ಒಟ್ಟು 99 ಕಡೆಗಳಲ್ಲಿ , 30 ದಾಸರು , 79 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏತಕೆ ನೀ ಚಿಂತಿಸುವೆ ಹೇಡಿ ಜೀವವೇ ಪ ವೀತಮೋಹರಾಗನಾಗಿ ವಿಧಿಪಿತ ದಾತತಾನೆಂದು ತಿಳಿಯಲು ಹೃತ್ತಾಪನಾಶನಾ ಅ.ಪ ಹೊನ್ನು ಹೆಣ್ಣು ಮಣ್ಣು ಮೂರು ನಂಬಬ್ಯಾಡಲೊ ನಿನ್ನೊಳಿರುವ ಮೂರ್ತಿಯನ್ನು ಅರಿತು ಬಾಳೆಲೊ 1 ವಂದಿಸುತ ಸಜ್ಜನರ ಕಂಡರಾನಂದ ಪೊಂದುತ ಸಂದೇಹಗಳೆಲ್ಲ ತೊರೆದು ಸತತ ನಲಿಯುತ 2 ಆತ್ಮವತ್ ಸರ್ವಭೂತನೆಂಬೊ ವಚನವು ಆತ್ಮನಲ್ಲಿ ಸಮರ್ಪಿಸಿದರೆ ಪಡೆವೆ ಸೌಖ್ಯವು 3 ಸಾಮಜೇಂದ್ರ ವರದ ಶ್ರೀ ಗುರುರಾಮವಿಠಲನ ಪ್ರೇಮದಿಂ ನಿಷ್ಕಾಮನಾಗಿ ಸೇವಿಸುನುದಿನ 4
--------------
ಗುರುರಾಮವಿಠಲ
ಏತರಿಂದ ಬ್ರಾಹ್ಮಣಿಕೆ ಪರಮಾತ್ಮನೆತಾನೆಂದು ತಿಳಿಯದ ನರನಲಿ ಪ ಜನಿವಾರ ನೋಡಿ ಬ್ರಾಹ್ಮಣ ನೆಂದರೆ ಸು-ಮ್ಮನೆ ಮರಕೆ ಬಳ್ಳಿ ಸುತ್ತಿಲ್ಲವೆಹಣೆಯ ಬಟ್ಟದ ನೋಡಿ ಬ್ರಾಹ್ಮಣ ನೆಂದರೆಹಾದಿ ಕಲ್ಲಿಗೆ ಸುಣ್ಣ ಬರೆದಿಲ್ಲವೆ1 ಜುಟ್ಟು ನೋಡಿ ಇವ ಬ್ರಾಹ್ಮಣ ನೆಂದರೆಜುಟ್ಟಿನ ಗುಬ್ಬಿಯು ತಾನಿಲ್ಲವೆಉಟ್ಟ ಧೋತ್ರವ ನೋಡಿ ಬ್ರಾಹ್ಮಣ ನೆಂದರೆಉಟ್ಟುದಿಲ್ಲವೆ ಮನೆಯ ನಡುಗಂಬ 2 ಬ್ರಾಹ್ಮಣನಾದರೆ ಬ್ರಹ್ಮ ಸರ್ವವು ಆಗಿಬ್ರಹ್ಮವಖಂಡದಿ ಭೇದವಿಲ್ಲದೆಬ್ರಹ್ಮ ಚಿದಾನಂದ ಗುರುನಾಥನಾಗಿಯೆಬ್ರಹ್ಮವ ಕಂಡವನೀಗ ಬ್ರಾಹ್ಮಣ3
--------------
ಚಿದಾನಂದ ಅವಧೂತರು
ಏನು ಹೇಳಲಿ ನಿನಗಿನ್ನೂ ಗುರು ಧ್ಯಾನದ ಸುಖವನ್ನು ಪ ಚಿತ್ತದ ತಾಪವು ನೀಗಿ ಮಾಯಾವೃತ್ತಿಯ ಗುಣಗಳು ಪೋಗಿ | ಎತ್ತೆತ್ತ ನೋಡಲು ಅತ್ತತ್ತ ಪರಿಪೂರ್ಣ ಸಚ್ಚಿದಾನಂದ ಘನ ನಿಜವಾಗಿಹ 1 ದ್ವೈತಾದ್ವೈತಗಳೆಲ್ಲ ಪೋಗಿ ಶುದ್ಧ ಚೈತನ್ಯವೇ ತಾನಾಗಿ | ಮಾತು ಕಳೆದು ಮೌನವೆಂಬ ಏಕಾಂತದಿ | ಕೂತು ಲಕ್ಷಿಸುವ ಲಕ್ಷಣನೆ ತಾನಾಗಿಹ2 ಮನದ ಕಲ್ಪನೆಯನ್ನು ಮರೆದು ಹಮ್ಮು ತನುವಿನಮಮತೆಯ ಜರಿದು | ಅನುದಿನದಲಿ ಗುರು ರಾಮ ಪದಾಂಬುಜ ತಾನೆಂದು ಕಾಂಬುವ ಘನ ನಿಜವಾಗಿಹ 3
