ಒಟ್ಟು 71 ಕಡೆಗಳಲ್ಲಿ , 28 ದಾಸರು , 59 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗೋಪಿ | ತಿಂಗಲವಾದೇನೆ | ತಿಂಗಾದಿ ಪಿದಿದೆನು ಸಲಸಲ ಪೋಗಿ | ಗಂಗಿಯ ತಿದೆಯಲ್ಲಿ ಆದಿ ಬಂದೇನು ಪ ಕುಕುಕೊಲ್ಲೆ | ತಾಯಿಹಾಲು ಕುದಿದೇನು | ಗೋಕುಲ ಮಕ್ಕಳ ಕೂದಾ ಕಲಿತು | ಕಾಕಾಕೋಲು ಹೊದಾದೆನೆ 1 ತಂದು ಕೊದು ಬ್ಯಾಗಾ ಕೈಗೆ ಚಿನ್ನಿಕೋಲು ಬೇಕಲ್ಲೆ | ಉಂದೇನು ಕಲ್ಲಿಯ ಬುತ್ತಿಯ ಮತ್ತೆ | ಹಿಂದಾಕಲುಗಳ ಕಾದು ತಂದೆನೊ 2 ಅಪ್ಪತ್ತಿಕೊದು ಒಂದು ಮ್ಯಾಲೆ ತುಪ್ಪವು ತೊದಿಯದಕೆ | ತಪ್ಪಿಗೆಯಿದಸೆ ಅಪ್ಪಗೆ ಪೇಳಿ ವಪ್ಪುಗದಲಿ ವುದಿಕಲಿ ಕತ್ತೆ 3 ಅಮ್ಮ ನೀ ತಿಂದೆನೆ ಯಿತ್ತು ಯೆಂಣೆÉ ಮೆದ್ದೆನೆ | ವಮ್ಮೆ ತತಕು ಮೊಸಲು ಸುರಿದೇನು | ತಮ್ಮನ ತೊತ್ತಿಯಿಂದಾ ಯಿಲೆಸೆ 4 ಈ ಲೀಲೆಯ ನೋಡಿ ಮಗನÀ ತೋಳಲಿ ಬಿಗಿದಪ್ಪಿ | ಮೂಲೋಕದರಸ ವಿಜಯವಿಠ್ಠಲ ಗೋಪಿ 5
--------------
ವಿಜಯದಾಸ
ಜಗದೊಳಗ | ಸಾಧುರ ಮಹಿಮೆಯ ನೋಡಿ | ಸಾದರದಿಂದಲಿದೇ ಸಾಧನವೇ ಮಾಡಿ ಪ ಸಾಧುರ ನೋಡಿ | ಬಾರದ ಬಯಸುವರಲ್ಲಾ | ತಾನಾಗಿ ಬಂದ | ದಾರಿಯ ತ್ಯಜಿಸಲಿಕ್ಕಿಲ್ಲಾ ಬರುದೆ ಕಂಡಾ | ದುರಾಶೆ ಸೇರುವರಲ್ಲೆ | ದೊರಕಿದನಿತೆ ಲಾಭ | ಸಂತುಷ್ಟರಾಗಿಹರೆಲ್ಲಾ 1 ಸಾಧುರ ನೋಡಿ | ಬ್ರಹ್ಮಭಾವನೆ ಸಮತಾಳಿ | ಸಕಳಿಲ್ಲಿ | ಹಮ್ಮಿನ ಮೊಳಿಕೆಯ ಕೇಳಿ | ಸಿದ್ಧಾಂತದಿಂದ ತಮ್ಮನು ಭವದಲಿ ಬಾಳಿ | ಮುಮ್ಮುಳಿ | ಬಿಡಿಸುವರೊಂದೊಂದೇ ನುಡಿಹೇಳಿ 2 ಸಾಧುರ ನೋಡಿ | ಭಕ್ತಿಯ ಆಶ್ರಯ ಮಾಡೀ | ಬಂದವರಿಗೆ | ಮುಕ್ತಿಯ ಅನ್ನ ಸತ್ರ ನೀಡೀ | ಸದ್ಭೋಧದ | ಯುಕ್ತಿಯಾನಂದದೊಳಗಾಡೀ | ಉಕ್ತವಾದ ಗುರು ಮಹಿಪತಿಸ್ವಾಮಿ ಕೂಡೀ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜೋ ಜೋ ಜೋ ಬಾಲಾ ಸುಂದರ ಲೀಲಾ ಪ ತೊಟ್ಟಿಲೊಳಗೆ ನಿನ್ನ ಇಟ್ಟು ತೂಗುವೆ ರನ್ನಗಟ್ಟಿ ಮುಚ್ಚುತ ಕಣ್ಣ ಪುಟ್ಟನೆ ಮಲಗಿನ್ನ 1 ಗುಮ್ಮನು ಬಂದದ ಸುಮ್ಮನ ಮಲಗೆಂದುತಮ್ಮ ನಿನಗಿಂತೆಂದು ತಮ್ಮನೆಗ್ಹೋಗೆದ 2 ಇಂದಿರೇಶನೀತಾ ನಂದಗೋಪನ ಪೋತಸಿಂಧುರ ವರದಾತ ವೃಂದಕರಾರ್ಚಿತ 3
--------------
ಇಂದಿರೇಶರು
