ಒಟ್ಟು 71 ಕಡೆಗಳಲ್ಲಿ , 27 ದಾಸರು , 54 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುವೆ ನಿನ್ನಯ ದಾಸನಾದೆ ಎನ್ನಕರುಣದಿ ಪೊರೆವೊಡೆ ನಾನೇ ನೀನಾದೆ ಪ ನಿರ್ಮಳ ಕಾವಿಯನುಟ್ಟು ಭೇದಮರ್ಮವೆನಿಪ ರುದ್ರಾಕ್ಷಿಯ ತೊಟ್ಟುಧರ್ಮ ಕುಂಡಲವೆಂಬೊದಿಟ್ಟು ಹರಕರ್ಮ ಭಸ್ಮವ ಸ್ಥಾನ ಸ್ಥಾನಕೆ ಇಟ್ಟು 1 ಸ್ವಸ್ಥ ಸುಸ್ಥಳದಲ್ಲಿ ಕುಳಿತು ಗುರುವಿಸ್ತರಿಸಿದ ಗೋಪ್ಯವ ಮಾಡ ಕಲಿತುನಾಸ್ತಿ ಎಂಬುದ ನಾ ಮರೆತು ಪರವಸ್ತುನೀ ನಿಜವೆ ಎಂಬುದ ನಾನರಿತು 2 ತಾನೆಂದು ಚಿಂತಿಸಲ್ಯಾಕೆ ಚಿ-ದಾನಂದ ಗುರುವೆ ಎದುರಲಿರಲಿಕೆಧ್ಯಾನ ಮೌನಗಳವು ಯಾಕೆ ನಾನುನೀನೆ ಎಂಬುದ ಮನಗಂಡಿರಲೇಕೆ 3
--------------
ಚಿದಾನಂದ ಅವಧೂತರು
ಜಯದೇವ ಜಯದೇವ ಜಯ ಶಂಕರ ಮೂರ್ತಿ ಜಯ ಜಯವೆಂದು ಬೆಳಗುವೆ ಮನದಲಿ ಭಾವಾರ್ತಿ ಪ ಸಾಧನ ಕೆಂಜೆಡೆಯೊಳಗೆ ಜ್ಞಾನಗಂಗೆಯ ನಿಲಿಸಿ ಸಾದರದಲಿ ಚಿಜ್ಯೋತಿಯ ಚಂದ್ರನ ಕಳೆಧರಿಸಿ ನಾದಬಿಂದು ಕಳಾನಯನ ತ್ರಯವೆರಿಸಿ ಮೋದಿಪೆ ಅಪರೋಕ್ಷನುಭವ ಮುಖದೆಳೆ ನಗೆಬಳಿಸಿ 1 ಧವಲಾಂಗದಿ ಸಲೆ ಶುದ್ಧ ಸತ್ವದ ಶೋಧಿಸಲಿ ತವಕದಿ ಶಮದಮವೆಂಬಾ ಬಾಹುದ್ವಯದಲಿ ಅವಯವದಲಿ ನಿಜಭಕ್ತಿ ಶೇಷಾಭರಣದಲಿ ಶಿವತಾನೆಂದು ಬೆಳಗುವೆ ಸಹಜಾನಂದದಲಿ 2 ವಿವೇಕ ವೈರಾಗ್ಯದಾ ಕರಚರ್ಮಾಂಬರಣಾ ಅವನಿಲಿಸುರನರಪೂಜಿತ ಪಾವನಶ್ರೀ ಚರಣಾ ಕುವಲಯ ಲೋಚನ ಶಾಂತಿಯ ಪಾರ್ವತಿ ಸಹಕರುಣಾ ಭವತಾರಕ ಗುರುಮಹಿಪತಿ ಪ್ರಭುದೀನೋದ್ದಾರಣಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಾತಿ ಕುಲಗೋತ್ರಗಳ ಖ್ಯಾತಿ ಹಿರಿದಲ್ಲಯ್ಯ ಪ ನೀತಿ ನಯ ಭಕುತಿಗಳು ಹಿರಿಯವಯ್ಯ ಅ.ಪ ಸ್ನಾನ ಸಂಧ್ಯಾ ಹೋಮ ಧ್ಯಾನ ದಿನಚರ್ಯೆಗಳ ತಾನಲಕ್ಷ್ಯವ ಗೈವ ಮಾನವನು ದ್ವಿಜನೇ ಶ್ರೀನಿವಾಸಾ ರಂಗ ದಾನವಾರಿ ಎಂದು ಜಾನಿಸುವ ಹರಿಜನರು ಹೀನರಹರೇ1 ಬೂದಿ ನಾಮವ ಬಳಿದು ವೇದಾಂತಿ ತಾನೆಂದು ಮೇದಿನಿಯ ಜನರಲ್ಲಿ ಕ್ರೋಧ ತೋರಿ ಮಾಧವನ ಭಕುತರಲ್ಲಿ ಭೇದ ವೈರವ ತಾಳಿ ವಾದ ಮಾಡುವ ನರಗೆ ಹರಿಯ ಕೃಪೆಯುಂಟೆ 2 ವನಜನಾಭನ ನೆನೆದು ತನುಮನವನರ್ಪಿಸದೆ ಧನದಾಸೆದೋರುವನು ಹರಿಭಕುತನೆ ಕನಸುಮನಸಿನೊಳೆಲ್ಲ ಮಾಂಗಿರೀಶನ ಭಜಿಸಿ ದಿನಪೂಜೆಗೈವವನು ಕುಲಹೀನನೇ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತತ್ವಸುವಾಲಿಗಳು ಓಂಕಾರ ಪ್ರತಿಪಾದ್ಯ ಶ್ರೀಕಾಂತನೇ ನಿನ್ನ ಭವ ಭಂಗವ ಗೈಸಿ ಶುಭಾಂಗನೆ ಕಾಯಯ್ಯ ಶ್ರೀರಂಗ 1 ಕಾಲತÀ್ರಯಕೃತ ವಿಕಾರವಿಲ್ಲದೆ ನೀನೆ ಮೂಲರೂಪನೆ ಬಹು