ಒಟ್ಟು 8611 ಕಡೆಗಳಲ್ಲಿ , 132 ದಾಸರು , 4839 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎನ್ನ ಮೊರೆಯ ಕೇ¼ಬಾರದೆ ಹೇ ಶ್ರೀನಿವಾಸ ಪ ಎನ್ನ ಮೊರೆಯ ಕೇಳದಿರೆ ಎನ್ನನಿವರು ಬದುÀಕಿಸರು ಇನ್ನು ಮಾಡಲೇನು ಎಂದು ನಿನ್ನ ಪದಕೆ ಸಾರಿದೆನು ಅ.ಪ ಇಬ್ಬರ್ರಮಣ ನಿನ್ನ ಪಾದ ಉಬ್ಬಿಮನದಿ ಭಜಿಪ ಎನಗೆ ಮಬ್ಬುಗವಿದು ತಾವು ಎನ್ನ ಮೊಬ್ಬಿನೊಳಗೆ ಕೆಡವಿದರೊ 1 ಅನ್ಯವಾರ್ತೆಬಿಟ್ಟು ನಾನು ನಿನ್ನ ಗುಣವ ಕೇಳ್ವೆನೆನಲು ನಿನ್ನವಾರ್ತೆಬಿಡಿಸಿ ತಾವು ಅನ್ಯವಾರ್ತೆ ಕೇಳಿಸೋರು 2 ನಿನ್ನ ನಾಮಸ್ತೋತ್ರಗಳು ಮನ್ನದಿಂದ ಪಠಿಪೆನೆನಲು ಎನ್ನ ಮಾತುಸಾಗಗೊಡದೆ ತಮ್ಮ ಮಾತು ಸಾಗಿಸುವರು 3 ನಿನ್ನ ಪಾದಕಮಲಗಂಧವನ್ನು ಗ್ರಹಿಪೆನೆನಲು ಎನಗೆ ಚೆನ್ನಗಂಧ ಬಿಡಿಸಿ ತಾವು ಘನ್ನದುರ್ಗಂಧ ಕೊಡುವರೋ 4 ನಿನ್ನಭಜಕರಂಗಸಂಗವನ್ನು ಮಾಳ್ಪೆನೆನಲು ಅದ ನನ್ನು ಬಿಡಿಸಿ ಪರರಾದವನ್ನು ತೇರ ಕೂಡಿಸೋರು 5 ನಿನ್ನ ಚಕ್ರ ಶಿಲಾಸ್ಪರ್ಶವನ್ನು ಮಾಳ್ಪೆನೆನಲು ಅದ ನನ್ನು ಬಿಡಿಸಿ ನೀಚÀಜನಾರನ್ನು ಸ್ಪರ್ಶಮಾಡಿಸೋರು 6 ನಿನ್ನ ಮನಿಗೆ ಬರುವ ಎನ್ನ ಚೆÉನ್ನವಾಗಿ ಕರೆದು ತಾವು ಅನ್ಯಮನಿಗೆ ವೈದು ಬಹಳ ಬನ್ನಬಡಿಸುವರಯ್ಯಾ 7 ಅನ್ಯಮನಿಗೆ ಪೋಗದಲೆ ಎನ್ನ ಮನೆಯ ಒಳಗೆ ನಾನು ಅನ್ನವಸನ ದಿಂದ ಇರಲು ಅನ್ಯಸದನಕೆಳದು ವೈವ 8 ಕಠಿಣ ಜನರು ಅªರು ಬಹÀಳ ಸಟೆಯುಅಲ್ಲವೆನ್ನ ಮಾತು ಥಟನೆ ಗುರುಜಗನ್ನಾಥವಿಠಲರೇಯ ಲಾಲಿಸೀಗ 9
--------------
ಗುರುಜಗನ್ನಾಥದಾಸರು
ಎಲ್ಲ ತಾಪತ್ರಯದ ಚಿಂತೆ ಬಗಳಗೆ ಹತ್ತಿಹುದುಸೊಲ್ಲು ಸೊಲ್ಲಿಗೆ ನೆನೆವ ಚಿಂತೆ ಎನಗೆ ಹತ್ತಿಹುದು ಪ ಮಡದಿ ಸುತರು ಮನೆಯ ಪಶುವು ಬಗಳೆಗೆ ಹತ್ತಿಹುದುಷಡು ಚಕ್ರಂಗಳ ಭೇದಿಪುದೆಲ್ಲಾ ಎನಗೆ ಹತ್ತಿಹುದುಕೊಡು ಕೊಳ್ಳುವುದು ಹಾಕುವುದೆಲ್ಲಾ ಬಗಳೆಗೆ ಹತ್ತಿಹುದುಎಡೆದೆರಪಿಲ್ಲದೆ ನಾದವ ಕೇಳುವುದೆನಗೆ ಹತ್ತಿಹುದು 1 ನಿತ್ಯ ನಿತ್ಯದ ಪರಾಮರಿಕೆಯು ಬಗಳೆಗೆ ಹತ್ತಿಹುದುಮತ್ತೆ ಭ್ರೂಮಧ್ಯದ ಅರಿವೆಯ ಹುಚ್ಚು ಎನಗೆ ಹತ್ತಿಹುದುಬಿತ್ತಿ ಬೆಳೆಯುವುದು ಮಳೆಯಿಲ್ಲೆಂಬುದು ಬಗಳೆಗೆ ಹತ್ತಿಹುದುಎತ್ತೆತ್ತಲು ತಾ ಬೆಳಕ ನೋಡುವುದು ಎನಗೆ ಹತ್ತಿಹುದು 2 ಭಕುತರ ಬದುಕನು ಹಸನು ಮಾಡುವುದು ಬಗಳೆಗೆ ಹತ್ತಿಹುದುಭಕುತಿಯ ಶರಧಿಲಿ ಮುಳುಗಾಡುವುದು ಎನಗೆ ಹತ್ತಿಹುದುಸದಾ ಕಾಲವು ಕಾದಿರುತಿಹುದು ಬಗಳೆಗೆ ಹತ್ತಿಹುದುಚಿದಾನಂದ ಶ್ರೀ ಬಗಳೆಯ ಭಜಿಪುದು ಎನಗೆ ಹತ್ತಿಹುದು 3
--------------
ಚಿದಾನಂದ ಅವಧೂತರು
