ಒಟ್ಟು 41 ಕಡೆಗಳಲ್ಲಿ , 20 ದಾಸರು , 40 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾರಾಯಣ ಹರಿ ಗೋವಿಂದ ಪ ಸಿರಿಯು ಸಹಿತ ಮೆರೆದಿರುವ ಜಗದ್ಗುರು ಅ.ಪ ಇತ್ತು ವೇದವ ಶತಧೃತಿಯನೆ ಸಲಹಿದೆ 1 ಸುರಿ ಸುರಿದಮೃತವ ದಿವಿಜರಿಗುಣಿಸಿದೆ 2 ಲೋಕೇಶನ ನಾಸಿಕದೊಳಗುದಿಸುತ | ಜೋಕೆಯಿಂದ ತ್ರೈಜಗವನು ಸಲಹಿದೆ 3 ಕುಂಭಿನಿಯೊಳು ನರಹರಿಯೆಂದೆನಿಸಿದೆ 4 ಒಲಿದು ತ್ರಿವಿಕ್ರಮ ವಾಮನನೆನಿಸಿದೆ5 ಅಮಿತ ಪರಾಕ್ರಮಿ ಭಾರ್ಗವನೆನಿಸಿದೆ 6 ಶಶಿಮುಖಿ ಸೀತಾರಾಮನೆಂದೆನಿಸಿದೆ 7 ಅಸುರಾಂತಕ ಶ್ರೀಕೃಷ್ಣನೆಂದೆನಿಸಿದೆ 8 ಅಪರಿಮಿತ ಮಹಿಮ ಬುದ್ಧನೆಂದೆನಿಸಿದೆ 9 ಸಾಸಿರ ನಾಮನೆ ಕ(ಲ್ಕಿ)ಯೆಂದೆನಿಸಿದೆ 10 ಹೃತ್ಕಮಲೇಶ ಸದಾನಂದನೆನಿಸಿದೆ 11
--------------
ಸದಾನಂದರು
ನಿರ್ಮಲ ಹೃದಯ ಮಂಟಪದೊಳಗೆ ನಿಶ್ಚಲ ಮಣಿಯಿಟ್ಟುಧರ್ಮ ಪಟ್ಟಾವಳಿಯ ಹಸೆ ಹಾಸಿಧರ್ಮ ಪಟ್ಟಾವಳಿಯ ಹಸೆ ಹಾಸಿ ಮುಕ್ತಿಯನುಕರ್ಮ ಹರೆಯರು ಕರೆದರು 1 ಪರಮ ಪುರುಷ ಬಂದು ಪರಿಣಾಮದಿ ಕುಳಿತು ಇಹನುಪರಮ ಪಾವನೆ ಹಸೆಗೇಳುಪರಮ ಪಾವನೆ ಹಸೆಗೆ ಏಳೆಂದು ಮುಕ್ತಿಯನುಪರಮ ಶಾಂತಿಯರು ಕರೆದರು 2 ನಿತ್ಯತೃಪ್ತನು ಬಂದು ನಿಜದಲ್ಲಿ ಕುಳಿತಿಹನುನಿತ್ಯ ಆನಂದೆ ಹಸೆಗೆ ಏಳುನಿತ್ಯ ಆನಂದೆ ಹಸೆಗೆ ಏಳೆಂದು ಮುಕ್ತಿಯನುನಿತ್ಯ ಸತ್ಯೆಯರು ಕರೆದರು 3 ಮಂಗಳ ಮೂರುತಿ ಬಂದು ಮಂಗಳವಾಗಿ ಕುಳಿತಿಹನುಮಂಗಳ ಮುಖಿಯೇ ಹಸೆಗೇಳುಮಂಗಳ ಮುಖಿಯೇ ಹಸೆಗೇಳು ಎಂದು ಮುಕ್ತಿಯನುಮಂಗಳ ಮುಖಿಯರು ಕರೆದರು 4 ರೂಪ ರಹಿತನು ಬಂದು ರೂಪವಾಗಿ ಕುಳಿತಹನುರೂಪ ಮಹಾ ರೂಪೇ ಹಸೆಗೇಳುರೂಪ ಮಹಾ ರೂಪೇ ಹಸೆಗೇಳು ಎಂದು ಮುಕ್ತಿಯನುರೂಪವತಿಯರು ಕರೆದರು 5 ಅಚ್ಯುತನೆ ತಾ ಬಂದು ಅಚ್ಚಾರಿಯಲಿ ಕುಳಿತಿಹನುಅಚ್ಯುತ ರೂಪಳೆ ಹಸೆಗೇಳುಅಚ್ಯುತ ರೂಪಳೆ ಹಸೆಗೇಳೆಂದು ಮುಕ್ತಿಯನುನಿಶ್ಚಿತ ಮತಿಯರು ಕರೆದರು 6 ಸಾಕ್ಷಿರೂಪನೆ ಬಂದು ಸಾಕ್ಷಾತ್ತು ಕುಳಿತಿಹನುಸಾಕ್ಷಿಭೂತಳೆ ನೀನು ಹಸೆಗೇಳು ಸಾಕ್ಷಿಭೂತಳೆ ನೀನು ಹಸೆಗೇಳೆಂದು ಮುಕ್ತಿಯನುಸೂಕ್ಷ್ಮಮತಿಯರು ಕರೆದರು7 ವೇದಾತೀತನೆ ವೇದ್ಯವಾಗಿ ಕುಳಿತಿಹನುವೇದಮಾತೆಯೆ ನೀನು ಹಸೆಗೇಳುವೇದಮಾತೆಯೆ ನೀನು ಹಸೆಗೆ ಏಳೆಂದು ಮುಕ್ತಿಯನುವೇದಸ್ಮøತಿಯರು ಕರೆದರು8 ಜ್ಯೋತಿ ಚಿದಾನಂದನೆ ಬಂದು ಜೋಕೆಯಲಿ ಕುಳಿತಿಹನುಜ್ಯೋತಿ ಪ್ರದೀಪೆಯೇ ಹಸೆಗೇಳುಜ್ಯೋತಿ ಪ್ರದೀಪೆಯೇ ಹಸೆಗೇಳು ಏಳೆಂದು ಮುಕ್ತಿಯನುಜ್ಯೋತಿರ್ಮತಿಯರು ಕರೆದರು 9
--------------
ಚಿದಾನಂದ ಅವಧೂತರು
ನೀನೇ ಗತಿಯೆನಗಿನ್ನು ದೀನನಾದೆನು ಬಹಳ ನೀನಲ್ಲದಾರು ಬಳಿಕಾ ದೇವಾಏನು ಸಾಧನವುಂಟು ಶ್ರುತ್ಯರ್ಥಗೋಚರವೆ ಧ್ಯಾನಧಾರಣೆ ದೂರವು ದೇವಾ ಪಕಾಣದೇ ನಿನ್ನಂಘ್ರಿಕಮಲವನು ಭವವೆಂಬಕಾನನಕೆ ಗುರಿಯಾದೆನು ದೇವಾಪ್ರಾಣರಕ್ಷಕರಿಲ್ಲದತಿ ಕಷ್ಟಕೊಳಗಾದಏಣ ಕುಣಕನೊಲಾದೆನು ದೇವಾಏನೆಂಬೆ ಮೂಢತ್ವವೇ ಮೌಲ್ಯವೆನಗಾಯ್ತುಜ್ಞಾನ ದೊರಕೊಂಬುದೆಂತು ದೇವಾಜ್ಞಾನವಿಲ್ಲದೆ ಬಂಧ ಪರಿಹರಿಸದೆಂದೀಗಮಾನಸದಿ ಮರಗುತಿಹೆನು ದೇವಾ 1ದುರಿತಕೋಟಿಗಳ ಜನ್ಮಂಗಳಲಿ ಮಾಡಿದರೆದೊರಕಿತದರಿಂದ ಜಡವು ದೇವಾಪರಿಪರಿಯ ಕರ್ಮಗಳು ಜನ್ಮಗಳ ಕೊಡುವದಕೆತರತರದಿ ಕರವಿಡಿದಿವೆ ದೇವಾಗುರಿಯಾದೆನೀ ಪರಿಯ ಕರ್ಮಶರಧಿಯ ತೆರೆಗೆಪರಿಹರವ ಕಾಣೆನಿದಕೆ ದೇವಾಪರಮ ಪಾವನವಾದ ದುರಿತಹರ ನಾಮಕ್ಕೆಕರಗದೋ ನನ್ನ ಕರ್ಮ ದೇವಾ 2ಲೋಕದೊಳಗಿಹ ಪಾತಕರು ತಾವು ಜೊತೆಯಾಗಿಬೇಕೆಂದು ಪಾತಕವನು ದೇವಾಜೋಕೆಯಲಿ ಛಲವಿಡಿದು ಪಾಪರಾಶಿಯ ಮಾಡೆಸಾಕೆ ನಾಮದ ಸೋಂಕಿಗೆ ದೇವಾನೂಕುವುದು ನಿಷ್ಕøತಿಗೆ ಮಲತ ಪಾಪವ ನಾಮಬೇಕೆ ನೆರವೆಂಬುದದಕೆ ದೇವಾಯಾಕೆ ನಾನೊಬ್ಬ ಮಾಡಿದ ಪಾಪರಾಶಿಯನುನೂಕದಿಹ ಬಗೆುದೇನು ದೇವಾ 3ದುರಿತವೆನಗಿಲ್ಲೆಂದು ಸ್ಥಿರಬುದ್ಧಿುಂದೊಮ್ಮೆುರುತಿಹೆನು ಧೈರ್ಯವಿಡಿದು ದೇವಾಅರಿವು ಸಿಕ್ಕದೆ ಮರವೆ ಮುಂದಾಗಿ ನಿಂದಿರಲುಮರುಗಿ ಮತ್ತೊಮ್ಮೆ ಮನದಿ ದೇವಾಅರಿವೆಂತು ಸಿಕ್ಕುವದು ದುರಿತಭರಿತನಿಗೆಂದುಸ್ಥಿರಬುದ್ಧಿ ನಿಲ್ಲದಿಹುದು ದೇವಾಉರುಳುವುದು ಮನವೆಲ್ಲಿ ಪರಿವುತಿಹೆ ನಾನಲ್ಲಿಸ್ಥಿರವೆಂದಿಗೆನಗಪ್ಪುದು ದೇವಾ 4ಏನಾದಡೇನಘವು ಬಹಳವಾಗಿಹುದಿದಕೆಹೀನಬುದ್ಧಿಯೆ ಸಾಕ್ಷಿಯು ದೇವಾನಾನಿನಿತು ದೋಯಾದಡದೇನು ದೋಗಳನೀನೈಸೆ ರಕ್ಷಿಸುವನು ದೇವಾಭಾನುವಿನ ಮುಂಭಾಗದಲಿ ತಿಮಿರ ತಾ ನಿಂದುಏನಾಗಬಲ್ಲುದೈ ದೇವಾದೀನತನವಳಿವಂತೆ ಜ್ಞಾನವನು ಬಳಿಕಿತ್ತುಆನತನ ನೀ ರಕ್ಷಿಸು ದೇವಾ 5ಕಾಲ ಬಂದರೆ ಮೋಕ್ಷ ತಾನೆ ದೊರಕುವದೆಂದುಮೇಲಾಗಿ ಶ್ರುತಿ ನುಡಿಯಲು ದೇವಾಕಾಲವೆಂಬೀ ನದಿಗೆ ಕಡೆುಲ್ಲ ಮೋಕ್ಷಕ್ಕೆಕಾಲ ತಾ ಬಹು ದೂರವು ದೇವಾಕಾಲಕರ್ಮಗಳೆಂಬ ನೇಮವನೆ ದೃಢವಿಡಿಯೆಕಾಲವೇ ಕಲ್ಪಿತವದು ದೇವಾಲೀಲೆುಂ ನಿರ್ಮಿಸಿದ ಸಂಸಾರ ಭಂಜನೆಗೆಕಾಲವದು ನಿನ್ನ ಕೃಪೆಯು ದೇವಾ 6ನನ್ನ ನಂಬಿದವರ್ಗೆ ಸಂಸಾರಗೋಷ್ಪದವುಚೆನ್ನಾಗಿ ನಂಬಿಯೆಂದು ದೇವಾನಿನ್ನ ನುಡಿುಂದ ಗೀತೆಯಲಂದು ಬೋಧಿಸಿದೆಧನ್ಯನಾದನು ಪಾರ್ಥನು ದೇವಾಉನ್ನತದ ಯೋಗಾದಿ ಸಾಧನದಿ ಪರಿಹರವೆನಿನ್ನ ಕೃಪೆಯೇ ಮುಖ್ಯವು ದೇವಾನಿನ್ನ ನಂಬಿದೆನು ತಿರುಪತಿಯ ವೆಂಕಟರಮಣಧನ್ಯ ಧನ್ಯನು ಧನ್ಯನೂ ದೇವಾ 7ಕಂ|| ಬುಧವಾರದರ್ಚನೆಯನಿದಮುದದಿಂ ಸ್ವೀಕರಿಸಿ ನನ್ನ ಮೊರೆಯಂ ಕೇಳ್ದಾಬುಧ ಸಂಗವನಿತ್ತು ನಿನ್ನಪದಸೇವಕನೆನಿಪುದೆಂದು ವೆಂಕಟರಮಣಾಓಂ ಕಾಳೀಯ ಫಣಾಮಾಣಿಕ್ಯರಂಜಿತ ಶ್ರೀಪದಾಂಬುಜಾಯ ನಮಃ
--------------
ತಿಮ್ಮಪ್ಪದಾಸರು
ನೆನೆಯ ಬಾರದೆ ಮನವೆ ಪರಮಪಾವನನ ಪ ಸಾಕಾರದಿಂದ ಸರ್ವವನು ರಕ್ಷಿಪನಜೋಕೆಯಲಿ ತನ್ನ ನೆನೆವವರ ಪಾಲಿಪನ - ಅ-ನೇಕ ಮೂರುತಿ ಸೂರ್ಯನಾರಾಯಣನ 1 ಬ್ರಹ್ಮಾಂಡ ಕೋಟಿ ತಿಮಿರವ ಗೆಲುವವನಒಮ್ಮೆ ನೆನೆಯಲು ಪ್ರಸನ್ನನಾದವನಧರ್ಮಕ್ಕೆ ಸಾಕ್ಷಾತ್ ರೂಪಾಗಿ ತೋರುವನನಿರ್ಮಲಾತ್ಮಕವಾಗಿ ಥಳಥಳಿಸುವವನ 2 ಹರಗೆ ನಯನವಾಗಿ ಮಕುಟವ ಬೆಳಗುವನತರುಣಿಯೈವರ ಲಜ್ಜೆ ಕಾಯ್ದವನದುರಿತಕೋಟಿಗಳನುದ್ಧರಿಸುವವನಪರಬ್ರಹ್ಮ ಕಾಗಿನೆಲೆಯಾದಿಕೇಶವನಮರೆಯದೆ ಭಜಿಪರ ಕಾಯುವವನ 3
--------------
ಕನಕದಾಸ
ಪತಿ ತನಯೇ ಪ ಆರು ನಿನಗೆ ಸರಿ ಮೂರು ಲೋಕದೊಳುವೃತ್ರಾರಿಗಳಿಂದಾರಾಧಿತಳೇ ಅ.ಪ. ಅಗಜೆ ಎನ್ನ ವದನಾ | ಮಾಡಲಿ | ನಗಧ5ಗುಣಸ್ತವನಾಖಗ ವಹ ಸಖ ಶಿವ | ಮೃಗ ಪಾಣಿಯ 5iÉುಹಗಲಿರುಳಲಿ ಹರಿ ಗಾಯನ ಮಾಡಿಸೇ 1 ಮನಸಿಜಾರಿಯ ಜಾಯೇ | ಮನ್ಮನ | ಚಪಲ ಬಿಡಿಸು ತಾಯೇಕನಸಿಲಿ ಮನಸಿಲಿ ಘನ ವಿಷಯಂಗಳನೆನೆವ ಕೊಡದೆ ಹರಿ ಧ್ಯಾನವನೀಯೇ 2 ಲೋಕ ಪಾವನ ಮೂರ್ತೇ | ಪಾಲಿಸು | ಏಕದಂತನ ಮಾತೇನೋಕನೀಯ ಗುರು ಗೋವಿಂದ ವಿಠಲನಜೋಕೆಯಿಂದ ನೆನೆ ನೆನೆಯುವ ಮಾತೇ 3
