ಒಟ್ಟು 149 ಕಡೆಗಳಲ್ಲಿ , 48 ದಾಸರು , 132 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಲ್ಲಾ ಶಾಸ್ತ್ರದ ಸಾರದ ತಿಳಲ್ಮನ ದಲ್ಲಿ ಹರಿಯನು ಕಾಂಬುದಕೆ ಪ. ಮನದಲಿ ಹರಿಯನು ಕಾಂಬುವ ಸೊಬಗು ಬಲ್ಲಿದ ವೈಕುಂಠಕೋಡ್ವದಕೆ ಅ. ವಿಧಿನೀಷೇಧಗಳಾಚರಿಸುವುದು ವಿಧ ವಿಧ ಜೀವರ ಸಾಧನಕೆ ವಿಧ ವಿಧ ಸಾಧನ ನಂತರ ತಿಳಿವುದು ವಿಧಿ ಜನಕನ ಪದಪಿಡಿವುದಕೆ 1 ಸ್ನಾನಜಪಾಹ್ನೀಕಗಳೆಲ್ಲವು ತನ್ನ ಧ್ಯಾನಕೆ ಶ್ರೀಹರಿ ನಿಲ್ವುದಕೆ ಧ್ಯಾನಕೆ ಶ್ರೀಹರಿ ನಿಂತ ಮೇಲೆ ಸು ಜ್ಞಾನದಿಂದ ತನ್ನರಿವುದಕೆ 2 ನೆಲೆ ಇಲ್ಲದ ಕರ್ಮಾಳಿಗಳ್ ದೇಹದ ಮಲಿನ ತೊಳೆದು ಶುದ್ಧಿಗೈವುದಕೆ ಮಲಿನ ತೊಳೆದು ಮನಶುದ್ಧದಿ ಹೃದಯದಿ ಇಳೆಯರಸನ ನೆಲೆ ಅರಿವುದಕೆ 3 ಅಗ್ನಿ ಹೋತ್ರಯಜ್ಞಾದಿ ಕಾರ್ಯಗಳ್ ಶೀಘ್ರದಿ ಹರಿಯನು ಕಾಂಬುದಕೆ ಶೀಘ್ರದಿ ಹರಿಯನು ಕಂಡ ಮ್ಯಾಲೆ ಇವು ಅಗ್ರಜವಲ್ಲೆಂದರಿವುದಕೆ 4 ರಂಗನ ಮೂರ್ತಿಯನಿಟ್ಟು ಪೂಜಿಸುವುದು ಅಂಗÀದಲ್ಲಿ ತಾನು ಕಾಂಬುದಕೆ ಅಂಗದಲ್ಲಿ ತಾನು ಕಂಡ ಮೇಲೆ ಇವು ಅಂಗಡಿ ಎಂತೆಂದರಿವುದಕೆ 5 ನಿತ್ಯ ನೈಮಿತ್ತಿಕ ಕರ್ಮಗಳೆಲ್ಲವು ಚಿತ್ತದಿ ಹರಿಯನು ತೋರ್ಪುದಕೆ ಚಿತ್ತದಿ ಹರಿಯನು ಕಂಡ ಮೇಲೆ ಇವು ಮತ್ರ್ಯರಿಗೆಸಗಿ ಮೌನಾಗ್ವುದಕೆ 6 ಚಾಂದ್ರಾಯಣ ವ್ರತ ಉಪವಾಸಗಳು ಇಂದ್ರಿಯ ನಿಗ್ರಹ ಮಾಡ್ವದಕೆ ಇಂದ್ರಿಯ ಚಲಿಸದೆ ಮನ ಧೃಡವಾಗಲು ಹಿಂದಿನ ಹಂಬಲ ತ್ಯಜಿಪುದಕೆ 7 ಮಧ್ವಶಾಸ್ತ್ರದ ಸಾರತತ್ವ ಮನ ಶುದ್ಧಿಯಗೈಸುತ ಸುಖಿಪುದಕೆ ಶುದ್ಧರಾದ ಶ್ರೀ ಗುರು ಕರುಣವು ಅನಿ- ರುದ್ಧನ ಹೃದಯದಿ ತೋರ್ವದಕೆ 8 ನೇಮದಿ ದ್ವಾದಶ ನಾಮಧಾರಣೆ ಹರಿ ನಾಮದ ದೇಹ ಬೆಳಗ್ವದಕೆ ಕಾಮಕ್ರೋಧವ ಬಿಡುವುದು ವಳಗಿನ ಶ್ರೀ ಮನೋಹರನನು ಕಾಂಬುದಕೆ 9 ಹೊರಗಿನ ವಸ್ತು ದೃಷ್ಟಿಸುವುದು ಶ್ರೀ ಹರಿ ವರ ವಿಶ್ವರೂಪವ ತಿಳಿವುದಕೆ ವರ ವಿಶ್ವರೂಪಧ್ಯಾನದಿಂದ ತನ್ನ ವರ ಬಿಂಬನ ಕಂಡು ನಲಿವುದಕೆ 10 ಅರಗಣ್ಣ ಮುಚ್ಚುವ ಅಭ್ಯಾಸಗಳೆಲ್ಲ ಸ್ಥಿರಮನವಾಗುವ ಕಾರಣಕೆ ಸ್ಥಿರಮನ ಶ್ರೀ ಹರಿ ದಯ ಮಾಡಲು ನೇತ್ರ ತೆರೆಯದೆ ಬಿಂಬನ ಕಾಂಬುದಕೆ 11 ಶಾಸ್ತ್ರದಿ ಪೇಳುವ ಧ್ಯಾನ ಪ್ರಕರಣವು ಶ್ರೋತ್ರದಿ ಕೇಳುತ ತಿಳಿವುದಕೆ ಗಾತ್ರದಿ ಶ್ರೀ ಗುರು ಕೃಪೆ ಮಾಡಲು ವಳ ನೇತ್ರದಿ ಸರ್ವವು ಕಾಂಬುದಕೆ 12 ಪಕ್ಷಮಾಸ ವ್ರತ ಪಾರಾಯಣ ಅಪ- ರೋಕ್ಷ ಪುಟ್ಟಲು ದಾರಿ ತೋರ್ವದಕೆ ಶಿಕ್ಷ ರಕ್ಷಕರಾದ ಗುರುಕರುಣವು ಅಪ- ರೋಕ್ಷ ಪುಟ್ಟಿಸಿ ನಿಜವರಿವುದಕೆ13 ಪರಿ ಜನರನು ಸೇವಿಸುವುದು ತನ್ನ ಪರಮಾರ್ಥತೆ ದೂರಾಗ್ವದಕೆ ಗುರುಚರಣವ ಸೇವಿಸುವುದು ಶ್ರೀ ಹರಿ ಅರಘಳಿಗಗಲದೆ ಪೊರೆವುದಕೆ 14 ಡಾಂಭಿಕ ಸಾಧನವೆಲ್ಲವು ಶ್ರೀ ಹರಿ ಡಿಂಬದೊಳಗೆ ಮರೆಯಾಗ್ವದಕೆ ನಂಬಿ ಶ್ರೀ ಹರಿ ಗುರು ಚರಣವ ಪೊಗಳ್ಪದು ಡಿಂಬದೊಳಗೆ ಹರಿ ಕಾಂಬುದಕೆ15 ಕರ್ಮ ವೈರಾಗ್ಯಗಳೆಲ್ಲವು ಪುಟ್ಟಿಸಲೂ ಭಕ್ತಿ ಜ್ಞಾನಕ್ಕೆ ಪುಟ್ಟಲು ಭಕ್ತಿ ಜ್ಞಾನ ಪಾಂಡುರಂಗ ವಿಠ್ಠಲನೊಬ್ಬನ ಪಿಡಿವುದಕೆ 16 ಯಾತ್ರೆ ತೀರ್ಥ ಚರಿಪುದು ಶ್ರೀ ಹರಿ ತನ್ನ ಗಾತ್ರದಲ್ಲಿರುವನೆಂದರಿವುದಕೆ ಗಾತ್ರವೆ ಕ್ಷೇತ್ರವೆಂದರಿತ ಮೇಲೆ ಸ ರ್ವತ್ರದಿ ವಿಠಲನ ಕಾಂಬುದಕೆ17 ಎಂತೆಂತೋ ಮಾರ್ಗಗಳರಸುವುದು ಚಿಂತನೆಗೆ ಹರಿ ನಿಲ್ವುದಕೆ ಚಿಂತನೆಗೆ ಹರಿ ನಿಂತ ಮೇಲೆ ತಾನು ಶಾಂತನಾಗಿ ಜಡನಾಗ್ವದಕೆ 18 ಹೊರಗಿನ ಸಂಸ್ಕಾರಗಳೆಲ್ಲವು ತನ್ನ ವಳಗಿನ ಸಂಸ್ಕಾರ ತೆರೆವುದಕೆ ವಳಗಿನ ಸಂಸ್ಕಾರ ತೆರೆದಮ್ಯಾಲೆ ತನ್ನ ಇರವರಿತು ಸುಖ ಸುರಿವುದಕೆ19 ಸಾಸಿರ ಜನ್ಮದ ಸಾಧನಗಳು ಹರಿ ದಾಸನಾಗಿ ತಾನು ಮೆರೆವುದಕೆ ದಾಸನಾದ ಮೇಲೆ ಕ್ಲೇಶಕೆ ಸಿಲುಕದೆ ಶ್ರೀಶನ ಹೃದಯದಿ ಕಾಂಬುದಕೆ 20 ಸಾರತತ್ವವನು ಅರಿವುದು ಗುರು ಮಧ್ವ- ಚಾರ್ಯರ ಮಾರ್ಗವ ಪಿಡಿವುದಕೆ ಪ್ರೇರಕ ಗೋಪಾಲಕೃಷ್ಣವಿಠಲ ಮನ ಸೇರಲು ಕಂಡು ತಾ ನಲಿವುದಕೆ 21
--------------
ಅಂಬಾಬಾಯಿ