ಜ್ಞಾನವಂತರ ಸಂಗವಿರಲು ಸ್ನಾನವ್ಯಾತಕೆ ಪ ನಾನು ಎಂಬುದ ಬಿಟ್ಟ ಮೇಲೆ ನರಕವ್ಯಾತಕೆ ಅ.ಪ. ಮೃತ್ತಿಕೆ ಶೌಚ ಮಾಡದವನ ಆಚಾರವ್ಯಾತಕೆಸತ್ಯವಾದಿ ಆಗದವನ ನಂಬಿಗೆ ಯಾತಕೆ ||ಚಿತ್ತಶುದ್ಧಿ ಇಲ್ಲದವನ ವೈರಾಗ್ಯವ್ಯಾತಕೆಉತ್ತಮ ಹಿರಿಯರಿಲ್ಲದಂಥ ಸಭೆಯು ಯಾತಕೆ 1 ಪತಿಯ ಆಜ್ಞೆ ಮೀರಿದವಳ ವ್ರತಗಳ್ಯಾತಕೆಸತಿಗೆ ಅಳುಕಿ ನಡಿಯುವವನ ಸಾಹಸವ್ಯಾತಕೆ ||ಯತಿಯ ನಿಂದೆ ಮಾಡುವವನ ಮತಿಯು ಯಾತಕೆಅತಿ ವಿರೋಧ ಬಡಿಸುವಂಥ ಅಣ್ಣನ್ಯಾತಕೆ 2 ಹರಿಕಥೆಯ ಕೇಳದವನ ಕಿವಿಯು ಯಾತಕೆಮುರಹರನ ಮೂರ್ತಿಯ ನೋಡದಂಥ ಕಂಗಳ್ಯಾತಕೆ ||ಮರುತ ಮತವ ಪೊಂದದವನ ಬಾಳ್ವೆ ಯಾತಕೆಎರಡಾರು ನಾಮವಿಡದ ಶರೀರವೇತಕೆ3 ತಂದೆ ತಾಯಿ ಮಾತು ಕೇಳದ ಮಕ್ಕಳ್ಯಾತಕೆಬಂಧು ಬಳಗ ಉಳ್ಳದವನ ಭಾಗ್ಯವ್ಯಾತಕೆ ||ಬಂದ ಅತಿಥಿಗನ್ನವನಿಕ್ಕದ ಸದನವೇತಕೆ ಗೋ-ವಿಂದನಂಘ್ರಿ ಸ್ಮರಿಸದಂಥ ನಾಲಿಗ್ಯಾತಕೆ 4 ಮಕ್ಕಳನ್ನ ಮಾರಿಕೊಂಬ ತಂದೆಯಾತಕೆರೊಕ್ಕಕಾಗಿ ಬಡಿದಾಡುವ ತಮ್ಮನ್ಯಾತಕೆ ||ಕಕ್ಕುಲಾತಿ ಬಡುವ ಸಂನ್ಯಾಸವ್ಯಾತಕೆಠಕ್ಕು ಭಕುತಿ ಮಾಡುವಂಥ ದಾಸನ್ಯಾತಕೆ 5 ಆಗಿ ಬರದವರ ಅನ್ನ ಉಣ್ಣಲ್ಯಾತಕೆರೋಗವಾದ ನರಗೆ ಹೆಣ್ಣಿನ ಭೋಗವ್ಯಾತಕೆ ||ಯೋಗಿಯಾದ ಮೇಲೆ ದ್ರವ್ಯದ ಆಶೆಯಾತಕೆಭಾಗೀರಥಿಯ ಮಿಂದ ಮೇಲೆ ಪಾಪವ್ಯಾತಕೆ 6 ವೇದವನ್ನು ಓದದಂಥ ವಿಪ್ರನ್ಯಾತಕೆಕಾದೊ ರಣಕೆ ಅಂಜುವಂಥ ಕ್ಷತ್ರಿಯನ್ಯಾತಕೆ ||ವಾದವನ್ನು ಮಾಡುವಂಥ ಬಂಟನ್ಯಾತಕೆಸಾಧುಗಳಿಗೆ ಎರಗದವನ ಶಿರವಿದ್ಯಾತಕೆ 7 ಯಾತ್ರೆ ತೀರ್ಥ ಮಾಡದಂಥ ಪಾದವ್ಯಾತಕೆಪಾತ್ರರ ಸಂಗವಾಗದವನ ಜನ್ಮವ್ಯಾತಕೆ ||ಸ್ತೋತ್ರಕೆ ಮರುಳಾಗುವವಗೆ ಸಾಧನ್ಯಾತಕೆಪಾರ್ಥ ಸಖನ ತಿಳಿಯದವನ ಜ್ಞಾನವ್ಯಾತಕೆ 8 ಗುರೂಪದೇಶವಿಲ್ಲದಂಥ ಮಂತ್ರವ್ಯಾತಕೆಅರಿತು ವಿದ್ಯ ಪೇಳದ ಉಪಾಧ್ಯನ್ಯಾತಕೆ ||ಹರುಷವನ್ನು ತಾಳದಂಥ ಜ್ಞಾನಿ ಯಾತಕೆಕರಣ ಶುದ್ಧಿ ಇಲ್ಲದವನ ಸ್ನೇಹವ್ಯಾತಕೆ 9 ಗಾಣ ಕಟ್ಟಿದೆತ್ತಿಗೆ ಗೆಜ್ಜೆಯಾತಕೆ ||ರಾಣಿ ಇಲ್ಲದವನು ಮಾಡುವ ಬದುಕು ಯಾತಕೆತಾನು ಉಣ್ಣದೆ ಪರರಿಗಿಕ್ಕದ ಧನವಿದ್ಯಾತಕೆ 10 ಧರ್ಮವಿಲ್ಲದೆ ರಾಜ್ಯ ಆಳುವ ಪ್ರಭುವಿದ್ದ್ಯಾತಕೆಮರ್ಮವರಿತು ನಡೆಯದಂಥ ಹೆಣ್ಣು ಯಾತಕೆ ||ನಿರ್ಮಲಾಂಗನಾದ ಮೋಹನ ವಿಠಲನ ಗುಣಕರ್ಮ ಕ್ರಿಯಾ ತಿಳಿದ ಮ್ಯಾಲೆ ನಿರ್ಣಯವ್ಯಾತಕೆ 11
--------------
