ಒಟ್ಟು 33 ಕಡೆಗಳಲ್ಲಿ , 23 ದಾಸರು , 33 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮರವೆ ಮುಸುಕಿತುಋಣದ ಬಾಧೆ ಹತ್ತಿತು ರೋಗವಡಸಿತುಜನರ ಪ್ರೀತಿ ತೊಲಗಿತು ಜಾಣ್ಮೆ ತಾನು ಸಡಿಲಿತು... ದಿಯ ವಾಸ'ಲ್ಲವಾಯ್ತು ... ಮರೆ ದೂರವಾಯ್ತು 1ನಿನ್ನ ಸನ್ನಿಧಿಯ 'ುೀರಿ ಪುಣ್ಯವ ಬೇರೆ ಬಯಸಿದೆನೆನಿನ್ನ ಮೂರ್ತಿಯನುಳಿದು ಅನ್ಯರ ನೆನೆದೆರಗಿದೆನೆನಿನ್ನ ಸೇವೆಗಧಿಕವೆಂದನ್ಯದೇವರ ಸೇ'ಸಿಕೊಂಡೆನೆ 2ಸನ್ನಿಕರ್ಷವನಾದರತೆಯನ್ನು ಕೊಡುವದೆದೆಂದೆನೆ ಅರಿವೆನ್ನೊಳುದಿಸಿತೆ ದೂರನಾದೆನೇತಕೆಇನ್ನುದಾಸೀನಗೈದರೆ ಎನ್ನಿಂದಾಹುದೇನು ಬೇರೆಮನ್ನಿಸಿ ನೀನೊಂದಿರೆ ಸೈರಿಸಲಾರೆಂ 3ಪತಿತಪಾವನನು ನೀನು ಪರಮಕರುಣಾನಿಧಿ ನೀನು ಪತಿಕರಿಸಿ ಬಿಡುವದೇ ಪಾಪಿಯೆ ನಾನು ಸತತ ನಿನ್ನ ನೆನೆಯುವೆನು ಸೇವೆಗೆ ಕಾತರಿಸಿಹೆನು ಅತಿಶಯವ ತೋರಿಸು ಆ ನನ್ನನಿಧಿಯೆ ನೋಡಿನ್ನು 4ಕರೆದು ಮೂಢರಜ್ಞತೆಯ ಪರಿದು 'ಜ್ಞಾನ ಸುಧೆಯಎರೆದು ಕಾಯೆ ಚಿಕ್ಕನಾಗಪುರದೊಳು ನೀನೆಗುರುವರ್ಯ ವಾಸುದೇವಾರ್ಯ ಚರಣಕೆರಗಿದೆನಯ್ಯಾನಿರತ ಮಂಗಳಾರತಿಯಸಿರಿಯ ತೋರಿಸೊ ದಮ್ಮಯ್ಯಾ 5
--------------
ವೆಂಕಟದಾಸರು
ಮರೆಯುವರೆ ಮರೆಯುವರೆ ರಾಮರಾಯಾ | ಗುರುಗಳಾರಾಧನೆಗೆ | ಶಿರಿವಾರದೊಡೆಯಾ || ಪರಿವಾರ ಸಹಿತಾಗಿ ತೆರಳುವದು ನಿಶ್ಚಯಿಸಿ ಬರೆವದಕೆ ಕಾಗದವು ಸಿಗದ್ಹೋಯಿತೆ | ಭರದಿ ಬರಬೇಕೆಂದು | ಕರೆಕಳುಹದಕೆನ್ನ | ಚರನೋರ್ವ ನಾದರು ದೊರೆಯದಾದನೆ ಅಕಟ 1 ಕ್ರೋಧ ವಿರಹಿತರಾದ ಸಾಧುವರ್ಯರ ಸಮಾರಾಧ | ನೆಗೆ ನಾ ಭಾರವಾದೆನೇನೈ | ಆದರವು ತಗ್ಗಿತೇ | ಯುಗ್ಮಪಾದಪಶುವಾದಿನೇ 2 ಗುರುಕರುಣವೆಗ್ಗಳದ ಗರುವಿಕೆಯೋ ಕಾರ್ಪರ ನರಸಿಂಹರರ್ಚಕರಮೋಕ್ಷ ಬಲವೋ ಪರಮ ಸತ್ಪುರುಷರುಪದೇಶ ಶ್ರವಣದ ಮದವೋ | ಹರಿಕಥಾ ಪಾನದ ಹಂಕಾರವೋ 3 ಇರಬೇಕು ಸರ್ವದಾ ಸಕಲರಲಿ ಸಮದೃಷ್ಟಿ ಹಿರಿಯರಾದವರಲ್ಲಿ ಏಕನಿಷ್ಟಿ | ನಿರುತದಲ್ಲಿ ಸದ್ಗೋಷ್ಟಿ ಪರನಾಗಿ ಮನಮುಟ್ಟಿ ಹರಿಪಾದಸ್ಮರಿಪರಿಗೆ ಕೈವಲ್ಯಷಟ್ಟಿ 4 ಶ್ರೀ ಶಾಮಸುಂದರನ ದಾಸಕೂಟಸ್ಥರೊಳು ನಾ ಸಲ್ಲದವನೆಂದು ಧೃಡವಾಯಿತೇ | ಭೂಸುರವೇಷದಲಿ ಎಂದು ಉದಾಸೀನ ಮಾಡಿನ್ನು 5
--------------
ಶಾಮಸುಂದರ ವಿಠಲ
ಮೆಚ್ಚಿದೆ ಯಾಕಮ್ಮ ಲಕ್ಕುಮಿದೇವಿ ಸಚ್ಚಿದಾನಂದಾತ್ಮ ಹರಿಯೆಂದರಿಯದಲೆ ಪ ರಕ್ಕಸಾಂತಕ ಹರಿಗೆ ಸೊಗಸಿನ ತಕ್ಕ ವಾಹನವಿಲ್ಲದಿದ್ದೊಡೆ ಹಕ್ಕಿಯ ಹೆಗಲೇರಿ ತಿರುಗುವ ಚಿಕ್ಕ ಬುದ್ಧಿಯ ಚಲುವ ಕೃಷ್ಣಗೆಅ.