ಒಟ್ಟು 1884 ಕಡೆಗಳಲ್ಲಿ , 108 ದಾಸರು , 1151 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಕಲವೆಲ್ಲವು ಶಿವನ ಲಿಂಗದೊಳಗಡಗಿದುದು ಲಿಂಗವೆ ಮಾಲಿಂಗವಾಗಿ ತೋರುವುದು ಪ ಭಕುತಿಕರು ಮಮತೆಯೊಳು ಸ್ಥಾಪಿಸಿಯೆ ಅರ್ಚಿಸಲು ಸುಕೃತಫಲವನು ಅಳೆವ ಕೊಳಗವನು ಕಾಣೆ ಅ.ಪ ಆ ಮಹಾ ಸಹಸ್ರನಾಮದೊಳಗತ್ಯದಿಕ ಸೊಮೇಶನೆಂದೆಂಬ ಸ್ವಾಮಿಯನು ಕಂಡು ಸೋಮವಾರದ ದಿವಸ ಸಾಮರುದ್ರವ ಜಪಿಸಿ ನೇಮದಿಂ ಪೂಜಿಸಲು ಕಾಮಿತದ ಫಲವು 1 ಇನ್ನೇನ ವರ್ಣಿಸುವೆ ಈಶ ನಿನ್ನಯ ಮಹಿಮೆ ಉನ್ನಂತವಾಗಿ ಜಗದೊಳು ಚರಿಸಿತು ಪನ್ನಗೇಶನ ಬಲದ ಪಶ್ಚಿಮದ ದೆಸೆಯೊಳ್ ಪ್ರ- ಸನ್ನವಾದನು ಸೋಮನಾಥನೆಂದೆನುತ2 ಪಾದ ಪ್ರತ್ಯಕ್ಷವಾಗಿಯೆ ಸೋಮೇಶನೆಂದೀಗ ತಾ ಮೆರೆದುದು ಭುಕ್ತಿ ಮುಕ್ತಿಯನಿತ್ತು ಪ್ರೇಮದಿಂ ಸಲಹುತ್ತ ಕಾಮಿತಾರ್ಥವನೀವ 3 ಲೋಕೋಪಕಾರಕ್ಕೆ ಸೋಮೇಶ ನೀ ಬಂದೆ ಗೋಕರ್ಣ ಶ್ರೀಶೈಲ ಕಾಶಿ ರಾಮೇಶ್ವರವು ಬೇಕೆಂಬುದಿಲ್ಲಿನ್ನು ಎನ್ನ ಭೀತಿಯ ಗಿರಿಯ ಕುಲಿಶ ನೀನು ಜಗದೀಶ 4 ಜೋಕೆಯೊಳು ಮನದೊಳಗೆ ಅಡಗಿಸಿಯೆ ಭಜಿಸಿದರೆ ಯಾಕೆ ಮನದೊಳು ಬಿಡುವೆ ಶಿವನಾಮವನು ನೀನು ಏಕೆ ಕಡೆಯಲಿ ಕೆಡುವೆ ಮರುಳು ಜೀವನವೆ 5 ಸಡಗರದಿ ಸರ್ವವೂ ನಿನ್ನಲ್ಲಿ ಅಡಗಿದುದು ಜಡೆಯೊಳಗೆ ಅಡಗಿದುದು ಪೊಡವಿಗುತ್ತಮ ನದಿಯು ಉಡುಪತಿಯು ಅಡಗಿದನು ಊಧ್ರ್ವ ಫಣೆಯೊಳಗೆ ಪಿಡಿಯೊಳಗೆ ಅಡಗಿದುದು ವೇದ ಮೃಗರೂಪಾಗಿ 6 ಕಿಚ್ಚು ಅಡಗಿತು ಅವನ ಅಚ್ಚ ಹಣೆಗಣ್ಣಿನೊಳು ಮುಚ್ಚಿ ತೆರೆವಕ್ಷಿಯೊಳು ಮೂಜಗದ ಬೆಳಕು ಬಿಚ್ಚಿಟ್ಟಿ ವಿಷಕಂಠದೊಳು ಲೋಕವನು ಎಚ್ಚರಿಪ ಮಂತ್ರಗಳು ಬಾಯೊಳಗಡಗಿದುದು 7 ಶುದ್ಧ ಸ್ಫಟಿಕ ಥರದ ಕಾಯಕಾಂತಿಗಳುಳ್ಳ ಬದ್ಧುಗೆಯ ದಾರದಂದದಿ ಉರಗನೊಪ್ಪುಗಳು ಉದ್ದಿಶ್ಯವಾಗಿ ಭಜಿಸಿದ ಭಕ್ತರುಂಡಗಳು ತಿದ್ದಿಟ್ಟಿ ಆಭರಣ ತಿರಿಶೂಲಧರಣ 8 ಪುಲಿಕರಿಯ ಪೊಳವುಗಳು ನಳನಳಿಪ ವಸನಗಳು ಹೊಳೆವ ಮುಖತೇಜಗಳು ನಳಿನನೇತ್ರಗಳು ನಲಿವಗಣ ಕೋಟಿಗಳ ಮಧ್ಯದೊಳು ಕೈಲಾಸ ಇಳಿದು ಬಂದನು ನಮ್ಮ ಬಳಿಗೆ ಸೋಮೇಶ 9 ನಾಸಿಕದಿ ಕೌಮಾರಿಗವಧಿಯಾಗಿಹ ಸ್ಥಳ ವಿ- ಶೇಷವಾಗಿಹ ಶುದ್ಧ ರೌಪ್ಯಪುರದೊಳಗೆ ಭೂಸುರೋತ್ತಮಗೊಲಿದು ಭೂರಿಭಾಗ್ಯವನಳೆದು ವಾಸವಾದೆಯೊ ಜಗದೀಶ ಸೋಮೇಶ 10 ಭಾಳನೇತ್ರನೆ ನೀಲಕಂಠ ಶೂಲಾಸ್ಥಿಧರ ಕಾಲರುದ್ರ ವ್ಯಾಳಭೂಷ ಸರ್ವೇಶ ಲಾಲಿಸೈ ಬಿನ್ನಪವ ಪಾಲಿಸೆನ್ನನು ಬೇಗ ಬಾಲಕನು ಅಲ್ಲವೇ ಭಕ್ತಸುರಧೇನು 11 ಸಾರಿ ನೋಡಿರೊ ಮೂರು ಲಿಂಗವನು ನೀವೀಗ ಧಾರುಣಿಯಳೊಂದು ಶಿವಲಿಂಗವನು ಬೇಗ ಮೇರುವಿಗೆ ಸಮವಾದ ಹೇಮವನು ವಿಪ್ರರಿಗೆ ಧಾರೆಪೂರ್ವಕವಾಗಿ ಇತ್ತ ಫಲ ಒದಗುವುದು 12 ಶಿವನ ಪೂಜೆಯೆ ಭಕ್ತಿ ಶಿವನ ಪೂಜೆಯೆ ಮುಕ್ತಿ ಶಿವಮಂತ್ರವೆ ಶಕ್ತಿ ಶಿವನೆ ಪರಶಕ್ತಿ ಶಿವನಾಮವನು ಭಜಿಸಿ ಸಿರಿಯ ಪಡೆದನು ಹರಿಯು ಶಿವನ ಮರೆಯದೆ ಭಜಿಸು ಇಹಪರವ ಸೃಜಿಸು13 ನಿನ್ನನೇ ನಂಬಿದೆನು ಉನ್ನತಾನಂತೇಶ ಮನ್ನಿಸಿ ದಯದೋರು ಚಂದ್ರಮೌಳೀಶ ಇನ್ನು ಭಯವಿಲ್ಲೆನೆಗೆ ಹರಸೆನ್ನ ಸೋಮೇಶ ಎನ್ನೊಡೆಯ ಶ್ರೀಕೃಷ್ಣ ವರಾಹತಿಮ್ಮಪ್ಪ 14
--------------
ವರಹತಿಮ್ಮಪ್ಪ
ಸಿದ್ಧಬಸವ ಪ್ರಸಿದ್ಧನ ಮಹಿಮೆಯ ಕೇಳಿರಿ ನೀವಿನ್ನು |ವಿದ್ಯಾ ಬುದ್ಧಿ ಧನ ಧಾನ್ಯವನು ಸಿದ್ಧಿಸುವವಿನ್ನೂ ಪ ಶಿವನ ಅಪ್ಪಣೆ ತೆಗೆದುಕೊಂಡು ಶಿವಕಂಚಿಯೊಳಗೆ |ಪಾವನ ಚರಿತ ಬ್ರಾಹ್ಮಣನಲ್ಲಿ ಪುಟ್ಟಿದನು ಬೇಗ ||ದಿವಸ ದಿವಸಕೆ ಬೆಳೆದನು ಬಿದಗಿ ಚಂದ್ರಮನ ಹಾಗೆ |ಜಾವ ಜಾವಕೆ ಶಿವನ ಧ್ಯಾನವ ಮಾಡುವ ಮನದೊಳಗೆ 1 ಮುಂಜಿ ಮಾಡಿಸಿಕೊಂಡನು ಸಿದ್ಧನು ಮದುವೆಯಾಗಲಿಲ್ಲ |ರಂಜಿಸುತಿಹನು ಸೂರ್ಯನಂತೆ ತೋರುವ ಜಗಕೆಲ್ಲ ||ಬಂಜೆ ಒಬ್ಬಳು ಇದ್ದಳು ಆಕೆಗೆ ಮಗನ ಕೊಟ್ಟನಲ್ಲ |ಸಂಜೆ ಹಗಲು ಕಾಣದ ಕುರುಡಗ ಕೊಟ್ಟನು ಕಣ್ಣುಗಳ 2 ತಂದೆ ತಾಯಿಗೆ ಹೇಳಿದನಾಗ ಪೋಗುವೆ ನಾನೆಂದು |ಕಂದ ನಮ್ಮನು ಬಿಟ್ಟು ಪೋಗುವದುಚಿತವೆ ನಿನಗೆಂದು ||ಅಂದ ತಾಯಿಗೆ ವಂದಿಸಿ ಹೇಳಿದ ಮಗನಾಗುವೆನೆಂದು |ಸಂದೇಹವು ಬೇಡೆಂದು ಪೇಳುತ ತೆರಳಿದ ದಯಾಸಿಂಧು 3 ಮಹಾಶಿವಾಲಯ ಕಂಡನು ಸಿದ್ಧನು ದೇಶ ತಿರುಗುತಲಿ |ಆ ಸೀಮೆಯಲಿ ಹಳ್ಳದ ನೀರು ನಿರ್ಮಲ ನೋಡುತಲಿ ||ಆಸನ ಹಾಕಿ ಕುಳಿತನು ಶಿವನ ಧ್ಯಾನವ ಮಾಡುತಲಿ |ಆ ಸಮಯದಿ ಬಂದನು ಕರಣಿಕ ಹೊಲಗಳ ನೋಡುತಲಿ 4 ಉದ್ದಂಡ ಸಂತತಿ ಆಗಲಿ ಇನ್ನು 5 ನಿನ್ನಯ ಪೂಜೆಯ ಮಾಡುವದ್ಹೇಗೆ ಹೇಳೋ ನಮಗೀಗ |ಮನ್ನಿಸಿ ಅವಗೆ ಪೇಳಿದ ಸಿದ್ಧ ಪುರುಷನು ತಾ ಬೇಗ ||ಸಣ್ಣ ಬಿಂದಿಗೆಯನಿಟ್ಟು ದ್ವಿಜರ ಪಾದೋದಕವೀಗ |ಸಂಖ್ಯೆಯಿಲ್ಲದ ಕೊಡಗಳ ಹಾಕಲು ತುಂಬದು ಎಂದೀಗೆ 6 ಅಂದಿಗೆ ಉಂಟು ಇಂದಿಗೆ ಇಲ್ಲ ಎನಲಾಗದು ನೀನು |ಸಂದೇಹವಿಲ್ಲ ಆಶ್ವೀನ ವದ್ಯ ದ್ವಿತೀಯದ ದಿನವು ||ಇಂದಿಗೆ ಕರಣಿಕ ವಂಶದವರು ಮಾಡುತಾರೆ ಇನ್ನೂ |ಮುಂದಕೆ ತೆರಳಿ ಕೊಳಕೂರಕೆ ಬಂದ ಸಿದ್ಧ ತಾನು 7 ಗಾಣಿಗರ ಮನೆಯೊಳಗಿದ್ದು ಗಾಣಾ ಹೂಡಿದನು |ಪ್ರಾಣ ತೊಲಗಿದ ಹೆಣ್ಣುಮಗಳಿಗೆ ಪ್ರಾಣವನಿತ್ತಾನು ||ಗೋಣಿಯೊಳಗೆ ಹೊಲಿದು ನದಿಯಲಿ ಪಾಚ್ಛಾ ಹಾಕಿದನು |ಕಾಣಿಸದಂತೆ ಬೇಗನೆ ಹೊರಗೆ ಹೊರಟು ಬಂದಾನು 8 ಹೆಸರು ನಿನ್ನದು ಏನು ಎಂದು ಪಾಚ್ಛಾ ಕೇಳಿದನು |ಹೆಸರು ನನಗೆ ಬಸವನೆಂದು ಕರೆತಾರೆ ಇನ್ನು ||ಪಶು ನೀನಾದರೆ ಸೊಪ್ಪಿಯ ಬೇಗ ತಿನಬಾ ಎಂದನು |ನಸು ನಗುತಲಿ ಸೊಪ್ಪಿಯ ತಿಂದು ಡುರಕಿ ಹೊಡೆದಾನು 9 ಗೊಂಬಿಗೆ ವಸ್ತಾ ಸೀರೆಯನುಡಿಸಿ ಸಿಂಗಾರ ಮಾಡಿದನು |ರಂಭೆಗೆ ಸರಿ ಈ ಹೆಣ್ಣು ಮಗಳಿಗೆ ಮದುವ್ಯಾಗೋ ನೀನು ||ಅಂಬುಜ ಮುಖಿ ಬಾರೆಂದು ಕರೆದನು ಸಿದ್ಧ ಮುನೀಶ್ವರನು |ತುಂಬಿದ ಬಸುರೊಳು ಮಗನ ಪಡೆದಳು ವಂಶಾದೆ ಇನ್ನು 10|| ನೇಮವ ಮಾಡಿ ಕೊಳಕೂರದಿ ಇರುವೆನು ನಾನೆನುತ |ಈ ಮಹಿಮೆಯೊಳಗೆ ಭೀಮಾ ದಕ್ಷಿಣವಾಹಿನಿ ಮಹಾಕ್ಷೇತ್ರ ||ಗ್ರಾಮಸ್ಥರನು ಕರೆದು ಹೇಳಿದನು ಅಡಗುವೆ ನಾನೆನುತ |ನೀವು ಮಾತ್ರ ನಾವಿದ್ದ ಸ್ಥಳವನು ನೋಡಬೇಡೆನುತ 11 ಕಲಿಕಾಲವನು ಕಂಡು ಸಿದ್ಧನು ಅದೃಶ್ಯನಾದನು |ತಿಳಿದು ಭಕ್ತಿ ಮಾಡಿದವರಿಗೆ ವರಗಳ ಕೊಡುತಿಹನು ||ಸುಳಿವನು ಕಣ್ಣಿಗೆ ಸತ್ಪುರುಷರಿಗೆ ಸಿದ್ಧ ಬಸವ ತಾನು |ಹಲವು ಹಂಬಲ ಮಾಡಲು ಬೇಡರಿ ಇರುವೆ ನಾನಿನ್ನೂ 12 ಹನ್ನೆರಡು ನುಡಿ ಸಿದ್ಧನ ಸ್ತೋತ್ರವ ಕೇಳಿದವರಿಗೆ |ಮುನ್ನ ಮಾಡಿದ ಪಾಪವು ನಾಶಾಗಿ ಹೋಗುವದು ಬೇಗ ||ಧನ್ಯನಾಗುವ ಕೀರ್ತಿ ಪಡೆಯುವ ಲೋಕದ ಒಳಗ |ಚನ್ನಾಗಿ ಶ್ರೀಪತಿ ಗುರುವಿಠ್ಠಲನು ಒಲಿವನು ತಾ ಬೇಗ 13
--------------
ಶ್ರೀಪತಿ
ಸ್ವಾಮಿ ಸರ್ವೋತ್ತಮಳೆ ಸಕಲ ಜನಕಾಧಾರೆ ಕಾಮಿತಾರ್ಥವನೀವ ಕರುಣಿ ಭೂದೇವಿ ಪ ಹರಿಯ ಪಾದದಲುದಿಸಿ ಹರಿಗೆ ವಧುವೆನಿಸಿ ಹರಿಗೆ ಸುತೆಯನು ಇತ್ತು ಹಿರಿಯಳಾದೆ ಹರಿನಾಮ ಕೀರ್ತನೆಯ ಹೊರೆವ ಧಾರುಣಿ ನಿನ್ನ ಮೊರೆಹೊಕ್ಕೆ ಮರೆಯದಿರು ಕರುಣದೋರೆನಗೆ 1 ಕ್ಷಮೆ ದಮೆಯು ಶಾಂತ ಸದ್ಗುಣವೊಪ್ಪುವಳೆ ನಿನಗೆ ಭ್ರಮೆಬಟ್ಟು ಭೂಭುಜರು ಕಡಿದುಕೊಳುತಿಹರು ಅಮಿತ ಮಹಿಳೆ ನಿನ್ನ ನಿಜವ ಬಲ್ಲವರಾರು ತಮಗೆ ಋಣವಿದ್ದುದನು ಕೊಂಡೊಯ್ವರಲ್ಲದೆ 2 ಚಿನ್ನ ಭಂಡಾರಗಳು ನಿನ್ನೊಡಲೊಳೊಪ್ಪಿದವು ಉನ್ನಂತ ರತುನಗಳು ನಿನ್ನೊಳಡಗಿಹವು ಅನ್ನ ಪಾನಂಗಳಿಗೆ ಬೀಜ ಮೂಲವೆ ನೀನು ನಿನ್ನ ಮರೆತಿಹ ಜನಕೆ ಮುನ್ನ ಸುಖವುಂಟೆ 3 ಒಬ್ಬ ರಾಯನ ಗೆಲುವೆ ಒಬ್ಬ ರಾಯನಿಗೊಲಿವೆ ಒಬ್ಬನಿಗೆ ಮೈಯ ನೀನು ಕೊಡುವೆ ಒಬ್ಬರಾದರು ನಿನ್ನ ನಿಜದಿ ಬಾಳ್ದಪರಿಲ್ಲ ಗರ್ಭಜಾತನ ಹರಿಯ ಕೈಯ ಕೊಲಿಸಿದೆಲಾ 4 ಅಂಬುಧಿಯೆ ವಸನಗಳು ಕುಂಭ ಕುಚಗಳೆ ಗಿರಿಯು ಸಂಭ್ರಮದ ನದಿ ಕಾಲುವೆ ನಿನ್ನ ಬೆವರುಗಳು ಎಂಭತ್ತನಾಲ್ಕು ಲಕ್ಷ ಜೀವರಾಶಿಗಳೆಲ್ಲ ತುಂಬಿಕೊಂಡಿರುತಿಹುದು ಅಂಗೋಪಾಂಗದಲಿ 5 ಮೂಢನಾದೆನು ನಿನ್ನ ಬೇಡಿಕೊಂಬರೆ ಮನದಿ ರೂಢಿ ದೇವತೆಯೆ ಮಾಡು ದಯವನು ನೀನು ಮನದಭೀಷ್ಟವನೆಲ್ಲ ಪಾಡು ಪಂಥವು ಬೇಡ ಪಡೆದ ಮಗನೊಡನೆ 6 ನಂಬಿದೆನು ನಾ ನಿನ್ನ ಕುಂಭಿನಿಯೆ ಕೈವಿಡಿದು ಇಂಬಾದ ಪದವಿಯನು ಸಂಭ್ರಮದಿ ಕೊಡುತ ಬೆಂಬಡದೆ ವರಾಹತಿಮ್ಮಪ್ಪ ಕರುಣದಲಿ ಹಂಬಲಿಪ ತೆರದಿಂದ ಸಲಹುವುದು ಜಗದಿ 7
--------------
ವರಹತಿಮ್ಮಪ್ಪ
ಹಲವು ಸಂಭ್ರಮಗಳಿಂ ಮನೆ ಕಟ್ಟಿದೀ ದೇವ ಪ ನೆಲೆಗೆಡಿಸಿ ಅದನಿಂದು ಕೆಡಹುತಿರುವೀ ಅ.ಪ ಪ್ರಾರಬ್ಧಕರ್ಮವೆಂತೆಂಬ ಹಳ್ಳವ ತೋಡಿ ಆರು ಜನ ಕೆಲಸಗಾರರನಲ್ಲಿ ಕೂಡಿ ಮೀರಿ ಮಾಯೆಯ ಭಾರಿ ಕಲ್ಕೆಸರುಗಳ ಹೂಡಿ ಭಾರಿನೆಲಗಟ್ಟು ರಚಿಸಿದರೊಂದುಗೂಡಿ 1 ಎಲುವಿನ್ಹಂದರ ಹರಹಿ ಬಲಿದ ಮಾಂಸದ ಗೋಡೆಗಳ ಮೇಲೆ ಚೆÀಲುವ ಚರ್ಮ ಹೊದ್ದಿಸಿ ಜಲರಕ್ತ ಕಾಲ್ವೆಗಳ ಹರಿಸಿ | ಸ್ವಚ್ಛತೆಯಿರಿಸಿ ಬಲುಉಸಿರುಬಲದಿಂದಲದ ಚಲನಗೊಳಿಸಿ 2 ಐದು ಇಂದ್ರಿಯಗಳೇ ದ್ವಾರ ಕಿಟಕಿಗಳಾಗೆ ಐದುಬಗೆ ವಿಷಯಗಳು ಆಹಾರವಾಗೆ ವೈದು ಯಮಪುರಿಗೆ ತಲ್ಪಿಸÀಲುಣಿಸನಿದನುಂಡು ಐದಿದುದು ನರಕಕೂಪಕೆ ಜೀವದಂಡು 3 ಕ್ಷೇತ್ರಜ್ಞ ನೀನು ನಿನ್ನಯ ಕಣ್ಣಮುಂದಿಂತು ಗಾತ್ರದಲಿ ವಾಸಿಪ ಜೀವನು ನಿನ್ನ ಮರೆತು ಕ್ಷೇತ್ರಘಾತಕಕಾರ್ಯವೆಸಗುತಿರಲಂದಂದೆ ನೇತ್ರ ಹಸ್ತಗಳ ಛೆÉೀದಿಸದೆ ಉಳುಹಿದೆಯೆಂತು 4 ಸರ್ವಸ್ವತಂತ್ರನೀ ಜೀವ ಪರತಂತ್ರನವ ಗರ್ವ ಅಜ್ಞಾನ ಅಂಧತೆಗಳಲಿ ಸಿಲುಕಿ ಸರ್ವ ದುಷ್ಕರ್ಮಗಳ ನಡೆಸಿ ಕೆಡಸಿಹನಿದನು ಸರ್ವದಾ ಕ್ಷಮಿಸಿ ಪೊರೆ ರಘುರಾಮವಿಠಲ 5
--------------
ರಘುರಾಮವಿಠಲದಾಸರು
( ನಿಂದಾಸ್ತುತಿ) ಬಹುಲೋಭಿಯೋ ನೀನು ಮುರಹರ ಪ ವರವೇನನೀವೆಯೆನಗೆ ವಿಹಿತದಿ ಪೊರೆ ಮಂದಾರ ಅ.ಪ ಹಾಸಿಕೊಳ್ವ ವಾಸುಕಿಯ ಬೀಸಿ ಬರುವ ಗಾಳಿ ಕುಡಿವ ವಾಸುದೇವನೆ ವಾಹನನ ಪನ್ನಗಾಸನನಾಗಿರುವನಲ್ಲವೆ 1 ಹೆಂಡತಿಯಾಗಿರುವ ಸಿರಿಯಂ ಕಂಡಕಂಡರ ಮನೆಗೆ ಕಳುಹಿ ಮಂಡಿಸುತ್ತ ಭಕ್ತರ ಗೃಹದೊಳುಂಡುಂಡು ತಣಿಯುತಿರುವೆ 2 ವ್ಯಯ ಮಾಡದೆ ಕೈಯಕಾಸ ನಯದಿಂದಲೆ ನಡೆದುಕೊಂಡು ಜಯ ಜಯ ಧಾರಾಳಿಯೆನಿಪ ಜೀಯ ಜನಾರ್ಧನ ಜಾಜಿಕೇಶವ3
--------------
ಶಾಮಶರ್ಮರು
* ಇಂದು ಕಾಯಲಿಬೇಕೊ ಸುಂದರ ಧನ್ವಂತ್ರಿ ಇಂದಿರೆರಮಣ ಆನಂದ ಕೃಷ್ಣ ಪ. ತಂದೆ ಮುದ್ದುಮೋಹನ ಗುರುಗಳ ನೀನು ಚಂದದಿಂ ಪಾಲಿಸಿ ತಂದುಕೊ ಕೀರುತಿಅ.ಪ. ಬಂದಿತೊ ನಿನಗೊಂದು ಕುಂದು ಇದರಿಂದ ನಂದಕಂದನೆ ಕೃಷ್ಣ ಉಡುಪಿ ನಿಲಯ ಮಂದರೋದ್ಧರ ಕೃಷ್ಣ ಬಂದು ಈಗ ನೀ ಕಾಯೊ ಇಂದು ಬೇಡುವೆ ನಿನ್ನ 1 ಭವರೋಗ ಹರನಿಗೆ ಇದೊಂದಸಾಧ್ಯವೆ ತವಕದಿಂದಲಿ ಆಯುವಿತ್ತು ಕಾಯೊ ಪವನನಂತರ್ಯಾಮಿ ಭವಪಾಶಬದ್ಧರ ತವಕದಿಂದಲಿ ಕಾಯ್ವ ಗುರುಗಳಲ್ಲವೆ ಇವರು 2 ನಿನ್ನ ಆಜ್ಞೆಯಿಂದ ಭಕ್ತರನುದ್ಧರಿಸ ಲಿನ್ನು ಧರೆಗೆ ಬಂದವರಲ್ಲವೆ ಮನ್ನಿಸಿ ನೀನಾಯುರಾರೋಗ್ಯ ಭಾಗ್ಯವಿತ್ತು ಚನ್ನಾಗಿ ಕಾಯಬೇಕಿನ್ನು ಎನ್ನಯ ದೊರೆಯೆ 3 ಕಷ್ಟ ಬಿಡಿಸುವರಿಗೆ ಕಷ್ಟ ಕೊಡುವರೆ ನೀನು ಕಷ್ಟ ಪರಿಹಾರಕನೆಂದೆನಿಸಿ ಬಿಂಕ ಥಟ್ಟನೆ ಕಾಪಾಡೊ ಶ್ರೇಷ್ಠ ಗುರುಗಳ ಎಮ್ಮ ಕಷ್ಟ ಬಿಡಿಸುವರ 4 ಅನ್ನ ಪಾನವಿಲ್ಲದಿನ್ನು ಬಳಲಿಸುವರೆ ಚನ್ನವಾಯಿತು ಇದು ನಿನ್ನ ಘನತೆ ಸನ್ನುತ ಮಹಿಮ ಶ್ರೀ ಗೋಪಾಲಕೃಷ್ಣವಿಠ್ಠಲ ಇನ್ನು ಕಾಯದಿರೆ ಎನ್ನಾಣೆ ಬಿಡೆ ಕಂಡ್ಯಾ 5
--------------
ಅಂಬಾಬಾಯಿ
* ಸತ್ಯವಂತನೊ ನೀನು ಸರಸಿಜಾಕ್ಷ ಸಿರಿ ನಿತ್ಯಾವಿಯೋಗ ಪ. ಶ್ರೀನಿವಾಸನೆ ಕೃಷ್ಣ ಭಾನು ಪ್ರಕಾಶ ಹರಿ ಏನೆಂಬೆ ನಿನ್ನ ಪ್ರಭಾವವನ್ನು ನಾನಾ ವಿಧದಿಂದ ಭಕ್ತರ ಕಾಯ್ವ ನರಹರಿಯೆ ಮಾನವಂತರ ಕಾಯ್ವ ದಾನವಾಂತಕನೆ 1 ಕೃಷ್ಣಮೂರುತಿ ನಿನ್ನ ದರುಶನದ ಕಾರಣದಿ ಕ್ಲೇಶ ತಂದೊಡ್ಡಿ ಇಷ್ಟು ಪರಿಯಲಿ ಎನ್ನ ಮನವ ಶೋಧಿಸಿ ನೋಡಿ ಕಷ್ಟ ಕಳೆದೆಯೊ ಈಗ ಕರುಣಾಳು ದೇವ 2 ಗುರುಗಳಿಗೆ ಬಂದಂಥ ರೋಗವನೆ ಪರಿಹರಿಸಿ ಕರುಣಿಸಿದೆ ಮನಕೆ ಬಹು ಆನಂದವನ್ನು ಪರತರನೆ ಇದರಂತೆ ಭವರೋಗವನೆ ಹರಿಸಿ ನಿರುತ ನಿನ್ನಯ ಪಾದಸ್ಥಾನ ನೀಡೆನಗೆ 3 ಸುರಪನಿಗೆ ಬಂದಂಥ ಪರಿಪರಿಯ ಕಷ್ಟದಿಂ ಹರಿಯೆ ನಿನ್ನಾಜ್ಞೆಯಿಂದೆಲ್ಲರೂ ಕೂಡಿ ಶರಧಿ ಮಥಿಸುತಲಿರಲು ಕರುಣೆಯಿಂದಲಿ ಸುಧೆಯ ಕಲಶ ತಂದವನೆ4 ವಂಚನೆಯ ಪೆಣ್ಣಾಗಿ ವಂಚಿಸಿ ದೈತ್ಯರನು ಅಮೃತ ಸುರರಿಗುಣಿಸಿ ಪಂಚಬಾಣನ ಪಿತನೆ ಸುರರ ರಕ್ಷಕನಾದೆ ವಂಚಿಸದೆ ಎಮ್ಮಗಳ ನೀನೀಗ ಕಾಯೊ 5 ಅಮೃತಹಸ್ತನೆ ಕೃಷ್ಣ ಅಮೃತವಿತ್ತು ಕಾಯೊ ಅಮೃತರಲ್ಲವೆ ನಿನ್ನ ಪಟ್ಟಣದ ಜನರು ಅಮೃತ ಕಿರಣಾಂತರ್ಯಾಮಿಯೆ ಶಾಂತ ಧನ್ವಂತ್ರಿ ಅಮೃತರಾಗುವರೈಯ್ಯ ನಿನ್ನ ನಂಬಿದರೆ 6 ಸಚ್ಚಿದಾನಂದ ಸರ್ವೋತ್ತಮನೆ ಶ್ರೀ ಕೃಷ್ಣ ಬಿಚ್ಚಿ ಸಲಹಯ್ಯ ಎನ್ನಜ್ಞಾನ ಬಂಧ ಅಚ್ಚುತಾನಂತ ಶ್ರೀ ಗುರುಗಳಂತರ್ಯಾಮಿ ಅಚ್ಚವೈಷ್ಣಣವ ಪ್ರಿಯ ಗೋಪಾಲಕೃಷ್ಣವಿಠ್ಠಲ 7
--------------
ಅಂಬಾಬಾಯಿ
ಅ ಸಾಗಿ ಬಾರೋ ಗುರುರಾಘವೇಂದ್ರರಾಯ | ವರ ಸತ್ಕಲುಗೇಯ ಪ ಕೂಗುತ ಕರೆಯುವ ಭಾಗವತರ ಮೊರೆಯ ಲಾಲಿಸೋ ಮುನಿವರ್ಯ ಅ.ಪ ಪಾವನಘನ ವೃಂದಾವನ ಮಂದಿರನೆ ಸದ್ಗುಣ ಬಂಧುರನೇ ಪಾವಮಾನಿಮತಶರಧಿ ಚಂದಿರನೇ ಧರಸಮ ಕಂದರನೇ ಛಾವಣಿಪುರ ಸುಜನಾವಳಿ ಕೋರಿಕೆಯ ಗರೆಯಲು ಶುಭಕಾಯ 1 ಶರಣಜನರು ಮೈಮರೆದು ಕರೆಯಲಾಗಿ ನಿಲ್ಲದೆ ವರಯೋಗಿ | ಭರದಿ ಬಂದು ಕರಪಿಡಿಯುವ ಧೊರೆ ನೀನು ಎಂದರೀತೆವು ಸುರಧೇನು ಗತಿದಾಯಕ ನೀನೆಂದು ಭಜಿಪೆವು ದಯಾಸಿಂಧು 2 ಶಾಮಸುಂದರನ ಪ್ರೇಮವ ಪಡೆದಾತ ಜಗದೊಳು ಪ್ರಖ್ಯಾತ ನೇಮದಿ ಭಜಿಪರ ಕಾಮಿತ ಕೊಡುವಾತ ದೈಶಿಕ ಕುಲನಾಥ ಹೇಮಶಯ್ಯ ಸುಕುಮಾರ ಮಮತೆಯಿಂದ ಮಂತ್ರಾಲಯದಿಂದ 3
--------------
ಶಾಮಸುಂದರ ವಿಠಲ
ಅಧ್ಯಾಯ ಐದು ಲೋಕ ಮೋಹಕ: ಪಾತು ಮಾಧವ: ಧ್ವನಿ ರಾಗ:ಯರಕಲ ಕಾಂಬೋದಿ ಅಟತಾಳ ತಿರುಗಿ ವೇಂಕಟಗಿರಿ ಏರಲು ಪ ಪದ್ಮನಾಭನ ಸ್ಮರಿಸಿ ಬಿದ್ದಳು ಮೂರ್ಛಿತಳಾಗಿ ಸದ್ದು ಮಾಡಿದರಲ್ಲಿ ಇದ್ದ ಗೆಳತಿಯರೆಲ್ಲ ಮುದ್ದು ಮುಖದವಳೆ ನೀ ಎದ್ದು ಮಾತಾಡೆಂದರು ಪದ್ಮಿನಿಯು ತಾ ಕೇಳಿ ಎದ್ದು ನುಡಿಯದೆ ಇರಲು ಸಿದ್ಧಮಾಡಿ ಬೇಗೊಬ್ಬ ಬುದ್ಧಿವಂತೆಯ ಕಳುಹಿ ಗದ್ದಲಮಾಡದೆ ಅಂದಣವನು ತರಿಸಿ ಪದ್ಮ ಗಂಧಿಯ ಕೊಂಡು ಎದ್ದು ನಡೆದರು ಪುರಕೆ ಸುದ್ದಿ ಹರಡಿತು ಅಲ್ಲಿ ಗದ್ದಲಾಯಿತು ಬಹಳ 1 ಬಂದಳಲ್ಲಿಗೆ ತಾಯಿ ಅಂದಳೀಪರಿ ನೋಡಿ ಇಂದು ಎಲ್ಲಿಗೆ ಚಿಕ್ಕ ಕಂದಮ್ಮ ನೀ ಪೋಗಿದ್ದೆ ಇಂದು ಬಾಡಿಹುದೇಕೆ ಇಂದು ಮೈಯೊಳು ಜ್ವರ ಬಂದಿಹುದೇಕಮ್ಮಯ್ಯ ಮುಂದೆ ಮಾತಾಡದಿರಲು ತಂದೆ ಕೇಳಿದನಾಗ ಸುಂದರಿಯಳೆ ದಾರೇನಂದರಮ್ಮಯ್ಯ ನಿನಗೆ ಅಂದು ಅವರನು ಬಿಡದೆ ಕೊಂದು ಹಾಕುವೆ ಪೇಳು ಅಂದ ಮಾತಿಗೆ ತಾನು ಒಂದು ಮಾತಾಡಲೊಲ್ಲಳು 2 ತಿಳಿಯಲೊಲ್ಲದು ಎಂದು ಬಳಲಿ ಆಕಾಶರಾಜ ಕಳವಳಿಸುತ ಕರೆಕಳಿಸಿ ಬಲ್ಲವರನು ತಿಳಿಯಬಲ್ಲವರೆಲ್ಲ ತಿಳಿದು ಹೇಳಿರಿ ಎಂದ ಕೆಲವರೆಂದರು ಪಿತ್ತ ತಲೆಗೆ ಏರಿಹುದೆಂದು ಕೆಲವರೆಂದರು ಭೂತ ಬಲಿಯ ಚಲ್ಲಿರಿ ಎಂದು ಕೆಲವರೆಂದರು ಗ್ರಹಗಳ ಬಾಧೆ ಇರುವದು ಉಳಿದ ಮಂದಿಗೆ ಮತ್ತೆ ತಿಳಿಯಲಾಗದಾಯಿತು ಚಲುವನಂತಾದ್ರೀಶನ ಚಲುವಿಕೆಯನೆ ಕಂಡು 3 ವಚನ ಬಹುಶೋಕವನು ಮಾಡುತಲಿ ತಾ ಕರಿಸಿ ಕೇಳಿದನು ನಾಕೇಶಗುರು ಹೀಗೆ ತಾ ಕೇಳುತಲಿ ನುಡಿದ ಆಕಾಶನೃಪ ಚಿಂತೆಯಾಕೆ ಬ್ರಾಹ್ಮಣರ ಏಕಾದಶಾವರ್ತಿ ಏಕಚಿತ್ತದಲಿ 1 ಲೇಸಾಗಿ ತಿಳಿಯೆಂದು ಉರ್ವೀಶ ಭಕುತಿಯಂ ಆಸನಾದಿಗಳಿಂದ ಭೂಸುರರಿಗೆ ಅರ್ಪಿಸಿ ಸಂತೋಷವನು ಮಾಡಿರಿ ಎಂದು ಆಶು ಕಳುಹಿದನಗಸ್ತೇಶ್ವರನಾಲಯಕೆ 2 ಧ್ವನಿ ಕೇವಲ ಚಿಂತೆಯಿಂದಲೇ ದೇವಿಬಕುಲಾವತಿ ತಾನು1 ಪರಿವಾಣದಲ್ಲಿಟ್ಟುಕೊಂಡು ಇದ್ದಲ್ಲೆ ಗೋವಿನಂತೆ 2 ಆಲಯದಿ ಜಗತ್ಪಾಲಯ ಮಲಗಿದ್ದು ಕಂಡು ಬಾಲೆ ತಾಮಾತಾಡಿದಳು ಇಂದು 3 ಹೆಚ್ಚಿನ ವರಹ ಅಚ್ಯುತ ವಾಮನ ಏಳೊ 4 ಉದ್ಧರಿಸಿದಾತನೆ ಏಳೊ ಮುದ್ದು ಹಯವದನ ಏಳೋ 5 ಕೊಡದೆ ಸೃಷ್ಟಿಕರ್ತನು ಹರಿವಾಣ ಕೆಳಗಲ್ಲೆ ದಿಟ್ಟನಡೆದಳು ಬದಿಯಲಿ6 ಎನುತ ಮುಸುಕ ಕಂಡು ಅಂತ:ಕರಣದಿ ನುಡಿದಳು7 ಧ್ವನಿ ರಾಗ:ಕಾಪಿ ಅಟತಾಳ ಯಾಕೆ ಮಲಗಿದೆ ನೀ ಏಳೋ ಅಣ್ಣಯ್ಯಾ ವೇಂಕಟ ಯಾಕೆ ಮಲಗಿದೆ ಏಳೋ ಏನು ಚಿಂತೆಯು ಪೇಳೊ ಲೋಕ ಸಾಕುವ ದಯಾಳೋ ಅಣ್ಣಯ್ಯ ವೇಂಕಟಪ ಬಾಳ ಬಳಲಿದಿಯೊ ಹಸಿದು ಮಾತಾಡದಂಥ ಮೂಲ ಕಾರಣವೇನಿದು ಹಾಲುಸಕ್ಕರೆ ತುಪ್ಪಾಯಾಲಕ್ಕಿ ಪರಮಾನ್ನ ಬಾಲಯ್ಯ ನೀನು ಉಣಲೇಳೋ 1 ವಟದೊಳು ಹೆಬ್ಬುಲಿಯ ಕಂಡಂಜಿದಿಯೇನೊ ನೆಲೆಯು ತಿಳಿಯದು ನಿನ್ನ ಪ್ರಳಯ ಕಾಲಕ್ಕೆ ಆಲದೆಳೆಯೊಳು ಮಲಗಿದವನೋ2 ಹಗಲ್ಹೊತ್ತು ಮಲಗಿದ ದವನಲ್ಲೊ ಹೆತ್ತತಾಯಿ ಆಣೆ ಸತ್ಯವಾಣಿ ನೀಪೇಳೋ ಚಿತ್ತ ವ್ಯಾಕುಲವು ಯಾಕೆ3 ಕೊಂಬುವರೋಮುನ್ನ ಇಂದು ಮೋಹಿತನಾಗಿರುವಿ4 ಬಾಹುವದುಕಂಡು ಮರಳು ಮಾಡಿದಳೋ ನಿನ್ನ 5 ತಕ್ಕ ಉಪಾಯಾ ಅಕ್ಕರವಾಗುವದೆನಗೆ 6 ಎನ್ನ ಮುಂದೆ ನೀ ಸಂಶಯ ಬಿಡು ಚನ್ನಿಗನಂತಾದ್ರೀಶನೆ 7 ವಚನ ಕಣ್ಣೀರುವರಸುತಲೆದ್ದು ಕೀರವಾಣಿಯೇಕೇಳು ಘೋರು ದು:ಖವ ತನಗೆ ಆರಿಗುಸರಲಿ ನಾನು ಆರಿ ಹೇಳುವೆ ನಿನಗೆ ಸಾರಾಂಶ ಮಾತು 1 ನೀನೆ ಎನಗ್ಹಿರಿಯಣ್ಣ ನೀನೆಗಜರಾಜೇಂದ್ರ ವರಧ್ರುವರಾಯ ನೀನು ಸರ್ವವು ಅಭಿಮಾನ ರಕ್ಷಕಳು 2 ಎಂಬೋರನ್ಯಾರನು ನಾ ಎನ್ನ ಮನಸ್ಸಿನ ಅರಣ್ಯದೊಳು ರೂಪ ಲಾವಣ್ಯ ಮುಖವು ಹುಣ್ಣಿಮೆಯ ಚಂದ್ರ 3 ಕಣ್ಣಮೂಗಿಲೆ ಸಂಖ್ಯೆ ಜನ್ಮದಲಿ ಮಾಡಿದ್ದು ಅನ್ಯಾಯದಲಿ ಎನ್ನ ಪ್ರಾಣವನು ಬಿಟ್ಟಿತು ಉಳಿದೆ ಮುನ್ನವಳ ಹೊರತು ಮನ ಉಣ್ಣಲೊಲ್ಲದು ನಿದ್ರೆ ಕಣ್ಣಿಗಿನ್ನೆಲ್ಲಿ 4 ನೀನು ಎಂದದು ಮೋಹಿಸುವಂಥ ಜಾಣೆಯನು ಕಳೆದಂಥ ಮಾನಿನಿಯ ಇರಲುನಾನು ಬದುಕುವನಲ್ಲ ಖೂನ ಪೇಳುವೆನು 5 ಯಾನ ಬರುವದು ಹೆಚ್ಚು ಉಂಟು ಕ್ಷೋಣಿಯಲಿ ಕಟ್ಟಿ, ದಾನದೊಳು ಸಾಹಸ್ರದಾನ ಪಾತ್ರರಿಗೆ ತಿಳಿ ಒಂದು ಕಲ್ಯಾಣ ಕಟ್ಟಿದರೆ 6 ಧ್ವನಿ ರಾಗ:ಸಾರಂಗ ಭಿಲಂದಿತಾಳ ಬಕುಲಾದೇವಿ ತಾ ನುಡಿದಳು ಆ ಕಾಲಕ್ಕೆ ಹೀಗೆ ದೇವಾಧೀಶನೆ ನಿನ್ನ ಕೇವಲ ಮರುಳು ಈವತ್ತಿಗೆ ಮಾಡಿದಳು ಯಾವಕೆ ಅವಳು 1 ಪೂರ್ವಜನ್ಮದಲಾಕೆ ಯಾವಕೆ ಬಂದಿಹಳು ಆ ವಾರ್ತೆ ಪೇಳೊ 2 ಇಂಥ ಮಾತನು ಲಕ್ಷ್ಮಿಕಾಂತಾ ಚಿಂತಿಸಿ ನುಡಿದಾ 'ಶ್ರೀಮದನಂತಾದ್ರೀಶ’ 3 ವಚನ ತಾ ವನದರಲಿರುತಿರಲು ದೇವಿಯನು ಅಪಹರಿಸಿ ತಾ ಒಯ್ಯ ಬೇಕೆಂಬೋ ಭಾವದಲಿ ಬಂದಾ ಆ ವೇಳೆಯಲಿ ಅಗ್ನಿದೇವ ಪತ್ನಿಯಲ್ಲಿದ್ದ ಶ್ರೀ ವೇದವತಿಯನ್ನು ದೇವೇಂದ್ರನ ಸಹಿತ ಆವಾಹನ ಮಾಡಿ ತಾ ವಾಸಮಾಡಿದಳು ಕೈಲಾಸದಲ್ಲಿ1 ಮುಂದೆ ರಾಮನು
--------------
ಅನಂತಾದ್ರೀಶ - ಕಥನಕಾವ್ಯಗಳು
ಉಪದೇಶಾತ್ಮಕ ಪದಗಳು ನೀಚವೃತ್ತಿಯ ಬಿಟ್ಟು ಸೋಚಿತ ಕರ್ಮವನೇ ಯೋಚನೆ ಮಾಡುತಾ ಪ ನೀಚ ಜನರುನು ಯಾಚಿಸದೆ ಸವ್ಯ ಸಾಚಿಯ ಸಖನ ಭಜಿಸೋ ಪ್ರಾಣೀ ಸರಸ ಸಲ್ಲಾಪ ಶ್ರೀ ಹರಿಕಥಾ ಶ್ರವಣ ನೀ ಪರಮಭಕ್ತರ ಸಂಗವಾ ನಿರುತದಲಿ ನೀ ಮಾಡಿ ಹರುಷ ಮನವನು ತಾಳಿ ಚರಿಸೊ ಈ ಧರಣಿ ಮಂಡಲಾ ಅರಸಿಗಾದರು ಒಮ್ಮೆ ಶಿರಸುಬಾಗದಲೆ ಶ್ರೀ ಹರಿದಾಸರಾ ಚರಣಕೆ ಎರಗ್ಯವರ ಮನಿದ್ವಾರಪರಿಚರನು ಎಂದೆನಿಸಿ ಭರದಿಂದ ಬಾಳಿ ಬದಕೋ ಇದಕೋ 1 ಅಲ್ಪ ಆಶೆಯ ಮಾಡಿ ಅಲ್ಪ ಮಾನವನಾಗಿ ಕಲ್ಪನೀಯನು ಮಾಡದೆ ಸ್ವಲ್ಪ ಫಲದಲಿ ಮನಸು ಕಲ್ಪಿಸಿ ಪ್ರಿತಿದಿನವ ನಲ್ಪ ಜನರನು ನಿಂದಿಸೀ ಅಲ್ಪನಾರೇರು ಮಾಳ್ಪ ಒಲ್ಪಿಗೆ ಮರುಳಾಗಿ ಪಲ್ಕಿಸಿದು ಬಾಯ್ದೆರೆಯದೆ ಸ್ವಲ್ಪಗಾಲದಲಹಿತಲ್ಪ ಪದಪದುಮಗಳ ಕಿಂ - ಜಲ್ಕ ನೀನಾಸ್ವಾದಿಸೋ ಲೇಸೋ2 ಪೊಡವಿ ಮೊದಲಾದ ಈ ಮಡದಿ ಮಕ್ಕಳು ಗೇಹ ವಡವಿ ವಸನವ ಬಯಸದೆ ಪೊಡವಿಮಂಡಲದಿ ಬಹು ಬಡವ ನಾನೆನುತಲೀ ಪೊಡವಿ ಪಾಲರ ಸೇವೆಯಾ ಧೃಢಮನದಿ ನೀ ಮಾಡೆ ಕೊಡರೊಂದು ದುಗ್ಗಾಣಿ ಕಡುಮೂರ್S ಎಲೊ ಪಾಪಿಯೇ ಬಿಡದೆ ದೈನ್ಯದಿ ನೀನು ಜಡಜನಾಭನ ಪಾದ ಬಿಡದೆ ಸೇವಿಸಲು ಫಲವ ಕೂಡುವಾ 3 ನಾ ಮಾಡೋ ವ್ಯಾಪಾರ ನೀ ಮಾಡಿಸುವಿ ಎಂಬ ಈ ಮಹಾಙÁ್ಞನ ಮಾರ್ಗ ನೇಮವಾಗಿ ತಿಳಿದು ಗ್ರಾಮ ಗ್ರಾಮದಲ್ಲಿದ್ದ ಪಾಮರೋತ್ತಮ ಜನರಿಗೆ ಧಾಮನಾಗಿಹ ನಮ್ಮ ರಾಮದೇವನ ಪಾದ ತಾಮರಸ ಕೊಂಡಾಡುತಾ ಪ್ರೇಮ ಹರುಷಾಮರ್ಷ ಯಾಮಯಾಮಕೆ ಬರಲು ಕಾಮಿಪುದು ನಿನಗೆ ಸಲ್ಲಾ ಖುಲ್ಲಾ 4 ನಗುವ ಜನರಾ ಕಂಡು ನಗುವುದೇ ಲೇಸೆಂದು ಸಿಗದೆ ಜನರೊಳು ತಿರುಗುತಾ ಬಗೆ ಬಗೆಯ ಮಾತುಗಳ ಬೊಗಳುವಾ ಜನರಿಗೆ ಹಗಲಿರಳು ಹರಿ ಕಾಯಲೀ ನಿಗಮ ವಂದಿತನ ಪ್ರತಿ ಮೆಗಳು ಇವು ಎಂದು ತಿಳಿಯೇ ನಗುತ ಹರುಷವ ಕೊಡುವ ಸುಗುಣಪೂರಣ ಗುರು ಜಗನ್ನಾಥವಿಠಲರಾಯಾ ಮರೆಯಾ 5
--------------
ಗುರುಜಗನ್ನಾಥದಾಸರು
ಕಥನಾತ್ಮಕ ಬಾಗಿಲಿಕ್ಕಿದ ಬಗಿಯೇನೆ | ಬೇಗ ಬ್ಯಾಗದಿಂದ ಪೇಳೆ ನೀನೆ | ನಾಗವೇಣಿಯೆನ್ನ ಕೂಡ ಜಾಗುಬ್ಯಾಡ ಬಾಗಿಲುತೆಗೆಯೆ ಪ (ಬಂದೆಯಾದರಿಂದಿನದಿನದಿ) | ಛಂದದಿಂದ ಪೇಳೊ ಮದದಿ ನಾಮವುಸಾರೊ ಮುದದಿ 1 ಅಚ್ಯುತಾನ ಇಚ್ಛೆಯಿಂದ | ಸ್ವೇಚ್ಛ ದೈತ್ಯರಾಳಿದೇನೆ ಮತ್ಸ್ಯರೂಪಗೈದುನಾನೆ | ಭೀಭತ್ಸು ರಾಯ ನಲ್ಲವೇನೆ 2 ಯೇಸು ಪೇಳಿದ್ರಿಗುಣವನ್ನು | ಈಸು ಮಂದಿಯೊಳು ನೀನು ಬೂಸುರಾಗೆ ಭಾಷೆಕೊಟ್ಟು | ಕೂಸೀನ ಕೊಡದಾವ ನೀನು 3 ಪಾರ್ವತಿಯ ಪತಿಯನೊಲಿಸಿ | ಪಾಶು ಪತಾಸ್ತ್ರವ ಗೆಲಿಸಿ ಪಾರ್ಥರಾಯನೆ ಪಾಂಚಾಲಿ 4 ಪಾರ್ಥರಾಯ ನೀನಾದರೇನು, ಕೀರ್ತಿಯೆಲ್ಲಾ ಬಲ್ಲೆನಾನು ಸ್ತೋತ್ರ ಮೂರುತಿ ತಂಗಿಗೀಗ | ತೀರ್ಥಯಾತ್ರೆಲಿ ಗೆಲಿಹೋಗೊ 5 ಫುಂಡತೊರೆವ ಗಂಡನಾನೆ | ಖಾಂಡವನ ದಹಿಸಿದೆನೆ ಗಂಡುಗಲಿ ವರಹನ ದಾಸಾ | ಗಾಂಡೀವರ್ಜುನ ನಲ್ಲವೇನೆ 6 ಧೀರ ನೀನಾದರೆ ಏನು ಭಾರಿ ಗುಣವೆಲ್ಲಾ ಬಲ್ಲೆನಾನು ಯತಿಯಾಗಿರು ಹೋಗೋ 7 ವಟುರೂಪನ್ನ ವಲಿಸಿದೆನೆ ಕಿರೀಟಿ ಅಲ್ಲವೆ ಕೃಷ್ಣಿನಾನೆ 8 ಕೋಟಿರಾಯಗೆ ಮೇಟಿ ನೀನು | ಮಾಟವಾದ ಮುಖದವನು | ಬೂಟಿತನದಿ ವಿರಾಟನಲ್ಲಿ | ಆಟವಾ ಕಲಿ ಸ್ಹೋಗೊ ನೀನು 9 ಘಾತುಕ ಕರ್ಮಗಳನ | ಖ್ಯಾತಿಯಿಂದ ಚೈಸಿದ್ದೇನೆ ಮಾತೆ ಅಳಿದಗೆ ದೂತನಾನು ಶ್ವೇತವಾಹನ ದ್ರೌಪದಿನಾ 10 ವಾಹನ ನೀನಾದರೇನು | ಖ್ಯಾತಿಯೆಲ್ಲ ಬಲ್ಲೆ ನಾನು ಜೂತದಲ್ಲಿ ಸೋತವ ನೀ | ಅಗ್ನಾತವಾಸದಲ್ಲಿರು ಹೋಗೋ 11 ವಿಪಿನಾವಾಸದಿಯುದ್ಧ | ವಿಪರೀತ ಮಾಡಿದೇನೇ ಶ್ರೀ ಪತಿ ಶ್ರೀ ರಾಮದೂತ, ಭೂಪ ವಿಜಯನಾ ವಿಮಲಾಂಗೀ 12 ಭಾಳ ಪೇಳಿದಿ ಗುಣವನ್ನು ಕೇಳಲಿಕೆ ಅಶಕ್ಯವಿನ್ನು ಭಾಳ ಹರುಷದಿಗೆಲಿ ಹೋಗೋ 13 ಮೀನು ಫಕ್ಕನೆ ಖಂಡಿಸಿದೆನೇ ಪತಿ ಶ್ಯಾಲ ನಾನು | ಹೆಚ್ಚಿನ ಸವ್ಯಸಾಚಿ ನಾನು 14 ದುಷ್ಟ ಕುರುಪಕಿಗೆ ಭಯವ ಬಿಟ್ಟು | ಶ್ರೇಷ್ಟ ಸ್ತ್ರೀ ವೇಷ ಬಿಟ್ಟು ಅಷ್ಟು ಜನರೊಳು ಗುಟ್ಟುತೋರದೆ | ಧಿಟ್ಟದ್ವಿಜನಾಗಿ ಹೋಗೊ 15 ಬೌದ್ದ ರೂಪಗೆ ಬಂಧು ನಾನು | ಪ್ರಸಿದ್ಧ ಕೃಷ್ಣ ನಾನಲ್ಲವೇನು 16 ಯುದ್ಧದಲ್ಲಿ ಪ್ರಸಿದ್ದನೆಂದು | ಸಿದ್ದಿಗಳನು ಹೇಳಿದಿಂದು ಮುದ್ದು ಬಬ್ರುವಾಹನನಲ್ಲಿ | ಬಿದ್ದ ಸುದ್ದಿಯ ಪೇಳೊ ಇಲ್ಲಿ 17 ಕಂಜ ಮುಖಿಕಲಿ ಭಂಜನಾನ ಮಾಯಾ ಕೇಳೆ ನಾರಾಯಣನಲ್ಲವೇನೆ 18 ವಜ್ರದಬಾಗಿಲು ತೆಗೆದು | ಅರ್ಜುನನಪ್ಪಿದಳ್ ಬಿಗಿದು ದೊಡೆಯಗೆ ಕೈಮುಗಿದು 19 ನಿರುತವೀ ಸಂವಾದ ಪಠಿಸಲು ಭರಿತವಾದ ಸುಖವೀವೊದು ವಿಠಲನ್ನ ನೆನೆಯೋದು 20
--------------
ಓರಬಾಯಿ ಲಕ್ಷ್ಮೀದೇವಮ್ಮ