ಎಷ್ಟು ದಿನದ ಪೂಜೆ ಹಿಡಿದೆಣ್ಣಾ ಸತಿಯೆಂಬ ಮಾರಿದಿ- ನ್ನೆಷ್ಟು ದಿನ ಪೂಜೆ ಮಾಡಬೇಕಣ್ಣಾ ಪ ಎಷ್ಟು ದಿನದ ಪೂಜೆ ಹಿಡಿದಿ ನ್ನೆಷ್ಟುದಿನ ಮುಂದೆ ಬಾಕಿ ಉಳಿದಿದೆ ಕಷ್ಟಕಂಜದೆ ಬಿಡದೆ ಅನುದಿನ ನಿಷ್ಠೆಯಿಂದ ಪೂಜೆ ಮಾಡುವಿ ಅ.ಪ ಒಬ್ಬರ ಮನೆ ಮುರಿದು ತರುವಿ ಅವಳಿಗೇನೆ ಹಬ್ಬಮಾಡಿ ಉಣಿಸುತಿರುವಿ ಮತ್ತು ಇನ್ನು ಒಬ್ಬರೈತರ ಬೊಬ್ಬೆ ಹೊಡೆಯುವಿ ದಬ್ಬಿ ಓಡಿಸುವಿ ಹಬ್ಬ ಹುಣ್ಣಿಮೆ ಬರಲು ವೈಭವದುಬ್ಬಿಉಬ್ಬಿವಸ್ತ್ರ ಒಡವೆ ಅಬ್ಬರದಿಂದುಡಿಸಿ ತೊಡಿಸಿ ಮಬ್ಬಿನಿಂದ ಹಿಗ್ಗುತಿರುವಿ 1 ಧನವ ತಂದು ಅವಳಿಗರ್ಪಿಸಿ ಮತ್ತು ನಿನ್ನಯ ಮನವ ಅವಳ ವಶಕೆ ಸಲ್ಲಿಸಿ ಎಂಟುಗೇಣಿನ ತನುವು ಅವಳಾಧೀನದಲ್ಲಿರಿಸಿ ಕುಣಿವಿ ಪಶುವೆನಿಸಿ ಪಾಲಿಸಿ ದಿನಗಳೆಯುವಿ ನೋಡಿಕೊಳ್ಳದೆ 2 ಬಂದಕಾರ್ಯ ಮರೆದುಬಿಟ್ಟ್ಯಲ್ಲ ಹೆಡತಲೆಮೃತ್ಯು ಹಿಂದೆ ನಿಂತು ನಲಿಯುತಾಳಲ್ಲ ಹೇ ಪಾಪಿ ನೀನು ಒಂದೂ ವಿಚಾರ ಮಾಡಿ ಅರೀಲಿಲ್ಲ ಮಂದನಾದೆಲ್ಲ ತಂದೆ ಶ್ರೀರಾಮನ್ನಂತಂಘ್ರಿಗೊಂದಿ ಭಜಿಸಿ ದಾಸನಾಗಿ ಅಂದಮಾದ ನಿತ್ಯಮುಕ್ತಿ ಪಡೆವ ಸುಸಂಧಿ ನಡುವೆ ಹೋಗುತಾದರ್ಲ3
--------------
ರಾಮದಾಸರು
ಏಕೆ ಮರೆದಿದ್ದೆನಯ್ಯಾ ಎನ್ನೊಳು ನಾ ಗೋಪಾಲಶ್ರೀಕಾಂತ ನಿನ್ನ ಪಾದದ ಚಿಂತೆಯ ಬಿಟ್ಟಜ್ಞನಾಗಿ ಪಕಾಯವೆ ಸತ್ಯವಿದೆಂದು ಕಾಣದೆ ನಾನಿಲ್ಲಿ ಬಂದುಮಾಯೆಗೊಳಗಾಗಿ ನಿಂದು ಮತ್ತರ ಸಂಗದಿನೊಂದುಜಾಯೆ ಸುತರ್ಗತಿಯೆಂದು ಧ್ಯಾನಿಸಿ ದುಃಖದಿನೊಂದುಬಾಯ ಬಡುಕರೊಳ್ನಿಂದು ಬನ್ನಬಟ್ಟುಳಿಸೆಂದು 1ಆಶೆಗಳಿಗೊಳಗಾಗಿ ಆನಂದಮಾರ್ಗವ ನೀಗಿವಾಸನೆಗಳಿಂದ ಪೋಗಿ ವಾದಿಸುತಲಿ ಚೆನ್ನಾಗಿಮೋಸಹೋಗಿ ಮುಖಬಾಗಿ ಘಾಸಿಯಾಗಿ ಗುಣಪೋಗಿಕಾಸು ವೀಸಾ ಧಾನ್ಯಕಾಗಿ ದಾಸನಾಗಿ ಪರರಿಗೆ 2ಎಲ್ಲರೊಳುವಾದಗಳವಾಡಿ ಬಲ್ಲವನಂದದಿ ಕಾಡಿಖುಲ್ಲರಾ ಮಾರ್ಗವ ಕೂಡಿ ಕೂಳಿಲ್ಲದಿಲ್ಲಿಗೆ ಬಾಡಿತಲ್ಲಣದೊಳಗೋಲಾಡಿ ತಬ್ಬಿಬ್ಬೊ ಕರ್ಮವ ಮಾಡಿಕಲ್ಲೆದೆಯನನೆನ್ನನು ಕಾಯಬೇಕು ಗೋಪಾಲಾರ್ಯ 3
--------------
ಗೋಪಾಲಾರ್ಯರು
