ಒಟ್ಟು 2858 ಕಡೆಗಳಲ್ಲಿ , 112 ದಾಸರು , 2087 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿಖಿಳ ಗುಣಗಣ ಪೂರ್ಣ ಪ ಅಂಬುಜಾಸನ ಜನಕ ನರಹರಿ ಅಂಭ್ರಣೀ ಜಗನ್ನಾಥ ನಾಯಕ ಬಿಂಬ ವಿಷ್ಣುವೆ ನಿಖಿಳವಿಶ್ವಕೆ ತುಂಬಿ ಭಕ್ತಿಯ ಕಾಯೋ ಕರುಣಿ ಯೇ ಅ.ಪ. ತಂದೆಕಾರಣ ಭವದೀ- ನೀ ಎನ್ನ ಬಂದೆನಲ್ಲದೆ ನಿಜದೀ- ಸುಖಪೂರ್ಣ ನಿಂದು ನಡೆಸದೆ ಭವದೀ- ದಾಟಿನ್ನ ಎಂದಿಗಾದರು ಗೆಲ್ಲುವೆನೆ ಘನ್ನ ಬಂಧನಪ್ರದ ನೀ ಬಂಧಮೋಚಕ ತಂದ ವಿಷ್ಣುವೆ ಮೂಲಕಾರಣ ವೆಂದು ಶೃತಿಗಳವೃಂದ ನುಡಿವುವು ಬಂದು ನಿನಗಿಂತಧಿಕರಾರೈ ನಿಂದು ಹೃದಯದಿ ಸರ್ವಕಾಲದಿ ತಂದು ಉಣಿಸುವೆ ಸಕಲ ವಿಷಯವ ಬಂಧಿ ನಾನಿಹೆ ಜಡವೆ ನೀ ಬಿಡೆ ಮುಂದಿನಾಗತಿ ಬೇಗ ತೋರೈ ಇಂದಿರೇಶ ಮಹೇಂದ್ರ ಸುಖಮಯ ಕಂದರಾಶ್ರಯ ಬ್ರಹ್ಮಮಂದಿರ ನಂದಿವಾಹನ ತಾತ ವಿಭುವರ ಚಂದಗೋಚರ ಸಾರ್ವಭೌಮನೆ ಕೂಂದುನಕ್ರನ ಗಜವ ಸಲಹಿದೆ ನಂದನೀಡಿದೆ ಪಾರ್ಥಮಡದಿಗೆ ತಿಂದು ಎಂಜಲ ಕಾಯ್ದೆ ಶಬರಿಯ ಗಂಧ ಕೊಳ್ಳುತ ಕಾಯ್ದೆ ಕುಬ್ಜೆಯ ಕಂದ ಕೂಗಲ್ ಬಂದೆ ಕಂಭದಿ ಇಂದ್ರ ಗೋಸುಗ ಬಲಿಯ ಬೇಡದೆ ಮಂದರಾದ್ರಿಯ ಪೊತ್ತೆ ಸುರರಡೆ ಸುಂದರಾಂಗಿಯುಆದೆ ಹಾಗೆಯೆ ಹಿಂದೆ ಈತೆರ ನಿತ್ಯತೃಪ್ತನೆ ಬಂದು ಸಲಹಿದ ಭಕ್ತವೃಂದವ ಮಂದನಾದರು ಶರಣುಬಿದ್ದವ ನೆಂದು ಸಲಹೈ ಪೂರ್ಣಕರುಣಿಯೇ1 ಕೂಡಿಸುತ ಮನ ವಿಷಯ ಬಲೆಯಲ್ಲೀ ಮಾಡಿಸುವೆ ಮಾಡಿದ್ದ ದಿನದಿನದೀ ಗೂಢ ನಿನ್ನಯ ಭಕ್ತಿ ಕೊಡಲೊಲ್ಲೀ ಕೇಡುಮೋಹ ಸಜಾಡ್ಯ ಹರಿಸಿಲ್ಲೀ ಓಡಿಓಡಿಸೆ ಜಗವು ನಡೆವುದು ನೋಡಿನೋಡಿಸೆ ನಾವು ನೋಳ್ಪೆವು ಮಾಡಿಮಾಡಿಸೆ ಕರ್ಮವಾಹುದು ಪ್ರೌಢ ನಿನ್ನಯ ಬಲದ ವಿಶ್ವಕೆ ಕಾಡಿಕಾಡಿಪ ವಿಷಯ ಬಿಡಿಸುತ ಹಾಡಿಹಾಡಿಸಿ ನಿಮ್ಮ ಕೀರ್ತನೆ ಆಡಿಆಡಿಸಿ ಸಾಧುಸಂಗದ ಜಾಡುತೋರಿಸೊ ಭಕ್ತಿ ಮಾರ್ಗದ ಕ್ರೋಢನರಹರಿ ಮತ್ಸ್ಯವಾಮನ ಪ್ರೌಢ ಭಾರ್ಗವ ರಾಮಕೃಷ್ಣನೆ ಗಾಡಿಕಾರ ಪರೇಶ ಬುದ್ಧನೆ ದೂಡು ಕಲಿಯನು ಕಲ್ಕಿದೇವನೆ ಕೂಡು ಮನದಲಿ ಬಾದರಾಯಣ ನೀಡು ಜ್ಞಾನವ ಜೀಯ ಹಯಮುಖ ಮಾಡು ದತ್ತಾತ್ರೇಯ ಕೃಪೆಯನು ಈಡುಕಾಣದು ಕಪಿಲಮೂರ್ತಿಯೆ ಬೀಡುಗೈದಿಹ ಬೀಜ ನಿದ್ರೆಯು ನೋಡಗೊಡದೈ ನಿನ್ನತುರ್ಯನೆ ನಾಡುದೈವಗಳನ್ನು ಭಜಿಸಲು ಓಡದದು ಎಂದೆಂದು ಸತ್ಯವು ಮಾಡುತಲಿ ಸಾಷ್ಟಾಂಗ ನತಿಗಳ ಜೋಡಿಸಿಹೆ ಶಿರ ಪಾದಪದ್ಮದಿ ಗಾಢಪ್ರೇಮದಿ ಸಲಹು ಭೂಮನೆ ಮೂಡಿಸುತನಿಜ ಭಕ್ತಿ ಜ್ಞಾನವ 2 ಎನ್ನ ಯೋಗ್ಯತೆ ನೋಡೆ ಫಲವಿಲ್ಲ ನಿನ್ನಕೃಪೆ ತೋರದಿರೆ ಗತಿಯಿಲ್ಲ ಅನ್ಯ ಹಾದಿಯು ಯಾವುದೆನಗಿಲ್ಲ ಘನ್ನಚಿತ್ತಕೆ ಬರಲು ತಡಿಯಿಲ್ಲ _ ಹೇನಲ್ಲ ಪೂರ್ಣಜ್ಞಾನಾನಂದ ಶಾಶ್ವತ ಪೂರ್ಣ ಚಿನ್ಮಯ ಪೂರ್ಣ ಮೂಲದಿ ಪೂರ್ಣ ನಂದದಿ ಪೂರ್ಣ ಅವಯವಿ ಪೂರ್ಣಶಕ್ತನೆ ಪೂರ್ಣಬೋಧ ಮುನೀಂದ್ರ ವಂದಿತ ಶರಧಿ ದೇವನೆ ಪೂರ್ಣನಿತ್ಯಾನಂದ ದಾಯಕ ಪೂರ್ಣಮಾಡೈ ಬಯಕೆ ತೂರ್ಣದಿ ನೀನೆ ಸರ್ವಾಧಾರ ಪ್ರೇರಕ ನೀನೆ ರಕ್ಷಕ ಸರ್ವಶಿಕ್ಷಕ ನೀನೆ ಸೀಮಾಶೂನ್ಯ ನಿಶ್ಚಯ ನೀನೆಪೊಗಳಿತನಿಖಿಳವೇದದಿ ನೀನೆ ವಾಚ್ಯನು ಸರ್ವಶಬ್ದದಿ ನೀನೆ ಮುಕ್ತಾಯಕ್ತ ಸೇವಿತ ನೀನೆ ದೋಷವಿದೂರ ಸ್ಥಾಣುವು ನೀನೆ ಸೃಷ್ಟಾ ದ್ಯಷ್ಟಕರ್ತೃವು ನಿನ್ನಸಮ ಉತ್ಕøಷ್ಟರಿಲ್ಲವು ನಿನ್ನ ದಾಸರು ಸರ್ವಜೀವರು ಭಿನ್ನರೈ ಸರ್ವತ್ರ ಸರ್ವರು ನಿನ್ನ ದಾಸರ ಭಾಗ್ಯಬೇಡುವೆ ಜನ್ಮಜನ್ಮಕು ಇದನೆ ಬಯಸುವೆ ನಿನ್ನ ನಂಬಿಹೆ ನಿನ್ನನಂಬಿಹೆ ಸಿರಿಪತಿ ಕೃಷ್ಣವಿಠಲನೇ 3
--------------
ಕೃಷ್ಣವಿಠಲದಾಸರು
ನಿನಗಿನ್ನ ನಾನಧಿಕ ಇಂದಿರೇಶಾ ಎನಗೆ ನಾಥನು ಉಂಟು ಅನಾಥನು ನೀನು ಪ ಕುಲಗೋತ್ರ ನಿನಗಿಲ್ಲ ಕುಲಗೋತ್ರ ಎನಗುಂಟು ಲಲಿತರೂಪನು ನಾನು ಅರೂಪ ನೀನೂ ಚೆಲುವ ಸುಗುಣಿಯು ನಾನು ಅಗುಣರೂಪನು ನೀನು ಬಲಹೀನನು ನೀನು ಸಬಲ ನಾನು ದೇವಾ 1 ನಾಮಧೇಯನು ನಾ ಅನಾಮಧೇಯನು ನೀನು ಕಾಮಕಾಮುಕ ನಾ ಅಕಾಮಿ ನೀನು ಪಾರನು ನಾ ಅಪಾರನು ನೀನಯ್ಯಾ ನೇಮಬದ್ಧನು ನಾ ಅನೇಮಿ ನೀನು 2 ಗತಿಯು ನೀನೆಗೈಯ್ಯ ಸದ್ಗತಿಯು ನಿನಗಾರಯ್ಯ ವ್ರತನೇಮ ಎನಗುಂಟು ನಿನಗಾವುವೋ ಸತತಮಾನಿಯು ನಾನು ಅಮಾನಿ ನೀನಯ್ಯ ವಿತತಕರ್ಮಿಯು ನಾನು ಕರ್ಮಹೀನನು ನೀನು 3 ಪತಿತಪಾತಕಿ ನಾನು ಪತಿತಪಾವನನು ನೀನು ರತಿಬದ್ಧನು ನಾ ವಿರತಿಯು ನೀನು ಶ್ರೀತಜನರಪಾಲ ಆಶ್ರಿತ ನಾನು ನಿನಗೈಯ್ಯ ಸತತಪಾಲಕ ನೀನು ಪಾಲ್ಯ ನಾನು 4 ದೂತರಾಧಮ ನಾನು ದೂತವತ್ಸಲ ನೀನು ಆತುರನು ನಾನು ನಿಜದಾತ ನೀನು ನೀತ ಗುರುಜಗನ್ನಾಥವಿಠಲರೇಯ ತಾತ ನೀ ಎನಗಯ್ಯ ನಿನಗಾವ ತಾತಾ 5
--------------
ಗುರುಜಗನ್ನಾಥದಾಸರು
ನೋಡಿರಿ ರಾಘವೇಂದ್ರರ ಮಾಡಿರಿ ನಮಸ್ಕಾರ ಬೇಡಿದ ಇಷ್ಟ ವರ ನೀಡುವರು ನಮ್ಮ ಯತಿವರ ಪ ಮಂತ್ರಾಲಯದಿ ನಿಂತಿಹ ಚಿಂತೆಗಳ ಪರಿಹರಿಸುವ ಕಂತುಪಿತನನಂತಗುಣ ತನ್ನಂತರಂಗದಿ ಸ್ತುತಿಸುವ ಇಂಥ ಯತಿಗಳ ಕಾಣೆ ಹರಿಯೇಕಾಂತ ಭಕ್ತರೆನಿಸಿಕೊಂಡು ಮಂತ್ರಾಕ್ಷತೆ ಫಲ ನೀಡಿ ತಾ ಸಂತಾನ ಸಂಪತ್ತು ಕೊಡುವರ 1 ವಾತ ಪಿತ್ತ ವ್ಯಾಧಿಗಳ ಸೇತು (ಶ್ವೇತ?) ಕುಷ್ಠರೋಗಗಳ ಪಾತಕಿಯರ ಪಾಪಗಳ ಪ್ರೀತಿಲಿಂದ ಕಳೆವರೊ ಪ್ರಖ್ಯಾತರಾಗಿ ಬೆಳೆವರೊ ಭೂತಳದಿ ಸನ್ನೀತ (ಸನ್ನಿಹಿತ?) ರಾದ ಸೀತಾಪತಿ ನಿಜದೂತರೆನಿಸೋರು 2 ಭಜಸÉ ಭಕ್ತರ ನೋಡುವ ಸದನಕೆ ಬಂದುಕೂಡುವ ಒದಗಿದಾಪತ್ತು ದೂಡುವ ಬಂದು ಮುದದಿ ತಾ ದಯಮಾಡುವ ಅಜನಯ್ಯನ ಕೊಂಡಾಡುತ ತುಂಗಾನದಿಯ ತೀರ ವಾಸವಾಗಿ ಹೃದಯದೊಳು ಭೀಮೇಶ ಕೃಷ್ಣನ ಪದವ ಭಜಿಸಿ ಪಡೆವರಾನಂದವ3
--------------
ಹರಪನಹಳ್ಳಿಭೀಮವ್ವ
ಪರಿ | ಪೋಷಿಸು ನೀ ಎನ್ನ | ಕರುಣಾರಸ ಪೂರ್ಣಾ ಪ ಶ್ರೀಶ ನೀನಲ್ಲದೆ | ಪೋಷಿಸುವರ ಕಾಣೇ | ಹುಸಿಯಲ್ಲ ಯನ್ನಾಣೆ ಅ.ಪ. ಗೋಪಿ ಜನರ ಪ್ರೀಯ | ಸುಮ್ಮನಿ ಜನ ಗೇಯಾಹೇ ಪರಮ ಪುರುಷ ತವ | ರೂಪ ಕಾಂಬುದೆಂದೂ | ಬಿನ್ನಪ ಸಲಿಸಿಂದೂ ||ಕಾಪಥ ಐಸದೆ | ಸುಪಧವ ನೀ ತೋರೋ | ಭಕುತ ಪೋಷ ಬಾರೋ |ದ್ರೌಪತಿಗಕ್ಷಯ | ವಸನವ ನೀನಿತ್ತು | ಕಳೆದೆಯೋ ಆಪತ್ತು 1 ಕಡಲ ಶಯನನೇ | ಮಡದಿ ಮಕ್ಕಳನ್ನ | ನಿನ್ನಡ್ಡಿಗ್ಹಾಕಿದೆನಿನ್ನಒಡಲಿಗಾಗಿ ದೈನ್ಯ | ಪಡಲಾರೆನೊ ಹರಿಯೇ | ಕೇಳೆನ್ನ ದೊರೆಯೇ ||ಮಡುವಿಲಿ ಮಕರಿಯ | ಬಿಡದೆ ಕಾಯ್ದ ಹರಿಯೇ | ಕರಿರಾಜನ ಪೊರೆಯೇಒಡಮೂಡಿ ಕಂಬದಿ | ದೃಡ ಭಕುತ ಜಂಗುಳಿಯ | ಪರಿಹರಿಸಿದೆ ಜೀಯ 2 ಪಾದ | ಲೀಲೆ ಬಹು ವಿನೋದ |ಪಾಪಿಯು ನಾ ನಿಜ | ಪಾವನ ನೀ ಕೇಳೋ | ನಾ ನಿನಗಡಿಯಾಳೋ ||ಗೋಪ ಗೋಪಿಯರ ಸ | ಲ್ಲಾಪಕೊಲಿದ ದೇವ |ಹೇ ಮಹಾನುಭಾವತಾಪ ಮೂರುಗಳ ಗುರು | ಗೋವಿಂದ ವಿಠಲ | ಪರಿಹರಿಪುದು ನಲ್ಲ 3
--------------
ಗುರುಗೋವಿಂದವಿಠಲರು
ಶಂಭು ಶಂಕರ ನಿಜಲಿಂಗಗೆ ಮಂಗಳಕುಂಭಿನೀಧರ ಭೂಷ ಲಿಂಗಗೆ ಮಂಗಳ ||ಮಂಡೀಯನಾದಿ ವ್ಯೋಮಕೇಶಗೆ ಮಂಗಳ |ರುಂಡಮಾಲೆಧರ ಈಶಗೆ ಮಂಗಳ 1 ತ್ರಿಪುಟ ತ್ರಿಪುರ ಸಂಹಾರಗೆ ಮಂಗಳ ವಿಪರೀತ ಪರಿಜ್ಞಾನ ಹರಗೆ ಮಂಗಳ 2 ಜ್ಞಾನದಾತನು ಗುರುನಾಥಗೆ ಮಂಗಳ |ಏನೆಂಬೆ ಗುರುಕೃಪೆ ನಿತ್ಯಗೆ ಮಂಗಳ 3
--------------
ಭೀಮಾಶಂಕರ
ಶರಣು ಶ್ರೀದೇವದೇವಾದಿ ಸದ್ಗುರುನಾಥ ಶರಣು ಸುರಮುನಿಜನರ ಪ್ರಾಣ ಜೀವನದಾತ ಶರಣು ಪರಬ್ರಹ್ಮ ಪರಮಾನಂದ ಭರಿತ ಸಿರಿ ಅರಸ ಕರುಣಾಳು ಶ್ರೀನಾಥ ಶರಣು 1 ವೇದ ಆಗೋಚರಾನಾದಿ ಗುರು ಅನಂತ ಸಾಧುಜನ ಸಹಕಾರ ಸಂತತ ಸದೋದಿತ ಸದ್ಬ್ರಹ್ಮ ಆನಂದ ಗುಣತ್ರಯ ವಿರಹಿತ ಆದಿ ಅನಾದಿ ಅವಿನಾಶ ಗುರುನಾಥ 2 ಸಂಜೀವ ಸದ್ಗುರುನಾಥ ಶಕ್ತನಹುದಖಿಳದೊಳು ಸಕಳಾರ್ಥಪೂರಿತ ಯುಕ್ತನಹುದಯ್ಯ ಶಕ್ತಿಯು ಗುರುಸಮರ್ಥ ಮುಕ್ತಿದಾಯಕ ಮಹಿಪತಿ ಪ್ರಾಣನಾಥ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶ್ರೀ ಸತ್ಯಬೋಧರು ನೋಡಿ ಧನ್ಯನಾದೆ ಸತ್ಯಬೋಧರಾಯಾ ಬೇಡಿದೊರುವ [ಬೇಡಿದ ವರವ] ನೀಡುವ ಪರಮದಯಾಕರನಾ ಪ ರಘುರಾಮನ ಸೇವೆಯನ್ನು ಮಾಡ್ದ ಮಹಿಮನಾ ಪೊಗಳಿ ಪಾಡುವರಿಗೆ ಮುಕ್ತಿ ಪಥವ ತೋರ್ವನಾ 1 ವಿಷವ ಮೆದ್ದು ಹರಿಕೃಪೆಯಿಂ ಜೀರ್ಣಿಸಿದವನಾ ಆಶೀರ್ವದಿಸಿ ಖಂಡೆರಾಯನುದ್ಧರಿಸಿದವನಾ 2 ವರಭೂಸುರರಾಡಿದ ನಿಂದೆಯನು ನುಡಿಯನಾ ತ್ವರದಿ ಕೇಳಿ ತೋರಿದನು ಇವನು ಸೂರ್ಯನಾ 3 ಕೊಡು ಭಕುತಿಯನು ನಿನ್ನೊಳು ಗುರುಸತ್ಯಬೋಧನೆ ಬಿಡಿಸೊ ನಿನ್ನ ಅಡಿಗೆ ಕಟ್ಟಿಕೊಳೈ ಕೊರಳನೆ 4 ಹರಿವಾಯುಗಳಲಿ ಕೊಡು ನೀ ನಿಜ ಭಕುತಿಯನೆ ವರದ ಶ್ರೀ ಹನುಮೇಶವಿಠಲನಡಿ ಸೇವಕನೇ 5
--------------
ಹನುಮೇಶವಿಠಲ
ಶ್ರೀನಿವಾಸ ಸಲಹೋ ನಮ್ಮ ಶ್ರೀನಿಧಾನ ಚರಣನೆ ಪ ಧ್ಯಾನ ನಿರತಮೌನಿಜನರ ಮಾನಸಾಬ್ಜಹಂಸನೆ ಅ.ಪ. ನಕ್ರಮುಖದಿ ಸಿಕ್ಕಿದಿಭನನಕ್ಕರಿಂದ ಪೊರೆದನೆ ಚಕ್ರಧರ ತ್ರಿವಿಕ್ರಮಾದಿ ಚಕ್ರಭೊಗಿ ಶಯನನೇ 1 ಬಿಟ್ಟು ನಿನ್ನ ಭ್ರಷ್ಟನಾಗಿ ಕೆಟ್ಟೆಜನ್ಮ ಜನ್ಮದೆ ಹುಟ್ಟಿ ಹುಟ್ಟಿ ಕಷ್ಟಪಟ್ಟೆ ಕೃಷ್ಣ ನಿನ್ನ ನಂಬಿದೆ 2 ಶರಣ ಜನರ ಪೊರೆವನೆಂಬ ಬಿರುದು ಧರಿಪನಲ್ಲೆಲಾ ಹರಿಣ ಹರಣಧರದೊಳಿರುವ ಕರುಣಿ ವರದ ವಿಠಲ 3
--------------
ಸರಗೂರು ವೆಂಕಟವರದಾರ್ಯರು
ಸುರಾಸುರಾರ್ಚಿತ ಸರೋಜಲೋಚನ ಸರಾಗದಿಂದೆನ್ನನೀಕ್ಷಿಸೈ ಪರಾಪರೇಶನೆ ಪರಾತ್ಪರನೆ ನೀ ಪರಾಕುಮಾಡದೆ ಪಾಲಿಸೈ ಪ ವಿರಾಜಮಾನ ಸುವಿರಾಜವಾಹನ ವಿರಾಟ್ಪುರುಷ ವಿಶ್ವಂಧರ ಕರಾರವಿಂದದಿ ಕರಾದಿಗಳ ಪಿಡಿ ಧರಾತಿಮರ್ದನ ಧುರಂಧರ 1 ಧರಾಧರಣಿಪಟು ಧರಾಧರಾಧಿಪ ಧುರಾವಹನ ದುರ್ಧರ್ಷಣ ಧರಾಮರರ ಬಹುಪರಾಭವವ ಬಲು ಸರಾಗದಲಿ ನಿರ್ವಾಪಣ 2 ಜರಾಮರಣಗಳ ನಿರಾಕರಿಸಿ ವಸುಂಧರಾಭರಣ ಗುಣಭೂಷಣ ಸುರಾರಿಮರ್ದನ ಶರಾಸನಾಂಚಿತ ಕರಾನಿಹಿತ ಮಣಿಕಂಕಣ 3 ಶಿರೀಷ ಕುಸುಮದ ಸರಿಸುಕೋಮಲಶರೀರ ನಿನ್ನದು ಈ ಪರಿ ಸಿರಿಯುದರದೊಳೇ ಸಿರಿಯಧರಿಸಿದ ಪರಿಯದೆಂತುಟೋ ಕೇಳ್ ಹರಿ 4 ಪಯೋಧಿತನಯಾ ವಯೋಸುರೂಪನೆ ದಯಾನಿಧೇ ಧರ್ಮಾತ್ಮನೆ ದಯಾರಸದಿ ಹೃತ್ಪಯೋಜಮಧ್ಯದಿ ನಿಯಾಮಿಸುವ ನಿರ್ಮಾಯನೆ 5 ವರೇಣ್ಯ ಸಜ್ಜನ ಶರಣ್ಯ ಪುಲಿಗಿರಿಯರಣ್ಯ ಮಧ್ಯವಿರಾಜಿತ ಹಿರಣ್ಮಯಾಂಬರ ಹಿರಣ್ಯಕಾಂತಕ ಹಿರಣ್ಯಗರ್ಭಸುಪೂಜಿತ 6 ವ್ಯಾಘ್ರನೆಂಬುವತ್ಯುಗ್ರ ದೈತ್ಯನಂ ನಿಗ್ರಹಗೈದ ಮಹಾತ್ಮನೆ ಶೀಘ್ರದಿ ಭಕ್ತಾನುಗ್ರಹಮಾಳ್ಪ ಸುರಾಗ್ರಗಣ್ಯ ಪುಣ್ಯಾತ್ಮನೆ 7 ಸುರರು ನರರು ನಿನ್ನರಿಮೆಯನರಿಯದೆ ನಿರುತವು ಸನ್ನುತಿಗೈವರೆ ಪರಮಪುರುಷ ಸುಖಕರ ನೀನೆನ್ನುತ ಪರಿಪರಿ ನಿನ್ನನೆ ಪೊಗಳ್ವರೆ 8 ಮೂಜಗ ಮಾಡುವ ಪೂಜೆಯಿಂದ ನೀನೀ ಜಗದಲಿ ಒಲಿದಿರ್ಪೆಯ ಮೂಜಗ ಪೂಜಿಪ ವ್ಯಾಜದಿಂದ ನಿಜಪೂಜೆಯ ನೀ ಕೈಗೊಂಬೆಯ 9 ನಿಜಪದದೊಳು ನೀನಜಭವ ಮುಖಸುರವ್ರಜಗೋಚರನಾಗಿಲ್ಲವೈ ಸುಜನರ ಪೊರೆಯವ ನಿಜಮತಿಯಿಂದಲಿ ತ್ರಿಜಗಕ್ಕೆ ಗೋಚರನಾಗಿಹೈ10 ನಿತ್ಯತೃಪ್ತ ನೀನತ್ಯುತ್ತಮ ನಿಜಭೃತ್ಯನಮತ್ರ್ಯನು ಮೋದದಿ ನಿತ್ಯದಿ ನಿನ್ನತ್ಯುತ್ತಮ ಪದದೊಳು ಭಕ್ತಿಯ ಪಾಲಿಸು ನೇಮದಿ 11 ಧರಣಿಯೊಳುರುತರ ಮೆರೆಯುವ ಫಣಿಭೂ ಧರದೊಳು ನಿರುತವು ಭಕ್ತರ ಸಿರಿವಲ್ಲಭ ವರದ ವಿಠಲ ಕರುಣಾಕರ 12
--------------
ವೆಂಕಟವರದಾರ್ಯರು
ಸ್ವಾಮಿ ಸರ್ವೋತ್ತಮಳೆ ಸಕಲ ಜನಕಾಧಾರೆ ಕಾಮಿತಾರ್ಥವನೀವ ಕರುಣಿ ಭೂದೇವಿ ಪ ಹರಿಯ ಪಾದದಲುದಿಸಿ ಹರಿಗೆ ವಧುವೆನಿಸಿ ಹರಿಗೆ ಸುತೆಯನು ಇತ್ತು ಹಿರಿಯಳಾದೆ ಹರಿನಾಮ ಕೀರ್ತನೆಯ ಹೊರೆವ ಧಾರುಣಿ ನಿನ್ನ ಮೊರೆಹೊಕ್ಕೆ ಮರೆಯದಿರು ಕರುಣದೋರೆನಗೆ 1 ಕ್ಷಮೆ ದಮೆಯು ಶಾಂತ ಸದ್ಗುಣವೊಪ್ಪುವಳೆ ನಿನಗೆ ಭ್ರಮೆಬಟ್ಟು ಭೂಭುಜರು ಕಡಿದುಕೊಳುತಿಹರು ಅಮಿತ ಮಹಿಳೆ ನಿನ್ನ ನಿಜವ ಬಲ್ಲವರಾರು ತಮಗೆ ಋಣವಿದ್ದುದನು ಕೊಂಡೊಯ್ವರಲ್ಲದೆ 2 ಚಿನ್ನ ಭಂಡಾರಗಳು ನಿನ್ನೊಡಲೊಳೊಪ್ಪಿದವು ಉನ್ನಂತ ರತುನಗಳು ನಿನ್ನೊಳಡಗಿಹವು ಅನ್ನ ಪಾನಂಗಳಿಗೆ ಬೀಜ ಮೂಲವೆ ನೀನು ನಿನ್ನ ಮರೆತಿಹ ಜನಕೆ ಮುನ್ನ ಸುಖವುಂಟೆ 3 ಒಬ್ಬ ರಾಯನ ಗೆಲುವೆ ಒಬ್ಬ ರಾಯನಿಗೊಲಿವೆ ಒಬ್ಬನಿಗೆ ಮೈಯ ನೀನು ಕೊಡುವೆ ಒಬ್ಬರಾದರು ನಿನ್ನ ನಿಜದಿ ಬಾಳ್ದಪರಿಲ್ಲ ಗರ್ಭಜಾತನ ಹರಿಯ ಕೈಯ ಕೊಲಿಸಿದೆಲಾ 4 ಅಂಬುಧಿಯೆ ವಸನಗಳು ಕುಂಭ ಕುಚಗಳೆ ಗಿರಿಯು ಸಂಭ್ರಮದ ನದಿ ಕಾಲುವೆ ನಿನ್ನ ಬೆವರುಗಳು ಎಂಭತ್ತನಾಲ್ಕು ಲಕ್ಷ ಜೀವರಾಶಿಗಳೆಲ್ಲ ತುಂಬಿಕೊಂಡಿರುತಿಹುದು ಅಂಗೋಪಾಂಗದಲಿ 5 ಮೂಢನಾದೆನು ನಿನ್ನ ಬೇಡಿಕೊಂಬರೆ ಮನದಿ ರೂಢಿ ದೇವತೆಯೆ ಮಾಡು ದಯವನು ನೀನು ಮನದಭೀಷ್ಟವನೆಲ್ಲ ಪಾಡು ಪಂಥವು ಬೇಡ ಪಡೆದ ಮಗನೊಡನೆ 6 ನಂಬಿದೆನು ನಾ ನಿನ್ನ ಕುಂಭಿನಿಯೆ ಕೈವಿಡಿದು ಇಂಬಾದ ಪದವಿಯನು ಸಂಭ್ರಮದಿ ಕೊಡುತ ಬೆಂಬಡದೆ ವರಾಹತಿಮ್ಮಪ್ಪ ಕರುಣದಲಿ ಹಂಬಲಿಪ ತೆರದಿಂದ ಸಲಹುವುದು ಜಗದಿ 7
--------------
ವರಹತಿಮ್ಮಪ್ಪ
ಹಯವದನಾ ಪಾಲಿಸೋ | ಹಯ ದೈತ್ಯ ನಿಧನಾ ಪ ಭಯಕೃತು ಭಯಹರ | ದಯದೃಶ ತೋರಯ್ಯ ಅ.ಪ. ಅಜ ಜನಕನೆ ಹರಿ | ದ್ವಿಜವರ ವಂದ್ಯನೆನಿಜಪದ ಹೃದಯಾಂ | ಬುಜದಲಿ ತೋರುತ1 ಕರ ಆದರದಲಿ ಪಿಡಿ | ದಾದರಿಸಿದನೇ 2 ಅರಿದರ ವರ ಗ್ರಂಥ ಜಪಸರ ಧರವರ ಉರಗಾತಪ | ಧರಿಸಿಹೆ ಶಿರಿಯನು 3 ಕೌಸ್ತುಭ ಕರ ಪಾದ | ಶತ ಪತ್ರ ನೇತ್ರಾ 4 ಭಾವಕೆ ಒಲಿವನೆ | ಭಾವದೊಳಗೆ ನಿಲ್ಲುಗೋವಿದಾಂಪತಿ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
* ಮುತ್ತೈದೆಯಾದೆ ನಾ ಮುರವೈರಿ ದಯದಿ ನಿತ್ಯತೃಪ್ತನು ಎನ್ನ ನಿಜಕರವ ಪಿಡಿಯೆ ಪ. ಗುರುಗಳುಪದೇಶಾಂಬುಧಿಯಲಿ ಪುಟ್ಟಿದ ಎನ್ನ ಕರೆದರು ಕಮಲಾಭಿದಾನದಿಂದ ವರುಷವೆಂಟಾಗೆ ಗುರುಜನಕ ಎನ್ನನುದಯದಿ ಸಿರಿವರನೆ ಪೊರೆ ಎಂದು ಒಪ್ಪಸಿದ ಕತದಿಂ1 ಗುರು ಕೊಟ್ಟ ಅಂಕಿತವೆ ಮಾಂಗಲ್ಯವಾಯ್ತೆನಗೆ ಗುರುವಿಟ್ಟ ನಾಮವೆ ತಿಲುಕವಾಯ್ತು ಗುರುಕರುಣವೆಂಬ ಕವಚವ ತೊಟ್ಟೆ ಹರುಷದಲಿ ಗುರು ಪ್ರೀತಿ ಎಂಬ ವಸನವನುಟ್ಟು ಮುದದಿ 2 ಗುರುವು ಬೋಧಿಸಿದ ಭಕ್ತಿ ಜ್ಞಾನ ವೈರಾಗ್ಯ ಸರಿ ಮಾಡಿ ಮೂರು ಕಾಲಿನ ಜಡೆಯನು ಪರಿಪರಿಯ ತತ್ವಗಳೆ ಚೌರಿ ರಾಗುಟಿ ಗೊಂಡ್ಯ ಗುರುವಾಜ್ಞೆ ಎಂಬ ಪುಷ್ಪವ ಧರಿಸಿ ಶಿರದಿ3 ಗುರುವಾಕ್ಯ ಶ್ರವಣವೇ ಕರ್ಣಕುಂಡಲವಾಯ್ತು ಗುರುವಿನ ನಿರ್ಮಾಲ್ಯವೇ ನಾಸಿಕಾಭರಣ ಗುರುನಾಮಗಳೆ ರತ್ನ ಪರಿಪರಿಯ ಹಾರಗಳು ಗುರುಭಕ್ತಿ ಎಂಬ ನಡು ಒಡ್ಯಾಣ ಧರಿಸಿ 4 ಗುರುವು ಪೇಳಿದ ಸದ್ಗುಣಗಳೆ ಪಾದಾಭರಣ ಗುರುವಿನ್ವಾತ್ಸಲ್ಯವೆ ಪರಿಮಳ ದ್ರವ್ಯ ಗುರು ಅನುಗ್ರಹವೆಂಬೊ ಮಂಗಳ ದ್ರವ್ಯಗಳು ಗುರು ಮಾತೆ ಎನ್ನ ಪೋಷಿಸಿ ಹರಿಗೆ ಕೊಡಲು 5 ಹೃದಯವೆ ಲಗ್ನ ಮಂಟಪ ದಿವ್ಯ ಶೃಂಗಾರ ಪದುಮಭವ ಸುರರೆ ನೆರದಿಹ ಬಂಧು ಬಳಗ ಒದಗಿ ಬಹ ಸುಜ್ಞಾನ ಸಂಬಾರ ಸಲಕರಣೆ ಮದನ ಪಿತನೆದುರಿಗೆ ನಿಲಿಸಿ ಧಾರೆಯನೆರೆಯೆ 6 ಗುರುವೆ ಜನನಿ ಜನಕ ಗುರುವೆ ಪುರೋಹಿತರು ಗುರುವಚನವೆಂಬ ಅಕ್ಷತೆ ಎರಚುತಿರಲು ಪರಮ ಜೀವಚ್ಛಾದಿ ಕದ ಪರದೆ ತೆಗೆಯುತಿರೆ ಹರಿಗೆ ಗುಣನಾಮ ಜೀರಿಗೆ ಬೆಲ್ಲ ಎರಚೆ 7 ಸುಮನೊ ವೃತ್ತಿಗಳೆಂಬ ಕಮಲದ್ಹಾರವನ್ಹಾಕಿ ಕಮಲನಾಭನ ಪದಕೆರಗಿ ನಿಲಲೂ ಕಮಲಹಸ್ತವ ಶಿರದ ಮೇಲಿಟ್ಟು ಶ್ರೀ ಕೃಷ್ಣ ಕಮಲೆ ನಿನ್ನನು ಪೊರೆವೆನೆಂಬ ಅಭಯ ಕೊಡಲು 8 ಸೂತ್ರ ಬಂಧಿಸಲು ಮುಕ್ತರಾರಾಧ್ಯ ಲಕ್ಷ್ಮೀಕಾಂತನು ಮುಕ್ತರಾರಾಧ್ಯ ಜಗದ್ಭರ್ತೃ ಮುನಿಜನವಂದ್ಯ ವ್ಯಕ್ತನಾಗಲು ಮನದಿ ಗುರು ಕಟಾಕ್ಷದಲಿ 9 ಗುರು ತಿಳಿಸಿದಂಥ ಸ್ವರೂಪದರ್ಪಣ ನೋಡಿ ಪರಮ ಸೌಭಾಗ್ಯ ಆನಂದಪಡುವೆ ಗುರುಗಳಂತರ್ಯಾಮಿ ಗೋಪಾಲಕೃಷ್ಣವಿಠ್ಠಲ ಗುರುಬಿಂಬನೇ ಎನಗೆ ಸುಖವ ಪಾಲಿಸಲಿ 10
--------------
ಅಂಬಾಬಾಯಿ
* ಶಿಲೆಯಲ್ಲಿ ಮಮತೆಯೇ ಸಿದ್ಧ ಪುರುಷ ಇಳೆಮೂರು ವ್ಯಾಪಕಗೆ ಈ ಮುನಿಯ ಬಳಿಯಾ ಪ. ದಶರಥಾತ್ಮಜ ಸೇತು ಬಂಧನವ ಗೈಯಲೂ ಅಸಮ ಸಾಹಸದಿ ಗಿರಿಗಳನೆ ತಂದೇ ಹಸನಾದ ಶಿಲೆಯೊಂದರಲಿ ರೂಪ ಮೂಡುವಡೆ ವಸುಧಿ ಸುತೆಪತಿ ಬೇಡವೆನುತಿರ್ದನೇನೈ 1 ನಡುಗೆ ಹುಲಿ ಘರ್ಜನೆಗೆ ಪಡೆದವಳ ಕೈ ಜಾರೆ ವಡೆದು ಶತವಾಗಲಾ ಗಿರಿಯಲ್ಲಿ ಮಮತೇ ವಡಮೂಡದವಗೆ ಈ ವಡೆದ ಪ್ರತೀಕದಲಿ ಇಡುತ ಅಭಿಮಾನವನು ಕಡು ಪೂಜೆಗೊಂಬೇ 2 ಧರೆಯಲ್ಲಿ ಚರಿಸಿ ಸದ್ಭಕ್ತರ ಜ್ಞಾನವನು ಹರಿಸಿ ಸಧ್ಗ್ರಂಥ ಕನ್ನಡಿಯ ತೋರಿ ಗಿರಿ ಏರುವಾಗ ಬೇಕೆನಲು ಶಿಲೆ ಇರಲಿಲ್ಲೆ ಬಿರುಕಾದ ಕಲ್ಲಿನಲ್ಲಿ ನೆಲಸಿರುವದೇನೈ 3 ಶಿಲೆಯೆ ನೀನೆನ್ನಲು ಅಜ್ಞಾನಿ ನುಡಿಯಹುದು ಶಿಲೆಯಲ್ಲಿ ನೀನೆಲು ಮತ್ತೊಂದು ಶಿಗದೇ ಬಲು ಛಿದ್ರ ತಂತಿಯಲಿ ಬಿಗಿಸಿ ಪೂಜೆಯಗೊಂಬ ಬಲವಂತದಾ ಮಹಿಮೆ ತಿಳಿಯಲಳವಲ್ಲಾ 4 ತಾಪಸರ ಪೂಜೆ ಸತ್ವವ ತೋರ್ವ ವೈಭವವೋ ಆಪನ್ನರನೆ ಕಾಯ್ವ ಆನಂದವೋ ಶ್ರೀ ಪರಮಹಂಸ ಪ್ರದ್ಯುಮ್ನತೀರ್ಥರಿಗೊಲಿದೆ ಗೋಪಾಲಕೃಷ್ಣವಿಠ್ಠಲನ ನಿಜದಾಸ 5
--------------
ಅಂಬಾಬಾಯಿ
1. ಗಜೇಂದ್ರಮೋಕ್ಷ ನಾರಾಯಣ ಎನ್ನಿರೊ ನಾರಾಯಣ ಎನ್ನಿ ನಾರದಾದ್ಯಖಿಳ ಮುನಿವಿನುತಾಯ ಪಾಹಿಮಾಂ ಘೋರ ಭವದುಃಖ ಸಂಹಾರಾಯ ಪ ಪಾಂಡುದೇಶದೊಳು ಇಂದ್ರದ್ಯುಮ್ನನೆಂಬ ಭೂ ಮಂಡಲಾಧಿಪನು ವೈರಾಗ್ಯದಲಿ ಹರಿಪಾದ ಪುಂಡರೀಕಧ್ಯಾನಪರನಾಗಿತಪಸಿಲಿರೆಚಂಡತಾಪಸನಗಸ್ತ್ಯಾ ಹಿಂಡು ಶಿಷ್ಯರ ಬೆರೆಸಿ ಬರಲು ಸತ್ಕರಿಸದಿರೆ ಕಂಡು ಗಜಯೋನಿಯೊಳು ಜನಿಸು ಪೋಗೆಂದು ಉ- ತಾ ಶುಂಡಾಲನಾದನರಸ 1 ಕ್ಷೀರಸಾಗರ ತಡದೊಳೈವತ್ತು ಯೋಜನ ವಿ- ಸ್ತಾರದಿಂದಿರುವ ತ್ರಿಕೂಟಾದ್ರಿ ಶೃಂಗತ್ರಯದಿ ರಾರಾಜಿತ ತಾಮ್ರರಚಿತ ಕಾಂಚನದಿಂದ ಮೇರುಸಮ ಗಂಭೀರದಿ ಪಾರಿಜಾತಾಂಭೋಜ ತುಳಸಿ ಮಲ್ಲಿಗೆ ಜಾಜಿ ಸೌರಭಗಳಶ್ವತ್ಥ ಚೂತ ಪುನ್ನಾಗ ಜಂ ವಾರಣೀಂದ್ರನು ಮೆರೆದನು 2 ಆನೆ ಹೆಣ್ಣಾನೆ ಮರಿಯಾನೆಗಳ ಸಹಿತಲಾ ಕಾನನವು ತೊಳಲುತ್ತ ಬೇಸಿಗೆಯ ಬಿಸಲಿನಲಿ ಕಂಡಿತು ಪಾನಾಭಿಲಾಷೆಯಿಂದ ನಾನಾ ಪ್ರಕಾರದಿಂ ಜಲಕ್ರೀಡೆಯಾಡುತಿರೆ ಏನಿದೆತ್ತಣ ರಭಸವೆಂದುಗ್ರಕೋಪದಿಂ ನೆಗಳು ಏನೆಂಬೆನಾಕ್ಷಣದೊಳು 3 ಒತ್ತಿ ಹಿಡಿದೆಳೆವುತಿರೆ ಇದೆತ್ತಣಯದೆನುತ ಮತ್ತೆ ಇಭರಾಜನೌಡೆತ್ತಿ ಫೀಳಿಡುತ ಎಳೆ ಸೆಳೆದುದು ಬಿಡದೆ ನೆಗಳವು ಇತ್ತಂಡವಿತ್ತು ಕಾದಿತ್ತು ಸಾವಿರ ವರುಷ ಪೊತ್ತರಿಸಿತ್ತೇನೆಂಬೆ ಮತ್ತಾ ಗಜೇಂದ್ರಂಗೆ ಚಿಂತಿಸುತ ಮತ್ತ್ಯಾರು ತನಗೆನುತಲಿ 4 ಬಂದುದಾ ಸಮಯದಲಿ ಹಿಂದೆ ಮಾಡಿದ ಪುಣ್ಯ ದಿಂ ದಿವ್ಯಜ್ಞಾನದಿಂ ಕಣ್ತೆರೆದು ಕೈಮುಗಿದು ಮುಕುಂದ ಮುನಿವೃಂದವಂದ್ಯಾ ಇಂದಿರಾರಮಣ ಗೋವಿಂದ ಕೃಷ್ಣ ಭಕ್ತರ ಬಂಧು ಕರುಣಾಸಿಂಧು ತಂದೆ ಸಲಹೆನ್ನ ನಾ ಮಾಯಾಪ್ರಬಂಧದಿ ನೆಗಳಿನಿಂ 5 ಪರಮಾತ್ಮ ಪರಮೇಶ ಪರಿಪೂರ್ಣ ಪರಾತ್ಪರ ಉರುತರ ಪರಂಜ್ಯೋತಿ ಪರಮಪಾವನ ಮೂರ್ತಿ ಪರಮೇಷ್ಠಿ ಪರಮಪುರುಷಾ ನಿರುಪಮ ನಿಜಾನಂದ ನಿರ್ಭಯ ನಿರಾವರಣ ನಿರಂಜನ ನಿರಾಧಾರ ನಿರವೇದ್ಯ ನಿಶ್ಯಂಕ ನಿತ್ಯನೈಮಿತ್ಯಕಾ ನೀ ಸಲಹೆನ್ನನೆಂದಾನೆ 6 ಗುಪಿತ ಕಂಠಧ್ವನಿಯೊ ಳಂತರಾತ್ಮಕನ ನೆನೆವುತ್ತಳುತ್ತಿರಲಿತ್ತ ಕರುಣದಿಂದಾಕ್ಷಣದೊಳನಂತಶಯನದೊಳೆದ್ದನು ಸಂತವಿಸಿ ಸಿರಿಮುಡಿಯ ಗರುಡವಾಹನನಾಗಿ ಚಿಂತೆಬೇಡವೆನುತ ಅಭಯ ಹಸ್ತ ಕೊಡುತ ಶ್ರೀ ದಂತಿವದನನ ನೆಗಹಿದಾ 7 ನೆಗಳ ಬಾಯನು ಚಕ್ರದಲಿ ಸೀಳಿ ಕರಿವರನ ಉಗುವ ಕರುಣದಿಂ ಮೈದಡಹಲ್ಕೆ ಗಜಜನ್ಮ ಕುಂಡಲದಿಂದ ಮಿಗೆ ಶೋಭಿಸುತಲೆಸೆದನು ವಿಗಡ ದೇವಲ ಋಷಿಯ ಶಾಪದಲಿ ಬಿದ್ದಿಳೆಗೆ ಮಿಗೆನಕ್ರನಾಗಿ ಹೂಹೂ ಎಂಬ ಗಂಧರ್ವ ಅಮರರೊಲುಮೆಗೆ ನೆರೆದನೋಲೈಸುತ 8 ಮಣಿಮಯ ಕಿರೀಟಕುಂಡಲ ಹಾರ ಪದಕ ಕಂ ಕಣ ಕೌಸ್ತುಭೋಜ್ವಲ ಸುಗಂಧ ಭೂಷಣ ಹಸ್ತ ಪಾಣಿಯಾ ಶಂಖಚಕ್ರಾಬ್ಜಧ್ವಜ ಕಸ್ತೂರಿ ತಿಲಕ ಪ್ರಣವ ತಾಕಿದನು [ಝಣ ಝಣಿತನೂ]ಪುರ[ದ] ದಂತ ಪಂಕ್ತಿಯ ಕೃಪೆ ಸಿರಿ ಮೊಗದ ಪೀತಾಂಬರದಾಲಂಕೃತದ ಸುರಸಿದ್ಧ ಸಾಧ್ಯ ಸಂದಣಿಯೊಳಗೆ ಮೆರೆದನು 9 ಹರಿಯನುತಿಗೈದಂಘ್ರಿಗೆರಗಲಾಕ್ಷಣದಲಿ ಭರದಿಂದಲೆತ್ತಿ ಕೇಳ್ಮಗನೆನ್ನನೀ ಶರಧಿ ಗಿರಿಶೃಂಗತ್ರಯ ಸಪ್ತದ್ವೀಪದಲಿ [ಧರಣಿದೇವಿ] ವರಲಕ್ಷ್ಮಿಯೊಳು ಗರುಡ ಶೇಷ ನಾರದ ಪ್ರಹ್ಲಾದ ಧ್ರುವ ರೊಲು ಸಿರಿವತ್ಸ ಶಂಖ ಚಕ್ರಾವತಾರದಲಿ ಸ್ಮರಿಸುವವರ ಕಾಯ್ವೆನೆಂದಾ 10 ಆವನಿದನುದಯ ಕಾಲದೊಳೆದ್ದು ಭಕ್ತಿಯಿಂ ಭಾವಶುದ್ಧಿಯಲಿ ಭಜನೆಯ ಮಾಳ್ಪ ಜನರಿಗ ಫಾವಳಿಯ ಪರಿಹರಿಸಿ ನರಜನ್ಮವನು ಕಳೆದು ಪರಿಶುದ್ಧರಾದಹರೆಂ- ದಾ ವಾಸುದೇವನಾಜ್ಞಾಪಿಸಿದ ಗಜೇಂದ್ರ ಸಹಿ ತಾ ವಿಹಂಗಾಧಿಪನನೇರಿ ಬಿಜಯಂಗೈದ ಆ ವೈಕುಂಠಪತಿಯ ನಂಬಿದ ಸೇವಕರಿಗೇನಿದು ಚೋದ್ಯವೇ11
--------------
ಬೇಲೂರು ವೈಕುಂಠದಾಸರು
ಅಂಕಿತ-ಗಿರಿಧರಸುತ ಗುರುಮಹೀಪತಿರಾಯಾ | ಕೊಡು ಎನಗೆ ಸುಮತಿಯಾ ಪ ಭಕ್ತರ ಸುರಧೇನು | ಐಗಳಿ ವೃತ್ತಿಯನು | ಮನಕೆ ತಾರದೆ ಘನ ವ್ಯಾಪರವನು | ಮಾಡುತ ಭಾಗ್ಯವನು | ಮಾಡಲು ತಿಮ್ಮವ್ವನು 1 ಭಾಸ್ಕರ ಮುನಿ ಬಂದು | ಧಾರುಣಿ ಜನರುದ್ಧರಿಸಲಲ್ಲೆ ನಿಂದು | ಇರಲು ದಯಾಸಿಂಧು | ನಾರಿಶಿರೋಮಣಿ ದರುಶನಕ್ಕೆ ತಂದು | ನೀನೆ ಗತಿಯೆಂದು | ಆರು ತಿಂಗಳಾರಾಧಿಸೆ ಸಲಹೆಂದು | ದೀನಜನ ಬಂಧು | 2 ಸತಿಪತಿಗಳ ಚಿತ್ತಾ | ಆಗುದು ಎನೆ ವನಿತಾ | ನಮಿಸಲು ಗುರುತಾತ | ಆತರಿದನು ತವ ಮುಖವನು ಈಕ್ಷಿಸುತಾ ಪಕ್ವಾಫಲವೆನುತಾ 3 ಮಂದಹಾಸದಿಂ ನುಡಿದನು ನಿಜಗುಟ್ಟು | ವ್ಯಾಪಾರವ ಬಿಟ್ಟು | ಚಂದದಿ ಯಾಚಕ ವೃತ್ತಿಲಿ ಮನನಟ್ಟು | ಎನೆ ಸಮ್ಮತ ಬಟ್ಟು | ಮಂದಿ ಕುದುರಿಗೆಲ್ಲರಿಗಪ್ಪಣೆ ಕೊಟ್ಟು | ನಿಲ್ಲದ್ಹರುಷ ತೊಟ್ಟು | ಉಪದೇಶವ ಕೊಟ್ಟು 4 ಯೋಗಧಾರಣದ ಕೀಲವ ದೋರಿಸಲು | ದೂದಿಯವೋಲ್ | ನಾನಾ ಬಯಕೆಗಳು | ತ್ಯಾಗವ ಮಾಡುವ ಅನ್ನ ಉದಕಗಳು | ಕ್ಲಪ್ತಕೆ ನಿಲ್ಲಿಸಲು | ಮುಗಿದವು ಹಸ್ತಗಳು 5 ಭ್ರೂಮಧ್ಯದ್ವಿದಳದಾ | ದ್ವಾರವ ತ್ಯಜಿಸುತ್ತಾ | ತ್ರಿಕುಟ ಶ್ರೀಹಟ ಗೋಲ್ಹಟ ಗೋಪುರದಾ | ನೋಡುತ ಸಂಭ್ರಮದಾ | ಪಂಕಜದೊಳಗಿದ್ದ 6 ನಿತ್ಯ ಪ್ರಭೆಯು ಅನುದಿನಾ | ಕಾಣುತ ಸಂಪೂರ್ಣಾ | ತಿಳಕೊಂಡ್ಯೋ ಪ್ರವೀಣಾ | ದಿಂದಲೇ ಭಯಹರಣಾ 7 ಅಂತಹದು ಬೇಗ | ನೋಡೆಂದನು ಅನಘಾ | ನಿನ್ನಲ್ಲೇ ಈಗಾ | ದುಷ್ಕøತ ತರುನಾಗಾ 8 ಆಗುದು ನಿರ್ಧಾರಾ | ನಿನ್ನುದರದಿ ಕುವರಾ | ಸಂಶಯ ಬಿಡು ಅದರಾ | ಭಕ್ತರ ಸಹಕಾರಾ 9 ಮುನಿವರನಾಜ್ಞೆದಿ ಸ್ವಸ್ಥಾನಕೆ ಬರುತಾ | ಕೆಲ ದಿವಸಲ್ಲಿರುತಾ | ಸತ್ಪುರುಷರೆನಿಸುತಾ | ಇರಲು ದಯವಂತಾ | ವೇಧಿಯು ಬಂತೆನುತಾ 10 ಅಂತರಂಗದಲಿ ತಿಳಿಯತಲಾಗ್ರಾಮ | ತ್ಯಜಿಸಿದೆ ನಿಸ್ಸೀಮಾ | ಧಾಮಾ ಮಾಡಿದೆ ನಿಷ್ಕಾಮಾ | ಬಟ್ಟರು ಬಹುಪ್ರೇಮಾ | ಗುರುಸಾರ್ವಭೌಮಾ 11 ಅಲ್ಲಿ ಮೂರು ಸಂವತ್ಸರ ಇರಲಾಗಿ | ಶರಣ್ಹಾಳಿಯು ಬಾಗಿ | ಇಲ್ಲಿ ನೀವು ದಯಮಾಡುವದೊಳಿತಾಗಿ | ಸರಿ ಬಾರದಾಗಿ | ಬಂದ್ಯೋ ಮಹಾತ್ಯಾಗಿ | ಬರಲು ವರಯೋಗಿ12 ಕರೆದೊಯ್ದರು ಸ್ತುತಿಸಿ | ಕರಣಿಕ ತನ್ನಯ ಸ್ಥಳದಲಿ ಗೃಹ ರಚಿಸಿ | ಕೊಡಲಂಗೀಕರಿಸಿ | ಹರುಷದಿ ವರಭಾಸ್ಕರ ಮುನಿಕರ ಸರಿಸಿ | ರುಹಜಾತನೆನಿಸಿ | ಇರುತಿರೆ ತೋರಿತು ಸಂತತಿ ಉದ್ಭವಿಸಿ | ಗುರುವಾಕ್ಯಫಲಿಸಿ 13 ಆರಿಂದಾಗದು ನೈರಾಶ್ಯಾಚಾರಾ | ನಡೆಸಿದೆ ಗಂಭೀರಾ | ಧಾರುಣಿ ಜನರಿಂದಧಿಕೃತ ಸಂಸಾರ | ಜಲ ಪದ್ಮಪ್ರಕಾರಾ | ಅನುದಿನ ವೈರಾಗ್ಯದಾಗರಾ | ಸಂಪತ್ತು ಅಪಾರಾ | ತಿಳಿದ್ಯೋ ಸುಕುಮಾರಾ 14 ಕೊಟ್ಟರ್ಹಿಡಿಯಲಿಲ್ಲ ಓರ್ವರ ಧನವು | ಪೂರ್ವದ ಸಂಗ್ರಹವು | ಸತಿಸುತ ಪರಿವಾರವು | ಭಕ್ತರ ಸಮುದಾಯವು | ಮೃಷ್ಟಾನ್ನ ಭೋಜನವು 15 ತುಕ್ಕವ್ವಳು ನಿಮ್ಮತ್ತಿಗೆ ಭಾವಿಕಳು | ಪ್ರೀತಿಯ ಶೇವಕಳು | ಫಕ್ಕನೆ ವಿನಯದಿ ಮೃದು ಮಾತಾಡಿದಳು | ಸತ್ಪುರುಷರಿಳೆಯೊಳು | ಅಕ್ಕರದಲಿ ದೋರುವರು ಶಿದ್ಧಿಗಳು ನೀವೇನಿಲ್ಲೆನಲು | ಆದೀತೆಂದೆನಲು16 ಸೊಸಿಯೊಳು | ತುಕ್ಕವ್ವ ತಿಳಿಸಲು | ಕೈಯ್ಯನೆಳೆಯಲು | ನೋಡುತ ಬೆರಗಾದಳು 17 ಲೋಕವನುದ್ಧರಿಸಲು ನೀನವತರಿಸಿ | ಜಡದೇಹವ ಧರಿಸಿ | ಕೊಟ್ಯೋ ಗುಣರಾಶಿ | ಕೊಂಡ್ಯೋ ಸುಖವಾಸಿ | ಬಹು ನರಕದ ವಾಸಿ 18 ಜಗದೊಳಗಿಹ ಶಿದ್ಧರ ಮುಕುಟದ ಮಣಿಯೇ | ಸಾಧಕರೊಳಗೆಣೆಯೆ | ದುರಿತಾಂಧ ದ್ಯುಮಣಿಯೆ | ಕುಹಕರಿಗೇನ್ಹೊಣೆಯೆ | ವರಸತ್ವದ ಗುಣಿಯೆ 19 ಕಾಲ ತಪ್ಪಿಸುವದೇನೈ ನಿಮಗರಿದೆ | ಮನದೊಳು ನೀನರಿದೆ | ತಾಳಿದ ದೇಹವ ಸಾಕೆನುತಲಿ ಜರಿದೆ | ಚಿದ್ರೂಪವ ಬೆರೆದೆ | ಬಹು ಭಕ್ತರ ಪೊರೆದೆ | ತಡಮಾಡಗೊಡದೆ20
--------------
ಕಾಖಂಡಕಿ ಶ್ರೀ ಕೃಷ್ಣದಾಸರು