ಒಟ್ಟು 200 ಕಡೆಗಳಲ್ಲಿ , 59 ದಾಸರು , 196 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇದುವೇ ಸಾಧಕ ವೃತ್ತಿಗಳು | ಇದೇ ಅಬಾಧಕ ಯುಕ್ತಿಗಳು ಪ ಸದ್ಗುರು ಪಾದಕ ಸದ್ಭಾವದಿ ನಂಬಿ | ಹೃದ್ಗತ ಗುಜವನು ಪಡೆದಿಹನು | ಸದ್ಗತಿಕಾಂಕ್ಷಿತ ಹರಿ ಕೀರ್ತನೆಗಳ | ಉದ್ಗಾರ ಪ್ರೇಮದ ಮಾಡುವನು 1 ಬಲ್ಲವನು ಕಂಡೆರಗಿ ಸಿದ್ಧಾಂತದಾ | ಉಳ್ಳಸದ್ಭೋಧವ ಕೇಳುವನು | ಮೆಲ್ಲನೆ ಮನನದಿ ಧ್ಯಾಸವು ಬಲಿಯುತ | ಕ್ಷುಲ್ಲರ ಮಾತಿಗೆ ಮನ-ವಿದನು 2 ಅನ್ಯರ ಸದ್ಗುಣ ವಾರಿಸಿ ಕೊಳುತಲಿ | ತನ್ನವಗುಣಗಳ ಜರಿಸಿದವನು | ಸನ್ನುಡಿ ಬಿರುನುಡಿಗಳಕದೆ ಕುಜನರ | ಮನ್ನಿಸಿ ಶಾಂತಿಯನು ಜಡಿದಿಹನು 3 ಬುದ್ಧಿಯ ಹೇಳಿದರೆ ನೀ ಹಿತ ಬಗೆಯದೆ | ತಿದ್ದುದರಂದದಿ ತಿದ್ದುವನು | ಇದ್ದಷ್ಟರೊಳಗೆ ಸಾರ್ಥಕದಲಿ ದಿನ | ಗದ್ದಿರ ಹೊರಿಯಲು ಉದರವನು 4 ಸರ್ವರೊಳಗೆ ಬಾಗಿ ಶಮೆ ದಮೆಯಿಂದಲಿ | ಗರ್ವವ ತ್ಯಜಿಸಿಹ ಜನರೊಳಗೆ | ಸರ್ವಭಾವದಿ ಗುರು ಮಹಿಪತಿ ಸ್ವಾಮಿಯು | ಅರ್ವವ ಜಗಸನ್ಮತನು 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದೆನ್ನ ಜನ್ಮ ಪಾವನವಾಯಿತು ತಂದೆ ಶ್ರೀಗುರು ನಿಮ್ಮ ಚರಣ ದರುಶನದಿ ಧ್ರುವ ಅರ್ಕ ಮಂಡಲಗಳು ರವಿಶಶಿ ಕಿರಣವು ಝಳಝಳಿಸುವ ಪ್ರಭೆ ನೋಡಿ ಅನಿಮಿಷದಾದೃಷ್ಟಿಲೆನ್ನ ಲಕ್ಷಿಯೊಳು ಸಾಕ್ಷಾತ್ವಸ್ತು ಗತಿಯು ನಿಮ್ಮ ಪ್ರಕಾಶವನು ಕಂಡಾಂಧತ್ವಗಳದಿನ್ನು 1 ಓಂಕಾರ ಮೊದಲಾದ ದ್ವಾದಶ ನಾದದಾ ಭೇದದಾ ಘೋಷವನು ಕೇಳಿನ್ನೀ ದೃಶ್ಯದಾ ಕರ್ಣಲೆನ್ನಾ ಲಯಲೀಲೆಯೊಳು ಸಾದೃಶ್ಯ ಮೂರ್ತಿಯು ನಿಮ್ಮ ಶ್ರುತಿಗಳು ಕೇಳಿ ಬಧಿರತ್ವವಾಗಳಿದಿನ್ನು 2 ಜಪವನ್ನು ತಿಳಿದು ಪ್ರಣಮ್ಯಲೆನ್ನ ಮೂರ್ತಿ ನಿಮ್ಮ ಮಂತ್ರವನು ತಿಳಿದು ಪಿಶಾಚತ್ವ ಕಳೆದಿನ್ನು 3 ಸ್ತುತಿ ಸ್ತೌತ್ಯ ಸ್ಮರಿಸುವ ದಿವ್ಯನಾಮಾಮೃತವ ನುಡಿದು ಪಯಸ್ವನೀ ಜಿಹ್ವೆಲೆನ್ನ ಮೂರ್ತಿ ನಿಮ್ಮ ಸ್ಮರಿತ ಗತಿವರಿತು ಮೂಕತ್ವ ಕಳೆದಿನ್ನು 4 ಚಿನ್ಮಯ ಚಿದ್ರೂಪ ಕಂಡು ಬೆರಗಾಗಿ ಮನ ಭ್ರಾಂತಿ ಅಜ್ಞಾನವನ್ನು ಜರಿಯಲೆನ್ನ ಏಕೋದೇವ ಈತ ವಿಶ್ವಾತ್ಮ ಹಂಸನೆಂದು ಸಂದೇಹ ಸಂಕಲ್ಪ ಬಾಧೆಯಾಗಳದಿನ್ನು 5 ಭಕ್ತಿ ಮುಕ್ತಿ ಉದಾರಿ ಆತ್ಮದಲಿ ಸಾರಿದೋರಿ ನಿಜ ಬೋಧಾಮೃತ ಬೆರೆದು ತಾರಿಸಲೆನ್ನ ಗರ್ಭಪಾಶದ ಬಲಿಯು ಹರಿದು ಧರೆಯೊಳಿನ್ನು ಉತ್ಪತ್ತಿ ಸ್ಥಿತಿ ಲಯದ ಬೀಜವನ್ನು ಹುರಿದಿನ್ನು 6 ಭಾಸ್ಕರಸ್ವಾಮಿಯ ಕರುಣಾಳು ಮೂರ್ತಿಯ ಮೂಢ ಮಹಿಪತಿಯ ಕೃಪಾಂಬುಧಿಯು ಕರುಣದಭಯ ಹಸ್ತವನು ಶಿರಸದಲ್ಲಿಡಲಾಗಿ ಧನ್ಯನಾದೆನು ಸತಿಪತಿ ಸಹಿತವಾಗಿನ್ನು 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇವರೇ ನಮ್ಮವರೂ ಇದು ಭಾಗ್ಯವುನಮಗ್ಹಗಲಿರಳೂ ಪ ಭವ ಸಮುದ್ರದಲಿ ಮುಳುಗಿಸಿ ಕಡೆಯಲಿ ಜವನಾಳ್ಗಳ ಕೈಗೊಪ್ಪಿಸಿ ಕೊಡುವ ಅ.ಪ ಧನಯೌವನ ಬಲವು | ದೇಹದ ಅನುಬಂಧಗಳಿರುವು ಮನೆಮಕ್ಕಳುವನಿತಾದಿಗಳೊಲಿವರೊ 1 ಕೇಳಿದ್ದಿಲ್ಲೆನಲೂ | ಇವನ ಹೀ- ಯಾಳಿಪರ್ ಸ್ವಜನಗಳೂ ಕಾಲಕಾಲದಿ ಬಾಡಿಗೆ ಎತ್ತಿನ ಪರಿ ಆಳಾಗಿದ್ದರೆ ಹಾ ಎಂದು ನಗುವ 2 ಇವರಾಸೆಯ ಮಾಡೀ | ನಾವುನ- ಮ್ಮವರನು ಹೋಗಾಡಿ ಕವಳಕೆ ಗತಿಯಿಲ್ಲದೆ ಪರಿಯಾಯಿತು ಕಡೆಹಾಯಿಸು ಗುರುರಾಮವಿಠ್ಠಲನೆ 3
--------------
ಗುರುರಾಮವಿಠಲ
ಇಷ್ಟಾದರು ದಯಮಾಡು ಪಂಡರಿನಾಥ ಪಾದ ಮುಟ್ಟಿ ಪ್ರಾರ್ಥಿಪೆನು ಪ ದಾನಧರ್ಮವು ಮಾಡಬೇಕೆಂದು ಮನವಿರೆ ದಾನವಾಂತಕ ಕೃಷ್ಣ ಧನವಿಲ್ಲವಯ್ಯ ಗಾನಲೋಲನೆ ಭಕ್ತಪಾಲ ನಿನ್ನಯ ಪಾದ ಧ್ಯಾನವ ಮಾಳ್ಪರ ಪಾದಧ್ಯಾನ ಕೊಡಿಸುದೇವ 1 ತೀರ್ಥಯಾತ್ರೆಗಳಿಂದ ಪಾರ್ಥಸಾರಥಿ ಕೃಷ್ಣ- ಮೂರ್ತಿ ಸೇವಿಸಲಸಮರ್ಥನಾಗಿರುವೆ ಮಾತು ಮಾತಿಗೆ ಕೃಷ್ಣಗೋವಿಂದ ಮಾಧವ ಶ್ರೀಪತಿ ಶ್ರೀಧರ ಸಲಹೆಂಬ ಸ್ಮರಣೆ 2 ಜ್ಞಾನಿಗಳೊಡನಾಡಿ ಶ್ರೀನಿವಾಸನೆ ನಿನ್ನ ನಾನಾಲೀಲೆಗಳ ಧ್ಯಾನಿಸಲಿಲ್ಲ ಹರಿಯೆ ಜ್ಞಾನಿಗಳರಸ ಭಕ್ತರ ಸುರಧೇನು ಅಜ್ಞಾನಿಗಳಳಿದು ಸುಜ್ಞಾನಜನರ ಸಂಘ 3 ಅಗಣಿತ ಮಹಿಮನೆ ನಿಗಮಗೋಚರ ಕೃಷ್ಣ ಖಗವಾಹನ ಕಂಸಾರಿಯೆ ದೇವ ಹಗಲು ಇರುಳು ನಿನ್ನ ಬಗೆಬಗೆ ಸ್ತುತಿಪರ ಪಾದಗಳು ಸೇವಿಪ ಪರಮಲಾಭವನು 4 ಕರೆ ಕರೆಗೊಳಿಸದೆ ಕಡಲಶಯನನೆ ಎನ್ನ ತೊಡರುಗಳನೆ ಬಿಡಿಸೆಂದು ಮೊರೆ ಇಡುವೆ ಮಡುವಿನೊಳ್ ಗಜವನುದ್ಧರಿಸಿ ರಕ್ಷಿಸಿದಂಥ ಕಮಲನಾಭ ವಿಠ್ಠಲನೆ ನಿನ್ನ ಸ್ಮರಣೆ 5
--------------
ನಿಡಗುರುಕಿ ಜೀವೂಬಾಯಿ
