ಒಟ್ಟು 139 ಕಡೆಗಳಲ್ಲಿ , 16 ದಾಸರು , 124 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇದೇ ನಿತ್ಯನಮಸ್ಕಾರ ನೋಡಿ ಗುರುಚರಣಕೆ ಮನಗೂಡಿ ಧ್ರುವ ಬಿಡದಿಹುದೇ ಸತ್ಸಂಗಾ ನೋಡಿ ಇದೇವೆ ಶಿರಸಾಷ್ಟಾಂಗಾ ಕಡದ್ಹೋಯಿತು ಭವದುಸ್ಸಂಗಾ ದೃಢಮಾಡಿ ಅಂತರಂಗಾ1 ನಮೃತಲಿಹುದೆ ನಮನಾ ನೇಮದಿಂದ ನಡೆದವರು ದಿನಾ ಬ್ರಹ್ಮಾನಂದದೋರುವ ಸಾಧನ 2 ಗುರ್ವಿನಂಘ್ರಿಗೆ ಎಡೆಮಾಡಿ ಅರ್ವಿನೊಳಾದ ಮಹಿಪತಿ ನೋಡಿ ಗರ್ವ ಪುಣ್ಯೆಂಬುದು ಈಡ್ಯಾಡಿ ಸರ್ವಪಾಪ ಹೋಯಿತು ನೋಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇನ್ನೊಬ್ಬರಿಗೆ ಇದು ಏನು ತಿಳಿದೀತು ಧ್ರುವ ವೇದಾಂತಕಿದು ಸನ್ಮತಗೂಡುವ ಮಾತು ಸಾಧುಜನರಿಗೆ ಸಾಕ್ಷಿಯಾಗಿ ದೋರುವ ಮಾತು ಸಾಧನಕೆ ಸಾಧಿಸುವ ಮಾತು ಬೋಧಿಸಿದವಗೆ ಬಲವಾಗುವ ಮಾತು 1 ಕೋಟಿ ಜನ್ಮದಾ ಪುಣ್ಯವಂತಗಿದಿರಿಡುವ ಮಾತು ನೋಟ ನಿಜವಾದವಗೆ ನೀಟವಾಗಿಹ ಮಾತು ಸೂಟಿಗಿದೆ ಘನಕೂಟ ಮಾತು ನಾಟಿಮನದೊಳು ಮಥಿüಸುವ ಮಾತು 2 ದ್ವೈತ ಅದ್ವೈತಕ ಆಧಾರವಾಗುವ ಮಾತು ತ್ರಯಗುಣಕ ಮೀರಿ ಮಿಗಿಲಾಗಿ ದೋರುವ ಮಾತು ಮಹಿಪತಿಯ ಗುರುಗೂಢ ಮಾತು ತ್ರಯಲೋಕಕಿದೆ ತಾರಿಸುವ ಮಾತು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಲ್ಲೆ ಉಂಟು ಮುಕುತಿ ನೋಡಿ ನೋಡಿ ಒಂದೆ ಮನದಲಿ ಸುಲಭವಾಗಿ ದೋರುತಿಹ್ಯದು ಗುರುಕರುಣದಲಿ ಧ್ರುವ ಏನುಹೇಳಲಿ ಸ್ವಾನುಭವ ಸುಖದ ಸಿದ್ಧಿಯ ಜ್ಞಾನಿಬಲ್ಲ ಭಾಸುತಿಹ್ಯ ಸ್ವಕೀಲ ಸಿದ್ಧಿಯ ಮನವ ಬಲಿದು ಮಾಡಿಕೊಳ್ಳಿ ಜ್ಞಾನಸಿದ್ಧಿಯ ತನುವಿನೊಳು ದೋರುತೀಹ್ಯ ಶ್ರೀಗುರು ಸುಧೆಯ 1 ನಿಟಿಲ ಭ್ರೂಮಧ್ಯ ದಾಟಿನೋಡಿ ಮುಕ್ತಿಯ ದಿಟವಾಗಿ ಕೂಡಿ ಪ್ರಭಯ ಜ್ಞಾನ ಶಕ್ತಿಯ ಕುಟಿಲವಲ್ಲ ಕೇಳಿ ಮಾತು ನಿಜಯುಕ್ತಿಯ ನಟನೆ ತನ್ನೊಳು ದೋರುವ ಗುರುಭಕ್ತಿಯ 2 ಲೇಸು ಲೇಸಾಯಿತು ಎನಗೆ ಭಾಸ್ಕರ ಕರುಣವು ಭಾಸುತಿಹ್ಯದು ವಾಸುದೇವನ ಪುಣ್ಯಚರಣವು ಮೋಸವಿಲ್ಲದೆ ನೀಗಿತು ಜೀವನ ಜನ್ಮಮರಣವುದಾಸ ಮಹಿಪತಿಗಾಯಿತು ಘನಸ್ಫುರಣವು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಈಗ ಶಾಸ್ತ್ರಗಳನ್ನು ಎರಗಿ ಪೇಳುವೆ ನಾನು ಯೋಗೇಶ ಪ್ರತಿಗ್ರಹಿಸುಆಗುಮಾಡಿದೆ ನೀನು ಅಖಿಲಾಗಮಂಗಳನುಭಾಗಿಸಿ ಬಹುವಾಗಿ ಬಗೆಗಳನು ಪಹದಿನಾಲ್ಕು ಸೂತ್ರಗಳು ಹುದುಗಿದ ವೃತ್ತಿಗಳು ವೊದಗಿ ಶಬ್ದವ ಬೋಧಿಸಿಅದರ ದೋಷಗಳನ್ನು ಅಟ್ಟಿ ಶುದ್ಧಿಯ ಮಾಳ್ಪುದಿದು ತಾನೆ ಮೊದಲಾಗಿ ುೀ ಶಾಸ್ತ್ರವಿರಲು 1ಎರಡನೆಯದು ತರ್ಕವೆಲ್ಲಾ ಜೀವರ ಬಗೆಯನರುಹಿಸಿ ಕೊಡುತಿಹುದುಪರಿಕಿಸಿ ಹದಿನಾರು ಪರಿ ಪದಾರ್ಥಗಳನ್ನುನೆರಹಿಸಿುರೆ ನೀನುನಿನಗೊಪ್ಪಿಸುವೆನು 2ಈ ಸಾಧನಗಳಿಂದಲೇಕ ವಸ್ತುವ ತಿಳಿದುತಾ ಸಾಧಿಸುವ ಬಗೆಯಮೋಸವಿಲ್ಲದ ಹಾಗೆ ಮುಕ್ತಿ ತೋರ್ಪುತ್ತರ ಮೀಮಾಂಸೆ ಯೆಂದೆಂಬುದೆ ನಿಜ ಶಾಸ್ತ್ರ ವಾಗೆ 3ಕರ್ಮ ಬ್ರಹ್ಮವೆಯೆಂದು ಕೊಂಡಾಡಿ ಜನರನ್ನುಧರ್ಮಮಾರ್ಗದಿ ನಿಲಿಪಮರ್ಮದೋರುವ ಪೂರ್ವ ಮೀಮಾಂಸೆ ಯೆಂಬುದನಿರ್ಮಿಸಿುರೆ ನೀನು ನಿರ್ಣೈಪುದಾಗಿ 4ಪರಿಕಿಸಿ ನಿನ್ನುವನು ಪಡೆÉುಸಿ ಪ್ರಾಣಗಳನ್ನುಪರಮಾನಂದದಿ ನಿಲಿಸಿಮೆರೆವ ಶ್ರೀ ತಿರುಪತಿ ವರದ ವೆಂಕಟರಮಣಚರಣಸೇವೆಗೆ ಯೆನ್ನ ಚಲಿಸದಂತಿರಿಸು 5