ಪ ನೀರೊಳು ಮುಳುಗಿ ಭಾರವಪೊತ್ತು ಧರಣಿಯ ಕೋರೆದಾಡೆಲಿ ತಂದ ಕ್ರೂರ ರೂಪನಿಗೆ ಮೂರಡಿ ಭೂಮಿಯ ಬೇಡಿ ಕ್ಷಿತಿಪರ ಕೊಂದು ನಾರು ವಸ್ತ್ರಗಳುಟ್ಟು ಸೀರೆ ಕದ್ದವಗೆ ಶೂರತನದಲಿ ತ್ರಿಪುರರಗೆದ್ದು ವಿ- ಹಾರ ಮಾಡ್ಡ ಏರ್ದ ಕುದುರೆಯ ಮಾರಪಿತ ಮಧುಸೂಧನನ ವ್ಯಾ- ಪಾರ ತಿಳಿಯದೆ ವಾರಿಜಾಕ್ಷಿ 1 ಹಾಸಿಕಿಲ್ಲದೆ ಹಾವಿನ ಮೇಲೆ ಮಲಗುವ ಹೇಸಿಕಿಲ್ಲದೆ ಎಂಜಲ್ಹಣ್ಣನೆ ಮೆಲುವ ದೋಷಕಂಜದೆ ಮಾವನ ಕೊಂದು ಮಧುರೆಲಿ ದಾಸಿ ಕುಬ್ಜೆಯ ಡೊಂಕು ತಿದ್ದಿ ಪರಿಮಳ ಪೂಸಿ ಸೋಸಿನಿಂದಲಿ ಕರಡಿ ಮಗಳನು ಯೋಚಿಸದೆ ಕೈಪಿಡಿದು ಸೌಳ- ಸಾಸಿರದ ಸತಿಯರನು ಕೂಡಿದ ವಾಸುದೇವನ ಮೋಸವರಿಯದೆ 2 ಮೋಸದಿಂದಲಿ ಬಂದು ಶಿಶುವನೆತ್ತಿದ ದೈತ್ಯ ದಾಸಿಯ ಕೊಂದ ಉದಾಸೀನದಿಂದ ಗ್ರಾಸಕಿಲ್ಲದೆ ಗೋಪೇರ ಮನೆಗಳ ಪೊಕ್ಕು ಮೀಸಲು ಬೆಣ್ಣೆ ಪಾಲ್ಮೊಸರನೆ ಸವಿದು ರಾಸಕ್ರೀಡೆಯ ವನಿತೆಯರ ಮನ ದಾಸೆ ಪೂರೈಸಿ ರಾತ್ರಿ ವೇಳದಿ ವಾಸುದೇವನು ಓರ್ವ ಸತಿಯೊಳು ಕ್ಲೇಶಪಡಿಸದೆ ಮೋಸವರಿಯದೆ3 ಅಖಿಳ ಮಹಿಮನೆನೆ ಊಳಿಗ ಮಾಡಬಹುದೆ ಚಂಡನಾಡುವ ನೆವದಿಂದ ಕಾಳಿಂಗನ ಮಂಡೆಯ ತುಳಿದು ನಾಟ್ಯವನಾಡಬಹುದೆ ಗಂಡುಗಲಿ ಅರ್ಜುನನು ರಥಕೆ ಬಂಡಿಬೋವನ ಮಾಡಬಹುದೆ ಪುಂಡಲೀಕನು ಇಟ್ಟೆಗೆಯ ಮೇ- ಲ್ಪಾಂಡುರಂಗ ನಿಲಿಸಬಹುದೆ4 ಕಮಲಾಕ್ಷ ಯಾಗಶಾಲೆಗೆ ಗೋಪರನು ಕಳುಹಿ ರಮೆಯರಸಗೆ ಬಹಳ್ಹಸಿವೆನುತಿರಲು ಕಮಲಾಕ್ಷನ ನುಡಿ ಗಮನಿಸದೆ ರುಷಿವರರಿಗೆ ಕಮಲ ಮುಖಿಯರೆಲ್ಲ ಪರಮ ಸಂಭ್ರಮದಿಂದ ಕಮಲನೇತ್ರಗೆ ವಿವಿಧ ಭಕ್ಷಗ- ಘೃತ ಪರಮಾನ್ನಗಳನು ಕಮಲನಾಭ ವಿಠ್ಠಲಗೆ ಅರ್ಪಿಸಿ ಶ್ರಮವ ಕಳೆದೈದಿದರು ಮುಕ್ತಿಯ 5 ಯಾಕೆ ಮೆಚ್ಚಿದೆಯಮ್ಮ ಲೋಕ ಸುಂದರಿಯೆಶ್ರೀ ಕಮಲಜಪಿತ ಲೋಕ ಮೋಹಕನ
--------------
ನಿಡಗುರುಕಿ ಜೀವೂಬಾಯಿ
ರಂಗವಲಿದ ರಾಯರ ಪಾಡಿರೆ ಪ ಸಲೆನಂಬಿದವರ ಕಲುಷಗಳೋಡಿಸಿ ಸಲುಹಲು ಸ್ತಂಭದಿ ನೆಲೆಸಿದಂಥ ರಾಯರ 1 ಬಾಗಿ ನಮಿಸಿ ಮುಂ ನವ್ಯಾತಕೆ ತವ ಸೂಸು ನಾನಲ್ಲವೆ | ಮಾನವಿ ನಿಲಯ 1 ದಾಸವರ್ಯನೆ | ಭಾಸುರಸ್ತಂಭ ನಿವಾಸ ಧೀರನೆ ಈ ಸಮಯಿದಿ ಷಡ್ದ್ವೇಷಿಗಳೆನ್ನತಿ ಘಾನಿಗೊಳಿಸುವರುದಾಸೀನ ಮಾಡದೆ 2 ಸಾಧು ಶೀಲನೆ ಪ್ರಹ್ಲಾದ ನನುಜ ಸÀಹ್ಲಾದ ಶಲ್ಯನೆ ವಾದಿರಾಜ ಶತಮೇಧ ನಾಮಾರ್ಯರ ಪಾದಾರಾಧಕ ಭೇದ | ಬೋಧಕ 3 ಭಾರತಿವರ ಕೃತ ಶಾಸ್ತ್ರಮರ್ಮವಿಚಾರ ಬಂಧೂರ ಸಾರಸಭವ ಪಿತ | ಶ್ರೀರಮಾಪತಿ ಸಾರ ವಕ್ತಾರ 4 ಪ್ರೇಮಸಾಗರ ನೀ ಮರೆದರೆ ಈ ಪಾಮರನಿಗೆ ಯಮ ಧಾಮವೆ ಗತಿ ನಿಜ ಹೇ ಮಮ ಸ್ವಾಮಿ 5
--------------
ಶಾಮಸುಂದರ ವಿಠಲ
ವಂದಿಪೆ ಯತಿವರೇಂದ್ರ ತವ ಪಾದದ್ವಂದ್ವಕ್ಕಾನಂದಾ ದಿನಾ ಬಂದ ಕಂದನಾ ಪಾಲಿಸೆಂದೆ ಪ ಸಿಲ್ಕಿರುವೆನಾ ಶರಣು ಬಂದೆನಾ 1 ಮೂಢ ಸೇವಕನಾ ಬಿಡಿಸೊ ವ್ಯಸನಾ 2 ಶ್ರೀಶನಾದ ಹನುಮೇಶವಿಠಲನ್ನಾ ದಾಸ ಉದಾಸೀನದಲ್ಲೆ ಎನ್ನಾ ಪೋಷಿಸೊ ನೀ ಮನದಾಸೆ ಪೂರೈಸಿನ್ನು ಕರುಣಾಜ್ಞಾನಪೂರ್ಣ 3
--------------
ಹನುಮೇಶವಿಠಲ
ವಿಕ್ರಮಾ - ಪಾಹಿ - ತ್ರಿವಿಕ್ರಮಾ ಪ ವಿಕ್ರಮ ನಮಿಪೆ ನಾ ನಿನ್ನ | ನೀನುಚಕ್ರವ ಪಿಡಿದೊಂದು ದಿನ್ನ | ಆಹನಕ್ರನುದ್ದರಿಸಿದ | ಪ್ರಕ್ರಯ ನಾನರಿತುರುಕ್ರಮ ಶರಣೆಂಬೆ | ವಕ್ರ ಮನವ ಕಳೆಅ.ಪ. ಪುಟ್ಟ ರೂಪವನೆ ತಾಳುತ್ತಾ | ಬಲಿಯಇಷ್ಟಿಯೊಳವನ ಬೇಡುತ್ತಾ | ದಾನಕೊಟ್ಟೆನೆಂದವನು ಪೇಳುತ್ತಾ | ಬರೆಶಿಷ್ಟ ಶುಕ್ರನು ಬೇಡೆನ್ನುತ್ತಾ | ಆಹಕಟ್ಟಲು ಗಿಂಡೀಯ | ದಿಟ್ಟ ಶುಕ್ರನ ಕಣ್ಣಪುಟ್ಟ ದರ್ಭೆಲಿ ಚುಚ್ಚಿ ಮೆಟ್ಟಿ ನಿಂತೆಯೊ ಬಲಿಯ 1 ಥೋರ ರೂಪದೊಳು ಅಂಬರಾ | ಹಬ್ಬಿಧಾರುಣಿ ಅಳೆದ ಗಂಭೀರ | ಮತ್ತೆಮೂರನೇದಕೆ ಬಲಿಯ ಶಿರ | ವತ್ತಿಭಾರಿ ಪಾತಾಳಕ್ಕೆ ಧೀರಾ | ಆಹಪೌರೋಚನಿಯನ್ವತ್ತಿ | ದ್ವಾರವ ಕಾಯುತ್ತತೋರಿದೆ ಕರುಣವ | ಭೋರಿ ದೈವರ ಗಂಡ3 ಪಾದ ತೊಳೆದೂ | ಬಿಡೆಬ್ರಹ್ಮಾಂಡದೊಳು ತಾನು ಬಂದೂ | ಆಹಸುಮ್ಮನಸರ ಲೋಕ | ಕ್ರಮ್ಮಿಸುತಲಿ ಬರುವಅಮ್ಮಹ ಗಂಗೆ ಪೆ | ತ್ತೆಮ್ಮನುದ್ದರಿಸಿದಾ 3 ಬಾದರಾಯಣ ಬಳಿ ಭವ್ಯಾ | ನಾಗಿಮೋದ ತೀರ್ಥರಿಂದ ಸೇವ್ಯಾ | ನೀನುವಾದಿರಾಜರಿಗೊಲಿದು ತ್ವರ್ಯಾ | ಬಂದುಸ್ವಾದಿ ಪುರದಿ ನಿಂದು ಸ್ತವ್ಯಾ | ಆಹಮೋದದಿ ನೆಲೆಸುತ್ತ | ಕಾದುಕೊಂಡಿಹೆ ನಿನ್ನಪಾದವ ಪೊಗಳೂವ | ಸಾದು ಸಂತತಿಯನ್ನ 4 ಹೀನ ಮಾನವನೆಂದು ಎನ್ನಾ | ಉದಾಸೀನ ಮಾಡುವಿಯೇನೊ ಘನ್ನ | ಕೇಳೊನೀನು ತ್ರೈಭುವದಿ ಪಾವನ್ನಾ | ನೆಂದುಗಾನದೋಳ್ ತವ ಪಾದವನ್ನಾ | ಆಹಆಗಮಿಸುತ ಬಂದ | ಮಾನವನೆನ್ನನುಧೀನನೆಂದೆನಿಸಾರೆ | ಜ್ಞಾನವ ನೀಡೆನಗೇ 5 ಪ್ರತಿ ಪ್ರತಿ ವತ್ಸರದೊಳು | ಮಾಸಹತ್ತೆರಡು ಪೂರ್ಣಿಮದೊಳು | ತವರಥದೊತ್ಸವ ಕಾರ್ಯಗಳೂ | ಬಲುಹಿತದಿ ತವ ದಾಸರುಗಳೂ | ಆಹಅತಿ ವೈಭವದಿಂದ | ವಿತರಣೆಯಿಂದಲಿಪ್ರತಿಯಿಲ್ಲವೆಂದೆನ್ನೆ | ವಿಸ್ತರಿಸುವರಯ್ಯ 6 ಪರಿ ಪೊಗಳುತ ಚೆನ್ನಾ | ಆಹಗುರು ಗೋವಿಂದ ವಿಠ್ಠಲ | ಪರಮ ಪುರುಷನೆಂದಾನರ್ತನಗೈಯುತ | ನರರೇನು ಧನ್ಯರೋ7
--------------
ಗುರುಗೋವಿಂದವಿಠಲರು
ಸಾಧುಸಂಗ ಶೀಘ್ರಕೂಡಿಸೊ ಪ ಎಷ್ಟು ದಿನ ಕಷ್ಟಪಡುವದೋಈ ಭವದೊಳು ಈಸಲಾರೆನಯ್ಯ ಹರಿಯೇ ಇಷ್ಟು ದಿನ ಇದ್ದಂತೆ ಇರಲಾರೆನೆಂದು ಕರವ ಮುಟ್ಟಿ ಮುಗಿದು ಬೇಡಿಕೊಂಬೆ ಮುರಾರಿ ಕೃಷ್ಣ ನೀನೇ ಕಾಯೋ 1 ಹರಿಹರರು ಸಮಾನರೆನ್ನದಾ ಈ ಸಜ್ಜನರಾ- ಸಂಗದಿಂದ ಹೀನಾ ನಾನಾದೆ ಇನ್ನುಮ್ಯಾಲೆ ಇಲ್ಲವಯ್ಯ ಸೃಷ್ಟಿಗಧಿಕ ಶ್ರೀನಿವಾಸಾ ಇನ್ನು ನಿನ್ನ ಸ್ಮರಣೆಯಿಂದ ಇರುವೆನಯ್ಯ ಮುಕುಂದ 2 ಪೃಥ್ವಿಯಲ್ಲಿ ಪುಟ್ಟಿದಾ ಮೊದಲು ನಿನ್ನಾ ವೃತ್ತಾಂತ ಒಂದು ದಿನ ಮಾಡಲಿಲ್ಲವೋ ಎಂದು ಎನ್ನ ಮ್ಯಾಲೆ ಕ್ರೂರದೃಷ್ಟಿಯಿಂದಾ ನೋಡಾದೀರು ವಾಸುದೇವ ವೈಕುಂಠವಾಸ ಲಕ್ಷುಮಿ ರಮಣ3 ನಿತ್ಯದಲ್ಲಿ ವಿಪ್ರರಾ ವೃಂದಾದೊಳಗೆ ನಾ ಆ- ಸಕ್ತನಾಗಿ ಇರುವೆ ಮುಕುಂದಾ ಎಂಥ ಪಾಪಿ ಎಂದು ಉದಾಸೀನಮಾಡಿ ನೋಡಬೇಡ ನಿನ್ನ ಕಂದಾನೆಂದು ತಿಳಿದು ಪಾಲಿಸಯ್ಯ ನಾರಾಯಣ 4 ಹನುಮ ಭೀಮ ಮಧ್ವೇಶಾರಿಂದಾ ಸೇವಿತ ಪ್ರಿಯಾ ಶಾಂತಮೂರ್ತಿ ಶಾಮವರ್ಣನೇ ಶ್ರೀದವಿಠಲೇಶಾ ನಿನ್ನಾ ದಾಸನೆಂದು ಪಾಲಿಸೆನ್ನ ಸಾರಿ ಬೇಡಿಕೊಂಬೆನಯ್ಯ ರಾಮಚಂದ್ರ ರಾವಣಾಚಾರಿ5
