ಒಟ್ಟು 39 ಕಡೆಗಳಲ್ಲಿ , 26 ದಾಸರು , 38 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೀನುಳಿಯೆ ರಕ್ಷಕರ ಕಾಣೆನೀ ಜಗದೊಳಗೆ ಶ್ರೀನಿವಾಸ ಜಗನ್ನಿವಾಸ ಪ ದೀನರಕ್ಷಕ ನಿಖಿಲ ಮಾನವರ ಮಾನಾಭಿ ಮಾನದೊಡೆಯನು ನೀನೆಯಲ್ಲದಿಲ್ಲಾ ಅ.ಪ ನಕ್ರಮುಖದಲ್ಲಿ ಸಿಕ್ಕಿ ದುಃಖಿಸುವ ಕರಿರಾಜ ಚಕ್ರವರ್ತಿಯು ಶರಣುಹೊಕ್ಕೆನೆನಲು ಚಕ್ರವನು ಪಿಡಿದು ನೀನಕ್ಕರೆಯೊಳೈತಂದು ನಕ್ರವದನವ ಸೀಳಿ ರಕ್ಷಿಸಿದೆ ಗಜವಾ ದೇವಾ 1 ಹಿಂದೆ ನಾನಾ ನಗರಿಯಿಂದ ಬಹದಾರಿಯೊಳು ಸಂದುಗಳೀಚಲು ಭಂಡಿ ಸಂಜೆಯೊಳಗೆ ಮುಂದಾಗ ಜೊತೆಯೊಳಗೆ ಬಂಧುಜನದಲ್ಲಿ ನೀ ಬಂದು ಬೆಳಕನು ತೋರಿ ಮುಂದೆಗೂಡಿದೆ ಕೃಷ್ಣಾ 2 ಇಂದು ನಿಜಸತಿಯು ನೊಂದಳುಬ್ಬಸರೋಗ ದಿಂದ ಗಾಳಿಯದೀಪದಂದಮಾಗಿ ನಂದಿ ಪೋಗದ ಮುನ್ನ ಬಂದು ನೀಮರೆಯಾಗು ಎಂದು ಮೊರೆಯಿಡಲಾಗ ಬಂದು ಸಲಹಿದೆ ತಂದೆ 3 ಗುರುಸುತನ ಸಂಯಮದೀ ಪುರದಿಂದ ತಂದಿತ್ತೆ ತುರುಗಾಯ್ವರಸುಗಳನು ಮರಳಿ ಪಡೆದೆ ನರಪೌತ್ರನ ಬಾಣದುರಿಯಿಂದ ರಕ್ಷಿಸಿದೆ ಸರಿಯಾರು ನಿನಗೆ ಸುರನರಭುಜಂಗರಲ್ಲಿ 4 ತರಳಧ್ರುವ ಪ್ರಹ್ಲಾದ ತರುಣಿ ಪಾಂಚಾಲಿ ಕರು ವರವಿಭೀಷಣ ತಾಪಸರನು ಪೊರೆದೆ ಶರಣರನು ಪಾಲಿಸುವ ಬಿರುದು ಧರಿಸಿಹ ವ್ಯಾಘ್ರ ಗಿರಿಯೊಳಗೆ ನೆಲೆಸಿರುವ ವರದವಿಠಲರಾಯ 5
--------------
ವೆಂಕಟವರದಾರ್ಯರು
ನೀನೆ ಜಗದಾನಂದದಾಯಕ ರಂಗಾ ದೀನರಕ್ಷಕ ನೀನೊಬ್ಬನೇ ರಂಗಾ ಪ ಎನ್ನಂಥ ಶರಣಾರ್ಥಿ ಎಷ್ಟಾದರುಂಟಯ್ಯ ನಿನ್ನಂಥ ದಾತಾರ ಇನ್ನುಂಟೆ ರಂಗಾ ಅ.ಪ ಬಾಲನ ಪೊರೆದವನಾರಯ್ಯಾ ಪಾಂಚಾಲಿಗೆ ಒಲಿದವನಾರಯ್ಯ ಬಲುದೀನನು ನಾನೊಬ್ಬನಹುದಯ್ಯ1 ಮಾನ ನಿನ್ನದು ಪ್ರಾಣ ನಿನ್ನದು ಸ್ಮರನಯ್ಯ ನಾನು ನಿನ್ನವನೋ ಮಾಂಗಿರಿಯ ರಂಗಯ್ಯ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಪಾಲಿಸೈ ಮುಕುಂದ ಗೋವಿಂದ ಆನಂದದಿಂದ ಪ. ಮಾರಜನಕನೆ ಕೋರಿ ನಿನ್ನೆಡೆ ಸಾರಿ ಬೇಡುವೆನೊ ಗಾರುಗೊಳಿಸದೆ ತೋರು ಕರುಣೆಯ ಮಾರಹರನುತ ವೀರರಾಘವ 1 ಭಾನುಕೋಟಿ ಸಮಾನ ಭಾಸುರ ಜಾನಕೀ ಮನೋಹರ ದಾನವಾಂತಕ ದೀನರಕ್ಷಕ ಮಾನನಿಧಿ ಪೊರೆ ಸುಜ್ಞಾನವಾರಿಧಿ 2 ಪೋಷ ಭವಭಯನಾಶನ ಕ್ಲೇಶಹರಣ ಶ್ರೀಕೇಶವಾಚ್ಚುತ ಲೇಸು ಬೇಡುವೆ (ನಾ) ಮೀಸಲಿರಿಸಿಹೆ 3
--------------
ನಂಜನಗೂಡು ತಿರುಮಲಾಂಬಾ
