ಒಟ್ಟು 19 ಕಡೆಗಳಲ್ಲಿ , 14 ದಾಸರು , 18 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಾಘವೇಂದ್ರ ಗುರುರಾಯ ರಮಣೀಯ ಕಾಯ ಭೃಂಗ ಭವ ಭಂಗ ಪ ನೋಡಿದೆ ನಿಮ್ಮ ಮಹಿಮೆಯ ಹಾಡಿ ಪಾಡುವೆನೊ ನಿತ್ಯ ಆಡಿ ಕೊಂಡಾಡಲು ಬಲು ಗೂಢವಾಗಿದೆ ನಾಡಿನೊಳಗೆ ವೊಮ್ಮೆ ಸ್ಮರಣೆ ಮಾಡಿದವ ಧನ್ಯ ಎನ್ನು ಮೂಢ ಬುದ್ಧಿಯನು ಬಿಡಿಸು ಕೂಡಿಸು ಸಜ್ಜನರೊಳಗೆ 1 ನಾಮಾಭಿವಿಡಿದು ಉಮಾಪತಿ ಪರಿಯಂತ ಈ ಮನ ಎರಗಲಿ ಯಾಮ ಯಾಮಕೆ ಕಾಮಿಪೆ ಇದನೆ ಗುರುವೆ ವಾಮದಕ್ಷಣ ಮಾರ್ಗ ನೇಮ ತಪ್ಪುದಂತೆ ತಿಳಿಸಿ ಭ್ರಾಮ ಬುದ್ಧಿಯ ಓಡಿಸುವುದು 2 ಚಿಂತಾಮಣಿ ಕಂಡ ಮೇಲೆ ಭ್ರಾಂತಿಗೊಳಿಪÀ ವಿಷಯ ಚಿಂತಿಸಿ ಬೇಡುವುದು ಲೋಕಾಂತದ ಸುಖವು ಇಂತು ಬಾಗಿ ನಿಂತು ಕೇಳುವಂತೆ ಮಾಡದಿರು ಕರುಣಿ ಸಂತತ ನಿನ್ನ ಪಾದಕ್ರಾಂತನಾಗಿ ತುತಿಸುವೆ 3 ಸಾರಿಸಾರಿಗೆ ಈ ಚಿತ್ರ ತಾರತಮ್ಯವ ವಿಚಾರಗೈದು ನಲಿದಾಡಿ ಮೇರೆ ಇಲ್ಲದೆ ಕೋಶ ಇಂದಿರೇಶನ್ನ ಹೃ ದ್ವಾರಿಜದೊಳು ನಿಲಿಸಿ ಆರಾಧನೆ ಮಾಡುವ ವೈಕಾರಿಕ ಭಾಗ್ಯವೆ ಬರಲಿ 4 ನಮೋ ನಮೋ ಯತಿರಾಜ ಮಮತೆ ರಹಿತ ಅನುಪಮ ಚರಿತಾ ಪರಬೊಮ್ಮ ವಿಜಯವಿಠಲ ನಾ ತುಮ್ಮದೊಳಚಿನಪ ಜ್ಞಾನೋತ್ತುಮ ತುಂಗಭದ್ರವಾಸ 5
--------------
ವಿಜಯದಾಸ
ಇದು ಭಾಗ್ಯ ಇದು ಭಾಗ್ಯ ಇದು ಭಾಗ್ಯವಯ್ಯಪದುಮನಾಭನಪಾದಭಜನೆ ಸುಖವಯ್ಯಪ.ಕಲ್ಲಾಗಿ ಇರಬೇಕು ಕಠಿಣ ಭವತೊರೆಯೊಳಗೆಬಿಲ್ಲಾಗಬೇಕು ಬಲ್ಲವರ ಒಳಗೆ ||ಮೆಲ್ಲನೇ ಮಾಧವನ ಮನದಿ ಮೆಚ್ಚಿಸಬೇಕುಬೆಲ್ಲವಾಗಿರಬೇಕು ಭಕುತಜನರೊಳಗೆ 1ಬುಧ್ಧಿಯಲಿ ತನ್ನ ಮನ ತಿದ್ದುತ್ತಲಿರಬೇಕುಮುದ್ದಾಗಬೇಕು ಮುನಿಯೋಗಿಗಳಿಗೆ ||ಮಧ್ವಮತದಬ್ಧಿಯೊಳು ಮೀನಾಗಿ ಇರಬೇಕುಶುದ್ಧ ಭಕುತಿಯಸುಕೃತಉಣಲುಬೇಕು2ವಿಷಯ ಭೋಗದ ತೃಣಕೆ ಉರಿಯಾಗಿ ಇರಬೇಕುಕುಶಲದಲಿ ಶ್ರೀ ಹರಿಯ ನೆನೆಯಬೇಕು ||ವಸುಧೆಯೊಳು ನಮ್ಮ ಪುರಂದರವಿಠಲನಹಸನಾಗಿ ನೆನೆನೆನೆದು ಸುಖಿಯಾಗಬೇಕು 3
--------------
ಪುರಂದರದಾಸರು
ನೀ ದಯದಿ ನೋಡಿದರೆ ನಾ ಧನ್ಯ ಶ್ರೀರಂಗನೀ ಮುಖವ ತಿರುವಲು ನಾ ಪರದೇಶಿ ವಿಮಲಾಂಗ ಪವನಜಾಕ್ಷ ನೀ ಕೊಡಲು ಧನವಂತನೆನಿಸಿಹ್ಯದೀಜನರೊಳಗೆ ಘನವಂತನೆನಿಸಿಕೊಂಬೆಅನುಗಾಲ1ಹರಿನಿಮ್ಮ ವರಚರಣಕರುಣವಿರೆ ಧರೆಮೇಲೆದುರುವಾದಿಗಳ ಜೈಸಿ ನಿರುತನೆನಿಪಿಅನವರತ2ವರವೇದಸ್ಮøತಿಶಾಸ್ತ್ರ ಸ್ಥಿರದರಿವು ನಿಜಜ್ಞಾನವರಮುಕ್ತಿ ಲಭ್ಯತವಕರುಣದಿಂ ಶ್ರೀರಾಮ 3
--------------
ರಾಮದಾಸರು