ಈ ಧರೆಯೊಳಗಿಂಥಾ ಸೊಬಗ ಕಾಣೆನೋ ಪ ಕಂತುಪಿತ ತನ್ನ ಕಾಂತೇಯರೊಡಗೂಡಿ | ನಿಂತು ಮಜ್ಜನಗೊಂಡು ಸಂತಸವಾಂತಪರಿಅ.ಪ ನಂದಾವ್ರಜದಿ ಇಂದ್ರನೂ | ಕುಪಿತನಾಗಿ | ಅಂಧವೃಷ್ಟಿಯ ಕರೆಯಲು | ಸಿಂಧೂಶಯನ ಗಿರಿಯ | ಮಂದಹಾಸದಿ ನೆಗಹಿ | ಸುಂದರ ಗೋವ್ಗಳನೆ | ಚೆಂದಾದಿಂದಲೆ ಪೊರೆಯೆ | ಅಂದು ತೋರಿದುಪಕೃತಿಯ ನೆನೆದು ಗೋ | ವೃಂದಗಳೈ | ತಂದಿಂದಿರೆಯರಸಗೆ | ಮಿಂದು ಮಧುರಕ್ಷೀರಧಾರೆಯ ಕರೆಯಲು | ನಂದಕುವರಾನಂದವ ಬೀರಿದ 1 ಕಿರಿಯರೊಡನೆ ಕೂಡುತ | ಗೋಪಾಲನು | ಮುರಲಿನಾದವ ಗೈಯುತ | ಹರಿಣಾಕ್ಷಿಯರಮನೆ | ಹರುಷದಿಂದಲೇ ಪೊಕ್ಕು | ಪರಿಪರಿ ಲೀಲೆಯಿಂ | ಬೆರಗು ಮಾಡುತಲಿರೆ | ವರ ಧದಿಘೃತ ಭಾಂಡಗಳನೊಡೆದು | ಯದುವರನಾಲೈಸುತ ಬರುವರ ಸುಳಿವನು | ಸರಸದಿ ಕಂಡಾಕ್ಷಣದಿಂದೋಡಲು | ಸುರಿದುದು ಶಿರದಲಿ ದಧೀಘೃತಧಾರೆಯು 2 ಕರುಣಾಸಾಗರ ಹರಿಯು | ಮೋಹದಿ ವರ | ಭೈಷ್ಮಿಭಾಮೇರ ಕೂಡುತಾ | ಭರದಿ ಕುಣಿಯಲವರ ಶಿರದಿ ಮುಡಿದ ಸುರಗೀ | ಅರಳುಮಲ್ಲಿಗೆಯೊಳು | ಸೆರೆಬಿದ್ದ ಮಧುಪಗಳ | ನೆರೆದು ಝೇಂಕರಿಸುತ | ಹರುಷದಿ ಸುರಿಸಲು ಸುರ ಸಂದೋಹವು | ಪರಿ 3 ಅಂಗಳದೊಳು ಆಡುತ | ಮಂಗಳಮೂರ್ತಿ | ಸಂಗಡಿಗರ ಸೇರುತಾ | ಮುಂಗುರುಳ್ಗಳ ಮೇಲೆ | ಕೆಂದೂಳಿಯನೇ ಧರಿಸಿ | ಗೋಪಿ ರಂಗನ್ನಪ್ಪಿದಳು ಮುದದೀ || ಅಂಗನೆ ರುಕ್ಮಿಣಿ ಭಂಗಿಯ ನೋಡಲು | ಅಂಗಜ ಪಿತನನು | ಪಿಂಗದೆ ಬೇಡಲು | ಮಂಗಳಾಂಗಿ ಮನದಿಷ್ಟವ ಸಲಿಸಲು | ಸಿಂಗರಗೊಂಡನು | ಸಕ್ಕರೆ ಸುರಿಸುತೆ 4 ಸುರನದೀ ಜನಕ ತಾನೂ | ಕುಂಜವನದಿ | ಸರಸಿಜಾಕ್ಷೇರ ಕೂಡುತ | ಸರಸವಾಡುತಲಿರೇ | ಪರಮ ಸಂತೋಷದಿ | ತರುಲತೆಗಳು ಹರಿಯ ಚರಣ ಸೇವೆಯಗೈಯ್ದು | ಕದಳಿಗಳುದುರಿಸೆ | ಗಳಿತ ಫಲಂಗಳು | ಸರಸಿಜನಾಭನು ಕರುಣಿಸಿ ಭಕುತರ | ಶಿರಿಯಾಳಪುರದೊಳು ಮೆರೆದನು ವಿಭವದಿ 5 ವ್ಯಾಸರಾಜರ ಪೀಠದೀ | ರಂಜಿಪ ಲಕ್ಷ್ಮೀಶತೀರ್ಥರಿಂ ಸೇವಿಪ ಭವ | ಪರಿಪರಿ ನರಳುವ ದಾಸರ ಸಲಹಲಿನ್ನು | ಸಾಸಿರ ಶಂಖದಿ ಪೂಜೆಯಗೊಳುತಿರೆ | ದೇಶದೇಶದ ಜನರಾಲಿಸಿ ಬರುತಿರೆ | ಶ್ರೀಶಕೇಶವ ತನ್ನ ಮಹಿಮೆಯ ತೋರಿದ 6
--------------
ಶ್ರೀಶ ಕೇಶವದಾಸರು
ಈತನೀಗ ವಾಸುದೇವನು ಲೋಕದೊಡೆಯ ಈತನೀಗ ವಾಸುದೇವನು ಪ ಈತನೀಗ ವಾಸುದೇವನೀ ಸಮಸ್ತ ಲೋಕದೊಡೆಯ ದೂತಗೊಲಿದು ತೇರನೇರಿ ತೇಜಿ ಪಿಡಿದು ನಡೆಸಿದಾತ ಅ ದನುಜೆಯಾಳ್ದನಣ್ಣನಯ್ಯನ ಪಿತನ ಮುಂದೆ ಕೌರವೇಂದ್ರನನುಜೆಯಾಳಿದವನ ಶಿರವ ಕತ್ತರಿಸುತ - ತನ್ನಅನುಜೆಯಾಳಿದವನ ಬೆಂಕಿ ಮುಟ್ಟದಂತೆ ಕಾಯ್ದ ರುಕ್ಮನನುಜೆಯಾಳಿದವನ ಮೂರ್ತಿಯನ್ನು ನೋಡಿರೊ1 ನರನ ಸುತನರಣ್ಯದಲ್ಲಿ ಗಿರಿಯೊಳ್ನಿಂತು