--------------
ತಿಮ್ಮಪ್ಪದಾಸರು
ಉತ್ತಮೋತ್ತಮ ದೈವ ನಿತ್ಯನೀನಾಗಿರಲಿಕ್ಕೆ ಮತ್ತೆ ಅನ್ಯ ದೈವನಾರಿಸಲ್ಯಾತಕೆ ಧ್ರುವ ಸತ್ಯಸನಾತನನೆಂದು ಶ್ರುತಿಸಾರುತಿರಲಿಕ್ಕೆ ಎತ್ತ ನೋಡಿದರತ್ತ ಪ್ರತ್ಯಕ್ಷ ನೀ ದೋರಲಿಕ್ಕೆ ಮತ್ತೆ ಆವ್ಹಾನ ವಿಸರ್ಜನವ್ಯಾತಕೆ 1 ವಾಸವಾಗಿ ಎನ್ನಾತ್ಮದೊಳು ನೀನೆ ಇರಲಿಕ್ಕೆ ವಾಸುವೇವನೆ ನೀನೆ ಎನ್ನ ಈಶನಾಗಿರಲಿಕ್ಕೆ ಸೋಶಿಲೆ ಅನೇಕ ವೇಷ ದೋರುವದ್ಯಾತಕೆ 2 ಭಾನುಕೋಟಿತೇಜ ಎನ್ನೊಡಿಯನಾಗಿರಲಿಕ್ಕೆ ಬಿನುಗುದೈವದ್ಹಂಗು ತಾಇನ್ನೊಂದು ಯಾತಕೆ ಮನದ ಮಂಗಳಾಗಿ ನೀ ಮಹಿಪತಿಗೆ ಭಾಸುತಿರಲಿಕ್ಕೆ ಅನುಭವಕ್ಕನುಮಾನ ಮಾಡುವುದ್ಯಾತಕೆ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಎಂಥಾ ಮೋಹನನೇ ನೋಡಮ್ಮಯ್ಯಾ| ಸಂತತ ತೃಪ್ತನು ಬಾಲಕನಾದಾ|ಅ- ನಂತ ಚರಿತೆಯಾ ದೋರುವ ಕೃಷ್ಣ ಪ ಮೂಡಣ ದೇಶಕೆ ಪಡರಲು ಗೋಪಿಯು| ತಡೆಯದೆ ದುಮುಧುಮು ಧುಮುಕೆನುತ| ಕಡೆಯಲು ಧುಡು ಧುಡು ಧುಡುನಡೆಯುತ ಬಂದು| ಪಿಡಿದೆನ್ನ ಸೆರಗ ಬೆಣ್ಣೆ ಬೇಡುವಾ ಕೃಷ್ಣ 1 ಸಮಗೆಳೆಯರ ಸಂಗಡ ಧ್ವನಿವೇಣಿಯ| ಉಮಟೆಸುತಲಿ ಧಿಗಿಧಿಗಿಲೆನುತಾ| ಧಿಮಿಕಿಟ ಧಿರಕಿಟ ತಿರುಕಿಟವೆಂಬೋ| ಕ್ರಮದಿ ವಾದ್ಯವ ಬಾರಿಸುವಾ ಕೃಷ್ಣ 2 ಗುರು ಮಹೀಪತಿ ಪ್ರಭುವಿನ ಪದರಜ| ದೊರಕದು ಅಜಭವ ಮುಖ್ಯರಿಗೆ! ಹರುಷದಿ ತೋಳ್‍ದೊಡೆ ಮೇಲೆ ಓಡಾಡುವಾ| ಧರೆಯೊಳು ಯಶೋಧೆ ಸುಕೃತವೆಂತೋ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಲ್ಲಾರಿಗೆಲ್ಲಿಹದು ಫುಲ್ಲನಾಭನ ಸೇವೆ ಸುಲಭವಲ್ಲವಿದು ದುರ್ಲಭ ಸದ್ಗುರು ಮಾರ್ಗ ಧ್ರುವ ಕೋಟ್ಯಾನುಕೋಟಿಗೊಬ್ಬ ಮುಟ್ಟಿ ಕಂಡಿದರಲಿ ನೆಟ್ಟಿಸಿ ತನ್ನೊಳು ತಾ ದೃಷ್ಟಿಸಿ ಗುರುಪಾದ 1 ಮಾತಿನಂತಲ್ಲವಿದು ಜ್ಯೋತಿರ್ಮಯದ ಸುಖ ನೆÉೀತಿನೆÉೀತಿವೆಂಬುದು ಶ್ರುತಿ ಸಾರುತದ ವಾಕ್ಯ 2 ಹರಡಿಸಿರಾಗದು ಮೂರುಲೋಕದೊಳಗ ಕರುಣಿಸಿದರಾಹುದು ಗುರು ಕೃಪೆಯಿಂದ 3 ವರ್ಮ ತಿಳಿಯದೆಂದೆಂದು ಕರ್ಮತಮಂಧರಿಗೆ ಬ್ರಹ್ಮ ಸುಖದೋರುವ ಸ್ವಾಮಿ ಸದ್ಗುರು ಧರ್ಮ 4 ಸೇವೆ ಸೂತ್ರನರಿಯದ ಭಾವಿ ಮಹಿಪತಿಗೆ ಭಾವಭಕ್ತಿಯ ಕೊಟ್ಟು ಪಾವನಗೈಸಿದ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏನು ಕಾರಣವಿಲ್ಲೆ ನಿಂದೇ ಅಶ್ವತ್ಥ ಶ್ರೀ ನಾರಸಿಂಹೆನಿಸಿ ಅಜಭವರ ತಂದೇ ಪ ಹೊರೆಯ ಲೈತರಲು ಹಂಬಲಿಪ ಪ್ರಲ್ಹಾದಿಲ್ಲ | ಹಿರಣ್ಯ ಕಾಸುರನಿಲ್ಲ | ಸುರರಿಗುಪಟಳವೇನು ಇಲ್ಲ ಸ್ತಂಭ | ಬಿರಿದು ದೋರುವ ಅಹೋಬಲದ ಸ್ಥಳವಲ್ಲ 1 ಸಿರಿಯ ಮೋಹನ ನಿಮ್ಮ ರೂಪವನೆ ಆವರಿಸಿ | ಮರದ ಪೇರ್ಗಳೆಪಾದ ಕೊಂಬುಗಳ ಕರಧರಿಸಿ | ಸಿರಸಾಗ್ರ ಮಧ್ಯುದರ ವೆರಸೀ ಪರ್ಣ| ದಿರುವ ಅವಯವ ಮಾಡಿ ಪಾದರ್ಪೆದ್ರನಿಸೀ2 ಧರೆಗಧಿಕ ಸುಕ್ಷೇತ್ರ ಶೂರ್ಪಾಲಯವೆ ನೋಡಿ | ಮೆರೆಯುತಿಹ ಕೃಷ್ಣ ವೇಣಿಯ ತೀರದಲಿ ಮೂಡಿ | ಹರಗರುಡ ಗಣಪರೋಡಗೂಡಿ ನಲಿವ | ಗುರುಮಹಿಪತಿ ಸ್ವಾಮಿ ಕಾಯೋದಯ ಮಾಡಿ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಒಂದಿಲ್ಲದ ಮೇಲೆರಡುಂಟೇ ಭಕ್ತಿ ಒಂದಲ್ಲದೆ ಹರಿಯೊಲವುಟೇ ಪ ರುಚಿ ಔಷಧಿಯುಂಟೇ ನೊಂದಲ್ಲದೆ ರಂಗಾ ಎಂಬುವುದುಂಟೇ ಅ.