ಒಟ್ಟು 72 ಕಡೆಗಳಲ್ಲಿ , 29 ದಾಸರು , 69 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯದೇವ ಜಯದೇವ ಜಯ ವಾಸುದೇವ ಭಾಸುವ ಭಾಸ್ಕರಕೋಟಿತೇಜನ ಮನದೈವ ಧ್ರುವ ಪ್ರಾರ್ಥಿಸುವದರ್ತಿ ಆರ್ಥಿಯ ಘನ ಸ್ಫೂರ್ತಿ ಸ್ಪೂರ್ತಿಗೆ ಸುಸ್ಥಾನಾಗಿಹ ನೀ ಘನಗುರು ಮೂರ್ತಿ ಮೂರ್ತಿ ನಿಮ್ಮ ಕೀರ್ತಿ ಬೆಳಗುದು ಭಾವಾರ್ತಿ ಅರ್ತಿ ಬೆಳಗುವ ಕಂಗಳಿಗ್ಯಾಗಿಹ ನೀ ಸಾರ್ಥಿ 1 ಸುಗುಣ ನಿರ್ಗುಣ ನೀನೆ ಪರಿಪೂರ್ಣ ಯೋಗಿಯ ಮಾನಸಹಂಸನಾಗುವೆ ನೀ ಪೂರ್ಣ ಬಗೆ ಬಗೆ ಭಾಸುವ ಭಕ್ತವತ್ಸಲ ಗುಣ ಸುಗಮಾಗೂದಕೆ ನಿಮ್ಮ ದಯ ಆಧಿಷ್ಠಾನ 2 ಮುನಿಜನಕಾಗುವ ಖೂನ ಸ್ವಾನುಭದ ಜ್ಞಾನ ಸನಕ ಸನಂದನ ವಂದಿತ ನೀನೆ ಅನುದಿನ ಘನಸುಖದಾಯಕ ಸದ್ಗುರು ನೀ ನಿಧಾನ ದೀನ ಮಹಿಪತಿ ಸ್ವಾಮಿ ನೀ ಸನಾತನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತನ್ನನರಿಯದವ ಜ್ಞಾನದ ಮಾತಾಡಿದರೇನು ಕಣ್ಣಿಲ್ಲದವ ಕನ್ನಡಿ ಪಿಡಿದರೇನು ಧ್ರುವ ಧೈರ್ಯವಿಲ್ಲದವ ಕೈಯಲಿ ಶಸ್ತ್ರ ಹಿಡಿದರೇನು ಸ್ಥೈರ್ಯವಿಲ್ಲದವ ತಪಸ್ಯಾದರೇನು ಮರ್ಯಾದಿಲ್ಲದವ ಗುರು ಸನ್ನಿಧವಿದ್ದರೇನು ಬಂಟ ಬಲ್ಲಿದನಾದರೇನು 1 ಗಂಡ ನಿಲ್ಲದ ನಾರಿ ಸುಗುಣ್ಯುದ್ದಂಡಾದರೇನು ಷಂಡ ಸಾವಿರ ಹೆಣ್ಣು ಮದುವ್ಯಾದರೇನು ಖಂಡಿಸದೆ ಅನುಮಾನ ಪಂಡಿತನೆನಿಸಿದರೇನು ಕಂಡು ಕಾಣದ್ಹೆಳವನ ಕೊಂಡಾಡಲೇನು 2 ಭಾನುಕೋಟಿ ತೇಜನಂಘ್ರಿ ಗುರುತಲ್ಲದರಿವೇನು ಅನುಭವಿಸಿ ಕೊಳ್ಳದ ನರಜನ್ಮವೇನು ದೀನ ಮಹಿಪತಿಸ್ವಾಮಿಕಾಣದ ಕಂಗಳವೇನುಜ್ಞಾನ ಉಂಟುಮಾಡಿಕೊಳ್ಳದವನ ಬಾಳಿವೇನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಾರಮ್ಮ ಶ್ರೀ ರಂಗಧಾಮನ ತಂದು ತೋರಮ್ಮ ಎನ್ನಯ ಪ್ರೇಮನ ವಾರಿಜಸಖಶತಕೋಟಿತೇಜನ ಹೊಂತ- ಕಾರಿಯ ನೀ ಕರತಾರೆ ಸೈರಿಸಲಾರೆ ಪ. ವೃಂದಾವನದೊಳಗಾಡುವ ಶ್ರೀ- ಗಂಧವ ಮೈಯೊಳು ತೀಡುವ ಚಂದದಿ ಕೊಳಲೂದಿ ಪಾಡುವ ನಮ್ಮ ಕಂದರ್ಪ ಜಲಕ್ರೀಡೆಯಾಡುವ ನಂದ ನಂದನ ಗೋವಿಂದನ ಕಾಣದೆ ಒಂದು ನಿಮಿಷ ಯುಗವಾಗಿ ತೋರುತಲಿದೆ 1 ಉಡುವ ಸೀರೆಯ ಸೆಳೆದೋಡುವ ದೊಡ್ಡ ಕಡಹದ ಮರವೇರಿ ನೋಡುವ ಕೊಡಲೊಲ್ಲದೆ ಬಹುಕಾಡುವ ಲಜ್ಜೆ- ಗೆಡಿಸಿ ಮಾನಿನಿಯರ ಕೂಡುವ ತಡವ್ಯಾತಕ್ಕೆ ಸಖಿ ತವಕದಿಂದಲಿ ಪೋಗಿ ಎ- ನ್ನೊಡೆಯನ ಕರತಾರೆ ಅಡಿಗೆರಗುವೆ ನಾ 2 ನೀಲವರ್ಣನ ನಿಜರೂಪನ ಶ್ರೀ- ಲೋಲ ಹೆಳವನಕಟ್ಟೆವಾಸನ ಜಾಲಿ ಹಾಳ ವೆಂಕಟೇಶನ ಭಕ್ತ- ಪಾಲಕ ಪರಮವಿಪೋಷನ ಆಲಸ್ಯವ್ಯಾಕೆನ್ನ ಇನಿಯನ ಕರೆತಾರೆ ಬಾಲೆ ನಿನಗೆ ಕಂಠಮಾಲೆಯ ಕೊಡುವೆ. 3