ತನ್ನ ರೋಷದಿಶರಗಳನ್ನು ತೀಡುತಿಪ್ಪನ ಯೋಚಿಸಿಭರದಲವನ ಕರೆದು ಕುರುಹು ತೋರಿ ಪತ್ರವನ್ನು ಹಾರಿಸಿದವನಶಿರವನ್ನು ಛೇದಿಸಿದ ದೇವ ಕಾಣಿರೊ 2 ವೈರಿ ತೊಡೆಯ ಛೇದಿಸೆಂದು ಬೋಧಿಸಿಕಷ್ಟವನ್ನು ಕಳೆದು ಭಕ್ತರಿಷ್ಟವನ್ನು ಕಾದ ಉ-ತ್ಕøಷ್ಟ ಮಹಿಮನಾದ ದೇವ ಕಾಣಿರೊ 3 ಕ್ರೂರವಾದ ಫಣಿಪಬಾಣವನ್ನು ತರಣಿಜನೆಚ್ಚಾಗವೀರ ನರನತ್ತ ಬಪ್ಪುದನ್ನು ಈಕ್ಷಿಸಿ ಧಾರಿಣಿಯ ಪದದೊಳೌಕಿ ಚರಣಭಜಕ ನರನ ಕಾಯ್ದಭಾರಕರ್ತನಾದ ದೇವನೀತ ಕಾಣಿರೊ4 ವ್ಯೋಮಕೇಶನಿಪ್ಪ ದೆಸೆಯ ಸರ್ವ ಜಗಕೆ ತೋರುತಸಾಮಜವನೇರಿ ಬಹನ ಶಕ್ತಿಯನೀಕ್ಷಿಸಿಪ್ರೇಮದಿಂದ ಉರವನೊಡ್ಡಿ ಡಿಂಗರಿಗನ ಕಾಯ್ದ ಸಾರ್ವ-ಭೌಮ ಬಾಡದಾದಿಕೇಶವನ್ನ ನೋಡಿರೊ 5
--------------
ಕನಕದಾಸ
ಈಶ ನಿನ್ನ ಚರಣ ಭಜನೆ ಆಶೆಯಿಂದ ಮಾಡುವೆನುದೋಷ ರಾಶಿ ನಾಶ ಮಾಡು ಶ್ರೀಶ ಕೇಶವ ಪ ಶರಣು ಹೊಕ್ಕೆನಯ್ಯ ಎನ್ನ ಮರಣ ಸಮಯದಲ್ಲಿ ನಿನ್ನಚರಣ ಸ್ಮರಣೆ ಕರುಣಿಸಯ್ಯ ನಾರಾಯಣ1 ಕಲುಷ ಮಾಧವ 2 ಹಿಂದನೇಕ ಯೋನಿಗಳಲಿ ಬಂದು ಬಂದು ನೊಂದೆ ನಾನುಇಂದು ಭವದ ಬಂಧ ಬಿಡಿಸು ತಂದೆ ಗೋವಿಂದನೆ 3 ಭ್ರಷ್ಟನೆನಿಸ ಬೇಡ ಕೃಷ್ಣ ಇಷ್ಟು ಮಾತ್ರ ಬೇಡಿಕೊಂಬೆಶಿಷ್ಟರೊಳಗೆ ಇಟ್ಟು ಕಷ್ಟ ಬಿಡಿಸು ವಿಷ್ಣುವೆ 4 ಪಾದ ಪೂಜೆ ಮುದದಿ ಗೈವೆನಯ್ಯ ನಾನುಹೃದಯದೊಳಗೆ ಒದಗಿಸಯ್ಯ ಮಧುಸೂದನ 5 ಕವಿದುಕೊಂಡು ಇರುವ ಪಾಪ ಸವೆದು ಹೋಗುವಂತೆ ಮಾಡಿಜವನ ಬಾಧೆಯನ್ನು ಬಿಡಿಸೊ ಘನ ತ್ರಿವಿಕ್ರಮ 6 ಕಾಮಜನಕ ನಿನ್ನ ನಾಮ ಪ್ರೇಮದಿಂದ ಪಾಡುವಂಥನೇಮವೆನಗೆ ಪಾಲಿಸಯ್ಯ ಸ್ವಾಮಿ ವಾಮನ 7 ಸದನ ಮಾಡು ಮುದದಿ ಶ್ರೀಧರ 8 ಹುಸಿಯನಾಡಿ ಹೊಟ್ಟೆ ಹೊರೆವ ವಿಷಯದಲ್ಲಿ ರಸಿಕನೆಂದುಹುಸಿಗೆ ನನ್ನ ಹಾಕದಿರೋ ಹೃಷಿಕೇಶನೆ 9 ಅಬ್ಧಿಯೊಳಗೆ ಬಿದ್ದು ನಾನು ಒದ್ದುಕೊಂಬೆನಯ್ಯ ಭವದಿಗೆದ್ದು ಪೋಪ ಬುದ್ಧಿ ತೋರೊ ಪದ್ಮನಾಭನೆ10 ಕಾಮಕ್ರೋಧ ಬಿಡಿಸಿ ನಿನ್ನ ನಾಮ ಜಿಹ್ವೆಯೊಳಗೆ ನುಡಿಸುಶ್ರೀಮಹಾನುಭಾವನಾದ ದಾಮೋದರ 11 ಪಂಕಜಾಕ್ಷ ನೀನು ಎನ್ನ ಮಂಕುಬುದ್ಧಿ ಬಿಡಿಸಿ ನಿನ್ನಕಿಂಕರನ್ನ ಮಾಡಿಕೊಳ್ಳೊ ಸಂಕರುಷಣ12 ಏಸು ಜನ್ಮ ಬಂದರೇನು ದಾಸನಲ್ಲವೇನೊ ನಿನ್ನಘಾಸಿ ಮಾಡದಿರೋ ಎನ್ನ ವಾಸುದೇವನೆ 13 ಬುದ್ಧಿ ಶೂನ್ಯನಾಗಿ ನಾನು ಕದ್ದ ಕಳ್ಳನಾದೆನಯ್ಯತಿದ್ದಿ ಹೃದಯ ಶುದ್ಧಿ ಮಾಡೊ ಪ್ರದ್ಯುಮ್ನನೆ 14 ಜನನಿ ಜನಕ ನೀನೆ ಎಂದು