ಒಟ್ಟು 4153 ಕಡೆಗಳಲ್ಲಿ , 123 ದಾಸರು , 2573 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದೇವಿ ಶ್ರೀಸರಸ್ವತಿಯೆ ಕಾಯೇ ಪ ಮಾವಿನುತ ಹರಿನಾಮ ಸಂತತದಿ | ನುಡಿಸೀ ಅ.ಪ. ಪತಿ ಮಾತೆ | ನಾಲಗೆಯಲೀ ನಿಂತುಕಾಲ ಕಾಲಕೆ ಹರಿಯ | ಲೀಲಾತಿಶಯವಾ |ಪೇಳಿಸುತ ಜಿಹ್ವಾಂಗ | ಸಾರ್ಥಕೆನಿಪುದು ಎಂದುಕೇಳುವೆನು ವರ ನಿನ್ನ | ಪಾಲಿಪುದು ಅದನ 1 ವಿದೈಗಳಿಗಭಿಮಾನಿ | ಬುದ್ಧಿ ಪೂರ್ವಕ ಬೇಡ್ವೆತಿದ್ದಿ ಎನ್ನಲಿ ಇಹ ಅ | ವಿದ್ಯೆಗಳನೆಲ್ಲಾ |ಮಧ್ವೇಶ ಹರಿಯೊಲಿವ | ಶುದ್ಧ ಸಾಧನವಿತ್ತುನಿದ್ರೆಯಿಂದೆಚ್ಚರಿಸಿ | ಬುದ್ಧಿ ಪ್ರದಳೆನಿಸೇ 2 ಅಜನ ಅರ್ಧಾಂಗಿನಿಯೆ | ಪ್ರಜ್ವರವ ಕಳೆವಂಥಸುಜನ ಸಂಗವನಿತ್ತು | ರಜ ದೂರನೆನಿಸು |ಅಜನ ಜನಕನು ಗುರು | ಗೋವಿಂದ ವಿಠಲ | ಪದಅಬ್ಜವನು ತೋರವ್ವ | ನಿಜ ಹೃದಾಬ್ಜದಲೀ3
--------------
ಗುರುಗೋವಿಂದವಿಠಲರು
ನಾರಾಯಣ ನಾರಾಯಣ ನಾರಾಯಣ ನಾರಾಯಣ ಪ. ದೇವರದೇವನೆ ಬಾರೊ ದೇವಕಿನಂದನ ಬಾರೊ ದೇವೇಂದ್ರನ ಸಲಹಿದ ದೇವ ಬಾರೊ ಹರಿಯೆ ಅ.ಪ. ಮಚ್ಚನಾಗಿ ಶ್ರುತಿಯ ತಂದಿತ್ತ ಭಕ್ತವತ್ಸಲನೆ ಭೃತ್ಯ ಸತ್ಯವ್ರತನಿಗೊಲಿದ ಮಚ್ಚಬಾರೊ ಹರಿಯೆ 1 ಸಾರಿದ ಸುರರಿಗಾಗಿ ನೀರೊಳಗೆ ಮುಳುಗಿ ಕೂರ್ಮ ಬಾರೊ ಹರಿಯೆ 2 ಧsÀರೆಯನುದ್ಧರಿಸಲು ವರಾಹನಾದವನೆ ಹಿರಣ್ಯಾಕ್ಷನ ಸೀಳ್ದ ಧೀರ ಬಾರೋ ಹರಿಯೆ 3 ನಂಬಿದ ಭಕ್ತರ ಕಾವ ನಂಬೆ ಕರುಣದಿ ಕಲ್ಲ- ಡಿಂಬ ಬಾರೊ ಹರಿಯೆ 4 ಮಾಣವಕವೇಷನಾಗಿ ಕ್ಷೋಣಿ ಅಳೆದವನೆ ದಾನವನ ಸೋಲಿಸಿದ ಜಾಣ ಬಾರೊ ಹರಿಯೆ5 ಕಡಿ[ದು] ದುಷ್ಟನೃಪರ ಬಿಡದೆ ಚಪ್ಪೆಕೊಡಲಿಯ ಪಿಡಿದುಗ್ರ ಒಡೆಯ ಬಾರೊ ಹರಿಯೆ 6 ವೃಂದಾರಕವಂದ್ಯ ಸೇತುಬಂಧದಿ ದಶಕಂಧರನ ಕೊಂದ ರಾಮಚಂದ್ರ ಬಾರೊ ಹರಿಯೆ 7 ಮಲ್ಲರ[ನೆಲ್ಲ] ಸೀಳಿ ಬಲ್ಲಿದ ಮಾವನ ಕೊಂದೆ ಎಲ್ಲರ ವಲ್ಲಭ ಎಂಬೊ ಮಲ್ಲ ಬಾರೊ ಹರಿಯೆ 8 ಬೌದ್ಧನಾಗಿ ದೈತ್ಯರಿಗೆ ಶುದ್ಧಬುದ್ಧಿಯ ತೋರಿ ರುದ್ರನ್ನ ಸೋಲಿಸಿದ ಸುಭದ್ರ ಬಾರೊ ಹರಿಯೆ 9 ಕರ್ಕಶದ ಖಳರನ್ನು ಕಲ್ಕಿರೂಪನಾಗಿ [ಮೂಲೆ ಲಿಕ್ಕಿಸುವ ಸುಜನರ ಚೊಕ್ಕ ಬಾರೊ ಹರಿಯೆ 10 ವಿಜಯ ಹಯವದನ ಭಜಕರ ಭಾಗ್ಯನಿಧಿ ಸುಜನಾಬ್ಧಿ ವಾದಿರಾಜನ ತೇಜ ಬಾರೊ ಹರಿಯೆ 11
--------------
ವಾದಿರಾಜ
ನಿಖಿಳ ಗುಣಗಣ ಪೂರ್ಣ ಪ ಅಂಬುಜಾಸನ ಜನಕ ನರಹರಿ ಅಂಭ್ರಣೀ ಜಗನ್ನಾಥ ನಾಯಕ ಬಿಂಬ ವಿಷ್ಣುವೆ ನಿಖಿಳವಿಶ್ವಕೆ ತುಂಬಿ ಭಕ್ತಿಯ ಕಾಯೋ ಕರುಣಿ ಯೇ ಅ.ಪ. ತಂದೆಕಾರಣ ಭವದೀ- ನೀ ಎನ್ನ ಬಂದೆನಲ್ಲದೆ ನಿಜದೀ- ಸುಖಪೂರ್ಣ ನಿಂದು ನಡೆಸದೆ ಭವದೀ- ದಾಟಿನ್ನ ಎಂದಿಗಾದರು ಗೆಲ್ಲುವೆನೆ ಘನ್ನ ಬಂಧನಪ್ರದ ನೀ ಬಂಧಮೋಚಕ ತಂದ ವಿಷ್ಣುವೆ ಮೂಲಕಾರಣ ವೆಂದು ಶೃತಿಗಳವೃಂದ ನುಡಿವುವು ಬಂದು ನಿನಗಿಂತಧಿಕರಾರೈ ನಿಂದು ಹೃದಯದಿ ಸರ್ವಕಾಲದಿ ತಂದು ಉಣಿಸುವೆ ಸಕಲ ವಿಷಯವ ಬಂಧಿ ನಾನಿಹೆ ಜಡವೆ ನೀ ಬಿಡೆ ಮುಂದಿನಾಗತಿ ಬೇಗ ತೋರೈ ಇಂದಿರೇಶ ಮಹೇಂದ್ರ ಸುಖಮಯ ಕಂದರಾಶ್ರಯ ಬ್ರಹ್ಮಮಂದಿರ ನಂದಿವಾಹನ ತಾತ ವಿಭುವರ ಚಂದಗೋಚರ ಸಾರ್ವಭೌಮನೆ ಕೂಂದುನಕ್ರನ ಗಜವ ಸಲಹಿದೆ ನಂದನೀಡಿದೆ ಪಾರ್ಥಮಡದಿಗೆ ತಿಂದು ಎಂಜಲ ಕಾಯ್ದೆ ಶಬರಿಯ ಗಂಧ ಕೊಳ್ಳುತ ಕಾಯ್ದೆ ಕುಬ್ಜೆಯ ಕಂದ ಕೂಗಲ್ ಬಂದೆ ಕಂಭದಿ ಇಂದ್ರ ಗೋಸುಗ ಬಲಿಯ ಬೇಡದೆ ಮಂದರಾದ್ರಿಯ ಪೊತ್ತೆ ಸುರರಡೆ ಸುಂದರಾಂಗಿಯುಆದೆ ಹಾಗೆಯೆ ಹಿಂದೆ ಈತೆರ ನಿತ್ಯತೃಪ್ತನೆ ಬಂದು ಸಲಹಿದ ಭಕ್ತವೃಂದವ ಮಂದನಾದರು ಶರಣುಬಿದ್ದವ ನೆಂದು ಸಲಹೈ ಪೂರ್ಣಕರುಣಿಯೇ1 ಕೂಡಿಸುತ ಮನ ವಿಷಯ ಬಲೆಯಲ್ಲೀ ಮಾಡಿಸುವೆ ಮಾಡಿದ್ದ ದಿನದಿನದೀ ಗೂಢ ನಿನ್ನಯ ಭಕ್ತಿ ಕೊಡಲೊಲ್ಲೀ ಕೇಡುಮೋಹ ಸಜಾಡ್ಯ ಹರಿಸಿಲ್ಲೀ ಓಡಿಓಡಿಸೆ ಜಗವು ನಡೆವುದು ನೋಡಿನೋಡಿಸೆ ನಾವು ನೋಳ್ಪೆವು ಮಾಡಿಮಾಡಿಸೆ ಕರ್ಮವಾಹುದು ಪ್ರೌಢ ನಿನ್ನಯ ಬಲದ ವಿಶ್ವಕೆ ಕಾಡಿಕಾಡಿಪ ವಿಷಯ ಬಿಡಿಸುತ ಹಾಡಿಹಾಡಿಸಿ ನಿಮ್ಮ ಕೀರ್ತನೆ ಆಡಿಆಡಿಸಿ ಸಾಧುಸಂಗದ ಜಾಡುತೋರಿಸೊ ಭಕ್ತಿ ಮಾರ್ಗದ ಕ್ರೋಢನರಹರಿ ಮತ್ಸ್ಯವಾಮನ ಪ್ರೌಢ ಭಾರ್ಗವ ರಾಮಕೃಷ್ಣನೆ ಗಾಡಿಕಾರ ಪರೇಶ ಬುದ್ಧನೆ ದೂಡು ಕಲಿಯನು ಕಲ್ಕಿದೇವನೆ ಕೂಡು ಮನದಲಿ ಬಾದರಾಯಣ ನೀಡು ಜ್ಞಾನವ ಜೀಯ ಹಯಮುಖ ಮಾಡು ದತ್ತಾತ್ರೇಯ ಕೃಪೆಯನು ಈಡುಕಾಣದು ಕಪಿಲಮೂರ್ತಿಯೆ ಬೀಡುಗೈದಿಹ ಬೀಜ ನಿದ್ರೆಯು ನೋಡಗೊಡದೈ ನಿನ್ನತುರ್ಯನೆ ನಾಡುದೈವಗಳನ್ನು ಭಜಿಸಲು ಓಡದದು ಎಂದೆಂದು ಸತ್ಯವು ಮಾಡುತಲಿ ಸಾಷ್ಟಾಂಗ ನತಿಗಳ ಜೋಡಿಸಿಹೆ ಶಿರ ಪಾದಪದ್ಮದಿ ಗಾಢಪ್ರೇಮದಿ ಸಲಹು ಭೂಮನೆ ಮೂಡಿಸುತನಿಜ ಭಕ್ತಿ ಜ್ಞಾನವ 2 ಎನ್ನ ಯೋಗ್ಯತೆ ನೋಡೆ ಫಲವಿಲ್ಲ ನಿನ್ನಕೃಪೆ ತೋರದಿರೆ ಗತಿಯಿಲ್ಲ ಅನ್ಯ ಹಾದಿಯು ಯಾವುದೆನಗಿಲ್ಲ ಘನ್ನಚಿತ್ತಕೆ ಬರಲು ತಡಿಯಿಲ್ಲ _ ಹೇನಲ್ಲ ಪೂರ್ಣಜ್ಞಾನಾನಂದ ಶಾಶ್ವತ ಪೂರ್ಣ ಚಿನ್ಮಯ ಪೂರ್ಣ ಮೂಲದಿ ಪೂರ್ಣ ನಂದದಿ ಪೂರ್ಣ ಅವಯವಿ ಪೂರ್ಣಶಕ್ತನೆ ಪೂರ್ಣಬೋಧ ಮುನೀಂದ್ರ ವಂದಿತ ಶರಧಿ ದೇವನೆ ಪೂರ್ಣನಿತ್ಯಾನಂದ ದಾಯಕ ಪೂರ್ಣಮಾಡೈ ಬಯಕೆ ತೂರ್ಣದಿ ನೀನೆ ಸರ್ವಾಧಾರ ಪ್ರೇರಕ ನೀನೆ ರಕ್ಷಕ ಸರ್ವಶಿಕ್ಷಕ ನೀನೆ ಸೀಮಾಶೂನ್ಯ ನಿಶ್ಚಯ ನೀನೆಪೊಗಳಿತನಿಖಿಳವೇದದಿ ನೀನೆ ವಾಚ್ಯನು ಸರ್ವಶಬ್ದದಿ ನೀನೆ ಮುಕ್ತಾಯಕ್ತ ಸೇವಿತ ನೀನೆ ದೋಷವಿದೂರ ಸ್ಥಾಣುವು ನೀನೆ ಸೃಷ್ಟಾ ದ್ಯಷ್ಟಕರ್ತೃವು ನಿನ್ನಸಮ ಉತ್ಕøಷ್ಟರಿಲ್ಲವು ನಿನ್ನ ದಾಸರು ಸರ್ವಜೀವರು ಭಿನ್ನರೈ ಸರ್ವತ್ರ ಸರ್ವರು ನಿನ್ನ ದಾಸರ ಭಾಗ್ಯಬೇಡುವೆ ಜನ್ಮಜನ್ಮಕು ಇದನೆ ಬಯಸುವೆ ನಿನ್ನ ನಂಬಿಹೆ ನಿನ್ನನಂಬಿಹೆ ಸಿರಿಪತಿ ಕೃಷ್ಣವಿಠಲನೇ 3
--------------
ಕೃಷ್ಣವಿಠಲದಾಸರು
ಪಾಹಿ ಕೃಷ್ಣ ಮಹಿಪತಿ ಮಧುರೆಗೆ ಪೋಗೋದೇನೊ ಕಾರಣ ಯದುಕುಲನಾಥ ಪಾಹಿ ಕೃಷ್ಣ ಮಹಿಪತಿ ಪ ಮಧುವೈರಿ ತಾ ಬ್ಯಾಗ ಮಧುರಾಪಟ್ಟಣದಾರಿ ಹಿಡಿದಿರೆ1 ದಧಿ ಮಥನವ ಮಾಡಿ ಕದವ ತೆಗೆದು ಕಂಡರು ಬ್ಯಾಗ 2 ಮಿಂಚಿನಂತ್ಹೊಳೆವೊ ವಿರಿಂಚನಯ್ಯನ ರಥ ಚಂಚಲಾಕ್ಷಿಯರು ನೋಡುತಲಾಗ 3 ಬನ್ನಿರೆ ಬನ್ನಿರೇ ಪನ್ನಂಗಶಯನನ ಬೆನ್ನ್ಹತ್ತಿ ನಾವು ಹೋಗುವೊಣೀಗ 4 ಫುಲ್ಲನಾಭನೆ ಮತ್ತೆಲ್ಲಿಗೆ ಪಯಣವೊ ಎಲ್ಲ ವಾರ್ತೆಗಳ್ಹೇಳೊ ನಮಮುಂದೆ 5 ನಂದಗೋಪನ ಬುದ್ಧಿ ಮಂದವಾಯಿತೇನೊ ವೃಂದಾವನವ ಬಿಟ್ಟು ಕಳಿಸುವ 6 ಕೂಸೆಂದು ನಿನ್ನ ಮುದ್ದಿಸುವೊ ಮೋಹಗಳೆಲ್ಲ ಬ್ಯಾಸರಿಕ್ಯಾಯ್ತೇನೆಶೋದೆಗೆ 7 ಸಾಧುಗೋವ್ಗಳನೆಲ್ಲ ಕಾದುಕೊಂಡಿರುವೋದು ಶ್ರೀಧರ ನೀದಾರಿಗ್ಹೇಳಿದ್ಯೊ 8 ವತ್ಸಕಾಯ್ದುದು ಮನಕಿಚ್ಛಿಲ್ಲದಿರಲು ಶ್ರೀ- ವತ್ಸಧರನೆ ಸುಮ್ಮನಿರೊ ನೀನು 9 ನಮ್ಮನೆಯಲಿ ಪಾಲ್ ಬೆಣ್ಣೆ ಕದ್ದನೆಂದು ನಿಮ್ಮಮ್ಮನಲ್ಲಿ ದೂರಿದೆವೇನೊ 10 ಕ್ಷೀರಗಡಿಗೆ ಒಡೆದೋಡಿ ಪೋದನೆಂದು ದೂರಿಕೊಂಡವರಲ್ಲೋ ನಿನ್ನನು 11 ಊರೊಳಗೊಬ್ಬಳು ದೂರಿಕೊಂಡರೆ ನಾವು ಭಾರಿ ಶಿಕ್ಷೆಯ ಮಾಡಿ ಬಂದೆವೊ 12 ಎಂದಾದರೊಂ(ದು) ದಿನ ಅಂದ ಮಾತುಗಳೆಲ್ಲ ಇಂದೆ ತಪ್ಪಿ ್ಹಡಿಯದೆ ಕ್ಷಮಿಸಯ್ಯ 13 ಕದವ ತೆಗೆಯದ ಮುಂಚೆ ಸದನದ್ವಾರದಿ ಬಂದು ಯದುನಾಥ ಎದುರೆ ನಿಂತಿರುವ್ಯಲ್ಲೊ 14 ಕಂಗಳಿಂದಲಿ ನೋಡ್ಯಾಲಿಂಗನೆ ಮಾಡುತ ಸಂಗಸುಖದಿ ಬೆಳೆದಿದ್ದೇವೊ 15 ನಿನ್ನ ನೋಡದ ಕಂಗಳಿನ್ನ್ಯಾತಕಿರಲು ಕೇ(ಗೇ?) ರೆಣ್ಣೆಯ ತೀಡಿಕೊಂಬುವೋಣೇನೊ 16 ಮಾರನಾಟಕೆ ಮನಸೋತು ನಿನ್ನನೆ ನಾವು ಜಾರಪುರುಷನೆಂದು ತಿಳಿಯದೆ 17 ಇರುಳೇಯೆ ಮನೆಯಲ್ಲಿ ಕೊಳಲೂದೋ ಕಾಲಕ್ಕೆ ನಳಿನಾಕ್ಷ ನಾವ್ಹ್ಯಾಗೆ ಬಂದೆವೊ 18 ಕಾಲಿಗಿಡುವ ವಸ್ತು ಕರದಲಿಟ್ಟುಕೊಂಡು ವಾಲೆ ಮೂಗುತಿ ಹೆರಳಿಗೆ ಚುಚ್ಚಿ 19 ಹರಡಿ ಕಂಕಣ ಪಾದದ್ಹರಡಿನ ಮ್ಯಾಲಿಟ್ಟು ಮುಡಿವ ಮಲ್ಲಿಗೆ ಕಿವಿಯಲಿ ಸುತ್ತಿ 20 ಹಾರ ಪದಕವ ಟೊಂಕಕೆ ಕಟ್ಟಿ ನಾವು ಉಟ್ಟ ಸೀರೆ ಕುಪ್ಪುಸ ಪಾರವಿ(ಪರಿವೆಯಿ?)