--------------
ಹೆಳವನಕಟ್ಟೆ ಗಿರಿಯಮ್ಮ
ತಿರುಪತಿ ಯಾತ್ರೆಯ ಮಾಡಿ ತಿರುಪತಿ ಪ ತಿರುಪತಿಯಾತ್ರೆಯ ಮಾಡಿ ಮನದ ದುರಿತಪಾಪಗಳನೀಡಾಡಿ ಆಹ ಸ್ಮರಕೋಟಿ ತೇಜನ ದರುಶನಲಾಭವು ದೊರಕಿದ ಸುಜನರ ಚರಿತೆಯ ಕೇಳುತ್ತ ಅ.ಪ ಸುಟ್ಟು ಹೋಗುವದಿದು ಚಂದ ಮೆಟ್ಟು ಮೆಟ್ಟಿಲನೇರುವ ವೃಂದ ಜನ ಸೃಷ್ಟಿಗೊಡೆಯ ಗೋವಿಂದ ಆಹಾ ದಿಟ್ಟಮನದಿ ಪರಮೇಷ್ಠಿಪಿತನ ಪಾಡಿ ಗಟ್ಯಾಗಿ ಗೋವಿಂದ ಗೋವಿಂದನೆನುವರು1 ಗಾಳಿಗೋಪುರವನ್ನೆ ದಾಟಿ ಭಕ್ತ- ರಾ ಮಂಟಪಕೆ ಉಂಟೆ ಸಾಟಿ ತಾಳ ಮೇಳದವರ ಗಲಾಟೀಯಿಂದ ಶೋಭಿಪ ಪವನನಕೋಟಿ ಕೇಳಿ ನೋಡುತ್ತ ಭಕುತಿಸೂರ್ಯಾಡುತ್ತ ಮಹಿಮೆ ಕೊಂ- ಡಾಡುತ್ತ ಪಾಡುತ್ತ ಕುಣಿವ ಸಜ್ಜನರೆಲ್ಲ 2 ಸ್ವಾಮಿ ಪುಷ್ಕರಣಿಯ ಸ್ನಾನ ಮಾಡಿ ಆ ಮಹವರಹದೇವರನ್ನ ಕಾಮ- ಧೇನೆಂಬ ಶ್ರೀ ಗುರುಗಳನ್ನ ನೋಡಿ ಆ ಮಹಾ ಅಶ್ವತ್ಥರಾಜನ್ನ ಸ್ತುತಿಸಿ ನೇಮದಿ ದಿಗ್ಗಾವಿ ಆಚಾರ್ಯರಿಗೆ ನಮಿಸಿ ಶ್ರೀಧರನಾಲಯ ದ್ವಾರಕ್ಕೆ ಪೋಗಲು 3 ಮೂರು ದ್ವಾರಗಳನ್ನೆ ದಾಟಿ ಮು- ರಾರಿಯ ಗುಡಿಸುತ್ತ ಕೋಟೆಯಲ್ಲಿ ಸಾರುವ ಭಕುತರ ಭೇಟಿಯಿಂದ ಅ- ಪಾರ ಜನುಮದ ಪಾಪಮೂಟೆ ಪೋಗಿ ಬೇಗದಿ ವಿಮಾನ ಶ್ರೀನಿವಾಸನ ನೋಡಿ ಸಾಗರಶಯನನ ದರುಶನ ಕೊಡುಕೊಡು ಎಂದು 4 ಕೊಪ್ಪರಿಗೆಯು ಮನೆಯಂತೆ ಹಣ ತಪ್ಪದೆ ಸುರಿಯುವರಂತೆ ನ- ಮ್ಮಪ್ಪ ವೆಂಕಟಸ್ವಾಮಿಯಂತೆ ತಪ್ಪನಾಡುವರ ಶಿಕ್ಷಿಪನಂತೆ ಆಹಾ ಕ್ಷಿಪ್ರದಿ ಶ್ರೀಧರನಪ್ಪಣೆಯಂದದಿ ಅಪ್ರಮೇಯನ ಸೇವೆಗೊಪ್ಪುವ ಸುಜನರು 5 ಹೇಮದ್ವಾರದಿ ನಿಂತ ಜನರು ನಮ್ಮ ಸ್ವಾಮಿ ಶೃಂಗಾರ ನೋಡುವರು ಶ್ರೀನಿ- ವಾಸನೆ ಸಲಹು ಎಂಬುವರು ಪಾಹಿ ಪಾಹಿ ಶ್ರೀಪತಿ ಎನ್ನುತಿಹರು ಶ್ರೀಶ ಗೋವಿಂದ ಗೋವಿಂದ ಗೋವಿಂದ ಮಾಧವ ಮಾತುಳಾಂತಕ ದೇವ ಮಾತು ಲಾಲಿಸು ಎಂದು6 ಚರಣದಂದಿಗೆ ಗೆಜ್ಜೆವಲಿಯೆ ಪೊನ್ನ ಸರಪಳಿ ಪಾಡಗ ನಲಿಯೆ ಒಳ್ಳೆ ಜರದ ಪೀತಾಂಬರ ಹೊಳೆಯೆ ಪಟ್ಟೆ ವರವಲ್ಲಿ ಹೊಳೆಯುತ್ತ ಮೆರೆಯೆ ಆಹ ಸರಗಳು ವಲಿಯುತ್ತ ಪದಕಂಗಳ್ಹೊಳೆಯುತ್ತ ಉರದಲ್ಲಿ ಶ್ರೀದೇವಿ ಇರುವ ವೈಭವ ನೋಡಿ7 ವರಶಂಖು ಚಕ್ರ ಹಸ್ತದಲಿ ದಿವ್ಯ ಸಿರದಿ ಕಿರೀಟ ಮೆರೆಯುತಲಿ ಪಟ್ಟೆ ತಿಲುಕ ಕಸ್ತೂರಿ ಹೊಳೆಯುತಲಿ ಥಳ ಥಳ ಹೊಳೆವ ಮುಖಕಾಂತಿಯಲಿ ಅಹ ಕಡೆಗಣ್ಣ ನೋಟದಿ ಜಗವಮೋಹನ ಮಾಳ್ಪ ಅಗಣಿತ ಮಹಿಮನ ಸುಗುಣವ ಪಾಡುತ್ತ 8 ಕರುಣಿಗಳರಸನೆ ದೇವ ತನ್ನ ಶರಣು ಹೊಕ್ಕವರನ್ನೆ ಕಾವ ತನ್ನ ಭಜಕರಿಗಭಯವ ನೀವ ಇನ್ನು ಸರಿಯುಂಟೆ ಶ್ರೀರಮಾದೇವ ಅಹ ಪರಿಸರನೊಡೆಯನ ನಿರುತದಿ ಧ್ಯಾನಿಸಿ ದುರಿತಗಳಳಿದು ಸದ್ಗತಿಯ ಪಡೆವರೆಲ್ಲ 9 ಕಾಲಹರಣ ಮಾಡದಂತೆ ತ್ರಿ- ಧಾಮನ ಸ್ಮರಿಸುವ ಚಿಂತೆಯಲ್ಲಿ ಆಲಸ್ಯ ತೊರೆದಿಹರಂತೆ ಶ್ರೀನಿ- ವಾಸನೆ ಇದಕ್ಹೊಣೆಯಂತೆ ಅಹ ಕಾಲಕಾಲಕೆ ತಕ್ಕ ಲೀಲೆಯ ತೋರುವ ಪಾದ ಧ್ಯಾನಿಪ ಸುಜನರು 10 ಹತ್ತವತಾರದ ಹರಿಯು ತನ್ನ ಭಕ್ತರು ಸ್ತುತಿಸುವ ಧ್ವನಿಯ ಕೇಳಿ ಚಿತ್ತದಿ ನಲಿಯುವ ಪರಿಯು ಸುರರು ವಿಸ್ತರಿಸುವ ದಿನಚರಿಯು ಅಹ ಭಕ್ತರ ಸ್ತುತಿಸಲು ಮತ್ತವರಿಗೊಲಿಯುವ 11
--------------
ನಿಡಗುರುಕಿ ಜೀವೂಬಾಯಿ
ತುರುಗಾಯ ಬಂದ ಗೋಪಿಯ ಕಂದಆನಂದದಿಂದ ಪ ಮೃಗ ಜಲಚರ ಮೋಹಿಸೆತರಳೇರ ಮನ ಸೂರೆಯಾಗೆ ಕೊಳಲಿನಿಂದ ಅ.ಪ. ತಂದೆಯ ಕಂದನೆಂದು ಕೊಂಕುಳೊಳಿಟ್ಟುಕಂದನ ಕೆಳಗಿಟ್ಟುಅಂದಿಗೆ ಗೆಜ್ಜೆ ಕಿವಿಗಳಿಗಿಟ್ಟುಮುತ್ತಿನ ಬಟ್ಟುಹೊಂದಿಸಿ ಗಲ್ಲದಲ್ಲಿ ತಾನಿಟ್ಟುಕಸ್ತೂರಿಯ ಬಟ್ಟುಮುಂದಾಗಿ ಮೂಗಿನ ಮೇಲಳವಟ್ಟುಮನೆಬಾಗಿಲ ಬಿಟ್ಟುಕಂದರ್ಪನ ಶರದಿಂದ ನೊಂದು ಬಹುಕಂದಿ ಕುಂದುತಲಿಂದುವದನೆಯರುಇಂದಿರೇಶನಾನಂದದ ಗಾನಕೆಚಂದ್ರಮುಖಿಯರೊಂದಾಗುತ ಬರುತಿರೆ 1 ಮುರಳಿಯ ಸ್ವರಕೆ ಮೋಹಿತರಾಗೆಕರುಗಳನು ತಂದುಕರದಿಂದಲೆತ್ತಿ ತೊಟ್ಟಿಲೊಳಗೆಇರಿಸುತ್ತ ಹಾಲಬೆರಸುತ್ತ ಮಜ್ಜಿಗೆ ಮೊಸರಿನೊಳಗೆಪರಮಾತ್ಮನ ನೆನೆದುಹೊರಟರು ಬಿಸಿಲು ಚಳಿ ಮಳೆಯೊಳಗೆಮನೆಮನೆಯೊಳಗೆತರಳರ ಬೆದರಿಸಿ ಮಾರ್ಜಾಲಕೆ ಮೊಲೆತ್ವರಿತದಿ ಉಣಿಸುತ ಸರಿಸರಿಯೆನುತಲಿಪರಿಪರಿ ಭ್ರಾಂತರಾಗಿ ನೋಡುತಪುರಮಾರ್ಗಕೆ ಬರುವರು ನಿರುಕಿಸುತ 2 ಮದನ ಶತಕೋಟಿ ತೇಜನು ಬಂದಸ್ತ್ರೀರೆದುರಲಿ ನಿಂದಅಧರಾಮೃತ ಪಾನವ ಮಾಡಿರೆಂದಬಾಯಾರಿದಿರೆಂದಬದಿಯಲ್ಲಿ ಬಂದು ಕುಳ್ಳಿರಿಯೆಂದಅವರಿರವನೆ ನೋಡ್ದಚದುರೇರ ಮೋಹಕನೆ ನಾನೆಂದವಾದ್ಯದ ರವದಿಂದಸದಯನೆದುರ ರಂಭೆ ಊರ್ವಶಿ ಮೇನಕೆಒದಗಿ ನಾಟ್ಯಗಳ ಚದುರತನದಲಾಡೆಮಧುಸೂದನ ಭಕ್ತರ ಕಾಯ್ವುದಕೀವಿಧದೊಳಗಾಡಿದ ರಂಗವಿಠಲ ತಾ 3
--------------
ಶ್ರೀಪಾದರಾಜರು
ದಾವಗಿಲ್ಲ ಖೂನ ತನ್ನೊಳಗ ಅವಗೆಲ್ಲಿಯ ಜ್ಞಾನ ಜಗದೊಳಗ ಧ್ರುವ ತಿಳಿದುಕೊಳ್ಳದವ ಆತ್ಮವಿಚಾರ ಕಳೆದು ಕೊಂಡವನೆ ಹಿತ ಅಪಾರ ಹೊಳಿಯದವಗ ಎಂದು ವಸ್ತುದಾಧಾರ 1 ದಾವಗಿಲ್ಲ ಖೂನ ಗುರುಮುಖ ಅವನೆ ತಾಳಿ ಬಾಹ್ವ ಜನ್ಮ ಅನೇಕ ಭಾವಿಸದು ದಾವಗಿನ್ನ ವಿವೇಕ ಅವಗೆಲ್ಲಿಹದು ನೋಡಿ ಸ್ವಸುಖ 2 ಖೂನ ತನ್ನ ತಿಳಿವದು ತ್ವರಿತ ಅನುಭವಕಿದೆ ತಾಮ ಸನ್ಮತ ದೀನ ಮಹಿಪತಿಗೆ ಸ್ವಹಿತ ಭಾನು ಕೋಟೆ ತೇಜನಾದ ಉದಿತ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಂಬಿದೆ ನಿನಪಾದ ಅಂಬುಜಾಕ್ಷನ ಪ್ರಿಯಬೆಂಬಿಡದಲೆ ಯೆನ್ನ | ಕಾಯೋ |ಬೆಂಬಿಡದಲೆ ಯನ್ನ ಕಾಯೆಂದು ನಿನ್ನನುಹಂಬಲಿಸೂವೆ ಮೋಹನ್ನರಾಯಾ ಪ ದೋಷರಾಶಿಯನೀಗಿ | ದಾಸನ್ನ ಮಾಡಿದಋಷ್ಯಂಶರಾಗಿಹ ನಿಮ್ಮಾ |ಋಷ್ಯಂಶರು ವಿಜಯ ದಾಸರ ಪ್ರೇಮಕ್ಕೆಆಶ್ರಯನಾಗಿಪ್ಪ ಮೋಹನ್ನ 1 ಹೆಮ್ಮೆಯ ಪಡುವೆ ನಾ ನಿಮ್ಮವರವನೆಂದುದುರ್ಮಮತೆಯ ನೀಗೋ ಎನ್ನಾ |ದುರ್ಮಮತೆಯು ನೀಗಿ | ಭರ್ಮಗರ್ಭನ ಪಿತನಪೇರ್ಮೆ ದೊರಕಿಸೊ ಎನಗೆ ಮುನ್ನಾ 2 ಅಂಬುಜಾಂಬನಂಘ್ರಿ | ಅಂಬುಜ ತೋರೆಂದುಹಂಬಲಿಸಿ ಬೇಡುವೆ ನಿನಗೆ |ಹಂಬಲಿಸಿ ಬೇಡುವೆ | ಶಂಬರಾರಿಯ ತೇಜನಂಬಿ ಬಂದಿಹೆ ನಿನ್ನ ಅಡಿಗೇ 3 ವಿಷಯಧುಯ್ಯಲಿನಿಂದ | ಕ್ಲೇಶವಧಿಕವಯ್ಯ ವಿಷದಂತೆ ಕಾಣಿಸೊ ಜೀಯ |ವಿಷದಂತೆ ಕಾಣಿಸಿ | ಶೇಷವಿಲ್ಲಾಧಾಂಗೆ |ದೋಷವಳಿಸಿ ಕಾಯೊ ಜೀಯಾ 4 ನಿನ್ನ ವಂಶಜನಾಗಿ | ನಿನ್ನವರವನಾಗಿಉನ್ನಂತ ಮಹಿಮ ಶ್ರೀಹರಿಯಾ |ಉನ್ನಂತ ಮಹಿಮನು | ಅನ್ನಂತನ ಪಾದಕಾಣದಿದ್ದವನಿರೆ ವ್ಯರ್ಥ 5 ಪಂಚಾಶದ್ವತ್ಸರ | ಹಂಚಿಪೋಗುವ ಮುನ್ನಪಂಚರೂಪಾತ್ಮಕ ಹರಿಯಾ |ಪಂಚರೂಪಾತ್ಮ ವಿ | ರಿಂಚಿಪಿತನ ಪಾದಹಂಚಿಕಿಂದಲಿ ತೋರೊ ಮೋಹನ್ನ 6 ಉರುಗಾದ್ರಿವಾಸ ವಿಠಲಾತ್ಮಕನು ಶಿರಿಗುರುಗೋವಿಂದ ವಿಠ್ಠಲನ |ಗುರಗೋವಿಂದ ವಿಠಲನ ಚರಣಾರವಿಂದವತೋರಿ ಪೊರೆ ನಮ್ಮ ಹಿರಿಯಾ 7
--------------
ಗುರುಗೋವಿಂದವಿಠಲರು