--------------
ಗುರುಗೋವಿಂದವಿಠಲರು
ಪಾದಪದ್ಮದೀಕ್ಷಣದ ಸುಖಕಂ||ಅಗಲಲು ಬಾರದೆ ಮನ ದೃಗ್ಯುಗಳವು ಹರಿಪಾದಪದ್ಮದಿ ನೆಲಸೆ ಭಕ್ತರ್‍ತೆಗೆಯದೆ ತಿರುಪತಿ ವೆಂಕಟನಗನಾಥನ ಬೇಡಿಕೊಳ್ಳುತಿಹರೀ ಪರಿುಂಈ ಪಾದಪದ್ಮದೀಕ್ಷಣದ ಸುಖವೇ ಸಾಕುಗೋಪಾಂಗನೆಯರ ಮನಕಮೃತರೂಪಾಗಿರುವ ಪಪದ್ಮವರಳಿದ ಪರಿಯ ಮೃದುವಾಗಿ ತೋರಿಸುವಪದ್ಮಜೆಗೆ ನಿತ್ಯವಾಶ್ರಯವೆನಿಸುವಪದ್ಮಭವ ನೆರೆತೊಳೆದು ಪೂಜಿಸಿದುದೀ ಲೋಕಪದ್ಮಕಾಶ್ರಯವಾಗಿ ತದ್ರೂಪವಾಗಿರುವ 1ಲೋಕಪಾವನ ಗಂಗೆಯನು ಪಡೆದುದೀ ಪಾದಜೋಕೆಯೊಳಗಹಿ ಶಿರದಿ ನೆರೆ ನರ್ತಿಸಿದುದುಬೇಕೆಂದು ಯೋಗಿಗಳ ಹೃದಯಕಮಲದಿ ನೆಲಸಿನೂಕಿ ಭಕ್ತರ ಭವವ ರವಿಯಂತೆ ಹೊಳೆಯುತಿಹ 2ಗೋಪಾಲ ಗೋವುಗಳ ಬಳಿವಿಡಿದು ಸಂಚರಿಸಿಗೋಪಿಯರ ಮನೆಯ ಪಾಲ್ಬೆಣ್ಣೆ ಬಯಸಿಗೋಪ್ಯದಲಿ ನಡೆದವರ ಮನಕಗೋಚರವೆನಿಸಿಗೋಪರೊಡೆಯನ ಮನೆಗೆ ಬಂದು ನೆಲಸುತಲಿರುವ 3ಬಲಿಯ ದಾನವ ಬೇಡಿ ಶಿಲೆಯ ಸತಿಯನು ಮಾಡಿನೆಲನೊತ್ತಿ ಕೌರವನ ಮಕುಟ ಸೋಕಿಥಳಥಳನೆ ಬೆಳಗಿ ತತ್ಸಭೆಯ, ವಿದುರನ ಮನೆಗೆನಲವಿಂದ ನಡೆದವನ ಸಲಹಿದತಿ ಕೋಮಲದ 4ಸುರರು ವಂದಿಸಲವರ ಶಿರದ ಪುಷ್ಪದ ರಾಶಿಸುರಿದು ತಾರಾ ಮಧ್ಯ ಚಂದ್ರನಂತೆನೆರೆಮೆರೆವ ಗುರು ವಾಸುದೇವ ಪಾದ 5ಓಂ ಜಗನ್ನಾಥಾಯ ನಮಃ
--------------
ತಿಮ್ಮಪ್ಪದಾಸರು
ಪ್ರಾಣದೇವನ ನಮಿಪೆ ನಮೋ ಪ್ರಾಣಕಧೀಶನೆ ಶರಣು ನಮೋ ಕಾಣಿಸು ಹರಿಯಂಘ್ರಿಯನು ನಮೋ ಪ್ರಾಣ ಪಂಚÀರೂಪಾತ್ಮ ನಮೋ ಪ. ಅಂಜನೆ ಆತ್ಮಜ ಕುವರ ನಮೋ ಸಂಜೀವನ ಗಿರಿ ತಂದೆ ನಮೋ ನಂಜುಂಡನ ಪ್ರಿಯ ಜನಕ ನಮೋ ಕಂಜಾಕ್ಷನ ದಾಸಾರ್ಯ ನಮೊ1 ಆಪ್ತವರ್ಗ ನಿರ್ಧೂತ ನಮೋ ಶಕ್ತ ಜರಾದಿ ಹಂತ ನಮೋ ತಪ್ತಕಾಂಚನ ಸುದೀಪ್ತ ನಮೊ 2 ಏಕವಿಂಶತಿ ಮತಧ್ವಂಸ ನಮೋ ಶ್ರೀಕಳತ್ರಪ್ರಿಯ ಪಾತ್ರ ನಮೋ ಏಕ ಚತುರ ನವಗ್ರಂಥ ನಮೋ ಜೋಕೆಯಿಂದ ನಿರ್ಮಿಸಿದೆ ನಮೋ 3 ಮುಕ್ತ ಜೀವರ ಸ್ತುತ್ಯ ನಮೋ ಯುಕ್ತಿವಂತ ಜಗದ್ವ್ಯಾಪ್ತ ನಮೋ ಶಕ್ತಿವಂತ ಶುದ್ಧಾತ್ಮ ನಮೋ ಭಕ್ತಭರಿತ ಹರಿಪ್ರೀತ ನಮೋ 4 ನಮೋ ನಮೋ ಶ್ರೀಗೋಪಾಲ ಕೃಷ್ಣವಿಠ್ಠಲನಿಗೆ ಪ್ರಿಯಬಾಲ ನಮೋ ನಮೋ ಶ್ರೀ ಭಾರತಿಲೋಲ ನಮಿಸುವೆ ಚಳ್ಳಕೆರೆಯ ಪಾಲ 5
--------------
ಅಂಬಾಬಾಯಿ
ಭಕ್ತವತ್ಸಲನೆಂಬ ಬಿರುದು ಬಿಡದಿರು ದೇವ ಬಹು ಪರಾಕೆಲೊ ಮುರಾರಿ ಪ. ಶಕ್ತ ನೀನೆಂದು ನಂಬಿರುವೆ ಕೃಪಾಸಿಂಧು ಮತ್ತಗಜ ಮೈಮರೆದು ಸುತ್ತಿ ಕೆಸರೊಳು ಬಿದ್ದು ಶಕ್ತಿ ಹೀನನಾಗಿ ಏಳದಂತಾಗಿದೆ ಮತ್ತಾರಿಗಳವಲ್ಲ ಮಂದರಾದ್ರಿಧರನೆ ಎತ್ತಿ ಕಡೆಹಾಯಿಸೊ ಎನ್ನೊಡೆಯ ಶ್ರೀ ಹರಿಯೆ 1 ನಿಂದ ನೆಲ ಮುನಿಯುತಿದೆ ನಿಪುಣತನವಡಗಿತು ಮಂದಮತಿ ವೆಗ್ಗಳಿಸಿ ನೆಲೆಗಾಣೆ ಮುಂದೆ ತಂದೆ ನೀನಲ್ಲದಿನ್ಯಾರು ರಕ್ಷಿಪರಯ್ಯ ಬಂಧನವ ಪರಿಹರಿಸೊ ಭಯನಿವಾರಣ ಹರಿಯೆ 2 ಕೊಂಡೆಯರ ಕೆಡಮೆಟ್ಟಿ ಕುಹಕಿಗಳ ಮಸ್ತಕವ ಚೆಂಡಾಡಿದ ಚಿನ್ಮಯರೂಪ ನೀನು ದಿಂಡರಿದು ದುರಳರನು ದುರಿತಗಳ ಪರಿಹರಿಸಿ ಪುಂಡರೀಕಾಕ್ಷ 3 ವ್ಯಾಕುಲದಿ ಕೃಷ್ಣಮೃಗವು ಎದೆಗುಂದಿರೆ ನೀ ಕರುಣಿ ಸಮಯದಲಿ ವೃಷ್ಟಿಯ ಕರೆದು ಜೋಕೆಯಲಿ ಪಥÀವೆನೇರಿಸಿದ್ಯೊ ಜಗದೀಶ 4 ನಿನ್ನನೆ ಪೂಜಿಪೆನು ನಿನ್ನನೆ ಪಾಡಿ ಪೊಗಳುವೆನು ನಿನ್ನನೆ ನಂಬಿದವಳಿಗಿಂತ ಉನ್ನತವಾದ ಕಂಟಕವು ಬಂದಿದೆ ಕಾಯೊ ಪನ್ನಗಶಯನ ಹೆಳವನಕಟ್ಟೆ ರಂಗಯ್ಯ 5