--------------
ಶ್ರೀದವಿಠಲರು
ಸಿರಿದೇವಿ ವರಬೇಗ ಕರುಣಿಸೊ ದಯದಿಂದ ಶರಣಾಗತ ಪರಿಪಾಲನೆಂಬಿ ಘನ ಬಿರುದಿಹದೊರೆ ನರಹರಿಕರುಣಾಕರ ಪ. ಕರಿರಾಜ ಮೊರೆಯಿಡುವ ಸ್ವರವ ಕೇಳುತಲಂದು ಸಿರಿಯೊಳಗುಸುರದೆ ಗರುಡನ ಪೆಗಲೇರಿ ಸರಸಿ ತಡಿಗೆ ಬಂದು ಕರಿಯನುದ್ಧರಿಸಿದಿ 1 ಘೋರ ಕಿಂಕರರಿದಿರು ಸಾರೆಜಾಮಿಳ ಭಯದಿ ನಾರಾಯಣನೆಂದು ಬೇಡಿದ ಮಾತ್ರದಿ ವಾರಿಜಭವಪಿತ ಪಾರಗಾಣಿಸಿದಿ 2 ತರಳ ಪ್ರಹ್ಲಾದನನು ಹಿರಣ್ಯಕನು ಬಾಧಿಸಲು ಹರಿ ನೀನೆ ಗತಿಯೆನುತಿರೆ ಕಂಭದಿ ಇರವ ತೋರಿ ಬಹು ಪರಿಯಲಿ ಸಲಹಿದಿ 3 ದುರುಳ ಸೀರೆಯ ಸೆಳೆಯೆ ಹರಿಕೃಷ್ಣ ಸಲಹೆನೆ ಸೀರೆಯ ಮಳೆ ಗರದಂದದಲಿತ್ತು ಪರಿಪಾಲಿಸಿದೆ 4 ಎನ್ನ ದುಷ್ಕøತದಿಂದ ನಿನ್ನ ನಾಮದ ಮಹಿಮೆ ಭಿನ್ನವಾಗುವದೆ ನಿನ್ನ ಪದಾಂಬುಜ ವನ್ನು ನಂಬಿದ ಮೇಲಿನ್ನುದಾಸೀನವೆ 5 ಪಾಕಶಾಸನನಘವ ನೀಕರಿಸಿ ಸಲಹಿದನೆ ಭೀಕರವಾಗದೆ ಸಾಕು ಸಾನುಭವ ಕೃಪಣ ದಯಾಕರ ಮೂರುತಿ 6 ಒಳಗೆ ನೀ ತಳಿಸುತಲಿ ಗಳಿಸಿ ಪಾಪಗಳೆನಗೆ ತಳಮಳಗೊಳಿಸುತ ಬಳಲಿಪದುಚಿತವೆ ಉಳುಹಿನ್ನಾದರು ನಳಿನನಾಭ ಹರಿ 7 ಬಡವ ಮಾನವನೊಬ್ಬ ಪಡೆಯ ತನ್ನವರನ್ನು ಕೆಡಲು ಬಿಡನು ಜಗದೊಡೆಯ ನೀ ಎನಗಿರೆ ತಡವ ಮಾಡಿ ಕಂಡ ಕಡೆಯಲಿ ಬಿಡುವುದೆ 8 ನಿನ್ನ ಕಥಾಮೃತಸಾರವನ್ನೆ ಶಿರದಿ ಧರಿಸಿ ಇನ್ನು ಬಳಲಿದರೆ ನಿನ್ನ ಘನತೆಗಿದು ಚೆನ್ನಾಗುವುದೆ ಪ್ರಸನ್ನ ಮುಖಾಂಬುಜ 9 ಮಾನಾಮಾನವ ತೊರೆದು ನಾನಾ ದೇಶದಿ ತಿರಿದು ಶ್ರೀನಿವಾಸ ನಿನ್ನಾನನ ದರುಶನ- ವನು ಮಾಡಿದ ಮೇಲೇನಿದು ತಾತ್ಸಾರ 10 ಆಶಾಪಾಶವ ಬಿಡಿಸಿ ಮನದಾಸೆಗಳ ಪೂರೈಸಿ ದಾಸದಾಸನೆಂಬೀ ಸೌಖ್ಯವನಿತ್ತು ಪೋಷಿಸು ಶೇಷಗಿರೀಶನೆ ತವಕದಿ 11
--------------
ತುಪಾಕಿ ವೆಂಕಟರಮಣಾಚಾರ್ಯ
ಹನುಮ-ಭೀಮ-ಮಧ್ವ ಸ್ತೋತ್ರ ಅಪಮೃತ್ಯು ಪರಿಹರಿಸೊ ಅನಿಲದೇವಾ ಕೃಪಣ ವತ್ಸಲನೆ ಕಾಯ್ವರ ಕಾಣೆ ನಿನ್ನುಳಿದು ಪ ನಿನಗಿನ್ನು ಸಮರಾದ ಅನಿಮಿತ್ತ ಬಂಧುಗಳು ಎನಗಿಲ್ಲವಾವಾವ ಜನ್ಮದಲ್ಲಿ ಅನುದಿನ ನೀನೆಮ್ಮನುದಾಸೀನ ಮಾಡುವುದು ಅನುಚಿತವು ಜಗಕೆ ಸಜ್ಜನ ಶಿಖಾಮಣಿಯೆ 1 ಕರಣಮಾನಿಗಳು ನಿನ್ನ ಕಿಂಕರರು ಮೂಲೋಕ ದೊರೆಯು ನಿನ್ನೊಳಗಿಪ್ಪ ಸರ್ವಕಾಲ ಪರಿಸರನೆ ಈ ಭಾಗ್ಯ ದೊರೆತನಕೆ ಸರಿಯುಂಟೆ ಗುರುವರಿಯ ನೀ ದಯಾಕರನೆಂದು ಮೊರೆ ಹೊಕ್ಕೆ 2 ಭವರೋಗ ಮೋಚಕನೆ ಪವಮಾನರಾಯಾ ನಿ ನ್ನವರನು ನಾನು