ಎನುವೆನಯ್ಯ ದೀನಬಂಧುಎನಗೆ ಮುಕ್ತಿ ಪಾಲಿಸಿಂದು ಅನಿರುದ್ಧನೆ 15 ಹರುಷದಿಂದ ನಿನ್ನ ನಾಮ ಸ್ಮರಿಸುವಂತೆ ಮಾಡು ನೇಮಇರಿಸು ಚರಣದಲ್ಲಿ ಕ್ಷೇಮ ಪುರುಷೋತ್ತಮ 16 ಅಧೋಕ್ಷಜ 17 ಚಾರುಚರಣ ತೋರಿ ಎನಗೆ ಪಾರುಗಾಣಿಸಯ್ಯ ಕೊನೆಗೆಭಾರ ಹಾಕಿ ಇರುವೆ ನಿನಗೆ ನಾರಸಿಂಹನೆ 18 ಸಂಚಿತಾರ್ಥ ಪಾಪಗಳನು ಕಿಂಚಿತಾದರುಳಿಯದಂತೆಮುಂಚಿತಾಗಿ ಕಳೆದು ಪೊರೆಯೊ ಸ್ವಾಮಿ ಅಚ್ಯುತ19 ಜ್ಞಾನ ಭಕ್ತಿ ಕೊಟ್ಟು ನಿನ್ನ ಧ್ಯಾನದಲ್ಲಿ ಇಟ್ಟು ಎನ್ನಹೀನ ಬುದ್ಧಿ ಬಿಡಿಸೊ ಮುನ್ನ ಜನಾರ್ದನ 20 ಜಪತಪಾನುಷ್ಠಾನ ನೀನು ಒಪ್ಪುವಂತೆ ಮಾಡಲಿಲ್ಲತಪ್ಪ ಕೋಟಿ ಕ್ಷಮಿಸಬೇಕು ಉಪೇಂದ್ರನೆ 21 ಮೊರೆಯನಿಡುವೆನಯ್ಯ ನಿನಗೆ ಸೆರೆಯ ಬಿಡಿಸು ಭವದ ಎನಗೆಇರಿಸು ಭಕ್ತರೊಳಗೆ ಪರಮಪುರುಷ ಶ್ರೀಹರೇ22 ಪುಟ್ಟಿಸಲೇ ಬೇಡವಿನ್ನು ಪುಟ್ಟಿಸಿದಕೆ ಪಾಲಿಸಿನ್ನುಇಷ್ಟು ಬೇಡಿಕೊಂಬೆ ನಾನು ಶ್ರೀಕೃಷ್ಣನೆ23 ಸತ್ಯವಾದ ನಾಮಗಳನು ನಿತ್ಯದಲ್ಲಿ ಪಠಿಸುವವರಅರ್ತಿಯಿಂದ ಕಾಯದಿರನು ಕರ್ತೃ ಕೇಶವ 24 ಮರೆತು ಬಿಡದೆ ಹರಿಯ ನಾಮ ಬರೆದು ಓದಿ ಕೇಳುವರಿಗೆಕರೆದು ಮುಕ್ತಿ ಕೊಡುವ ಬಾಡದಾದಿಕೇಶವ 25
--------------
ಕನಕದಾಸ
ಊರ ದೇವರ ಮಾಡಿ ಊರ ಶಾಂತಿಯಾಗಲಿಊರದೇವತೆ ಗುರು ಚಿದಾನಂದ ತಾನೆನುತ ಪ ಶುದ್ಧ ಸುನಾದವೆನಿಸುವ ಡಂಗುರವ ಸಾರಿಸಾಧು ಶಮೆ ದಮೆ ಎಂಬ ಮೊಳಕೆ ಹೊಯ್ದುವೇದಾಂತವೆಂದೆಂಬ ಹಂದರವನೆ ಹಾಕಿವಾದಾತೀತಾತ್ಮದೇವಿಯ ಎದುರುಗೊಂಡು 1 ಹಲವು ನಾದಗಳೆಂಬ ವಾದ್ಯಗಳನೇ ನುಡಿಸಿಬೆಳಗುತಿಹ ತೇಜಃಪುಂಜಗಳ ಮುಟ್ಟಿಸಿಯೆಹೊಳೆಯುತಿಹ ನಾನಾ ಕಳೆ ಬರಿಸು ಬತ್ತಿಯ ಹಚ್ಚಿಬಳಿಕ ಚಿತ್ಕಳೆ ಎಂಬ ದೇವಿಯನು ಮೆರೆಸುತ್ತ 2 ಅಡ್ಡಾಡುವ ಮನವ ಹಿಡಿ ತಂದು ಕಟ್ಟಿದೊಡ್ಡ ಅಹಂಕಾರದ ಕೋಣವನು ಕಡಿಸಿಹೆಡ್ಡ ಕಾಮವದೆಂಬ ಕುರಿಯ ತಲೆ ಕಡಿಸಿಗೊಡ್ಡು ಗುಣಗಳು ಎಂಬ ಚೆರುಗ ಚೆಲ್ಲಿಸುತ್ತ3 ಸಿದ್ಧ ತಾನೆಂದೆಂಬ ಅಡುಗೆಯದು ಆಗಲುಸಿದ್ಧ ಪುರುಷರು ಎಲ್ಲ ಉಣಲು ಕುಳ್ಳಿರೆಶುದ್ಧ ತೃಪ್ತಿಯು ಎಂಬ ಔತಣವು ಮುಗಿಯಲುಅದ್ದಿಸಿರಿ ಆನಂದದಲಿ ಊರ ಜನರ 4 ಊರೆಂಬುದು ನಿಮ್ಮ ದೇಹವೇ ತಿಳಿಯಿರೋಊರ ದೇವತೆ ನೀನು ನಿಜವನರಿಯೋಊರ ದೇವರ ಮಾಡಿ ಆನಂದಪಡೆಯೋಇದಕೆ ತಾ ಸಾಕ್ಷಿ ಚಿದಾನಂದನರಿಯೋ 5
--------------
ಚಿದಾನಂದ ಅವಧೂತರು