ಮೋಹನದಾಸರು
ತಮ್ಮನರಿಯದೆ ತಮ್ಮೊಳೀತೆರನಾಡುವರು |ಹಮ್ಮ ಬಿಡದೆ ಪರಬಮ್ಮನ ಜರಿಯುವರು ಪ ಒಂಬತ್ತು ಛಿದ್ರುಳ್ಳ ಕುಂಭದ ಗಾಲಿಗೆ |ಸ್ತಂಭದಂತೆ ನಿಲಿಸಿ ಸಂಭ್ರಮ ಪಡೆವರು 1 ಮುಂಡ ಬೋಳವ ಮಾಡಿ ಕಂಡಲ್ಲನ್ನವನುಂಡು |ದಂಡ ಧರಿಸಿ ಮನ ದಂಡಿಸದಿರುವರು 2 ಕದಲಿಸದೆ ಕಾಯಾ ಹದನದಿಂದಲಿರಿಸಿ |ವೇದದ ಮೊದಲೆಂದು ನಾದಕೆ ಬೆರೆವರು 3 ಓದಿ ಆಗಮಗಳನು ಭೇದಿಸಿ ತಿಳಿಯದೆ |ಮೇದಿನಿಯೊಳಗೆಲ್ಲ ವಾದಿಸಿ ಮೆರೆವರು 4 ಪಥ ಪಡೆದು ವೇಷ ಪಾಲಟ ಮಾಡಿ |ದೋಷಕಂಜದೆ ರುಕ್ಮ ಭೂಷಗೆ ಮರೆವರು 5
--------------
ರುಕ್ಮಾಂಗದರು
ತವರು ಮನೆಯು ನನ್ನ ಸುವಿದ್ಯಪುರಲ್ಯದೆ ಸಾವಿರಕೊಬ್ಬಗೆ ದೋರುತದೆ ಧ್ರುವ ಸಾವಿರಕೊಬ್ಬನೆ ತಾ ಸುದೇವನೆ ಬಲ್ಲ ಭಾವಿಸದಲ್ಲದೆ ತಿಳಿಯುವದಲ್ಲ ಅವಿದ್ಯಪುರ ದಾಟ, ಮಂದಾಕ್ಕಾಗಲು ಎಲ್ಲ ಆವಾಗ ತಿಳಿವುದು ಹೇಳಿದ ಸೊಲ್ಲ 1 ಸಾವಿರ ತೆನೆಯಲೊಪ್ಪುತದೆ ಒಳಕೋಟ ಠವಿಠವಿಸುತದೆ ನೋಡಿ ಮನಮುಟ್ಟಿ ಅವ್ವ ಅಪ್ಪನೇ ನಮ್ಮ ಇಹಸ್ಥಾನವು ಘಟ್ಟಿ ದೇವಾಧಿ ದೇವನೊಬ್ಬನೆ ಜಗಜಟ್ಟಿ 2 ಬಲು ಅಭೇದ್ಯಸ್ಥಳ ತಿಳಿಯದಿನ್ನೊಬ್ಬರಿಗೆ ನೆಲೆವಂತರಿಗೆ ತಾನು ತಿಳಿವದು ಬ್ಯಾಗೆ ತುಂಬಿ ಥಳಗುಟ್ಟಿ ಹೊಳವ್ಹಾಂಗೆ ಬಲಗೊಂಡು ಕೇಳಿ ಶ್ರೀಸದ್ಗುರುವಿಗೆ 3 ಅಣ್ಣನೆಂಬಾತ್ಹಾನೆ ಅನಂದದಲ್ಹಾನೆ ನೆನೆಪಿಗೊಮ್ಮೆ ಬಂದು ಸುಳವುತ್ಹಾನೆ ಕಣ್ಣೆಲಿ ಕಟ್ಯಾನೆ ತಮ್ಮನೆಂಬತ್ಹಾನೆ ಕ್ಷಣಕೊಮ್ಮೆ ಹೊಳೆವುವಾನೆ4 ಅಕ್ಕನೆಂಬಾಕಿ ತಾ ಸಖರಿ ಅಗ್ಹಾಳೆ ಅಖರದಲೆವ್ವ ಈ ಮಾತು ಕೇಳೆ ಪ್ರಖ್ಯಾತದಲಿ ಪ್ರೀತಿಮಾಡುವ ತಂಗ್ಹ್ಯಾಳೆ ಸುಖ ಸುರುತ್ಹಾಳೆ ಇರುಳು ಹಗಲು 5 ಅತ್ತಿಗೆ ನಾದುನಿ ಭಾವ ಮೈದುನರೆಲ್ಲ ಅಂತ್ಯಕವಾಗ್ಹ್ಯಾರೆ ಮನಿಯೊಳಗೆಲ್ಲ ಸುತ್ತೇಳುವ ಬಳಗ ಉತ್ತುಮರೆನಗೆಲ್ಲ ಹಿತದೋರುತಾರವ್ವ ಸರ್ವಾಪ್ತರೆಲ್ಲ 6 ಸರ್ವಾಪ್ತವೆಂಬುದು ಸರ್ವೇಶನೆ ತಾನು ಸರ್ವದಾ ಎನ್ನೊಳು ತಾ ಕಾಮಧೇನು ಪರ್ವಕಾಲದ ಬಹಳ ಏನೆಂದ್ದೇಳಲಿ ನಾನು ಸರ್ವಾರ್ಥ ಕೊಡುತ್ಹಾನೆ ಸರ್ವಾತ್ಮ ತಾನು 7 ಅವ್ವ ನಮ್ಮಪ್ಪಗೆ ಸರಿ ಇಲ್ಲ ಜಗದೊಳು ಆವ ಕಾಲಕೆ ತಾ ಇವರ ಮೇಲು ಇವರೆಂಬುದು ಒಂದೆ ಮಾತಿನ ಸ್ವಕೀಲು ಸವಿಸುಖಬಲ್ಲರು ಅನುಭವಿಗಳು 8 ತೌರಮನೆಂಬುದು ಪ್ರತ್ಯೇಕಾ ತಾನಿಲ್ಲ ಭಾವಾರ್ಥದ ಮಾತು ಕೇಳಿರೆಲ್ಲ ಅವಗುಣನೆ ಬಿಟ್ಟು ಕೇಳಿ ಸವಿಯ ಸೊಲ್ಲ ಪೂರ್ವಿಕರಿಗಿದೆ ಸಾರವೆಲ್ಲ 9 ಸುದ್ದಿ ಹೇಳಿ ಕಳುಹುಲಿಕ್ಕೆ ಈ ಸಾಧನ ಇದುವೆ ಅಯಿತು ತವರ ಮನಿ ಬುದ್ಧಿವಂತನೆಬಲ್ಲ ಲಕ್ಷಕೊಬ್ಬ ಜ್ಞಾನಿ ಸಿದ್ಧಿದರಿಡುವದು ಸದ್ಗುರು ಪ್ರಾರ್ಥನಿ 10 ಬಳಗದೊಳು ಕೂಡಿ ಒಳಿಥಾಗ್ಯಾಯಿತು ಎನಗೆ ಒಳ ಹೊರಗೆ ಸುಖ ಎದುರಿಟ್ಟತೀಗ ಕುಲಕೋಟಿ ಬಳಗ ಸದ್ಗುರು ಪಾದವ್ಯನಗೆ ಸಲಹುತಾನೆ ಸ್ವಾಮಿ ಮಹಿಪತಿಗೆ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತೀರ್ಥವು ಬೇಡಾ ಕ್ಷೇತ್ರವು ಬೇಡಾ ಜಪ ತಪ ಯೋಗವು ಬೇಡಾ ಪ ಪರ ಉಪಕಾರ ಶಾಸ್ತ್ರ ಪುರಾಣಗಳು ಬೇಡಾ | ಸ್ವಾಮಿ ಸದ್ಗುರು ಭವತಾರಕನ ಭಜಕರ ಪಾದವ ನೀ ಬಿಡಬೇಡಾ 1 ಸತ್ಯವು ಸಂಸಾರವು ಜಗವಿದು ಮಾಡೆಂಬರು ನೋಡೀಜನರು | ಮಿಥ್ಯವು ಸರ್ವವು ಜಗದೀಶನನು ತಿಳಿಯೆಂಬುವರಾ ಸಜ್ಜನರು || ಜಾಗ್ರದಿ ಸ್ವಪ್ನದಿ ಬಳಲುತ ನಲಿವುತ ಚರಿಸುವರಾ ಕಾರ್ಮಿಕರು | ತುರ್ಯಾವಸ್ಥೆಯೋಳ್ ಮರೆದು ತಮ್ಮನು ಇರುತಿಹರಾ ಸಾಧುವರು2 ಸಾರ ನಿವೃತ್ತಿಯ ಅರಿವುದೆ ಜೀವನ್ಮುಕ್ತಿ || ಇದರ ಹಂಚಿಕೆ ಮಾಡುತ್ತಿಹುದೇ ಅದುವೆ ಶಾಸ್ತ್ರದ ಯುಕುತೀ | ಸದಮಲ ಬೋಧಾನಂದವೆ ಬಲಿದರೆ ನಿಜವೇ ತಾ ಅವ್ಯಕ್ತಿ 3 ಅನುದಿನ ಮೂರ್ತಿ ಭವತಾರಕ ಭಜಕರ ಕೇಳೋ ನಿನ್ನ ಖೂನಾ 4 ಸಂಸಾರವ ಸದ್ಧರ್ಮದಲಿ ಸಾಧು ಸಂತರಂತೆ ನೀ ಮಾಡೊ | ಸಂಶಯವಳಿದು ಸರ್ವವು ಶಿವನೆಂದರಿದು ಅವರೊಳು ಕೂಡೊ | ಸತ್ತು ಹುಟ್ಟುವ ಕಟ್ಟಳೆಗಳನು ಕಿತ್ತಿ ಈಡ್ಯಾಡೊ | ನಿತ್ಯದಿ ಭವತಾರಕನ ಭಜಕರ ಸಂಗದಲಿ ಲೋಲ್ಯಾಡೊ 5 ಗುರು ವರನಲಿ ಸತ್ಪುರುಷರ ಬಳಿಯಲಿ ಅರಸಬಾರದು ಇಷ್ಟಾ | ಕುಲ ವಯ ಕ್ರಿಯಾ ಕರ್ಮವ ತಾಪತ್ರಯಗಳನೆಣಿಸುವ ಭ್ರಷ್ಟಾ | ಅನುಭವ ಜ್ಞಾನದಿ ಬೋಧದಿ ಲಕ್ಷ್ಯವೀಕ್ಷಿಸುವವನೆ ಶ್ರೇಷ್ಠಾ | ಇನಿತನು ಬಿಟ್ಟು ನಿಂದಿಸುವವನೆ ಭವದಲಿ ಬಡುವನು ಕಷ್ಟಾ 6 ಮೂರ್ತಿ ಭವತಾರಕ ಭಜಕರ ಸೂರ್ಯನ ಬಲ್ಲದೆ ಗೂಗಿ 7 ಭವ ದೋಷವು ಅಳಿವಹುದೇ? | ಗುರು ಭವತಾರಕ ಭಜಕರ ಬೋಧವು ಧರೆಯೊಳು ನರರಿಗೆ ಇಹುದೇ ? 