ಒಟ್ಟು 25 ಕಡೆಗಳಲ್ಲಿ , 12 ದಾಸರು , 24 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನ್ಮಥನಯ್ಯನ ಮನದಲಿ ಸ್ಮರಿಸಿರೊ ಮನ್ಮಥ ನಾಮ ಸಂವತ್ಸರದಿ ಪ ಸುಮ್ಮನೆ ಕಾಲವ ಕಳೆಯುವದೇತಕೆ ಬ್ರಹ್ಮನಪಿತ ನಂಘ್ರಿಗಳ ಭಜಿಸುತ ಅ.ಪ ಬಂಧು ಬಳಗ ಮಂದಿಮಕ್ಕಳೆಲ್ಲರು ಕೂಡಿ ಒಂದೆ ಸ್ಥಳದಿ ಭಜನೆಯಮಾಡಿ ಇಂದಿರಾರಮಣನ ಚಂದದಿ ಪೊಗಳಲು ಬಂದ ದುರಿತಗಳ ಪೊಂದಿಸನೆಂದೆಂದು 1 ಮಾಕಮಲಾಸನ ಲೋಕದ ಜನರಿಗೆ ತಾಕಾಣಿಸಿ ಕೊಳ್ಳದೆ ಇಹನು ಶ್ರೀಕರ ಸಲಹೆಂದು ಏಕ ಭಕುತಿಯಲಿ ಲೋಕವಂದ್ಯನ ಸ್ತುತಿಗೆ ನೂಕುವ ಅಘಗಳ 2 ಅತಿಶಯದಿಂದಲಿ ಸತಿಸುತರೆಲ್ಲರು ಪತಿತಪಾವನನ ಕೊಂಡಾಡುತಲಿ ಗತಿ ನೀನಲ್ಲದೆ ಮತ್ತೆ ಹಿತರ್ಯಾರಿಲ್ಲವೆನೆ ಸತತ ಸುಕ್ಷೇಮವಿತ್ತು ಪಾಲಿಸುವಂಥ 3 ಶ್ರಮವ ಪರಿಹರಿಸೆಂದು ನಮಿಸಿಬೇಡುವ ಭಕ್ತ ಜನರನು ಸಂತೈಸುತಲಿಹನು ಹನುಮ ಭೀಮ ಮಧ್ವಮುನಿಗಳ ಸೇವಿಪ ಮನುಜರ ಮನೋರಥಗಳನೆ ಪೂರೈಸುವೊ 4 ವತ್ಸರ ಆದಿಯಲಿ ಅಕ್ಷರೇಡ್ಯನ ಪಾದ ಕ್ಷಿಪ್ರದಿಂದಲಿ ಸೇವಿಪ ನರನ ಭಕ್ತವತ್ಸಲ ತನ್ನ ಭಕ್ತರ ಸಂಗದೊಳಿಟ್ಟು ಸಂತೈಸುವ ಸತ್ಯಸಂಕಲ್ಪ ಶ್ರೀ5 ತಾಳ ತಂಬೂರಿ ಸುಸ್ವರಗಳಿಂದಲಿ ಬಹು ನೇಮದಿಂದಲಿ ಸರುವರು ಕೂಡಿ ಗಾನಲೋಲನ ಭಜನೆಯ ಮಾಡುತ ಸತ್ಯ ಸ್ವಾಮಿಯ ಗುಣಗಳ ಪೊಗಳುವ ಸುಜನರು 6 ಸಡಗರದಿಂದಲಿ ಕಡಲೊಡೆಯನ ಗುಣ ಪೊಗಳುತ ಹಿಗ್ಗುತ ಅಡಿಗಡಿಗೆ ಕಡಲ ಶಯನ ಕಮಲನಾಭ ವಿಠ್ಠಲನೆಂದು ತೊಡರು ಬಿಡಿಸುವ ಶ್ರೀ 7
--------------
ನಿಡಗುರುಕಿ ಜೀವೂಬಾಯಿ