ಪ ಗಿಡಮರವಾಗದೆ ಕೃಮಿಯಾಗುವೆನೇ ಅಡವಿಯೊಳಿರದೆ ಗೋವಾಗುವೆನೇ ಪಡೆಯದೆ ಪುಣ್ಯವ ನರನಾಗುವೆನೇ ಮೃಡನ ಪೂಜಿಸದೇ ದ್ವಿಜನಾಗುವೆನೇ 1 ಸುಗುಣವಿರದೆ ಮಾತಿನಿದಾಗುವುದೇ ಸೊಗಮಿಲ್ಲದೆ ಬಾಯಿ ನಗೆದೋರುವುದೇ ಸುಗುಣವಿಲ್ಲದೆ ನಿರ್ಗುಣಬಹುದೇ ಮುಗಿಲಿಲ್ಲದೆ ಮಳೆ ಧರೆಗೆ ಬೀಳುವುದೇ 2 ತಂಗಿದ್ದಲ್ಲದೆ ಭಾವ ಎಂಬೋದುಂಟೋ ಹಂಗಿ[ಗ]ಲ್ಲದೆ ಮರೆ ಹಿತಕುಂಟೋ ತಂಗಿನೋಡಲು ಭಾವ ಮರೆಯಹುದುಂಟೋ ಮಾಂಗಿರಿರಂಗ ನೀನೆನ್ನಯ ನಂಟೋ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಒಂದು ಪಥವ ಹೊಂದಲರಿಯರೀ ಮನುಜರು ಇಂದಿರೇಶನ ಪಾದವ ಕಾಣದೆ ಕೆಡುವರು ಧ್ರುವ ಒಂದರೆ ಘಳಗಿ ನಾನೆವೆ ಮಾಡಿದೆನೆಂಬರು ಒಂದರೆ ಘಳಗಿ ಪ್ರಾಚೀನವೆಂಬರು ಒಂದರೆ ಘಳಗಿ ಈಶ್ವರ ಸೂತ್ರವೆಂಬರು ಒಂದರೆ ಘಳಗಿ ತಾ ಏನೋ ಎಂತೆಂಬರು 1 ಒಮ್ಮೆ ಜಾಗೃತಿಯೊಳಿದೇ ನಿಜವೆಂಬರು ಖರೆ ಎಂಬರು ಒಮ್ಮೆ ಸುಷುಪ್ತ್ತಿಯೊಳಿದೇ ಸತ್ಯವೆಂಬರು ಒಮ್ಮೆ ಇದರ ಶುದ್ಧಿ ತಿಳಿಯದಂತಿಹರು 2 ಒಂದು ತಿಳಿದರ ಸಕಲವು ಒಂದಾಗಿ ದೋರುವದು ಒಂದರೊಳಗ ಸಕಳ ದೊರೆಕೊಂಬುದು ಒಂದಾಗಿ ಸಲಹುವ ಮಹಿಪತಿ ಸ್ವಾಮಿಯ ತಂದೆ ಸದ್ಗುರು ಭಾಸ್ಕರ ಕೋಟಿ ತೇಜನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಓ ಎನ್ನಬಾರದೇ ಹರಿಯೆ | ಶ್ರೀಯರಸನೇ ನೀನೇ ಗತಿಯೆಂದು ಅನ್ಯ ಉ| ಪಾಯವನರಿಯದ ಬಾಲಕ ಕರೆದರೆ ಪ ಹಾಲವ ಬೇಡುವ ಮೊರೆಯಿಡಲುಪಮನ್ಯು ಆ | ಬಾಲಗ ಧ್ವನಿ ದೋರಿದಂತೆ | ಚಾಲವರಿದು ಸರೋವರದಲಿ ಕರೆದ ಶುಂ| ಡಾಲಗೆ ಧ್ವನಿ ದೋರದಂತೆ | ವ್ಯಾಳ್ಯೆಕ್ಕ ಒದಗೆಂದು ರಾತ್ರಿಲಿ ಕರೆದ ಪಾಂ| ಚಾಲಿಗೆ ಧ್ವನಿ ದೋರಿದಂತೆ | ಕಾಲಕಾಲಕ ಬಂದು ಮೊರೆಯಿಡೆ ಸುರಮುನಿ | ಜಾಲಕ ಮೈದೋರಿ ಧ್ವನಿ ದೋರಿದಂತೀಗ 1 ಆವಾಗ ಧ್ವನಿದೋರಿದಂತೆ | ಗೋವ ಮೇಯಿಸಿ ತೆರಳಲು ಗೊಲ್ಲರೊದರುವ ಭಾವಕ ಧ್ವನಿದೋರಿದಂತೆ | ದೇವ ನೀಮರಿಯಾಗೆ ಹುಂಕರಿಸ್ಸೊದರಲು | ಆವಿಗೆ ಧನಿ ದೋರಿದಂತೆ | ಕಾವನೈಯ್ಯನೆ ನಿನ್ನ ನೆನೆದ ಗೊಲ್ಲತೆರಾ | ಜೀವನ ಹಿತವಾಗಿ ಧನಿದೋರಿದಂತೀಗ 2 ಬಂದೂಳಗಕ ನಿನ್ನ ಪಾಂಡವರೊದಲು | ನಿಂದು ನೀ ಧನಿದೋರಿದಂತೆ | ಇಂದಾದಾ ಕಲಿಯುಗದ ದಾಸರ ಮಾತಿಗೆ | ಬಂದು ನೀ ಧನಿ ದೋರಿದಂತೆ | ಕಂದನಳುವ ಧ್ವನಿ ಕೇಳುತ ಜನನಿ ಅ | ನಂದದಿ ಧನಿದೋರುವಂತೆ | ತಂದೆ ಮಹಿಪತಿ - ನಂದನ ಪ್ರಭು ಗೋ | ವಿಂದ ಮುಕುಂದೆನ್ನ ಸಲಹೆಂಬ ಮೂಢನಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಣ್ಣಾರೆ ಕಂಡೆವಯ್ಯಾ ಕಣ್ಣಾರೆ ನಾ ಧ್ರುವ ಕಣ್ಣಾರೆ ಕಂಡೆ ಹರಿಯ ಎನ್ನ ಪ್ರಾಣಧೊರಿಯ ಧನ್ಯಗೈಸಿದ ಪರಿಯ ಏನೆಂದ್ಹೇಳಲಯ್ಯ 1 ಸ್ವಾನುಭವದ ಖೂನ ಜನಕ್ಹೇಳಲೇನು 2 ಆಡೇನಂದರ ಅಮಾತು ನಾಡಿಗೇನು ತಿಳದೀತು ಪಡೆದವಗೆ ದೋರಿತು ಬಿಡದ್ಹಾಂಗಾದೀತು 3 ಗುರುಕರುಣ ಕಟಾಕ್ಷ ಗುರುತಾಗ್ಯದ್ಯನ್ನಪೇಕ್ಷಾ ಇರುಳ್ಹಗಲೆ ದೋರುವದಧ್ಯಕ್ಷ 4 ಎನಗದೆ ಬ್ರಹ್ಮಾನಂದ ಭಾನುಕೋಟಿ ತೇಜನಿಂದ ದೀನಮಹಿಪತಿ ಬಂದ ಅನುಭವ ಆನಂದ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಣ್ಣಾರೆ ಕಂಡೆವು ಚಿನ್ಮಯದ ರೂಪ ಕಣ್ಣಾರೆ ಕಂಡೆವು ಮಾ ಧ್ರುವ ದೋರುವದು ಮಾ ಪೂರ್ಣಗೈಸುವದು ಮಾ 1 ತಾನಾಗಿಹುದು ಮಾ ಘೋಷಗೈವದು ಮಾ 2 ದೋರುದು ಮಾ ಕೈಗೂಡದು ಮಾ 3 ತಿಳಿಯಗೊಡದು ಮಾ ತಾನೆ ಭಾಸುದು ಮಾ 4 ಉತ್ತಮರೊಳಗೆ ಅತ್ಯಂತವಾಗಿನ್ನು ಅತ್ತಿತ್ತಲಾಗದೆ ಇಹುದು ಮಾ ಹೃತ್ಕಮಲದೊಳು ಕಂಡೆನು ಮಾ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಪಟನಾಟಕನೀತ ಕೃಪಾಸಿಂಧು ಸಾಕ್ಷಾತ ಧ್ರುವ ಸಗುಣ ಸುಪಥ ದೋರಿ ನಿರ್ಗುಣನಾಗಿಹ ಶ್ರೀಹರಿ ಅಗಣಿತ ಗುಣದೋರುವ ಅನೇಕಾಪರಿ ಜಗದೊಳು ಮುರಾರಿ 1 ಹಿಡಿದೇನೆಂದರೆ ಸಿಲುಕ ಗೂಡಿನೊಳಗೆ ಮಾಡಿಹ್ಯ ಮಲಕ ನೋಡೇನೆಂದರೆ ಭಕ್ತಿಗೆ ನಿಲುಕ ಒಡಿಯ ಗೋಪಾಲಕ 2 ಕುಲಗಳ್ಳಗೆ ಕೊಡುವ ಮ್ಯಾಲೆ ಹುಯಲು ತಾ ಮಾಡುವ ಬಲುಖಳ ದೈವ 3 ಭಾಷೆ ಕೊಟ್ಟರೆ ತಪ್ಪ ಋಷಿ ಮುನಿಗಳ ಪಾಲಿಪ ಭಾಸುತ ಭಕ್ತರ ಹೃದಯದೊಳಗಿಪ್ಪ ಭಾಸ್ಕರ ಸ್ವರೂಪ 4 ಗುಹ್ಯ ಆಗೋಚರ ಸೋಹ್ಯ ತಿಳಿಯಲು ಸಾಕ್ಷಾತ್ಕಾರ ಇಹಪರ ಸಹಕಾರ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕರವ ಮುಗಿದು ಗುರುವಿನ ನೀ ಅರಿಯೊ ಸುಹಿತಾರ್ಥಿಯ ನೆರೆಯೊ ದೀರ್ಘದಂಡಹಾಕಿ ತರಣೋಪಾಯ ಮೂರ್ತಿಯ ಬೆರಿಯೋ ಕುರುವ್ಹ ತಿಳಿವ ಪರಮಭಕ್ತಿ ಮನೆಮೂರ್ತಿಯ ಸ್ಮರಿಸೊ ಮನವೆ ಚರಣಕಮಲ ಪೂರ್ಣಗುರುಮೂರ್ತಿಯ 1 ಕರೆವ ಮಳೆಯು ಕರುಣಿಸಿನ್ನು ಪರಮದಯ ವೃತ್ತಿಯ ಶರಣ್ಹೋಕ್ಕಾಶ್ರೈಸೊ ನೀನು ತ್ವರಿತ ಶ್ರೀಪತಿಯ ಮರಿಯದೆ ಕೊಂಡಾಡಬೇಕು ಧರೆಯೊಳಿದೆ ಕೀರ್ತಿಯ ಸ್ಮರಿಸೊ ಮನವೆ ಚರಣಕಮಲ ಪೂರ್ಣ ಗುರುಮೂರ್ತಿಯ 2 ಯರಕವಾಗಿ ಸರಕನಿನ್ನು ನೀನು ಕರಕೊ ದೃಢಭಕ್ತಿಯಾ ಅರಕಕೋಟಿ ತೇಜನಂಘ್ರಿ ಹರಿಕಿಸೊ ನೀ ಪೂರ್ತಿಯಾ ಗರಕನೆವೆ ಅರಿಕೆಮಾಡಿಕೊಂಡು ಸುಸಂಗತಿಯ ತರಕೈಸಿಕೊಳ್ಳು ಶ್ರೀಪಾದ ಪೂರ್ಣಗುರುಮೂರ್ತಿಯ 3 ಏರು ಅರು ಚಕ್ರ ನೋಡಿ ತಾರಿಸುವ ಸ್ಥಿತಿಯ ಅರವೆ ಅರವೆ ಆಗಿ ದೋರುತದೆ ಸುಜಾಗ್ರತಿಯ ಎರಗಿ ಹರುಷದಿಂದ ಪಡೆಯೊ ಪರಮ ವಿಶ್ರಾಂತಿಯ ಸ್ಮರಿಸೊಮನವೆ ಚರಣಕಮಲ ಪೂರ್ಣ ಗುರುಮೂರ್ತಿಯ 4 ಸುರರ ವಂದ್ಯ ಪರಮಭೇದ್ಯ ಅರಿಯಾ ಪರಗತಿಯ ಸಾರತಿಹ ಶ್ರುತಿವಾಕ್ಯ ಕೇಳೊ ಇಟ್ಟು ಪ್ರೀತಿಯ ತ್ಯರನೆ ತಿಳುಹಿಸಿಕೊಟ್ಟ ಗುರುವಿಗೆ ನಿತ್ಯಪ್ರತಿಯ ಸ್ಮರಿಸೊ ಮನವೆ ಚರಣಕಮಲ ಪೂರ್ಣಗುರುಮೂರ್ತಿಯ 5 ಗುರುಮೂತ್ರ್ಯಾಭೇದ್ಯವೆಂಬ ಗುರುತಕೇಳೋ ಅರ್ಥಿಯ ಕುರಹು ದೋರಿಕೊಟ್ಟ ಗುರುವಿಗೆ ನೀ ಮಾಡೊ ಸ್ತುತಿಯ ಮರೆದುಬಿಡೊ ತರಳತನದ ಹರುವಾ ನಿನ್ನಭ್ರಾಂತಿಯ ಸ್ಮರಿಸೊ ಮನವೆ ಚರಣಕಮಲ ಪೂರ್ಣಗುರುಮೂರ್ತಿಯ6 ತರತರದಿ ಸಾಂದ್ರವಾಗಿ ದೋರುತಿಹ ದೀಪ್ತಿಯ ಪ್ರಾರ್ಥಿಸಬೇಕೊಂದೆ ಸರ್ವಕಾಲ ವಸ್ತುಗತಿಯ ಪರಿಪರಿಸುಖ ದೋರುವ ಕರುಣಾನಂದ ಯತಿಯ ಸ್ಮರಿಸೊ ಮನವೆ ಚರಣಕಮಲ ಪೂರ್ಣಗುರುಮೂರ್ತಿಯ 7 ಸರ್ವಸುಖದೋರ್ವದೊಂದೆ ಸರ್ವಫÀಲ ಶ್ರುತಿಯ ಸರ್ವದಾವೆಂಬುವದು ನವರತ್ನಮಾಲೆ ಸ್ತುತಿಯ ಪೂರ್ವಕರ್ಮ ಹರಿಸುವ ಸದ್ಗುರು ಸಾಮಥ್ರ್ಯಯ ಸ್ಮರಿಸೊ ಮನವೆ ಚರಣಕಮಲ ಪೂರ್ಣಗುರುಮೂರ್ತಿಯ 8 ಶರಣಜನರಾಭರಣವಿದೆ ಅರಿಯಬೇಕೀವಾರ್ತೆಯ ತರಳ ಮಹಿಪತಿ ನೀ ಮಾಡೊ ಇರುಳ ಹಗಲ ಆರ್ಥಿಯ ಕರವ ಪಿಡಿದು ಪಾರಗೆಲಿಸುವ ನಿನ್ನ ಸಾರ್ಥಿಯ ಸ್ಮರಿಸೊ ಮನವೆ ಚರಣಕಮಲ ಪೂರ್ಣಗುರುಮೂರ್ತಿಯ 9
--------------
ಕಾಖಂಡಕಿ ಶ್ರೀ ಮಹಿಪತಿರಾಯರು