ಎಂಥಾ ಪಾವನ ಪಾದವೋ ಶ್ರೀರಾಮನ ದೆಂಥಾ ಚೆಲುವ ಪಾದವೋ ಪ ಸಂತತವು ಸಜ್ಜನರ ಪಾಲಿಸೆ ನಿಂತು ಧನುವನು ಧರಿಸಿ ಮೆರೆವ ಅ.ಪ ಮುನಿಪತಿ ನುಡಿ ಮನ್ನಿಸಿ ತಪೋವನಕ್ಕನುಜನೊಡನೆ ಗಮಿಸೀ ಮುನಿಯಾಜ್ಞೆಯಿಂ ಘೋರ ತಾಟಕಿಯನೆ ವಧಿಸಿ ವಿನಯದಿ ಯಜ್ಞರಕ್ಷಣೆ ಮಾಡಿ ಮುದವಿತ್ತ 1 ಘನಶಾಪವನು ಕಳೆಯೆ ಮುನಿಯಾಜ್ಞೆಯಿಂ ಘನಶಿಲೆಯ ಮೇಲಡಿಯಿಟ್ಟು ಘನತರ ಮಾನಿನಿಯನು ನಿರ್ಮಿಸಿ ಮೆರೆದ 2 ಗುಹನು ಗಂಗೆಯ ತಟದಿ ದೋಣಿಯ ತಂದು ಗಹನ ಶಂಕೆಯೊಳಂದು ಸಹಜಭಕ್ತಿಯಲಿ ನಿರ್ಮಲಗಂಗೆಯುದಕದಿಂ ದಹಹ ಪಾದರಜವನು ತೊಳೆಯಲೊಪ್ಪಿದ 3 ಹರಧನುವನು ಭಂಗಿಸಿ ಮಿಥಿಲೆಯಲಿ ವರ ವಿಕ್ರಮವ ಮೆರೆಸಿ ತರುಣಿ ಜಾನಕಿಯಂದು ಶಿರದಿ ನಿನ್ನಡಿಗಳಿ ಗೆರಗಲು ಘನ ಶಂಕೆಯಿಂ ಮಾಲೆಯರ್ಪಿಸಿದ 4 ಸಾಧುಗಳ ಪೊರೆಯೆ ಚರಣ ಪಾದುಕೆಗಳ ಶರಣ ಭರತಗಿತ್ತು ಬರಿಗಾಲಲಿ ನಡೆದ ರಘುರಾಮವಿಠಲನ5
--------------
ರಘುರಾಮವಿಠಲದಾಸರು
ಎಂಬೆನು ವಿವೇಕ ಮನುಜಗೆ ಇರೆ ಎಂಬೆನು ಬ್ರಹ್ಮನು ಎಂಬೆಎಂಬೆನು ವಿವೇಕ ಮನುಜಗೆ ಇಲ್ಲದಿರೆ ಕತ್ತೆಯಮರಿಯದು ಎಂಬೆ ಪ ವೇದದ ನಿಜ ಅರ್ಥವ ತಿಳಿದಡೆ ಉತ್ತಮೋತ್ತಮನು ಎಂಬೆಕ್ರೋಧದಿ ತರ್ಕದಿ ಕಾದಾಡುವವನು ಕೋಳಿಯ ಹುಂಜನು ಎಂಬೆನಾನಾರೆನುತಲಿ ನಿಜವನು ತಿಳಿವನ ನಾರಾಯಣನು ಎಂಬೆನಾದದ ತಿಳಿವನು ನಿಂದಿಸುವಾತನ ಸರಸವಾಡೋ ಪಶು ಎಂಬೆ 1 ಮತಿಯ ವಿಚಾರದಿ ಜಗ ಬ್ರಹ್ಮವೆಂಬನ ವಿಚಾರವಾದಿಯು ಎಂಬೆಯತಿಗಳು ಬರೆ ಕುಳಿತೇಳದ ಮನುಜನಎಮ್ಮೆಯ ಮಗನವನೆಂಬೆಸುತ್ತಮುತ್ತಂಗನೆ ಮೋಹವ ತೊರೆದನ ಯೋಗಪುರುಷ ತಾನೆಂಬೆಗತಿಮತಿ ತೊರೆದಿಹ ನರನನು ಈಗಲೆ ಎಂಜಲು ತಿಂಬುವ ನಾಯೆಂಬೆ 2 ಪರಮಾರ್ಥದಿ ಶಮದಮದಿಂದಿಹನನು ಪಂಡಿತನೀಗಲು ಎಂಬೆಹಿರಿಯರ ಕಾಣಲು ಹಲ್ಲನೆ ಕಿರಿವನ ಹಿರಿಯಮುಸುವನು ತಾನೆಂಬೆಗುರಿಯನು ತಪ್ಪದೆ ದೃಷ್ಟಿಸಿ ನಡೆವನ ಗುಣಕೆ ಅತೀತನು ಎಂಬೆಬರಿಯ ಪ್ರತಿಷ್ಟೆಯ ಸಾಧಿಸುತಿರುವನ ಬರಡು ಗೊಡ್ಡು ಎಂದೆಂಬೆ 3 ನಾದದ ಧ್ವನಿಯನು ಕೇಳುತಲಿಹನನು ಜಗಜೀವನನು ಎಂಬೆನಾದದ ಸುಖವನು ಅರಿಯದ ನರನನು ಜೀನುಗಾರನು ಎಂದೆಂಬೆದಿನಕರ ಕೋಟಿಯ ತೇಜದಿ ಹೊಳೆವನ ದಿವ್ಯ ಮೂರುತಿ ಎಂದೆಂಬೆವನವನ ಅಲೆಯುವ ಬರಡು ಮುನಿಯನುವನಕೆಯ ತುಂಡದು ತಾನೆಂಬೆ4 ಆತ್ಮದ ಕಳೆಯನು ಅರಿತವನಿದ್ದರೆ ದೃಢದಲಿ ಬ್ರಹ್ಮನು ಎಂಬೆಸತ್ವಶಾಲಿ ಆ ಮಹಿಮರ ಜರೆವರ ಗುಡ್ಡದ ಗೂಗೆಯಮರಿ ಎಂಬೆಚಿನುಮಯ ಚಿನ್ಮಾತ್ರನೆ ತಾನಾದವನನು ಚಿದಾನಂದ ಗುರುವೆಂಬೆಕರೆಕರೆ ಎನಿಸುವ ಸಾಧು ವೇಷವನು ದೂರಕೆ ನೀ ನಿಲ್ಲೆಂಬೆ5