ಏನಂತ ನರನೆನ್ನಬೇಕೋ ಜಾನಕೀಶನ ಧ್ಯಾನ ಮನದೊಳಿಲ್ಲದವಗೆ ಪ ಸುಕೃತ ಒಡಗೂಡಿ ಮಾನವನಾದದ್ದು ಖೂನವಿನತಿಲ್ಲದೆ ಜ್ಞಾನಶೂನ್ಯನಾಗಿ ಶ್ವಾನನಂದದಿ ಕೂಗಿ ಹೀನಭವಕೆ ಬಿದ್ದು ನರಕಕ್ಹೋಗುವನಿಗೆ 1 ತಾನಾರೆಂಬ ವಿಚಾರವು ಇಲ್ಲದೆ ಏನೇನು ಸುಖವಿಲ್ಲದ್ಹೇಯಸಂಸಾರದ ಕಾನನದೊಳು ಬಿದ್ದು ಕುನ್ನಿಯಂದದಿ ಮಹ ಜಾಣರ ಜರೆಯುತ ಜವಗೀಡಾಗುವನಿಗೆ 2 ಹೇಸಿಪ್ರಪಂಚದ ವಾಸನ್ಹಿಡಿದು ಹಿಂದ ಕ್ಕೇಸೇಸು ಜನಮದಿ ಘಾಸಿಯಾದಂಥಾದ್ದು ಸೋಸಿಲಿಂ ತಿಳಕೊಂಡು ದಾಸಾನುದಾಸರ ದಾಸನಾಗದೆ ಕಾಲಪಾಶಕ್ಹೋಗುವನಿಗೆ 3 ಮಿಥ್ಯೆ ಕಾಣುವುದೆಲ್ಲ ನಿತ್ಯವಲ್ಲೆನ್ನುತ ಸತ್ಯವೃತ್ತಿ ತನ್ನ ಚಿತ್ತದೋಳ್ಬಲಿಸಲು ನಿತ್ಯ ಸುಖವನೀವ ಉತ್ತಮವಾದಂಥ ಹೊತ್ತನು ಕಳಕೊಂಡು ಮೃತ್ಯುವಶನಾಗುವಗೆ 4 ಸುಮನಸಕಲ್ಪದ್ರುಮ ತಂದೆ ಶ್ರೀರಾಮ ನಮಿತ ಚರಣ ಕಂಡು ನಮಿಸಿ ಪ್ರಾರಬ್ದವ ಕ್ರಮದಿ ಗೆಲಿದು ನಿಜ ವಿಮಲಪದ ಪಡೆವ ಸಮಯವನರಿಯದೆ ಯಮಲೋಕ ಸೇರುವಗೆ 5
--------------
ರಾಮದಾಸರು
ಕಂಡೆ ನಾಕಂಡೆ ನಾಕಂಡೆ ಕಾಳಿಂಗನ ಮಂಡೆಯಮೇಲೆ ಕುಣಿವ ಕೃಷ್ಣನ್ನ ಪ ತಕ ತಕ ಧಿಮಿ ಧಿಮ್ಮಿ ಧಿಮ್ಮಿ ಧಿ- ಮ್ಮಿಕೆಂದು ಕುಣಿವ ಕೃಷ್ಣನ್ನ ನಾಕಂಡೆ ಅ.ಪ ಹೆಡೆಯ ಮೇಲೆ ತಾ ಎಡಗಾಲಿರಿಸಿ ಎಡಗೈಯಲಿ ಬಾಲ ಹಿಡಿದವನ ಬಿಡದೆ ಅಭಯಹಸ್ತವ ತೋರೊ ಒಡೆಯ ಕೃಷ್ಣಮೂರುತಿಯ ನಾಕಂಡೆ ಸ್ವಪ್ನದಲಿ ನಾಕಂಡೆ ಕಂಡೇನೊ ಸಂಪನ್ನಮೂರ್ತಿಯ ಕಂಡೇನೊ 1 ಗೋವಲರ ಮನೆಯ ಪಾಲುಂಡವನ ಗೋವುಗಳ ಕಾಯ್ದ ಗೋಪಾಲನ್ನ ಗೋವಿಂದನೆಂಬ ದೇವರದೇವನ್ನ ಓವಂತೆ ನಾನು ಕಂಡೇನು ಕಂಡೇನು ಕುಣಿಯುತ ಬಂದ ಕೃಷ್ಣನ್ನ ತಣಿಯುವ ಹಾಗೆ ನೋಡಿದೆನು 2 ಗೋವಿಂದನಾಗಿ ತಲೆಕಾಯ್ವವನ ಗೋವರ್ಧನವನೆ ಕೊಡೆಯಾದವನ ಗೋವನಿತೆಯರ ಮಾಮಾಯನನ್ನ ಅವ್ವಯ್ಯ ಚೆನ್ನಾಗಿ ಕಣ್ತುಂಬ ಕಂಡೆ ಆ ಮುದ್ದು ಬಾಲಕೃಷ್ಣನ್ನ ಕಂಡೆ ಸಾಮುದ್ರಿಕಾ ಸಿರಿಯನ್ನಕಂಡೆ 3 ಅಸುರ ಕಂಸನ ಅಸುವನ್ನು ನೀಗಿದನ ಬೆಸೆದ ಕುಬ್ಜೆಯ ಡೊಂಕ ತಿದ್ದಿದವನ ಅಸುತೆಗೆಯ ಬಂದವಳ ಅಸುವನೆ ಹೀರಿದನ ಮಿಸುಕದಂತೆ ಕಂಡೆ ನಾಕಂಡೆ ನಾಕಂಡೆ ಜಾಜಿಪುರೀಶನ ಕಂಡು ಧನ್ಯನಾದೆ ಸಾಜದಿ ದಾಸಾನುದಾಸನಾದೆ 4 ಪಾಪಿನಾ ಕರುಣೆಯ ತೋರಿ ಸಲಹೊ ಭಾಪುರೆ ಗಟ್ಟಿಸುವ ಪುಟ್ಟಪಾದವಿಟ್ಟು ಮೋಪಾಗಿ ಮೆರೆವ ದುಷ್ಟರ ಮೆಟ್ಟೊ ಪುಂಡರ ಪುಂಡರಿಗೆ ಪುಂಡನಾದವನೆ ಪುಂಡರೀಕಾಕ್ಷ ಚನ್ನಕೇಶವನೆ 5
