ಒಟ್ಟು 85 ಕಡೆಗಳಲ್ಲಿ , 34 ದಾಸರು , 81 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂದ ಭೀಮಗೆ ಸರಿಯಿಲ್ಲ ಎಂದೆಂದಿಗೆ ಬಿಡದೆ ಬಂದಾ ಪ್ರತಿಬಂಧಕಗಳ ನಿತ್ಯ ಅರಿತುಳಿವಾ ಸತ್ಕೀರ್ತಿ ಪೊಳವ ಪ ಪ್ರಳಯಾಂತದಲ್ಲಿ ತಾನು ತಿಳಿದು ಸತ್ವ ಜೀವರ ನೆಲೆ ಗೊಳಿಸುವೆನೆಂದು ಬಲುಹರುಷದಲಿ ಜಲಜನಾಭನ ಚರಣಾಬ್ಜಕರಿಗೆ ಹಸ್ತ ಮುಗಿದು ಶ್ರುತಿವಿನುತ ಇದೇ ಕಾಯವನಿತ್ತ 1 ಮಂಡೆ ಮೇಲೆ ಭಾರವ ಕೊಂಡಾ ಸಹಸ್ರ ಫಣ ಕುಂಡಲಿಯ ಪೊತ್ತಾ ಗಂಡುಗಲಿ ಕೂರ್ಮನಾ ಕೊಂಡಾಡಲು ನಮಗೆ ಸಗುಣಾಖ್ಯಾ ಗುರುವೀತನೇ ಮುಖ್ಯಾ 2 ಭೀಮನೆ ಭೀಮಸೇನಾ ಭೀಮರಾಯನೆಂದು ನೇಮದಿಂದಲಿ ನಾಮವ ನೆನೆದಡೆ ಪಾಮರ ಬುಧ್ಧಿಯನ್ನು ನಿತ್ಯ ಸತ್ಪುಣ್ಯ ಅನುಗಣ್ಯ ಬಲು ಗುಣ್ಯಮಾಡಿಸುವನನ್ಯ 3 ಹಿಂದೆ ರಘುನಾಥನ ಛಂದದ ದೂತನಾಗಿ ಇಂದು ವಂಶದಲಿಂದು ಮಂದಹಾಸದಲುದಿಸಿ ನಂದದಿಂದಲಿ ಕುರುಬಲವ ಗೆದ್ದ ಚಲುವ ಭಕ್ತಗೊಲಿವ ಮೂಲೋಕವ ಗೆಲುವ 4 ಜ್ಞಾನ ಭಕ್ತಿ ವೈರಾಗ್ಯ ನಾನಾ ಪ್ರಕಾರ ಭೀಷ್ಟೆ ಮಾಣದೆ ಕೊಡುವನು ಅನಂತ ಕಾಲಕೂ ಆನಂದತೀರ್ಥನೀತಾ ಪ್ರಾಣಾದಿ ಪಂಚರೂಪ ಶ್ರೀನಾಥ ವಿಜಯ ವಿಠ್ಠಲಾ ಸಿರಿನಲ್ಲಾ ಪೊರೆವೆಲ್ಲಾ ಒಂದೆಂಬದಲ್ಲಾ 5
--------------
ವಿಜಯದಾಸ
ಕೃಷ್ಣ ದ್ವೈ ಪಾಯನ ಕೃಪಣವತ್ಸಲ ಪರ ಮೇಷ್ಠಿ ಜನಕನ ತೋರೊ ಪ ಅನಿಮಿಷ ಕುಲಗುರು ಆನಂದತೀರ್ಥ ಸ ನ್ಮುನಿಮತ ವಿಮಲಾಂಬುಜಾ ಅ.ಪ. ದಿನಕರ ದಯದಿ ನೋಡೆನ್ನನು ಬಾದರಾ ಯಣ ನಾಮಧೇಯರ ತನಯ ಸಂಯಮಿ ವರ 1 ಭೀಮ ತರಂಗಿಣಿ ಬದಿಗನೆನಿಸಿ ಸೀತಾ ಕರ್ಮ ಗುಣಕೀರ್ತನಗೈವ ನಿರ್ಮಲಾತ್ಮಕನ ಸತ್ಪ್ರೇಮದಿ ಸಲಹುವ ಸುಜನ ಶಿರೋಮಣಿ 2 ವಿಗತದೇಹಾಭಿಮಾನಿಯೆ ನಿಮ್ಮೊಡನೆ ನಿತ್ಯ ಹಗೆಗೊಂಬ ಪಾಪಿಗಳ ವಿಗಡಕರ್ಮಗಳೆಲ್ಲ ಮರೆದು ವಿಶ್ವವ್ಯಾಪಿ ಜಗನ್ನಾಥ ವಿಠಲ ಸ್ವತಂತ್ರ ಕರ್ತಯೆಂಬಾ 3
--------------
ಜಗನ್ನಾಥದಾಸರು
ಕೇಳು ಜೀವನವೆ ನೀ ಮಧ್ವಮತವನುಸರಿಸಿ ಶ್ರೀಲೋಲನಂಘ್ರಿಯನು ನೆನೆದು ಸುಖಿಸೊ ಪ. ನರನಾಗಿ ಪುಟ್ಟುವುದು ದುರ್ಲಭವೆಲವೊ ಭೂ- ಸುರಕುಲದಿ ಜನಿಸುವುದು ಬಹು ದುರ್ಲಭ ಪರಮ ಸುಕೃತವದೇನು ಫಲಿಸಿತೊ ನಿನಗೀಗ ದೊರಕಿದೀ ಜನುಮವನು ಸಫಲ ಮಾಡೊ 1 ಅರಘಳಿಗೆ ಮಾತ್ರವೆ ಪೊತ್ತು ಪೋಗಲು ಆಯು ಕೊರತೆಂದು ತಿಳಿ ನಿನ್ನ ಕ್ಲುಪ್ತದೊಳಗೆ ಮರಳುತನದಲಿ ಬರಿದೆ ದಿನಗಳಿಯಬ್ಯಾಡೆಲವೊ ಸ್ಥಿರವಲ್ಲ ಈ ದೇಹ ಸ್ವಪ್ನಸಮವೊ 2 ದುರುಳರೊಡನಾಡಿ ದುರ್ವಿಷಯ ಲಂಪಟನಾಗಿ ನರಕಯಾತನೆಗೆ ಗುರಿಯಾಗದಿರೆಲೊ ಎರಡುದಿನದೋಡ್ಯಾಟ ಇರಬಂದುದಲ್ಲವಿದು ಪರಗತಿಗೆ ಸಾಧನ ಮಾಡಿಕೊಳ್ಳೊ 3 ಹೋಗುತಿವೆ ಹೋಗುತಿವೆ ದಿವಸ ವ್ಯರ್ಥವಾಗಿ ಹೀಗೆ ಮೈಮರೆದಿಹುದು ನಿನಗೊಳ್ಳಿತೆ ಬ್ಯಾಗ ಹರಿಯನು ಭಜಿಸು ಬಾ ಈ ಮಾತಲ್ಲ ನೀ ಹೋಗಿನೋಡಲು ಯಮನ ಬಾಧೆ ಬಿರುಸೊ4 ಏನ ಹೇಳಲಿ ನಿನ್ನ ಮಂದಮತಿಯನು ಹಿಂದೆ ಶ್ವಾನಸೂಕರ ಮೊದಲಾದ ನೀಚ- ಯೋನಿಗಳೊಳಗೆ ಬಂದು ಅಂದದನು ಕ್ರಮಿಸಿದವನು ಆ ನೋವನಾಗಲೆ ಮರೆದಿಯಲ್ಲೊ 5 ಮುನ್ನ ದುಷ್ಕರ್ಮವ ಮಾಡಿದ ಪ್ರಾಣಿಗಳು ಉನ್ನತ ನೀಚ ದೇಹಗಳ ಧರಿಸಿ ಬನ್ನಬಡುತಿಹುದು ನೀ ನೋಡಿ ನೋಡಿ ಮತ್ತೆ ದುರ್ನಡತೆಯನು ಮಾಡಲುದ್ಯೋಗಿಪೆ 6 ಎಂಬತ್ತು ನಾಲ್ಕು ಲಕ್ಷ ಯೋನಿಗಳೊಳಗೆ ಕುಂಭಿಣಿಯೊಳಗೆ ತಿರುತಿರುಗಿ ಪಾಪ ಉಂಬುದನುಚಿತವೆಂದು ಮನ ಹೇಸಿ ವಾಕರಿಸಿ ನಂಬುನಾರಾಯಣನ ಇನ್ನಾದರೂ 7 ಜನನಿಯ ಗರ್ಭವಾಸ ದುಃಖ ಅತಿಶಯವೊ ಜನನ ಮರಣದ ದುಃಖ ಬಲು ಅಧಿಕವೊ ಘನ ನರಕದಾ ದುಃಖ ಪೇಳಲೊಶವಲ್ಲ ನಿನ- ಗಿನಿತಾದರೂ ನಾಚಿಕಿಲ್ಲವೇನೊ 8 ಸಾರಿ ಪೇಳುವೆನೀಗ ಪುಟ್ಟಿ ಬೆಳೆದಳಿವ ಸಂ- ಸಾರ ಸುಖವಲ್ಲ ಮಹ ದುಃಖಪುಂಜ ಘೋರ ಸಂತಾಪಕ್ಕೆ ಕಡೆಮೊದಲಿಲ್ಲವೊ ವಾರಿಜಾಂಬಕನ ಮರೆಯೊಕ್ಕು ಬದುಕೊ 9 ಹಿಂದೆ ಬಹುಜನುಮದಲಿ ಬಂದು ಬಳಲಿದ ಬವಣೆ ಒಂದೊಂದು ನೆನೆಸಿಕೊಳಲತಿ ಕಷ್ಟವೊ ಮುಂದಾದರು ಸರಿ ಎಚ್ಚೆತ್ತು ಬಿಡದೆ ಗೋ- ವಿಂದನ ಪದಾಂಬುಜವ ಧ್ಯಾನ ಮಾಡೊ 10 ಮಾರಿ ಇಲ್ಲಿದೆಯೆಂದು ಕೇಳುತಲಿ ಪೋಗಿ ನೀ ಭೂರಿ ಭಯಕೊಳಗಹದು ನೀತಿಯಲ್ಲ ದೂರ ತಿಳಿದು ನೋಡಿ ದುರ್ಮಾರ್ಗವನು ಜರಿದು ಸೇರಿ ಸಜ್ಜನರ ಸುಪಥವ ಪಡೆಯೊ 