8 ಮಾತು ಸತ್ಯವಾದರೆ ಆತಗೆ ಶಿವನೆನು- ತಿಹರೀ ಜಗ ಜನರೂ | ಭೂತಭವಿಷ್ಯತ್ ಹೇಳಲು ಭಕ್ತಿಯೊಳಾತಗೆ ನಡಕೊಂಬುವರೂ | ಭೂತಳದೊಳು ಭವತಾರಕ ಭಕ್ತರ ನೀತಿ ಮರೆತ ಪಾಮರರೂ | ನೂತನ ಖ್ಯಾತಿಯ ಕೊಂಡಾಡುತ ಬಹು ಪಾತಕಕೆಳಿ ಎಂಬುವರೂ 9 ಕರ ಭವ ಮೂರ್ತಿ ಭವತಾರಕ ಭಜಕರು ಇದ್ದ ಸ್ಥಿತಿಯನರಿಯರು 10 ಆಡುವರಾಟವ ಬಾಲರ ಮನೆಯಲಿ ಮಾಡುತ ಬ್ರಹ್ಮಾಂಡವನೂ |ನೋಡರು ಹಿರಿಯರು ಸಟೆಯೆಂದೇ ದಿಟ ಮಾಡುವರಿಹದಾಟವನೂ | ಪಾಡಲ್ಲೆನುತಲಿ ತಿಳಿದವರೊಳು ಬೇಡುವರಾ ನಾಕವನೂ | ರೂಢಿಯೊಳಗೆ ಭವತಾರಕ ಭಜಕರು ನೋಡರು ಪುಸಿಯೆಂದದನೂ 11 ನಿತ್ಯ ಪೂರ್ಣ ಭವತಾರಕನಂಘ್ರಿಯ ಹೊಂದದೆ ತಿಳಿಯದು ಗುಟ್ಟೂ 12 ಸಂಚಿತ ಪ್ರಾರಬ್ಧ ಕ್ರಿಯಮಾಣಾ ಜನರಿಗೆ ಬರೆದನು ಬ್ರಹ್ಮಾ | ಮುಂಚೆ ಶಿರವನು ನೀಗಿದಾ ಬರದವರಾರೊ ಆತಗೆ ತಮ್ಮಾ | ಮಿಂಚಿನಂತೆ ಜೀವನಕೆ ತಗಲುವಾ ಮಾಡುವ ಕರ್ಮಾ ಧರ್ಮಾ | ಹಂಚಿಕೆ ತಿಳಿಯದೆ ನುಡಿವರು ಮರುಳರು ವಂಚನೆ ಬಿಡು ಇದು ವರ್ಮಾ 13 ದೇವ ನೈವೇದ್ಯವು ಖೊಬ್ಬರಿ ಸಕ್ಕರಿ ಪನಿವಾರವು ನೋಡಿ | ಆವ ಕುಲದವನಾದರೂ ಏನು | ಇಲ್ಲದ ಹಂಚಿಕೆ ಮಾಡೀ ಭಾವಿಸಿ ಮೃಷ್ಟಾನ್ನವನಿಟ್ಟರೂ ಕುಲಧರ್ಮದಲ್ಲಿ ನೋಡೀ | ಕೇವಲ ಭವತಾರಕನ ಭಜಕರ ಮುಂದೆ ರಹಸ್ಯವ ಮಾಡೀ 14
--------------
ಭಾವತರಕರು
ತುಂಬಿ ಬೆಳಗುತಿರುವಿಯಂತೆ ಎ ನಗೆ ಕಾಣದ ಬಗೆಯಾಕಂತೆ ಪ ಜಗವನು ವ್ಯಾಪಿಸಿ ಬಗೆಬಗೆಯಿಂದಲಿ ಝಗಿಝಗಿಕಪೆಂಬಾನಂತ ಸ್ಮøತಿಗಳಿವೆ ಅ.ಪ ಸರಸಿಲಿ ಸ್ಮರಿಸಲು ಬಂದಂತೆ ತರುಣಿಯ ಸಭೆಯೊಳು ಕಾಯ್ದಂತೆ ಕರೆಯಲು ಕಂಬದಿ ಹೊರಟಂತೆ ತರಳಗೆ ಅಡವಿಲಿ ಒಲಿದಂತೆ ಅರಿತು ವಿಚಾರಿಸಿ ನೋಡಲಿವೆಲ್ಲ ನಿನ್ನ ಖರೆ ಪರತರಮಹಿಮ 1 ಅರಣ್ಯವಾಸಿಗಳ ಪರೀಕ್ಷಂತೆ ಅರಿತು ಪರುಷ ಕರುಣಿಸಿದಂತೆ ಚರಣದ್ವೊರೆಯ ತಮ್ಮನಂತೆ ಸ್ಥಿರಪಟ್ಟವನಿಗೆ ಕಟ್ಟ್ದಂತೆ ವರ ವೇದೋಕ್ತಿಗಳರಿತು ನೋಡಿದರೆ ಸ್ಮರಿಸುವ ಭಕುತರ ನಿರುತ ಚಿಂತಾಮಣಿ 2 ಪೊಡವಿಪಾಲನಿಗೆ ಶಾಪಂತೆ ಬಿಡದೆ ಚಕ್ರದಿಂದ ಕಾಯ್ದಂತೆ ಕಡಲ ಮಧ್ಯದಲಿ ಮನೆಯಂತೆ ದೃಢಕರಿಗೆ ಮೈ ನೆರಳಂತೆ ಕಡುದಯಾನಿಧಿ ಎನ್ನೊಡಲೊಳು ಬಿಡದಂತಿರಿಸಯ್ಯ ಒಡೆಯ ಶ್ರೀರಾಮ 3
--------------
ರಾಮದಾಸರು
