ಒಟ್ಟು 53 ಕಡೆಗಳಲ್ಲಿ , 18 ದಾಸರು , 53 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಿರುಮಲೇಶ ಹರಿ ವಿಠ್ಠಲ | ಪೊರೆಯ ಬೇಕಿವನಾ ಪ ಕರುಣಾಳು ನೀನೆಂದು | ಪ್ರಾರ್ಥಿಸುವೆ ಹರಿಯೇಅ.ಪ. ತರಳನಿವ ಸಾಧನದ | ಸತ್ಪಥವ ಸಾಧಿಸಲುಹರಿದಾಸ ದೀಕ್ಷೆಯನು | ಕಾಂಕ್ಷಿಸುವ ಹರಿಯೇ |ಸರ್ವಬಗೆಯಲಿ ಇದಕೆ | ಪರಿಪರಿಯ ವಿಘ್ನಗಳಪರಿಹರಿಸಿ ಪೊರೆ ಇವನಾ | ಸರ್ವಾಂತರಾತ್ಮಾ 1 ಮರುತಮತ ದೀಕ್ಷೆಯಲಿ | ಇರುವಂತೆ ಕರುಣಿಸುತಪರತತ್ವ ಸಾರವನೆ | ಅರುಹುತಲಿ ಪೊರೆಯೋ |ವರಪಂಚ ಭೇಧಗಳ | ತರತರಾತ್ಮಕದರಿವುನೆರವಾಗಲಿವನೀಗೆ | ಗುರುದಯದಿ ಹರಿಯೇ 2 ಕಾಕುಸಂಗವ ಕೊಡದೆ | ಸತ್ಸಂಗ ಪ್ರಾಪಿಸುತಲೌಕಿಕೋನ್ನತಿ ಕೊಟ್ಟು | ನೀಕಾಯೊ ಹರಿಯೇ |ಪ್ರಾಕ್ಕು ಕರ್ಮವ ಕಳೆದು | ಬೇಕಾದ ವರಗಳನುನೀ ಕೊಟ್ಟು ಕಾಯೊ ಹರಿ | ಸಾಕಾರ ಮೂರ್ತೇ 3 ಗುರು ಹಿರಿಯ ಸೇವೆಯಲಿ | ಪರಮರತಿಯನೆ ಕೊಟ್ಟುಹರಿಗುರು ಚರಿತೆಗಳ | ಬರೆವ ಕೌಶಲವಾ |ಕರುಣಿಸೀ ಸತ್ಪಥದ | ಚರಿಪಂತೆಯ್ಯುಪ್ಪುದುಮರುತಾಂತರಾತ್ಮಕನೆ | ಉರುಗಾದ್ರಿ ನಿಲಯಾ 4 ಸರ್ವೇಶ ಸರ್ವಜ್ಞ | ಸರ್ವವ್ಯಾಪ್ತನೆ ಸ್ವಾಮಿನಿರ್ವಿಕಾರನೆ ದೇವಾ | ಶರ್ವಾದಿ ವಂದ್ಯಾ |ದರ್ವಿಜೀವಿಯ ಪೊರೆಯೆ | ಪ್ರಾರ್ಥಿಸುವೆ ಶ್ರೀಹರಿಯೇಸರ್ವ ಸುಂದರ ಗುರೂ ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ದೃಷ್ಟಿಯೊಳಗೆ ದೃಷ್ಟಿ ನಿಂತಿತು | ನೋಡಲಿನ್ನು ದೃಶ್ಯ ನಷ್ಟವಾಯಿತು | ಕಷ್ಟವೆಲ್ಲ ಕಡೆಗೆ ಸಾರಿ | ಅದೃಷ್ಟವನ್ನು ಮೀರಿ ನಿಂದು ನಿಷ್ಠೆಯಲ್ಲಿ ತುಷ್ಟಿಯಾಯ್ತು ನೀ ನೋಡು ಸಖಿಯೆ ಪ ಐದು ಮಂದಿ ಅಗಲಿ ಹೋದರೆ | ಐದಕೈದು ಕೂಡಿ ಬಂದು ಕೂಡದಾದರೆ | ಐದರೊಳಗೆ ನೋಡಲಿನ್ನು || ಐದು ಐದು ತಾನೆ ಅಲ್ಲ | ಐದನೇದರಲ್ಲಿ ನಿಂತೆನೇ | ನೀ ಕೇಳಿದೇನೆ ? 1 ಕರ್ಮವೆಲ್ಲ ಕಾಣದಾಯ್ತು | ಧರ್ಮವೊಂದು ಸರ್ವಕಾಲ ತೂಗಿ ನಿಂತಿತು |ಶರ್ವನಲ್ಲದಿನ್ನು ಮತ್ತೆ | ಉರ್ವಿಯಲಿ ಪೇಳದಾಗಿ ಪರ್ವತಾಗ್ರ ಭೂಮಿ ಒಂದು ನಿರ್ವಿಕಾರ ತೋರಿತಲ್ಲಾ 2 ಹಿಂದೆ ಎಂದು ಕಂಡಿದಿಲ್ಲ | ಈ ಸೋಜಿಗವನ | ಮುಂದೆ ದಾರಿಗುಸುರಲೀಗತೀ | ತಂದೆ ಭವತಾರಕನ | ಹೊಂದಿದವರ ಕೇಳಿದೇನೆ | ಎಂದು ಎಂದು ಹೀಗೆಂಬರೆ | ನೀ ಬಲ್ಲಿಯೇನೇ 3
--------------
ಭಾವತರಕರು
ದೇವ ದೇವತೆಗಳ ಸ್ತುತಿ 1 ಅಂಬ ಕಟಾಕ್ಷಿಸೆ ಅಂಬಅಂಬ ಪರಾಂಬ ಬಗಳಾಂಬ ಪ ಮಧು ಕೈಟಭಾರಿಯೆ ಮಹಿಷಾಸುರೇಶ್ವರಿಯೆಕದನ ಶುಂಭಾಂತಕಿ ಕರುಣಾ ಕೃಪಾಕಟಾಕ್ಷೆ1 ಪರಮ ಪಾವನದೇವಿ ಪಂಡಿತ ಜನ ಸಂಜೀವಿಶರಣ ಜನರ ತಾಯಿ ಸುಧಾ ಶರಧಿ ಸಂಭಾವಿ2 ನಾರಾಯಣಿ ಭದ್ರೇ ನರಸಿಂಹಿಣಿ ರೌದ್ರಿವಾರಾಹಿ ಕಾಳಿಯೆ ಗೌರಿ ಉಮಾಮಹೇಶ್ವರಿ ಶಂಕರಿ 3 ನಿತ್ಯ ನಿಗಮ ಸ್ತುತ್ಯ ಚಿದ್ರೂಪೇನಿತ್ಯ ನಿರ್ವಿಕಾರಿ ನಿಂದಕಜನಸಂಹಾರಿ 4 ಚಿದಾನಂದಾವಧೂತೇ ಚಿನ್ಮಯ ಬಗಳ ಪ್ರಖ್ಯಾತೇಬೋಧ ಸದ್ಗುರುನಾಥೇ ಭಕ್ತವಿಲಾಸ ಪ್ರೀತೆ 5
--------------
ಚಿದಾನಂದ ಅವಧೂತರು
ನಂಬಿದ್ಯಾ ಮನವೇ ನಂಬಿದ್ಯಾ ಪ ನಂಬಿದ್ಯ ಮನವೆ ಕೊಂಡಾಡಿದ್ಯ ಆನಂದ ತೀರ್ಥರ ಮತವೆಸತ್ಯವೆಂದು ಅ.ಪ ಇಂದಿರೆ ರಮಣನೆ ಪರದೈವವೆಂದು ಬಂಧನಾದಿ ಅಷ್ಟಕರ್ತೃತ್ವ ಆತನದೆಂದು ಕುಂದುಕೊರತೆಗಳಿಲ್ಲದ ಸರ್ವೇಶ ಶಾಶ್ವತನೆಂದು ನಂದ ಕಂದನು ಸಾನಂದ ಗುಣ ಪೂರ್ಣ ಸ್ವರತನೆಂದು 1 ನಾರಾಯಣನೆ ಸರ್ವೋತ್ತುಮನು ಎಂದು ಸಿರಿ ಅಜಶಿವರೆಲ್ಲ ಹರಿಯಕಿಂಕರರೆಂದು ಮುರವೈರಿ ಅಂತಃ ಬಹಿರ್ವ್ಯಾಪ್ತನು ಎಂದು ಶಾರಂಗ ಪಾಣಿಯೆ ಸರ್ವಾಂತರ್ಯಾಮಿಯೆಂದು 2 ಸಾಕಾರಸರ್ವೇಶ ನಿರ್ವಿಕಾರ ನೆಂದು ಓಂಕಾರ ವಾಚ್ಯನೆ ಸರ್ವಾಧಾರ ಸರ್ವಗನೆಂದು ಅಕಾರಾದಿ ಸರ್ವವರ್ಣಸ್ವರ ಶಬ್ದ ವಾಚ್ಯನುಎಂದು ಅಜ ಅಪ್ರಮೇಯನೆಂದೂ3 ವೇದಗೋಚರ ತಾವೇದಾತೀತನೆಂದು ವಿಧಿಸಿರಿ ವಂದಿತ ಸಾಕಲ್ಯದಿ ಅವಾಚ್ಯನೆಂದು ಮಧುಸೂಧನನು ಚಿನ್ಮಯ ವಪುಷನೆಂದು ಭೇದವಿಲ್ಲದ ರೂಪ ಗುಣಕ್ರಿಯ ಅವಯವನೆಂದು4 ನಾಶರಹಿತ ಕೇಶವನೊಬ್ಬ ಆರ್ತಿವರ್ಜಿತ ನೆಂದು ಕ್ಲೇಶರಹಿತ ವಾಸುದೇವನು ವಿಧಿನಿಷೇಧ ವರ್ಜಿತನೆಂದು ವಿಶ್ವೇಶ ಸರ್ವತಂತ್ರ ಸ್ವತಂತ್ರನು ಸಾರ್ವಭೌಮನು ಎಂದೂ ವಾಸುಕಿ ಶಯನನು ಲೀಲೆ ಗೋಸುಗ ವಿಹಾರಮಾಳ್ಪಾನೆಂದು5 ಪುರುಷ ಸೂಕ್ತ ಪ್ರತಿಪಾದ್ಯ ಅಪ್ರಾಕೃತನೆಂದು ವರಗಾಯತ್ರ್ಯಾದಿ ಸರ್ವಮಂತ್ರ ಪ್ರತಿಪಾದ್ಯನೆಂದು ಅಪವರ್ಗ ಗತಿದಾಯಕನೆಂದೂ ಪಾದ ಭಜನೆಯೆ ಸಾರವೆಂದೂ 6 ವಿರಂಚಿ ಜನಕನೆ ಸರ್ವತ್ರ ಸರ್ವರಲಿದ್ದು ಸರ್ವಕಾರ್ಯ ಕಾರ್ಯಗಳನು ಮಾಡಿ ಮಾಡಿಸುವನೆಂದು ಸರ್ವಜೀವರಿಗೆ ಕರ್ಮಗಳುಣಿಸಿ ತಾ ನಿರ್ಲೇಪನೆಂದೂ ಖರಾರಿರೂಪಗಳೆಲ್ಲ ಅನಾದಿ ಶುಕ್ಲಶೋಣಿತವರ್ಜಿತವೆಂದು7 ಲಕ್ಷ್ಮಿರಮಣನು ಪಕ್ಷಪಾತ ರಹಿತನೆಂದು ಪಕ್ಷಿವಾಹನನು ಕ್ಷರಾಕ್ಷರ ವಿಲಕ್ಷಣನೆಂದು ಲಕ್ಷ್ಮಣಾಗ್ರಜನು ಕುಕ್ಷಿಯೊಳಗೆ ಬ್ರಹ್ಮಾಂಡ ರಕ್ಷಿಪನೆಂದು ಇಕ್ಷು ಚಾಪನ ಪಿತನಚಿಂತಾದ್ಭುತನೆಂದು 8 ಹಂಸಾದಿ ಹದಿನೆಂಟು ರೂಪಗಳ ಧರಿಸಿ ಹೊರಗೆ ವ್ಯಾಪಿಸಿ ಕಂಸಾರಿಸಕಲವ ನಡಿಸೀನಡಿಸುತ ಸುಖದುಃಖಗಳ ಲೇಶಯೋಗ್ಯತೆ ಮೀರಗೊಡದಲೆ ಉಣಿಸುವನೆಂದು 9 ಪತಿತ ಪಾವನ ಪರಾವರೇಶ ತ್ರಿಗುಣವರ್ಜಿತನೆಂದು ಸತತ ಸ್ವಪ್ನ ಸುಷಪ್ತಿ ಜಾಗ್ರತೆ ಮೋಕ್ಷಾ ವಸ್ಥೆಗಳಲಿ ವಿಶ್ವ ತ್ವೆಜಸ ಪ್ರಾಜ್ಞ ತುರ್ಯರೂಪಾದಿಂದ ಮತಿ ಪ್ರೇರಕನಾಗಿ ಕಾದುಕೊಂಡು ಪೊರೆಯುವ ನೆಂದು10 ಸತ್ಯವತಿ ಸುತನು ಸತ್ಯ ಸಂಕಲ್ಪನೆಂದು ಆತನೆ ನಿತ್ಯಾನಿತ್ಯ ಜಗದೀಶನಂತರ್ಯಾಮೀಯೆಂದು ಮುಕ್ತಾ ಮುಕ್ತರ ನಾಥ ಮುಖ್ಯ ಬಿಂಬನು ಚತುರಾನನಾದಿಗಳಿಗೆಲ್ಲಾ ಎಂದು11 ಅನಿಲ ಜೀವೋತ್ತಮ ಹರಿಯ ಪ್ರಥಮಾಂಗ ಅಪರೋಕ್ಷ ಪ್ರಭುವು ಅಣು ಮಹದ್ಘನ ರೂಪ ಚರಿತ ಭಾರತೀಶ ವಾಣೀ ಪತಿಯ ಪದಾರ್ಹ ವಾತದೇವನು ಎಂದು 12 ಹನುಮ ಭೀಮ ಮಧ್ವ ಮೂರಾವತಾರದ ದೇವ ಅನುಪಮ ಬಲನಿಸ್ಸೀಮ ಪುರುಷತೇಜ ತೃಣ ಮೊದಲಾದ ಸರ್ವಜೀವರಲ್ಲಿದ್ದು ಅವರ ಹರಿಯಾಜ್ಞೆಯಂತೀವನೆಂದೂ 13 ದ್ವಾತ್ರಿಂಶಲ್ಲಕ್ಷಣ ಸಂಪನ್ನ ಗುರು ಮಧ್ವನೆಂದು ಆತನೇಲೋಕಕ್ಕೆಲ್ಲ ಗುರವು ಎಂದು ಈತ ಸಕಲಪೇಳಿದ ಮಾತಿಗೆ ಸರಿಯಿಲ್ಲವು ಎಂದು ಪ್ರೀತಿಯಿಂದಲಿ ಭಜಿಪ ಭಕ್ತಗೇನೆ ಮುಕ್ತಿಯೆಂದು 14 ಹರಿಯ ಮತವೆ ಹನುಮನ ಮತವು ಎಂದು ಸಿರಿ, ವಿರಂಚಿ ಪವನ ವಾಣಿ ಭಾರತೀಯರಲ್ಲಿ ಗರುಡ ಶೇಷ ಶಿವ ಶಕ್ರಾದಿಸರ್ವರೊಳಗೆ ತಾರತಮ್ಯ ಪಂಚ ಭೇದವು ಸತ್ಯವೆಂದು 15 ಭಾರತಿ ಪತಿಯದ್ವಾರವೆ ಹರಿಯು ಸ್ವೀಕರಿಪ ನೆಂದು ಮುರಾರಿಯ ಒಲುಮೆಗೆ ಜ್ಞಾನಯುತಭಕ್ತಿಯೆ ಸಾಧನವೆಂದು ಧರೆಯೊಳಗೆ ಹರಿನಾಮ ಸ್ಮರಣೆಗೆ ಸರಿಯಿಲ್ಲವು ಎಂದು ಮಾರಮಣನ ಅನುಗ್ರಹವೆ ಮೋಕ್ಷದಾಯಕ ವೆಂದು 16 ಅರಿಷಡ್ವರ್ಗಗಳಳಿಯುವುದೆ ವೈರಾಗ್ಯ ಮಾರ್ಗವೆಂದು ಗುರುವಿನ ಕರುಣವೆ ಜ್ಞಾನಕ್ಕೆ ಕಾರಣವೆಂದು ಸಾರಮಾರ್ಗಕ್ಕೆ ಸಾಧುಗಳ ಸಂಗವೆ ಮುಖ್ಯವೆಂದು ನೀರಜಾಕ್ಷಗೆ ಸರಿ ಮಿಗಿಲು ಇಲ್ಲವೆಂದು 17 ಜೀವ ಈಶಗೆ ಭೇದ ಈಶ ಜಡಕೆ ಭೇದ ವೆಂದು ಜೀವ ಜೀವಕೆ ಭೇದ ಜಡ ಜಡಕೆ ಭೇದವೆಂದು ಪರಿ ಪಂಚ ಭೇದವೆಂದು ಸಾವಧಾನದಿ ತಿಳಿದು ಜಗತ್ಸತ್ಯವೆಂದು ಧೃಡದಿ 18 ಸುರರೊಳುನರರೊಳು ಅಸುರರೊಳು ಎಲ್ಲೆಲ್ಲು ತಾರತಮ್ಯವು ಅನಾದಿಯಿಂದಲಿ ಇರುತಿಹುದೆಂದು ಸ್ವರೂಪಾನಂದಾವಿರ್ಭಾವವೆ ಮುಕ್ತಿಯೆಂದು ಅರವಿಂದನಾಭಗೆ ಸರ್ವರು ಸದಾದಾಸರೆಂದು 19 ಧನಕನಕ ವನಿತಾದಿಗಳೆಲ್ಲ ಹರಿಗೆ ಅರ್ಪಿತ ವೆಂದು ಏನೇನು ಮಾಡುವುದೆಲ್ಲ ಶ್ರೀ ಕೃಷ್ಣನ ಸೇವೆಯೆಂದು ದೀನ ಜನ ಮಂದಾರನಾಧೀನ ಸುಖದುಃಖಾಗಳೆಂದು ಏನು ಬೇಡದೆ ಹರಿಯ ಸತತನೆನೆವೋದೆ ಸಾಧನ ವೆಂದು20 ನಾಕೇಶ ಜಯತೀರ್ಥ ವಾಯ್ವೂಂತರ್ಗತನಾದ ಶ್ರೀಕೃಷ್ಣ ವಿಠಲಾನೆ ಮಮಸ್ವಾಮಿ ಸರ್ವಸ್ವವೆಂದು ಸಕಲ ಕರ್ಮಗಳರ್ಪಿಸುತ ತ್ರಿಕರಣ ಶುದ್ಧಿಯಿಂದಲಿ ಮಾಕಳತ್ರನ ಸತತ ಭಜಿಸುತ್ತಿರಬೇಕು ಎಂದು 21
--------------
ಕೃಷ್ಣವಿಠಲದಾಸರು
ನಮ್ಮ ದೈವ ದೇವನೀತನು ಧ್ರುವ ನಮ್ಮ ದೈವ ದೇವನೀತ ನಮ್ಮ ಜೀವ ಪ್ರಾಣದಾತ ನಮ್ಮ ಕಾವ ಕರುಣ ಶ್ರೀದೇವನೀತ ನೋಡಿರೊ 1 ನಿರ್ವಿಕಲ್ಪ ನಿರ್ಗುಣೀತ ನಿರ್ವಿಕಾರ ನಿಷ್ಟ್ರತೀತ ನಿರ್ವಿಶೇಷನಾದ ನಿರಾಳನೀತ ನೋಡಿರೊ 2 ನಿತ್ಯ ಏಕಶ್ಯಾಂತನೀತ ನಿತ್ಯನಿರಂಜನೀತ ನಿತ್ಯನಿಜ ಮಹಿಪತಿಯ ವಸ್ತುಗತಿಯ ನೋಡಿರೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಾರಾಯಣ ನರಹರಿ ಪರಬ್ರಹ್ಮನಿರ್ವಿಕಾರಿ ಪ ದ್ರುಕ್ ದೃಶ್ಯ ಮಧ್ಯದಲ್ಲಿ ಚೊಕ್ಕಟ್ಟಾಗಿರುವನಲ್ಲಿ ಪ್ರಕಟವಾಗಿ ತ್ರಿಕೊಟ ನಿಜ ಸ್ಥಾನದಲ್ಲಿ ತೋರುವನಲ್ಲಿ 1 ಏನೊಂದು ತಿಳಿಯದದನೆ ತಾನೆಂದು ತಿಳಿಯಲವನೆ ಧ್ಯಾನದರುವಿನಲ್ಲಿ ಮನ ತಾನೆ ಚಿನ್ಮೂರ್ತಿ ಘನ 2 ತನುವಿನೊಳ ಹೊರಗಿರ್ಪ ತನ್ನ ತಾನೆ ಕಾಣುತಿರ್ಪ ಮೂರ್ತಿ 3 ಅಂತರಾತ್ಮ ಗುರು ಪೂರ್ಣನಂತ ಮಹಿಮ ನಾರಾಯಣ ಸಂತ ಸಾಧು ಸಾಧ್ಯ ಜ್ಞಾನ ಶಾಂತಿ ಪಾಲಿಪ ಘನ 4
--------------
ಶಾಂತಿಬಾಯಿ
ನಿತ್ಯ ನೂತನ ಮಹಿಮಭೃತ್ಯನನು ಪೊರೆಯೆಂದು | ಪ್ರಾರ್ಥಿಸುವೆ ಹರಿಯೇ ಅ.ಪ. ವಿತ್ತ ಕರ್ತು ನೀನಾಗಿರಲುಆರ್ತರುದ್ಧರ ಕಾರ್ಯ | ಪೂರ್ತಿಗೊಳಿಸೋ 1 ಉದಧಿ ವಿಧಿ ಜನಕ ವಿಶ್ವೇಶ | ಮುದ ಮುನಿಯ ಸದ್ವಂದ್ಯವದಗಿ ವರಪ್ರದನಾಗಿ | ಮುದವನ್ನೆ ಬೀರೋ 2 ಯೇಸೊ ಜನ್ಮದ ಪುಣ್ಯ | ರಾಶಿ ವದಗಿತೊ ಇವಗೆಆಶಿಸುವ ಹರಿದಾಸ್ಯ | ವಾಸವಾನುಜನೇ ಆಸುರೀ ಭಾವಗಳ | ನಾಶನವ ಗೈಯ್ಯುತ್ತಪೋಷಿಸುವುದಿವನ ಹರಿ | ದಾಸ್ಯ ಕರುಣಿಸುತಾ 3 ನಾನು ನನ್ನದು ಎಂಬ | ಹೀನ ಮತಿಯನೆ ಕಡಿದುದಾಸವಾಂತಕ ಸಲಹೊ | ಜ್ಞಾನ ಪ್ರದನಾಗೀಮೌನಿ ಮಧ್ವರ ಮತದಿ | ಸಾನು ಕೂಲಿಸಿ ದೀಕ್ಷೆಮಾನನಿಧಿ ಗುಣಪೂರ್ಣ | ನೀನಾಗಿ ಪೊರೆಯೋ 4 ಸರ್ವವ್ಯಾಪ್ತ ಸ್ವಾಮಿ | ನಿರ್ವಿಕಾರನೆ ದೇವಸರ್ವಜ್ಞ ಸರ್ವೇಶ | ಸರ್ವಸಮ ಮೂರ್ತೇಗುರ್ವಂತರಾತ್ಮಕನೆ | ದರ್ವಿಜೀವಿಯ ಕಾಯೊದುರ್ವಿ ಭಾವ್ಯನೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ನಿನ್ನ ಬಿಟ್ಟಿರಲಾರೆ ನೀರಜಾಕ ್ಷ ಪ ಘನ್ನ ಮಹಿಮನೆ ನಿನ್ನ ಸನ್ನಿಧಾನವನೀಯೊ ಅ.ಪ. ಸರ್ವಧರ್ಮಗಳಿಗೆ ನೀನಿಲ್ಲದಿನ್ನಿಲ್ಲ ಉರ್ವಿಕರಿಗೆ ನೀನೆ ಉರ್ವೀಶನೆ ನಿರ್ವಿಕಾರ ಮಹಾತ್ಮ ನಿಖಿಲಾಂತರಾತ್ಮಕನೆ ಪಾದ ಸೇವೆಯೆನಗೀಯೊ 1 ತಡವ್ಯಾಕೆ ಬರಲಿನ್ನು ಪೊಡವೀಶ ಯನ್ನೊಡನೆ ತಡೆಯಲಾರೆನು ನಿನ್ನ ವಿರಹವನ್ನು ನುಡಿಯಬೇಡವೋ ಎನ್ನ ನೀ ಪೋಗು ಎಂದೆನುತ ಕಡು ದಯಾನಿಧಿ ನಿನ್ನ ನಾ ಬಿಡೆನೊ 2 ಆನಂದ ಪರಿಪೂರ್ಣ ಶ್ರೀನಾಥ ನಿನಗೇಕೆ ಕಾನನಾ ವಾಸವು ಕಮಲನಯನ ಜ್ಞಾನದಾಯಕ ನಿನ್ನ ಚರಣ ಶರಣನೊ ನಾನು ದೀನರಕ್ಷಕ ಸ್ವಾಮಿ ಶ್ರೀ ಕರಿಗಿರೀಶ 3
--------------
ವರಾವಾಣಿರಾಮರಾಯದಾಸರು