--------------
ನಾರಾಯಣಶರ್ಮರು
ಕರುಣಿಸಬಾರದೆ ಕಂಜನಾಭನೆ ಕೈಯ ಮುಗಿವೆನಯ್ಯಾಪ. ವರ ಫಣಿಗಿರಿ ಸುಸ್ಥಿರಮಂದಿರ ಶ್ರೀ ಗುರು ಜನಾರ್ದನಾಮರಗಣ ಪಾಲಕಅ.ಪ. ಅಪರಾಧಗಳಾಲೋಚಿಸುವರೆ ಸರೀ- ಸೃಪರಾಜನಿಗಳವೆ ಕೃಪೆಯಿಂದಲಿ ಸಂರಕ್ಷಿಸದಿದ್ದರೀ- ಯಪಕೀರ್ತಿಯು ಶ್ರೀಹರಿ ನಿನಗಲ್ಲವೆ 1 ಪುರಂದರ ಮುಖ್ಯ ದಾಸರಂತೆ ಗುಣವೆನಗಿನಿತಿಲ್ಲ ಜನರ ವಿಡಂಬನಕೆ ದಾಸನಾದರೂ ಘನ ಕೃಪಾರ್ಣವನೆ ಕನಕಾಂಬರಧರ2 ಲಕ್ಷ ಮಾತ್ಯಾತಕೆ ಲಕ್ಷ್ಮೀನಾರಾಯಣ ರಕ್ಷಾಮಣಿ ನೀನೆ ಪಕ್ಷೀಂದ್ರವಾಹನ ಪಾಪವಿಮೋಚನ ತ್ರ್ಯಕ್ಷಮಿತ್ರನೆನ್ನಕ್ಷಿಗೋಚರನಾಗಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕರುಣೆ ಬಾರದೇಕೊ ಕಂಜಜನಯ್ಯಾ ಪ ಶರಣು ಮಾಡುವೆ ತರುಣೀವರದನೇ ಅ.ಪ ಕರವನೆ ನೀಡೆಲೊ ರಂಗಾ ನಿನಗಿದು ತರವೆ ನೋಡೆಲೊ 1 ದಾಸವಾರ್ಚಿತಾ ಮಮದೇಶ್ವಿಕ್ಕ ತುಲಶೀರಾಮಾ ದಾಸನಾದೆನೊ ಪೋಷಿಸೊ ಪರದೇವಾ ದಾಸನಾದೆನೊ 2
--------------
ಚನ್ನಪಟ್ಟಣದ ಅಹೋಬಲದಾಸರು
ಕಾಯಬೇಕೋ ಶಂಕರೇಶ್ವರ ನೀನೆನ್ನನೂ ದೇವಾ ಪ ಮಾಯಧಾರಿಪ್ರೀಯನಹುದೋ ಕಾಯಜಾಂತಕನೇ ಆಯತಾರ್ಥವನ್ನು ತೋರೋ ಪಾರ್ವತೀಶನೆ ದೇವನೆ 1 ಇಂತುದಿನವು ಗಳಿಸಿಯಿರುವ ಅಂತು ದು:ಖಕ್ಕೆ ಪಂತವ್ಯಾಕೊ ಪಾಲಿಸೆನ್ನೊಳಂತರಂಗಮಂ ಶಂಭೂ 2 ದಾಸ ತುಲಸಿರಾಮ ನಿನ್ನ ದಾಸನಾದೆನೂ ದೋಷ ರಹಿತನ ಮಾಡೆನ್ನ ಮೋಸಹೋದೆನೂ-ಗುರುವೇ 3
--------------
ಚನ್ನಪಟ್ಟಣದ ಅಹೋಬಲದಾಸರು
