ಒಟ್ಟು 404 ಕಡೆಗಳಲ್ಲಿ , 76 ದಾಸರು , 366 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಚ್ಚರಿಯೊಳಚ್ಚರಿಯು ಅಚ್ಯುತನ ನಾಮವಿದು ತುಚ್ಛ ಬುದ್ಧಿಯ ಬಿಟ್ಟು ಎಚ್ಚೆತ್ತು ನೋಡೊ ಪ ನಿಧಿಯು ತನ್ನೆದುರಿಗಿರೆ ವದರಿ ದುರ್ಯೋಧನನು ಮದಡನಾದನು ಬರಿದೆ ದಳವ ಕೊಂಡು ಸದಮಲಾತ್ಮನ ದಿವ್ಯ ಪದವನರ್ಜುನ ಪಿಡಿದು ಮುದದಿ ಭಾಗ್ಯವ ಪಡೆದನದ್ಭುತವ ನೋಡ 1 ಹರಿಯ ಯೋಗದ ಸಿರಿಯು ಇರುವ ನಿಜವರಿಯದೆ ಕುರುಡನಣುಗನು ಜರಿದು ಹಾಳಾದನು ಉರುತರದ ಭಕ್ತಿಯಿಂದೆರಗಿ ಕರಗಳ ಮುಗಿದು ನರ ತನ್ನ ಹೆಸರನ್ನು ಸಾರ್ಥಕವಗೈದ 2 ನೀಚಯುಕ್ತಿಗಳಿಂದ ಗೋಚರಕೆ ಬಹನಲ್ಲ ವಾಚಾಮಗೋಚರನು ಶ್ರೀಕಾಂತನು ಕೀಚಕಾರಿ ಪ್ರಿಯನ ಶ್ರೀ ಚರಣ ಭಕ್ತಿ ಭವ-ಮೋಚನಕೆ ಸೂಚನೆಯು ಆಚರಿಸಿ ನೋಡೋ 3
--------------
ಲಕ್ಷ್ಮೀನಾರಯಣರಾಯರು
ಅಂಜಬ್ಯಾಡಂಜಬ್ಯಾಡವೋ ಭೂನಂದಸೂನು ಪ ಅಂಜಬ್ಯಾಡಂಜಬ್ಯಾಡ ಕರುಣನಿಧಿಯೆಸಂಜೆ ಮುಂಜಾನಿಲ್ಲೆ ಬಾರೋ ಮಂಜುಳಾದ ಕಥೆಯ ಪೇಳ್ವೆ ಅ.ಪ. ಪಾಂಡುತನಯನಂತೆ ನಿನ್ನ ಭಂಡಿ ಬಾಹು ಕನ್ನೆಮಾಡಿಕಂಡ ಕಂಡ ಕಾರ್ಯದಲ್ಲೆ ದಂಡಿಸುವುದು ಎನ್ನೊಳಿಲ್ಲ 1 ಗೋಪಿಯಂತೆ ಸೊಂಟದಲ್ಲೆ ತ್ಯಾಪಿ ಹಗ್ಗಗಳನೆ ಕಟ್ಟಿಶ್ರೀಪತಿಯ ಒರಳಿಗ್ಹಾಕಿ ಆಪರಿಂದ ಕಟ್ಟೋಣಿಲ್ಲ2 ಜಾರ ಚೋರನಂತೆ ನಿನ್ನ ನಾರೇರಂತೆ ವ್ಯಾಸಮುನಿಯಮಾರಿಗ್ಹಾಕಿ ವಾರ್ತೆಯನ್ನು ದೂರೋಣಿಲ್ಲ ಜಗದಿ ಸ್ವಾಮಿ 3 ಮಂದಗಮನೆ ಮೋಹಕಾಗಿ ಚಂದ್ರಮೌಳಿಯಂತೆ ಬೆಣ್ಣೆಹಿಂದೆ ಮುಂದೆ ಓಡಿಸಿಂದು ದಣಿಸೋಣಿಲ್ಲ ಶ್ರೀಶಕೃಷ್ಣ 4 ಇಂದಿರೇಶ ಎನ್ನ ಹೃದಯ ಮಂದಿರದೊಳಿಟ್ಟುಕೊಂಡುಚಂದ ಚಂದ ಕಥೆಯ ಪೇಳ್ವೆ ನಂದತನಯ ನೊಂದಿಸುವೆನು 5
--------------
ಇಂದಿರೇಶರು
ಅಧ್ಯಾಯ ಏಳು ಜ್ಞಾಪಿತೋ ಬಕುಲಾವಾಕ್ಯಾಚ್ಛುಕ ಜೀವಾನು ಮೋದಿತಃ ಭೂಪೇನ ನಿಶ್ಚಿತೋ ಮಾಯಾದ್ವಿಪಹಾ ಯೋವರೋ ಹರಿಃ ವಚನ ಅರಸಿ ತನ್ನ ತೊಡೆಯಲಿರುವ ಪರಿಯು ಮಾತಾಡಿದಳು ಕೊರವಿ ಮಾತಿನರಗಿಳಿಯೆ ನೀನು ಅರಸಿ ಮಾತಿಗೆ ಬಾಯ ತೆರೆದು ಮಾತಾಡದಲೆ ಪರಮಗಂಭೀರ ಳಾಗಿರುವ ಪದ್ಮಾವತಿಯ ಕರಪಿಡಿದು ಏಕಾಂತ ದಲಿ ಕೇಳಿದಾಗ ಪರಮ ಅಂತ:ಕರಣೆ ಪರವಶದಿ ಆಗ 1 ರಾಗ:ಭೈರವಿ ಅಟತಾಳ ನಾ ಕೊಡಲೋಪ ಪ್ರೀತಿಯ ಮಗಳೆ ನಿನ್ನ ಮಾತಿಗೆ ಹೊರ್ತಿಲ್ಲ ಖ್ಯಾತೀಲೆ ವೇಂಕಟನಾಥ ನೆಂತೆನಿಪಗೆ ಅ.ಪ ಅರಸಗೆ ಪೇಳಲ್ಯೊ ನಾ ಬಲ್ಲಂಥ ಹಿರಿಯರ ಕೇಳಲ್ಯೊ ಸರಿ ಬಂದವರ ನೋಡಿಕಳಹಲ್ಯೊ 1 ಮಂದಿಯ ಕೇಳಲ್ಯೋ ನಾ ಕೊಡಲಾರದೆ ಜರಿಯಲÉ್ಯೂೀ 2 ಮಿತ್ರೇರ ಸಂಗತಿಯೋ ಅದು ಮಿಥ್ಯವೋ 3 ವಚನ ಕಾಮಜನಕರ ಸ್ಮರಿಸುತಲೆ ಜನರಮುಂದ್ಹೇಳುವದಕನು ಬಂದದÀು ತಾನೆ ಅನು ಅಪಹಾಸ್ಯವನು ಒಬ್ಬರನೋವು ತನಗೆಂಬುವದÀು ಹೇಳುವದಕನುಮಾನವ್ಯಾಕೆ 1 ರಾಗ:ನೀಲಾಂಬರಿ ಭಿಲಂದಿತಾಳ ಪತಿ ಅವನ ಸರಿಯಿಲ್ಲವನಿಯೊಳಗ ಅವನೇ ಜಗಜ್ಜೀವನನೆ ಪ ಮಂಜುಳಮಾತಿಗೆ ರಂಜ ಪಾದ ಕಂಜಕೆ ಅರ್ಪಿಸು ಅಂಜುವದ್ಯಾಕಮ್ಮ ಅಂಜನಾದ್ರೀಶಗೆ ಅಂಜಲುಬೇಡ ನಿರಂಜನೆ ಭಯಭಂಜನೆ 1 ಹೂವಿನ ತೋಟಕೆ ಪೋಗಲು ಚಿತ್ತಪಲ್ಲಟವಾಗಿ ನೀಟಾಗಿ ನಿರ್ಮಿಸಿ ಆಟವಮಾಡುವ ಕಪಟ ನಾಟಕನೆ 2 ಭೂಷಣ ಉರದಲ್ಲಿ ಶ್ರೀವತ್ಸವು ಚಲ್ವಿಕೆ ನೋಡಲು ಎಲ್ಲ ಜ್ಯೋತಿಗಳವನಲ್ಲಿ ನಿವಾಳಿಸಿ ಚಲ್ಲವುದು ಅಲ್ಲೇನಿಲ್ಲೆಂದು ಮತ್ತೆಲ್ಲಿ ಹಂಬಲಿಸದೆ ಅಲ್ಯವಗರ್ಪಿಸು ಆಹ್ಲಾದದಿಂದಲ್ಲೇ ಬಲ್ಲಿದನಾಂತಾದ್ರಿಯಲ್ಲಿರುವ ಎನ್ನೊಲ್ಲಭನೆ ಪ್ರಾಣದೊಲ್ಲಭನೆ 3 ವಚನ ಮಗಳಿಗÉಂದಳು ನಾ ನಿನ್ನ ಜಗ ಗಗನ ರಾಜನ ರಾಣಿ ಸುಗುಣ ಬಕುಲಾ ಬರುವರ ಕೂಡಿ ಬರುವಳಾ ಅಗಸಿಯೊಳಗೆ 1 ಹೊರಳಿ ನೋಡಿದ ಬರುವಳಿವಳ್ಯಾರೆಂದು ಕೊರವಿ ಕರೆಸಿದಳು ಬೇಗ ಸರಸಿ- ಎಂದು ಸುರಿಸಿ ಅಮೃತದ ವಾಣಿ ಬೆರೆಸಿ ಸ್ನೇಹವ ಮತ್ತೆ ತರಿಸಿ ರತ್ನದಪೀಠ ಇರಿಸಿ ಕೂಡೆಂದು ಕುಳ್ಳಿರಿಸಿ ಕೇಳಿದಳಾಗ ಹರುಷದಿಂದಾ2 ರಾಗ:ಗೌರಿ ಆಟತಾಳ ಲಲನೆ ನೀ ದಾರಮ್ಮ ಹೆಸರೇನು? ಶೇಷಾ ಚಲವಾಸಿ ಬಕುಲಾವತಿ ನಾನು 1 ಎಲ್ಲಿಗ್ಹೋಗುವೆ ಮುಂದೆ ನೀನು? ತಿಳಿ ಇಲ್ಲಿಗೆ ಬಂದೆ ನೇಮಿಸಿ ನಾನು 2 ನಿನ್ನ ಮನದ ಕಾರ್ಯಗಳೇನು? ಮುಖ್ಯ ಕನ್ಯಾರ್ಥಿಯಾಗಿ ಬಂದೆನು ನಾನು 3 ದಾವಾತ ವರನಾಗಿರುವನು?ದಿವ್ಯ ದೇವ ನೆಂದೆನಿಸುವ ತಿಳಿ ನೀನು4 ಕೃಷ್ಣವೇಣಿಯೆ ಅವನ್ಹೆಸರೇನು? ಶ್ರೀ ಕೃಷ್ಣನೆಂದೆನಿಸುವ ತಿಳಿ ನೀನು5 ತಾಯಿ ತಂದೆಗಳೆಂಬುವರಾರು?ತಿಳಿ ದೇವಕಿ ವಸುದೇವರು ಅವರು 6 ಚಂದಾಗಿ ಕುಲದಾವದ್ಹೇಳಮ್ಮ ಶುಭ ಚಂದ್ರಮನ ಕುಲಕೇಳಮ್ಮ 7 ಶ್ರೇಷ್ಠವಾಗಿಹ ಗೋತ್ರದಾವದು?ವಾ ಶಿಷ್ಠ ನಾಮಕವಾಗಿರುತಿಹುದು 8 ನಕ್ಷತ್ರ ಪೇಳು ಪನ್ನಗವೇಣಿ ಶ್ರವಣ ನಕ್ಷತ್ರ ತಿಳಿ ರಾಜನ ರಾಣಿ 9 ವಿದ್ಯೆಯಿಂದ ಹ್ಯಾಂಗಿರುವ? ಬ್ರಹ್ಮ ವಿದ್ಯೆಯಿಂದಲಿ ಗಮ್ಯ ಎನಿಸುವ 10 ಧನವಂತನೇನಮ್ಮ ಗುಣನಿಧಿಯೇ? ಬಹು ಧನವಂತರಾಗುವರವನಿಂದೆ 11 ಕಣ್ಣುಮೂಗಿಲೆ ಹ್ಯಾಗಿರುವವ?ಕೋಟಿ ಮನ್ಮಥ ಲಾವಣ್ಯ ಎನಿಸುವ 12 ಹೆಣ್ಣಿನ ಮನಸೀಗೆ ಬಂದೀತೇ? ಅವನ ಕಣ್ಣಿಲಿ ಕಂಡರೆ ತಿಳಿದೀತೆ 13 ಅದಾವು ದಿವಸೆಷ್ಟು ಪೇಳಮ್ಮಾ?ಇಪ್ಪ- ತ್ತೈದರ ಮೇಲಿಲ್ಲ ತಿಳಿಯಮ್ಮ 14 ಚಿಕ್ಕಂದು ಮದುವೆ ಇಲ್ಯಾಕಮ್ಮ?ಅವನ ತಕ್ಕ ಹೆಂಡತಿ ಇರುತಿಹಳಮ್ಮ 15 ಮುಖ್ಯಳಿರಲು ಮದುವ್ಯಾಕಮ್ಮ?ತಿಳಿ ಮಕ್ಕಳಿಲ್ಲದ ಕಾರಣವಮ್ಮ 16 ನೇಮದಿಂದಿರುತಿಹ ತಾನೆಲ್ಲಿ ತಿಳಿ ಶ್ರೀಮದನಂತಾದ್ರಿಯಲಿ 17 ರಾಗ:ಯರಕಾಲ ಕಾಂಬೋದಿ ಭಿಲಂದಿತಾಳ ಕಾಂತನ ಮುಂದ್ಹೇಳಿದಳೇ ಅಂತರಂಗದೊಳು ಚಿಂತೆ ಮಾಡಲು ಬೇಡ ಕೇಳು ಸಂತೋಷದ ಸುದ್ದಿ 1 ಕೊರವಿ ಬಂದಿದ್ದಳು ಮರಗುತ ಮಲಗಿದ ಕೊರವಿ ಕಾಲ್ಗುಣದಿ 2 ಪರಿ ಕೊರವಿ ನಾಡ ಸಖಿಯರ ಕೂಡಿ ಪ್ರೌಢ ಪುರುಷನ 3 ಪ್ರಾಕೃತ ಪುರುಷನಲ್ಲ ಜ್ವರಮಗಳಿಗೆ ಬಂತೆಂದು ಕಾಮಜ್ವರವಂತೆ ಕೇಳು 4 ನಾಶಾವಾಯಿತು ಇನ್ನು ನಿತ್ಯನಿವಾಸಿಯೆನಿಸುವ ಅವಗೆ ತೋಷದಿ ಕೊಟ್ಟರೆ ಜ್ವರ ನಿಶ್ಯೇಷ ಹೋಗುವದು 5 ಎನ್ನ ಮನೆಯಲಿ ಚೆನ್ನಾಗಿ ಪೇಳುವಳು ಚೆನ್ನಿಗವನನ್ಯಾರೆಂದು 6 ಪೇಳುವಳು ಇನ್ಯಾತಕೆ ಸಂಶಯ ಮಾಡಿನ್ನು ಶುಭಶೀಘ್ರಾ 7 ವಚನ ಸಂಭ್ರಮದಿ ಆನಂದವೆಂಬ ತುಂಬ ರೋಮಗಳುಬ್ಬಿ ರಂಭೆ ಪೂರ್ವದ ಪುಣ್ಯ ಎಂಬುವರು ಮುಕ್ತ ಬಹಳ ಗಂಭೀರ ಅಂಬುಜೋದ್ಬವ ಪಿತನ ತುಂಬಿ ಕುಳಿತದ್ದು ಕಣ್ಣುತುಂಬ ನೋಡೇನು ಎಂದು ಅಂಬುಜಾಕ್ಷಿ 1 ಆಕಾಶಪರಿವೃಡನು ಕ್ಲೇಶದ ಮಗಳಿದ್ದಲ್ಲೆ ನಡೆದು ಒಡೆದು ಆಡಿದನು ಹರುಷ ಹಿಡಿಯಲಾಗದು ನಿನ್ನೊಳು ನೀನೆ ಮಿಡುಕಿ ಬೇಡ ಎನ್ಹಡೆದವ್ವನೆ ನೀನು ಮೂಡಲಗಿರಿ ಒಡೆಯ ವೇಂಕಟಪತಿಗೆ ಕೊಡುವೆ ನಿನ್ನ 2 ಶುಭ ಪತ್ರವನು ಕೊಟ್ಟು ಬೃಹಸ್ಪತಿಯು ವೃತ್ರಾರಿ ಧರಿತ್ರೀಯಲ್ಲೀ ಪೃಥ್ವೀಶ ತಾನು ನತಿಸಿ ವಿಧಿಯುಕ್ತ ಪೂಜೆ ಉತ್ತಮನೆ ನೀ ಕೇಳು ಸತ್ಯ ನಿತ್ಯ ನೀನೆ 3 ಪನ್ನಗಾಚಲದಲ್ಲಿ ನಿನ್ನ ಅನುಮತಿಯಿಂದ ಬಿನ್ನಹದ ನುಡಿ ಕೇಳಿ ಮನಸಿಗೆ ಹರುಷ ಪೇಳುವೆ ಕೇಳು ಚನ್ನಾಗಿ 4 ನಿತ್ಯ ಅವನ ಆ ವಿಸ್ತಾರವೆಲ್ಲ ಪಂಚಕೋಶದಲಿ ಇಲ್ಲಿರುವ ಅವನೇ ಶ್ರೀ ಶುಕಾಚಾರ್ಯ
--------------
ಅನಂತಾದ್ರೀಶ - ಕಥನಕಾವ್ಯಗಳು
ಅಪರಾಧ ಎನ್ನದಯ್ಯ ಹೇ ಗುರುವರ್ಯ ಪ ಅಪರಾಧ ಎನ್ನದಯ್ಯ ಅಪರಿಮಿತವು ಸರಿ ಕೃಪೆಯು ಮಾಡಲಿ ಬೇಕು ಕೃಪಣವತ್ಸಲ ಗುರುವೆ ಅ.ಪ. ಹಡೆದ ತಾಯಿ ಶಿಶುವ ಬಡಿದು ಕೊಂದರೆ ತೃಣವು ಬಿಡಿಸಿಕೊಳ್ಳಲು ಬಲ್ಲುದೆ ಜಡಕೆ ಸಮವಾದದ್ದು ಒಡೆಯ ನೀ ಎನ್ನಯ ಅಸ್ವಾತಂತ್ರ ಎಣಿಸದೆ ಬಿಡುವೆನೆಂದರೆ ನಿನಗೆ ತಡೆಯ ಬರುವರು ಯಾರೈ 1 ದೀನವತ್ಸಲ ಕೇಳು ಅನೇಕ ಜನ್ಮದೊಳು ನಾನಾ ಪರಿಯೊಳು ನೊಂದು ಸೇರಿದೆ ನಿನಗೆ ಬಂಧು ಏನು ಪೇಳದೆ ಎನ್ನ ಕಾನನದಲಿ ಬಿಟ್ಟು ಶ್ರೀನಾಥನ ಸೇರಿದಿ ಅನಾಥನ ಮಾಡಿದಿ ಎನ್ನ 2 ಬ್ಯಾರೆ ಉಪಾಯವಿಲ್ಲ ಸಾರಿದೆ ನಿನಗಯ್ಯ ಕಾರುಣ್ಯ ನಿಧಿಯೆ ಅಪಾರ ಕರುಣಮಾಡಿ ಮಾರಪಿತನಾದ ಜಯೇಶವಿಠಲನ್ನ ಆರಾಧನೆಯಲಿ ಸತತ ಧಾರಾಳ ಮತಿನೀಡೋ 3
--------------
ಜಯೇಶವಿಠಲ
ಅಮ್ಮಮ್ಮ ಗೋಪಿಯೆನೆ ಏನೆಂಬೆ ಪರ ಬೊಮ್ಮ ಮಗನೆಂಬೊ ಧೈರ್ಯಕೆ ಪ. ಬೊಮ್ಮನಯ್ಯನ ಸಿರಿರಮ್ಮೆ ಪತಿಯ ಘನ ಪೆರ್ಮೆ ಗುಣಗಣನಿಲಯನ ಅ.ಪ. ಹೊಳೆವ ಶ್ರೀರೂಪು ವಟಪತ್ರದಲ್ಲಿ ಪ್ರಳಯಜಲಧಿಯ ಶಯನನ ಸೆಳೆಮಂಚದ ಮ್ಯಾಲೆ ಮಗ್ಗುಲೊಳಿಟ್ಟು ತನ್ನ ಗೋಪಿ 1 ಚರಾಚರಂಗಳ ಸೃಷ್ಟಿ ಸ್ವಯಿಚ್ಛೆಯಿಂದ ಪುರುಷರೂಪವ ಧರಿಸಿದ ಪರಮಮಂಗಳ ಮೂರುತಿಯ ತನ್ನ ಗೋಪಿ 2 ಕತ್ತಲೆಯನು ನುಂಗಿ ತತ್ವಂಗಳನು ಕೊಂಡು ಮತ್ತೆ ಬೊಮ್ಮಾಂಡದೊಳಗೆ ಪೊಕ್ಕು ತತ್ವಸಾರದಿಂದೊಪ್ಪುವ ಕೊಮರನ ಗೋಪಿ 3 ಅದಭ್ರಸೃಷ್ಟಿಗಳಿಗಗೋಚರನಾದ ಆದಿಮೂರುತಿ ¸ಚ್ಚಿದಾನಂದನ ಸದಾ ತನಯನೆಂದೆತ್ತಿ ಮುದ್ದಿಸಿ ಸುಖ ಗೋಪಿ 4 ಚತುರುಭುಜ ಶಂಖ ಚಕ್ರ ಗದೆ ಪದುಮ ಸುತಪ ಪ್ರಶ್ನೆಗೆ ವರವಿತ್ತ ಶ್ರುತಿಶಿರೋಮಣಿಯೆಂದರಿಯದೆ ತಾ ಗೋಪಿ 5 ಬೊಮ್ಮಕಲುಷಾನಂತ ಸಹಸ್ರಗಳ ನಿಮಿಷಮಾತ್ರದಿ ಪಡೆದನ ಬೊಮ್ಮಾಂಡವೆ ತನ್ನ ರೋಮಕೂಪದಲ್ಲಿಪ್ಪ್ಪ ರನ್ನವೆ ಮಗನೆಂದಳೆ ಗೋಪಿ6 ಅನ್ನಂತ ರವಿತೇಜಕಿರೀಟದ ಅನ್ನಘ್ರ್ಯ ಸರ್ವಾಭರಣ ಪೊನ್ನ ವಸ್ತ್ರವನ್ನುಟ್ಟ ಅದ್ಭ್ಬುತ ಬಾಲಕನ ಗೋಪಿ 7 ಅನ್ನಂತಾನಂತ ಜೀವಗಣಗಳು ಅನ್ನಂತಾನಂತ ಕರ್ಮಗಳು ಅನ್ನಂತಾನಂತ ಗಾಯತ್ರಿಗೆ ಕÀರ್ತೃ ವಿಷ್ಣು ಗೋಪಿ 8 ಅನ್ನಂತಾಸನ ಶ್ವೇತದ್ವೀಪ ವೈಕುಂಠ ದನ್ನವರತ ವಾಸವಾಗಿಪ್ಪನ ಅನ್ನಿಮಿಷರ ಯೋಚನೆಗೆ ಒಲಿದನ ಗೋಪಿ 9 ಧರ್ಮದÀ ವೃದ್ಧಿಗೆ ಧರ್ಮದ ಹಾನಿಗೆ ತನ್ನಿಚ್ಛೆಯಲವತರಿಸಿದ ಮಮ ಪ್ರಾಣಾಹಿ ಪಾಂಡವನೆನಿಸಿದ ಗೋಪಿ 10 ಉದ್ದಾಮ ಕಾಂಚೀದಾಮ ಕಂಕಣ ಶ್ರೀ- ಮುದ್ರೆಯ ಶ್ರೀವತ್ಸಕೌಸ್ತುಭಧರನ ಮಧ್ವಮುನಿಗೆ ತಾನೊಲಿದು ಬಂದನ ಗೋಪಿ 11 ಸರಸಿಜಬೊಮ್ಮಾಂಡ ಒಡೆದಾಗ ವಿರಿಂಚಿ ತೊಳೆದ ಪಾದೋದಕವ ಹರ ಸೇವಿಸಲಾಗ ಶಿವನ ಮಾಡಿದ ಹರಿಯ ಮಗನೆಂದಳೆ [ಗೋಪಿ] 12 ದೇವಕಿ ಉದರದಲ್ಲಿದ್ದಾಗ ಬ್ರಹ್ಮಾದಿ ದೇವರಿಂದಲ್ಲಿ ಕೀರ್ತಿಸಿಕೊಂಡು ಭಾವಕಿ ದೇವಕಿ ವಸುದೇವನಲ್ಲಿ ಪಿತೃ ಗೋಪಿ 13 ಶಿಶುರೂಪವ ತೋರಿದ ಬೊಮ್ಮನ ಕಂಡು ವಸುದೇವಗೆ ನದಿ ಎಡೆ ಬಿಡೆ ಸಾಸಿರನಾಮ ಚಿತ್ರವಾಗಿದ್ದ ಜಗ- ಗೋಪಿ 14 ಪಾಲಗಡಲಲ್ಲಿ ಪವಡಿಸಿಪ್ಪನ ಕಾಲಮೇಲೆ ಮಲಗಿಸಿಕೊಂಡು ನೀಲಮೇಘಶ್ಯಾಮಯೆಂದು ಬಣ್ಣಿಸುತಲಿ ಗೋಪಿ 15 ಆದಿದೇವನು ಬ್ರಹ್ಮಸೂತ್ರವ ಕಲ್ಪಿಸಿ ವೇದ ವಿಭಾಗವ ಮಾಡಿದನ ಆದರದಿಂತುಂತೆಂದು ಕಲಿಸಿ ಸಂ ಗೋಪಿ 16 ಭಾನುಶತಕೋಟಿತೇಜಪ್ರಕಾಶನ್ನ ಆನಂದವನೆ ನೋಡಿ ಮನ ಉಬ್ಬಿ ಆನಂದನಿಧಿಯ ತೊಡೆಯ ಮ್ಯಾಲೆಯಿಟ್ಟು ಗೋಪಿ 17 ಶೃಂಗಾರನಿಧಿಯನ್ನು ಬಾಯೆಂದು ಕರೆದು ರ- ಥಾಂಗಪಾಣಿಯನೆ ಎತ್ತಿಕೊಂಡು ತಿಂಗಳನೋಡಯ್ಯ ಕಂದ ಎಂದಾತನ ಗೋಪಿ 18 ಸನ್ನಕಾದಿಗಳಯ್ಯನ ಪಿತನ ಕರೆ ದೆನ್ನ ಮಾಣಿಕವೆಯೆಂದಪ್ಪಿಕೊಂಡು ಹೊನ್ನ ತಾ ಗುಬ್ಬಿಯೆಂದಾಡು ಎನ್ನಯ್ಯನೆ ಗೋಪಿ 19 ಗಂಭೀರವಾರಿಧಿಗೆ ಅಂಬಾ ಹೂಡಿದ ತೋಳು ಇಂದಿರೆಯನೆ ಅಪ್ಪಿದ ತೋಳು ಶಂಭರಾರಿಯ ಪಿತ ತೋಳನ್ನಾಡೈ ಎಂದು ಗೋಪಿ 20 ಪಾದ ಉ- ದ್ದಂಡ ಬಲಿಯಮೆಟ್ಟಿದ ಪಾದ ಪುಂಡರೀಕಾಯತವಾದ ಪಾದದಿ ಪ್ರ- ಗೋಪಿ 21 ನಿತ್ಯತೃಪ್ತನು ಹಸ್ತ (ಸಿದ?) ನೆಂದೆನುತಲೆ ಇತ್ತ ಬಾ ಹೊರೀಯೆಂದಾದರಿಸಿ ಹೊತ್ತಾರಿಂದಮ್ಮೆ ಉಣ್ಣದಿರಲು ಹೊಟ್ಟೆ ಗೋಪಿ 22 ಅಮ್ಮೆ ಉಂಬುವ ಪುಟ್ಟ ಬಾಯ ಮುದ್ದಿನ ಮಾ ರಮ್ಮೆಯನರಸುವನಚ್ಚರಿಯ ಅಮ್ಮೆ ನೋಡಿ ನಗುವ ಮುದ್ದು ಬಾಲಕನ ಪರ ಗೋಪಿ 23 ತಾಯ ಮೊಗವ ನೋಡುತ್ತಾಕಳಿಸುತ ಬಾಯಲ್ಲೀರೇಳುಲೋಕವ ತೋರೆ ಆಯತೆ ನೋಡಿ ಮರಳಿ ಕಂಗೆಟ್ಟು ವಿಶ್ವ- ಗೋಪಿ 24 ಜ್ಞಾನಘನನ ವಿಶ್ವತೋನಯನನ ಆನಂದಚರಿತ್ರನ ಅವ್ಯಕ್ತನ ಜ್ಞಾನಿಗಳ ಹೃತ್ಕಮಲದೊಳಿಹನ ಕಣ್ಣಮುಚ್ಚಿ ಗೋಪಿ 25 ಹಾಲ ಹರವಿಯ ಒಡೆದು ಬಂದು ಗೋ- ಪಾಲ ನೀನೆಲ್ಲಿಗೆ ಪೋದೆಯೆಂದು ಕಾಲಕರ್ಮಂಗಳಿಗೆ ಕಾರಣವಾದೋನ ಗೋಪಿ 26 ಜಗದುದರ ಜಂಘಿಸುತ ಅಡಿಯಿಡೆ ಮೃಗಲೋಚನೆ ಮೈಮರೆದಿರೆ ಅಗಣಿತಮಹಿಮನು ಚರಿಸುತ ಬರ ಗೋಪಿ 27 ಆಮ್ಮಹಾ ಮತ್ತಿಯ ಮರನ ಮುರಿದು ಸುರರು ಜಯವೆನ್ನೆ ಶ್ರೀಮಣಿ ಶಿವರಿಂದ ಕೀರ್ತಿಸಿಕೊಂಬ ಗೋಪಿ 28 ಕತ್ತಲೆಯೊಳಗಿದ್ದು ಅಂಜಿದ ಮಗನೆಂದು ಶ್ರುತಿಮಂತ್ರಗಳಿಂದುಚ್ಚರಿಸಿ ಮೃತ್ಯುಂಜಯನ ಪಿರಿಯನೆತ್ತಿಕೊಂಡು ಗೋಪಿ 29 ಶೇಷಶಾಯಿಯ ಹಾಸಿ ಮಲಗಿಸಿ ಚಾರು- ವೇಷನ್ನ ನಿದ್ರಿಗೈಸುವೆನೆಂದು ಸಾಸಿರಮುಖಭೂಷಣನ ಪಾಡುತ್ತ ಸಂ- ತೋಷದಿ ಮೈಮರೆದಳೆ ಗೋಪಿ30 ತ್ರಿಗುಣಾತೀತನ್ನ ಪೊಂದೊಟ್ಟಿಲೊಳ್ಮಲಗಿಸಿ ಜೋಗುಳ ಪಾಡುವ ಯಶೋದೆÉಯ ಎಸೆವ ನೀಲವಸ್ತ್ರನು ಪಾಡೆನ್ನೆ ಕೃಷ್ಣ ಅನು- ಗೋಪಿ 31 ಹರಿಯ ಹೊರಿಸುವಳಲ್ಯಲ್ಲಿ ನಿಮ್ಮಣ್ಣ ವರ ಸಿಂಹಾಸನವಾಗಿಪ್ಪನೆಂದು ಸಿರಿಯಕೂಡೇಕಾಂತದಲಿಪ್ಪನ್ನ ಗೋಪಿ 32 ಪಾದ ನಿಮ್ಮಣ್ಣನ ಶಿರದಲೊಪ್ಪಿದೆÀಯೆಲೆ ಕಂದ ಸುರವರರ ಭಾಗ್ಯನಿಧಿಯೆ ಬಲರಾಮ ಗೋಪಿ 33 ಕಣ್ಣಮುಚ್ಚಿದ ಕೃಷ್ಣನೆಂದು ತೊಟ್ಟಿಲ ಬಿಟ್ಟು ಪುಣ್ಯಾಂಗನೆ ಮೈಮರೆದಿರೆ ಅಣ್ಣ ಆಶನು ಬೆಣ್ಣೆಯ ಕಳಹೋದ ಚಿಣ್ಣನ ಕಾಣೆನೆಂದಳೆ ಗೋಪಿ34 ನೀಲಾಂಬರನ ಬೆನ್ನ ಮೆಟ್ಟಿ ನೆಲವಿನ ಮ್ಯಾಲಿನ ಬೆಣ್ಣೆಯ ಮೆಲ್ಲೆ ಕೃಷ್ಣ ಬಾಲಕಿಯರು ಕೂಡಿ ಕಳ್ಳ ಸಿಕ್ಕಿದನೆಂದು ಗೋಪಿ 35 ಹುಟ್ಟ್ಟದ ಬೆಳೆಯದ ಹಸುಳೆ ಅಣ್ಣನ ಬೆನ್ನ ಮೆಟ್ಟಿ ನೆಲವು ಜಗ್ಗಿದನೆಂದು ರಟ್ಟು ಮಾಡಿದಿರೆಲ್ಲ ನೋಡಿರವ್ವಾ ಎನ್ನ ಗೋಪಿ 36 ಕಂದನ ಎತ್ತಿಕೊಂಡು ರಾಜ್ಯದಂಗನೆಯರ ಮಂದಿರವನೆ ಪೊಕ್ಕು ಬರುತಿರೆ ಒಂದೊಂದು ಕೌತುಕವನೆ ಕಂಡಾನಂದ ಗೋಪಿ 37 ಶಶಿಮುಖಿಯಂಗಳದ ಹಾಲಹಳ್ಳ ಮೊಸರ ಮಡುವು ಬಾಗಿಲ ಮುಂದೆ ಪ್ರಸಾದವೆಲ್ಲ ಬೆಣ್ಣೆ ಫಲಿತವಾಗಿರೆ ಗೋಪಿ 38 ವಾರಿಧಿಯೊಳಗಿದ್ದ ಪನ್ನಗಶಾಯಿಯ ತೇರ ಮೇಲೆ ಇದ್ದ ಬಾಲಕನ ಮೂರುತಿ ಒಂದೆಂಬೋ ಅ- ಗೋಪಿ 39 ದ್ರೌಪದಿಗಕ್ಷಯವಿತ್ತನ ಗುರು ಸಾಂ- ದೀಪಗೆ ಸುತನ ತಂದಿತ್ತನ ಪ್ರೀತಿಯಿಂದಲಿ ಯಜ್ಞಪತ್ಯರಿಗೊಲಿದ ಸುಪ್ರ- ಗೋಪಿ 40 ಘಾತಪುತ್ರರ ಆರು ಮಂದಿಯ ತರಹೇಳಿ ಮಾತೆಯೆಚ್ಚರಿಸೆ ಅಂಗೀಕರಿಸಿ ಅತಿ ಬೇಗದಿಂದಣ್ಣನ ತಂದು ತೋರಿದ ಅ- ಗೋಪಿ 41 ಭಕುತ ಶ್ರುತದೇವ ಬಹುಳಾಶ್ವರಾಯಗೊಲಿ ದೇಕ ಕಾಲದಿ ರೂಪೆರಡಾಗಿ ಆ ಕರುಣಾಬ್ಧಿಯ ಮಾಯಾರೂಪಿÀನ ಪರಿ- ಗೋಪಿ 42 ಪೂತನಿ ಶಕಟವತ್ಸಾಸುರ ವೃಷಭÀನ ಪಾತಕಿ ಚಾಣೂರ ಕುಂಜರನ ಘಾತಿಸಿ ಕಂಸನ್ನ ರಂಟೆಯಾಡಿದ ಬಲು ಭೂತನ್ನ ಮಗನೆಂದಳೆ ಗೋಪಿ43 ಬಾಲತನದಲ್ಲಿ ಸಖನಾಗಿ ಬಂದು ಕು- ಚೇಲ ತಂದವಲಕ್ಕಿಯ ಧರಿಸಿ ಮೇಲುತನದಿಂದ ಸೌಭಾಗ್ಯವಿತ್ತ ಶ್ರೀ ಲೋಲನ್ನ ಮಗನೆಂದಳೆ ಗೋಪಿ&ಟಿbsಠಿ
--------------
ವಾದಿರಾಜ
ಆ ನಮಿಪೆ ಗುರುಸಂತತಿಗೆ ಸತತ ಗೆ ಜ್ಞಾನ ಭಕ್ಯಾದಿಗಳ ಕರುಣಿಸಲಿ ಎನಗೆಂದು ಪ ಹಂಸನಾಮಕ ಹರಿ ಬ್ರಹ್ಮಗುರುವರ ಸರೋ ಜಾಸನ ಪುತ್ರರೆನಿಸಿಕೊಂಬಾ ಆ ಸನಕ ಸನಂದನ ಕುಮಾರಕರ ಶಿಷ್ಯ ದೂ ರ್ವಾಸಮುನಿ ಜ್ಞಾನನಿಧಿ ತೀರ್ಥ ಪದಾಬ್ಜಗಳಿಗೆ 1 ಗರುಡವಾಹನತೀರ್ಥ ಕೈವಲ್ಲಜ್ಞಾನೇಶ ಪರತೀರ್ಥ ಸತ್ಯ ಪ್ರಜ್ಞ ಪ್ರಾಜ್ಞರಾ ವರಕುಮಾರಕ ತಪೋರಾಜ ಸಂಯಮಿ ವಿಮಲ ಅಚ್ಯುತ ಪ್ರೇಕ್ಷರಿಗೆ 2 ಪದ್ಮನಾಭ ನರಹರಿಮುನಿಪ ಶ್ರೀ ಮಾಧವಕ್ಷೋಭ್ಯಯತಿ ಜಯಾರ್ಯ ಧೀಮಂತ ವಿದ್ಯಾಧಿರಾಜ ಸುಕವೀಂದ್ರ ನಿ ಸ್ಸೀಮ ವಾಗೀಶಯತಿ ರಾಮಚಂದ್ರಾರ್ಯರಿಗೆ 3 ವಿದ್ಯಾನಿಧಿ ರಘುನಾಥ ರಘುವರ್ಯೋತ್ತಮ ಕರ ಪದ್ಮ ಸಂಜಾತ ವೇದವ್ಯಾಸರಾ ವಿದ್ಯಾಪತಿ ಅಧೀಶನಿಧಿ ಸತ್ಯವ್ರತ ನಿಧಿಯಾ ಪಾದ ಕಮಲಗಳಿಗೆ 4 ಸತ್ಯಾಭಿನವ ಪೂರ್ಣ ಸತ್ಯವಿಜಯ ಪ್ರೀಯಾ ಸತ್ಯಬೋಧರ ಸತ್ಯಸಂಧವರರಾ ನಿತ್ಯದಲಿ ನೆನೆದು ಕೃತಕೃತ್ಯನಾಗುವೆ ಬಿಂಬ ಮೂರ್ತಿ ಜಗನ್ನಾಥವಿಠಲನ ತೋರಿಸಲೆಂದು 5