--------------
ಹೆಳವನಕಟ್ಟೆ ಗಿರಿಯಮ್ಮ
ಭಯ ನಿವಾರಣ ಸುಳಾದಿ ನಾಕೇಶ ದೇವತತಿ ಆ ಕಮಲನಾಭ ಯತಿ ನಿಕರಗೊಲಿದನೆ ಶ್ರೀಕರವದನ ಸರ್ವಲೋಕಕಧಿಪ ಕೃಪಾ- ಲೋಕನದಲಿ ನೋಡಿ ಸುಖತೀರ್ಥನುತ ಚರಣ ವ್ಯಾಕುಲ ಬಿಡಿಸಿ ನಿನ್ನಾನೇಕ ಮಹಿಮೆ ತಿಳಿಸಿ ಜೋಕೆಯಿಂ ಕಾಯ್ದ ಗುರು ಆಕಾರಂತರ್ಯಾಮಿ ಈ ಕಾಲದಲಿ ಮನ ವ್ಯಾಕುಲಪಡಿಸುವ ಕಾಕು ಭಯವ ಬಿಡಿಸಿ ನೀ ಕಾಯಬೇಕೊ ದೇವ ಲೋಕ ಲೋಕಾದಿಗಳ ಸಾಕುವ ಭಾರಕರ್ತ ಆ ಕಮಲಭವನಭಯ ವ್ಯಾಕುಲ ಬಿಡಿಸಿದೆ ಲೋಕ ಸೃಷ್ಟಿಪ ಶಕ್ತಿ ಏಕಚಿತ್ತವ ಕೊಟ್ಟು ಲೋಕಲೋಕಾಧಿಪರ ನೀ ಕಾಯ್ದೆ ಕರುಣದಿ ಲೋಕವೆಲ್ಲವ ಕೊನೆಗೆ ಏಕಾಪೋಶನಗೈವ ಲೋಕಪತಿಯೆ ಭಕ್ತಾನೀಕಕÀಭಯದಾತ ಭೀಕರ ಬೆನ್ಹತ್ತಿ ತಾಕಿದ ಮನಸಿನ ವ್ಯಾಕುಲ ಭಯಬಿಡಿಸಿ ಜೋಕೆಯಿಂದಲಿ ಕಾಯೊ ಗೋಕುಲಾಂಬುಧಿ ಚಂದ್ರ ಗೋಪಾಲಕೃಷ್ಣವಿಠ್ಠಲ ಈ ಕಾಲಕೊದಗೆ ನಿನ್ನಾನೇಕ ಕೀರ್ತಿಯು ನಿಜವೋ 1 ಭಯ ನಿವಾರಕದೇವ ಭಕ್ತವತ್ಸಲ ನೀನೆ ದಯಮಾಡು ಮನಸಿನಲಿ ತಗುಲಿದ ಭಯವನೆ ಬಿಡಿಸಿ ಭಯಪಡಿಸುತಿರೆ ಖಳನು ಬಾಲಕನ ಪ್ರತಿದಿನದಿ ನಯವಿನಯದಿ ಕಂದ ನಿನ್ನನು ಮೊರೆಯಿಡೆ ಕೇಳಿ ದಯಮಾಡುತ ತರಳನಲಿ ಕನಲುತ ದೈತ್ಯನ ಕೊಂದು ಭಯ ಬಿಡಿಸಿದೆ ಬಾಲಕಗೆ ಭಕ್ತವತ್ಸಲ ನೃಹರೆ ಅಯೋನಿಜೆ ದ್ರೌಪದಿಗೊದಗಿದ ಅನುತಾಪಗಳನೆಲ್ಲ ದಯದಲ್ಲಿ ಪರಿಹರಿಸಿದ ಆಪದ್ಭಾಂಧವ ಸ್ವಾಮಿ ಭಯಪಡಿಸುತ ಭಸ್ಮಾಸುರ ಮೃತ್ಯುವಿನಂದದಿ ಮೃತ್ಯುಂ ಜಯನನು ಬೆನ್ನಟ್ಟಿ ಬರೆ ಹರನು ನಿನ್ನನು ಮೊರೆಹೋಗಲು ಸಂತೈಸಿ ತರುಣಿಯ ರೂಪದಿ ಖಳನ ಕೈಯಿಂದಲೆ ಅವನ ಶಿರ ಉರಿಸುತ ಶಿವನನು ಪೊರೆದೆ ಭಯಹಾರಕ ನರಹರೆ ಶ್ರೀ ಗೋಪಾಲಕೃಷ್ಣವಿಠ್ಠಲ ಜಯವಲ್ಲದೆ ದಾಸರಿಗೆ ಭಯವುಂಟೆ ಪೇಳೋ 2 ನಿತ್ಯ ನಿನ್ನನು ನಂಬಿ ಚಿತ್ತದಿ ನೆನೆವಂಥ ಆಪ್ತವರ್ಗಕೆ ಇನ್ನು ಮೃತ್ಯು ಭಯವು ಉಂಟಿ ಆಪ್ತನಲ್ಲವೆ ನೀನು ಚಿತ್ತಕಂಟಿದ ಭಯ ಮೃತ್ಯು ಪರಿಹರಿಸೈಯ್ಯ ಎತ್ತ ನೋಡಲು ನಿನ್ನ ವ್ಯಾಪ್ತಿ ಸುತ್ತಿರೆ ಜಗದಿ ಮೃತ್ಯುವೆತ್ತಣದೊ ನಿನ್ನುತ್ತಮ ಭಕ್ತರಿಗೆ ಇತ್ತ ದೇಹವು ನಿಂದು ಚಿತ್ತಾದಿಂದ್ರಿಯ ನಿಂದು ನಿತ್ಯ ನಡೆವ ಜೀವಕೃತ್ಯವು ನಿನದೈಯ್ಯ ಸುತ್ತುವೊ ಗ್ರಹಗತಿ ಮೃತ್ಯು ಪರಿವಾರವೆಲ್ಲ ಭೃತ್ಯರಲ್ಲವೆ ನಿನ್ನ ಚಿತ್ತಕ್ಕೆದುರಾಗುವರೆ ಭೃತ್ಯತ್ವದಲ್ಲಿರೆ ಎತ್ತಣ ಭಯವೈಯ್ಯ ಹತ್ತಿಕಾಡುವ ದುಷ್ಟಗ್ರಹಗಳ ಕಡೆಗೆ ನೂಕಿ ಚಿತ್ತ ನಿರ್ಮಲವಿತ್ತು ಮತ್ತೆ ಮಂಗಳವಿತ್ತು ನಿತ್ಯ ಕಾಯಲಿಬೇಕೊ ನಿನ್ನ ಸೇವೆಯನಿತ್ತು ಮೃತ್ಯು ಮೃತ್ಯುವೆ ಮಹಾದೈತ್ಯ ಸಂಹರಣನೆ ಚಿತ್ತದಲ್ಲಿ ನೀನು ಆಪ್ತನಾಗಿರೆ ಬೇರೆ ಹತ್ತಿಕಾಡುವ ಗ್ರಹ ಹತ್ತಿರ ಬರಲುಂಟೆ ಸಿರಿ ಗೋಪಾಲಕೃಷ್ಣವಿಠ್ಠಲ ಹತ್ತಿದ ಮೃತ್ಯು ಭಯ ಕಿತ್ತಿ ಬಿಸುಟು ಕಾಯೊ 3 ವಾಸುದೇವನೆ ನಿನ್ನ ದಾಸನ ಕಾಯುವಂಥ ಈಶನಲ್ಲವೆ ಜೀವರಾಶಿಗಳಿಗೆ ಬಿಂಬ ಸುಷುಪ್ತಿಯಲ್ಲಿ ಕಾವ ಆತ್ಮ ಆನಂದರೂಪ ತಾಸು ತಾಸಿಗೆ ಬಂದ ಭಯವ ಬಿಡಿಸುವದರಿದೆ ದಾಶರಥಿಯೆ ನಿನ್ನ ಅನುಜನ ಜೀವಭಯ ದಾಸ ಹನುಮನಿಂದ ಗಿರಿತರಿಸಿ ಹರಿಸಿದೆ ಆ ಸುಗ್ರೀವನ ಮೊರೆ ಕೇಳಿ ಅಭಯವಿತ್ತು ತೋಷದಿಂದಲಿ ಒಲಿದು ರಾಜ್ಯ ಸುಖವನಿತ್ತೆ ವಾಸವ ಮೊರೆಯಿಡೆ ಒಲಿದು ಅಮೃತವಿತ್ತು ಘಾಸಿಗೊಳಿಪ ಮೃತ್ಯುದೈತ್ಯರ ಸದೆಬಡಿದೆ ನಾಶರಹಿತ ನೃಹರಿ ಗೋಪಾಲಕೃಷ್ಣವಿಠ್ಠಲ ನಾಶದ ಭಯ ಉಂಟೆ ನಿನ್ನ ನಂಬಿದವರಿಗೆ 4 ತರಳತ್ವದಲಿ ಭಯವು ವರ ಯೌವ್ವನದಲಿ ಭಯವು ಜರೆ ಮರಣದಲಿ ಭಯವು ಪರಿಪರಿ ರೋಗದ ಭಯವು ಆರೆಘಳಿಗೆಯು ಬರದಂತೆ ಹರಿ ನೀ ಪರಿಹರಿಸುತಲಿ ಪರತರ ನಿನ್ನಯ ಮಂಗಳ ಚರಿತೆಯ ಸ್ಮರಣೆಯನಿತ್ತು ಹರಿಭಕ್ತರ ಕಾಯುವುದು ಬಿರುದಲ್ಲವೆ ನಿನಗಿನ್ನು ಪರಿಪರಿ ಭಯ ಕ್ಲೇಶಗಳ ಪರಿಹರ ಮಾಡುತ ಕಾಯೊ ವರಯಂತ್ರ ಮಂತ್ರಗಳು ಪರಿಪರಿ ಜಪ ಹೋಮಗಳು ತರತರದೌಷಧ ಪಥ್ಯ ನರಹರಿ ಎಲ್ಲವು ನೀನೆ ಹೊರಗೊಳಗೆಡಬಲದಲ್ಲಿ | ಮರೆವು ಸ್ಮರಣೆಗಳಲ್ಲಿ ಪರಿಪರಿ ಕ್ರೀಡೆಗಳಲ್ಲಿ ಚರಿಸುವ ಕರ್ಮಗಳಲ್ಲಿ ನೆರೆದಿಹ ಜನವೃಂದದಲಿ ಹಗಲಿರುಳು ಸಂಧಿಯಲಿ ಪರಿಪರಿ ಕಾಲಗಳಲ್ಲಿ ಪರಿಪರಿ ದೇಶಗಳಲ್ಲಿ ನರಹರಿ ದುರ್ಗಾಸಹಿತ ವರ ಮೃತ್ಯುಂಜಯ ವರದ ಸಿರಿಭಾರತಿಪತಿಸಹಿತ ಚರಿಸುತ ಬೆಂಬಿಡದಲೆ ನೀ ನಿರುತದಿ ಕಾಯಲಿಬೇಕೊ ಬರಿದನು ಮಾಡದೆ ಸ್ತುತಿಯ ವರ ಸುದರ್ಶನ ಪಾಂಚಜನ್ಯ ಪದ್ಮವ ಪಿಡಿದ ಪರಮ ಮಂಗಳರೂಪ ದೈತ್ಯರಿಗತಿ ಘೋರ ಗುರುಬಿಂಬನೆ ನೀನೆಂದು ಪರಿಪರಿ ಪ್ರಾರ್ಥಿಪೆನಿನ್ನು ಕೊರಗಿಸದಲೆ ಮನವನ್ನು ಹರಿ ಸೌಭಾಗ್ಯವನಿತ್ತು ಕರೆಕರೆಗೊಳಿಸದೆ ಕಾಯೊ ಕರುಣಾಬ್ಧಿಯೆ ದಾಸರನು ವರಭಾಗ್ಯವು ಆಯಸ್ಸು ಆರೋಗ್ಯಂಗಳೂ ಎಲ್ಲ ನಿರುತವಿರಲಿ ಬೇಕೊ ನಿನ್ನವರಿಗೆ ಸಾಧನಕೆ ಕರುಣಾಕರ ಗೋಪಾಲಕೃಷ್ಣವಿಠ್ಠಲ ನಿನ್ನ ಸ್ಮರಿಸಿದ ಮಾತ್ರದಿ ಸಕಲ ಭಯ ಪರಿಹಾರಕವೋ 5 ಜತೆ ನಿತ್ಯ ಮಂಗಳ ನಿನ್ನ ಸ್ಮರಿಪರ ಮನದ ಭಯವ ಕಿತ್ತು ಬಿಸುಟು ಸಲಹೋ ಗೋಪಾಲವಿಠ್ಠಲ
--------------
ಅಂಬಾಬಾಯಿ
ಭಾಗವತ ದಶಮಸ್ಕಂದ ಕಥೆ ಜಯ ಜಯ ರಾಮಾನುಜ ಪಾಹಿ ಜಯ ಜಯ ಶ್ರೀಕೃಷ್ಣಪಾಹಿ ಜಯ ಪಾಂಡವ ಮಿತ್ರ ಪಾಹಿ ಜಯ ಜಯ ಜಯತು ಪ ಭವ ಪ್ರಮುಖ ಸುರರಿ- ಗಾನಮಿಸುತ ದಶಮಸ್ಕಂದದ ಕಥೆಯ ಪೇಳುವೆ 1 ತಾಮರಸಭವಂಗೆ ಪೋಗಿ ಮೊರೆಯನಿಟ್ಟಳು 2 ಹರಮುಖ ಸುಮನಸರ ಕೂಡಿ ವಿಧಿಯು ಕ್ಷೀರ ಶರಧಿಯೈದಿ ಪರುಷಸೂಕ್ತದಿಂದ ಹರಿಯ ಸ್ತೋತ್ರ ಮಾಡಲು 3 ಸುರರು ಯಾದವರಾಗಿ ನಾನು ಬರುವೆ ದೇವಕಿ ಪುತ್ರನೆನಿಸಿ ತರಿವೆ ನೀಚರನೆಂದಾಕಾಶವಾಣಿಯಾಯಿತು 4 ಕನ್ನಿಕೆಯರು ಭುವಿಯೊಳವತರಿಸುವದೆನ್ನುತ 5 ಮೃಡ ಸಡಗರದಲಿ ತಮ್ಮ ನಿಳಯಗಳನು ಸಾರ್ದರು 6 ಶೂರಸೇನನೆಂಬ ರಾಜ ಪಾರಂಪರ್ಯದಿ ಮಧುರೆಯಲ್ಲಿ ಧಾರುಣಿಯ ಪಾಲಿಸುತೆ ಧರ್ಮದಿಂದಲಿ 7 ದೇವಕನು ದೇವಕಿಯ ವಸುದೇವಗಿತ್ತು ಉತ್ಸವ ಬರೆ ಭಾವ ಮೈದ ಕಂಸ ರಥಕೆ ಸಾರಥಿಯಾದನು8 ನಭವುನುಡಿಯೆ ಜವದಿ ತಂಗಿಯ ಮುಡಿಯ ಪಿಡಿಯೆ ಕಂಸ ಕೋಪದಿ9 ಪುಟ್ಟಿದ ಮಕ್ಕಳನೆಲ್ಲ ನಿನಗೆ ಕೊಟ್ಟುಬಿಡುವೆ ಕೊಲ್ಲದಿರವಳ ಸಿಟ್ಟು ಸೈರಿಸೆನುತ ಪೇಳ್ದ ಶೌರಿಭಾವಗೆ 10 ಕೊಡಲು ಕಂಸ ಹೃದಯದಲಿ ಸತ್ಯಕೆ ಮೆಚ್ಚಿ ಭಾವಗೆಂದನು 11 ಇವನ ಭಯವು ಎನಗೆ ಇಲ್ಲ ಈವುಂದೆಂಟನೆ ಸುತನ ಮಾತ್ರ ತವಕದಿಂದ ಮನೆಗೆ ಪೋಗು ಪುತ್ರ ಸಹಿತದಿ 12 ಸೆರೆಯೊಳಿಡಿಸಿ ಘನವಿಭವದಿ ಭುವಿಯನಾಳುತಿರ್ದ ಕಂಸನು 13 ಸುರ ಋಷಿ ರಹಸ್ಯದಲಿ ಬಂದು ಪೇಳಿದ 14 ಉರಿದ ಕಣ್ಣೊಳು ಕಿಡಿಗಳುದುರೆ ಶೌರಿಯ ಬಂಧನದೊಳಿಟ್ಟು ತರಿದನಾರುಮಂದಿ ಸುತರ ತವಕದಲಿ 15 ಏಳನೆಯ ಗರ್ಭ ಉದರವಿಳಿದೆಂದು ತಿಳಿಯೆ ಜನರು ಶ್ರೀಲತಾಂಗಿಯರಸನಂಶ ಬಳಿಕ ಬೆಳೆದುದು 