ಒಟ್ಟು 36 ಕಡೆಗಳಲ್ಲಿ , 21 ದಾಸರು , 35 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪೂರ್ಣರೂಪನೆ ಎನ್ನ ಪೂರ್ಣ ಮನದಲಿ ನಿಂತು ಪೂರ್ಣಗೊಳಿಸಭಿಲಾಷೆಯ ಪ. ಪೂರ್ಣ ಚಂದ್ರನ ಕಾಂತಿ ಪೂರ್ಣಧಿಕ್ಕರಿಸುವೊ ಪೂರ್ಣ ಪ್ರಕಾಶ ಹರಿಯೆ | ನೀ ಪೊರೆಯೊ ದೊರೆಯೆ ಅ.ಪ. ಪೂರ್ಣಕಾಮನೆ ಸ್ವಾಮಿ ಪೂರ್ಣ ಆನಂದ ಸಂ- ಪೂರ್ಣ ಗುಣಗಣನಿಲಯನೆ ಪೂರ್ಣ ಭಕ್ತರದಾತ ಪೂರ್ಣ ಲಕ್ಷ್ಮೀಶಪ್ರೀತ ಪೂರ್ಣಭೋಧರ ವರದನೆ ಪೂರ್ಣ ಪ್ರಕಾಶ ನಿನ್ನ ಕಾಣದೆಲೆ ಕಂಗೆಡುವೆ ಪಾದ ನೀಡೋ 1 ಚಕೋರ ಪೂರ್ಣಚಂದ್ರನೆ ಭಕ್ತಿ ಪೂರ್ಣ ಶರಧಿಗೆ ಚಂದ್ರನೆ ಪೂರ್ಣ ಬಾಧೆಯಪಡುವೆ ಪೂರ್ಣಗೈಸೆನ್ನಭವ ಪೂರ್ಣಚಂದ್ರನೆ ತಾಪಕೆ ಪೂರ್ಣ ನಂಬಿರುವೆನೊ ಪೂರ್ಣದಯವನೆಗರೆಯೊ ಪೂರ್ಣ ಕೃಪೆ ಚಂದ್ರಿಕೆ ಈಗಲೇ | ಬೀರೆನ್ನ ಮೇಲೆ 2 ಪೂರ್ಣಚಂದ್ರನ ವಂಶ ಪಾವನವಗೈಯಲು ಪೂರ್ಣ ಯದುಕುಲದಿ ಜನಿಸಿ ಪೂರ್ಣ ಯುದ್ಧದಲಿ ಗೆಲಿಸಿ ಪೂರ್ಣ ರಾಜ್ಯವನಿತ್ತೆ ಪ್ರಾಣಿ ಹೃದ್ಗುಹವಾಸಿ ಪೂರ್ಣ ಶ್ರೀ ವೆಂಕಟೇಶ | ಶ್ರೀ ಶ್ರೀನಿವಾಸ 3 ಪೂರ್ಣತತ್ವಗಳಿಗೆ ಪೂರ್ಣ ಶಕ್ತಿಯನಿತ್ತು ಪೂರ್ಣಗೊಳಿಸಿದೆ ಸೃಷ್ಟಿಯ ಪೂರ್ಣತತ್ವಾಧಿಪತಿ ಪ್ರಾಣದೇವನ ಪ್ರಿಯ ಪೂರ್ಣ ಭಕ್ತರ ರಕ್ಷಕ ಪೂರ್ಣ ಮನೋರಥದಾತ ಜೀವನಂತರ ವ್ಯಾಪ್ತ ಜ್ಞಾನ ವಿಜ್ಞಾನದಾತ | ಸುಜನರಿಗೆ ಪ್ರೀತ 4 ಪೂರ್ಣ ಭೂಮಂಡಲಕೆ ಪೂರ್ಣ ಪ್ರಭು ನೀನೆಂದು ಪೂರ್ಣಬೋಧರು ನುಡಿವರೊ ಪೂರ್ಣ ದೇವತೆಗಳು ಪೂರ್ಣ ನಿನ್ನನು ಭಜಿಸಿ ಪೂರ್ಣ ಪದ ಪಡೆದಿರುವರೊ ಪೂರ್ಣ ಹರಿ ಗೋಪಾಲಕೃಷ್ಣವಿಠ್ಠಲ ಎನ್ನ ಪೂರ್ಣ ಇಚ್ಛೆಯನೆ ಸಲಿಸೊ | ನೀ ಮನದಿ ನೆಲಸೊ5
--------------
ಅಂಬಾಬಾಯಿ
ಬಂದು ಸಂಸಾರದಿ ನೊಂದು ತಾಪತ್ರಯದಿ ಬೆಂದು ಕಂದಿ ಕುಂದಿದೆ ದೇವಾ ಪ ಪರಮ ಕರುಣಿಯೆ ನಿನ್ನ ಶರಣು ಪೊಕ್ಕಾ ಜನರ ಪರಿಪಾಲಿಪನೆಂಬ ಬಿರಿದೊ ಅರಿದೂ ನೀನೆ ಮೆರೆಯದಲೆ ಸಲಹÀಬೇಕೆನ್ನ ನಿನ್ನ ಚರಣನೀರಜಯುಗ್ಮವನ್ನಾ ತೋರಿ ಹರುಷವನೆ ನೀಡೆಲೋ ಮುನ್ನಾ ಘನ್ನ ಪರಮಭಕುತಿ ವಿರಕುತಿ ನೀನೆ ಎನಗಿತ್ತೆನ್ನ ಹರುಷದಲಿ ಪಾಲಿಸೈಯ್ಯಾ ಜೀಯಾ 1 ಮಾನುಷಾಧಮ ನಾನು ಹೀನಮತಿಯಲಿ ನಿನ್ನ ಧ್ಯಾನವನು ಮಾಡದಲೆ ಬರಿದೆ ಜರಿದೆ ಇಂಥ ಹೀನಭವದೊಳಗೆ ಬಾಯಿದೆರದೆ ದಿವ್ಯ ಜ್ಞಾನಿಜನರನ್ನು ನಾ ಜರಿದೆ ಙÁ್ಞನ ಹೀನನಾಗಿ ಕಾಲಕಳೆದೆ ಇನ್ನು ಶ್ರೀನಿವಾಸನೆ ನಿನ್ನ ಧ್ಯಾನ ಮಾಡುವೆನೋವಿ - ಜ್ಞಾನವನೆ ಪಾಲಿಸಯ್ಯಾ ಜೀಯಾ 2 ಈಸುವತ್ಸರ ನಿನ್ನುಪಾಸನವ ಮಾಡದಲೆ ರಾಸಭಾನಂತೆ ಬದುಕಿದೆ ದೇವಾ ಈಗ ವಾಸವಾಗೆಲೋ ಮನದಿ ಸ್ವಾಮೀ ನಾನು ಈಸಲಾರೆನು ಭವದಿ ಪ್ರೇಮೀ ಎನ್ನ ಆಸೆ ಪೂರ್ತಿಸೊ ಅಂತರ್ಯಾಮಿ ಇನ್ನು ಎಸುವಿಧದಲಿ ಸರ್ವೇಶ ಪೇಳಲಿ ಮುನ್ನೆ ಈಶ ಭವಶ್ರಮ ಕಳಿಯೋ ಈಗಾ ವೇಗಾ 3 ಆವ ಕರ್ಮದಲಿಂದ ಈ ವಸುಮತಿಯಲ್ಲಿ ಈ ವಿಧಾದಿಂದ ಬಂದೆ ನಿಂದೆ ನಿನ್ನ ಸೇವಕಾನಲ್ಲವೆ ತಂದೆ ಎನ್ನ ಆವಾಗ ನೋಡುವಿಯೊ ಮುಂದೆ ಈಗ ಕಾವವನಾರು ನಾ ಎಂದೆ ವೇಗ ದೇವ ನಿನ್ನಯ ಪಾದಸೇವೆ ಸುಖವನು ಇತ್ತು ಆವ(ಅವ)ರಂತೆ ಪೊರೆಯೊ ಎನ್ನಾ ಚೆನ್ನಾ 4 ಉರಗಾದ್ರಿ ನಿಲಯನೆ ವರಭೋಗಿಶಯನನೆ ಪರಮಪುರುಷನು ಎಂದು ಮೊರೆಯಾ ಇಡುವೆ ನಿನ್ನ ಪರಿಪರಿಯ ಜನರನ್ನು ಪೊರೆವೆ ಎನ್ನ ತಿರಸ್ಕಾರ ಮಾಡುವುದು ಥsÀರವೇ ನಿನ್ನ ಮರಿಯಾದೆಯಲ್ಲಮರತರುವೇ ಕೃಪಾ ಕರನೇ ಸರ್ವರಿಗು ಸರಿಯಾಗಿ ಇರುತಿರುವಿ ಗುರುಜಗನ್ನಾಥ ವಿಠಲಾ ವತ್ಸಲಾ 5
--------------
ಗುರುಜಗನ್ನಾಥದಾಸರು
ಬಾರೆಂದು ಹಸೆಗೆ ಕರೆವೆÀನು ಕ್ಷೀರಾಬ್ಧಿಶಯನನೆ ಸಾರಸನಯನನೇ ಪ. ಕ್ಷೀರಾಬ್ಧಿಜಾವರ ಮೇರುಗಂಭೀರನೆ ನೀರಜಭವಪಿತ ಮಾರಹರಾರ್ಚಿತ ಚಾರುನೀರದಗಾತ್ರ ಪರಮ ಪವಿತ್ರ ಅ.ಪ ಧರಣೀಸುರರ ಮೊರೆಗಳನಾಲಿಸಿ ಧರೆಯೊಳಗವತರಿಸಿ ನರರೂಪಧರಿಸಿ ಧರಣಿಪ ದಶರಥತರಳನೆಂದೆನಿಸಿ ಧರೆಯ ಭಾರವನಿಳಿಸಿ ಕರುಣಿಸು ಮನವೆರಸಿ 1 ಅಸುರೆ ತಾಟಕಿಯ ಅಸುವನಳಿದು ದುಷ್ಟ ನಿಶಿಚರರನು ಸದೆದು ಅನುಜನೊಡಗೊಂಡು ಕುಶಿಕನಂದನನ ಕ್ರತುವನು ತಾ ಕಾಯ್ದು ಅಸಮ ಶೂರನೆನಿಸಿ ಅಮರರ ಮನತಣಿಸಿ 2 ಶಿಲೆಯ ಶಾಪವಕಳೆದು ಲಲನೆಯ ಪೂಜೆಗೊಲಿದು ಬಲುಹಿನಿಂದಲೆ ಬಂದು ಹರಧನು ಮುರಿದು ಲಲನೆ ಜಾನಕಿಯ ನಲವಿನಿಂ ಕೈಪಿಡಿದು ಬಲುಗರ್ವಿತ ಭಾರ್ಗವ ಮದಮುರಿದೆ ಸಲಹೆನ್ನ 3 ಈಶವಿನುತ ಶ್ರೀ ಶೇಷಾಚಲ ನಿಲಯನೆ ದಾಸರಮನದೊಳು ವಾಸವಾಗಿಹನೇ ವಾಸವಾದ್ಯಮರ ಪೋಷಕನೆನಿಸಿಹನೆ ಭಾಸುರವದನನೆ ಶ್ರೀಸತೀಸದನನೆ ನೀಂ ನಲಿದು 4
--------------
ನಂಜನಗೂಡು ತಿರುಮಲಾಂಬಾ
ಬಾರೊ ಗೋವಿಂದ ಹೃತ್ಸರೋಜಕ್ಕೆ ಪ ಗಾರ ಗುಣಪೂರ್ಣ ಮಾರಜನಕನೆ ಅ.ಪ ಅಂಡಜವಾಹನ ಬ್ರಹ್ಮಾಂಡ ಗುಣಪೂರ್ಣ ತೊಂಡರ ಪಾಲಿಪೊ ಪುಂಡರೀಕಾಕ್ಷನೆ 1 ತುಂಗವಿಕ್ರಮನೆ ಸಂಗೀತಲೋಲನೆ ಮಂಗಳಮಹಿಮನೆ ಗಂಗೆಯ ಪಿತ ಹರಿ 2 ಸಿರಿ ಸಹಿತ ನಿಲಯನೆ ಶೌರಿ ವಾರಿಜದಳ ನಯನ 3 ವಿಜಯ ರಾಮಚಂದ್ರವಿಠಲರಾಯನೆ ಅಜವಂದಿತ ನಿನ್ನ ಭಜನೆಯ ಪಾಲಿಸೊ 4
--------------
ವಿಜಯ ರಾಮಚಂದ್ರವಿಠಲ
ಭವ ಕಾಮಹರ ನಿನ್ನಂಘ್ರಿ ತಾಮರಸಯುಗಳ ಭಜಿಸುವೆ | ಭಜಿಸಿ ಬಿನ್ನೈಸುವೆ ಶ್ರೀ ಮನೋಹರನ ತೋರಯ್ಯ 1 ಕೃತ್ತಿವಾಸನೆ ಎನ್ನ ಚಿತ್ತದಲಿ ಹರಿಯಪದ ನಿತ್ಯದಲಿ ಭಜಿಪ ಮತಿ ನೀಡೊ | ಮತಿ ನೀಡೊ ಪಾರ್ವತಿ ಚಿತ್ತದೊಲ್ಲಭನೆ ನಮಿಸುವೆ 2 ಸುವರ್ಣಮುಖರಿಯ ತೀರದಲಿ ನೆಲಸಿರುವೆ ಶ್ರೀ ವರಾಹನಂಘ್ರಿ ಭಜಿಸುತ್ತ | ಭಜಿಸುತ್ತ ನೆಲಸಿರುವ ಪಾವನರೂಪ ಸಲಹಯ್ಯ 3 ಕಾಳಸ್ತಿನಿಲಯನೆ ಪೇಳಲಿನ್ನೇನು ನಾ ತಾಳಲಾರೆನು ಈ ಭವಬಂಧ | ಭವಬಂಧ ಬಿಡಿಸುವ ವ್ಯಾಳ ಶಯನನ್ನ ತೋರೈಯ್ಯ 4 ಭಕ್ತರಿಗೊಲಿದು ಅಪಮೃತ್ಯು ಪರಿಹರಿಸಿದೆ ಸತ್ಯ ಸಂಕಲ್ಪ ನಿನ್ನಂಘ್ರಿ | ನಿನ್ನಂಘ್ರಿ ಕಮಲಗಳ ಚಿತ್ತದಲಿ ತೋರಿ ಸಂತೈಸು 5 ಮನಕೆ ಗುರು ನೀನಹುದು ಮನವ ಹರಿಯಲಿ ನೆಲಸೊ ವೈರಿ ಮಮತೆಯಿಂ | ಮಮತೆಯಿಂದಲಿ ನಿತ್ಯ ಮನಶುದ್ಧಿಗೈದು ಕಾಯಯ್ಯ 6 ಶಂಖಚಕ್ರವ ಪಿಡಿದ ಸಂಕರ್ಷಣನ ರೂಪ ನಿತ್ಯ ಭಜಿಸುವೆ | ಭಜಿಸುವೆ ಕೈಲಾಸ ಅಂಕದಲಿ ನೆಲಸಿ ಹರುಷದಿ 7 