--------------
ಜಗನ್ನಾಥದಾಸರು
ಆತ್ಮನಿವೇದನೆ ಏನಿದು ಎನ್ನಯ ಬಾಳು-ನರಹರೀ ಪ ಶ್ರೀನಿಧಿಯನು ಮನಮನೆಯೊಳು ನಿಲಿಸದಾ ಅ.ಪ. ಕಳೆಯಿತು ಆಯು-ಕಳೆಯಿತು ಕಾಯೊ ಬೆಳೆಯಿತು ಆಶೆ-ಉಳಿಯಿತು ಸಾಧನ 1 ಹೊಟ್ಟೆಗೆ ಹಾಕೇ-ಪುಟ್ಟಿದು ದಾಯ್ತೇ ಪೊಟ್ಟೆಯ ತುಂಬವೆ-ದುಷ್ಟ ಮೃಗಂಗಳು2 ಇಲ್ಲವು ತಾ ಹರಿ-ಎಲ್ಲವೂ ನೀನೇನೆ ಇಲ್ಲವು ಯಾಕೇ-ಎಲ್ಲ ಕಾಲದಿ ಸುಖ 3 ಪುಟ್ಟವುದೇ ಜಗ-ಪುಟ್ಟಿಸ ನಿಲ್ಲದೇ ಭ್ರಷ್ಠರ ಮತವಿದು-ಅಷ್ಟಕರ್ತನ ಬಿಡೆ 4 ಮಾನವಾ ತನುವಾ-ಬಾಹೋದೆ ದುರ್ಲಭ ಮಾನದ ಶ್ರೀ ಕೃಷ್ಣ ವಿಠಲನ ತೋರದಿಹ5
--------------
ಕೃಷ್ಣವಿಠಲದಾಸರು
ಆತ್ಮನಿವೇದನೆ ಏನು ಕಾರಣವೆನಗೆ ತಿಳಿಯಲಿಲ್ಲದೀನ ರಕ್ಷಕನಾದ ಹರಿಯೆ ತಾ ಬಲ್ಲ ಪ ಕಾನನದೊಳಗೆ ಕಡುತಪಿಸಿ ತೃಷಿಯಾದವಂಗೆತಾನಾಗೆ ಮೋಡೊಡ್ಡಿ ಮೇಘ ಕವಿದುನಾನು ಧನ್ಯನೆಂದು ನರ್ತಿಸುವ ಸಮಯದಲಿಕಾಣದೇ ಪೋಯಿತು ಬಿಂದು ಮಾತ್ರ 1 ಪಾದ ಭಜನೆಯನ್ನುಹರುಷದಲಿ ಪಾಡಿ ಹಗಲಿರುಳು ಪ್ರಾರ್ಥಿಸುವಂಗೆಪುರುಷಾರ್ಥ ಪೂರೈಸಿ ಬಾರದಿಪ್ಪ ಬಗಿಯು 2 ಅನ್ನಾದಿಯಿಂದ ಅನ್ನಂತ ಜನ್ಮದಿ ಬಂದುಉನ್ನಂತ ಮಾಡಿದ ಪಾಪರಾಶಿ-ಯನ್ನು ಉಣದನಕ ಭೂವನ್ನದೊಳು ಮತ್ತೆ ಪಾ-ವನ್ನರಾ ಪಾದಗಳು ಪಡೆಯಲರಿಯದೊಯೇನೊ 3 ಅನ್ನಾಥ ಬಂಧು ಹರೆಯೆನ್ನುವಾ ಬಿರುದಿಗೆನಿನ್ನಂಥ ಮಹಿಮನಾ ಕರೆದು ವೊಂದೂಎನ್ನಂಥ ಪರಮ ಪಾತಕಿಯನುದ್ಧರಿಸಿತಾ-ಸನ್ನಗೊಳಿಸಿ ಸತತ ಸಲಹದಿಹುದು ಏನು 4 ಅರಸಿನಾಲೋಚನಿಯು ಸತತ ಸನ್ನಿಧಿಯೊಳನು- ಸರಿಸಿದ ಆಳುಗಳು ಬಲ್ಲ ತೆರದಿಸರಸಿಜ ನಯನ ವೆಂಕಟ ವಿಠಲನ ಪಾದಸರಸಿಜದಿ ಸರಸರೊಳು ನಲಿದು ನೀ ಬಾರದಿಹುದು 5
--------------
ವೆಂಕಟೇಶವಿಟ್ಠಲ
ಆನಂದ ಆನಂದವು ಈ ಜಗದಿ ಗೋವಿಂದನ ದಯದಿ ಪ ಆನಂದವು ಗೋವಿಂದನ ನಾಮವು ಆನಂದದಿ ಸ್ಮರಿಸುವ ಸುಜನರಿಗೆಅ.ಪ ಬಂಧು ಬಾಂಧವರೆಲ್ಲರು ಕೂಡುತಲಿ ಒಂದೇ ಮನಸಿನಲಿ ಇಂದಿರೇಶನ ಸ್ಮರಣೆಯ ಮಾಡುತಲಿ ನಂದ ಯಶೋದೆಯ ಕಂದನೆ ಪರನೆಂದು ಚಂದದಿ ಕುಣಿದಾಡುತ ಸ್ತುತಿ ಮಾಡಲು ಭವ ಬಂಧನ ಬಿಡಿಸುವ- ನೆಂದು ಮನದಿ ಆನಂದ ಪಡುವರಿಗೆ 1 ಪಕ್ಷಿವಾಹನ ಪುರುಷೋತ್ತಮ ಹರಿಯು ಆನಂದ ವತ್ಸರದಿ ರಕ್ಷಿಸಿ ಪೊರೆವನು ಭಕುತರ ತ್ವರದಿ ಅಕ್ಷರೇಢ್ಯ ಕಮಲಾಕ್ಷನೆ ಪರನೆಂ- ದೀಕ್ಷಿಪ ಭಕುತರ ರಕ್ಷಿಸಿ ಪೊರೆವ ಪ- ರೀಕ್ಷಿತಗೊಲಿದಂದದಿ ಪರಮಾತ್ಮನು ರಕ್ಷ ಶಿಕ್ಷಕನೆಂದೆನುವ ಸುಜನರಿಗೆ2 ಕಮಲಾಪತಿ ಕಾಮನ ಪಿತ ಶ್ರೀಹರಿಯು ಕಾರುಣ್ಯ ನಿಧಿಯು ಕಮಲಾಕ್ಷನು ಕಾಪಾಡುವ ಸುಜನರನು ಕಮಲಭವೇಂದ್ರಾದ್ಯಮರರು ಪೊಗಳಲು ಕಮಲನಾಭ ವಿಠ್ಠಲ ಜಯ ಜಯ ಎಂದು ಸುಮನಸರೊಡೆಯ ಸುಂದರ ಶ್ರೀಹರಿ ತಾ ಶ್ರಮ ಪರಿಹರಿಸುವನೆನುವ ಸುಜನರಿಗೆ3
--------------
ನಿಡಗುರುಕಿ ಜೀವೂಬಾಯಿ