ಕಾಲ ಮೃತ್ಯು ಗೆಲಿಯಲಿಲ್ಲ ಕಾಲ ಪ ಪೃಥ್ವಿಯಮೇಲೆ ಕೃತಕೃತ್ಯನಾಗಲು ಬಂದ ವೃತ್ತಾಂತ ತಿಳಿಯಲಿಲ್ಲಅ.ಪ ನಂಬಿಕೊಂಡೆಯಲ್ಲ ಈ ಜಗ ಬೆಂಬಲ ಬರೋದಲ್ಲ ಜಂಬಬಡುವಿ ಸುಳ್ಳೆ ಮನದ ಡಂಬವ ಬಿಡಲಿಲ್ಲ ಕುಂಭಿನಿಸುಖದ ಹಂಬಲದಲಿ ದಿನ ಶುಂಭತನದಿಗಳೆದಿಂಬಿಲ್ಲದ್ಹೋಗುವಿ 1 ಕುಮತಿಯ ಬಿಡಲಿಲ್ಲ ಮಾಯಮಮತ ಕಡಿಯಲಿಲ್ಲ ನಮಿಸಿ ಬಿಡದೆ ಸದಾ ಸುಮನಸರೊಳಗಾಡಿ ಭ್ರಮೆಯನಳಯವಿಲ್ಲ ಬಂದ ಸಮಯ ತಿಳಿಯಲಿಲ್ಲ ವಿಮಲಸುಖದನಿಜ ಕ್ರಮವ ತಿಳಿಯಲಿಲ್ಲ 2 ಆಸೆ ನೀಗಲಿಲ್ಲ ವಿಷಯದ್ವಾಸನ್ಹಿಂಗಲಿಲ್ಲ ಕ್ಲೇಶ ತೊಡೆಯಲಿಲ್ಲ ಲಂಪಟ ಮೋಸದಿಂದುಳಿಲಿಲ್ಲ ಶೇಷಶಯನ ಮಮ ಶ್ರೀಶ ಶ್ರೀರಾಮನ ದಾಸನಾಗಿ ಭವಪಾಶ ಗೆಲಿಯಲಿಲ್ಲ 3
--------------
ರಾಮದಾಸರು
ಕೀಳುಯೋಚನೆ ಬಿಡು ಖೋಡಿಮನವೇ ಪಡಿ ಮಾಧವನಿಂ ಬೇಡಿಪ ಹಾಳುಯೋಚನೆ ಮಾಡಿ ಮಾಡಿ ನೀನು ಬೀಳುಗಳೆಯ ಬೇಡ ತಿಳಿ ಹುಚ್ಚ ಖೋಡಿ ತಾಳದೆ ಜಡಿತಾರ ಒದೆದು ಎಳೆದಾಡಿ 1 ನಾಶನ ಈ ಜಗಸುಖ ಒಂದೇ ತಾಸಿನ ಮೋಜಿದು ಇರದು ಕಡೆತನಕ ಮೋಸದಿ ಸಿಲ್ಕಬೇಡಿದಕೆ ಇದ ರ್ವಾಸನಳಿದು ಬೇಗ ಕಡಕೋ ಭವತೊಡಕ 2 ದಾಸರು ಪೇಳಿದ ಸೊಲ್ಲುಕೇಳಿ ಧ್ಯಾಸಿಟ್ಟು ದೋಷದಿಂ ಕಡೆಗ್ಹಾರಿ ನಿಲ್ಲು ದಾಸನಾಗಿ ಭವಗೆಲ್ಲು ತಂದೆ ಶ್ರೀರಾಮನ ಪಾದಕೆ ಸಲ್ಲು 3
--------------
ರಾಮದಾಸರು
ಕೃಪಣ ಶಿಷ್ಯನಿಗೇಅಪವರ್ಗಪ್ರದ ಹರಿಯೆ | ಅಪವಾದ ಕಳೆಯೋ ಅ.ಪ. ದಾಸನಾದವನು ನಿ | ರ್ದೋಷಿ ಎನುವುದು ನಿಜದಾಸನೆನೆ ಹನುಮಂಗೆ | ಲೇಸು ಸಲ್ಲುವುದೋ |ದಾಸರನುಯಾಯಿ ನರ | ದೂಷಣೆಗೆ ಒಳಗಾಗಿಕ್ಲೇಶ ಪಡುವುದು ಉಚಿತೆ | ಶ್ರೀಶ ಸರ್ವೇಶಾ 1 ಫಲವು ತುಸು ಕೆಟ್ಟಿರಲು | ಆ ಉಪಭಾಗವ ಬಿಸುಟುಮೆಲುವುದಿಲ್ಲವೆ ಫಲವ | ಹಲವು ಜನರೂಕಲಿಮಲಘ್ನನೆ ಹರಿಯೆ | ಕಲುಮಷವನೆ ಕಳೆಯುತ್ತಕಲುಷ ದೂರನ ಗೈಯ್ಯೋ | ಬಲು ದಯಾ ಪೂರ್ಣಾ 2 ಶಿರಿಮಾಧವಾ ಭಿನ್ನ | ಗುರು ಗೋವಿಂದ ವಿಠಲಕರುಣಾಪಯೋನಿಧಿಯೆ | ಸರ್ವಾಂತರಾತ್ಮತರಳಗೊದಗಿಹ ವಿಪದ | ಪರಿಹರವ ಗೈಯ್ಯುತ್ತಕರುಣಿಸೆನೆ ಮನಶಾಂತಿ | ಹರಿಯೆ ಭಿನ್ನವಿಪೇ 3
--------------
ಗುರುಗೋವಿಂದವಿಠಲರು
ಕೆಟ್ಟೆ ಕೆಟ್ಟೆ ಕೆಟ್ಟೆ ಕೃಷ್ಣ ದೃಷ್ಟಿಕೊಟ್ಟು ಕೈಯ ಪಿಡಿಯೋ ಪ ಮೂರ್ತಿ ಬಿಟ್ಟರೆನ್ನ ಕಷ್ಟಬಿಡಿಸೆಯಾರ ಬೇಡಲೋ ಅ.ಪ ಕಟ್ಟಿತಾಳಿ ತೊರೆಯೆ ಗಂಡ ಕಷ್ಟವಲ್ಲೆ ಸತಿಗೆ ಪೇಳು ಶಿಷ್ಠ ದೊರೆಯೆ ದಾಸನೆಂಬಿ ಶ್ರೇಷ್ಠತಾಳಿ ಕಂಠದಲ್ಲಿದೆ ಬಿಟ್ಟಿ ಏನೋ ಬಿರದು ಎಲ್ಲ ಕಟ್ಟಿಕೊಂಡು ಮೆರೆಯುತಿಹುದು ಕೆಟ್ಟದೂರು ತಟ್ಟದಿರದು ಭ್ರಷ್ಠನೆನಿಸಬೇಡೊ ಎನ್ನ 1 ಎಡವಿ ಬೀಳೆ ಮಗುವು ತಾಯಿ ಕಡಿವಳೇನು ಪೊಡವಿಗೊಡೆಯ ಅಡಿಯ ಪಿಡಿದ ದಾಸನಾನು ಬಡವನಾದರೇನೂ ನುಡಿಯೋ ಭಾರ ನಿನಗೆ ತಡವು ಯಾಕೋ ಬರಿದೆ ಬಿಂಕ ಸಡಲಿ ಸುತ್ತ ಮಾಯಪಾಶ ದೃಢವ ಮಾಡು ಭಕ್ತಿ ವಿರಕ್ತಿ 2 ದೋಷಿಯಾದರೇನು ನಾನು ದೋಷದೂರನಲ್ಲೆ ನೀನು ನಾಶಮಾಡು ಬೀಸಿದೃಷ್ಠಿ ಮೀಸಲಲ್ಲೆ ನಿನಗೆ ಸ್ವಾಮಿ ಈಶ ಕರುಣಕುಂಟೆ ಮೇರೆ ಓಸು ಜಗದ ಭಾಸವೆಲ್ಲ ಶ್ರೀಶ ನೀನು ಕೊಟ್ಟರುಂಟು ದಾಸಪೋಷ ಶ್ವಾಸನಾಣೆ 3 ಗಂಟು ಕಳ್ಳ ನೀನೆ ಸತ್ಯ ಭಂಟನೆನ್ನ ಸ್ವತ್ತು ನೀನೆ ನೆಂಟ ಬೇರೆ ಇಲ್ಲದಿರಲು ಅಂಟಿಸಿರುವೆ ವಿಷಯ ಕಂಟಕ ತಂಟಿ ಬಿಟ್ಟು ಈಗಲೇನೆ ಅಂಟಿಕೊಳ್ಳೊ ಮನದಿ ಗಟ್ಟಿ ಕುಂಟು ಕಲೆಯ ಸುಟ್ಟುಬಿಟ್ಟು ಉಂಟು ಮಾಡು ಎಲ್ಲ ನನಗೆ 4 ಬೆಟ್ಟದೊಡೆಯ ಶ್ರೀನಿವಾಸ ಎಷ್ಟರವನೊ ನಾನು ಭೃತ್ಯ ಪಾದ ಪಿಡಿದಿಹೆ ಸುಟ್ಟು ಸುಟ್ಟು ಭವದಿ ಬೆಂದು ಇಷ್ಟು ನುಡಿದೆ ಜಯಮುನೀಂದ್ರ ಶ್ರೇಷ್ಟಹೃಸ್ಥಮಧ್ವ ಶ್ರೀ ಪ್ರೇಷ್ಟದೈವ ಕೃಷ್ಣವಿಠಲ5
--------------
ಕೃಷ್ಣವಿಠಲದಾಸರು
ಕೆಡಬ್ಯಾಡೆಲೊ ಪ್ರಾಣಿ ಕೆಡಬ್ಯಾಡಾ ನಮ್ಮ ಕಡಲಶಯನನ ಭಜನೆ ಬಿಡಬ್ಯಾಡಾ ಪ ಪರನಿಂದೆ ಮಾಡಿ ಕೆಡಬ್ಯಾಡಾ ನನ್ನ ಸರಿಯಾರಿಲ್ಲೆಂದು ಮೆರೆಯ ಬ್ಯಾಡಾ ಪರಹೀನತಾ ಮಾಡಿ ನೀ ಕೆಡಬ್ಯಾಡಾ ಶ್ರೀ ಹರಿ ಸರ್ವೋತ್ತಮನೆನದೆ ಕೆಡಬ್ಯಾಡಾ 1 ಪರದ್ರವ್ಯವನಪಹರಿಸಲಿ ಬ್ಯಾಡಾ ದಿವ್ಯ ಪರಸತಿಯರ ಮೋಹಕ್ಕೊಳಗಾಗ ಬ್ಯಾಡಾ ದುರಿತ ಕಾರ್ಯಕೆ ಮನಕೊಡಬ್ಯಾಡಾ ಒಳ್ಳೆ ಪರ ಉಪಕಾರ ಮಾಡದೇ ಕೆಡಬ್ಯಾಡಾ 2 ಮಾತಾಪಿತರ ಸೇವೆ ಬಿಡಬ್ಯಾಡಾ ಯಮ ದೂತರಂದದಿ ಅವರನು ಕಾಡಬ್ಯಾಡಾ ಕೆಟ್ಟ ಮಾರ್ಗವ ಹಿಡಿದು ಹೋಗಬ್ಯಾಡಾ ನಿನ್ನ ಸತಿಸಂತರಾಮೋಹಕ್ಕೊಳಗಾಗಬ್ಯಾಡಾ 3 ದುಷ್ಟ ಮಾತುಗಳಾಡಬ್ಯಾಡಾ ನೀನು ಕಳ್ಳರ ಸಹವಾಸ ಮಾಡಲಿ ಬ್ಯಾಡಾ ಒಳ್ಳೆತನವ ಬಿಡಬ್ಯಾಡಾ ನಮ್ಮ ಫುಲ್ಲನಾಭನ ದಾಸನಾಗದಿರಬ್ಯಾಡಾ 4 ಸತ್ಯ ಮಾತಾಡದೇ ಕೆಡಬ್ಯಾಡಾ ಸರ್ವೋತ್ತಮ ಹನುಮೇಶ ವಿಠಲನ ನಾಮಾ ಪಾದ ಬಿಡಬ್ಯಾಡಾ ಒಳ್ಳೆ ಉತ್ತಮ ಪದಕೆ ವೈದಿಡುವನೋ ಮೂಢಾ 5