ನರಸಿಂಹ ರೂಪವನು ಸ್ಮರಿಸುತ್ತ ಮೈಮರೆವೆ ಉರುತರ ಭಾವ ಭಕ್ತಿಯಲಿ | ಭಕ್ತಿಯಲಿ ಭಜಿಪ ನಿನ್ನ ಸ್ಮರಿಸುವರ ಭಯವ ಹರಿಸುವೆ 8 ಶ್ರೀ ರಾಮನಾಮವನು ಪ್ರೇಮದಿಂದುಮೆಗರುಹಿ ಆರಾರು ಅರಿಯದಾನಂದ | ಆನಂದವಿತ್ತೆ ಭವ ತಾರಕವೆಂದು ಕರುಣಾಳೂ 9 ಅಜನ ಭ್ರೂಮಧ್ಯದಲಿ ಜನಿಸಿದೆಯೊ ಜಗದಲ್ಲಿ ಭಂಜನ | ಭಂಜನಗೊಳಿಸಿದೆ ತ್ರಿಜಗದಲಿ ನಿನಗೆ ಸರಿಯುಂಟೆ 10 ಶೇಷ ಪರ್ಯಂಕನಿಗೆ ಹಾಸಿಗೆಯಾಗಲು ತೋಷದಲಿ ತಪವಾಚರಿಸಿದೆ | ಚರಿಸಿ ಸಾಧಿಸಿದೆ ನೀ ಶೇಷ ಪದವಿಯನು ತ್ರಿನೇತ್ರ 11 ಶರಧಿ ಮಥಿಸಲು ಗರಳ ಉದ್ಭವಿಸಿ ಭಯವಾಗೆ | ಭಯವಾಗಿ ಪರಿಹರಿಸಿ ಗರಳವನೆ ಕುಡಿದೆ ಶ್ರೀ ಕಂಠ 12 ಅಸುರರ ವಂಚಿಸಿದ ವಶವಲ್ಲದ ಹೆಣ್ಣು ವಶವಾಗಲೆಂದು ಹಾರೈಸಿ | ಹಾರೈಸಿ ಬಳಲುತಿರೆ ಬಿಸಜಾಕ್ಷ ನಿನ್ನ ಸಲಹಿದ 13 ತಾರಕಾಸುರನಿಂದ ಘೋರಪಡುತಿರೆ ಜಗವು ಮಾರ ಪೂಅಸ್ತ್ರ ಎಸೆಯಲು | ಎಸೆಯಲು ದಹಿಸಿ ಕು- ಮಾರನನು ಪಡೆದೆ ಗಿರಿಜೇಶ 14 ಸ್ತುತಿಪ್ರಿಯ ನಿನ್ನ ನಾ ಸ್ತುತಿಸಲಾಪೆನೆ ಮಂದ ಮತಿ ಎಂದು ನೀನೆ ಸಂತೈಸೊ | ಸಂತೈಸಬೇಕಿನ್ನು ಮತಿಯಿತ್ತು ಹರಿಯ ಪದದಲ್ಲಿ 15 ಶಿರದಲ್ಲಿ ಗಂಗೆ ಚಂದ್ರನ ಮೆರೆಯುವ ಉರಗ ಭೂಷಣನೆ ಕೇಳಿನ್ನು | ಕೇಳಿನ್ನು ಎನ್ನ ಮನ ಮರೆಯದೆ ಹರಿಯ ನೆನೆಯಲಿ 16 ವಿಷ್ಣು ಭಕ್ತರೊಳಗೆ ಶ್ರೇಷ್ಠ ನೀನಹುದಯ್ಯ ಜಿಷ್ಣುವಿಗೆ ಮೆಚ್ಚಿ ಧನುವಿತ್ತೆ | ಧನುವಿತ್ತೆ ಗೋಪಾಲ- ಕೃಷ್ಣವಿಠ್ಠಲನ ತೋರಯ್ಯ 17
--------------
ಅಂಬಾಬಾಯಿ
ಭಾರ ನಿನ್ನದೊ ಪ ಭಾರ ನಿನ್ನದಯ್ಯ ಹರಿಯೆ ಘೋರ ಈ ಸಂ ಸಾರದೊಳಗೆ ಪಾರುಮಾಡಿ ಪೊರೆವುದೆನ್ನ ಅ.ಪ ಕರುಣಾ ನಿಲಯನೆಂದು ನಿನ್ನ ಮೊರೆಯ ಹೊಕ್ಕು ಬೇಡಿಕೊಂಬೆ ನರನ ಭವದಗುಣಗÀಳಳಿದು ಹರಿಯೆ ನಿಮ್ಮ ಚರಣಸ್ಮರಣೆ ಕರುಣದಿಂದ ನೀಡಿ ಪೊರೆಯೊ ಶರಣಜನರ ಅಸಹಾಯಕರ 1 ಶ್ರೀಶ ಶ್ರೀನಿವಾಸ ನೀನೆ ದಾಸನ ಮನದಾಸೆಯ ಪೂರೈಸುವ ದಾತನೆಂದು ನಿನ್ನ ದಾಸತ್ವ ಬೇಡ್ವೆ ದೋಷದೂರ ಘಾಸಿಮಾಡದೆ ಹೇಸಿ ಭವದಿ ಪೋಷಿಸಯ್ಯ ಬೇಗ ಈಶ 2 ಚಿಂತೆ ಭ್ರಾಂತಿ ದೂರಮಾಡಿ ಸಂತಸ ಸುಖವನ್ನು ನೀಡಿ ಕಂತುಜನಕ ನಿಮ್ಮ ಭಕ್ತಿ ಅಂತ್ಯದಲ್ಲಿ ನಿಲ್ಲಿಸಿ ಎ ನ್ನಂತರಂಗದೊಳಗೆ ತೋರೊ ಸಂತರೊಡೆಯ ಸೀತಾರಾಮ 3