ತೊಗಿರೆ ರಾಯರ ತೂಗಿರೆ ಗುರುಗಳ ತೂಗಿರೆ ಯತಿಕುಲ ತಿಲಕರ ಪ ತೂಗಿರೆ ಯೋಗೀಂದ್ರ ಕರಕಮಲ ಪೂಜ್ಯರ ತೂಗಿರೆ ಗುರುರಾಘವೇಂದ್ರರ ಅ.ಪ ಕುಂದಣಮಯವಾದ ಛಂದ ತೊಟ್ಟಿಲೊಳು ನಂದದಿ ಮಲಿಗ್ಯಾರ ತೂಗಿರೆ ನಂದನಂದನ ಗೋವಿಂದ ಮುಕುಂದನÀ ನಂದದಿ ಭಜಿಪರ ತೂಗಿರೆ 1 ಯೋಗನಿದ್ರೆಯನ್ನು ಬೇಗನೆಮಾಡುವ ಯೋಗೀಶ ವಂದ್ಯರ ತೂಗಿರೆ ಭೋಗಿಶಯನನಪಾದ ಯೋಗದಿ ಭಜಿಪರ ಭಾಗವತರನ ತೂಗಿರೆ 2 ನೇಮದಿ ತಮ್ಮನು ಕಾಮಿಪಜನರಿಗೆ ಕಾಮಿತ ಕೊಡುವರ ತೂಗಿರೆ ಪ್ರೇಮದಿ ನಿಜಜನರ ಆಮಯವನಕುಲ - ಧೂಮಕೇತೆನಿಪರ ತೂಗಿರೆ 3 ಅದ್ವೈತಮತದ ವಿಧ್ವಂಸನ ನಿಜ ಗುರು ಶುದ್ಧ ಸಂಕಲ್ಪದಿ ಬದ್ಧ ನಿಜಭಕ್ತರ ಉದ್ಧಾರಮಾಳ್ಪರ ತೂಗಿರೆ 4 ಭವ ತ್ಯಜನೆ ಮಾಡಿಸಿ ಅವರ ನಿಜಗತಿ ಇಪ್ಪರ ತೂಗಿರೆ ನಿಜಗುರು ಜಗನ್ನಾಥವಿಠಲನ್ನ ಪದಕಂಜ ಭಜನೆಯ ಮಾಳ್ಪರ ತೂಗಿರೆ 5
--------------
ಗುರುಜಗನ್ನಾಥದಾಸರು
ನಕ್ಷತ್ರ ರಮಣ ನಯ್ಯನಿಗೊಲಿದು ಶರವನಿತ್ತೆ | ನಕ್ಷತ್ರ ದೊಲ್ಲಭನ ತಮ್ಮನ ಸುತನ ಸುಟ್ಟೆ | ನಕ್ಷತ್ರ ಇಲ್ಲದವನ ವೈರಿಗಮನನ ತಾತ | ನಕ್ಷತ್ರ ಕಾಂತಧರನೇ || ನಕ್ಷತ್ರ ಜಾತ - ನಗ್ರಜನ ಮಸ್ತಕವ ತರಿದೇ | ನಕ್ಷತ್ರ ಸಹಸ್ರ ಉಳ್ಳವನ ದ್ವಾರವನು ಕಾಯ್ದೆ | ನಕ್ಷತ್ರ ನೀನೇ ಇಂದ್ರಾದಿ ದೇವತೆಗಳಿಗೆ ಗುರುಮಹಿಪತಿಸ್ವಾಮಿ | ನಕ್ಷತ್ರ ಭೂಷಸಲಹೋ 1
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಾ ನಿಮ್ಮ ದಾಸರ ದಾಸಈ ನರರ ಪಾಡೇನೆರಡು ದಿನದ ಸಂಸಾರ ಪ ಕರೆಸು ಕಂಬದಿ ಎಂದು ವಾದಿಸಿದವ ಕೆಟ್ಟಪರಹೆಣ್ಣಿಗಾಸೆ ಪಟ್ಟು ಕೀಚಕ ಕೆಟ್ಟಬರಿದೆ ದ್ರೌಪದಿಗಾಗಿ ದುರ್ಯೋಧನ ಕೆಟ್ಟಉರಿ ಹಸ್ತವ ಬೇಡಿ ಭಸ್ಮಾಸುರ ಕೆಟ್ಟ 1 ಆಡಿದ ಮಾತಿಗೆ ಬಲಿ ನೀಡಲಾಗಿ ಕೆಟ್ಟಮಾಡುವ ದಾನ ತಡೆದು ಶುಕ್ರನು ಕೆಟ್ಟಕೂಡಿದ ಶಿರವರಿದು ರೂಢಿಗೀಶ್ವರ ಕೆಟ್ಟಬೇಡಲು ಗುಂಡಿಗೆ ಸೀಳಿ ಕರ್ಣನು ಕೆಟ್ಟ 2 ಎರಡೆಂಟಾಡೆನೆಂದು ಹರಿಶ್ಚಂದ್ರ ಕೆಟ್ಟನೆರೆ ಪಗಡೆಯನಾಡಿ ಧರ್ಮಜನು ಕೆಟ್ಟಹರಿದು ಬಾಣವ ತೊಟ್ಟು ದಶರಥನು ಕೆಟ್ಟಹರಿಯ ಮೊರೆ ಸೇರಿದರ್ಗೆ ಸ್ಥಿರ ಪಟ್ಟ 3 ಹಮ್ಮನಾಡಿ ಮುನ್ನ ಬ್ರಹ್ಮ ತಾ ಕೆಟ್ಟಅಮ್ಮನ ನುಡಿ ಕೇಳದೆ ಹನುಮಂತ ಕೆಟ್ಟತಮ್ಮನ ನುಡಿ ಕೇಳದೆ ರಾವಣನು ಕೆಟ್ಟನಿಮ್ಮ ನೋಯಿಸಿದ ಮೈರಾವಣನು ಕೆಟ್ಟ 4 ಭಾಗೀರಥಿಯ ತಂದೆ ಬಹುದೈತ್ಯರ ಕೊಂದೆಭೋಗಿಶಯನ ಶ್ರೀ ಲಕ್ಷ್ಮೀಕಾಂತನೆಭಾಗವತ ಪ್ರಿಯ ಭವಭಯಹರಕಾಗಿನೆಲೆಯಾದಿಕೇಶವಗೆ ನಮೊ ನಮೋ 5
--------------