--------------
ಹನುಮೇಶವಿಠಲ
ಕೇಳು ಪೊರೆ ಶಾಂತ ತಾಳು ರಂಗಾ ನಿನ್ನಾಳು ನಾನಿರುವೆ ಕೃಷ್ಣಾ ಪ ಆಳೋ ಅರಸನೇ ಅ.ಪ. ಗಾಣ ಎಳೆಯುವ ಕ್ವಾಣನಾದೆನೋ ಕಾಣವೋ ನಯನಾ ಕಾಣಿ ವೇಣುಗೋಪಾಲ 1 ಮಾಯಾ ಮಗನಿಗೆ ನಾಯನಾಗಿರುವೆ ಮಾಯಾ ಕಾಯೋ ನರಹರಿ 2 ಬೇಡುವರು ಧನ ಕಾಡಿ ಎನ್ನನು ನೋಡು ಫಣಿಶಯನಾ ನಾಡಿಗೊಡೆಯಾ ಕೈ ಜೋಡಿಸುವೆನಯ್ಯಾ 3 ಬೇಗ ತವದಾಸನಾಗಿ ಮಾಡಿಕೋ ಸಾಗರಶಯನಾ ಈಗ ಭವಭಯ ನೀಗಿಸೈಯ್ಯ ಕೈ ಸಾಗದಾಯಿತು ಭಾಗವತಪ್ರಿಯಾ 4 ಆಶಾ ಬಿಡಿಸಿ ನೀ ಲೇಸು ಕೊಡು ಹನುಮೇಶವಿಠಲನೇ ಘಾಸಿಯಾದೆನು ಪೋಷಿಸಯ್ಯ ರಮೃಶ ಪಂಢರಿವಾಸ ವಿಠಲ 5
--------------
ಹನುಮೇಶವಿಠಲ
ಕೊಡುವುದಿಲ್ಲದೆ ಪೋದ ಕಣ್ಣು ನಾಲಗೆಯಾ ಎ- ನ್ನೊಡೆಯನಲ್ಲಾನು ಊಳಿಗನಲ್ಲವೆ ಚನ್ನಾ ಪ ಕೊಂದು ಬಳಲಿಸುತಿರುವುದಿದು ಧರ್ಮವೇ ಮುಂದೆ ನಂಬುವರಿಗೆ ಅದೃಢವಾಗದಿರು ದೇವ ಕಂದರ್ಪಪಿತನೆ ಕಮನೀಯಮೂರುತಿಯೆ 1 ನೋಡುವುದೆಂತೊ ಕಣ್ಣಿಲ್ಲದಿರೆ ನಿನ್ನ ತುತಿ ಮಾಡುವುದೆಂತೊ ನಾಲಿಗೆಯುಡುಗಲು ಬೇಡುವುದೆಂತೊ ಕೈವಲ್ಯಂಗನೆಯನು ದಯ ಮಾಡೆನ್ನ ನಲ್ಲ ದಾಸರೊಳುತ್ತಮೊತ್ತಮ ನೇ 2 ಕಮಲ ಮಧ್ಯದೊಳಾವಾಗ ವಾಸವಾಗಿಪ್ಪ ಸರ್ವೇಶ್ವರನೇ ಘಾಸಿಬಡಿಸಲು ಅವರ ನೋವು ನಿನಗಲ್ಲವೇ ಕೇಶವ ಮುರಾರಿ ಅಚ್ಚುತದಾಸನಿಗೆ ಬೇಗ3 ಕೇಳಿದನೆ ನಿನ್ನಿತರ ಹಲವು ಚಿಂತೆಯಲಿ ತೊಳಲಿ ನೆಲೆಯರಿಯದಜ್ಞಾನಿಯಾಗಿ ಬಳಲುವತಿಚಂಚಲಗೀ ಮಾರ್ಗವಿರಿಸಿದೇಕೋ ನಳಿನಾಕ್ಷ ಭಕ್ತವತ್ಸಲ ಕೃಪಾಸಿಂಧೂ 4 ಶರಣರಕ್ಷಕನೆಂಬ ಬಿರುದಾರದೆಲೆ ದೇವ ಇರಿಸು ಎಂದಿನವೋಲಚ್ಚುತದಾಸನಾ ಹರಿಯದಿದ್ದರೆನ್ನ ಕಣ್ಣು ನಾಲಿಗೆಯ ಕಿ ತ್ತಿರಿಸುವೆನು ಮುಂದೆ ವೈಕುಂಠವಿಠಲ ಚನ್ನಿಗರಮಣ5
--------------
ಬೇಲೂರು ವೈಕುಂಠದಾಸರು