--------------
ರಾಮದಾಸರು
ಮನರಥದಿಂದಲಿ ಘನರಥಕೀಗಲೆ ಬೇಗನೆ ಬಾರೊ ಪ. ಶ್ರೀ ಶ್ರೀನಿವಾಸ ಶ್ರೀ ವೆಂಕಟೇಶ ದನುಜದಲ್ಲಣ ಬೇಗ ಬಾರೋ ಕೃಷ್ಣ ಅ.ಪ. ಮುತ್ತಿನ ತೋರಣ ಸುತ್ತು ಛತ್ತರಿಗೆಯು ಬೇಗನೆ ಬಾರೊ ಸಿರಿ ಸಹ ಬೇಗನೆ ಬಾರೊ ಉತ್ತಮ ಭಕ್ತರು ಎತ್ತಿ ಕೈ ಕರೆವರು ಬೇಗನೆ ಬಾರೊ ನಿತ್ಯ ಮಂಗಳ ನಿನ್ನ ಉತ್ತಮ ರೂಪವ ಚಿತ್ತದಿ ತೋರುತ ಸತ್ಯ ಸಂಕಲ್ಪನೆ 1 ಗಡಗಡ ನಡೆಯುವ ಘನರಥದಲಿ ನಿಂದು ಬೇಗನೆ ಬಾರೊ ಎಡಬಲದಲಿ ಶ್ರೀ ಭೂಮಿಯರೊಡಗೂಡಿ ಬೇಗನೆ ಬಾರೊ ಧಡಧಡ ನಡೆಯುತ ದೈತ್ಯದಲ್ಲಣನೆ ಬೇಗನೆ ಬಾರೊ ನುಡಿಸುವ ವಾದ್ಯಗಳ್ ಪಿಡಿದಿಹ ಚಾಮರ ಕಡೆಗಣ್ಣೊಳು ಭಕ್ತರನೀಕ್ಷಿಸುತಲಿ 2 ನಾರದ ತುಂಬುರ ನಾಟ್ಯವನಾಡ್ವರು ಬೇಗನೆ ಬಾರೊ ಬಾರಿ ಬಾರಿಗೆ ಭಕ್ತರು ನುತಿಗೈವರು ಬೇಗನೆ ಬಾರೊ ವಾರಿಜಾಸನ ವಂದ್ಯ ಶ್ರೀನಿವಾಸ ದೊರಿ ಬೇಗನೆ ಬಾರೊ ತೋರುತ ರೂಪವ ಬೀರುತ ಕರುಣವ ಮಾರಜನಕ ಅಪಾರ ಮಹಿಮನೆ 3 ವಂದಿಸಿ ಕರೆವರೊ ನಿಂದು ಭಕ್ತರೆಲ್ಲ ಬೇಗನೆ ಬಾರೊ ಇಂದಿರೆಯರಸನೆ ಮಂದರೋದ್ಧರ ಕೃಷ್ಣ ಬೇಗನೆ ಬಾರೊ ಇಂದು ಸ್ಥಿರವಾರ ಸ್ಥಿರವಾಗಿ ಸಲಹಲು ಬೇಗನೆ ಬಾರೊ ಹಿಂದೆ ಮುಂದೆ ಭಕ್ತ ಸಂದಣಿಯೊಳು ಗುರು ವೃಂದ ಬಿಂಬ ಮನ್ಮನ ಬಿಂಬನೆ ರಥಕೆ 4 ಅಪಾರ ಕರುಣದಿ ಭಕ್ತರ ಪೊರೆಯಲು ಬೇಗನೆ ಬಾರೊ ಶ್ರೀಪತಿ ಶೇಷಾಚಲನಿಲಯನೆ ಹರಿ ಬೇಗನೆ ಬಾರೊ ಗೋಪಾಲಕೃಷ್ಣವಿಠ್ಠಲನೆ ತ್ವರಿತದಿ ಬೇಗನೆ ಬಾರೊ ಭೂಪರೈವರ ಕಾಯ್ದ ಗೋಪಕುವರ ಕೃಷ್ಣ ಈ ಪರಿಯಿಂದಲಿ ಭಕ್ತರ ಪೊರೆಯಲು 5
--------------
ಅಂಬಾಬಾಯಿ