ರೂಪ-ಬಹುರೂಪ ಸ್ವಗತಭೇದ ವಿವರ್ಜಿಕನೆ ಸಲಹಯ್ಯ 2 ಆವಕಾಲಕು ನೀನೆ ಚತುರ ರೂಪದೊಳಿದ್ದು ಜೀವ ನಿಯಾಮನು ನೀನಾಗಿ-ನೀನಾಗಿ ವಿಶ್ವ ತೈಜಸ ಪ್ರಾಜ್ಞ ತುರ್ಯಾತ್ಮ3 ಶುಭ ವಿಷಯಂಗಳಾ ಮಾಡಿ ಉಣಿಸುವೆ 4 ವಿಶ್ವದಲಿ ವ್ಯಾಪಿಸಿಹೆ ವಿಶ್ವನಂಬೋರು ನಿನ್ನ ನಾಶರಹಿತನೆಂದೂ ನರನೆಂದೂ-ನರನೆಂದೂ ನಿನ್ನ ವೈಶ್ವಾನರನು ಎಂದು ಪೇಳ್ವಾರೊ 5 ಹರಿ ನಿನ್ನ ವಿಶ್ವನೆಂದು ಉಪಾಸನೆಯನು ಮಾಡಿ ಹೇರಂಬ ನಿನ್ನ ಒಲಿಸಿದಾ-ಒಲಿಸಿದಾ ಗಜವಕ್ತ್ರನಾಗಿ ನಿನ್ನ ಸ್ತುತಿಪಾನೋ 6 ದೇಹದೊಳು ಸ್ವಪನದಲಿ ನೀ ನೀಡಿ-ನೀ ನೀಡಿ ಜೀವರುಪಭೋಗಿಸುವ ಸಾರವನು ರಕ್ಷೀಪೆ 7 ತೈಜಸನೆ ವಾಸನಾಮಯವೆಲ್ಲ ತೋರೀಪೆ8 ತತ್ವಗಳ ವ್ಯಾಪಾರವೇ ವ್ಯಾಪಾರ9 ಸುಪ್ತಕಾಲದಿ ಜೀವ ಸ್ವರೂಪಕೆ ತಕ್ಕ ಕ್ಲುಪ್ತ ಅಜ್ಞಾನ ಮೊದಲಾದ-ಮೊದಲಾದ ಕಾಲವನನುಸರಿಸಿ ಜೀವನಿಗೆ ತನ್ನ ತಿಳಿಯಗೊಡದೆ 10 ಪ್ರಾಜ್ಞಮೂರುತಿ ನೀನೆ ಹೃದಯಸ್ಥಾನದೊಳಿದ್ದು ಅಜ್ಞಾನಿ ಜೀವನ ಕಾಲಾವ-ಕಾಲಾವ ನನುಸರಿಸಿ ಜೀವ ಸ್ವರೂಪಾನಂದವÀನು ನೀನೀವೆ11 ಸ್ವಪನ ಜಾಗ್ರತ ಜ್ಞಾನವಿನಿತಿಲ್ಲವೆಂದು ಕೂಡುವ ಜೀವ ಆನಂದ ಹಿಂದೆಂದೂ ಕಾಣನೊ12 ಘನ ಬಹಿ ಪ್ರಾಜ್ಞ ತೈಜಸಾಂತ ಪ್ರಾಜ್ಞ ಘನ ಪ್ರಾಜ್ಞ ಮೂರುತಿ-ಮೂರುತಿ ಗಳುಪಾಸನೆ ಮಾಳ್ವ ಬುಧರೇನು ಧನ್ಯರೊ 13 ನಾಗಿ ನೀ ಕೊಡುತಿರುವೆ ಮುಕ್ತರಿಗೆ ಆನಂದ 14 ಮುಕ್ತರಿಗೆ ದೃಷ್ಟನೋ ಅದೃಷ್ಟನೋ ಅ- ಗುರುಪ್ರಾಣನನುಗ್ರಹದಿ ಲಭ್ಯನಹುದಯ್ಯಾ ಹೇ ಜೀಯ 15 ಕಣ್ಮನ ಹೃದಯ ತ್ರಿಧಾಮಗಳಲ್ಲಿ ಇದ್ದು ಉಣಿಸೂವೇ ಜೀವರಿಗೆ ಫಲಭೋಗ-ಫಲಭೋಗವು ವಿಶ್ವತೈಜಸ ಪ್ರಾಜ್ಞ ಸ್ಥಿತಿಯೊಳು 16 ಸರ್ವರೂಪವು ಪೂರ್ಣ ಸರ್ವಗುಣ ಸಂಪೂರ್ಣ ಸರ್ವೋತ್ಪಾದಕ ಸುಖರೂಪಿ-ಸುಖರೂಪಿ ಸರ್ವಲೋಕ ಜೀವರೊಳಿದ್ದು ನಿರ್ಲಿಪ್ತಾ 17 ವರ್ಣತ್ರಯಯುತ ಓಂಕಾರದೊಳಾದ್ಯವರ್ಣ ವಿಶ್ವ ನೀನೆ-ವಿಶ್ವನು ನೀನೆ ಉಕಾರವೇ ತೈಜಸನು ಮಕಾರ ವಾಚ್ಯನೇ ಶ್ರೀಪ್ರಾಜ್ಞ 18 ನಾದದೊಳು ನೀ ವಾಚ್ಯ ತುರ್ಯರೆಂಬೋರು ನಿನ್ನ ಸದನವಾಗಿಹುದೈ ಶಿರಸ್ಥಾನ-ಶಿರಸ್ಥಾನ ನಾಶಿಕಾಗ್ರದಿ ಊಧ್ರ್ವ ದ್ವಾದಶಾಂಗುಲದಲ್ಲಿ ನೆಲೆಸಿರ್ಪೆ 19 ತೈಜಸನೊಡಗೂಡಿ ವಾಸನಾ-ವಾಸನಾಮಯ ಕಳೆವ ಅಜ್ಞಾನಿ ಜೀವನನ್ನಾಡಿಸುವೆ ಶ್ರೀಪ್ರಾಜ್ಞ 20 ಸರ್ವಶಕ್ತನು ನೀನೆ ಸರ್ವಕತರ್Àನು ನೀನೆ ಸವೋತ್ತಮನು ನೀನೆ ಸರ್ವಜ್ಞ-ಸರ್ವಜ್ಞ ಪೂರ್ಣಪ್ರಜ್ಞಾಂತರ್ಯಾಮಿ ಸಲಹಯೈ21 ಪಲವಿಲ್ಲ ವಾಸುದೇವನೆ ನಿನ್ನ ದಯ ಬೇಕೊ 22 ನೀ ಸುಮ್ಮನಿರದೆ ಎನ್ನನೂ-ಎನ್ನನು ಪ್ರೇರಿಸುವೆ ಲೇಸುಮನ ನಿನ್ನಲ್ಲಿ ನೆಲೆಸಲೋ 23 