ನರಹರಿ ಬಂದು ಮೂಡಿದಾ ಶರಣಗದಯವಾ ಮಾಡಿದಾ ಪ ಛಟ ಛಟ ಶಬ್ಧವ ತೋರುತಾ ಪಟ ಪಟ ತಾರೆಗಳಾರಲು ತಾ 1 ಗುಡ ಗುಡ ಗುಟ್ಟಿಬಾಯಾಳಗಗ್ನಿಯ ಧಡ ಧಡ ಕಿಡಿಗಳನುಗುಳುತಾ ಗಡ ಬಡಿಸಲು ಸಮುದ್ರಗಳೆಲ್ಲವು ಬುಡು ಬುಡು ಗುಳ್ಳೆಗಳೇಳಲು ತಾ2 ಫಳ ಫಳ ಭೂಮಿಯು ಬಿಚ್ಚಿತು ಗಿರಿಗಳು ಹಳ ಹಳ ಕಲ್ಲುಗಳುದುರಿದವು ಭಳ ಭಳ ಭಾಸಮ ಗಡಿಶತ ತೇಜನ ಥಳ ಥಳ ಮಿಂಚುಗಳಾಡಿದವು 3 ಮಾಗ್ಗಿತು ಧನಿಯನು ಕೇಳುತ ಕೇಳವು ಮುಗ್ಗಿತು ಕಂಗಾಣದೆ ಹಲವು ಅಗ್ಗಳ ದೈತ್ಯರು ದೂರದಿ ಬಿಸುಟರು ನುಗ್ಗಾದವು ಅವರಾಯುಧವು 4 ಭವ ಭವ ಸುರಮುನಿ ಇಂದ್ರರು ಇರದೆವೆ ಮುರಿಯನು ಸಾರಿದಿರು ಗುರುವರ ಮಹಿಪತಿ ನಂದನಸಾರಥಿ ಶರಣಿಂದೆನುತಲಿ ಹೊಗಳಿದನು5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿಗಮನುಳುಹಿಸಿ ನಗನೆಗದಿಹಗೆ ಜಗದೋದ್ದಾರ ಸುಭಗತ ಪ್ರಿಯಗೆ ಸುಗಮ ಧರಿ ಮೂರಡಿಯ ಮಾಡಿ ಸುಗೊಡಲ ಪಿಡಿದಿಹಗೆ ಬಗೆದು ಜಲಿಧಿಲಿ ಸೇತು ಗಟ್ಟಿದ ಖಗವಾಹನ ಯದುಕುಲ ಲಲಾಮಗೆ ಜಗಮೋಹಿಸುವ ಬೌದ್ಯಕಲ್ಕಿಗೆ ಶರಣು ಸುಶರಣು 1 ಸಿರಿಯನಾಳುವ ದೊರಿಯೆ ನಿನ್ನ ಮರೆಯ ಹೊಕ್ಕಿಹ ಚರಣಕಮಲ ಸರಿಯ ಬಂದ್ಹಾಂಗೆನ್ನ ಹೊರವದು ನಿನ್ನ ದಯ ಘನವು ಬಿರುದು ನಿನ್ನದು ಸಾರುತಿಹುದು ಕರಿಯ ವರದಾನಂದ ಮೂರುತಿ ಸುರಿಸಿ ಕರುಣಾಮೃತವುಗರೆವುದು ತರಳ ಮಹಿಪತಿಗೆ 2 ಮೂರ್ತಿ ಸದ್ಗುರು ನೆನೆವರನುದಿನ ಸಾರ್ಥ ಸದ್ಗುರು ಜನವನದೊಳನುಕೂಲ ಸದ್ಗುರು ತಾನು ತಾಂ ಎನಗೆ ಸಾರ ನೀಡುತ ತನುಮನದೊಳನುವಾಗಿ ಸಲಹುವ ದೀನಮಹಿಪತಿ ಸ್ವಾಮಿ ಭಾನುಕೋಟಿ ತೇಜನಿಗೆ 3 ಶರಣಜನಾರಾಭರಣವಾಗಿಹ ಮೂರ್ತಿ ಸದ್ಗುರು ತರಣೋಪಾಯದ ಸಾರಸುಖವಿರುವ ನಿಜದಾತ ಪರಮಪಾವನ ಗೈಸುತಿಹ ವರ ಶಿರೋಮಣಿ ಭಕ್ತವತ್ಸಲ ಚರಣ ಸ್ಮರಣಿಲೆ ಪೊರೆವದನುದಿನ ತರಳ ಮಹಿಪತಿಗೆ 4 ನೋಡದೆನ್ನವಗುಣದ ದೋಷವ ಮಾಡುವದು ಸದ್ಗುರು ದಯ ಘನ ನೀಡುವುದು ನಿಜ ಸಾರಸುಖವನು ಕರುಣದೊಲವಿಂದ ಬೇಡುವÀದು ನಿನ್ನಲ್ಲಿ ಪೂರಣ ಪ್ರೌಢ ಘನಗುರುಸಾರ್ವಭೌಮನೆ ಮೂಢ ಮಹಿಪತಿ ರಕ್ಷಿಸನುದಿನ ಸರ್ವಕಾಲದಲಿ 5 ಸ್ವಾಮಿ ಸದ್ಗುರು ಸಾರ್ವಭೌಮನೆ ಕಾಮ ಪೂರಿತ ಕಂಜನಾಭನೆ ಸಾಮ ಗಾಯನ ಪ್ರಿಯ ಸಲವ್ಹೆನ್ನಯ ಶ್ರೀ ನಿಧಿಯೆ ಮಾಮನೋಹರ ಮನ್ನಿಸೆನ್ನ ನೀ ನೇಮದಿಂದಲಿ ಹೊರೆವದನುದಿನ ಕಾಮಧೇನಾಗಿಹ ಕರುಣದಿ ದೀನಮಹಿಪತಿಗೆ 6 ಕುಂದ ನೋಡದೆ ಬಂದು ಸಲಹೆನ್ನಯ್ಯ ಪೂರ್ಣನೆ ಇಂದಿರಾವಲ್ಲಭನೆ ತಂದಿ ತಾಯಿ ನೀ ಎನಗೆ ಬಂಧು ಬಳಗೆಂದೆಂದು ನಿನ್ನನೆ ಹೊಂದಿ ಕೊಂಡಾಡುವ ಮೂಢ ನಾ ಬಂದ ಜನ್ಮವು ಚಂದಮಾಡು ನೀ ಕಂದ ಮಹಿಪತಿಗೆ 7 ದೀನಬಂದು ದಯಾಬ್ಧಿ ಸದ್ಗುರು ಭಾನುಕೋಟಿ ತೇಜಪೂರ್ಣನೆ ನ್ಯೂನ ನೋಡದೆ ಪಾಲಿಸೆನ್ನ ನೀ ಘನಕರುಣದಲಿ ನೀನೆ ತಾಯಿತಂದೆಗೆ ನೀನೆ ಬಂಧುಬಳಗ ಪೂರಣ ನೀನೆ ನೀನಾಗ್ಹೊರೆವದನುದಿನ ದೀನಮಹಿಪತಿಗೆ 8
