲದಿತಾನು | ಅದಕೆ ಕೈ- ಗೊಟ್ಟು ಎಬ್ಬಿಸಿದನು | ನಾನಾ ವಿಧ ವೆಷ್ಟಿ ಸಮಷ್ಟಿಗಳೆರಡೆಂದದರೊಳು ಗುಟ್ಟಂಗಡಿಸಿದನು | ಗುರಿಯಮಾ ಡಿಟ್ಟು ಚೇತನಗಳನು | ಅನೇಕವು ಪಟ್ಟಣ ರಚಿಸಿದನು 5 ಈ ಪಟ್ಟಣಕಾರ್ ಮಂದಿ ಇರುವರತಿ ಕಾಪಾಡುವರದರೊಳು ವ್ಯಾಪಾರಗಳನು | ಬಹುವಿಧಮಾಡುವ- ರಾಪುರ ಜನರುಗಳು | ಇವರುನಡೆ ಕೋಪಿಸೆ ಹಗಲಿರುಳು 6 ಎರಡು ಮಾರ್ಗದೊಳಿರುತಿಹರೆಲ್ಲರು ಹುರುಡಿಲ್ಲವುನೋಡೆ | ಗಜಿಬಿಜಿಯು ತರತರದಲಿಮಾಡೆ | ನಮಗಿದೆ ಸ್ಥಿರವೆನ್ನುತ ಕೂಡೆ | ಪರಿಪರಿ ಬಗೆಯಲಿ ಭೇದ ಪುಟ್ಟುವುದು ಕರೆಕರೆಯಂದುಡೆ | ವಳಗೆಕೆಲ ಬರುಹರುಷದಿ ನೋಡೆ | ಯುವಶೃಂ- ಗರುವು ಇದಕೆ ಈಡೆ 7 ಇದೆತನ್ನದೆನುತೋರ್ವಳು ಮಾನಿನಿ ಚದುರತನದಿ ಬಂದು | ಊರ ಮುಂದಿರುವ ವನದಿ ನಿಂದು | ಅವಳಿಗಿರು ವುದು ಜನ ಹನ್ನೊಂದು ಚದುರೆಯೈದುತಲೆ ಸರ್ಪವಾಡಿಸುತ ಜಾಣೆಯಿರುವಳಂದು | ತಾನೊಬ್ಬನ ಇಂದು | ಸುಖದೊಳಾ- ಳ್ಬೇಕುರಾಜ್ಯವೆಂದು 8 ಅರಸನೊಬ್ಬ ವಿಜ್ಞಾತನೆಂಬ ಭೂ- ಸುರನಸಹಿತನಾನಾ | ದೇಶಗಳ ತಿರುಗುತ ಉದ್ಯಾನ | ವನದಿಕಂ- ಡನು ಆತರುಣಿಯನ ಪರಮ ಮಿತ್ರನಹ ಬ್ರಾಹ್ಮಣನ ಮರೆತು ಹರುಷದಿ ಪೊಕ್ಕುವನ | ಸ್ಮರಶರಕೆ ತರಹರಿಸುತಲಿರೆ ಮನ | ಕೇಳಿದನು ನಗುತಲಿ ನಾರಿಯನ 9 ಯಾರೆ ಹುಡುಗಿ ನೀನ್ಯಾರೆ ನಿನ್ನ ಪೆಸ- ರೇನು ಪೇಳೆ ಹೆಣ್ಣೆ | ಮಾತನಾ- ಡೆಲೆ ತಾವರೆಗಣ್ಣೆ | ನಿನ್ನ ಮೈ- ಸುಲಿದ ಬಾಳೆಯ ಹಣ್ಣೆ ಯಾರದು ಈ ಜನ ಉರಗವೇನು ವನ- ವಾರದು ಶಶಿವದನೆ | ಈ ಪುರವ- ನಾಳುವನಾವವನೆ | ಒರ್ವಳಿ- ಲ್ಲಿರುವುದಕೇನ್ಹದನೆ 10 ಎನಲು ನಸುನಗುತವನಿತೆನುಡಿದಳೀ ಜನಗಳು ನನ್ನವರು | ಇಲ್ಲಿಕಾ- ಣುವ ಪುರ ನನ್ನೂರು | ಸರ್ಪನ- ನ್ನದು ಇದಕಿನ್ನಾರು | ಅರಸರಿಲ್ಲ ನಾನೊಬ್ಬಳಿರುವೆನೀ ವನದೊಳು ನೀನ್ಯಾರು | ನಿನ್ನಕಥೆ ವಿವರಿಸೆನಗೆ ತೋರು | ಯನ್ನ ಬಳಿ- ಗಿಷ್ಟವಿರಲುಸಾರು 11 ಎಲ್ಲಿ ನೋಡೆ ಸ್ಥಳವಿಲ್ಲವೆನಗೆ ನಿ- ನೆನ್ನ ಪುಷ್ಪಶರನು | ನೀನುಪೇ- ಪರಿ ವಲ್ಲಭನನು ಮಾಡಿಕೊ ಎನ್ನನು ಬಹು ಬಲ್ಲಿಯಳೆ ನೀನು | ನಿನ್ನಸರಿ ಚಲ್ವೆಯರಾರಿನ್ನು | ಇಬ್ಬ- ರಾಳ್ವೆಯೀವೂರನ್ನು 12 ಎನಲು ಹರುಷಗೊಂಡಾಕೆ ಸಮ್ಮತಿಸಿ ಜನವೆರಗಿತಂದು | ನುಡಿದಳಾಮೊಗದ- ಲಿನಗೆತಂದು | ನಿನ್ನಮೇಲ್ ಮನಸಾಯಿತುಯಿಂದು ನಿನ್ನನು ಮಾನವೇತಕಿಂದು | ಆಳು ಜನಸಹಿತ ಪುರವ ಮುಂದು ನೀನು ನಾನಿರುವೆವಾಗಿವಂದು 13 ಸರ್ವವನ್ನು ಭವದಿ ಆದರಿಸುತತತ್ಪುರ ಮಧ್ಯ | ದೊ ಳುಪ್ಪರಿಗೆಯೇರಿ ತ್ವರದಿ | ಸರ ಸಗಳನಾಡಿ | ಬಹುತರದಿ ಮುಳುಗಿ ಸಂಸಾರವೆಂಬಶರಧಿ 14 ಅನ್ನಪಾನಾಭರಣ ಕುಸುಮ ವಿನ್ನು ಗಂಧಧೂಪ | ತಾಂಬೂಲಗಳ ಮನ್ನಣೆಯಲಿ ಭೂಪ | ಪೊಂದಿದ ಸುಖ ವನು ನಾನಾರೂಪ | ನನ್ನದು ಎನ್ನುತಲಿ ಪ್ರತಾಪ | ಶಾಲಿತಾ- ರಾಜ್ಯವಾಳಿದನಾಗುತಭೂಪ 15 ದ್ವಾರಗಳೊಂಭತ್ತಾಪುರಕಿರುವುದು ಮೂರು ಪೂರ್ವದಲ್ಲಿ | ಮೇ- ಲೆರಡು ಕಿಟಕಿಗಳಿಹವಲ್ಲಿ | ಬಿಗಿಸಿ ಕಟ್ಟಿಹುದು ಕನ್ನಡಿಯಲಿ ತೋರುವುದುತ್ತರದಕ್ಷಿಣದೊಳೆರಡು ದ್ವಾರ ಪಶ್ಚಿಮದಲಿ ಕಾರಣವದರಲ್ಲಿ 16 ಮತ್ತದರೊಳಗಾರ್ಸುತ್ತು ಕೋಟೆ ಒಂ- ಬತ್ತು ಬಾಗಿಲ ಪುರದಿ | ಅನೇಕವು ಗೊತ್ತನಾವವಿಧವಿ | ಉತ್ತಮವಹಪುರದಿ | ಮುಖ್ಯವಾ- ಗಿರುವದೆರಡು ಬೀದಿ | ದೊರೆಯಮನೆ- ಯಿರುವುದು ವಿಸ್ತರದಿ17 ಇಂತರಮನೆಯಲಿ ದೊರೆ ಕಲಿಯಾಗುತ ಕಾಂತೆಯೊಡನೆ ಸೇರಿ | ಸದಾಸು- ಸ್ವಾಂತನಾಗಿಮೀರಿ | ಸೌಖ್ಯಹೊಂ- ದುತಲಾವೈಯ್ಯಾರಿ ನಿಂತರೆ ನಿಲುವನು ಕುಳಿತರೆ ಕೂಡುವ ಮಲಗಿದರೆ ನಾರಿ | ತಾನು ಮಲಗುವಯೇಕದಿ ಸೇರಿ | ಉಂಡ- ರುಣ್ಣುವನು ಅವಳನುಸಾರಿ 18 ಮನದಿಯೋಚಿಸದನೂ | ಈಗಲೆ ಮೃಗಯಾತ್ರೆಗೆತಾನೂ | ಸೊಗಸಿಂದ ಸೈನ್ಯವ ಕೂಡುತ ಪುಂ- ಚಪ್ರಸ್ಥವನವನು | ಪೊಕ್ಕು ಅ- ಲ್ಲಿರುವಮೃಗಗಳನ್ನು | ಹೊಡೆದು ಸಂ- ತೋಷದಿ ಸುಖಿಸುವೆನು 19 ಮೂರೆರಡು ಕುದುರೆಯೈದು ಮೇಲ್ ಮೂರು ಪತಾಕಿಗಳು | ಅ- ಚ್ಚೆರಡು ಎರಡು ಕೂಬರಗಳು | ಚಕ್ರ ವೆರಡುವರೂಥಗಳೇಳು ಆರಥಕೊಪ್ಪುವದೇ- ಕರಶ್ಮಿನಾಲ್ಕೊಂದು ವಿಕ್ರಮಗಳು | ಒಬ್ಬ ಸಾರಥಿ ಎರಡು ಗತಿಗಳು | ಬಿಗಿಸಿಹುದು ಕನಕಭೂಷಣಗಳು 20 ಪುರಂಜನ ಭೂ- ಕಾಂತಕರದಿ ಧನುವ | ಪಿಡಿದುಸು- ಸ್ವಾಮತದಿಂದಲನುವಾ | ಗಿಬಹ ಹನ್ನೊಂ- ದು ತನ್ನ ಜನನ | ಸಂತಸದಲಿ ಕೂ- ಡುತ ಹೊರಡುತ ತಾ ಪೊಕ್ಕನು ಕಾನನವಾ | ಶರಗಳಿಂ- ದ್ಹೊಡದು ಮೃಗನಿವಹವಾ | ಮೇರೆಯಿಲ್ಲ- ದೆ ತಟ್ಟುತ ಭುಜವಾ 21 ಇನಿತು ಬೇಟೆಯಾಡುವ ಕಾಲದಿ ತನ್ನ ಮನದಿ ನೆನೆದು ಸತಿಯಾ | ತಕ್ಷಣವೇ ಬಂದು ಸೇರಿ ಮನೆಯ | ಕಾಣದೆ ಹುಡುಕಿದನು ಯುವತಿಯ ಮಂಚದೊಳಿಹ ಸತಿಯ | ಕಂಡುಲಾ- ಲಿಸುತ ಚಮತ್ಕøತಿಯಾ | ನುಡಿಯಲುಪ- ಚರಿಸಿದನಾಕಾಂತೆಯ 22 ನೂರುವರುಷವೀರೀತಿಯವಳೊಡನೆ ನೂರುಹನ್ನೊಂದು ಮಕ್ಕಳನ್ನು | ಪಡೆದು ಸಂ- ಸಾರದಿ ಕಾಲವನು | ಯಾರೆ- ಮೀರಿ ಹೋದುದಿನ್ನು | ಮೊಮ್ಮಕ್ಕಳ ಪಡೆದನನೇಕರನು ದೇಶತುಂಬಿಸಿದ ತನ್ನ | ವರನು 23 ಉತ್ತರ ದಕ್ಷಿಣ ಪಾಂಚಾಲಗಳಾ ಳುತ್ತಲಿವನು ತನ್ನ | ಸುತರಬೆರೆ- ಯುತ್ತಸದಾ ಚಿನ್ನ | ಬೆಳ್ಳಿ ನವ- ರತ್ನರಾಶಿಗಳನಾ | ಮತ್ತೆ ಮತ್ತೆ ಕೂಡಿ- ಸುತೈಶ್ವರ್ಯದಿ ಮತ್ತನಾ | ಗುತಲನ್ಯಾ ಚಿಂತೆಯಿಲ್ಲದೆ ನಾ | ಬಲು ಪುಣ್ಯವಂತನೆ | ನ್ನುತ್ತತಿಳಿದಿರುವನಾ 24 ಚಂಡವೇಗವೆಂಬುವರಾ ತಮ್ಮತಮ್ಮ ಹೆಂಡಿರುಗಳು ತಾವು | ಸೇರಿಮು- ನ್ನೂರರವತ್ತು ಜನವು | ಗಂಧರ್ವರು ಬಂಡೆಬ್ಬಿಸಿ ಪುರವು | ದಂಡು ಮುಂದಾಗೆ ರಿಪುಬಲವು | ಕ್ಷೀಣಗತಿ ಹೊಂದುತಲಿರೆ ಪುರವು 25 ಸ್ತ್ರೀಜಿತನಾಗಿಹಕಾರಣದಲಿಯಾ ರಾಜಪುರಂಜನಗೆ | ಯತ್ನವಿ- ಲ್ಲದೆ ತನ್ನಯಪುರಿಗೆ | ಕೇಡುಬಂ- ದರು ತೋರದು ಕೊನೆಗೆ | ಶೋಕದಿ ಮನದೊಳಗೆ | ಮಿ ಡುಕುತಲಿರಲಾನೃಪತಿಮೇಗೆ | ಮತ್ತು ಶತ್ರುಗಳುನೆರೆಯೆ ಹೀಗೆ 26 ಯವನೇಶ್ವರನೊಬ್ಬನುಭಯಪ್ರಜ್ವಾ ರಾದಿ ಸೈನಿಕರನು | ಕಾಲಕನ್ಯಾಖ್ಯ ಯುವತಿಯನ್ನು | ಕರೆದುಕೊಂ- ಡೀಪುರವ ಸೇರಿದನು | ಬವರದಿ ಗೆದ್ದನು ಭವಿಸಿದನಾ ಕನ್ಯಾಮಣಿಪಟ್ಣವನು | ಭೋಗಿಸಿದ- ಳಾಪ್ರಜ್ವಾರನನು | ಸುಡಲುಪುರಿ ಕಂಡು ಪುರಂಜನನು 27 ಕಾಲಕನ್ಯೆ ತಾ ಲೀಲೆಯಿಂದಲಿ ನೃ- ಪಾಲನ ಹತ್ತಿಗೆಯಾ | ಪಿಡಿಯೆ ಹಾ- ಹಾಯೆನಲಾರಾಯಾ | ಅಬಲತೋ- ರದು ಮುಂದೆ ಉಪಾಯ | ಬಾಲಕರನು ಪತ್ನಿಯ | ನುಕೂಗಿಬಿಡು-
--------------
ಗುರುರಾಮವಿಠಲ
ಬಂದರೆ ಭಾಗ್ಯ ಲಕ್ಷ್ಮಿಯರುಮುಯ್ಯವ ಛಂದಾಗಿ ಗೆಲಿಸೆಂದುವಂದಿಸಿ ಹರಿಗೆ ಪ. ಇಂದು ಮುಖಿಯರೆಲ್ಲ ಛಂದಾದ ವಸ್ತಗಳಿಟ್ಟುಚಂದ್ರಗಾವಿಯನುಟ್ಟು ಚಂದ್ರನಂತೆ ಒಪ್ಪುತ 1 ನೀಲ ಮಾಣಿಕದ್ವಸ್ತ್ರಮೇಲುದು ಧರಿಸುತ ನೀಲಾದಿಗಳೆಲ್ಲ 2 ವಸ್ತ ಮುತ್ತಿನ ಇಟ್ಟು ಕಸ್ತೂರಿ ಬೊಟ್ಟಿಟ್ಟುಮಸ್ತಕದಲಿ ಮಾಣಿಕ್ಕಿಟ್ಟು ಭದ್ರಾದಿಗಳು 3 ಹಸ್ತಾಭರಣ ಸಮಸ್ತ ವಸ್ತಗಳಿಟ್ಟುಸ್ವಸ್ತ ಚಿತ್ತದಿಂದ ಮಿತ್ರ ವೃಂದಾರಕಾದಿಗಳು 4 ಕಾಲಿಂದ್ಯಾದಿಗಳೆಲ್ಲ ಬಹಳೆ ವಸ್ತಗಳಿಟ್ಟುವೈಯಾರಿಯರು ಒಲಿಯುತ ವ್ಯಾಲಾಶಯನನ ಬಳಿಗೆ5 ಲಕ್ಷಣಾದಿಗಳೆಲ್ಲ ಲಕ್ಷ ವಸ್ತಗಳಿಟ್ಟುಲಕ್ಷ್ಮಿರಮಣನೆ ಪಂಥ ವೀಕ್ಷಿಸಿಗೆಲಿಸೆಂದು 6 ಜಾಂಬವಂತ್ಯಾದಿಗಳು ತುಂಬಿದೊಸ್ತಗಳಿಟ್ಟುಸಂಭ್ರಮ ಸೂಸುತ ಅಂಬುಜಾಕ್ಷನ ಬಳಿಗೆ7 ಹದಿನಾರು ಸಾವಿರ ಚದುರೆಯರು ವಸ್ತಗಳಿಟ್ಟುಮದನ ಜನಕನ ಮುಯ್ಯ ಮುದದಿಂದ ಗೆಲಿಸೆಂದು8 ವೀರ ರಾಮೇಶ ನಾರಿಯರ ಸೋಲಿಸೋ ಭಾರನಿನ್ನದೆಂದು ನೂರು ಮಂದಿನುಡಿದಾರು 9
--------------
ಗಲಗಲಿಅವ್ವನವರು