ಕಂಡಕಂಡಲ್ಲಿ ನಾ ಉಂಡುಂಡು ಓಡಾಡಿ ಧಾಂಡಿಗನಾಗಿ ಬೆಳೆದೆನೊ-ಬೆಳೆದೆನೊ ಪುಂಡರೀಕಾಕ್ಷ ನಿನ್ನ ಮರೆತೆನೋ24 ಅವಾವ ಕಾಲದೊಳು ನೀನಿದ್ದು ಉಣಿಸುವೆ ಜೀವಕೃತ ಕರ್ಮಫಲಗಳ-ಫಲಗಳ ಶ್ರೀ ವೇಂಕಟೇಶ ನೀನಿತ್ತು ಸಲಹೂವೇ 25 ವಂದನೆಯು ಒಂದೆ ಮನದಿಂದೆ-ಮನದಲಿ ನಿನ್ನ ಪಾದಾರವಿಂದವ ತೋರಯ್ಯ26 ಬಂಧುಗಳು ಹಿತರೆನ್ನೆ ಬಂಧಕರಾಗಿಹರು ಬಂಧನಕೆ ನಾ ಇನ್ನು ಸಿಲುಕಿದೆ 27 ಘನವಾಗಿ ತನು ಬೆಳೆಸಿ ಹಿತದಿಂದ-ಹಿತದಿಂದ ಮುಂದೆ ಪರಗತಿಯ ಕಾಣುವುದೆಂತೊ ಗೋವಿಂದ28 ವಿತ್ತಾಪಹಾರಕರು ಹೃತ್ತಾಪಕಳೆವರೆ ಉತ್ತಮಗತಿಯ ತೋರಿಸು29 ಹರಿಕಥಾಪುರಾಣಶ್ರವಣ ನಿತ್ಯದೀ ಮಾಡೀ ಪರಿಯಿಂದ ನಿಜತತ್ವವರಿಯಾದೆ-ಅರಿಯಾದೆ ಬರಿದೇ ವಿಪರೀತ ಜ್ಞಾನಕೆ ವಶನಾದೆ30 ಮದ್ಯ ತುಂಬಿದ ಭಾಂಡ ಗದ್ಗುಗೆಯ ಮೇಲಿಟ್ಟು ಶ್ರಧ್ದೆಯಿಂದಲಿ ಅದನ ಪೂಜಿಸೆ-ಪೂಜಿಸೆ ಪೂತÀ ದುರ್ಗಂಧ ಫಲವದು ಬಿಟ್ಟೀತೆ 31 ಮಂದಹಾಸದಿ ಜನರ ಸಂದೋಹದಲಿ ಕುಳಿತು ನಿಂದೆ ಮಾತುಗಳಾಡಿ ಮದತುಂಬೀ-ಮದತುಂಬಿಬಿದಾ ದುರ್ಮ ದಾಂಧರಿಗೆ ಗತಿಯು ಮುಂದೆ ಇನ್ನೆಂತೊ32 ಕಂಡಕಂಡವರಲ್ಲಿ ಕೊಂಡೆ ಮಾತುಗಳಾಡಿ ಪುಂಡರೀಕಾಕ್ಷ ನಿನ್ನ ಸ್ಮರಿಸಾದೆ-ಸ್ಮರಿಸದಲೆ ಪರದಿ ಯಮದಂಡಕ್ಕೆ ಗುರಿಯಾದೆ33 ಹಿಂದೆ ಮಾಡಿದ ಪುಣ್ಯದಿಂದ ಇಂದಿನ ಭಾಗ್ಯ ವೆಂದು ತಿಳಿದು ಮುಂದೆ ನಡೆಯಾದೆ-ನಡೆಯಾದೆ ತಿಳಿಗೇಡಿ ಬುದ್ಧಿಯಿಂದ ಕುಂದುಪೊಂದುವೆ 34 ಬಾಯಿಮಾತಲ್ಲ ಶ್ರೀ ತೋಯಜಾಕ್ಷನ ಭಕ್ತ- ರಾಯತನ ತಿಳಿವುದು ಶ್ರಮಸಾಧ್ಯ-ಶ್ರಮಸಾಧ್ಯ ವನು ಸದುಪಾಯದಿಂದ ತಿಳಿದು ನಲಿದಾಡೊ 35 ನಿಂದಕರ ನುಡಿಯಿಂದ ಹಿಂದೆ ಮಾಡಿದ ಪಾಪ ಒಂದೊಂದು ಪರಿಯಲ್ಲಿ ಪರಿಹಾರ-ಪರಿಹಾರವಾಗಿ ನಿಂದಕರು ಬಂಧನಕೆ ಬೀಳ್ವಾರೋ 36 ಸ್ಮøತಿಯುಕ್ತಿಯನೆ ಬಿಟ್ಟು ಯುಕ್ತಿಮಾತುಗಳಿಂದ ಹೊತ್ತು ಕಳೆಯುತ ಉನ್ಮತ್ತನೆನಿಸಿ-ಉನ್ಮತ್ತನೆನಿಸಿದವ ಇ- ನ್ನೆತ್ತÀ್ತ ಭವಶರಧಿಯ ದಾಟÀುವ 37 ಅರೆಘಳಿಗೆ ಕಳೆದುದಿಹ ನರಜನ್ಮ-ನರಜನ್ಮ ಬಂದುದು ನರಕಯಾತನೆಗಲ್ಲದಿನ್ನಿಲ್ಲ 38 ಪರಿಯಂತ ಉದರಭರಣಕಾಗಿ ಉದಧಿಶಯನ ನಾ ನಿನ್ನ ಭಜಿಸಾದೆ-ಭಜಿಸಾದೆ ಮದದಿಂದ ಬುಧಜನರ ನಿಂದೆಯ ಮಾಡೀದೆ39 ಇನ್ನಲ್ಲ ಪರಗತಿಯ ಸಾಧನ-ಸಾಧನವು ತನ್ನೊಳು ತÀನ್ನಿರವರಿತು ಸುಮ್ಮನಿರುವುದು ಅದು ನಿಧಾನ40 ಭಿನ್ನಧರ್ಮಂಗಳ ಗ್ರಹಿಸಾದೆ-ಗ್ರಹಿಸಾದೆ ನೀನೆಣಿಸಿದೆ ತನ್ನಗುಣಧರ್ಮದಂತನ್ಯರಿಹನೇನೊ 41 ಕಾಯವೇ ತಾನೆಂದು ಮಾಯಕೆ ಒಳಗಾಗಿ ಕಾಯಯಾತನೆಗೊಂಡು ನೋಯುವಾ 42 ವಚನ ವಚನವು ಸರ್ವ ಉಚಿತ ದೇಹದ ಕಾರ್ಯ ನಿಚಯದೊಳು ಹರಿ ಪ್ರಚುರನಾಗಿ-ಪ್ರಚುರನಾಗಿ ಕಾಯಕುಪಚಯವಿತ್ತು ಸಲಹೂವ 43 ದೇಹ ಕಾಯದ ಕಾರ್ಯಪ್ರಕ್ರಿಯವ ತಿಳಿಯಾದೆ ಮಾಯೆಗೊಳಗಾಗದಿರು ಹೇ ಮಾನವಾ-ಮಾನವನೆ ತಿ- ಳಿಯೊ ಮಾಯಾರಮಣನ ಬಿಂಬಕ್ರಿಯವಾ44 ಅನ್ಯರೊಳು ನೀ ಹೋರಾಡಬಲ್ಲೆಯ-ಬಲ್ಲೆಯಾ ನಿನ್ನ ವೈರಿಗಳ ಜಯಿಸಲರಿಯದ ಖೂಳ ರಣಹೇಡಿ 45 ಕೊಳೆತು ನಾರುವ ದೇಹದೊಳಗಿರುವ ಹುಳುಕುಗಳ ಕೊಳೆಯ ಕಳೆಯದ ಮನುಜ ನೀನೆಂತೊ-ನೀನೆಂತೊ ಕೊಳೆತÀ ಸಗಣಿಯೊಳಗಿಹ ಹುಳುವೆ ನಿನ್ನ ಗತಿಯೆಂತೊ46 ಆದದ್ದು ಆಯಿತು ಯತ್ನ ತಪ್ಪಿತು ಎಂದು ಹೆದ್ದಾರಿ ಹಿಡಿದು ಪರಮಾರ್ಥ-ಪರಮಾರ್ಥವ ಬುದ್ಧಿ ತಿದ್ದಿಕೊಳ್ಳಲು ಮುಂದೆ ಅನುವಾಗೊ47 ತತ್ತ ್ವದೇವತೆಗಳು ತತ್ತತ್ವಕಾರ್ಯಜಿ- ವೋತ್ತಮನಾಜ್ಞೆಯಿಂ ತಾವ್ ಗೈವರೊ-ತಾವ್‍ಗÉೈ ಯುತ್ತಲಿರೆ ನಾನೆತ್ತ ಮೃತ್ತಿಕಾಪ್ರತಿಮೆಯೋ48 ಒಂದೊಂದು ರೀತಿಯಿಂ ಚೆಂದಾಗಿ ಯೋಚಿಸು ಮಂದಮತಿಯು ನೀನು ಹಿಂದೆಂತೂ-ಹಿಂದೇನು ವಂದನೆಯೊಂದಲ್ಲದಿನ್ನಿಲ್ಲ49 ಡಾಂಭಿಕತನ ಬಿಟ್ಟು ಡಿಂಬದೊಳು ಸರ್ವದಾ ಅಂಬುಜನಾಭನೇ ಇಂಬಾಗಿ-ಇಂಬಾಗಿ ಸರ್ವತ್ರ ತುಂಬಿಕೊಂಡಿಹನೆಂದು ನಲಿದಾಡೋ 50 ತುಷ್ಟಿಯಾಗಿರು ನೀನು ಕೊಟ್ಟಷ್ಟು ಲಾಭಕ್ಕೆ ದುಷ್ಟವಿಷಯಗಳಿಗೆ ಎರಗಾದೆ-ಎರಗಾದೆ ಇರಲು ಸಂ- ತುಷ್ಟ ನಾಗುವನಯ್ಯ ಶ್ರೀಕೃಷ್ಣ51 ಕಾಯ ನಿನ್ನದು ಅಲ್ಲ ಮನವು ಅಧೀನವಲ್ಲ ಹೇಯವಿಲ್ಲದೆ ಮಾಯಕೊಳಗಾಗಿ ಮರುಳಾಗದಲೆ-ಮರುಳಾಗದಲೆ ಮಾಯಾರಮಣನ್ನ ನೆನೆಯೊ ನಿರ್ಭಯದಿಂದ 52 ಹಲವು ಶಾಸ್ತ್ರವ ನೋಡಿ ತಲೆಹರಟೆಯ ಬಿಟ್ಟು ಅಲವಬೋಧರ ತತ್ತ ್ವಸುಧೆಯನ್ನು- ಸುಧೆಯನ್ನು ಸವಿದು ನಿ-
--------------
ಉರಗಾದ್ರಿವಾಸವಿಠಲದಾಸರು
ತನ್ನನು ತಿಳಿದೇ ತಾನೇ ನೋಡಲಿ ಆನಂದಾನಂದಂತನ್ನನು ಕಂಡೆ ತಾನಾಗಿರುತಿರೆ ಆನಂದಾನಂದಂ ಪ ಶ್ರವಣ ಮನನ ನಿಧಿಧ್ಯಾಸನ ಸಾಧಿಸೆ ಆನಂದಾನಂದಂಶ್ರವಣ ಮನನ ನಿಧಿಧ್ಯಾಸದಿ ಬೆರೆತಿರೆ ಆನಂದಾನಂದಂ 1 ಒಳ ಹೊರ ಸಾಧಿಸೆ ತನ್ನನು ತಾನು ಆನಂದಾನಂದಂಒಳ ಹೊರಗೆಂಬುದ ಮರೆತರೆ ನಿಜದಿಂ ಆನಂದಾನಂದಂ 2 ಲಕ್ಷ್ಯವು ಕೂರಲು ತನ್ನಲಿ ನಿಜದಿಂ ಆನಂದಾನಂದಂಲಕ್ಷ್ಯವು ನಿಲ್ಲೆ ಸಾಕ್ಷಾತಿರುತಿಹ ಆನಂದಾನಂದಂ 3 ನಾದವ ಕೇಳುತ ಸುಖದಲಿ ಮಲಗಿರೆ ಆನಂದಾನಂದಂನಾದವ ಮರೆತೇ ನಾದವ ಮೀರಿರೆ ಆನಂದಾನಂದಂ 4 ಉರಿವ ಕರ್ಪೂರದಂದದಲಿರುತಿದೆ ಆನಂದಾನಂದಂಉರಿವ ಕರ್ಪೂರವು ತಾನಾಗಿದ್ದುದೆ ಆನಂದಾನಂದಂ 5 ಬ್ರಹ್ಮವೆ ತಾನೆಂದು ತನ್ನಲೆ ಕಾಣಲು ಆನಂದಾನಂದಂಬ್ರಹ್ಮವು ತಾನಾಗಿ ತನ್ಮಯನಾಗಿರೆ ಆನಂದಾನಂದಂ6 ನರನು ತನ್ನನು ಗುರುವೆಂದು ಕಾಣಲು ಆನಂದಾನಂದಂಗುರು ಚಿದಾನಂದನು ಸಹಜವಾಗಿರೆ ಆನಂದಾನಂದಂ 7
