ಒಟ್ಟು 115 ಕಡೆಗಳಲ್ಲಿ , 40 ದಾಸರು , 104 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣಾಸಾಗರ ದೀನೋದ್ಧಾರಣ ಎನ್ನನು ಕಾಯ್ವ ಪರಿಯ ಚಿಂತಿಸಿ ರಕ್ಷಿಸೊ ಪರಮ ಪಾವನ ನಾಮಸ್ಮರಣೆಯಲ್ಲದೆ ಕರ್ಮ ಚರಣರಹಿತ ಪಾಪಕರನಾಬ್ಧಿಪತಿತನ ಪ. ವರ್ಣಾಶ್ರಮಾಚಾರ ಕರ್ಮಕೃತ್ಯವ ನೀಗಿ ನಿರ್ಮಲಚಿತ್ತದಿ ನಿನ್ನ ಪೂಜಿಸದೆ ವರ್ಮವಿಡಿದು ವರ ದ್ರೋಹ ಚಿಂತೆಗಳಿಂದ ಧರ್ಮಮಾರ್ಗವ ದೂರದಲಿ ತ್ಯಜಿಸಿ ನಿರ್ಮಲಾಂತ:ಕರಣ ನಿಜಕುಲ ಧರ್ಮರತ ಸಜ್ಜನರ ದೂಷಿಸಿ ದುರ್ಮದಾಂಧರ ಸೇರಿ ಕೂಪದ ಕೂರ್ಮನಂದದಿ ಬರಿದೆ ಗರ್ವಿಪೆ 1 ನೇತ್ರ ದರ್ಶನಕೆ ಸಂಸ್ಮರಕೆ ಜಿಹ್ವೆಯ ಗಾತ್ರ ಸೇವೆಗೆ ನೈರ್ಮಲ್ಯಕೆ ಶಿರವ ಶ್ರೋತ್ರವ ಮಾಹಾತ್ಮ ಶ್ರವಣಕೆ ಪಾದಗಳ ಕ್ಷೇತ್ರಯಾತ್ರೆಗೆ ಕರಗಳ ಪೂಜಾವಿಧಿಗೆ ಇತ್ತ ದೊರೆಯನು ಮರೆತು ಇಂದ್ರಿಯ ವೃತ್ತಿಗಳ ಸ್ವೈರಿಣಿಯ ದರುಶನ ಭುಕ್ತಿ ಚುಂಬನ ಧ್ಯಾನ ದುಷ್ಟ ಕಥಾ ಶ್ರವಣಸಲ್ಲಾಪಕಿತ್ತೆನು 2 ಪತಿತ ಪಾವನ ನೀನು ಪತಿತಾಗ್ರೇಸರ ನಾನು ಅತಿಶಯಿತನು ನೀನು ಅತಿನೀಚನು ನಾನು ಗತಿಹೀನ ಜನಕ ಸದ್ಗತಿಯೆಂಬ ಬಿರುದುಳ್ಳ ಮಿತಚಿತ್ರ ಚರಿತಾತ್ಯದ್ಘುತರೂಪ ಗುಣಪೂರ್ಣ ಪಶುಪತಿ ಸುರೇಶ ಪ್ರ- ಭೃತಿ ದಿವಿಜಗಣ ಸುತ ಪದಾಂಬುಜ ಕ್ಷಿತಿಜಲಾಗ್ನಿ ಮರುನ್ನಭೋಹಂ ಕೃತಿ ಮಹ ಸುಖತತಿನಿಯಮಕ 3 ಕರಿರಾಜ ಧ್ರುವಾಕ್ರೂರನರ ವಿಭೀಷಣ ನಾರದರು ಮೊದಲಾಗಿ ನಿನ್ನನುದಿನವು ಸ್ಮರಿಸಿ ಪೂಜಿಸಿ ಮನವೊಲಿಸಿದವರನ್ನು ಪರಿಪಾಲಿಸಿದನೆಂಬೊ ಗರುವದಿಂದ ನಿರುಪಮಾನಂದೈಕ ಸದ್ಗುಣ ಭರಿತರೆಂಬುದ ಹೆಮ್ಮೆಯಿಂದಲಿ ಮರೆತರೆನ್ನನು ಪರಮಕರುಣಾ ಶರಧಿಯೆಂದ್ಹೆಸರಿರುವುದೇತಕೆ 4 ನಾ ನಿನ್ನ ಮರೆತರು ನೀ ಎನ್ನ ಮರೆದರೆ ಹಾನಿಯಾಗದೆ ನಿನ್ನ ಭಕ್ತ ವತ್ಸಲಕೆ ದಾನವಾಂತಕ ಅಕಿಂಚನಾರೆ ಎಂಬ ಪ್ರಮಾಣ ಉನ್ನತ ವಚನವಾಗದೆ ಮಾನನಿಧಿ ಪವಮಾನ ತತ್ವಮತ ಮಾನಿಜನ ಸಂಸ್ತುತ ಪದಾಂಬುಜ ಶ್ರೀನಿವಾಸ ಕೃಪಾನಿಧೆ ಕಮಲಾ ನಿಲಯ ವೆಂಕಟನಿಜಾಲಯ 5 ವೇದವನು ತಂದು ಭೂಧರನ ಬೆನ್ನಲಿ ನೆಗಹಿ ಈ ಧರೆಯ ಸಲಹೆ ಪ್ರಹ್ಲಾದನನು ಕಾಯ್ದೆ ಮೇದಿನಿಯನಳೆದಿ ಕಾರ್ತದಶಾಸ್ಯ ಕಂ ಸಾದಿಗಳ ತರಿದ ಬೌದ್ಧಾದಿ ಕಲ್ಕಿ ಧಾರಣನೆ ಪತಿತ ಪಾವನನೆಂಬ ಪರಮ ಬಿರುದನು ವಹಿಸಿ ಜತನ ಮಾಡುವಿ ಭಕ್ತತತಿಗಳನು ಬಿಡದೆ ಪತಿತ ಶೇಖರನನ್ಯಗತಿಯಾಗಿರುವ ಎನಗೆ ಗತಿಯ ಪಾಲಿಸು ರಮಾಪತಿಯೆನ್ನುಪೇಕ್ಷಿಸದೆ 6 ನಾರದಕ್ರೂರ ನರ ಹೈರಣ್ಯಕಾದಿಗಳು ಪಾದ ನೀರರುಹಗಳನು ಘೋರತರ ಸಂಸಾರಪಾರವಾರವ ದಾಟಿ ಧೀರರೆನಿಸಿದರೆಲ್ಲಪಾರಸನ್ಮಹಿಮ ತರಣಿ ಉದಿಸಿದ ಮೇಲೆ ತಿಮಿರದೊಂದಿರವ್ಯಾಕೆ ಗರಳ ಭಯವ್ಯಾಕೆ ಸಿರಿಸಹಿತ ಶೇಷಾದ್ರಿ ವರ ನಿನ್ನಪಾದ ಸಂ- ದರುಶನವು ದೊರೆತಮ್ಯಾಲರಿಬಾಧೆಯಾಕೆ ಎನಗೆ 7
--------------
ತುಪಾಕಿ ವೆಂಕಟರಮಣಾಚಾರ್ಯ
ಕರುಣಿಸಿ ಕೇಳು ಕಂದನ ಮಾತಗರುಡವಾಹನನೆ ಗಂಗೆಯ ಪೆತ್ತ ಹರಿಯೆಪ. ಇತ್ತ ಬಾರೆಂಬುವರಿಲ್ಲ ಇರವ ಕೇಳುವರಿಲ್ಲಹತ್ತಿಲಿ ಕುಳ್ಳಿರು ಎಂಬ ದಾತರಿಲ್ಲತತ್ತರಗೊಳ್ಳುತಲಿದೆ ತಾವರೆಯೆಲೆಯೊಳನೀರಿನಂತೆಹತ್ತು ನೂರಾರು ನಾಮವುಳ್ಳ ಶ್ರೀಹರಿಯ ನೀ ಕೇಳೊ1 ಇಂದು ಬಂಧನವಿಲ್ಲ ಇದ್ದವ ಕೇಳುವುದಿಲ್ಲಒಂದು ಸುತ್ತಿಗೆ ಬಟ್ಟೆಯಾದರೂ ಇಲ್ಲ ಈಬೆಂದೊಡಲಿಗೆ ಒಬ್ಬ ಅಯ್ಯೋ ಎಂಬುವನಿಲ್ಲಬಿಂದು ಮಾತ್ರದಲ್ಲಿ ಸುಖವ ಕಾಣೆ ಹರಿಯೆ 2 ಎಲ್ಲಿಯೂ ಧಾರಣೆಗೊಂದು(?)ನೆರಳನು ಕಾಣೆ[ಅಲ್ಲವÀÀತಿಂದಿಲಿಯಂತೆ]ಬಳಲುತಿದ್ದೆಫುಲ್ಲಲೋಚನ ಪೂರ್ಣ ಹಯವದನ[ಸಲ್ಲುವ]ನಾಣ್ಯವ ಮಾಡಿ ಸಲಹೋ ಎನ್ನ ಹರಿಯೆ 3
--------------
ವಾದಿರಾಜ
ಕಲಿ ಹೆಚ್ಚಿ ಬಂದಿತಲ್ಲ, ರಂಗಯ್ಯ ಕಾಯೆನ್ನ ಸಿರಿಯ ನಲ್ಲ ಪ ಕಾಲ ವಿಪರೀತದಿ ಅ ಅತ್ತೆಯ ಸೊಸೆ ಬಯ್ವಳು - ಪುತ್ರರು ತಮ್ಮಹೆತ್ತ ತಾಯಿಯ ಬಿಡುವರುಉತ್ತಮ ಗರತಿಗೆ ಅಪವಾದ - ಅವಿವೇಕಿಗಳುಎತ್ತ ನೋಡಲು ಹೆಚ್ಚಿ ಹೆದರಿಸಿತುನ್ಮತ್ತತನದಲಿ ಮನೆಯ ರಚಿಸುವರುಭಕ್ತಿಯೆಂಬುದ ಬಯಸದಿರುವರುಕತ್ತಲಾಯಿತು ಕಲಿಯ ಮಹಿಮೆ 1 ನಿತ್ಯ ನೇಮವು ನಿಂತಿತು - ಹೋಯಿತಲ್ಪಜಾತಿಗೈಶ್ವರ್ಯ ಭೋಗಭಾಗ್ಯಧಾತರಾದವರಿಗೆ ಧಾರಣೆ ಪಾರಣೆಜಾತಿನೀತಿಗಳೆಲ್ಲ ಒಂದಾಗಿಪಾತಕದಿ ಮನವೆರಗಿ ಮೋಹಿಸುತಮಾತಾಪಿತೃ ಗುರು ದೈವ ದ್ರೋಹದಿಭೂತಳವು ನಡ ನಡುಗುತಿಹುದು 2 ಬಿನ್ನಣ ಮಾತುಗಳು ಮತ್ತೆ ಮತ್ತೆಘನ್ನ ಮತ್ಸರ ಕ್ರೋಧಗಳುಅನ್ಯಾಯದಿಂದ ಅರ್ಥವ ಗಳಿಸುವರುತನ್ನ ಕಾಂತನ ಬಿಟ್ಟು ಸ್ತ್ರೀಯರುಅನ್ಯರಿಗೆ ಮನವೆರಗಿ ಮೋಹಿಪರುಬಣ್ಣಗೆಟ್ಟಿತು ವರ್ಣ ತಪ್ಪಿತು ಪ್ರ-ಸನ್ನ ಶ್ರೀ ನೆಲೆಯಾದಿಕೇಶವನೆ 3
--------------
ಕನಕದಾಸ
ಕಷ್ಟ ಕಷ್ಟವೋ ಕೃಷ್ಣ ದೃಷ್ಟಿಯಲಿ ನೋಡದಿರೆ ತುಷ್ಟಿಪಡಿಸಲು ನಿನ್ನ ನಾನೆಷ್ಟರವನಯ್ಯ ಪ ಭ್ರಷ್ಟನಾಗಿಹೆ ನಾ ಅಷ್ಟಾಂಗಯೋಗವ ತಿಳಿಯೆ ಒಂ- ದಿಷ್ಟು ಭಕುತಿಯ ಕೊಟ್ಟು ಕಡೆಹಾಯಿಸಯ್ಯ ಅ.ಪ ಸತ್ಯ ಅಸ್ತೇಯ ಬ್ರಹ್ಮಚರ್ಯ ಅಹಿಂಸಾ ಧೃತಿ ದಯಾ ಕ್ಷಮಾರ್ಜಿತ ಮಿತಭುಕ್ತವು ನಿತ್ಯ ಬಾಹ್ಯಾಂತರ ಶೌಚಾದಿ ದಶಗುಣ ಯುತವಾದಯಮ ಉಪಾಸನೆಗಳಿನಿತಿಲ್ಲವೋ ದೇವಾ 1 ನಿಯಮ ಮೊದಲಿಲ್ಲ ಜಪತಪ ಸಂತೃಪ್ತಿ ನಿಯತ ಸಿದ್ಧಾಂತ ಶ್ರವಣ ಲಜ್ಜಮತಿಯು ಶ್ರೀಯಃಪತಿಯ ಪೂಜನ ಆಸ್ತಿಕ್ಯವ್ರತ ದಾನೋ- ಪಾಯವಿಲ್ಲದೇ ಕಡೆ ಹಾಯ್ವುದೆಂತಯ್ಯ 2 ಘಾಸಿಯಾಗಿಹುದಯ್ಯ ಷಡ್ವಿಧಾಸನಗಳೂ ಸ್ವಸ್ತಿಕ ಭದ್ರಪದ್ಮ ಅರ್ಧಾಂಗಾಸನದಿ ಸಿದ್ಧ ಪರ್ಯಂಕಗಳೆಂಬ ಆಸನದಿ ಕುಳಿತು ನಾ ಧೇನಿಸಲರಿಯೆ ಹರಿಯೇ 3 ಪ್ರಾಣಾಯಾಮವ ಕ್ರಮವು ರೇಚಕ ಪೂರಕವು ದಣಿವಿಲ್ಲದೆ ಕುಂಭಕದ ಕ್ರಮವಿಲ್ಲ ತ್ರಾಣವಿಲ್ಲವೋ ವಾಯುಬಂಧ ಮಾಡಲರಿಯೆ ಪ್ರಾಣಪತಿ ನಿನ್ನ ಕರುಣವಿಲ್ಲದಾತನಕ 4 ವಿಷಯಾಭಿಲಾಷೆಯಿಂದ್ಹರಿದು ಹೋಯಿತು ಮನಸು ವಿಷಮವಾಗಿಹುದಯ್ಯ ಮತ್ಸಾಧನ ಪ್ರತ್ಯಾಹಾರ ಸಾಧನವಿಲ್ಲ ಕೃಷಿಮಾಡಿ ಸ್ಥಿರಮನದಿ ಧೇನಿಸಲು ನಾನರಿಯೆ 5 ಧಾರಣೋಪಾಯದೊಳು ಅಣುಮಾತ್ರ ನಾನರಿಯೆ ನರಕ್ರಿಮಿಯಾಗಿ ನಾ ಧರೆಯೊಳುಳಿದೆ ಅರಿಯೆ ಬಾಹ್ಯಾಂತರದಿ ಭೂತಪಂಚಕವಿರುವ ಪರಿ ತಿಳಿದು ಪ್ರಾಣವಾಯು ಸಡಿಲಬಿಡಲರಿಯೆ 6 ಧ್ಯಾನಿಸಲು ಏಕಾಗ್ರಚಿತ್ತವೇ ಎನಗಿಲ್ಲ ಸಂಸ್ತುತಿಸೆ ಸಂಪ್ರಜ್ಞಾ ಅಸಂಪ್ರಜ್ಞವೆಂಬ ಘನಸಮಾಧಿಯೊಳ್ ಪರಿವಿಲ್ಲದಲೆ ನಿನ್ನ ಕರುಣವೆಂತಾಗುವುದೋ ಶ್ರೀ ವೇಂಕಟೇಶಾ 7 ಶುದ್ಧವಾದ ದ್ವೈತತ್ರಯ ತಿಳಿಯದಲೆ ಮುಗ್ಧನಾಗಿಹೆ ನಾನಪರಿಶುದ್ಧನೊ ಶಬ್ದಗೋಚರ ನಿನ್ನ ಪರಿಶುದ್ಧ ಭಾವದಿಂ ಬುದ್ಧಿಪೂರ್ವಕ ತಿಳಿಯೆ ಬದ್ಧಪಾಮರನಯ್ಯ 8 ಕರಣತ್ರಯದಲಿ ಮಾಳ್ವ ಕ್ರಿಯೆಗಳೆಲ್ಲವು ಸತತ ಹರಿಯೇ ಬಿಂಬಕ್ರಿಯವ ನಾನರಿಯದೇ ಕರುಣಶರಧಿಯೆ ನೀ ಕೃಪೆಮಾಡಿ ಪೊರೆಯದಿರೆ ಉರಗಾದ್ರಿವಾಸವಿಠಲ ನಿನ್ನ್ಹ್ಹೊರತು ಗತಿಯುಂಟೆ 9
--------------
ಉರಗಾದ್ರಿವಾಸವಿಠಲದಾಸರು
ಕಾಮಹರ ಒಬ್ಬ ತಾನೆ ಬಲ್ಲಾ | ರಾಮ ರಾಮ ಸೀತಾರಾಮ ರಾಮನಲ್ಲದಿಲ್ಲವೆಂದು ಪ ಕೈಯಲಿ ಕಿನ್ನರಿ ಧರಿಸಿ ಸಿರಿಮೊಗದಿಂದ | ಕೈಲಾಸಗಿರಿಯಲ್ಲಿ ಪಾರ್ವತಿ ಕೂಡ ಜಗ ದಯ್ಯನಯ್ಯ ಜಗದೊಡಿಯ ರಾಮನಲ್ಲದಿಲ್ಲೆಂದು 1 ಫಣಿಯಾಭರಣವು ಪೆಡೆಯೆತ್ತಿ ಇರಲು | ಮಣಿ ರುಂಡಮಾಲೆ ತೂಗಾಡಲು | ಕುಣಿದು ಕಣಕಾಲಿಂದ ಥಕ್ ಥಕ್ ಥೈ ರು ಪತಿ ಸರ್ವೋತ್ತಮ ರಾಮನಲ್ಲದಿಲ್ಲವೆಂದು 2 ಕಾಳಕೂಟದ ವಿಷಬಿಂದು ಮಾತುರನುಂಗೆ | ತಾಳಲಾರದೆ ತಳಮಳವಗೊಂಡು | ಕಾಳಿಮರ್ದನ ಕಮಲಾಯತಾಕ್ಷ ಎನ್ನ | ಪಾಲಿಸಿದ ಪರಮಾತ್ಮ ರಾಮನಲ್ಲದಿಲ್ಲವೆಂದು3 ಗಜಮುಖ ತಾಳವ ಪಿಡಿದು ತಥೈ ಎನ್ನಿ | ಅಜಸುತ ರಿಪು ಮದ್ದಳಿಯೆ ಮುಟ್ಟಿ | ಗಜ ಚರ್ಮಾಂಬರ ಗಾಯನವ ಮಾಡುತ-ತ್ರಿ | ಜಗಾಧಿಪತಿ | ವಿಷ್ಣು ರಾಮನಲ್ಲದಿಲ್ಲವೆಂದು 4 ಆರು ಮುಖದವ ಶಂಖವನ್ನು ಊದೆ | ಭೈರವ ನಾಗಸ್ವರವ ನುಡಿಸೆ | ಚಾರು ಪ್ರಥಮ ಭೂತ ತಲೆ ಚಪ್ಪಳಿಡೇ| ಧಾರಣಿಧರ ಸೀತಾರಾಮನಲ್ಲದಿಲ್ಲವೆಂದು 5 ಗೋರಾಜ ಸರಿಗಮಪದನಿಸ ಎಂದು ನಲಿಯೇ | ಉರಗಾದಿ ಮೂಷಕಾದಿ ಚಿಗಿದಾಡಲು | ವಾರಣದ ಗಂಗೆ ಸಿರದಲಿ ತುಳುಕಲು | ನಾರಾಯಣ ಪರದೈವ ರಾಮನಲ್ಲದಿಲ್ಲವೆಂದು 6 ತುಂಬುರನಾರಂದ ತಂದನ್ನಾತಾ ಎನ್ನೆ | ಅಂಬರದಿಂದ ಪೂಮಳೆಗೆರೆಯೆ | ಅಂಬುಜಪತಿ ಶಿರಿ ವಿಜಯವಿಠ್ಠಲ ವಿ ಶ್ವಂಭರಜಾಂಡಕರ್ತು ರಾಮನಲ್ಲದಿಲ್ಲವೆಂದು 7
--------------
ವಿಜಯದಾಸ