ಭಾಳೆ ಗಾಬರಿಗೊಂಡಳು ಇಂದಿರಾದೇವಿಭಾಳೆ ಗಾಬರಿಗೊಂಡಳು ವ್ಯಾಲಾಶಯನನು ಇವಳ ಪೇಳಿದಂತಿರಲುಏನು ಬಾಳು ಯಾತಕೆ ಎಂದಳು ಪ. ಸಂಡಿಗೆ ಹಪ್ಪಳ ಮಂಡಗಿ ಗುಳ್ಳೋರಿಗೆ ದಿಂಡು ಸೂರಣವು ಮೊದಲಾಗಿದಿಂಡು ಸೂರಣವು ಮೊದಲಾಗಿ ಬಡಿಸೋರುದುಂಡು ಮುತ್ತುಗಳು ಉದುರುತ1 ಅಪಾರ ಮಹಿಮಗೆ ರೂಪಸುಂದರಿಯರು ಸೂಪ ಪರಮಾನ್ನ ಮೊದಲಾಗಿಸೂಪÀ ಪರಮಾನ್ನ ಮೊದಲಾಗಿ ಬಡಿಸುವವರಭಾಪುರಿ ಮುತ್ತು ಉದುರುತ 2 ಘೃತ ಘೃತ ಮೊದಲಾಗಿ ಬಡಿಸುವವರತೋರ ಮುತ್ತುಗಳು ಉದುರುತ 3 ನಗಧರನ ಪುರದೊಳಗೆ ಹಗಲು ರಾತ್ರಿಯು ಬಂದೆಝಗ ಝಗಿಸುವ ಮಣಿಯು ಖಚಿತದಝಗ ಝಗಿಸುವ ಮಣಿಯು ಖಚಿತವಾದುದರಿಂದಹಗಲು ರಾತ್ರಿಗಳು ತಿಳಿಯವು4 ಮಂದ ಗಮನೆಯರೆಲ್ಲ ಮಿಂದು ಮಡಿಯುಟ್ಟು ಇಂದಿರಾಪತಿಯ ಸರಿಯಾಗಿಇಂದಿರಾಪತಿಯ ಸರಿಯಾಗಿ ಊಟಕ್ಕೆ ಬಂದುಕುಳಿತವರು ಕಡೆಯಿಲ್ಲ5 ಪುಂಡರಿಕಾಕ್ಷÀನು ಉಂಡು ಕೈತೊಳೆದನು ದುಂಡುಮಲ್ಲಿಗೆಯ ಸೆಳಿಮಂಚದುಂಡು ಮಲ್ಲಿಗೆಯ ಸೆಳಿ ಮಂಚವನೇರಿದ ಪಾಡವಪ್ರಿಯ ಹರುಷದಿ 6 ಹದಿನಾರುಸಾವಿರ ಚದುರೆಯರು ಒಂದಾಗಿಚಲುವ ರಾಮೇಶನ ಉಪಚಾರಚಲುವ ರಾಮೇಶನ ಉಪಚಾರ ಮಾಡುವ ಸುದತೆಯರ ಸುಖಕೆ ಎಣೆಗಾಣೆ7
--------------
ಗಲಗಲಿಅವ್ವನವರು
ಭೀಮ ಶಾಮ ಕಾಮಿನಿಯಾದನು ಪ ಭೀಮ ಶಾಮ ಕಾಮಿನಿಯಾಗಲು ಪತಿ ಪುಲೋಮ ಜಿತುವಿನ ಕಾಮಿನಿ ಸಕಲ ವಾಮ ಲೋಚನೆಯ- ರಾಮೌಳಿ ಕೂಗುತಲೊಮ್ಮನದಿ ಪಾಡೆಅ.ಪ ದಾಯವಾಡಿ ಸೋತು ರಾಯ ಪಾಂಡವರು ನ್ಯಾಯದಿಂದ ಸ್ವಾಮಿಯ ಸೇವೆಯೆಂದು ಕಾಯದೊಳಗೆ ಅಸೂಯೆಪಡದಲೆ ಮಾಯದಲ್ಲಿ ವನವಾಯಿತೆಂದು ರಾಯ ಮತ್ಸ್ಯನಾಲಯದೊಳು ತಮ್ಮ ಕಾಜು ವಡಗಿಸಿ ಅಯೋನಿಜೆ ದ್ರೌಪ- ದೀಯ ವಡಗೂಡಿ ಆಯಾಸವಿಲ್ಲದೆ ಅಯ್ವರು ಬಿಡದೆ ತಾವಿರಲು 1 ಬಾಚಿ ಹಿಕ್ಕುವ ಪರಿಚಾರತನದಲಾ ಪಾಂಚಾಲಿಗೆ ಮತ್ಸ್ಯನಾ ಚದುರೆಯಲ್ಲಿ ಆಚರಣೆಯಿಂದ ಯಾಚಕರಂದದಿ ವಾಚವಾಡಿ ಕಾಲೋಚಿತಕೆ ನೀಚರಲ್ಲಿಗೆ ಕೀಚಕನಲ್ಲಿಗೆ ಸೂಚಿಸಲು ಆಲೋಚನೆಯಿಂದಲಿ ನಾಚಿಕೆ ತೋರುತಲಾ ಚೆನ್ನೆ ಪೋಗಲು ಕರ ಚಾಚಿದನು 2 ಎಲೆಗೆ ಹೆಣ್ಣೆ ನಿನ್ನೊಲುಮೆಗೆ ಕಾಮನು ಕಳವಳಿಸಿದ ನಾ ಗೆಲಲಾರೆನಿಂದು ವಲಿಸಿಕೊ ಎನ್ನ ಲಲನೆಯ ಕರುಣಾ- ಜಲಧಿಯೆ ನಾರೀ ಕುಲಮಣಿಯೆ ಬಳಲಿಸದಲೆ ನೀ ಸಲಹಿದಡೇ ವೆ- ಗ್ಗಳೆಯಳ ಮಾಡಿಪೆನಿಳೆಯೊಳೆನ್ನೆ-ಆ- ಖಳನಾ ಮಾತಿಗೆ ತಲೆದೂಗುತಲಿ ಅ- ನಿಳಜನೆನ್ನ ನೀ ಸಲಹೆಂದ 3 ಮೌನಿ ದ್ರೌಪದಿ ಮೌನದಲ್ಲಿ ಹೀನನಾಡಿದಾ ಊನ ಪೂರ್ಣಗಳು ಮನೋಭಾವವ ಧೇನಿಸಿ ನೋಡುತ್ತ ಹೀನಕೆ ತಿಳಿದಳು ಮನದಲಿ ದೀನವತ್ಸಲ ಕರುಣವು ಮೀರಿತು ಕಾನನದೊಳ್ಕಣ್ಣು ಕಾಣದಂತಾಯಿತು ಏನು ಮಾಡಲೆಂದು ಜಾಣೆಯು ಚಿಂತಿಸಿ ಅನಿಲಗೆ ಬಂದು ಮ-ಣಿದಳು4 ಚೆಲ್ವೆ ಕಂಗಳೇ ನಿಲ್ಲೆ ನೀ ಘಳಿಗೆ ಸಲ್ಲದೆ ಆತನ ಹಲ್ಲನು ಮುರಿದು ಹಲ್ಲಣವ ಹಾಕಿ ಕೊಲ್ಲುವೆ ನಾನೀಗ ತಲ್ಲಣಿಸದಿರೇ ಗೆಲ್ಲುವೆನೆ ಪುಲ್ಲನಾಭ ಸಿರಿನಲ್ಲನ ದಯವಿ- ದ್ದಲ್ಲಿಗೆ ಬಂದಿತು ಎಲ್ಲ ಕಾರ್ಯಗಳ ಸಲ್ಲಿಸಿ ಕೊಡುವನು ಬಲ್ಲಿದ ನಮಗೆ ಮಲ್ಲಿಗೆ ಮುಡಿಯಾ ವಲ್ಲಭಳೆ 5 ಎಂದ ಮಾತಿಗಾನಂದ ಮಯಳಾಗಿ ಬಂದಳಾ ಖಳನ ಮಂದಿರದೊಳು ನೀ- ನೆಂದ ಮಾತಿಗೆ ನಾನೊಂದನು ಮೀರೆನು ಕಪಟ ಸೈರಂಧಿರಿಯೂ ಕುಂದಧಾಭರಣವ ತಂದು ಕೊಡಲು ಆ- ನಂದದಿಂ ಪತಿಯ ಮುಂದೆ ತಂದಿಟ್ಟಳು ಮಂದರೋದ್ಧರನ ಚಂದದಿ ಪೊಗಳುತ ಇಂದು ಸುದಿನವೆಂದ ಭೀಮ6 ಉಟ್ಟ ಪೀತಾಂಬರ ತೊಟ್ಟ ಕುಪ್ಪಸವು ಇಟ್ಟತಿ ಸಾದಿನ ಬಟ್ಟು ಫಣಿಯಲ್ಲಿ ಕಟ್ಟಿದ ಮುತ್ತಿನ ಪಟ್ಟಿಸ ಕಿವಿಯಲ್ಲಿ ಇಟ್ಟೋಲೆ ತೂಗಲು ಬಟ್ಟ ಕುಚ ಘಟ್ಟಿ ಕಂಕಣ ರ್ಯಾಗಟೆ ಚೌರಿ ಅ- ದಿಟ್ಟಂಥ ಈರೈದು ಬೆಟ್ಟುಗಳುಂಗರ ಮುಟ್ಟೆ ಮಾನೆರಿ ದಟ್ಟಡಿವೊಪ್ಪತಿ ಕಟ್ಟುಗ್ರದ ಜಗ ಜಟ್ಟಿಗನು 7 ತೋರ ಮೌಕ್ತಿಕದ ಹಾರ ಸರಿಗೆ ಕೇ ಯೂರ ಪದಕ ಭಂಗಾರ ಕಾಳಿಸರ ವೀರ ವಿದ್ರುಮದ ಭಾಪುರಿ ಉ- ತ್ತಾರಿಗೆ ವರ ಭುಜಕೀರುತಿಯು ಮೂರೇಖೆಯುಳ್ಳ ಉದಾರ ನಾಭಿವರ ನಾರಿ ನಡು ಉಡುಧಾರ ಕಿಂಕಿಣಿ ಕ- ಸ್ತೂರಿ ಬೆರಸಿದ ಗೀರುಗಂಧವು ಗಂ- ಬೂರ ಲೇಪ ಶೃಂಗಾರದಲಿ8 ವಂಕಿ ದೋರ್ಯವು ಕಂಕಣ ಒಮ್ಮೆಯೀ- ಚಾಪ ಭ್ರೂ ಅಲಂಕಾರ ಭಾವ ಪಂಕಜಮಾಲೆ ಕಳಂಕವಿಲ್ಲದಲೆ ಸಂಕಟ ಕಳೆವ ಪಂಕಜಾಂಘ್ರಿ ಝಂಕಾರಕೆ ಲೋಕ ಶಂಕಿಸೆ ನಾನಾ- ಅಂಕುರ ವೀರ- ಕಂಕಣ ಕಟ್ಟಿದ ಬಿಂಕದಿಂದಲಾ- ತಂಕವಿಲ್ಲದೆಲೆ ಕಂಕಾನುಜ 9 ಕಂಬು ಕೊರಳು ದಾಳಿಂಬ ಬೀಜ ದಂತ ದುಂಬಿಗುರುಳು ನೀಲಾಂಬುದ ಮಿಂಚೆಂ- ದೆಂಬ ತೆರದಲಾ ಅಂಬಕದ ನೋಟ ತುಂಬಿರೆ ಪವಳ ಬಿಂಬಾಧರ ಜಂಬೀರ ವರ್ಣದ ಬೊಂಬೆಯಂತೆಸೆವ ತಾಂಬೂಲ ಗಿಳಿಯೆಂಬ ಗಂಭೀರ ಪುರುಷನು ಹಂಬಲಿಸಿದ ತಾ ಸಂಭ್ರಮದಿ 10 ಸಂಧ್ಯಾದೇವಿಯೊ ಇಂದ್ರನ ರಾಣಿಯೊ ಚಂದ್ರನ ಸತಿಯೋ ಕಂದರ್ಪನಾಕರ- ದಿಂದ ಬಂದ ಅರವಿಂದದ ಮೊಗ್ಗೆಯೊ ಅಂದ ವರ್ಣಿಪರಾರಿಂದಿನಲಿ ಇಂದು ರಾತ್ರಿ ಇದೆ ಎಂದಮರಮುನಿ ಸಂದೋಹ ಕೊಂಡಾಡೆ ಇಂದುಮುಖಿಯೊಡ ನಂದು ತಾ ನಾಟ್ಯದ ಮಂದಿರಕೆ ನಗೆ- ಯಿಂದ ಬಂದ ಕುಂತಿನಂದನನು11 ಭಂಡ ಉಡಿಯಲಿ ಕೆಂಡವೊ ಪರರ ಹೆಂಡರ ಸಂಗ ಭೂಮಂಡಲದೊಳೆನ್ನ ಗಂಡರು ಬಲು ಉದ್ದಂಡರು ನಿನ್ನನು ಕಂಡರೆ ಬಿಡರೋ ಹಂಡಿಪರೋ ಲಂಡ ಬಾಯೆಂದು ಮುಕೊಂಡು ಕೈದುಡುಕಿ ಅಂಡಿಗೆಳೆದು ಅಖಂಡಲನ ಭಾಗ್ಯ ಮಂಡೆ ಮೊಗ ಗಲ್ಲ ಡುಂಡು ಕುಚ ಮುಟ್ಟಿ ಬೆಂಡಾದನು 12 ಸಾರಿಯಲ್ಲ ಮಕಮಾರಿಯಿದೆನುತ ಶ- ರೀರ ವತಿ ಕಠೋರವ ಕಂಡು ಜ- ಝಾರಿತನಾಗಿ ನೀನಾರು ಪೇಳೆಂದು ವಿ- ಕಾರದ್ಯಬ್ಬರಿಸಿ ಕೂರ್ರನಾಗಿ ತೋರು ಕೈಯೆಂದು ಸಮೀರನು ಎದ್ದು ವಿ ಚಾರಿಸಿಕೋ ಎನ್ನ ನಾರಿತನವೆಂದು ವೀರ ಮುಷ್ಟಿಯಿಂದ್ಹಾರಿ ಹೊಡೆಯಲು ಕ್ರೂರನು ರಕ್ತವ ಕಾರಿದನು 13 ಹಾರಿ ಹೊಯ್ಯತಲೆ ಮೋರೆಲಿದ್ದ ಕಳೆ- ಸೂರೆಯಾಯಿತು ಪರನಾರೇರ ಮೋಹಿಸಿ ಪಾರಗಂಡವರುಂಟೆ ಶರೀರದೊಳಿದ್ದ ಮಾರುತೇಶ ಹೊರಸಾರಿ ಬರೆ ಧೀರ ಭೀಮರಾಯ ಭೋರಿಡುತ ಹಾರಿ ಕೋರ ಮೀಸೆಯನೇರಿಸಿ ಹುರಿಮಾಡಿ ನಾರಿಮಣಿ ಯಿತ್ತ ಬಾರೆಂದು ಕರೆದು ಸಾರಿದನು ನಿಜಾಗಾರವನು 14 ಸರಸವು ನಿನಗೆ ವಿರಸವು ಆಯಿತು ಕರೆಸೆಲೊ ಈ ಪುರದರಸಾ ಕಳ್ಳನ ನರಸಿಂಹನ ನಿಜ ಅರಸಿಗೆ ಮನವನು ಮಂದರ ಅರಸನೆ ಅರಸಿ ನೋಡುತಿರೆ ವರೆಸಿದನಾ ಜೀವ ದೊರಸೆಯ ಖೂಳನ ಬೆರೆಸಿ ಸವಾಂಗ ಸಿರಿ ವಿಜಯವಿಠ್ಠಲ ಅರಸಿನ ಲೀಲೆಯ ಸ್ಮರಿಸುತಲಿ 15
--------------
ವಿಜಯದಾಸ
ಮಂದರ ಧರನೆಂಬೊ ಕೋಲಸುಂದರಾಂಗನೆಂಬೊ ಯಾದವೇಂದ್ರಚಂದ್ರನೆಂಬೊ ಕೋಲ ಪಿಡಿದು ನಿಂತಾರು ಪ. ಹದಿನಾರು ಸಾವಿರ ಮಂದಿಮುದದಿಂದ ಹೆಜ್ಜೆಯನಿಕ್ಕುತ ಚದುರೆಯರು ಕೋಲಾಟಕ್ಕಾಗಿಒದಗಿ ನಿಂತಾರು1 ನೂರು ಮಂದಿ ನಾರಿಯರೆಲ್ಲಹಾರಭಾರ ಅಲಿಯುತಲೆಮುರಾರಿಯ ಮುಂದೆಲ್ಲಸಾಲು ಸಾಲಿಲೆನಿಂತರು 2 ನೀಲ ವರ್ಣನ ಮಡದಿಯರೆಲ್ಲಮೇಲಾದ ಕೋಲಾಟಕ್ಕಾಗಿಬಾಲೆಯರು ಬಂದೆಲ್ಲಸಾಲಾಗಿ ನಿಂತರು3 ಚಕ್ರಧರನ ಮಡದಿಯರೆಲ್ಲಚಕ್ಕನೆ ಕೋಲಾಟಕ್ಕಾಗಿನಕ್ಕು ಮುಗುಳನಗೆಯಸಖ್ಯದಲೆ ನಿಂತರು 4 ಪ್ರೇಮದಿಂದ ನಾರಿಯರೆಲ್ಲಭಾವೆ ರುಕ್ಮಿಣಿಗೆ ಎರಗಿಶ್ರೀಮಂತ ಧೀಮಂತ ನಮ್ಮಸ್ವಾಮಿ ಗೆಲಿಸೆಂದು 5 ಅಂಗನೆಯರು ರಾಮೇಶನ ಮಂಗಳ ಮಹಿಮೆಯಬೆಳದಿಂಗಳ ತುಂಬಿದರುಮೋಹನಾಂಗ ಚಂದ್ರಗೆ 6
--------------
ಗಲಗಲಿಅವ್ವನವರು
ಮುಕ್ಕೋಟ ದ್ವಾದಶಿಯ ದಿವಸ (ಮಾರ್ಗಶಿರ ಶುದ್ಧ ದ್ವಾದಶಿಯ ಉತ್ಸವ) ರಂಭೆ : ಮತಿವಂತೆ ಪೇಳೀತನ್ಯಾರೆ ದೇವ ವ್ರತತಿಯಧಿಪನಂತೆ ನೀರೆ ತೋರ್ಪ ಅತಿಶಯಾಗಮ ಬಗೆ ಬ್ಯಾರೆ ರತ್ನ ದ್ಯುತಿಯಾಭರಣವ ಶೃಂಗಾರ ಆಹಾ ಶ್ರುತಗೊಲಿಸೆನಗೆ ಆಶ್ರಿತ ರಕ್ಷಾರ್ಥಿತನ ಸಂ- ಗತಿ ಸ್ಮøತಿ ತತಿಗಳ ಮತಿಗಗೋಚರನಂತೆ 1 ಊರ್ವಶಿ : ಲಾಲಿಪುದೆಲೆಗೆ ಪೇಳುವೆನು ನೂತನವ ಲೋಲ ಲೋಚನನ ನಾಟಕ ಸತ್ಕಥನವ ಮೇಲಾಗಿ ಜಗದಿ ಶೋಭಿಪ ಶೇಷಾದ್ರಿಯಲಿ ಬಾಲಾರ್ಕಸದೃಶನೀತನು ಇರ್ಪನಲ್ಲಿ ನೀಲನಿಭಾಂಗನು