ಪಾಲಿಸೊ ಶ್ರೀನಿವಾಸ ಜಗದೀಶ ಪ ಮೇಲುಗಿರೀಶ ಹೃತ್ಕುಮುದನಿವಾಸ ಸತೀಶ ನೀನೆ ಅವಿನಾಶನೆ ಅನಿಶ ಅ.ಪ ಅನಿಮಿತ್ತ ಬಂಧು ನೀ ನಿನ್ಹೊರತು ಅನ್ಯರುಂಟೇ ಅನಪೇಕ್ಷನು ನೀ ದೀನರಕ್ಷನೆ ನಾನೇನರ್ಪಿಸಬಲ್ಲೆ ನೀ ಬಲ್ಲೆ ಅನುದಿನ ಮನೋವಾಚಕಾಯದಿ ನಾನೆಸಗುವುದು ಬಲ್ಲೆ ಅಲ್ಲಲ್ಲೇ ಘನಮಹಿಮನೆ ಎನ್ನ ಮನದಲ್ಲಿ ಅನುದಿನ ನಿನ್ನ ನೆನೆಯುವುದನೆ ಇತ್ತು ಕೊನೆಗಾಣಿಸು ಇನ್ನು 1 ಸತ್ಯಸಂಕಲ್ಪ ನೀ ನಿತ್ಯನೂತನಪ್ರಭುವೇ ಅತ್ಯಧಿಕದಿ ಭಕ್ತೋತ್ತಮರು ನಿತ್ಯ ಸೇವಿಸುತಿಹರೋ ಅವರ ಭೃತ್ಯನೆನಿಪ ಸಂ- ಪತ್ತನಿತ್ತು ಆಪತ್ತು ಹರಿಸಿ ಭಕ್ತಿಯ ನೀಡಯ್ಯ ಕರ್ಮ ಬೆನ್ಹತ್ತಿ ಹತ್ತಿ ಆಸೆ ಪೊತ್ತು ಕೊನೆಗೆ ನಾ ಉನ್ಮತ್ತನಾದೆ 2 ಪ್ರಣವಸ್ತಗೆ ದೇವಾ ನೀ ಪ್ರಣತ ಕಾಮದ ಕಾವಾ ಪ್ರಣತ ಜನರ ಮುಖ್ಯಪ್ರಾಣಾಂತರ್ಗತ ಫಣಿರಾಜಶಯ್ಯ ಹೇ ಜೀಯ್ಯ ಗುಣಮಣಿ ಶ್ರೀ ವೇಂಕಟೇಶ ಕ- ರುಣಾಕರ ಇನ್ನು ನಿನಗೆಣೆಯ ದೊರೆಯೆ ಮಣಿದು ಬೇಡುವೆ ನಿನ್ನ ದಣಿಸಲಾಗದು ಇನ್ನೂ ಧಣಿಯು ನೀ ಉರಗಾದ್ರಿವಾಸ ವಿಠಲ 3
--------------
ಉರಗಾದ್ರಿವಾಸವಿಠಲದಾಸರು
ಪಾಹಿ ಶ್ರೀ ಉರಗಾದ್ರಿವಾಸವಿಠಲನೇ ಮದ್ಹøಯರಾಂತರಾತ್ಮ ವಿಠಲನೇ ಸಲಹೊ 1 ದೇಹದಲಿ ನಲಿವ ತಾಂಡವ ಕೃಷ್ಣವಿಠಲನೆ ನಿನ್ನಿಷ್ಟ ಭಕುತರ ಮನೋಭೀಘ್ಟವನೆ ಸಲಿಸಯ್ಯ 2 ವಂದಿಪೆ ತಂದೆ ವೇಂಕಟೇಶ ವಿಠಲ ಬಂದು ದಯವೀಯೋ ಜಯಾಪತಿವಿಠಲ ಬಂಧ ಮೋಚಕ ಶಾಂತೀಶ ವಿಠಲನೆ ನಿನ್ನ ಸಂದ ಭಕುತರ ಕಾಯ್ವ ಗಜವರದವಿಠಲ3 ಶೇಷ ಶಯನ ವಿಠಲ ದೋಷರಾಶಿಯ ಕಳೆದು ಮನದಾಶಯ ಸಲಿಸಯ್ಯ ಹರಿವಿಠಲ ಶೈಶವದಿ ಕಾಯ್ದಂತೆ ಧೃವತವರದವಿಠಲನೆ ಈಸಮಯದಲ್ಲೆ ಗುರುವಾಸುದೇವ ವಿಠಲ 4 ವರದ ಲಕ್ಷ್ಮೀ ರಮಣವಿಠಲನೆ ಎನ್ನ ಅವಿದ್ಯೆಯನೆ ಹರಿಸೊ ಪ್ರದ್ಯುಮ್ನವಿಠಲ ಪರಮಪುರುಷಾ ವರದ ವೇಂಕಟೇಶ ವಿಠಲನೆ ಪರಮ ಸಾಧನ ನೀಡೋ ಸುಜ್ಞಾನವಿಠಲ 5 ಶ್ರೀನಾಥವಿಠಲನು ತೈಜಸನು ನೀನೆ ದೀನರಕ್ಷಕ ಭಾರತೀಶಪ್ರಿಯ ವಿಠಲ ಪರಮಪಾವನ ಕಾಯೊ ವರಹವಿಠಲ ಮೂರ್ತೆ ವರಮತಿಯ ನೀಡೊ ಆನಂದಮಯವಿಠಲ 6 ವಿಜ್ಞಾನಮಯ ಮನದ ಅಜ್ಞಾನವನು ಹರಿಸೊ ಸ- ರ್ವಜ್ಞ ನೀನೇ ಶ್ರೀ ಪ್ರಾಜ್ಞವಿಠಲನೆ ಯಜ್ಞ ಭುಗ್ಯಜ್ಞ ಸಾಧಕನು ನೀ ಜಗದ್ಭರಿತ ವಿಠಲ ನೀನೆನ್ನ ಸಲಹೊ 7 ಶುಧ್ದ ಮೂರುತಿ ಶ್ರೀ ವಿಜ್ಞಾನಮಯ ವಿಠಲ ಸರ್ವಕಾರ್ಯದಿ ಮನಶುದ್ಧಿಯ ನೀಡೋ ಮಧ್ವಗುರು ಶ್ರೀಕೃಷ್ಣ ದ್ವೈಪಾಯನ ವಿಠಲ ಮದ್ಭಾರ ನಿಳುಹಿ ನೀ ಉದ್ಧ್ದಾರ ಮಾಡೊ8 ರಕ್ಷಿಸೊ ಲಕ್ಷ್ಮೀಶ ವಿಠಲನೆ ಎನ್ನ ಮನ ದಕ್ಷಿಯೊಳು ನೆಲೆಸೊ ಶ್ರೀ ವೇಂಕಟೇಶವಿಠಲ ಕುಕ್ಷಿಯೊಳು ಬ್ರಹ್ಮಾಂಡ ರಕ್ಷಿಪ ಶ್ರೀರಮಣ ವಿಠಲ ನಿನ್ನದಾಸದಾಸ್ಯವÀ ದೇಹಿ 9 ಶರಣ ಜನ ಪ್ರೀಯ ಶ್ರೀವರದ ವಿಠಲ ದೇವಾ ದುರಿತಾರಿ ಪನ್ನಂಗಶಯನ ವಿಠಲ ಗುರೋರ್ಗುರುಗೋವಿಂದವಿಠಲ ಪಾಹಿ 10 ವರ ತಂದೆ ಮುದ್ದು ಮೋಹನ ವಿಠಲಾತ್ಮಕ ಶ್ರೀ ಉರಗಾದ್ರಿ ವಾಸವಿಠಲ ಸ್ವಾಮಿ ಶರಣರಿಗೆ ಆಯುe್ಞರ್Áನ ಸಂಪತ್ ಭಕ್ತಿಸಾಧನೆಗಳಿತ್ತು ಸಲಹೊ11