ಕನಕದಾಸ
ನಿನ್ನ ಚಂದ್ರಕೋಟಿ ತೇಜ ಚಕ್ರಧರನ ಭೃತ್ಯಾ ಪ ತ್ರಿದಶ ದೈತ್ಯರು ಕೂಡಿ ತೀವ್ರದಿಂದಲಿ ತಾವು ಮಂದರ ಶೈಲ ತವಕದಿ ತಂದಾಗ ಉದಧಿಯೊಳಿಟ್ಟು ಸರ್ಪವನೆ ಸುತ್ತಿದರು ಪಿಡಿದು ಮುದದಿಂದ ಕಟಿಯಲು ಮುನಿದು ಮಹರೋಷದಿ ಅದು ನೋಡಿ ಮದನಾರಿ ಕಂಗೆಡಲು ಅಂಜದೆ ನೀನು ಸುರರು ಸುಖಬಡಲು 1 ವಾತನ ಸುತನಾಗಿ ವಾಲಿಯ ತಮ್ಮನ ಕೂಡಿ ಭೂತಳಾಧಿಪ ರಾಮಚಂದ್ರನ ಪದವಾರಿ ಜಾತಕ್ಕೊಂದನೆ ಮಾಡಿ ವೃತ್ತಾಂತವನು ಪೇಳಿ ಆತುರದಲಿ ಪುರಹೂತನಂದನ ನಿ ರ್ಭೀತನ ಕೊಲ್ಲಿಸಿ ಶರಧಿಯನು ಹಾರಿ ಸೀತೆಗುಂಗುರ ಕೊಟ್ಟು ಬೆಳೆದ ಚಲ್ವ- ವಾತಹತಮಾಡಿ ಲಂಕಾಪುರವ ಸುಟ್ಟ 2 ಪಾಂಡುಚಕ್ರವರ್ತಿ ಕುಂತಿಯಲಿ ಜನಿಸಿ ಮಂಡಲದೊಳು ಮಹಾಶೂರನೆನಿಸಿ ವಿಷ ಉಂಡು ದಕ್ಕಿಸಿಕೊಂಡು ಉರಗಲೋಕದಲ್ಲಿದ್ದು ತಾಂಡ ಭಾದಿಯ ಗೆದ್ದು ಹಿಡಿದು ಹಿಡಂಬನ ಹಿಂಡಿ ಬಕಾಸುರನ ಖಂಡರಿಸಿ ಕೀಚಕನ ಮಂಡಲದೊಳಗೆ ನಿಂದೆ ವಿರಾಟನ್ನ ದಿಂಡುಗೆಡುಹಿ ಕದನದಲಿ ವೇಗ ಕೊಂದೆ 3 ಬುದ್ಧಿಹೀನರಾಗಿ ಬಾಳಿದ ಮನುಷ್ಯರ ಶುದ್ಧಾತ್ಮರನ ಮಾಡಿ ಶುಭವೇಗದಲಿ ಶ್ರೀ ಮುದ್ರೆಧಾರಣ ಕೊಟ್ಟು ಜ್ಞಾನಾಂಬುಧಿಯೊಳಿಟ್ಟು ಅದ್ವೈತ ಮತ ಕಾಲಿಲೊದ್ದು ಪರವಾದಿ ಎದ್ದೋಡಿ ಬಂದು ತಿರುಗಿ ನಿಮ್ಮ ಉದ್ಧರಿಸಿ ಅವರವರ ದೋಷ ಹೋಯಿತು ಕರಗಿ4 ಭೂವ್ಯೊಮ ಪಾತಾಳದೊಳಗೆ ಎದುರುಗಾಣೆ ವಾಯು ಹನುಮ ಭೀಮ ಮಧ್ವನೆಂದಿನಿಸಿದೆ ಕಾಯಜ ಜನಕನ ಪದವ ಪೂಜಿಸಿ ಅಂಬು ಜೆಯನ ಪದವಿ ಪಡೆದು ಹರ ಇಂದ್ರಾದಿಗಳಿಗೆ ನಾಯಕನೆನಿಸಿದೆ ನಾನಾ ದುರಿತವಾಗಿ ಮಾಯಿಗಳೆಲ್ಲ ತರಿದೆ ಸುಭಕುತರ ಆಯತದಿಂದ ಪೊರೆದೆ ವಿಜಯವಿಠ್ಠಲರಾಯ ವೆಂಕಟನ ಒಲಿಮೆಯಿಂದಲಿ ಮೆರೆದೆ5
--------------
ವಿಜಯದಾಸ
ನಿನ್ನ ಮಹಿಮೆ ತಿಳಿಯುವುದೊಂದಗಾಧ ದೇವ ಉನ್ನತೋನ್ನತಚರಿತ ನುತಸಹಜಭಾವ ಪ ಯೋಗಿ ನೀನಾದಯ್ಯ ಜೋಗಿಯೆಂದೆನಿಸಿದಿ ಆಗಾಧ ದೇಹ ತಾಳ್ದಿ ಬಾಗಿಲವ ಕಾಯ್ದಿ ಮಿಗಿಲಾದ ರೂಪಾದಿ ಜಗವ ಪಾಲಿಸಿದಿ 1 ಕರುಣದಿಂದಾಳಿದಿ ವರವಿತ್ತು ಕಳುಹಿದಿ ಧರೆಗೆ ಭಾರೆನಿಸಿದಿ ತಿರುಗಿ ನೀ ಮುನಿದಿ ಘಟ ನೀಡ್ದಿ ಪರಮಭಟನೆನಿಸಿದಿ ಶರಗಳನು ಪೋಣಿಸಿದಿ ಧುರದೊಳಗೆ ಕೊಂದಿ 2 ತಮ್ಮನ ಪಕ್ಷ್ಹಿಡಿದಿ ತಮ್ಮನಣ್ಣನಕೊಂದಿ ತಮ್ಮಗಧಿಕಾರ ಗೈದಿ ಸಮ್ಮತದಿ ಕಾಯ್ದಿ ತಮ್ಮನಿಗೆ ಭಾವನಾದಿ ತಮ್ಮನಿಗೆ ಬೋವನಾದಿ ತಮ್ಮನಿಂ ಕೊಲ್ಲಿಸಿದಿ ಸಮ್ಮತವ ಗೈದಿ 3 ಮಾವಗಳಿಯನಾದಿ ಮಾವಗೆ ವೈರ್ಯಾದಿ ಮಾವನ ಕುಲವಳಿದಿ ತಾಯನ್ನ ಕಾಯ್ದಿ ಗೋವು ಪಾಲಕನಾದಿ ಗೋವಿಗೆ ಮಗನಾದಿ ಗೋವುಗಳನಾಳಿದಿ ಗೋವುಕುಲ ಪೊರೆದಿ 4 ಮೀನಾದಿ ಕೂರ್ಮಾದಿ ದಾನ ಬೇಡುವನಾದಿ ಕಾನನ ಮೃಗನಾಗಿ ಧ್ಯಾನಿಪರಕಾಯ್ದಿ ದೀನಪಾಲನೆ ನಿನ್ನ ಜಾಣಮಹಿಮಂಗಳನ್ನು ಹೀನರರಿವರೆ ಮಮಪ್ರಾಣ ಶ್ರೀರಾಮ 5
--------------
ರಾಮದಾಸರು
ನಿರ್ತದೊಡ್ಡದೈಯ್ಯಾ | ಅರ್ತವರಿಗೆಲ್ಲಿದೆ ಭಯವು ಪ ಗುರುವಿನಂಘ್ರಿಯ ಕಂಡು | ಗುರುದಯ ಪಡಕೊಂಡು | ಚರಿಸುವರಾನಂದ ನುಂಡು 1 ಘನದೆಚ್ಚರುಳ್ಳವಗ | ಬಿನಗುದೈವದ ಸಂಗ | ಆನಿಯೇರಿ ಕುನ್ನಿಯ ಹಂಗ 2 ಮೊಮ್ಮಕ್ಕಳ ಕಂಡಿರೆ | ಗುಮ್ಮನೆಂದರಂಜುವರೆ | ತಮ್ಮನುಭವ ಬಿಡುವರೆ 3 ಮುಂದಾಗುವ-ಹಿತೊಂದು | ಇಂದಿವೆ ಬಾರದ್ಯಾಕೆಂದು | ಮುಂದಗಿಡನು ಎಂದೆಂದು 4 ಮದಿರೆಕೊಂಡವನಂತೆ | ಮದವೇರಿಹ ನಗುತ | ಮಧುಹರನ ಕೊಂಡಾಡುತ 5 ತಂದೆ ಮಹಿಪತಿದಯಾ | ನಂದ ಕವಚದಿ ಕಾಯಾ | ಛಂದ ಮಾಡಿದಾ ಉತ್ಸಾಯಾ 6
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೀನೆ ಎನಗಾಗಿ ಬಂದು ನೀನೆ ನೀನಾಗೆನಗಿಂದು ಧ್ರುವ ಅಪ್ಪನಾಗೆನಗೆ ನೀ ಬಂದು ತಪ್ಪು ಕ್ಷಮೆ ಮಾಡಿದಿಂದು ಒಪ್ಪಿಸಿಕೊಳಲೆನ್ನ ಬಂದು ಅಪ್ಪಳಿಸಿದೆ(?) ಜನ್ಮವಿಂದು 1 ಅಮ್ಮನಾಗೆನಗೆ ನೀ ಬಂದು ರಂಬಿಸಿದೆ ಎನಗಿಂದು ಸಮ್ಯಜ್ಞಾನದಲಿ ನೀ ಬಂದು ಸುಮ್ಮನÉದೋರಿದೆನಗಿಂದು 2 ಅಣ್ಣನಾಗೆನಗೆ ನೀ ಬಂದು ಕಣ್ಣಿನೊಳಗೆ ಸುಳಿದಿಂದು ಸುಗುಣ ಸಹಕಾರದಲಿ ಬಂದು ಪುಣ್ಯಚರಣದೋರಿದಿಂದು 3 ಅಕ್ಕನಾಗೆನಗೆ ನೀ ಬಂದು ಅಕ್ಕಿದೆ ಆತ್ಮದಲಿಂದು ಸಾಕಿ ಸಲಹಲೆನ್ನ ಬಂದು ಸಿಕ್ಕಿದಕ್ಕಿದೆ ಎನಗಿಂದು 4 ತಮ್ಮನಾಗೆನಗೆ ನೀ ಬಂದು ತಮ್ಮೊಳರ್ಪಿಸಿಕೊಂಡೆ ಇಂದು ತಮ್ಮ ನಿಜವಾದಾರ(?) ಬಂದು ತನುವಿನೊಳಗೆ ಸುಳಿದಿಂದು 5 ತಂಗಿಯಾಗೆನಗೆ ನೀ ಬಂದು ಹಿಂಗಿಸಿದೆ ಭವವಿಂದು ಸಂಗ ಸುಖವದೋರ ಬಂದು ಅಂತರಂಗದಿ ಸುಳಿದಿಂದು 6 ಈಸು ಪರಿಯಲೆನಗಿಂದು ಆಶೆಪೂರಿಸಿದೆನಗಿಂದು ಭಾಸ್ಕರ ಗುರುವಾಗಿ ಬಂದು ಭಾಸಿ ಪಾಲಿಸಿದೆನಗಿಂದು 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು