ಒಟ್ಟು 17 ಕಡೆಗಳಲ್ಲಿ , 14 ದಾಸರು , 17 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀನಿವಾಸಾ ನೀನೇ ಪಾಲಿಸೋ ಶ್ರೀಯುತಜನಪಾಲಗಾನಲೋಲ ಶ್ರೀ ಮುಕುಂದನೇ ಪಧ್ಯಾನಮಾಳ್ಪ ಸಜ್ಜನರ ಮಾನದಿಂ ಪರಿಪಾಲಿಸುವವೇಣುಗೋಪಾಲಾ ಗೋವಿಂದಾ ವೇದವೇದ್ಯ ನಿತ್ಯಾನಂದಾಅ.ಪಎಂದಿಗೆ ನಿನ್ನ ಪದಾಬ್ಜವ-ಪೊಂದುವ ಸುಖಎಂದಿಗೆ ಲಭ್ಯವೋ ಮಾಧವಾ ||ಅಂಧಕಾರಣ್ಯದಲ್ಲಿ ನೊಂದು ತತ್ತಳಿಸುತಿಹಅಂದದಿಂದ ಈ ಭವದಿನಿಂದುನೊಂದೆನೋ ಮುಕುಂದ1ಎಷ್ಟುದಿನ ಕಷ್ಟಪಡುವುದೋ-ಯಶೋದೆಯ ಕಂದದೃಷ್ಟಿಯಿಂದ ನೋಡಲಾಗದೆ ||ಮುಟ್ಟಿ ಭಜಿಸುವನಲ್ಲ ಕೆಟ್ಟ ನರಜನ್ಮದವನುದುಷ್ಟಕಾರ್ಯ ಮಾಡಿದರು ಇಷ್ಟನಾಗಿ ಕೈಯ ಹಿಡಿದು 2ಅನುದಿನಅನೇಕ ರೋಗಗಳ-ಅನುಭವಿಸಿದೆನೊಘನಮಹಿಮ ನೀನೆ ಬಲ್ಲೆಯಾ ||ತನುವಿನಲ್ಲಿ ಬಲವಿಲ್ಲ ನೆನೆದ ಮಾತ್ರ ಸಲಹುವಹನುಮದೀಶಪುರಂದರವಿಠಲ ನೀ ಎನಗೆ ಒಲಿದು3
--------------
ಪುರಂದರದಾಸರು
ಸುಮ್ಮನೆ ಕಾಲವ ಕಳೆವರೆ - ಯಮ - |ಧರ್ಮರಾಯನ ದೂತರೆಳೆಯರೆ ಪ.ನರಿ - ನಾಯಿ ಜನುಮವು ಬಾರದೆ - ಹಾಗೆ - |ನರಜನ್ಮದಲಿ ಬಂದು ಸೇರದೆ ||ಹರಿಯ ಸ್ಮರಣೆ ಮಾಡಲಾರದೆ - ಸುಮ್ಮ |ನಿರಲು ಪಾಪದ ವಿಷವೇರದೆ 1ಬಾಲನಾಗಿದ್ದಾಗ ಬಹುಲೀಲೆ - ಮುಂದೆ |ಲೋಲನಾಗಿ ಬಾಳಿದ ಮೇಲೆ ||ಮೂಳ ವೃದ್ಧಾಪ್ಯ ಬಂತಾಮೇಲೆ - ಇನ್ನು - |ಬಾಳುವುದೆಲ್ಲ ನೂಲಮಾಲೆ 2ಮಡದಿ - ಮಕ್ಕಳ ಕೂಡಣ ಬಾಳು - ತನ್ನ |ಒಡಲಿಗಾಗೆ ತಾನು ಕರವಾಳು ||ಬಿಡದೆ ಸಂಕೀರ್ತನೆ ಮಾಡೇಳು - ಮಿಕ್ಕ - |ನುಡಿದ ನುಡಿಗಳೆಲ್ಲವು ಬೀಳು 3ಮನೆಮನೆ ವಾರ್ತೆಯು ಸ್ಥಿರವಲ್ಲ - ಈ |ಮನುಜರ ಮಾತೇನು ಘನವಲ್ಲ ||ವನಜಸಂಭವಗೂ ನಿಶ್ಚಯವಿಲ್ಲ - ಮುಂದೆ |ಹನುಮಂತ ಪಟ್ಟಕೆ ಬಹನಲ್ಲ 4ಇಂದಿನಹಮ್ಮು ನಾಳೆಗೆ ಇಲ್ಲ -ಭವ |ಬಂಧನದೊಳು ಸಿಕ್ಕಿ ನರಳಿದೆನಲ್ಲ ||ಮುಂದನರಿತು ನಡೆದುದಿಲ್ಲ - ಮೃತ್ಯು |ಬಂದಾಗ ಬಿಡಿಸಿಕೊಳ್ಳುವರಿಲ್ಲ 5ಮರಣವುಆವಾಗ ಬರುವುದೋ - ತನ್ನ |ಶರೀರವುಆವಾಗ ಮುರಿವುದೊ ||ಕರಣಂಗಳೆಲ್ಲವು ಜರಿವುದೊ - ತನ್ನ |ಗರುವದುಬ್ಬಸವೆಲ್ಲ ಮುರಿವುದೊ 6ಮರಣಕಾಲಕೆ ಅಜಮಿಳನಾಗ - ತನ್ನ |ತರಳನನಾರಗನೆಂದು ಕರೆದಾಗ ||ಕರುಣದಿ ವೈಕುಂಠ ಪದವೀಗ -ನಿತ್ಯ - |ಪುರಂದರವಿಠಲನ ನೆನೆ ಬೇಗ 7
--------------
ಪುರಂದರದಾಸರು