ಒಟ್ಟು 37 ಕಡೆಗಳಲ್ಲಿ , 20 ದಾಸರು , 35 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬೆಳೆಬೆಳೆದು ಮನದಾಸೆಗಳ ಕಳೆದೆನಯ್ಯ ಸುಳಿದಿರ್ಪುದೊಂದಾಸೆ ಅದ ಪೇಳ್ವೆನಯ್ಯ ಪ ತೊಳತೊಳಲಿ ಬಳಬಳಲಿ ಬೆಂಡಾದೆನಯ್ಯ ಕೊಳಕೊಳದಿ ಮುಳುಮುಳುಗಿ ತಳಮಳಿಪೆನು ಅ.ಪ ಅದು ನಿನ್ನ ಬಳಿಸಾರ್ದು ನಿಲ್ವಪರಿಯಾಸೆ ಅದು ನಿನ್ನ ಪಾದಗಳ ನೋಡಿ ನಲಿವಾಸೆ ಅದು ನಿನ್ನ ನಾಮಗಳ ಪಾಡಿನುಡಿವಾಸೆ ಅದು ನಿನ್ನ ನಸುನಗೆಯ ಬೇಡಿಕೊಂಬಾಸೆ 1 ಅದು ನಿನ್ನ ಅಡಿಗಳಿಗೆ ಮುಡಿಯಿಡು[ವಾಸೆ] ಅದು ನಿನ್ನ ಕೊರಳಿಗೆ ಮಾಲೆಯಿಡು[ವಾಸೆ] ಅದು ನಿನ್ನ ಬೆಡಗುಗಳ ನುಡಿನುಡಿಯೊಳೆಸೆವಾಸೆ ಅದು ಮಾಂಗಿರಿಯ ರಂಗ ನಿನ್ನ ಕೃಪೆಯಾಸೆ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬೇಡಿದರೆ ನೀಡುವುದೇನು ಹಿರಿದೆ ಗೋವಿಂದ ಬೇಡದೆ ನೀಡೆ ನಿನ್ನಂತಸ್ತಿಗತಿಚೆಂದ ಪ ನೀಡುವನು ನೀನಿರಲು ಬೇಡಿಕೆಗೆ ಕೊನೆಯುಂಟೆ ಬೇಡಿ ಬೇಸತ್ತರೂ ಆಸೆಯಿಂಗುವುದುಂಟೆ ಬೇಡಿದಮಣಿ ನೂರುಜನುಮ ಸಾಕಹುದುಂಟೆ ಬೇಡದೇ ಭಜಿಪವಗೆ ಹುಟ್ಟು ಸಾವುಗಳುಂಟೆ 1 ಹಿಂದೆ ನೀನಿತ್ತುದನು ಇಂದುಣುತಲಿಹೆವಯ್ಯ ಮುಂದೆ ನಾನುಣಲೇನು ಬೇಡವಯ್ಯ ಸಂದಿರ್ಪುವೈ ಸಾಲಸೋಲಂಗಳೇನಯ್ಯ ಮುಂದೇನು ಬೇಡ ಮಾಂಗಿರಿವಾಸ ರಂಗಯ್ಯ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಭಜಿಸಿ ಬದುಕಿರೋ _ ಭರದಿ ಸುಜನ ರೆನಿಸಿರೋ ಪ ಸುಜನ ರಾಜ ರಾಘವೇಂದ್ರರಾ ಅ.ಪ ಸುಜನ ಮಲಿನ ಕಳಿಯಲು ಒಲಿದು ಭವಿಯೊಳು _ ಬಂದ ಅಲವ ಮಹಿಮರ 1 ವೇಧ ದೂತರ _ ಪ್ರಹ್ಲಾದರೆಂಬರ ಸಾಧು ಸೇವ್ಯರ _ ದುರ್ಬೋಧೆ ಕಳಿವರ 2 ನಾರಸಿಂಹನ ಕರುಣ ಸೂರೆ ಪಡದಿಹ ಭಾರಿ ಭಕ್ತರ ದೇವರ್ಷಿ ಛಾತ್ರರ 3 ವ್ಯಾಸರಾಯರ _ ಶ್ರೀನಿವಾಸ ಯಜಕರ ಶೇಷದೇವರ ಆವೇಶ ಯುಕ್ತರ 4 ರಾಜ ಗುರುಗಳು ಕವಿರಾಜ ಮಾನ್ಯರು ನೈಜ ತೇಜರು ನಿವ್ರ್ಯಾಜ ಪ್ರೇಮರು 5 ಹರಿಯ ತರಿಸಿದಾ ಮುರಹರನ ಕುಣಿಸಿ ದಾ ಮುರವ ಹರಿಸಿದಾ ಧೊರೆಗೆ ಹರುಷ ಸುರಿಸಿದಾ 6 ಮಾನವಂತರಾ ಬಹುಜ್ಞಾನವಂತರಾ ದಾನ ಶೀಲರಾ ಅನುಮಾನ ರಹಿತರ 7 ಭ್ರಾಂತಿ ವಾದವ ವಿಶ್ರಾಂತಿ ಗೊಳಿಸಿದ ಶಾಂತಿ ಸಾಗರ ವೇದಾಂತ ಭಾಸ್ಕರ 8 ಶ್ರೀ ಸುಧೀಂದ್ರರ ವಿಶ್ವಾಸ ಪುತ್ರರ ದೋಷದೂರರ _ ಗುರು ದೋಷ ಕಳಿವರ 9 ಮಂತ್ರ ಸಿದ್ಧರು ಬಹು ಗ್ರಂಥ ಕರ್ತರು ತಂತ್ರ ಮಲ್ಲರು ಹರಿ ಮಂತ್ರಿ ಸಚಿವರು 10 ಭವ ರೋಗ ವೈದ್ಯರ ರಾಗ ರಹಿತರ ವೈರಾಗ್ಯ ಭಾಗ್ಯರ 11 ವಾದಿ ಭೀಕರ ಶ್ರೀವಿಜೀಂದ್ರ ಪೌತ್ರರ ನಿತ್ಯ ಮಿಂದು ಮೀಯ್ವರ 12 ತರ್ಕದಿಂದಲು ಹರಿಯು ಶಕ್ತಿಯಿಂದಲು ಯುಕ್ತಿಯಿಂದಲು ಒಲಿಯ ಭಕ್ತಿ ಇಲ್ಲದೆ 13 ಶ್ರೀಶ ದಾಸರ ಪದ ಪಾಂಶು ಧರಿಸದೆ ದೇಶ ತಿರುಗಲು ಬರಿಘಾಸಿ ಸಿದ್ಧವು 14 ಭಕ್ತರೊಲಿಯದೆ ನಿಜ ಭಕ್ತಿ ಸಿಕ್ಕದು ಪಕ್ವವಾಗದೆ ಭಕ್ತಿ ದಕ್ಕ ಶ್ರೀ ಹರಿ 15 ಇವರ ಮಂತ್ರವ ಭಕ್ತ ಜವದಿ ಜಪಿಸಲು ಅವಗೆ ಕರಗತ ಸಿದ್ಧ ಭವದಿ ವಾಂಛಿತ 16 ಶ್ರೀನಿವಾಸನ ಭಕ್ತ ಶ್ರೇಣಿ ಸೇರುವ 17 ಅಲ್ಪ ಸೇವೆಯೆ ಮೇರು ಕಲ್ಪ ವಾಹುದೊ ಕಾಕು ಸ್ವಲ್ಪ ತಟ್ಟದೊ 18 ನಿಖಿಳ ಯಾತ್ರೆಯಾ ಫಲ ಭಕ್ತ ಪಡೆಯುವ ಸಂದೇಹ ಸಲ್ಲದೊ 19 ಪುತ್ರ ನೀಡುವ ಸಂಪತ್ತು ದೊರಕಿಪ ವೃತ್ತಿ ಕಲ್ಪಿಪ ಆಪತ್ತು ಕಳಿಯುವ 20 ರಾಮ ನರಹರಿ ಕೃಷ್ಣ ಬಾದರಾಯಣ ದಿವಿಜ ಸ್ತೋಮ ವೆಲ್ಲವು 21 ಸೇರಿ ಇವರಿಗೆ ಕೀರ್ತಿ ಸೂರೆ ಕೊಡುತಿರೆ ಪಾರವಿಲ್ಲವು ಸತ್ಯ ಮಹಿಮೆ ಗೆಂಬುವೆ 22 ಕರ್ಣ ವಿದಿತರು ವಿಘ್ನ ಕಳಿವರು ಶ್ರೀ ಸತ್ಯ ಸಂಧರು 23 ಗುರುವು ಒಲಿದರೆ ತಾ ಹರಿಯು ಒಲಿಯುವ ಗುರುವು ಮುನಿದರೆ ಯಾರು ಪೊರೆವರಿಲ್ಲವೊ 24 ಶುದ್ಧ ಭಕ್ತಿಲಿ ಈ ಪದವ ಪಠಿಸಲು ಸಿಧ್ಧಿ ಸತ್ಯವು ಸರ್ವತ್ರ ವಿಜಯವು25 ಸಾರಿ ಸಾರುವೆ ಕೇಳಿ ಕ್ರೂರ ಕಲಿಯಲಿ ದೂರ ಸಾಧನೆ ಇವರ ಸೇರ ದಿರ್ಪಗೆ26 ಜಿಷ್ಣು ಸೂತ ಶ್ರೀ ಕೃಷ್ಣ ವಿಠಲನ ಶ್ರೇಷ್ಟ ಭಕ್ತರ ಶ್ರೀ ರಾಘವೇಂದ್ರರ27
--------------