--------------
ಚಿದಾನಂದ ಅವಧೂತರು
ತಿಳಿದು ನೋಡಲೆ ಮನವೆ ತೀವ್ರ ತಾಮಸವೇಕೆ ತಿಳಿದುಕೋನಿನ್ನ ನೀನು ತಿಳಿಯೆ ಮಾಯೆಗಳಿಲ್ಲ ತಿಳಿಯೆ ಶಿವನಾಗುತಿಹೆಬಲುಮರವೆ ಯಾಕೆ ಪಾಪಿ ಮನವೆ ಪ ಶೂನ್ಯ ದುರಿತ ಭಂಗತರ ತರಂಗ ಮೂರ್ತಿಜಂಗಮನೆ ನೆಲೆಸಿಹನು ಜನಿಸಿನೀ ನಿನ್ನೊಳಗೆ ಕಣ್ಗಾಣದಿಪ್ಪೆ ಗುರುವ ಮನವೆ 1 ಮಾಯೆ ಮೋಹಕೆ ಸಿಲುಕಿ ಮಗ್ನನಾಗಿರುತಿಹೆ ಕಾಯವಿದು ನಿನಗೆ ಸ್ಥಿರವೇಆಯಾಸಂಬಡಬಹುದೆ ಅಲ್ಪ ಮತಿಗಳ ಕೂಡಿ ನ್ಯಾಯವೆ ನಿನಗೆರಾಯ ನಾನೆಂಬ ಹೆಮ್ಮೆಯ ತಾಳ್ದು ರತಿ ಬಹಳ ಸ್ತ್ರೀಯರಲಿ ಸೊಗಸಬಹುದೇಮಾಯಕಿಂತಕಟ ನೀ ಶಿಲ್ಕಿ ಒಳಗಾಗುವುದುಮಾಯವೋ ಇದು ಮಹಿಮೆಯೋ ಮನವೇ 2 ಎನ್ನ ಸತಿಸುತ ಬಂಧು ಎನ್ನ ಗೃಹವು ಇದೆಂದು ಬನ್ನಬಡುತಿಹೆ ಯಾತಕೆನಿನ್ನೊಳಗೆ ಇಹ ವಸ್ತು ನೀನೆ ಕಾಣದಲಿರೆ ಮನ್ನಿಸಾ ಗುರುಹಿರಿಯರಉನ್ನತ ಕಟಾಕ್ಷದಲಿ ಒಳಗೆ ದೃಷ್ಟಿಸಿ ಕಂಡು ನಿನ್ನೊಳಗೆ ಪುಳಕನಾಗುಚಿನ್ಮಯ ಚಿದಾನಂದ ಚಿದ್ರೂಪ ತಾನೆಂದುನಿನ್ನ ಸಂಶಯ ಕಳೆಯೋ ಮನವೇ 3
--------------
ಚಿದಾನಂದ ಅವಧೂತರು
ತೊಡಕ ಹರವ ಮಾಡಿಕೊಳ್ಳಿರೊ ಹುಟ್ಟಿ ಬಾಹ್ವ ಮನುಜರೆಲ್ಲ ಧ್ರುವ ನಾನು ನನ್ನದೆಂದು ಜ್ಞಾನಹೀನನಾಗಿ ಬಾಳುತಿಹ್ಯ ಗಾಣ-ದೆತ್ತಿನಂತೆ ಮುಂದೆಗಾಣದಿಹ್ಯ ಭ್ರಮೆಯದ 1 ಜೀವ ಶಿವ ದಾವದೆಂದು ಠಾವಿಕಿಲ್ಲ ದಿಹ್ಯದಾಗಿ ನಾವು ನೀವು ಎಂದು ಹ್ಯಾವ ಹೊಮ್ಮಿ ಹೊಡೆದಾಡುವ 2 ಸಂಚಿತ ಪ್ರಾರಬ್ಧ ಕ್ರಿಯಮಾಣದೊಳು ಸಿಲ್ಕಿ ಪ್ರ ಪಂಚ ಪರಮಾರ್ಥ ದಾವದೆಂದು ಮುಂಚೆ ತಿಳಿಯದ 3 ತನವು ತಾನೆಂದು ಘನವು ಮರೆದು ದಣಿದು ತಿರುಗುತಿಹ್ಯ ಮನದ ಮಾಯದೊಳು ಸಿಲ್ಕಿ ತನಗೆ ತಾಂ ತಿಳಿಯದೆ 4 ತೊಡಕು ಹರವ ಮಾಡಿಗೊಳ್ಳಿ ಪಡದು ಙÁ್ಞನಭಕ್ತಿಯಿಂದ ಮೂಢ ಮಹಿಪತಿಯನ್ನೊಡೆಯ ಬಿಡದೆ ನೆಲೆಗೊಳ್ಳುವ್ಹಾಂಗೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದೊರೆವನಲ್ಲವೋ ಹರಿ ದೊರೆವನಲ್ಲವೊ ಪ ಪರಮಯೋಗನಿಷ್ಠೆಯಿಂದ ಇರುಳು ಹಗಲು ಸಮಾಧಿಯಲ್ಲಿ ಇರುವ ಮಹಾಯೋಗಿಗಳಿಗೆ ಅರಿಯೆ ಸಾಧ್ಯವೇ ಅ.ಪ ಸಕಲ ದಾನಧರ್ಮಗಳನು ಸರ್ವಕ್ರತುಗಳನ್ನು ಮಾಡೆ ಶಕುತರಾಗಲರಿಯರೆಂದಿಗು ಶಾಙ್ಗಪಾಣಿಯಂ 1 ರಚ್ಚೆಗಿಕ್ಕಿ ಕಾಣಬಹುದೇ ರಾಜೀವಾಕ್ಷನ 2 ಪಾಮರ ತಾನೆಂದು ಸಕಲ ನೇಮನಿಷ್ಠೆಯಿಂದಲವನ ನಾಮ ಸ್ಮರಿಸೆ ಸುಲಭನಹನು ಗುರುರಾಮವಿಠ್ಠಲನು 3
--------------
ಗುರುರಾಮವಿಠಲ
ನಾರಾಯಣ ನರಹರಿ ಪರಬ್ರಹ್ಮನಿರ್ವಿಕಾರಿ ಪ ದ್ರುಕ್ ದೃಶ್ಯ ಮಧ್ಯದಲ್ಲಿ ಚೊಕ್ಕಟ್ಟಾಗಿರುವನಲ್ಲಿ ಪ್ರಕಟವಾಗಿ ತ್ರಿಕೊಟ ನಿಜ ಸ್ಥಾನದಲ್ಲಿ ತೋರುವನಲ್ಲಿ 1 ಏನೊಂದು ತಿಳಿಯದದನೆ ತಾನೆಂದು ತಿಳಿಯಲವನೆ ಧ್ಯಾನದರುವಿನಲ್ಲಿ ಮನ ತಾನೆ ಚಿನ್ಮೂರ್ತಿ ಘನ 2 ತನುವಿನೊಳ ಹೊರಗಿರ್ಪ ತನ್ನ ತಾನೆ ಕಾಣುತಿರ್ಪ ಮೂರ್ತಿ 3 ಅಂತರಾತ್ಮ ಗುರು ಪೂರ್ಣನಂತ ಮಹಿಮ ನಾರಾಯಣ ಸಂತ ಸಾಧು ಸಾಧ್ಯ ಜ್ಞಾನ ಶಾಂತಿ ಪಾಲಿಪ ಘನ 4
--------------
ಶಾಂತಿಬಾಯಿ
ನಿನ್ನೊಳು ನೀ ತಿಳಿಯೋ ಮನುಜ ಪ ಪರಮಾತ್ಮನೆ ನೀನಿರುವಿಯೊ ಮನುಜಾ ಅರಿತು ನೋಡು ನಿನ್ನಯ ನಿಜವಾ ಮರೆತಿರುವಿಯೊ ನೀ ನಿನ್ನಿರುವಿಕೆಯಾ ತೋರುವ ದೇಹವು ನಾನಲ್ಲೆಂದು 1 ನನಸಿನ ದೇಹವು ಕನಸಿನೊಳುಂಟೆ ನೆನಸಿ ನೋಡು ನಿನ್ನಿರುವಿಕೆ ಸಮವು ನನಸಿನ ದೇಹವು ನಾನಲ್ಲೆಂದು 2 ಗಾಢನಿದ್ರೆಯಲಿ ಅಡಗಿತು ಬುಧ್ಧಿಯು ಗಡನೆ ನೋಡು ನಿನ್ನಿರುವಿಕೆಯಾ ಜಡದೇಹವು ಮನಬುದ್ಧ್ಯಾದಿಗಳಿಂ ಬಿಡಿಯಾದಿರುವಿಕೆಯುಳಿವುದು ನೀನೇ 3 ಮೂರು ಜಾಗೆಯಲಿ ನಿರುತದೊಳಿರುತಿಹ ಇರವರಿವಾನಂದವೆ ನೀನೈ ಮರೆತು ಇದನು ನೀ ಬರಿದೇ ಮಿಡುಕುವಿ ದೊರಕುವದೇ ಸುಖ ಹೊರಗೆ ಹುಡುಕಲು 4 ತೋರಿಕೆ ಅನಿಸಿಕೆಗಳು ಕ್ಷಣಭಂಗುರ ಮರಣರಹಿತ ಪರವಸ್ತುವು ನೀನೆ ಅರಿವೇ ಪರಬ್ರಹ್ಮವು ತಾನೆಂದು ವರಶ್ರುತಿ ಸಾರಿತು ಬ್ರಹ್ಮನೆ ನೀನೈ 5 ಗರುವಿನ ಕರುಣದಿ ತಿಳಿಯೇ ವಿಷಯವ ಮರುಳಾಗದಿರೈ ಮಾಯಾಕಾರ್ಯಕೆ ಗುರುಶಂಕರನಾ ಪದವಿಯ ಪಡೆಯುವಿ6
--------------
ಶಂಕರಭಟ್ಟ ಅಗ್ನಿಹೋತ್ರಿ
ಪುರುಷರಾದವರೆಲ್ಲ ಪುರುಷರೆನಿಸುವುದೋಪುರುಷರೊಳಗೂ ಪುಣ್ಯಪುರುಷನೇ ಪುರುಷ ಪ ಪರಮ ದಿವ್ಯ ಜ್ಞಾನಪೂತ ಭಸಿತವಿಟ್ಟುಸ್ಥಿರವೆಂಬ ಸಿಂಹ ಪೀಠದಲಿ ಕುಳಿತುನಿರುತ ನಿತ್ಯಾನಂದ ನಿರಾಮಯ ತಾನೆಂದುಭರದಿ ಪೂಜಿಸುತಿರುವನು ಪುರುಷ 1 ಪಥ ಸೇರಿದವನವ ಪುರುಷ2 ಅಂಗ ಕಾಣುವ ವಿಷಯಗಳ ಆತ್ಮಗರ್ಪಿಸುತಸಂಗ ರಹಿತನಾಗಿ ತಾನಾಗಿ ಇರುತಮಂಗಳವು ಎನಿಸಿಯೇ ಮರೆತು ಬಾಹ್ಯವನುವಿಹಂಗಪಥದಿ ನಿಂತಿರುವನವ ಪುರುಷ 3 ಶಾಂತರಸವಂ ಕುಡಿದು ಸರ್ವಕ್ಕೂ ಬೆದರದೆಭ್ರಾಂತು ಎನಿಪ ಬೆಳಗ ತರಿದುಸಂತ ಸಾಲೋಕ್ಯ ಮೊದಲು ಸಾಯುಜ್ಯವನೆಲ್ಲಪಂಥದಿ ಮೀರಿ ಪರಿವನವನೆ ಪುರುಷ 4 ಪರಿ ಪರಿ ಕೇಳುತನಾದ ಸಾಕ್ಷಿಕ ತಾನು ಚಿದಾನಂದ ಗುರುವಾಗಿನಾದದಾನಂದದಲಿ ಮುಳುಗಿರುವನವ ಪುರುಷ 5
--------------
ಚಿದಾನಂದ ಅವಧೂತರು