11 ನಿನ್ನಯ ಸ್ವರೂಪಕ್ಕೆ ಹೀಗಾಗುವುದೆಂದು ಪುಣ್ಯವನೆ ಗಳಿಸಿಕೊ ಬ್ಯಾಗ ನೀನು ಇನ್ನು ಈ ಧರೆಯಲ್ಲಿ ಬಿಟ್ಟು ಹೋಗುವ ದೇಹ- ವನ್ನು ಪೋಷಿಸಿಕೊಂಡು ಹಿಗ್ಗಬೇಡ 12 ವನಿತೆಸುತರನು ಪೊರೆಯಬೇಕೆಂಬ ಬುದ್ಧಿಯಲಿ ಧನದಾಸೆಯಿಂದಲಗಣಿತ ಪಾಪವ ಕ್ಷಣದೊಳಗೆ ಸಂಪಾದಿಸಿಕೊಂಬೆ ಎಲೊ ಮೂಢ ನಿನಗಿವರು ಕೊನೆಗೆ ಸಂಗಡ ಬರುವರೆ 13 ಕೆಡಬ್ಯಾಡ ವ್ಯರ್ಥಮೋಹಕೆ ಸಿಲುಕಿ ಜವನವರು ಪಿಡಿದೊಯ್ದು ಕಡಿದಿರಿದು ಕೊಲ್ಲುವಾಗ ಬಿಡಿಸುವವರಾರಿಲ್ಲ ಈಗಳೆ ಮುಂದರಿತು ಕಡಲಶಯನನ ಪೊಂದಿ ಮುಕುತಿ ಪಡೆಯೊ 14 ಈಗಲೇನೊ ಇನ್ನು ಕ್ಷಣಕೇನು ಬಪ್ಪುದೊ ನೀ ಗರುತರಿಯದಲೆ ಹಿತ ರಾಗದಲಿ ಸರ್ವವನು ಎನ್ನದೆಂದಾಡದಿರು ನಾಗಾರಿಗಮನನಾಧೀನವೆನ್ನೊ 15 ನೀ ಮಗುಳೆ ಮಹಿಯೊಳಗೆ ಕಂಡುಕಂಡುದ ಬಯಸಿ ಭ್ರಾಮಕರ ನುಡಿಗೇಳಿ ಭ್ರಾಂತಿಗೊಳದೆ ಕಾಮಾದಿಗಳ ತ್ಯಜಿಸಿ ಸತ್ಕರ್ಮವನು ಮಾಡಿ ಶ್ರೀಮನೋ ಹರನಿಗರ್ಪಣೆಯ ಮಾಡೊ16 ಏನುಧಾವತಿಗೊಳಲೇನೇನು ಫಲವಿಲ್ಲ ಮಾನವಜನುಮ ಜೊಳ್ಳು ಮಾಡಬ್ಯಾಡ ಆನಂದತೀರ್ಥರ ಪಾದಕಮಲವ ಪೊಂದಿ ಅಚ- ಲಾನಂದವಿಠಲನ್ನ ನೀನೊಲಿಸಿಕೊ 17
--------------
ಅಚಲಾನಂದದಾಸ
ಕೋರಿ ಬಂದೆನೊ ನಾನು ಪತಿ ನಿನ್ನ ಪ ಘೋರ ಸಂಸಾರದಿಂದ ಪಾರು ಮಾಡುವಿಯೆಂದು ಅ.ಪ. ಸರ್ವ ಪ್ರಾಣಿಗಳಲ್ಲಿ ಸರ್ವವಸ್ತುಗಳಲ್ಲಿ ಸರ್ವೇಶ ಹರಿಯ ಕೂಡಿ ಸರ್ವದಾ ಇರುವೆಯೆಂದು 1 ಅಂಜಾನೆ ಗರ್ಭದಿ ಸಂಜಾನಿತ ನೀನಾಗಿ ಕಂಜನಾಭನ ಮನ- ರಂಜಾನೆ ಮಾಡಿದೆಯೆಂದು 2 ದಾನವಾಂತಕನಿಂದ ಸ- ನ್ಮಾನಿತನಾದಂಥ ದೀನರಕ್ಷಕ ಭೀಮ- ಸೇನ ವಿಕ್ರಮನೆಂದು 3 ಹೀನಬುದ್ಧಿಯ ಬಿಡಿಸಿ ದೀನ ಸುಜನರಿಗೆ ಜ್ಞಾನ ಮಾರ್ಗವ ತೋರಿ- ದಾನಂದತೀರ್ಥನೆಂದು 4 ಶ್ರೀ ರಂಗೇಶವಿಠಲಗೆ ಸಮ ರ್ಯಾರಿಲ್ಲವೆಂತೆಂದು ಈರೇಳು ಜಗದೊಳು ಸಾರುತಿರುವೆಯೆಂದು 5
--------------
ರಂಗೇಶವಿಠಲದಾಸರು