ಕೃಷ್ಣವಿಠಲದಾಸರು
ಭಯದೂರ ಧರ್ಮಸಾರ ಭುವನಾಧಾರ ಪ. ಭಕ್ತಾರ್ತಿಭಂಜನ ಭವಪಾಶಮೋಚನ ದಮನ ನಿಕೇತನ ಸಾರಿ ಮೈದೋರು ಬಾ ಶ್ರೀರಮಾಮನೋಹರ 1 ಸಂದಿಗ್ಧ ಸಮಯಂಗಳ್ ಬಂದಿರ್ಪವೇಳೆಯೊಳ್ ನೊಂದಿರ್ಪ ಭಜಕರೊಳ್ ಇಂದೇಕೆ ಸಂದೆಗಂ ಪೇಳ್ ಇಂದಿರಾಮನೋಹರ ನಂದನಕುಮಾರ 2 ಶ್ರೀನಾಥ ನಿನ್ನಂಘ್ರಿಯೊಳ್ ಅನ್ಯೂನ ಭಕ್ತಿಯಿರಲ್ ಮಾನಾಭಿಮಾನಂಗಳೇನೊಂದನೆಣಿಸದೆ ಜ್ಞಾನೋದಯಂ ತಾನಾಗೆ ಚಿದಾನಂದಮಪ್ಪುದೈ 3
--------------
ನಂಜನಗೂಡು ತಿರುಮಲಾಂಬಾ
ಮಾರಕೋಟಿ ರೂಪ ಮೈದೋರು ನೀಂ ಪ ಸೇರಿ ಸುಖಿಸಲೆಂದು ಕೋರಿ ಭಜಿಸುತಿಪರ ಪಾರಕಾಂಕ್ಷಿಯಾದೆನ್ನ ಪಾರಗಾಣಿಸೆ ಅ.ಪ ಮುನ್ನ ಭಕ್ತಬಾಲ ಧ್ರುವನು ಕಷ್ಟದೊಳಗೆ ಯನ್ನ ಕಾಯೊಯೆಂದು ಬಿನ್ನಹಂಗೈಯಲ್ ಚನ್ನರೂಪತೋರಿದೆನ್ನತಾತ ನೀ ನಿನ್ನೂ ಏಕೆ ಬಾರದಿರ್ಪೆ ಜಾಜಿಶ್ರೀಶಾ 1
--------------
ಶಾಮಶರ್ಮರು
ಮೆಲ್ಲನೇಳಯ್ಯ ಮಣಿವೆ ಪ ನಲ್ಲುಲಿಗಳಿಂದ ಶುಕಪಿಕಗಳೆಚ್ಚರಿಸುತಿವೆ ಅ.ಪ ಅರುಣ ವರ್ಣದ ಗಗನಯೆಂಬ ಹರಿವಾಣವನು ಕರದಿ ಪಿಡಿದೆತ್ತೆ ನಿನಗಾರತಿಯ ಗೈಯಲು ತರಣಿ ನಿಂದಿರ್ಪ ತುಂಬುರು ನಾರದರು ಮುದದಿ ಪರಮಾತ್ಮ ಸುಪ್ರಭಾತಗಳ ಪೇಳುವರು 1 ಭೃತ್ಯ ದಿಕ್ಪಾಲಕರು ಅತ್ಯಧಿಕ ಭಕ್ತಿಯಿಂ ಕರವೆತ್ತಿ ಮುಗಿದು ನಿತ್ಯಕಾರುಣ್ಯ ಪರಿಪೂರ್ಣ ಸದ್ಭಕ್ತಗಣ ನುತ್ಯ ನೀನೇಳೆಂದು ನುತಿಸುತಿಹರು 2 ನಿನ್ನ ನಾಮವ ಭಜಿಸಿ ಪಾದಪೂಜೆಯ ಗೈದು ನಿನ್ನ ಕಾರುಣ್ಯ ದರ್ಶನಕೆ ಕಾದಿರುವಾ ಪನ್ನರೆಲ್ಲರ್ಗೆ ದರ್ಶನವ ನೀನೀಯಲು ಇನ್ನೇಕೆ ತಡ ಏಳು ಮಾಂಗಿರೀಶ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ವಾಣಿ ವೀಣಾಪಾಣಿ ಬ್ರಹ್ಮನರಾಣಿ ಪಾಹಿ ಕಿಂಕರ ಪಾಪಕÀೃಪಾಣೀ ಪ ಖ್ಯಾತೇ ವೇದಮಾತೇ ನಾಗಭೂಷಣ ಮಾತೇ ಮಾಲಾಪುಸ್ತಕ ಶೋಭಿತಹಸ್ತೇ 1 ಭವ್ಯೇ ಭವ್ಯಕೃತ್ಯೇ ಭವ ಮುಖ್ಯರಿಗಭಯವನಿತ್ತೇ ಮತ್ತೆ ಗಿರಿಜಾದಿಗಳಿಗೆ ನೀನತ್ತೆ 2 ಶುಕ್ಲೇ ಪರಶುಕ್ಲೇ ಶುಕ್ಲಹಂಸದಿ ಮೆರೆದಿರ್ಪೆ ಶುಕ್ಲ ರಾಜೇಶ ಹಯಮುಖ ಭಕ್ತೇ 3
--------------
ವಿಶ್ವೇಂದ್ರತೀರ್ಥ
ವೆಂಕಟರಮಣ ಶ್ರೀ ವೆಂಕಟರಮಣ ಶ್ರೀವೆಂಕಟರಮಣನೇ ||ಅ|| ಪಂಕಜೋದ್ಭವ ಪಿತ ಪಿಳ್ಳಂಕೇರಿಯ ವಾಸವೆಂಕಟರಮಣನೇ ಅ.ಪ. ಭದ್ರ ಮೂರುತಿ ಸಣ್ಣ | ಆದ್ರಿಯಾಶ್ರಯಿಸಿ ನಿಂತಿದ್ದಿ ಕಾರಣವೇನೋ |ಶುದ್ಧ ಜನರು ಮಾಳ್ಪ | ಶುದ್ಧ ಸೇವೆಯ ಗೊಂಡುದ್ಧರಿಸಲು ಯೋನೋ 1 ನೀರೊಳು ಮುಳು ಮುಳಿಗಿ | ಭಾರಿ ಗಿರಿಯ ಪೊತ್ತುಕೋರೆಹಲ್ಲನು ತೋರೇನೋ |ಧೀರ ಕಂದನ ಕಾಯ್ದ | ನಾರಸಿಂಹನೆ ಬಲಿಯದ್ವಾರ ಕಾಯ್ದಿಹದೇನೋ 2 ನೃಪರ ಸವರಿ | ನಾರಿ ಚೋರನ ಕೊಂದುಚಾರ ಗೋಪೆರ ಕೂಡೇನೊ |ಸಾರಿ ತ್ರಿಪ್ಪುರವನ | ನಾರೇರ ವ್ರತ ಕೆಡಿಸಿವೀರ ರಾವುತನಾದದ್ದೇನೋ 3 ಪಂಚ ರೂಪದಿ ಪ್ರ | ಪಂಚವ ವ್ಯಾಪಿಸಿಪಂಚಾತ್ಮಕ ನಾದದ್ದೇನೋ |ಅಂಚೆ ಗಮನನಾದಿ | ಪಂಚ ಪಂಚರಲ್ಲಿಸಂಚು ಗೊಳಿಪುದೇನೋ | 4 ಇಂದ್ರಾ ವರಜ ದೇ | ವೇಂದ್ರ ಗಭೀಷ್ಟದಬಂದಲ್ಲಿ ನಿಂದಿರ್ಪುದೇನೋಇಂದು ಕುಲಜ ರಾ | ಜೇಂದ್ರ ಜನಮೇಜಯಗಂದು ಒಲಿದು ನಿಂತಿಲ್ಲೇನೋ 5 ತೊಂಡ ಮಾನಾನಂದಅಂಡಜವಾಹ ವಿಖ್ಯಾತಾ6 ಭಾವ ಶುದ್ಧೀಲಿ ಸ್ತವನ | ದೇವ ಶರ್ಮನು ಮಾಡೆಭಾವಕ್ಕೊಲಿದು ಮೋಕ್ಷವಿತ್ಯೋ |ಗೋವ ಕಾವ ಗುರು | ಗೋವಿಂದ ವಿಠಲ ಭಕ್ತಿಭಾವ ನಿನ್ನಯ ಪದದಲ್ಲಿಯೋ7
--------------
ಗುರುಗೋವಿಂದವಿಠಲರು
ಶ್ರೀಕಾಂತನನ್ನೊಲಿಸುವಾ ಬಗೆಯಾನೊರೆವೆ ಮಾನವ ಪ. ಶ್ರೀಕರಗುಣಯುತ ಪಾಕಶಾಸನವಿನುತ ಲೋಕೈಕ ವೀರನನ್ನೊಲಿಸುವಾ ತೆರನ ಪೇಳ್ವೆನಾಲಿಸು ಅ.ಪ. ಶಕ್ತಿ ಸಾಹಸಗಳಿಗೆ ಸೋಲುವನಲ್ಲ ರಕ್ಕಸಾಂತಕಮಲ್ಲ ಯುಕ್ತಿಮಾರ್ಗಕೆ ಮನವ ಸಿಲುಕಿಪನಲ್ಲ ಭಕ್ತವತ್ಸಲ ಸಿರಿನಲ್ಲ ವಿತ್ತ ಮೂಲಕದಿಂದ ಚಿತ್ತ ಚಲಿಸುವುದಲ್ಲ ಮುಕ್ತಿದಾಯಕನ ಮೆಚ್ಚಿಸಲ್ ವಿರಕ್ತಿಯಿಂ ಫಲವಿಲ್ಲ [ಮತ್ತ] ಖಿಲಾಂಡಕೋಟಿ ಬ್ರಹ್ಮಾಂಡನಾಯಕನ ಮೆಚ್ಚಿಸಲ್ ಭಕ್ತಿಯೊಂದೇ ಉತ್ತಮೋಪಾಯ ಕೇಳೆಲೈ1 ದೃಢದಿ ಶೈಶವದೊಳೇ ಅಡವಿಯನಾರಯ್ಯುತೆ ಪೊಡವೀಶನಡಿಗಿತ್ತ ತೊಡವಾವುದದ ಪೇಳ್ ಕಡು ಭಕ್ತನಾ ವಿದುರ ಪಡೆದನಸುರಾರಿಯಾಲಿಂಗನದ ಸುಖಮಂ ಮಡದಿಮಣಿ ಪಾಂಚಾಲಿ ಪಡೆದಳಕ್ಷಯಪ್ರದಾನಮಂ ತಡೆಯೇನು ಪೇಳಾ ಪರಮಾತ್ಮನೊಲ್ಮೆಗಿನ್ನು ದೃಢಭಕ್ತಿಗಿಂ ಮಿಗಿಲು ತೊಡವಾವುದಿರ್ಪುದೈ 2 ದಾನವವಂಶದಲಿ ಜನಿಸಿದನಾ [ಸು]ಜ್ಞಾನಿ ಪ್ರಹ್ಲಾದನು ಸಾನುರಾಗದಿ ಹರಿಯ ಭಕ್ತಿಯಿಂ ಧ್ಯಾನಿಸೆ ಕಂಬದಿಂ ನುನಿಸಿಯಾಕ್ಷಣದಲ್ಲಿ ಮನುಜಕೇಸರಿಯಾಗಿ ಘನದಾಕೋಪವನು ತಾಳಿ ದನುಜನ ಉರವ ಸೀಳಿ ಮನ್ನಿಸುತೆ ಭಕ್ತನಂ ನನ್ನಿಯಿಂ ಮೈದಡಹಿ ಉನ್ನತೋನ್ನತ ಪದವನಿತ್ತನಾಖಲಕುಠಾರಿಶೌರಿ ಮುನ್ನ ಭಕ್ತಿಯಿದುವೇ ಮುಖ್ಯಸಾಧನ ಕೇಳೈ 3
--------------
ನಂಜನಗೂಡು ತಿರುಮಲಾಂಬಾ
ಶ್ರೀಧವನ ದೂತರಿಗೆ ಭೇದವುಂಟೆ ಕ್ರೋಧ ಜಯಿಸಿದ ನರಗೆ ಕಲಹಗಳುಂಟೆ ಪ ಗರುಡನಾಲಯದಿ ಉರಗಗಳ ಭಯವುಂಟೆ ಕರಿಯ ಬೆದರಿಕೆಗೆ ಮೃಗವರಗೆ ಉಂಟೆ ಹರಿದಿನದಲುಂಬುವಗೆ ದುರೀತ ತಪ್ಪುವದುಂಟೆ ಗುರು ಕರುಣ ಪಡೆಯದವಗೆ ಪರಗತಿ ಉಂಟೆ 1 ಅದ್ರಿಗಳ ಭಯವುಂಟೆ ಸುರಪನ ವಜ್ರಕೆ ಯುದ್ಧದ ಭಯವುಂಟೆ ವೀರನಿಗೆ ಶುದ್ಧ ಮನದಲಿ ನಮ್ಮ ಮಧ್ವಮತ ಸೇರಿದವ ಗುದ್ಧಾರವಲ್ಲದೆ ನರಕುಪದ್ರಗಳುಂಟೆ 2 ಕಂದರ್ಪ ನಂಜಿಕೆಯು ಶಿಂಧುರಾನನ ಕುಂಟೆ ನಿಂದಿಸುವ ಜನಕೆ ಸುಜ್ಞಾನವುಂಟೆ ಮಂದರೋದ್ಧಾರ ಶಾಮಸುಂದರನ ಪದಯುಗವ ಪೊಂದಿರ್ಪ ಸುಗುಣರಿಗೆ ಆವ ಕುಂದುಗಳಯ್ಯ 3
--------------
ಶಾಮಸುಂದರ ವಿಠಲ
ಸರಾಗದಿಂದೆನ್ನ ನೀಕ್ಷಿಸೈ ಪರಾಪರೇಶನೆ ಪರಾತ್ವರನೆ ನೀ-ಪರಾಕು ಮಾಡದೆ ಪಾಲಿಸೈ ಪ ವಿರಾಜಮಾನ ಸುವೀರಾಜವಾಹನ ವಿರಾಟ್ಪುರುಷ ವಿಶ್ವಂಭರ ಕರಾರವಿಂದದಿ ಕರಾದಿಗಳ ಪಿಡಿದರಾತಿ ಮರ್ದನ ಧುರಂಧರ 1 ಧರಾಧರಣಿಪಟು ಧರಾಧರಾಧಿಪ ಧುರಾವಹನ ದುರ್ಧರ್ಷಣ ಧರಾಮರರ ಬಹು ಪರಾಭವವ ಬಲು ಸರಾಗದಲಿ ನಿರ್ವಾಪಣ 2 ಜರಾಮರಣಗಳ ನಿರಾಕರಿಸಿ ವಸುಂಧರಾ ಭರಣ ಗುಣಭೂಷಣ ಸುರಾರಿ ಮರ್ದನ ಶರಾಸನಾಂಚಿತ ಕರಾನಿಹಿತ ಮಣಿಕಂಕಣ 