--------------
ಭೀಮಾಶಂಕರ
ಏನೆಂಬೆನು ಪವಮಾನ ದೇವನಲಿ ಶ್ರೀನಿವಾಸ ಕರುಣಾ ತಾನಾಗೀತನಕಡೆಯಲಿ ಬಹ ಲಕ್ಷ್ಮೀಮಾನ, ದೀನ ಶರಣಾ ಪ. ದುರುಳ ದಶಾಸ್ಯನ ಸೆರೆಯೊಳಗಿಕ್ಕಿದ ಸುರವರನಣುಗನನೂ ನೆರೆಯದೆ ಮಾರುತಿ ಇರುವ ನಿಮಿತ್ತದಿ ಕರಿಸಿದ ರವಿಜನನು ತಿರುಗಿ ದ್ವಾಪರದಿ ಬರಲಾರ ರವಿಜನ ನರನಿಂದೊರಸಿದನು ಎರಡು ಯುಗದೊಳೀ ತೆರದಲಿ ಭಾರತಿ ವರನನು ಸೇರಿದನು 1 ಶ್ರೀಕರ ಜೀವರಿಗೇಕೀ ಭಾವವ ಪೋಕ ಮೃಗಗಳಂದೂ ಕಾಕರಟನದಂತೊರೆವದನರಿತು ದಿ- ವೌಕಸಗಣಬಂದು ಶ್ರೀಕಮಲಾಸನ ವಂದ್ಯನೆ ಸಲಹೆನೆ ಸಾಕುವ ತಾನೆಂದೂ ಈ ಕಲ್ಯಾಣ ಗುಣಾಢ್ಯನ ಭೂಮಿಗೆ ತಾ ಕಳುಹಿದನಂದು 2 ಅದರಿಂ ತರುವಾಯದಲಿ ಸುಖಾಂಭುದಿ ಒದಗಿದ ತ್ವರೆಯಿಂದ ಪದುಮನಾಭ ಮೂರುತಿಯ ಕೆಲದಿ ನಿಂ- ದದುಭುತ ಭರದಿಂದಾ ವಿಧಿಭವ ಲೋಕಾದ್ಯಧಿಕೃತ ಪುಣ್ಯಾ ಸ್ಪದ ತೋರುವೆನೆಂದಾ ವಿಧಿ ಪದ ಯೋಗ್ಯನ ಚದುರತನಕೆ ಮೆಚ್ಚಿ ಪೂರ್ಣಾನಂದ 3 ವರ ವೈಕುಂಠವ ರಜತ ಪೀಠ ಸ- ತ್ಪುರದೊಳಗಿರಿಸಿಹನು ವಿರಜೆಯ ಮುನಿಕಡತ ಸರಸಿಗೆ ಕರೆಸಿದ ಮುರದಾನವಹರನು ಚರಣಾಂಬುಜಕಿಂಕರವರ ಚಂದ್ರೇ- ಶ್ವರನಲಿ ಕರುಣವನು ಇರಿಸಿ ಭಜಿಪ ಸುರತರುವೆನಿಸಿದ ಶ್ರೀ- ವರನ ಮಹಾತ್ಮೆಯನು 4 ಜ್ಞಾನಾನಂದಾಂಬುಧಿ ಶೇಷಾದ್ರಿಯ ಶ್ರೀನಿವಾಸನಿವನು ತಾನಾಗಿಲ್ಲಿಗೆ ಬಂದಿಹ ಭಕ್ತಾ- ಧೀನ ದಯಾಕರನು ಮಾನಸಗತ ಮಾಲಿನ್ಯವ ಕಳೆದನು ಮಾನವ ಬಿಡಿಸುವನು ನಾನಾಭೀಷ್ಟವ ನಿರವಧಿ ಕೊಡುತಿಹ ಮೌನಿ ಜನಾರ್ಚಿತನು 5
--------------