ಲ್ಲದೆ 21 ಗಂಡಮಕ್ಕಳಿಗುಣಬಡಿಸಿ ಮಂಡಿಯ ಮ್ಯಾಲೆ ಸಂಡಿಗ್ಹುಳಿಯನ್ಹಾಕಿ ಬಂದೆವೊ 22 ಎಲೆಯ ಮ್ಯಾಲ್ಹಾಕೋ ಪದಾರ್ಥವೆಚ್ಚರವಿಲ್ಲ ತಲೆಯ ಮ್ಯಾಲ್ಹಾಕಿ ಬಂದೆವು ನೋಡೊ 23 ಬೆಣ್ಣೆ ಚೆಟ್ಟಿಗೆಯ ಬೆಕ್ಕಿನ ಮುಂದೆ ಸರಿಸೇವೊ ಸಣ್ಣ ಕೂಸಿನ ನೆಲವಿನೊಳಿಟ್ಟು 24 ಅಳುವೊ ಮಕ್ಕಳನೆ ಆಕಳ ಕಣ್ಣಿಗೆ ಕಟ್ಟಿ ಕರು- ಗಳ ತೊಟ್ಟಿಲೊಳಗೆ ಇಟ್ಟು 25 ಬಂಗಾರದ್ಹಾರ ಪದಕನ್ಹಾಕಿ 26 ಅಚ್ಛದಿಂದೆತ್ತಿ ಮುದ್ದಿಡುತಿರೆ ನಮ ಗಲ್ಲ ಕಿ- ತ್ತಿ ಚಿವರಿಕೊಂಡ್ಹೋಯಿತು 27 ಬಂಗಾರ ಕಳಕೊಂಡು ಮಂಗನಂತಾದೆವೊ ಮಂಗಳಾಂಗನೆ ಇಷ್ಟು ಮರುಳಾಗಿ 28 ವ್ಯತ್ಯಾಸದಿಂದ್ವಸ್ತ್ರ ಇಟ್ಟು ಬಂದೆವೊ ನಾವು ಬಿಟ್ಟೊ ್ಹೀದನೆಂಬೊ ಸಿಟ್ಟಿಲ್ಲವೊ 29 ಅಡಅಡವಿಲಿ ನಿನ್ನ ಹುಡುಕುತ ತಿರುಗೇವೊ ಕಡಲಶಯನ ಕರುಣದಿ ಬಂದ್ಯೊ 30 ರಾಸಕ್ರೀಡೆ ಜಲಕ್ರೀಡೆನಾಡಿದ ವಾರ್ತೆ ರಾ(ರಹ?)ಸ್ಯ ಒಬ್ಬರಿಗೆ ನಾವ್ ತಿಳಿಸದೆ31 ಅತ್ತೆಮಾವಂದಿರೀ ವರ್ತಮಾನವ ಕೇಳಿ ನೆತ್ತಿಮ್ಯಾಲ್ಹೊಡದ್ಹೊರಗ್ಹಾಕೋರೊ 32 ಪತಿಗಳು ನಮ್ಮನ್ನು ಬಿಟ್ಟರೂ ಬಿಡಲೊ ಶ್ರೀ- ಪತಿ ನಿನ್ನ ಬಿಟ್ಟು ಪೋಗುವರಲ್ಲ 33 ಮನೆ ಧನ ಧಾನ್ಯ ಮಕ್ಕಳು ಪತಿಗಳು ಬ್ಯಾ- ಡ ನಮಗೊಂದು ಸ್ಥಾನ ತೋರಿಸೊ ನೀನು 34 ಕುಸುಮ ಮಲ್ಲಿಗೆ ಒಣಗಿದ ದಾರ ಮತ್ಯಾವ ಕೆಲಸಕ್ಕೆ ಬರುವುದೊ 35 ಎಲ್ಲಿ ಬಿಲ್ಲ ್ಹಬ್ಬ ಮತ್ತೆಲ್ಲಿ ಸೋದರಮಾವ ಎಲ್ಲಿಂದ ಕರೆಯ ಬಂದನು ಈತ 36 ಕ್ರೂರನೆನ್ನದಲೆ ಅಕ್ರೂರನೆಂಬುವೋ ಹೆ- ಸರ್ಯಾರಿಟ್ಟರ್ಹೇಳೊ ಈ ಪುರುಷಗೆ 37 ನಮ್ಮ ನಿಮ್ಮನು ಅಗಲಿಸುವೋನು ನಮ್ಮಂಥ ಹೆ- ಣ್ಣು ಮಕ್ಕುಳು ಇವಗಿಲ್ಲವೆ 38 ಇಳಿಯಿಳಿ ಇಳೆಯಲ್ಲೀಳಿಗೆಯ ಕೊಟ್ಟೇವೊ ನಮ್ಮ ಕೊ- ರಳ ಕೊಯ್ದು ಮುಂದಕ್ಹೋಗೋ ನೀ 39 ವಾಸುದೇವನೆ ನಿನ್ನ ರಥದ ಗಾಲಿಗೆ ನಾವು ಹಾಸಿಕ್ಯಾಗಿ ಅಡ್ಡಬಿದ್ದೆವೊ 40 ಮಧುರಾಪಟ್ಟಣದಲ್ಲಿ ಇದ್ದ ಸತಿಯರೆಲ್ಲ ಮದನಮೋಹನ ನಿನ್ನ ಬಿಡುವೋರೆ 41
--------------
ಹರಪನಹಳ್ಳಿಭೀಮವ್ವ
ಬಂದು ಮಧುರೆಗೆ ತಾ ಕೊಂದು ಮಾತುಳನ ಬಂಧನ ರಹಿತವಾಗಲು ಮಾತಾಪಿತರು 1 ಜರೆಯಸುತನ ಬಾಧೆಯು ಘನವಾಗುತಿರಲು ಜಲದೊಳು ದ್ವಾರಕಾಪುರವ ನಿರ್ಮಿಸಿದ 2 ಯದುನಂದನ ತನ್ನಗ್ರಜ ಬಲರಾಮನ ಕೂಡ ಮುದದಿಂದಾವಾಸ ಯಾದವರ ಸಹಿತಾಗಿ3 ಇರುತಿರೆ ರುಕುಮ ತನ್ನನುಜೆ ಸಹಿತಾಗಿ ಚೆಲುವ ಸುಂದರಿಗೆ ಬ್ಯಾಗ್ವಿವಾಹದುತ್ಸವವು 4 ಅಕ್ಕರದನುಜೆ ರುಕ್ಮಿಣೀದೇವಿಗಿನ್ನು ಚಿಕ್ಕ ಚೆನ್ನಿಗನಾದ ತಕ್ಕ ವರನ್ಯಾರು 5 ವಸುಧೆಪಾಲರ ಮಧ್ಯ ಶಿಶುಪಾಲನೀಗಧಿಕ ಕುಸುಮಗಂಧಿನಿಗೆ ನಿಶ್ಚಯವ ಮಾಡಿದರು 6 ಅಗ್ರಜನ್ವಾಕ್ಯವ ಕೇಳಿ ಮನದಲ್ಯೋಚಿಸುತ ಘನಮಹಿಮಗೆ ಓಲೆ ಬರೆದಳು ಲಿಖಿತ 7 ಹರಿ ನೀನೆ ಮುರವೈರಿ ಸರುವಾಂತರಯಾಮಿ ನಿನ್ನ ಸ್ಮರಣೆ ದರುಶನ ಮಾತ್ರಕೆ ಪರಮಲಾಭೆನಗೆ 8 ಎಂದೆಂದಿಗೆನ ಕೂಡಾನಂದವ ಬಟ್ಟು ಇಂದೆ ಕೈಬಿಟ್ಟು ದೂರಿಂದ ನೋಡುವರೆ 9 ಪ್ರಾಣಪತಿ ನೀ ಪಾಣಿಗ್ರಾಣ (ಗ್ರಹಣ?) ಮಾಡದಲೆ ಇರೆ ಪ್ರಾಣ ಉಳಿಯದು ಕೇಳೆನ್ನಾಸೆ ಹುಸಿಯಲ್ಲ 10 ಸರ್ವರ್ವಂದಿತ ನಿನ್ನ ಅರಮನೆದ್ವಾರ ಕಾದಿರುವೋ ಭೃತ್ಯರಿಗೊಪ್ಪಿಸಿಕೊಡದೆ ಕರುಣಾಳು 11 ದೇಶಕಾಲಕೆ ನಾ ನಿನ್ನ ಸಮಳ್ವಾಸುದೇವ ಗುಣಕಸಮಳೆಂದು ಉದಾಸೀನ ಮಾಡಬ್ಯಾಡ 12 ವಕ್ಷಸ್ಥಳದ ವಾಸಿಯ ತುಚ್ಛಮಾಡದಲೆ ಲಕ್ಷೀಲೆ ಕರೆದೊಯ್ಯೊ ಪಕ್ಷಿವಾಹನನೆ 13 ಎನ್ನ ಬಿನ್ನಪ ಕೇಳಿ ಮನ್ನಿಸೊ ಕೃಷ್ಣ ಪನ್ನಂಗಶಯನ ನಿನ್ನ ಪಾದಕ್ಕೆರಗುವೆನು 14 ಪಾದ ಉರಗ ಮೆಟ್ಟಿದ ಪಾದ ನಿನ್ನ ಧ್ವಜವಜ್ರಾಂಕುಶ ಪಾದಕ್ಕೆರಗಿ ನಮಿಸುವೆನು 15 ಬರೆದ ಓಲೆಗೆ ಹಚ್ಚಿ ಅರೆದರಿಷಿಣವ ಕರವ ಜೋಡಿಸಿ ಕೊಟ್ಟು ಕಳುಹೆ ದ್ವಾರಕೆಗೆ16 ಜಗದೀಶಗೆ ಪತ್ರವ ಜಾಣೆ ತಾ ಬರೆದು ದ್ವಿಜನ ಕೈಯಲಿ ಕೊಟ್ಟು ಕಳುಹೆ ದ್ವಾರಕೆಗೆ 17 ವ್ಯಾಳ್ಯ ಮೀರುವುದೆಂದು ಎದ್ದಾಗ ರುಕುಮ ಭೇರಿ ತಾಡನ ಮಾಡಿಸೆ ಭೋರೆಂಬೊ ರಭಸ 18 ಎರೆದು ಮುಡಿಯನ್ಹಿಕ್ಕಿ ಜಡೆಯಬಂಗಾರ ಚೌರಿ ರಾಗಟೆ ಗೊಂಡ್ಯ ಧರೆಗೆ ಮುಟ್ಟುತಿರೆ 19 ಅಚ್ಚ ಜರತಾರಿ ಹೊಳೆವಷ್ಟಪತ್ರಿಕೆಯು ಮ್ಯಾಲೊಪ್ಪುವೊ ಪಟ್ಟೀನೊಡ್ಯಾಣ ಸರಿಸಿಟ್ಟು 20 ಕಂಕಣ ಚೂಡ್ಯ ದ್ವಾರ್ಯ ್ಹರಡಿ ಕೈಕಟ್ಟು ಮ್ಯಾ- ಕಂಚುಕ ತೊಟ್ಟು 21 ಹರಳು ಮಾಣಿಕ್ಯದ್ವಾಲೆ ಬುಗುಡಿ ಬಾವುಲಿಯು ಹೊಳೆವೊ ಮುತ್ತಿನ ಮೂಗುತಿ ಥಳಥಳಸುತಲಿ 22 ಹಾರ ಪದಕದ ಮಧ್ಯ ಮೇಲಾದೇಕಾವಳಿಯು ತೋರ ಮುತ್ತಿನ ದಂಡೆ ಲೋಲ್ಯಾಡುತಿರಲು 23 ಕನ್ನಡ್ಯಂದದಿ ಗಲ್ಲ ಕಳೆಯ ಸುರಿಸುತಲಿ ಸಣ್ಣಮುತ್ತಿನ ಗೊಂಚಲು ಸರಗಳಲೆಯುತಲಿ 24 ಝಗಝಗಿಸುತ ಬಂದಳು ಜಗದ ಮೋಹಿನಿಯು ಮುಗುಳು ನಗೆಯಿಂದ ಮೂರ್ಜಗವ ಮೋಹಿಸುತ 25 25 ಗೆಜ್ಜೆ ಸರಪಳಿ ಅಂದಿಗೆ ಹೆಜ್ಜೆಸರಿಸಿಡುತ ನಿರ್ಜರೇಶನ ಮಾರ್ಗದ ನಿರೀಕ್ಷಣದಿಂದ 26 ಸುತ್ತ ಮುತ್ತೈದೇರು ಕತ್ತಿಕೈ ಭಟರು ತುತ್ತೂರಿ ವಾದ್ಯ ಭೇರಿ ತಮ್ಮಟೆ ಕಾ(ಕಹ?) ಳೆ 27 ನಡೆದು ರುಕ್ಮಿಣಿ ಹೊಕ್ಕಳು ಗುಡಿಯ ಮಹಾದ್ವಾರ ಮೃಡನರಸಿಯ ಪೂಜಿಸಿ ದೃಢಭಕ್ತಿಯಲಾಗ 28 ಹಿರಿಯ ಮುತ್ತೈದೇರಿಗೆ ಮರದ ಬಾಗಿನವ ಅರೆದರಿಷಿಣ ಕುಂಕುಮ ಕರದಲ್ಲಿ ಗಂಧ 29 ಕಡಲೆ ಕಬ್ಬು ಕಾಯಿ ಉಡಿಯ ತುಂಬುತಲಿ ಕಡಲಶಯನನ ಮಾರ್ಗವ ಬಿಡದೆ ನೋಡುತಲಿ 30 ಮಂಗಳಗೌರಿಯೆದುರಿಗೆ ಮುತ್ತೈದೇರು ಅಂಗನೆ ಭೈಷ್ಮಿ ಪೀಠದಲಿ ಕುಳ್ಳಿರಿಸಿ 31 ಮಂಗಳಾಂಗನು ನಿನ್ನ ಪತಿಯಾಗಲೆಂದು ಮಂಗಳಸೂತ್ರ ಬಂಧನ ಮಾಡಲು ನಗುತ 32 ಮಾರನಯ್ಯನ ಮೋರೆ ನೋಡಿದಾಕ್ಷಣದಿ ಮಹಾ- ದ್ವಾರದಿ ಮುತ್ತು ಸೂರ್ಯಾಡೇನೀಕ್ಷಣದಿ 33 ಹರನ್ವಲ್ಲಭೆ ತೋರೆ ಮುರಹರನ ಕರಿವರನ ಭಯ- ಹರನ ಶ್ರೀಧರನ ಕೊಡುವೆನೀ ದೇವರನು 34 ಮಚ್ಛಲೋಚನೆ ಧ್ಯಾನ ಅಚ್ಚ್ಯುತನಲ್ಲೇ ಇಡೆ ಭಕ್ತ- ವತ್ಸಲ ಬಂದನೆಂದೆಚ್ಚರಿಸಿದರು35 ಹತವಾದ ಪ್ರಾಣ ಬರಲತಿ ಹರುಷವ್ಹ್ಯಾಗೋ ರಥವ ಕಾಣುತ ರುಕ್ಮಿಣಿ ಕೃತಕೃತ್ಯಳಾಗ 36 ಸೃಗಾಲದ ಮಧ್ಯ ಒಂದು ಸಿಂಹ ಹೊಕ್ಕಂತೆ ಶ್ರೀನಾಥ ರುಕ್ಮಿಣಿಯ ಸ್ವೀಕಾರ ಮಾಡಿದನು 37 ರಥವು ಮುಂದಕೆ ಸಾಗೆ ಪಥವು ತೋರದಲೆ ಅಲೆ ಬಾಯ ಬಿಡುತ ಶ್ರೀಪತಿಯ ಬೆನ್ನ ್ಹತ್ತಿ 38 ಬಂದ ರುಕುಮನ ಗಡ್ಡ ಮಂಡಿ ಸವರುತಲಿ ಬಂಧನ ರಥಕೆ ಮಾಡಿದ ನಂದಸುತನು 39 ವಾರೆನೋಟದಿ ನೋಡಿ ಮೋರೆ ತಗ್ಗಿಸಿದ ನಾರಿ ರುಕ್ಮಿಣಿಯ ಮುಖ ನೋಡಿ ಶ್ರೀಕೃಷ್ಣ 40 ಕರುಣವಿರಲಿಕ್ಕೆ ನೀ ಬರೆದ್ಯಾತಕೆ ಓಲೆ ತಿಳಿಯಲಿಲ್ಲವೆ ಎಂದೀಪರಿ ಹಾಸ್ಯದಿ ನುಡಿದ41 ಒಡಹುಟ್ಟಿದವನಲ್ಲಿ ಕಡು ಮೋಹವಿನ್ನೂ ಹಿಡಿಯದೆನ್ನೊಳು ಕೋಪ ಬಿಡುರುಕ್ಮಿಣಿ ಎಂದ 42 <ಈಔಓಖಿ ಜಿಚಿಛಿe='ಓuಜ
--------------
ಹರಪನಹಳ್ಳಿಭೀಮವ್ವ