--------------
ಉರಗಾದ್ರಿವಾಸವಿಠಲದಾಸರು
ಪ್ರಸನ್ನ ಶ್ರೀನಿವಾಸ ಕಲ್ಯಾಣ ಜಯ ಜಯ ಜಯ ಶ್ರೀನಿವಾಸ ಕೃತಿ ಮಾಯಾ ಶ್ರೀಶ ಭಯಬಂಧಮೋಚಕ ಜೀಯ ಆಹ ಸುಂದರ ಚಿನ್ಮಯಾನಂದ ಜ್ಞಾನಾತ್ಮನೆ ಮಂದಜಭವ ಸುರವೃಂದ ಸಂಸೇವ್ಯ ಜಯ ಪ ಸುರಸರಿತ ತೀರದಿಂದ ಸುರಮುನಿ ಭೃಗು ಬಂದು ನಿನ್ನ ಪರಸಮರಹಿತನೆಂದರಿತ ಆಹ ಸಿರಿಯು ನಿನ ಭಾವವನುಸರಿಸಿ ಬೇಗ ಕರವೀರ ಪುರ ಪೋಗೆ ಗಿರಿಪುತ್ತ ಪೊಕ್ಕೆಯೊ 1 ಮೇರುಸುತನೆ ಹಾಟಕಾದ್ರಿ ವೀರ ಭಕುತ ವೃಷಭಾದ್ರಿ ಸರೀಸೃಪಾವರಿಸಿದ ಸೌರಭ್ಯಗಿರಿಯಿದು ಪರವೇಂಕಟಾದ್ರಿಯು ಹರಿತು ವಿಪ್ರನ ಪಾಪ 2 ನೀನಿದ್ದ ಸ್ಥಳವೇ ವೈಕುಂಠ ನಿನಗಾರು ಸಮರುಂಟೆ ಶ್ರೀಶ ದೀನ ಸುಜನರಿಗೆ ನಂಟ ಆಹ ಧೇನು ಪಾಲ್ಗರೆಯಲು ಪಾಲಕ ಹೊಡೆಯಲು ದೀನರಕ್ಷಕ ನೀನು ಶಿರಸಿತ್ತು ಪೊರೆದೆಯೊ 3 ಏಳು 2ತಾಳದ ಉದ್ದ ರಕ್ತ ತಾಳಲಾರದೆ ಬಿದ್ದ ಗೋಪ ಚೋಳರಾಯಗೆ ಕೊಟ್ಟೆ ಶಾಪ ಆಹ ಪೇಳಬಲ್ಲೆನೆ ನಿನ್ನ ಅತಿಶಯ ಲೀಲೆಯ ಶೀಲ ಸುರರ ಗುರು ಚಿಕಿತ್ಸೆಯನೈದಿದೆ 4 ಸ್ವಗತ ಭೇದವಿಲ್ಲದಂಥ ಸ್ವಚ್ಛ ಚಿತ್ಸುಖಮಯನಂತ ಸ್ವಾನಿರ್ವಾಹಕ ವಿಶೇಷ ಆಹ ಶ್ವೇತವರಾಹನ ಸಂವಾದದಿಂದಲಿ ಸ್ವೀಕರಿಸಿದೀ ಸ್ಥಳ ಮೊದಲು ಪೂಜೆಯ ಕೊಟ್ಟು 5 ಸರಸ್ವತೀ ಸ್ವಾಮಿ ಪುಷ್ಕರಣಿ ಸುರಮುನಿನರರಿಗೆ ಸ್ನಾನ ಪರಸುಖಮಾರ್ಗ ಸೋಪಾನ ಆಹ ಸುರತಟಿನ್ಯಾದಿ ಸುತೀರ್ಥಗಳೆಲ್ಲವು ಸರಿತವಾಗಿರುತವೆ ಈ ಸ್ವಾಮಿ ತೀರ್ಥದಿ 6 ಆದಿಕಾರಣ ನಿನ್ನ 3ಲೀಲಾ ಮೋದಸಂಭ್ರಮವನ್ನು ನೋಡೆ ಕಾದುಕೊಂಡಿಹರು ಕೋವಿದರು ಆಹ ಸಾಧು ಸಂಭಾವಿತ ಬಕುಳಾದೇವಿಯುಗೈದ ನಿತ್ಯ ಸಂತೃಪ್ತ 7 ಮಂಗಳ ಚಿನ್ಮಯ ರಂಗಾ - ನಂಗನಯ್ಯನೆ ಮೋಹನಾಂಗ ತುಂಗ ಮಹಿಮನೆ ಶುಭಾಂಗ ಆಹ ಬಂಗಾರ ಕುದುರೆ ಮೇಲಂಗನೇರಲಿ 4ಬಂದ ಶೃಂಗಾರವೇನೆಂಬೆ ಎಂದಿಗೂ ಸ್ವರಮಣ8 ತೋಂಡಮಾನ ರಾಯನಣ್ಣ ಚಂಡಭೂಪನು ಆಕಾಶ ಕಂಡನು ಕಮಲದೊಳ್ ಶಿಶುವ ಆಹ ಅಖಿಳ ಕೋಟಿ ಅಸಮ ಈ ಶಿಶುವನ್ನು ಹೆಂಡತಿ ಧರಣಿಯು ಕೊಂಡಳು ಮಗಳಾಗಿ 9 ಮೂಲೇಶ ನಿನ್ನಯ ರಾಣಿ ಮೂಲಪ್ರಕೃತಿ ಗುಣಮಾನಿ ಭವ ತಾಯಿ ಆಹ ಶೀಲ ಭೂಪಾಲನ ಸುತೆ ಪದ್ಮಾವತಿಯೆಂದು 5 ಬಾಲೇರ ಸಹ ಪುಷ್ಪವನಕೆ ಬಂದಿಹಳೊ 10 ಮಹಿದೇವಿ ಕಮಲವಾಸಿನಿಯು ಬಹಿನೋಟಕ್ಕೆ ರಾಜಸುತೆಯು ಬಹು ಚಿತ್ರ ಪುಷ್ಪವ ಕೊಯ್ಯೆ ಆಹ ಮಹತಿಪಾಣಿಯು ಬಹು ವಯೋರೂಪದಲಿ ಬಂದು ಅಹಿತಲ್ಪ ಶ್ರೀಶನೆ ಪತಿಯೆಂದು ನುಡಿದ 11 ಹಾಟಕಗಿರಿಯಿಂದ ನೀನು ಬೇಟೆಯಾಡುವ ರೂಪ ತಾಳಿ ಘೋಟಕವೇರಿ ಸಂಭ್ರಮದಿ ಆಹ ಆಟವಾಡುವ ಬಾಲೆ ಬಳಿಯಲ್ಲಿ ಬಂದು ನೀ ನಾಟಕವಾಡಿದ್ದು ಪಾಡಲರಿಯೆನೊ 12 ನಿತ್ಯನಿರ್ಮಲ ಅವಿಕಾರ ಮತ್ರ್ಯರವೋಲು ನೀ 1ನಟಿಸೋ ಕೃತ್ಯಗಳರಿವರು ಯಾರೋ ಆಹ ಭೃತ್ಯವತ್ಸಲ ನೀನು ಬಕುಳೆಯ ಬಳಿ ಪೇಳಿ ಸಂತ್ಯಸಂಕಲ್ಪ ನಿನ ಸಂದೇಶ ಕಳುಹಿದೆ 13 ಪೊಂದಿದೆ ಫುಲ್ಕಸೀ ರೂಪ ಮಂಧಜಭವ ಶಿಶುವಾಗೆ ನಂದಿನಿಧರ ಯಷ್ಟಿಯಾದ ಆಹ ಮಂದಜಭವಾಂಡ ಗುಣಗುಲ್ಮ ಮಾಡಿ ನೀ ಕಂಧರದಲಿ ಗುಂಜ ಕಂಬುಸರವ ತೊಟ್ಟೆ 14 ನಾರಾಯಣಪುರಿಯಲ್ಲಿ ಮಾರನಯ್ಯನೆ ನಿನ್ನ ಸುಗುಣ ವಾರಿಧಿ ಪೊಕ್ಕಳು ಪದುಮೆ ಆಹ ಪುರಿಪ ಧರಣೀದೇವೀ ಪುತ್ರಿಗೆ ಜ್ವರವೆಂದು ಪರಿಪರಿ ಪರಿಹಾರ ಪರದು ನೋಡಿದರಾಗ 15 ಶುದ್ಧ ಸುಂದರ ಸುಖಕಾಯ ವೃದ್ಧ ಫುಲ್ಕಸೀ ವೇಷಧಾರಿ ಬದ್ಧ ಶೋಕರ ಬಳಿ ಪೋದೆ ಆಹ ಇದ್ದ ಸುದ್ದಿಯ ಅಬದ್ಧವಿಲ್ಲದೆ ಪೇಳಿ ಮುದ್ದು ಪದ್ಮೆಗೆ ಅನಿರುದ್ಧನೆ ಪತಿಯೆಂದೆ 16 ವಹಿಸಿ ನಿನ ಶಾಸನ ಬಕುಳ ಮಹದೇವನಾಲಯದಿಂದ ಮಹಿಳೆಯರ ಸಹ ಕೂಡಿ ಆಹ ಮಹಿದೇವಿಯಲಿ ಪೋಗಿ ವಿಹಿತ ಮಾತುಗಳಾಡಿ ಬಹು ಶುಭವಾರ್ತೆಯ ತಂದು ಪೇಳಿದಳೊ 17 ಶುಕಮುನಿ ಕರಪ್ರದವಾದ ಆಕಾಶ ನೃಪ ಲಗ್ನಪತ್ರ ಸ್ವೀಕರಿಸಿದೆ ಬಹು ಹಿತದಿ ಆಹ ವಾಗೀಶ ಶಶಿಧರ ನಾಗೇಶ ಸೌಪರ್ಣ ನಾಕೀಶ ಮೊದಲಾದ ಸುರರನು ಕರೆದೆ 18 ಶಿಷ್ಟ ಸನ್ಮುನಿಜನ ಕೂಟ ತುಷ್ಟ ಸುಮನಸ ಸಮೂಹ ಶ್ರೇಷ್ಠಸುಗಂಧಿ ಆಗಮನ ಆಹ ಸೃಷ್ಟ್ಯಾದಿಕರ್ತೆ ನಿನ ಸುಮಹೋತ್ಸವ ನೋಡಿ ಇಷ್ಟಾರ್ಥ ಪಡೆವರು ಎಷ್ಟೆಂಬೆ ವಿಭುವೆ 19 ಮಾಯ ಜಯೇಶ ಶ್ರೀವತ್ಸ ಛಾಯೇಶಗುಪಾಯ ಪೇಳಿ ತೋಯಜೆಯನು ಕರೆತಂದೆ ಆಹ ಸಿರಿ ಕೃತಿ ಕಾಂತಿ ನಿನ್ನಿಂದ ವಿಯೋಗರಹಿತರು ಎಂದೂ ಎಲ್ಲೆಲ್ಲೂ 20 ಬೃಹದಣುವಿಗೆ ಸತ್ತಾಪ್ರದನೆ ಸುಹೃದ ಸಂತೃಪ್ತ ಮುಖಾಬ್ಧೇ ದೃಢವ್ರತ ಶುಕಮುನಿಗೊಲಿದೆ ಆಹ ಬೃಹತೀ ಫಲಾನ್ನವನುಂಡು ಫೂತ್ಕಾರದಿ ಗೃಹ ಬಹಿರದಿ ಇದ್ದ ಜನರ ತೃಪ್ತಿಸಿದೆ 21 ಸುಜನರಿಗಾನಂದ ದಾತ ದ್ವಿಜರೂಢ ಜಗದೀಶ ನೀನು ಅಜಸುರರೊಡಗೂಡಿ ಬರೆ ಆಹ ಅಜಿತ ಚಿನ್ಮಯ ನಿನ್ನ ಆಕಾರ ನೃಪ ನೋಡಿ ನಿಜವಾಗಿ ಕೃತಕೃತ್ಯ ಧನ್ಯ ತಾನೆಂದ 22 ಅಜರ ಮಂದಿರ ಪೋಲ್ವ ಮನೆಯು ಪ್ರಜುವಲಿಸುವ ದಿವ್ಯ ಸಭೆಯು ನಿಜಭಕ್ತ ಪುರುಜನ ಗುಂಪು ಆಹ ದ್ವಿಜರ ವೇದಗಾನ ವಾದ್ಯ ಘೋಷಿಸಲಾಗ ನಿಜಸತಿ ಪದ್ಮೆಗೆ ಮಾಂಗಲ್ಯ ಧರಿಸಿದೆ 23 ಸುರಮುನಿಜನ ಮೂರು ವಿಧಕೆ ತರತಮ ಯೋಗ್ಯತೆ ಆರಿತು ಪರಿಪರಿ ಸಾಧನವಿತ್ತೆ ಆಹ ನೀರರುಹಜಾಂಡವು ನಿನ್ನಾಧೀನವು ಸಿರಿಭೂದೊರೆಯೇ ಶ್ರೀನಿವಾಸ ದಯಾನಿಧೆ 24 ನೀ ನಿಂತು ನುಡಿಸಿದೀ ನುಡಿಯು ನಿನ್ನಡಿಗಳಿಗೆ ಅರ್ಪಣೆಯು ಚನ್ನಮಾರುತ ಮನೋಗತನೆ ಆಹ ವನರುಜಹಾಸನ ತಾತ ಪ್ರಸನ್ನ ಶ್ರೀನಿವಾಸ ನಿನಗೆ ಪ್ರೀತಿಯಾಗಲೊ ಸುಹೃದ ಸಂತೃಪ್ತ 25