ಪುರಾಣವಿಷಯ ಶ್ರೀವೆಂಕಟೇಶ ಕಲ್ಯಾಣ ಇನ್ನೆಂದಿಗೋ ನಿನ್ನದರುಶನ ಶೇಷಾದ್ರಿವಾಸ ಪ ಪನ್ನಂಗಶಯನ ಪ್ರಸನ್ನರ ಪಾಲಿಪ ಘನ್ನಮಹಿಮ ನೀನೆನ್ನನುದ್ಧರಿಸೂಅ.ಪ ವರ ಸುರಮುನಿಗಳ ವೃಂದ ನೆರಹಿದ ಯಾಗಗಳಿಂದ ಪರಮಾದರದಿಂದಿರುವ ಸಮಯದಿ ನಾರದ ಮುನಿ ಬಂದೊದಗಿ ನಿಂದ ಇ- ಸುರಮುನಿವಚನದಿ ಭೃಗುಮುನಿವರ ಪೋಗಿ ಹರುಷದಿ ಶ್ರೀಹರಿ ಉರಗಶಯನನಾಗಿ ಹರುಷದಿ ಮುನಿಪಾದ ಕರದಲಿ ಒತ್ತುತ ಕರುಣದಿ ಸಲಹಿದೆ ದುರಿತವ ಹರಿಸಿ ಹರಿಭಕುತರ ಅಘಹರಿಸಿಕಾಯುವಂಥ ಕರುಣಿಗಳುಂಟೇ ಶ್ರೀಹರಿ ಸರ್ವೋತÀ್ತುಮಾ 1 ಸ್ವಾಮಿ ನೀನಿಜಧಾಮವನೇ ತೊರೆದೂ ಸ್ವಾಮಿಕಾಸಾರ ತೀರದಿ ನಿಂದೂ ಧಾಮವನರಸಿ ವಲ್ಮೀಕವನೆ ನೋಡಿ ಸನ್ಮುದವನ್ನೇ ತೋರುತ ಕಮಲ ಭವಶಿವ ತುರುಕರುರೂಪದಿ ಕಾಮಧೇನು ಪಾಲ್ಗರೆಯುತಾ ಈ ಮಹಿಮೆಯನ್ನೇ ಬೀರುತಾ ಭೂಮಿಗೊಡೆಯ ಚೋಳನೃಪಸೇವಕನು ಧೇನುವನ್ನು ತಾ ಹೊಡೆಯಲು ಕಾಮನಯ್ಯ ನೀನೇಳಲು ಭೀಮವಿಕ್ರಮವ ತೋರಲು ಕ್ಷಮಿಸಿದೆ ನೃಪನ ದಯಾಳು ಅಮಿತ ಸುಗುಣಪೂರ್ಣ ಅಜರಾಮರಣ ನೀ ಮಸ್ತಕಸ್ಪೋಟನ ವ್ಯಾಜವ ತೋರಿ ಪ್ರೇಮದಿ ಗುರುಪೇಳ್ದೌಷಧಕಾಗಿ ನೀ ಮೋಹವ ತೋರಿದೆ ವಿಡಂಬನಮೂರ್ತೇ 2 ಮಾಯಾರಮಣನೆ ಜೀಯಾ ಕಾಯುವೆ ಜೀವನಿಕಾಯಾ ತೋಯಜಾಂಬಕ ಹಯವನೇರಿ ಭರದಿ ತಿರುಗಿತಿರುಗೀ ವನವನೆÀಲ್ಲ ಮೃಗನೆವನದಿ ನಿಂದು ನೋಡಿದೇ ಪ್ರಿಯಸಖಿಯರ ಕೂಡಿ ಪದುಮಾವತಿಯು ತಾ ಹಯದಿ ಕುಳಿತ ನಿನ್ನ ನೋಡಲು ಪ್ರಿಯಳಿವಳೆನಗೆಂದು ಯೋಚಿಸಿ ಕಾಯಜಪಿತ ನಿನ್ನ ಹಯವನೆ ಕಳಕೊಂಡು ಮಾಯದಿಂದ ನೀ ಮಲಗಿದೆ ತೋಯಜಮುಖಿಯಳ ಬೇಡಿದೇ ಆ ಯುವತಿಯನ್ನೇ ಸ್ಮರಿಸುತಾ ಶ್ರೀಯರಸನೆ ನೀನು ಸ್ತ್ರೀರೂಪದಿ ಹೋಗಿ ಶ್ರೀಯಾಗಿಹಳಿನ್ನು ಶ್ರೀಹರಿಗೀಯಲು ಶ್ರೇಯವೆಂದು ಆಕಾಶನನೊಪ್ಪಿಸಿ ತಾಯಿಯಭೀಷ್ಟವನಿತ್ತೆ ಸ್ವರಮಣಾ 3 ಸಕಲಲೋಕೈಕನಾಥಾ ಭಕುತರಭೀಷ್ಟಪ್ರದಾತಾ ಭಕುತನಾದ ಆಕಾಶನೃಪತಿಯು ಬಕುಳೆ ಮಾ- ತ ಕೇಳಿ ಅಭಯವಿತ್ತು ಮನ್ನಿಸಿ ಪದುಮಾವತಿಯ ಪರಿಣಯ ಶುಕರ ಸನ್ಮುಖಹಲ್ಲಿ ಅಕಳಂಕ ಮಹಿಮ- ಗೆ ಕೊಟ್ಟನು ತಾ ಲಗ್ನಪತ್ರಿಕಾ ಸ್ವೀಕರಿಸುವದೀ ಕನ್ನಿಕಾ ಈ ಕಾರ್ಯಕೆ ನೀವೆ ಪ್ರೇ ಸಕಲಸಾಧನವಿಲ್ಲಿನ್ನು ಲೋಕೇಶಗರುಹಬೇಕಿನ್ನು ಲೋಕಪತಿಯೆ ಸುರಕೋಟಿಗಳಿಂದಲಿ ಈ ಕುವಲಯದಿ ನಿನ್ನಯ ಪರಿಣಯವೆಸಗಲು ಭಕುತಜನಪ್ರಿಯ ಶ್ರೀವತ್ಸಾಂಕಿತ 4 ಖಗವರವಾಹನ ದೇವಾ ಅಗಣಿತಮಹಿಮ ಗೋಮಯನೆನಿಸಿ ಸುರರ ಪೊರೆಯುತಾ ಅಗಣಿತ ಸುರಗಣ ಕಿನ್ನರರು ಸಾಧ್ಯರು ತರು ಫಲ ಖಗಮೃಗ ರೂಪವ ಬಗೆಬಗೆ ಇಹೆ ಪೊಗಳಲಳವೇ ಗಿರಿವರವು ಹಗಲು ಇರುಳು ಭಗವಂತನೆ ನಿನ್ನನ್ನು ಪೊಗಳುತಿಹರು ನಿನ್ನ ಭಕುತರು ಮೊಗದಲಿ ನಿನ್ನ ದಾಸರು ಗೋವಿಂದ ಮುಕುಂದ ಎನ್ನುತಾ ಯುಗ ಯುಗದೊಳು ನೀನಗದೊಳು ನೆಲಸಿಹೆ ಜಗದ ದೇವ ರಾಜಿಸುವವನಾಗಿಹೆ ಮಿಗಿಲೆನಿಸಿದ ಶ್ರೀ ವೆಂಕಟೇಶಾ ಸದ್ಗುಣ ಸಚ್ಚಿದಾನಂದ ಮುಕುಂದ ಗೋವಿಂದಾ 5
--------------
ಉರಗಾದ್ರಿವಾಸವಿಠಲದಾಸರು
ಫಣಿರಾಜಶಯನ ರುಕ್ಮಿಣೀ ದೇವಿಯೊಡಗೂಡಿ ಕುಳಿತಿರ್ದು ಸತಿಯೊಡನೆ ಅಣಕವಾಡಿದನು ಇನಿತೆಂದು 1 243 ಹೇ ರಾಜಕನ್ನಿಕೆ ಭೂರಮಣ ನಾನಲ್ಲ ನಾರದನ ನುಡಿಗೆ ನಳಿನಾಕ್ಷಿ 2 244 ಶಿಶುಪಾಲ ಮೊದಲಾದ ವಸುಧೆಪಾಲರ ಬಿಟ್ಟು ಸುಕುಮಾರಿ ಎನಲು ಪರ ವಶಳಾದಳಾಗ ಮಹಲಕ್ಷ್ಮಿ 3 245 ಈ ಮಾತ ಕೇಳಿ ಕೈ ಚಾಮರವನೀಡಾಡಿ ಭುಗಿಲೆಂದು ಮಲಗಿದಾ ಕಾಮಿನಿಯ ಕಂಡ ಕಮಲಾಕ್ಷ 4 246 ಕಂಗೆಟ್ಟಳೆಂದು ತನ್ನ ಅಂಗನೆಯ ಬಿಗಿದಪ್ಪಿ ಮುಂಗುರುಳ ತಿದ್ದಿ ಮುದ್ದಿಸಿ | ಮುದ್ದಿಸಿ ಮಾತಾಡ್ಡ ಕಂಗಳಶ್ರುಗಳ ಒರೆಸುತ್ತ5 247 ಸಲಿಗೆ ಮಾತಿನ ಬಗೆಯ ತಿಳಿಯದಲೆ ಹೀಗೆ ಚಂ ಚಲವನೈದುವರೆ ಚಪಲಾಕ್ಷಿ | ಚಪಲಾಕ್ಷಿ ಏಳೆಂದು ತÀಲೆಯ ಮೇಲಿಟ್ಟ ಕರಪದ್ಮ 6 248 ಶ್ರೀ ದೇವಿ ನಿನ್ನೊಳು ವಿನೋದ ಮಾಡಲಿಷ್ಟು ವಿ ಅನುದಿನ | ಅನುದಿನದಿ ಸ್ಮರಿಸುವರ ಕಾದುಕೊಂಡಿಹೆನು ಬಳಿಯಲ್ಲಿ 7 249 ಹಿಗ್ಗಿದಳು ಮನದಿ ಸೌಭಾಗ್ಯ ಭೂಮಿನಿಯು ಅಪ ವರ್ಗದನ ನುಡಿಗೆ ಹರುಷಾದಿ | ಹರುಷದಿಂದಲಿ ಪಾದ ಯುಗ್ಮಕೆರಗಿದಳು ಇನಿತೆಂದು 8 250 ಜಗದೇಕ ಮಾತೆ ಕೈ ಮುಗಿದು ಲಜ್ಜೆಯಲಾಗ ಮಾತಾಡಿದಳು ಪತಿಯ ಮೊಗವ ನೋಡುತಲಿ ನಳಿನಾಕ್ಷಿ 9 251 ಪರಿಪೂರ್ಣಕಾಮ ನಿನ್ನರಸಿ ನಾನಹುದು ಸ್ವೀ ಕರಿಸಿದೆಯೊ ಎನ್ನ ಸತಿಯೆಂದು | ಸತಿಯೆಂದ ಕಾರಣಾ ಕ್ಷರಳೆನಿಸಿಕೊಂಡೆ ಶ್ರುತಿಯಿಂದ10 252 ಭುವನಾಧಿಪತಿ ನೀನು ಅವಿಯೋಗಿ ನಿನಗಾನು ನೃಪರ ಪತಿಯೆಂದು | ಪತಿಯೆಂದು ಬಗೆವೆನೇ ಸವಿ ಮಾತಿದಲ್ಲ ಸರ್ವಜ್ಞ 11 253 ಭಗವಂತ ನೀನು ದುರ್ಭಗ ದೇಹಗತರವರು ತ್ರಿಗುಣವರ್ಜಿತವು ತವರೂಪ | ತವರೂಪ ಗುಣಗಳನು ಪೊಗಳಲೆನ್ನಳವೆ ಪರಮಾತ್ಮ12 254 ಭಾನು ತನ್ನಯ ಕಿರಣ ಪಾಣಿಗಳ ದೆಸೆಯಿಂದ ಪಾನೀಯಜಗಳನರಳಿಸಿ | ಆರಳಿಸಿ ಗಂಧ ಆ ಘ್ರಾಣಿಸಿದಂತೆ ಗ್ರಹಿಸೀದಿ13 255 ಬೈದವನ ಕುತ್ತಿಗೆಯ ಕೊಯ್ದು ಅಂಧಂತಮಸ್ಸಿ ಪರಿಪಂಥಿ ನೃಪರನ್ನು ಐದುವೆನೆ ನಿನ್ನ ಹೊರತಾಗಿ 14 256 ನಿಮ್ಮನುಗ್ರಹದಿಂದ ಬ್ರಹ್ಮರುದ್ರಾದಿಗಳ ನಿರ್ಮಿಸಿ ಸಲಹಿ ಸಂಹಾರ | ಸಂಹಾರ ಮಾಡುವೆನು ದುರ್ಮದಾಂಧರನಾ ಬಗೆವೇನೆ 15 257 ಮಂಜುಳೋಕ್ತಿಯ ಕೇಳಿ ಅಂಜಲ್ಯಾತಕೆಂದು ನವ ಕಂಜಲೋಚನೆಯ ಬಿಗಿದಪ್ಪಿ | ಬಿಗಿದಪ್ಪಿ ಮುದ್ದಿಸಿದ ಧ ನಂಜಯ ಪ್ರಿಯನು ಸಥೆಯಿಂದ16 258 ನಿನಗೆ ಎನ್ನಲಿ ಭಕುತಿ ಎನಿತಿಹುದೊ ಕಂಡೆ ಎಂದೆಂದು ಇಹುದು ಇದ ಕನುಮಾನವಿಲ್ಲ ವನಜಾಕ್ಷಿ 17 259 ದೋಷವರ್ಜಿತ ರುಕ್ಮಿಣೀಶನ ವಿಲಾಸ ತೋಷದಲಿ ಕೇಳಿ ಪಠಿಸಿದ | ಪಠಿಸಿದಂಥವರ ಅಭಿ ಲಾಷೆ ಪೊರೈಸಿ ಸಲಹೂವ 18 260 ನೀತಜನಕ ಶ್ರೀ ಜಗನ್ನಾಥ ವಿಠ್ಠಲ ಜಗ ನ್ಮಾತೆಯೆನಿಸುವಳು ಮಹಲಕ್ಷ್ಮಿ | ಮಹಲಕ್ಷ್ಮಿ ಸುತ ಬ್ರಹ್ಮ ಪಾತ್ರನೆನಿಸುವ ಗುರು ರುದ್ರ 19
--------------
ಜಗನ್ನಾಥದಾಸರು
ವೇದತತಿಗಳ ಕದ್ದೊಯ್ದವನ ಕೊಂದು ಪ್ರಳ ಯೋದಧಿಯೊಳಗೆ ಚರಿಸಿ | ಚರಿಸಿ ವೈವಸ್ವತನ ಕಾಯ್ದ ಮಹಾಮಹಿಮ ದಯವಾಗೊ 1 221ಮಂದರಾದ್ರಿಯ ಧರಿಸಿ ಸಿಂಧುಮಥನವ ಮಾಡಿ ಬೃಂದಾರಕರಿಗೆ ಅಮೃತವ | ಅಮೃತವನುಣಿಸಿದ ಇಂದಿರಾರಾಧ್ಯ ದಯವಾಗೊ 2 222 ಸೋಮಪನ ನುಡಿಕೇಳಿ ಹೇಮಾಂಬಕನ ಕೊಂದಿ ಭೂಮಿಯಾ ನೆಗಹಿದ ದಾಡಿಂದ | ದಾಡಿಂದ ನೆಗಹಿದ ಸ್ವಾಮಿ ಭೂವರಹ ದಯವಾಗೊ 3 223 ಕಂದ ಕರೆಯಲು ಕಂಬದಿಂದುದಿಸಿ ರಕ್ಷಿಸಿದಿ ವಂದಿಸಿದ ಸುರರ ಸಲಹೀದಿ | ಸಲಹೀದಿ ನರಸಿಂಹ ತಂದೆ ನೀನೆಮಗೆ ದಯವಾಗೊ 4 224ವೈರೋಚನಿಯ ಭೂಮಿ ಮೂರುಪಾದವ ಬೇಡಿ ಭೂ ವ್ಯೋಮವಳೆದೆ ಭಾ ಗೀರಥಿಯ ಜನಕÉ ದಯವಾಗೊ 5 225 ಕುವಲಯಾಧೀಶ್ವರರ ಬವರ ಮುಖದಲಿ ಕೊಂದೆ ಅವನಿಭಾರವ ನೀನುಳುಹಿದ | ಇಳುಹಿದಾ ಸ್ವಾಮಿ ಭಾ ರ್ಗವರಾಮ ಎಮಗೆ ದಯವಾಗೊ 6 226 ಶತಧೃತಿಯ ನುಡಿಗೆ ದಶರಥನ ಗರ್ಭದಿ ಬಂದು ದಿತಿಜರನು ಸವರಿ ಸುಜನರ | ಸುಜನರ ಪೊರೆದ ರಘು ಪತಿ ಎನಗೆ ದಯವಾಗೊ 7 227 ವಸುದೇವ ದೇವಕೀ ಬಸುರೀಲಿ ಜನಿಸಿದ ವಸುಧೆ ಭಾರವನು ಇಳುಹಿದಿ | ಇಳುಹಿ ಪಾಂಡವರ ಕ ವಿಸಿದ ಶ್ರೀಕೃಷ್ಣ ದಯವಾಗೊ 8 228 ಜಿನನೆಂಬ ದನುಜ ಸಜ್ಜನ ಕರ್ಮವ ಮಾಡೆ ಜನಿಸಿ ಅವರಲ್ಲಿ ದುರ್ಬುದ್ಧಿ | ದುರ್ಬುದ್ಧಿ ಕವಿಸಿದ ವಿನುತ ಬುದ್ಧ ದಯವಾಗೊ 9 229 ಕಲಿ ವ್ಯಾಪಾರ ವೆಗ್ಗಳವಾಗೆ ತಿಳಿದು ಶಂ ಫಲಿ ಎಂಬ ಪುರದಿ ದ್ವಿಜನಲ್ಲಿ | ದ್ವಿಜನÀಲ್ಲಿ ಜನಿಸುವ ಕಲಿಮಲವ ಹರಿಸುವ ಕಲ್ಕಿ ದಯವಾಗೊ 10 230 ಧಾರುಣಿಯಲ್ಲಿ ಹತ್ತವತಾರದಲಿ ಸುಜ ನರ ರಕ್ಷಿಸಿದೆ ಜಗನ್ನಾಥ | ಜಗನ್ನಾಥವಿಠಲ ಮ ವೈರಿ 11
--------------
ಜಗನ್ನಾಥದಾಸರು
ಶೇಷಪ್ರಭುಗಳ ರಚನೆಗಳು ಪಾಲಿಸು ಶ್ರೀಹರಿಯೇ | ಸದ್ಗುಣ | ಶೀಲ ಭಾಗ್ಯನಿಧಿಯೇ | ಶ್ರೀಲಲಾಮ ಶೇಷಾಚಲಾಧೀಶ ಶ್ರೀಲೋಲ ಬಾಲಭಾಸ್ಕರ ಸಂಕಾಶನೆ ಪ ಕಂಡವರಿಗೆರಗಿ ದೈನ್ಯವ | ಗೊಂಡೆ ಖಿನ್ನನಾಗಿ ಭಂಡನಾಗಿ ಬಳಲಿಸಿ ಬಹು ಕಾಯವ ದಂಡಿಸಿದೆನು ರಕ್ಷಿಸೋ ಶ್ರೀಹರಿಯೇ 1 ಯಾರಿಗೆ ದೂರುವೆನು ಭಕ್ತೋ | ದ್ಧಾರನಲ್ಲವೆ ನೀನು | ಘೋರದುರಿತ ದಾರಿದ್ರ್ಯದ ವ್ಯಥೆಯ ಇ- ನ್ಯಾರಿಗೊರೆವೆ ಅದನ್ಯಾರು ಕಾವರೈ 2 ಏನಪರಾಧವ | ಗೈದೆ ನಾ -ನೇನು ಪಾಪಾತುಮನೋ | ಈಸಪರಾಧವನೆಣಿಸದೆ | ಎನ್ನಯ | ಕ್ಲೇಶವ ಪರಿಹರಿಸೋ ದಯಾನಿಧೇ 3 ಪರ ಪುರುಷೋತ್ತಮ | ಪರಂಜ್ಯೋತಿ ಪರಬ್ರಹ್ಮಸ್ವರೂಪನೆ 4 ಗಮನ ಮಾಧವ ಕರುಣಾ-| ಪಾಂಗರಂಗ ಮಂಗಲಾಂಗ ರಕ್ಷಿಸು 5
--------------
ಅನ್ಯದಾಸರು