ಕಂಡಿರೆ ಬಗಳಾಶ್ಚರ್ಯವ ಕಂಡಿರೇ ಬಗಳಾಶ್ಚರ್ಯವದಿಂಡೆಯರಾದವರನ್ನೆಲ್ಲ ತುಂಡು ಮಾಡಿಶುಂಭ ನಿಶುಂಭರಸುವ ಕೊಂಡವಳ ಪ ಕ್ರೂರ ಧೂಮ್ರಾಕ್ಷ ಶುಂಭರಾಜನ ನೇಮದಿಂದಸಾರಿ ದೇವಿಯನ್ನು ಮುಂದಲೆ ಹಿಡಿದು ಎಳೆವೆನೆನಲುವೀರಳೀಗ ಕೇಳಿ ಅವಡುಗಚ್ಚಿ ಕಣ್ಣು ತೆರೆಯೆಹಾರಿದನು ಧೂಮ್ರಾಕ್ಷನುರಿದು ಭಸ್ಮವಾದನು1 ಚಂಡ ಮುಂಡಗಪ್ಪಣೆಯನುದ್ದಂಡ ಶುಂಭನೀಗ ಕೊಡಲುಖಂಡೆಯವನೆ ಹಿರಿದು ಮುಂಕೊಂಡು ದೇವಿ ಬಲಕೆ ನಿಂದುಗುಂಡೆಯರ ಕೂದಲು ಹಿಡಿದು ತುಂಡು ಮಾಡಿಯೆ ತಿಂದುಚಂಡ ಮುಂಡರ ತಲೆಯ ಖಂಡಿಸಿದ ವೀರಳ 2 ರಕ್ತ ಬೀಜನ ರಕ್ತದಿಂದ ರಕ್ತಬೀಜರಾಗೆರಕ್ತನಯನಿ ಹಾಸಿದಳು ನಾಲಿಗೆಯ ಭೂಮಿಗೆರಕ್ತ ಬೀಜರನ್ನು ಕಡಿದು ನುಣ್ಣಗೆ ನುಂಗಿ ಆದಿ-ರಕ್ತ ಬೀಜನನ್ನು ಶೂಲದಿಂದ ತಿವಿದು ತಿಂದಳು 3 ಅಂಬನ ಮೇಲೆ ನಿಶುಂಭನೆರಡು ಹಸ್ತ ಹೋಗಿಎಂಬೆನೇನು ಒದಯಲಾಗ ಅಂಬುಜಾಕ್ಷಿ ತೊಡೆಯ ಕಡಿಯೆತುಂಬಿ ಕೋಪದಿಂದಲವನು ತಿಂಬೆನೆಂದು ಮುಂದೆ ಬರಲುಅಂಬಿನಿಂದ ತಲೆಯ ಕಳೆದಳಂಬರದಲುಘೇ ಎನಲು 4 ತಕ್ಕೆಯಲ್ಲಿ ಬಿದ್ದು ದೆಕ್ಕಬುಕ್ಕಿಯಾಡೆ ಶುಂಭನನ್ನುನಕ್ಕು ಶಿವನ ಶೂಲದಿಂದಲಿಕ್ಕಿದಳು ಖಳನ ಎದೆಯಉಕ್ಕಿ ಹರುಷ ದೇವತೆಗಳು ಓಲಗವನೆ ಮಾಡಿದರುದುಃಖಾತೀತ ಚಿದಾನಂದ ತಾನಾದ ಬಗಳೆಗೇ5
--------------
ಚಿದಾನಂದ ಅವಧೂತರು
ಕಂಡೆ ಕಂಡೆ ಮುಚುಕುಂದವರದ ಮು- ಕುಂದ ಮೂಡಲಗಿರಿ ಗೋವಿಂದನ ಪ ಶರಧಿ ಬಿಟ್ಟು ಈ ಗಿರಿಯಲ್ಯಾಕೊ ನೀ ತೆರೆದ ಕಣ್ಣು ನಾರುವಮೈಗೆ ಬಿಳಿಯ ಕರ್ಪುರ ಪರಿಮಳದ ಸುವಾಸನೆಗೆ ಜರಿದು ಬಂದೆ ನಿನ್ನ ಪರಿಯ ನಾ ಬಲ್ಲೆ 1 ಛಲನ ಮೇಲೆ ನಿನ್ನ ಛಲವು ಯಾಕೊ ನೀ ಸುರರಸುರರ ಕೈಯಲಿ ಸಿಕ್ಕು ಭಾರ ತಿರುಗನುಪಕಾರ ಗಿರಿರಾಜನು ನಿನ್ನ ಸರಿಯೆಂದೆನಿಸುವ 2 ಬಲ್ಲೆ ಬಲ್ಲೆ ಕೋರ್ಹಲ್ಲುಗಳಿಂದ ಮೆಲ್ಲುತ ಬೇರನವಲ್ಯವನು ಎಲ್ಲ ನೀಗಿ ದಧ್ಯಾನ್ಯ ನೈವೇದ್ಯ ಚೆಲ್ವ ಧರಣಿಪತಿ ಬಲ್ಲಿದ ವರಾಹನ 3 ಕಂಬ ಒಡೆದು ಕರುಳ್ಹಾರವಲ್ಲದೆ ಕಂಡು ಅಜನ ಕಂಠಾಭರಣ ನೊಂದ ಮೈಗೆ ಪುನುಕಾಪು ಮಜ್ಜನ ತಾಂಬೂಲ ಮಂಚ ಸುಪ್ಪತ್ತಿಗೆಶಯನ 4 ದಾನ ಬೇಡಿದ ನೆಲ ಭೂಮಿಯ ಬಿಟ್ಟುರ- ಗಾದ್ರಿಯಲಿರುವುದು ಉಚಿತವಲ್ಲ ಸಾಧಿಸಿ ಬಲಿಯ ಪಾತಾಳಕೆ ಮೆಟ್ಟಿದ ಪಾದ ತೋರದಲಾಚ್ಛಾದನ ಮಾಡಿದಿ 5 ಪೊಡವಿದಾನ ನೆಲಬಿಡದೆ ಕೊಟ್ಟು ಅಡವಿ ಗುಡ್ಡದಲ್ಲಾವಾಸ ಕೊಡಲಿಪಿಡಿದು ತನ್ನ ಹಡೆದ ಮಾತೆಶಿರ ಕಡಿದ ಕೈ ಕೆಳಗೆ ಮಾಡ್ಹಿಡಿದಸುರನ 6 ಹೆತ್ತಜನಕ ಮನೆಬಿಟ್ಟು ಹೊರಡಿಸೆ ಉಟ್ಟ ನಾರ್ವಸÀ್ತ್ರ ಸಹಿತಾಗಿ ಲಕ್ಷ್ಮಿ ಲಕ್ಷಿಟ್ಟು ಬಂದ್ವಕ್ಷ ಸ್ಥಳದಲ್ಲಿರೆ ಅಷ್ಟಪದವಿಗಧಿಕಾರಿ ಎನಿಸಿದಿ 7 ಗೊಲ್ಲರೇಶ ಎಲ್ಲರಿಗುತ್ತಮನೆಂದು ಬಲ್ಲಿದಮುನಿ ಪಾದದ್ವೊದೆಯೆ ಕೊಲ್ಲಾಪುರ ಮನೆಮಾಡೆ ಮಹಾಲಕ್ಷುಮಿ ನಿಲ್ಲದೆ ಬಂದ್ವಾಲ್ಮೀಕವ ಸೇರಿದೆ 8 ಸಾರಿ ಹೇಳಿ ನೀ ನಿಗಮವ ನಿಂದ್ಯಮಾಡಿ ನಾರಿಯರ ವ್ರತವಳಿದು ಮಾರಜನಕ ಅಭಿಮಾನ ಬಿಟ್ಟರೆ ಅ- ಪಾರಮಹಿಮ ನಿನ್ನ ನೋಡಿ ನಗುವರೊ 9 ದೊರೆ ನಿನ್ನ ದರುಶನಕೆ ತ್ವರಿತದಿ ಜನರು ಮೂವತ್ತು ಗಾವುದ ಮೂರ್ಹೆಜ್ಜೆಯ ಮಾಡಿ ತುರಗನೇರ್ಹಾರಿಸಿ ಗಿರಿಯ ಬಿಟ್ಟೂ ್ಹೀದರೆ ವರದ ವೆಂಕಟನ್ಹಿಂದೆ ತಿರುಗುವರ್ಯಾರೊ 10 ನಿನ್ನ ನಾಮವ ತಂದೆನ್ನ ಜಿಹ್ವಕೆ ಚೆನ್ನವಾಗಿ ಬಂಧನ ಮಾಡೆ ಘನ್ನ ಮಹಿಮ ಭೀಮೇಶಕೃಷ್ಣ ಬಂದು ಕಣ್ಣಿಗೆ ಸುಳಿವ ಪ್ರಸನ್ನವೆಂಕಟನ 11
--------------
ಹರಪನಹಳ್ಳಿಭೀಮವ್ವ
ಕಣ್ಣು ಮುಚ್ಚಿದರೂ ಕಾಣ ಬರುತಿದೆ ಪ್ರಣವ ಸ್ವರೂಪ |ಭೃಕುಟಿ ಮಧ್ಯದಲಿ ಪ್ರಕಟವಾಗಿದೆ ಉದಯವಾಗಿ ರೂಪ ಪ ನಾಸಿಕಾಗ್ರದಲಿ ವಾಸವಾಗಿದೆ ಬೀಸುವ ಗಾಳಿಗೆ ಭಿನ್ನವಿಲ್ಲದೆ |ಏಸೇಸು ದಿನ ತಪವ ಮಾಡಿದರೂ ಯೋ- ಗೇಶ್ವರ ಮುನಿಗೆ ದುರ್ಲಭ 1 ಝೇಂಕರಿಸುವದಾ ನಾದ ನೆತ್ತಿಯೊಳು ಓಂಕಾರ ಶಬ್ದವು ಶೂನ್ಯವಾಗದೆ |ಶಂಕರ ಸ್ವರೂಪ ತಿಳಿದ ದತ್ತನ ಬೀಜಮಂತ್ರ ಅಂಕುರದಿಂದೆ2
--------------
ಭೀಮಾಶಂಕರ
ಕನಸ ಕಂಡೆ ನಿನ್ನಿನಿರುಳೊಳು ಕೇಳುಕನಸಿನ ಸೊಗಸನು ತರಳೆಚಿನುಮಯಾತ್ಮಕ ಚಿದಾನಂದ ಅವಧೂತದಿನಕರ ಪ್ರಭಾತೀತ ಗುರುನಾಥ ಬಂದಿಹ ಪ ಕಾಶ ಕೌಪೀನವನುಟ್ಟು ಚೆಲ್ವಬಾಸುರ ಕುಂಡಲವಿಟ್ಟುಕೇಶದ ಜಡೆಗಳು ಥಳಥಳಿಸಲು ಸರ್ವಭೂಷಿತನಾಗಿ ತನ್ನೆದುರಿಗೆ ನಿಂತಿಹ 1 ನೆಟ್ಟನೆ ನಡುಮನೆಯೊಳು ತಾನುನೆಟ್ಟನೆ ಬಂದು ಕುಳಿತಿಹನುಶಿಷ್ಟ ಮೂರುತಿ ತನ್ನ ಕಾಯಬೇಕು ಎಂದುಮುಟ್ಟಿ ಪಾದವ ನಾನು ಶರಣು ಮಾಡಲಿದ್ದೆ2 ಸುಂದರ ಕಳೆಯುಳ್ಳ ಸ್ವಾಮಿತಾನು ಸಿಂಧು ಕೃಪಾಕರನಾಮಿ ಎಂದಡಿಗಡಿಗೆ ಸಾಷ್ಟಾಂಗವೆರಗಿನಿಂದು ಪೂಜಿಸಿ ಕಣ್ತುಂಬ ನೋಡಿನಲಿವ 3 ನಾನಾ ಪೂಜೆಯನೆಲ್ಲವ ಮಾಡಿ ಗುರುಧ್ಯಾನದಿನಾನೋಲಾಡಿ ಮಾನವನಾಗಿನಾನು ನಿಂದಿರಲೆನ್ನ ಕಿವಿಯೊಳುನಾನು ನೀಗಿತ್ತೆಂದು ಉಪದೇಶ ನೀಡುವ4 ಈಪರಿ ಕನಸನು ಕಂಡು ಎಲ್ಲತಾಪವು ಪರಿಹಾರಗೊಂಡುಭೂಪ ಚಿದಾನಂದ ಅವಧೂತ ತಾನಾದರೂಪಾಗಿ ಬೆಳಗಿರೆ ಬೆಳಗಿರೆ ಬೆಳ್ಳನೆ ಬೆಳಕಿತ್ತು5
--------------
ಚಿದಾನಂದ ಅವಧೂತರು
ಕರುಣವೇಕೆ ಬಾರದಯ್ಯ ಧರಣಿಜಾಪ್ರಿಯಾ ಪ ಶರಣಜನರ ಪೊರೆವನೆಂಬ ಬಿರುದ ಪೊತ್ತವನಾಗಿರಲೆನ್ನೊಳು ಅ.ಪ ಕೂಗಲಾಕ್ಷಣ ಓಡಿಪೋದೆ ರೋಗವ ನಂದಿಸಿದಾತನೆ || ಯೆನ್ನೊಳು || 1 ಕರವ ಪಿಡಿಯೆ ಕರೆದರಾರು | ಕಿರಿದು ತಾಯ ದುರಾಸೆ ಮನ್ನಿಸಿ ಭರದಿ ವನಕೆ ಪೋದವನೆ ||ಯೆನ್ನೊಳು || 2 ಭೂಮಿಜೆಯರಸ ಮಾಂಗಿರಿರಂಗ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕೇಳಯ್ಯ ರಂಗಯ್ಯ ಪ ತಮ್ಮವರೆಂದು ತಾಳಿ | ಸುಮ್ಮನಿರುವವರಲ್ಲ ||ಹಮ್ಮಿಲಿ ಹರಿಸಿ ಬಂದು ನಮ್ಮನೆ ದೂರುವರೋ 1 ಮೊಸರನ್ನೆಲ್ಲ ಸುರಿದಾನೆಂದುಸುರು ಹಾಕಿದರೆ |ನಮ್ಮ ಹೆಸರಿಗೆ ಮರಗಿ ಮುಖವು ಹಸಿರಿಡುದಯ್ಯಾ 2 ಬಾಲಕರ ಹೆಗಲನೇರಿ | ಪಾಲನೆಲ್ಲವಕಿತ್ತೆಳೆದು |ಬಾಲೇರ ಬಳಲಿಸುವದು ಬಾಲ ಬೇಕೇನೋ 3 ಸರಿಯಿಲ್ಲದವರ ಕೂಡ | ಮರೆಯಿಲ್ಲದೆ ಮಾತಾಡಿ |ಸೆರಗ ಸೆಳೆದರೆ ನಮ್ಮ ಹಿರಿಯತನವೇನೋ 4 ಚಿಕ್ಕತರದವರು ನಮಗೆ | ಸೊಕ್ಕಿನವನೆಂಬುವರು |ರುಕ್ಮಭೂಷಗೆ ಈ ಮಾತು ತಕ್ಕದಹುದೇನೋ 5
--------------
ರುಕ್ಮಾಂಗದರು
ಗಜಮುಖ ಗಣಪನಂಬುಜಪಾದಕ್ಕೆರಗುವೆ ನಿಜವಾದ ವರವ ನಾ ಬೇಡಿಕೊಂಬೆ ಅಜನರಸಿಗೆ ಅತಿ ಭಕ್ತಿಂದೆ ಭಜಿಸುವೆ ತ್ರಿಜಗವಂದಿತನ ಕತೆಯ ಪೇಳ್ವೆನು 1 ಗೋಕುಲದೊಳಗೆಲ್ಲ ಗೋಪಾಂಗನೇರು ಕೂಡಿ ಏಕವಾಗಿ ಮಾತನಾಡಿಕೊಂಡು ತಾವು ಅ- ನೇಕ ಸಂಭ್ರಮದಿಂದ ಆಡಿ ನೀರಾಟವ ಬೇಕಾದೂಟವನುಂಡು ಬರುವೋಣೆಂದು 2 ಘೃತ ಪರಮಾನ್ನವು ಚಕ್ಕುಲಿ ಗಿಲುಗಂಜಿ ಗುಳ್ಳೋರಿಗೆ ಬುಂದ್ಯ ಭಕ್ಷ್ಯ ಮಂಡಿಗೆ ಫೇಣಿ ಬುತ್ತಿ ಚಿತ್ರಾನ್ನ ಹಪ್ಪಳ ಸಂಡಿಗಂಬೋಡುಪ್ಪಿನಕಾಯಿಗಳು 3 ಕೇಸರಿ ಕುಂಕುಮರಿಷಿಣ ಅಚ್ಚಮಲ್ಲಿಗೆ ಶಾವಂತಿಗೆ ಸರವು ದಿವ್ಯ ಕರ್ಪೂರದಡಿಕೆ ಯಾಲಕ್ಕಿ ಎಲೆಯ ಸುಣ್ಣ ಪತ್ರೆ ಲವಂಗ ತಬಕಿಲೆ ತಂದರು 4 ಹೆರಳು ಬಂಗಾರ ರಾಗಟೆ ಗೊಂಡ್ಯ ಕ್ಯಾದಿಗೆ ಅರಳು ಮಲ್ಲಿಗೆ ಸಂಪಿಗೆ ಮುಡಿದು ದಿವ್ಯ ಕೊರಳ ಕಟ್ಟಾಣಿ ಸರಿಗೆ ಚಂದ್ರಹಾರ ಪು- ತ್ಥಳಿ ಪಚ್ಚಪದಕಗಳ್ಹೊಳೆಯುತಲಿ 5 ಕಡಗ ಕಂಕಣ ದ್ವಾರ್ಯ ನಾಗಮುರಿಗೆ ವಂಕಿ ಬಿಡಿಮುತ್ತಿನ ಗೊಂಡ್ಯ ಬಾಜುಬಂದು ದೊಡ್ಡ ವಾಲೆ ಸರಪಳಿ ಮುತ್ತು ಬು- ಗುಡಿ ಚಂದರ ಬಾಳ್ಯ ಹೊಳೆಯುತಲಿ 6 ಮುದ್ದು ಮೋರೆಗೆ ತಕ್ಕ ಮುಕುರ್ಯ ಬುಲಾಕನಿಟ್ಟ ವ- ಜ್ರದ್ಹರಳು ಬಲಮೂಗಿನಲಿ ದಿವ್ಯ ತಿದ್ದಿ ಮುಂಗುರುಳು ಮುತ್ತಿನ ಬೊಟ್ಟು ಕುಂಕುಮ ಪದ್ಮದ್ಹೂವಿನ ಕುಬುಸಗಳ ತೊಟ್ಟು 7 ಹರದಿಯರೆಲ್ಲರು ಪರಮ ಸುಭ್ರಮದಿಂದ ಜರದ ಪೀತಾಂಬರ್ವಜ್ಜರದ ಪಟ್ಟಿನಿಟ್ಟು ಪರಿ ಬಣ್ಣ ಸೀರೆಗಳುಟ್ಟು ಕಾಲ- ಲಿ ರುಳಿ ಕಾಲುಂಗರ ಗೆಜ್ಜೆ ಪೈಜಣವು 8 ಚೆಲ್ವೆಯರೆಲ್ಲರು ಉಲ್ಲಾಸದಿಂದಲಿ ಘುಲ್ಲು ಘಲ್ಲೆಂದು ಹೆಜ್ಜನಿಡುತ ತಾವು ಮಲ್ಲೆ ಮಲ್ಲಿಗೆ ಪುನ್ನಾಗ ಸಂಪಿಗೆ ತೋಟ ಅಲ್ಲಲ್ಲೆ ನಿಂತು ನೋಡುತ ಬಂದರು 9 ಕುಂದ ಮಂದಾರ ಸುಗಂಧಿಕ ದವನವು ಬಂಗಾರದಂಥ ಕ್ಯಾದಿಗೆಯಮಲ ಚೊಕ್ಕ ದುಂಡುಮಲ್ಲಿಗೆ ಪಾರಿಜಾತ ತಾವರೆಮೊಗ್ಗು ಚೆಂದ ಚೆಂದದ ಶಾವಂತಿಗೆ ವನವು 10 ಹತ್ತಿ ಆಲದ ಮರ ಅಡಕೆ ತೆಂಗಿನ ಮರ ಅ- ಶ್ವತ್ಥ ಕಪಿತ್ಥ ಕಿತ್ತಳೆ ಹಲಸು ನೋಡು- ತ್ತತ್ತಿ ದ್ರಾಕ್ಷಿ ನೀರಲ ನಿಂಬೆ ದಾಳಿಂಬ್ರ ಪಕ್ವಾದ ಜಂಬು ಸೀತಾಫಲವು 11 ಎಲೆದೋಟದೊಳಗೆ ಯಾಲಕ್ಕಿಗೊನೆಯು ನೋಡೆ ಕಳಿತ ಮಾವಿನ ಹಣ್ಣು ಕದಳೀ ಫಲ ಬೋರೆ ಶ್ರೀತುಳಸಿ ವನಗಳಲ್ಲೆ ಅರಿಷಿಣಂಜೂರಿ ಔದುಂಬ್ರ ಫಲ 12 ಚಕೋರ ಚಾತಕ ಗಿಳಿ ಚಕ್ರವಾಕ ಪಕ್ಷಿ ಗಿಳಿಹಿಂಡು ಗಂಡೆರಳೆ ಗರುಡ ಹಂಸವು ನೋಡೆ ಹರಿ ಬ್ರಹ್ಮ ತಂದೆ ಮಕ್ಕಳು ಏರೋವಾಹನವು 13 ಕಸ್ತೂರಿಮೃಗ ಪುನುಗಿನ ಬೆಕ್ಕು ಪಾರ್ವಾಳ ಜಕ್ವಕ್ಕಿ ಕೊಳಲ್ಹಕ್ಕಿ ಸಾರಂಗವು ಚಾರಿ ಕುಕ್ಕುಟ ಭೈರುಂಡ ಎಡಖಗ ಬಲಕ್ಕಾಗಿ ಕೊಟ್ಟವು ಶಕುನ ಜಲಕ್ರೀಡೆಗೆ 14 ಕಾಳಿಮರ್ದನ ಕೃಷ್ಣ ಹಾರಿದ ಮಡುವಿದು ಕಾಳಿಂಗನೋಡಿಸಿ ಕಳೆದ ವಿಷ ಕೆಟ್ಟ ನೋಡೆ ಅಮೃತಕೆ ಮಿಗಿಲಾಗಿದೆ ಈ ಜಲ ಏನು ಪುಣ್ಯ ಮಾಡಿದ್ದಳೊ ಯಮುನಾ 15 ನೀಲ ಮಾಣಿಕ್ಯ ಮುತ್ತು ಕೂಡಿಸಿದಂತೆ ತ್ರಿವೇಣಿ ಆ- ದಳು ತಾ ಪ್ರಯಾಗದಲಿ ತ್ರಿವೇಣಿ ಭಾಗೀರಥಿ ಸರಸ್ವತಿ ಕೂಡಿ ಸಂಗಮಳಾಗಿ ಪೋಗೋಳು ಕಾಶಿ ಪಟ್ಟಣಕೆ 16 ಕಮಲಸಖನ ಪುತ್ರಿ ಕಾಮಿತ ಫಲಕೊಟ್ಟು ವರುಣನರ್ಧಾಂಗಿ ನೀ ವರವ ಕೊಡೆ ತಾಯೆ ಯಮಧರ್ಮರಾಯನ ಭಗಿನಿ ನಿಮ್ಮ ಸ್ನಾನ- ಫಲಕೊಟ್ಟು ಪಾಲಿಸೀಗೆಂದೆನುತ 17 ನೋಡುತ ನಗುತ ಮಾತಾಡುತ ನಿಂತರು ಓಡುತಾವೆ ಜಲ ಸೆಳವಿನಿಂದ ಆಹ ಮಾಡುವೋಣ್ಹ್ಯಾಗೆ ಸ್ನಾನವ ನಾವು ಎನುತಲಿ ಜೋಡಿಸಿ ತಮ್ಮ ್ಹಸ್ತ ಮುಗಿದರಾಗ 18 ಉಟ್ಟ ಸೀರೆಗಳನು ಬಿಟ್ಟು ಕುಪ್ಪಸ ಕಟ್ಟಿ ಇಟ್ಟರು ಉಸುಕಿನ ಮಿಟ್ಟಿಯಲ್ಲೇ ತಾವು ಮಿತ್ರೆಯರೆಲ್ಲ ತಮ್ಮ ಸ್ತನಗಳ್ಹಿಡಕೊಂಡು ಥಟ್ಟನೆ ಇಳಿದರು ನದಿಯೊಳಗೆ 19 ವಾರಿಗೆ ಗೆಳೆತೇರು ವರ ಮೋಹನಾಂಗೇರು ಮೋರೆಗೆ ಅರಿಷಿಣ ಕುಂಕುಮ್ಹಚ್ಚಿ ತಮ್ಮ ನೀರಜಾಕ್ಷಿಯರೆಲ್ಲ ನಿರ್ಮಲವಾಗಿದ್ದ ನೀರೊಳು ನಿಂತು ಮೈ ತೊಳೆದರಾಗ 20 ಭಾರಿ ಸೆಳವಿನೊಳು ಬತ್ತಲೋಲ್ಯಾಡುತ ಸಾರಸಮುಖಿಯರು ಸರಸದಿಂದ ಚೆಲ್ಲೆ ದ್ವಾರ್ಯ ಕಂಕಣಕರ ಬೊಗಸೆಲಿಂದ ನೀರು ತುಂಬಿ ಚೆಲ್ಲ್ಯಾಡುತಲಿ 21 ಸರ್ಪನಂಥ ಹೆರಳೊಲಿವುತ ನೀರೊಳು ಮುತ್ತಿನ ಸರಪದಕ್ಹೊಳೆಯುತಲಿ ಬುಕ್ಕ್ಹಿಟ್ಟು ಗಂಧ ಮಲ್ಲಿಗೆ ಪಾರಿಜಾತವು ತೆಪ್ಪದಂದದಲಿ ತೇಲಾಡುತಿರೆ22 ಅಂಬುಜಮುಖಿಯರು ಸಂಭ್ರಮದಿಂದಲಿ
--------------
ಹರಪನಹಳ್ಳಿಭೀಮವ್ವ
ಗುರುವಿನ ಗುಣಂಗಳ ನೆನೆವೆ ಸಿದ್ಧೇಶ ನಾನುಗುರುವಿನ ಪಾದಂಗಳ ನೆನೆವೆ ಸಿದ್ಧೇಶ ಪ ಸುಖವು ಬಂದರೆ ಹಿಗ್ಗದವರು ಸಿದ್ಧೇಶ ನಾನಾದುಃಖವು ಬಂದರೆ ಬಗ್ಗದವರು ಸಿದ್ಧೇಶ ಅಖಿಳವೆಲ್ಲವ ಬ್ರಹ್ಮವೆಂದರು ಸಿದ್ಧೇಶ ಇವರುಮುಕುತ ಗಣಂಗಳು ಈಗ ಸಿದ್ಧೇಶ 1 ಮಾನ ಹಚ್ಚಿಕೊಳ್ಳದವರು ಸಿದ್ಧೇಶ ಅಭಿಮಾನಗಳು ನೀಗಿದವರು ಸಿದ್ಧೇಶತಾನೆ ಎಂದು ತಿಳಿದವರು ಸಿದ್ಧೇಶ ಅವರುಜ್ಞಾನ ಮುಕ್ತಗಣಂಗಳು ಸಿದ್ಧೇಶ 2 ಸಂಸಾರವಿದ್ದರೆ ಬಾಧಕವಿಲ್ಲದವರು ಸಿದ್ಧೇಶಸಿದ್ಧ ಚಿದಾನಂದರಿಹರು ಸಿದ್ಧೇಶ ಇವರುಶುದ್ಧ ಮುಕ್ತ ಗಣಂಗಳು ಸಿದ್ದೇಶ3
--------------