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಾಣರಾಯ ನೀನಲ್ಲದೆ ಮತ್ತನ್ಯ |ಪ್ರಾಣರು ಜಗದೊಳುಂಟೇ ||ದೀನರಕ್ಷಕನೆಂಬ ಬಿರುದಿಗೆ | ಪ್ರೇಮಾದಿ (ಪ್ರೇಮದಿ)ನೀನೆ ರಕ್ಷಿಸಬೇಕೈ ಪರಾಕೈ ಪ ಭವ |ಬಂಧನ ಪರಿಹರಿಸೋ ಉದರಿಸೋ 1 ವಂದಿಪ ಶರಣರ ಪೊರೆಯಬೇಕೆನುತಲಿ |ಬಂದು ಬಾಗಿಸೋಪಿಲಿ ||ಛಂದದಿ ವನದೊಳು ನಿಂದಾದಲತ ಗೋ |ವಿಂದರಾಯವಲದೀ ನೀ ನಲಿದೀ 2 ಈಸು ಮಹಿಮೆಯನು ತುತಿಸಲು ಖಗಪಾರ್ವ |ತೀಶರಿಗಸದಳವೈ ||ಶ್ರೀಶ ಪ್ರಾಣೇಶ ವಿಠಲದ ದಾಸಾಗ್ರಣಿ |ಈ ಸಮಯದಿ ಪಾಲಿಸೋ, ಲಾಲಿಸೋ 4
--------------
ಶ್ರೀಶಪ್ರಾಣೇಶವಿಠಲರು
ಮಂದ ಮನುಜಾ ಮೂರ್ತಿ ಶ್ರೀ ಹೆನ್ನೆಹೋಬಲವಾಸನಾ ಪ ಮನಶುದ್ಧಿಯಾಗಿ ನಿರ್ಮಲಜ್ಞಾನದಲಿಯನ್ನು ವನಜಸಂಭವ ಪಿತನ ವರ್ಣಿಸುತಲಿ ದಿನಗಳನು ಕಳೆಯುತಲಿ ದೀನರಕ್ಷಕ ದೇವನ ಅನುಮಾನಗಳ ತೊರೆದು ಆನಂದದಿಂದಲಿ ಇನ್ನು 1 ಸಕಲಾಂತರ್ಯಾಮಿಯಾದ ಸಕಲ ದೀನರ ದೇವ ಸಕಲ ಸಾಧು ಸಜ್ಜನರ ಸರ್ವದಲಿ ನಿಖರವಾಗಿ ರಕ್ಷಿಸುವ ಲಕುಮಿಯರಸನ ಹೃದಯ ಭಕುತಿಯಲಿ ಪಾಡುತಲಿ ಪರಮ ಪುರುಷನ ಇಂದು2 ಎಂದೆಂದು ಹರಿಪಾದ ಹೊಂದಿದ ಮಹಾಮಹಿಮ ರಂ------ತಿಳಿದು ನೀಯಿಂದು ಇನ್ನು ಸಂದೇಹವನ್ನೆ ಬಿಟ್ಟು ತಂದೆ `ಹೆನ್ನವಿಠ್ಠಲ' ಚಂದದಿಂದಲಿ ಹೃದಯ ಮಂದಿರದಲಿನ್ನೂ 3
--------------
ಹೆನ್ನೆರಂಗದಾಸರು
ಮಂದರೋದ್ಧರಾ-ಬಂದು ಕಣ್ಣಮುಂದೆ ನಿಲ್ಲೋ ಪ ಬಡವರೊಡೆಯನೆಂದು ನಿನ್ನ ಅಡಿಯ ಬಿಡದೆ ನಂಬಿದೆನೋ ಕಡುದಯಾನಿಧೆ ಬಡಕುಚೇಲನ ಪಿಡಿಯವಲಿಗೆ ಒಲಿದು ಪೊರೆದೆ1 ಸರ್ವಸಾರಭೋಕ್ತ ನೀನೆ ತೋರ್ವುದಿಲ್ಲ ಕೊಡಲು ನಿನಗೆ ಸರ್ವದೇವಸಾರ್ವಭೌಮನೀ ನೋರ್ವ ವ್ಯಾಪ್ತನಿರ್ಲಿಪ್ತ 2 ಪ್ರಣತಕಾಮದನೆಂದು ಅಂದು ಅಣುಗಧೃವನಾಕ್ಷಣದಿ ದಣಿಸಲಾಗದೋ ದೀನರಕ್ಷಕ 3 ಮುಕುತರೊಡೆಯ ಭಕುತವತ್ಸಲ ಯುಕುತಿತೋರದೊ ನಿನ್ನ ಧ್ಯಾನಕೇ ಶಕುತಿಯಿತ್ತು ಸಲಹೊ ಎನ್ನನು ಸಕಲಲೋಕೋದ್ಧ್ದಾರ ಧೀರ 4 ಎಲ್ಲಜನರ ಪೊರೆಯಲು ಶ್ರೀನಲ್ಲ ನಿಂತೆಯೊ ಶೇಷಶೈಲದಿ ವಲ್ಲಭಾ ಶ್ರೀ ವೆಂಕಟೇಶ ನೀ- ನೆಲ್ಲಬಲ್ಲೆನ್ನ ಸೊಲ್ಲ ಲಾಲಿಸೊ 5
--------------
ಉರಗಾದ್ರಿವಾಸವಿಠಲದಾಸರು
ಮಾನಿನೀ ವ್ರತಹರಣ ದೀನರಕ್ಷಣ ನಿಪುಣ ದಾನವ ಕುಲಾಹನನ ವಸನಹೀನ ತ್ರಿಪುರಾರಿ ವಂದಿತ ತಪ್ತಹೇಮಸುಗಾತ್ರ ಸುಪವಿತ್ರ ಸುಚರಿತ ಭೇದರಹಿತ ನಿತ್ಯ ನಿಷ್ಕಲ್ಮಷ ಸತ್ವಮಯ ಸ್ವರೂಪ ಬುದ್ಧರೂಪ ಆನಂದಪರಿಪೂರ್ಣ ಅಬ್ಜಪತ್ರೇಕ್ಷಣ ಆದ್ಯಂತಕಾರಣ ಅಪಾರಮಹಿಮ ಭೂತದಯಾಪರ ಧರ್ಮಸಾರ ಪೂತ ಸದ್ಗುಣಲಸಿತ ದುರಿತದೂರ ಧಾತ ಸುಕವಿಜನ ಚೈತನ್ಯದಾತ ಖ್ಯಾತ ಶೇಷಾದ್ರಿವರ ಪಾಹಿಸುಕÀರ
--------------
ನಂಜನಗೂಡು ತಿರುಮಲಾಂಬಾ