ರುದ್ರದೇವರ ಸ್ತೋತ್ರ ಇಂದುಧರನೆ ಬಾರೊ | ಸುರ | ವೃಂದವಂದ್ಯನೆ ಬಾರೊಕುಂದಾದೆನ್ನ ಮನಸಿಗೇ ಮುಕುಂದ ಪ್ರಿಯನೆ ಬಾರೋ ಪ ರಜತಾದ್ರಿ ನಿವಾಸನೆ ಬಾರೋಗಜದೈತ್ಯ ವಿನಾಶನೆ ಬಾರೋ ||ಅಜಸುತನಧ್ವರ ಭಜನೆಯ-ಗೆಡೆಸಿದ ಗಜಮುಖನಯ್ಯನೆ ಬಾರೋ 1 ಅಗಣಿತ ಶೌರ್ಯನೆ ಬಾರೋಸರ್ಪ ಭೂಷಣನೆ ಬಾರೋ 2 ಕಂದನ ತಲೆ ಕೆಡಹಿದವನೆ ಬಾರೋಇಂದ್ರ ಅಜಗೊರಳಗೊಲಿದನೆ ಬಾರೋ ||ಅಂಧಕಾಂತಕ ಇಂದ್ರವಂದಿತನಂದಿವಾಹನನೆ ಬಾರೋ 3 ಅಂಬರ ಪುರಹರನೆ ಬಾರೋ ತ್ರಿ-ಯಂಬಕ ಮಹದೇವನೆ ಬಾರೋ ||ಅಂಬಿಕೆ ವಲ್ಲಭ ಸಿಂಧೂರ ಮುಖ ಪಿತಶಂಭು ಮೂರುತಿಯೆ ಬಾರೋ 4 ಸುರ ನದಿಯ ಪೊತ್ತವನೆ ಬಾರೋವರ ಪಂಪಾಪುರ ನಿಲಯನೆ ಬಾರೋ ||ಶಿರಿ ಮೋಹನ್ನ ವಿಠಲನ್ನಪರಮ ದಾಸನೆ ಬಾರೋ 5
--------------
ಮೋಹನದಾಸರು
ವಂದಿಪೆ ನಿನಗೆ ಗಣನಾಥ ಮೊದಲೊಂದಿಪೆ ನಿನಗೆ ಗಣನಾಥ ಪ ಬಂದ ವಿಘ್ನ ಕಳೆ ಗಣನಾಥ ಅ.ಪ. ಸಿಂಧುರವದನರವಿಂದ ನಯನ ಘನ ಸುಂದರ ಸತಿಯರ ಮಂದಿರ ನಿಲಯನೆ 1 ಹೂಡಿದ ಆಟಕೆ ಮಾಡಿದ ಯೋಚನೆ ಕಡೆಗಾಣಿಸು ಘಟ್ಟಿಕಾಣಿಕೆ ಕೊಡುವೆ 2 ಮಂಗಳಾಂಗ ಮಹಮಾದಗಮನಿಯಳ ತಂದು ತೋರೋ ತಂದೆವರದಗೋಪಾಲವಿಠ್ಠಲಪ್ರಿಯ 3
--------------
ತಂದೆವರದಗೋಪಾಲವಿಠಲರು
ವಾರಿಧಿನಿಲಯನೆಂಥಾತ ತೀರದ ಮಹಿಮಗಾರನೀತ ಪ ಸಾರಿ ನಂಬಿ ಭಜಿಸಿ ಸತತ ಘೋರ ದುರ್ಭವಳಿರೋ ನಿರುತಅ.ಪ ದೇವದೇವ ದಿವ್ಯಚರಿತ ದೇವಿದೇವಕಿ ಗರ್ಭಸಂಜಾತ ಗೋವುಗಳನು ಕಾಯಿದಾತ ಗೋವಳರೊಡನೆ ಆಡಿದಾತ ಮಾವನಮರ್ದಿಸಿ ಭುವಿಗೀತ ಕೇವಲಸೌಖ್ಯ ನೀಡಿದಾತ 1 ಗೋವರ್ಧನಗಿರಿ ಎತ್ತಿದಾತ ಗೋವಳರನ್ನು ಸಲಹಿದಾತ ಮಾಯಾಪೂತನಿಯಸುವನೀತ ಮಾಯದಿಂದ ಹೀರಿದಾತ ತಾಯಿ ಯಶೋದಾದೇವಿಗೀತ ವಿಶ್ವ ತೋರಿದಾತ 2 ಅಸಮಾಯದಾಟವಾಡುತ ಶಿಶುವಾಗಿ ತೋರಿದಾತ ಕುಶಲಗೋಪಿಕಾಸ್ತ್ರೀಯರನೀತ ವಸನ ಕಳೆದು ನಿಲಿಸಿದಾತ ವಸುಧೆ ಭಾರವನಿಳುಹಿದಾತ ನೊಸಲಗಣ್ಣನ ಸಲಹಿದಾತ 3 ಬಾಲೆಗೋಪಿಯರಿಗೊಲಿದಾತ ಪಾಲಮೊಸರು ಬೆಣ್ಣೆ ಮೆಲಿದಾತ ಕೊಳಲನೂದುತ ನಲಿದಾಡಿದಾತ ಬಾಲನಾಗಿ ಲೀಲೆ ತೋರಿದಾತ ಕಾಳರಕ್ಕಸರ ಕುಲಭೀತ ಕಾಳಿಯನ್ನು ಮೆಟ್ಟಿ ಸೀಳಿದಾತ 4 ಹಿಡಿ ಅವಲಕ್ಕಿಗೆ ಒಲಿದಾತ ಮಾನವ ಕಾಯ್ದಾತ ದೃಢ ಭಕ್ತರೋಳ್ವಾಸವಾದಾತ ಇಡೀ ಭುವನಗಳ್ಹೊತ್ತಾಳುವಾತ ಅಜ ಸುರಾದಿವಂದಿತ ಒಡೆಯ ಶ್ರೀ ರಾಮಯ್ಯ ಮಮದಾತ 5