3 ಶಿರೀಷ ಕುಸುಮದ ಸರೀಸುಕೋಮಲ ಶರೀರ ನಿನ್ನದು ಈಪರಿ ಪರಿಯದೆಂತುಟೋ ಕೇಳ್ಹರಿ 4 ಧಯಾನಿಧಿಯೇಧರ್ಮಾತ್ಮನೆ ನಿಯಾಮಿಸುವ ನಿರ್ಮಾಯನೆ 5 ವರೇಣ್ಯಸಜ್ಜನ ಶರಣ್ಯಪುಲಿಗಿರಿಯರಣ್ಯಮಧ್ಯ ವಿರಾಜಿತ ಹಿರಣ್ಯಯಾಂಬರ ಹಿರಣ್ಯಕಾಂತಕ ಹಿರಣ್ಯಗರ್ಭಸುಪೂಜಿತ6 ವ್ಯಾಘ್ರನೆಂಬುವತ್ಯುಗ್ರದೈತ್ಯನಂ ನಿಗ್ರಹಗೈದ ಮಹಾತ್ಮನೆ ಶೀಘ್ರದಿ ಭಕ್ತಾನುಗ್ರಹಮಾಳ್ಪಸುರಾಗ್ರಗಣ್ಯ ಪುಣ್ಯಾತ್ಮನೆ 7 ನಿರುತವು ಸನ್ನುತಿಗೈವರೆ ಪರಿಪರಿ ನಿನ್ನನೆ ಪೊಗಳ್ವರೆ 8 ನೀಜಗದಲ್ಲಿ ಒಲಿದಿರ್ಪೆಯ ನೀ ಕೈಗೊಂಬೆಯ 9 ನಿಜಪರದೊಲುನೀ ನಜಭವಮುಖಸುರವ್ರಜ- ಗೋಚರನಾಗಿಲ್ಲವೈ ತ್ರಿಜಗಕ್ಕೆ ಗೋಚರನಾಗಿಹೈ 10 ನಿತ್ಯತೃಪ್ತನೀನತ್ಯುತ್ತಮ ನಿಜ ಭೃತ್ಯನಮತ್ರ್ಯನು ಮೋದದಿ ನಿತ್ಯದಿ ನಿನ್ನತ್ಯುತ್ತಮ ಪದದೊಳು ಭಕ್ತಿಯ ಪಾಲಿಸು ನೇಮದಿ 11 ಫಣಿಭೂಧರದೊಳು ನಿರುತವು ಭಕ್ತರ ಕರುಣದಿ ಪೊರೆಯುವ ಧೊರೆ ಸಿರಿವಲ್ಲಭವರದ ವಿಠಲ ಕರುಣಾಕರ 12
--------------
ಸರಗೂರು ವೆಂಕಟವರದಾರ್ಯರು
ಸ್ಮರಿಸಿ ಸುಖಿಸೆಲೋ ಮಾನವಾ ಪ ಸರಸಿಜಾಸನ ಸತತ ನೆನೆವ ಹರಿನಾಮವನು ಅ.ಪ ಜವರಾಯ ಕಿಂಕರರ ಹಿಮ್ಮೆಟ್ಟಸಿದ ನಾಮ ಧ್ರುವರಾಯಗೊಲಿದ ಘನವು ಈ ನಾಮ ನವನೀತರೂಪದಿಂದ ಘನವ ತಾಳ್ದಿಹ ನಾಮ ಸುವಿಲಾಸದಿಂ ಪಾರ್ಥಗೊಲಿದಿರ್ಪನಾಮವನು 1 ಸನಕಾದಿ ಮುನಿಗಳು ಸತತ ಭಜಿಸುವ ನಾಮ ಅನಿಲಜಾತನಿಗೊಲಿದ ಪರಮನಾಮ ವನಚಾರಿಯಾಗಿದ್ದ ಶಬರಿಗೊಲಿದ ನಾಮ ವನಚರರ ಗರುವವನು ಮುರಿಯುವ ನಾಮ 2 ಪಾಂಚಾಲಿಗಕ್ಷಯದ ವರವನಿತ್ತಾ ನಾಮ ಪಾಂಚಜನ್ಯವ ಸಿರಿಯೊಳೆಸೆಯುತಿಹ ನಾಮ ವಂಚಕರ ಹೃದಯಗಳ ಭೇದಿಸುತ್ತಿಹನಾಮ ಚಂಚಲೆಯರುತ್ಸಾಹದಿಂ ಭಜಿಪ ನಾಮವನು 3 ದುರುಳದೈತ್ಯರ ಮನವ ಕದಡಿ ಕಲಕುವ ನಾಮ ಶರಣಾಗತಾವಳಿಯ ಪೊರೆಯುತಿಹನಾಮ ತರಳಪ್ರಹ್ಲಾದ ತಾ ಪಿತಗೊರೆವ ನಾಮವನು 4 ಮಾಂಗಿರೀ ವರಾಗ್ರದೊಳು ಮರೆಯುತಿಹ ಸಿರಿನಾಮ ಶೃಂಗಾರ ಶ್ರೀ ಪಾಂಡುರಂಗ ನಾಮ ಗಂಗಾಧರಾನುತ ಸುಖದಾತ ಶ್ರೀನಾಮ ಮಂಗಳಕರ ರಾಮದಾಸನುತ ನಾಮವನು 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಹಣ್ಣ ಸವಿಯ ಬಾರದೇ ಪ ಹಣ್ಣನ್ನು ತಿಂದರೆ ಕೇಶವನೊಲಿಯುವಾ ಚನ್ನಕೇಶವ ಸ್ವಾಮಿ ಬಿಡದೆ ಪಾಲಿಸುವಾ ಅ.