ರಂಗ ಬಾರೊ ನರಸಿಂಗ ಬಾರೊ ಪ. ಸಾಸಿರ ಮೂರುತಿ ವಾಸವವಂದ್ಯನೆಸಾಸಿರನಾಮದೊಡೆಯನೆಸಾಸಿರನಾಮದೊಡೆಯನೆ ನರಹರಿಕೇಶವ ನಮ್ಮ ಮನೆದೈವ 1 ವಾರಣವಂದ್ಯನೆ ಕಾರುಣ್ಯರೂಪನೆಪುರಾಣಗಳಲ್ಲಿ ಪೊಗಳುವಪುರಾಣಗಳಲ್ಲಿ ಪೊಗಳುವ ನರಹರಿನಾರಾಯಣ ನಮ್ಮ ಮನೆದೈವ2 ಯಾದವಕುಲದಲ್ಲಿ ಸಾಧುಗಳರಸನೆಭೇದಿಸಿ ದನುಜರ ಗೆಲಿದನೆಭೇದಿಸಿ ದನುಜರ ಗೆಲಿದನೆ ನರಹರಿಮಾಧವ ನಮ್ಮ ಮನೆದೈವ 3 ದೇವೆಂದ್ರ ಮಳೆಗರೆಯೆ ಗೋವರ್ಧನ ಗಿರಿಯೆತ್ತಿಆ ಗಿರಿಯ ಶ್ರೀಕೃಷ್ಣ ಕೊಡೆಮಾಡಿಆ ಗಿರಿಯ ಶ್ರೀಕೃಷ್ಣ ಕೊಡೆಮಾಡಿ ಕಾಯಿದನೆಗೋವಿಂದ ನಮ್ಮ ಮನೆದೈವ 4 ಸೃಷ್ಟಿಗೆ ಕರ್ತನೆ ದುಷ್ಟಕಂಸನ ಗೆಲಿದುಶಿಷ್ಟಪರಿಪಾಲನೆನಿಸಿದಶಿಷ್ಟಪರಿಪಾಲನೆನಿಸಿದ ನರಹರಿವಿಷ್ಣುವೆ ನಮ್ಮ ಮನೆದೈವ5 ಮಧುವೆಂಬೊ ದೈತ್ಯನ ಮುದದಿಂದ ಗೆಲಿದನೆವಿದುರನ ಮನೆಯಲಿ ನಲಿದುಂಡವಿದುರನ ಮನೆಯಲಿ ನಲಿದುಂಡ ನರಹರಿಮಧುಸೂದನ ನಮ್ಮ ಮನೆದೈವ 6 ಚಕ್ರವ ಪಿಡಿದನೆ ಭೂಚಕ್ರವ ಗೆಲಿದನೆಅಕ್ರೂರನೊಡನೆ ಮಧುರೆಗೆಅಕ್ರೂರನೊಡನೆ ಮಧುರೆಗೆ ಪೋದ ತ್ರಿ-ವಿಕ್ರಮ ನಮ್ಮ ಮನೆದೈವ7 ಸಾಮವನೋದುತ್ತ ದಾನವ ಬೇಡುತ್ತನಾಮದ ಮಹಿಮೆ ಪೊಗಳುತ್ತನಾಮದ ಮಹಿಮೆ ಪೊಗಳುತ್ತ ನರಹರಿವಾಮನ ನಮ್ಮ ಮನೆದೈವ8 ಶ್ರೀಧರ ಎಸಿಸಿದ ಶ್ರೀವತ್ಸ ಲಾಂಛನಶ್ರೀಧರ ಗೋಪೀತನಯನೆ ಶ್ರೀಧರ ಗೋಪೀತನಯನೆ ನರಹರಿಶ್ರೀಧರ ನಮ್ಮ ಮನೆದೈವ 9 ಋಷಿಜನ ವಂದ್ಯನೆ ಬಿಸಜನಾಭನೆ ದೇವಋಷಿಜನರಿಗೆಲ್ಲ ಅಭಯವಋಷಿಜನರಿಗೆಲ್ಲ ಅಭಯವ ಕೊಡುವೋನೆಹೃಷಿಕೇಶನೆ ನಮ್ಮ ಮನೆದೈವ10 ಪದುಮಸಂಭವಪಿತ ಪದುಮದಾಮೋದರ[ಪದುಮ]ದಿಂದಭಯವ ಕೊಡುವೋನೆ[ಪದುಮ]ದಿಂದಭಯವ ಕೊಡುವೋನೆ ನರಹರಿಪದುಮನಾಭನೆ ನಮ್ಮ ಮನೆದೈವ 11 ನಾಮದ ಮಹಿಮೆಯ ಪ್ರೇಮದಿ ಪೊಗಳಲುಕಾಮಿತಾರ್ಥಗಳ ಕೊಡುವೋನೆಕಾಮಿತಾರ್ಥಗಳ ಕೊಡುವೋನೆ ನರಹರಿದಾಮೋದರ ನಮ್ಮ ಮನೆದೈವ 12 ಸಂಕಟಗಳ ತರಿವೋನೆ ಪಂಕಜನಾಭನೆಶಂಕೆಯಿಲ್ಲದೆ ಅಸುರರಶಂಕೆಯಿಲ್ಲದೆ ಅಸುರರ ಸಂಹರಿಸಿದಸಂಕರ್ಷಣ ನಮ್ಮ ಮನೆದೈವ 13 ವಸುದೇವತನಯನೆ ಶಿಶುಪಾಲನ ಗೆಲಿದನೆವಶವ ಮಾಡಿದೆಯೊ ತ್ರಿಪುರರವಶವ ಮಾಡಿದೆಯೊ ತ್ರಿಪುರರ ನರಹರಿವಾಸುದೇವ ನಮ್ಮ ಮನೆದೈವ14 ಶುದ್ಧಸ್ವರೂಪನೆ ಶುದ್ಧ ಭಕ್ತರನು ಸಲಹಯ್ಯಹದ್ದುವಾಹನನಾದ ದೇವನೆಹದ್ದುವಾಹನನಾದ ದೇವನೆ ನರಹರಿಪ್ರದ್ಯುಮ್ನ ನಮ್ಮ ಮನೆದೈವ 15 ವನಜಲೋಚನ ಹರಿ ವಿನಯ ಉಳ್ಳವನೆಧ್ವನಿಕೇಳಿ ಬಂದ ಕುಬುಜೆಯ ಧ್ವನಿಕೇಳಿ ಬಂದ ಕುಬುಜೆಯ ನರಹರಿಅನಿರುದ್ಧ ನಮ್ಮ ಮನೆದೈವ 16 ಪಾರಿಜಾತದ ಹೂವ ನಾರಿಗೆ ಇತ್ತನೆವೀರ ದಾನವರ ಗೆಲಿದನೆವೀರ ದಾನವರ ಗೆಲಿದನೆ ನರಹರಿಪುರುಷೋತ್ತಮ ನಮ್ಮ ಮನೆದೈವ 17 ಅಕ್ಷಯಪದವೀವ ಪಕ್ಷಿವಾಹನಸ್ವಾಮಿಕುಕ್ಷಿಯೊಳೀರೇಳು ಭುವನವಕುಕ್ಷಿಯೊಳೀರೇಳು [ಭುವನವನಾಳಿದ] ನರಹರಿ ಅ-ಧೋಕ್ಷಜ ನಮ್ಮ ಮನೆದೈವ18 ನರಕಾಸುರನ ಕೊಂದು ಹಿರಣ್ಯನ ಮರ್ದಿಸಿಕರುಳ ಬಗೆದು ವನಮಾಲೆ ಹಾಕಿಕರುಳ ಬಗೆದು ವನಮಾಲೆ ಹಾಕಿದ ಹರಿನರಸಿಂಹನೆ ನಮ್ಮ ಮನೆದೈವ19 ಅಚ್ಚ್ಚುತಾನಂತನೆ ಸಚ್ಚಿದಾನಂದನೆ[ಮಚ್ಚಾವತಾರದಿ] ನಲಿದನೆ[ಮಚ್ಚಾವತಾರದಿ] ನಲಿದನೆ ನರಹರಿಅಚ್ಚುತ ನಮ್ಮ ಮನೆದೈವ 20 ಜಾನಕಿರಮಣನೆ ದಾನವಾಂತಕನೆದೀನರಕ್ಷಕನೆ ಸಲಹಯ್ಯದೀನರಕ್ಷಕನೆ ಸಲಹಯ್ಯ ನರಹರಿಜನಾರ್ದನ ನಮ್ಮ ಮನೆದೈವ 21 ಅಪರಿಮಿತಮಹಿಮನೆ ವಿಪರೀತ ಚರಿತನೆ[ಗುಪಿತವೇಷಗಳ] ತಾಳಿದನೆ[ಗುಪಿತವೇಷಗಳ] ತಾಳಿದ ನರಹರಿಉಪೇಂದ್ರ ನಮ್ಮ ಮನೆದೈವ 22 ಹರನ ಭಸ್ಮಾಸುರನು ಮರಳಿ ಬೆನ್ನ್ಹತ್ತಲುತರುಣಿರೂಪವನು ತಾಳಿದÀನೆತರುಣಿರೂಪವನು ತಾಳಿದ ನರಹರಿ ಶ್ರೀ-ಹರಿಯೆ ನಮ್ಮ ಮನೆದೈವ 23 ಕೃಷ್ಣಾವತಾರದಲಿ ದುಷ್ಟರ ಗೆಲಿದನೆವೃಷ್ಣಿಯರ [ಕುಲತಿಲಕನೆ]ವೃಷ್ಣಿಯರ [ಕುಲತಿಲಕನೆ] ನರಹರಿ ಶ್ರೀ-ಕೃಷ್ಣನೆ ನಮ್ಮ ಮನೆದೈವ 24 ಇಪ್ಪತ್ತು ನಾಲ್ಕು ನಾಮಂಗಳ ಪಾಡುವೆನುಅಪ್ಪ ಕೇಶವನ ಚರಿತೆಯನುಅಪ್ಪ ಕೇಶವನ ಚರಿತೆಯನು ಪಾಡಲುಒಪ್ಪಿಸಿಕೊಳ್ಳುವ ಹಯವದನ25
--------------
ವಾದಿರಾಜ
ರಾಮ ರಕ್ಷಿಸೋ ಸೀತಾರಾಮ ಪಾಲಿಸೋ ಪ ಕಾಮನ ಪಿತನಿಸ್ಸೀಮ ಸಾಹಸಗುಣಧಾಮ ಮ- ಹಾತ್ಮ ಸುಧಾಮ ರಮಣನೆ ಅ.ಪ ದಶರಥ ಪ್ರಥಮ ಪುತ್ರ ತ್ರ್ರಿದಶ ಸ್ತುತಿಗೆ ಪಾತ್ರ ಕುಶÀಲವರು ನಿನ್ನ ಹಸು ಮಕ್ಕಳು ಪೂರ್ಣ ಶಶಿಮುಖಿ ಸೀತೆ ನಿನ್ನ ವಶವಾದವಳು 1 ಕೋಸಲಾಧಿಪನೊ ಹೇ ದೇವ ನೀ ಕೌಸಲ್ಯ ಜಠರಜನೊ ಶೇಷನ ಪೂರ್ವಜ ನಾಶರಹಿತ ಅಶೇಷ ಮುನಿಗಣಕೆ ತೋಷಪೂರಿತನಾದಿ 2 ದುಷ್ಟರ ಸಂಹಾರ ಮಾಡಿದಿ ನೀ ಶಿಷ್ಟರ ಉದ್ಧಾರ ಸೃಷ್ಟಿಯೊಳಗೆ ಲೇಶ ಕಷ್ಟವಿಲ್ಲದೆ ನೀನು ಸುಷ್ಟು ಮಾಡಿ ಅಖಿಳೇಷ್ಟ ಪ್ರದನಾದಿ 3 ದೀನರಕ್ಷಕ ನೀನು ಮಹಾತ್ರಾಣಿ ಇಂದ್ರನ ಸೂನು ವಾನರಾಧಿಪಹನು ಮನಮಾತನು ಮಾನಿಸಿದಿಯೊ ನೀನು 4 ದೇವಶ್ರೇಷ್ಠ ನೀನು ಉದ್ಧರಿಸಿದಿ ಮಾವ ಜನಕನನ್ನು ಕಾವಲಾಗಿರು ಯನಗಾವಾಗ್ಯನು ಶ್ರೀವತ್ಸಾಂಕಿತ ವೆಂಕಟಪತಿಯೆ 5
--------------
ಸಿರಿವತ್ಸಾಂಕಿತರು
ಶ್ರೀನಿವಾಸ-ಶ್ರೀನಿವಾಸ-ದೀನರಕ್ಷಕ ದಾನಿ ನೀನೆಂದು ನಂಬಿದೆ ಪ ಜ್ಞಾನಗಮ್ಯನೆ ವಾಙ್ಮನೋಮಯ ಮಾನಿ ಮಾನಸರಾಜಹಂಸ ಅ.