ಪುಷ್ಟಿ ಎಲ್ಲಿಯದು ಪ ದೃಷ್ಟಿ ಕಡಿಮೆಯು ಕಿವಿಯು ಕೇಳದು ಶ್ರೇಷ್ಠ ನಾನೆಂದು ಕುಣಿವುದಕೆಅ.ಪ ಪರಿವ್ರಾಜಕನಾಗಬೇಕೆಂ- ದುರುತರಾಶ್ರಮ ಧರ್ಮಶಾಸ್ತ್ರಗ- ಳೊರೆಯುತಿಹುದದರರ್ಥ ತಿಳಿಯದೆ 1 ಕಾಮ್ಯಕರ್ಮಳನು ತ್ಯಜಿಸಿ ಭ್ರಾಮ್ಯಜನಗಳ ನಡತೆ ಬಿಟ್ಟು ರಮ್ಯವೆಂದರಿಯುವುದು ಸೌಖ್ಯವು 2 ಎಮ್ಮೆಯೋಲ್ ತಿನ್ನುತಲಿ ಬಾಯಲಿ ಹೆಮ್ಮೆ ಮಾತುಗಳಾಡುತಿರುತಿಹ ಗ್ರಾಮ್ಯ ಜನಗಳ ಸಂಗವೆಂದಿಗು ಗತಿವಿದೂರನ ಮಾಡದೆ ಬಿಡದು 3 ಗಣ್ಯತಾನೆಂದುಕೊಳ್ಳದೆ ದಾ- ಅನ್ನಕೋಸುಗ ಪರರ ಪೊಗಳದೆ ಧನ್ಯರಡಿಗಳ ಠಾವಿನಲಿ ನಲಿ ಸುಖ 4 ಪಾಮರರು ಪ್ರತಿದಿನವು ದುಸ್ತರ ತಾಮಸ ನರಕದೊಳು ಮುಣುಗುತ್ತ ಸ್ವಾಮಿಯಾಗಿ ಮೆರೆವ ಶ್ರೀಗುರು- ರಾಮವಿಠಲನ ಮರೆತು ಕೆಡುವರು 5
--------------
ಗುರುರಾಮವಿಠಲ
ಪೂಜೆಯ ಮಾಡಿದೆನೆ ದೇವರ ಪೂಜೆಯ ಮಾಡಿದೆನೆಈ ಜಗದರಸ ಚಿದಾನಂದ ತಾನೆಂದು ಪ ಶುದ್ಧ ಸ್ನಾನವನೆ ಮಾಡುತ ನಿರ್ಮಲ ವಸನವನುಬಂಧಿಸಿ ಬಿಗಿದು ಸ್ವಸ್ಥಾನಾಸ ಮಧ್ಯದಲ್ಲಿ ಕುಳಿತು 1 ನಿಸ್ಪøಹ ಭಸಿತವನೇ ಧರಿಸುತ ನಿಷ್ಕಲಂಕನಾಗಿವಿಶ್ವೇಶ್ವರ ವಿರೂಪಾಕ್ಷನೇ ತಾನೆಂದು 2 ಸರ್ವ ಪೂಜಿತನು ತಾನೀಗ ಸರ್ವನಿವಾರಿತನುಸರ್ವರೂಪಕ ತಾನೀಗೆಂದು ಧ್ಯಾನವರ್ಪಿಸಿದೆನೆ3 ಆನಂದ ವ್ಯಾಪಕನೆ ತಾನೀಗ ಆನಂದ ರೂಪಕನೇಆನಂದಾತ್ಮಕ ತಾ ನೀಗೆಂದಾಹ್ವಾನ ವರ್ಪಿಸಿದನೆ 4 ಇಂದ್ರಿಯ ರೂಪಕ ತಾನೀಗ ಇಂದ್ರಿಯ ವ್ಯಾಪಕನೇಇಂದ್ರಿಯ ಸಾಕ್ಷಿಕ ತಾನೀಗೆಂದು ಸಿಂಹಾಸನವರ್ಪಿಸಿದೆನೆ 5 ನಿಶ್ಚಲಾತ್ಮಕನವ ತಾನೀಗ ನಿಶ್ಚಲೈಕ್ಯನಾದನಿಶ್ಚಲವಸ್ತು ನಿಜತಾನೇ ಎಂದಘ್ರ್ಯವರ್ಪಿಸಿದೆನೆ 6 ವಿಶ್ವ ವಿಶ್ವಭೋಕ್ತøವಿಶ್ವಲೀಲಾತ್ಮಕ ತಾನೀಗೆಂದು ಪಾದ್ಯವರ್ಪಿಸಿದೆನೆ 7 ನಿಗಮ ಗೋಚರ ತಾನೆಂದು ಸ್ನಾನವರ್ಪಿಸಿದೆನೆ 8 ಅಂಬರ ವ್ಯಾಪಕನೇಅಂಬರದೊಳು ಚಿದಂಬರ ತಾನೆಂದು ವಸ್ತ್ರವರ್ಪಿಸಿದೆನೆ9 ಚೈತನ್ಯಾಧಾರ ತಾನೀಗ ಚೈತನ್ಯಾದೂರ ಚೈತನ್ಯಾಧಿಪತಾನೆಂದು ಯಜ್ಞೋಪವೀತ ವರ್ಪಿಸಿದನೆ10 ಕಲುಷ ನಿರ್ಜಿತನೇಕಲುಷ ಹರತಾ ನಿಜವೆಂದಾಭರಣವರ್ಪಿಸಿದೆನೆ11 ಲೇಪಕ್ಕಾಧಾರ ತಾನೀಗ ಲೇಪ ನಿರಾಧಾರಲೇಪಹರ ತಾ ನಿಜವೆಂದು ಅನುಲೇಪವರ್ಪಿಸಿದೆನೆ12 ಪುರತನು ವಿಸ್ತರಿಸಿ ತಾನೀಗ ಪುರಾಧಿಪತಾನೆನಿಸಿಪುರುಷೋತ್ತಮ ತಾನೆಂದು ಸುಪುಷ್ಪವರ್ಪಿಸಿದೆನೆ13 ಪರ ಇಹವು ತಾನೇ ತಾನೀಗ ಪರಾತ್ಪರನು ತಾನೆಪರವಸ್ತು ತಾ ನಿಜವೆಂದು ಧೂಪವರ್ಪಿಸಿದೆನೆ 14 ಜ್ಯೋತಿಯ ರೂಪ ತಾನೀಗ ಜ್ಯೋತಿ ನಿರ್ಮಯನುಜ್ಯೋತಿಯಹ ಚಿಜ್ಯೋತಿಯು ತಾನೆಂದು ಜ್ಯೋತಿಯರ್ಪಿಸಿದೆನೆ 15 ನಿತ್ಯ ತೃಪ್ತನುನಿತ್ಯತೃಪ್ತ ತಾನೆಂದು ನೈವೇದ್ಯವರ್ಪಿಸಿದೆನೆ 16 ಮಂಗಳವೆ ಆದ ತಾನೀಗ ಮಂಗಳಾಂಗನಾದಮಂಗಳ ಮೂರುತಿ ತಾನೆಂದು ತಾಂಬೂಲವರ್ಪಿಸಿದೆನೆ 17 ನಿರ್ವಿಕಾರ ನಿಜ ತಾನೀಗ ನಿರಾವಲಂಬ ನಿಜ ನಿ-ರಾವರಣ ತಾನೆಂದು ಪ್ರದಕ್ಷಿಣವರ್ಪಿಸಿದೆನೆ 18 ಜಯ ಜಯಾತ್ಮಕನೆ ತಾನೀಗ ಜಯ ಸದಾತ್ಮಕನೆಜಯನಿತ್ಯಾತ್ಮಕ ತಾನೆಂದು ನಮಸ್ಕಾರವರ್ಪಿಸಿದೆನೆ19 ಲೋಕೈಕನಾಥ ತಾನೀಗ ಏಕೈಕ ನಾಥನುಏಕ ನಾಥನು ತಾನೆಂದು ವಿಸರ್ಜನವರ್ಪಿಸಿದೆನೆ 20 ಪರಿ ಪರಿ ಮಾಡಿದೆನೆ 21