ಪ. ಪ್ರೀತಿಯೆನ್ನುವಂಥ ಬೀಜವನ್ನೇ ಬಿತ್ತಿ ಭೂತ ದಯೆಯೆಂಬುವ ವೃಕ್ಷವ ಬೆಳೆಸೀ ಆತುರದಲ್ಲಿ ಪರೋಪಕಾರವೆಂಬ ನೀತಿಯ ನೀರನ್ನು ನೇಮದೊಳೆರೆದೂ 1 ಅನುದಿನ ದಾನಧರ್ಮಗಳ ಟೊಂಗೆಗಳೇರಿ ತನುಮನ ಧನದಿಂದ ದೈನ್ಯರ ಸಲಹಿ ಘನತರ ಸ್ವಾರ್ಥ ತ್ಯಾಗವುಯೆಂಬ ಪರ್ಣವ ನೆನೆದು ಕೃತಜ್ಞತೆ ಕುಸುಮವ ಪಡೆದೂ 2 ವರತರ ದೇವಾಂಶ ಗುಣದಿಂದ ಬೆಳೆದಿರ್ಪ ಹರಿಭಕ್ತಿಯೆನ್ನುವ ಫಲವನ್ನೇ ಕೊಯ್ದು ಸರಸದಿ ಕೀರ್ತನೆ ಭಜನೆ ಸೂತ್ರಗಳಿಂದ ಪರಮ ಭಕ್ತೀಯೆಂಬ ಹಣ್ಣನು ತಿಂದೂ 3 ಧರೆಯಲ್ಲಿ ಸಿಗುವಂಥ ಹಣ್ಣನು ಸವಿದರೆ ನಿರುತ ತೃಪ್ತಿಯು ಆಗಲಾರದು ದೇವಾ ಅಮೃತ ಹರುಷದಿ ತಿನ್ನಲು ಘನಮುಕ್ತಿ ದಿಟವು 4
--------------
ಕರ್ಕಿ ಕೇಶವದಾಸ
ಹರಿಯೆ ಮೂಜಗದ ದೊರೆಯೆ ನಿನಗಿದು ಸರಿಯೆ ಪ. ಹರಿಯೆ ಮೂಜಗದ ದೊರೆಯೆ ನಿನ್ನನೆ ಮರೆಯಪೊಕ್ಕವರಲ್ಲಿ ಈ ಪರಿ ಬರಿಯ ಪಂಥದಿ ಮರುಗದಿರ್ಪುದು ಸರಿಯೆ ನಿನಗದು ಸರಸವಲ್ಲದುಅ.ಪ. ಉಕ್ಕಿನ ಕಂಬದಿಂದ ಉದಿಸಿ ಬಂದು ರಕ್ಕಸನುರವ ಸೀಳಿ ಕರುಳನು ಬಗೆದು ಉಕ್ಕುವ ಕೋಪದಿಂದ ರಕುತವು ಸುರಿಯೆ ಭಕ್ತ ಪ್ರಹ್ಲಾದನಾದರದಿ ಕಾಯ್ದು ಭಕ್ತ ವತ್ಸಲನೆನಿಸಲಹುದು ಶಕ್ತಿಹೀನತೆಯಿಂದ ಮರೆಹೊಕ್ಕ ಎನ್ನನು [ಕಾಯು]ವುದು 1 ಒಪ್ಪಿಡಿಯವಲಕ್ಕಿಯ ಒಪ್ಪಿಸಿನಿಂದ ವಿಪ್ರನ ನಲವಿಂದ ನೋಡುತಲಂತು ವಿಪುಲಸಂಪದವನ್ನು ಕರುಣಿಸಿದಂಥ ಅಪ್ರತಿಮ ಸಾಹಸಿಯೆನುತೆ ನಿನ್ನೊಳು ತಪಿಸಿ ಬೇಡುವ ಎನ್ನೊಳೀಪರಿ ಒಪ್ಪದೊಪ್ಪದೆನ್ನಪ್ಪ ಕೇಳಿದು ಸರಿಯೇ ಶ್ರೀನರಹರಿಯೇ 2 ಮಾನಿತÀಧ್ರುವ ಬಾಲನಂ ಮನ್ನಿಸಿ ಪೊರೆದೆ ಮಾನಿನಿ ಪಾಂಚಾಲಿಯ ಮಾನದಿ ಕಾಯ್ದೆ ಸಾನುರಾಗದಿಂ ಗಜನಂ ಉದ್ಧರಿಸಿದೆ ಕ್ಷೋಣಿಯೊಳಗತಿ ದೀನರಾದರ ಸಾನುರಾಗದಿ ಪೊರೆವ ಶ್ರೀಧರ ದಾನವಾಂತಕ ಶೇಷಗಿರೀಶನೆ ಸೂನುವೆಂಬಭಿಮಾನ ನಿನಗಿರೆ [ಮಾಣದೆನ್ನನು ಕಾಯೊ] ಹರಿಯೇ ಶ್ರೀನರಹರಿಯೇ3