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಿತ್ಯ ಶುಭಮಂಗಳಂ ಪ ವೇದಾಂತ ವೇದ್ಯನಿಗೆ ಆದಿನಾರಾಯಣಗೆ ಸಾದು ಸಜ್ಜನರ ಸಂರಕ್ಷಣಗೆ ಯಾದವಾಧಿಪ ಕೃಷ್ಣ ದನುಜರೆದೆ ದಲ್ಲಣಗೆ ಮಾಧವ ಮುಕುಂದ ಮುರಮರ್ಧನನಿಗೆ ನಿತ್ಯ ಶುಭಮಂಗಳಂ 1 ಶ್ರೀ ವತ್ಸಲಾಂಛನಗೆ ಶ್ರೀ ಕೇಶವಾಚ್ಯುತಗೆ ಭವ ಭಂಜನನಿಗೆ ಗೋವರ್ಧನವ ನೆತ್ತಿ ಗೋವುಗಳ ಕಾಯ್ದವಗೆ ಮಾವ ಕಂಸನ ಕೊಂದ ಗೋವಿಂದಗೆ 2 ನೀಲ ಮೇಘಾಂಗನಿಗೆ ನಿಜಶರಣ ಸಂಗನಿಗೆ ಕಾಲ ಭಯ ಶಿಕ್ಷನಿಗೆ ಕಮಲಾಕ್ಷಗೆ ಬಾಲಾರ್ಕ ಚಂದ್ರ ರವಿಕೋಟಿ ತೇಜನಿಗೆ ಮೂಲೋಕ ದೊಡೆಯನಿಗೆ ಮುರವೈರಿಗೆ 3 ಕಾಮಪಿತ ಕೃಷ್ಣನಿಗೆ ಕಡುಚೆಲ್ವಮಾಧವಗೆ ಸಾಮಗಾನ ವಿಲೋಲ ಸರ್ವೇಶಗೆ ವಾಮ ದೇವನ ಮಿತ್ರ ವಸುದೇವ ಪುತ್ರನಿಗೆ ಶ್ರೀ ಮಹಾಗೋವಿಂದ ಗೋಪಾಲಗೆ 4 ದುರಿತ ಸಂಹಾರಗೆ ಪರಮ ಪಾವನನಿಗೆ ಪಾಪವಿನಾಶಗೆ ಘೋರ ದುರಿತಾರಣ್ಯ ದಹನ ದೈತ್ಯಾಂತಕಗೆ ಪಾರ ಮಹಿಮಾನಂದ ಸುರವಂದ್ಯಗೆ 5 ನಾಗೇಂದ್ರ ಶಯನನಿಗೆ ನಿಗಮಾಗಮ ಸ್ತುತಗೆ ನಾಗಭೂಷಣ ನಮಿತಗೆ ಭಾಗೀರಥೀಪಿತಗೆ ಭಾಗವತ ಹಿತಕರಗೆ ಭಾಮೆಯರರಸ ಶ್ರೀ ಗೋಪಾಲಕೃಷ್ಣಗೆ 6 ವರಮತ್ಸ್ಯರೂಪನಿಗೆ ಕೂರ್ಮಾವತಾರನಿಗೆ ವರಹದಾಕೃತಿಯವಗೆ ನರಸಿಂಹಗೆ ವರದ ವಾಮನನಿಗೆ ವರ ಪರಶುರಾಮನಿಗೆ ಬುದ್ಧ ಶ್ರೀ ಕಲ್ಕಿಗೆ 7 ಇಂದಿರಾರಮಣಗೆ ಚಂದ್ರಶೇಖರ ಪ್ರಿಯಗೆ ನಂದಗೋಕುಲದರಸ ಗೋಪಾಲ ಕೃಷ್ಣಗೆ ಮಂದಮಾರುತ ತನಯ ಕೋಣೆ ನಿಜವಾಸಗೆ ಆ ನಂದ ಮೂರುತಿ ಶ್ರೀ ಲಕ್ಷ್ಮೀನಾರಾಯಣಗೆ 8
--------------
ಕವಿ ಪರಮದೇವದಾಸರು
ನೀನೆ ಸಕಲವೆನ್ನ ಸ್ವಾಮಿ ಶ್ರೀ ಹರಿಯೆ ದೀನ ದಯಾಳು ನೀನೆವೆ ನಿಜಧೊರಿಯೆ ಧ್ರುವ ತಂದೆ ತಾಯಿಯು ನೀನೆ ಬಂಧುಬಳಗ ನೀನೆ ಹೊಂದಿಕಿ ಹೊಲಬು ನೀ ಎನ್ನ ನೀನೆ ಎಂದೆಂದು ಸಲಹುವಾನಂದ ಮೂರುತಿ ನೀನೆ ಕುಂದ ನೋಡದಿಹ್ಯ ಮಂದರಧರ ನೀನೆ 1 ಕುಲದೈವವು ನೀನೆ ಮೂಲಪುರಷ ನೀನೆ ಒಲಿವ ಭಾಗ್ಯದ ಫಲಶ್ರುತಿಯು ನೀನೆ ಸಾಲವಳಿಯು ನೀನೆ ಹಲವು ಭೂಷಣ ನೀನೆ ಕುಲಕೋಟಿ ಬಳಗಾದ ಭಕ್ತವತ್ಸಲ ನೀನೆ 2 ಧನದ್ರವ್ಯಾರ್ಜಿತ ನೀನೆ ಘನಸೌಖ್ಯಾಕರ ನೀನೆ ಅನುದಿನಲಿಗನುಕೂಲ ನೀನೆ ದೀನ ಮಹಿಪತಿಸ್ವಾಮಿ ಭಾನುಕೋಟಿ ತೇಜನೆ ಮನೋಹರ ಮಾಡುವ ಮಹಾಮಹಿಮ ನೀನೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೋಡು ಮನವೆ ನಿನ್ನೊಳಾತ್ಮನ ನೋಡು ಮನವೆ ಧ್ರುವ ಸಾಧುಸಂಗವ ನೀ ಮಾಡಿ ಭೇದ ಬುದ್ಧಿಯ ಹೋಗಾಡಿ ಆದಿತತ್ವವ ನೀ ನೋಡಿ ಸದಮಲಾನಂದ ಕೂಡಿ1 ಕಾಮಕ್ರೋಧವ ಕಳೆದು ಮಮತಾ ಮಾಯವನಳಿದು ತಾಪ ತೊಳೆದು ಶಮದಮಾದಿ ತಿಳಿದು 2 ನಾನು ನೀನೆಂಬುದು ನೀಗಿ ಜ್ಞಾನದಿಂದ ಗುಪ್ತನಾಗಿ ಭಾನುಕೋಟಿತೇಜನಂಘ್ರಿ ಬೆರೆದು ನಿಶ್ಚಿಂತನಾಗಿ 3 ಅವಿದ್ಯುಪಾಧಿಯ ಜರಿದು ಮೂವಿಧ ಮದ ಮುರಿದು ಪವಿತ್ರ ಪ್ರಣವರಿದು ಸುವಿದ್ಯ ಸುಖಬೆರೆದು 4 ಬಾಹ್ಯಾಂತ್ರದೊಳಿಹ ಪೂರ್ಣ ಮಹಾಗುರುನಿರಂಜನ ಇಹ ಪರತ್ರ ಸಾಧನ ಮಹಿಪತಿ ಅಂತರಾತ್ಮನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೋಡುವ ಬನ್ನಿರೆಲ್ಲರು ಲೋಕ ನಾಯಕ ಚೆಲ್ವ ಮೂಡಲ ಗಿರಿವಾಸ ಶ್ರೀವೆಂಕಟೇಶನ ಪ ಭೂಮಿಗೆ ವೈಕುಂಠವೆಂದು ತೋರುತ ನಿಂತ ಸ್ವಾಮಿ ಪುಷ್ಕರಣಿಯ ತೀರದೊಳು ಪ್ರೇಮದಿ ಭಕ್ತರ ಸಲಹಿಕೊಂಬುವನಂತೆ ಕಾಮಿತಾರ್ಥವನಿತ್ತು ಕಳುಹುವನಂತೆ 1 ಬ್ರಹ್ಮಾದಿ ಸುರರಿಂದ ಪೂಜಿಸಿಕೊಂಬನಂತೆ ನಿರ್ಮಲ ರೂಪದಿ ತೋರ್ಪನಂತೆ ಕರ್ಮಬಂಧಗಳನ್ನು ಕಡಿದು ಕೊಡುವನಂತೆ ಹೆಮ್ಮೆಯ ಪತಿಯೆಂದು ತೋರ್ಪನಂತೆ 2 ಆಡಿ ತಪ್ಪುವರಿಗೆ ಕೇಡ ಬಗೆವನಂತೆ ನೋಡಿಯೆ ನಡೆಯಲು ಕೊಡುವನಂತೆ ಮೂಡಿದ ಆದಿತ್ಯ ಶತಕೋಟಿ ತೇಜನಂತೆ ರೂಢಿಗೊಡೆಯ ನಮ್ಮ ವರಾಹತಿಮ್ಮಪ್ಪನಂತೆ 3
--------------
ವರಹತಿಮ್ಮಪ್ಪ
ಪಾದ ಮಾನಸಾನಂದಿಸೋ ಶತ ಭಾನುತೇಜನೇ ಪ ಹನ ಚಿತ್ರಭಾನು ದನುಜಾರಿ ಹರಿ ಅ.ಪ ಮಾಡುವೆನಯ್ಯ ಇಂದುವದನಾ ಶ್ರೀ ಪುಲಿಗಿರಿ ಮಂದಿರ ಮಂದರಧರ 1 ದುಷ್ಟಮನುಜರ ಕೂಡಿ ಭ್ರಷ್ಟನಾದೆನು ಇಷ್ಟಫಲ ದಾಯಕ ತ್ರಿವಿಷ್ಟಪಾಧಿಪಾನುಭವ್ಯ ಅಷ್ಟಸಿದ್ಧಿಪ್ರದ ನಿನ್ನ ಗಟ್ಟಿಯಾಗಿ ನಂಬಿದೆನು 2 ಉರಿಹಸ್ತ ಬೇಡಲು ಲೋಕಮೋಹಿನಿಯ ರೂಪು ಸ್ವೀಕರಿಸಿ ಶಿವನಕಾಯ್ದೆ 3 ಕೀರ್ತಿ ನೋಡಿಸೋ ನಿನ್ನಯಮೂರ್ತಿ ಬೇಡಿಸದಿರು ನಿನ್ನ ನಾಡಿನೊಳಗಾಡಿಸೋ ಮುರಾರಿಹರಿ4 ಶುಭ ವೇಷವಿಪುಲ ದುರಿತಗಣ ಶೋಷಣ ಶ್ರೀವರದವಿಠಲ 5
--------------
ಸರಗೂರು ವೆಂಕಟವರದಾರ್ಯರು