ಕೋಲು ಕೋಲೆನ್ನ ಕೋಲೆ ಕೋಲು ಕೋಲೆನ್ನ ಕೋಲೆ ಕೋಲು ಶ್ರೀಹರಿಯಾ ಬಲಗೊಂಬೆ ಕೋಲೆ ಪ ಮೊದಲು ನಮ್ಮ ಗುರು ರಘುಪತಿಯ ಪಾದಕ್ಕೆ ಮುದದಿಂದ ಎರಗಿ ಬಿನ್ನೈಪೆ ಕೋಲೆ ಮುದದಿಂದ ಎರಗಿ ಬಿನ್ನೈಪೆ ಮನದಲ್ಲಿ ಪದಮನಾಭನ್ನ ತೋರೆಂದು ಕೋಲೆ1 ಜನುಮ ಜನುಮದಲ್ಲಿ ಅನಿಮಿತ್ಯ ಬಂಧು ನೀಯನಗೀಯೋ ನಮ್ಮ ಸೇವೆಯ ಕೋಲೆ ಎನಾಗಿಯೋ ನಿಮ್ಮ ಸೇವೆಯ ತವ ಪಾದವನು ಧ್ಯಾನ ಮರಿಯಾದೆ ಕೋಲೆ2 ಮೂಢನಾದ ಎನ್ನನೋಡಿ ಕರುಣವನು ಮಾಡಿ ಹರಿಚರಣ ತೋರಿದ ಕೋಲೆ ಮಾಡಿ ಹರಿಚರಣ ತೋರಿದ ನಿಮ್ಮ ದಯ ಕೀಡುಂಟೆ ಜಗದಿ ಗುರುವರ್ಯ ಕೋಲೆ3 ಪತಿಪಾದ ಮಹಿಮೆ ತೋರಿಸಿ ಕೋಲೆ ಪತಿಪಾದ ಮಹಿಮಾ ತೋರಿಸಿ ಸ ದ್ಗತಿ ಪಥsÀವನ್ನು ವಿಡಿಸಿದ ಕರುಣಿಯೆ ಕೋಲೆ 4 ಅನಾಥ ರಕ್ಷಕ ಆಪತ್ತು ಬಾಂಧವ ಶ್ರೀನಿವಾಸನ್ನ ನಿಜದಾಸ ಕೋಲೆ ಶ್ರೀನಿವಾಸನ್ನ ನಿಜದಾಸ ಮಮಕುಲ ಸ್ವಾಮಿಗೆ ನಮಿಪೆ ಮನದಲ್ಲಿ ಕೋಲೆ 5 ಲಕುಮೀಶ ಹರಿ ದೇವಕಿ ತನಯಗೆ ಸಕಲಾ ಕರ್ಮಗಳಾ ಅರ್ಪಿಸೆ ಕೋಲೆ ಸಕಲಾ ಕರ್ಮಗಳಾ ಅರ್ಪಿಪೆ ನಮ್ಮಗುರು ಸುಖನಿಧಿಗಳಿಗೆ ನಮಿಸುವೆ ಕೋಲೆ 6 ಆನಮಿಸುವೆ ಮಹಾನುಭಾವ ಗುರು ನೇಮಕಲ್ಲಾರ್ಯರ ಚರಣಕ್ಕೆ ಕೋಲೆ ನೇಮಕಲ್ಲಾರ್ಯರ ಚರಣಕ್ಕೆ ಕೋಸಗಿ ಸ್ವಾಮಿರಾಚಾರ್ಯರ ಪಾದಕ್ಕೆ ಕೋಲೆ 7 ಪುರಂದರಾದಿ ದಾಸವರ್ಯರ ಸುಂದರ ಚರಣಕ್ಕೆ ಎರುಗುವೆ ಭರದಿಂದ ಕೋಲೆ ಭರದಿಂದ ಮುದಮುನಿ ಇವರನ್ನು ತೋರಿ ಪೊರೆಯಂದು ಕೋಲೆ 8 ಅಂದದಿಂದ ಆನಂದತೀರ್ಥ ರಾಘ ವೇಂದ್ರಾದಿ ಸಕಲ ವಿಭುದಾದಿ ಕೋಲೆ ರಾಘವೇಂದ್ರಾದಿ ಸಕಲ ವಿಭುದ ಆ ಕರ್ಮಂ ದೀಗಳಿಗೆ ನಮಿಸುವೆ ಕೋಲೆ 9 ವಾದಿರಾಜರ ದಿವ್ಯ ಪಾದಕ್ಕೆ ನಮಿಸುವೆ ಸಾಧಿಸಿ ಕೊಡಲಿ ಸತತಾದಿ ಕೋಲೆ ಸಾಧಿಸಿ ಕೊಡಲಿ ಸತತಾದಿ ಹರಿದಾಸ ರಾದವರ ಸೇವೆಯನಗೆಂದು ಕೋಲೆ 10 ಗಣಪಾದಿಗಳು ಸುರಮುನಿ ಪಾದಗಳಿಗಾ ನಮಿಸುವೆ ಮನಸಿಜ ಸುರಪಾಗ ಕೋಲೆ ನಮಿಸುವೆ ಮನಸಿಜ ಸುರಪಾಗ ಭೂತ ಗಣಪತಿ ಶೇಷರಪಾದ ಕಮಲಕ್ಕೆ ಕೋಲೆ 11 ಭಾರತೀವಾಣಿ ಗುರು ಮಾರುತಿ ಪಾದಕೆ ಪರಿ ಮಣಿಯುವೆ ಕೋಲೆ ಪರಿ ಮಣಿಯುತ ಹರಿಪಾದ ತೋರುತ ಮನದಲ್ಲಿ ನಿಲಿಸೆಂದು ಕೋಲೆ 12 ಲಕ್ಷ್ಮೀದೇವಿಯೆ ಲಕ್ಷಣವಂತಿಯೆ ಪಕ್ಷಿವಾಹನನ ಅರ್ಧಾಂಗಿ ಕೋಲೆ ಪಕ್ಷಿವಾಹನನ ಅರ್ಧಾಂಗಿ ಭವದಿಂದ ರಕ್ಷಿಸಲೆನ್ನ ತವಕಾದಿ ಕೋಲೆ 13 ಶಿರಿಗೋವಿಂದವಿಠಲ ವಿಶ್ವವ್ಯಾಪಕ ಮರುತಾಂತರ್ಗತನೆ ಮುರರಿಪು ನಮ್ಮ ಗುರುವರ್ಯರ ಪ್ರೀಯ ಸಲಹಯ್ಯ ಕೋಲೆ14