ನೆನೆವರ ಪಾಪವ ಘೋಲುಘಡಿಸಲೆಂದೆನುತಲಿ ಭಾರ್ಗವ ಕೋಲಿಂದೆಸಗಿದ ಧರಣಿಗೆ ಬಂದು ಸ- ಲೀಲೆಗಳೆಸಗುವ ಜಾಲವಿದೆಲ್ಲ 2 ಸರಸಿಜಗಂಧಿ ಕೇಳ್ ದಿಟದಿ ತನ್ನ ಅರಮನೆಯಿಂದ ಸದ್ವಿಧದಿ ಈರ್ವ- ರರಸಿಯರ್ ಸಹಿತ ಮಿನಿಯದಿ ಅತಿ ಭರದಿಂದ ಸೂರ್ಯನುದಯದಿ ಆಹಾ ಉರುತರ ಹೇಮಪಲ್ಲಂಕಿಯೊಳಡರಿ ತ್ವರಿತದಿ ಪೋಗುವ ಭರವಿದೆಲ್ಲಿಗೆ ಪೇಳೆ3 ಊರ್ವಶಿ : ಮದ್ದಾನೆಗಾತ್ರೆ ಲಾಲಿಸಿ ಕೇಳು ಮಾತ ಬದ್ಧ ನೀ ಪೇಳ್ದ ಮನದ ಶಂಕಾವ್ರಾತ ತಿದ್ದಿಪೆ ಕೇಳು ಮಾರ್ಗಶಿರ ಮಾಸದೊಳು ಸೂರ್ಯ ಉದಯ ಕಾಲದೊಳು ಭದ್ರಭವನವನು ಪೊರಟು ವಿನೋದದಿ ಅದ್ರಿಧರನು ಸಜ್ಜನರೊಡಗೂಡಿ ಉ- ಪದ್ರಿತ ಪಾಪವ ಛಿದ್ರಿಪ ಸ್ನಾನಕೆ ರೌದ್ರಿತ ರಾಮಸಮುದ್ರದ ಬಳಿಗೆ 4 ರಂಭೆ : ಆರರೆ ಆಶ್ಚರ್ಯವಾಯ್ತೆನಗೆ ಅತಿ ಪರಮ ಮಹಿಮೆನೆಂದ ಮೇರೆಗೆ ಘನ- ತರ ಸ್ನಾನವೇನಿದು ಕಡೆಗೆ ವೃತ ದಿರವೋ ಉತ್ಸವವೋ ಪೇಳೆನಗೆ ಆಹಾ ತರುಣಿ ರನ್ನಳೆ ನಿನ್ನ ಚರಣಕ್ಕೆ ನಮಿಪೆ ಈ ಪರಿಗಳ ಸಾಂಗದಿಂದರುಹಬೇಕೆನಗಿನ್ನು 5 ಊರ್ವಶಿ : ಅಕುಟಿಲೆ ಬಾಲೆ ಯೌವನವಂತೆ ಕೇಳೆ ಸಕಲಾಂತರ್ಯಾತ್ಮನೀತನು ಸತ್ಯಶೀಲೆ- ಪ್ರಕಟ ವ್ರತವಿದಲ್ಲ ಅಂಜನಾದ್ರಿಯಲಿ ಭಕುತವತ್ಸಲನು ಉತ್ಸವಿಸುವನಲ್ಲಿ ವಿಕಳಹೃದಯ ನರನಿಕರಕಸಾಧ್ಯವೆಂ ದ್ಯುಕುತದಿ ಈ ಧರೆಯಲ್ಲಿ ಪ್ರತ್ಯೇಕದಿ ಅಖಿಳೋತ್ಸವ ಮಸ್ತಕಕಿದು ವೆಗ್ಗಳ ಮುಕುಟೋತ್ಸವವೆಂದೆನುತಲಿ ರಚಿಸುವ 6 ರಂಭೆ : ನಳಿನಾಕ್ಷಿ ಲಾಲಿಪುದಿನ್ನು ಸ್ನಾನ ವೊಲವಿಂದ ಗೈದ ಮೇಲಿವನು ತನ್ನ ರಮಣಿಯರ್ಸಹಿತಂದಣವನು ಏರಿ ನಿಲುನಿಲುತ್ಯಾಕೆ ಬರುವನು ಆಹಾ ಪೊಳಲೊಳಗಿಹ ಜನನಿಳಯದ ದ್ವಾರದಿ ಕಳಕಳವೇನಿದ ತಿಳುಪೆನಗೀ ಹದ7 ಊರ್ವಶಿ : ಕುಂದರದನೆ ಬಾಲೆ ಚದುರೆ ಸೈ ನೀನು ಮಿಂದು ತೋಷದಿ ಅಂದಣವನ್ನೇರಿ ತಾನು ಇಂದೀ ಪುರದೊಳಿರ್ಪ ಜನರ ದೋಷಗಳ ಕುಂದಿಸಲೆಂದವರವರ ದ್ವಾರದೊಳು ನಿಂದಿರುತಲ್ಲಿಯದಲ್ಲಿ ಆರತಿಗಳ ಚಂದದಿ ಕೊಳುತೊಲವಿಂದ ಕಾಣಿಕೆ ಜನ- ವೃಂದದಿ ಕೊಡುತಾನಂದ ಸೌಭಾಗ್ಯವ ಒಂದಕನಂತವ ಹೊಂದಿಸಿ ಕೊಡುವ 8 ರಂಭೆ : ಸರಸಿಜಾನನೆ ಮತ್ತೇನಿದನು ತನ್ನ ಅರಮನೆಯಲ್ಲಿ ಭೂದ್ವಿಜನರನು ಸರ್ವ ಪುರಜನ ಸಹಿತೊಳಗಿವನು ನಾನಾ ತರದಿ ಮೆರೆವ ಭೋಜನವನು ಆಹಾ- ಕರಿಸಿ ಆಮೇಲೆ ರಾತ್ರಿಯಲಿ ಸಾಲಿನಲಿ ವಿ- ಸ್ತರದ ಲಾಜದ ರಾಸಿಗಿರದೆ ಪೂಜಿಪುದ್ಯಾಕೆ 9 ಊರ್ವಶಿ : ಮಂಗಲಾನನೆ ಲೇಸು ನುಡಿದೆ ಕೇಳ್ ನೀನು ಗಂಗಾಜನಕ ತನ್ನ ಗೃಹದಿ ವಿಪ್ರರನು ಹಿಂಗದೆ ಕರೆಸಿ ವಿಪ್ರರನೆಲ್ಲ ಬರಿಸಿ ಸಂಗಾತದಲಿ ಆರೋಗಣೆ ಗೈದು ಮೆರೆಸಿ ಅಂಗಣದಲಿ ರಾತ್ರೆಯಲಿ ವಿನೋದದಿ ಕಂಗೊಳಿಸುವ ಉರಿದರಳ ಸಮೂಹಕೆ ರಂಗಪೂಜೆಯನುತ್ತಂಗವಿಸುವ ನಿಗ- ಮಂಗಳೊಡೆಯನು ವಿಹಂಗಮಾರೂಢ 10 ರಂಭೆ : ಅಮಮ ಮತ್ತೇನಿದ ಪೇಳು ಶ್ವೇತ- ಕುಮುದಾಪ್ತ ಠಾವಿನ ವೋಲು ಬಂದು ಆದರಿಸಲಿದರ ಮಧ್ಯದೊಳು ತನ್ನ ರಮಣಿಯರ್ ಸಹಿತ ತೋಷದೊಳು ಆಹಾ ವಿಮಲವನ್ನೇರಿನ್ನೆಲ್ಲಿಗೈದುವನೆಂಬಾ- ಗಮವ ಪೇಳೆನೆಗೆ ನೀ ನಮಿಪೆ ನಿನ್ನಂಘ್ರಿಯ 11 ಊರ್ವಶಿ : ಥೋರ ಕನಕುಂಭಕುಚಭಾರೆ ಕೇಳೆ ಶ್ರೀ ರಮಾರಮಣ ಪೂಜೆಯಗೊಂಡಾ ಮೇಲೆ ಚಾರು ಈ ಹೂವಿನ ತೇರನೇರುತಲಿ ಕೇರಿ ಕೇರಿಯೊಳಾರತಿಗೊಳ್ಳುತಲಿ ಭೋರಿಡುತಿಹ ವಾದ್ಯಧ್ವನಿ ಘನತರ ಭೇರಿ ಮೃದಂಗಾದ್ಯಖಿಳ ವಿನೋದದಿ ಸ್ವಾರಿಗೆ ತೆರಳುವ ಕ್ರೂರ ನರರ ಆ- ಘೋರ ಪಾಪ ಜರ್ಝರಿಸಲೆಂದು 12 ರಂಭೆ : ಅರವಿಂದಾಕ್ಷಿಯೆ ಮತ್ತೇನಿದನು ತನ್ನ ಅರಮನೆಯಿದಿರು ರಥವನು ತಾನು ಭರದೊಳಗಿಳಿದಂದಣವನು ಏರಿ ಮೆರೆವಾಲಯದ ಸುತ್ತುಗಳನು ಆಹಾ ತಿರುಗುವನ್ಯಾಕೆ ಭೂದ್ವಿಜರ ಘೋಷದಿ ವಾದ್ಯ- ಭರಿತ ಗಾಯನ ಭೇರಿ ಧ್ವನಿಗಳೇನಿದ ಪೇಳೆ13 ಊರ್ವಶಿ : ಕೃಷ್ಣಾಂಕ ವದನೆ ಕೇಳೆಲೆ ಪೇಳ್ವೆ ನಿನಗೇ ದುಷ್ಟಮರ್ದನ ರಥವಿಳಿವುತ್ತಲಾಗೇ ಅಷ್ಟದಿಗ್ಭಾಗದಿ ಗೃಹಸುತ್ತಿನೊಳಗೆ ಅಷ್ಟಾವಧಾನವ ರಚಿಸುತ್ತ ಕಡೆಗೆ ಶ್ರೇಷ್ಠನು ರತ್ನಾಸನದಿ ಗ್ರಹದಿ ಪರ ಮೇಷ್ಟಜನಕೆ ಸಂತೋಷಾನಂದದಿ ಸೃಷ್ಟಿಯ ಜನರ ಅನಿಷ್ಟವ ತ್ಯಜಿಸುತ ಇಷ್ಟವನೀವ ಯಥೇಷ್ಟ ದಯಾಬ್ಧ 14 ರಂಭೆ : ಅರಿತೆನಾ ಸ್ವಚ್ಛ ಚಿತ್ತದಲಿ ಇನ್ನು ಹರಿ ಏಕರೂಪನೆನ್ನುತಲಿ ಲಕ್ಷ್ಮೀ ಕರವೆನಿಸುವ ಕಾರ್ಕಳದಲಿ ಭಾಗ್ಯೋ- ದಯ ದೇವಾಲಯದ ಮಧ್ಯದಲಿ ಆಹಾ ತ್ವರಿತದಿ ನುತಿಸಿರೊ ಗುರು ನಾರಸಿಂಹ ಶ್ರೀ- ಕರ ವೆಂಕಟೇಶನ ಚರಣಕಮಲಗಳ 15