ನಿನ್ನ ಮಾತ ಕೇಳಿ ಗಾಳಿ ನಿಲ್ಲಬೇಕೆ ಶೀತವನ್ನು ಸಹಿಸು ನೀನು ಮಾಯಾಬಲೆಗೆ ಸಿಲುಕೆ ಪಮುನ್ನ ಕಾಯವೆತ್ತಬೇಡವೆಂದಡದಕೆ ನೀನುಧನ್ಯನಾಗದೀಗ ಋತುಧರ್ಮಕಳುಕೆ ಅ.ಪಬಲೆಯ ಬೀಸಬೇಡವೆಂದು ಪಕ್ಷಿ ಪೇಳಲು ಕೇಳಿಬಲೆಯ ಬೀಸುದಿಪ್ಪುದೆಂತು ಪಕ್ಷಿ ಸಿಕ್ಕಲುಅಳುಕಿ ಸಾದು ಬಲೆಯ ಬಾಧೆ ಬಲಿಗನಾಗಲು ಹಾಗೆಛಳಿಯು ನಿನ್ನ ಬಾಧಿಸದು ಪರಮನಾಗಲು1ಬಲಿಗನಂತು ಪಕ್ಷಿ ಭಕ್ಷಣೆಯ ಮಾಳ್ಪನು ಹಾಗೆನಳಿನನಾಭ ತಾನು ವಿಷಯಾಸಕ್ತನೊ ಯೇನುಸಿಲುಕದಿಪ್ಪನೊಂದರೊಳಗೆಂಬುದಿದೇನು ಎಂದುಬಲಿಯವಾಗೆ ಶಂಕೆ ಮನವೆ ನಿನಗೆ ಪೇಳ್ವೆನು 2ಇಲ್ಲವಾದ ಜಗª ಮಾಯೆುಂದ ನಿರ್ಮಿಸಿ ತಾನುಅಲ್ಲಿ ಪೊಕ್ಕು ಉಳ್ಳದೆಂಬಹಾಗೆ ನಟಿಸಿನಿಲ್ಲಲೀಸದಿದನು ಮತ್ತೆ ಕ್ಷಣದೊಳಳಿಸಿ ಕೂಡೆನಿಲ್ಲುವನು ನಿಜದಿ ನಿರ್ವಿಕಾರಿಯೆನಿಸೀ 3ತಾನು ಸುಖಿಸುವಂತೆ ಎನ್ನ ಸುಖಿಸಬಾರದೆ ಲೋಕದೀನಬಂಧುವೆಂಬ ನುಡಿಯ ಹೋಗಲಾಡದೆಮಾನವರ ತನ್ನ ಹಾಗೆ ಕಾಣಬಾರದೆ ಎಂದುನೀನು ಕೇಳೆ ಪೇಳ್ವೆ ನಿನ್ನ ಮಾತ ಮೀರದೆ 4ಆನಂದರೂಪಗೆ ದುಃಖ ತೋರಿಸುವದೆ ಆತನೀನೆಂದೊಮ್ಮೆ ತಿಳಿಯೆ ನಿನಗೆ ದುಃಖ ಮರೆಯದೆಭಾನುವಿನ ಮುಂದೆ ತಮವು ನಿಲ್ಲಬಲ್ಲುದೆ ಜೀವನಾನೆಂಬುದರಿಂದ ಸುಖವು ಮರೆಸಿಕೊಂಡಿದೆ 5ವೇದದಲ್ಲಿ ಪೇಳಿದಂತೆ ಋಗಳೆಲ್ಲರೂ ತಾವುವೇದವೇದ್ಯಬ್ರಹ್ಮವೆಂದು ಸುಖವ ಕಂಡರೂಆದಿಮಧ್ಯತುದಿಗಳಲ್ಲಿ ಬ್ರಹ್ಮವೆಂಬರು ಅದಸಾದರದಿ ಸಾಧಿಸಲು ಸುಖವ ಕಾಂಬರು 6ಅರಿವು ಮರವೆ ಎರಡು ಬಳಿಕ ಕರಣಧರ್ಮವೂ ತಾವುಕರಣಸಾಕ್ಷಿಯಾದ ನಿಜವನರಿಯಲರಿಯವುಕುರುಹನಿಟ್ಟು ನೋಡಲರಿವಿನೊಳಗೆ ಬೆರೆವವೂ ಕೂಡೆತಿರುಪತೀಶ ವೆಂಕಟೇಶನೊಳಗೆ ಬೆರೆವವೂ7ಕಂ||ತನು ತಾ ಜೀವನ ನುಡಿಗೇಳ್ದನುವಾಗಿ ಮೇಲೆ ಮುಕ್ತಿಮಾರ್ಗಕ್ಕೆತನದಿಅನುಕೂಲನಪ್ಪೆನು ನಾ ನಿನ್ನನು ಮೀರೆನೆನುತ್ತ ಪೇಳುತ ತನುವಾದಿಪುದು
--------------
ತಿಮ್ಮಪ್ಪದಾಸರು
ನಿನ್ನ ಹೊರತು ಅನ್ಯರನರಿಯೆನೂ ಶ್ರೀ ವಾಸುದೇವಾ ನಿನ್ನ ಹೊರತು ಅನ್ಯನರಿಯೆನೂ ನಿನ್ನ ಹೊರತು ಅನ್ಯರರಿಯೆ ಪನ್ನಗೇಂದ್ರವಾಸ ಹರಿಯೆ ಸನ್ನುತಾತ್ಮ ನಿಜವನಿತ್ತು ಪ್ರಸನ್ನ ಗುರುವರೇಂದ್ರ ದೇವಾ ಪ ಉರಗನ್ಹೆಡೆಯ ನೆರಳ ಸ್ಥಿರವೆಂದು ಕಪ್ಪೆಯು ನಿಂತ ತೆರದಿ ವಿಷಯದೊಳಗೆ ಬೆರದು ಬೆಂದೆನು ನಾ ದುರಿತ ದುಷ್ಟಗಣದಿ ಹರಿದೂ ಮೃತ್ಯುವನೆ ಮರೆದು ಅರಿವು ಮಾಯವಾಗಿರುವ ಎನ್ನಾ ಸ್ತರದ ಆತ್ಮಪ್ರಭೆಯ ಮರೆತು ಇರುವ ಎನ್ನ ಮೇಲೆ ನಿನ್ನ ಕರುಣವಿಟ್ಟು ಕಾಯ್ದ ದೇವಾ 1 ತತ್ವವಿಂಶತಿ ನಾಲ್ಕು ಕೂಡಿದಾ ಈ ದೇಹದಲಿ ಏ ಕತ್ವವಾಗಿ ಇದನೆ ನಂಬುತಾ ಮುನ್ನರಿಯದಲೆ ವಿ ಚಿತ್ರವಾಸ್ತುವನ್ನು ಮರೆತು ಸತ್ತು ಹುಟ್ಟಿತೊಳಲಿ ಬಳಲಿ ನಿತ್ಯ ನಿಜದೊಳಿಟ್ಟ ದೇವಾ 2 ಆದಿ ಮಧ್ಯ ಅಂತರಾಂತದಿ ತುಂಬಿರುವ ವಸ್ತು ನಾದ ಬಿಂದು ಸ್ವಪ್ರಕಾಶದಿ ಹೃದಯದಲಿ ತೋರ್ಪ ಭೇದಾತೀತ ನಿರ್ವಿಕಾರದಿ ಸುಬೋಧದಿ ಆದರದಿ ಶಾಂತಿ ನಿಜದಾದಿ ಸುಖವನಿತ್ತ ಗುರು ಪಾದಪದ್ಮ ನೆನೆದು ಪೂರ್ಣನಾದ ನಾರಾಯಣ ಪ್ರಭು 3
--------------