ಚಿದಾನಂದ ಅವಧೂತರು
ಗುರುವಿನ ನೆನೆದವನೆಲ್ಲರಿಗಧಿಕಗುರುವಿನ ನೆನೆದವನೇ ಪ ನರನಿಂದಧಿಕ ನರಪತಿಗಧಿಕಸುರರಿಂದಧಿಕ ಸುರನಾಥಗಧಿಕವರಮುನಿಗಧಿಕ ವಸುಧೆಗಳಿಗಧಿಕಗುರುಪಾದವ ನಿತ್ಯ ನೆನೆದವನಯ್ಯ 1 ಧರೆಗಿಂತಲಧಿಕ ಗಿರಿಗಿಂತಲಧಿಕಹರಿಗಿಂತಲಧಿಕ ಹರಗಿಂತಲಧಿಕಪರಕಿಂತಲಧಿಕ ಪರತರಕಧಿಕಗುರುಪಾದವ ನಿತ್ಯ ನೆನೆದವನಯ್ಯ2 ಆವವರಧಿಕ ಅವರಿಗಿಂತಧಿಕಭಾವಶುದ್ಧಿಯಿಂದ ಗುರುವಿನಸಾವಧಾನದಿ ನಿತ್ಯ ಮನದಲಿ ನೆನೆದವದೇವ ಚಿದಾನಂದ ಗುರುನಾಥನಯ್ಯ3
--------------
ಚಿದಾನಂದ ಅವಧೂತರು
ಗೆಲಿಯಬಲ್ಲವರಾರು ಮೂಜಗದಿ ಪಣೆಯ ಬರಹ ಗೆಲಿಯಬಲ್ಲವರಾರು ಮೂಜಗದಿ ಪ ಗೆಲಿಯಬಲ್ಲವರಾರು ಮೂಜಗದೊಳಗೆ ಬಲ್ಲಿದರೆಂಬರೆಲ್ಲರು ಜಲಜಪೀಠನ ಲಿಪಿಗೆ ಸಿಲ್ಕಿ ತೊಳಲಿ ಬಲಳಿದರ್ಹಲವು ಪರಿಯಲಿ ಅ.ಪ ಒಂದೇ ಧರ್ಮದಿಗೂಡಿ ತಾ ನಡೆದ ವಿಕ್ರಮನೆಂಬುವ ಒಂದೆ ಕೊಡೆಲಿಡೀಭುವನವಾಳಿದ ಸದ್ಧರ್ಮ ತನದಿಂ ದೊಂದೆ ಆ ಸುಮರೂಪ ಪ್ರಜರ ಪಾಲಿಸಿದ ಉದ್ದಂಡನೆನಿಸಿದ ಒಂದು ಪಾಪಾಚರಣೆಗೈಯದೆ ಒಂದು ಬಿಡಿದಖಿಲ್ವಿದ್ಯವರಿದ ಒಂದು ಅರಿಯದೆ ತನ್ನ ಕೈಕಾಲು ಒಂದೇ ಮಾತಿಗೆ ಕಳೆದುಕೊಂಡ 1 ಎರಡುಹೊತ್ತು ಸತ್ಯಮಂ ಬಿಡದ ಸುಚಿಂತದಿರುವ ಎರಡನೇ ಗುಣ ಸ್ವಪ್ನದರಿಯದ ನಳಚಕ್ರವರ್ತಿ ಎರಡು ತಿಳಿಯದೆ ಜೂಜನಾಡಿದ ಮಹವಿಪಿನಕೈದಿದ ಎರಡು ಮಕ್ಕಳ ವನದಿ ಅಗಲಿದ ಎರಡನರಿಯದೆ ಮಲಗಿದರಸಿಯ ಎರಡನೆಬಗೆದಡವಿಯಲಿ ಬಿಟ್ಟು ಎರಡನೇರಾಯನಶ್ವ ತಿರುವಿದ 2 ಮೂರು ಜಗ ಅರೆಲವದಿ ತಿರುಗುವ ದಿನದಿನವುಬಿಡದೆ ಮೂರುಮೂರ್ತಿದರ್ಶನವ ಪಡೆಯುವ ಆ ಪರಮಪಾವನ ಮೂರು ಕಾಲದ ಜ್ಞಾನ ಬಲ್ಲವ ನಾರದನೆಂಬುವ ಮೂರುಮಂದಿ ಶಕ್ತಿಯರಿಗೆ ಮೂರು ಬಟ್ಟೆಯ ಸುದ್ದಿ ಪೇಳಿ ಮೂರು ಮೂರ್ತಿಗಳುಪಾಯನರಿಯದೆ ಮೂರಿಪ್ಪತ್ತು ಮಕ್ಕಳ್ಹಡದ 3 ನಾಲ್ಕುಯುಗ ಪ್ರಮಾಣಗಳ ತಿಳಿದ ಬ್ರಹ್ಮನುಬಿಡದೆ ನಾಲ್ಕುವೇದಗಳ್ಹಸ್ತದೋಳ್ಪಿಡಿದು ವಿಧವಿಧದಿ ಎಂಭತ್ತು ನಾಲ್ಕುಲಕ್ಷಜೀವರಾಶಿಗಳ ಬರಿದೆ ಉತ್ಪತ್ತಿಗೈದು ನಾಲ್ಕುಭುಜನ ಸುರನೆಂದೆನಿಸಿ ನಾಲ್ಕು ವಿಧ ಮತಿವಂತನಾದವ ನಾಲ್ಕು ಒಂದು ಮುಖ ಮೊದಲಿಗಿರ್ದನು ನಾಲ್ಕೆ ಮುಖದವನೆನಿಸಿಕೊಂಡು 4 ಐದುಬಾಣನಪಿತನಸಖನಾದ ಉರಿನೇತ್ರ ಬಿಟ್ಟು ಐದುಬಾಣನ ಭಸ್ಮ ಮಾಡಿದ ಅಪಾರ ಶಂಭೋ ಐದು ಒಂದು ಮುಖದವನ ತಾ ಪಡೆದ ಹರಿಕರುಣದಿಂದ ಐದು ಒಂದು ಮುಖದವನಿಂ ತಾರಕ ನೈದುವಂದುದಲ್ಲೆ ಸೀಳಿಸಿ ದೈದುತತ್ವಕಾಲಯೆನಿಸಿದ ಐದುಮುಖಸ್ಮಶಾನ ಸೇರಿದ 5 ಆರು ಎರಡೈಶ್ವರ್ಯಗಳಲೊಳ ವೈಕುಂಠನಾಯಕ ಆರು ಎಂಟುಲೋಕಗಳ ಪರಿಪಾಲ ಬಿಡದೇಳು ಇಪ್ಪತ್ತು ಆರುಕೋಟಿ ಅಮರಾದಿಗಳ ಮೂಲ ಮಹಮಂತ್ರ ಜಾಲ ಆರುನಾಲ್ಕು ಭುಜನ ಮೊರೆ ಕೇ ಳಾರುನಾಲ್ಕು ಶಿರನ ವಧಿಸಿದ ಆರುನಾಲ್ಕರಗಧಿಕನೆನಿಸಿ ಆರುನಾಲ್ಕವತಾರ ತಾಳಿದ 6 ಆರಿಗಾದರು ಬಿಡದೀ ಬರವಣಿಗೆ ಬಿದ್ದಂತೆ ಫಲಿಸಿತು ತೀರಲಿಲ್ಲದಂತಂಥ ಹಿರಿಯರಿಗೆ ಸಾಧ್ಯದಪ್ಪಿ ಮಹ ಘೋರ ಬಡಿಸಿತು ಸರ್ವ ಶಕ್ತರಿಗೆ ಬ್ರಹ್ಮನಸುಡಗಿ ವಾರಿಜನು ಬರೆದ ಬರೆಹ ಮೀರಿ ನಡೆದೇನೆಂದರಿನ್ನು ಸಾರಮೋಕ್ಷಕ್ಕಧಿಪ ನಮ್ಮ ಧೀರಪ್ರಭು ಶ್ರೀರಾಮ ಬಲ್ಲ 7