ಮಾಧವಪ್ರಿಯನೇ ಜವನ ಬಾಧೆಯ ಬಿಡಿಸು ಅವನಿಯೊಳು ಸುಜನರಿಗೆ ದಿವಿಜಗಣ ಮಧ್ಯದಲಿ ಪ್ರವರ ನೀನಹುದಯ್ಯ 3 ಜ್ಞಾನಾಯು ರೂಪಕನು ನೀನಹುದೋ ವಾಣಿ ಪಂ ಚಾನನಾದ್ಯಮರರಿಗೆ ಪ್ರಾಣದೇವಾ ದೀನವತ್ಸಲನೆಂದು ನಿನ್ನ ಮೊರೆ ಹೊಕ್ಕೆ ದಾನವಾರಣ್ಯ ಕೃಶಾನು ಸರ್ವದ ಎಮ್ಮ 4 ಸಾಧನ ಶರೀರವಿದು ನೀ ದಯದಿ ಕೊಟ್ಟದ್ದು ಸಾಧಾರಣವು ಅಲ್ಲ ಸಾಧುಪ್ರಿಯಾ ವೇದವದೋದಿತ ಜಗನ್ನಾಥ ವಿಠಲನ ಮೋದ ಕೊಡು ಸತತ5
--------------
ಜಗನ್ನಾಥದಾಸರು
ಹರಿಹರಿ ಕೊಡು ನಿನ್ನಯಚ್ಚರನು ಶರಣವಾ ಧೃಡದಲಿ ಬಂದೆನಾನು ಪ ಅವಿದ್ಯೆಮಬ್ಬಿನಲಿ ಹರಿಬಂದ ಹಾವಿನ ಪರಿಯಾಗಿ ವಿವೇಕ ಯವಿಮುಚ್ಚಿಕಂಗಾಣದೆ ಸೇವೆಗೆ ಹೊರತಾದೆ 1 ನ್ಯೂನವ ನಾಲಿಸಲು ತಪ್ಪಿಗೆ ತಾನೆಣಿಕೆಗಳಿಲ್ಲಾ ಏನರಿಯದ ಮೂಢಾ ಇವನೆಂದು ನಿನುದ್ಧರಿಸೆನ್ನಾ 2 ಎಂದೆಂದು ಪ್ರೇಮದಲಿಂದಾ ಗೆಳೆತನಾ ಛೆಂದವೆನಗ ನಿನಗ | ಎಂದೇ ಮನೆಯೊಳಿದ್ದು ಮಾತಾಡದೇ ನಿಂದುದುಚಿತವಲ್ಲ 3 ಕಡೆಗಣ್ಣಿಲಿ ನೋಡೋ ಉದಾಸೀನ ನುಡಿಯ ಮಾಡಲಿಬೇಡ | ಒಡೆಯಾ ನಿನ್ನಂಘ್ರಿಮದಾ ದಾಸರಾ ಅಡಿಗಳಾಶ್ರಯದಲಿಡೋ 4 ಕಾಲಬಿದ್ದರವು ರಾಕುಡುವರು ಕೆಳೆಲೋ ಗಾದಿಯನು ಪಾಲಿಸೋಮಹಿಪತಿ ಸುತ ಪ್ರಭು ಒಲುಮೆಯಾ ಸುಖನೀಡೋ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರೇ ಕೃಷ್ಣ ಲೋಕನಾಯಕ ಪಾಲಿಸೆನ್ನ ದೊರೆ ಸರ್ವ ಸೌಖ್ಯದಾಯಕ ಪ. ಮೂಢ ಚಿಂತೆ ಎಂಬುದೋಡಿಸು ಕರುಣವಿರಿಸು ಸದಾ ನಿನ್ನ ಸ್ಮøತಿಯ ನೀಡಿಸು ಉದಾಸೀನಭಾವದೂಡಿಸು ಭೂಪ ನಿನ್ನ ಪದಾಬ್ಜವನು ಶಿರದೋಳಾಡಿಸು 1 ಪರಮನೋವೃತ್ತಿ ತಿಳಿಯದೆ ನಿತ್ಯದಲ್ಲಿ ಕರಗಿ ಕಲ್ಮಶವನು ತಾಳಿದೆ ಮರುಗಿ ಮುಗ್ಗಿ ಮುಂದುಗಾಣದೆ ತತ್ವ ತಿಳಿಯ- ದಿರುವೆ ನಿಂತು ಕಂಪುಗೊಳ್ಳದೆ 2 ಈಶ ನೀನೊಬ್ಬನಲ್ಲದೆ ದಾಸನನ್ನು ಪೋಷಿಸುವರ ಕಾಣೆ ಲೋಕದಲಿ ಬೇರಿನ್ನು ಬೇಡವೆನ್ನಲಿ ವೆಂಕಟಾದ್ರಿ ಭೂಪ ಬೇಗ ಕಾಯೊ ಕರುಣದಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಹ್ಯಾಂಗೆ ನಿಮ್ಮ ಚರಣಾ | ಕಾಂಬೆನೊಯೋಗಿ ಜನರ ಶರಣಾ ಪ ನಾಗಶಯನ ಭವಸಾಗರ ಮಮತೆಯನೀಗಿ ನಿರುತ ಅನುರಾಗದಿಂದ ಪೊರೆ ಅ.ಪ. ವ್ಯರ್ಥವಾಯಿತಲ್ಲಾ | ಜನ್ಮವು | ಸಾರ್ಥಕಾಗಲಿಲ್ಲಾಮುಕ್ತಿ ಬಯಸಲಿಲ್ಲಾ | ಜ್ಞಾನ ವಿ | ರಕ್ತಿಯು ಮೊದಲಿಲ್ಲಎತ್ತ ತಿಳಿಯದೇ ಸುತ್ತಿ ಭವದೊಳುನ್ಮತ್ತ ನಡತೆಯಲಿ ಹೊತ್ತು ಕಳೆದ ಪೊರೆ 1 ಮಾಯ ಬಿಡದು ಹರಿಯೇ | ಮುಂದೆ ಉಪಾಯವೇನು ದೊರೆಯೇ ||ಧೇಯ ನಿಮ್ಮನು ಮರೆಯೇ | ಅನ್ಯ ಸಹಾಯವು ನಾನರಿಯೇ ||ಕಾಯಜ ಪಿತ ಕಮಲಾಯತ ಲೋಚನಮಾಯವ ಬಿಡಿಸಯ್ಯ ನ್ಯಾಯದಿಂದ ಹರಿ 2 ವಾಕು ಪಾಲಿಸೊ ಹರೆ 3 ಮಲ್ಲಮರ್ದನ ಕೃಷ್ಣ 4 ವ್ಯಾಸವಿಠಲರಾಯಾ | ಮನದಭಿಲಾಷೆ ಸಲ್ಲಿಸಯ್ಯಾ ||ದಾಸನೆಂದು ಕಯ್ಯಾ | ಪಿಡಿದುಪೋಷಿಸುವುದು ಪ್ರೀಯಾ ||ಶ್ರೀಶನೆಂದು ನಿನ್ನ ಸೇರಿದೆನೋ ಪರದೇಶಿಯೆಂದು ಉದಾಸೀನ ಮಾಡದೆ 5