16 ಅದನು ವಯ್ದು ದುರ್ಗಿ ರೋಹಿಣಿಯುದರದಲ್ಲಿ ಇಟ್ಟೆಶೋದೆ ಯುದರದಲ್ಲಿ ತಾನು ಸೇರಿ ಬೆಳೆಯುತಿರ್ದಳು 17 ಬಳಿಕಯಿಂದಿರೇಶ ತಾನು ಜಲಜಮುಖಿ ದೇವಕಿಯ ಗರ್ಭ ದಲಿ ಪ್ರವಿಷ್ಠನಾಗಿರ್ದ ಮಹಿಮೆಯಿಂದಲಿ 18 ಮುಖದಿ ಕಳೆಯೇರಿರಲ್ಕೆ ಖಳನಿದೇ ಇದೇ ಎನುತ್ತ ಸಕಲ ಭಾಗದಿ ಕಾವಲಿಟ್ಟು ಸಮಯ ನೋಡುತ್ತಿರೆ 19 ಸುರರು ಹರಿಯ ವೇದದಿಂದ ಸ್ತೋತ್ರಮಾಡಿ ಹೋದರು 20 ನಂದನರಸಿಯಲ್ಲಿ ದುರ್ಗಿಯಂದುದಿಸಿರೆ ನಭೋ ಮಾಸದಿ ಅಂದುರಾತ್ರಿಯ ಶಿತಪಕ್ಷಯಷ್ಟಮಿ ದಿನದಲಿ 21 ಸರಸಿಜಾಪ್ತನುದಿಸಿದಂತೆ ಬೆಳಕು ತುಂಬಲು 22 ದರ ಗದಾರಿ ಪದ್ಮ ಪೀತಾಂಬರ ಶ್ರೀವತ್ಸ ಕೌಸ್ತುಭಗಳ ಶೌರಿ ನೋಡಿದ 23 ದಿವ್ಯರೂಪವ ಕಾಣುತ ವಸುದೇವ ಮನದಿ ಹಿಗ್ಗಿ ಮುದದಿ ಗೋವುಗಳನು ಹತ್ತುಸಾವಿರ ಧಾರೆಯೆರೆದನು 24 ತುತಿಸಲಂದು ಸತೀಪತಿಗಳು ಹಿತದಿ ತೇಜವ ಮಾಯಗೈದು ಸುತನು ಮಗುವಿನಂತೆ ತೋರೆ ಸೊಬಗಿನಿಂದಲಿ 25 ಕಾಲಲಿದ್ದ ಸಂಕೋಲೆಗಳು ಕಳಚಿ ಬಿದ್ದುದಾಗ ದೇವಕಿ ಬಾಲನನ್ನು ನೋಡಿ ಮನದಿ ಭಯವ ಪಟ್ಟಳು 26 ಬೀಗಮುದ್ರೆ ಸಹಿತ ಎಲ್ಲ ಬಾಗಿಲು ತನ್ನಿಂತಾನೆ ತೆಗಿಯೆ ಶೌರಿ ನಡೆದನು 27 ಗೋಕುಲವನೈದಿ ಕಮಲನಾಭನಂ ಯಶೋದೆಯ ಬಳಿಯಲಿಟ್ಟನು 28 ಆಕೆ ಪಡೆದ ಹೆಣ್ಣು ಶಿಶುವ ತಾ ಕೈಕೊಂಡು ಮನೆಗೆ ಬಂದು ಜೋಕೆಯಿಂದ ಮೊದಲಿನಂತೆ ತೋರುತಿರ್ದನು 29 ಅಳಲು ಶಿಶವು ಕೇಳಿಯೆಲ್ಲ ಖಳರು ಹೋಗಿ ಕಂಸಗುಸುರೆ ಝಳಪಿಸುತ್ತ ಖಡ್ಗವನ್ನು ಜವದಿ ಬಂದನು 30 ವಂದನಾದರೂ ಬಿಡಬಾರದೆ ಸುಂದರಿ ಇವಳಣ್ಣ ಎನಲು ಮುಂದುಗಾಣದೆ ಯೋಚಿಸುತ್ತ ಮುಗುವನೆತ್ತಿದ 31 ನಭದಿನಿಂತು ಸಾರಿ ಛೀ ದುರಾತ್ಮ ಯಾರ ಕಡಿವೆ ಯೆಂದಳು? 32 ವೈರಿ ಮೀರಿ ಕೊಂದು ಪಾಪಿಯಾದೆ ಛೀ! ಹೋಗೆಂದಳು 33 ಮನದಿ ನೊಂದು ಕಂಸನು ತನ್ನನುಜೆಯನ್ನು ಭಾವನನ್ನು ವಿನಯದಿಂದ ಬೇಡಿಕೊಂಡ ಕ್ಷಮಿಸಿರೆನ್ನುತಾ 34 ನೆರಹಿ ತನ್ನ ಮಂದಿಯಾದ ದುರುಳರಿಗೀ ಸುದ್ದಿಪೇಳೆ ಬರಲಿ ಹರಿಯು ಕೊಲುವೆವವನ ಭಯಬಿಡೆಂದರು 35 ಧರೆಯೊಳು ಪುಟ್ಟಿದ ಶಿಶುಗಳನ್ನು ತರಿವುದೆಂದು ಪೂತನೆಯೆಂಬ ಮರುಳೆಯನ್ನು ಕಳುಹಿ ವಿಸ್ಮಯದಿಂದಲಿರ್ದನು 36 ನಂದಗೋಕುಲದಲ್ಲಿ ಮಹಾನಂದವಾಗಿ ಜನರೆಶೋದೆಯ ಕಂದನನ್ನು ನೋಡಿ ಹಿಗ್ಗಿಯುತ್ಸವಗೈದರು 37 ಪ್ರೀತಿಯಿಂದ ನಂದಗೋಪ ಜಾತಕರ್ಮ ಮಾಡಿಸಲ್ಕೆ ಶ್ರೀ ತರುಣಿಯ ಕಳೆ ದಿನದಿನದಿ ಪೆರ್ಚುತಿಹುದು 38 ಶೌರಿಯ ಮಧುರೆಯಲಿ ನೋಡಿ ಆದರಿಸಿ ಎನ್ನ ಮಗನೆ ಧೀರ ನಿನ್ನ ಮಗನೆನ್ನುತ ಗೋಪ ನುಡಿದನು39 ಏಳನೆಯ ದಿನದಿ ಪೂತನಿ ಬಾಲಕಂಗೆ ಮೊಲೆಯನೊಡೆ ಹಾಲಾಹಲವನೀಂಟಯಸುವನೆಳದು ಕೊಂದನು40 ಬಿಡುಬಿಡೆನ್ನುತಾರ್ಭಟಿಸುತಲೊಡನೆ ಯೋಜನವಾಗಿ ದೇಹ ಪೊಡವಿಗುರುಳೆ ನೋಡಿಗೋಪರು ಭೀತಿಗೊಂಡರು 41 ಜನ್ಮತಾರೆಯುತ್ಸವದಲಿ ಶಕಟನು ಬಂಡಿಯೊಳು ಸೇರಿ ಇರಲು ನನ್ನಿಯಿಂದಲೊದ್ದು ಕೆಡಹಿ ಕೊಂದಿತಾ ಶಿಶು ಪೋರ 42 ಬಾರಿಬಾರಿಗೆ ರಕ್ಷೆಕಟ್ಟಿನಾರಾಯಣ ಕವಚವ ತೊಡಿಸಿ ಪೋರಬಾಲನನ್ನು ಸಲಹೆನುತ ಹರಿಯ ಬೇಡಿದರು43 ಸಾರಿ ನೆಲಕೆ ಕೆಡಹಿ ಮೇಲೆ ಆಡುತಿರ್ದನು 44 ಶೌರಿ ನೇಮದಿಂದ ಗರ್ಗ ಸೇರಿ ಗೋಕುಲವನು ಸಂ ಸ್ಕಾರ ಕ್ಷತ್ರದಿಂದ ಮಾಡಿದ ಶಿಶುಗಳೆರಡಕೆ 45 ರಾಮಕೃಷ್ಣರೆಂದು ಪೆಸರ ಪ್ರೇಮದಿಂದಲಿಡಿಸಿ ನಂದನ ನೇಮಕೊಂಡು ತಾ ತೆರಳಿದ ಗರ್ಗಾಚಾರ್ಯನು46 ಶುಕ್ಲಪಕ್ಷದ ಚಂದ್ರನಂತೆ ಶುಕ್ಲನಾಮಕ ಹರಿಯು ಜನದೊ ಳಕ್ಕರಿಯಲ್ಲಿ ಬಾಲಲೀಲೆ ತೋರುತಿರ್ದನು 47 ಅಂಬೆಗಾಲಿಡುತ್ತ ಕೃಷ್ಣ ಸಂಭ್ರಮದಲಿ ಮನೆಮನೆಗಳೊ ಳಿಂಬಾಗಿ ಪಾಲು ಬೆಣ್ಣೆ ಕದ್ದು ತಿಂಬನು 48 ವಂದು ನೋಡಿ ಕಣ್ಣುಮುಚ್ಚಿ ವಿಸ್ಮಿತಳಾದಳು 49 ಮನೆಮನೆಗಳ ಪೊಕ್ಕೆಶೋದೆತನಯ ಪಾಲುಬೆಣ್ಣೆಸವಿದು ವಿ ನಯದಿಂದ ಅರಿಯದವನಂತಿರುವ ತಾಯಿಗೆ 50 ಗೋಪಿ ವಿಧ ವಿಧ ಗುಣದಿಂದಲೂಖಲಕ್ಕೆ ಕಟ್ಟಿದಳ್ 51 ವರಳ ಸೆಳೆದುಕೊಂಡು ಮತ್ತಿಮರಗಳನ್ನು ಮುರಿಯೆ ಸಿದ್ಧ ಪರುಷರೀರ್ವರಾಬಾಲಗೆ ನಮಿಸಿ ತುತಿಸಿ ಪೋದರು 52 ವನಜನಾಭ ಕೃಷ್ಣನನ್ನು ದೂರುತಿರುವರು 53 ಸೂನು ನಮ್ಮ ಮನೆಗೆ ಬಂದು ಆನಂದದಿ ಯಾರು ಆಡದಾಟ ಆಡುವ 54 ಬಾಯಿಗೊರಸಲತ್ತೆ ಸೊಸೆಯ ಹೊಡೆಯೆ ನಗುತ ಓಡಿ ಬಂದ ತವಸುತ 55 ಲೀಲೆಯಿಂದಲಿವನು ನೆಲುವಿನ ಮೇಲಿಟ್ಟಿರುವ ಭಾಂಡವನ್ನು ಕೋಲಿನಿಂದ ತಿವಿದು ವಡೆದು ಪಾಲ ಸವಿದನು56 ಎತ್ತಿಕೊಳ್ಳೆನುತ್ತ ಮೈಯ್ಯ ಹತ್ತಿ ನೆಲುವಿನ ಭಾಂಡವನ್ನು ಮತ್ತೆ ನಿಲುಕಿಸಿಕೊಂಡು ಪಾಲಕೆನೆಯ ಮೆದ್ದನು 57 ಸತಿಪತಿಗಳ್ ಮಲಗಿರೆ ಮಧ್ಯೆ ಸರ್ಪವನು ಹಾಕಿ ತಾನ- ಗುತ್ತಲಿ ಜುಟ್ಟು ಜಡೆಗೆ ಗಂಟಿಕ್ಕಿ ಓಡಿದ58 ಅಳುತಲಿರುವ ಶಿಶುವಿನ ತಲೆಯ ಕೂದಲು ಕರುವಿನಬಾಲಕೆ ಎಳೆದು ಗಂಟುಹಾಕಿ ಬೀದಿಯಲ್ಲಿ ನೂಕುವ 59 ಬೆಣ್ಣಿಯನ್ನು ಮೆದ್ದು ಮಿಕ್ಕದನ್ನು ಕೋತಿಗಿತ್ತದು ತಿನ್ನತಿರಲು ನಗುತ ನಗುತ ತಿರುಗುತಿರುವನು 60 ಇನಿತು ಎಲ್ಲ ಪೇಳೆ ಗೋಪವನಿತೆ ತಾನು ಮಗನ ಮುದ್ದಿಸಿ ಘನ ಪ್ರಮೋದ ಚಿತ್ತಳಾಗಿ ಕಾಲಕಳೆವಳು 61 ಪ್ರೀತಿಯಿಂದ ಬನ್ನಿ ಎಂದು ಕರೆವ ಬಾಲರ 62 ಮೂರು ವರ್ಷವಾಗೆ ಕೃಷ್ಣ ಮುದದಿ ಕರುಗಳ ಕಾಯುತ್ತ ವಾರಿಗೆಯವರಿಂದ ಕೂಡಿ ಕುಣಿಯುತಿರುವನು 63 ವತ್ಸ ಬಕರ ಮುರಿದು ಕೃಷ್ಣ ಸ್ವೇಚ್ಛೆಯಿಂದಲಣ್ಣನೊಡನೆ ನಿಶ್ಚಲ- ಚಿತ್ತರುಲಿಯಲಾಡುತೆಸೆದ ಮೋದದಿ64 ವೃಂದಾವನಕೆ ಪೋಗಲಲ್ಲಿ ಇಂದಿರೇಶ ವಿಷದ ಮಡುವ ನೊಂದು ದಿನದಿ ಧುಮುಕಿ ಜಲವ ನಿರ್ಮಲಗೈದನು 65 ವನದೊಳಗ್ನಿಯನು ನುಂಗಿ ಜನರ ಸಲಹಿ ರಾತ್ರಿಯಲ್ಲಿ ಮುನಿ ಜನೇಢ್ಯನಾಗಿ ಗೋಕುಲದೊಳೆಸೆದನು 66 ಅಜಗರನಾಗಿದ್ದಸುರನ ನಿಜಶರೀರ ಬೆಳಸಿ ಕೊಂದು ಸ್ವಜನರನ್ನು ಪಾಲಿಸಿದನು ವೃಜಿನದೂರನು 67 ಳನ್ನು ಕಾಯ್ದ ಕೃಷ್ಣ ತಾನು ನನ್ನಿಯಿಂದಲಿ 68 ಕರುಗಳನ್ನು ಹುಡುಗರನ್ನು ಸರಸಿಜಭವ ಬಚ್ಚಿಡಲ್ಕೆ ಹರಿಯುತಾನು ತತ್ವದ್ರೂಪವಾಗಿ ಮೆರೆದನು 69 ನಾನಾಲಂಕಾರದಿ ಗೋವುಗಳ
--------------
ಗುರುರಾಮವಿಠಲ
ಮಾಡಿ ಗುರುಧ್ಯಾನ ನೋಡಿ ನಿಜಸ್ಥಾನ ಧ್ರುವ ಹೋಗ ಹೋಗಬ್ಯಾಡಿ ಏಕವಾಗಿ ನೋಡಿ ಜೋಕೆಯಿಂದ ಕೂಡಿ ಸುಖವು ಸೂರ್ಯಾಡಿ 1 ನೋಡಿ ನಿಮ್ಮ ಖೂನ ಕೂಡಿ ಸಮ್ಯಙÁ್ಞನ ಗುಹ್ಯ ಧನ ಮಾಡಿರೊ ಜತನ 2 ಮಾಡಿ ಗುರುಸ್ತುತಿ ಮೂಢ ಮಹಿಪತಿ ನೋಡಿ ನಿಜವ್ಯಕ್ತಿ ಪಡೆದ ಸದ್ಗತಿ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮುಖ್ಯಬೇಕು ಗುರುಭಕ್ತಿಗೆ ತಾ ಸದ್ಭಾವನೆ ಸಪ್ರೇಮ ಸಿಕ್ಕಿ ಬಾಹ್ವ ಸಾಧಿಸಿ ತನ್ನೊಳು ಶ್ರೀಗುರುಸರ್ವೋತ್ತಮ ಧ್ರುವ ಸೋಹ್ಯ ತಿಳಿದರೆ ಸಾಧಿಸಿಬಾಹುದು ಶ್ರೀಗುರುವಿನ ಶ್ರೀಪಾದ ದೇಹ ನಾನಲ್ಲೆಂಬು ಭಾವನಿ ಬಲಿವುದು ತಾ ಸರ್ವದಾ ಗುಹ್ಯಮಾತು ಗುರುತಕೆ ಬಾಹುದು