ಒಟ್ಟು 17 ಕಡೆಗಳಲ್ಲಿ , 8 ದಾಸರು , 17 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ಮರಿಸಿ ಬೇಡುವೆನು ನಾ ಹೇ ಗುರು ಸಾರ್ವಭೌಮಾ ಪ ನಿರುತ ನೀ ಪೊರೆ ಎನ್ನ ವಾದಿಗಜಸಿಂಹ ಅ.ಪ. ದಿತಿಸುತಗೆ ಸುತನೆನಿಸಿ | ಅತಿಮುದದಿ ಸುರಮುನಿಯ ಮತ ಹಿಡಿದು ಹರಿಯ ಮಹಿಮೆ ಪಿತಗೆ ಪೇಳಿ ಪತಿಯ ಸ್ತಂಭದಿ ಕರೆದ ಪ್ರಹ್ಲಾದ ರಾಜ 1 ಬಾಲ್ಯದಲಿ ಯತಿಯಾಗಿ ಲೀಲೆಯಿಂದಲಿ | ಭೂಮಿ ಪಾಲಗೊದಗಿರ್ದ ಕುಹು ಯೋಗ ಬಿಡಿಸಿ ಖೂಳ ಮಾಯಳ ಜಯಿಸಿ ಚಂದ್ರಿಕಾ ಗ್ರಂಥವನು ಪೇಳಿ ಹರಿಪೀಠವೇರಿದ ವ್ಯಾಸರಾಜ 2 ಕಾಮರಿಪುನುತ ಮೂಲರಾಮ ಪದಯುಗ ಕುಮುದ ಸೋಮನೆನಿಸುವ ಭಕ್ತಸ್ತೊಮಕ್ಕೆಲ್ಲ ನೇಮದಿಂದಲಿ ವಿವಿಧ ಕಾಮಿತಾರ್ಥ ಸ್ಫುಟತ ಗಾತ್ರ ಪಾವನ ಚರಿತ್ರ 3 ಶಾಂತತೆಯ ಪೊಂದಿ ಮಂತ್ರಾಲಯದಿ ವೃಂದಾವ ನಾಂತರದೊಳಿರುತ ಸಿರಿಕಾಂತ ಹರಿಯಾ ಚಿಂತಿಸುತಲಿಹ ಸರ್ವತಂತ್ರ ಸ್ವತಂತ್ರ ಕರು ಣಾಂತರಂಗನೆ ರಾಘವೇಂದ್ರ ಯತಿವರ್ಯಾ 4 ಮೂಕ ಬಧಿರಾಂಧತ್ವಗಳ ಪೊಂದಿ ಧರಣಿಯೊಳು ವ್ಯಾಕುಲವ ಪಡುವವರನುದ್ಧರಿಸುತ ನಾಕಪತಿವಿನುತ ಜಗನ್ನಾಥವಿಠಲನ ಮಧುಪ ನೀ ಕೊಟ್ಟು ಸಲಹೆನ್ನಭೀಷ್ಟ ಸಮುದಾಯ 5 ಇತರ ಯತಿವರೇಣ್ಯರ ಸ್ತೋತ್ರ
--------------
ಜಗನ್ನಾಥದಾಸರು
ಶ್ರೀ ಸೀತಾಪತಿದಾಸವರ್ಯ ಜೀ-ವೇಶ ನಿಜ ವಿಲಾಸ ಪ.ಭಾಸುರಮಣಿಗಣಭೂಷಣ ದಿತಿಸುತ-ಭೀಷಣ ಸಜ್ಜನಪೋಷಣ ಕಪಿವರ ಅ.ಪ.ಕಂಜಸಖೋಪಮ ಕಮಲಾನನಾನತಸಂಜೀವನ ಹನುಮಾಮಂಜುಳ ವಜ್ರಶರೀರ ವೀರ ಹರಿ-ರಂಜನಾಂಜನಾಸುತ ಸದ್ಗುಣಯುತ 1ನಿಗಮಾಗಮ ಪಾರಂಗತ ರಾಮಾ-ನುಗ ಪಾವನರೂಪಭಗವಜ್ಜನ ಭಾಗ್ಯೋದಯಭಾರತಿದೃಗುಚಕೋರಚಂದ್ರಮ ತ್ರಿಗುಣಾತ್ಮಕ 2ಅಜಪದನಿಯತ ಭೂಭುಜಪತಿ ಪಾಂಡುತ-ನುಜ ಸುರವ್ರಜವಿನುತಕುಜನಧ್ವಾಂತನೀರಜಸಖ ಗರುಡ-ಧ್ವಜಶರಣ್ಯ ಶಾಶ್ವತ ತ್ರಿಜಗನ್ಮಯ 3ವರಕಾರ್ಕಳಪುರಗುರುವೆಂಕಟಪತಿಚರಣಾಗ್ರೇ ವಿರಾಜಹರಿಲಕ್ಷ್ಮೀನಾರಾಯಣ ನಿಜಪದಶರಣಭರಣಯುತ ಕರುಣಾಕರ 4
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