ಪ ಲೋಕಭರಿತ ಶ್ರೀಕಳತ್ರ-ತ್ರಿಕಕುದ್ಧಾಮದಧಿನಾಥ ಶ್ರೀಕಮಲಭವಾದಿವಂದಿತ ಮುಕುತಾಮುಕುತಜನ ಸಂಸೇವಿತ ಅಖಿಳಾಗಮಕೆ ಅತೀತ-ಶ್ರೀಕರಪಲ್ಲವಪೂಜಿತ ಅಖಿಳಾಜಾಂಡದಿ ವ್ಯಾಪ್ತ-ಭಕುತರಗತಿಯಪ್ರದಾತ1 ನಿಗಮವಿತ್ತೆ ನಗವಪೊತ್ತೆ ಬಗೆದು ಬೇರ ನರ- ಮೃಗಾಂಗನೇ ತ್ಯಾಗಿಯೊಳು ಪೋಗಿ ನೃಪರ ನೀಗಿಸಿ ವನವನವಾ ಚರಿಸಿದೆ ಬಗೆಬಗೆ ಆಟದಿ ಬಾಲ್ಯದಿ ಹಗೆಗಳ ಮಡುಹಿದೆ ಕಾರ್ಯದಿ ಆಗಮಕರ್ಥಮೋಹಿಸಿ-ಜಗದೊಳುತುರಗವನೇರ್ದೆ 2 ಅಂತರಾತ್ಮಪರಮಾತ್ಮ ಅನಂತಾನಂತರೂಪಾತ್ಮ ಪ್ರಾಂತಕಾಣದೇ ನಿರಂತರದಿ ನಿಂತು ಸಿರಿ ನಿತ್ಯಮುಕ್ತಳಾದಳೋ ಕಂತುಪಿತ ಎನ್ನಂತರದಿ ನಿಂತಿಹೆ ನಿರಂತರದಿ ಕಾಂತ ಶ್ರೀ ವೆಂಕಟೇಶನೆ-ಅಂತರ್ಬಹಿರದಿ ನಿಂತಿಹ ಪ್ರಭೊ 3 ಅಪ್ರಮೇಯ ಸ್ವಪ್ರಕಾಶ ಅಪ್ರಾಕೃತಗುಣಗಣಾರ್ಣವ ಸ್ವಪ್ರಯೋಜನರಹಿತ ಸತತ ತ್ವತ್ಪ್ರಸಾದದಿಂದ ಜಗವು ಕ್ಷಿಪ್ರದಿ ನೃಪಸಂಸ್ತುತಿಸೆ ವಿಪ್ರನಮನ ಸಂತೈಸಿದೆ ಅಪ್ರತಿಹತಮಹಿಮನು ಸುಪ್ರೀತನು ಜನರ್ಗೆ 4 ಪರಮ ಪುರುಷ ಪೂರ್ಣಾನಂದ ಪರಮಕರುಣಶರಧಿಯೆ ಉರಗಾದ್ರಿವಾಸ ವಿಠ್ಠಲ ಕರಾವಲಂಬನವಿತ್ತು ಸಲಹೆಲೋ ಪರಿಪರಿ ಎನ್ನಪರಾಧ ನೋಳ್ಪರೆ ಭೋ ಜಗದೊಡೆಯ ಕರುಣವು ತೋರದೆ ನೀನಿರೆ ನರಪಶು ನಾನೆಂತು ಬಾಳ್ವೆನೋ5
--------------
ಉರಗಾದ್ರಿವಾಸವಿಠಲದಾಸರು
ಶ್ರೀಮಾಧವ ಪಾದವ ಸಂತತ ಮನದಿ ನೇಮದಿ ಧ್ಯಾನಿಸು ನೀ ಪ ಪ್ರೇಮಮೂರ್ತಿಯನೆನೆವರಾರಾದರೇನಯ್ಯ ಸ್ವಾಮಿತಾನವರನು ಸರ್ವತ್ರ ಸಲಹುವನು ಅ.ಪ ಮದಗಜವನುಸರದಿ ಮೊಸಲೆಯನು ತಾನು ಅಧಿಕ ಕಷ್ಟವ ಗೊಳಸೆ ಪದುಮನಾಭ ನೀನೆ ಪೊರೆಯಬೇಕೆನ್ನಲು ಮುದದಿಂದಲೊದಗುತ್ತ ಸೌಖ್ಯವ ತೋರಿದೆ 1 ತರಳನಾದ ಧ್ರುವನು ಪ್ರಹ್ಲಾದನು ಶರಣೆಂದು ಮೊರೆವೋಗಲು ಸರಸಿಜಾಕ್ಷ ಶ್ರೀಶ ತ್ವರಿತದಿಂದಲಿ ಬಂದು ಕರುಣದಿ ಕರೆದೆತ್ತಿಕೊಂಡು ಮುದ್ದಾಡಿದ 2 ಮಾನಿನಿ ದ್ರೌಪದಿಯು ತನ್ನಯ ಘನ ಮಾನಭಂಗದ ಕಾಲದಿ ದೀನರಕ್ಷಕ ಕೃಷ್ಣ ದಾನವಾರಿಯೆನೆ ಸಾನುರಾಗದಿಂದಲಕ್ಷಯ ವರವಿತ್ತ3 ಅಜಮಿಳ ಬಹುಪಾಪದಿ ಮೆರೆಯುತಲಿದ್ದು ನಿಜಸುಖ ಮರೆತಂತ್ಯ ಕಾಲದಿ ಬಜಬಜಿಸುತಮಗನನು ಹೆಸರೆತ್ತಲು ಭಜನೆಯಾಯ್ತು ನಾರಾಯಣ ನಾಮವು 4 ವಿದುರನುಧ್ದವನರ್ಜುನ ಕುಚೇಲನು ಮೊದಲಾದ ಭಕ್ತರೆಲ್ಲ ಹೃದಯದಿ ಬಚ್ಚಿಟ್ಟು ನಿರುತ ಪೂಜೆಯ ಮಾಡೆ ಪದವಿಯಿತ್ತು ಕಾಯ್ದ ಜಾಜಿಯೀಶನ5
--------------
ಶಾಮಶರ್ಮರು
ಶ್ರೀರಾಮ ಮನೋಹರ ಕೃಪಾಸಾಗರ ಪ ಸಾರಸಾಪ್ತ ವಂಶ ಭೂಪ ಸಾಧು ಪೋಷಕ ಮಾರುತಾತ್ಮಜಾ ಪೂಜಿತ ಅ.ಪ ಗಾಧಿತನಯ ಯಾಗರಕ್ಷಗಾಧ ಮಹಿಮನೇ ಬೋಧ ರೂಪ ಬುಧ ಜನ ಪ್ರಿಯಾ ವೇದವಂದ್ಯ ವಿಶ್ವವಲ್ಲಭಾ 1 ರಾವಣಾದಿದನುಜ ಭಂಜನಾನತರ ಕಾವನೆ ಭಾವಜಾರಿ ಚಾಪಭಂಗ ಭಾಸುರಾಂಗನೆ ದೇವ ದೇವ ದೀನರಕ್ಷಕಾ 2 ಭೂಮಿಗಧಿಕ ನೂತನ ಪುರಿಧಾಮ ನೀನಲಾ ಕಾಮಿತಾರ್ಥದಾತ ಸಾಮಗಾನ ಲೋಲಕ್ಷೇಮವೀವ ಗುರುರಾಮ ವಿಠ್ಠಲ 3
--------------
ಗುರುರಾಮವಿಠಲ