--------------
ತುಪಾಕಿ ವೆಂಕಟರಮಣಾಚಾರ್ಯ
ಮೋಜು ಮಾಡಿದಿರ ರುಕ್ಮಿಣಿ ಭಾಮೆಮೋಜು ಮಾಡಿದಿರರಾಜಪುತ್ರರ ವಾಜಿಗಾಣುತಸೋಜಿಗಾಗೇದರಾಜ ರಾಜರ ಪ. ಚದುರೆ ದ್ರೌಪದಿದೇವಿ ಮುದದಿ ಮುಯ್ಯವ ತಾರೆಇದುರಿಗೆ ಬಾರದೆ ಕದವನಿಕ್ಕಿ ಬಹಳೆ1 ಚಿಕ್ಕ ಸುಭದ್ರಾತಾ ಅಕ್ಕರದಿ ಬರುವಾಗಹೊಕ್ಕು ಒಳಗೆ ಕದವ ನಿಕ್ಕಿಕೊಂಡು ಬಹಳೆ2 ವಸುಧೆರಾಯರು ನಿಮ್ಮ ಕುಶಲಕ್ಕೆ ಬೆರಗಾಗಿಮುಸು ಮುಸು ನಗುತಾರೆ ಮುಸುಕಿನೊಳಗೆ ಬಹಳೆ3 ಕತ್ತಲೆಗಂಜುತ ಮಿತ್ರೆಯರು ನಿಂತೆವುಪೃಥ್ವಿರಾಯರು ನಿಮ್ಮ ಅರ್ಥಿಗೆ ನಗುತಾರೆ ಬಹಳೆ 4 ಕೃಷ್ಣ ರಾಮೇಶನ ಪಟ್ಟದರಾಣಿಯರುಎಷ್ಟು ಶಾಣೇರೆಂದು ಅಷ್ಟ್ಟೂರು ನಗುತಾರೆ ಬಹಳೆ5
--------------
ಗಲಗಲಿಅವ್ವನವರು
ವಾಣಿ ಬಾರೆ ಬೇಗ ವದನದಿ ವಾಣಿ ಬಾರೆ ಬೇಗ ಪ. ಜಾಣೆ ಕಲ್ಯಾಣಿ ಬ್ರಹ್ಮನ ರಾಣಿ ಭಾರತಿ ವಾಣಿ ಅ.ಪ. ಹೃದಯ ಮಂದಿರದಿಲಿದು ಸುವರ್ಣದ ಪದುಮ ಮಂಟಪಕೆ ಮುದವ ಬೀರುತೆನ್ನ ವದನದಿ ಸೇರುತ ಮುದ ಸುವಾಣಿಯ ಚದುರೆ ನುಡಿಸುವ ಶುಕವಾಣಿ 1 ಮಂಗಳ ಮಹಿಮನ ಅಂಗುಟದಿಂ ಬಂ ದಂಬರದಿಂದುದಿಶಿದಾಮರ ತರಂಗಿಣಿ ಗಂಗಾಸ್ನಾನವ ಮಾಡಿಶಿ ನಿನಗೆ ರಂಗನ ದಯಸೈತ ಪೀತಾಂಬರನುಡಿಸುವೆ ವಾಣಿ 2 ಭಕ್ತಿಯರಿಶಿಣ ಯುಕ್ತಿಯ ಕುಂಕುಮ ಶಕ್ತಿಯ ಗಂಧವ ಪರಶಕ್ತಿಯ ಪೂವನು ಮುಕ್ತಿದಾತೆ ಪೂಜಿಪೆ ಶ್ರೀ ಶ್ರೀನಿವಾಸ ಮುಕ್ತಿಪಥದಪೂರ್ವ ಮುತ್ತಿನರಗಿಣಿ ವಾಣಿ 3
--------------
ಸರಸ್ವತಿ ಬಾಯಿ
ಶ್ರೀದೇವಿಯಂ ಭಕ್ತರೊಡನೆ ಶುಭಕಾಯವೊಲಿದು ಆಡಿದನುಯ್ಯಾಲ ಪ ನೀಲಿಮಾಣಿಕದ ಮಂಟಪವ ಕಟ್ಟಿ ಮುತ್ತಿನ ಸರಪಣಿಗಳನೆ ಬಿಗಿಸಿ ಮೇಲುಕಟ್ಟುಗಳ ಹಾಸಿ ಮಲ್ಲಿಗೆಮಾಲೆಗಳ ಶೃಂಗರಿಸಿ 1 ಪಟಹ ನಿಸ್ಸಾಳ ಭೇರಿ ಕೊಳಲು ತಮಟವಾದ್ಯ ಮೊಳಗುತಿರಲು ಕುಟಿಲಕುಂತಲೆಯರೊಡನೆ ಆದಿಪತಿ ವಿಠಲನಾಡಿದ 2 ಚಂದ್ರಮನ ಪೋಲ್ವ ಮುಖದಿ ಫಣಿಯೊಳು ಶೌನಕಾದಿಗಳು ಸೇರಿ [ಅಂದದಿ] ಸ್ತುತಿಸೆ ಕ್ಷೀರಾಬ್ಧಿಶಯನನಾಡಿದ3 ಭೇರಿ ಶಂಖಗಳ ದ್ವನಿಯ ದುಂದುಭಿಯ ಭೋರಿಡುವ ಜಯರವಗಳ ನಾರಿಯರು ಶೋಭನಗಳ ಪಾಡುತ್ತಿರೆ ಧೀರನಾಡಿದ 4 ವೇದಚೋರನ ತರಿದು ಆದಿಮೂರುತಿ ವರದನ ವಿ- ನೋದದಿ ತೂಗಿದರು ರವಿಸೌಂದರಿಯನಾಡಿದ 5 ನೀಲವೇಣಿಯರು ಪಾಡುತ ತೂಗಿದರು ಗೋಪಾಲನಾಡಿದ 6 ಪರಶುಧರನೆನಿಸಿ ಹರನ ಶ್ರೀರಾಮಚಂದ್ರ ಕರುಣಾ ವಾರಿಧಿ ಕೃಷ್ಣನ ತೂಗಿದರು ವರಸತಿಯರು 7 ಚೋಜಿಗದಮತ್ಪುರದಸತಿಯರನುವೋಜಿಗಲಿಸಿದಭೌದ್ಧನಾ ತೇಜಿವಾಹನಕಲ್ಕ್ಯನಾ ತೂಗಿದರು ರಾಜೀವನೇತ್ರೆಯರು ಪಾಡುತ 8 ಚಿತ್ತಜೌಘ ಮನಮನದ ಚದುರೆಯರು ಮುತ್ತು ಸರಗಳನೆ ಧರಿಸಿ ದತ್ಯಂತ ಮೋಹದಿಂದ ತೂಗಿದರು ಹಸ್ತಿನೀಕಾಮಿನಿಯರು9 ಮತ್ತೆಸಾರಂಗವೆನಲುನಡೆಯುತಲಿವಿಸ್ತರಿಸಿಕುಚಯುಗಳದಿ ಕಸ್ತೂರಿಯ ಗಂಧವೆಸೆಯೆ ತೂಗಿದರು ಚಿತ್ತಿನೀಜಾತದವರು 10 ಕುಂಕುಮಾಂಕಿತ ಚದುರೆಯರಲಂಕರಿಸಿ ಭೂಷಣಗಳ ಶಂಕರನಸಖನ ಪಾಡಿ ತೂಗಿದರು ಶಂಖಿನೀಕಾಮಿನಿಯರು 11 ಕದಪುಗಳ ಕಾಂತಿಹೊಳೆಯೆ ಮೊಗಸಿರಿಯಪದುಮವನು ಪೋಲ್ವಂದ ಯದುವೀರನನು ಪಾಡುತತೂಗಿದರು ಕುಮುದಿನೀಕಾಮಿನಿಯರು 12 ಅಂಗನಮಣಿ ಪಾರ್ವತಿ ಸರಸ್ವತಿಯರು ರಂಗುಮಾಣಿಕರತ್ನದ ಮಂಗಳಾರತಿಯನೆತ್ತಿ ತೂಗಿದರು ಗಂಗೆಯನು ಪಡೆದಯ್ಯನ 13 ಚಿಂತಿತಾರ್ಥವ ಸಲಿಸುವ ಮುದ್ದುವೆಂಕಟೇಶನು ತಾನೆನಿಸುವ ಪಿತ ದೇವಪುರದ ಶ್ರೀಲಕ್ಷ್ಮೀಕಾಂತನಾಡಿದನುಯ್ಯಾಲಾ 14