ತುಪಾಕಿ ವೆಂಕಟರಮಣಾಚಾರ್ಯ
ಕಂಗಳಿದ್ಯಾತಕೋ ಚಿನುಮಯ ರಂಗನ ನೋಡದಾ ಸಂಗರಹಿತಾತ್ಮನ ನೋಡದಾ ಪ ಶರೀರವೇ ತಾನೆಂದು ನಂಬಿ ಮೆರೆದು ನಿಜಾನಂದವನ್ನು ದೃಷ್ಯಂಗಳನ್ನು ನೋಡುವಾ 1 ತಾನಿದ್ಯಾರು ತನಗೆ ತೋರ್ಪ ತನುವಿದೇನೆಂದರಿವುತಿರ್ಪ ಜ್ಞಾನದೃಷ್ಟಿಯಿಲ್ಲದಂಥ ಆನನಂಗಳನು ನೋಡುವ 2 ಹಂಸ ತಾನಾಗಿ ಚರಿಪ ಹಂಸನ ಪ್ರಕಾಶವನ್ನು ಶುಂಶುಮಾರದಿ ಬೆಳಗುತಿರ್ಪಭ್ರಂಶಿತಾಂ ತನ್ನ ನೋಡದಾ 3 ಸಂತಸಾಧು ಚರಣಕ್ಕೆರಗಿ ಚಿಂತೆಗಳನು ಹರಿದು ಭರದಿ ಶಾಂತಿ ಸುಖವನಿತ್ತ ಗುರು ಶಾಂತಮೂರುತಿ ನೋಡಲಾರದ 4
--------------
ಶಾಂತಿಬಾಯಿ
ಕಥಾಶ್ರವಣ ಮಾಡದೆ ನರದೇಹವ ವೃಥಾ ಕಳೆವದೆಂದಿಗು ಸಲ್ಲ ಪೃಥಾಸುತನ ಮಹರಥಾವನು ಸರ್ವಥಾ ಪೊರೆವ ಸಂಶಯವಿಲ್ಲ ಪ. ವಿಕಲಿ ಪ್ರವರ್ತನ ಲೋಲಿಕಾಗಮ ಕಲಾನುಕೃತ ದುಷ್ಕಾಲದಲಿ ಒಲಿವನು ನಿರ್ಮಲಗೊಳಿಸುತಲಿ ಸಲೀಲವೆ ಲಘುಕರ್ಮದಲಿ ಸುನೀಲವಕ್ಷ ಸ್ಥಳಾಂತರ ಶ್ರೀಲಲಾಮನನು ಕೊಂಡಾಡುತಲಿ 1 ಅಲ್ಪ ಸುಖವ ಸಂಕಲ್ಪಿಸುವರಿಗಹಿತಲ್ಪನೊಲಿಯ ತಾನೆಂದೆಂದು ನಾಲ್ವರಿ ಫಲಗಳನಿಪ್ಪನೆ ಸಂಸ್ಕøತಿಯಿಪ್ಪಂದದಿ ದಯದೋರೆಂದು ಒಪ್ಪಿಸಿ ಮತ್ತವನಿಪ್ಪುದನುಂಡು ನೀರಪ್ಪಣೆಯಲಿ ಸನ್ಮತಗೊಂಡು ಹಿಂಡು 2 ಸ್ಮರಣೆ ಮಾತ್ರದಿಂದಲವನು ಪಾಪವ ಕರಣವ ಶುದ್ಧೀಕರಿಸುತಲಿ ಸನ್ಮತಿ ಇರಿಸುವನು ಪುರು ಪುರುಷಾರ್ಥಕರ ಪದಪದ್ಮವನಿರಿಸಿ ಶಿರದಿ ಸತ್ಕರಿಸುವನು ಮನದಲ್ಲಿರಿಸಿದವರನನುಸರಿಸುವನು 3
--------------
ತುಪಾಕಿ ವೆಂಕಟರಮಣಾಚಾರ್ಯ
ಕನ್ಯಾರತ್ನವನಿತ್ತನು ಹರಿಗೆ ಸತ್ರಾಜಿತರಾಯನು ಪ ಧನ್ಯನು ತಾನೆಂದೆನ್ನುತ ಯದುಕುಲರನ್ನ ಸುಗುಣ ಸಂಪನ್ನಗೆ ಹರುಷದಿ ಅ.