ಒಟ್ಟು 74 ಕಡೆಗಳಲ್ಲಿ , 31 ದಾಸರು , 69 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುವಿಗೆರಗೀ ತರಣೋಪಾಯವನರಿಯಲಿಲ್ಲಾ ಮನವೇ | ಮರುಳನೋ ತರಳನೋ ಬಲು ದುರುಳನು ನಾನರಿಯೇ ಪ ಶ್ರೀನಾಥನಂಘ್ರಿ ಕಮಲಾ ಧ್ಯಾನವಿಲ್ಲ ಮನವೇ | ಮಾನವನಫ ದಾನವನೋ ನೀದನವೇನೋ ನಾನರಿಯೇ 1 ರತಿಯ ಬಿಟ್ಟು ವಿಷಯದಲ್ಲಿ ಗತಿಯಾ ಜರದೀ ಮನವೇ | ಹಿತವೇನೋ ಮಿತವೇನೋ ಉನ್ಮತವೇನೋ ನಾನರಿಯೇ 2 ಪೊಡವಿಯೊಳು ನರದೇಹವ ವಿಡಿದು ಬಂದೆ ಮನವೇ | ನಡಿದೇನೋ ನುಡಿದೇನೋ ಸುಖಪಡಿದೇನೋ ನಾನರಿಯೆ 3 ಭಕ್ತಿ ಜ್ಞಾನಾ ಬಲಿವಾ ಸುವಿರಕ್ತಿ ಇಲ್ಲಾ ಮನವೇ | ಸಕ್ತನೋ ಯುಕ್ತನೋ ಆಯುಕ್ತನೋ ನಾನರಿಯೆ 4 ಗುರು ಮಹಿಪತಿ ಪ್ರಭು ಶರಣರ ಕಾಯ್ದಾ ಮನವೇ | ನರವರನೋ ಸುರವರನೋ ಕಲ್ಪತರು ವರನೋ ನಾನರಿಯೆ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಚರಣವ ನರ್ಚಿಸುವೆ ಹರಿ ನಿನ್ನ ಮರೆಯದೆ ಕೀರ್ತಿಸುವೆ ನೀನೆ ಎನ್ನರಸ ರಕ್ಷಿಸು ಎಂದು ಪ ರಕ್ಷಿಸು ಎಂದು 1 ಸುಗುಣಂಬರೀಶ ಭೂಪಗೆ ಕೊಡಲಾಕ್ಷಣ ಗಮನ ಚನ್ನಿಗನೆ ರಕ್ಷಿಸು ಎಂದು 2 ಮುಳಿದು ಗಜವ ನೆಗಳೆಳೆಯಲು ಭಯದಲಿ ನಳಿನಾಕ್ಷ ನಿನಗೆ ದೂರಲು ಬೇಗದಲಿ ಸಾರಿ ಸುಲಲಿತ ಮಹಿಮನೆಗಳ ಸೀಳಿ ಕರಿಯನು ಸಲಹಿದೆ ದೇವ ಗೋವಳನೆ ರಕ್ಷಿಸು ಎಂದು 3 ಬೇಗದಲಿ ಕಂಬದಿಬಂದು ಸದೆದು ದಾನವನ ದಾಯದಲಿ ಕಾಯ್ದು ಪದುಮಾಕ್ಷ ನರಹರಿ ಮುದದಿ ರಕ್ಷಿಸು ಎಂದು 4 ದುರುಳ ದುಶ್ಯಾಸನ ಭೂವರ ಪಾಂಡು ತನುಜರ ಅರಸಿಯ ಸೀರೆಯ ಭರದಿ ಸೆಳೆಯಲಾಗ ಮೊರೆಯಿಡಲಕ್ಷಯ ವರವನಿತ್ತು ಸಲಹಿದ ಹರಿ ಸುತ ಕೋಣೆಯ ಲಕ್ಷ್ಮೀಶ ರಕ್ಷಿಸು ಎಂದು 5
--------------
ಕವಿ ಪರಮದೇವದಾಸರು
ತಿರುದುಂಬುವ ನೀನು ತಿರುಮಲೇಶಾ ಮರುಗಲ್ಯಾತಕೆ ಇನ್ನು ಮನಸಿನೊಳಗೆ ಪ್ರತಿದಿನವು ಪ ಬಲಿರಾಯ ಬಲು ದಾನವನು ಮಾಡುತಿರಲಾಗಿ ಇಳಿಯ ಸುರÀವೇಷವನು ಧರಿಸಿ ಪೋಗಿ ಹಲುಬಿ ಬಾಯಿದೆರದು ತ್ರಿಪಾದ ತಿರಕೆ ಕೊಂಡು ನಿಗಮ ಕುಲದಾತಾರಾ 1 ಗೋಪಳ್ಳಿಯಲಿ ಜನಿಸಿ ಗೋವುಗಳ ಕಾವುತ್ತ ಗೋಪಾಲತತಿ ವಡನೆ ವಡನಾಡುತ ತಾಪಸರು ಯಜ್ಞ ಕರ್ಮಾದಿಗಳು ಮಾಡುತಿರೆ ಶ್ರೀಪತಿ ಅನ್ನ ತಿರಿದುಂಡು ಕ್ಷುದಿಯನ್ನ ಕಳೆದೆ 2 ಅಂದು ಈ ಪರಿಯ ಯಾಚಕ ವೃತ್ತಿಯನು ಮಾಡಿ ಇಂದೆನ್ನ ಹೃತ್ಕಮಲದೊಳಗೆ ಬಂದೂ ನಿಂದು ಮನೆಮನೆ ತಿರದುಂಬುವ ನೀನಲ್ಲವೆ ಸಂದೇಹವೇಕೆ ಎನಗೆ ವಿಜಯವಿಠ್ಠಲರೇಯಾ 3
--------------
ವಿಜಯದಾಸ
ತುತಿಸಬಲ್ಲೆನೆ ನಾ ನಿನ್ನೆ ವೆಂಕಟರನ್ನ ಪ ಪತಿ ನಿನ್ನ ಬ್ರಹ್ಮ ಪಾ ರ್ವತಿ ಪತ್ಯಾದ್ಯಳವಡದುತುಳ ಮಹಿಮೆಗಳ ಅ.ಪ. ನಮಿಪ ಜನರ ಕಲ್ಪದ್ರುಮ ದುಷ್ಟದಾನವ ದಮನ ದಿವಿಜಕುಲೋತ್ತಮ ಲಕ್ಷ್ಮೀ ಪವನಾದಿ ಸುಮನಸಾರ್ಚಿತ ಪಾದಕಮಲ ಯುಗ್ಮನೆ ಅನು ಕಾಯ ಹೃ ತ್ತಿಮಿರ ಭಾಸ್ಕರ ಶ್ರೀ ಭೂರಮಣ ಸರ್ವಗ ಸದಾ ಗಮವೇದ್ಯ ವೇದವ್ಯಾಸ ಕಪಿಲ ದತ್ತ ಕುಮುದಾಪ್ತ ಕೋಟಿ ಭಾಸಾ ತದ್ಭಕ್ತರ ಸಮುದಾಯಕೀಯೋ ಲೇಸಾ ಆನತ ಬಂಧು ಸುಮುಖ ಸುಲಭನೆಂದಾ ನಮಿಪೆ ಎನ್ನರಸಾ 1 ಘನಮಹಿಮನೆ ವೃಂದಾವನವಾಸಿ ಸ್ವಪ್ರಯೋ ಜನವಿವರ್ಜಿತ ಗೋವರ್ಧನಧಾರಿ ಗೋ ಗೋಪೀ ಜನ ಮನೋರಂಜನ ಜನಕಜಾರಮಣ ಪೂ ತನಿ ಪ್ರಾಣಾಂತಕ ವೇದವಿನುತ ಶ್ರೀ ವತ್ಸಲಾಂ ಕೌಸ್ತುಭ ಮಣಿ ವೈಜಯಂತೀ ಸ ದ್ವನ ಮಾಲಾಂಚಿತ ಕಂಧರಾ ಸತ್ಕಲ್ಯಾಣ ಗುಣ ಜ್ಞಾನಾತ್ಮಕ ಶರೀರಾ ಸಂತತ ನಿಷ್ಕಿಂ ಚನ ಭಕ್ತಜನಮಂದಾರಾ ವಂದಿಸುವೆ ಮ ನ್ಮನದಲಿ ನಿಲಿಸೋ ಕರುಣಾ ಪಾರಾವಾರಾ 2 ಕವಿಭಿರೀಡಿತ ಪುಣ್ಯ ಶ್ರವಣ ಕೀರ್ತನ ಮತ್ಸ್ಯಾ ದ್ಯವತಾರಂತರ್ಯಾಮಿ ಪ್ರವಿವಿಕ್ತ ಭುಗ್ವಿಭು ಭುವನ ನಿಧಿಯ ಪೆತ್ತ ಸವನ ತ್ರಯಾಹ್ವಯ ಶಿವರೂಪಿ ಶಿವದ ಭೂರ್ಭೂವಸ್ವಸ್ಥ ಸ್ವಶ ಭಾ ರ್ಗವ ನಿನ್ನೊಳಿಪ್ಪ ದಾನವನ ಸಂಹರಿಸುವ ನೆವದಿಂದ ದಾಶರಥೀ ಸಂಗಡ ಯುದ್ಧ ತವಕದಿ ಮಾಡಿ ಭೀತಿ ಬಟ್ಟವನಂತೆ ಅವನಿಗೆ ತೋರ್ದ ರೀತಿ ವರ್ಣಿಸಲಿನ್ನು ಪವನಮುಖಾದ್ಯರಿಗವಶ ನಿನ್ನಯ ಖ್ಯಾತಿ3 ಗತಶೋಕ ಗಾಯಿತ್ರಿ ಪ್ರತಿಪಾದ್ಯ ತತ್ವಾಧಿ ಪತಿಗಳೆನಿಸುವ ದೇವತೆಗಳೊಳಗಿದ್ದು ಮಾ ರುತನಿಂದ ಒಡಗೂಡಿ ಪ್ರತಿದೇಹಗಳಲಿ ಯೋ ಗ್ಯತೆಯನರಿತು ಕರ್ಮಗತಿಗಳನೀವೆ ಸಾಂ ಪ್ರತ ಬೇಡಿಕೊಂಬೆ ಆನತರ ಸಂತೈಸೆಂದು ಪ್ರಥಮಾಂಗ ಪ್ರಿಯ ಸತ್ತಮ ಸೌಭಾಗ್ಯ ಸಂ ಭೃತಸಾರ ಸರ್ವೋತ್ತಮ ನೀನೆ ಪಾಂಡು ಸುತರಾದ ಧರ್ಮ ಭೀಮಾ ಪಾರ್ಥರ ಕಾಯ್ದೆ ಪ್ರತಿಗಾಣೆ ನಿನಗೆ ಸಂತತ ಪರಂಧಾಮಾ 4 ಕಲಿ ಮುಖ್ಯ ದೈತ್ಯ ಗಂಟಲಗಾಣ ಗುರುತಮ ಬಲಿಬಂಧಮೋಚಕ ಸುಲಭ ಚೆತ್ಸುಖದಾಯಿ ಫಲ ಚತುಷ್ಟಯನಾಮ ಫಲಸಾರ ಭೋಕ್ತø ಶಂ ಬಲನಾಗಿ ಭಕತರ ಸಲಹುವ ಕರುಣಿ ಶಂ ಫಲಿಪುರವಾಸಿ ಬಾಂಬೊಳೆಯ ಜನಕ ಲಕ್ಷ್ಮೀ ನಿಲಯ ನಿರ್ಗತ ದುರಿತಾ ಮನ್ಮನದ ಚಂ ಚಲವ ಬಿಡಿಸೋ ನಿರುತಾ ಬೇಡಿಕೊಂಬೆ ತಲೆ ಬಾಗಿ ಸರ್ವಗತಾ ನೀನಹುದೆಂದು ತಿಳಿಸೋ ತೀವ್ರದಿ ಮುಪ್ಪೊಳಲುರಿಗನ ತಾತಾ 5 ಉದಿತ ಭಾಸ್ಕರನಂತೆ ಸುದತೇರಿಂದೊಡಗೂಡಿ ಉದರ ನಾಮಕ ನೀನು ಉದರದೊಳಿದ್ದೆನ್ನ ಉದಕಗಳಿಗೆ ನಿತ್ಯಾಸ್ಪದನಾಗಿ ಜೀವರ ಹೃದಯದೊಳಿರುತಿಪ್ಪೆ ಸದಸದ್ವಿಲಕ್ಷಣಾ ವಿಧಿಭವ ಶಕ್ರಾದಿ ತ್ರ್ರಿದಶರೊಂದಿತ ಪಾದ ಬದಿಗನಾಗಿರಲು ಪಾಪ ಕರ್ಮಗಳು ಬಂ ದೊದಗುವುವೇನೋ ಶ್ರೀ ಪಾ ಬಿನ್ನೈಸುವೆ ಬುಧ ಜನರಂತಸ್ತಾಪಾ ಕಳೆದು ನಿತ್ಯ ಬೆದರದಂದದಲಿ ಮಾಳ್ಪುದು ದೋಷ ನಿರ್ಲೇಪಾ 6 ಪಣಿಗಣ್ಣ ಸ್ವರದಿಂದಾಗ್ರಣಿಯಾದ ದುಷ್ಟ ರಾ ವಣನ ಬಾಹುಬಲ ಗಣಿಸಿದೆ ನಿಶಿತ ಮಾ ರ್ಗಣದಿ ಸದೆದು ವಿಭೀಷಣಗೆ ನೀ ಲಂಕಾಪ ಟ್ಟಣ ಭೋಗ ತತ್ಕಾಲ ಉಣಲಿತ್ತು ಭಕ್ತಗೆ ಪ್ರಣತ ಕಾಮದನೆಂಬೋ ಗುಣ ನಿನ್ನಲ್ಲಿದ್ದ ಕಾ ರÀಣದಿ ಪ್ರಾರ್ಥಿಸುವೆ ನಿನ್ನಾ ದಾಸರೊಳು ಗಣಿಸು ನೀ ದಯದಿ ಎನ್ನಾ ತಪ್ಪುಗಳ ನೀ ನೆಣಿಸಲಾಗದು ಪ್ರಸಾನ್ನಾ ಪಾಲಕನೆ ಕುಂ ಭಿಣಿಸುರರನು ಕಾಯೊ ಕ್ಷಣಾ ಲಕ್ಷ್ಮನಣ್ಣಾ 7 ಬಿಸಜ ಸಂಭವನ ನಿರ್ಮಿಸಿ ನಾಭಿಕಮಲದಿ ಸಶರೀರದೊಳು ಸುಮನಸರ ಪಡೆದು ನಿನ್ನಾ ಪೆಸರಿಟ್ಟು ಅವರವರೊಶನಾದೋಪಾದಿ ತೋ ರಿಸಿದಿ ನೀ ಸ್ವಾತಂತ್ಯ ಅಸಮನೆಸಿಕೊಂಡು ಬಸಿರೊಳಗಿಟ್ಟು ಪೊಂಬಸರಾದಿ ಸುರರ ಪಾ ಲಿಸುವಿ ನೀ ಪ್ರತಿ ಕಲ್ಪದಿ ನರಕ ಸ್ವರ್ಗ ವಸುಮತಿ ಯಮ ಲೋಕದಿ ನರಕ ಸ್ವರ್ಗ ವಸುಮತಿ ಯಮ ಲೋಕದಿ ವಾಸಿಸುತ ರ ಕ್ಕಸರನಂಧಂತಮದಿ ದಣಿಸುತಿಪ್ಪ ಪ್ರಸವಿತ್ತ ನಾಮ ವಂದಿಸುವೆ ಪ್ರಮೋದೀ 8 ಆಪದ್ಭಾಂಧವ ಬಹುರೂಪಾ ರುಕ್ಮಿಣೀಶಾ ತಾಪಸ ಜನರ ಹೃತ್ತಾಪದರ ಧರ್ಮ ಸುಜನ ಲೋ ಕೋಪಕಾರಕ ಧರ್ಮ ವ್ಯೂಪ ಊಧ್ರ್ವಗ ನಿರ್ಗು ಣೋಪಾಸಕರ ಸಲಹಲೋಸುಗದಿ ಸ ಲ್ಲಾಪದಿ ಬಹ ಕಲಹಾ ಮನ್ನಿಸೋ ಭವಾ ಕೂಪಾರ ನಾವಿಕ ಭೂಪತಿ ವರಹಾ 9 ಕೂರ್ಮ ಕ್ರೋಡ ವಪುಷ ಹಿರಣ್ಯಕ ಶಿಪುವಿನ ಸೀಳ್ದ ಕಾಶ್ಯಪಿಯಾಚಿಕನೆ ದುಷ್ಟ ನೃಪರ ಸಂಹರಿಸಿದ ಕಪಿವರ ಪೂಜಿತ ದ್ರುಪದಾತ್ಮಜೆಯ ಕಾಯ್ದ ತ್ರಿಪುರಾರಿ ಕಲಿಮುಖ್ಯ ರುಪಟಳ ಬಿಡಿಸಿದ ಕೃಪಣವತ್ಸಲ ಕಲ್ಕಿ ಅಮಿತ ರೂಪಾತ್ಮಕ ಸುಫಲ ಚಿತ್ಸುಖ ಭರಿತಾ ತ್ರೈ ಲೋಕಕ್ಕೆ ಪ್ರಪಿತಾಮಹನೆ ನಿರುತಾ ಪ್ರಾರ್ಥಿಸುವೆ ನಿ ನ್ನಪರೋಕ್ಷವಿತ್ತು ಪಾಲಿಪುದೆಮ್ಮ ಸ್ವರತಾ 10 ವಟಪತ್ರಶಯನ ವೆಂಕಟಗಿರಿ ನಿಲಯ ನಿ ಷ್ಕುಟಿಲ ದುರ್ವಿಷಯ ಲಂಪಟವ ಸದೆದು ನಿನ್ನ ಭಟಜನರಿಗೆ ಧರ್ಮ ಘಟಕನಾಗುವೆ ನಿತ್ಯ ವಟುರೂಪಿ ಎಡಪಾದಂಗುಟದಿ ಅಬ್ಬಜಾಂಡ ಕಟಾಹ ಭೇದಿಸಿ ದೇವ ತಟನೀಯ ಪಡಿಯೋ ಧೂ ರ್ಜಟಿ ತಲೆಯೊಳು ಧರಿಸಿ ನಿನ್ನ ನಾಮ ಪರಿಸುತ್ತ ಸತಿಗೆರಸಿ ಕುಣಿದನೆಂದು ತ್ಕಟದಿ ಕೈಗಳ ಬಾರಿಸಿ ಜಗನ್ನಾಥ ವಿಠಲ ಸರ್ವೋತ್ತಮ ದಿಟನೆಂದುದ್ಫಟಸೀ11
--------------
ಜಗನ್ನಾಥದಾಸರು
ತೋರೊ ನಿನ್ನಯ ಮೂರ್ತಿಯ ಮೂರ್ತಿ ಬೀರೊ ಹೃದಯವೆಂಬೊ ನೀರಜಹಾದೊಳಗೆ ಸಾರೋ ಸಾರಿ ಸಾರಿಗೆ ಸೇರೊ ಬಾರೊ ಬಾರೊ ಪರಿವಾರದೊಡನೆ ಮನಸೂರೆಗೊಡುವೆ ಕಂ ಸಾರಿ ಮುರಾರಿ ಪ ತುಂಬೆ ವಿಶ್ವಮಾಯಾದ ಬೊಂಬೆ ನಾಮ ಪೀಯೂಷ ಉಂಬೆ ಸೇವೆಯ ಕೈಕೊಂಬೆ ಅನ್ಯರ ನಂಬೆ ಕಾಂಬೆ ನಮಿಸಿ ಪಾಲಿಸೆಂಬೆ ಕಾಲಿಗೆ ಮನ ದುಂಬೆ ದಂತೆ ಎರಗಿ ಅಂಬೆ ಪಿಡಿವಾಕೊಂಬೆ ಅಂಬುಜಾಕ್ಷ ನೀ ನೆಂಬದು ಸುರನಿಕರಂಬ ಹಂಬಲಿಸಲು ದಿಂಬಾಗಿ ಕರ್ಣಾವಲಂಬನವಾಯಿತು ಇಂಬಿಡು ಪ್ರಾಙ್ಞನೆಂದೆಂಬ ಮೂರುತಿಯಾ1 ಸ್ನಾನ ಪ್ರಣಮ ವಾಚಾ ಮಾನದಿಂದಲಿ ಬಲು ಮೌನವಾಗಿದ್ದು ಮಾಳ್ಪ ಧ್ಯಾನವು ಇತ್ತು ಮಾಜ್ಞಾನಾ ನಾನಾ ಪ್ರಕಾರದಿಂದ ದಾನಧರ್ಮಂಗಳ ನಿ ದಾನ ಕೊಂಡಡಲಾಮೇಲೆ ನೆನೆವೆನನುದಿನ ಮಾನವನ ಹೀನವ ನಾಡದೆ ನೀನೆನಿಸದೆ ಸುಮ್ಮನದಿಂದಲಿ ನೋಡೊ ದಾನವನ ವಡಲನು ಬಗದು ಕರುಳನು ವನಮಾಲೆ ಹಾಕಿದ ಶ್ರೀನಿಕೇತನ 2 ಇಂದು ಮಾಡುವದೇನು ಚಂದ ಭಕ್ತರಿಗತಿ ಬಂಧವನೆ ಯಾಕೆಂದಾ ಅಂದ ರಕ್ಕಸನಾಗಿ ಕೊಂದಾವರದ ಮುಕ್ಕುಂದಾ ವಂದಿತ ಮರ ವೃಂದಾ ಕರುಣದಿಂದಾ ಎಂದಿಗೆಂದಿಗೆ ಎನ್ನಿಂದಗಲದೆ ಗೋ ವಿಂದ ಇಂದಿರಾಪತಿ ಸುಂದರ ವಿಗ್ರಹ ಮಂದಿರದೊಳು ಸುಮದಾಸನದಲ್ಲಿ ಬಂದು ವಿಜಯವಿಠ್ಠಲೆಂದು ನೀನಿಂದು3
--------------
ವಿಜಯದಾಸ
ದಿಗ್ವಿಜಯವಂತೆ ಬಂದಳು ರುಕ್ಮಿಣಿ ದೂತೆ ಶೀಘ್ರದಿಂದ ಕೃಷ್ಣರಾಯ ಮಾರ್ಗನೋಡ್ಯಾನೆಂಬೊ ಭಯದಿ ಪ. ಕೃಷ್ಣರಾಯನ ಬಿಟ್ಟುಎಷ್ಟು ಹೊತ್ತು ಆಯಿತೆಂದುಸಿಟ್ಟು ಬರಧಾಂಗೆ ಸುರರಿಗೆ ಎಷ್ಟು ಸಲುಹಲಿ ಎನುತ 1 ವೀಕ್ಷಿಸಿ ಎನ್ನ ಮಾರಿಯನುಲಕ್ಷ್ಮಿಯರು ಕೋಪಿಸದಿರಲಿಲಕ್ಷ ಕೋಟಿದ್ರವ್ಯ ದಾನಈ ಕ್ಷಣ ಕೊಡುವೆನೆ ಎನುತ2 ಮದನಜನೈಯ್ಯನ ದಯವುಮೊದಲ್ಹಾಂಗೆ ಇದ್ದರೆ ನಾನು ಅದ್ಬುತದ್ರವ್ಯ ದಾನ ಬುಧರಿಗಿತ್ತೇನೆ ಎನುತ3 ವಿತ್ತ ಕೋಟಿ ದಾನವನ್ನು ಮತ್ತೆಕೊಡುವೆನೆ ಎನುತ4 ಇಂದಿರೇಶಗೆ ಅಂಜಿಕೊಂಡುಚಂದ್ರ ಸೂರ್ಯರು ತಿರಗೋರಮ್ಮಚಂದಾದ ನಕ್ಷತ್ರ ಬಂದುಅಂಜಿ ಹೋಗಿವೆ ಎನುತ 5 ಹರಿಗೆ ಅಂಜಿಕೊಂಡು ಶರಧಿಮರ್ಯಾದಿಲೆ ಇರುವೋ ನಮ್ಮದೊರೆಗೆ ಅಂಜಿಕೊಂಡು ವಾಯುತಿರುಗಾಡುವನಮ್ಮ ಎನುತ 6 ಅಗ್ನಿಅಂಜಿ ತನ್ನ ದರ್ಪತಗ್ಗಿಸಿ ಕೊಂಡಿಹ ನಮ್ಮಭಾಗ್ಯದರಸು ಅಂಜಿ ಮಳೆಯುಶೀಘ್ರದಿ ಗರೆಯುವನು ಎನುತ 7 ಹಾಸಿಗ್ಯಾಗುವ ಶೇಷ ಅಂಜಿದಾಸಿ ಆಗುವಳಂಜಿ ಲಕುಮಿದೇಶಕಾಲ ಅಂಜಿ ಒಂದುಲೇಸು ಮೀರ್ಯಾವೆ ಎನುತ 8 ವರಗಿರಿ ವಾಸಗೆ ಅಂಜಿಶೇಷ ಜಗವ ಪೊತ್ತಿಹನಮ್ಮಗರಿಯ ಹರವಿ ಗರುಡ ಅಂಜಿಹರಿಯ ಧರಸಿಹನೆ ಎನುತ9 ಸಂಖ್ಯವಿಲ್ಲದ ಗಜಗಳಂಜಿಫಕ್ಕನೆ ನಿಂತಿಹ ವಮ್ಮದಿಕ್ಪಾಲಕರು ಅಂಜಿ ತಮ್ಮದಿಕ್ಕು ಕಾಯುವರು ಎನುತ 10 ನದ ನದಿಗಳಂಜಿಕೊಂಡು ಒದಗಿಮುಂದಕ್ಕೆ ಹರಿವೋವಮ್ಮಸುದತೆ ವೃಕ್ಷ ಅಂಜಿಪುಷ್ಪಫಲವ ಕೊಡುವೊವೆ ಎನುತ 11 ಕಂತು ನೈಯನ ಅರಸುತನಎಂಥದೆಂದು ಬೆರಗುಬಟ್ಟುನಮ್ಮಂಥಾ ಒಣ ಬಳಗಅಂಜಿಲಿವೋದು ಕಾಂತೆ ಅರುವನೆ ಎನುತ 12 ರಮಿ ಅರಸಗಂಜಿಕೊಂಡು ಬ್ರಮ್ಹ ಸೃಷ್ಟಿ ಮಾಡೋನಮ್ಮಸುಮ್ಮನೆ ಸುರರೆಲ್ಲ ಕೂಡಿದಮ್ಮಯ್ಯ ಎನಲೆಂದು ಹರಿಗೆ13