--------------
ಚಿದಾನಂದ ಅವಧೂತರು
ಎಲ್ಲಿಹನು ದೇವನೆಂದೆಲ್ಲು ಜನ ನುಡಿವರು ಸಲ್ಲುವುದೆ ಆಲಿಸಲು ಬಲ್ಲಗೀ ನುಡಿಯು ಇಲ್ಲೆಂದು ನುಡಿವರ್ಗೆ ಬಲ್ಲನಿತು ಪೇಳುವೆನು ಪುಲ್ಲನಾಭನ ಚರಿತವಾ ಹಿತವಾ ಪ ಕಲ್ಲಾಗಿ ಬಿದ್ದಿಪ್ಪಹಲ್ಯೆ ತಾ ಬಲ್ಲಳು ಎಲ್ಲ ಜಗ ಪಾವನನ ಸುಳ್ಳೆನ್ನಬಹುದೇ ಅಲ್ಲೆಂದರೀ ನುಡಿಗೆ ಹೊಲ್ಲ ಜಗವ ತುಂಬುವನು ಕಲ್ಲು ಮುಳ್ಳನು ಉದರದಿ ಜವನಿ 1 ತೋರೆಲವೊ ಹರಿಯನೆಂದೊದರಾಡೆ ರಕ್ಕಸನು ಘೋರ ಕಂಭದಿ ತೋರೆ ಹಾರಿ ತಲ್ಹಣವು ಘೋರ ರೂಪವ ತಾಳಿ ನಾರಸಿಂಹಾಖ್ಯದಿ ಚೂರ ಮಾಡಿದವನÀನು ಪರನು 2 ಧsÉೀನಿಪರ ಮನದೊಳಗೆ ಸಾನುರಾಗದಿ ಹರಿಯು ಸ್ಥಾನಗೊಳಿಪನು ಮನಕೆ ಆನಂದವೀವಾ ದಾನವಾಂತಕ ಶ್ರೀ ನರಸಿಂಹವಿಠಲನು ಆನತರ ನೆರೆ ಪೊರೆವನು ಬಿಡನು 3
--------------
ನರಸಿಂಹವಿಠಲರು
ಏನಿದೆತ್ತಣ ಬಯಕೆ ಎಲೊ ಮಂಕು ಜೀವನೀನು ಅರಿತರೆ ಪೇಳು ನಿಜವನೆನಗೆ ಪ ಎಂಟೆರಡು ಮಾರುತರು ಎಡೆಎಡೆಗೆ ಬರುತಿರಲುನಂಟರೈವರು ಕೂಡಿ ಆಕ್ರಮಿಸುತಿಹರುದಾಂಟುವುದು ಅಸದಳವೊ ಎರಡೊಂದು ಬಲೆಗಳಲಿಕಂಟಕದಿ ಬಲು ತಾಪದಿಂದ ಬಳಲುವರು 1 ಆರೆರಡು ದಂತಿಗಳು ದಾರಿಯೊಳು ನಿಂತಿಹವುಆರು ಮೂರು ತುರುಗಗಳು ದಾರಿಯನು ಕೊಡವುಮೂರೆರಡನೀಡಾಡಿ ತೋರುವುದು ಎನ್ನಾಣೆಸಾರಿ ಏನೇನಹುದು ಎಂಬುದನು ನೋಡು 2 ಪರರನು ನಿಂದಿಸದೆ ಪರಯೋಗ್ಯ ನೀನಾಗಿಪರರ ಪಾಪಗಳ ನೀ ಕಟ್ಟಿಕೊಳದೆಪರಮಾತ್ಮ ಕಾಗಿನೆಲೆಯಾದಿಕೇಶವರಾಯಪರಹಿತಕೆ ಸಖನೆಂದು ಭಜಿಸೆಲೊ ಮನುಜ 3
--------------
ಕನಕದಾಸ
ಏನಿದೇನಿದನ್ಯಾಯ ಕೇಳಲಾಗದಯ್ಯ ಧ್ಯಾನದಿಂದಾನೆಂಬ ಹೀನ ಜನರ್ವಚನ ಪ ಪರಮಪುರುಷರ ಚರಿತ ಪರಮ ಭಕ್ತಿಯಲಿಂದ ಬರೆದೋದಿಕೇಳಿದರೆ ಪರಮಪದವೆನುತ ವರವೇದ ಸ್ಮøತಿವಾಕ್ಯ ಅರಿದರಿದು ಸಚ್ಚರಿತ ಬರೀಬಾರದೆನ್ನುವ ನರಗುರಿಗಳ ವಚನ 1 ಕನಸುಮನಸಿನೊಳೊಮ್ಮೆ ಜನಕಜೆಯವರನಂಘ್ರಿ ನೆನೆವರ್ಗೆ ಭವಬಂಧವಿನಿತಿಲ್ಲವೆನುತ ಮನುಮುನಿಗಳ್ಬರೆದಿಟ್ಟ ಘನತರದ ವಚನಗಳನು ಮನನ ಮಾಡಳಿವ ಬಿನಗುಜನರ್ವಚನ 2 ಬೀಳುತೇಳುತಲೊಮ್ಮೆ ನೀಲಶ್ಯಾಮನ ದಿವ್ಯ ಮೇಲು ಮಹಿಮೆಯ ಮನದಾಲಿಸಲು ಜವನ ದಾಳಿ ಸೋಂಕದು ಎಂದು ಶೀಲದೊರೆದ್ವಚನಗಳ ಕೇಳಿ ತಿಳಿಯದ ಮಹ ಕೀಳುಜನರ್ವಚನ 3 