ಪ. ಸನ್ನುತ ಚರಣನಿಗೆ ಕಮನೀಯ ಸ್ವರೂಪಗೆ ಕಮಲಾರಮಣಗೆ ಸ್ವರತನಿಗೆ ಕಾಮಿತ ಫಲದಾತಗೆ ಸುಮಬಾಣನ ಪಿತ ಸುಂದರಗೆ ಸುಮದಳನೇತ್ರನಿಗೆ ನಮಿಪ ಜನರ ಸುರದ್ರುಮನೆಂದೆನಿಸುವ ಅಮಿತ ಮಹಿಮಯುತಸಮವಿರಹಿತನಿಗೆ 1 ಬೃಂದಾರಕ ಬೃಂದ ಸುವಂದಿತಗೆ ಶ್ರೀ ಗೋವಿಂದಗೆ ಬೃಂದಾವನ ವಿಹರಣ ವಿಭವಗೆ ವಿಶ್ವಂಭರನಿಗೆ ಮಂದಾಕಿನಿ ಜನಕಗೆ ಮಾಧವಗೆ ಮರಕತಶ್ಯಾಮನಿಗೆ ಮಂದರಧರ ಮುಚುಕುಂದವರದ ಪೂ ರ್ಣೇಂದು ವದನಗುಣಸಾಂದ್ರ ಮುಕುಂದಗೆ 2 ವರಲೀಲಾ ಮಾನುಷ ವೇಷನಿಗೆ ವದನಾಂಬುಜದಲಿ ಸರಸಿಜ ಜಾಂಡವ ತೋರಿಪಗೆ ಸಾರಸನಾಭ ಪರಮಪಾವನ ಚರಿತಗೆ ಪುರುಷೋತ್ತಮನಿಗೆ ಗರುಡಗಮನ ಶ್ರೀ ಕರಿಗಿರೀಶ ಯದು ವರಕುಲಮಣಿ ಮುರಹರನಿಗೆ ಮುದದಲಿ 3
--------------
ವರಾವಾಣಿರಾಮರಾಯದಾಸರು
ಕರುಣಾ ಪೊಂದಿರೆ ಕೊರತೆಗಳುಂಟೆ ಶ್ರೀ ನರಹರಿಯ ಪ ನರಿಗಳ ಕೂಗಿಗೆ ಹುಲಿಯಂಜುವುದೆ ಬಿರುಗಾಳಿಗೆ ದೊಡ್ಡ ಗಿರಿ ನಡುಗುವುದೆ ಅ.ಪ ನಾನು ತಾನೆಂದು ಕುಣಿಯುತಲಿದ್ದ ಮಾನವರನು ಜರಿದು ನೀನೆ ಸೇವೆಯನು ಮಾಡೆಂದೆನುತ ತಾನೊಲಿಯುತಲಿ ಹೀನ ಜನರು ಅಪಮಾನವ ಬಯಸಲು ನಾನಿಹೆನೆನ್ನುವ ಜಾನಕಿನಾಥನ 1 ಬಂಧುಗಳೆನ್ನ ನಿಂದಿಸುತಿಹರು ಒಂದನೂ ಕೊಡೆಯೆಂದು ಹಿಂದು ಮುಂದೆನಗೆ ಕುಂದು ಕೋರುವರು ಒಂದನರಿಯರು ಮುಂದೆ ಎನಗೆ ಬಲು ತೊಂದರೆಗಳಿರುವು ವೆಂದು ಪೇಳುವರು ಮಂದರಧರನ 2 ಧನಿಕನಲ್ಲೆಂದು ಅಲ್ಲಗೆಳೆಯುವರು ಧನವಿಲ್ಲದಿರಲು ಘನತೆ ಎಂತೆಂದು ಜರಿಯುತಲಿಹರು ಮನವನರಿಯರು ಧನ ಪಿಶಾಚಿಯನು ಮನದಿಂದ ತೊಲಗಿಸಿ ಮನದಲಿ ನೆಲಸಿಹ ವನರುಹ ನಯನನ 3 ನಂಬಿದರೆಮ್ಮ ಧನಕನಕಗಳ ತುಂಬುವೆವೆಂಬ ಜಂಭದ ಮಾತ ನಂಬದೆ ಇರಲು ಹಂಬಲಿಸುವರು ನಂಬುವ ಭಕುತರ ಹಿಂಬಾಲಿಸುತಲಿ ಬೆಂಬಲಿವೀಯುತವ ಅಂಬುಜನಾಭನ 4 ಚತುರನಲ್ಲೆಂದು ಅತಿದೂರುವರು ಹಿತರಂತೆ ನಟಿಸಿ ಮಿತಿಮೀರಿ ಎನಗೆ ಬೋಧಿಸುತಿಹರು ಮನ್ಮತಿಯನರಿಯರು ರತಿಪತಿಯೆನ್ನನು ಪ್ರಸನ್ನನಾಗಿ ದಿವ್ಯ ಗತಿ ತೋರುತಲಿರೆ ಚತುರತೆಯೇತಕೆ 5