ಆನಮಿಸುವೆ ಗುರುವಾ ಮಂತ್ರಾಲಯ ಸ್ಥಾನ ಮಾಡಿದ ಯತಿಯಾ ಪ ದಾನವರೊಳವತರಿಸಿ ದೈನ್ಯರ ಮಾ£ನಿಧಿಯು ತಾನು ಜ್ಞಾನಿಗಳಿಗೆ ಕಾಮಧೇನುವೆನಿಸಿದೀ ಮಾನಿಯತೀಂದ್ರ ವಿಜ್ಞಾನಪೊಯ್ಯವನು ಅ.ಪ ಸದಯ ಸರ್ವದಾಯೆನಿಸಿ ಹೃದಯದಿ ಮುದವಾಂಕುರಿಸುವನು ಪರಿ ಸದಮಲ ಕೀರ್ತಿಯ ವಿದಿಶಮಾಗಿ ಭೂತಳದಿ ಉದಯಿಸಿದ 1 ದೋಷದೂರ ನೆನಿಸೀ ದಾಸರಿಗೀಶನಡಿಯ ತೋರ್ಪಾ ವಾಸುದೇವನಿಗೆ ನಿಜ ದಾಸನೆನಿಸಿ ಭವ- ವಾಸದೊಳಿಹ ಪರತೋವೀವನು 2 ಕರುಣಸಾಗರನೆನಿಸಿ ಶರಣಗೆ ವರಗಳ ತಾನೀವಾ ಗುರುವೆಂದೆಂಬ ಯಥಾರ್ಥ ಪದವಿ ತಾ ನರಸಿಂಹವಿಠಲನ ಕರುಣದೊಳಿಹನು 3
--------------
ನರಸಿಂಹವಿಠಲರು
ಆರೋಗಣೆಯ ಮಾಡು ಸಾರಸುಖದೊಡೆಯ ಪ. ಸತ್ಯವಾದ ಜಗಕೆ ಕರ್ತುಕಾರಣ ನೀನೆ ಮುಕ್ತಿದಾಯಕ ನಿತ್ಯತೃಪ್ತನಹುದೈ ಸತ್ಯವಾದವತಾರ ಸಕಲಗುಣ ಪರಿಪೂರ್ಣ ಸಿರಿ ಪರಮ ದಯಾಳು1 ಅಣುರೋಮಕೂಪದಲಿ ಅಂಡಜಾಂಡಗಳಿರಲು ಘನಕೃಪಾಂಬುಧಿ ನಿಮ್ಮ ಪೊಗಳಲಳವೆ ಫಣಿಶಾಯಿಯಾಗಿದ್ದ ಭುವನವ್ಯಾಪಕ ಹರಿಯ ಘನಭಕುತಿಲ್ಯಜಭವರು ಪೂಜೆಮಾಡುವರು 2 ಗಂಗೆಗೋದಾವರಿ ತುಂಗಭದ್ರೆ ಯಮುನೆ ರÀಂಗಸನ್ನಿಧಿಯಾದ ಕಾವೇರಿಯು ಮಂಗಳ ಭೀಮರಥಿ ನಿಮಗೆ ಮಜ್ಜನಕೆ ಅಣಿಮಾಡಿ ಅಂಗಜನಯ್ಯ ಭಾಪೆಂದು ಪೊಗಳೆ 3 ರನ್ನಮಯವಾಗಿರ್ದ ಹೊನ್ನಮಂಟಪದೊಳಗೆ ಸ್ವರ್ಣಪಾತ್ರೆಗಳಲ್ಲಿ ಸ್ವಯಂಪಾಕವು ನಿನ್ನ ಸೊಸೆ ವಾಣಿ ಭಾರತಿದೇವಿ ಕಡುಜಾಣೆ ಚೆನ್ನಾಗಿ ನೈವೇದ್ಯವನ್ನೆ ಮಾಡುವರು 4 ಗಂಧ ಕಸ್ತೂರಿ ಪುನುಗು[ಚಂದನ] ಜವ್ವಾಜಿ ಮುಂದೆ ಕುಂಕುಮದ ಕೇಸರಿಯ ಲೇಪ ಚೆಂದದ ಕೇದಿಗೆ ಮುಡಿವಾಳ ಸಂಪಿಗೆ ಕಂದರ್ಪನಯ್ಯಗೊಪ್ಪಿತು ಮಲ್ಲಿಗೆ 5 ದೆಸೆದೆಸೆಗೆ ಪರಿಮಳಿಪ ಕುಶಲದ ಚಿತ್ರಾನ್ನ ಬಿಸಿದೋಸೆಗೆ ಬೆಣ್ಣೆ ಲೇಹ್ಯಪೇಯ ಬಸಿರೊಳಗೆ ಈರೇಳು ಜಗವನಿಂಬಿಟ್ಟವಗೆ ನಸುನಗುತ ಇಂದಿರಾದೇವಿ ಬಡಿಸೆ 6 ನೂರು ಯೋಜನದಗಲ ಸರಸಿಜ ಬ್ರಹ್ಮಾಂಡ ಹದಿ ನಾರು ಬಣ್ಣದ ಚಿನ್ನದ್ಹರಿವಾಣವು ಸಾರೆಯಲಿ ಪೊಂಬಟ್ಟಲೆಂಬ ಸಾಗರದೊಳಗೆ ಮೇರುಗಿರಿಯೆಂಬೊ ದೀಪಗಳು ಬೆಳಗೆ 7 ಘೃತ ಸೂಪ ಲೋಕಪತಿಗನುವಾದ ದಿವ್ಯಾನ್ನವು ಬೇಕಾದ ಪಂಚಭಕ್ಷ್ಯ ರಸಾಯನವ ಏಕಾಂತದಲ್ಲಿ ನಿಮ್ಮ ದೇವಿ ಬಡಿಸೆ 8 ಖಳರಕುಲವೈರಿಗೆ ತಿಳಿನೀರುಮಜ್ಜಿಗೆ ಎಳನೀರು ಪಾನಕ ಸೀತಳುದಕ ಬಳಲಿದಿರಿ ಬಳಲಿದಿರಿ ಎನುತ ಹಯವದನಗೆ ನಳಿನಾಕ್ಷಿ ಕರ್ಪೂರವೀಳ್ಯವನೆ ಕೊಡಲು 9
--------------
ವಾದಿರಾಜ
ಆರ್ತನಾಭೀಷ್ಟವನು | ಪೂರ್ತಿಗೊಳಿಸೊ ಪ ಕಾರ್ತಸ್ವರ ಮೊದಲಾದ | ವಾರ್ತೆ ನಾನೊಲ್ಲೇ ಅ.ಪ. ಫಲ ಗಿಡೆಲೆ ಮರ ಬಳ್ಳಿ | ಜಲ ಬಿಂದು ನವ ನದಿಯುಜಲ ನಿಧಿಯು ವನಗಿರಿಯು | ಜಲ ಚರಾಚರಧೀ ||ಒಳ ಹೊರಗೆ ಸಂವ್ಯಾಪ್ತ | ಚಲಿಪೆ ನೆಲೆಯಿಲ್ಲದಲೆತಿಳಿಸೊ ತವ ಮಹಿಮೆಗಳ | ಅಲವ ಭೋದಾತ್ಮಾ 1 ಕಂಡ ನೀರೊಳು ಮುಳುಗಿ | ಅಂಡಲೆದು ಬೆಂಡಾದೆಪುಂಡರೀಕಾಕ್ಷ ಪದ | ಬಂಡುಣಿ ಎನಿಸದೇ ||ಹಿಂಡು ತೀರದ ಗತ | ಪಾಂಡುರಂಗನ ರೂಪಕಂಡು ಹಿಗ್ಗುವುದೆಂದೊ | ಕುಂಡಲಿಯ ಶಯನಾ 2 ಜ್ಞಾನಾಯು ರೂಪಕನೂ | ಪ್ರಾಣಾಂತರಾತ್ಮ ನಿನಜ್ಞಾನ ಕೊಟ್ಟು ಧರಿಸೊ | ಗಾನ ಪ್ರಿಯನೇ ||ಪ್ರಾಣನಿಗೆ ಪ್ರಾಣ ಗುರು | ಗೋವಿಂದ ವಿಠ್ಠಲನೆನೀನಾಗಿ ಒಲಿಯದಲೆ | ಅನ್ಯಗತಿ ಕಾಣೇ3
--------------
ಗುರುಗೋವಿಂದವಿಠಲರು