ಪಾಲಿಸೊ ಪರಮ ಪಾವನ್ನ ಕಮ ಲಾಲಯ ನಂಬಿದೆ ನಿನ್ನ ಆಹ ನಖ ತೇಜ ಮೂರ್ಲೋಕದರಸೆ ನೀನಾಲಯ ಬಿಡದಲೆ ಅ.ಪ ಹಿಂದೆ ಪ್ರಹ್ಲಾದನ ಮೊರೆಯ ಕೇಳಿ ಬಂದು ಕಾಯಿದೆ ಭಕ್ತ ಪ್ರಿಯ ಸುಖ ಸಂದೋಹ ಮೂರುತಿ ಆಯ ತಾಕ್ಷ ಎಂದೆಂದು ಬಿಡದಿರು ಕೈಯ ಆಹ ವೃಂದಾರ ಕೇಂದ್ರಗೆ ಬಂದ ದುರಿತಂಗಳ ಹಿಂದೆ ಮಾಡಿ ಕಾಯ್ದೆ ಇಂದಿರಾರಮಣನೆ 1 ಹರಣದಲ್ಲಿ ನಿನ್ನ ರೂಪ ತೋರಿ ಪರಿಹರಿಸೊ ಎನ್ನ ಪಾಪ ದೂರ ದಿರದಿರು ಹರಿಸಪ್ತ ದ್ವೀಪಾಧಿಪ ಸಿರಿಪತಿ ಭಕ್ತ ಸಲ್ಲಾಪ ಆಹ ಕರಣಶುದ್ಧನ ಮಾಡಿ ಕರೆಯೊ ನಿನ್ನ ಬಳಿಗೆ ನರಕಂಠೀರವ ದೇವ ಚರಣ ಆಶ್ರೈಸಿದೆ 2 ಶರಣ ಪಾಲಕನೆಂಬೊ ಬಿರುದು ಕೇಳಿ ತ್ವರಿತದಿ ಬಂದೆನೊ ಅರಿದು ಇನ್ನು ಪರಿ ಅಪರಾಧ ಜರಿದು ಪರತರನೆ ನೋಡೆನ್ನ ಕಣ್ತೆರೆದು ಆಹ ಮರಣ ಜನನಂಗಳ ತರಿದು ಬಿಸುಟು ನಿನ್ನ ಶರಣರ ಸಂಗದಲ್ಲಿರಿಸಿ ಉದ್ಧರಿಸೆನ್ನ 3 ಸಂಸಾರ ಸಾಗರ ದೊಳಗೆ ಎನ್ನ ಹಿಂಸೆ ಮಾಡುವರೇನೊ ಹೀಂಗೆ ನಾನು ಕಂಸಾರಿ ಅನ್ಯರಿಗೆ ಬಾಗೆ ಮತ್ತೆ ಸಂಶಯವಿಲ್ಲ ಮಾತಿಗೆ ಆಹ ಹಂಸ ಡಿಬಿಕರನ್ನು ಧ್ವಂಸ ಮಾಡಿದ ಶೌರಿ ಮೂರ್ತಿ ದಿವಸ ದಿವಸದಲ್ಲಿ 4 ಭವ ಶಕ್ರಾದ್ಯಮರ ಕೈಯ ನಿರುತ ತುತಿಸಿಕೊಂಬ ಧೀರ ಶುಭ ಪರಿಪೂರ್ಣ ಗುಣ ಪಾರಾವರ ಭಕ್ತ ವಾರಿನಿಧಿಗೆ ಚಂದಿರ ಆಹ ಸ್ಮರನ ಕಾಂತಿಯ ನಿರಾಕರಿಸುವ ತೇಜನೆ ಎರವು ಮಾಡದೆ ಹೃತ್ಸರಸಿಜದೊಳು ತೋರಿ 5 ಮೊದಲು ಮತ್ಸ್ಯಾವತಾರದಿ ವೇದ ವಿಧಿಗೆ ತಂದಿತ್ತ ವಿನೋದಿ ಶ ರಧಿಯೊಳು ಸುರರಿಗೋಸ್ಕರದಿ ನೀನು ಸುಧೆಯ ಸಾಧಿಸಿ ಉಣಿಸಿದೆ ಆಹ ಅದುಭೂತ ಭೂಮಿಯ ತೆಗೆದೊಯ್ದುವನ ಕೊಂಡು ಮುದದಿ ಹಿರಣ್ಯಕನುದರ ಬಗಿದ ಧೀರ 6 ಬಲಿಯ ಮನೆಗೆ ಪೋಗಿ ದಾನ ಬೇಡಿ ತುಳಿದೆ ಪಾತಾಳಕ್ಕೆ ಅವನ ಪೆತ್ತ ವಳ ಶಿರ ತರಿದ ಪ್ರವೀಣ ನಿನ್ನ ಬಲಕೆಣೆಗಾಣೆ ರಾವಣನ ಆಹ ತಲೆಯನಿಳುಹಿ ಯದುಕುಲದಿ ಜನಿಸಿ ನೀನು ಲಲನೇರ ವ್ರÀ್ರತವಳಿದಾಶ್ವಾರೂಢನೆ 7 ಮಾನಸ ಪೂಜೆಯ ನೀ ದಯದಿ ಇತ್ತು ಶ್ರೀನಾಥ ಕಳೆ ಭವವ್ಯಾಧಿ ಕಾಯೋ ಅನಾಥ ಬಂಧು ಸುಮೋದಿ ಚತುರಾ ನನಪಿತ ಕೃಪಾಂಬುಧಿ ಆಹ ತಾನೊಬ್ಬರನರಿಯೆ ದಾನ ವಿಲೋಲನೆ ಏನು ಮಾಡುವ ಸಾಧನ ನಿನ್ನದೊ ಹರಿ8 ನಿನ್ನ ಸಂಕಲ್ಪವಲ್ಲದೆ ಇನ್ನು ಅನ್ಯಥಾವಾಗಬಲ್ಲುದೆ ಹೀಂಗೆ ಚೆನ್ನಾಗಿ ನಾ ತಿಳಿಯದೆ ಮಂದ ಮಾನವನಾಗಿ ಬಾಳಿದೆ ಆಹ ಎನ್ನಪರಾಧವ ಇನ್ನು ನೀ ನೋಡದೆ ಮನ್ನಿಸಿ ಕಾಯೋ ಜಗನ್ನಾಥ ವಿಠಲ 9
--------------
ಜಗನ್ನಾಥದಾಸರು