--------------
ವಿದ್ಯಾಪ್ರಸನ್ನತೀರ್ಥರು
ಕರುಣಾಲವಾಲ ಜಿಷ್ಣುಪರಿಪಾಲ ವಿಷ್ಣು ವಿಶ್ವವ್ಯಾಪಿಸಕಲ ದೃಷ್ಟಾದೀಶ ಕೃಷ್ಣಲೋಲ ಪ. ಪೊಳೆವ ಗರುಡ ಸ್ಕಂಧವೇರಿ ಘಳಿರನೆ ಪೋಗಿ ಜಲಜವ ಹರಿಸೆ ದೈತ್ಯ ಬಲವಕೊಂಡು ಬಂದ ಮುರನ ಥಳಥಳಿಪ ಚಕ್ರದಿಂದ ತಲೆಯ ಭೂಮಿಗಿಳಿಸಿ ಮೆರೆದ 1 ಧುರದಿ ಮಂತ್ರಿ ಸುತರ ತರಿದು ಕರಿಯನೇರಿ ಖತಿಯ ತಾಳ್ದ ನರಕನನ್ನು ನಳಿನಾಂಬಕಿಯ ಕರದಿ ಭಂಗಿಸಿ ಸರಸಿಜ ಸಂಭವದತ್ತ ವರದಿ ಸಕಲ ಸುರರ ಗೆಲಿದ ಗರುವನನ್ನು ನಿಲಿಸಿ ಕ್ಷಣದಿ ಶಿರವ ಚಂಡನಾಡಿದವನೆ 2 ಧಾತ್ರಿದೇವಿ ಬಂದು ನಾನಾ ಸ್ತೋತ್ರ ಗೈಯೈ ಕರುಣದಿಂದ ಪಾತ್ರಗೊಲಿದು ಸತ್ರಾಜಿತನ ಪುತ್ರಿ ಒಡಗೊಂಡು ಸುತ್ರಾಮ ಮಂದಿರವನೈದಿ ಚಿತ್ರ ತಾಟಂಕಗಳ ದಿತಿಗೆ ಪುತ್ರ ತಾನೆಂದಿತ್ತ ಶ್ರೀಕಳತ್ರ ನಿನ್ನ ನಂಬಿರುವೆನು 3 ಸೌಂದರ್ಯಸಾರೈಕ ನಿಲಯಾ ನಂದಬೋಧಾಧಾರಮೂರ್ತಿ ಇಂದಿರಾವತಾರೆ ಭಾಮೆ ಎಂದ ನುಡಿ ಕೇಳಿ ಮಂದಹಾಸದಿಂದ ನಗುತ ಮಂದವಾಯು ಸುಳಿವ ಸುರರ ನಂದನದೊಳಿಂದುಕಿರಣ ಛಂದದೊಳಾನಂದಗೊಂಡ 4 ವಾರಿಜಾಕ್ಷಿಯೆಂದ ನುಡಿಗೆ ಧೀರತನವ ತೋರಿ ದೇವ ಪಾರಿಜಾತ ವೃಕ್ಷವ ಸರ್ಪಾರಿ ಮೇಲಿರಿಸಿ ಸಾರೆ ಸ್ವರ್ಗನಾಥ ಸ್ವಪರಿವಾರ ಸಹಿತ ತಡಿಯೆ ಗೆದ್ದು ದ್ವಾರಾವತಿಗೆ ಪೋಗಿ ಮೆರದ ನೀರಜಾಕ್ಷ ವೆಂಕಟೇಶ 5
--------------
ತುಪಾಕಿ ವೆಂಕಟರಮಣಾಚಾರ್ಯ
ಕೊಕೊಕೋ ಎನ್ನಿರೊ ಕುಂಭಿನಿಯವರೆಲ್ಲಕೊಕೊಕೋ ಎನ್ನಿರೊ - ನಮ್ಮ ಪ ಗೋಕುಲದೊಳಗೊಬ್ಬ ಕಳ್ಳ ಬರುತಾನೆಂದುಕೊಕೊಕೋ ಎನ್ನಿರೊ ಅ ಹೊದ್ದಿ ಮೊಲೆಯನುಂಡವಳಸುವನೆ ಕೊಂದಮುದ್ದುಗಾರ ಕಳ್ಳ ಕೊಕೊಕೋ ಎನ್ನಿರೊಕದ್ದುಕೊಂಡೊಯ್ವ ರಕ್ಕಸರನೆಲ್ಲರ ಕಾಲಲೊದ್ದೊರಸಿದ ಕಳ್ಳ ಕೊಕೊಕೋ ಎನ್ನಿರೊಹದ್ದು ಹಗೆಯ ಹಾಸಿಗೆಯ ಮೇಲೊರಗಿದಮುದ್ದುಗಾರ ಕಳ್ಳ ಕೊಕೊಕೋ ಎನ್ನಿರೊಅರ್ಧದೇಹನ ಕೈಯ ತಲೆಯ ಕಪಟದಿಂದಕದ್ದು ಬಿಸುಟ ಕಳ್ಳ ಕೊಕೊಕೋ ಎನ್ನಿರೊ 1 ಮಣಿ ಮಲ್ಲಿಗೆ ದಂಡೆಯರಂಜೆ ಕದ್ದ ಕಳ್ಳ ಕೊಕೊಕೋ ಎನ್ನಿರೊಗುಂಜಿಯ ದಂಡೆಯ ಕಲ್ಲಿಯ ಚೀಲದಮಂಜು ಮೈಯ್ಯ ಕಳ್ಳ ಕೊಕೊಕೋ ಎನ್ನಿರೊಅಂಜದೆ ಗೊಲ್ಲರ ಹಳ್ಳಿಯೊಳಗೆ ಹಾಲನೆಂಜಲಿಸಿದ ಕಳ್ಳ ಕೊಕೊಕೋ ಎನ್ನಿರೊಸಂಜೆ ಬೈಗಿನಲ್ಲಿ ಕರೆಯುವ ಸತಿಯರಅಂಜಿಸಿದ ಕಳ್ಳ ಕೊಕೊಕೋ ಎನ್ನಿರೊ 2 ಕೇಸರಿ ಎಂಬ ರಕ್ಕಸರನೆಲ್ಲರ ಕೊಂದವೇಷಧಾರಿ ಕಳ್ಳ ಕೊಕೊಕೋ ಎನ್ನಿರೊಮೋಸದಿ ಬಲಿಯ ದಾನವ ಬೇಡಿ ಅನುದಿನಬೇಸರಿಸಿದ ಕಳ್ಳ ಕೊಕೊಕೋ ಎನ್ನಿರೊಮೀಸಲ ಅನ್ನವ ಕೂಸಾಗಿ ಸವಿದುಂಡವೇಷಧಾರಿ ಕಳ್ಳ ಕೊಕೊಕೋ ಎನ್ನಿರೊಸಾಸಿರ ನಾಮಕ್ಕೆ ಹೆಸರಾದ ಚಪ್ಪನ್ನದೇಶದ ದಾರಿಗಳ್ಳ ಕೊಕೊಕೋ ಎನ್ನಿರೊ 3 ಆಕಳೊಳಾಡಿ ಪರಲೋಕಕೆ ನಡೆದಂಥಆಕೆವಾಳ ಕಳ್ಳ ಕೊಕೊಕೋ ಎನ್ನಿರೊಭೂಕಾಂತೆಯ ಸೊಸೆಯರನೆತ್ತೆ ಬಲುಹಿಂದನೂಕಿ ತಂದ ಕಳ್ಳ ಕೊಕೊಕೋ ಎನ್ನಿರೊಗೋಕುಲದೊಳು ಪುಟ್ಟಿ ಗೊಲ್ಲರೆಲ್ಲರ ಕೈಲಿಸಾಕಿಸಿಕೊಂಡ ಕಳ್ಳ ಕೊಕೊಕೋ ಎನ್ನಿರೊಸಾಕಾರನಾಗಿ ಈ ಲೋಕವನೆಲ್ಲವಆಕ್ರಮಿಸಿದ ಕಳ್ಳ ಕೊಕೊಕೋ ಎನ್ನಿರೊ4 ಕ್ಷೀರವಾರಿಧಿ ವೈಕುಂಠನಗರಿಯನುಸೇರಿಸಿದ ಕಳ್ಳ ಕೊಕೊಕೋ ಎನ್ನಿರೊದ್ವಾರಾವತಿಯನು ನೀರೊಳು ಬಚ್ಚಿಟ್ಟಊರುಗಳ್ಳ ಬಂದ ಕೊಕೊಕೋ ಎನ್ನಿರೊದ್ವಾರಕೆಯಾಳುವ ಉಭಯದಾಸರ ತನ್ನಊರಿಗೊಯ್ದ ಕಳ್ಳ ಕೊಕೊಕೋ ಎನ್ನಿರೊಕಾರಣಾತ್ಮಕ ಕಾಗಿನೆಲೆಯಾದಿಕೇಶವಕ್ಷೀರ ಬೆಣ್ಣೆಯ ಕಳ್ಳ ಕೊಕೊಕೋ ಎನ್ನಿರೊ 5
--------------
ಕನಕದಾಸ
ಕೊಡುವನು ಸಂಪದವ ಸುಙÁ್ಞನವ ಕೊಡುವ ಪ ಬಹುಜರನು ವಲಿಸಿ ಪಿತೃಭ್ರಾತಾಚಾರ್ಯನು ತಾನೆಂದೆನಿಸಿ ಕವಿವರ ನೆಂದೆನಿಸಿ ಬಹುವಿಧದಲಿ ತಾನು ಅತಿಹಿತದಲಿ ಗೈಯಲು ಸುಸ್ತವವನು ವರ್ಣಿಸೆ ಮಹಿಮೆಯನು1 ಸ್ಮರಿಸುವ ಭಕ್ತರ ಪೊರೆವಕರಣಿತಾನು ಸ್ವೀಕರಿಸಿದನದನು ಹರಿಸಾಕ್ಷಾನನವೆನಿಪಸುವಾಕ್ಯವನು ಸಂಪಾದಿತ ತಾನು ಹರಿವಿಶ್ವಸುನಾಮದಿ ಭೂತಳದಲ್ಲಿ ಉದಿಸಿದ ಮುದದಲ್ಲಿ ಪರಿಚಾರ ಕಾಮದಿ ಕರಸ್ನೇಹದಲಿ ಜನಿಸಿದ ಪೂರ್ವದಲಿ 2 ಸಿರಿಗೋಪಾಲಾಖ್ಯರು ಸುಙÁ್ಞನವನು ಕರುಣಿಸೆ ಮರ್ಮವನು ಸರಸದಿ ಗ್ರಂಥದವರ ಸುಹಸ್ಯವನು ಸಂಗ್ರಹಿಸಿದ ತಾನು ಸಿರಿರಘುವರ ಕರುಣದಿ ಧರೆಯೊಳು ಮೆರೆವುಲ್ಲರುವಿಗಿಲ್ಲರುವ ಗುರುವಿನ ಮಹಿಮೆಯನು3
--------------
ವರದೇಶವಿಠಲ
ಗುರುವೆ ನಿನ್ನಯ ದಾಸನಾದೆ ಎನ್ನಕರುಣದಿ ಪೊರೆವೊಡೆ ನಾನೇ ನೀನಾದೆ ಪ ನಿರ್ಮಳ ಕಾವಿಯನುಟ್ಟು ಭೇದಮರ್ಮವೆನಿಪ ರುದ್ರಾಕ್ಷಿಯ ತೊಟ್ಟುಧರ್ಮ ಕುಂಡಲವೆಂಬೊದಿಟ್ಟು ಹರಕರ್ಮ ಭಸ್ಮವ ಸ್ಥಾನ ಸ್ಥಾನಕೆ ಇಟ್ಟು 1 ಸ್ವಸ್ಥ ಸುಸ್ಥಳದಲ್ಲಿ ಕುಳಿತು ಗುರುವಿಸ್ತರಿಸಿದ ಗೋಪ್ಯವ ಮಾಡ ಕಲಿತುನಾಸ್ತಿ ಎಂಬುದ ನಾ ಮರೆತು ಪರವಸ್ತುನೀ ನಿಜವೆ ಎಂಬುದ ನಾನರಿತು 2 ತಾನೆಂದು ಚಿಂತಿಸಲ್ಯಾಕೆ ಚಿ-ದಾನಂದ ಗುರುವೆ ಎದುರಲಿರಲಿಕೆಧ್ಯಾನ ಮೌನಗಳವು ಯಾಕೆ ನಾನುನೀನೆ ಎಂಬುದ ಮನಗಂಡಿರಲೇಕೆ 3
--------------
ಚಿದಾನಂದ ಅವಧೂತರು
ಜಗವಿದು ಪುಸಿಯೈ ಬಗೆವೊಡೆ ಮನುಜಾ ತೋರುತಿಹ ಕನಸಿನಂತೆ ಇರುವೆ ಪ ನನಸಿನ ಅರಿವದು ದೊರಕುವ ತನಕ ಕನಸಿದು ಎನ್ನುವ ಕಲ್ಪನೆ ಇಹುದೆ ? ನನಸಿನ ನನಸಾಗಿಹ ಪರವಸ್ತುವೆ ತಾನೆ ನಿಜವು ಎಂಬರಿವಾಗುತಲಿರೆ 1 ನಿರುತದಿ ಸಮನಾಗಿರಲರಿಯದ ಈ ತೋರಿಕೆ ಅನಿಸಿಕೆಗಳು ನಿಜವಲ್ಲವು ಪರಿಕಿಸೆ ಸತತದಿ ಸಮನಾಗಿರುತಿಹ ಪರಮ ಪದವೆ ತಾನೆಂದರಿಯುತಲಿರೆ 2 ಅಳಿಯುವ ಜಗವಿದು ಬೆದರುವಿ ಏತಕೆ ತಿಳಿಯುತಲೀಪರಿ ನಿಜವಸ್ತುವನು ಗಳಿಸಿಕೊಂಡು ನೀ ನಿನ್ನಯ ಮುಕುತಿಯ ಕಲುಷರಹಿತಶಂಕರನಡಿಯರಿಯಲು 3
--------------
ಶಂಕರಭಟ್ಟ ಅಗ್ನಿಹೋತ್ರಿ
ಜಯದೇವ ಜಯದೇವ ಜಯ ಶಂಕರ ಮೂರ್ತಿ ಜಯ ಜಯವೆಂದು ಬೆಳಗುವೆ ಮನದಲಿ ಭಾವಾರ್ತಿ ಪ ಸಾಧನ ಕೆಂಜೆಡೆಯೊಳಗೆ ಜ್ಞಾನಗಂಗೆಯ ನಿಲಿಸಿ ಸಾದರದಲಿ ಚಿಜ್ಯೋತಿಯ ಚಂದ್ರನ ಕಳೆಧರಿಸಿ ನಾದಬಿಂದು ಕಳಾನಯನ ತ್ರಯವೆರಿಸಿ ಮೋದಿಪೆ ಅಪರೋಕ್ಷನುಭವ ಮುಖದೆಳೆ ನಗೆಬಳಿಸಿ 1 ಧವಲಾಂಗದಿ ಸಲೆ ಶುದ್ಧ ಸತ್ವದ ಶೋಧಿಸಲಿ ತವಕದಿ ಶಮದಮವೆಂಬಾ ಬಾಹುದ್ವಯದಲಿ ಅವಯವದಲಿ ನಿಜಭಕ್ತಿ ಶೇಷಾಭರಣದಲಿ ಶಿವತಾನೆಂದು ಬೆಳಗುವೆ ಸಹಜಾನಂದದಲಿ 2 ವಿವೇಕ ವೈರಾಗ್ಯದಾ ಕರಚರ್ಮಾಂಬರಣಾ ಅವನಿಲಿಸುರನರಪೂಜಿತ ಪಾವನಶ್ರೀ ಚರಣಾ ಕುವಲಯ ಲೋಚನ ಶಾಂತಿಯ ಪಾರ್ವತಿ ಸಹಕರುಣಾ ಭವತಾರಕ ಗುರುಮಹಿಪತಿ ಪ್ರಭುದೀನೋದ್ದಾರಣಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಾತಿ ಕುಲಗೋತ್ರಗಳ ಖ್ಯಾತಿ ಹಿರಿದಲ್ಲಯ್ಯ ಪ ನೀತಿ ನಯ ಭಕುತಿಗಳು ಹಿರಿಯವಯ್ಯ ಅ.ಪ ಸ್ನಾನ ಸಂಧ್ಯಾ ಹೋಮ ಧ್ಯಾನ ದಿನಚರ್ಯೆಗಳ ತಾನಲಕ್ಷ್ಯವ ಗೈವ ಮಾನವನು ದ್ವಿಜನೇ ಶ್ರೀನಿವಾಸಾ ರಂಗ ದಾನವಾರಿ ಎಂದು ಜಾನಿಸುವ ಹರಿಜನರು ಹೀನರಹರೇ1 ಬೂದಿ ನಾಮವ ಬಳಿದು ವೇದಾಂತಿ ತಾನೆಂದು ಮೇದಿನಿಯ ಜನರಲ್ಲಿ ಕ್ರೋಧ ತೋರಿ ಮಾಧವನ ಭಕುತರಲ್ಲಿ ಭೇದ ವೈರವ ತಾಳಿ ವಾದ ಮಾಡುವ ನರಗೆ ಹರಿಯ ಕೃಪೆಯುಂಟೆ 2 ವನಜನಾಭನ ನೆನೆದು ತನುಮನವನರ್ಪಿಸದೆ ಧನದಾಸೆದೋರುವನು ಹರಿಭಕುತನೆ ಕನಸುಮನಸಿನೊಳೆಲ್ಲ ಮಾಂಗಿರೀಶನ ಭಜಿಸಿ ದಿನಪೂಜೆಗೈವವನು ಕುಲಹೀನನೇ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್