ಕಾಯಬೇಕೆನ್ನ ಶ್ರೀ ದೇವಾಧಿದೇವಿಣಿ ದಯವುಳ್ಳಸ್ವಾಮಿ ಸಹಕಾರಿ ನಾರಾಯಣಿ ಧ್ರುವ ಕರುಣಾನಂದಗುಣ ಶರಣ ಸಂರಕ್ಷಣಿ ದುರಿತ ವಿಧ್ವಂಸಿನಿ 1 ಘನಸುಖದಾಯಿಣಿ ದೀನ ಉದ್ಧಾರಣಿ ಶಿಖಾಮಣಿ ನೀನೆ ಶ್ರೀ ಲಕ್ಷುಮಿಣಿ 2 ಬಾಹ್ಯಂತ್ರ ವ್ಯಾಪಿಣಿ ಮಹಾಗುರು ಸ್ವರೂಪಿಣಿ ಸಾಹ್ಯದಲಿ ನೀ ಪೂರ್ಣ ಮಹಿಪತಿಯ ಸ್ವಾಮಿಣಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾರಣನೇ ಇವನು ಎಲ್ಲಕ್ಕೂ ಕಾರಣನೇ ಇವನು ಪ ಕಾರಣನಿವನು ಸಾಧಾರಣನಲ್ಲನು ಮಾರಮಣನು ಕರುಣಾರಸಮಯನು ಅ.ಪ ಇಚ್ಛೆಯಿಂದಲಿ ತಾನು ಅಖಿಲ ಜಗ ತ್ಸøಷ್ಟಿಯ ಮಾಡುವನು ಸ್ವಚ್ಛನಾದರು ತನ್ನ ಮೆಚ್ಚಿಗೆಯಿಂದಲಿ ತುಚ್ಛನೆಂಬೊ ಶಬ್ದ ವಾಚ್ಯನಾಗಿರುವನು 1 ಎಲ್ಲವ ಬಲ್ಲವನು ಈಶನು ಇಲ್ಲದ ಸ್ಥಳವಿಲ್ಲ ಚಿಲ್ಲರೆ ದೈವಗಳೆಲ್ಲರು ಈತನ ಚೆಲ್ಲಾಟಗಳಿಗೆ ಉಲ್ಲಾಸಿಸುವರು 2 ಭಿನ್ನರೂಪಗಳಿಂದ ಜಗದೊಳು ತನ್ನ ಲೀಲೆಯ ತೋರ್ಪ ಸನ್ನುತ ಭಕುತಗೆ ಮನ್ನಣೆಯಿಂದ ಪ್ರ ಸನ್ನನಾಗಿ ಉನ್ನತ ಪದವೀಯಲು 3
--------------
ವಿದ್ಯಾಪ್ರಸನ್ನತೀರ್ಥರು
ಕಾಲ ಬಂದಿತೋ ಬಂದ ಭವದೊಳು ಚಿಂತೆಯೊಳಗೆ ದಿನ ಸಂದಿತು ಪ ತುಪ್ಪ ಪಣಕೆ ಸೇರು ಉಪ್ಪೆಂಟು ಸಿದ್ದೆಯು ಮುಪ್ಪಾಗ ಕೊಂದೆ ಕೊಳಗಬತ್ತ ಸೊಪ್ಪ ಪಣಕೆ ಮಾರುವುದು ಅಚ್ಚೇರು 1 ವ್ಯಾಪಾರ ಸಾಪಾರ ತುಟ್ಟಿಸಿದರು ಕೊಳ್ಳ ಲಾಪರೆ ಫಣವೊಂದೆ ಕಟ್ಟಿಲ್ಲ ರೂಪಾಯಿ ಕೊಡೆ ಪುಲಿಚರಮ ಪಾಪವು ಸುಲತಾಗಿ ಪಣವ ಕೊಡೆಂಬರು 2 ದುಡ್ಡು ಕೊಡಲು ಬೇಡ ಬೈಯುತ ಆನೆ ಗೂಡಿನ (ಆನೆಗೊಂದಿ) ದುಡ್ಡತಾರೆಂಬರು ದೊಡ್ಡ ಮೊಳೆ ಪಣವಿದು ಸಣ್ಣ ಮೊಳೆಯಿಂಗಿ ? ಹೆಡ್ಡ ಹೋಗೆಂದದ್ದ ಬಿಸುಟರು ಫಣವ 3 ತಪ್ಪಿ ಹೇಳುವೆನೆ ನಮ್ಮಪ್ಪ ದುರ್ಭಿಕ್ಷವು ಎಪ್ಪತ್ತು ವರುಷ ಕೊದಗಿ ಬಂತು ಇಪ್ಪತ್ತು ವರುಷಕೀಕಾಲ ಬಂದಿದ್ದರೆ ಕನಿಷ್ಟಕ್ಕೆ ಗಣಿಸಿ ಸುಕ್ಷಾಮವ ಮರೆವೆನು 4 ಧಾರಣೆ ಪಾರಣೆ ಶಿವರಾತ್ರಿ ಹರಿದಿನ ಓರಂತೆ ಬಡವಗೆ ನೆಲೆಯಾಯಿತು ಕ್ಷೀರಾಬ್ದಿ ಶಯನ ಲಕ್ಷ್ಮೀನಾರಾಯಣನು ತನ್ನ ಸೇರಿದ ಜನರ ಕಣ್ಣಲಿ ನೋಡುತೊಲಿದ 5
--------------
ಕವಿ ಪರಮದೇವದಾಸರು
ಕಾಲಕಾಲದಿ ಕರುಣಿಗಳರಸನಾದ ರಾಮಾ ಎನಬಾರದೇ | ಜಗ | ಪಾಲಕ ನಿನಗಿಹಪರಗಳ ನೀವಾ ಪ ಪಂಚಾಗ್ನಿಯಲಿ ದೇಹ ಬಳಲಿಸುವದ್ಯಾತಕ | ರಾಮಾ ಎನಬಾರದೇ | ಪ್ರ | ಪಂಚ ತೊರೆದು ವನವಾಸ ಹಿಡವುದ್ಯಾಕ | ರಾಮಾ ಎನಬಾರದೇ || ಒಂಟಿ ಕಾಲಿನ ಯೋಗಧಾರಣವ್ಯಾಕ | ರಾಮಾ ಎನಬಾರದೇ | ಪುಣ್ಯ | ಸಂಚಿಸೆ ಕೃಚ್ಛೆ ಚಾಂದ್ರಾಯಣಿ ವೃತವ್ಯಾಕ | ರಾಮಾ ಎನಬಾರದೇ 1 ರಾಮಾ ಎನಬಾರದೇ | ಅ| ಖಂಡದಿ ಛಟಪಟ ಕರ್ತಬೋಧಗಳ್ಯಾಕ ರಾಮಾ ಎನಬಾರದೇ || ಮಂಡೆ ಬೋಳಿಸಿ ಭಿಕ್ಷಾನ್ನ ಬಯಸುವದ್ಯಾಕ | ರಾಮಾ ಎನಬಾರದೇ | ಜಗ | ಭಂಡರಂದದಿ ಬತ್ತಲೆ ತಿರುಗುವುದ್ಯಾಕ | ರಾಮಾ ಎನಬಾರದೇ 2 ಉಂಬಾಗ ಉಡುವಾಗ ಕೊಂಬು ಕೊಡುವಾಗ | ರಾಮಾ ಎನಬಾರದೇ | ಸರ್ವಾ | ರಂಭದಿ ಸತಿಸುತಲಾಲನೆ ಮಾಳ್ಪಾಗ | ರಾಮಾ ಎನಬಾರದೇ || ತಿಂಬು ತಾ ಕಳಿಸುತಾ ಎಡಹುತಾಣಕಿಸುತಾ ರಾಮಾಎನಬಾರದೇ | ಇದು | ಸಂಭ್ರಮದಲಿ ಮಹಿಪತಿ ಸುತ ಸಾರಿದಾ ರಾಮಾ ಎನಬಾರದೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಖಗಗಮನ ಜಗದ ಜೀವನ ರಘುವಂಶೋದ್ಧಾರಣ ನಗಧರನೆ ನಿಗಮಗೋಚರ ನಾಗಶಯನ ಮುರಮರ್ದನ ಪ ವನಜಸಂಭವವಿನುತ ಮನುಮುನಿವಂದಿತ ಜನಕಜೆಯ ಪ್ರಾಣಪ್ರಿಯ ವನಮಾ ಲನೆ ಭವಮೋಚನ ಜಯವಾಮನ ಸುಖಧಾಮನೆ ಇನಕೋಟಿಪ್ರಭಾಮಯ ವನಜಾಕ್ಷನೆ 1 ಸತಿಯ ಪಾಷಾಣಸ್ಥಿತಿವಿಮೋಚನ ಪತಿತಪಾವನ ಸತ್ಯಭಾಮೆರಮೆಯ ನಾಥ ನುತಕಿಂಕರ ಹಿತಮಂದಿರ ಜಿತದಶಶಿರ ಹತಮುಪ್ಪುರ ನತಿಹಿತ ರತಿ ಪತಿಪಿತ ಕ್ಷಿತಿಧವ 2 ದಾಮೋದರ ಶ್ರೀರಾಮ ಭಕುತಪ್ರೇಮ ನಿಸ್ಸೀಮ ಸ್ವಾಮಿ ನೀಲಮೇಘಶ್ಯಾಮ ಭೂಮಿಜ ವರಸ್ಮರಣೀಕರ ಕಾಮಿತ ವರವೀಯುವ ಸ್ಥಿರವಿಮಲಚರಿತ ಕರುಣಾಕರ 3
--------------
ರಾಮದಾಸರು