--------------
ವ್ಯಾಸವಿಠ್ಠಲರು
139-1ಶ್ರೀರಮಣ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಶ್ರೀನಿವಾಸಾಚಾರ್ಯ ಪಂಡಿತೋತ್ತಮರುಅನಿಮಿಶಾಂಶರು ಹೌದು ಭುವಿಯಲ್ಲಿ ಹುಟ್ಟಿಮಾನುಷಾನ್ನವನುಂಡು ಕರ್ಮವಾತಾವರಣಸನ್ನಿವೇಶದ ಬಲದಿ ಗರ್ವಕೊಳಗಾದರು 1ಆದಿತೇಯರು ಭೂಮಿಯಲ್ಲಿ ಜನ್ಮವ ತಾಳೆಜಾತಾಪರೋಕ್ಷಿಗಳು ಶಕ್ತ್ಯಾತ್ಮನಾವ್ಯಕ್ತ್ಯಾತ್ಮನಾಅಪರೋಕ್ಷಪ್ರಕಾಶವುಒದಗಿ ಗುರುಗಳು ಅನುಗ್ರಹವು ಮಾಡಿದರೆ 2ದೇವತಾ ಕಕ್ಷದಲಿ ದೊಡ್ಡ ಮಟ್ಟದವರುವಿಶ್ವಾಮಿತ್ರರಿಗೆ ಉತ್ತಮರು ನಾರದಗೆಆವರರೆನಿಸುವ ಭೃಗುಋಷಿಯೇ ವಿಜಯಾರ್ಯರುತಾವೆ ಬಂದರು ಶ್ರೀನಿವಾಸರ ಬಳಿಗೆ 3ಪೂರ್ವದಲೆ ಕೇಳಿಹರು ಈ ವಿಜಯದಾಸರುದೇವಾಂಶಅಪರೋಕ್ಷಜ್ಞಾನಿಗಳು ಎಂದುಈ ವಿಧದಿಪೇಳುವುದುಪುಸಿಎಂದು ನೆನೆದರುಗರ್ವಮೌಢ್ಯದಿ ಶ್ರೀನಿವಾಸ ಆಚಾರ್ಯ 4ಕನ್ನಡ ನುಡಿ ಹಾಡಿ ಕುಣಿಕುಣಿವ ಈ ದಾಸಜ್ಞಾನಿಯೆ ? ಅರಿತವನೇ ಬ್ರಹ್ಮವಿದ್ಯೆ ಎಂದುಹೀನಮಾತ್ಸರ್ಯದಿ ಮನಸೋತು ಅವಹೇ -ಳನ ಮಾಡಿದರು ವಿಜಯಾರ್ಯರಲ್ಲಿ 5ತಾಳುವ ತನ್ನಲ್ಲಿ ಮಾಡುವ ಅಪರಾಧತಾಳಹರಿ ತನ್ನ ಭಕ್ತರಲಿ ಮಾಡುವುದುಮಾಲೋಲ ನಿಯಮನದಿ ಸ್ವೋತ್ತಮಾಪರಾಧಫಲವು ಕಂಡಿತು ಶ್ರೀನಿವಾಸರಲಿ ಬೇಗ 6ರಾಜಯಕ್ಷ್ಮವೋಗುಲ್ಮಮತ್ತೇನು ರೋಗವೋರಾಜವೈದ್ಯರು ಸಹ ನಿರ್ಣಯಿಸಲಶಕ್ಯಭೋಜನ ಅರುಚಿ ಉದರಶೂಲಿತನು ಕುಗ್ಗಿಲಾಜವೂ ಸಹ ಜೀರ್ಣ ಆಗದ ಮಾಂದ್ಯ 7ಇಂದಿರೇಶಗೆ ಪ್ರಿಯ ಮಹಾತ್ಮ ಸ್ವೋತ್ತಮರಲ್ಲಿಗೈದ ಅಪರಾಧ ಫಲವೆಂದರಿಯದೆವೈದ್ಯಕ್ಕೆ ಹಣ ವೆಚ್ಚ ಮಾಡಿ ಕ್ಷೇತ್ರಗಳಿಗೆಪೋದರು ದೈವಾನುಗ್ರಹ ಪಡೆಯಲಿಕ್ಕೆ 8ವಾದೀಂದ್ರಸನ್ನುತರಾಘವೇಂದ್ರಾರ್ಯರವೃಂದಾವನದಲ್ಲಿ ಸೇವೆ ಮಾಡಿದರುಮುಂದು ಯಾತ್ರೆ ಗೈದು ಘಟಿಕಾದ್ರಿ ಹನುಮಗೆದುಗ್ಧಾಭಿಷೇಕ ಹರಿವಾಯುಸ್ತುತಿಯಿಂದ 9ಮಂತ್ರಾಲಯ ವೆಂಕಟಗಿರಿ ಘಟಿಕಾದ್ರಿಇಂಥಾ ಸುಪುಣ್ಯ ಕ್ಷೇತ್ರಗಳಿಗೆ ಪೋಗಿಮಂತ್ರಾಲಯ ಮತ್ತೂ ಬಂದು ಶ್ರೀ ರಾಘ-ವೇಂದ್ರ ತೀರ್ಥರಪಾದಭಜಿಸಿ ನಮಿಸಿದರು10ಹರಿವಾಯುಸ್ತುತಿ ಪುರಶ್ಚರಣ ಆದರದಿಚರಿಸೆ ಭಾರತೀಶನು ಮತ್ತುಗುರುರಾಘವೇಂದ್ರರುಅರುಪಿದರು ಸ್ವಪ್ನದಿ ವಿಜಯವಿಠಲ ದಾÀಸಆರ್ಯರಲಿ ಶರಣಾಗುಕ್ಷಮೆಬೇಡು ಎಂದು11ಶ್ರೀನಿವಾಸ ಆಚಾರ್ಯರು ಎಚ್ಚರಿತುತಾನು ವಿಜಯಾರ್ಯರಲಿ ಗೈದ ಅಪರಾಧನೆನೆದು ಬಹುವ್ಯಾಕುಲಪಶ್ಚಾತ್ತಪ್ತರು ಆಗಿಕ್ಷಣದಿ ಹೊರಟರು ವಿಜಯದಾಸರ ಬಳಿಗೆ 12ದೀನ ಕರುಣಾಕರರುವಿಜಯದಾಸಾರ್ಯರುಘನದಯದಿ ಶ್ರೀನಿವಾಸಾಚಾರ್ಯರ ಕ್ಷಮಿಸಿತನ್ನ ಶಿಷ್ಯ ಗೋಪಾಲದಾಸಾರ್ಯರುಅನುಗ್ರಹ ಮಾಡುವ ಗುರುಗಳು ಎಂದರು 13ಪರಮಗುರುವರ್ಯ ಶ್ರೀ ವಿಜಯದಾಸಾರ್ಯರನಿವ್ರ್ಯಾಜ ಪ್ರೀತಿ ಅಪ್ಪಣೆಯ ತಾ ಕೊಂಡುಗುರುಗಳು ಗೋಪಾಲದಾಸಾರ್ಯರಲಿ ಪೋಗಿಶರಣಾಗಿ ಶ್ರೀನಿವಾಸರು ನಮಿಸಿದರು 14ತನ್ನಲ್ಲಿ ಗುರುಗಳು ಕಳುಹಿಸಿದವರೆಂದುದೀನ ಆಚಾರ್ಯರು ನಿಜ ಶರಣರೆಂದುಚೆನ್ನಾಗಿ ಆತನ ಪರಿಸ್ಥಿತಿ ಅರಿತುಅನುಗ್ರಹಿಸಿದರು ಗೋಪಾಲವಿಠಲರು 15ಅನ್ನ ಫಲಹಾರಗಳ ಕೊಳ್ಳದ ವ್ಯಾಧಿಯಲಿಸಣ್ಣ ಬಡವಾದಂಥ ಗಾತ್ರದಿಂದಸನ್ನಮಿಸಿದ ಶ್ರೀನಿವಾಸಾಚಾರ್ಯನ್ನಮನೆಯಲ್ಲಿ ಉಪಚರಿಸಿ ಆದರಿಸಿದರು 16ಗುರುಗ ಶಿರಿವಿಜಯವಿಠಲ ತನ್ನೊಳಿಪ್ಪಶಿರಿ ಗೋಪಾಲ ವಿಠsÀಲ ಶ್ರೀನಿವಾಸಸರಸಿಜಭವಾಂಡ ದೊರೆ ಶ್ರೀ ಜನಗ್ನಾಥನ್ನಸ್ಮರಿಸಿ ಅರ್ಚಿಸಿ ನೈವೇದ್ಯ ಮಾಡಿದರು 17ನಿವೇದಿತಾನ್ನ ಜೋಳದ ರೊಟ್ಟಿ ಕೊಟ್ಟುದ್ರವ ಮಾತ್ರ ಕೊಳ್ಳುವ ರೋಗಿ ಆಚಾರ್ಯಗೆದೇವರ ಅನಿಲನಪರಮಗುರುಗಳ ನೆನೆದುಸವಿದು ಉಣ್ಣುವುದೆಂದು ಹಿತದಿ ಪೇಳಿದರು 18ಶ್ರೀನಿವಾಸಾಚಾರ್ಯ ಉಣ್ಣಲು ರೋಗವುದಿನದಿನದಿ ಕ್ರಮದಿಂದ ನಿವಾರಣ ಆಯ್ತೂಧ್ಯಾನ ಪೂಜಾಅನುಸಂಧಾನಕ್ರಮಗಳುಚೆನ್ನಾಗಿ ಆಚಾಯರಾಕರ್ಷಿಸಿದವು 19ಶ್ರೀನಿವಾಸಾಚಾರ್ಯರ ರೋಗಮೋಚನಕೆಧ್ಯಾನಿಸಿ ಜಪಿಸಿ ಶ್ರೀ ಧನ್ವಂತರಿ ಮಂತ್ರಬಿನ್ನಪವ ಮಾಡಿದರು ಕೀರ್ತನಾ ರೂಪದಿದೀನದಯಾಳು ಗೋಪಾಲದಾಸಾರ್ಯ 20ಆಹ್ನಿಕ ಜಪಗುರುಪರಮಗುರು ನಮನವಿಘ್ನವಿಲ್ಲದೆ ಆಚಾರ್ಯರು ಚರಿಸಿದರುಘನರೋಗ ಹೋಯಿತು ತ್ರಾನ ಇನ್ನೂ ಬೇಕುಶ್ರೀನಿಧಿ ನೋಡಿದನು ಕೃಪಾದೃಷ್ಟಿಯಿಂದ 21ಶ್ರೀ ನಿಧಿಃ ಸರ್ವಭೂತಾನಾಂ ಭಯಕೃದ್ಭಯನಾ -ಶನನು ವಿಜಯದಾಸಾರ್ಯ ರೂಪದಲಿತಾನೆ ಸ್ವಪ್ನದಿ ಪೇಳ್ದ ಗೋಪಾಲದಾಸರಿಗೆದಾನ ಕೊಡು ಆಯುಷ್ಯ ಚತ್ವಾರಿವರ್ಷ 22ಶಿರಿವಿಜಯವಿಠ್ಠಲ ವಾಯುಗುರುಇಚ್ಛಾನು -ಸಾರದಿ ಶ್ರೀನಿವಾಸಾಚಾರ್ಯನಲಿ ವಾತ್ಸಲ್ಯಕಾರುಣ್ಯ ತೋರಿಸಿ ತಮಗಿದ್ದ ಆಯುಸ್ಸಲಿಎರೆದರು ಧಾರೆಯ ನಲವತ್ತು ವರ್ಷ 23ಏನೆಂಬೆ ಈ ನಮ್ಮ ಗುರುಗಳ ಔದಾರ್ಯದೀನಕರುಣಾಂಬುಧಿ ಗೋಪಾಲದಾಸರದಾನಕ್ಕೆ ಎಣೆಯುಂಟೆ ಎಲ್ಲಾದರೂ ಯಾರೂತನ್ ಆಯುಷ್ಯವ ಕೊಡುವರೆ ಅನ್ಯರಿಗೆ 24ರೋಗಕಳೆದು ಆಯುರ್ದಾನವಕೊಂಡಈಬ್ಯಾಗವಟ್ಟ ಶ್ರೀನಿವಾಸಾಚಾರ್ಯಜಗನ್ನಾಥವಿಠ್ಠಲ ದಾಸರಾಯರು ಎಂದುಜಗತ್ತಲ್ಲಿ ಖ್ಯಾತರಾಗುವ ಬಗೆ ಮಾಡಿದರು 25ಗುರುಹಿರಿಯರಲಿ ಮಾಳ್ಪ ಉದಾಸೀನ ಎಷ್ಟುಭಾರಿತರ ಆಪತ್ತು ಕೊಡುವುದು ಎಂದುಗುರುಅನುಗ್ರಹದಿಂದ ಸೌಭಾಗ್ಯಲಾಭವುಅಪಮೃತ್ಯು ಪರಿಹಾರ ಎಂದು ತಿಳಿಯುತ್ತೆ 26ವಾರಿಜಾಸನ ಪಿತನು ಪೂರ್ಣಪ್ರಜÕರ ಹೃತ್‍ಸ್ಥಶಿರಿಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲ ದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 27-ದ್ವಿತೀಯಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಪೂಜೆಯ ಮಾಡುವೆನೊ ಸದ್ಗುರುವಿನ |ಪೂಜೆಯ ಮಾಡುವೆನು ||ಮಾಜದೆ ತನು ಮನ ಧನವೆಲ್ಲ ಅರ್ಪಿಸಿ |ಪೂಜೆಯ ಮಾಡುವೆನುಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಗಣಪತಿ ಹರಿಹರರಾ ನಿಜಶಕ್ತಿ ದಿನಪತಿ ನಿಜಭಾಸವು |ತನುವೆಂಬ ಅಷ್ಟಕಂಬದ ಮನೆಯೊಳು ನಾಲ್ಕುಗುಣದ ಚೌಕಿಯನಿಡುವೆ1ವೃತ್ತಿಉದಾಸೀನಕೆ ನಿರ್ಗುಣವಾದಸುತ್ತ ರೇಖೆಯ ಬರೆದು | ಚಿತ್ತವೆಂಬಷ್ಟದಳದಕಮಲದೊಳಿಷ್ಟಮೂರ್ತಿಯ ಧ್ಯಾನಿಸುವೆ2ವೇದಾದಿ ಕಾರಣದಿ ಉಪನಿಷದಾದಿಅರ್ಥದಿ ಶಿರಸಾಮೇದಿನಿ ಮೊದಲಾದತತ್ತ್ವಭೂಷಣದಿಂದ ಆದಿನಾಥನ ಪೂಜೆಯ3ಪ್ರವೃತ್ತಿ ಸ್ಥಾನದಲ್ಲಿ ಫಣಿಯಲ್ಲಿ ನಿವೃತ್ತಿ ವಿಭೂತಿಯುನಿರ್ವಂಚನೆಯಾದ ಆಚಮನ ಕೊಡುವೆನುಸರ್ವಾತ್ಮ ಗುರುಮೂರ್ತಿಗೆ4ಭಕ್ತಿಯ ಜಲದಿಂದಲಿ ಸದ್ಗುರುವಿನನಿತ್ಯಚರಣತೊಳೆದು |ಮುಕ್ತಿಯ ಪಾವನ ಮಾಡುವ ಗುರುಪಾದ ತೀರ್ಥವಂದಿಸಿಕೊಂಬುವೆ5ಸದ್ವಾಸನೆ ಗಂಧವ ಶ್ರೀಗುರುವಿಗೆ ಚಿದ್ ವೃತ್ತಿಯಕ್ಷತೆಯು |ಸದ್ಭಾವದಿಂದಲಿ ತೋರುವ ಪರಿಮಳಮದ್ಗುರುವಿನ ತನುವಿಗೆ6ಮೂರು ಮಾತ್ರೆಯ ಹೊಸೆದು | ನಿರ್ಗುಣವಾದ ಧಾರವಶಿವಸೂತ್ರಕ್ಕೆ | ತೋರುವ ವಿಶ್ವಚರಾಚರ ಪುಷ್ಪದ ಹಾರಕೊರಳಿಗೆ ಹಾಕುವೆ7ನಾನೆಂಬ ಧೂಪ ಸುಟ್ಟು ಸದ್ಗುರುವಿಗೆ ಜ್ಞಾನದೇಕಾರತಿಯು |ಬೋನ ನೈವೇದ್ಯ ಜೀವದ ಭಾವವರ್ಪಿಸಿ ಜ್ಞಾನಕರೋದ್ವರ್ತಿಯ8ವಾಚ್ಯಾರ್ಥ ತಂಬೂಲವಾ ಸದ್ಗುರುವಿಗೆ |ಲಕ್ಷ್ಯಾರ್ಥವೆ ದಕ್ಷಿಣಾ ಲಕ್ಷ್ಯಾತೀತಗೆ ಮಂಗಳಾರತಿಬೆಳಗುವೆಅಕ್ಷಯಮಂತ್ರಪುಷ್ಪ9ಸಂತ ಸನಕಾದಿಕರೂ ಸುರರೆಲ್ಲ ಅಂತರಿಕ್ಷದಿ ಬಂದರು |ತಂತಿ ಮದ್ದಳಿ ತಾಳ ಗೀತ ಶಂಖದ ವಾದ್ಯತಿಂತಿಣಿಯಲಿ ಕುಣಿಯುತ10ಅದ್ವೈತಸಾಷ್ಟಾಂಗವಾ ಸದ್ಗುರುವಿಗೆ | ಚಿದ್ಬೋಧದಿಎರಗಲು ಶುದ್ಧಿ ಸಿದ್ಧಿಗಳೆಂಬ ಚರ್ಯವ ತೋರುವಮುದ್ರೆ ಶ್ರೀ ಗುರುಗಿಟ್ಟೆನು11
--------------
ಜಕ್ಕಪ್ಪಯ್ಯನವರು
ಮುಂಚೆ ಕೈವಿಡಿದಂತೆ ಮಿಂಚೆನ್ನ ಎದೆಗುಡಿಲಿಪಂಚಬಾಣನ ಜನಕನೆ ಪ.ಸಂಚಿತಾರಬ್ಧಾಗಾಮಿ ಸಂಚಂಚಲಿಪ ಮನದ ಪ್ರಪಂಚವನು ಬಿಡಿಸು ತಂದೆ ನೊಂದೆ ಅ.ಪ.ಭವಬವಣೆಗಳನು ಅನುಭವಿಸಿದನ ಸತ್ಕುಲೋದ್ಭವನ ಮಾಡಿದ ಕೃಪೆಗೆ ನವಭಕುತಿ ಕಲಿಸು ಎನ್ನವಗುಣವ ಬಿಡಿಸು ದಾನವವೈರಿನರಮುರಾರಿಶೌರಿ1ಲೇಸು ಹೊಲ್ಲೆಯನರಿಯೆ ಲೇಶ ನಿಷ್ಠೆಯನರಿಯೆ ನಾಲೇಶದೊಳು ನಿನ್ನ ಮರೆದೆ ದಾಸಾಭಿಮಾನಿಯೆ ಸದಾ ಸರ್ವಕಾಲದಿ ಉದಾಸೀನವ ಮಾಡಬೇಡೈ ನೋಡೈ 2ಸ್ಮøತಿಯೊಳಗೆ ಕೂಡಿ ವಿಸ್ಮøತಿಯ ಕೂಡೋಡಾಡಿಸ್ಮøತಿದಾರಿ ಕೊಳದು ಮನವು ಸ್ಮøತಿವಂದ್ಯ ಪ್ರಸನ್ವೆಂಕಟಸ್ಮಿತವದನದಾತಅಸ್ಮತ್ ಪಾಪ ಪಂಕಶೋಷ ನಿರ್ದೋಷ3
--------------
ಪ್ರಸನ್ನವೆಂಕಟದಾಸರು