ಆವ ಬಗೆಯಿಂದ ಸಲಿಗೆಯನಿತ್ತಿಯೊ ಮಾವಮರ್ದನ ರಂಗ ನಿನ್ನ ದಯಾ ತಿಳಿಯದು ಪ ಅಂದರೆ ಆನಂದ ಅನಂದದೇ ಅನಾನಂದ ನಿಂದದೆ ಗೋಕುಲ ನಿಲದದೆ ವ್ಯಾಕುಲ ಬಂದದೆ ಪುರುಷಾರ್ಥ ಬಾರದಿದ್ದರೆ ವ್ಯರ್ಥ ಮಂಧರಧರ ನಿನ್ನ ಮನಸು ಬಂದದ್ದೆ ಸರಿ 1 ಕೊಟ್ಟದ್ದೆ ಪುರುಷಾರ್ಥ ಕೊಡದಿಪ್ಪದೆ ಅನರ್ಥ ಅಟ್ಟಿ ಬರುವ ಪಾಪ ಸುಟ್ಟು ಬಿಡು ನಿರ್ಲೇಪ ತಟ್ಟಿದುದೆ ವೇದಾರ್ಥ (ತಟ್ಟದದೆ) ಮಿಥ್ಯ ವಿಠ್ಠಲ ನಿನ್ನ ಭಕ್ತರಿಗೆ ನೀ ಬಲು ಸುಲಭಾ 2 ದೆರಗಲು ಆಕ್ಷಣವೆ ಸಿದ್ಧ ಮಾಳ್ಪೆ ಕರುಣ ನಿಧಿಯೆ ನಮ್ಮ ವಿಜಯವಿಠ್ಠಲ ನಿನ್ನ ಸರಿಯಾದ ದೇವರನು ಕಾಣೆ ತ್ರಿಭುವನದಲ್ಲಿ3
--------------
ವಿಜಯದಾಸ
ಇತ್ತೆ ಏತಕ್ಕೆ ಈ ನರಜನ್ಮವ ಸತ್ಯ ಸಂಕಲ್ಪ ಹರಿ ಎನ್ನ ಬಳಲಿಸುವುದಕೆ ಪ. ಬಂಧುಬಳಗವ ಕಾಣೆ ಇಂದಿರೇಶನೆ ಭವದಿ ಬೆಂದು ನೊಂದೆನೊ ನಾನು ಸಿಂಧುಶಯನ ಬಂದ ಭಯಗಳ ಬಿಡಿಸಿ ನೀನೆ ಪಾಲಿಸದಿರಲು ಮಂದಮತಿಗೆ ಇನ್ನು ಮುಂದೆ ಗತಿ ಏನೊ 1 ಕಾಣದಲೆ ನಿನ್ನನು ಕಾತರಿಸುತಿದೆ ಮನವು ತ್ರಾಣಗೆಡÀುತಲಿ ಇಹುದೊ ಇಂದ್ರಿಯಗಳೆಲ್ಲ ಪ್ರಾಣಪದಕನೆ ಸ್ವಾಮಿ ಶ್ರೀನಿವಾಸನೆ ದೇವ ಜಾಣತನವಿದು ಸರಿಯೆ ಫಣಿಶಾಯಿಶಯನ 2 ಸಾಧನದ ಬಗೆಯರಿಯೆ ಸರ್ವಾಂತರ್ಯಾಮಿಯೆ ಮಾಧವನೆ ಕರುಣದಲಿ ಕಾಯಬೇಕೊ ಹಾದಿ ತೋರದೊ ಮುಂದೆ ಮುಂದಿನಾ ಸ್ಥಿತಿಯರಿಯೆ ಛೇದಿಸೊ ಅಜ್ಞಾನ ಹೇ ದಯಾನಿಧಿಯೆ 3 ಸರ್ವನಿಯಾಮಕನೆ ಸರ್ವಾಂತರ್ಯಾಮಿಯೆ ಸರ್ವರನು ಪೊರೆಯುವನೆ ಸರ್ವರಾಧೀಶ ಸರ್ವಕಾಲದಿ ಎನ್ನ ಹೃದಯದಲಿ ನೀ ತೋರೊ ಸರ್ವ ಸಾಕ್ಷಿಯೆ ಸತತ ಆನಂದವೀಯೊ 4 ಆನಂದಗಿರಿನಿಲಯ ಆನಂದಕಂದನೆ ಆನಂದ ಗೋಪಾಲಕೃಷ್ಣವಿಠ್ಠಲಾ ಆನಂದನಿಲಯ ಶ್ರೀ ಗುರುಗಳಂತರ್ಯಾಮಿ ನೀನಿಂದು ಸರ್ವತ್ರ ಕಾಯಬೇಕಯ್ಯ 5
--------------
ಅಂಬಾಬಾಯಿ
ಇಂದು ನಿನ್ನಪಾದ ಸನ್ನಿಧಿಯ ಘನ್ನ ದರುಶನದಿಂದಲಿಪ ಮುನ್ನ ದುರಿತಗಳೆಲ್ಲವು ಛಿನ್ನಛಿನ್ನವುಮಾಡಿ ಬನ್ನಬಡಿಸದೆ ಎಮ್ಮ ಸಲಹುವಸ್ವಾಮಿ ಅ.ಪ ಸುಮನಸರೊಡೆಯ ಕಾಲನಾಮಕನಾಗಿಪ್ಪ ಮೋದ ನಾಮ ವತ್ಸರದಿ ವಿಮ¯ ಚೈತ್ರಕೃಷ್ಣಪಕ್ಷದಶಮಿ ಸೌಮ್ಯವಾಸರದಿ ದ್ಯುಮಣಿ ಉದಯಕಾಲದಲಿ ಮಮಕುಲಸ್ವಾಮಿಯೆ ಎನ್ನ ವಂಶಜಾಪ್ತರ ಅಮಿತಶ್ರಮ ಪರಿಹರಿಸಿ ಈಗ ಶ್ರೀಮನೋಹರ ನಿನ್ನ ವಿಶ್ವರೂಪವ ತೋರ್ದೆ ಪ್ರೇಮ ಇಂದಿಗೆ ಆಯಿತೆ ಅಮಿತಜನ ಬಂಧು 1 ನಿನ್ನ ದರುಶನವೆಂದಿಗಂದಿಗಾಗಲಿ ಎಂದು ನಿನ್ನ ಧ್ಯಾನವನೆ ಮಾಡಲು ಸನ್ನುತಾಂಗನೆ ನೀನೆ ಘನ್ನ ಕರುಣವು ಮಾಡಿ ಎನ್ನ ಯತ್ನವು ಇಲ್ಲದೆ ನಿನ್ನ ದರುಶನಕ್ಕಾಗಿ ಅನ್ಯರಿಂದ ಪ್ರೇರಿಸಿ ಎನ್ನಲ್ಲಿ ಮನವು ಪುಟ್ಟಿಸಿದೆ ಪನ್ನಗಾಚಲನಿಲಯ ನಿನ್ನ ಮಹಿಮೆ ಎಂತುಂಟೋ ಎನ್ನನಿಲ್ಲಿಗೆ ತಂದು ಘನ್ನ ದರುಶನವಿತ್ತೆ 2 ಪಂಕಜೋದ್ಭವನಯ್ಯ ಮಂಕುಕವಿಸಿದೆ ಪಯಣ ಶಂಕೆಯ ಪರಿಹರಿಸಿ ಸಂಕಟಹರಿಸಿ ನಿನ್ನ ಕಿಂಕರರೊಳು ಸೇರಿಸಿ ಬಿಂಕದಲಿ ಗಿರಿಯನೇರಿಸಿ ಪಂಕಜನಾಭ ಮುಕುಂದ ಗೋವಿಂದ ಶಂಕರನುತಪೂಜಿತ ಶಂಖತೂರ್ಯಾದಿ ವಾದ್ಯಗಳಿಂದಲಿ ಶ್ರೀ ವೇಂಕಟೇಶ ನಿನ್ನ ನೋಡಿದೆ ಬಿಡದೇ 3
--------------
ಉರಗಾದ್ರಿವಾಸವಿಠಲದಾಸರು