ಮಾರಜನಕ ನಂಬಿದೆ ನಿನ್ನ ಪಾರುಮಾಡೆನ್ನ ಪರಮಪಾವನ್ನ ಪ ಮೀರಿತು ಭವಬಾಧೆ ಸೈರಿಸೆನಿನ್ನು ಸಾರಸಾಕ್ಷನೆ ಪರಿಹರಿಸು ಮೋಹನ್ನ ಅ.ಪ ದುಷ್ಟಸಂಸಾರಸಾಗರದೊಳು ಕೆಟ್ಟ ನಿಂದೆಗಳೆಂಬ ಘನತೆರಿಗಳು ಹುಟ್ಟಿ ಏಳುತಲಿಹವು ಸಾಲಿಗೆ ಸಾಲು ಬೆಟ್ಟದಂತೆ ಮಹ ಭೀಕರದೊಳು ಎಷ್ಟಂತ ಈಸಬೇಕಿನ್ನಿದರೊಳು ಸೃಷ್ಟಿಕರ್ತ ನೀನೆ ಮೊರೆ ದಯದೊಳು 1 ವಾಸನ್ಹಿಡಿದು ಸೆಳೆದುನುಂಗ್ವವೈದಾರು ಮೋಸ ಜಲಚರಗಳ ಮೀರಿದ ತೊಡರು ಆಸೆಯೆಂಬ ಮಹ ಸೆಳವಿನ ಜೋರು ಸುಳಿ ಮಡುವು ಸಾವಿರಾರು ಈಸುವುದು ಮುಂದಕ್ಕೆ ಅಗದು ಮಾರು ಶ್ರೀಶನೆ ಪಿಡಿದೆತ್ತಿ ಕರುಣವ ತೋರು 2 ಇಂತು ಭವದ ಸಾಗರವನ್ನು ಎಂತು ದಾಟಿ ನಾ ಪಾರಾಗುವೆನು ನಿಂತುನೋಡಲು ಅಂಜಿ ಮನಸಿಗೆ ಇನ್ನು ಭ್ರಾಂತಿಬಡುತ ನಿನ್ನ ಮರೆಯ ಹೊಕ್ಕೆನು ಚಿಂತಾಯಕ ಭಕ್ತ ತೀವ್ರಬಂದಿನ್ನು ಸಂತಸದಿಂ ಪೊರೆಯೊ ಶ್ರೀರಾಮ ಎನ್ನನು 3
--------------
ರಾಮದಾಸರು
ಯತಿಗಳು, ದಾಸರು ಆಸೆಗಾರ ನಾನು ದಾಸಯ್ಯ ನಿನ್ನ ಧ್ಯಾ ನಿಸಿ ಬಂದೆನು ದಾಸಯ್ಯ ಪ ದೋಷದೂರನೆ ಎನ್ನ ಆಸೆಯ ತೀರಿಸಿ ಪೋಷಿಸು ಬೇಗನೆ ದಾಸಯ್ಯ ಅ.ಪ ಬಡತನಗಳು ಎನ್ನ ದಾಸಯ್ಯ ಇನ್ನು ಕಡೆತನಕಳಿಯಲೋ ದಾಸಯ್ಯ ಗಡಕಡಿ ಜಡಭವದೆಡರು ತೊಡರುಗಳು ಕೆಡದಪದವಿ ನೀಡು ದಾಸಯ್ಯ 1 ನುಡಿಯಂತೆ ನಡೆಕೊಡು ದಾಸಯ್ಯೆನ್ನ ಒಡಲ ಜಡರುತೊಳಿ ದಾಸಯ್ಯ ಕಡಿದು ಹಾಕಲು ಎನ್ನ ಪಿಡಿದು ನಿನ್ನಡಿಭಕ್ತಿ ಬಿಡದ ಮನವು ಕೊಡು ದಾಸಯ್ಯ 2 ಸುಂದರ ಶ್ರೀರಾಮ ದಾಸಯ್ಯ ಎನ್ನ ತಂದೆ ತಾಯಿ ನೀನೆ ದಾಸಯ್ಯ ಕುಂದುವ ಜಗದೊಳು ಬಂಧನಪಡಿಸದೆ ಕುಂದದ ಸುಖ ನೀಡು ದಾಸಯ್ಯ 3
--------------
ರಾಮದಾಸರು