ಸದ್ಗುರು ಸುಪ್ರಸಾದ ಬೋಧ 1 ಕೀಲು ತಿಳಿದರೆ ಕಿವಿ ಸಂದಿಲ್ಯಾದೆ ಮೂಲಮಂತರದ ಖೂನ ಕೂಲವಾದರೆ ಗುರುದಯದಿಂದಲಿ ಕೇಳಿಸುವದು ಪೂರ್ಣ ಮ್ಯಾಲೆ ಮಂದಿರದೊಳು ತಾ ತುಂಬೇದ ಥಳಥಳಿಸುವ ವಿಧಾನ ಶೀಲ ಸುಪಥ ಸಾಧಿಸಿ ಸದ್ಗತಿ ಸಾಧನ 2 ಟೂಕಿ ಬ್ಯಾರ್ಯಾದೆ ಏಕೋಭಾವದಿ ಕೇಳಿರೊ ನೀವೆಲ್ಲ ಹೋಕು ಹೋಗಿ ಹುಡುಕಿದರೆ ತಾ ಎಂದಿಗೆ ತೋರುವದಲ್ಲ ಶೂನ್ಯ ಜೋಕೆಯಿಂದ ಜಾಗಿಸಿಕೊಡುವಾ ಮಹಿಪತಿಗುರು ಮಹಾಮಲ್ಲ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮೂಕನಾಗೋ ಮನವೆ ನಿನಗೆ ಯಾಕೀ ಲೋಕ ಗೊಡವೆ ಪ ಮೂಕನಾಗಿ ಬಹುಜೋಕೆಯಿಂದ ನಡಿ ಏಕಾಂತ ಗುಟ್ಟೀ ಲೋಕರಿಗರುಹುದೆ ಅ.ಪ ಹೇಳಿದರೇನಾದೋ ನೀ ಬಲು ಕೇಳಿದರೇನಾದೊ ಹೇಳಿಕೆ ಕೇಳಿಕೆ ಗಾಳಿಯ ಮೊಟ್ಟ್ಯೆಂದು ನೀಲಶಾಮನ ಮನದಾಲಯದೊಳಗಿಟ್ಟು 1 ಅವನಿ ಗೊಡವೆ ಯಾಕೋ ಹರಿಯೆಂದು ಭವಭಯವನು ಕಳಕೋ ದಿವನಿಶಿ ನಿಜದನುಭವದೊಳಗಾಡುತ ಭವಗೆಲುವಿನ ಸುದ್ದಿ ಭವಿಗಳಿಗುಸುರದೆ 2 ಪಾದ ಪಿಡಿಯೋ ಮುಂದಿನ್ನು ಹುಟ್ಟು ಸಾವು ಗೆಲಿಯೊ ದುಷ್ಟಮತಿಗಳ ಗೋಷ್ಠಿಗೆ ಹೋಗದೆ ಬಿಟ್ಟಗಲದೆ ನಿಜಪಿಡಿದು ನೀತಿ 3 ಮತ್ರ್ಯಜನರ ಇದಿರು ನೀ ಬಲು ಗುಪ್ತದಿಂದಿರು ಚದುರ ಸತ್ಯತಿಳಿದು ಹರಿ ಸರ್ವೋತ್ತಮನಂಘ್ರಿ ಚಿತ್ತದಿ ನಿಲ್ಲಿಸಿ ಅತ್ಯಾನಂದಗೂಡಿ 4 ನಂಬಿಗಿಲ್ಲದಲ್ಲಿ ಸುಬೋಧ ಡಂಬವೆನಿಪುದಲ್ಲಿ ಜಂಬವಡಿಯದೆ ಕುಂಭಿನಿಯೊಳು ನೀ ನಂಬಿ ಶ್ರೀರಾಮನ ಗುಂಭದಿಂ ಭಜಿಸುತ 5
--------------
ರಾಮದಾಸರು
ಯಾಕೆ ಕಷ್ಟ ಪಡುವೆ ಲೋಕನಾಯಕ ಮಾಯಾ ಜೋಕೆಯಿಂದ ಸಲಹು ನಮ್ಮ ಪ ಸಿರಿಯೆ ಪಟ್ಟದರಸಿ ನಿನಗೆ ಕಿರಿಯ ಮಡದಿ ಧರಣಿಯಾಗೆ ಹಿರಿಯ ಮಗನು ಸರ್ವಜನರೊಳಿರುತ ಕಾಮಿಸುವನು ಜಗವ 1 ಮಗನು ಜಗವ ನಿರ್ಮಿಸುವನು ಮಗುಳೆಲಯವಗೈವ ಮೊ- ಮ್ಮಗನು ನಿನ್ನ ದಾಸಿ ಈ ಜಗವ ಮೋಹಿಸುತ್ತಲಿರವಳು 2 ನೀರೊಳಿರುತ ಮೋರೆ ಮುಚ್ಚಿ ಕೋರೆ ಮಸೆದು ಕಂಬದಿಂದ ಹಾರಿಯೆಳೆದು ಧಾರಿಣಿಯ ಧೀರ ನೃಪರನ್ನೆಲ್ಲ ಕೊಂದು 3 ಊರುಬಿಟ್ಟು ಹಾರಿ ವನವ ಜಾರನಾಗಿ ಭಂಗಪಡಿಸಿ ನಾರಿಯರನು ದಾರ ತೇಜಿಯೇರಿ ಮೆರೆದು ಬಾರಿ ಬಾರಿ4 ಪರಮಪದವನಗಲಿ ಚಂಡ ಕರಣರಥವ ನುಳಿದು ಕ್ಷೀರ ಶರಧಿಯನ್ನು ಬಿಟ್ಟು ವ್ಯಾಘ್ರಗಿರಿಯೊಳಿರುವ ವರದವಿಠಲ5
--------------
ವೆಂಕಟವರದಾರ್ಯರು
ಯಾಕೆ ಜೀವನವೆ ನೀ ಶ್ರೀಕಾಂತನನು ಮರೆವಿ | ವಿವೇಕವೇ ನಿನಗಿದು ? ಪ ಜೋಕೆಯಿಂದಲಿ ನಿನ್ನ ಸಾಕುವ ಶ್ರೀ ಹರಿಯು | ಬೇಕಾದ ವರವೀವ ಭಕ್ತವತ್ಸಲ ದೊರೆಯಾಅ.ಪ ಲೇಸಾದರು ವಿಷಯದಾಸೆಯ ಬಿಡಲೊಲ್ಲಿ | ಏಸು ಜನ್ಮಂಗಳಾದರು ಈ ಶರೀರವು ನಿನ್ನದೆಂದು ತಿಳಿದು || ಪೋಷಿಸುವಿಯೊ ಬರಿದೆ ದೋಷರಹಿತ ಶ್ರೀನಿ- | ವಾಸನ್ನ ನೆನೆದು ನಿರ್ದೋಷವ ಕಳೆದೆನ್ನ ಪೋಷಿಸು ಎನ್ನದಲೆ 1 ಸತಿ-ಸುತರನು ನೀನು ಸಲಹುವೆನೆನುತಲಿ | ಅತಿ ಚಿಂತೆ ನಿನಗ್ಯಾತಕೊ ಗತಿ ನಿನಗಾಗುವ || ಹಿತಚಂತನೆ ಮಾಡೊ ಸದ್ಗತಿಯಾಗುವ ತನಕ | ರತಿಪತಿ ಪಿತನ ನೆನೆದು ನೀ ಪ್ರತಿಕ್ಷಣ ಹರಿಕಥೆ ಕೇಳದಲೆ2 ಪೊಟ್ಟೆಗೋಸುಗ ಭ್ರಷ್ಟರ ಸ್ತುತಿಸಿ ನೀ | ಕೆಟ್ಟು ಪೋಗುವಿ ಯಾತಕೋ ಜೀವನವೆ || ಪುಟ್ಟಿಸಿದವ ನಿನ್ನ ಪೊಟ್ಟೆಗೆ ಕೊಡನೇನೋ | ಕೆಟ್ಟುಹೋಗದೆ ವಿಜಯವಿಠ್ಠಲನ್ನ ನೆನೆದು ಸುಖಿಯಾಗು3
--------------
ವಿಜಯದಾಸ