--------------
ರಾಮದಾಸರು
ಶ್ರೀ ವರನೆ ಪರತರನೆ ಪ ಪಾವನಕರ ಕರುಣಾರಸ ಭರಿತನೆ ಅ.ಪ. ಅಘ ಪರಿಹಾರಕ ಹರಿಯೆ ಬಗೆ ಬಗೆ ಅಪರಾಧಗಳನು ಕ್ಷಮಿಸಿದೆ 1 ಸಕಲ ನಿಯಾಮಕ ವಿಭುವೆ ಭಕುತಪರಾಧ ಸಹಿಷ್ಣುವೆ ಪ್ರಭುವೆ 2 ಮೊರೆಯನು ಕೇಳೆಲೊ ದೊರೆಯೆ ಗರುವ ಕೊಡದೆ ಪೊರೆ ಕರಿಗಿರಿ ನಿಲಯನೆ 3
--------------
ವರಾವಾಣಿರಾಮರಾಯದಾಸರು
ಶ್ರೀ ಸತ್ಯ ಬೋಧರು ನಿಂದಿಸೋರಿಗೆ ನಿಂದೆಯನು ಕೊಡುವಾ ಕೊನೆಕಾಮರಿಗೆ [?] ಕೊನೆಯನು ಕೊಡುವಾ ಘನ ಮಹಿಮಾ ನಮ್ಮ ಸತ್ಯಬೋಧಗುರು ಅನುದಿನ ನೆನೆಯಲಭೀಷ್ಟವ ಕೊಡುವಾ ಪ ರಾಮದೇವಾರ್ಚನೆ ನೇಮದಿಂದಲಿ ಗೈದು ಕಾಮಿತ ಫಲಪ್ರದ ಬಲವೈಯ್ದಿದಾ ಶೀಮಿಶೀಮಿಯೊಳು ಕಾಮನೈಯ್ಯನ ಜನ ಕಾಮಪ್ರದಾನೆಂಬುದೆ ಸಾರಿದಾ ಧೀಮಾನ್ ಶ್ರೀಮಾನ್ ಕಾಮಿತೇಷ್ಟದಾ ಕಾಮನೆಂದು ತಾ ಪೊಗಳಿಸಿದಾ ವಾಮದೆ ವಗುರು ರಾಮಭಕುತನೆಂದು ಭೂಮಿಯೊಳ್ಡಂಗುರ ಹೊಡಿಸಿದಾ 1 ತತ್ವ ತಿಳಿದು ನೋಡಿ ಸತ್ಯ ಸತ್ಯ ಹರಿ ಮತ್ತುವನಿಗೆ ಭೃತ್ಯವಾದ ಸೂನು ಉತ್ತಮರೆಲ್ಲರು ಸತ್ಸಮಯವಂತೆ ಸತ್ಯ ಪ್ರಮಾಣವ ಪೇಳಿದನು ¸ತ್ಯಬೋಧ ರವಿ ಮಿಥ್ಯಾಗತ್ತಲೆಗೆ ತಾ ಕತ್ತರಿಯೆಂದರುಹಿದನು ¸ತ್ಯ ಬೋಧನೆಯನು ಸತ್ವರಿಂಗೆ ಮಾಡಿ ಮತ್ತವರುದ್ಧಾರ ಮಾಡಿದನು 2 ವರಸದ್ಗುಣಗಣ ನಿಲಯನೆನಿಸಿ ತಾ ವರ ಶಿಷ್ಟಾನ್ವಿತ ಮೇಣ್ ವಂದ್ಯನಾದ ಶಿರಿವರ ಪಾದಾನುಗ್ರಹ ಪಡೆದು ತಾ ಹರಿಜನಾರ್ತಿತಯ ಛೇದಿಸಿದಾ ದುರಿತ ತಮರಾಶಿಗಗ್ನಿಯೆನಿಸಿದಾ ಶರಣರ ಸಂಘ ಬೂದಿಗೈದಾ ನರಸಿಂಹವಿಠಲನ ಕರಣವ ಪಡೆದು ತಾ ಗುರುವರ ವರಪ್ರದನೆನಿಸಿದಾ 3
--------------
ನರಸಿಂಹವಿಠಲರು