ರಾಮ ರಾಮ ಹರಿ ರಾಮ ರಾಮ ಸೀತಾ ರಾಮ ರಾಮ ನುತಪ್ರೇಮ ರಾಮ ಓಂ ಪ ರಾಮ ರಾಮ ಪುಣ್ಯನಾಮ ಪಾಪವಿ ರಾಮ ಕುಜನಕುಲ ಭೀಮ ರಾಮ ಓಂ ಅ.ಪ ಶಾಮಸುಂದರ ಸುಖಧಾಮ ದಾಮೋದರ ಕಾಮಿತದಾಯಕ ಸ್ವಾಮಿ ಶ್ರೀರಾಮ ಓಂ ಸೋಮಕಸಂಹರ ಕಾಮಜನಕ ತ್ರೈ ಭೂಮಿಪಾಲಯ ನಿಸ್ಸೀಮ ರಾಮ ಓಂ 1 ಕಡಲಮಥನ ಪಾಲ್ಗಡಲನಿಲಯ ಮಹ ಕಡಲಬಂಧಕ ದಯಗಡಲ ರಾಮ ಓಂ ಜಡಜನಾಭ ಭವತೊಡರು ನಿವಾರಣ ಕಡಲಸುತೆಯ ಪ್ರಾಣದೊಡೆಯ ರಾಮ ಓಂ2 ದೋಷ ವಿನಾಶನ ಶೇಷಶಯನ ದಯ ಭೂಷಣ ಕೇಶವ ರಾಮರಾಮ ಓಂ ಭಾಸುರಕೋಟಿಪ್ರಕಾಶ ಅಪ್ರಮೇಯ ಸಾಸಿರನಾಮಕ ರಾಮ ರಾಮ ಓಂ3 ಭಕ್ತಾಂತರ್ಗತ ಭಕ್ತವತ್ಸಲ ನಿತ್ಯ ನಿರ್ಮಲಾತ್ಮ ರಾಮ ರಾಮ ಓಂ ಸತ್ಯ ಸರ್ವೋತ್ತಮ ಮೃತ್ಯು ವಿಜಯ ನಿಜ ಸತ್ಯಸಂಕುಲಧಾಮ ರಾಮ ರಾಮ ಓಂ 4 ಜಾನಕಿರಮಣ ದೀನ ಪಾಲನ ದಾನವಾಂತಕ ಹರಿ ರಾಮ ಓಂ ಧ್ಯಾನದಾಯಕ ಜಗತ್ರಾಣ ಪ್ರವೀಣ ಮಮ ಪ್ರಾಣೇಶ ಶ್ರೀರಾಮ ನಮ:ನಮ:ಓಂ 5
--------------
ರಾಮದಾಸರು
ಶ್ರೀ ಶ್ರೀಪಾದರಾಜರು ಧರೆಯೊಳು ಮೂರೇಳು ಕುಮತರ ಭಾಷ್ಯವಕಿರುಕು ಹಾವಿಗೆ ಎಂದದಿ ರಚಿಸೆಚರಣದಿಂದಲಿ ತುಳಿದು ಶತ್ರು ಖಳರಾ ಕರೆದುಮೊರೆಯಿಡುತಿವೇ ಶಾಸ್ತ್ರಸೆರೆಯ ಬಿಡಿಸೀರೆಂದು ಪ . . . ಹರಿಪ್ರೀತಿಗಾಗೆ ನಿರ್ಮಿಳ ಸುಕೃತಂಗಳಾಧರಿಸಿದಾ ಕುಸುಮಪರಿಮಳಂಗಳಾನರನೊಬ್ಬ ದೂಷಿಸೆ ಕೇಳಿ ಸರ್ವವನುಳುಹೆಅರಕ್ಷಣದಿ ಅವನ ತನು ಬಿರಿಯೆ ರಕ್ಷಿಸಿದೆ 2 ಸುರನಾಥಪುರಕಂದು ಘನ ಪುಷ್ಪವಿಮಾನದಿಸರಿವುತ್ತಲಿರೆ ರಘುನಾಥೇಂದ್ರರವರಯೋಗಿ ವೃಂದಾವನ ಪ್ರದಕ್ಷಿಣೆ ಗೈಸಿಕರೆದು ಭಾಷಿಸಿ ಕಳುಹಿದಾಶ್ಚರ್ಯ ಚರಿತಾ 3 ಸರಸಿಜಾಕ್ಷನ ಧ್ಯಾನದೊಳಿರೆ ವ್ಯಾಸಮುನಿಯಾಉರಗ ಬಂಧಿಸಲು ಧ್ಯಾನದೊಳೀಕ್ಷಿಸಿಮರುತ ವೇಗದಿ ಪೋಗಿ ಫಣಿಪನೊಡನೆ ಭಾಷಿಸಿತೊಡರು ಬಿಡಿಸಿದ ಅಹಿಪಾಶವ ಗುರುರಾಯ 4 ಸಿರಿಕೃಷ್ಣ ಪದಕಂಜಭೃಂಗನೆಂದಿನಿಸುವವರ ಹೇಮವರ್ಣತೀರ್ಥರ ಕುವರಸುರನರೋರುಗರೋಳು ಪ್ರಖ್ಯಾತರೆನಿಸುವಅರಿಶರಭ ಭೇರುಂಡನೆನಿಪ ಶ್ರೀಪಾದರಾಯ 5
--------------
ವ್ಯಾಸರಾಯರು
ಸನ್ನುತ ವಿಠಲ | ಇವನ ಪೊರೆಯೋ ಪ ಅವಿಕಾರಿ ಆದ್ಯ ನಿರ | ವದ್ಯ ಎಲೊ ಹರಿಯೆ ಅ.ಪ. ತೈಜಸನೆ ನೀನಾಗಿ | ಮಾಜದಲ್ಯುಪದೇಶಯೋಜಿಸುವೆನೆಂದೆನುತ | ಪೇಳ್ದುದಕ್ಕಾಗೀಆರ್ಜವದ ಮನದಲ್ಲಿ | ಪ್ರಾರ್ಥಿಸಲು ಸ್ವಪ್ನದಲಿಯೋಚಿಸಿಹೆ ಅಂಕಿತವ | ಹೇ ನೈಜಮೂರ್ತೇ 1 ಚಿಣ್ಣನಿರುವನು ಇವನು | ಕಣ್ಣೆಗೆವೆಯಂದದಲಿಇನ್ನೀವನ ಕಾಯುವುದು | ಬನ್ನಬಡಿಸದಲೇಅನ್ನ ಆರೋಗ್ಯಕ್ಕೆ | ನಿನ್ನನೆ ಮೊರೆಯಿಡಲಿಅನ್ಯ ಹಂಬಲ ನೀಗೊ | ಪನ್ನಂಗ ಶಯನಾ 2 ತೊಡರು ಬರಲಿ | ಬಿಡದೆ ನಿನ್ನಂಘ್ರಿಯನುಧೃಡಭಕ್ತಿಯಿಂ ಸ್ಮರಿಪ | ಮುದ ಮನವ ನೀಯೋ |ಎಡಬಲದಿ ನೀನಾಗಿ | ಬಿಡದೆ ಬೆಂಬಲ ವಿರಲುಕಡು ಭವಾರ್ಣವವೆಲ್ಲ | ಅಡಿಯ ಪರಿಮಿತಿಯೋ 3 ಸಿರಿ ವಾಯು ಮೊದಲಾದಸುರರೆಲ್ಲ ಹರಿಯ ಕಿಂಕರರೆಂಬ ಮತಿಯಿತ್ತುಪೊರೆವುದಿವನನ ಎಂದು | ಹರಿಯೆ ಭಿನ್ನವಿಪೆ 4 ನಾಮ ಸ್ಮರಣೆ ಯೆಂಬ | ವಜ್ರಕವಚವ ತೊಡಿಸಿಈ ಮಹಾ ಕಲಿಯುಗದಿ | ಸಾಧನವ ಗೈಸೋಶ್ರೀ ಮನೋಹರ ಗುರು | ಗೋವಿಂದ ವಿಠಲಯ್ಯಈ ಮಹತ್ತುಪಕಾರ | ನಾ ಮರೆಯನಯ್ಯ 5
--------------
ಗುರುಗೋವಿಂದವಿಠಲರು
ಸುಳಾದಿ ರಾಗ :ಸಾರಂಗ ಧ್ರುವತಾಳ ಬಿನ್ನಪವ ಮಾಡುವೆ ಯಜ್ಞ ಶ್ರೀನಿವಾಸ ನಿನ್ನ ಶರಣಗೆ ಹಲವು ಹಂಬಲ ಸಲ್ಲ ಇನ್ನು ತಾನೊಮೊಮ್ಮೆ ಬಯಸಿದೇ ಭಕುತಿಗೆ ಅನ್ಯಥಾವಾಗದಂತೆ ಬಯಸಿಕೊಳಲಿ ಮನ ಚಿನ್ನರ್ಗೆ ಫಲವಿತ್ತೆ ಓದು ಪೇಳುವ ತೆರ ಚನ್ನಾಗಿ ನೀನೆವೇ ಫಲವನ್ನು ಒಲಿದಿತ್ತ ವಾಕು ಆದರಿಸೊ ವಾಸುದೇವವಿಠಲ 1 ಮಟ್ಟತಾಳ ತೋಂಡರ ಮಾತುಗಳ ಪುಸಿಗೊಳಿಸಲಿ ಬೇಡ ದಿಂಡೇರ ಕೈಯಿಂದ ನೋಯಗೊಳಿಸದಿರೊ ಅಂಡಜವಾಹನ ಬಿರುದು ನಿನ್ನದು ನೋಡು ಕೊಂಡಾಡುವೆ ವಾಸುದೇವವಿಠಲರೇಯ ತೋಂಡರ ಮಾತುಗಳ ಪುಸಿಗೊಳಿಸಲಿ ಬೇಡ 2 ತ್ರಿವಿಡಿ ತಾಳ ಆವಾವ ಆಶ್ರಮವನ್ನು ಒಲಿದಿತ್ತು ನೀನೇವೆ ಆವಾವ ಬಗೆಯಲ್ಲಿ ಸಾಧನ ಮಾಡಿಸೊ ಆವಾವ ಬಗೆಯಲ್ಲಿ ಬಲ್ಲ ಸರ್ವಜ್ಞನೆ ಆವಾವ ವಿಧದಿಂದ ಬಿನ್ನೈಪುದೇನೆಲೊ ಕಾವ ಕರುಣಿ ವಾಸುದೇವವಿಠಲರೇಯಾ ಆವಾವ ಬಗೆಗಳ ಬಿನ್ನೈಪುದೇನಯ್ಯಾ 3 ಅಟ್ಟತಾಳ ಕೊಡಗೈಯ್ಯ ದೊರೆ ಎಂದು ನಂಬಿಲ್ಲಿಗೆ ಬಂದ ಬಡನಡವಳ ನೀನು ಕಡೆಗೆ ನೋಡುವರೇನೊ ತೊಡರುಗಳಿದ್ದರು ಬಿಡಿಸುವ ಬಗೆ ಬಲ್ಲ್ಯೋ ತಡೆಕೊಡುವ ದೋಷ ಒಡೆಯ ನಿನ್ನೆದುರಿಗೆ ಅಡರಿ ನಿಲ್ಲುವದುಂಟೆ ಆವಾವ ಕಾಲಕ್ಕೆ ಪೊಡವಿಯ ತಳದಲ್ಲಿ ಪುಟ್ಟಿ ಸಾಧನಗಳು ಪಡಿಯಲಿಬೇಕೆಂಬ ಭಕುತ ಜನರುಗಳು ಕಡಿಮೇನೊ ಅವರೊಶ ಮಾಡಿಸೊ ಭಕ್ತರ ಬಿಡಿಯ ಬಿರುದಿನ ವಾಸುದೇವವಿಟ್ಠಲ 4 ಆದಿತಾಳ ಒಂದೊಂದು ಕೊಡಲು ಮತ್ತೊಂದು ಕೊಡಲಿ ಎಂದು ಸಂದಣಿಸುತಲಿವೆ ವಿಷಯಗಳೊಂದು ತಂದೆ ತಡಮಾಡಬೇಡವೊ ಅದರಿಂದ ಒಂದೆ ಸಾಧನ ಬಹಳಾಗುವದೊ ಇಂದಿರೇಶ ಬಯಸಿದೆ ನಿನ್ನಲ್ಲಿ ಬಂದು ಒದಗಿಸೊ ವಾಸುದೇವವಿಠಲ 5 ಜತೆ ಕರುಣಾಳು ಸ್ವಾತಂತ್ರ ವಾಸುದೇವವಿಠಲ ಸರ್ವಜ್ಞ ನಿನಗೆ ಮೊರೆ ಇಡೊದಿದೆ ಚಿತ್ರ 6
--------------