ಬಯಸೋದು _ ಉತ್ತಮ ಸಂಗ - ಬಯಸೋದು ಪ ಬಯಸೂವುದುತ್ತಮ ಸಂಗ | ಭವಭಯ ಪರಿಹರಿಸೂವ ಸಂಗ | ಆಹಭಯ ದೂರಾಭಯಪ್ರದ | ದಯ ಪೂರ್ಣ ಹರಿಯ ಹೃ-ದಯ ವ್ಯಾಪ್ತವಾದಂಥ | ವಿಯದೊಳು ಕಾಂಬಂಧ ಅ.ಪ. ವಿಭವ | ಹೇತು ಇವರೆಂದು ಖ್ಯಾತಿಲಿ ಇರುವ | ಬೊಮ್ಮದಿವಿಜೇಡ್ಯ ವೈಕುಂಠನವ | ಮೃಗ್ಯನವರಿಂದನಾಗುತಲಿರುವ | ಆಹಅವನ ಪದ ಕಮಲದಿ | ಧೃವ ಚಿತ್ತ ಉಳ್ಳವರವರಿಗೆಂಬರು ವೈ | ಷ್ಣವಾಸ್ಯರೆಂದೆನುತಲಿ 1 ತಾಪ ಶಮನ | ಸೇವಿಪರ ಹೃದಯಾಂತಃಕರಣ | ಆಹದಿರುತ ತೋರಿಕೊಳ್ಳೆ | ತಾರೇಶನಂದದಿಪರಿತಾಪವಿನ್ನುಂಟಿ | ಮರಳಿ ಅಂಥವನಿಗೆ 2 ಶುದ್ಧಾಂತಃಕರಣರ ಭಕ್ತಿ | ಪಾಶಬದ್ದನಾಗಿಹ ಹರಿಮೂರ್ತಿ | ಇಂಥಶುದ್ಧರ ವಸ ಹರಿಕೀರ್ತಿ | ಇಂದದಗ್ದ ಪಾಪದ ಮೂಟೆ ಭರ್ತಿ | ಆಹಊಧ್ರ್ವ ಪುಂಡ್ರವು ಶಂಖ | ಮುದ್ರಾದಿ ಚಿನ್ಹಿತಶಬ್ದರಿವರು ಪ್ರ | ಸಿದ್ಧ ಭಾಗ್ವತರೆಂದು 3 ಕಾಮ ಕಾರ್ಮಾಅವಿದ್ಯದಿಂದ | ದೇಹಭೂಮಿಯೊಳುತ್ಪನ್ನದಿಂದ | ಜಾತಿಬ್ರಾಹ್ಮಣಾಹಂಭಾವದಿಂದ | ಶೂನ್ಯಶ್ರೀಮನೋಹರ ಜೀವರಿಂದ | ಆಹಸಾಮಸನ್ನುತ ಭಿನ್ನ | ನೇಮ ತಿಳಿದು ತಾರ-ತಮ್ಯವ ತಿಳಿದವ | ಪ್ರೇಮ ಭಕ್ತನವನು 4 ನೋವು ಸಂತೋಷಗಳೆಂಬ | ದ್ವಯಭಾವಗಳ್ಸಮತೇಲಿ ಉಂಬ | ಜ್ಞಾನಿದೇವ ದೇವಗೆ ಪ್ರಿಯನೆಂಬ | ಬುದ್ಧಿಲೋಪಿ ಅವರ ಭಜಿಸೆ ತುಂಬ | ಆಹಗೋವ ಪಾಲಕ ಗುರು | ಗೋವಿಂದ ವಿಠ್ಠಲಕಾವನು ಬೆಂಬಿಡದೆ | ಈ ವಿಧ ಭಕುತರ 5
--------------
ಗುರುಗೋವಿಂದವಿಠಲರು
ಭವ ಭಯಾದಿಗಳ ಮದ್ದು ನಮ್ಮ ಗುರು ತಂದರು ತಾವೆದ್ದು ಪ ಫಲವೇನು ನೀನಿದ್ದು ನಮ್ಮ ಜನ್ಮಗಳಿಲ್ಲಿಗೆ ರದ್ದು ಅ.ಪ ಸತ್ಯ ಮಾರ್ಗದೊಳನಾಡೋ ನಮ್ಮಾ ಪಿತ್ತದ ರೋಗೀಡಾಡೋ 1 ಮಾತ್ರೆಯ ಕೊಟ್ಟನು ವೈದ್ಯಾ ಸ ತ್ಪಾತ್ರರಿಗೆಯಿದು ಸಾಧ್ಯ ಗುರು ತುಲ ದೊರಕಿತು ಮನಸಿನ ಭಾಗ್ಯ 2
--------------
ಚನ್ನಪಟ್ಟಣದ ಅಹೋಬಲದಾಸರು
ಶ್ರೀ ಗಣಪತಿಯ ಪದಾಬ್ಜಕೆ ನಮಿಸಿರಾಗದಿಂದಲಿ ಶಾರದೆಯ ಸ್ಮರಿಸಿನಾಗಭೂಷಣ ಪದಾಬ್ಜಯುಗಕೆ ತಲೆವಾಗಿ ಬಾಲೆಯರಾಶೀರ್ವಾದದ ಪದಗಳರಾಗದಿ ಪಾಡಿ ಪೊಗಳುವೆ 1 ಸಾಲಿ ಸೀರೆಯನುಟ್ಟು ಸರಮುತ್ತ ಕಟ್ಟುಬಾಲಕಿಯರೊಳು ಕಟ್ಟಾಣಿ ನೀನಾಗುಮೇಲೆನೀ ಅಷ್ಟಪುತ್ರರನು ಪಡೆದು ಸುಖಿಬಾಳು ಸ್ತ್ರೀಯರಿಗೆಲ್ಲಾ ದೊರೆಯಾಗಿರುಶ್ರೀ ಮೈಲಾರಲಿಂಗನ ಕೃಪೆಯಿಂದಾ2 ಪಲ್ಲಕ್ಕಿಯ ಸಾನಂದದೊಳೇರುಹಲ್ಲಣಿಸಿದ ಕರಿತುರಗವನೇರುಎಲ್ಲಾಭರಣವನಿಟ್ಟು ಸುಖದಿ ಪ್ರಾಣದೊಲ್ಲಭಸಹಿತ ಸಂತೋಷದೊಳಿರು ಶ್ರೀಕೊಲ್ಲೂರ ಮೂಕಾಂಬೆಯ ಕೃಪೆಯಿಂದಾ 3 ಚಂದ್ರಕಸ್ತುರಿಯ ತಿಲಕಗಳನಿಟ್ಟುಚಂದದಿ ಕುಂಕುಮ ರೇಖೆಯನಿಟ್ಟುಇಂದೀವರನೇತ್ರಕೆ ಕಪ್ಪಿಟ್ಟು ಆಚಂದ್ರಾರ್ಕವು ಸುಖಬಾಳು ಶೃಂಗೇರಿಯಚಂದ್ರಮೌಳೀಶನ ಕೃಪೆಯಿಂದಾ4 ಅರಿಶಿನ ಚೂರ್ಣವನು ಲೇಪಿಸುತಪರಿಮಳಗಂಧವ ಪಸರಿಸಿಕೊಳುತಕರಿಯಮಣಿಯ ಮುತ್ತಿನ ಸರಗಳನಿಟ್ಟುಪರಮಸಂತೋಷದೊಳಿರು ಶ್ರೀ ಹಂಪೆಯವಿರೂಪಾಕ್ಷನ ಕೃಪೆಯಿಂದ 5 ಪರಿಮಳಿಸುವ ಪುಷ್ಪಸರಗಳ ಮುಡಿದುಗುರುಹಿರಿಯರ ಆಶೀರ್ವಾದವ ಪಡೆದುಹರುಷದಿ ಪುತ್ರಪೌತ್ರರ ಸಲಹುತ ಪತಿಚರಣಸೇವೆಯ ಮಾಡಿ ಸುಖಮಿರು ಕುಕ್ಕೆಯವರ ಸುಬ್ರಹ್ಮಣ್ಯನ ಕೃಪೆಯಿಂದ 6 ಸರಸ್ವತಿಯಂತೆ ವಿದ್ಯಾವಂತೆಯಾಗುಸಿರಿಯಂತೆ ಸೌಭಾಗ್ಯವಂತೆ ನೀನಾಗುಅರುಂಧತಿಯಂತೆ ಪತಿವ್ರತೆಯಾಗುತಪರಮಾನಂದದೊಳಿರು ಶ್ರೀ ಕೆಳದಿಯಪುರದ ರಾಮೇಶನ ಕೃಪೆಯಿಂದ 7
--------------
ಕೆಳದಿ ವೆಂಕಣ್ಣ ಕವಿ
ಸರ್ವತಂತ್ರ ಸ್ವತಂತ್ರ | ನಿರ್ವಿಕಾರನೆ ದೇವ ಅವ್ವ ಲಕುಮಿಗು ಪ್ರೇರಕ ಪ ದುರ್ವಿಭಾವ್ಯನೆ ಜಗಕೆ | ದರ್ವಿ ಜೀವನ ಕಾವಹವಣೆ ನಿನದಲ್ಲೇ ಸ್ವಾಮಿ ಅ.ಪ. ಕಾಯ ರಕ್ಷಿಸಿದೇ 1 ಕಾಯ ವೈರಿ ಪತಿ ನೀನೆ | ಜಾಯೆಯಿಂದೊಡಗೂಡಿಗೇಯ ಸಂಕರುಷಣನೆ | ಆಯತನ ಪೊರೆದೇ 2 ಸಾಯಮಭಿಧಾನದ | ಸವನ ಮೂರಲಿ ದಿವ್ಯಗಾಯಿತ್ರಿ ದ್ವಯ ಮಾತೃಕಾ |ಆಯತನದೊಳಗಿದ್ದು | ಆದಿತ್ಯ ದೇವಕಿಂಆಯುರ್ಹವಿಷವ ಗೊಳ್ಳುತಾ |ಜೀಯ ನೀ ಪೊರೆಯುತಿರೆ | ಧಾತು ಸಪ್ತಕ ತನುವಧಾರ್ಯವಾಗಿಹುದೊ | ದ್ಯುಮ್ನ |ಗೇಯ ಗುರು ಗೋವಿಂದ | ವಿಠಲನೆ ತವ ಪದಕೆಕಾಯ ಇದನರ್ಪಿಸುವ | ದೇಯ ಕೊಡು ಸತತ 3