--------------
ನಂಜನಗೂಡು ತಿರುಮಲಾಂಬಾ
ಹರಿಸೇವೆ ಕೈಂಕರ್ಯ ಪರಮ ನಿಷಾತೆ |ಪರಿಹರಿಸು ಭವತಾಪ ಜಾಂಬುವತಿ ಮಾತೇ |5 ಭೃತ್ಯ ಜಾಂಬುವಂತನ ತನುಜೆಶ್ರೀ ಮಹಿಳೆಯಂದದಲಿ ಕೃಷ್ಣ ಪ್ರಿಯಳಾದೇ 1 ಮಿಕ್ಕ ಮಹಿಳೆಯರಿಂದ ಲಕ್ಕುಮಿಯ ಆವೇಶಪೊಕ್ಕು ನಿನ್ನಲಿ ಅಧಿಕ ಸರ್ವಕಾಲದಲೀ |ಅಕ್ಕರದಿ ಇದಕೆ ಮಿಗೆ ಲಕ್ಕುಮಿಯು ಇರಲಾಗಚೊಕ್ಕ ಮಾತೆಯು ನೀನು ಶೇಷ ಸಮಳೆನಿಪೇ 2 ಆವೇಶ ನಿನ್ನಲ್ಲಿ ಇಲ್ಲದಿಹ ಸಮಯದಲಿದೇವಿಯರು ಮಿಕ್ಕೈದು ಮಂದಿ ಸಮ ನೀನು |ದೇವಿ ಶಿರಿ ಆವೇಶ ಅಲ್ಪವಿಹ ಸಮಯದಲಿದೇವ ಕಾಮಾದಿಗಳಿಗಧಿಕ ವಿಂಶತಿ ಗುಣದೀ 3 ನಿರ್ಮಲೈ ಕಾಂತಿತ್ವ ವಿಮಲ ಭಕ್ತ್ಯಾದಿಗುಣಅಮಮ ನಿನ್ನಲಿ ಇಹುದು ನೈಜರೂಪಾ |ವಿಮಲ ಸಚ್ಚಾರಿತ್ರೆ ಈ ಮಹಿಯ ಸಂಚಾರನಿರ್ಮಮದಿ ಗೈದಿರ್ಪೆ ಬಧಿರಾಂಧರಂತೇ 4 ದೇಹ ಮಮತೆಯಲಿಂದ ಮನಸೋತು ಕಷ್ಟಕ್ಕೆವಾಹನಾದಿಗಳೇರಿ ತೀರ್ಥಯಾತ್ರೆಗಳಾ |ಬಹುವಾಗಿ ಗೈದಾಗ್ಯು ಪುಣ್ಯ ಹೀನವು ಎಂದುಮಹಿಳೆ ನೀ ವರ್ಣಿಸಿಹೆ ಭಕುತರುಪಕಾರೀ 5 ಪಾದ ದರ್ಶನವೆಂದುಸಾರ್ವಕಾಲದಿ ನೀನು ಚಿಂತಿಸುತಲಿರಲೂ 6 ಕಂಡು ಶ್ರೀಹರಿಯನ್ನು ಅಪರೋಕ್ಷದಲಿ ನೀನುಬಂಡುಣಿಯು ಹರಿಪಾದ ಕಮಲಕ್ಕೆ ಆಗೀ |ಹಿಂಡು ದೈವರ ಗಂಡ ಪಾಂಡುರಂಗನೆ ಎಂದುಮಂಡಿಸಿದೆ ಪರತತ್ವ ತೊಂಡರುಪಕಾರೀ 7 ಕರದಲ್ಲಿ ಧನ್ವಂತ್ರಿ ಪಿಡಿದಮೃತ ಕಲಶದಲಿಹರಿನಯನ ಆನಂದ ಜಲಬಿಂದು ಉದರೇ |ತುರರೂಪಿಯಾದ ಶ್ರೀ ತುಳಸಿಯಲಿ ನೀನರಲುಹರಿ ನಿನ್ನ ಅಗಲದಿಹ ಸರ್ವ ಪೂಜೆಯಲೀ 8 ಶಾಂಭವಿಯುನುತೆ ದೇವಿ ಜಾಂಬುವತಿ ಶ್ರೀ ಹರಿಯಕಾಂಭಂಥ ಸುಜ್ಞಾನ ಭಕುತಿ ವೈರಾಗ್ಯ |ಹಂಬಲದಿ ನಿನ್ನಂಘ್ರಿ ನಮಿಪೆ ತೋರ್ವುದು ಹೃದಯಅಂಬರದಲಿಹ ಗುರು ಗೋವಿಂದ ವಿಠ್ಠಲನ 9
--------------
ಗುರುಗೋವಿಂದವಿಠಲರು