ಹರಿನಾಮ ಕೀರ್ತನೆಯಿಂ ಜರಾಮರಣ ಕಂಟಕª À ಕಿರಿದು ಮಾಡಿ ದಾಟಿದರು ಗುರುಹಿರಿಯರೆಲ್ಲ ನಿರುತ ನಿಜ ತಿಳಿಯದೆ ಹರಿಸ್ಮರಣೆ ಸ್ಮರಿಸದೆ ಬರಿದೆ ಬ್ರಹ್ಮೆಂಬ ಮಹನರಕಿಗಳ ವಚನ 4 ಪರಮ ಶ್ರೀಗುರುರೂಪ ವರದ ಶ್ರೀರಾಮನಂ ನೆರೆನಂಬಿ ಒಲಿಸದೆ ಗುರುವಾಗಿ ಜಗದಿ ಅರಿವಿತ್ತು ಆತ್ಮನ ಕರುಹು ತೋರಿಸಿ ಪರಮ ಪರತರದ ಮೋಕ್ಷಮಂ ಕರುಣಿಸುಯೆಂತು 5
--------------
ರಾಮದಾಸರು
ಏಸು ರೂಪಾಯ್ಗೆ ಕೊಂಡು ಕೊಂಡೆವ್ವಾ ಒಸರುವ ಗಡಿಗೆ ಪ ಏಸುರೂಪಾಯ್ಗೆ ಕೊಂಡುಕೊಂಡೆವ್ವಾ ಏಸುರಾಪಾಯ್ಗೆ ಕೊಂಡುಕೊಂಡಿ ಹೇಸಿಕೊಳ್ಳದೆ ಇದನು ನೀನು ಬೇಸರಿಲ್ಲದೆ ತೊಳೆಯುತಿದ್ದಿ ವಾಸನಿಕ್ಕಿ ನಾರುತಿದೆ ಅ.ಪ ಎಂಥ ಕುಂಬಾರಿದನು ಮಾಡಿದ ಎಷ್ಟುಕಾಲದಿ ಕುಂತು ಇದಕೆ ಶೋಧ ಹುಡುಕಿದ ಅವನು ದಾವ ಸಂತೆಯೊಳಗೆ ಕುಂತು ಮಾರಿದ ಕೊಂಡೇನುತಿಳಿದ ತಂತು ತಿಳಿಯದೆ ಹೊತ್ತುಕೊಂಡು ನಿಂತಿಯಿದರ ಖ್ಯಾಲಿನೊಳಗೆ ಸಂತೆ ತೀರಿಹೋಗಲಾಗೇನಂತ ಹೇಳುವಿ ಕೇಳುವವರಿಗೆ 1 ಕಷ್ಟದ್ಹೊತ್ತು ಕುದಿಯುತಿದ್ದ್ಯಲ್ಲ ಹುಚ್ಚು ಎಷ್ಟುದುಡಿದು ತುಂಬುತಿದ್ದ್ಯಲ್ಲ ನಿಲ್ಲದಿನಿತು ಅಷ್ಟು ಒಸರಿ ಬಸಿಯುತಾದಲ್ಲ ಖೂನ ನಿನಗಿಲ್ಲ ನಟ್ಟನಡುವೆ ಗಂಟುಬಿದ್ದು ಕೊಟ್ಟು ನಿನಗೆ ಕಷ್ಟ ವಿಧ ವಿಧ ಕಟ್ಟ ಕಡೆಗೆ ಕೈಯ ಬಿಟ್ಟು ಕೆಟ್ಟು ಮಣ್ಣು ಕೂಡುತಾದೆ 2 ಮಸಣಿಬುದ್ಧಿ ನೀಗಿ ಕೇಳಮ್ಮ ನಿಜವನಿರುತ ಕುಶಲರ್ಹೇಳುವ ಮಾತು ತಿಳಿಯಮ್ಮ ಮುಂದೆ ಮಹಕಾಲ ನಿಶೆಯು ಒದಗುತದೆ ತಂಗೆಮ್ಮ ಪುಸಿಯಲ್ಲವಮ್ಮ ಮಸಿಯ ಗಡಿಗ್ಹಿಡಿದು ಹಸನಮಾಡಿ ವಸುಧೆಗಧಿಕ ಶ್ರೀರಾಮಪಾದ ಕುಸುಮಕರ್ಪಿಸಿ ಧನ್ಯಳಾಗಿ ಅಸಮಮೋಕ್ಷಪದವಿ ಪಡೆಯೆ 3
--------------
ರಾಮದಾಸರು
ಒಂದೇ ಬ್ರಹ್ಮವು ಮತ್ತೊಂದಿಲ್ಲವುಇದ್ದುದು ಬ್ರಹ್ಮವು ಒಂದೇಒಂದನು ಎರಡಾಗಿ ಮಾಡುವುದೆಂತೈಮಾಡಲು ಕೆಡುವನು ಮುಂದೆ 1 ಕನಕದಿಂದ ಒಡವೆ ಬಹಳಾಗಲು ಒಡವೆಗೆಲ್ಲಕನಕವೊಂದೇ ಘನ ಬ್ರಹ್ಮದಿಂದ ನಾನಾ ಜೀವವಾಗೆನಾನಾ ಜೀವಕೆ ಬ್ರಹ್ಮವೊಂದೇ2 ಲೋಹಗಳಿಂದಲಿ ಅನೇಕ ವಿಧವಿರೆಅನೇಕ ವಿಧಕೆ ಲೋಹವೊಂದೇಮಹಾಬ್ರಹ್ಮಾದಿ ಮಹತ್ತು ಅಣುವಿರೆಮಹತ್ತು ಅಣುವಿಗೆ ಬ್ರಹ್ಮವೊಂದೇ 3 ಬೀಜದಿಂದ ಬೀಜವನೇಕವಾಗಲುಅನೇಕ ಬೀಜಕೆ ಬೀಜವೊಂದೇತೇಜ ಚಿದಾನಂದ ಬ್ರಹ್ಮವು ಸರ್ವವುಆ ಸರ್ವಕೆ ಬ್ರಹ್ಮವು ತಾನೊಂದೆ 4
--------------
ಚಿದಾನಂದ ಅವಧೂತರು