--------------
ಕವಿ ಲಕ್ಷ್ಮೀಶ
ಸ್ವಾಮಿ ಬಂದನು ಸತ್ಯಭಾಮೆರುಕ್ಮಿಣಿಯರಿಂದ ಕಾಮಿತ ಫಲವ ಕೊಡುತಲೆ ಪ. ವಾಸುದೇವ ತಾಯಿ ದೇವಕಿದೇವಿಎಂಭತ್ತುಕೋಟಿ ಯಾದವರುಎಂಭತ್ತುಕೋಟಿ ಯಾದವರು ಬರುತಾರೆ ತೊಂಭತ್ತು ಮಹಲು ತೆರವಿರಲಿ 1 ಸರ್ಪಶಯನನ ಬದಿಯಲೊಪ್ಪುತ ಬಲರಾಮ ಛsÀಪ್ಪನ್ನ ಕೋಟಿ ದ್ವಿಜರಿಂದ ಛsÀಪ್ಪನ್ನ ಕೋಟಿ ದ್ವಿಜರಿಂದ ಬರುತಾರ ಎಪ್ಪತ್ತು ಮಹಲು ತರವಿರಲಿ 2 ಸೂರ್ಯ ಸೂರ್ಯ ಹೊಳೆವಂತೆ ಗರುಡನೇರಿಅಂಗಳಕ ಬಂದ ನರಹರಿ 3 ನಾಗಶಯನನು ಬಂದ ಬೇಗಆರುತಿ ತಾರೆ ನೂರು ಸೂರ್ಯರ ಬೆಳಕಿಲೆ ನೂರು ಸೂರ್ಯರ ಬೆಳಗೊ ಗರುಡನೇರಿಬಾಗಿಲಿಗೆ ಬಂದ ಯದುಪತಿ4 ಮದಗಜಗಮನೆ ಬ್ಯಾಗ ಕಡಲಾರತಿಯ ತಾರೆ ಚದುರೆ ನೀ ತಾರೆ ಫಲಗಳಚದುರೆ ನೀ ತಾರೆ ಫಲಗಳ ಐವರಿಗೆ ಎದುರಿಗೆ ಬಾರೆಂದು ಕರಿಯಮ್ಮ 5 ಕೃಷ್ಣರಾಯನು ಬಂದ ಬುಕ್ಕಿಟ್ಟು ಸೂರ್ಯಾಡೆಅಷ್ಟ ಸೌಭಾಗ್ಯ ಇವು ನೋಡಅಷ್ಟ ಸೌಭಾಗ್ಯ ಇವು ನೋಡ ಮಾಡಿದ್ದುಎಷ್ಟು ಸುಕೃತವು ಸ್ಮರಿಸಮ್ಮ6 ಮಾಧವ ರಾಮೇಶನ ಉಪಚರಿಸೆ7
--------------
ಗಲಗಲಿಅವ್ವನವರು
ಹರೇ ಹರೇ ಕೃಷ್ಣ ಹರೇ ಕೃಷ ಹರೇ ಹರೇ ಹರೇ ಪ ಕೌಸಲ್ಯ ವರವಂಶೋದ್ಭವ ಸುರ ಸಂಸೇವಿತ ಪದರಾಮ ಹರೇ ವಂಶೋದ್ಭವ ಶ್ರೀ ಕೃಷ್ಣಹರೇ 1 ಮುನಿಮಖರಕ್ಷಕ ದನುಜರಶಿಕ್ಷಕÀ ಘಣಿಧರ ಸನ್ನುತರಾಮಹರೇ ಘನವರ್ಣಾಂಗ ಸುಮನಸರೊಡೆಯ ಶ್ರೀ - ವನಜಾಸನ ಪಿತ ಕೃಷ್ಣ ಹರೇ 2 ಶಿಲೆಯ ಪಾದರಜದಲಿ ಸ್ತ್ರೀ ಮಾಡಿದ ಸುಲಲಿತ ಗುಣನಿಧಿ ರಾಮ ಹರೇ ಬಲುವಕ್ರಾಗಿದ್ದ ಬಲೆಯ ಕ್ಷಣದಲಿ ಚಲುವೆಯ ಮಾಡಿದ ಕೃಷ್ಣ ಹರೇ 3 ಹರಧನುಭಂಗಿಸಿ ಹರುಷದಿಜಾನಕಿ ಕರವಪಿಡಿದ ಶ್ರೀರಾಮ ಹರೇ ಸಿರಿ ರುಕ್ಮಿಣಿಯನು ತ್ವರದಲಿ ವರಿಸಿದ ಶರಣರ ಪಾಲಕ ಕೃಷ್ಣ ಹರೇ 4 ಜನಕ ಪೇಳೆ ಲಕ್ಷ್ಮಣ ಸೀತಾ ಸಹ ವನಕೆ ತೆರಳಿದ ರಾಮ ಹರೇ ವನಕೆ ಪೋಗಿ ತನ್ನಣುಗರೊಡನೆ ಗೋ - ವನು ಪಾಲಿಪ ಶ್ರೀ ಕೃಷ್ಣ ಹರೇ5 ತಾಟಕೆ ಖರಮಧು ಕೈಟಭಾರಿಪಾ ಪಾಟವಿ ಸುರಮಖ ರಾಮಹರೇ ಆಟದಿ ಫಣಿಮೇಲ್ ನಾಟ್ಯವನಾಡಿದ ಖೇಟವಾಹ ಶ್ರೀ ಕೃಷ್ಣ ಹರೇ 6 ಚದುರೆ ಶಬರಿಯಿತ್ತ ಬದರಿಯ ಫಲವನು ಮುದದಿ ಸೇವಿಸಿದ ರಾಮ ಹರೇ ವಿದುರನ ಕ್ಷೀರಕೆ ವದಗಿ ಪೋದ ಶ್ರೀ ಪದುಮನಾಭ ಜಯ ಕೃಷ್ಣ ಹರೇ 7 ಸೇವಿತ ಹನುಮ ಸುಗ್ರೀವನ ಸಖಜಗ - ತ್ಪಾವನ ಪರತರ ರಾಮಹರೇ ದೇವ ದೇವ ಶ್ರೀ ಕೃಷ್ಣ ಹರೇ 8 ಗಿರಿಗಳಿಂದ ವರಶರಧಿ ಬಂಧಿಸಿದ ಪರಮ ಸಮರ್ಥ ಶ್ರೀರಾಮ ಹರೇ ಗಿರಿಯ ತನ್ನ ಕಿರಿ ಬೆರಳಿಲೆತ್ತಿ ಗೋ - ಪರನ ಕಾಯ್ದ ಶ್ರೀ ಕೃಷ್ಣ ಹರೇ 9 ಖಂಡಿಸಿದಶಶಿರ ಚಂಡಾಡಿದ ಕೋ - ದಂಡಪಾಣಿ ಶ್ರೀ ರಾಮ ಹರೇ ಪಾಂಡುತನಯರಿಂ ಚಂಡಕೌರವರ ದಿಂಡುಗೆಡಹಿಸಿದ ಕೃಷ್ಣ ಹರೇ 10 ತವಕದಯೋಧ್ಯಾ ಪುರಕೈದಿದ ತ - ನ್ಯುವತಿಯೊಡನೆ ಶ್ರೀ ರಾಮ ಹರೇ ರವಿಸುತ ತನಯಗೆ ಪಟ್ಟವಗಟ್ಟಿದ ಭವತಾರಕ ಶ್ರೀ ಕೃಷ್ಣ ಹರೇ 11 ಭರತನು ಪ್ರಾರ್ಥಿಸಲರಸತ್ವವ ಸ್ವೀ - ಕರಿಸಿದತ್ವರದಲಿ ರಾಮ ಹರೇ ವರಧರ್ಮಾದ್ಯರ ಧರಿಯೊಳು ಮೆರೆಸಿದ ಪರಮಕೃಪಾಕರ ಕೃಷ್ಣ ಹರೇ 12 ಧರೆಯೊಳಜ್ಞಜನರನು ಮೋಹಿಪುದಕೆ ಹರನ ಪೂಜಿಸಿದರಾಮ ಹರೇ ಹರನ ಪ್ರಾರ್ಥಿಸಿವರವನು ಪಡೆದಾ ಚರಿತೆಯಗಾಧವು ಕೃಷ್ಣ ಹರೇ 13 ಅತುಳಮಹಿಮ ಸದ್ಯತಿಗಳ ಹೃದಯದಿ ಸತತ ವಿರಾಜಿಪÀರಾಮಹರೇ ಸಿತವಾಹನ ಸಾರಥಿಯೆನಿಸಿದ ಸುರತತಿ ಪೂಜಿತ ಪದ ಕೃಷ್ಣ ಹರೇ 14 ರಾಮ ರಾಮ ಯಂದ್ನೇಮದಿ ಭಜಿಪರ ಕಾಮಿತ ಫಲದ ಶ್ರೀ ರಾಮಹರೇ ಪ್ರೇಮದಿ ಭಕ್ತರ ಪಾಲಿಪ ಶ್ರೀ ವರ - ದೇಶವಿಠಲ ಶ್ರೀ ಕೃಷ್ಣ ಹರೇ 15
--------------
ವರದೇಶವಿಠಲ