--------------
ಗುರುಗೋವಿಂದವಿಠಲರು
ಸಾಕು ನರಹರಿ ಭವದ ಬವಣಿಂ ದ್ಯಾಕÉ ಬಳಲಿಸುವೆ ಹರಿ ಹರಿ ಶ್ರೀಕಮಲಾಪತಿ ಶರಣ ಜನರೊಳ- ಗ್ಹಾಕಿ ಪೊರೆಯೆನ್ನ್ಹರಿ ಹರಿ ಪ ದೊರೆಯೆ ನೀನಿರಲನ್ಯರಿಗೆ ಬಾಯಿ ತೆರೆಯಲ್ಯಾಕಿನ್ನ ್ಹರಿ ಹರಿ ಪರಮ ಆಪ್ತ ನೀನಿರಲು ಕಾಣದೆ ಪÀರರಿಗೆ ಆಲ್ಪರಿದ್ದರಿಹರಿ1 ಪುತ್ಥಳಿ ಮನೆಯಲೆ ಇರಲು ಹಿತ್ತಾಳೆ ಬಯಸುವೆನ್ಹರಿಹರಿ ಬಿಟ್ಟು ನಿನ್ನೀಗನ್ಯ ವಿಷಯದಿಂ ದ್ದುಟ್ಟುವುದೆ ಸುಖ ಹರಿಹರಿ 2 ಬೇಡಿದ್ವರಗಳ ಕೊಡುವೊ ಭೀ- ಮೇಶ ಕೃಷ್ಣ ನೀನಿರಲ್ಹರಿಹರಿ ನೋಡಿ ಸುಖಿಸದೆ ಬಿಟ್ಟು ಕನ್ನಡಿ ಗೋಡೆಗಡರುವೆನ್ಹರಿಹರಿ 3
--------------
ಹರಪನಹಳ್ಳಿಭೀಮವ್ವ
ಸಿದ್ಧಬಸವ ಪ್ರಸಿದ್ಧನ ಮಹಿಮೆಯ ಕೇಳಿರಿ ನೀವಿನ್ನು |ವಿದ್ಯಾ ಬುದ್ಧಿ ಧನ ಧಾನ್ಯವನು ಸಿದ್ಧಿಸುವವಿನ್ನೂ ಪ ಶಿವನ ಅಪ್ಪಣೆ ತೆಗೆದುಕೊಂಡು ಶಿವಕಂಚಿಯೊಳಗೆ |ಪಾವನ ಚರಿತ ಬ್ರಾಹ್ಮಣನಲ್ಲಿ ಪುಟ್ಟಿದನು ಬೇಗ ||ದಿವಸ ದಿವಸಕೆ ಬೆಳೆದನು ಬಿದಗಿ ಚಂದ್ರಮನ ಹಾಗೆ |ಜಾವ ಜಾವಕೆ ಶಿವನ ಧ್ಯಾನವ ಮಾಡುವ ಮನದೊಳಗೆ 1 ಮುಂಜಿ ಮಾಡಿಸಿಕೊಂಡನು ಸಿದ್ಧನು ಮದುವೆಯಾಗಲಿಲ್ಲ |ರಂಜಿಸುತಿಹನು ಸೂರ್ಯನಂತೆ ತೋರುವ ಜಗಕೆಲ್ಲ ||ಬಂಜೆ ಒಬ್ಬಳು ಇದ್ದಳು ಆಕೆಗೆ ಮಗನ ಕೊಟ್ಟನಲ್ಲ |ಸಂಜೆ ಹಗಲು ಕಾಣದ ಕುರುಡಗ ಕೊಟ್ಟನು ಕಣ್ಣುಗಳ 2 ತಂದೆ ತಾಯಿಗೆ ಹೇಳಿದನಾಗ ಪೋಗುವೆ ನಾನೆಂದು |ಕಂದ ನಮ್ಮನು ಬಿಟ್ಟು ಪೋಗುವದುಚಿತವೆ ನಿನಗೆಂದು ||ಅಂದ ತಾಯಿಗೆ ವಂದಿಸಿ ಹೇಳಿದ ಮಗನಾಗುವೆನೆಂದು |ಸಂದೇಹವು ಬೇಡೆಂದು ಪೇಳುತ ತೆರಳಿದ ದಯಾಸಿಂಧು 3 ಮಹಾಶಿವಾಲಯ ಕಂಡನು ಸಿದ್ಧನು ದೇಶ ತಿರುಗುತಲಿ |ಆ ಸೀಮೆಯಲಿ ಹಳ್ಳದ ನೀರು ನಿರ್ಮಲ ನೋಡುತಲಿ ||ಆಸನ ಹಾಕಿ ಕುಳಿತನು ಶಿವನ ಧ್ಯಾನವ ಮಾಡುತಲಿ |ಆ ಸಮಯದಿ ಬಂದನು ಕರಣಿಕ ಹೊಲಗಳ ನೋಡುತಲಿ 4 ಉದ್ದಂಡ ಸಂತತಿ ಆಗಲಿ ಇನ್ನು 5 ನಿನ್ನಯ ಪೂಜೆಯ ಮಾಡುವದ್ಹೇಗೆ ಹೇಳೋ ನಮಗೀಗ |ಮನ್ನಿಸಿ ಅವಗೆ ಪೇಳಿದ ಸಿದ್ಧ ಪುರುಷನು ತಾ ಬೇಗ ||ಸಣ್ಣ ಬಿಂದಿಗೆಯನಿಟ್ಟು ದ್ವಿಜರ ಪಾದೋದಕವೀಗ |ಸಂಖ್ಯೆಯಿಲ್ಲದ ಕೊಡಗಳ ಹಾಕಲು ತುಂಬದು ಎಂದೀಗೆ 6 ಅಂದಿಗೆ ಉಂಟು ಇಂದಿಗೆ ಇಲ್ಲ ಎನಲಾಗದು ನೀನು |ಸಂದೇಹವಿಲ್ಲ ಆಶ್ವೀನ ವದ್ಯ ದ್ವಿತೀಯದ ದಿನವು ||ಇಂದಿಗೆ ಕರಣಿಕ ವಂಶದವರು ಮಾಡುತಾರೆ ಇನ್ನೂ |ಮುಂದಕೆ ತೆರಳಿ ಕೊಳಕೂರಕೆ ಬಂದ ಸಿದ್ಧ ತಾನು 7 ಗಾಣಿಗರ ಮನೆಯೊಳಗಿದ್ದು ಗಾಣಾ ಹೂಡಿದನು |ಪ್ರಾಣ ತೊಲಗಿದ ಹೆಣ್ಣುಮಗಳಿಗೆ ಪ್ರಾಣವನಿತ್ತಾನು ||ಗೋಣಿಯೊಳಗೆ ಹೊಲಿದು ನದಿಯಲಿ ಪಾಚ್ಛಾ ಹಾಕಿದನು |ಕಾಣಿಸದಂತೆ ಬೇಗನೆ ಹೊರಗೆ ಹೊರಟು ಬಂದಾನು 8 ಹೆಸರು ನಿನ್ನದು ಏನು ಎಂದು ಪಾಚ್ಛಾ ಕೇಳಿದನು |ಹೆಸರು ನನಗೆ ಬಸವನೆಂದು ಕರೆತಾರೆ ಇನ್ನು ||ಪಶು ನೀನಾದರೆ ಸೊಪ್ಪಿಯ ಬೇಗ ತಿನಬಾ ಎಂದನು |ನಸು ನಗುತಲಿ ಸೊಪ್ಪಿಯ ತಿಂದು ಡುರಕಿ ಹೊಡೆದಾನು 9 ಗೊಂಬಿಗೆ ವಸ್ತಾ ಸೀರೆಯನುಡಿಸಿ ಸಿಂಗಾರ ಮಾಡಿದನು |ರಂಭೆಗೆ ಸರಿ ಈ ಹೆಣ್ಣು ಮಗಳಿಗೆ ಮದುವ್ಯಾಗೋ ನೀನು ||ಅಂಬುಜ ಮುಖಿ ಬಾರೆಂದು ಕರೆದನು ಸಿದ್ಧ ಮುನೀಶ್ವರನು |ತುಂಬಿದ ಬಸುರೊಳು ಮಗನ ಪಡೆದಳು ವಂಶಾದೆ ಇನ್ನು 10|| ನೇಮವ ಮಾಡಿ ಕೊಳಕೂರದಿ ಇರುವೆನು ನಾನೆನುತ |ಈ ಮಹಿಮೆಯೊಳಗೆ ಭೀಮಾ ದಕ್ಷಿಣವಾಹಿನಿ ಮಹಾಕ್ಷೇತ್ರ ||ಗ್ರಾಮಸ್ಥರನು ಕರೆದು ಹೇಳಿದನು ಅಡಗುವೆ ನಾನೆನುತ |ನೀವು ಮಾತ್ರ ನಾವಿದ್ದ ಸ್ಥಳವನು ನೋಡಬೇಡೆನುತ 11 ಕಲಿಕಾಲವನು ಕಂಡು ಸಿದ್ಧನು ಅದೃಶ್ಯನಾದನು |ತಿಳಿದು ಭಕ್ತಿ ಮಾಡಿದವರಿಗೆ ವರಗಳ ಕೊಡುತಿಹನು ||ಸುಳಿವನು ಕಣ್ಣಿಗೆ ಸತ್ಪುರುಷರಿಗೆ ಸಿದ್ಧ ಬಸವ ತಾನು |ಹಲವು ಹಂಬಲ ಮಾಡಲು ಬೇಡರಿ ಇರುವೆ ನಾನಿನ್ನೂ 12 ಹನ್ನೆರಡು ನುಡಿ ಸಿದ್ಧನ ಸ್ತೋತ್ರವ ಕೇಳಿದವರಿಗೆ |ಮುನ್ನ ಮಾಡಿದ ಪಾಪವು ನಾಶಾಗಿ ಹೋಗುವದು ಬೇಗ ||ಧನ್ಯನಾಗುವ ಕೀರ್ತಿ ಪಡೆಯುವ ಲೋಕದ ಒಳಗ |ಚನ್ನಾಗಿ ಶ್ರೀಪತಿ ಗುರುವಿಠ್ಠಲನು ಒಲಿವನು ತಾ ಬೇಗ 13
--------------
ಶ್ರೀಪತಿ
ಸಿಂಧು ಶಯನ ಬಾರೆಲೋ - ಮಂದರೋದ್ಧಾರೀಇಂದಿರೆಯರಸ ಮುಕುಂದನೇ ಪ ಮಾಧವ ಹೇ ದಯಾಂಬುಧೆ - ವಂದಿಸುವೆ ತ್ವತ್ಪಾದ ದ್ವಂದ್ವಕೇ ಅ.ಪ. ಹೃದಯ ಮಧ್ಯದಿ ಮಂಟಪಾ - ಬುಧ ಜನ ವಂದ್ಯಸಿದ್ಧವಾಗಿಹುವು - ಮಾಧವಾ |ಸಿದ್ಧ ಸಾಧನ ಪವನ - ಉದಾನಾದಿಗಳೆಲ್ಲಹೆದ್ವಾರಗಳ ಕಾದಿಹರೋ ||ಮಧು ವಿರೋಧಿಯೆ ನಿನ್ನ ಪದ - ಸದ್ವನಜ ಕೀರುತಿ ಸುಧೆಯ ಸವಿಯುವಮುದವ ಕರುಣಿಸು ಶ್ರೀದ ನರಹರಿ - ಹೃದಯ ಸದನಕೆ ವದಗಿ ಬೇಗ 1 ಚಿತ್ತ ಸಿಂಹಾಸನವೂ - ಚಿತ್ತ ಜನಯ್ಯಾಸ್ತೋತ್ರ ರತುನ ಖಚಿತವೂ ||ಉತ್ತಮ ಮತಿ ಸುದತೇರೂ - ಛತ್ರಿ ಚಾಮರಗಳಎತ್ತಿ ಬೀಸುತಲಿಹರೋ ||ಕೃತ್ತಿವಾಸನ ಸಖನೆ ಪರಮ ಸು - ಹೃತ್ತಮೋತ್ತಮ ಚಿತ್ಸುಖ ಪ್ರದಚಿತ್ತವಿಸು ಚಿತ್ತಾಖ್ಯ ಪೀಠಕೆ - ಸತ್ಯಕಾಮ ಶರಣ್ಯ ಶಾಶ್ವತ 2 ಭವ ಪಿತ ತೋಯ ಜಾಕ್ಷನೆ -ದಾಯ ನಿನ್ನದು ಎನ್ನ ಗತಿಗೇ ಪ್ರೇರ್ಯ ಪ್ರೇರಕ ಶ್ರೀಗುರು - ಗೋವಿಂದ ವಿಠಲನೆ ಕಾಯೊ ಬೇಗ 3
--------------
ಗುರುಗೋವಿಂದವಿಠಲರು
ಹಯವದನಾ ಪಾಲಿಸೋ | ಹಯ ದೈತ್ಯ ನಿಧನಾ ಪ ಭಯಕೃತು ಭಯಹರ | ದಯದೃಶ ತೋರಯ್ಯ ಅ.ಪ. ಅಜ ಜನಕನೆ ಹರಿ | ದ್ವಿಜವರ ವಂದ್ಯನೆನಿಜಪದ ಹೃದಯಾಂ | ಬುಜದಲಿ ತೋರುತ1 ಕರ ಆದರದಲಿ ಪಿಡಿ | ದಾದರಿಸಿದನೇ 2 ಅರಿದರ ವರ ಗ್ರಂಥ ಜಪಸರ ಧರವರ ಉರಗಾತಪ | ಧರಿಸಿಹೆ ಶಿರಿಯನು 3 ಕೌಸ್ತುಭ ಕರ ಪಾದ | ಶತ ಪತ್ರ ನೇತ್ರಾ 4 ಭಾವಕೆ ಒಲಿವನೆ | ಭಾವದೊಳಗೆ ನಿಲ್ಲುಗೋವಿದಾಂಪತಿ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಹರನಕುಮಾರನ ಚರಣಕಮಲಗಳಿಗೆರಗಿ ಶಾರದೆಗೆ ವಂದಿಸುತ ಶರಧಿಶಯನಗೆ ಸೆರಗೊಡ್ಡಿ ಬೇಡಿಕೊಂಬೆ ಶರಧಿಸುತÉಯ ಕತೆಗ್ವರವ 1 ಸಾಕ್ಷಾತ ಶ್ರೀಹರಿ ವಕ್ಷಸ್ಥಳ ವಾಸಿಯೆ ಇಕ್ಷುಚಾಪದವನ ಪಡೆದ ಮೋಕ್ಷದಾಯಕಳೆ ಮಾಲಕ್ಷುಮಿ ಕರುಣಾಕ- ಟಾಕ್ಷದಿ ನೋಡಬೇಕೆನ್ನ 2 ಶ್ರಾವಣಮಾಸದಿ ಮೊದಲ ಶುಕ್ಕುರುವಾರ ಮಾ- ಧವನರಸಿ ಮಾಲಕ್ಷ್ಮಿ- ದೇವೇರ ಮಹಿಮೆ ಕೊಂಡಾಡುವೋದೀ ಕಥÉ ಕಿವಿಗೊಟ್ಟು ಕೇಳೋದು ಜನರು 3 ಬಡವ ಬ್ರಾಹ್ಮಣನೊಂದು ಪಟ್ಟಣದೊಳಗಿದ್ದ ಮಡದಿ ಮಕ್ಕಳ ಸಹಿತಾಗಿ ಹಿಡಿದು ತಂಬೂರಿ ತಂಬಿಗೆಯ ಗೋಪಾಳಕ್ಕೆ ಬಿಡದೊಂದು ಮನೆಯ ತಿರುಗುತಲಿ 4 ಸೊಸೆಯರು ನಾಲ್ಕು ಮಂದಿಯು ಗಂಡುಮಕ್ಕಳು ಹಸುಗೂಸುಗಳು ಮನೆತುಂಬ ಅಶನ ವಸನವಿಲ್ಲ ಹಸಿದ ಮಕ್ಕಳಿಗ್ಹಾಲು ಮೊಸರು ಅನ್ನವು ಮೊದಲಿಲ್ಲ5 ಅತಿಗುಣವಂತರು ಗತಿಯಿಲ್ಲ ಗ್ರಾಸಕ್ಕೆ ಮಿತಭೋಜನವ ಮಾಡುವರು ವ್ರತ ನೇಮ ನಿಷ್ಠೆ ನಿರುತ ದರಿದ್ರವನು ಶ್ರೀಪತಿ- ಸತಿ ದಯದಿ ನೋಡಿದಳು 6 ಒಂದು ದಿನದಿ ಬಂದ ಮಂದಿ ಮಂದಿರದಲ್ಲಿ ಚೆಂದಾದ ಸುಣ್ಣ ಸಾರಣೆಯು ರಂಗವಲ್ಲಿ ಚಿತ್ರ ಬಣ್ಣಕಾರಣೆ ಮಣಿ- ಮುಂದೆ ತೋರಣ ಕಟ್ಟುತಿರಲು 7 ಮನೆಮನೆಯಲ್ಲಿ ಮಾಲಕ್ಷ್ಮಿದೇವಿಯರ ಚಟ್ಟಿಗೆ ಬರೆವು- ದನು ತಾ ಕಂಡು ಇದು ಏನು ನೋವಿ (ನೋಂಪಿ?) ಎನಗೆ ಹೇಳಬೇಕೆಂದು ಘನ ಭಕ್ತಿಯಿಂದ ಕÉೀಳಿದನು 8 ಕ್ಷೀರಸಾಗರದಲ್ಲಿ ಹುಟ್ಟಿದ ಮಾಲಕ್ಷ್ಮಿದೇವಿ ದೇವರ ಪಟ್ಟದರಸಿ ಶ್ರಾವಣಮಾಸ ಸಂಪತ್ತು ಶುಕ್ಕುರುವಾರ ನಾವು ಪೂಜೆಯ ಮಾಡಬೇಕು9 ಎನಗೊಂದು ಚಟ್ಟಿಗೆ ಬರೆದುಕೊಟ್ಟರೆ ಎನ್ನ ಮನೆಯಲ್ಲಿ ಇಟ್ಟು ಪೂಜೆಪೆನು ವಿನಯದಿಂದ್ಹೇಳಿಕೊಂಡರೆ ಒಂದು ಚಟ್ಟಿಗೆ ಬರೆದÀುಕೊಟ್ಟರು ಬಲಗೈಲಿ 10 ಸಿರಿದೇವಿಚಟ್ಟಿಗೆ ಹಿಡಿದು ಗೋಪಾಳಕ್ಕೆ ಹೋದನು ಮನೆ ಮನೆಯಲ್ಲಿ ಗೂಡೆ ಅಕ್ಕಿ ಬ್ಯಾಳೆ ಬೆಲ್ಲತುಪ್ಪವ ತಂದು ನೀಡೋರು ಹಿಡಿ ಹಿಡಿರೆಂದು 11 ಕುಸುಮ ಮಲ್ಲಿಗೆ ಪತ್ರಫಲಗಳು ಪೂಜಾ ಸಾಧನ ಪದಾರ್ಥಗಳು ಆದಿಲಕ್ಷ್ಮಿದಯ ಆದಕಾರಣದಿಂದ ಆದರದಿಂದ ಕೊಡುವರು 12 ತಂದ ಪದಾರ್ಥ ತನ್ನ್ಹೆಂಡತಿ ಕರೆದು ಮುಂದಿಟ್ಟು ವಾರ್ತೆಗಳ ಹೇಳಿದನು ಇಂದು ಪೂಜೆಯ ಮಾಡು ಆ- ನಂದವ ಕೊಡುವಳು ನಮಗೆ13 ಕಬ್ಬು ಬಿಲ್ಲ್ಹಿಡಿವೋ ಕಾಮನ ಮಾತೆ ಮಾಲಕ್ಷ್ಮಿ ಉರ್ವಿಯೊಳುತ್ತಮಳೀಕೆ ಹಬ್ಬದೂಟಕÉ ಹೇಳಿ ಬಂದೆ ಬ್ರಾಹ್ಮಣಗÉ ಮ- ತ್ತೊಬ್ಬ ಮುತ್ತೈದೆಗ್ಹೇಳೆಂದ14 ಚಿಕ್ಕಸೊಸೆ ಎಣ್ಣೆ ಕುಂಕುಮ ಕೈಯಲ್ಲಿ ತಕ್ಕೊಂಡು ನಡೆದಳ್ಹಾದಿಯಲಿ ಚೊಕ್ಕ ಚಿನ್ನದ ಗೊಂಬೆಯಂಥ ಮುತ್ತೈದೆ ತಾ ಗಕ್ಕನೆ ಬಂದು ಕೇಳಿದಳು 15 ಹುಡುಗಿ ನೀ ಎತ್ತ ಪೋಗುವಿಯೆ ನಿಮ್ಮನೆಯೆಲ್ಲೆ ಅಡಿಗೆಯೇನೇನು ಮಾಡುವರು ಹಿಡಿದೆಣ್ಣೆ ಕುಂಕುಮ ಕೊಡುವೋದಿನ್ನ್ಯಾರಿಗೆ ಕೊಡಬಾರದೇನೆ ನೀಯೆನಗೆ 16 ದಾರಾದರೇನಮ್ಮ ದಾರಿ ನೋಡದ ಮುಂಚೆ ನೀನೇ ಬಾ ನಮ್ಮ ಮಂದಿರಕÉ ಹೇಳಿ ಮುತ್ತೈದೆಗೆ ಹಿಗ್ಗಿಲೆ ಬಂದತ್ತೆ ಮಾವನ ಮುಂದರುಹಿದಳು 17 ಮನೆಯ ಸಾರಿಸಿ ಸುಣ್ಣ ಕಾರಣೆ ರಂಗೋಲಿಯ ಬರೆದು ಬಾಗಿಲಿಗೆ ಬಣ್ಣವನು ಎರೆದು ಕೊಂಡೆಲ್ಲರು ಬ್ಯಾಗ 18 ಕಮಲ ಕ್ಯಾದಿಗೆ ಕಬ್ಬು ಕದÀಳಿ ಕಂಬವು ಬಾಳೆಗೊನೆ ಕಟ್ಟಿ ಚಿತ್ರ ಮಂಟಪವ ನಡುವ್ಯ್ಹಾಕಿ ಪದ್ಮ ಪೀಠಗಳ 19 ಚಟ್ಟಿಗೆಯೊಳಗಕ್ಕಿ ಐದು ಫಲವ ತುಂಬಿ ಮುತ್ತೈದೇರೆಲ್ಲ ನೆರೆದು ಕಟ್ಟಿದರ್ ಕೊರಳ ಮಾಂಗಲ್ಯ ಮಾಲಕ್ಷ್ಮಿ ಪ್ರತಿಷ್ಠೆ ಮಾಡಿದರು ಸಂಭ್ರಮದಿ 20 ಅರಿಷಿಣ ಕುಂಕುಮ ಗಂಧ ಬುಕ್ಕಿ ್ಹಟ್ಟು ಗೆಜ್ಜೆ- ವಸ್ತ್ರವು ಪಾರಿಜಾತ ಸಂಪಿಗೆಯು ಮುಡಿಸಿ ಮಲ್ಲಿಗೆದಂಡೆ ಒಡೆಸೆ ತೆಂಗಿನಕಾಯಿ ಉಡಿ ತುಂಬುತ್ತತ್ತಿ ಫಲಗಳು 21 ಭಕ್ಷ್ಯಶಾವಿಗೆ ಪರಮಾನ್ನ ಚಿತ್ರಾನ್ನ ಸಣ್ಣಕ್ಕಿ ಶಾಲ್ಯಾನ್ನ ಸೂಪಗಳು ಚಕ್ಕುಲಿ ಗಿಲಗಂಜಿ ಚೆಂದ ಚಿರೋಟಿ ಹಪ್ಪಳ ಸಂಡಿಗೆ ಆಂಬೊಡೆಗಳು22 ಘೃತ ಕ್ಷೀರ ಸಕಲ ಪಕ್ವಾನ್ನ ಮಂಡಿಗೆ ಬೀಸೋರಿಗೆ ಗುಳ್ಳೋರಿಗೆಯು ಚಂದ್ರನಂತ್ಹೊಳೆವೊ ಶಾವಿಗೆಯ ಫೇಣಿಯು ದಿವ್ಯ ಬುಂದ್ಯ ಬುರುಬುರಿ ಅನಾರಸವು23 ಬೇಕಾದ ಬೇಸನ್ನು ಬಿಳಿಯದಳಿಯದುಂಡೆ (?) ಮೋತಿಚೂರು ಚೂರ್ಮಲಾಡು
--------------
ಹರಪನಹಳ್ಳಿಭೀಮವ್ವ
ಹರಿಯೆ ನಿನ್ನ ಭಜಿಸುವಂಥ | ಶರಣ ಸಂಗವಾನಿರುತ ಇತ್ತು ಕಾಯೊಯೆನ್ನ | ಅಘವ ಕಳೆಯುವ ಪ ಮೇರುಗಿರಿಯ ಪೋಲ್ವದುರಿತ | ರಾಶಿ ನಿಚಯವಾಸಾರಿ ತೂಲರಾಶಿಗನಳ | ಪರಿಯ ಮಾಡುವಾ |ಸೂರಿ ಜನ ಸಂಗ ಫಲವ | ಪೇಳಲಳವಾತೋರಿ ಪೊರೆ ಅಂಥವರ | ದೇವರ ದೇವಾ 1 ನಿನ್ನ ಸಂಕಲ್ಪಾನುಸಾರ | ನಡೆವ ಭಕ್ತರಮನ್ನುಜರು ಅವರೆಂದು | ತಿಳಿವ ಕುಜನರಇನ್ನ ತನಯ ಶಿಕ್ಷಿಸುವ | ಬಿಡದಲವರಬೆನ್ನು ಹುರಿಯ ಕೀಳಿಸುವ | ಮನ್ಯುಲವರ 2 ಕಾಲ ಕಳೆವಾರೋ 3 ಸತಿಸುತಿರೊಡನೆಯಿದ್ದು | ಮಮತೆ ದೂರರೋಹಿತವು ಅಹಿತವೆರಡು ಸಹಿಸಿ | ನಿನ್ನಿಂದೆಂಬೋರೋ |ಕ್ಷಿತಿಯೊಳುಳ್ಳ ತೀರ್ಥಕ್ಷೇತ್ರ | ಪಾವಿಸುವರೋಗತಿಯು ನೀನೆ ಸತತ ಎಂದು | ಅನ್ಯ ಬಗೆಯಾರೋ 4 ದರ್ವಿಯಂತೆ ಜೀವನೆಂದು | ಅರಿತು ಅನುದಿನದುರ್ವಿಭಾವ್ಯ ವ್ಯಕ್ತಾಅವ್ಯಕ್ತ | ಅನಂತಗುಣಶರ್ವ ವಂದ್ಯನಾದ ಗುರು | ಗೋವಿಂದ ವಿಠಲನಸರ್ವಕಾಲ ತುತಿಸುತ್ತ | ತಿಳಿವರಾಧೀನ 5
--------------
ಗುರುಗೋವಿಂದವಿಠಲರು