--------------
ಅಸ್ಕಿಹಾಳ ಗೋವಿಂದ
ಗುರುಮಧ್ವಮುನಿರಾಯಾ ಎನಗೊಂಬೊದಗಿದಾನು ಸಹಾಯ ಪ ಕತ್ತಲೆ ಕವಿದಿತ್ತು ಸುತ್ತಲೆ ಕಾಣದಂತೆ ಇತ್ತು ಬಟ್ಟೆ ದೃಶ್ಯವಿತ್ತು ಮತ್ತುರೆ ಭವತಮ ಸುತ್ತಲೆ ಮುಸುಕಿರೆ ಉತ್ತಮಾನಂದತೀರ್ಥ ಬಿಡು ಉದಯಸಿದಾ 1 ಹರಿಬೀಜಾವರಿ ಅಲ್ಲಾ ಧರೆಯೊಳು ಸದ್ಗತಿ ದೊರಿಲಿಲ್ಲಾ ಗುರುವೇ ಇರಲಿಲ್ಲಾ ಧರೆಯೊಳು ಹರಿಯನಾವ ಬಲ್ಲ ಸುರರೊಳು ಸುರತರುವರ ವಾಡ ಸೂನು ಧರೆಯೊಳವತರಿಸಿ ಹರಿಪಥ ತೋರಿದಾ 2 ಎಲ್ಲ ರೋಗಕೆ ಮದ್ದು ಸಲ್ಲುವದಿವರ ನಾಮ ಮುದ್ದು ಹುಲ್ಲಜನರ ಸದ್ದು ನಿಲ್ಲದೆ ಪೋದಿ ತಡವಿ ಬಿದ್ದು ಬಲ್ಲಿದ ನರಸಿಂಹ ವಿಠಲನ ನೆನೆಯಲು ಎಲ್ಲ ಕಾಮಿತಫಲ ನಿಜವೆಂದರುಹದಾ 7
--------------
ನರಸಿಂಹವಿಠಲರು
ಗುರುರಾಘವೇಂದ್ರ ಕರುಣಿಸೋ ತವಚರಣ ಸ್ಮರಣೆಯ ಪ ಶರಣು ಜನಕೆ ಸುರತರುವೆಂದೆನಿಸುತ ವರ ಮಂತ್ರಾಲಯ ಪುರದಿ ಮೆರೆವ ಶ್ರೀಮದ್ 1 ನಂದತೀರ್ಥರ ಮತ ಸಿಂಧುವಿಗೆ ಪೂರ್ಣ ಚಂದ್ರನೆನಿಸಿದ ಸುಧೀಂದ್ರ ಕರೋದ್ಭವ 2 ಧರಿಯೊಳು ಶರಣರ ಪೊರೆವ ಕಾರ್ಪರನರಹರಿಯನೊಲಿಸಿರುವ ಪರಿಮಳಾಚಾರ್ಯ ಶ್ರೀ3
--------------
ಕಾರ್ಪರ ನರಹರಿದಾಸರು
ಗುರುವಶಕೆ ನಮೋ ಎಂಬೆ ನಮ್ಮ ಶ್ರೀ ಮದಾನಂದತೀರ್ಥ ಪದ್ಮನಾಭರಿಗೆ | ರಾಮದೇವರ ಕಂದ ನರಹರಿಗೆ || ಕಾಮಿತ ಫಲವೀವ ಮಾಧವಕ್ಷೋಭ್ಯರಿಗೆ | ಆ ಮಹಾಮಹಿಮ ಜಯತೀರ್ಥ ರಾಯರಿಗೆ 1 ವಿದ್ಯಾಧಿರಾಜರಿಗೆ ವಿಜಯ ಕವೀಂದ್ರ ಸು | ಸದ್ಗುಣ ವಾಗೀಶ ರಾಮಚಂದ್ರರಿಗೆ || ವಿದ್ಯಾನಿಧಿ ರಘುನಾಥ ರಘುವರ್ಯತೀರ್ಥರಿಗೆ | ಅದ್ವೈತಮತ ಖಂಡ ರಘೋತ್ತರಾಯರಿಗೆ 2 ವೇದವ್ಯಾಸ ವಿದ್ಯಾಧೀಶ ವೇದನಿಧಿ ಮುನಿಗೆ | ನಿತ್ಯ ವತ್ರರಿಗೆ || ಮೇದಿನಿಯಲಿ ಮೆರೆದ ಸತ್ಯನಿಧಿತೀರ್ಥರಿಗೆ | ವಾದಿಗಜಕೆ ಸಿಂಹ ಸತ್ಯನಾಥರಿಗೆ 3 ಯತಿಶ್ರೇಷ್ಠ ಸತ್ಯಾಭಿನವತೀರ್ಥರಿಗೆ | ಸತತ ಸಜ್ಜನಪಾಲ ಸತ್ಯಪೂರ್ಣರಿಗೆ || ಅತಿಶಯವಾನಂದ ಸತ್ಯ ವಿಜರಿಗೆ | ಮತ ಉದ್ಧಾರಕ ಶ್ರೀ ಸತ್ಯಪ್ರಿಯರಿಗೆ4 ಇಂತು ಗುರುಗಳ ಸಂತರೆ ಕೊಂಡಾಡಿ ಇಂತು ಸುತಾಪವನುರುಹಿ ಬಿಟ್ಟು || ಸಂತೋಷಿ ನಾನಾದೆ ವಿಜಯವಿಠ್ಠಲನ್ನ ಚಿಂತಿಯ ಮಾಡುವೆ ದಾಸರ ದಯದಿಂದ 5