ಉಪ್ಪವಡಿಸಯ್ಯ ಹರಿಯೇಏಳೈ ಹೃಷಿಕೇಶ ಏಳುರವಿ-ಶಶಿನಯನಪ.ಏಳು ಪಶುಗಳ ಕಾಯ್ದು ಪಾಲಿಸಿದೆ ಗೋಕುಲವಏಳು ಸುರವಂದಿತನೆ ಏಳು ಭೂಸತಿರಮಣಉಪ್ಪವಡಿಸಯ್ಯ ಹರಿಯೇ ಅಪಪಚ್ಚೆ ಮುಡಿವಾಳಗಳು ಅಚ್ಚ ಸೇವಂತಿಗೆಯುಬಿಚ್ಚು ಮಲ್ಲಿಗೆ ಜಾಜಿ ಸಂಪಿಗೆಯುಪುನ್ನಾಗಅಚ್ಚರಿಯ ಬಕುಲ ಕೆಂಜಾಜಿ ಕೇತಕಿಕುಸುಮಗುಚ್ಛಗಳಅಚ್ಚ ಜಾಣೆಯರು ಶ್ರೀಗಂಧ ಕಸ್ತೂರಿ ಪುನುಗುಬಿಚ್ಚು ಬಿಳಿಯೆಲೆಯಡಿಕೆ ಪಿಡಿದು ನಿಂತಿಹರಯ್ಯಮುಚ್ಚುತಿವೆ ತಾರೆಗಳು ಹೆಚ್ಚುತಿವೆ ರವಿಕಿರಣ ಅಚ್ಯುತನೆಉಪ್ಪವಡಿಸೊ 1ಚೆನ್ನೆಯರು ಚದುರೆಯರು ಸುಗುಣಸಂಪನ್ನೆಯರುಪನ್ನೀರು ತುಂಬಿರ್ದ ಪೊನ್ನ ತಂಬಿಗೆಗಳನುರನ್ನಗನ್ನಡಿಯನ್ನು ಪಿಡಿದು ನಿಂತಿರುವರೈ ಪನ್ನಂಗಶಯನ ಏಳೈ ||ಮನ್ನಣೆಯ ನಾರದರು ಮೊದಲಾದ ಮುನಿನಿಕರನಿನ್ನ ಮಹಿಮೆಗಳನ್ನು ಪಾಡಿ ನಲಿಯುವರಯ್ಯಇನ್ನು ಏಳೇಳು ಉದಯದ ಸಮಯ ಸಿರಿಯರಸಚೆನ್ನಿಗನೆ ಉಪ್ಪವಡಿಸೊ 2ದೇವದುಂದುಭಿ ಮೊಳಗೆ ದೇವಕನ್ನೆಯರೆಲ್ಲದೇವಾಂಗ ವಸ್ತ್ರವನು ಪಿಡಿದು ನಿಂತಿಹರಯ್ಯದೇವ ದೇವೇಶ ನಿಮ್ಮೋಲಗದ ಸಂಭ್ರಮಕೆ ದೇವತೆಗಳೆಲ್ಲ ಕರೆದು ||ದೇವ ಪ್ರಹ್ಲಾದಬಲಿ ಮುಖ್ಯರನು ಕಾಯ್ದವನೆದೇವ ಬ್ರಹ್ಮನ ಪಡೆದ ದೇವಗಂಗೆಯ ಪಿತನೆದೇವ ದೇವೋತ್ತಮನೆ ದೇವಾಧಿದೇವ ಪುರಂದರವಿಠಲಉಪ್ಪವಡಿಸೊ 3
--------------
ಪುರಂದರದಾಸರು
ಊದೊ ಕೊಳಲನು ಕೃಷ್ಣ ಊದೊ ಕೊಳಲನುವೇದ ವೇದ್ಯ ಊದು ಕೊಳಲ ನಾದ ತುಂಬೆ ನಭದಿ ಕೃಷ್ಣ ಪಮದನಜನಕ ಮೋಹನಾಂಗಚದುರೆಯರಿಗೊಲಿದು ವನದಿವಿಧ ವಿಧ ಕ್ರೀಡೆಗಳನಾಡಿಮುದವನಿತ್ತ ಮಧುಸೂದನನೆ 1ಗೋಪಿಕಾ ಸ್ತ್ರೀಯರ ವಾಕ್ಯಶ್ರೀಪತಿಯುಕೇಳಿಮುದದಿತಾಪಕಳೆದುಸುರರುತಲೆಯತೂಗೆ ಹರುಷದಿಂದಕೊಳಲನೂದಿದ ಚಲುವ ಕೊಳಲನೂದಿದ 2ನಾರಿಯರು ನಲಿದು ಬಂದುವಾರಿಧಿಯೊಳು ಸರಸವಾಡೆಮಾರಮಣನು ಸೀರೆಗಳನುಗಾರುಮಾಡಿ ಕದಿವರೇನೊತಾರೊ ವಸನವದುರುಳಕೃಷ್ಣ ತಾರೊ ವಸನವÀ3ಅಂಗನೆಯರೆ ನಿಮ್ಮ ವ್ರತಕೆಭಂಗವಾದ ಕಾರ್ಯವೆಸಗೆವಂದಿಸಿದರೆ ಕೊಡುವೆನೆಂದುರಂಗ ನಲಿದು ನುಡಿದ ಮುದದಿವಸನನೀಡಿದ ರಂಗವಸನನೀಡಿದ4ತರುಳರೆಲ್ಲ ಕೂಡಿಕೊಂಡುಕರುಗಳನ್ನೆ ಪಾಲಿಸುತಿರೆಮರೆಯ ಮಾಡಿ ಕರುಗಳನ್ನುದುರುಳತನವು ತರವೆ ಕೃಷ್ಣತಾರೊ ಕರುಗಳ ಕೃಷ್ಣ ತಾರೊ ಕರುಗಳ 5ಮಾತೆಯರನೆ ಅರಸುತಿರಲುಪ್ರೀತಿಯಿಂದ ಕರುಗಳನ್ನುಜೋಕೆಯಿಂದ ಪಿಡಿದು ತರಲುಯಾತಕೀಪರಿ ನಿಂದಿಸುವದುನೋಡಿ ಕರುಗಳ ನಿಂತಿರುವದು ನೋಡಿ ಕರುಗಳ 6ಗೊಲ್ಲತಿಯರ ಮನೆಯ ಪೊಕ್ಕುಮೆಲ್ಲುತಿರಲು ಬೆಣ್ಣೆ ಮೊಸರುನಲ್ಲೆಯರು ಪಿಡಿದು ಹರಿಯನಿಲ್ಲೊ ನಿಲ್ಲೊ ನಿಲ್ಲೊ ಕೃಷ್ಣಚೋರ ಕೃಷ್ಣನೆ ತೋರೊ ನಿಜವಜಾರಕೃಷ್ಣನೆ7ಚಿಕ್ಕ ಪ್ರಾಯದವರೆಕೇಳಿಸೊಕ್ಕಿನಿಂದ ನುಡಿವರೇನೆಬೆಕ್ಕು ತಿಂದ ತೆರವರಿಯದೆಧಿಃಕರಿಸುವುದುಚಿತವಲ್ಲನುಡಿವರೇನೆಲೆ ನಿಷ್ಠುರ ನುಡಿವರೇನೆಲೆ 8ಮಕ್ಕಳೆಲ್ಲ ಆಡುತಿರಲುಕಕ್ಕು ಬಿಕ್ಕು ಮಾಡಿಅವರದಿಕ್ಕು ದಿಕ್ಕುಗಳಿಗೆ ನಡೆಸಿಠಕ್ಕುತನವು ತರವೆ ಕೃಷ್ಣನಡತೆಯಲ್ಲವೊತುಡುಗಕೃಷ್ಣ ನಡತೆಯಲ್ಲವೊ9ಮಕ್ಕಳಾಡುತಿರಲು ಮಧ್ಯಸರ್ಪವೆರಡು ಕಾದಿ ಬರಲುದಿಕ್ಕು ತೋರದಂತೆ ಭಯದಿದಿಕ್ಕು ದಿಕ್ಕಿಗೆ ಓಡದಿಹರೆದುಡುಕು ನನ್ನದೆ ದೂರುವಿರೆನ್ನ ದುಡುಕು ನನ್ನದೆ 10ಹರಿಯ ಮಾತುಕೇಳಿಮುದದಿಹರುಷದಿಂದ ನಮಿಸಿ ಕೃಷ್ಣಗೆತ್ವರಿತದಿಂದಲಿ ಒಲಿಯೊ ಮುರಳೀ-ಧರನೆ ಹರುಷದಿಂದ ಕೃಷ್ಣನಮಿಸಿ ಬೇಡುವೆವೊ ಕೃಷ್ಣ ಸ್ಮರಿಸಿ ಪಾಡುವೆವೊ 11ಸರಸವಾಡÀುತಿಹಿರಿ ಎನ್ನಸ್ಮರಣೆಯಿಂದ ತನುವ ಮರೆತುಕ್ಷಮಿಪೆ ನಿಮ್ಮ ಗೃಹಕೆ ತೆರಳಿವನಜಮುಖಿಯರೆಲ್ಲರುತೆರಳಿರೆಂದನು ತರುಣಿಯರೆನ್ನ ಸ್ಮರಿಸಿರೆಂದನು 12ಕರುಣದಿಂದ ಸಲಹುತಿಹೆನುದುರಿತವೆಲ್ಲ ತರಿದು ಮುದದಿಕಮಲನಾಭ ವಿಠ್ಠಲನೆಂದುಕುಣಿದು ಪಾಡಿ ವನಿತೆಯರೆನಲಿದು ಪಾಡಿರೆ ನಾರಿಯರೆಲ್ಲ ಕುಣಿದು ಪಾಡಿರೆ 13
--------------
ನಿಡಗುರುಕಿ ಜೀವೂಬಾಯಿ