--------------
ರಾಮದಾಸರು
ಘಾಸಿ ತಿಮಿರದಿನಪ ಪ ಈಶನ ವರಸುತ ದಾಸ ಜನರ ಹಿತ ಪಾಶಾಂಕುಶ ಹಸ್ತ ಅ.ಪ ವಿದ್ಯೆ ಪ್ರದಾಯಕ ಬುದ್ಧಿ ಪ್ರಬೋಧಕ ಸಿದ್ಧಿದ ಶ್ರೀ ಬೆನಕ ಹೊದ್ದಿ ನೆನೆವ ಭಕ್ತರುದ್ಧರಿಸುವ ಶಕ್ತ ಮುದ್ದು ಮುಖವ ತೋರಿತ್ತ 1 ಗಿರಿಜೆ ಸತ್ಕುವರನೆ ದ್ವಿರದ ಸುವದನನೆ ಶರಣರ ಪಾಲಿಪನೆ ಪೊರೆಯನ್ನ ಸದ್ದಯದಿ 2 ಕಿಂಕರ ಶಂಕರ ಶತ್ರುಭಯಂಕರ ಶಂಖಚಕ್ರಾಬ್ಜಧರ ಪಂಕಜ ಮುಖವ ತೋರ 3 ರಕ್ತ ವಸ್ತ್ರಾನ್ವಿತ ರಕ್ತ ಗಂಧಾಕ್ಷತ ರಕ್ತ ಮಾಲಾದಿಧೃತ ಭಕ್ತ ಜನಾವನ ಶಕ್ತನೆ ನೀ ಎನ್ನ ಚಿತ್ತದಿ ಪೊಳೆಯೊ ಘನ್ನ 4 ವೇದನಿಕರ ಸುಗೀಯ ಸಾಧು ಸಜ್ಜನ ಸಮ್ಮತ 5 ಇಂಬಿಟ್ಟಿಯೆಂದು ನಿನ್ನ ಅಂಬರೊ ಸುಗುಣಸಿಂಧು 6 ವಕ್ರವ ತುಂಡಿಪ ಕತದಿಂದಲಪ್ಪ ವಕ್ರತುಂಡನು ನೀನಪ್ಪ ಶಕ್ರ ಪೂಜಿಸಿದನು ವೃತ್ರನ ವಧೆಗಿನ್ನುಪಕ್ರಮದಲೆ ತಾನಿನ್ನು 7 ಪರಿವಾರಸಹಿತ ಘನ್ನ ಧುರದಲ್ಲಿ ಬಿದ್ದನು ವರ ಧರ್ಮ ಗೆದ್ದನು ಎರಗಿ ಅರ್ಚಿಸಿ ನಿನ್ನನು 8 ದುರಳ ದಶಾನನ ಸರಕುಮಾಡದೆ ನಿನ್ನ ಗರುವದಿಂದಿರಲವನ ಪರಿಭವ ಕಾರಣವಾದುದೆಂಬರು ಕಣ ಶರಣಜನಾಭರಣ 9 ನೇಮದಿರುತಿದ್ದು ಹೇ ಮಹಿಮ ಖರ ದಶಶಿರನನ್ನು ಧುರದಲ್ಲಿಗೆದ್ದನು ಕರುಣೆಯೆ ಒರೆಯಲೇನು 10 ಕೋರಲು ಸಿದ್ಧಿ ಅಂದು ತೋರಿದೆ ಕರುಣವ ಚಾರುಕರದಿ ಅವನಾರೈಸಿ ಕರುಣಾರ್ಣವ 11 ಮುಪ್ಪುರ ಗೆದ್ದನು ಮುಕ್ಕಣ್ಣ ನಿನ್ನನು ತಪ್ಪದೆ ನೆನೆದವನು ಅಪ್ಪನೆ ನಿನ್ನಯ ಗೊಪ್ಪ ಚರಿತ್ರೆಯ ಇಪ್ಪಂತೆ ಪೇಳಿಸಯ್ಯ 12 ಸೃಷ್ಟಿಕರ್ತನು ತನ್ನ ಸೃಷ್ಟಿಗೈಯ್ಯಲು ಮುನ್ನ ಮುಟ್ಟಿಭಜಿಸಿದ ನಿನ್ನ ಎಷ್ಟೆಂತ ಪೇಳಲಿ ಶ್ರೇಷ್ಠಗುಣಾವಳಿ ಅಷ್ಟೆಲ್ಲ ನೀನೆ ಬಲ್ಲಿ 13 ಮಾಧವ ಪೊಂದಿದ ನಿನ್ನನವ ದ್ವಂದ ವಿವಾಹಾದುದು 14 ಭಾರತ ಬರೆಯಲು ಆಕಾರ ನೋಡಲು ತೋರದೆ ಇರುತಿರಲು ಶೂರನೆ ನಿನ್ನನು ಅರಿಸಿ ವ್ಯಾಸನು ಬೀರಿದ ಮಹಿಮೆಯನು 15 ಏನು ಕರುಣವಯ್ಯ ಶ್ರೀನಿಕೇತನಿಗೈಯ್ಯಾ ತಾನೆ ಇತ್ತಿಹನಯ್ಯ ಆನತಿಸಲು ಇಷ್ಟ ಮಾಣಲು ಸಂಕಟ ನೀನು ಕೊಡೆನುತದಟ 16 ಭಜಿಪರ ಭಾಗ್ಯದ ಯಜಿಪರಭೀಷ್ಟದ ತ್ಯಜಿಪರ ಸಂಕಟದ ಪಡಿ 17 ಜಯ ಜಯ ಕಾಪಿಲನೆ ಫಾಲ ಜಯ ಗಜಮುಖನೆ 18 ದ್ವಾದಶ ನಾಮವ ಆದರದಿಂದಾವ ಓದುವ ಕೇಳುವವ ಆದಿ ಪೂಜಿತನೊಲಿವ 20 ವಿದ್ಯಾರಂಭದಿ ಮುದ್ದು ವಿವಾದÀದಿ ಪೊದ್ದಲ್ಲಿ ನಿರ್ಗಮದಿ ಯುದ್ಧದಿ ನಿನ್ನನು ಬದ್ಧದಿ ನೆನೆವನು ಗೆದ್ದಪನೈ ಅವನು 21 ಏಕವಿಂಶತಿಪದ ಕೋಕನಪುಷ್ಪದ ಶ್ರೀಕರ ಮಾಲೆ ಇದ ಶ್ರೀಕಾಂತ ವರಭಕ್ತ ನೀ ಕರುಣಿಸೆಂದಿತ್ತ ಸ್ವೀಕರಿಸೈ ಮಹಂತ 22 ಬೆಂಗಳೂರಿನಲಿ ತುಂಗರೂಪದಲ್ಲಿ ಕಂಗೊಳಿಸುತಲಿಲ್ಲಿ ಹಿಂಗದೆ ಪೊರೆವೆನೆಂದ 23 ಬಾಲಕೃಷ್ಣಾರ್ಯರ ಬಾಲ ಲಕ್ಷ್ಮೀನಾರಾಯಣನೆಂಬ ಸತ್ಪೆಸರ ತಾಳಿದ ಶರಣನು ಮೇಳೈಸೀನುತಿಯನು ಓಲಗಿಸಿದ ನಿನ್ನನು 24 ಪೊಂದುವ ಮೋದವನು ಇಂದುಧರನ ಸುತನಂದದಿ ಸದ್ಭಕ್ತವೃಂದ ರಕ್ಷಿಪ ಸಂತತ 25 ನಮೋ ಸಾಕುವ ಮಹಿಮ ನಮೋ ಭೀಕರ ಬಿಡಿಸೆನ್ನ ನೀ ಕರುಣಿಸು ಮುನ್ನ ಶ್ರೀಕಾಂತ ಭಕ್ತಿಘನ್ನ 26 ಮಂಗಳ ಸದ್ವಿದ್ಯಾಬುದ್ಧಿದ ಜಯ ಜಯ ಮುಂಗಳ ಸಿದ್ಧದನೆ ಮಂಗಳ ವರ್ಧಿತನೆ 27
--------------
ಲಕ್ಷ್ಮೀನಾರಯಣರಾಯರು
ಜೋಕುಮಾರನೆಂದು ಪಾಡಿದಳೊ ಗೋಪಿ ಪ ಮಾಯದ ವೇಷದವ ಮನೆ ಮನೆ ತಿರುಗುವ ಸ್ತ್ರೀಯರ ಕಾಣುತ ಭಂಡಾಟನಾಡುವ 1 ವಾವಿಗಳಿಲ್ಲದವಳ ತಾ ಮಾರಿ ಗಂಡು ಆವಾಗ ಬಂದರಿವ ಇದೆ ತೆರನು ದೇವದಾನವರೊಳಗಿವನೆ ಬಲು ಚಲುವ ಕೇವಲ ನಾಚಿಕೆ ತೊರೆದ ಲಂಡನ್ನ 2 ಅಷ್ಟಮಿ ದಿನದಲ್ಲಿ ಒಬ್ಬರ ವಶನಾಗಿ ಬುಟ್ಟಿಯೊಳಗೆಯಿದ್ದು ಹೊರಗೆ ಪೋಪಾ ಪಟ್ಟ ಗುಡುಪಾ ನಮ್ಮ ವಿಜಯವಿಠ್ಠಲರೇಯಾಸೊಟ್ಟವಳನ ಬಿಡದಿಪ್ಪಕುವಲ್ಲಭಾ3
--------------
ವಿಜಯದಾಸ
ದಿಕ್ಕೆಯಿಲ್ಲ ನಮ್ಮ ಕಡೆಗೆ ಸೊಕ್ಕಿ ಬಂದರಾರೆರು ಚಿಕ್ಕ ಮನುಷ ಕೆಂಚೆಗೌಡ ಠಕ್ಕ ಮುನಿಯ ಭಾವಬಿರಿಯ ಬೆಂಕಿಯಂತೆ ತೋರ್ಪನೊಬ್ಬ ಪರಶುರಾಮನು ಪ ಆನೆಯಲ್ಲಿ ತೇಜಿಯಿಲ್ಲ ಸೇನೆ ಬಹಳವಾಗಿಯಿಲ್ಲ ಹೀನಗೆಟ್ಟು ದಂಡು ಬಂದು ಮಾನಗೊಂಡು ಹೆಣ್ಣುಗಳನು ಭಾನು ಮುಟ್ಟಲೆತ್ತಿ ಆಸಿಯ ದೀನ ಬೇಕು ಬೇಡೆಂದೆಂಬರಿಲ್ಲ 1 ಮನೆಗಳನ್ನು ಹೊಕ್ಕು ಚಾರುವರಿದು ಕೊಟ್ಟ ಕಣ್ಣಿಯ ಸೂರೆಮಾಡಿ ಕಟ್ಟಿಕೊಂಡು ತೆರೆದ ಮನೆಯ ಸುಟ್ಟು ದಾರಿದೆಗೆದು ಹೋಗುವಾಗ ಧೀರರಾಗಿ ನಿಲ್ಲಿರೆಂದು ಎಂಬವರೊಬ್ಬರಿಲ್ಲ ವೋ 2 ಯಾವಜನರ ದಂಡು ಗಂಟು ಹಣದಾಸೆಗಾಗಿ ಮಾಡಿ ದಾವ ಕಡೆಗೆ ಬರುವರೆಂದು ಸೋವ ನೋಡು ತಲ್ಲಿತಮ್ಮ ಜೀವ ದೊಳಗೆ ಜೀವ ವಿಲ್ಲದಾಗಿ ಜನರುಬಾಯಬಿಡಲು ಕೋವಿ ಕತ್ತಿ ಎಂಬುದೊಂದು ಶಬ್ದವಿಲ್ಲ ನಮ್ಮ ಕಡೆಗೆ 3 ಬೀಸಿ ಬೀಸಿ ಕತ್ತಿಯನ್ನು ಸಾಸವನ್ನು ತೋರಿರೋರ ದಾಸೆಗಾಗಿ ಕಂಡ ಜನರ ಮೋಸದಿಂದ ಕಡಿದುಕೊಚ್ಚಿ ಲೇಸುಗಾಣದಾಗಿ ಮತ್ತೆ ಭಾಸೆಯಿಂದ ತಮ್ಮ ತಾವೆ ಮಾರ್ಗವಿಡಿಯೆ4 ಕೆಟ್ಟು ಪ್ರಜೆಯು ನಾಶವಾಗಿ ಸುಟ್ಟು ಮನೆಯು ಮಾರುಬಿದ್ದು ನಿಟ್ಟು ಹಾಳುಸುರಿಯೆ ಪ್ರಜೇಯು ಹೊಟ್ಟೆಗಿಲ್ಲ ದಳಲುತಿಹುದು ಸೃಷ್ಟಿ ಗೊಡೆಯನಾದ ಲಕ್ಷ್ಮೀರಮಣ ಬಲ್ಲನೆಲ್ಲವನ್ನು 5
--------------
ಕವಿ ಪರಮದೇವದಾಸರು