--------------
ಗಲಗಲಿಅವ್ವನವರು
ನಮೋ ನಮೋ ನಾರಾಯಣ ನಮೋ ಶ್ರುತಿ ನಾರಾಯಣ ನಮೋ ಬಾದರಾಯಣ ನರನ ಪ್ರಾಣ ಪ ಶಿವನ ಮೋದದಲಿ ಪಡೆದೆ ಶಿವರೂಪದಲಿ ನಿಂದೆ ಶಿವನೊಳಗೆ ಏರಿದೆ ಶಿವನಿಗೊಲಿದೆ ಶಿವಗೆ ನೀ ಮಗನಾದೆ ಶಿವ ತಾತನೆನೆಸಿದೆ ಶಿವನ ಮಗನಾ ಪಡೆದೆ ಶಿವನ ಕಾಯ್ದೆ1 ಶಿವಗೆ ಸಹಾಯಕನಾದೆ ಶಿವನ ಕಂಗಡಿಸಿದೆ ಶಿವನ ಧನುವನು ಮುರಿದೆ ಶಿವನೊಲಿಸಿದೆ ಶಿವನ ಜಡ ಮಾಡಿದೆ ಶಿವನ ಒಡನೆ ಬಂದೆ ಶಿವಮುನಿಗೆ ಉಣಿಸಿದೇ ಕೇಶವನೆನಿಸಿದೇ 2 ಶಿವನ ಜಡೆಯೊಳಗಿದ್ದ ಶಿವಗಂಗೆಯ ಪೆತ್ತೆ ಶಿವನ ಕೂಡಲಿ ಕಾದಿದವನ ಭಾವ ಶಿವ ಭಕ್ತನ್ನ ನಿನ್ನವನಿಂದ ಕೊಲ್ಲಿಸಿದೆ ಶಿವನ ಶೈಲವನೆತ್ತಿದವನ ವೈರಿ3 ಶಿವ ನುಂಗಿದದ ನುಂಗಿದವನ ಒಡನಾಡುವ ಶಿವ ಪರಾಶಿವ ನಿನ್ನ ಶಿವ ಬಲ್ಲನೇ ಯವೆ ಇಡುವನಿತರೊಳಗೆ ಧವಳ ಹಾಸಾ4 ಶಿವನ ಮೇಲಿದ್ದ ಸಹಭವೆ ರಮಣ ಸರ್ವದಾ ಶಿವನೊಳಗಿಳಿದ ಶಿಷ್ಯನಿವ ಹರಾತೀ ತಲ್ಪ ಶಿವ ಸಮಾನಿಕ ರೂಢ ಶಿವನ ಮನೆ ತೊಲಗಿಸುವ ಶಿವ ಬಾಂಧವಾ 5 ಶಿವನ ಧೊರಿಯೆ ಜ್ಞಾನ ಶಿವ ಹಚ್ಚುವದೆ ಕೊಡು ಶಿವಮಣಿ ಎನಿಸುವ ಸ್ತವ ಪ್ರಿಯನೇ ವಾಹನ ವೈರ ಶಿರವ ತರಿಸಿದೆ ದೇವ ಶಿವ ಪ್ರತಿಷ್ಠಿಸಿದೆ ಶಿವಗೆ ಕಾಣಿಸದಿಪ್ಪೆ6 ಶಿವನ ಸೋಲಿಸಿದವನ ಜವಗೆಡಿಸಿದೆ ಶಿವನು ಕುದರಿಯ ಹೆರವ ಅವನು ಕಾಯಿದ ಗೋವ ಶಿವನವತಾರ ಶಸ್ತ್ರವನು ಹಳಿದೆ 7 ಶಿವನಧರ್Àನಾಗಿ ದಾನವನು ಕೊಂದ ಮಹಿಮಾ ಶಿವಋಷಿ ಪೇಳಿದ ಯುವತಿ ರಮಣಾ ಶಿವನ ವೀರ್ಯವ ಧರಿಸಿದವನ ಮುಖದಲಿ ಉಂಬ ಅವರ ಬೆಂಬಲವೇ ಯಾದವಕುಲೇಶಾ 8 ಶಿವಗೆ ತ್ವಂಚ ಬಾಹುಯೆಂದು ಪೇಳಿ ಮೋಹ ದಿವಿಚಾರಿಗಳ ತಮಸಿಗೆ ಹಾಕುವೆ ಶಿವಮೂರುತಿ ನಮ್ಮ ವಿಜಯವಿಠ್ಠಲರೇಯ ಶಿವನಾಳು ಮಾಡಿ ಆಳುವ ದೈವವೇ9
--------------
ವಿಜಯದಾಸ
ನರಸಿಂಹಾವತಾರ ಕಮಲ ಸ ಮಾಧಿರೂಢ ಪದಾಬ್ಜ ಪೂರ್ಣ ಸು ಭಂಜನ ಮಾಧವ ಮುರಾರೆ ವ್ಯಾಧಿ ಪೀಡೆಯ ಪರಿಹರಿಸು ಮಹ ದಾದಿ ತತ್ವಯಂತ್ರೆ ನುತ ಪ್ರ ಲ್ಹಾದ ರಕ್ಷಕ ನರಹರಿಯೆ ದಹಿಸಖಿಳ ಶತ್ರುಗಳ 1 ಪ್ರಳಯಕಾಲದ ರವಿ ಸಮೂಹದ ಕಳೆಗು ಮಿಗಿಲಾಗಿರುವ ಮುಖದೊಳ್ ಥಳತಳಿಪ ದಂಷ್ಟ್ರಗಳ ತೋರುತ ಕಳೆದು ವದನವನು ಛಲದಿ ಚೀರುತ ದಾನವನ ಕಂ- ಗಳನು ಮುಚ್ಚಿಸಿ ಪಿಡಿದು ತಿಕ್ಕಿದ ಬಲ ಪಯೋನಿಧಿ ನರಹರಿಯೆ ದಹಿಸಖಿಳ ಶತ್ರುಗಳ 2 ಕಂಭದೊಳಗಂದಾದ ರವ ಕೇ- ದಿವಿಜ ಕ- ದಂಬ ಭಯಗೊಂಡಂಬರದ ಮೇಲಿಂಬುಗೊಂಡಿರಲು ಜಂಭ ವೈರಿಯ ಜರಿದು ಕೆಡಹಿದ ಕುಂಭಿ ಕುಂಭ ಭುಜದ್ವಯನ ಮುರಿ ದಂಬುಜಾಲಯರಮಣ ನರಹರಿ ದಹಿಸಖಿಳ ಶತ್ರುಗಳ 3 ಅಡಿಯಿಡುವ ರಭಸಕೆ ದಿಗಿಭಗಳು ನಡು ನಡುಗಲು ನಿಶಾಮುಖದಿ ಕೆಂ ಗಿಡಿಯನುಗುಳುತಲಾದಿ ದೈತ್ಯನ ಪಿಡಿದು ಖತಿಯಿಂಗ ತೊಡೆಯೊಳಿಕ್ಕೀರೈದು ಖರತರ ಕೊಡಲಿಯಂತಿಹ ನಖಗಳಿಂದ ನೊಡಲ ಬಗೆದಿಹ ನರಹರಿಯೆ ದಹಿಸಖಿಳ ಶತ್ರುಗಳ 4 ವರರಥಾಂಗಾದಿಗಳ ದ್ವಾದಶ ಕರದಿ ಧರಿಸುತಲೆರಡು ಕರದೊ ಳ್ಕರುಳಮಾಲೆಯ ಪಿಡಿದು ಮಿಕ್ಕಾದೆರಡು ಹಸ್ತಗಳ ಬೆರಳ ಕೊನೆಗಳ ತಿರುಹಿ ದಾನವ ಸುರವರನಖ ಮುಖದಿಂದ ಬಿಚ್ಚಿದ ನಿರವಧಿಕ ಬಲಪೂರ್ವ ನರಹರಿ ದಹಿಸಖಿಳ ಶತ್ರುಗಳ 5 ದತ್ತ ಸ್ವಾತಂತ್ರ್ಯವನು ಮೀರ್ದಾ ಪತ್ತು ಘಟಿಸುವ ಕಾಲದಲಿ ಪುರು- ಷೋತ್ತಮನ ನೆನೆದವರ ಕೈಪಿಡಿದೆತ್ತುತಿಹನೆಂದು ನಿತ್ಯ ಶಾಸ್ತ್ರಾದಿಗಳ ಶೋಧಿಸು ತುತ್ತುಮರು ಮೊದಲೆಂದ ಪೌರಾ- ಣೋಕ್ತಿಗಳ ನಿಜದೋರು ನರಹರಿ ದಹಿಸಖಿಳ ಶತ್ರುಗಳ 6 ಶೇಷಶಿಖರನಿವಾಸ ತತ್ಪದ ದಾಸರನು ಕಾಪಾಡಿ ಸಲಹುವ ಭಾಷೆಯನು ನೀ ಮರೆಪರೆ ಮದುಪಾಸ್ಯ ಸರ್ವೇಶ ಈಷದಂಜದ ದ್ವೇಷಿ ದುರ್ಜನ ನಾಶಗೈಸುವುದುಚಿತವೈ ಸವ ಕಾಶವ್ಯಾತಕೆ ನರಹರಿಯೆ ದಹಿಸಖಿಳ ಶತ್ರುಗಳ 7
--------------
ತುಪಾಕಿ ವೆಂಕಟರಮಣಾಚಾರ್ಯ
ನಾರಸಿಂಹನೆ ಘೋರರೂಪನೆ ತೋರು ಮೊಗವನು ಕರುಣದಿ ಚಾರುಗಾತ್ರನೆ ಭೀರು ತ್ರಾತನೆ ಸೇರಿಹೆನು ತವ ಚರಣದಿ ಪ ಘೋರತರ ಸಂಸಾರ ಶರಧಿಯ ತೀರ ಗಾಣೆನು ಧೀರನೆ ಪಾರಗಾಣಿಪೊದ್ಯಾರ ಕಾಣೆನುಯಾ ಭವರುಜಹಾರನೆ 1 ದಾನವನ ತಪಜ್ವಾಲೆಯಿಂದಲಿ ಮಾನುಷರು ಕಳವಳನೆಯಾ ಸೂನುತಾರಣ ನೆವದಿ ದಿವಿಜರ ಮಾನವನು ನೆರೆ ಕಾಯ್ದೆಯಾ 2 ದುಷ್ಟಸಂಹರ ಶಿಷ್ಟಪಾಲಕನೆಂಬ ಬಿರುದೆತ್ತಿಹುದಲಾ ಸೃಷ್ಟಿಗೀಶನೆ ಕಷ್ಟ ತೊಲಗಿಸೋ ಶಿಷ್ಟ ನರಸಿಂಹವಿಠ್ಠಲಾ 3
--------------
ನರಸಿಂಹವಿಠಲರು
ನಿದ್ರೆಮಾಡಿದ ರಂಗ ನಿದ್ರೆಮಾಡಿದ ಭದ್ರಹಾಸಿಗೆ ಮೇಲೆ ಸಮುದ್ರರಾಜನ ಮಗಳ ಸಹಿತ ಪ. ವೇದಕದ್ದ ಅಸುರನಿಗಾಗಿ ಆ ಮತ್ಸ್ಯರೂಪವ ಧರಿಸಿ ಸಾಧಿಸಿ ಅಸುರನ ಕೊಂದ ವಾರಿಜಾಕ್ಷ ಬಳಲಿ ಬಂದು 1 ತರಳ ಹಿರಣ್ಯಕಶ್ಯಪನ ಕರುಳ ಬಗೆದು ಕೊರಳೊಳಿಟ್ಟು ನರಮೃಗ ರೂಪವ ತಾಳಿ ನರಸಿಂಹ ಬಳಲಿ ಬಂದು 2 ಬಲಿಯ ದಾನವನ್ನೆ ಬೇಡಿ ನೆಲನ ಮೂರಡಿ ಮಾಡಿ ಒಲಿದು ಬಾಗಿಲನ್ನೆ ಕಾಯ್ದ ವಾಮನನಾದ ಬಳಲಿ ಬಂದು 3 ತÀಂದೆಯ ಮಾತನ್ನೆ ಕೇಳಿ ತಾಯಿ ಶಿರವನ್ನೆ ಅಳಿದು ಏಳುಮೂರು ಬಾರಿ ನೀನು ಭೂಮಿಯ ಪ್ರದಕ್ಷಣೆಮಾಡಿ 4 ಸೀತೆಗಾಗಿ ಪಡೆಯ ಸವರಿ ಸೇತುಬಂಧನವ ಮಾಡಿ ದೂತರಾವಣನ್ನ ಕೊಂದು ಸೀತಾರಾಮ ಬಳಲಿ ಬಂದು 5 ಗೋಕುಲದಲ್ಲಿ ಹುಟ್ಟಿ ಗೋವುಗಳನ್ನೆಲ್ಲ ಕಾಯ್ದು ಗೋಪಸ್ತ್ರೀಯರ ಸೀರೆ ಸೆಳೆದು ಗೋಪಾಲಕೃಷ್ಣ ಬಳಲಿ ಬಂದು 6 ಬತ್ತಲೆ ಕುದುರೆಯನೇರಿ ಮತ್ತೆ ತೇಜಿಯನ್ನೆ ನಡೆಸಿ ಹತ್ತಾವತಾರವ ತಾಳಿ ಮತ್ತೆ ಕಲ್ಕಿರೂಪನಾÀಗಿ 7 ಧರೆಯೊಳತ್ಯಧಿಕವಾದ ಶ್ರೀರಂಗಪಟ್ಟಣದಿ ನೆಲೆಸಿ ಕರುಣದಿಂದ ಭಕ್ತರನ್ನು ಸಲಹಬೇಕು ಹಯವದನನೆ 8
--------------
ವಾದಿರಾಜ
ನಿನ್ನ ಚಿತ್ತಕೆ ಬಂದುದನು ಮಾಡು ಸರ್ವೇಶ ಎನ್ನ ಸ್ವಾತಂತ್ರ್ಯ ಲವಮಾತ್ರ ಉಂಟೇ ಸ್ವಾಮಿ ಪ ಅನಂತಾನಂತ ಜನ್ಮ ಕಾದರು ಒಮ್ಮೆ ಚೆನ್ನ ಗೋಪಾಲ ಕೃಷ್ಣದೇವ ಅ.ಪ. ಛೀ ಎನಿಸು ಜನರಿಂದ ನಿಂದ್ಯವನು ಮಾಡಿಸು ಬಾಯದೆರೆಸೊ ಹೊಟ್ಟೆಗಾಗಿ ಗಾಯನವ ಮಾಡಿಸು ಗುಪ್ತದಲ್ಲೇ ಇರಿಸು ದಾಯಾದಿಗಳಿಗೊಪ್ಪಿಸು ರಾಯಪದವಿಯ ಕೊಡಿಸು ರಾಜ್ಯವೆಲ್ಲವ ಮೆರೆಸು ಕಾಯಕ್ಲೇಶವನು ಪಡಿಸು ಮಾಯಾಧವನೆ ನಿನ್ನ ಮಹಿಮೆ ತಿಳಿದವರಾರು ನ್ಯಾಯ ಅನ್ಯಾಯವಾಗಿ ಶ್ರೀಶ 1 ಧನವನ್ನೆ ಕೊಡಿಸು ದಾನವನೆ ಮಾಡಿಸು ಗುಣವುಳ್ಳ ಮನುಜನೆನಿಸು ಮನಸು ಚಂಚಲನೆನಿಸು ಮಾತುಗಳ ಪುಸಿಯೆನಿಸು ಕ್ಷಣದೊಳಗೆ ಶುದ್ಧನೆನಿಸು ಋಣದ ಭಯವನೆ ಹೊರಿಸು ರಿಕ್ತ ನಾನೆಂದೆನಿಸು ತೃಣದಂತೆ ಮಾಡಿ ನಿಲಿಸು ನಿತ್ಯ ಮನದಿಚ್ಛೆಗಾರನೆ ದಿನ ಪ್ರತಿದಿವಸವಾಗೆ, ದೇವ 2 ಯಾತ್ರೆಯನೆ ಮಾಡಿಸು ಯೋಚನೆಯಲೇ ಇರಿಸು ಪಾತ್ರ ಜನರೊಳು ಪೊಂದಿಸು ಗೋತ್ರ ಉತ್ತಮನೆನಿಸು ಗೋವುಗಳ ಕಾಯಿಸು ಧಾತ್ರಿಯೊಳು ನೀಚನೆನಿಸು ಮೈತ್ರರೊಳು ಕೂಡಿಸು ಮೈಗೆಟ್ಟವನೆನಿಸು ಸ್ತೋತ್ರಕ್ಕೆ ಯೋಗ್ಯನೆನಿಸು ನೇತ್ರ ಮೂರುಳ್ಳವನು ಸ್ತುತಿಸಿದ ಮಹಾಮಹಿಮ ರಾತ್ರಿ ಹಗಲು ಎನ್ನದೆ ದೇವ 3 ಉಪವಾಸದಲ್ಲಿರಿಸು ಉಚಿತ ಭೋಜನ ಉಣಿಸು ಜಪತಪವನೆ ಮಾಡಿಸು ಅಪಹಾಸ್ಯ ಮಾಡಿಸು ಅದ್ಭುತವನೈದಿಸು ಗುಪಿತರೊಳಗಧಿಕನೆನಿಸು ಉಪಕಾರಿ ನರನೆನಿಸು ಉದ್ದಂಡನಿವನೆನಿಸು ವಿಪುಳ ಮತಿಯಲಿ ನಿಲಿಸು ಅಪರಿಮಿತ ಗುಣನಿಧಿಯೆ ಆನಂದ ಮೂರುತಿಯ ಸಫಲಮತಿಯೀವ ದೇವ 4 ವೇದವನು ಓದಿಸು ವೇದಾರ್ಥಗಳ ನುಡಿಸು ಓದಿದರು ದಡ್ಡನೆನಿಸು ಹಾದಿಯನು ತಪ್ಪಿಸು ಹಿತದವರನಗಲಿಸು ಸಾಧು ಮಾರ್ಗವನೆ ಕೊಡಿಸು ಬಾಧೆಗಳನಟ್ಟಿಸು ಭಕುತಿವೆಗ್ಗಳನೆನಿಸು ಉದರಕೋಸುಗ ತಿರುಗಿಸು ಪಾದದಲಿ ಗಂಗೆಯನು ಪೆತ್ತ ಪರಮಾನಂದ ಮೋದ ವಿನೋದವಾಗೆ ದೇವ 5 ಕುಣಿಕುಣಿದಾಡಿಸು ಕಾಶಿಯಲಿ ಪೊಂದಿಸು ಮಣಿ ಭೂಷಣವ ತೊಡಿಸು ಘನ ಕವನ ಪೇಳಿಸು ಕೌತುಕವನೈದಿಸು ವನ ಭುವನದೊಳು ನಿಲಿಸು ಪ್ರಣವ ಮಂತ್ರವ ಜಪಿಸು ಪ್ರಕಟಭಯವನೆ ಬಿಡಿಸು ಬಿನುಗು ವೈರಾಗ್ಯನೆನಿಸು ಜನನಿ ತನುಜರ ಕೂಡೆ ಅನುಸರಿಸಿ ನಡೆವಂತೆ ಎನಗೆ ನೀನೆ ಸದ್ಗತಿ ಸ್ವಾಮಿ 6 ಯಾವುದಾದರು ನೀನು ಇತ್ತುದಕೆ ಎನಗಿಷ್ಟು ನೋವು ಒಂದಾದರಿಲ್ಲ ಜೀವೇಶರೊಂದೆಂಬ ದುರ್ಮತವ ಕೊಡದಿರು ಭಾವದಲಿ ನಾ ಬೇಡುವೆ ಆವಾವ ನರಕದಲಿ ಬಹುಕಾಲವಿಟ್ಟರು ಇಪ್ಪೆ ನಾನೊಲ್ಲೆ ಮಿಥ್ಯಮತವ ಕಾವ ಕರುಣೆ ನಮ್ಮ ವಿಜಯವಿಠ್ಠಲರೇಯ ಪಾವನ್ನ ಮಾಳ್ಪ ಶಕ್ತ ವ್ಯಕ್ತ 7
--------------
ವಿಜಯದಾಸ
ನಿನ್ನ ಪೋಲುವ ಕರುಣಿಗಳನಾರ ಕಾಣೆ ಪ್ರ ಪನ್ನ ತಾ ಪಾಪಹರನೇ ಪ ಎನ್ನಪರಾಧಗಳ ಎಣಿಸದಿರು ಅಜಭವಶ ರಣ್ಯ ಪರಿಪೂರ್ಣೇಂದಿರಾಗಾರ ಅ ಶುದ್ಧಾಖ್ಯ ದ್ವಿಜನು ದಾರಿದ್ರ್ಯದಲಿ ನೆರೆ ನೊಂದು ಸದ್ಧರ್ಮ ತೊರೆದು ಮರೆದು ಶ್ರಾದ್ಧಾದಿ ದುಷ್ಟನ್ನ ಮೆದ್ದು ನಿಂದಿತನಾಗಿ ಬಿದ್ದಿರಲು ಸತಿಯು ಮತಿಯು ತಿದ್ದಿ ಪೇಳಲು ಕೇಳಿ ಶುದ್ಧ ಭಾವದಿ ತವ ಪ ದದ್ವಯಕ್ಕೆರಗಿ ಮರುಗಿ ಪದ್ಮೇಶ ಸಲಹೆನಲು ಸಿದ್ಧಿಸಿ ಮನೋರಥವ ಉದ್ಧಾರವನು ಮಾಡ್ದೆ ನೋಡ್ದೆ 1 ವಿಧಿಯ ಸಂಸ್ತುತಿ ಕೇಳಿ ಮಧ್ವಜಾಕಾರಿ ಮದಡತಮನುದರ ಬಗೆದೇ ಉದಧಿ ಮಥನದಲುದಿಸಿದಮೃತ ದೇವತೆಗಳಿಗೆ ಮುದದಿಂದಲೆರೆದೆ ಪೊರೆದೆ ಹೇಮ ಲೋಚನನ ನೀ ದೌಂಷ್ಟ್ರ ತುದಿಯಿಂದ ಕೊಂದೆÀ ತಂದೆ ಬೆದರದಲೆ ಕರೆದರ್ಭಕನ ನುಡಿಗೆ ಅವನಯ್ಯ ನುದರ ರಕ್ತವನು ಸುರಿದೇ ಮೆರೆದೇ 2 ವೈರೋಚನಿಯ ಭೂಮಿ ದಾನವನು ಬೇಡಿ ಭಾ ಗೀರಥಿಯ ಪಡದಿ ಪದದಿ ಧಾರಿಣಿಯ ದಿವಿಜರಿಗೆ ದಾನವಿತ್ತವನಿಪರ ಗಾರು ಮಾಡಿದೆ ಸವರಿದೇ ನೀರಧಿಯ ಬಂಧಿಸಿ ದಶಾಸ್ಯನ ಬಲವನು ಸಂ ಹಾರ ಮಾಡಿದೆ ರಣದೊಳು ಕಾರಗೃಹದೊಳಗಿಪ್ಪ ಜನನಿ ಜನಕರ ಬಿಡಿಸಿ ತೋರಿಸಿದೆ ವಿಶ್ವರೂಪಾ ಶ್ರೀಪಾ 3 ಆದಿತೇಯರು ಮಾಳ್ಪ ಸಾಧುಕರ್ಮಗಳ ಶುದ್ಧೋದನಾಚರಿಸೆ ತಿಳಿದು ವೇದ ಶಾಸ್ತ್ರಾರ್ಥ ಪುಸಿಯೆಂದರುಪಿ ಜಿನನತಿ ಭೇದಗೈಸಿದೆ ಸಹಿಸಿದೇ ಭೇದಗೊಳಿಸುವ ಕಲಿಯ ಕೊಂದು ಶೀ ಘ್ರದಿ ತಮಸಿಗೈಸಿದೆ ಕಲ್ಕಿ ಭಳಿರೇ ನಿಖಿಳ ಲೋಕವನೆಲ್ಲ ಧರಿಸಿ ಪ್ರಳ ಯೋದಕದಿ ಮಲಗಿ ಮೆರೆದೇ ಪೊರೆದೇ 4 ಹಂಸರೂಪದಲಿ ಕಮಲಾಸನಗೆ ತತ್ವೋಪ ದೇಶಮಾಡಿದೆ ಕರುಣದೀ ವ್ಯಾಸಾವತಾರದಲಿ ದೇವ ಋಷಿ ಪಿತೃಗಳಭಿ ಲಾಷೆ ಪೂರೈಪ ನೆವದೀ ಭಾಷ್ಯತ್ರಯಗಳಿಂದ ಭಗವದ್ಗುಣಂಗಳ ಪ್ರ ಭಾಷ್ಯತ್ರಯಗಳಿಂದ ಭಗವದ್ಗುಣಂಗಳ ಪ್ರ ಕಾಶÀ ಮಾಡಿದೆ ಮೋದದಿ ವಾಸವಾನುಜ ಜಗನ್ನಾಥವಿಠಲ ನಿನ್ನವರ ಸಲ ಹೋ ಸಮರ್ಥಾ ಕರ್ತಾ 5
--------------
ಜಗನ್ನಾಥದಾಸರು
ನಿನ್ನ ಬಗೆ ಬಗೆ ರೂಪಗಳ ಉರಗ ಶಯ್ಯ ರಂಗಯ್ಯಾ ಪ ದಿತಿಸುತ ಸೋಮಕ ಶ್ರುತಿತತಿ ಕದ್ದೊಯ್ಯೆ ಶತಧೃತಿ ತಲೆವಾಗಿ ಚತುರತೆÉಯಿಂದಲಿ ಮತಿಪತಿ ಮತ್ಪಿತಾ ಪ್ರತಿಪತಿ ಕಲ್ಪಕ್ಕೆ ಗತಿಸ್ಥಿತಿ ನೀನೆಂದು ಅತಿ ತುತಿಸಲು ಸಂ ತತ ಹಿತ ಹಿರಿದಾಗಿ ಪ್ರತಿಯಿಲ್ಲವೆನಿಸಿದ್ದು ರಿತ ಪುಂಜದಾನವನ ತರಿದೊಟ್ಟಿ ಮತ್ಸ್ಯಾಕೃತಿಯಾ ಜಯ ಜಯವೆನುತಿರೆ ತ್ರಿಭುವನಾ 1 ಕೃತು ಭುಕು ದೇವಾರಿತತಿ ಸಂಗತಿಯಿಂದ ಮತಿ ಏಕರಾಗಿ ಸಂಮತದಿಂದ ನಡೆದು ಪ ರ್ವತವ ಕಿತ್ತಿ ತಂದು ಉ ನ್ನತವಾದ ಕ್ಷೀರೋದ ಪತಿಯೊಳಗಿಟ್ಟು ಅತಿಬಲದಿಂದ ನಗುತ ಮಥಿಸಲು ಮಹಾ ಕ್ಷಿತಿಧರ ಮುಣಗಿ ಪೋಗೆ ಹಾಹೋ ಎಂದು ಗತಿಗೆಟ್ಟ ಯೆಲ್ಲ ಕೂಗೆ ಕೇಳುತ ಬಂದು ಅತುಳ ಕಮಠನಾಗಿ ಪೊತ್ತೆ ಭಳಿರೆ ಮಿಗೆ2 ಗತಮಂದ ಮಾರೀಚ ಸುತ ಹೇಮನೇತುರಾ ಕ್ಷಿತಿಯ ಕದ್ದೌಯಿದು ದುರ್ಮತಿಯಿಂದ ವಿಬುಧÀರ ಖತಿಗೊಳಾಗೈಸಿ ಹಿಗ್ಗುತಲವ ತಿರುಗುತ್ತ ಪ್ರತಿಕೂಲನಾಗಿ ಸುವ್ರತಗಳ ಕೆಡಿಸುತ್ತ ಮಿತಿ ಮೀರಿ ಪಾತಾಳ ವಾಸವಾಗಿರಲು ಅದ್ಭುತ ಕಿಟಿ ರೂಪವಾಗಿ ರುತಲಿರೆ ಸತತಮರರು ಪಾಡೆ ಏನೆಂಬೆ ಶಿರವಾಗಿ 3 ಚತುರ ಮೊಗನವರನುತಿಸಿ ಪಡೆದು ಪ್ರಾಗ ರ್ವಿತನಾಗಿ ನೀಲಲೋಹಿತನ ಭಕುತಿಯಿಂದ ತತುವೇಶಜನರ ಶಕುತಿ ಕುಂದಿಸಿ ತಾನೆ ರತುನ ಗರ್ಭದೊಳು ದೇವತಿಯೆಂದು ಸಾರಿ ಬಾ ಳುತ್ತ ತನ್ನಾತ್ಮಜ ಭಾಗವತನ ಭಾಧಿಸಿ ಶಿರಿ ಗತಿಯೆಂದು ವಂದಿಸಲೆ ಕಂಭದಿ ಬಂದು ಸುರರು ಪೂಮಳೆ ಚೆಲ್ಲೆ 4 ಸುತಳ ಲೋಕಕ್ಕೀಶ್ವರ ಶತಕೃತ ಕವಿಯ ರಚಿಸಿ ಸಿತನಾಗಿ ರಥ ನನ್ನ ಚ್ಯುತ ಪದಸ್ಥನ ಮಾಡಿ ಸತುವ ಮಾರ್ಗದಲಿ ಪೂರಿತ ಭಾಗ್ಯತನದಲ್ಲಿ ಕೃತಕಾರ್ಯನಾಗಿರೆ ರಿತಮದದಲಿ ತಾ ನುತಿಸಲಾದಿತಿಯ ಗರ್ಭದಲ್ಲಿ ಜ ವಿತರಣೆ ನೆವದಿ ನಿಂದು ಭೂಮಿಯ ಕೊಂಡಜ ತತಿ ವಿಕ್ರಮತೀರಿತವಾದ ದಯಾಸಿಂಧು 5 ಸೂನು ಪೂಜಿತನಾಗಿ ಮುನಿಯಿಂದ ಪಿತನಗೋಸುಗ ಉಗ ಳುತ ರೋಷ ಕಿಡಿಗಳಾದ ಈರೈದು ಬಾಹೋ ದ್ವಿತೀಯ ಜಾತಿಯವನ ಹುತವ ಮಾಡಿದ ಗಂಭೀರಾ ನಿ ರುತ ಸತ್ಯವತಿ ನಂದನಕುವರ ಪರುಶ ಪಾಣಿ ಮೃತ ಜೀವಿಗಳ ಬದುಕಿಸಿದ ಮಹಾಧೀರಾ 6 ಚತುರಾತ್ಮ ಹರಿದೈವ ವೈವಸ್ವತ ಮನುಕುಲೋಧ್ಭವನಾ ಅನುಜ ಸಹಿತ ಪೋಗಿ ಮುನಿಯ ವಾ ರುತಿಯ ಮನ್ನಿಸಿ ಶಿಲಿ ಸತಿಯಳ ಮಾಡಿ ಭೂ ಪುರವಸಾರಿ ಪಿತನಾಜ್ಞ ತಿಳಿದು ಮಾ ರುತಿಯಿಂದ ಕಪಿಯ ವಿಗತಸಂತಾಪನ ಮಾಡಿ ಸೇತುವೆ ಕಟ್ಟಿ ಪತಿತರ ಶಿರ ಚೆಂಡಾಡಿ ಲಂಕಾನಗರ ಹಿತದಿಂದ ಭಕ್ತಗೆ ಪಟ್ಟಗಟ್ಟಿದÀ ನೋಡಿ 7 ಶತ್ರಪತ್ರಾರುಣ ದಳಾಯುತ ನಯನಾದೇವ| ತತಿ ವಂದ್ಯ ಗೋಕುಲ ಸ್ಥಿತಿ ಉದ್ಧಾರಕ | ಭಂಗ ಬಲಾ | ಚರಿತಪೂರ್ಣ ಕಂಸಾರಿ ಯುತ ಷೋಡಶಾಖ್ಯ ಯುವತಿಯರ ತಂದ ಅ| ಪ್ರತಿಮಲ್ಲ | ರತಿಪತಿ ಪಿತ ಫಲ್ಗುಣಗೆ ಭಾ | ಸಾರಥಿ ಎನಿಸಿ ಕಾಳಗದೊಳು | ಧೃತರಾಷ್ಟ್ರಜರ ಕೊಲ್ಲಿಸೆ ಸಭಯಲ್ಲಿ ಪರೀ | ಕ್ಷಿತಿನ ಉಳಿಹಿ ಕೀರುತಿ ಪೊತ್ತ ಗುಣರಾಶಿ 8 ವ್ರತದಿಂದ ಖಳರು ಧರಿತ ಸತ್ಕರ್ಮವ ಮಾಡೆ | ಗತಿಗೆಟ್ಟು ಸುರರ ಉಕುತಿಯಿಂದ ಕೈಮುಗಿದು | ಅಪ್ರಾಕೃತ ಕಾಯ ಶಿಶುವಾಗಿ || ಶ್ರುತಿ ಸರ್ವದಲಿ ಅನೃತವೆಂದು ತಿಳುಪಿ ಉ | ಚಿತ ಮಾರ್ಗದ ಬಿಡಿಸಿ ನಿ | ರ್ಜೀತ ಕಾರು ಪಾರ್ವತಿ ಪತಿಗೆ ಮಾರ್ಗಣವೆನಿಸಿ ತ್ರಿಪುರಾರಿಗೆ ಹುತಗೈಸಿ ಶಿವನ ಗೆಲಿಸಿ ವಿವಶಳನೆ ಪತಿವ್ರತೆಯರ ಲಜ್ಜೆಗೊಳಿಸಿದೆ ವಂಚಿಸೀ 9 ವಿಹಿತ ಧರ್ಮ ಮರೆದು | ಮಮತೆ ಜಾತಿ ಸಂಕರ | ವ್ರತದಲ್ಲಿ ನಾನಾ ದುಷ್ಕøತ ತುಂಬಿರಲು ದೇವತೆಗಳು ಮರುಗಿ ಅ | ರತರಾಗಿ ತುತಿಸಿ ತ್ವರಿತ ಸ್ವಭಾವದಲ್ಲಿ ನಿ | ಸಿತ ಖಡ್ಗಧರಿಸಿ ರಾ ಶೌರಿ | ಸುಕೃತ ನೆನೆವವರಿಗೆ ಭವಸಾಗರ ತಾರಿ10 ಶ್ರುತಿ ಶೀರ್ಷ ಶ್ರುತಿ ಉಪ | ಕೃತಿನಯ ಪಂಚಮ ಶ್ರುತಿ ಪಂಚರಾತ್ರಾ ಸಂ | ವತ ಮೂಲ ರಹಸ್ಯ | ತತುವಾದಿನಾಮನು | ಶ್ರುತಿಕಲ್ಪ ಕಥೆ ಸರ್ವ ಪ್ರತಿಪ್ರತಿ ವರ್ಣ ಸಂತತಿಯಲ್ಲಿ ನೀನೆ ವ್ಯಾ | ಪುತಮೂರ್ತಿ ಸಪ್ತ ಸಪುತ ಭುವನೇಶನೆಂದು ಅಚೌಧ್ಯರೊ ಪ್ಪುತ ಕೊಂಡಾಡುವರು ನಿಂದು | ಭಕುತಪೂ ಜಿತ ಕಾಯಾ ವಿಜಯವಿಠ್ಠಲನೆ ಪಾಲಿಸೊ ಇಂದು11
--------------
ವಿಜಯದಾಸ
ನೀ ಪಾಲಿಸದಿರಲು ನಾ ಪೋಗುವುದು ಎತ್ತ ನೀ ಪೇಳೊ ಪರಮ ಪುರುಷಾ ಅಗಣಿತ ನಾಮ ಸುರ ಪ್ರೇಮ ಸ್ವರ್ಣ ಗಿರಿವಾಸ ನರಕೇಶ ಭೂಷಾ ಪ ಉದರ ಚಿಂತಿಯಲಿ ಉದಯದಲಿ ಯೆದ್ದು ಅವರಿವರ ಸದನದಲ್ಲಿಗೆ ಹೋಗದೆ ಮೃದು ವಾಕ್ಯವಾಡದಲೆ ಮದ ಗರ್ವ ಬಲದಿಂದ ಎದುರಾದವರ ಜರಿದೆ ಮನಸಿನ ಕ್ಲೇಶದ ಪರಸುದತಿಯರನೀಕ್ಷಿಸಿ ವಿದಿತ ಕರ್ಮಗಳ ತೊರೆದೆ ಒದಗಿ ಬಂದ ಪುಣ್ಯ ಬರಿಗೈದು ಪಾಪದ ಹುದಲೊಳಗೆ ಬಿದ್ದು ಸಂಪದವಿಗೆ ದೂರದವನಾ1 ಉತ್ತಮರ ನಿಂದಿಸಿದೆ ಉಚಿತಾರ್ಥ ತಿಳಿಯದಲೆ ಹೆತ್ತವರನ್ನ ಜರಿದೆ ಹತ್ತೆಗರೆದು ಪರಿಪಾಲಿಸಿದ ದಾತರನು ಹೊತ್ತಾಕೆ ಪ್ರೀತಿ ಪೇಳುವೆ ಮತ್ತೆ ಧರ್ಮವೆಯಿಲ್ಲಾ ಮಹಾಕೃಪಣನಾಗಿ ಪರ ವಿತ್ತಾಶೆ ಪೋಗಿ ಮುಳವೆ ಚಿತ್ತಪಲ್ಲಟವಾಗಿ ವಿಷವೆಂಬ ಹಾವಿನ ಹುತ್ತಿನೊಳು ಬಿದ್ದು ಪುನಿತನಾಗದವನಾ 2 ಗುರು ನಿಂದಕರ ನೋಡಿ ಸರವಾಗಿ ಪೋಗಳುವೆನೊ ವೇದ ಸಮ್ಮತವೆ ಬಿಟ್ಟು ಮರೆವೆ ನಿನ್ನಯ ಸ್ಮರಣೆ ಗತಿಗೆ ಸಾಧನವೆಂದು ಅರಿದರಿದು ಬುದ್ಧಿಗೆಟ್ಟು ಹರಿವಾಸರದುಪವಾಸ ಮಾಡುವ ಜನರಿಗೆ ಮುರಳಾಡಿ ಮುಟ್ಟಿಯಲಿಟ್ಟು ಜಾಗರ ತೊರೆದು ಹಿರಿ ಪಾಮರನಾಗಿ ಹರಣ ಸ್ಥಿರವೆಂದು ಮದುಕರಿಯಂತೆ ತಿರುಗುವೆ ನಾ3 ಕಾಸಿಗೆ ಕಾಸು ಘರ್ತಿಸಿ ಗಳಿಸಿ ಬಿಡದೆ ಮೀಸಲಾ ಪದಾರ್ಥವೆಂಬೆ ದೋಷಕ್ಕೆ ಗುರಿಯಾಗಿ ದುರ್ಜನರ ಒಡಗೂಡಿ ರಾಸಿ ದುರನ್ನ ಉಂಬೆ ಆಶೆಯನು ತೊರಿಯದಲೆ ಉಪರಾಗ ಪರ್ವದಲಿ ಕಾಸು ದಾನವನು ಕೊಂಬೆ ಲೇಸಾದರೆ ಹಿಗ್ಗಿ ಹಾರೈಸುವೆನು ಇಷ್ಟು ಕ್ಲೇಶ ಬಂದರೆ ದೈವವೆಂದು ದೂಷಿಸುವೆನಾ4 ಒಂದೇ ಎರಡೇ ಎನ್ನ ಅಪರಾಧ ಪೇಳಿದರೆ ಎಂದೆಗೆಂದಿಗೆ ಸವಿಯದು ನೊಂದು ದುಶ್ಚಿತ್ತದಲಿ ನೀನೆ ಗತಿ ಎಂದು ಬಾಗಿಲ ಕಾಯಿದುದು ಬಂದು ಮಾತುರದಲ್ಲಿ ಬಲು ದಯಾಳು ಎನ್ನ ಸಂದೇಹವನು ತೊಡೆದು ಮುಂದಾದರೂ ಭವದ ಅಂಧ ಕೂಪದೊಳಿಡದೆ ಪೊಂದಿಸುವ ನಿನ್ನವರೊಳಗೆ ವಿಜಯವಿಠ್ಠಲ ಎನಗೆ 5
--------------
ವಿಜಯದಾಸ
ನೀರೆ ನೋಡಿವನಾರೆ ಘೋರರೂಪವು ಮೀರೆ ಸಾರೆ ಬಂದಹನರರೆ ನಿಲ್ಲಲಾರೆ ಮುಪ್ಪಾದಮುಳ್ಳವನೆ ಕಪ್ಪುಬಣ್ಣದ ವರನೆ ಅಪ್ಪನೇಕಿವಗೆನ್ನನೊಪ್ಪಿಸಿದನೆ ದಾನವನು ತಾಂ ಬೇಡಿ ದಾನಿನಿಯಂ ತುಳಿದಾಡಿ ನ್ಯೂನತೆಯ ಪೊಂದಿಸಿದ ಜ್ಞಾನಿಯಿವನೆ ಗಾತ್ರದೋಳಿವನಂತೆ ಗಾತ್ರಮುಳ್ಳವರಿಲ್ಲ ಸರ್ವತ್ರ ಬಳಸಿ ನಿಂತಿರ್ಪನಿವನೆ ತೃಣದಿ ಶುಕ್ರನ ಕಣ್ಣನಿರಿದ ವರನೆ ಅಣುರೇಣು ತೃಣಾಕಾಷ್ಠ ಪೂರ್ಣನಿವನೆ ಪ್ರಣವ ಪ್ರತಿಪಾದ್ಯನೆನಿಸುವವನೆ ಫಣಿತಲ್ಪಿ ಶೇಷಾದ್ರಿವಾಸ ತಾನೆ
--------------
ನಂಜನಗೂಡು ತಿರುಮಲಾಂಬಾ