ಶ್ರೀರಂಗನಾಥ ಕಾಯೋ ಕಾವೇರಿರಂಗ | ಕಾರುಣ್ಯಪಾಂಗಾ ಪ ಕಾಯೊ ಕಾಯೊ ಕಾವೇರಿ ನಿಲಯನೆ ಕಾಯೊ ವಾಙ್ಮನ ಪೂರ್ವಕದಿ ತವ ತೋಯಜಾಂಘ್ರಿಯ ನಂಬಿದೆನುಭವ ಮಾಯಗೆಲುವ ಉಪಾಯ ತೋರಿ ಅ.ಪ ದೇವಾಧಿದೇವ ನೀನು | ಪ್ರಣತ ಜನರಿಗೆ ದೇವತರು ಮಣಿಧೇನು | ಎಂದರಿತು ನಿಷ್ಟಿಲಿ ಧಾವಿಸಿ ಬಂದೆ ನಾನು | ರಘುವಂಶ ಭಾನು ಕಾವನಯ್ಯ ನೀನೊಲಿದು ಕರುಣದಿ ಪಾವಮಾನಿಯ ಶಾಸ್ತ್ರವರಿತು ಭಾವ ಭಕ್ತಿಲಿ ನಿನ್ನ ಪಾಡುವ ಕೋವಿದರ ಸೇವಕನ ಮಾಡಿ 1 ಪನ್ನಂಗಪತಿಶಯನ | ಶಿರಬಾಗಿ ಪ್ರಾರ್ಥಿಪೆ ಪನ್ನಂಗರಿಪುವಾಹನ | ಎನ್ನಪರಾಧವ ಮನ್ನಿಸೊ ಹಯವದನ | ವೈಕುಂಠ ಸದನ ನಿನ್ನನುಗ್ರಹ ಪೂರ್ಣಪಡೆದು ಜಗನ್ನಾಥದಾಸರ ಸನ್ನಿಧಾನದಿಂ ಬಂದೆ ತಂದೆ 2 ನೇಸರ ಕುಲಜಾತ | ವೇದೋಕ್ತಕ್ರಮದಿಂ ಭೂಸುರ ಕರಪೂಜಿತ | ಕೌಶಿಕನ ಯಜ್ಷವ ಪೋಷಕ ಪವನಪಿತ | ಪಾವನ್ನ ಚರಿತ ವಾಸುದೇವಾನಂತ ಮಹಿಮೆ | ವಿಭೀಷಣಪ್ರಿಯ ದೋಷಕಳೆಯುವ | ಭೇಷಪುಷ್ಕರಣೀಶ ಕೇಶವ ದಾಶರಧಿ ಶ್ರೀ ಶಾಮಸುಂದರ 3
--------------
ಶಾಮಸುಂದರ ವಿಠಲ
ಶ್ರೀವರ ಶ್ರೀಕರ ಶುಭಕರನೇ ಪಾವನ ಸಂಪದನೇ ವರದನೇ ಪ ಕಾವನು ಈವನು ಜೀವನು ನೀನೆ ದೈವವು ನೀನೆ ನವನಿಧಿಯು ನೀನೆ ಆವನು ಇನ್ನಾರನೂ ಅರಿಯೆನೆ 1 ತಂದೆಯು ತಾಯಿಯು ಮಾವನು ಭಾವನು [ಎಂದಿಗೆ ಇರುವನ ಪ್ರಿಯನು ಸಹಾಯನು ತಂದೆ ಮಾಂಗಿರಿನಿಲಯನೆ ಅಪ್ರಮೇಯನು ಜೀಯನು 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸರಸಿಜಾಲಯವೆನಿಪ ಸೊಗಸಿನ ವರರತ್ನ ಮಂಟಪದೊಳು ಸಿರಿದೇವಿಯೊಡನೆÉ ನೀಂ ಶಯನಿಸು 1 ಚಪಲಾಕ್ಷಿ ಶ್ರೀದೇವಿಯುಪಚಾರದಿಂ ನಲಿದು ಅಪರಿಮಿತಾನಂದದಿಂ ಶಯನಿಸು 2 ಸಂಭ್ರಮದಿ ಕೇಳುತ್ತ ಅಂಬುಜೋದ್ಬವ ತಾತ ಅಂಬುಜಾನನೆಯೊಡವೆರಸಿ ನಲಿಯುತ 3 ಗರುಡ ಪವನಜರೆಂಬುವ ನಿನ್ನಂಘ್ರಿಸರಸಿಜವ ಸೇವಿಸುವ ಪರಮಭಕ್ತರು ಬಂದು ಕರಮುಗಿದು ನಿಂದಿರಲು ಕುಡುತೆ ಮುದವಂ4 ವರಶೇಷಗಿರಿನಿಲಯನೆÀ ಜಯಜಯತು ವರದನಾರಾಯಣನೆ ಕರವಿಡಿದು ಪೊರೆಯೆನ್ನ ದೊರೆ ಮರೆಯೆ ನಾನಿನ್ನ ಪರಮಮಂಗಳೆಯೊಡನೆ ನೀಂ ಪರುಕಿಸೆನ್ನ 5
--------------
ನಂಜನಗೂಡು ತಿರುಮಲಾಂಬಾ