--------------
ವಿಜಯದಾಸ
ಗೋಪಿ ಚಂದನದಿಂದ ಎ ನ್ನೊಡೆಯ ಮಧ್ವಾರ್ಯ ಹೃದಯವಾಸಾ ಕೃಷ್ಣ ಪ. ಮೃಡಸಖ ನಿನ್ನಯ ರೂಹವ ತೋರೆ ಕಡಲಿಂದೊಡನೆ ಬಂದೆ ಆನಂದತೀರ್ಥರ ಮುಂದೆ ನಿಂದೆ ಅ.ಪ. ಗೆಜ್ಜೆ ಕಾಲ್ ಕಡಗ ಸಜ್ಜಿನಿಂದಿಟ್ಟು ಮಜ್ಜಿಗೆ ಕಡಗೋಲು ನೇಣು ಸಹ ಸಜ್ಜನರ ಸಲಹಲು ಮಧ್ವಾರ್ಯರ ಮುಂದೆ ಗೆಜ್ಜೆ ಧ್ವನಿ ಮಾಡಿ ಕುಣಿಯುತ ಕೃಷ್ಣ 1 ಉಟ್ಟ ಪೀತಾಂಬರ ಉಡಿಗೆಜ್ಜೆ ವಡ್ಯಾಣ್ಯ ಇಟ್ಟು ಕೌಸ್ತುಭಹಾರ ತುಳಸಿಮಾಲಾ ಕೊಟ್ಟು ಅಭಯ ಹಸ್ತ ಸಲಹುವೆನೆಂಬಾ ಬಿರುದಿಟ್ಟು ಕಂಕಣ ತೊಟ್ಟು ಶ್ರೀ ಕೃಷ್ಣ 2 ಮಕರಕುಂಡಲ ಕಿರೀಟ ಶೋಭಿಸುತಲಿ ಅಕಳಂಕ ಚರಿತ ಶ್ರೀ ಶ್ರೀನಿವಾಸ ನಿಖಿಲ ಬ್ರಹ್ಮಾಂಡದೊಳೆಲ್ಲೆಲ್ಲು ಕಾಣೆ ಸಕಲ ದೇವರ ದೇವಾ ಶ್ರೀ ಕೃಷ್ಣ ಪ್ರಭುವೆ 3
--------------
ಸರಸ್ವತಿ ಬಾಯಿ
ಜಾನಕೀರಮಣನೆ ಮಾನದಿ ಸಲಹೆನ್ನ ಪ ಮಾನಾಪಮಾನ ನಿಂದೋ ದೀನರ ಬಂಧೋ ಅ.ಪ ದಾಸದಾಸರ ದಾಸ ದಾಸನಾಗುವೆನೆಂದು ಬೇಡುವೆ ದಯಸಿಂಧೋ ನೀಡು ವರವ ಬಂಧೊ 1 ನಂದತೀರ್ಥರ ಮತ ಎಂದೊ ಎನಗೆ ಹಿತ ಪೊಂದಿಸಬೇಕೊ ಸೀತಾಪತಿಯೆ ಕೇಳೆಲೊದಾತ 2 ನಾಮಗಿರಿ ಲಕ್ಷ್ಮೀಸ್ವಾಮಿ ಶ್ರೀ ನರಹರೆ ಚರಣ ಕಮಲಯುಗ ಸ್ಮರಣೆ ಸ್ಥಿರಪಡಿಸೊ 3
--------------
ವಿದ್ಯಾರತ್ನಾಕರತೀರ್ಥರು
ಜೋ ಜೋ ಜೋ ಜಗತ್ರಾಣ ಸುತ್ರಾಣ ಜೋ ಜೋ ಜೋ ಶುಭವಾಣಿಯ ರಮಣ ಜೋ ಜೋ ವೈಷ್ಣವ ಸಿದ್ಧಾಂತಿ ಶರಣ ಮುಖ್ಯಪ್ರಾಣ ಕಲ್ಯಾಣ ಪ. ಲೋಕಾ ಲೋಕ ಪರ್ವತಗಳ ಮ್ಯಾಲೆ ಏಕಾಕಾರದಿ ಪಾದಗಳೂರಿ ವ್ಯಾಕರಣಗಳ ದಿವಾಕರನಿದಿರಕಲಿ ಸ್ವೀಕರಿಸಿದ ಕರುಣಾಕರ ಮೂರ್ತಿ ಶ್ರೀಪತಿ ಕೃಷ್ಣನ ಸೇವಾನುಸಾರದಿ 1 ಕೋಪಾಟೋಪವ ಸಮರತಿ ತೋರಿ ಪಾಡಿದುಶ್ಯಾಸನ ವಕ್ಷೋವಿಧಾರಿ ದ್ರೌಪಧಿ ಕುಚಕಂಜ ಕುಟ್ಮಲಧಾ 2 ಸ್ವಾನಂದ ಪರಿಪೂರ್ಣ ಕೃಷ್ಣನ ದಾಸ ಆನಂದತೀರ್ಥ ತೋರುವ ಮಂದಹಾಸ ಶ್ರೀನಿಧಿ ವೆಂಕಟೇಶನ ನಂಬಿದವರ ತಾನೆ ಬಂದೊದಗಿ ಪಾಲಿಪ ದೇವಪ್ರವರ 3
--------------
ತುಪಾಕಿ ವೆಂಕಟರಮಣಾಚಾರ್ಯ
ಜೋ ಜೋ ಜೋ ಜೋ ಗೋಪಿಯ ಕಂದಾಜೋ ಜೋ ಜೋ ಜೋ ಸಚ್ಚಿದಾನಂದಾಜೋ ಜೋ ಜೋ ಜೋ ಮಲಗೋ ಮುಕುಂದಾಜೋ ಜೋ ಇಂದಿರಾರಮಣ ಗೋ'ಂದಾ ಜೋ ಜೋ ಪಅಣುರೇಣು ತೃಣಕಾಷ್ಠ ಪರಿಪೂರ್ಣ ಜೋ ಜೋಪ್ರಣತಕಾಮದ ಪದ್ಮಜಾರ್ಜಿತ ಜೋ ಜೋಜಾಣೆರುಕ್ಮಿಣಿಯರಸಿ ಶ್ರೀಕೃಷ್ಣ ಜೋ ಜೋಜಾನಕಿ ಜೀವನ ಶ್ರೀರಾಮ ಜೋ ಜೋ 1ಸ್ಟೃಸ್ಥಿತಿಲಯ ಕಾರಣ ಜೋ ಜೋಇಟ್ಟಿಗೆ ಮೇಲ್ನಿಂತ 'ಠ್ಠಲ ಜೋ ಜೋಬೆಟ್ಟದ ತಿಮ್ಮಪ್ಪ ಶೆಟ್ಟಿಯೆ ಜೋ ಜೋದಿಟ್ಟ ಶ್ರೀ ಉಡುಪಿಯ ಕೃಷ್ಣನೆ ಜೋ ಜೋ 2ಜೋ ಜೋ ಶ್ರೀರಾಮದೂತ ಹನುಮಂತಾಜೋ ಜೋ ಜೋ ಭೀಮ ದ್ರೌಪದಿಕಾಂತಾಜೋ ಜೋಯತಿವರ ಆನಂದತೀರ್ಥಾಜೋ ಜೋ ಮೂರಾವತಾರ 'ಖ್ಯಾತ ಜೋ ಜೋ 3ಜೋ ಜೋ ಮಧ್ವ ಸಂತಾನ ಮುನಿವೃಂದಾಜೋ ಜೋ ಪ್ರಲ್ಹಾದ ವ್ಯಾಸ ರಾಜೇಂದ್ರಾಜೋ ಜೋ ಗುರುಸಾರ್ವಭೌಮಯತೀಂದ್ರಾಭೂಪತಿ'ಠ್ಠಲನ ಮೋಹದಕಂದಾ ಜೋ ಜೋ 4
--------------
ಭೂಪತಿ ವಿಠಲರು
ದಯಮಾಡೋ ಹನುಮಾ ದಯಮಾಡೋ ಪ ಎನ್ನೊಡನಾಡೋ ಬೇಡಿದ ವರಗಳ ಎನಗೆ ನೀಡೋ ಅ.ಪ. ಅಂಜಾನಿಯ ಕಂದನೆ ಸಂಜೀವನ ತಂದನೆ ಅಂಜಾದೆ ರಕ್ಕಸರ ಕೊಂದಾನೆ 1 ಕೀಟಕಾಂತಕನೆ ಕಿರೀಟ ಸಖನೆ ಪಾಂಚಾಲಿ ಹೃತ್ಕುಮುದ ಚಂದ್ರನೆ 2 ಆನಂದತೀರ್ಥನೆ ಅಮ್ನಾಯಸ್ತುತನೆ ಮಾನಿಧಿವಿಠಲನ ದೂತನೆ 3
--------------
ಮಹಾನಿಥಿವಿಠಲ
ದಾಸರಾಗಿರೊ ವೈಷ್ಣವ ದಾಸರಾಗಿರೊ ದಾಸರಾಗಿ ಬಯಲಾಸೆಯ ನೀಗಿ ರ- ಮೇಶನ ಗುಣವಾರಾಶಿಯೊಳಿರಿಸುವ ಪ. ಸುಂದರ ಮಾನಾನಂದತೀರ್ಥಮತ ಸಾಂದ್ರ ಸುಖಾಂಬುಧಿಮಿಂದ ಮಹಾತ್ಮರ 1 ದಿವ್ಯಲೋಕಜನ ಭವ್ಯೋಭಯವಿಧ ಕಾವ್ಯರಚನ ಲಾತವ್ಯಯತೀಂದ್ರರ 2 ಸೀತಾಪತಿ ರಘುನಾಥನ ಮನದೊಳ- ಗಾತು ಭಜಿಪ ಗಣನಾಥ ಜನಕನ 3 ಶ್ರೀ ಮಹೇಶ ವಟು ವಾಮನ ಪದಯುಗ ಸಾಮಜವಾಹನ 4 ಕಾಕರಟನದೊಳ ಭೀಕರ ಮತವ ನಿ- ರಾಕರಿಸಿರುವ ಸುಧಾಕರ ಮೂರ್ತಿಯ 5 ತಂತ್ರ ದೀಪಿಕಾ ಯಂತ್ರವ ರಚಿಸಿದ ಮಂತ್ರಾಲಯವರ ಮಂತ್ರದೇವತೆಯ 6 ಗೋಪಿನಾಥನೆ ಭೂಪನೆಂದು ಸಂ- ತಾಪವ ಬಿಡಿಸುವ ಶ್ರೀಪಾದರ ಪದ 7 ಮಂದಕಲಿಯ ಕಾಲಿಂದಲೊರಿಸಿದ ಪು- ರಂದರದಾಸರ ಹೊಂದಿ ಹರಿಯ ನಿಜ8 ಸುಜನ ಹೃದಂಬುಜ ಸುಖಕರ ದಿನಮಣಿ ವಿಜಯರಾಜ ಪದ ಭಜನೆಯ ಮಾಡುತ 9 ಭಂಗುರ ಭವಭಯ ಭಂಗದ ಸುಗುಣ ತರಂಗನ ಒಲಿಸಿದ ಮಂಗಳ ಮಹಿಮರ 10 ಹರಿಕಥಾಮೃತದ ತೆರೆಗಳೊಳಾಡುವ ಪರತರಸಾರವ ಸುರಿದ ಮಹಾತ್ಮರ 11 ಸಿಡುಕರ ಸಂಸ್ಕøತಿ ಕಡಲೊಳು ಮುಳುಗಲು ಬಿಡದಲೆ ಕೈಪಿಡಿದೊಡೆಯನ ತೋರ್ಪರ 12 ಅರಿಷಡ್ವರ್ಗವ ತರಿದು ಬಿಸುಟು ಶ್ರೀ- ವರನ ಕೃಪಾರಸ ಸುರಿಸಿದ ಧನ್ಯರ 13 ಮೂಕನ ವಾಗ್ಮಿಯ ಮಾಡಿ ಮುರಾರಿಗೆ ಸಾಕ ಕೊಟ್ಟಿ ದೀನಾಕರದಾಸರ 14 ಮಾತಿಗೆ ಕಂಸಾರಾತಿನಲಿಯೆ ಜಗ ನ್ನಾಥರೆಂ¨ ವಿಖ್ಯಾತಿ ಪಡೆದವರ 15 ತಾಪತ್ರಯಗಳ ತಪ್ಪಿಸಿ ವೆಂಕಟ ಭೂಪನ ಸದಯಾರೋಪಗೈದವರು 16
--------------
ತುಪಾಕಿ ವೆಂಕಟರಮಣಾಚಾರ್ಯ
ದೃಢತರದ ಭಕುತಿಯಾ ತವದ್ವಾರದಿಂದಲಿ ದೊರಕುವುದು ನಿಶ್ಚಯಾ ತರಿ ಎನ್ನ ಮಾಯಾ ಪರಿಹರಿಸೋ ಈ ಭವತಾಪವ ಪರಿಹರಿಸದಲೇ ಭರದಿ ಬಂದೆನು ಪರಮ ಪಾವನ ಸತ್ಯಜ್ಞಾನ ಶ್ರೀ ಗುರುವರನೇ ತವ ಚರಣಕೆರಗುವೆ ಪ ಕರ್ಮಗಳೊಂದು ನಾನರಿಯೇ ನಿನ್ನಯ ಪಾಲಿಗೆ ಇಂದು ಚರಣಗಳ ದ್ವಂದ್ವಕೆ ಮಾಡದಲೆ ಸಲಹೋ ಆನಂದತೀರ್ಥರ ಪೀಠಪೂಜನೇ 1 ಭ್ರಷ್ಟನಾದವ ನಾನು ಸೃಷ್ಟಿಸಿದ ಹರಿಯನು ಮರೆತು ದಿನಗಳೆದನು ಪಡ್ಡೆರಧೊಟ್ಟಿ(ಪಡ್ಡೆರದು+ಹೊಟ್ಟಿ) ಹೊರಕೊಂಡೆನು ಪಾಪಿಷ್ಟ ನಾನು ಇಷ್ಟದಾಯಕ ಮುಟ್ಟಿ ಭಜಿಸುವೆ ಸುದೃಷ್ಟಿಯಲಿ ನೋಡಿ ಎನ್ನಯ ಕೆಟ್ಟ ಮನವನು ಕಳೆದು ಜ್ಞಾನದ ದೃಷ್ಟಿ ಕೊಡುವುದು ಶ್ರೇಷ್ಠ ಮಹಿಮನೆ 2 ದಾನಧರ್ಮಗಳನ್ನು ಈ ಕರಗಳಿಂದಲಿ ಮಾಡಲಿಲ್ಲವೊ ನಾನು ಹನುಮೇಶವಿಠಲನ ಸ್ಮರಣೆ ಎಂಬುವುದನ್ನು ಧನವನಿತೆಸುತರಾ ಮೋಹದೊಳು ಮರೆತೆನು ಗುರುವರನೆ ನೀನು ಜ್ಞಾನವಿಲ್ಲದ ದೀನದಾಸನ ಹೀನಗುಣ ಎಣಿಸದಲೆ ಪಾಲಿಸೊ ದೀನಜನ ಮಂದಾರನಿಲಯನೆ ಕಾಮಿತಾರ್ಥವನೀವ ದಾತನೇ 3
--------------
ಹನುಮೇಶವಿಠಲ