ಶಾಂತಿಬಾಯಿ
ಪರಮಾತ್ಮ ದಿವ್ಯಚರಣಾ ಭಜಿಸುವೆವು ಜ್ಞಾನ ಪೂರ್ಣ ನೀ ತೋರ್ಪುದಯ್ಯ ಕರುಣಾ ತಾಪ ಹರಣಾ ಆನಂದ ರೂಪ ತಾಣಾ ನಾರಾಯಣಾತ್ಮಪೂರ್ಣ ನಿನ್ನಿರವೇ ಜಗವಿದೆಲ್ಲ ನಿನ್ನರಿವೇ ಜೀವರೆಲ್ಲಾ ನಿನ್ನಿಂದೆ ಸುಖವಿದೆಲ್ಲಾ ನೀನೆ ಇದೆಲ್ಲಾ ದೇವಾ ನೀ ಸತ್ಯ ನಿರ್ವಿಕಾರ ನೀನಾತ್ಮರೂಪಸಾರಾ ನೀ ಪರಮ ಮೋಕ್ಷತಾಣಾ ಮರೆತಿರಲು ಜೀವ ನಿನ್ನ ದೊರೆಯುವುದೆ ಶಾಂತಿ ನಿನ್ನ ಪರಿತಾ¥ಬಿಡುತ ಮುನ್ನಾ ತಿರುಗುವನೋ ಜನ್ಮ ಜನ್ಮ ಗುರು ಶಂಕರಾರ್ಯ ನಿನ್ನ ಶರಣುಹುದೆ ಶಾಂತಿತಾಣ ನೀ ಸರ್ವರಾತ್ಮಪೂರ್ಣ
--------------
ಶಂಕರಭಟ್ಟ ಅಗ್ನಿಹೋತ್ರಿ
ಪಾಲಯಮಾಂ ಪರಮೇಶಚಿತಕಾಲಿ ಸಂತತಮಂಬಿಕೇಶಭೂರಿಲೀಲ ಶಂಕರವಿಯತ್ಕೇಶಕರುಣಾಲಯಹೃತಪಶುಪಾಶಧೃತಶೂಲ ವಿಶಾಲ ಕಪಾಲ ಕರಾಲಕಂ-ಕಾಲಿಕಾಕೂಲ (?) ವಿಲೋಲಾಸ್ಥಿಮಾಲಾ ಪ ವಾರಣಾಸುರ ಚರ್ಮಚೇಲಸುರವಾರಸೇವಿತ ಗಾನಲೋಲಭಕ್ತಾಧಾರ ಸಕಲ ಜಗನ್ಮೂಲನಿರ್ವಿಕಾರ ಮೃಕಂಡು ಕಸಾಲಹಾರ ಹೀರ ಮಂದಾರ ಪಟೀರ ನೀಹಾರಗೋಕ್ಷೀರ ಕರ್ಪೂರ ಸುಧಾರಸಗೌರ1 ವ್ಯೋಮತರಂಗಿಣೀಜೂಟಜಿತಕಾಮಪಾಲಿತ ಸರ್ವಖೇಟವಿತತಾಮಲಾಂಬರ ಪುಷ್ಪವಾಟರಘುರಾಮಪೂಜಿತ ಪಾದಪೀಠಪೂರ್ಣಕಾಮಾತಿಧಾಮಾಭಿರಾಮ ನಿಸ್ಸೀಮಸುತ್ರಾಮ ಮುಖ್ಯಾಮರಸ್ತೋಮಲಲಾಮ 2 ಗೋಪತಿರಾಜಿತುರಂಗಘೋರಪಾಪಾಂಧಕಾರಪತಂಗದಿವ್ಯತಾಪಸಹೃದಯಾಬ್ಜಭೃಂಗವಿಶ್ವವ್ಯಾಪಕನಿಗಮಾಂತರಂಗಯಾಮಿನಿಪಕಲಾಪಾದ್ರಿಚಾಪರಮಾಪತಿರೂಪನಿರ್ಲೇಪ ಕೆಳದಿ ರಾಮೇಶ ಚಿದ್ರೂಪ 3
--------------
ಕೆಳದಿ ವೆಂಕಣ್ಣ ಕವಿ
ಪಾಲಿಸೋ ಫಂಡರಿಪುರಾಯಾ ಪಾವನ ಕಾಯಾ ಪ ಶ್ಲೋಕÀ : ತರುಣ ತುಲಸಿಮಾಲಾ ತಪ್ತಗಾಂಗೇಯ ಚೇಲಾ ಶರಧಿ ತನಯಲೋಲಾ ಶಕ್ವರೀಕಾರಿ ಫಾಲ ಶಿರಿ ಅಜಭವ ಮೂಲಾ ಶುದ್ಧ ಕಾರುಣ್ಯ ಲೀಲಾ ವೈಜಯಂತಿ ಮಾಲಾ ಕುಂಡಲ ಕೇಯೂರ ಕೌಸ್ತ್ತುಭ ಲೋಕದಿ ವ್ಯಾಪ್ತಾ ದೋಷ ಸಿರ್ಲಿಪ್ತ ದೇವರ ದೇವಾ ಧರುಮಾದ್ಯರ ಭಾವಾ 1 ಅಮಿತ ಸುಗುಣಧಾಮಾ ಆತ್ಮಭೂಪೂರ್ಣ ರಾಮಾ ಅಮರಕುಲಲಲಾಮ ಅಬ್ಜಧಾಮಾಭಿರಾಮಾ ಯಮಿಕುಲೋದಧಿ ಸೋಮ ಯಜ್ಞ ಭೃದ್ಯಜ್ಞ ನಾಮಾ ಕರ್ಮ ಸಂರಕ್ಷಿತ ಸರ್ವ ಲೋಕಾ ವಿತತ ಮಹಿಮ ವಿಶ್ವನಾಟಕ ವತ್ಪ್ರ ಘೋಟಕಾ ಶೋ ನಳಿನ ಜಾಂಡೋದರಾ ಸರ್ವರಾಧಾರಾ ಸಂತತ ನಿರ್ವಿಕಾರಾ ಮತಿ ಮಂದನಾಗಿ ನಿನ್ನನು ಬಿಟ್ಟೆ ಮ ಬಟ್ಟೆ 2 ಶ್ಲೋಕ : ಜನನ ಮರಣ ದೂರ ಜಂಗಮಾಚಾg ವಿಹಾರಾ ದನುಜವನ ಕುಠಾರಾ ದೀನಮಂದಾರ ಧೀರಾ ಪ್ರಣತ ಭಯ ವಿಹಾರಾ ಪ್ರಾಕೃತಾತೀತ ಸಾರಾ ದಿನಪನಿಭ ಶರೀರಾ ದುಃಖವಾರಿಹ ಸಮೀರಾ 3 ವನಧಿ ಜಿತಾಸುರಯೂಥ ನಿರ್ಮಲ ಶ್ರುತಿಗಾಥಾ ಎನ್ನ ಸಂತತ ಸಂಪ್ರಸನ್ನಾ ಜೀಯ ಕರಣಾದಿ ಪಿಡಿಕಯ್ಯಾ ಗೋಪಕುಮಾರಾ 3 ಕಮಠ ಕೋಲಾ ಶತ್ರುಕಾಶ್ಯಪಿಬಾಲಾ ನೃಪಕುಲ ಈರವಾಳಾ ನೀಲಕಂಠಾಸ್ತ್ರಕಾಲಾ ದ್ರುಪದತನಯ ಪಾಲಾ ದುರವರ್ಜಿತದುಕುಲಾ ನಿರ್ಮಲ ಓಂಕಾರಾ ಪರಮ ಪ್ರೀಯ ಜಾಮಿ ಕಳೆದ್ಯೊ ತಾಪವಾ 4 ಶ್ಲೋಕ : ನಗಧರ ನಳಿನಾಕ್ಷ ನಾಕನಾಥಾದ್ಯ ಪಕ್ಷ ನೃಗ ನಗಪತಿ ಶಾಪಾ ನಿರ್ವಹಕಾರ ಶ್ರೀಪಾ ಭೃಗು ಮುನಿಗೇಯಾ ಭೂತನಾಥ ಸಹಾಯ ಅಗಣಿತ ಅಹಿತರನಳುಹಿದಾ ತೋರಿದೆ ಸತ್ಪುತ್ರರಾ ವಒತ್ತಿ ಕುಂತಿನಂದನಾ ಖಂಡ್ರಿಸಿದ್ಯೊ ಕೃಪಾಳು 5 ಶ್ಲೋಕ :ಶುಭತಮ ಸುಖತೀರ್ಥಾರಾಧ್ಯ ಸದ್ದಾನಪಾತ್ರಾ ಇಭವರರಿಪು ಹತಾನ ವಿಶ್ವಜನ್ಮಾವಿಕರ್ತಾ ಯುಗ್ಮ ಪ್ರಸಾದಾ ತರುಜನ್ಮ ವಿದೂರಾ ನಿರ್ಗುಣ ನಿರಂಜನಾ ಗೋಪರೊಡಗೂಡಿ ಮೆದ್ದೆ ತೋರಿದೆ ದಯಸಿಂಧೂ 6 ಶ್ಲೋಕ :ಅತಿವಮಲಸುಗಾತ್ರ ಅಖಿಳಲೋಕೈಕ ಪಾತ್ರಾ ಷತತಿಜದಳನೇತ್ರಾ ವೃತ್ತಹಾದ್ಯ ಮರಮಿತ್ರಾ ಶ್ರುತಿಕಮಂಜ ಸೂತ್ರಾ ಸ್ತುತ್ಯ ಪಾವನ ಪವಿತ್ರಾ ಕಳತ್ರ ನಿನ್ನಯ ದಿವ್ಯ ಖ್ಯಾತಿ ಈ ನಿತ್ಯ ಸುಖಿಸೋರು ಆನಂದಾಬ್ಧಿ ಸದ್ಗತರೋ ಮಾನವ ಜನಕ್ಲೇಶ ಭಂಜನಾ ಭಾಷಾ ಎನ್ನಯ ಅಭಿಲಾಷಾ 7 ಶ್ಲೋಕ :ವನರುಹಭವತಾತಾ ವೀತ ತನ್ಮಾತ್ರಭುತ ದ್ಯುನದಿ ಜಲವಿಧೂತ ದಿವ್ಯ ಪಾದಾಂಬುಜಾತಾ ಅನಿಲತನಯ ಪ್ರೀತಾ ಅತ್ರಿಸದ್ವಂಶಜಾತಾ ಅನಿಮಿಷಜಯಸೂತಾ ಆನತೇಷ್ಟಪ್ರದಾತಾ ಮಂಗಳಶ್ರೇಣಿ ಲೋಕೈಕಸತ್ರಾಣಿ ಶರಣು ಹೊಕ್ಕರ ಕಾಯುವ ಛಲದಂಕಾ ಕಾಳಿಂಗನ ಬಿಂಕಾ ಬಿಡಿಸಿದ್ಯೊ ನಿಷ್ಕಳಂಕಾ ಮುರ ದಂತವಕ್ತ್ರಾದ್ಯರ ಹಿಂಸಾ ಬಿಡಿಸಿದೆಯೋ ಓಜಿಷ್ಠಾ 8 ಶ್ಲೋಕ :ಹನುಮನತ ಪಾದಾಬ್ಜಹಂಸ ಸಂವಕ್ತ್ರುಕುಬ್ಜಾ ತನುವಿಕೃತ ವಿನಾಶಂ ಕಾಳಿ ಜಿಹ್ವಾಶುದೇಶಂ ದನುಜವಿಕರಾಳ ಮತ್ತೆ ಪೌಂಡ್ರೇ ಶೃಗಾಲಂ ಮೋದ ಸುಪದ ಮೂರುತಿಯನ್ನು ತೋರು ಮಾತಾ ಲಾಲಿಸು ಜಗನ್ನಾಥ ನಿನ್ನವರಿಗೀಯೋ ಶ್ರೀಶಾ 9
--------------
ಜಗನ್ನಾಥದಾಸರು
ಪೂಜೆಯ ಮಾಡಿದೆನೆ ದೇವರ ಪೂಜೆಯ ಮಾಡಿದೆನೆಈ ಜಗದರಸ ಚಿದಾನಂದ ತಾನೆಂದು ಪ ಶುದ್ಧ ಸ್ನಾನವನೆ ಮಾಡುತ ನಿರ್ಮಲ ವಸನವನುಬಂಧಿಸಿ ಬಿಗಿದು ಸ್ವಸ್ಥಾನಾಸ ಮಧ್ಯದಲ್ಲಿ ಕುಳಿತು 1 ನಿಸ್ಪøಹ ಭಸಿತವನೇ ಧರಿಸುತ ನಿಷ್ಕಲಂಕನಾಗಿವಿಶ್ವೇಶ್ವರ ವಿರೂಪಾಕ್ಷನೇ ತಾನೆಂದು 2 ಸರ್ವ ಪೂಜಿತನು ತಾನೀಗ ಸರ್ವನಿವಾರಿತನುಸರ್ವರೂಪಕ ತಾನೀಗೆಂದು ಧ್ಯಾನವರ್ಪಿಸಿದೆನೆ3 ಆನಂದ ವ್ಯಾಪಕನೆ ತಾನೀಗ ಆನಂದ ರೂಪಕನೇಆನಂದಾತ್ಮಕ ತಾ ನೀಗೆಂದಾಹ್ವಾನ ವರ್ಪಿಸಿದನೆ 4 ಇಂದ್ರಿಯ ರೂಪಕ ತಾನೀಗ ಇಂದ್ರಿಯ ವ್ಯಾಪಕನೇಇಂದ್ರಿಯ ಸಾಕ್ಷಿಕ ತಾನೀಗೆಂದು ಸಿಂಹಾಸನವರ್ಪಿಸಿದೆನೆ 5 ನಿಶ್ಚಲಾತ್ಮಕನವ ತಾನೀಗ ನಿಶ್ಚಲೈಕ್ಯನಾದನಿಶ್ಚಲವಸ್ತು ನಿಜತಾನೇ ಎಂದಘ್ರ್ಯವರ್ಪಿಸಿದೆನೆ 6 ವಿಶ್ವ ವಿಶ್ವಭೋಕ್ತøವಿಶ್ವಲೀಲಾತ್ಮಕ ತಾನೀಗೆಂದು ಪಾದ್ಯವರ್ಪಿಸಿದೆನೆ 7 