ಗಳಿಸಿದೆನು ಗಳಿಸಿದೆನು ಘಳಿಗಿಯೊಳಗೆ ಗಳಿಸಿದಾಗಳಿಗೆ ಅಂತಃಕರಣದೊಳಗೆ ಧ್ರುವ ಗಳಿಸಿದೆನು ಗುರುಕರುಣ ಗಳಿಸಿದೆನು ಗುರುಚರಣ ಗಳಿಸಿದೆನು ಗುರುಸ್ಮರಣ ಚಿಂತನಿಯನು 1 ಗಳಿಸಿದೆನು ಗುರುಙÁ್ಞನ ಗಳಿಸಿದೆನು ಗುರುಮೋನ ಗಳಿಸಿದೆನು ಗುರುಙÁ್ಞನ ಧಾರಣವನು 2 ಗಳಿಸಿದೆನು ಇಳಯೊಳು ಮಹಿಪತಿ ಇಹ್ಯ ಪರದೊಳು ಸಾಯುಜ್ಯ ಸದ್ಗತಿಯ ಮುಕ್ತಿಗಳು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗಾಡಿಪಂಥ ಮಾಡಬೇಡೆಲೈ ಪ. ಮಾರುತಿಸೇವ್ಯನೆ ಧೀರ ದಾತಾರನೆ ಕೋರಿ ಭಜಿಪೆ ಬೇಗ ಬಾರೈ ಸುಂದರ 1 ನಾರಿಯರ್ನಿನ್ನನು ಸಾರಿಕರೆವರೈ ಧಾರಣಿಜಾತೇಸಹ ಸಾರಿ ಬಾಬಾ ಬೇಗ 2 ಭವಭಯದೂರನೆ ಭಕ್ತಮಂದಾರನೆ ಭಾವಜ ಜನಕನೆ ದೇವಾದಿದೇವನೆ3 ಶೇಷಗಿರೀಶನೆ ದಾಸಜನಾಶ್ರಯನೆ ವಾಸವವಂದಿತನೆ ಶ್ರೀ ವಾಸುದೇವನೆ 4
--------------
ನಂಜನಗೂಡು ತಿರುಮಲಾಂಬಾ
ಚತುರ್ದಶಿಯ ದಿನ (ಹನುಮಂತನನ್ನು ಕುರಿತು) ರಂಭೆ : ಇವನ್ಯಾರೆ ದೂರದಿ ಬರುವವ ಇವನ್ಯಾರೆಪ. ಇವನ್ಯಾರೆ ಮಹಾಶಿವನಂದದಿ ಮಾ- ಧವನ ಪೆಗಲೊಳಾಂತು ತವಕದಿ ಬರುವವ1 ದಾಡೆದಂತಮಸಗೀಡಿರುವದು ಮಹಾ ಕೋಡಗದಂತೆ ಸಗಾಢದಿ ಬರುವವ2 ಕಡಲೊಡೆಯನು ಮೃದುವಡಿಯಡರಿಸಿ ಬಿಡ ದಡಿಗಡಿಗಾಶ್ರೀತರೊಡಗೂಡಿ ಬರುವವ3 ಊರ್ವಶಿ :ನಾರಿ ಕೇಳೆಲೆಗೆ ವೈಯಾರಿ ನೀ ಮುದದಿ ನಾರಾಯಣನಿಗೀತ ಬಂಟನಾದಾದರಿದಿ ವೀರ ರಾಮವತಾರದಿ ಹಿಂದೆ ಹರಿಯ ಚಾರಕನಾಗಿ ಸೇವೆಯ ಗೈದ ಪರಿಯ ಕ್ರೂರ ದಶಾಸ್ಯನ ಗಾರುಗೆಡಿಸಿ ನೃಪ ವೀರನ ಪೆಗಲಿನೊಳೇರಿಸಿ ದೈತ್ಯರ ಭೂರಿವಧೆಗೆ ತಾ ಸಾರಥಿಯಾದವ ಕಾರುಣೀಕ ಮಹಾವೀರ್ಹನುಮಂತ1 ಆಮೇಲೆ ವೀರಾವೇಶದಿ ವಾರಿಧಿಯನು ರಾಮನಪ್ಪಣೆಯಿಂದ ದಾಟಿದನಿವನು ಭೂಮಿಜೆಗುಂಗುರ ಕೊಟ್ಟ ನಂತರದಿ ಕಾಮುಕರನು ಸದೆಬಡಿದನಾ ಕ್ಷಣದಿ ಹೇಮಖಚಿತ ಲಂಕಾಮಹಾನಗರವ ಹೋಮವ ಗೈದು ಸುತ್ರಾಮಾರಿಗಳ ನಿ- ರ್ನಾಮಿಸಿ ಸೀತೆಗೆ ತಾ ಮಣಿಯುತ ಚೂ- ಡಾಮಣಿ ತಂದ ಮಹಾಮಹಿಮನು ಇವ2 ವಾರಿಮುಖಿ ನೀ ಕೇಳಿದರಿಂದ ಬಂದ ವೀರ ಹನುಮಂತನನೇರಿ ಗೋವಿಂದ ಸ್ವಾರಿಗೆ ಪೊರಟ ಚಾತುರ್ದಶಿ ದಿವಸ ಆರತಿಯನು ಕೈಕೊಳ್ಳುವ ಶ್ರೀನಿವಾಸ ಭೇರಿ ಮೃದಂಗ ಮಹಾರವದಿಂದ ಸ- ರೋರುಹನಾಭ ಮುರಾರಿ ಶರಣರು ದ್ಧಾರಣಗೈಯುವ ಕಾರಣದಿಂದ ಪಾ- ದಾರವಿಂದಗಳ ತೋರಿಸಿ ಕೊಡುವ3 ಬಳಿಕ ಪಲ್ಲಂಕಿ ಏರಿದ ಕಾಣೆ ನಾರಿ ನಲವಿಂದ ವೇದಘೋಷವ ಕೇಳ್ವ ಶೌರಿ ಜಲಜಭವಾದಿ ನಿರ್ಜರರಿಗಸಾಧ್ಯ ಸುಲಭನಾದನು ಭಕ್ತಜನಕಿದು ಚೋದ್ಯ ಸುಲಲಿತ ಮಂಟಪದೊಳೊ ನೆಲಸುತ ನಿ- ಶ್ಚಲಿತಾನಂದ ಮಂಗಲದ ಮಹೋತ್ಸವ ಗಳನೆಲ್ಲವ ಕೈಕೊಳುತಲಿ ಭಕ್ತರ ಸಲಹುವ ನಿರುತದಿ ಮಲಯಜಗಂಧಿನಿ4 ಶ್ರೀಕಾಂತ ಬಳಿಕ ಭಕ್ತರ ಒಡಗೂಡಿ ಏಕಾಂತ ಸೇವೆಯಗೊಂಡ ಕೃಪೆಮಾಡಿ ಸಾಕಾರವಾಗಿ ತೋರುವ ಕಾಣೆ ನಮಗೆ ಬೇಕಾದ ಇಷ್ಟವ ಕೊಡುವ ಭಕ್ತರಿಗೆ ಶ್ರೀಕರ ನಾರಾಯಣ ಶ್ರೀನಿವಾಸ ಕೃ- ಪಾಕರ ವಿಬುಧಾನೇಕಾರ್ಚಿತ ರ- ತ್ನಾಕರಶಯನ ಸುಖಾಕರ ಕೋಟಿ ವಿ- ಚಾರಕ ಭಾಸತ್ರಿಲೋಕಾಧಿಪನಿವ5
--------------
ತುಪಾಕಿ ವೆಂಕಟರಮಣಾಚಾರ್ಯ
ಜಗದಾದಿ ನಮಿತ ಆಗಮಾತೀತ ಖಗವರಗಮಿತ ಭಾಗವತಪ್ರೀತ ಸುಚರಿತ ಪ ಭವ ಬಾಧ್ಹರಣ ಜನನಮರಣ ಭಯನಿವಾರಣ ದಯಸುಸದನ ಭುವಿಜಾರಮಣ ಭಕ್ತೋದ್ಧಾರಣ ವಿಮಲಜ್ಞಾನ ಕರುಣಿಸು 1 ಅಮಿತಲೀಲ ಕುಜನಕಾಲ ರಮೆಯಲೋಲ ಶರಣುಶೀಲ ಕೌಸ್ತುಭಮಾಲ ಸುಮನಪಾಲ ಎನ್ನ ಭ್ರಮಜಾಲ ಛೇದಿಸು 2 ಭೃತ್ಯಲಲಾಮ ಶಕ್ತರಕಾಮ ಪೂರ್ತಿನಿಸ್ಸೀಮ ಕರ್ತುಶ್ರೀಭೌಮ ನಿತ್ಯನಿರಾಮ ಜಗದೋದ್ದಾಮ ಮುಕ್ತಿಪದ ಸೋಮ ಶ್ರೀರಾಮ 3
--------------
ರಾಮದಾಸರು
ಜೋ ಜೋ ಧ್ರುವ ತೊಟ್ಟಿಲ ಕಟ್ಟಿ ನಟ್ಟನಡುಮಧ್ಯ ಜಗಜಟ್ಟಿ ತೊಟ್ಟಿಲ ತೂಗಿರೆ ಮನಮುಟ್ಟಿ 1 ಧ್ಯಾನಧಾರಣದರಳೆಲೆ ಮಾಡಿ ಕರ್ನಕುಂಡಲ ಲಯಲಕ್ಷವಿಡಿ ಕರುಣನ ಪಾಡಿ 2 ತೋಳತಾಯಿತವಿಡಿ ನೋಡಿ 3 ಜಡಿತಾಭರಣದುಡುಗಿಯ ನೀಡಿ ಶ್ರೀ ಸರ್ವೋತ್ತಮನ ಪಾಡಿ 4 ನಿತ್ಯ ಆನಂದಮೂರ್ತಿಯ ತೂಗಿ ಪತಿತ ಜೀವನಪಾವನ್ನವಾಗಿ ಚಿತ್ತಮನಬುದ್ಧಿ ಏಕತ್ವವಾಗಿ ಭಕ್ತವತ್ಸಲನ ತೊಟ್ಟಿಲ ತೂಗಿ 5 ಅದೃಷ್ಟದಲಿ ಸದೃಷ್ಟವಾಗಿ ಸದ್ಬ್ರಹ್ಮಾನಂದ ಸದ್ಗುರುಯೋಗಿ ಮೂರ್ತಿಯ ತೂಗಿ 6 ಜೀವನಮೂರ್ತಿಯ ಪಾಡಿ ಘನ ಕೂಡಿ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು