ಒಟ್ಟು 398 ಕಡೆಗಳಲ್ಲಿ , 63 ದಾಸರು , 359 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

3ಜಯಮಂಗಳಂ ನಿತ್ಯ ಶುಭಮಂಗಳಂ ಪ ಅಂಜನೆಯ ಕುವರಂಗೆ ಭಿಂಜನನ ಪುತ್ರಂಗೆಪಂಜುಗದಿರನ ನುಂಗೆ ಅಂಜದಲೆ ಜಿಗಿದಂಗೆಕಂಜಾಕ್ಷ ಶ್ರೀರಾಮ ದೂತಂಗೆ ಹನುಮಂಗೆಸಂಜೀವಿನಿಗೆ ಮುಖ್ಯ ಪ್ರಾಣ ದೇವಂಗೆ 1 ಕಾನನದಿ ರಾಮನಿಗೆ ತಾನಾದ ಭೃತ್ಯಂಗೆದಾನವನ ಲಂಕೆಯನು ಸೂರೆಗೊಂಡವಗೆಜಾನಕಿಯ ಸುದ್ದಿಯನು ತಂದುರುಹಿದಾತಂಗೆವಾನರ ಪ್ರಮುಖನಿಗೆ ಧೀರ ಮಾರುತಿಗೆ 2 ದುಷ್ಟರನು ಶಿಕ್ಷಿಸುತ ಕಷ್ಟಗಳ ಪರಿಹರಿಸಿತುಷ್ಟಿಕೊಡುವಾತನಿಗೆಸೃಷ್ಟಿಯಲಿ ಸಕಲ ಜನ ಪೂಜ್ಯನಿಗೆ ಮಹಿಮನಿಗೆಶ್ರೇಷ್ಠ ಗದುಗಿನ ವೀರನಾರಾಯಣನ ಪ್ರೀಯಂಗೆ 3
--------------
ವೀರನಾರಾಯಣ
ಅದ್ರಿಸಂಭವೆ ಸರ್ವಸಂಭ್ರಮದೊಳುಭಾದ್ರಪದ ಶುದ್ಧ ತದಿಗೆಯ ದಿವಸದಿಸದ್ರಾಜಮಾರ್ಗದಿ ನಡೆತರಲುನಡೆತರೆ ಸತ್ಯಭಾಮೆ ರುಕ್ಮಿಣಿಯೊಳೀಭದ್ರೆ ಯಾರೆಂದು ನುಡಿದಳು 1 ಕೋಟಿ ಸೂರ್ಯಕಾಂತಿಯ ನವರತ್ನ ಕಿರೀಟಾಗ್ರದಿ ಚಂದನ ರೇಖೆಯಮೀಟೆನೆ ತಳೆದು ಬಾಹವಳಾರೆ ಅಕ್ಕಕೈಟಭವೈರಿಯ ಸತಿಕೇಳೆ ಮಧುಕೈಟಭ ದಾನವರ ಗೆಲಿದ ಶಶಿಜೂಟನ ವಲ್ಲಭೆ ಶಂಕರಿ ಶಾಕಂಬರಿಯೀಕೆ ಕಾಣೆ 2 ಸತಿ ಕೇಳೆಚಂಡಾಮುಂಡಾಸುರರನು ಗೆಲಿದು ಭೂಮಂಡಲವ ಕಾಯ್ದ ದೇವಿ ಭವಾನಿಯೀಕೆ ಕಾಣೆ 3 ವೀರಮುದ್ರಿಕೆ ಕಂಕಣ ಕಡಗವದೋರೆ ಹಿಂಬಳೆ ದಂಡು ಮುತ್ತಿನಹಾರವ ಧರಿಸಿ ಬಾಹವಳಾರೆ ಅಕ್ಕನಾರಾಯಣನರಸಿ ನೀ ಕೇಳೆಧೀರನಿಶುಂಭನ ಗೆಲಿದಮರರ ಪರಿವಾರವ ಪೊರೆದ ಪರಶಿವೆ ಪರಮೇಶ್ವರಿ ಕಾಣೆ 4 ಮೆರೆವೇಕಾವಳಿಗುಂಡಿನಸರಪರಿಪರಿ ಚಕ್ರಸರ ನಕ್ಷತ್ರದಸರಗಳ ಧರಿಸಿ ಬಾಹವಳಾರೆ ಅಕ್ಕಕರಿವರದನ ಅರಸಿ ನೀ ಕೇಳೆಧುರದೊಳೆ ಧೂಮ್ರಾಕ್ಷನ ವಧಿಸಿದಗಿರಿರಾಜ ಕುಮಾರಿ ಮಂಗಳಗೌರಿ ದೇವಿ ಈಕೆ ಕಾಣೆ5 ಅಚ್ಚ ಮುತ್ತಿನ ಸರಗಳ ನಡುವೆಪಚ್ಚೆಯ ರತುನದ ಪಂಚಸರಗಳನಿಚ್ಚಳದಿ ಧರಿಸಿ ಬರುವವಳಾರೆ ಅಕ್ಕಅಚ್ಚುತನ ಅರಸಿ ನೀ ಕೇಳೆಅಚ್ಚರಿಯನೆ ಶುಂಭ ನಿಶುಂಭರಕೊಚ್ಚಿದ ರುದ್ರಾಣಿ ಶಿವೆ ಶರ್ವಾಣಿ ಈಕೆ ಕಾಣೆ 6 ಚೆಂಗಾವಿಯ ಸೀರೆಯನುಟ್ಟುರಂಗುರತುನದೊಡ್ಯಾಣವನುಟ್ಟುಭೃಂಗಕುಂತಳನರ್ತಿಸೆ ಬಾಹಳಾರ ಅಕ್ಕಅಂಗಜನ ಮಾತೆ ನೀ ಕೇಳೆಸಂಗರದಲಿ ರಕ್ತಬೀಜನ ಗೆಲ್ದಗಂಗಾಧರನರಸಿ ಕಾಳಭುಜಂಗವೇಣಿ ಈಕೆ ಕಾಣೆ 7 ಝಗಝಗಿಸುವ ಕುಂಕುಮರೇಖೆಮಗಮಗಿಸುವ ಮೃಗಮದ ತಿಲಕದಿಅಗಿಲುಗಂಧದೊಳೊಪ್ಪುತ ಬಾಹಳಾರೆ ಅಕ್ಕನಗಧರನಂಗನೆ ನೀ ಕೇಳೆಜಗಳದೆ ಮಹಿಷನ ಮಿಗೆ ಮರ್ದಿಸಿದಗಣಿತ ಸನ್ಮಹಿಮಾಸ್ಪದೆ ಸರ್ವೇಶ್ವರಿ ಈಕೆ ಕಾಣೆ8 ಕೆಂದಾವರೆಯಂದವ ನಿಂದಿಪಬಂಧುರಪದದಂದುಗೆ ಕಲಿರೆನೆಕುಂದಣದ ಸರಪಣಿಯಿಟ್ಟು ಬಾಹಳಾರೆ ಅಕ್ಕಮಂದರಧರನಂಗನೆ ಕೇಳರ-ವಿಂದಜ ಸಂಕ್ರಂದನಮುಖಿ ಸುರವೃಂದವ ಪೊರೆವ ಮಾಹೇಶ್ವರಿ ಈಕೆ ಕಾಣೆ 9 ಮರುಗ ಮಲ್ಲಿಗೆ ಸುರಗಿ ಸೇವಂತಿಗೆಪರಿಮಳಿಸುವ ಸಂಪಗೆ ಕೇದಗೆ-ಯರಳನೆ ಮುಡಿದು ಬಾಹವಳಾರೆ ಅಕ್ಕಮುರಹರನಂಗನೆ ನೀ ಕೇಳೆವರ ಕೆಳದಿಯ ಪುರದೊಳು ನೆಲಸಿದವರದ ರಾಮೇಶ್ವರನಂಗನೆ ಪಾರ್ವತಿ ಈಕೆ ಕಾಣೆ 10
--------------
ಕೆಳದಿ ವೆಂಕಣ್ಣ ಕವಿ
ಅನರತ ಜಿವ್ಹದಿ ಆದಿನಾರಾಯಣನಾ ಕೃಷ್ಣಾ ಎನಬಾರದೆ ಮಹಿಮನಾದ ಕರುಣಾಸಾಗರ ಹರಿಯ ಕೃಷ್ಣಾ ಎನಬಾರದೆ ಪ ಗೋಕುಲವಾಸ ಗೋಪಿಯಕಂದನ ಕೃಷ್ಣಾ ಎನಬಾರದೆ ಕಾಕುಸ್ಥ ತಿಲಕನ ಕನಕಾಂಬರಧರನ ಕೃಷ್ಣಾ ಎನಬಾರದೆ ಶ್ರೀಕರ ಭಕ್ತರ ಪೊರೆವನ ಕೃಷ್ಣಾ ಎನಬಾರದೆ ಕೃಷ್ಣಾ ಎನಬಾರದೆ 1 ನವನೀತ ಚೋರನ ಕೃಷ್ಣಾ ಎನಬಾರದೆ ಸಿಂಧುಶಯನ ಗುಣಸಿಂಧು ಗಂಭೀರನ ಕೃಷ್ಣಾ ಎನಬಾರದೆ ಕೃಷ್ಣಾ ಎನಬಾರದೆ 2 ಕೃಷ್ಣಾ ಎನಬಾರದೆ ಮಾರಜನಕ ಕೋಟಿ ಮನ್ಮಥ ರೂಪನ ಕೃಷ್ಣಾ ಎನಬಾರದೆ ಧೀರ 'ಹೆನ್ನೆವಿಠ್ಠಲ’ ದಿವ್ಯ ಬಿಲವಾಸನ ಕೃಷ್ಣಾ ಎನಬಾರದೆ ದುರಿತ ಕೃಷ್ಣಾ ಎನಬಾರದೆ 3
--------------
ಹೆನ್ನೆರಂಗದಾಸರು
ಅನುದಿನ ಮನದಲಿ -----ದೆ ಪ ಮನಶುದ್ಧಿಯ ಮಾಡುವನು---------- 1 ಜಗತ್ರಯ ನಾರಾಯಣನ 2 ಇಂದಿರೆಯರಸನ ಇಷ್ಟರ ಬೆರೆದು 3 ನೀರಜ ನಯನನಾ 4 `ಹೆನ್ನೆವಿಠ್ಠಲ ದೇವರ ಇನ್ನುಸದಾ 5
--------------
ಹೆನ್ನೆರಂಗದಾಸರು
ಅಂಬಾ ಸರಸ್ವತೀ ದೇವಿ ಜಗ- ದಂಬಾ ಸರಸ್ವತೀ ದೇವಿ ಪ. ಅಂಭೋಜನಯನೆ ರೋ- ಲಂಬಕುಂತಳೆ ಜಗ . . . . ಅ.ಪ. ರುದ್ರಾದಿ ಸುರಕುಲ ಸಿದ್ಧಿಪ್ರದಾಯಕಿ ಶುದ್ಧ ಸತ್ವಕಲಾಪೆ ಶ್ರದ್ಧಾಭಕ್ತಿಸ್ವರೂಪೆ 1 ಮಾತ್ರಾಸ್ವರವರ್ಣಮಾನಿ ವಾಣಿ ಕಲ್ಯಾಣಿ ಸೂತ್ರಾರ್ಥಬೋಧಿನಿ ವಿಧಾತನ ರಾಣಿ 2 ಕ್ಷೀರಾಬ್ಧಿಶಾಯಿ ಲಕ್ಷ್ಮೀನಾರಾಯಣನ ಕರು- ಣಾರಸಪೂರೆ ಸುವಿಚಾರೆ ಗಂಭೀರೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಅಂಬಾ ಸರಸ್ವತೀ ದೇವಿ ಜಗ- ದಂಬಾ ಸರಸ್ವತೀ ದೇವಿ ಪ. ಅಂಭೋಜನಯನೆ ರೋ- ಲಂಬಕುಂತಳೆ ಜಗ . . . . ಅ.ಪ. ರುದ್ರಾದಿ ಸುರಕುಲ ಸಿದ್ಧಿಪ್ರದಾಯಕಿ ಶುದ್ಧ ಸತ್ವಕಲಾಪೆ ಶ್ರದ್ಧಾಭಕ್ತಿಸ್ವರೂಪೆ 1 ಮಾತ್ರಾಸ್ವರವರ್ಣಮಾನಿ ವಾಣಿ ಕಲ್ಯಾಣಿ ಸೂತ್ರಾರ್ಥಬೋಧಿನಿ ವಿಧಾತನ ರಾಣಿ 2 ಕ್ಷೀರಾಬ್ಧಿಶಾಯಿ ಲಕ್ಷ್ಮೀನಾರಾಯಣನ ಕರು- ಣಾರಸಪೂರೆ ಸುವಿಚಾರೆ ಗಂಭೀರೆ3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಅಳಗಿರಿಯಲಿ ಬೆಳಗಿಹೆಯ ಕಳವಳಿಸುವ ಮನ ಸುಳಿವದೆನ್ನಮಲ ಕಳೆದಭಯವನಿತ್ತು ನರಹರಿ ಪ. ಅಳಗಿರಿ ಹತ್ತಲು ಝಳ ಝಳ ಮನಸಲಿ ಸುಳಿದು ಭಯವ ಹರಿಸಿ ತೊಳಲಿದ ಭಕ್ತರಘ ಕಳೆದು ಪೊರೆವೆನೆಂದು ಅ.ಪ. ರಂಗನ ಮದುವೆಯೋಳ್ ವೆಂಕಟೇಶನು ಬೊಮ್ಮಗೆ ಮುಂಗಡ ನಿನಗುಣಿಸೆನೆ ಉಂಡನು ಹರೆ ರಂಗನ ಬೆಟ್ಟ ಬಾಷಿಂಗ ನರಸಿಂಗ ಹಿಂಗದೆ ವೆಂಕಟನ ತೋರಿಸೋ ಎನ್ನ ಕಂಗಳಲಿ ನೋಡುವೆ ಮನದಣಿಯೆ 1 ಬಂದ ಭಕ್ತರಿಗಭಯದಿಂದಲೇರಿಸಿ ಮುನ್ನ ತಂದೆ ತೋರಿ ವೆಂಕಟನ್ನ ರನ್ನನ್ನ ನಿಂದು ಶ್ರೀನಿವಾಸ ತಂದೆ ವರಹರಂತೆ ಇಂದೆನ್ನ ಕುಲದೇವತೆ ತಂದು ತೋರಿದೆ ನಿಮ್ಮ ಮೂವರ ರೂಹವ 2 ನಾರದ ವಂದ್ಯನ ನಾರೇರಿಗೊಲಿದನ ಶೂರ ಶ್ರೀ ಶ್ರೀನಿವಾಸನೆಂಬ ಪೆಸರಿನ ನೀ ಸಾರಿರ್ಪೆ ಪೆಸರ್ವ ನಾಮದಲಿ ನಾರಾಯಣನೆಂದ ಬಾಲನಿಗೆ ಒಲಿದನೆ ಆರಿಗು ವಶವÀಲ್ಲ ದಾರುಣನಿನಾಮ ನರಸಿಂಹ3
--------------
ಸರಸ್ವತಿ ಬಾಯಿ
ಆತ್ಮನಿವೇದನೆ ಅಪಮೃತ್ಯು ಪರಿಹರಿಸೊ ಶ್ರೀ ವೆಂಕಟೇಶ ಅಪರಾಧವೆಣಿಸದಲೆ ಉದ್ಧರಿಸೊ ಶ್ರೀಶಾ ಪ ಅಪರಾಧ ಸಹಸ್ರಗಳ ಮಾಡುತನುದಿನದಿ ಅಪರಿಮಿತ ಮಹಿಮ ನಿನ್ನನ್ನು ಸ್ಮರಿಸದೆ ಚಪಲ ಬುದ್ಧಿಗಳಿಂದ ತಪಿಸಿದೆನೊ ಭವದೊಳಗೆ ಗುಪಿತದಿಂ ಸಲಹಯ್ಯ ಪಿತನೆ ಕೈ ಮುಗಿವೆ 1 ಪೂರ್ವಕಾಲದೊಳೊಬ್ಬ ರಾಜಶೇಖರ ತನ್ನ ಮೋಜಿನಿಂದಲೆ ನಿನ್ನ ಸ್ಮರಣೆ ಮರೆತು ಮೂರ್ಜಗತ್ಪತಿಯ ಪೂಜಿಸದೆ ಕಾಲವ ಕಳೆಯೆ ಆ ಜವನ ದೂತರೆಳೆ ತಂದರೈ ಹರಿಯೆ 2 ಅಂದು ಯಮ ಭಟರುಗಳ ಬಂಧನದೊಳಿರೆ ನೃಪನು ಚಂದದಿಂ ಪಾಪಕರ್ಮಗಳ ನೋಡೆ ತುಂಬಿದ ಪಾಪವೆ ಬಹಳವಾಗುತಿರಲು ಇಂದಿರೇಶನ ಪೂಜೆ ಒಂದೆ ದಿನವೆನಲು 3 ಬಿಡದೆ ಇವನಿಗೆ ಶಿಕ್ಷೆ ಕೊಡಿರಿ ಎಂದೆನಲು ನುಡಿದರಾ ಭಟರುಗಳು ಮೊದಲು ಯಾವದು ಎನಲು ಮೊದಲು ಪುಣ್ಯವು ಎಂದು ನುಡಿದನಾ ನೃಪನು4 ತಕ್ಷಣವೆ ವಿಷ್ಣುದೂತರು ಬಂದು ನೃಪವರನ ಚಿತ್ತಜನಯ್ಯನಿಹ ಉತ್ತಮ ಸ್ಥಳಕೆ ಸತ್ಯವಂತರು ಬಹಳ ಕೀರ್ತಿಸುತ ಶ್ರೀಹರಿಯ ಮತ್ತೆ ವೈಕುಂಠದಲಿ ಮೆರೆಸಿದರು ಕ್ಷಣದಿ 5 ಒಡನೆ ಪುಣ್ಯವು ಮುಗಿಯೆ ನಡಿ ನರಕಕೆಂದೆನಲು ಒಡೆದು ಎದೆ ನಡುಗಿ ಕಳವಳಿಸಿ ನೃಪನು ನುಡಿದ ಹೀಗೆನುತ ಘರ್ಜಿಸುತ ಯಮದೂತರಿಗೆ ಬಿಡಿರಿ ನಿಮ್ಮಯ ಸತ್ಯ ನಿಜವಲ್ಲವೆನುತ 6 ನಾರಾಯಣನ ನೋಡಿದವರಿಗೆ ನರಕ ಭಯ ನಾರದರೆ ಈ ರೀತಿ ಸಾರಿ ಡಂಗುರವ ಹೀಗೆನಲು ನುಡಿಕೇಳಿ ಸಾರಿ ಪೇಳಿದರಾಗ ದೇವ ದೇವನೆ ಇದಕೆ ಉಪಾಯವೇನೆನಲು7 ಪರಮ ಕೃಪಾಳು ಹರಿ ಪರಮ ಭಕ್ತರನೆಲ್ಲ ಕರೆದು ಏಕಾಂತದಲಿ ಸರಸವಾಕ್ಯದಲಿ ಇರಲಿ ಈ ನರನ ವಾಕ್ಯದ ಜಾಣತನವನು ಸುರ ಲೋಕದವರು ಸ್ತುತಿ ಮಾಡಲೆಂದೆನಲು8 ಭಾಗವತ ಜನಪ್ರಿಯ ಬಾಗಿ ನಮಿಸುತಲಿ ವಂದನೆ ಮಾಡುವೆ ನಾಗಶಯನನೆ ನಿನ್ನ ಮಹಿಮೆಗೆಣೆಗಾಣೆನೊ ಬೇಗ ಪಾಲಿಸು ಕಮಲನಾಭ ವಿಠ್ಠಲನೆ 9
--------------
ನಿಡಗುರುಕಿ ಜೀವೂಬಾಯಿ
ಆನಂದಮಯಗೆ ಚಿನ್ಮಯಗೆ ಆ- ದಿನಾರಾಯಣಗಾರತಿ ಎತ್ತಿರೆ ಪ. ವೇದವ ತಂದು ಬೆಟ್ಟವ ಪೊತ್ತು ಧರಣಿಯ ಸಾಧಿಸಿ ಕಂಬದಿ ಬಂದವಗೆ ನೃಪರ ಸಂಹರಿಸಿದ ಆದಿಮೂರುತಿಗಾರತಿ ಎತ್ತಿರೆ 1 ಇಂದುವದನೆ ಸಹಿತ ಅರಣ್ಯದೊಳಗಾಡಿ ನಂದಗೋಕುಲದಲ್ಲಿ ನಲಿದವಗೆ ಮಂದಗಮನೆಯರ ಮುಂದೆ ನಿರ್ವಾಣದಿ ನಿಂದ ಮೂರುತಿಗಾರತಿ ಎತ್ತಿರೆ 2 ತುರಗವನೇರಿ ದುಷ್ಟರ ಸೀಳಿ ಭಕ್ತರ ಪೊರೆವ ಮಂಗಳ ಹಯವದನನಿಗೆ ವರದ ಯಾದವಗಿರಿ ಚೆಲುವನಾರಾಯಣನ ಚರಣಕಮಲಕಾರತಿ ಎತ್ತಿರೆ 3
--------------
ವಾದಿರಾಜ
ಆನಂದಾನಂದಂ ಶಿವಶಿವ ಆನಂದಾನಂದಂ ಪ. ಅಪ್ಪ ಅಣ್ಣನೆಂದು ಕರೆದರೆ ನಮಗಿಹ ತಪ್ಪುಗಳನು ಜಗದಪ್ಪನಿಗೊಪ್ಪಿಸುವಾನಂದಾನಂದಂ 1 ತತ್ತ್ವವರಿತು ಹರಿಭೃತ್ಯರೊಳಾಡುತ ಚಿತ್ತವ ಸಂತತೇಕಾತ್ಮನೊಳಿಡುವಂಥಾನಂದಾನಂದಂ 2 ಭೂರಿ ಸಂಸಾರಕೆ ಸೇರಿದೆ ನಿತ್ಯದಿ ಧೀರ ಲಕ್ಷ್ಮೀನಾರಾಯಣನೆಂಬುವದಾನಂದನಂದಂ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಆನಂದಾನಂದಂ ಶಿವಶಿವ ಆನಂದಾನಂದಂ ಪ. ಅಪ್ಪ ಅಣ್ಣನೆಂದು ಕರೆದರೆ ನಮಗಿಹ ತಪ್ಪುಗಳನು ಜಗದಪ್ಪನಿಗೊಪ್ಪಿಸುವಾನಂದಾನಂದಂ 1 ತತ್ತ್ವವರಿತು ಹರಿಭೃತ್ಯರೊಳಾಡುತ ಚಿತ್ತವ ಸಂತತೇಕಾತ್ಮನೊಳಿಡುವಂಥಾನಂದಾನಂದಂ2 ಭೂರಿ ಸಂಸಾರಕೆ ಸೇರಿದೆ ನಿತ್ಯದಿ ಧೀರ ಲಕ್ಷ್ಮೀನಾರಾಯಣನೆಂಬುವದಾನಂದನಂದಂ3
--------------
ತುಪಾಕಿ ವೆಂಕಟರಮಣಾಚಾರ್ಯ
ಆನೆಂತು ತುತಿಪೆ ನಿನ್ನಾ ಶ್ರೀ ಗುರು ರನ್ನಾ ಆನೆಂತು ತುತಿಪೆ ನಿನ್ನಾ ಪ ಆನೆಂತು ತುತಿಪೆ ಪಂಚಾನನಸುತ ಪವ ಮಾನ ಹನುಮ ಭೀಮ ಆನಂದತೀರ್ಥನೆ ಅ.ಪ. ಸನಕನಂದನ ಸನತಕುಮಾರಾದಿ ಮುನಿಗಳು ಹರಿ ದರುಶನವ ಮಾಡುವೆವೆಂದು ಘನಹರುಷದಿ ಮೋಕ್ಷವನು ಕುರಿತು ಬಂದೊ ಡನೆ ಬಾಗಿಲಲಿ ನಿಲ್ಲೆನಲು ಜಯ ವಿಜಯ ರನ ನೋಡಿ ಎರಡೊಂದು ಜನುಮದಲಿ ಕ್ರೂರ ಸಿರಿ ವನಜಾಕ್ಷರಗೋಸ್ಕರಾ ಅವತರಸಿ ಗುಣಪೂರ್ಣ ಗುರು ಸಮೀರಾ ಸೇವಿಪೆನೆಂದಾ ಕ್ಷಣದಿ ಜನಿಸಿ ವಾನರಾ ರೂಪಿಲಿ ಭುವ ವನದೊಳು ಮೆರೆದೆ ಅಸಮಶೂರಾ ಹರಿಹರಾ 1 ಕೋತಿ ಕಟಕಮಾಡಿ ಜಾತರಹಿತ ಹರಿ ಗೇ ತಲೆಬಾಗಿ ಸುಪ್ರೀತಿಯಿಂದಲಿ ರವಿ ಜಾತನ ಸಲಹಿ ಅತೀ ತೀವ್ರದಿಂದಲಿ ವಾತವೇಗದಿ ವನಧಿಯ ತಡಿಲ್ಲದೆ ದಾಟಿ ಮಾತೆಗುಂಗುರವಿತ್ತ ಶೋಕತರುಗಳ ಭೀತಿ ಬಡದಲೆ ಕಿತ್ತಿ ರೋಮ ಬಳ ವ್ರಾತವೆಲ್ಲವ ನುಗ್ಗೊತ್ತೀ ಲಂಕಾಪುರ ಜಾತವೇದಸಗೆ ಇತ್ತೀ ಹನುಮಶಿರಿ ನಾಥನಿಗೆರಗಿ ಪಡೆದ ಬಹುಕೀರ್ತಿ 2 ದುರುಳ ಕಲ್ಯಾದ್ಯರು ಊರ್ವಿಯೊಳ್ಪುಟ್ಟಿ ಸಂ ಚರಿಸುತ್ತ ಇರಲಾಗಿ ಮರುತದೇವನು ಅವ ತರಿಸಿ ಅವನಿಯೊಳು ದುರಿಯೋಧನುಣಲಿತ್ತ ಗರಳವ ಭುಂಜಿಸಿ ಅರಗಿನ ಸದನದಿ ಪುರೋಚನಾದಿಗಳನ್ನು ಉರುಹಿ ಏಕಚಕ್ರಾ ಪುರದಲ್ಲಿದ್ದ ಬಕಾಸುರನ ಸದೆದು ಭೂಮಿ ಸುರವೇಷವನೆ ಧರಿಸೀ ಪಾಂಚಾಲಿ ಸ್ವಯಂ ವರ ಪತಿಕರಿಸಿ ಮಗಧದೇಶ ದರಸನ ಸಂಹರಿಸೀ ರಾಜಸೂಯಜ್ಞ ಹರಿಗೆ ಅರ್ಪಿಸಿದಿ ಮೆರೆಸೀ 3 ಭಕುತಳಾದ ಇಂದುಮುಖಿ ದ್ರೌಪದಿಗೆ ಸೌಗಂ ಧಿಕವ ತರುವೆನೆಂದು ವೃಕೋದರ ಪೋಗಲು ಅಕುಟಿಲ ಹನುಮಂತನನು ಅವಲೋಕಿಸ್ಯಂ ಜಿಕೆಯಿಂದ ನಿಂದು ಮಾರಕಜನರಿಗೆ ಮೋ ಕುಪಥ ಖಳರನೊರಿಸಿ ನೀ ಸಖಿಗೆ ಪೂವಿತ್ತು ಗುರುಕುಮಾರನಸ್ತ್ರಕ ಳುಕದೆ ಯುದ್ಧವ ಮಾಡಿದೆ ದುಶ್ಯಾಸನ ರಕುತ ವೆರಿಸಿ ಕುಡಿದೆ ಉಭಯಗಳ ರ ಥಿಕರ ಬಲವಕರೆದೆ ಭಯದಲಿ ಉ ದಕದಲಿರ್ದ ದುರ್ಯೋಧನನೂರು ಕಡಿದೆ 4 ಭೀಮ ಭಯಂಕರ ಕಾಮಕೋಟಿ ಚಲ್ವ ಧೀಮಂತಜನ ಮನೋಪ್ರೇಮ ಪಾವನ ಗುಣ ಸ್ತೋಮ ಸರ್ವಾಧಾರ ಭ್ರಾಮಕಜನ ವನ ಧೂಮಕೇತುವೆ ಸರ್ವಾಸೀಮ ಸೌಖ್ಯ ಪೂರ್ಣ ಸಾಮಜ ಹರಿಗುರು ರೋಮ ಕೋಟೇಶ್ವರ ಶ್ರೀಮಾನ್ಯ ಭಕುತಲ ಲಾಮ ಭವ್ಯ ಚರಿತಾ ಸೋಮಕುಲ ಸೋಮ ಸುಖ ಭರಿತಾ ಭಕುತ ಪ್ರೀತಾ ಕಾಯ ಹಿತದಿಂದ ನಿರುತಾ 5 ಮಣಿಮಂತನೆಂಬವನಿಯೊಳು ಪುಟ್ಟಿ ವೇ ನನ ಮತ ಪಿಡಿದು ಜೀವನೆ ಪರಮಾತ್ಮನೆಂ ದೆನುತ ಸ್ಥಾಪಿಸಿ ಪಣೆಗಣ್ಣೆನ್ವರದಿಂದ ಅನಿಮಿಷರೆಲ್ಲರು ವನಜಜಗುಸುರಲು ಮುನಿಗಳು ಸಹ ನಾರಾಯಣನ ಪದಕೆ ದಂಡ ಪ್ರಣಾಮವ ಮಾಡಿ ಸ್ತೋತ್ರವಿನಯದಿ ಗೈಯೆ ಅನಿಲನ ಅವಲೋಕಿಸಿ ಪೇಳಲು ಹರಿ ಮನ ಭಾವವನು ಗ್ರಹಿಸಿ ಮಧ್ಯಗೇಹ ಮನೆಯೊಳಗವತರಿಸಿ ಮೆರೆದೆ ಗುರು ಅನುಗಾಲದಲಿ ನಿನ್ನ ಗುಣಗಳಾಶ್ರೈಸೀ 6 ವಾಸುದೇವನೆಂಬ ಭೂಸುರನಾಮದಿ ಲೇಸಾಗಿ ಚರಿಸಿ ಸಂತೋಷ ಭರಿತರಾಗಿ ಸಂ ನ್ಯಾಸಾಚ್ಯುತ ಪ್ರೇಕ್ಷರಾ ಕರಸರಸಿಜ ದೀ ಸಂತೋಷದಿ ಕೊಂಡು ಆಶÀಂಕರರÀ ಭಾಷ್ಯ ದೂಷಿಸೆ ಗರುಗಳುಲ್ಲಾಸ ಸನ್ಮುಖದಲಿ ವಿ ಶೇಷದಿಂದಲಿ ವಿರಚಿಸುವುದೆನಲು ಉ ಲ್ಲಾಸದಿಂದಲಿ ಕೇಳಿ ಆಕ್ಷಣದಿ ಸಂ ತೋಷ ಮನದಲಿ ತಾಳಿ ಮೋಹಕವ ಪರಿಹ ಆಶೆ ಪೂರೈಸಿದ ಘನನಿನ್ನ ಲೀಲೆ 7 ತರಳತನದಲಿ ಬದರಿಗೈದಿ ಪಾರಾ ಶರ ನಾರಾಯಣನ ಸಂದರುಶನ ಕೊಂಡು ತೀ ವರದಿಂದ ಹರಿತತ್ವ ನಿರ್ಣಯ ಶಾಸ್ತ್ರವ ವಿರಚಿಸುವುದಕಿನ್ನು ವರವ ಪಡೆದು ಬಂದು ದುರುಳ ಭಾಷ್ಯಗಳೆಂಬ ಗರಳ ತರುಗಳ ಮುರಿದಿಕ್ಕಿ ನೀ ಮೂವ ತ್ತೆರಡೈದು ಗ್ರಂಥಗಳ ನಿರ್ಮಿಸಿ ವಿಬು ಧರಿಗೆಲ್ಲ ಪೇಳಿ ವ್ಯಾಳ ಭೂಷಣದೇವ ಪರನೆಂಬ ಯುಕುತಿಜಾಲ ಹರಿದು ಹರಿ ಪರ ಶ್ರೀ ಬೊಮ್ಮಾದ್ಯರೆ ಗುರುಗಳೆಂದೆನಲು 8 ನಮೋ ನಮೋ ಸಮೀರನೆ ನಮೋ ಶ್ರೀ ಮುಖ್ಯಪ್ರಾಣ ನಮೋ ನಮೋ ದಯಾಸಿಂಧು ನಮೋ ಭಕ್ತಜನ ಬಂಧು ನಮೋ ನಮೋ ಗುಣಶೀಲ ನಮೋ ಭಾರತಿಲೋಲ ನಮೋ ನಮೋ ಭವ್ಯಾಂಗ ನಮೋ ಅರಿಗಜಸಿಂಗ ನಮೋ ನಮೋ ಜಗದ್ವ್ಯಾಪ್ತ ನಮಿತಜನರಾಪ್ತ ನಮೋ ನಮೋ ಸುಖತೀರ್ಥ ನಮೋ ಮೂರ್ಲೋಕದ ಕರ್ತ ನಮೋ ಗುರುಕುಲ ತಿಲಕ ಪಾಲಿಸು ಎನ್ನ ತಮಹರದೂರಶೋಕ ಸಜ್ಜನರಿಗೆ ಅಮಿತ ಮೋದದಾಯಕ ಶ್ರೀಭೂ ದುರ್ಗಾ ರಮಣ ಜಗನ್ನಾಥವಿಠಲ ಭಕ್ತಾಧಿಕಾ 9
--------------
ಜಗನ್ನಾಥದಾಸರು
ಆರು ಬಾಳಿದರೇನು ಆರು ಬದುಕಿದರೇನುನಾರಾಯಣನ ಸ್ಮರಣೆ ನಮಗಿಲ್ಲದನಕ ಪ ಉಣ್ಣ ಬರದವರಲ್ಲಿ ಊರೂಟವಾದರೇನುಹಣ್ಣುಬಿಡದ ಮರಗಳು ಹಾಳಾದರೇನುಕಣ್ಣಿಲ್ಲದವಗಿನ್ನು ಕನ್ನಡಿಯಿದ್ದು ಫಲವೇನುಪುಣ್ಯವಿಲ್ಲದವನ ಪ್ರೌಢಿಮೆ ಮೆರೆದರೇನು 1 ಅಕ್ಕರಿಲ್ಲದವಗೆ ಮಕ್ಕಳಿದ್ದು ಫಲವೇನುಹೊಕ್ಕು ನಡೆಯದ ನಂಟತನದೊಳೇನುರೊಕ್ಕವಿಲ್ಲದವಗೆ ಬಂಧುಗಳು ಇದ್ದರೇನುಮರ್ಕಟನ ಕೈಯೊಳಗೆ ಮಾಣಿಕ್ಯವಿದ್ದರೇನು 2 ಅಲ್ಪ ದೊರೆಗಳ ಜೀತ ಎಷ್ಟು ಮಾಡಿದರೇನುಬಲ್ಪಂಥವಿಲ್ಲದವನ ಬಾಳ್ವೆಯೇನುಕಲ್ಪಕಲ್ಪಿತ ಕಾಗಿನೆಲೆಯಾದಿಕೇಶವನಸ್ವಲ್ಪವೂ ನೆನೆಯದ ನರನಿದ್ದರೇನು 3
--------------
ಕನಕದಾಸ
ಆವ ಕುಲವಾದರೇನು ಶ್ರೀ ವಾಸು-ದೇವನೆಂದವನೆ ಧನ್ಯಾ ಪ ವಿಪ್ರ ಮಾ-ದಿಗಗಿಂತ ನಿಕೃಷ್ಟನೋ 1 ಊಧ್ರ್ವ ಪುಂಡ್ರಗಳ ಧರಿಸೀ ಶಿರದಲ್ಲಿಪದ್ಮಾಕ್ಷಿ ತುಲಸಿ ಮಾಲೆ ಹಾಕಿಮಧ್ವ ವಲ್ಲಭನೆನ್ನದಾ ಆ ವಿಪ್ರಶುದ್ಧ ಚಾಂಡಾಲನೆನ್ನೋ 2 ಪಂಚ ಮುದ್ರೆಗಳ ಧರಿಸೀ ಲೋಕ ಪ್ರ-ಪಂಚಕ್ಕೆ ದಾಸನೆನಿಸೀಪಂಚ ಭೇದವು ತಿಳಿಯದಾ ಆ ವಿಪ್ರಪಂಚ ಮಹಾ ಪಾತಕಿಯೋ3 ನಾರದಾನೆಂಬವನನೂ ಕುಲದಲ್ಲಿಆರೆಂದು ತಿಳಿಯೊ ನೀನು ನಮ್ಮನಾರಾಯಣನ ಸ್ಮರಿಸಲು ನೀಚ್ಯೋನಿಮೀರಿ ಸುರಮುನಿಯಾದನೋ 4 ವಿದುರ ವಾಲ್ಮೀಕರ ನೋಡು ಅವರ ತುದಿಮೊದಲು ನೀ ತಿಳಿದು ನೋಡು ನಮ್ಮಮದನನಯ್ಯನ ಭಜಿಸಲು ಅವರೆಲ್ಲಸದಮಲಾರಾದುದರಿಯಾ 5 ಜಾತಿ ಕಾರಣವಲ್ಲವೋ ಶ್ರೀ ಹರಿಗೆಭೂತಿ ಕಾರಣವಲ್ಲವೋ ||ಸ್ವಾತಂತ್ರ್ಯವನ್ನು ಮರೆದು ಶ್ರೀ ಹರಿಯಪ್ರೀತ್ಯಾಗಲೆನ್ನಬೇಕೋ 6 ಅನ್ಯ ಕರ್ತೃತ್ವ ಮರೆದು ಶ್ರೀ ಹರಿಗೆನಿನ್ನ ನಿನ್ನವನೆಂದಡೇತನ್ನ ದಾಸ್ಯವನೆ ಇತ್ತು ನಮ್ಮ ಮೋ-ಹನ್ನ ವಿಠ್ಠಲ ಸಲಹುವಾ 7
--------------
ಮೋಹನದಾಸರು
ಇಂಥ ಜನಗಳಿಗೆ ಎಂಥಾದ್ದು ಹರಿಕಥೆ ಕುಂತಿಮಕ್ಕಳಿಗಾಯ್ತು ಕಾಂತಾರವಾಸ ಪ. ಸ್ವಂತ ಧರ್ಮವ ಬಿಟ್ಟು ಆಂತನ್ಯಧರ್ಮವ ಸಂತಾಪಕ್ಕೊಳಗಾಗಿ ಭ್ರಾಂತಿಪಟ್ಟಿಹರು 1 ಜೀವಿಸಿ ಮೃಗದಂತೆ ಸಾವನು ಬಗೆಯದೆ ಕೇವಲ ತಾಮಸ ಯಾವಜ್ಜೀವನವು 2 ಸರಕಾರದ ಭಯ ಸರ್ವರಿಗಿದ್ದರು ಸರಿಯಾಗಿ ನಡೆಯದೆ ಬರಿದೆ ಬಳಲುವರು 3 ಬಡವರ ಬಾಯನು ಹೊಡೆದು ತಂದು ತನ್ನ ಮಡದಿಮಕ್ಕಳಿಗುಣಬಡಿಸಿ ಮೆರೆವರೈ 4 ಲಕ್ಷ್ಮೀನಾರಾಯಣನ ಲಕ್ಷಣಾಂಕಿತರನ್ನು ಲಕ್ಷ್ಯಕ್ಕೆ ತಾರದ ಕುಕ್ಷಿಂಭರರು 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