ನಿಗಮ ಗೋಚರ ತಾನೆಂದು ಸ್ನಾನವರ್ಪಿಸಿದೆನೆ 8 ಅಂಬರ ವ್ಯಾಪಕನೇಅಂಬರದೊಳು ಚಿದಂಬರ ತಾನೆಂದು ವಸ್ತ್ರವರ್ಪಿಸಿದೆನೆ9 ಚೈತನ್ಯಾಧಾರ ತಾನೀಗ ಚೈತನ್ಯಾದೂರ ಚೈತನ್ಯಾಧಿಪತಾನೆಂದು ಯಜ್ಞೋಪವೀತ ವರ್ಪಿಸಿದನೆ10 ಕಲುಷ ನಿರ್ಜಿತನೇಕಲುಷ ಹರತಾ ನಿಜವೆಂದಾಭರಣವರ್ಪಿಸಿದೆನೆ11 ಲೇಪಕ್ಕಾಧಾರ ತಾನೀಗ ಲೇಪ ನಿರಾಧಾರಲೇಪಹರ ತಾ ನಿಜವೆಂದು ಅನುಲೇಪವರ್ಪಿಸಿದೆನೆ12 ಪುರತನು ವಿಸ್ತರಿಸಿ ತಾನೀಗ ಪುರಾಧಿಪತಾನೆನಿಸಿಪುರುಷೋತ್ತಮ ತಾನೆಂದು ಸುಪುಷ್ಪವರ್ಪಿಸಿದೆನೆ13 ಪರ ಇಹವು ತಾನೇ ತಾನೀಗ ಪರಾತ್ಪರನು ತಾನೆಪರವಸ್ತು ತಾ ನಿಜವೆಂದು ಧೂಪವರ್ಪಿಸಿದೆನೆ 14 ಜ್ಯೋತಿಯ ರೂಪ ತಾನೀಗ ಜ್ಯೋತಿ ನಿರ್ಮಯನುಜ್ಯೋತಿಯಹ ಚಿಜ್ಯೋತಿಯು ತಾನೆಂದು ಜ್ಯೋತಿಯರ್ಪಿಸಿದೆನೆ 15 ನಿತ್ಯ ತೃಪ್ತನುನಿತ್ಯತೃಪ್ತ ತಾನೆಂದು ನೈವೇದ್ಯವರ್ಪಿಸಿದೆನೆ 16 ಮಂಗಳವೆ ಆದ ತಾನೀಗ ಮಂಗಳಾಂಗನಾದಮಂಗಳ ಮೂರುತಿ ತಾನೆಂದು ತಾಂಬೂಲವರ್ಪಿಸಿದೆನೆ 17 ನಿರ್ವಿಕಾರ ನಿಜ ತಾನೀಗ ನಿರಾವಲಂಬ ನಿಜ ನಿ-ರಾವರಣ ತಾನೆಂದು ಪ್ರದಕ್ಷಿಣವರ್ಪಿಸಿದೆನೆ 18 ಜಯ ಜಯಾತ್ಮಕನೆ ತಾನೀಗ ಜಯ ಸದಾತ್ಮಕನೆಜಯನಿತ್ಯಾತ್ಮಕ ತಾನೆಂದು ನಮಸ್ಕಾರವರ್ಪಿಸಿದೆನೆ19 ಲೋಕೈಕನಾಥ ತಾನೀಗ ಏಕೈಕ ನಾಥನುಏಕ ನಾಥನು ತಾನೆಂದು ವಿಸರ್ಜನವರ್ಪಿಸಿದೆನೆ 20 ಪರಿ ಪರಿ ಮಾಡಿದೆನೆ 21
--------------
ಚಿದಾನಂದ ಅವಧೂತರು
ಪ್ರಾಣ ನರಹರಿವಿಠಲ | ಪಾಲಿಸೋ ಇವನಾ ಪ ಕಾಣೆನೋ ನಿನ್ಹೊರತು | ಅನ್ಯರನು ಹರಿಯೇ ಅ.ಪ. ಮಧ್ವಮತದೀಕ್ಷೆಯಲಿ | ಶ್ರದ್ಧೆಯುಳ್ಳವನಿವನುಬುದ್ಧಿ ಪೂರ್ವಕ ಶಾಸ್ತ್ರ | ದಧ್ಯಯನದಾಶೇ |ವೃದ್ಧಿಗೈಸುತ ಅದಕೆ | ಅದ್ವಾನ ವೆಸಗುತಲಿಹದ್ದುವಹ ಪೊರೆ ಇವನ | ಮಧ್ವಾಂತರಾತ್ಮ 1 ವೇದಾಂತ ವೇದ್ಯಹರಿ | ಪಾದಭಜನೆಯ ನಿತ್ತುಮೋದಮುನಿ ಸನ್ಮತವ | ಭೋದ ಚಾತುರ್ಯಆದರಿಸಿ ಇವಗಿತ್ತು | ಸಾಧನವಗೈಸೊ ಹರಿಬಾದರಾಯಣ ದೇವ | ಪ್ರಾರ್ಥಿಸುವೆ ನಿನ್ನಾ 2 ಸರ್ವಜ್ಞ ಸರ್ವೇಶ | ಸ್ವಾತಂತ್ರ ಪುರುಷನೆಸರ್ವಾಂತರಾತ್ಮಕನೆ | ನಿರ್ವಿಕಾರಾಖ್ಯಾಅದ್ವೆತತ್ರಯದಲ್ಲಿ | ಸರ್ವ ಸಾದನವಿರುವಸದ್ವಾರ್ತೆ ತಿಳಿಸಿವಗೆ | ಶರ್ವ ಸುರವಂದ್ಯಾ 3 ಧ್ಯಾನೊ ಪಾಸನೆ ತಿಳಿಸಿ | ಮೌನಿಗಳ ಸನ್ಮಾರ್ಗಜ್ಞಾನಿಯೆಂದೆನಿಸಿವನ | ಹೇ ನಾರಸಿಂಹ |ಮಾನಾಭಿ ಮಾನಗಳ | ನಾನಾಸುದ್ವಂದ್ವಗಳಶ್ರೀನಿವಾಸನೆ ತಾಳ್ವ | ಮನಧೈರ್ಯವೀಯೋ 4 ಗುರ್ವಂತರಾತ್ಮಗುರು | ಗೋವಿಂದ ವಿಠಲನೆದರ್ವಿಜೀವಿಯ ಹೃದಯ | ಗಹ್ವರದಿ ನಿನ್ನಾ |ಚೆಲ್ವರೂಪವ ಕಂಡು | ಭವವನುತ್ತರಿಪಂಥಹವಣೆ ಒದಗಿಸೊ ಎಂದು | ಪ್ರಾರ್ಥಿಸುವೆ ದೇವಾ 5
--------------
ಗುರುಗೋವಿಂದವಿಠಲರು