--------------
ಚಿದಾನಂದ ಅವಧೂತರು
ಬಂಟರಾಗಿ ಬಾಗಿಲ ಕಾಯೋರು ಹರಿಯವೈಕುಂಠದಿ ರಂಗನಾಯಕನರಮನೆಯ ಪ. ಸುತ್ತ ವಿರಜಾನದಿ ಮತ್ತು ನಂದನ ವನಉತ್ತಮೋತ್ತಮ ವೈಕುಂಠಉತ್ತಮೋತ್ತಮ ವೈಕುಂಠದೊಳಗಿನ್ನುಮಿಂಚಿನಂತೆ ಹೊಳೆವೊ ಮುಕ್ತರು1 ಶ್ರೀದೇವಿ ತಾನು ಮುರಹರನ ಪುರದಾಗವಿರಜಾ ತಾನೆಂದು ಕರೆಸುತವಿರಜಾ ತಾನೆಂದು ಕರೆಸುತ ನಾನಾ ಪರಿಗಿಳಿ ಕೋಗಿಲಾಗಿ ಮೆರೆವೋಳು2 ಉತ್ತರ ದಿಕ್ಕಿನಲೆಥಳ ಥಳಿಸುವ ದ್ವಾರ ಮುತ್ತು ಮಾಣಿಕ್ಯ ಅಳವಟ್ಟಮುತ್ತು ಮಾಣಿಕ್ಯ ಅಳವಟ್ಟ ಹರಿಪುರರತ್ನದ ಝಲ್ಲೆ ಬಿಗಿದಾವೆÉ 3 ರಾಜಿ ಮಾಣಿಕ ಗೋಡೆ ಗಾಜಿನ ನೆಲಗಟ್ಟುಈ ಜೋಡು ದ್ರವ್ಯ ಎಲ್ಲಿಲ್ಲ ಈ ಜೋಡು ದ್ರವ್ಯ ಎಲ್ಲಿಲ್ಲ ಇದುನಮ್ಮ ಶ್ರೀದೇವಿಯರಸನ ಅರಮನೆ 4 ಕೇಶರ ಶ್ರೀಗಂಧ ಕಲವೆಲ್ಲ ಪರಿಮಳಬಿಸÀಜನೇತ್ರನರಮನೆಯಬಿಸಜನೇತ್ರೆಯರ ಮನೆಯಿಂದ ಕುಸುಮದ ವೃಷ್ಟಿಗರೆದಾವು5 ಉತ್ತರ ಪಾಲ್ಗಡಲೊಳು ಮುತ್ತು ಮಾಣಿಕರತ್ನಪಚ್ಚ ಕರ್ಪೂರ ಸುಳಿಗಾಳಿಪಚ್ಚ ಕರ್ಪೂರ ಸುಳಿಗಾಳಿ ಇದುನಮ್ಮ ಅಚ್ಯುತಾನಂತನರಮನೆಯ6 ಕೃಷ್ಣ ರಾಮೇಶನ ವಿಶಿಷ್ಠದ ವೈಕುಂಠಸೃಷ್ಟಿ ಮಾಡಿ ರಚಿಸಿದ ಸೃಷ್ಟಿ ಮಾಡಿ ರಚಿಸಿದ ನೋಡಲು ದೃಷ್ಟಿ ಸಾಲದು ಜನರಿಗೆ7
--------------
ಗಲಗಲಿಅವ್ವನವರು
ಬ್ರಹ್ಮ ತಾವೆಂದು ಭಾವಿಸಿರೋ ಭಾಗ್ಯರಿರಾಬ್ರಹ್ಮತಾವೆಂದು ಭಾವಿಸಿದವರುಂಟು ಪ ಕಪಿಲ ನಾರದನು ಗೌತಮನು ಕಣ್ವನುನಿಪುಣ ಕೌಶಿಕನು ನಿರ್ಮಲನು ಅಗಸ್ತ್ಯಾಉಪಮಾನ್ಯ ಶಿಖಿ ಪಂಚ ದೂರ್ವಾಸರಂತಿವರು ಬ್ರಹ್ಮ ತಾವೆಂದು ಭಾವಿಸುವರು 1 ವ್ಯಾಸ ಶ್ರೀವತ್ಸ ಶುಕನು ಶೌನಕನುವಾಶಿಷ್ಟ ಅತ್ರಿ ಗಾರ್ಗೇಯನು ಕಶ್ಯಪನುದಾಸ ಪ್ರಹ್ಲಾದ ಬಕದಾಲ್ಬ್ಯ ಜಮದಗ್ನಿಭಾಸುರರಿಂತಿವರು ಬ್ರಹ್ಮತಾವೆಂದು ಭಾವಿಸುವರು 2 ಸನಕ ಸನಂದನ ಸನತ್ಸುಜಾತನುಮುನಿಯು ತೃಣಬಿಂದು ಮಾರ್ಕಾಂಡೇಯ ರೋಮಶನುಘನ ವಾಮದೇವ ದತ್ತಾತ್ರೇಯ ವಡಬನುಚಿನುಮಯರಿವರು ಬ್ರಹ್ಮತಾನೆಂದು ಭಾವಿಪರು3 ನಿತ್ಯ ತಾವೆಂದು ಭಾವಿಸುವರು 4 ಭವ ಮೂಲ ಹರಿವುದುಬ್ರಹ್ಮ ಬೇರೆನಲು ಬಹುಜನ್ಮವೇ ಬಹುದುಬ್ರಹ್ಮತಾವೆಂದು ಭಾವಿಸಿ ನೀವು ನಿತ್ಯಬ್ರಹ್ಮ ಚಿದಾನಂದ ತಾವಾಗುವಿರಿ ಸತ್ಯ 5
--------------
ಚಿದಾನಂದ ಅವಧೂತರು