ವ್ಯಾಸತತ್ವಜ್ಞದಾಸರು
ಹೆಂಡತಿ ನೋಡಣ್ಣ ಈಕಿನ ನ್ನ್ಹೆಂಡತಿ ನೋಡಣ್ಣ ಪ ಮಂಡೆಮುಸುಕು ತೆಗೆದ್ಹಿಂಡುಜನರ ಮುಂದೆ ಬಂಡುಮಾಡಿ ಎನ್ನ ಬೈಲಿಗೆ ತರುವಳು ಅ.ಪ ಕಂಡದ್ದು ಬೇಡುವಳು ತರದಿರೆ ಗಂಡನಲ್ಲೆಂಬುವಳು ತಿಂಡಿಗಾಗಿ ಎನ್ನ ಕಂಡವರ ಕಾಲ್ಹಿಡಿಸಿ ಮಿಂಡೆ ಭಂಡ 1 ಮಾತುಮಾತಿಗಿವಳು ಎನ್ನನು ಕೋತ್ಯಂತೆ ಕುಣಿಸುವಳು ಸೋತೆನೆಂದ್ಹೇಳುತ ಪಾತಕದ್ಹಾಕೆನ್ನ ನೀತಿಗೆಡಿಸುವಳು ಭೀತಿಲ್ಲದ 2 ಒಯ್ಯಾರ ಮಾಡುವಳು ಬೈದರೆ ಬಾಯಿ ತೆರೆದಳುವಳು ಬಾಯಿ ಮುಚ್ಚೆಂದರೆ ಕೈಬಿಟ್ಟೋಡ್ವಳು ದಾಯಾದಿಗಳು ಮುಂದೆ ಹೊಯ್ಮಾಲಿ 3 ತೊಡರು ಬಿಡಳು ಒಡಲಿನ ಕೆಡಕುಗುಣವ ಕಡಿಯಳು ಅಡಿಗಡಿಗೆನ್ನನು ದುಡುಕು ನುಡಿದು ಮನ ಮಿಡುಕಿಸುವಳು ಬಾಯ್ಬಡಕಿ ಬಿಡಿಕಿ 4 ಒದಗಿಸಿ ನಾಂ ತರಲು ಅದರೊಳು ಕದಿದರ್ಧ ತಿನ್ನುವಳು ಪದುಮನಾಭ ನಮ್ಮ ಸದಯ ಶ್ರೀರಾಮನ ಪಾದ ಕೃಪೆಯ ಪಡೆಯದಧಮ 5
--------------
ರಾಮದಾಸರು
ಎಂದು ಹರಿಭಟರು ಕೆಡರು ಇವರಿಗೆ ಮತ್ತೆಂದಿಗಿಲ್ಲೆಡರುತೊಡರುಪ.ಘಟಜನುಕ್ತಿಯಲಿಕರಿಗಟ್ಟಿಯಾಗಿ ಪ್ರಾಣ ಸಂಕಟಬಡಲು ನಕ್ರನ ತುಟಿ ಹರಿದುಹರಿಪೊರೆದ1ಎಣಿಕೆಯಿಲ್ಲದ ಪಾಪ ಎಣಿಸಿ ಬಂದ್ಯಮನವರಹಣಿದು ವಿಪ್ರಜಾಮಿಳನ ವನಜಾಕ್ಷ ಪುರಕೊಯ್ದ 2ಮುನಿ ಕನಲಿ ಅಂಬರೀಷನ ದಣಿಸುತಿರೆ ಚಕ್ರವನು ಕಳುಹಿ ವೈಷ್ಣವಾಗ್ರಣಿಯ ಛಲ ಗೆಲಿಸಿದನು 3ಕಪಟಿ ಕೌರವ ಪಾಂಡುನೃಪಜರನು ಬೆಂಕೊಳಲುಕುಪಿತನಾಗಲೆ ಬಂದು ಕೃಪೆಯಿಂದ ಕಾಯ್ದ ಗಡ 4ಶ್ರೀಪ್ರಸನ್ವೆಂಕಟನ ಶ್ರೀಪದವ ನಂಬಿದರೆಶಾಪ ಪಾಪೋಗ್ರಸಂತಾಪವೇನು ಮಾಡುವುವು 5
--------------
ಪ್ರಸನ್ನವೆಂಕಟದಾಸರು